Tag: urination

  • ಮಧ್ಯಪ್ರದೇಶದಲ್ಲೂ ಬುಲ್ಡೋಜರ್‌ ಸದ್ದು; ಬುಡಕಟ್ಟು ವ್ಯಕ್ತಿ ಮೇಲೆ ಮೂತ್ರವಿಸರ್ಜನೆ ಮಾಡಿದ್ದ ಆರೋಪಿ ಮನೆ ಧ್ವಂಸ

    ಮಧ್ಯಪ್ರದೇಶದಲ್ಲೂ ಬುಲ್ಡೋಜರ್‌ ಸದ್ದು; ಬುಡಕಟ್ಟು ವ್ಯಕ್ತಿ ಮೇಲೆ ಮೂತ್ರವಿಸರ್ಜನೆ ಮಾಡಿದ್ದ ಆರೋಪಿ ಮನೆ ಧ್ವಂಸ

    ಭೋಪಾಲ್‌: ಸಿಧಿ ಜಿಲ್ಲೆಯಲ್ಲಿ ಬುಡಕಟ್ಟು (Tribal) ಜನಾಂಗದ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿದ್ದ ಆರೋಪಿ ಪ್ರವೇಶ್ ಶುಕ್ಲಾ ಮನೆಯನ್ನ ಬುಲ್ಡೋಜರ್‌ನಿಂದ (Bulldozer) ಧ್ವಂಸಗೊಳಿಸಲಾಗಿದೆ.

    ರಾಜ್ಯ ಸರ್ಕಾರದ ಆದೇಶದ ಮೇರೆಗೆ ಅಧಿಕಾರಿಗಳು ಆರೋಪಿ ಮನೆಯನ್ನ ಧ್ವಂಸಗೊಳಿಸಿದ್ದಾರೆ. ಆದ್ರೆ ಆರೋಪಿ ಕುಟುಂಬಸ್ಥರು ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಹಳೆಯ ವೀಡಿಯೋ ಆಗಿದ್ದು, ಚುನಾವಣೆ ಹತ್ತಿರವಾಗಿರೋದ್ರಿಂದ ಇದನ್ನ ಮುನ್ನೆಲೆಗೆ ತರಲಾಗಿದೆ. ರಾಜಕೀಯ ಕಾರಣಗಳಿಗಾಗಿ ಹಳೆಯ ವೀಡಿಯೋ ಪ್ರಸಾರ ಮಾಡುತ್ತಿದ್ದಾರೆ ಎಂದು ಆರೋಪಿ ಸಹೋದರಿ ದೂರಿದ್ದಾರೆ. ಇದನ್ನೂ ಓದಿ: ಬುಡಕಟ್ಟು ವ್ಯಕ್ತಿ ಮೇಲೆ ಮೂತ್ರವಿಸರ್ಜಿಸಿ ವಿಕೃತಿ- ದುಷ್ಕರ್ಮಿ ಅರೆಸ್ಟ್

    ಆರೋಪಿ ಪ್ರವೇಶ್‌ ಶುಕ್ಲಾ ತಂದೆ, ನನ್ನ ಮಗ ಈ ಕೃತ್ಯ ಎಸಗಲು ಸಾಧ್ಯವೇ ಇಲ್ಲ. ಆತನನ್ನ ಸಿಕ್ಕಿಹಾಕಿಸುವ ಉದ್ದೇಶದಿಂದ ಹೀಗೆ ಮಾಡಿದ್ದಾರೆ. ನಮಗೆ ತುಂಬಾ ನೋವಾಗಿದೆ ಎಂದು ಅಳಲುತೋಡಿಕೊಂಡಿದ್ದಾರೆ. ಸದ್ಯ ರಾಷ್ಟ್ರೀಯ ಭದ್ರತಾ ಕಾಯ್ದೆ (NSA) ಅಡಿಯಲ್ಲಿ ಬಂಧಿತನಾಗಿರುವ ಪ್ರವೇಶ್‌ ಶುಕ್ಲಾನನ್ನ ರೇವಾ ಸೆಂಟ್ರಲ್‌ ಜೈಲಿನಲ್ಲಿ ಇರಿಸಲಾಗಿದೆ. ಇದನ್ನೂ ಓದಿ: ವಿಷಾನಿಲ ಸೋರಿಕೆ – 16 ಜನರ ದುರ್ಮರಣ

    ಏನಿದು ಘಟನೆ?
    ಬುಡಕಟ್ಟು ಜನಾಂಗದ ವ್ಯಕ್ತಿಯ ಮೇಲೆ ದುಷ್ಕರ್ಮಿಯೊಬ್ಬ ಮೂತ್ರ ವಿಸರ್ಜಿಸಿ ವಿಕೃತಿ ಮೆರೆದಿದ್ದ ಘಟನೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ನಡೆದಿತ್ತು. ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದಂತೆ ಮಧ್ಯಪ್ರದೇಶದ ರಾಜಕೀಯದಲ್ಲಿ ಗದ್ದಲ ಉಂಟಾಗಿತ್ತು. ಆತ ಬಿಜೆಪಿಯ ಸಕ್ರಿಯ ಕಾರ್ಯಕರ್ತ ಎಂದು ಕಾಂಗ್ರೆಸ್ ಆರೋಪಿಸಿತ್ತು.

    ವೀಡಿಯೋ ವೈರಲ್ ಆಗುತ್ತಿದ್ದಂತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಆತನ ವಿರುದ್ಧ ಕಟ್ಟುನಿಟ್ಟಿನ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಆದೇಶಿಸಿದ್ದರು. ಮಂಗಳವಾರ ತಡರಾತ್ರಿ ಆರೋಪಿ ಪ್ರವೇಶ್‌ ಶುಕ್ಲಾನನ್ನ ಬಂಧಿಸಲಾಗಿತ್ತು.

    ಆತನ ವಿರುದ್ಧ ಬಹಾರಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ಗಳು 294, 504, ಸೆಕ್ಷನ್ 3(1) (R)(s) SC/ST ಕಾಯ್ದೆ ಮತ್ತು ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಯಿತು. ತನಿಖೆಯ ಭಾಗವಾಗಿ ಆರೋಪಿಯ ಪತ್ನಿ ಹಾಗೂ ಪೋಷಕರನ್ನು ಸಹ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬುಡಕಟ್ಟು ವ್ಯಕ್ತಿ ಮೇಲೆ ಮೂತ್ರವಿಸರ್ಜಿಸಿ ವಿಕೃತಿ- ದುಷ್ಕರ್ಮಿ ಅರೆಸ್ಟ್

    ಬುಡಕಟ್ಟು ವ್ಯಕ್ತಿ ಮೇಲೆ ಮೂತ್ರವಿಸರ್ಜಿಸಿ ವಿಕೃತಿ- ದುಷ್ಕರ್ಮಿ ಅರೆಸ್ಟ್

    ಭೋಪಾಲ್: ಬುಡಕಟ್ಟು ಜನಾಂಗದ (Tribal) ವ್ಯಕ್ತಿಯ ಮೇಲೆ ದುಷ್ಕರ್ಮಿಯೊಬ್ಬ ಮೂತ್ರ ವಿಸರ್ಜಿಸಿ (Urination) ವಿಕೃತಿ ಮೆರೆದಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಆತನನ್ನು ಮಂಗಳವಾರ ತಡರಾತ್ರಿ ಬಂಧಿಸಲಾಗಿದೆ.

    ಮಧ್ಯಪ್ರದೇಶದಲ್ಲಿ (Madhya Pradesh) ನಡೆದಿರುವ ಘಟನೆಗೆ ಸಂಬಂಧಿಸಿದಂತೆ ವೀಡಿಯೋವೊಂದು ವೈರಲ್ ಆಗಿದೆ. ಅದರಲ್ಲಿ ನೆಲೆದ ಮೇಲೆ ಕುಳಿತಿರುವ ವ್ಯಕ್ತಿಯೊಬ್ಬರ ಮೇಲೆ ಆರೋಪಿ ಸಿಗರೇಟ್ ಸೇದುತ್ತಾ ಅಮಲೇರಿದ ಸ್ಥಿತಿಯಲ್ಲಿ ಮೂತ್ರವಿಸರ್ಜಿಸಿರುವುದು ಕಂಡುಬಂದಿದೆ. ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದಂತೆ ಮಧ್ಯಪ್ರದೇಶದ ರಾಜಕೀಯದಲ್ಲಿ ಗದ್ದಲ ಉಂಟಾಗಿದೆ.

    ಆರೋಪಿ ವ್ಯಕ್ತಿಯನ್ನು ಪ್ರವೇಶ್ ಶುಕ್ಲಾ ಎಂದು ಗುರುತಿಸಲಾಗಿದ್ದು, ಆತ ಬಿಜೆಪಿಯ ಸಕ್ರಿಯ ಕಾರ್ಯಕರ್ತ ಎಂದು ಕಾಂಗ್ರೆಸ್ ಆರೋಪಿಸಿದೆ. ಮಾತ್ರವಲ್ಲದೇ ರೇವಾದ ಬಿಜೆಪಿ ಶಾಸಕ ರಾಜೇಂದ್ರ ಶುಕ್ಲಾ ಅವರೊಂದಿಗಿನ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿವೆ. ಹಲವು ಕಾಂಗ್ರೆಸ್ ನಾಯಕರು ವೈರಲ್ ವೀಡಿಯೋವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದು, ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

    ಆದರೂ ಬಿಜೆಪಿ ಆರೋಪಿ ವ್ಯಕ್ತಿಯೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದೆ. ಆತ ನಮ್ಮ ಕ್ಷೇತ್ರದವನು ಎಂಬುದು ನಮಗೆ ತಿಳಿದಿದೆ. ಆದರೆ ಆತ ನಮ್ಮ ಪ್ರತಿನಿಧಿ ಅಥವಾ ಬಿಜೆಪಿ ಕಾರ್ಯಕರ್ತನಲ್ಲ ಎಂದು ಕೇದಾರ್‌ನಾಥ್ ಶುಕ್ಲಾ ಹೇಳಿದ್ದಾರೆ. ಇದನ್ನೂ ಓದಿ: ಮೂಲಭೂತ ಸೌಕರ್ಯವಿಲ್ಲದೇ ಕುಗ್ಗಿದ ಜನ- ಪಯಸ್ವಿನಿ ನದಿಗೆ ಬಿದಿರಿನ ಸೇತುವೆ ಸಂಕಷ್ಟ

    ವೀಡಿಯೋ ವೈರಲ್ ಆಗುತ್ತಿದ್ದಂತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಆತನ ವಿರುದ್ಧ ಕಟ್ಟುನಿಟ್ಟಿನ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ಆದೇಶಿಸಿದ್ದಾರೆ.

    ಪೊಲೀಸರು ತಕ್ಷಣವೇ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಆರೋಪಿ ಬಂಧನದಿಂದ ತಪ್ಪಿಸಿಕೊಳ್ಳಲು ಒಂದು ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ಓಡಿಹೋಗುತ್ತಿದ್ದ. ನಂತರ ಆತನನ್ನು ಮಧ್ಯರಾತ್ರಿ 2 ಗಂಟೆಗೆ ಹಿಡಿದು ವಿಚಾರಣೆಗೆ ಒಳಪಡಿಸಲಾಗಿದೆ. ಆತನ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ, ಎಸ್‌ಸಿ/ಎಸ್‌ಟಿ ಕಾಯ್ದೆ ಹಾಗೂ ಭಾರತೀಯ ದಂಡಸಂಹಿತೆಯ ಇತರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನಿಖೆಯ ಭಾಗವಾಗಿ ಆರೋಪಿಯ ಪತ್ನಿ ಹಾಗೂ ಪೋಷಕರನ್ನು ಸಹ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಕೆ.ಜಿ ಟೊಮೆಟೋಗೆ 129 ರೂ., ಯುಪಿಯಲ್ಲಿ 150 ರೂ.!

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭಾರತೀಯ ರೈಲ್ವೆಯಲ್ಲೂ ‘ಪೀ ಗೇಟ್’ – ಕುಡಿದ ಮತ್ತಿನಲ್ಲಿ ಮಹಿಳೆ ತಲೆ ಮೇಲೆ ಮೂತ್ರವಿಸರ್ಜನೆ

    ಭಾರತೀಯ ರೈಲ್ವೆಯಲ್ಲೂ ‘ಪೀ ಗೇಟ್’ – ಕುಡಿದ ಮತ್ತಿನಲ್ಲಿ ಮಹಿಳೆ ತಲೆ ಮೇಲೆ ಮೂತ್ರವಿಸರ್ಜನೆ

    ಕೋಲ್ಕತ್ತಾ: ಕೆಲ ತಿಂಗಳ ಹಿಂದೆ ಏರ್ ಇಂಡಿಯಾ ವಿಮಾನದಲ್ಲಿ (Air India Flight) ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ಮೂತ್ರವಿಸರ್ಜನೆ (Urination) ಮಾಡಿ ಭಾರೀ ವಿವಾದ ಉಂಟಾಗಿತ್ತು. ಇದೀಗ ಭಾರತೀಯ ರೈಲ್ವೆಯಲ್ಲೂ (Indian Railways) ಸಿಬ್ಬಂದಿ ಮಹಿಳೆಯೊಬ್ಬರ (Woman) ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಘಟನೆ ವರದಿಯಾಗಿದೆ.

    ಅಮೃತಸರದಿಂದ ಕೋಲ್ಕತ್ತಾ ತೆರಳುತ್ತಿದ್ದ ಅಕಲ್ ತಖ್ತ್ ಎಕ್ಸ್ಪ್ರೆಸ್ ರೈಲಿನಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ರೈಲಿನ ಟಿಕೆಟ್ ಪರೀಕ್ಷಕ (TTE) ಕುಡಿದ ಮತ್ತಿನಲ್ಲಿ ಮಹಿಳೆಯೊಬ್ಬರ ತಲೆ ಮೇಲೆ ಮೂತ್ರವಿಸರ್ಜನೆ ಮಾಡಿದ್ದಾನೆ.

    train

    ವರದಿಗಳ ಪ್ರಕಾರ, ಮಹಿಳೆ ತನ್ನ ಪತಿಯೊಂದಿಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದು, ಮಲಗಿದ್ದ ವೇಳೆ ರೈಲಿನಲ್ಲಿ ನಿಯೋಜನೆಗೊಂಡಿದ್ದ ಟಿಕೆಟ್ ಪರೀಕ್ಷಕ ಮುನ್ನಾ ಕುಮಾರ್ ಮಹಿಳೆ ಮೇಲೆ ಮೂತ್ರವಿಸರ್ಜನೆ ಮಾಡಿದ್ದಾನೆ. ಈ ವೇಳೆ ಮಹಿಳೆ ಕಿರುಚಿಕೊಂಡಿದ್ದು, ಕುಮಾರ್ ಅಲ್ಲಿಂದ ಓಡಿಹೋಗಲು ಪ್ರಯತ್ನಿಸಿದ್ದಾನೆ. ಆದರೆ ಮಹಿಳೆಯ ಪತಿ ಟಿಟಿಇ ಯನ್ನು ಹಿಡಿದು, ಥಳಿಸಿ, ಪೊಲೀಸರಿಗೆ ಒಪ್ಪಿಸಿದ್ದಾರೆ. ಇದನ್ನೂ ಓದಿ: ಭೋಪಾಲ್ ಅನಿಲ ದುರಂತ – ಸುಪ್ರೀಂ ಕೋರ್ಟ್‍ನಲ್ಲಿ ಕೇಂದ್ರಕ್ಕೆ ಭಾರೀ ಹಿನ್ನಡೆ

    ಮುನ್ನಾ ಕುಮಾರ್‌ನನ್ನು ಪೊಲೀಸರು ಬಂಧಿಸಿದ್ದು, ಈ ವೇಳೆ ಆತ ಮದ್ಯಪಾನ ಮಾಡಿ ನಶೆಯಲ್ಲಿ ಮೂತ್ರವಿಸರ್ಜನೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

    ಕೆಲ ತಿಂಗಳ ಹಿಂದೆ ಏರ್ ಇಂಡಿಯಾ ವಿಮಾನದಲ್ಲಿ ಇದೇ ರೀತಿಯ ಘಟನೆ ನಡೆದಿತ್ತು. ಕುಡಿದ ಅಮಲಿನಲ್ಲಿ ವ್ಯಕ್ತಿಯೊಬ್ಬ ತನ್ನ ಪಕ್ಕದ ಸೀಟ್‌ನಲ್ಲಿ ಕುಳಿತಿದ್ದ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದ. ಆರೋಪಿ ಶಂಕರ್ ಮಿಶ್ರಾ ಭಾರತ ಮೂಲದವನಾಗಿದ್ದು, ಅಮೆರಿಕದಲ್ಲಿ ಉದ್ಯೋಗಿಯಾಗಿದ್ದ. ಘಟನೆ ಬಗ್ಗೆ ದೂರು ದಾಖಲಾದ ಬಳಿಕ ಮಿಶ್ರಾನನ್ನು ಬಂಧಿಸಿ, ಏರ್ ಇಂಡಿಯಾ ವಿಮಾನದಲ್ಲಿ ಹಾರಾಟ ಮಾಡದಂತೆ 4 ತಿಂಗಳ ನಿಷೇಧವನ್ನು ವಿಧಿಸಲಾಯಿತು. ಇದನ್ನೂ ಓದಿ: ಡಬಲ್ ಡೆಕ್ಕರ್ ಬಸ್ಸಿಗೆ ಟ್ರ್ಯಾಕ್ಟರ್ ಡಿಕ್ಕಿ- ಓರ್ವ ಸಾವು, ಹಲವರಿಗೆ ಗಾಯ

  • ಕಂಠಪೂರ್ತಿ ಕುಡಿದು ಬಸ್‌ನಲ್ಲಿ ಯುವತಿಯ ಸೀಟ್ ಮೇಲೆ ಮೂತ್ರವಿಸರ್ಜನೆ ಮಾಡಿದ ಭೂಪ

    ಕಂಠಪೂರ್ತಿ ಕುಡಿದು ಬಸ್‌ನಲ್ಲಿ ಯುವತಿಯ ಸೀಟ್ ಮೇಲೆ ಮೂತ್ರವಿಸರ್ಜನೆ ಮಾಡಿದ ಭೂಪ

    ಹುಬ್ಬಳ್ಳಿ: ಕಂಠಪೂರ್ತಿ ಮದ್ಯಪಾನ (Alcohol) ಮಾಡಿದ್ದ ವ್ಯಕ್ತಿಯೊಬ್ಬ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ (KSRTC Bus) ಯುವತಿಯೊಬ್ಬಳ ಸೀಟ್ ಮೇಲೆ ಮೂತ್ರವಿಸರ್ಜನೆ (Urination) ಮಾಡಿರುವ ಘಟನೆ ಹುಬ್ಬಳ್ಳಿಯಲ್ಲಿ (Hubballi) ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

    ವಿಜಯಪುರದಿಂದ ಮಂಗಳೂರಿನ ಕಡೆ ಹೊರಟಿದ್ದ ಬಸ್‌ನಲ್ಲಿ 32 ವರ್ಷದ ಕುಡುಕ ಪ್ರಯಾಣಿಕನೊಬ್ಬ ಅನಾಗರಿಕ ಪ್ರದರ್ಶನ ತೋರಿದ್ದಾನೆ. ಕೆಎಸ್‌ಆರ್‌ಟಿಸಿಯ ಹವಾನಿಯಂತ್ರಿತವಲ್ಲದ ಸ್ಲೀಪರ್ ಬಸ್ ಅನ್ನು ಪ್ರಯಾಣದ ವೇಳೆ ನಡುವೆ ಹುಬ್ಬಳ್ಳಿ ಬಳಿಯ ಕಿರೆಸೂರು ಡಾಬಾ ಬಳಿ ಊಟಕ್ಕೆಂದು ನಿಲ್ಲಿಸಲಾಗಿತ್ತು. ಎಲ್ಲಾ ಪ್ರಯಾಣಿಕರು ಬಸ್‌ನಿಂದ ಇಳಿದು ಊಟಕ್ಕೆ ಹೋಗಿದ್ದರು. ಆದರೆ ಅದೇ ಬಸ್‌ನಲ್ಲಿದ್ದ ಕುಡುಕ ಪ್ರಯಾಣಿಕ ಬಸ್‌ನಿಂದ ಇಳಿಯಲಾರದೇ 3ನೇ ಸೀಟ್ ಮೇಲೆ ಕುಳಿತು ಮೂತ್ರ ವಿಸರ್ಜನೆ ಮಾಡಿದ್ದಾನೆ. ಇದನ್ನೂ ಓದಿ: ಕೊರೊನಾಕ್ಕೆ ಹೆದರಿ 3 ವರ್ಷದಿಂದ ಮನೆಯೊಳಗೆ ಅಪ್ರಾಪ್ತ ಮಗನೊಂದಿಗೆ ತಾನು ಬಂಧಿಯಾದ ತಾಯಿ

    ಈ ಸೀಟ್‌ನಲ್ಲಿ 20 ವರ್ಷದ ಯುವತಿಯೊಬ್ಬಳು ಪ್ರಯಾಣ ಮಾಡುತ್ತಿದ್ದಳು. ಕುಡುಕ ಮೂತ್ರ ವಿಸರ್ಜನೆ ಮಾಡಿದ್ದ ವೇಳೆ ಆಕೆ ಊಟ ಮುಗಿಸಿಕೊಂಡು ವಾಪಾಸಾಗುತ್ತಿದ್ದಳು. ಆಗ ಕುಡುಕನ ವರ್ತನೆ ಕಂಡು ಯುವತಿ ಕೆಂಡಾಮಂಡಲವಾಗಿದ್ದಾಳೆ. ವಿಷಯವನ್ನು ಚಾಲಕ ಮತ್ತು ನಿರ್ವಾಹಕರಿಗೆ ತಿಳಿಸಿದ್ದಾಳೆ. ಬಳಿಕ ಕುಡುಕ ಪ್ರಯಾಣಿಕನಿಗೆ ಬಸ್ ಸಿಬ್ಬಂದಿ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದು, ಯುವತಿಗೆ ಸೀಟ್ ಅನ್ನು ಬದಲಿಸಿ ಕೊಟ್ಟಿದ್ದಾರೆ.

    ಮಾತ್ರ ವಿಸರ್ಜನೆ ಮಾಡಿದ ವ್ಯಕ್ತಿ ನಿಲ್ಲಲು ಸಾಧ್ಯವಾಗದಷ್ಟು ಮದ್ಯಪಾನ ಮಾಡಿದ್ದು, ಆತನ ಮೈ ಮೇಲೆ ಪ್ರಜ್ಞೆ ಇಲ್ಲದ ಸ್ಥಿತಿಯಲ್ಲಿದ್ದ ಎನ್ನಲಾಗಿದೆ. ಈ ಬಗ್ಗೆ ಯುವತಿ ದೂರು ನೀಡಲು ಹಿಂದೇಟು ಹಾಕಿದ್ದಾಳೆ. ಬಸ್ ಚಾಲಕ ಸಂತೋಷ್ ಹಾಗೂ ನಿರ್ವಾಹಕ ಉಮೇಶ್ ಈ ಬಗ್ಗೆ ವಿಭಾಗೀಯ ಮುಖ್ಯಸ್ಥರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ʻಮಾರ್ಕ್ ಆ್ಯಂಟನಿʼ ಶೂಟಿಂಗ್‌ ವೇಳೆ ಅವಘಢ: ಅಪಘಾತದಿಂದ ಪಾರಾದ ನಟ ವಿಶಾಲ್‌

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕುಡಿದ ನಶೆಯಲ್ಲಿ ವಿಮಾನ ನಿಲ್ದಾಣದಲ್ಲೇ ವ್ಯಕ್ತಿ ಬಹಿರಂಗ ಮೂತ್ರ ವಿಸರ್ಜನೆ

    ಕುಡಿದ ನಶೆಯಲ್ಲಿ ವಿಮಾನ ನಿಲ್ದಾಣದಲ್ಲೇ ವ್ಯಕ್ತಿ ಬಹಿರಂಗ ಮೂತ್ರ ವಿಸರ್ಜನೆ

    ನವದೆಹಲಿ: ಕೆಲ ದಿನಗಳ ಹಿಂದೆ ಏರ್ ಇಂಡಿಯಾ ವಿಮಾನದಲ್ಲಿ (Air India Flight) ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ಮೂತ್ರವಿಸರ್ಜನೆ (Peeing) ಮಾಡಿರುವ ಘಟನೆ ಬೆಳಕಿಗೆ ಬಂದಿರುವ ಬಳಿಕ ಇಂತಹುದೇ ಇನ್ನೊಂದು ಘಟನೆ ತಡವಾಗಿ ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬ ದೆಹಲಿಯ ವಿಮಾನ ನಿಲ್ದಾಣದಲ್ಲಿ (Delhi Airport) ಕುಡಿದ ನಶೆಯಲ್ಲಿ ಬಹಿರಂಗವಾಗಿ ಮೂತ್ರವಿಸರ್ಜನೆ ಮಾಡಿದ್ದಾನೆ.

    ಜನವರಿ ೮ರಂದು ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 3ರಲ್ಲಿ ಸಾರ್ವಜನಿಕವಾಗಿ ವ್ಯಕ್ತಿಯೊಬ್ಬ ಮೂತ್ರವಿಸರ್ಜನೆ ಮಾಡಿರುವುದಾಗಿ ವರದಿಯಾಗಿದೆ. ನಿಲ್ದಾಣದ ನಿರ್ಗಮನ ಗೇಟ್‌ನಲ್ಲಿ ಮೂತ್ರವಿಸರ್ಜನೆ ಮಾಡಿದ್ದಕ್ಕೆ ಪೊಲೀಸರು ಬಿಹಾರ ಮೂಲದ ಜೌಹರ್ ಅಲಿ ಖಾನ್‌ನನ್ನು ಬಂಧಿಸಿದ್ದರು. ಬಳಿಕ ಆತ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾನೆ.

    ವ್ಯಕ್ತಿ ದೆಹಲಿಯಿಂದ ಸೌದಿ ಅರೇಬಿಯಾದ ದಮಾಮ್‌ಗೆ ವಿಮಾನದಲ್ಲಿ ಪ್ರಯಾಣಿಸಬೇಕಿತ್ತು. ಆತ ವಿಮಾನ ನಿಲ್ದಾಣಕ್ಕೆ ಮದ್ಯಪಾನ ಮಾಡಿ ಬಂದಿದ್ದು, ನಶೆಯಲ್ಲಿ ಈ ರೀತಿಯ ಕೃತ್ಯ ಮಾಡಿದ್ದಾನೆ. ಇದಲ್ಲದೇ ಆತ ಸುತ್ತಮುತ್ತಲಿನ ಇತರ ಪ್ರಯಾಣಿಕರಿಗೂ ನಿಂದಿಸಿ ತೊಂದರೆ ಕೊಟ್ಟಿದ್ದಾನೆ ಎಂದು ವರದಿಯಾಗಿದೆ. ಇದನ್ನೂ ಓದಿ: ಜೋಶಿಮಠ ಮುಳುಗಡೆ – ಪ್ರತಿ ಸಂತ್ರಸ್ತ ಕುಟುಂಬಕ್ಕೆ 1.5 ಲಕ್ಷ ಪರಿಹಾರ

    ಘಟನೆ ಬಗ್ಗೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ನೀಡಿದ ದೂರಿನ ಆಧಾರದ ಮೇಲೆ ವಿಮಾನ ನಿಲ್ದಾಣ ಪೊಲೀಸ್ ಠಾಣೆಯಲ್ಲಿ ಪೊಲೀಸರು ಭಾರತೀಯ ದಂಡಸಂಹಿತೆ (IPC) ಸೆಕ್ಷನ್ 294 ಹಾಗೂ 510ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವ್ಯಕ್ತಿಯನ್ನು ಬಂಧನ ಮಾಡಿದ ಬಳಿಕ ಆತನನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ. ಇದನ್ನೂ ಓದಿ: ಜಾನ್ಸನ್‌ & ಜಾನ್ಸನ್‌ ಬೇಬಿ ಪೌಡರ್‌ ಉತ್ಪಾದನೆ, ಮಾರಾಟಕ್ಕೆ ಬಾಂಬೆ ಹೈಕೋರ್ಟ್‌ ಅನುಮತಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಬಿತ್ತು ಭಾರೀ ದಂಡ

    ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಬಿತ್ತು ಭಾರೀ ದಂಡ

    ಮೈಸೂರು: ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿರ್ಸಜನೆ ಮಾಡಿ ನಿಯಮ ಉಲ್ಲಂಘಿಸಿದ ಆಟೋ ಚಾಲಕನೋರ್ವನಿಗೆ ಮೈಸೂರು ನಗರ ಪಾಲಿಕೆ 1 ಸಾವಿರ ರೂ. ದಂಡ ವಿಧಿಸಿದೆ.

    ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಬಾರದು ಎಂಬ ನಿಯಮವಿದೆ. ಆದರೆ ಬಹುತೇಕರು ಈ ನಿಯಮ ಗೊತ್ತಿದ್ದರೂ ಉಲ್ಲಂಘಿಸುತ್ತಾರೆ. ನಿಯಮ ಉಲ್ಲಂಘಿಸಿದರೆ ಯಾರು ದಂಡವೇನೂ ಹಾಕಲ್ಲ ಎಂಬ ಧೈರ್ಯದಲ್ಲಿ ಹೀಗೆ ಮಾಡುತ್ತಾರೆ. ಆದರೆ ಮೈಸೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಹೀಗೆ ಈ ನಿಯಮ ಉಲ್ಲಂಘಿಸಿದ ವ್ಯಕ್ತಿಯೊಬ್ಬ ಒಂದು ಸಾವಿರ ದಂಡ ಕಟ್ಟಿದ್ದಾನೆ. ಅಲ್ಲದೆ ನಿಯಮ ಹೇಳಲು ಬಂದ ಅಧಿಕಾರಿ ಜೊತೆ ಅನುಚಿತವಾಗಿ ವರ್ತಿಸಿದ ಕಾರಣ ಕೆಲ ಕಾಲ ಪೊಲೀಸರ ಅತಿಥಿ ಕೂಡ ಆಗಿದ್ದಾನೆ.

    ಆಟೋ ಚಾಲಕ ಚೇತನ್ ಮೈಸೂರಿನ ತಿಲಕ್ ನಗರದ ವಲಯ ಕಚೇರಿ 6ರ ಬಳಿ ಮೂತ್ರ ವಿಸರ್ಜನೆ ಮಾಡಿದ್ದನು. ಆಗ ಅಧಿಕಾರಿಗಳು ಇಲ್ಲಿ ಮೂತ್ರ ವಿಸರ್ಜನೆ ಮಾಡಬಾರದು ಎಂದು ಬುದ್ದಿ ಹೇಳಿದ್ದರು.

    ಇದಕ್ಕೆ ಕ್ಯಾರೆ ಎನ್ನದ ಚೇತನ್ ಮಹಿಳಾ ಆರೋಗ್ಯ ನಿರೀಕ್ಷಕಿ ಜೊತೆ ಅಸಭ್ಯವಾಗಿ ವರ್ತಿಸಿದ್ದಾನೆ. ಹೀಗಾಗಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಒಂದು ಸಾವಿರ ದಂಡ ವಿಧಿಸಿ, ಅಧಿಕಾರಿ ಜೊತೆ ಅನುಚಿತವಾಗಿ ವರ್ತಿಸಿದ್ದಾಕ್ಕಾಗಿ ಮಂಡಿ ಪೊಲೀಸ್ ಠಾಣೆಗೆ ಆತನನ್ನು ಒಪ್ಪಿಸಿಸಲಾಗಿದ್ದು, ಪೊಲೀಸರು ಚೇತನ್‍ಗೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.

  • ಸಾರ್ವಜನಿಕ ಸ್ಥಳದಲ್ಲಿ ಮೂತ್ರ- ಬಸ್ಕಿ ಹೊಡೆಯುವ ಶಿಕ್ಷೆ ನೀಡಿದ ಅಧಿಕಾರಿ

    ಸಾರ್ವಜನಿಕ ಸ್ಥಳದಲ್ಲಿ ಮೂತ್ರ- ಬಸ್ಕಿ ಹೊಡೆಯುವ ಶಿಕ್ಷೆ ನೀಡಿದ ಅಧಿಕಾರಿ

    ಭೋಪಾಲ್: ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಇಬ್ಬರು ವ್ಯಕ್ತಿಗಳಿಗೆ ಮಧ್ಯಪ್ರದೇಶದ ಇಂದೋರ್ ಮಹಾನಗರ ಪಾಲಿಕೆಯ ಅಧಿಕಾರಿಯೊಬ್ಬರು ಬಸ್ಕಿ ಹೊಡೆಸಿದ್ದಾರೆ.

    ರಾತ್ರಿ ವೇಳೆ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಆಟೋ ಚಾಲಕ ಹಾಗೂ ಪ್ರಯಾಣಿಕನಿಗೆ ಅಧಿಕಾರಿ ಬಸ್ಕಿ ಹೊಡೆಸಿದ್ದಾರೆ. ಸಿಕ್ಕಿಬಿದ್ದ ತಕ್ಷಣ ಅಧಿಕಾರಿ ದಂಡ ಪಾವತಿಸುವಂತೆ ಒತ್ತಾಯಿಸಿದ್ದಾರೆ. ಆದರೆ ಇಬ್ಬರೂ ತಮ್ಮ ಬಳಿ ಹಣವಿಲ್ಲ ಎಂದು ಹೇಳಿದ್ದಾರೆ. ಆಗ ಅಧಿಕಾರಿ ಹಾಗೂ ಇಬ್ಬರ ಮಧ್ಯೆ ವಾಗ್ವಾದ ನಡೆದಿದೆ.

    ಅಧಿಕಾರಿಯ ಮುಂದೆ ಇಬ್ಬರೂ ಬಸ್ಕಿ ಹೊಡೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆಟೋದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯನ್ನು ರವಿ ಎಂದು ಗುರುತಿಸಲಾಗಿದೆ. ಆಟೋ ರೈಲ್ವೇ ನಿಲ್ದಾಣದಿಂದ ಬರುತ್ತಿತ್ತು.

    ಐಎಂಸಿ ಮುಖ್ಯ ನೈರ್ಮಲ್ಯ ಅಧಿಕಾರಿ(ವಲಯ-1) ಶೈಲೇಂದ್ರ ಪಾಲ್ ಅವರ ಪ್ರಕಾರ, ಆಟೋ ಪ್ರಯಾಣಿಕ ರವಿ ಹಾಗೂ ಚಾಲಕ ಇಬ್ಬರೂ ಮಾರಿಮಾತಾ ಪ್ರದೇಶದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದರು. ಇದನ್ನು ಕಂಡು ಅಧಿಕಾರಿ ಇಬ್ಬರನ್ನೂ ಪ್ರಶ್ನಿಸಿದ್ದಾರೆ.

    ಅಧಿಕಾರಿ ಇಬ್ಬರಿಗೆ ತಲಾ 250 ರೂ. ದಂಡ ಪಾವತಿಸುವಂತೆ ಕೇಳಿದ್ದಾರೆ. ಆಟೋ ಚಾಲಕ ತನ್ನ ಬಳಿ ಹಣವಿಲ್ಲ ಎಂದು ಹೇಳಿದ್ದಾನೆ. ಪ್ರಯಾಣಿಕ ರವಿ ತನ್ನ ಬಳಿ ಕೇವಲ 100 ರೂ. ಇರುವುದಾಗಿ ಹೇಳಿದ್ದಾನೆ. ಆಗ ಅಧಿಕಾರಿ 100 ರೂ. ಪಡೆದು, ಇಬ್ಬರೂ ಸಹ ಬಸ್ಕಿ ಹೊಡೆಯುವಂತೆ ಸೂಚಿಸಿದ್ದಾರೆ. ಈ ರೀತಿ ಶಿಕ್ಷೆ ನೀಡಿದರೆ ಇಬ್ಬರೂ ಇನ್ನೊಮ್ಮೆ ಈ ರೀತಿ ಮಾಡುವುದಿಲ್ಲ ಎಂದು ಶೈಲೇಂದ್ರ ಪಾಲ್ ಹೇಳಿದ್ದಾರೆ.

  • ಅಂಬುಲೆನ್ಸ್ ನಲ್ಲಿ ಮೂತ್ರವಿಸರ್ಜನೆ ಮಾಡಿದ್ದಕ್ಕೆ ಗಾಯಾಳುವನ್ನ ತಲೆಕೆಳಗಾಗಿ ಬಿಟ್ಟ ಚಾಲಕ, ವ್ಯಕ್ತಿ ಸಾವು

    ಅಂಬುಲೆನ್ಸ್ ನಲ್ಲಿ ಮೂತ್ರವಿಸರ್ಜನೆ ಮಾಡಿದ್ದಕ್ಕೆ ಗಾಯಾಳುವನ್ನ ತಲೆಕೆಳಗಾಗಿ ಬಿಟ್ಟ ಚಾಲಕ, ವ್ಯಕ್ತಿ ಸಾವು

    ತಿರುವನಂತಪುರಂ: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಆಂಬುಲೆನ್ಸ್ ನಲ್ಲಿ ಮೂತ್ರವಿಸರ್ಜನೆ ಮಾಡಿದರೆಂದು ಅವರನ್ನು ಚಾಲಕ ಸ್ಟ್ರೆಚ್ಚರ್ ಸಮೇತ ತಲೆಕೆಳಗಾಗಿ ಬಿಟ್ಟ ಅಮಾನವೀಯ ಘಟನೆ ಕೇರಳದ ತ್ರಿಶೂರ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ನಡೆದಿದೆ.

    ಗಾಯಾಳು ಮಲಗಿದ್ದ ಸ್ಟ್ರೆಚ್ಚರನ್ನು ಆಂಬುಲೆನ್ಸ್ ಚಾಲಕ ಆಸ್ಪತ್ರೆಯ ಹೊರಗಡೆ ತಲೆಕೆಳಗಾಗಿ ಬಿಟ್ಟಿದ್ದು, ಬಳಿಕ ಅವರು ಸಾವನ್ನಪ್ಪಿದ್ದಾರೆ. ತಲೆಕೆಳಗಾದ ಸ್ಟೆಚ್ಚರ್‍ನ ಒಂದು ಭಾಗ ನೆಲದ ಮೇಲಿದ್ದು ಮತ್ತೊಂದು ತುದಿ ಆಂಬುಲೆನ್ಸ್ ನಲ್ಲಿತ್ತು. ವ್ಯಕ್ತಿಯ ತಲೆ ನೆಲಕ್ಕೆ ಬಿದ್ದ ಸ್ಥಿತಿಯಲ್ಲಿದ್ದು, ಇದನ್ನ ಪ್ರತ್ಯಕ್ಷದರ್ಶಿಯೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವ್ಯಕ್ತಿಯ ಜೀವಕ್ಕೆ ಕುತ್ತು ತಂದ ಆಂಬುಲೆನ್ಸ್ ಚಾಲಕನ ಬೇಜವಾಬ್ದಾರಿ ವರ್ತನೆಗೆ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಸಾವನ್ನಪ್ಪಿದ ವ್ಯಕ್ತಿ ಮಾರ್ಚ್ 20ರಂದು ರಸ್ತೆ ಅಪಘಾತಕ್ಕೀಡಾಗಿ ತೀವ್ರವಾಗಿ ಗಾಯಗೊಂಡಿದ್ದರು. ಅವರ ತಲೆಗೂ ಕೂಡ ಪೆಟ್ಟು ಬಿದ್ದಿತ್ತು. ಮೊದಲಿಗೆ ಅವರನ್ನು ಪಲಕ್ಕಾಡ್‍ನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಂತರ ಅದೇ ದಿನ ಹೆಚ್ಚಿನ ಚಿಕಿತ್ಸೆಗೆಂದು ತ್ರಿಶೂರ್‍ಗೆ ರವಾನಿಸಲಾಗಿತ್ತು. ಅಲ್ಲಿ ಸುಮಾರು 8.30ರ ವೇಳೆಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ವ್ಯಕ್ತಿಯ ಜೊತೆ ಅವರ ಕುಟುಂಬ ಸದಸ್ಯರಾಗಲೀ, ಸಂಬಂಧಿಕರಾಗಲಿ ಇಲ್ಲದಿದ್ದ ಕಾರಣ ಪಲಕ್ಕಾಡ್ ಆಸ್ಪತ್ರೆಯ ಸಿಬ್ಬಂದಿಯೇ ಗಾಯಾಳುವನ್ನ ತ್ರಿಶೂರ್ ಆಸ್ಪತ್ರೆಗೆ ಕರೆತಂದಿದ್ದರು. ಸಿಬ್ಬಂದಿ ಗ್ಲೋವ್ಸ್ ತರಲು ಆಸ್ಪತ್ರೆಯ ಒಳಗೆ ಹೋದಾಗ ಚಾಲಕ ಸ್ಟ್ರೆಚ್ಚರ್ ಹೊರಗೆಳೆದಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿರುವುದಾಗಿ ಪತ್ರಿಕೆಯೊಂದು ವರದಿ ಮಾಡಿದೆ.

    ತಲೆಕೆಳಗಾದ ಸ್ಟ್ರೆಚ್ಚರ್ ಮೇಲೆ ಅಸಹಾಯಕರಾಗಿ ಬಿದ್ದಿದ್ದ ಗಾಯಾಳುವನ್ನ ಕೊನೆಗೆ ಆಸ್ಪತ್ರೆಯ ಸಿಬ್ಬಂದಿ ಮೇಲೆತ್ತಿ ವ್ಹೀಲ್‍ಚೇರ್ ಮೇಲೆ ಕೂರಿಸಿದ್ದರು. ವ್ಯಕ್ತಿಗೆ ಶಸ್ತ್ರಚಿಕಿತ್ಸೆ ಮಾಡಲಾಯಿತಾದ್ರೂ ಶನಿವಾರ ಬೆಳಗ್ಗೆ ಕೊನೆಯಿಸಿರೆಳೆದಿದ್ದಾರೆ.

  • ಬಯಲಿನಲ್ಲಿ ಶೌಚ ಮಾಡಿದ್ರೆ ಇನ್ಮುಂದೆ ಬೀಳುತ್ತೆ ಭಾರೀ ದಂಡ!

    ಬಯಲಿನಲ್ಲಿ ಶೌಚ ಮಾಡಿದ್ರೆ ಇನ್ಮುಂದೆ ಬೀಳುತ್ತೆ ಭಾರೀ ದಂಡ!

    ಮುಂಬೈ: ಇನ್ನು ಮುಂದೆ ಮಹಾರಾಷ್ಟ್ರದಲ್ಲಿ ಬಯಲಿನಲ್ಲಿ ಶೌಚ ಮಾಡಿದರೆ 500 ರೂ. ದಂಡ ವಿಧಿಸಲು ರಾಜ್ಯ ಸರ್ಕಾರ ನಿಯಮವನ್ನು ಜಾರಿ ಮಾಡಿದೆ.

    ಮಹಾರಾಷ್ಟ್ರ ಸರ್ಕಾರ ಬಯಲಿನಲ್ಲಿ ಶೌಚ ಮಾಡೋದು, ಉಗುಳುವುದು, ಮೂತ್ರ ವಿಸರ್ಜನೆ, ರಸ್ತೆ ಬದಿ ಕಸ ಹಾಕೋದು ಸೇರಿದಂತೆ ಎಲ್ಲ ಗಲೀಜು ಕೆಲಸಗಳಿಗೆ ದಂಡವನ್ನು ವಿಧಿಸುವಂತೆ ನಗರ ಅಭಿವೃದ್ಧಿ ಇಲಾಖೆ ಹೊಸ ನಿಯಮವನ್ನು ಜಾರಿಗೆ ತಂದಿದೆ.

    ನಗರ ಪ್ರದೇಶ ಸೇರಿದಂತೆ ಎ, ಬಿ, ಸಿ ಮತ್ತು ಡಿ ಕೆಟಗಿರಿಯ ಸ್ಥಳಗಳಲ್ಲಿಯೂ ದಂಡದ ಪ್ರಮಾಣ ಒಂದೇ ಆಗಿರಲಿದೆ. ಇಂದಿನಿಂದ ಯಾವುದೇ ವ್ಯಕ್ತಿ ಅಥವಾ ಸಂಸ್ಥೆ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳಗಳಲ್ಲಿ ಹಾಕಿದರೆ ಸ್ಥಳದಲ್ಲಿಯೇ 150 ರೂ. ದಿಂದ 180 ರೂ.ನಷ್ಟು ದಂಡವನ್ನು ಪಾವತಿಸಬೇಕಾಗುತ್ತದೆ.

    ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವ ಮೂಲಕ ಗಲೀಜು ಮಾಡಿದರೆ 100 ರಿಂದ 150 ರೂ. ದಂಡ ಕಟ್ಟಬೇಕಾಗುತ್ತದೆ. ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜಿಸಿದರೆ 150 ರಿಂದ 200 ರೂ.ವರೆಗೆ ದಂಡವನ್ನು ಪಾವಸಿಬೇಕಾಗುತ್ತದೆ ಎಂದು ಸರ್ಕಾರ ತಿಳಿಸಿದೆ.

    ಕೇಂದ್ರ ಸರ್ಕಾರ ಸ್ವಚ್ಛ ಭಾರತ್ ಅಭಿಯಾನವನ್ನ ಆರಂಭಿಸಿದ ರೀತಿಯಲ್ಲಿಯೇ ಮಹಾರಾಷ್ಟ್ರ ಸರ್ಕಾರ ಕೂಡ ಸ್ವಚ್ಛತಾ ಅಭಿಯಾನವನ್ನು ಹಮ್ಮಿಕೊಂಡಿದೆ. 2017ರ ಅಕ್ಟೋಬರ್ 1 ರಂದು ಭೇಟಿ ನೀಡಿದ್ದ ವೇಳೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮಹಾರಾಷ್ಟ್ರದ ಎಲ್ಲ ನಗರ ಪ್ರದೇಶಗಳು ಬಯಲು ಶೌಚಾಲಯದಿಂದ ಮುಕ್ತವಾಗಿದೆ ಅಂತಾ ಘೋಷಿಸಿದ್ದರು.