Tag: Urvashi Rautela

  • ಐಶ್ವರ್ಯಾ ರೈ ಜೊತೆ ಹೋಲಿಸಿ ಟ್ರೋಲ್- ನಾನು ಯಾರ ಕಾಪಿನೂ ಅಲ್ಲ ಎಂದ ಊರ್ವಶಿ ರೌಟೇಲಾ

    ಐಶ್ವರ್ಯಾ ರೈ ಜೊತೆ ಹೋಲಿಸಿ ಟ್ರೋಲ್- ನಾನು ಯಾರ ಕಾಪಿನೂ ಅಲ್ಲ ಎಂದ ಊರ್ವಶಿ ರೌಟೇಲಾ

    ರಾವತ ನಟಿ ಊರ್ವಶಿ ರೌಟೇಲಾ (Urvashi Rautela) ಗರಂ ಆಗಿದ್ದಾರೆ. ಐಶ್ವರ್ಯಾ ರೈ (Aishwarya Rai) ಜೊತೆ ಹೋಲಿಸಿ ಟ್ರೋಲ್ ಮಾಡಿದ್ದಕ್ಕೆ ನಾನು ಯಾರ ಕಾಪಿನೂ ಅಲ್ಲ ಅಂತ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ:ತಮಿಳಿನಿಂದ ಕನ್ನಡ ಎಂದ ಕಮಲ್ ಹಾಸನ್‌ಗೆ ಸಂಕಷ್ಟ- ಕ್ಷಮೆಯಾಚಿಸುವಂತೆ ಆಗ್ರಹ

    ಕಾನ್ ಚಿತ್ರೋತ್ಸವದಲ್ಲಿ (Cannes 2025) ಊರ್ವಶಿ ಲುಕ್ ಅನ್ನು ಐಶ್ವರ್ಯಾ ರೈಯೊಂದಿಗೆ ಹೋಲಿಸಿ ಕೆಲ ಸುದ್ದಿ ಮತ್ತು ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ ಮಾಡಲಾಗಿದೆ. ಜೀರೋ ವರ್ಚಸ್ಸಿನೊಂದಿಗೆ ಐಶ್ವರ್ಯಾ ರೈ ಆಗಲು ಪ್ರಯತ್ನಿಸುತ್ತಿದ್ದಾರೆ ಎಂದವರಿಗೆ ತಮ್ಮ ಇನ್ಸ್ಟಾಗ್ರಾಂ ಪೋಸ್ಟ್‌ನಲ್ಲಿ, ಐಶ್ವಯಾ ರೈ ಐನಾನಿಕ್. ನಾನು ಅವರ ಕಾಪಿ ಆಗಲು ಬಂದಿಲ್ಲ. ನಾನೇ ಬ್ಲೂಪ್ರಿಂಟ್. ಕಾನ್ ಚಿತ್ರೋತ್ಸವದಲ್ಲಿ ನನ್ನನ್ನು ಎಲ್ಲರೊಂದಿಗೆ ಬೆರೆಯಲು ಆಹ್ವಾನಿಸಲಿಲ್ಲ. ನಾನು ಎಲ್ಲರಂತೆ ಎದ್ದು ಕಾಣಲು ಬಂದೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ:‘ಕೂಲಿ’ ಮಾಡಿದ ತಲೈವಾಗೆ 150 ಕೋಟಿ, ನಿರ್ದೇಶಕನಿಗೆ 20 ಕೋಟಿ!

    ನಾನು ಎಲ್ಲರಿಗೂ ಸಿಗುವವಳಲ್ಲ. ನಾನು ಪಟಾಕಿಯೊಂದಿಗಿರುವ ಶಾಂಪೇನ್‌ನಂತೆ. ನೀವು ವರ್ಚಸ್ಸು ಅಳೆಯಲು ಸಾಧ್ಯವಾದರೆ, ನಾನು ಅದರ ಮಾಪಕವನ್ನು ಮುರಿಯಬಲ್ಲೆ ಎಂದಿದ್ದಾರೆ. ಸದ್ಯ ನಟಿಯ ಪೋಸ್ಟ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

    ಊರ್ವಶಿ ರೌಟೇಲಾ ಅವರು ಬಾಲಿವುಡ್ ಮತ್ತು ದಕ್ಷಿಣದ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಬಹುಭಾಷೆಗಳಲ್ಲಿ ನಟಿಗೆ ಭಾರೀ ಬೇಡಿಕೆಯಿದೆ.

  • ದಕ್ಷಿಣ ಭಾರತದಲ್ಲಿ ನನ್ನ ಹೆಸರಲ್ಲೊಂದು ದೇವಸ್ಥಾನ ಆಗಬೇಕು ಎಂದ ಊರ್ವಶಿ – ಟ್ರೋಲ್ ಆದ ನಟಿ

    ದಕ್ಷಿಣ ಭಾರತದಲ್ಲಿ ನನ್ನ ಹೆಸರಲ್ಲೊಂದು ದೇವಸ್ಥಾನ ಆಗಬೇಕು ಎಂದ ಊರ್ವಶಿ – ಟ್ರೋಲ್ ಆದ ನಟಿ

    ಬಾಲಿವುಡ್ ಬೆಡಗಿ ಊರ್ವಶಿ ರೌಟೇಲಾ (Urvashi Rautela) ಸದಾ ಒಂದಲ್ಲಾ ಒಂದು ಹೇಳಿಕೆಯ ಮೂಲಕ ಸದ್ದು ಮಾಡುತ್ತಲೇ ಇರುತ್ತಾರೆ. ಅದೆಷ್ಟೋ ಬಾರಿ ಅವರು ಆಡಿರುವ ಮಾತಿನಿಂದ ಟ್ರೋಲ್ ಆಗಿದ್ದು ಇದೆ. ಈಗ ಮತ್ತೊಮ್ಮೆ ನಟಿ ಟ್ರೋಲಿಗರ ಬಾಯಿಗೆ ಆಹಾರವಾಗಿದ್ದಾರೆ. ಉತ್ತರಾಖಂಡದಲ್ಲಿ ನನ್ನ ಹೆಸರಿನಲ್ಲಿ ದೇವಸ್ಥಾನವಿದೆ. ಅದರಂತೆ ದಕ್ಷಿಣ ಭಾರತದಲ್ಲೂ ನನ್ನ ಹೆಸರಿನಲ್ಲಿ ಒಂದು ದೇವಸ್ಥಾನ ನಿರ್ಮಿಸಬೇಕು ಎಂದು ನಟಿ ಹೇಳಿದ್ದಾರೆ. ಊರ್ವಶಿಯ ಈ ಹೇಳಿಕೆ ಸಖತ್ ಟ್ರೋಲ್ ಆಗ್ತಿದೆ.

    ಸಂರ್ದಶನವೊಂದರಲ್ಲಿ ಮಾತನಾಡಿದ ಊರ್ವಶಿ, ಉತ್ತರಾಖಂಡದಲ್ಲಿ ನನ್ನ ಹೆಸರಿನಲ್ಲಿ ‘ಊರ್ವಶಿ’ ಎಂಬ ದೇವಾಲಯ ಈಗಾಗಲೇ ಇದೆ. ನೀವು ಬದರೀನಾಥ ದೇವಸ್ಥಾನಕ್ಕೆ ಭೇಟಿ ನೀಡಲು ಹೋದಾಗ, ಅದರ ಪಕ್ಕದಲ್ಲಿಯೇ ಒಂದು ದೇವಸ್ಥಾನವಿರುತ್ತದೆ. ಇದು ನನಗೆ ಸಮರ್ಪಿಸಲಾಗಿದೆ ಎಂದಿದ್ದಾರೆ. ದಕ್ಷಿಣ ಭಾರತದಲ್ಲೂ ನನ್ನ ಹೆಸರಿನಲ್ಲಿ ಒಂದು ದೇವಸ್ಥಾನ ಆಗಬೇಕು ಎಂದು ತಮ್ಮ ಆಸೆಯನ್ನು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಉಪ್ಪಿ ಅಣ್ಣನ ಮಗನ ಸಿನಿಮಾದಲ್ಲಿ ಲವ್ಲಿ ಸ್ಟಾರ್‌- ‘ಸ್ಪಾರ್ಕ್‌’ನಲ್ಲಿ ನೆನಪಿರಲಿ ಪ್ರೇಮ್

    ಈ ವೇಳೆ ನಿರೂಪಕ, ಜನರು ದರ್ಶನ ಪಡೆಯಲು ನಿಮ್ಮ ದೇವಸ್ಥಾನಕ್ಕೆ ಹೋಗುತ್ತಾರೆಯೇ ಎಂದು ಕೇಳಾದ ಪ್ರಶ್ನೆಗೆ ಊರ್ವಶಿ ನಗುತ್ತಾ, ಈಗಾಗಲೇ ದೇವಸ್ಥಾನ ಇರೋದರಿಂದ ಜನರು ದೇವಾಲಯದಲ್ಲಿ ಪ್ರಾರ್ಥಿಸುತ್ತಾರೆ. ಅಷ್ಟೇ ಅಲ್ಲ, ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಸಹ ಅವರಿಗೆ ಪ್ರಾರ್ಥಿಸುತ್ತಾರೆ ಮತ್ತು ಅವರ ಫೋಟೋಗಳಿಗೆ ಹೂಮಾಲೆಗಳನ್ನು ಅರ್ಪಿಸುತ್ತಾರೆ ಎಂದು ಉತ್ತರಿಸಿದ್ದಾರೆ. ಈ ವೇಳೆ, ಅವರನ್ನು ಜನರು ‘ದಂದಮಾ ಮಾಯಿ’ ಕರೆಯುತ್ತಾರೆ ಎಂಬುದನ್ನು ವಿವರಿಸಿದ್ದಾರೆ. ಇದನ್ನೂ ಓದಿ:ರಾಕೇಶ್ ಅಡಿಗ ನಟನೆಯ ‘ನಾನು ಮತ್ತು ಗುಂಡ 2’ ಟೀಸರ್ ಔಟ್

    ಸದ್ಯ ದಕ್ಷಿಣ ಭಾರತದಲ್ಲೂ ನನ್ನ ಹೆಸರಲ್ಲಿ ದೇವಸ್ಥಾನ ಬೇಕು ಅವರು ನೀಡಿರುವ ಹೇಳಿಕೆಗೆ ನೆಟ್ಟಿಗರು ಕಾಲೆಳೆದಿದ್ದಾರೆ. ಅಯ್ಯೋ ಸಾಕಮ್ಮ ನಿನ್ನ ಮಾತು ಎಂದು ನೆಟ್ಟಿಗರು ಟೀಕಿಸಿದ್ದಾರೆ.

    ಅಂದಹಾಗೆ, ಸನ್ನಿ ಡಿಯೋಲ್ ನಟನೆಯ ‘ಜಟ್’ (Jaat) ಸಿನಿಮಾದಲ್ಲಿ ಊರ್ವಶಿ ರೌಟೇಲಾ ಸೊಂಟ ಬಳುಕಿಸಿದ್ದಾರೆ. ಈ ಸಿನಿಮಾ ಏ.10ರಂದು ತೆರೆಕಂಡಿತ್ತು.

  • ಸನ್ನಿ ಡಿಯೋಲ್ ಸಿನಿಮಾದಲ್ಲಿ ಸೊಂಟ ಬಳುಕಿಸಿದ ‘ಐರಾವತ’ ನಟಿ ಊರ್ವಶಿ

    ಸನ್ನಿ ಡಿಯೋಲ್ ಸಿನಿಮಾದಲ್ಲಿ ಸೊಂಟ ಬಳುಕಿಸಿದ ‘ಐರಾವತ’ ನಟಿ ಊರ್ವಶಿ

    ನ್ನಡದ ‘ಐರಾವತ’ ನಟಿ ಊರ್ವಶಿ ರೌಟೇಲಾ (Urvashi Rautela) ಮತ್ತೆ ಸುದ್ದಿಯಲ್ಲಿದ್ದಾರೆ. ಬೋಲ್ಡ್ ಆಗಿ ಹೆಜ್ಜೆ ಹಾಕುವ ಮೂಲಕ ಇಂಟರ್‌ನೆಟ್‌ಗೆ ಬೆಂಕಿ ಹಚ್ಚಿದ್ದಾರೆ. ಬಾಲಿವುಡ್ ನಟ ಸನ್ನಿ ಡಿಯೋಲ್ ಸಿನಿಮಾದಲ್ಲಿ ನಟಿ ಸೊಂಟ ಬಳುಕಿಸಿದ್ದಾರೆ. ಇದನ್ನೂ ಓದಿ:ಬದುಕು ಕೊಟ್ಟ ರೆಸ್ಟೋರೆಂಟ್‌ಗೆ ಶೈನ್ ಶೆಟ್ಟಿ ಗುಡ್ ಬೈ- ಫ್ಯಾನ್ಸ್‌ಗೆ ಬಹಿರಂಗ ಪತ್ರ ಬರೆದ ನಟ

    ನಾಯಕಿಯಾಗಿ ಸಿನಿಮಾಗಳಲ್ಲಿ ಬ್ಯುಸಿ ಇರುವಾಗಲೇ ಐಟಂ ಹಾಡಿಗೆ ಊರ್ವಶಿ ಡ್ಯಾನ್ಸ್ ಮಾಡಿದ್ದಾರೆ. ಸನ್ನಿ ಡಿಯೋಲ್ ನಟನೆಯ ‘ಜಟ್’ (Jaat) ಸಿನಿಮಾದಲ್ಲಿ ‘ಟಚ್ ಕಿಯಾ’ ಹಾಡಿಗೆ ಅವರು ಸೊಂಟ ಬಳುಕಿಸಿದ್ದಾರೆ. ನಟಿಯು ಮಾದಕವಾಗಿ ಡ್ಯಾನ್ಸ್ ಮಾಡಿರೋದನ್ನು ನೋಡಿ ಪಡ್ಡೆಹುಡುಗರು ಫಿದಾ ಆಗಿದ್ದಾರೆ. ಸದ್ಯ ಈ ಸಾಂಗ್ ಯೂಟ್ಯೂಬ್‌ನಲ್ಲಿ ಟ್ರೆಂಡಿಂಗ್‌ನಲ್ಲಿದೆ. ಇದನ್ನೂ ಓದಿ:ಬ್ರೇಕಪ್ ಬೆನ್ನಲ್ಲೇ ಸಂಬಂಧವನ್ನು ಐಸ್‌ಕ್ರೀಮ್‌ನಂತೆ ಆಸ್ವಾದಿಸಬೇಕು ಎಂದ ವಿಜಯ್ ವರ್ಮಾ

     

    View this post on Instagram

     

    A post shared by Mythri Movie Makers (@mythriofficial)

    ‘ಜಟ್’ ಚಿತ್ರ ಜಬರ್‌ದಸ್ತ್ ಆಗಿರುವ ಆ್ಯಕ್ಷನ್ಸ್ ಒಳಗೊಂಡಿರುವ ಸಿನಿಮಾ ಆಗಿದೆ. ಸನ್ನಿ ಡಿಯೋಲ್ (Sunny Deol)  ಜೊತೆ ರಣದೀಪ್ ಹೂಡಾ, ರೆಜಿನಾ, ಸೆಯಾಮಿ ಸೇರಿದಂತೆ ಅನೇಕರು ನಟಿಸಿದ್ದಾರೆ. ಈ ಚಿತ್ರ ಏ.10ರಂದು ರಿಲೀಸ್ ಆಗಲಿದೆ.

  • ಊರ್ವಶಿ ರೌಟೇಲಾ ಬೆರಳಿಗೆ ಗಾಯ- ಕಾಮೆಂಟ್ ಮಾಡಿ ನಗ್ತಿರೋದ್ಯಾಕೆ ನೆಟ್ಟಿಗರು?

    ಊರ್ವಶಿ ರೌಟೇಲಾ ಬೆರಳಿಗೆ ಗಾಯ- ಕಾಮೆಂಟ್ ಮಾಡಿ ನಗ್ತಿರೋದ್ಯಾಕೆ ನೆಟ್ಟಿಗರು?

    ನೌಟಂಕಿ ಆಟವಾಡುವ ಕಾರಣಕ್ಕೆ ಹಲವರ ಕೆಂಗಣ್ಣಿಗೆ ಗುರಿಯಾಗೋದು ಊರ್ವಶಿ ರೌಟೇಲಾಗೆ (Urvashi Rautela) ಹೊಸದಲ್ಲ. ಇದೀಗ ಆಸ್ಪತ್ರೆಯಲ್ಲಿ ಆಕ್ಸಿಜನ್ ಮಾಸ್ಕ್ ಧರಿಸಿರುವ ವೀಡಿಯೋವನ್ನ ಊರ್ವಶಿ ಪೋಸ್ಟ್ ಮಾಡಿ ವೀಕ್ಷಕರನ್ನ ಬೆಚ್ಚಿ ಬೀಳಿಸಿದ್ದಾರೆ. ಊರ್ವಶಿ ಕೈಬೆರಳಿಗೆ ಸಣ್ಣದೊಂದು ಗಾಯವಾಗಿದ್ದು ಅದಕ್ಕೆ ಈ ಪಾಟಿ ಟ್ರೀಟ್‌ಮೆಂಟ್ ಅಗತ್ಯವಿತ್ತೇ ಅನ್ನೋದೇ ನೆಟ್ಟಿಗರ ಪ್ರಶ್ನೆಯಾಗಿದೆ.

    ಇನ್ಸ್ಟಾಗ್ರಾಂನಲ್ಲಿ ವೀಡಿಯೋ ಹಂಚಿಕೊಂಡಿರುವ ಐರಾವತಿ ಬೆಡಗಿ ಊರ್ವಶಿ ‘ನನಗಾಗಿ ಪ್ರಾರ್ಥಿಸಿ’ ಎಂಬ ಸಂದೇಶದೊಂದಿಗೆ ಗಾಯದ ವೀಡಿಯೋ ಜೊತೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿರುವ ವೀಡಿಯೋ ಹಂಚಿಕೊಂಡಿದ್ದಾರೆ. ಅಸಲಿಗೆ ಊರ್ವಶಿ ಹಂಚಿಕೊಂಡ ವೀಡಿಯೋವನ್ನೇ ನೋಡಿದರೆ ಅದೊಂದು ಸಾಮಾನ್ಯ ಗಾಯದಂತೆ ಕಾಣುತ್ತೆ. ಇಂಥಹ ಸಣ್ಣಪುಟ್ಟ ಗಾಯಕ್ಕೆ ಆಸ್ಪತ್ರೆಗೆ ಹೋಗಿ ಬ್ಯಾಂಡೇಜ್ ಹಾಕೊಂಡು ಬರೋದೇ ದೊಡ್ಡದು. ಅಂಥದ್ರಲ್ಲಿ ಆಸ್ಪತ್ರೆಗೆ ದಾಖಲಾಗೋದ್ರ ಜೊತೆ ಆಕ್ಸಿಜನ್ ಮಾಸ್ಕ್ ಧರಿಸಿ ಚಿಕಿತ್ಸೆ ಪಡೆಯುವ ಅನಿವಾರ್ಯತೆ ಏನಿತ್ತು ಅನ್ನೋದೇ ಯಕ್ಷಪ್ರಶ್ನೆ. ಹೀಗಾಗಿ ನೆಟ್ಟಿಗರು ಊರ್ವಶಿ ಆಟಕ್ಕೆ ಚೆನ್ನಾಗಿ ಕ್ಲಾಸ್ ತೆಗೆದುಕೊಳ್ತಿದ್ದಾರೆ. ಇದನ್ನೂ ಓದಿ:ಸಿನಿಮಾಗೆ ಬ್ರೇಕ್ ಕೊಟ್ಟು ಜಂಗಲ್‌ನಲ್ಲಿ ಪೂಜಾ ಹೆಗ್ಡೆ ಸುತ್ತಾಟ

     

    View this post on Instagram

     

    A post shared by URVASHI RAUTELA (@urvashirautela)

    ನನಗಾಗಿ ಪ್ರಾರ್ಥಿಸಿ ಎಂದು ಕೇಳಿಕೊಂಡಿರುವ ಊರ್ವಶಿಗೆ ಓವರ್‌‌ ಆ್ಯಕ್ಟಿಂಗ್ ನಿಲ್ಲಿಸು ಎಂದು ಕಾಮೆಂಟ್ ಮಾಡಿದ್ದಾರೆ ನೆಟ್ಟಿಗರು. ಈ ಜಗತ್ತಿನಲ್ಲಿ ನಿಗಗೊಬ್ಬಳಿಗೇ ಇಂಥಹ ಗಂಭೀರ ಗಾಯವಾಗಿದ್ದು ಎಂದು ಇನ್ನೊಬ್ಬರು ಕಾಲೆಳೆದಿದ್ದಾರೆ. ಇನ್ನು ಅನೇಕರು ಇಂಥಹ ವೀಡಿಯೋ ಪೋಸ್ಟ್ ಮಾಡಿ ಏನು ಸಿಂಪತಿ ಗಿಟ್ಟಿಸಿಕೊಳ್ಳುವ ಕೆಲಸ ಮಾಡ್ಬೇಡ ಎಂದಿದ್ರೆ ಇನ್ನು ಕೆಲವರು ಹಣ ಇದೆ ಸೂಜಿ ಚುಚ್ಚಿದರೂ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗ್ತೀಯ ಬಿಡು ಎಂದಿದ್ದಾರೆ. ಒಟ್ನಲ್ಲಿ ಊರ್ವಶಿ ರೌಟೇಲಾ ಸದ್ಯ ಮಾಡ್ಕೊಂಡಿರೋ ಅವಾಂತರಕ್ಕೆ ಒಂದ್ವೇಳೆ ಗಂಭೀರ ಗಾಯವಾದ್ರೂ ಯಾರೂ ನಂಬುವುದಿಲ್ಲ.

    ಕನ್ನಡದ ಐರಾವತ ಚಿತ್ರ ಸೇರಿದಂತೆ ಹಿಂದಿನ ‘ಸಿಂಗ್ ಸಾಬ್ ದಿ ಗ್ರೇಟ್’, ಸನಮ್ ರೇ ಹೇಟ್ ಸ್ಟೋರಿ ಚಿತ್ರಗಳಲ್ಲಿ ನಟಿಸಿದ್ದರು. ಹೇಳಿಕೊಳ್ಳುವಂಥಹ ಯಾವುದೇ ಹಿಟ್ ಸಿನಿಮಾ ಕೊಡದಿದ್ದರೂ `ಮಾಜಿ ಮಿಸ್ ದಿವಾ’ ಮಾಡೆಲಿಂಗ್ ಕ್ಷೇತ್ರದಲ್ಲೇ ಫೇಮಸ್. ವರ್ಷದಲ್ಲಿ ಹೆಚ್ಚು ಕಮ್ಮಿ ದುಬೈನಲ್ಲೇ ಇರುವ ಈ ಹಾಟ್ ಬ್ಯೂಟಿ ಕೈಗೆ ಅದ್ಹೇಗೆ ಏಟು ಮಾಡ್ಕೊಂಡ್ರೋ ಏನೋ ಆದರೆ ಯಾರೋಬ್ರೂ ಊರ್ವಶಿ ನಾಟಕವನ್ನ ನಂಬುತ್ತಿಲ್ಲ.

  • ಊರ್ವಶಿ ರೌಟೇಲಾ ಬಾತ್‌ರೂಮ್ ಸೀನ್ ಲೀಕ್ – ಪ್ರಚಾರಕ್ಕಾಗಿ ಗಿಮಿಕ್ ಮಾಡ್ತಿದ್ದಾರೆ ಎಂದ ನೆಟ್ಟಿಗರು

    ಊರ್ವಶಿ ರೌಟೇಲಾ ಬಾತ್‌ರೂಮ್ ಸೀನ್ ಲೀಕ್ – ಪ್ರಚಾರಕ್ಕಾಗಿ ಗಿಮಿಕ್ ಮಾಡ್ತಿದ್ದಾರೆ ಎಂದ ನೆಟ್ಟಿಗರು

    ಬಾಲಿವುಡ್ ಬೆಡಗಿ ಊರ್ವಶಿ ರೌಟೇಲಾ (Urvashi Rautela) ಆಗಾಗ ಸುದ್ದಿಯಾಗುತ್ತಲೇ ಇರುತ್ತಾರೆ. ಇದೀಗ ಬಾತ್‌ರೂಮ್‌ನಲ್ಲಿ ಸ್ನಾನಕ್ಕಾಗಿ ಊರ್ವಶಿ ಬಟ್ಟೆ ಬಿಚ್ಚುತ್ತಿರುವ ವಿಡಿಯೋವೊಂದು ಲೀಕ್ ಆಗಿದೆ. ಈ ಕುರಿತು ನಟಿಯ ಪರ ಮತ್ತು ವಿರೋಧದ ಚರ್ಚೆ ಕೂಡ ಶುರುವಾಗಿದೆ. ಇದನ್ನೂ ಓದಿ:ನ್ಯಾಯಾಂಗದ ಬಗ್ಗೆ ಗೌರವವಿದೆ, ಅಪರಾಧ ಸಾಬೀತಾದ್ರೆ ಯಾರೇ ಆಗಿದ್ರೂ ಶಿಕ್ಷೆ ಆಗಲಿ: ಅನು ಪ್ರಭಾಕರ್

    ಸ್ನಾನದ ಗೃಹದಲ್ಲಿ ನಟಿ ಬಟ್ಟೆ ಬಿಚ್ಚುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಬಾತ್‌ರೂಮ್‌ನಲ್ಲಿ ಕ್ಯಾಮೆರಾ ಇಟ್ಟಿರುವ ವಿಷಯ ಆಕೆಗೆ ತಿಳಿದಿಲ್ಲ ಎಂದು ನಟಿಯ ಪರ ಕೆಲವರು ಬ್ಯಾಟ್ ಬೀಸಿದ್ದಾರೆ. ಇನ್ನೂ ಕೆಲ ನೆಟ್ಟಿಗರು ಊರ್ವಶಿ ಪ್ರಚಾರಕ್ಕಾಗಿ ಹೊಸ ಗಿಮಿಕ್ ಶುರು ಮಾಡಿದ್ದಾರೆ ಎಂದು ಕಾಮೆಂಟ್ ಮಾಡುತ್ತಿದ್ದಾರೆ. ನಟಿಯ ಕತ್ತಲ್ಲಿ ತಾಳಿ ಇರುವುದನ್ನು ಗಮನಿಸಿ ಇದು ಫೇಕ್ ಎಂದು ಕೂಡ ಹೇಳ್ತಿದ್ದಾರೆ.

     

    View this post on Instagram

     

    A post shared by Manav Manglani (@manav.manglani)


    ಇದೀಗ ಈ ವಿಚಾರದ ಬಗ್ಗೆ ನಟಿಯ ಮ್ಯಾನೇಜರ್ ಪ್ರತಿಕ್ರಿಯಿಸಿ, ಈ ರೀತಿಯ ವಿಡಿಯೋಗಳು ಹೇಗೆ ಲೀಕ್ ಆಗುತ್ತದೆ ಎಂಬುದು ಗೊತ್ತಿಲ್ಲ. ವಿಡಿಯೋನ ಸೋಷಿಯಲ್ ಮೀಡಿಯಾದಲ್ಲಿ ತೆಗೆದು ಹಾಕುವ ಪ್ರಯತ್ನದಲ್ಲಿದ್ದೇವೆ ಎಂದಿದ್ದಾರೆ. ಆದರೆ ವೈರಲ್ ಆಗುತ್ತಿರುವ ವಿಡಿಯೋವನ್ನು ಬ್ರೇಕ್ ಹಾಕೋಕೆ ಸಾಧ್ಯವಾಗುತ್ತಿಲ್ಲ ಎಂದು ಮಾತನಾಡಿದ್ದಾರೆ.

    ಅಂದಹಾಗೆ, ಊರ್ವಶಿ ರೌಟೇಲಾ ತೆಲುಗು ಮತ್ತು ಬಾಲಿವುಡ್‌ ಸಿನಿಮಾಗಳಲ್ಲಿ ಹೆಚ್ಚು ಗುರುತಿಸಿಕೊಂಡಿದ್ದಾರೆ. ಕನ್ನಡದ ‘ಐರಾವತ’ ಸಿನಿಮಾದಲ್ಲಿ ದರ್ಶನ್‌ಗೆ ನಾಯಕಿಯಾಗಿ ನಟಿಸಿದ್ದಾರೆ.

  • ಆ್ಯಕ್ಷನ್ ದೃಶ್ಯ ಚಿತ್ರೀಕರಣದ ವೇಳೆ ಊರ್ವಶಿ ರೌಟೇಲಾಗೆ ಏಟು- ಆಸ್ಪತ್ರೆಗೆ ದಾಖಲು

    ಆ್ಯಕ್ಷನ್ ದೃಶ್ಯ ಚಿತ್ರೀಕರಣದ ವೇಳೆ ಊರ್ವಶಿ ರೌಟೇಲಾಗೆ ಏಟು- ಆಸ್ಪತ್ರೆಗೆ ದಾಖಲು

    ನ್ನಡದ ‘ಐರಾವತ’ ನಟಿ ಊರ್ವಶಿ ರೌಟೇಲಾ (Urvashi Rautela) ಸದಾ ಒಂದಲ್ಲಾ ಒಂದು ರೀತಿಯಲ್ಲಿ ಸುದ್ದಿಯಲ್ಲಿರುತ್ತಾರೆ. ಈಗ ಬಾಲಯ್ಯ ನಟನೆಯ 109ನೇ ಸಿನಿಮಾದ ಶೂಟಿಂಗ್‌ನಲ್ಲಿ ನಟಿ ಕಾಲಿಗೆ ಏಟಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ:ರಜನಿಕಾಂತ್ ನಟನೆಯ ಚಿತ್ರಕ್ಕೆ ‘ರತ್ನನ್ ಪ್ರಪಂಚ’ ನಟಿ ಎಂಟ್ರಿ

    ಬಾಲಯ್ಯ (Balayya) ಹೊಸ ಸಿನಿಮಾದಲ್ಲಿ ಊರ್ವಶಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸದ್ಯ ಈ ಸಿನಿಮಾದ ಆ್ಯಕ್ಷನ್ ದೃಶ್ಯ ಚಿತ್ರೀಕರಣದ ವೇಳೆ ಊವರ್ಶಿ ಕಾಲಿಗೆ ಪೆಟ್ಟಾಗಿದ್ದು, ಕೂಡಲೇ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಗಾಯದ ತೀವ್ರತೆ ಬಗ್ಗೆ ಸ್ಪಷ್ಟ ಮಾಹಿತಿ ಸಿಗಬೇಕಿದೆ. ಬಾಲಿವುಡ್ ಬೆಡಗಿಗೆ ಪೆಟ್ಟಾಗಿರುವ ವಿಷಯ ತಿಳಿದು ಅಭಿಮಾನಿಗಳು ಬೇಗ ಚೇತರಿಸಿಕೊಳ್ಳುವಂತೆ ಪ್ರಾರ್ಥಿಸುತ್ತಿದ್ದಾರೆ.

    ಈ ಚಿತ್ರವನ್ನು ಅನಿಲ್ ರವಿಪುಡಿ ನಿರ್ದೇಶನ ಮಾಡುತ್ತಿದ್ದು, ಬಾಬಿ ಡಿಯೋಲ್ ವಿಲನ್ ಆಗಿ ಅಬ್ಬರಿಸುತ್ತಿದ್ದಾರೆ. ನಟಿ ಚಾಂದಿನಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ತಿದ್ದಾರೆ.

  • ಟ್ರೋಲ್‌ಗಳಿಗೆ ಕೇರ್ ಮಾಡಲ್ಲ- ಊರ್ವಶಿ ರೌಟೇಲಾ ಖಡಕ್ ರಿಯಾಕ್ಷನ್

    ಟ್ರೋಲ್‌ಗಳಿಗೆ ಕೇರ್ ಮಾಡಲ್ಲ- ಊರ್ವಶಿ ರೌಟೇಲಾ ಖಡಕ್ ರಿಯಾಕ್ಷನ್

    ನ್ನಡದ ‘ಐರಾವತ’ ನಟಿ ಊರ್ವಶಿ ರೌಟೇಲಾ (Urvashi Rautela) ಸದಾ ಒಂದಲ್ಲಾ ಒಂದು ವಿಚಾರವಾಗಿ ಟ್ರೋಲ್ (Troll) ಆಗುತ್ತಲೇ ಇರುತ್ತಾರೆ. ಇತ್ತೀಚೆಗೆ ಕಾನ್ಸ್ ಫೆಸ್ಟಿವಲ್‌ನಲ್ಲಿ ದೀಪಿಕಾ ಪಡುಕೋಣೆ (Deepika Padukone) ಸ್ಟೈಲ್ ಅನ್ನು ಕಾಪಿ ಮಾಡಿದ್ದಾರೆ ಊರ್ವಶಿ ಎಂದು ಟ್ರೋಲ್ ಆಗಿದ್ದರು. ಹಾಗಾಗಿ ಟ್ರೋಲ್ ಮಾಡುವವರಿಗೆ ನಟಿ ಈಗ ಖಡಕ್ ಉತ್ತರ ನೀಡಿದ್ದಾರೆ.

    ಇತ್ತೀಚಿನ ಸಂದರ್ಶನವೊಂದರಲ್ಲಿ ಟ್ರೋಲ್ ಅನ್ನು ನಟಿ ಎದುರಿಸುತ್ತಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ಮೊದಲು ಟ್ರೋಲ್ ಅನ್ನು ನಿಭಾಯಿಸುವುದನ್ನು ಅರಿತಿರಬೇಕು ಎಂದಿದ್ದಾರೆ. ಅಲ್ಲದೇ ನನ್ನ ಬಿಡುವಿಲ್ಲದ ಶೆಡ್ಯೂಲ್‌ನಲ್ಲಿ ಇದರ ಬಗ್ಗೆ ಯೋಚನೆ ಮಾಡಲು ಕೂಡ ಸಮಯ ಇಲ್ಲ ಎಂದಿದ್ದಾರೆ.

    ನೀವು ಟ್ರೋಲ್ ಬಗ್ಗೆ ಗಮನ ಕೊಡದೇ ಇದ್ದಾಗ, ಟ್ರೋಲ್ ಆಗುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ಈ ಮೂಲಕ ತಾವು ಟ್ರೋಲ್ ಬಗ್ಗೆ ಚಿಂತೆ ಮಾಡಲ್ಲ ಎಂದು ನಟಿ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ:ಬರೋಬ್ಬರಿ 90 ಕೆಜಿಯಿಂದ ಕೆಲವೇ ತಿಂಗಳಲ್ಲಿ 30 ಕೆಜಿ ದೇಹದ ತೂಕ ಇಳಿಸಿಕೊಂಡ ಸೋನಾಕ್ಷಿ

    ಊರ್ವಶಿ ರೌಟೇಲಾ ಸದ್ಯ ಬಹುಭಾಷಾ ನಟಿಯಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಕನ್ನಡದ ಜೊತೆ ಪರಭಾಷೆಗಳಲ್ಲಿಯೂ ನಟಿಗೆ ಡಿಮ್ಯಾಂಡ್ ಇದೆ.

  • ಕಾನ್ಸ್ ರೆಡ್ ಕಾರ್ಪೆಟ್- ದೀಪಿಕಾ ಪಡುಕೋಣೆ ಸ್ಟೈಲ್ ಕಾಪಿ ಮಾಡಿದ ಊರ್ವಶಿ

    ಕಾನ್ಸ್ ರೆಡ್ ಕಾರ್ಪೆಟ್- ದೀಪಿಕಾ ಪಡುಕೋಣೆ ಸ್ಟೈಲ್ ಕಾಪಿ ಮಾಡಿದ ಊರ್ವಶಿ

    ಕಾನ್ಸ್ ಫಿಲ್ಮ್ಸ್ ಫೆಸ್ಟಿವಲ್ (Cannes Film Festival 2024) ಈಗಾಗಲೇ ಆರಂಭವಾಗಿದೆ. ಎಲ್ಲಾ ಚಿತ್ರರಂಗದ ಸ್ಟಾರ್ ನಟ-ನಟಿಯರು ಈ ಕಾರ್ಯಕ್ರಮಕ್ಕೆ ಹಾಜರಿ ಹಾಕುತ್ತಿದ್ದಾರೆ. ಇದರ ನಡುವೆ ಕನ್ನಡದ ‘ಐರಾವತ’ ಬೆಡಗಿ ಊರ್ವಶಿ ರೌಟೇಲಾ (Urvashi Rautela) ಸ್ಟೈಲ್ ಎಲ್ಲರ ಗಮನ ಸೆಳೆದಿದೆ. ಜೊತೆಗೆ ದೀಪಿಕಾ ಪಡುಕೋಣೆ (Deepika Padukone) ಸ್ಟೈಲ್ ಅನ್ನೇ ಊರ್ವಶಿ ಕಾಪಿ ಮಾಡಿದ್ದಾರೆ ಎಂದು ನೆಟ್ಟಿಗರು ಕಾಲೆಳೆದಿದ್ದಾರೆ.

    ಕಾನ್ಸ್ ಚಲನಚಿತ್ರೋತ್ಸವದ ಮೊದಲ ದಿನವೇ ‘ಐರಾವತ’ ನಟಿ ಎಂಟ್ರಿ ಕೊಟ್ಟಿದ್ದಾರೆ. ಪಿಂಕ್ ಬಣ್ಣದ ಡ್ರೆಸ್‌ನಲ್ಲಿ ನಟಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿ ಮುದ್ದಾದ ನಗು ಬೀರಿದ್ದಾರೆ. ಬಾರ್ಬಿ ಡಾಲನಂತೆ ನಟಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ:‘ಮ್ಯಾಕ್ಸ್’ ಸಿನಿಮಾದ ಶೂಟಿಂಗ್ ಮುಗಿಸಿದ ಕಿಚ್ಚ ಸುದೀಪ್

    ಊರ್ವಶಿ ಧರಿಸಿದ ಪಿಂಕ್ ಬಣ್ಣದ ಗೌನ್ ಅನ್ನು ದೀಪಿಕಾ ಪಡುಕೋಣೆ ಧರಿಸಿದ ಉಡುಗೆಗೆ ಹೋಲಿಸಿದ್ದಾರೆ ನೆಟ್ಟಿಗರು. 2018ರಲ್ಲಿ ನಡೆದ ಕಾನ್ಸ್ ಫಿಲ್ಮ್ಸ್ ಫೆಸ್ಟಿವಲ್‌ನಲ್ಲಿ ದೀಪಿಕಾ ಪಿಂಕ್ ಕಲರ್ ಡ್ರೆಸ್‌ನಲ್ಲಿ ಕಾಣಿಸಿಕೊಂಡಿದ್ದರು. ಈಗ ಅದೇ ರೀತಿ ಗೆಟಪ್‌ನಲ್ಲಿ ಊರ್ವಶಿ ಕೂಡ ಹೋಲುತ್ತಿರೋದನ್ನು ನೋಡಿ ದೀಪಿಕಾ ಸ್ಟೈಲ್ ಕಾಪಿ ಮಾಡಿದ್ದಾರೆ ಎಂದು ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.


    ಸದ್ಯ ಬಾಲಯ್ಯ ಜೊತೆ ಹೊಸ ಸಿನಿಮಾದಲ್ಲಿ ಊರ್ವಶಿ ನಟಿಸುತ್ತಿದ್ದಾರೆ. ಸೌತ್ ಮತ್ತು ಹಿಂದಿ ಸಿನಿಮಾಗಳು ಊರ್ವಶಿ ಕೈಯಲ್ಲಿವೆ.

  • ರಿಷಭ್‌ ಪಂತ್‌ ಮದುವೆಯಾಗ್ತೀರಾ? – ನೋ ಕಾಮೆಂಟ್ಸ್‌ ಎಂದು ಪಾಕ್‌ ಬೌಲರ್‌ ಹೊಗಳಿದ ಊರ್ವಶಿ ರೌಟೇಲಾ

    ರಿಷಭ್‌ ಪಂತ್‌ ಮದುವೆಯಾಗ್ತೀರಾ? – ನೋ ಕಾಮೆಂಟ್ಸ್‌ ಎಂದು ಪಾಕ್‌ ಬೌಲರ್‌ ಹೊಗಳಿದ ಊರ್ವಶಿ ರೌಟೇಲಾ

    ಮುಂಬೈ: ಬಾಲಿವುಡ್ ನಟಿ ಊರ್ವಶಿ ರೌಟೇಲಾ (Urvashi Rautela) ಇದೀಗ ರಿಷಭ್‌ ಪಂತ್‌ ವಿಚಾರಕ್ಕೆ‌ ಮತ್ತೆ ಸುದ್ದಿಯಲ್ಲಿದ್ದಾರೆ. ಪಂತ್‌ ಅವರೊಂದಿಗೆ ಮದುವೆ ವಿಚಾರಕ್ಕೆ ನಟಿ ಕೊಟ್ಟ ಪ್ರತಿಕ್ರಿಯೆ ಮತ್ತೆ ಸೋಶಿಯಲ್‌ ಮೀಡಿಯಾದಲ್ಲಿ ಕಾಲೆಳೆಯುವಂತೆ ಮಾಡಿದೆ.

    ಹೌದು. ಪಾಡ್‌ಕಾಸ್ಟ್‌ವೊಂದಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಅಭಿಮಾನಿಗಳು ಸೋಶಿಯಲ್‌ ಮೀಡಿಯಾಗಳಲ್ಲಿ ಕೇಳಲಾದ ಪ್ರಶ್ನೆಗಳಿಗೆ ರೌಟೆಲಾ ಉತ್ತರ ನೀಡುತ್ತಿದ್ದರು. ಇದೇ ವೇಳೆ ಆಂಕರ್‌, ʻರಿಷಭ್‌ ಪಂತ್ (Rishabh Pant) ನಿಮ್ಮನ್ನು ತುಂಬಾ ಗೌರವಿಸುತ್ತಾರೆ, ತುಂಬಾ ಚೆನ್ನಾಗಿಯೂ ನೋಡಿಕೊಳ್ಳುತ್ತಾರೆ, ನೀವು ಅವರನ್ನು ಮದುವೆಯಾಗಬೇಕು ಅನ್ನೋದು ನಮ್ಮ ಬಯಕೆ, ಇದಕ್ಕೆ ಏನಂತೀರಾ?ʼ ಎಂದು ನೆಟ್ಟಿಗನ ಪ್ರಶ್ನೆಯೊಂದನ್ನು ಪ್ರಸ್ತಾಪಿಸಿದರು. ಆದ್ರೆ ಊರ್ವಶಿ ಇದಕ್ಕೆ ನೋ ಕಾಮೆಂಟ್ಸ್‌ ಎನ್ನುತ ಮುಂದಿನ ಪ್ರಶ್ನೆಗೆ ಸಾಗಿದರು.

    ಇದೇ ವೇಳೆ ಪಾಕಿಸ್ತಾನ ತಂಡದ ಸ್ಟಾರ್‌ ಬೌಲರ್‌ ನಸೀಮ್‌ ಶಾ (Naseem Shah) ಬಗ್ಗೆ ಕೇಳಿದಾಗ, ಖುಷಿಯಿಂದಲೇ ಉತ್ತರಿಸಿದ ಊರ್ವಶಿ ಹ್ಯಾಶ್‌ಟ್ಯಾಗ್ (ಟ್ರೆಂಡಿಂಗ್‌) ಬೌಲರ್‌ ಎಂದು ಹೇಳಿದರು. ಮುಂದುವರಿದು, ನಸೀಮ್‌ ಒಳ್ಳೆಯ ಬೌಲರ್‌ ಭಾರತ ಮತ್ತು ಪಾಕಿಸ್ತಾನ ಪಂದ್ಯಗಳಲ್ಲಂತೂ ಹೆಚ್ಚು ಜನಪ್ರಿಯರಾಗಿದ್ದಾರೆ ಎಂದು ಹೇಳಿದ್ದಾರೆ. ಸದ್ಯ ನಟಿ ನೀಡಿರುವ ಪ್ರತಿಕ್ರಿಯೆಗೆ ಸೋಶಿಯಲ್‌ ಮೀಡಿಯಾದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವರು ನಟಿಯ ಕಾಲೆಳೆದಿದ್ದಾರೆ. ಇದನ್ನೂ ಓದಿ: ಕಿಚ್ಚನಿಗೆ ವಿಶೇಷ ಉಡುಗೊರೆ ಕೊಟ್ಟ ರಾಜಸ್ಥಾನ್‌ ರಾಯಲ್ಸ್‌ – ಧನ್ಯವಾದ ಹೇಳಿದ ಸುದೀಪ್‌

    ಹಿಂದೆಯೂ ಹಿಗ್ಗಾಮುಗ್ಗಾ ಟ್ರೋಲ್‌:
    2022ರ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಬೌಲಿಂಗ್‌ ಮಾಡುತ್ತಿದ್ದ ವೇಳೆ ನಸೀಮ್‌ ಶಾ, ಸಣ್ಣ ನಗೆ ಬೀರಿದ್ದ ವೀಡಿಯೋವನ್ನ ಊರ್ವಶಿ ರೌಟೇಲಾ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡು ಟ್ರೋಲ್‌ಗೆ ಗುರಿಯಾಗಿದ್ದರು. ಸಂದರ್ಶನದ ವೇಳೆ ಆಕೆ ಯಾರೂ ಅಂತಾನೇ ನನಗೆ ಗೊತ್ತಿಲ್ಲ ಎಂದು ನಸೀಮ್‌ ಶಾ ಊಹಾಪೋಹಗಳಿಗೆ ಬ್ರೇಕ್‌ ಹಾಕಿದ್ದರು. ಇದನ್ನೂ ಓದಿ:  ಪಾಕಿಸ್ತಾನಕ್ಕೆ ಸಪೋರ್ಟ್‌ ಮಾಡ್ತಿದ್ದಾರೆ ʻಐರಾವತʼಬೆಡಗಿ – ಊರ್ವಶಿ ರೌಟೇಲಾ ಕಾಲೆಳೆದ ಟ್ರೋಲ್‌ ಗೆಳೆಯರು

    ಊರ್ವಶಿಗೆ ಪಂತ್‌ ಜೊತೆ ಪ್ರೀತಿಯಿತ್ತಾ?
    ರಿಷಬ್ ಪಂತ್ ಜೊತೆ ಊರ್ವಶಿ ಈ ಮೊದಲು ಡೇಟಿಂಗ್ ಮಾಡುತ್ತಿದ್ದರು ಎಂಬ ಸುದ್ದಿ ಹರಿದಾಡುತ್ತಲೇ ಇತ್ತು. ಆದ್ರೆ ಇಬ್ಬರೂ ಅದನ್ನ ಒಪ್ಪಿಕೊಂಡಿರಲಿಲ್ಲ. ಈ ಮಧ್ಯೆ ಇಬ್ಬರ ನಡುವೆ ಬ್ರೇಕಪ್ ಆಗಿದೆ ಎಂಬ ಊಹಾಪೋಹಗಳು ಹರಿದಾಡಿದ್ದವು. ಆದ್ರೆ ನಟಿ ಊರ್ವಶಿ ಈ ಹಿಂದೆ ಅವರು ಮಾಧ್ಯಮವೊಂದಕ್ಕೆ ಹೇಳಿಕೆ ನೀಡುವಾಗ ರಿಷಭ್‌ ಪಂತ್ ನನ್ನ ಭೇಟಿ ಮಾಡಲು ಹಲವು ಗಂಟೆ ಕಾದಿದ್ದರು ಎಂದಿದ್ದರು. ಇದು ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿತ್ತು. ಈ ಬಗ್ಗೆ ಕ್ರಿಕೆಟಿಗ ರಿಷಭ್‌ ಕೂಡ ನಟಿಗೆ ಖಡಕ್ ಆಗಿ ತಿರುಗೇಟು ನೀಡಿದ್ದರು.

    14 ತಿಂಗಳ ಹಿಂದೆ ರಿಷಭ್‌ ಕಾರು ಅಪಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾಗ. ಅವರಿಗೆ ಚಿಕಿತ್ಸೆ ನೀಡುವ ಕೆಲಸ ಆಗುತ್ತಿತ್ತು. ಆಗಲೂ ಊರ್ವಶಿ ಅವರು ರಿಷಭ್‌ ಅವರನ್ನು ಹಿಂಬಾಲಿಸಿದ್ದರು. ರಿಷಬ್‌ಗೆ ಅಪಘಾತದ ವಿಚಾರ ತಿಳಿದಾಗ ʻಪ್ರಾರ್ಥನೆʼ (Prayer) ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಇದು ಪಂತ್‌ಗಾಗಿ ಹೇಳಿದ ಮಾತು ಎನ್ನಲಾಗಿತ್ತು.

  • ಚಿನ್ನದ ಒಳ ಉಡುಪು ಧರಿಸಿ ಫೋಟೋ ಶೇರ್ ಮಾಡಿಕೊಂಡ ಊರ್ವಶಿ

    ಚಿನ್ನದ ಒಳ ಉಡುಪು ಧರಿಸಿ ಫೋಟೋ ಶೇರ್ ಮಾಡಿಕೊಂಡ ಊರ್ವಶಿ

    ಬಾಲಿವುಡ್ ನಟಿ ಊರ್ವಶಿ ರೌಟೇಲಾ ವಜ್ರಖಚಿತ ಮೊಬೈಲ್ ಬಳಕೆ ಮಾಡುವ ಮೂಲಕ ಸಖತ್ ಸುದ್ದಿಯಾಗಿದ್ದರು. ಈ ಬಾರಿ ಚಿನ್ನದ ಒಳ ಉಡುಪು ಧರಿಸಿ ಪ್ರಚಾರ ಪಡೆಯುತ್ತಿದ್ದಾರೆ. ಆ ಫೋಟೋವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಅದು ಚಿನ್ನದ ಉಡುಪು ಅಂತ ಹೇಳದೇ ಇದ್ದರೂ, ಫ್ಯಾನ್ಸ್ ಮಾತ್ರ ಚಿನ್ನದ್ದಾ ಎಂದು ಕೇಳಿದ್ದಾರೆ.

    ಊರ್ವಶಿ ರೌಟೇಲಾ (Uravashi Rautela) ಮತ್ತು ರಿಷಬ್ ಪಂತ್  (Rishab Pant) ವಿಚಾರ ಆಗ್ಗಾಗ್ಗೆ ಸುದ್ದಿಯಲ್ಲಿರುತ್ತದೆ. ಮೊನ್ನೆಯಷ್ಟೇ ರಿಷಬ್ ಪಂತ್ ಹೈಟ್ ಬಗ್ಗೆ ಊರ್ವಶಿ ಟೀಕೆ ಮಾಡಿದ್ದರು. ಇದಕ್ಕೆ ಪಂತ್ ಅವರ ಅಭಿಮಾನಿಗಳು ರೊಚ್ಚಿಗೆದ್ದಿದ್ದರು. ಈ ಟೀಕೆಯ ಕುರಿತಂತೆ ನಟಿ ಸ್ಪಷ್ಟನೆ ನೀಡಿದ್ದಾರೆ. ಅದು ಜಾಹೀರಾತು ಒಂದರ ಡೈಲಾಗ್. ಅದಕ್ಕೂ ನನಗೂ ಸಂಬಂಧವಿಲ್ಲ. ನಾನು ರಿಷಬ್ ಬಗ್ಗೆ ನೆಗೆಟಿವ್ ಆಗಿ ಮಾತನಾಡುವುದಿಲ್ಲ ಎಂದಿದ್ದಾರೆ.

    ಜಾಹೀರಾತುವೊಂದರಲ್ಲಿ ತನ್ನೊಂದಿಗೆ ಸ್ನೇಹದಲ್ಲಿದ್ದವರ ಹೈಟ್ ಬಗ್ಗೆ ಟೀಕಿಸಿರುವ ಊರ್ವಶಿ, ಕ್ರಿಕೆಟಿಗನೊಬ್ಬನ ಹೈಟ್ ನನ್ನ ಎದೆಮುಟ್ಟುವಷ್ಟೂ ಇಲ್ಲ ಎಂದು ಪರೋಕ್ಷವಾಗಿ ಕುಳ್ಳ ಎಂದಿದ್ದರು. ಇದು ಭಾರೀ ವಿರೋಧಕ್ಕೆ ಕಾರಣವಾಗಿತ್ತು. ಊರ್ವಶಿಯನ್ನೂ ನಾನಾ ರೀತಿಯಲ್ಲಿ ಟ್ರೋಲ್ ಮಾಡಲಾಗಿತ್ತು. ಈ ಹಿಂದೆ ರಿಷಬ್ ಪಂತ್ ಅವರಿಗೆ ಕಾರು ಅಪಘಾತವಾಗಿತ್ತು. ಮುಂಬೈನ(Mumbai)  ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಿಷಬ್ ಹಿಂದೆಯೂ ಊರ್ವಶಿ ಬಿದ್ದಿದ್ದರು. ನಟಿಯ ವರ್ತನೆಗೆ ಅನೇಕರು ಛೀಮಾರಿ ಹಾಕಿದ್ದಾರೆ. ಜೊತೆಗೆ ಊರ್ವಶಿಯನ್ನು ತರಾಟೆಗೆ ತೆಗೆದುಕೊಂಡದ್ದರು.

     

    ರಿಷಬ್ ಪಂತ್ ಜೊತೆ ಊರ್ವಶಿ ಈ ಮೊದಲು ಡೇಟಿಂಗ್ ಮಾಡುತ್ತಿದ್ದರು ಎನ್ನಲಾಗಿತ್ತು. ಆದರೆ, ಇದನ್ನು ಇಬ್ಬರೂ ಒಪ್ಪಿಕೊಂಡಿರಲಿಲ್ಲ. ಈ ಮಧ್ಯೆ ಇಬ್ಬರ ನಡುವೆ ಬ್ರೇಕಪ್ ಆಗಿದೆ ಎನ್ನಲಾಯಿತು. ನಟಿ ಊರ್ವಶಿ ಈ ಹಿಂದೆ ಅವರು ಮಾಧ್ಯಮವೊಂದಕ್ಕೆ ಹೇಳಿಕೆ ನೀಡುವಾಗ ರಿಷಬ್ ಪಂತ್ ನನ್ನ ಭೇಟಿ ಮಾಡಲು ಹಲವು ಗಂಟೆ ಕಾದಿದ್ದರು ಎಂದಿದ್ದರು. ಇದು ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿತ್ತು. ಈ ಬಗ್ಗೆ ಕ್ರಿಕೆಟಿಗ ರಿಷಬ್ ಕೂಡ ನಟಿಗೆ ಖಡಕ್ ಆಗಿ ತಿರುಗೇಟು ನೀಡಿದ್ದರು.