Tag: up

  • ಪಾಕ್ ಹೊಗಳುವ ಹಾಡು ಹಾಕಿದ ಇಬ್ಬರ ವಿರುದ್ಧ ಕೇಸ್

    ಪಾಕ್ ಹೊಗಳುವ ಹಾಡು ಹಾಕಿದ ಇಬ್ಬರ ವಿರುದ್ಧ ಕೇಸ್

    ಲಕ್ನೋ: ಪಾಕಿಸ್ತಾನವನ್ನು ಹೊಗಳುವ ಹಾಡನ್ನು ಹಾಕಿದ ಇಬ್ಬರು ವ್ಯಕ್ತಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ.

    ಯುಪಿಯ ಬರೇಲಿಯಲ್ಲಿ ಇಬ್ಬರು ವ್ಯಕ್ತಿಗಳು ತಮ್ಮ ಫೋನ್‍ನಲ್ಲಿ ಪಾಕಿಸ್ತಾನವನ್ನು ಹೊಗಳುವ ಹಾಡನ್ನು ಹಾಕಿಕೊಂಡಿದ್ದರು. ಈ ರೀತಿ ಮಾಡುವುದು ರಾಷ್ಟ್ರೀಯ ಏಕೀಕರಣಕ್ಕೆ ಅಡ್ಡಿಪಡಿಸಿದಂತೆ ಎಂಬ ಆರೋಪದ ಮೇಲೆ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಬೈಕ್‍ಗೆ ಲಾರಿ ಡಿಕ್ಕಿ – ಫಾರ್ಮಾ ಕಂಪನಿ ನೌಕರ ಸಾವು

    PAK

    ಪಾಕಿಸ್ತಾನವನ್ನು ಹೊಗಳುವ ಹಾಡನ್ನು ಹಾಕಬೇಡಿ ಎಂದು ಆಕ್ಷೇಪ ವ್ಯಕ್ತಪಡಿಸಿದರೂ, ಅವರು ಮತ್ತೆ ಮತ್ತೆ ಅದೇ ಕೆಲಸ ಮಾಡುತ್ತಾರೆ ಎಂದು ಗ್ರಾಮಸ್ಥರಾದ ಆಶಿಶ್ ದೂರಿನಲ್ಲಿ ತಿಳಿಸಿದ್ದಾರೆ. ಈ ದೂರಿನ ಆಧಾರದ ಮೇರೆಗೆ ಇಬ್ಬರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ಈ ವ್ಯಕ್ತಿಗಳು ಸಿಂಘೈ ಮುರಾವಾನ್ ಗ್ರಾಮದ ನಿವಾಸಿಗಳು ಎಂದು ಪೊಲೀಸರು ವಿವರಿಸಿರು.

    ನಡೆದಿದ್ದೇನು?
    ಆರೋಪಿಗಳು ಗ್ರಾಮದಲ್ಲಿ ಬೇರೆಯವರಿಗೂ ಕೇಳಿಸುವಂತೆ ಪಾಕಿಸ್ತಾನ್ ಹೊಗಳುವ ಹಾಡನ್ನು ಜೋರಾಗಿ ಹಾಕಿಕೊಂಡಿದ್ದಾರೆ. ಇದನ್ನು ಆಕ್ಷೇಪಿಸಿ ಆಶಿಶ್ ಪ್ರಶ್ನಿಸುತ್ತಾರೆ. ಈ ಹಿನ್ನೆಲೆ ಇಬ್ಬರ ನಡುವೆ ಜಗಳ ಪ್ರಾರಂಭವಾಗಿದೆ. ಘಟನೆಯ ವೀಡಿಯೋವನ್ನು ಫೋನ್‍ನಲ್ಲಿ ಸೆರೆಹಿಡಿಯಲಾಗಿದ್ದು, ಟ್ವಿಟ್ಟರ್‌ನಲ್ಲಿ ಶೇರ್ ಮಾಡಿಕೊಳ್ಳಲಾಗಿದೆ.

    ಇದು ಪೊಲೀಸರ ಗಮನಕ್ಕೂ ಬಂದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಈ ವೀಡಿಯೋ ವೈರಲ್ ಆದ ಬಳಿಕ ಆಶಿಶ್ ಆರೋಪಿಗಳ ವಿರುದ್ಧ ದೂರನ್ನು ನೀಡಿದ್ದಾರೆ ಎಂದು ಬರೇಲಿಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜ್‍ಕುಮಾರ್ ಅಗರ್‍ವಾಲ್ ತಿಳಿಸಿದರು. ಇದನ್ನೂ ಓದಿ:  ರಾಯಬಾಗದಲ್ಲಿ ಆರನೇ ವಾರಕ್ಕೆ ಕಾಲಿಟ್ಟ ‘ಕನ್ನೇರಿ’ ಚಿತ್ರ – ಪ್ರೇಕ್ಷಕರಿಂದ ಸಂಭ್ರಮಾಚರಣೆ

    ರಾಷ್ಟ್ರೀಯ ಏಕೀಕರಣಕ್ಕೆ ಅಡ್ಡಿಪಡಿಸುವ ಕೃತ್ಯಗಳಿಗೆ ಸಂಬಂಧಿಸಿದ ಐಪಿಸಿಯ ಸೆಕ್ಷನ್ 153 ರ ಅಡಿಯಲ್ಲಿ ಎಫ್‍ಐಆರ್ ದಾಖಲಿಸಲಾಗಿದೆ.

  • ಮೊದಲ ದಿನದಿಂದ ಗೆಲುವು ಸ್ಪಷ್ಟವಾಗಿದೆ: ಯುಪಿ ಡಿಸಿಎಂ ಸೋಲಿಸಿದ ಪಲ್ಲವಿ ಪಟೇಲ್

    ಮೊದಲ ದಿನದಿಂದ ಗೆಲುವು ಸ್ಪಷ್ಟವಾಗಿದೆ: ಯುಪಿ ಡಿಸಿಎಂ ಸೋಲಿಸಿದ ಪಲ್ಲವಿ ಪಟೇಲ್

    ಲಕ್ನೋ: ಸಮಾಜವಾದಿ ಪಕ್ಷದ ಮೈತ್ರಿಕೂಟದ ಸವಾಲನ್ನು ಬದಿಗೊತ್ತಿ ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಮೊದಲ ದಿನವೇ ನಮ್ಮ ಗೆಲುವು ಸ್ಪಷ್ಟವಾಗಿತ್ತು ಎಂದು ಕೇಶವ್ ಮೌರ್ಯ ಅವರನ್ನು ಸೋಲಿಸಿದ ಪಲ್ಲವಿ ಪಟೇಲ್ ತಿಳಿಸಿದರು.

    ಯುಪಿಯಲ್ಲಿ ಗೆದ್ದ ಬಳಿಕ ಮೊದಲಬಾರಿ ಮಾಧ್ಯಮಗಳೊಂದಿಗೆ ಮಾತನಾಡಿದ ಪಲ್ಲವಿ ಅವರು, ಸಿರತುದಲ್ಲಿನ ನನ್ನ ಗೆಲುವು ಮೊದಲ ದಿನದಿಂದ ಸ್ಪಷ್ಟವಾಗಿತ್ತು. ಏಕೆಂದರೆ ಮೌರ್ಯ ಮತ್ತು ಅವರ ಕುಟುಂಬವು ಸೃಷ್ಟಿಸಿದ ಅವ್ಯವಸ್ಥೆಯಿಂದ ಸಿರತುವಿನ ಜನರು ನೋವಿನಲ್ಲಿ ಮುಳುಗಿದ್ದರು ಎಂದು ತಿಳಿಸಿದರು. ಇದನ್ನೂ ಓದಿ: ಸಭಾಪತಿ ಮೇಲೆ FIR ಹಾಕಿದ ಅಧಿಕಾರಿಯನ್ನ ಅಮಾನತು ಮಾಡಿ – ಪಕ್ಷಾತೀತವಾಗಿ ಒತ್ತಾಯ

    ಪಲ್ಲವಿ ಹಿನ್ನೆಲೆ:
    ಪಲ್ಲವಿ ಪಟೇಲ್ ಹೈದರಾಬಾದ್‍ನಲ್ಲಿ ಕೆಲಸ ಮಾಡುತ್ತಿದ್ದ ಸೈಂಟಿಸ್ಟ್ ಆಗಿದ್ದರು. 2009ರಲ್ಲಿ ಪಲ್ಲವಿ ತಂದೆ ಮತ್ತು ಅಪ್ನಾ ದಳದ ಸಂಸ್ಥಾಪಕ ಸೋನೆಲಾಲ್ ಪಟೇಲ್ ಅವರ ಮರಣದ ನಂತರ 2009 ರಲ್ಲಿ ತಮ್ಮ ವೃತ್ತಿಯನ್ನು ತೊರೆದು ರಾಜಕೀಯಕ್ಕೆ ಸೇರಿದ್ದರು.

    ಪಟೇಲ್ ಅವರ ಮರಣದ ನಂತರ, ಪಲ್ಲವಿ ಪಟೇಲ್ ಅವರ ತಾಯಿ ಕೃಷ್ಣಾ ಪಟೇಲ್ ಪಕ್ಷದ ಮುಖ್ಯಸ್ಥರಾದರು. 2014 ರ ಲೋಕಸಭಾ ಚುನಾವಣೆಯಲ್ಲಿ, ಅವರ ಸಹೋದರಿ ಮತ್ತು ಕೇಂದ್ರ ಸಚಿವೆ ಅನುಪ್ರಿಯಾ ಪಟೇಲ್ ಪೂರ್ವ ಯುಪಿಯ ಮಿರ್ಜಾಪುರದಿಂದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದರು.

    ಗೆದ್ದ ಸ್ವಲ್ಪದಿನಗಳ ಬಳಿಕ ಅನುಪ್ರಿಯಾ ಪಟೇಲ್ ಪ್ರತ್ಯೇಕ ಬಣವನ್ನು ರಚಿಸುವುದರೊಂದಿಗೆ ಪಕ್ಷವು ಬೇರ್ಪಟ್ಟಿತು. ನಂತರ ಅಪ್ನಾ ದಳ, ಬಿಜೆಪಿ ಜೊತೆ ಸೇರಿಕೊಂಡಿತು. 2019 ರಲ್ಲಿ ಲೋಕಸಭೆಗೆ ಮರು ಚುನಾಯಿತರಾದ ಕೇಂದ್ರ ಸಚಿವರಿಗೆ ನನ್ನ ಸಹೋದರಿಯೇ ಪ್ರಚಾರ ಮಾಡಿದರು. ಈ ವೇಳೆ ಸಿರತುದಲ್ಲಿ ನನ್ನ ವಿರುದ್ಧವೇ ಪ್ರಚಾರ ಮಾಡಲು ಮುಂದಾಗಿದ್ದರು ಎಂದು ವಿವರಿಸಿದರು.

    ನನ್ನ ಸಹೋದರಿ ನನ್ನ ವಿರುದ್ಧವೇ ಪ್ರಚಾರ ಮಾಡಿರುವುದಕ್ಕೆ ನನಗೆ ಯಾವುದೇ ಬೇಸರಗಳಿಲ್ಲ. ಅವರು ಯಾವುದೂ ಒತ್ತಡದಲ್ಲಿರಬೇಕು. ಈ ಪ್ರಚಾರದಿಂದ ನನಗೆ ಯಾವುದೇ ಸಮಸ್ಯೆಗಳಿಲ್ಲ. ಆದರೆ ಆಕೆ ಪ್ರಚಾರವು ನನಗೆ ಕೆಲವು ರೀತಿಯಲ್ಲಿ ಒಳ್ಳೆಯದೆ ಆಗಿದೆ. ಅದಕ್ಕಾಗಿ ನಾನು ಅವಳಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ತನ್ನ ಸಹೋದರಿಯೊಂದಿಗಿನ ಸಂಬಂಧದ ಬಗ್ಗೆ ಹೇಳಿದರು. ಇದನ್ನೂ ಓದಿ: ಯಾರೇ ಲಂಚ ಕೇಳಿದರೂ ಆಡಿಯೋ – ವೀಡಿಯೋ ನನಗೇ ಕಳುಹಿಸಿ: ಪಂಜಾಬ್ ಸಿಎಂ

    ಕೇಶವ್ ಮೌರ್ಯ ವಿರುದ್ಧ 7,000ಕ್ಕೂ ಹೆಚ್ಚು ಮತಗಳ ಅಂತರದಿಂದ ಸಿರತುದಿಂದ ಮೊದಲ ಬಾರಿಗೆ ಪಲ್ಲವಿ ಗೆದ್ದಿದ್ದಾರೆ. ಈ ವೇಳೆ ಸಿರತ್ತುನಲ್ಲಿ ಮತ ಎಣಿಕೆ ಕೇಂದ್ರದಲ್ಲಿ ಗದ್ದಲ ಸೃಷ್ಟಿಸುತ್ತಿದ್ದ ಎರಡೂ ಕಡೆಯ ಬೆಂಬಲಿಗರನ್ನು ಚದುರಿಸಲು ಪೊಲೀಸರು ಮತ್ತು ಅರೆಸೇನಾ ಪಡೆ ಸಿಬ್ಬಂದಿ ಹಲವು ಬಾರಿ ಬಲಪ್ರಯೋಗ ಮಾಡಬೇಕಾಯಿತು.

  • ಉಕ್ರೇನ್‍ನಲ್ಲಿ ಭಾರತೀಯರು ಸಿಲುಕಿರುವಾಗ, ಮೋದಿ ಯುಪಿ ಚುನಾವಣಾ ಸಭೆಗಳಲ್ಲಿ ನಿರತರಾಗಿದ್ದಾರೆ: ಮಮತಾ ಬ್ಯಾನರ್ಜಿ ಕಿಡಿ

    ಉಕ್ರೇನ್‍ನಲ್ಲಿ ಭಾರತೀಯರು ಸಿಲುಕಿರುವಾಗ, ಮೋದಿ ಯುಪಿ ಚುನಾವಣಾ ಸಭೆಗಳಲ್ಲಿ ನಿರತರಾಗಿದ್ದಾರೆ: ಮಮತಾ ಬ್ಯಾನರ್ಜಿ ಕಿಡಿ

    ಲಕ್ನೋ: ಉಕ್ರೇನ್‍ನಿಂದ ಭಾರತೀಯರನ್ನು ಸ್ಥಳಾಂತರಿಸುವಲ್ಲಿ ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪಶ್ಚಿಮ ಬಂಗಾಳದ ಸಿಎಂ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಗುರುವಾರ ತರಾಟೆಗೆ ತೆಗೆದುಕೊಂಡರು.

    ಉತ್ತರಪ್ರದೇಶ ವಿಧಾನಸಭಾ ಚುನಾವಣೆಗೆ ಸಮಾಜವಾದಿ ಪಕ್ಷ(ಎಸ್‍ಪಿ) ಪರವಾಗಿ ಪ್ರಚಾರ ಮಾಡುವಾಗ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರವು ಉಕ್ರೇನ್‍ನಲ್ಲಿರುವ ಭಾರತೀಯರನ್ನು ಯುದ್ಧದ ಮಧ್ಯೆ ತಮ್ಮಷ್ಟಕ್ಕೆ ಬಿಡುತ್ತಿದೆ. ಯುದ್ಧ ಪೀಡಿತ ಉಕ್ರೇನ್‍ನಲ್ಲಿ ಭಾರತೀಯರು ಸಿಲುಕಿರುವಾಗ ಮೋದಿ ಉತ್ತರ ಪ್ರದೇಶದಲ್ಲಿ ಚುನಾವಣಾ ಸಭೆಗಳಲ್ಲಿ ನಿರತರಾಗಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಅಪ್ಪು ಜೊತೆಗಿನ ಸುಮಧುರ ಕ್ಷಣಗಳನ್ನು ಬಿಚ್ಚಿಟ್ಟ ಜನಾರ್ದನ ರೆಡ್ಡಿ ಪುತ್ರ!

    ಇದೀಗ ಏನಾಗುತ್ತಿದೆ ನೋಡಿ. ಉಕ್ರೇನ್‍ನಲ್ಲಿ ಯುದ್ಧ ನಡೆಯುತ್ತಿದೆ. ಮೋದಿ ಇಲ್ಲಿ(ಯುಪಿ) ಸಭೆಗಳನ್ನು ಮಾಡುತ್ತಿದ್ದಾರೆ. ಯಾವುದು ಮುಖ್ಯ? ನಮ್ಮ ಭಾರತೀಯರನ್ನು ಮತ್ತು ವಿದ್ಯಾರ್ಥಿಗಳನ್ನು ಮರಳಿ ಕರೆತರುವುದು ಮುಖ್ಯವಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದಾರೆ. ಯುದ್ಧವು ಪ್ರಾರಂಭವಾಗಲಿದೆ ಎಂದು ಮೂರು ತಿಂಗಳ ಮೊದಲೇ ತಿಳಿದಿದ್ದರೆ, ನೀವು ಭಾರತೀಯರನ್ನು ಉಕ್ರೇನ್‍ನಿಂದ ಏಕೆ ಮರಳಿ ಕರೆತರಲಿಲ್ಲ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕಾಲುನೋವು ತಾಳಲಾಗದೆ ಮರ್ಮಾಂಗವನ್ನೆ ಕತ್ತರಿಸಿಕೊಂಡ!

  • ಕೊರೊನಾದೊಂದಿಗೆ ಪ್ರತಿಪಕ್ಷಗಳು ಸ್ನೇಹ ಬೆಳೆಸುತ್ತಿದೆ: ಯೋಗಿ ಆದಿತ್ಯನಾಥ್

    ಕೊರೊನಾದೊಂದಿಗೆ ಪ್ರತಿಪಕ್ಷಗಳು ಸ್ನೇಹ ಬೆಳೆಸುತ್ತಿದೆ: ಯೋಗಿ ಆದಿತ್ಯನಾಥ್

    ಲಕ್ನೋ: ಕೊರೊನಾದೊಂದಿಗೆ ಪ್ರತಿಪಕ್ಷಗಳು ಸ್ನೇಹ ಬೆಳೆಸುತ್ತಿದೆ ಎಂದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಸಮಾಜವಾದಿ ಪಕ್ಷದ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.

    ‘ಜನ್ ವಿಶ್ವಾಸ ಯಾತ್ರೆ’ ಯಲ್ಲಿ ಯುಪಿಯ ಕೌಶಂಬಿಯಲ್ಲಿ ನಡೆದ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಹಿಂದಿನ ಸರ್ಕಾರ ಜನರ ಹಣವನ್ನು ಲೂಟಿ ಮಾಡುತ್ತಿತ್ತು. ಆದರೆ ಈಗ ನಮ್ಮ ಸರ್ಕಾರ ಕಲ್ಯಾಣ ಯೋಜನೆಗಳಿಗೆ ಹಣವನ್ನು ಖರ್ಚು ಮಾಡಲಾಗುತ್ತಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ಕೋಟ್ಯಂತರ ರೂ. ದುರುಪಯೋಗ ಪಡಿಸಿಕೊಳ್ಳಲಾಗುತ್ತಿತ್ತು. ಆದರೆ ನಮ್ಮ ಸರ್ಕಾರ ಸಂಪೂರ್ಣ ಬದ್ಧತೆಯಿಂದ ಕೆಲಸ ಮಾಡುತ್ತಿದೆ ಎಂದರು. ಇದನ್ನೂ ಓದಿ: ನಾನು ’24 ಕ್ಯಾರೆಟ್ ಕಾಂಗ್ರೆಸ್ಸಿಗ’, ಪಕ್ಷದೊಂದಿಗೆ ಯಾವುದೇ ಅಸಮಾಧಾನವಿಲ್ಲ: ಗುಲಾಂ ನಬಿ ಆಜಾದ್

    ಕೋವಿಡ್-19 ಲಸಿಕೆಗಳನ್ನು ಪ್ರತಿಪಕ್ಷಗಳು ವಿರೋಧಿಸುವ ಮೂಲಕ ಮಾನವೀಯತೆಯ ವಿರುದ್ಧ ಅಪರಾಧ ಎಸಗಿವೆ. ಕೊರೊನಾದೊಂದಿಗೆ ಪ್ರತಿಪಕ್ಷಗಳು ಸ್ನೇಹ ಬೆಳೆಸುತ್ತಿದೆ. ಅವರಿಗೆ ಬಡವರ ಬಗ್ಗೆ ಕಾಳಜಿಯಿಲ್ಲ. ಹಿಂದೆ ಅವರಿಗೆ ಜನರನ್ನು ಕಾಯಲು ಅವಕಾಶ ಸಿಕ್ಕಿತ್ತು. ಆದರೆ ಅವರು ಏನನ್ನೂ ಮಾಡಲು ಸಾಧ್ಯವಾಗಲಿಲ್ಲ. ಅದಕ್ಕೆ ಈಗ ಅವರು ಜನರಿಗೆ ತಪ್ಪು ಮಾಹಿತಿಯನ್ನು ನೀಡುತ್ತಿದ್ದು, ಜನರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ವಿರೋಧ ವ್ಯಕ್ತಪಡಿಸಿದರು.

    ಪಿಯೂಷ್ ಜೈನ್ ಅವರ ಮೇಲೆ ಕೇಂದ್ರೀಯ ಸಂಸ್ಥೆಗಳು ಇತ್ತೀಚೆಗೆ ದಾಳಿ ನಡೆಸಿದ್ದು, ಅವರ ಬಳಿ ಒಟ್ಟು 177.45 ಕೋಟಿ ನಗದು ಪತ್ತೆಯಾಗಿತ್ತು. ಈ ಹಿನ್ನೆಲೆ ಕಾನ್ಪುರದ ಉದ್ಯಮಿಯನ್ನು ಉಲ್ಲೇಖಿಸಿ ಮಾತನಾಡಿದ ಅವರು, ಐದು ವರ್ಷಗಳ ಕಾಲ ಅಧಿಕಾರದಿಂದ ಹೊರಗುಳಿದಿದ್ದರೂ, ಇಂದಿಗೂ ಅವರ ಮನೆಯ ಗೋಡೆಗಳಿಂದ ಕೋಟಿಗಟ್ಟಲೆ ಕರೆನ್ಸಿ ನೋಟುಗಳು ಹೊರಬರುತ್ತಿವೆ. ಇದನ್ನು ನೀವು ಸಹ ನೋಡಬಹುದು ಎಂದು ಟೀಕಿಸಿದರು.

    ಇಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರಾಜ್ಯದ ಜನರಿಗೆ ನೀಡುತ್ತಿರುವ ಉಚಿತ ಆಹಾರದ ಹಣವನ್ನು, ಹಿಂದಿನ ಸರ್ಕಾರ ಭ್ರಷ್ಟಾಚಾರಕ್ಕೆ ಬಳಸುತ್ತಿತ್ತು ಎಂದು ಕಿಡಿಕಾರಿದರು. ಇದನ್ನೂ ಓದಿ: ಬಂಗಾಳದ ಐವರು ಬಿಜೆಪಿ ಶಾಸಕರು ಪಕ್ಷ ತೊರೆಯಬಹುದು: ಬಾಬುಲ್ ಸುಪ್ರಿಯೋ

    ತಮ್ಮ ಸರ್ಕಾರದ ಸಾಧನೆಗಳನ್ನು ವಿವರಿಸಿದ ಅವರು, ಕೌಶಾಂಬಿಯಲ್ಲಿ ಸುಮಾರು 50,000 ಕುಟುಂಬಗಳಿಗೆ ಹೊಸ ಮನೆಗಳನ್ನು ಮಂಜೂರು ಮಾಡಲಾಗಿದೆ. ಮೊದಲು ಕಾವೇರಿ ಯಾತ್ರೆಗೆ ನಿರ್ಬಂಧವಿತ್ತು, ಆದರೆ ನಮ್ಮ ಸರ್ಕಾರ ಯಾತ್ರೆಗೆ ಬೇಕಾದ ಅನುಕೂಲವನ್ನು ಮಾಡಿಕೊಟ್ಟಿದೆ. ಈ ಹಿಂದೆ ಪ್ರಯಾಗ್‍ರಾಜ್‍ನ ಕುಂಭದಲ್ಲಿ ಕಾಲ್ತುಳಿತವಾಗಿತ್ತು. ಈಗ ಪ್ರಯಾಗ್‍ರಾಜ್‍ನಲ್ಲಿ ಕುಂಭ ಆಯೋಜಿಸಿದಾಗ, ಯಾವುದೇ ರೀತಿಯ ಅಪಾಯವು ಆಗಲಿಲ್ಲ. ಈ ಸಿದ್ಧತೆಗಳನ್ನು ನೋಡಿದ ಪ್ರಪಂಚದ ಎಲ್ಲ ಭಾಗಗಳ ಭಕ್ತರು ಶ್ಲಾಘಿಸಿದ್ದಾರೆ ಎಂದು ತಿಳಿಸಿದರು.

  • ಯುಪಿಯಲ್ಲಿ ಹೆಚ್ಚುತ್ತಿವೆ ಲವ್ ಜಿಹಾದ್ ಪ್ರಕರಣ- ಹುಡುಗಿ ತಂದೆಯ ಟ್ವೀಟ್ ವೈರಲ್

    ಯುಪಿಯಲ್ಲಿ ಹೆಚ್ಚುತ್ತಿವೆ ಲವ್ ಜಿಹಾದ್ ಪ್ರಕರಣ- ಹುಡುಗಿ ತಂದೆಯ ಟ್ವೀಟ್ ವೈರಲ್

    ಲಕ್ನೋ: ಉತ್ತರ ಪ್ರದೇಶದ ಮೀರತ್‍ನಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದ್ದು, ಈ ಕುರಿತು ಬಿಜೆಪಿ ಸಂಸದರು ಸಹ ಸದನದಲ್ಲಿ ಧ್ವನಿ ಎತ್ತಿದ್ದಾರೆ.

    ಬಿಜೆಪಿ ಸಂಸದ ರಾಜೇಂದ್ರ ಅಗರ್ವಾಲ್ ಗುರುವಾರ ಸಂಸತ್‍ನಲ್ಲಿ ಶೂನ್ಯ ವೇಳೆಯ ಸಂದರ್ಭದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ದುಬೈನಲ್ಲಿ ನೆಲೆಸಿರುವ ಪಾಕಿಸ್ತಾನ ಮೂಲದ ನದೀಮ್ ಎಂಬಾತನ ಮೋಸದಾಟಕ್ಕೆ ಬಲಿಯಾದ ಹುಡುಗಿ ದುಬೈಗೆ ಓಡಿಹೋಗಿದ್ದಾಳೆ ಎಂದು ಆರೋಪಿಸಿದ್ದಾರೆ.

    ಇದಕ್ಕೆ ಪುಷ್ಟಿ ನೀಡುವಂತೆ ಬಾಲಕಿಯ ತಂದೆ ಪೋಸ್ಟ್ ಮಾಡಿರುವ ಟ್ವೀಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಂತ್ರಸ್ತೆಯ ತಂದೆ ಕಂಕರ್ ಖೇರಾ ನಿವಾಸಿ ಕಪಿಲ್ ಗುಪ್ತಾ ನವೆಂಬರ್ 17ರಂದು ಭಾವನಾತ್ಮಕ ಟ್ವೀಟ್ ಮಾಡಿದ್ದು, ನಾನು 18 ವರ್ಷದ ಮಗಳ ಅಸಾಹಯಕ ತಂದೆ. ನನ್ನ ಮುಗ್ಧ ಮಗಳು ಲವ್ ಜಿಹಾದ್‍ನಲ್ಲಿ ಸಿಲುಕಿಕೊಂಡಿದ್ದಾಳೆ. ಸ್ವಲ್ಪ ದಿನಗಳಿಂದ ರೋಮಿಯೋ ಎಂದು ಮಾತನಾಡುತ್ತಿದ್ದ ಪಾಕಿಸ್ತಾನ ಮೂಲದ ವ್ಯಕ್ತಿ ಈ ಕೃತ್ಯ ಎಸಗಿದ್ದಾನೆ. ಇವನೇ ನನ್ನ ಮಗಳನ್ನು ದುಬೈ ಕರೆಸಿಕೊಂಡಿದ್ದಾನೆ. ನನ್ನ ಮಗಳು ಈ ರೀತಿ ಮಾಡುತ್ತಾಳೆಂದು ನಾನು ತಿಳಿದಿರಲಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

    https://twitter.com/Kapil_Gupta_90/status/1196087244316037123?

    ಗುಪ್ತಾ ಅವರ ಟ್ವೀಟ್ ನೋಡಿದ ದುಬೈ ಕಾನ್ಸುಲೇಟ್ ಜನರಲ್ ಆಫ್ ಇಂಡಿಯಾ(ಸಿಜಿಐ), ಈ ವಿಷಯದಲ್ಲಿ ತಮಗೆ ಸಾಧ್ಯವಾದಷ್ಟು ಸಹಾಯ ಮಾಡುವುದಾಗಿ ಭರವಸೆ ನೀಡಿದ್ದಾರೆ.

    ನಾವು ನಿಮ್ಮ ಕುಟುಂಬದೊಂದಿಗೆ ಮಾತನಾಡಿದ್ದೇವೆ ನಿಮ್ಮ ಮಗಳನ್ನು ಹುಡುಕುವ ಬಗ್ಗೆ ದುಬೈ ಏಜೆನ್ಸಿಗಳೊಂದಿಗೆ ಮಾತನಾಡಿದ್ದೇವೆ. ಯಾವುದೇ ಸಂಪರ್ಕ ಸಂಖ್ಯೆ ಹಾಗೂ ವಿಳಾಸ ಇಲ್ಲದ ಕಾರಣ ಮಾಹಿತಿ ಕಲೆ ಹಾಕುವುದು ತುಂಬಾ ಕಷ್ಟಕರ ಕೆಲಸವಾಗಿದೆ. ಆದರೂ ನಾವು ಪ್ರಯತ್ನ ಬಿಡುವುದಿಲ್ಲ ಎಂದು ದುಬೈನಲ್ಲಿರುವ ಸಿಜಿಐ ಪ್ರತಿಕ್ರಿಯಿಸಿದ್ದಾರೆ.

    ಇದಕ್ಕೆ ಪ್ರತಿಯಾಗಿ ಗುಪ್ತಾ ಸಹ ಪ್ರತಿಕ್ರಿಯಿಸಿದ್ದು, ತಕ್ಷಣ ಪ್ರತಿಕ್ರಿಯಿಸಿದ್ದಕ್ಕೆ ಧನ್ಯವಾದ. ಹುಡುಗಿ ದುಬೈಗೆ ಹೋಗಿದ್ದರಿಂದ ಅವರ ಸಂಪರ್ಕ ಸಂಖ್ಯೆ ಇಲ್ಲ ಎಂದಿದ್ದಾರೆ. ಆದರೆ ಯುವಕನ ಇನ್‍ಸ್ಟಾಗ್ರಾಮ್ ಹಾಗೂ ಫೇಸ್‍ಬುಕ್ ಐಡಿಯನ್ನು ನೀಡಿದ್ದಾರೆ.

    https://twitter.com/Kapil_Gupta_90/status/1196087361550970880?

    ಫೇಸ್‍ಬುಕ್ ಲವ್: ಸಂತ್ರಸ್ತೆಯ ಕುಟುಂಬಸ್ಥರು ಹೇಳುವಂತೆ, ಹುಡುಗಿಯು ನದೀಮ್‍ನೊಂದಿಗೆ ಇನ್‍ಸ್ಟಾಗ್ರಾಮ್ ಹಾಗೂ ಫೇಸ್ಬುಕ್‍ನಲ್ಲಿ ಪರಿಚಯವಾಗಿದ್ದಾಳೆ. ನವೆಂಬರ್ 4ರಂದು ಅವಳ ಪಾಸ್‍ಪೋರ್ಟ್ ತಯಾರಾಗಿದೆ. ಇದಾದ ನಾಲ್ಕು ದಿನಗಳ ಬಳಿಕ ಹುಡುಗಿ ಕಾಣೆಯಾಗಿದ್ದಾಳೆ. ಮನೆಯಲ್ಲಿದ್ದ 7 ಸಾವಿರ ರೂ. ಹಾಗೂ ಅವಳ ಶಾಲಾಕಾಲೇಜು ದಾಖಲಾತಿಗಳನ್ನು ತೆಗೆದುಕೊಂಡು ಹೋಗಿದ್ದಾಳೆ. ನವೆಂಬರ್ 8ರ ರಾತ್ರಿ ದೆಹಲಿ ವಿಮಾನ ನಿಲ್ದಾಣದಿಂದ ದುಬೈಗೆ ಹೋಗಿದ್ದಾಳೆ ಎಂದು ಮಾಹಿತಿ ನೀಡಿದ್ದಾರೆ.

    ಪಾಕಿಸ್ತಾನ ಮೂಲದ ನದೀಮ್ ದುಬೈನ ಪಂಚತಾರಾ ಹೋಟೆಲ್‍ನಲ್ಲಿ ಮ್ಯಾನೇಜರ್ ಆಗಿದ್ದಾನೆ ಎಂದು ವರದಿಯಾಗಿದೆ. ನದೀಮ್ ತನ್ನ ಫೇಸ್‍ಬುಕ್ ಖಾತೆಯಲ್ಲಿ ‘ಐ ಲವ್ ಪಾಕಿಸ್ತಾನ’ ಎಂದು ಪೋಸ್ಟ್ ಮಾಡಿದ್ದನು.

  • ಯುಪಿಯಲ್ಲಿ ಸೈಕಲ್ ಕೇಕೆ, ಪ್ರಧಾನಿ ಮೋದಿಗೆ ಎಚ್ಚರಿಕೆ – ಮಹಾ ಮೈತ್ರಿಗೆ ಇದು ವೇದಿಕೆ!

    ಯುಪಿಯಲ್ಲಿ ಸೈಕಲ್ ಕೇಕೆ, ಪ್ರಧಾನಿ ಮೋದಿಗೆ ಎಚ್ಚರಿಕೆ – ಮಹಾ ಮೈತ್ರಿಗೆ ಇದು ವೇದಿಕೆ!

    ಮೋದಿ.. ಮೋದಿ.. ಯೋಗಿ.. ಯೋಗಿ.. ಇದು ಬಿಜೆಪಿ ಕಾರ್ಯಕರ್ತರ ಅಬ್ಬರಿಸಿ ಬೊಬ್ಬರಿದು ಘೋಷಣೆ ಕೂಗುತ್ತಿದ್ದ ಪರಿ. ಆದರೆ ಇವತ್ತು ಈ ಘೋಷಣೆ ಕೂಗು ತಗ್ಗಿ ಹೋಗಿತ್ತು. ಆನೆಯ ಸಹಾಯದಿಂದ ಸೈಕಲ್ ಸವಾರಿ ಮಾಡಿದವರಿಗೆ ಶಿಳ್ಳೆ, ಚಪ್ಪಾಳೆಯ ಸ್ವಾಗತ ಸಿಕ್ಕಿದೆ.

    ಪ್ರಧಾನಿ ಮೋದಿಯ ಆಶ್ವಮೇಧ ಕುದುರೆಯನ್ನು ಕಟ್ಟಿಹಾಕಲು ವಿಪಕ್ಷಗಳು ಒಂದಾಗಬೇಕು ಎನ್ನುವ ಕೂಗಿಗೆ ಪುಷ್ಠಿ ಸಿಕ್ಕಿದೆ. ಇದಕ್ಕೆಲ್ಲಾ ಕಾರಣ ಗಟ್ಟಿ ಕೇತ್ರಗಳಲ್ಲೇ ಬಿಜೆಪಿ ಮಕಾಡೆ ಮಲಗಿದೆ. ಉತ್ತರಪ್ರದೇಶದ ಗೋರಖ್‍ಪುರ್, ಫೂಲ್‍ಪುರ್ ಲೋಕಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ನೆಲಕೆಚ್ಚಿದೆ. ಎರಡು ದಶಕಗಳಿಗೂ ಹೆಚ್ಚು ಕಾಲ ನಡೆಸಿದ ಯೋಗಿ ಆರ್ಭಟ ನಿಂತಿದೆ. ಈ ಉಪಚುನಾವಣೆಗಳಲ್ಲಿನ ಸೋಲು ಮೋದಿ, ಯೋಗಿಯ ಜಬರ್ದಸ್ತ್ ಹವಾವನ್ನೇ ಪ್ರಶ್ನಿಸುವಂತಾಗಿದೆ.

    ಅಂದಿದ್ದ ಹವಾ, ಈಗ ಎಲ್ಲೋಯ್ತು ಶಿವಾ ಅನ್ನೋ ಪ್ರಶ್ನೆಗಳ ಸುರಿಮಳೆ ಜೋರಾಗಿವೆ. ಹಾಗಾದ್ರೆ ಈ ಉಪಚುನಾವಣೆ ಮುಂದಿನ ಚುನಾವಣೆಗಳಿಗೆ ದಿಕ್ಸೂಚಿನಾ? ಮೋದಿಯ ನಾಗಲೋಟಕ್ಕೆ ಬ್ರೇಕ್ ಹಾಕಲು ಮಿತ್ರಪಕ್ಷಗಳನ್ನು ಕಾಂಗ್ರೆಸ್ ಗುಡ್ಡೆ ಹಾಕುತ್ತಾ ಎನ್ನುವ ಲೆಕ್ಕಚಾರಗಳು ಭರ್ಜರಿಯಾಗಿಯೇ ನಡೆದಿವೆ.

    ಈ ನಡುವೆ ಉಪಚುನಾವಣೆಯ ಫಲಿತಾಂಶದಿಂದ ಕಾಂಗ್ರೆಸ್‍ನ ಶಕ್ತಿಯೇನೂ ವೃದ್ಧಿಯಾಗಿಲ್ಲ. ಆದರೂ ಮೈತ್ರಿ ರಾಜಕಾರಣ ಗಟ್ಟಿಗೊಳಿಸಲು ಕೈಗೆ ವೇದಿಕೆ ಸಿಕ್ಕಂತಾಗಿದೆ. ಎಸ್‍ಪಿ, ಬಿಎಸ್‍ಪಿ ಕಾಂಬಿನೇಶನ್ ಫೈಟ್‍ನಿಂದಾಗಿಯೇ ಬಿಜೆಪಿ ಸೋಲಿಗೆ ಕಾರಣವಾಗಿರೋದು ಸ್ಪಷ್ಟವಾಗಿದ್ದು, ಇದೇ ಮೈತ್ರಿ ಮುಂದಿನ ಲೋಕಸಭಾ ಚುನಾವಣೆಗೆ ಮುಂದುವರಿದರೆ ಬಿಜೆಪಿಗೆ ಕಷ್ಟ ಎನ್ನುವ ಚರ್ಚೆಗಳು  ನಡೆಯಲು ಆರಂಭಿಸಿದೆ. ಅಷ್ಟೇ ಅಲ್ಲ ರಾಷ್ಟ್ರ ರಾಜಕಾರಣದ ದಿಕ್ಸೂಚಿಗೆ ಮುನ್ನುಡಿ ಬರೆದಿದ್ದು, ನಿನ್ನೆಯಷ್ಟೇ ಸೋನಿಯಾಗಾಂಧಿ 20 ಮಿತ್ರ ಪಕ್ಷಗಳ ಜತೆ ಭೋಜನ ಕೂಟ ನಡೆಸಿ ಮೈತ್ರಿ ಕಸರತ್ತು ಆರಂಭಿಸಿದ್ದಾರೆ. ಹಾಗಾಗಿಯೇ ಮೋದಿ ದುಷ್ಮನ್‍ಗಳೆಲ್ಲಾ ಒಂದಾದರೆ 2019ರ ಲೋಕಸಭಾ ಚುನಾವಣೆಯಲ್ಲಿ ಹಾದಿ ಕಠಿಣ ಎನ್ನುವ ಲೆಕ್ಕಾಚಾರಗಳು ಜೋರಾಗಿದೆ.

    ಕರ್ನಾಟಕ ಚುನಾವಣೆಯಲ್ಲೂ ಮೋದಿ, ಶಾ ಜೋಡಿ ಎಚ್ಚರಿಕೆಯ ಹೆಜ್ಜೆಯ ಇಡಬೇಕಾಗಿದ್ದು, ಕಾಂಗ್ರೆಸ್‍ನಿಂದ ಜೆಡಿಎಸ್ ಪಕ್ಷವನ್ನು ದೂರ ಇರುವಂತೆಯೇ ನೋಡಿಕೊಳ್ಳುವುದನ್ನು ಕಲಿಯಬೇಕಿದೆ. ಇಲ್ಲದಿದ್ದರೇ ಗಂಡಾಂತರ ಗ್ಯಾರಂಟಿ ಎನ್ನುವುದು ರಾಜಕೀಯ ಪಡಸಾಲೆಯಲ್ಲಿ ವಿಶ್ಲೇಷಣೆ ಆರಂಭವಾಗಿದೆ.

    2014ರಿಂದ ಇಲ್ಲಿ ತನಕ ಕೆಲ ಸಣ್ಣ ಸಣ್ಣ ಸೋಲುಗಳನ್ನು ಹೊರತುಪಡಿಸಿದರೆ ಮೋದಿಗೆ ವಿಜಯದ ಮೇಲೆ ವಿಜಯ ದಕ್ಕಿದ್ದು ದೊಡ್ಡ ಸಾಧನೆಯೇ ಸರಿ. ಆದರೆ ಇದೇ ಹವಾದ ಉತ್ತರ ಪ್ರದೇಶದ ಉಪಚುನಾವಣೆಗಳ ಸೋಲಿನಿಂದ ಕಡಿಮೆಯಾಗಲು ಶುರುವಾಯ್ತಾ? ಕರ್ನಾಟಕ ಚುನಾವಣೆ ಮೋದಿ, ಶಾ ಪಾಲಿನ ಅತಿದೊಡ್ಡ ಅಗ್ನಿ ಪರೀಕ್ಷೆಯಲ್ಲವಾ? ಮೈತ್ರಿ ರಾಜಕಾರಣ ಮೋದಿಯ ಮಾಂತ್ರಿಕ ರಾಜಕಾರಣಕ್ಕೆ ಪೆಟ್ಟು ನೀಡುತ್ತಾ ಎಂಬೆಲ್ಲಾ ಪ್ರಶ್ನೆಗಳಿಗೆ ಮುಂದಿನ ದಿನಗಳಲ್ಲಿ ಉತ್ತರ ಸಿಗಲಿದೆ.

  • ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಭಾರೀ ಮುಖಭಂಗ- ಬಿಹಾರದಲ್ಲಿ ಆರ್ ಜೆಡಿಗೆ ಗೆಲುವು

    ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಭಾರೀ ಮುಖಭಂಗ- ಬಿಹಾರದಲ್ಲಿ ಆರ್ ಜೆಡಿಗೆ ಗೆಲುವು

    ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿಸಲು ಮೈತ್ರಿ ಮಾತುಕತೆಗೆ ಪ್ರತಿಪಕ್ಷಗಳು ಮುಂದಾಗುತ್ತಿರುವ ಬೆನ್ನಲ್ಲೇ ಉಪಚುನಾವಣೆಯಲ್ಲಿ ಸಿಹಿ ಸುದ್ದಿ ಸಿಕ್ಕಿದೆ.

    ಆಡಳಿತಾರೂಢ ಬಿಜೆಪಿ ಮೂರು ಕ್ಷೇತ್ರಗಳಲ್ಲಿ ಹಿನ್ನಡೆ ಅನುಭವಿಸಿದೆ. ಫೂಲ್ಪುರ್ ಎಸ್‍ಪಿಯ ನಾಗೇಂದ್ರ ಪ್ರತಾಪ್ ಬಿಜೆಪಿಯ ಅಭ್ಯರ್ಥಿ ವಿರುದ್ಧ 59,613 ಮತಗಳ ಅಂತರದಿಂದ ಜಯಗಳಿಸಿದ್ದಾರೆ.

    ಗೋರಖ್‍ಪುರ್ ದಲ್ಲಿ ಸಮಾಜವಾದಿ ಅಭ್ಯರ್ಥಿ 26,954 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. 25ನೇ ಸುತ್ತಿನ ಮತ ಎಣಿಕೆಯ ವೇಳೆ ಎಸ್‍ಪಿಯ ಪ್ರವೀಣ್ ಕುಮಾರ್ ನಿಶಾದ್ ಅವರಿಗೆ 3,77,146 ಮತಗಳು ಬಿದ್ದರೆ, ಬಿಜೆಪಿಯ ಉಪೇಂದ್ರ ದತ್ತಾ ಶುಕ್ಲಾ ಅವರಿಗೆ 3,54,192 ಮತಗಳು ಬಿದ್ದಿವೆ.

    ಫೂಲ್ಪುರ್ ದಲ್ಲಿ 28 ಸುತ್ತಿನ ಮತ ಎಣಿಕೆಯ ವೇಳೆ ಬಿಜೆಪಿಯ ಕೌಶಲೇಂದ್ರ ಸಿಂಗ್ ಪಟೇಲ್ ಅವರಿಗೆ 2,57,821 ಮತಗಳು ಬಿದ್ದಿದ್ದರೆ, ಎಸ್‍ಪಿಯ ನಾಗೇಂದ್ರ ಪ್ರತಾಪ್ ಸಿಂಗ್ ಅವರಿಗೆ 3,05,172 ಮತಗಳು ಬಿದ್ದಿತ್ತು.

    ಗೋರಖ್‍ಪುರ ಕ್ಷೇತ್ರ ಬಿಜೆಪಿಯ ಭದ್ರ ಕೋಟೆಯಾಗಿದ್ದು ಮಹಂತ್ ಅವೈದ್ಯದನಾತ್ ಅವರು ಪ್ರತಿನಿಧಿಸಿದ್ದರು. ಆ ಕ್ಷೇತ್ರದಲ್ಲಿ 1998 ರಲ್ಲಿ ಆದಿತ್ಯನಾಥ್ ಅವರು 2014ರವರೆಗೆ ನಿರಂತರ ಗೆಲುವು ಸಾಧಿಸಿಕೊಂಡು ಬಂದಿದ್ದರು. ಈ ಎರಡು ಕ್ಷೇತ್ರದಲ್ಲಿ ಬಿಎಸ್‍ಬಿ ತನ್ನ ಅಭ್ಯರ್ಥಿಯನ್ನು ಕಣಕ್ಕೆ ಇಳಿಸದೇ ಎಸ್‍ಪಿ ಅಭ್ಯರ್ಥಿಗೆ ಬೆಂಬಲ ನೀಡಿತ್ತು.

    ಆರ್ ಜೆಡಿಗೆ ಗೆಲುವು
    ಬಿಹಾರದ ಅರಾರಿಯಾ ಲೋಕಸಭಾ ಕ್ಷೇತ್ರದಲ್ಲೂ ಬಿಜೆಪಿ-ಜೆಡಿಯು ಮೈತ್ರಿ ಅಭ್ಯರ್ಥಿ ಸೋತಿದ್ದು ವಿಪಕ್ಷ ಆರ್ ಜೆಡಿ ಅಭ್ಯರ್ಥಿ ಗೆದ್ದಿದ್ದಾರೆ. 2014ರ ಚುನಾವಣೆಯಲ್ಲೂ ಆರ್ ಜೆಡಿ ಇಲ್ಲಿ ಗೆದ್ದುಕೊಂಡಿತ್ತು.