Tag: UPSC Topper

  • ಯುಪಿಎಸ್‍ಸಿ ಟಾಪರ್ ಈಗ ಬಳ್ಳಾರಿ ಜಿ.ಪಂ.ನ ಸಿಇಒ ಆಗಿ ನೇಮಕ

    ಯುಪಿಎಸ್‍ಸಿ ಟಾಪರ್ ಈಗ ಬಳ್ಳಾರಿ ಜಿ.ಪಂ.ನ ಸಿಇಒ ಆಗಿ ನೇಮಕ

    ಬಳ್ಳಾರಿ: ಯುಪಿಎಸ್‍ಸಿ ಪರೀಕ್ಷೆಯಲ್ಲಿ ಇಡೀ ದೇಶಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿರುವ ನಂದಿನಿ ಕೆ.ಆರ್. ಅವರು ಇಂದು ಬಳ್ಳಾರಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

    ಮೂಲತಃ ಕೋಲಾರ ಜಿಲ್ಲೆಯ ಕೆಂಬೋಡಿ ಗ್ರಾಮದವರಾದ ನಂದಿನಿ ಅವರು, 2016ರ ಬ್ಯಾಚ್‍ನ ಯುಪಿಎಸ್‍ಸಿ ಪರೀಕ್ಷೆಯಲ್ಲಿ ಟಾಪರ್ ಆಗಿ ಉತ್ತೀಣರಾಗಿದ್ದರು. ಈ ಮೂಲಕ ಇಡೀ ದೇಶದ ಗಮನ ಸೆಳೆದಿದ್ದರು. ಕಡುಬಡತನದ ಹಿನ್ನೆಲೆಯಲ್ಲಿ ಬಂದ ನಂದಿನಿ ಅವರು ಇದೀಗ ಬಳ್ಳಾರಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿರೋದು ಜಿಲ್ಲೆಯ ಹೆಮ್ಮೆಯ ಸಂಗತಿಯಾಗಿದೆ.

    ಐಎಎಸ್ ಪರೀಕ್ಷೆಯಲ್ಲಿ ಟಾಪರ್ ಆಗಿ ಆಯ್ಕೆಯಾಗಿರುವ ನಂದಿನಿ ಅವರಿಗೆ ಮುಂಚೂಣಿಯಾಗಿ ಸಿಇಒ ಹುದ್ದೆಯನ್ನ ಅಲಂಕರಿಸಲು ಬಳ್ಳಾರಿ ಜಿಲ್ಲಾ ಪಂಚಾಯಿತಿ ಒಂದು ರೀತಿಯ ಸ್ಫೂರ್ತಿದಾಯಕವಾಗಿದೆ. ಈ ಹಿಂದೆ ಬಳ್ಳಾರಿ ಜಿಲ್ಲಾ ಪಂಚಾಯಿತಿ ಸಿಇಓ ಆಗಿ ಕೆ.ನಿತೀಶ್ ಅವರು ಆಯ್ಕೆಯಾಗಿದ್ದರು. ನಿತೀಶ್ ಅವರ ಹಿಂದೆ ಸಿಇಓ ಆಗಿ ಆಯ್ಕೆಯಾಗಿದ್ದ ಡಾ.ಕೆ.ವಿ.ರಾಜೇಂದ್ರ ಅವರ ಕಾರ್ಯವೈಖರಿ ಜನಮನ್ನಣೆ ಗಳಿಸಿತ್ತು. ಇದೀಗ ನಂದಿನಿ ಅವರು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

  • ತನ್ನ ಸಾಧನೆಗೆ ಕಾರಣಳಾದ ಪ್ರೇಯಸಿಗೆ ಧನ್ಯವಾದ ತಿಳಿಸಿದ ಯುಪಿಎಸ್‍ಸಿ ಟಾಪರ್!

    ತನ್ನ ಸಾಧನೆಗೆ ಕಾರಣಳಾದ ಪ್ರೇಯಸಿಗೆ ಧನ್ಯವಾದ ತಿಳಿಸಿದ ಯುಪಿಎಸ್‍ಸಿ ಟಾಪರ್!

    ನವದೆಹಲಿ: ಶುಕ್ರವಾರ ಯುಪಿಎಸ್‍ಸಿ ಪರೀಕ್ಷಾ ಫಲಿತಾಂಶ ಹೊರಬಿದ್ದಿದ್ದು, ಈ ಬಾರಿ ಮುಂಬೈ ಐಐಟಿನ ಬಿಟೆಕ್ ವಿದ್ಯಾರ್ಥಿ ಕನಿಷ್ಕ್ ಕಟಾರಿಯಾ ಅಗ್ರಸ್ಥಾನ ಪಡೆದಿದ್ದಾರೆ. ಹೀಗಾಗಿ ಈ ಶ್ರೇಯಸ್ಸಿಗೆ ತನ್ನ ಪ್ರೇಯಸಿಯೇ ಕಾರಣ ಎಂದು ಆಕೆಗೆ ಪ್ರೀತಿಯಿಂದ ಧನ್ಯವಾದ ತಿಳಿಸಿದ್ದಾರೆ.

    ಯುಪಿಎಸ್‍ಸಿ ಟಾಪರ್ ತಮ್ಮ ಶ್ರೇಯಸ್ಸಿನಲ್ಲಿ ತಮ್ಮ ಪ್ರೇಯಸಿಯ ಪಾತ್ರ ಹೆಚ್ಚಾಗಿದೆ ಎನ್ನುವುದನ್ನು ಅವರೇ ಸ್ವತಃ ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ. ಹೌದು ಯುಪಿಎಸ್‍ಸಿ ಅಂತಹ ಉನ್ನತ ಪರೀಕ್ಷೆಯಲ್ಲಿ ತಾನು ಟಾಪರ್ ಆಗಲು ತನ್ನ ತಂದೆ, ತಾಯಿ ಹಾಗೂ ತನ್ನ ಪ್ರೇಯಸಿಯ ಪ್ರೋತ್ಸಾಹವೇ ಕಾರಣವೆಂದು ತಿಳಿಸಿದರು.

    ಯುಪಿಎಸ್‍ಸಿ ಟಾಪರ್ ಓರ್ವ ತನ್ನ ಶ್ರೇಯಸ್ಸಿಗೆ ತನ್ನ ಪ್ರೇಯಸಿಯೇ ಕಾರಣವೆಂದು ತಿಳಿಸಿದ್ದು ಇದೇ ಮೊದಲ ಬಾರಿಯಾಗಿದ್ದು, ಕನಿಷ್ಕ್ ಕಟಾರಿಯಾ ಅವರ ಈ ಮಾತನ್ನು ಕೇಳಿದ ಮಂದಿ ಅಬ್ಬ ಎಂತಾ ಆದರ್ಶ ಪ್ರೇಮಿಗಳು ಎಂದು ಒಂದು ಕ್ಷಣ ಅಚ್ಚರಿಪಟ್ಟಿದಂತೂ ಸತ್ಯ.

    ಯುಪಿಎಸ್‍ಸಿಯಲ್ಲಿ ಮೊದಲ ಸ್ಥಾನವನ್ನು ಕನಿಷ್ಕ್ ಕಟಾರಿಯಾ ಗಳಿಸಿದ್ದು, ಇನ್ನು ಎರಡು ಹಾಗೂ ಮೂರನೇ ಸ್ಥಾನವನ್ನು ಕ್ರಮವಾಗಿ ಅಕ್ಸತ್ ಜೈನ್ ಮತ್ತು ಜುನೈದ್ ಅಹ್ಮದ್ ಪಡೆದಿದ್ದಾರೆ. ಹಾಗೆಯೇ ಐದನೇ ಸ್ಥಾನವನ್ನು ಗಳಿಸಿರುವ ಸೃಷ್ಟಿ ಜಯಂತ್ ದೇಶ್ಮುಖ್ ಮಹಿಳೆಯರಲ್ಲಿಯೇ ಅಗ್ರಸ್ಥಾನ ಪಡೆದಿದ್ದಾರೆ.

    ಈ ಬಾರಿ ಒಟ್ಟು 759 ಅಭ್ಯರ್ಥಿಗಳು (577 ಪುರುಷರು ಮತ್ತು 182 ಮಹಿಳೆಯರು) ಐಎಎಸ್, ಐಪಿಎಸ್ ನೇಮಕಾತಿಗೆ ಶಿಫಾರಸು ಮಾಡಲಾಗಿದೆ. ಕರ್ನಾಟಲ ರಾಜ್ಯದ ಒಟ್ಟು 24 ಜನರು ಐಎಎಸ್, ಐಪಿಎಸ್ ನೇಮಕಾತಿಗೆ ಆಯ್ಕೆಯಾಗಿದ್ದಾರೆ. ರಾಹುಲ್ ಶರಣಪ್ಪ ದೇಶಕ್ಕೆ 17ನೇ ರ್ಯಾಂಕ್ ಗಳಿಸಿದ್ದು, ರಾಜ್ಯದಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

  • ಚಿನ್ನದ ನಾಡು ಕೋಲಾರದ ನಂದಿನಿ UPSCಯಲ್ಲಿ ದೇಶಕ್ಕೇ ಪ್ರಥಮ!

    ಚಿನ್ನದ ನಾಡು ಕೋಲಾರದ ನಂದಿನಿ UPSCಯಲ್ಲಿ ದೇಶಕ್ಕೇ ಪ್ರಥಮ!

    ಬೆಂಗಳೂರು/ಕೋಲಾರ: 2016ನೇ ಸಾಲಿನ ಯುಪಿಎಸ್‍ಸಿ ಪರೀಕ್ಷೆಯಲ್ಲಿ ಕನ್ನಡ ಡಿಂಡಿಮ ಮೊಳಗಿದೆ. ಚಿನ್ನದ ಗಣಿ ನಾಡಿನ ಖ್ಯಾತಿಯ ಕೋಲಾರದ ಹೆಣ್ಣು ಮಗಳು ನಂದಿನಿ ಯುಪಿಎಸ್‍ಸಿ ಪರೀಕ್ಷೆಯಲ್ಲಿ ದೇಶಕ್ಕೇ ಪ್ರಥಮ ಸ್ಥಾನ ಗಳಿಸಿದ್ದಾಳೆ. ಈ ಮೂಲಕ ಯುಪಿಎಸ್‍ಸಿ ಇತಿಹಾಸದಲ್ಲಿ ಎರಡನೇ ಬಾರಿಗೆ ಕನ್ನಡತಿಯೊಬ್ಬರು ಯುಪಿಎಸ್‍ಸಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಗಳಿಸಿದಂತಾಗಿದೆ.

    ಕೋಲಾರ ಜಿಲ್ಲೆ ಕೆಂಬೋಡಿ ಗ್ರಾಮದ ಕೆ.ಆರ್ ನಂದಿನಿ ಟಾಪರ್ ಆಗಿ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಸದ್ಯ ಹರ್ಯಾಣಾದ ಫರೀದಾಬಾದ್‍ನಲ್ಲಿ ಐ.ಆರ್.ಎಸ್ ತರಬೇತಿಯಲ್ಲಿರುವ ಕೆ.ಆರ್. ನಂದಿನಿ, ನಿವೃತ್ತ ಹೈಸ್ಕೂಲ್ ಶಿಕ್ಷಕರಾದ ರಮೇಶ್ ಅವರ ಪುತ್ರಿ.

    ಕೋಲಾರದ ಚಿನ್ಮಯ ಸ್ಕೂಲ್‍ನಲ್ಲಿ ಹೈಸ್ಕೂಲ್ ವಿದ್ಯಾಭ್ಯಾಸ ಮಾಡಿದ ನಂದಿನಿ, ಪಿಯುಸಿಯನ್ನು ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಪೂರೈಸಿದರು. ನಂತ್ರ ಎಂ.ಎಸ್ ರಾಮಯ್ಯ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿವಿಲ್ ಬಿಇ ಪದವಿ ಪಡೆದ್ರು. ನಂತರ ದೆಹಲಿ ಕರ್ನಾಟಕ ಭವನದಲ್ಲಿ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿದ್ರು. ಕಳೆದ ಬಾರಿಯ ಯುಪಿಎಸ್‍ಸಿ ಪರೀಕ್ಷೆಯಲ್ಲಿ 849ನೇ ಸ್ಥಾನ ಪಡೆದು ಭಾರತೀಯ ಕಂದಾಯ ಸೇವೆಗೆ ಆಯ್ಕೆಯಾಗಿದ್ದರು. ಐಆರ್‍ಎಸ್ ಅಧಿಕಾರಿಯಾಗಿದ್ದುಕೊಂಡೇ ಐಎಎಸ್ ಪರೀಕ್ಷೆಗೆ ಸಿದ್ಧತೆ ನಡೆಸಿದ್ದ ಕೆ.ಆರ್. ನಂದಿನಿ ಇದೀಗ ತಮ್ಮ ಕನಸನ್ನು ನನಸು ಮಾಡಿಕೊಂಡಿದ್ದಾರೆ.

    ಇನ್ನು ಶಿವಮೊಗ್ಗದ ಧ್ಯಾನಚಂದ್ರ 47ನೇ ಸ್ಥಾನ ಗಳಿಸಿ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ವಿನೋಬನಗರ ಲಕ್ಷ್ಮೀಪೂರ ಬಡವಾಣೆಯ ಹಾಲೇಶಪ್ಪನವರ ಮಗ ಧ್ಯಾನ್ ಚಂದ್ರ ಸದ್ಯ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಇಂಜಿನಿಯರ್ ಆಗಿ ಸೇವೆ ಸಲ್ಲಿಸ್ತಿದ್ದಾರೆ. ಈ ಬಾರಿಯ ಇನ್ನೂ ವಿಶೇಷ ಅಂದ್ರೆ, ಸಂಪೂರ್ಣ ಅಂಧತ್ವ ಹೊಂದಿರುವ ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಚೌಡನಕುಪ್ಪೆಯ ಕೆಂಪಹೊನ್ನಯ್ಯ 340ನೇ ಸ್ಥಾನ ಗಳಿಸಿ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಸದ್ಯ ಮೈಸೂರಿನ ಒಂಟಿಕೊಪ್ಪಲ್‍ನ ಪಿಯು ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿರುವ ಕೆಂಪಹೊನ್ನಯ್ಯ, ತಮ್ಮ ಮೂರನೇ ಪ್ರಯತ್ನದಲ್ಲಿ ಐಎಎಸ್ ಅಧಿಕಾರಿಯಾಗಿ ಹೊರಹೊಮ್ಮಿದ್ದಾರೆ. ಇನ್ನು ಕರ್ನಾಟಕದ ಐಎಎಸ್ ಬಾಬಾ ಸಂಸ್ಥೆಯಲ್ಲಿ ತರಬೇತಿ ಪಡೆದ 6 ಮಂದಿ ಈ ಸಲ ಶ್ರೇಯಾಂಕದ 100ನೇ ಸ್ಥಾನದೊಳಗಿದ್ದಾರೆ. ಅನ್ಮೋಲ್ ಶೇರ್ ಸಿಂಗ್‍ಬೇಡಿ ದ್ವಿತೀಯ ಸ್ಥಾನ ಹಾಗೂ ಗೋಪಾಲಕೃಷ್ಣ ರೋನಂಕಿ ತೃತೀಯ ಸ್ಥಾನ ಪಡೆದಿದ್ದಾರೆ. 2016ನೇ ಸಾಲಿನಲ್ಲಿ ಒಟ್ಟು 1099 ಮಂದಿ ಕೇಂದ್ರ ಸೇವೆಗೆ ಆಯ್ಕೆಯಾಗಿದ್ದಾರೆ.

    ಯುಪಿಎಸ್‍ಸಿ ಟಾಪರ್ ಆದ ನಂದಿನಿ ಅವರಿಗೆ ಸಿಎಂ ಸಿದ್ದರಾಮಯ್ಯ ಟ್ವಿಟ್ಟರ್ ಮೂಲಕ ಶುಭಾಶಯ ಕೋರಿದ್ದಾರೆ.