Tag: Urvashi Rautela

  • ಕ್ರಿಕೆಟಿಗ ರಿಷಬ್ ಪಂತ್ ಕುರಿತು ಸ್ಪಷ್ಟನೆ ನೀಡಿದ ನಟಿ ಊರ್ವಶಿ

    ಕ್ರಿಕೆಟಿಗ ರಿಷಬ್ ಪಂತ್ ಕುರಿತು ಸ್ಪಷ್ಟನೆ ನೀಡಿದ ನಟಿ ಊರ್ವಶಿ

    ಟಿ ಊರ್ವಶಿ ರೌಟೇಲಾ (Uravashi Rautela) ಮತ್ತು ರಿಷಬ್ ಪಂತ್  (Rishab Pant) ವಿಚಾರ ಆಗ್ಗಾಗ್ಗೆ ಸುದ್ದಿಯಲ್ಲಿರುತ್ತದೆ. ಮೊನ್ನೆಯಷ್ಟೇ ರಿಷಬ್ ಪಂತ್ ಹೈಟ್ ಬಗ್ಗೆ ಊರ್ವಶಿ ಟೀಕೆ ಮಾಡಿದ್ದರು. ಇದಕ್ಕೆ ಪಂತ್ ಅವರ ಅಭಿಮಾನಿಗಳು ರೊಚ್ಚಿಗೆದ್ದಿದ್ದರು. ಈ ಟೀಕೆಯ ಕುರಿತಂತೆ ನಟಿ ಸ್ಪಷ್ಟನೆ ನೀಡಿದ್ದಾರೆ. ಅದು ಜಾಹೀರಾತು ಒಂದರ ಡೈಲಾಗ್. ಅದಕ್ಕೂ ನನಗೂ ಸಂಬಂಧವಿಲ್ಲ. ನಾನು ರಿಷಬ್ ಬಗ್ಗೆ ನೆಗೆಟಿವ್ ಆಗಿ ಮಾತನಾಡುವುದಿಲ್ಲ ಎಂದಿದ್ದಾರೆ.

    ಜಾಹೀರಾತುವೊಂದರಲ್ಲಿ ತನ್ನೊಂದಿಗೆ ಸ್ನೇಹದಲ್ಲಿದ್ದವರ ಹೈಟ್ ಬಗ್ಗೆ ಟೀಕಿಸಿರುವ ಊರ್ವಶಿ, ಕ್ರಿಕೆಟಿಗನೊಬ್ಬನ ಹೈಟ್ ನನ್ನ ಎದೆಮುಟ್ಟುವಷ್ಟೂ ಇಲ್ಲ ಎಂದು ಪರೋಕ್ಷವಾಗಿ ಕುಳ್ಳ ಎಂದಿದ್ದರು. ಇದು ಭಾರೀ ವಿರೋಧಕ್ಕೆ ಕಾರಣವಾಗಿತ್ತು. ಊರ್ವಶಿಯನ್ನೂ ನಾನಾ ರೀತಿಯಲ್ಲಿ ಟ್ರೋಲ್ ಮಾಡಲಾಗಿತ್ತು. ಈ ಹಿಂದೆ ರಿಷಬ್ ಪಂತ್ ಅವರಿಗೆ ಕಾರು ಅಪಘಾತವಾಗಿತ್ತು. ಮುಂಬೈನ(Mumbai)  ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಿಷಬ್ ಹಿಂದೆಯೂ ಊರ್ವಶಿ ಬಿದ್ದಿದ್ದರು. ನಟಿಯ ವರ್ತನೆಗೆ ಅನೇಕರು ಛೀಮಾರಿ ಹಾಕಿದ್ದಾರೆ. ಜೊತೆಗೆ ಊರ್ವಶಿಯನ್ನು ತರಾಟೆಗೆ ತೆಗೆದುಕೊಂಡದ್ದರು.

    ರಿಷಬ್ ಪಂತ್ ಜೊತೆ ಊರ್ವಶಿ ಈ ಮೊದಲು ಡೇಟಿಂಗ್ ಮಾಡುತ್ತಿದ್ದರು ಎನ್ನಲಾಗಿತ್ತು. ಆದರೆ, ಇದನ್ನು ಇಬ್ಬರೂ ಒಪ್ಪಿಕೊಂಡಿರಲಿಲ್ಲ. ಈ ಮಧ್ಯೆ ಇಬ್ಬರ ನಡುವೆ ಬ್ರೇಕಪ್ ಆಗಿದೆ ಎನ್ನಲಾಯಿತು. ನಟಿ ಊರ್ವಶಿ ಈ ಹಿಂದೆ ಅವರು ಮಾಧ್ಯಮವೊಂದಕ್ಕೆ ಹೇಳಿಕೆ ನೀಡುವಾಗ ರಿಷಬ್ ಪಂತ್ ನನ್ನ ಭೇಟಿ ಮಾಡಲು ಹಲವು ಗಂಟೆ ಕಾದಿದ್ದರು ಎಂದಿದ್ದರು. ಇದು ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿತ್ತು. ಈ ಬಗ್ಗೆ ಕ್ರಿಕೆಟಿಗ ರಿಷಬ್ ಕೂಡ ನಟಿಗೆ ಖಡಕ್ ಆಗಿ ತಿರುಗೇಟು ನೀಡಿದ್ದರು.

     

    ರಿಷಬ್ ಪಂತ್ ಕಾರು ಅಪಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾಗ. ಅವರಿಗೆ ಚಿಕಿತ್ಸೆ ನೀಡುವ ಕೆಲಸ ಆಗುತ್ತಿತ್ತು. ಆಗಲೂ ಊರ್ವಶಿ ಅವರು ರಿಷಬ್ ಅವರನ್ನು ಹಿಂಬಾಲಿಸಿದ್ದರು. ರಿಷಬ್‌ಗೆ ಅಪಘಾತದ ವಿಚಾರ ತಿಳಿದಾಗ ʻಪ್ರಾರ್ಥನೆʼ (Prayer) ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಇದು ರಿಷಬ್‌ಗಾಗಿ ಹೇಳಿದ ಮಾತು ಎನ್ನಲಾಗಿತ್ತು. ಊರ್ವಶಿ ತಾಯಿ, ರಿಷಬ್ ಬೇಗ ಚೇತರಿಕೆ ಕಾಣಲಿ ಎಂದು ಬರೆದುಕೊಂಡಿದ್ದರು. ಇದಕ್ಕಾಗಿ ಊರ್ವಶಿಯನ್ನು ನೆಟ್ಟಿಗರು ಟೀಕೆ ಮಾಡಿದ್ದರು.

  • ಕ್ರಿಕೆಟಿಗ ರಿಷಬ್ ಪಂತ್ ಹೈಟ್ ಬಗ್ಗೆ ಕಾಮೆಂಟ್ ಮಾಡಿದ ನಟಿ ಊರ್ವಶಿ

    ಕ್ರಿಕೆಟಿಗ ರಿಷಬ್ ಪಂತ್ ಹೈಟ್ ಬಗ್ಗೆ ಕಾಮೆಂಟ್ ಮಾಡಿದ ನಟಿ ಊರ್ವಶಿ

    ಟಿ ಊರ್ವಶಿ ರೌಟೇಲಾ (Uravashi Rautela) ಮತ್ತೆ ರಿಷಬ್ ಪಂತ್  (Rishab Pant) ವಿಷ್ಯವಾಗಿ ಸುದ್ದಿಯಲ್ಲಿದ್ದಾರೆ. ತನ್ನೊಂದಿಗೆ ಸ್ನೇಹದಲ್ಲಿದ್ದವರ ಹೈಟ್ ಬಗ್ಗೆ ಟೀಕಿಸಿರುವ ಊರ್ವಶಿ, ಕ್ರಿಕೆಟಿಗನೊಬ್ಬನ ಹೈಟ್ ನನ್ನ ಎದೆಮುಟ್ಟುವಷ್ಟೂ ಇಲ್ಲ ಎಂದು ಪರೋಕ್ಷವಾಗಿ ಕುಳ್ಳ ಎಂದಿದ್ದಾರೆ. ಊರ್ವಶಿ ವಿಚಾರವಾಗಿ ಪಂತ್ ಸುಮ್ಮನಿದ್ದರೂ, ಊರ್ವಶಿ ಮಾತ್ರ ಸುಮ್ಮನಿರುವಂತೆ ಕಾಣುತ್ತಿಲ್ಲ.

    ಈ ಹಿಂದೆ ರಿಷಬ್ ಪಂತ್ ಅವರಿಗೆ ಕಾರು ಅಪಘಾತವಾಗಿತ್ತು. ಮುಂಬೈನ(Mumbai)  ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಿಷಬ್ ಹಿಂದೆಯೂ ಊರ್ವಶಿ ಬಿದ್ದಿದ್ದರು. ನಟಿಯ ವರ್ತನೆಗೆ ಅನೇಕರು ಛೀಮಾರಿ ಹಾಕಿದ್ದಾರೆ. ಜೊತೆಗೆ ಊರ್ವಶಿಯನ್ನು ತರಾಟೆಗೆ ತೆಗೆದುಕೊಂಡದ್ದರು.

    ರಿಷಬ್ ಪಂತ್ ಜೊತೆ ಊರ್ವಶಿ ಈ ಮೊದಲು ಡೇಟಿಂಗ್ ಮಾಡುತ್ತಿದ್ದರು ಎನ್ನಲಾಗಿತ್ತು. ಆದರೆ, ಇದನ್ನು ಇಬ್ಬರೂ ಒಪ್ಪಿಕೊಂಡಿರಲಿಲ್ಲ. ಈ ಮಧ್ಯೆ ಇಬ್ಬರ ನಡುವೆ ಬ್ರೇಕಪ್ ಆಗಿದೆ ಎನ್ನಲಾಯಿತು. ನಟಿ ಊರ್ವಶಿ ಈ ಹಿಂದೆ ಅವರು ಮಾಧ್ಯಮವೊಂದಕ್ಕೆ ಹೇಳಿಕೆ ನೀಡುವಾಗ ರಿಷಬ್ ಪಂತ್ ನನ್ನ ಭೇಟಿ ಮಾಡಲು ಹಲವು ಗಂಟೆ ಕಾದಿದ್ದರು ಎಂದಿದ್ದರು. ಇದು ಸಾಕಷ್ಟು ಸೆನ್ಸೇಷನ್ ಸೃಷ್ಟಿ ಮಾಡಿತ್ತು. ಈ ಬಗ್ಗೆ ಕ್ರಿಕೆಟಿಗ ರಿಷಬ್ ಕೂಡ ನಟಿಗೆ ಖಡಕ್ ಆಗಿ ತಿರುಗೇಟು ನೀಡಿದ್ದರು.

     

    ರಿಷಬ್ ಪಂತ್ ಕಾರು ಅಪಘಾತಕ್ಕೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾಗ. ಅವರಿಗೆ ಚಿಕಿತ್ಸೆ ನೀಡುವ ಕೆಲಸ ಆಗುತ್ತಿತ್ತು. ಆಗಲೂ ಊರ್ವಶಿ ಅವರು ರಿಷಬ್ ಅವರನ್ನು ಹಿಂಬಾಲಿಸಿದ್ದರು. ರಿಷಬ್‌ಗೆ ಅಪಘಾತದ ವಿಚಾರ ತಿಳಿದಾಗ ʻಪ್ರಾರ್ಥನೆʼ (Prayer) ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ಇದು ರಿಷಬ್‌ಗಾಗಿ ಹೇಳಿದ ಮಾತು ಎನ್ನಲಾಗಿತ್ತು. ಊರ್ವಶಿ ತಾಯಿ, ರಿಷಬ್ ಬೇಗ ಚೇತರಿಕೆ ಕಾಣಲಿ ಎಂದು ಬರೆದುಕೊಂಡಿದ್ದರು. ಇದಕ್ಕಾಗಿ ಊರ್ವಶಿಯನ್ನು ನೆಟ್ಟಿಗರು ಟೀಕೆ ಮಾಡಿದ್ದರು.

  • ಚುನಾವಣೆ ಹೊತ್ತಲ್ಲಿ ಜೆಎನ್.ಯು ಸಿನಿಮಾ ಪೋಸ್ಟರ್ ರಿಲೀಸ್: ವಾದ-ವಿವಾದ

    ಚುನಾವಣೆ ಹೊತ್ತಲ್ಲಿ ಜೆಎನ್.ಯು ಸಿನಿಮಾ ಪೋಸ್ಟರ್ ರಿಲೀಸ್: ವಾದ-ವಿವಾದ

    ವಿವಾದಿತ ವಿಷಯಗಳನ್ನಿಟ್ಟುಕೊಂಡು ಬಾಲಿವುಡ್ ನಿರ್ದೇಶಕರು ಹೆಚ್ಚೆಚ್ಚು ಸಿನಿಮಾ ಮಾಡುತ್ತಿದ್ದಾರೆ. ಬಹುತೇಕ ಚಿತ್ರಗಳು ಹೆಚ್ಚ ಪ್ರಚಾರದೊಂದಿಗೆ ಬಾಕ್ಸ್ ಆಫೀಸಿನಲ್ಲೂ ಗೆಲ್ಲುತ್ತಿವೆ. ಅಂತಹ ಚಿತ್ರಗಳ ಸಾಲಿಗೆ ಇದೀಗ  ಜೆಎನ್.ಯು (JNU) ಸಿನಿಮಾ ಕೂಡ ಸೇರಿಕೊಂಡಿದೆ. ಈ ಚಿತ್ರದ ಪೋಸ್ಟರ್ ರಿಲೀಸ್ ಆಗಿದ್ದು, ಭಾರೀ ಪರ ಮತ್ತು ವಿರೋಧಕ್ಕೂ ಕಾರಣವಾಗಿದೆ.

    ಜೆ.ಎನ್.ಯು ಅಂದರೆ ಜವಾಹರಲಾಲ್ ನೆಹರೂ ಯೂನಿವರ್ಸಿಟಿ. ಈ ವಿಶ್ವವಿದ್ಯಾಲಯ ನಾನಾ ಕಾರಣಗಳಿಂದ ಸದ್ದು ಮಾಡುತ್ತಲೇ ಇದೆ. ಎಡ ಮತ್ತು ಬಲ ವಿದ್ಯಾರ್ಥಿ ಸಂಘಟನೆಗಳು ಕಾರಣದಿಂದಾಗಿ ಬೇಡದ ವಿಷಯಕ್ಕೆಲ್ಲ ವಿಶ್ವ ವಿದ್ಯಾಲಯವನ್ನು ಬಳಸಿಕೊಳ್ಳಲಾಗಿದೆ. ಇದನ್ನೇ ಇಟ್ಟುಕೊಂಡು ಜೆಎನ್.ಯು ಸಿನಿಮಾ ಮಾಡಲಾಗಿದೆ.

    ಸದ್ಯ ರಿಲೀಸ್ ಆಗಿರುವ ಪೋಸ್ಟರ್ ನಲ್ಲಿ  ಜೆಎನ್.ಯು ಅಂದರೆ ಜಹಾಂಗೀರ್ ನ್ಯಾಷನಲ್ ಯೂನಿವರ್ಸಿಟಿ ಎಂದು ತೋರಿಸಲಾಗಿದೆ. ಪೋಸ್ಟರ್ ಮಧ್ಯ ಭಾರತದ ನಕ್ಷೆ ಇದ್ದು, ಒಂದು ಶೈಕ್ಷಣಿಕ ಸಂಸ್ಥೆ ರಾಷ್ಟ್ರವನ್ನು ಒಡೆಯಬಹುದೆ? ಎನ್ನುವ ಪ್ರಶ್ನೆಯನ್ನೂ ಮಾಡಲಾಗಿದೆ. ಈ ಸಾಲುಗಳೇ ಅನೇಕರನ್ನು ಕೆರಳಿಸಿವೆ. ಹಾಗಾಗಿ ಇದೊಂದು ಪ್ರೊಪೊಗಾಂಡ ಸಿನಿಮಾ ಎಂದು ಜರದಿದ್ದಾರೆ.

     

    ಏಪ್ರಿಲ್ 5ರಂದು ಈ ಸಿನಿಮಾವನ್ನು ತೆರೆಗೆ ತರಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಚುನಾವಣೆ ಹೊತ್ತಿನಲ್ಲಿ ಈ ಚಿತ್ರವನ್ನು ಬಿಡುಗಡೆ ಮಾಡುತ್ತಿರುವುದು ಅನುಮಾನಕ್ಕೆ ಕಾರಣವಾಗಿದೆ. ಈ ಚಿತ್ರದಲ್ಲಿ ಊರ್ವಶಿ ರೌಟೇಲ (Urvashi Rautela) ಪ್ರಮುಖ ಪಾತ್ರವನ್ನು ಮಾಡಿದ್ದು, ಈ ಪಾತ್ರದ ಹಿನ್ನೆಲೆಯನ್ನು ಸಿನಿಮಾದಲ್ಲಿಯೇ ನೋಡಬೇಕು.

  • ಅಬ್ಬಬ್ಬಾ! ಗೋಲ್ಡ್ ಕೇಕ್ ಕಟ್ ಮಾಡಿ ಸಂಭ್ರಮಿಸಿದ ‘ಐರಾವತ’ ನಟಿ

    ಅಬ್ಬಬ್ಬಾ! ಗೋಲ್ಡ್ ಕೇಕ್ ಕಟ್ ಮಾಡಿ ಸಂಭ್ರಮಿಸಿದ ‘ಐರಾವತ’ ನಟಿ

    ನ್ನಡದ ‘ಐರಾವತ’ ನಟಿ ಊರ್ವಶಿ (Urvashi Rautela) ಇಂದು (ಫೆ.25) ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಸಿಂಗರ್ ಹನಿ ಸಿಂಗ್ ಉಪಸ್ಥಿತಿಯಲ್ಲಿ ಗೋಲ್ಡ್ ಕೇಕ್ ಕಟ್ ಮಾಡಿ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ನಟಿ ಆಚರಿಸಿದ್ದಾರೆ. ಬರ್ತ್‌ಡೇಯ (Birthday) ಸುಂದರ ಫೋಟೋಗಳನ್ನು ನಟಿ ಹಂಚಿಕೊಂಡಿದ್ದಾರೆ.

    ಸದ್ಯ ನಟಿ ‘ಲವ್ ಡೋಸ್ 2’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾದ ಸೆಟ್‌ನಲ್ಲಿ ಊರ್ವಶಿ ಬರ್ತ್‌ಡೇ ಸೆಲೆಬ್ರೇಶನ್ ನಡೆದಿದೆ. ಗೋಲ್ಡ್ ಪ್ಲೇಟೆಡ್ ಕೇಕ್ ಕತ್ತರಿಸಿ ನಟಿ ಸಂಭ್ರಮಿಸಿದ್ದಾರೆ. ಖ್ಯಾತ ಸಿಂಗರ್ ಹನಿ ಸಿಂಗ್ (Yo Yo Honey Singh) ಈ ಸಂಭ್ರಮದಲ್ಲಿ ಭಾಗಿಯಾಗಿದ್ದು ವಿಶೇಷ. ಹನಿ ಸಿಂಗ್‌ರನ್ನು ನಟಿ ತಬ್ಬಿಕೊಂಡಿರುವ ಫೋಟೋ ನೋಡಿ, ಹೊಸ ಬಾಯ್‌ಫ್ರೆಂಡ್‌ ಅಂತ ಸೋಷಿಯಲ್‌ ಮೀಡಿಯಾದಲ್ಲಿ ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ.

    ನನ್ನ ಬಗ್ಗೆ ನಿಜವಾದ ಕಾಳಜಿ ನನ್ನ ವೃತ್ತಿಜೀವನದಲ್ಲಿ ಅದ್ಭುತ ಅಧ್ಯಾಯವನ್ನು ರಚಿಸಿದೆ. ನನ್ನ ಭಾವನೆಗಳ ಆಳವನ್ನು ನಿಮಗಾಗಿ ಹಿಡಿದಿರುತ್ತೇನೆ. ನಿಮ್ಮ ಸಮಯಕ್ಕಾಗಿ ಧನ್ಯವಾಗಳು ಎಂದು ಹನಿ ಸಿಂಗ್‌ಗೆ ಬರೆದಿದ್ದಾರೆ ಊರ್ವಶಿ. ಇದನ್ನೂ ಓದಿ:ಸಮರ್ಜಿತ್ ಲಂಕೇಶ್ ಜೊತೆ ತಾನ್ಯ ಡಾನ್ಸ್ : ಇದು ಪುನೀತ್ ಹುಟ್ಟುಹಬ್ಬಕ್ಕೆ ಗಿಫ್ಟ್

    ಈ ಹಿಂದೆ ಓವರ್ ಮೇಕಪ್ ಮಾಡಿರುವ ಫೋಟೋ ಶೇರ್ ಮಾಡ್ತಿದ್ದಂತೆ ಐರಾವತ ನಟಿಗೆ ನೆಟ್ಟಿಗರು ಕ್ಲಾಸ್ ತೆಗೆದುಕೊಂಡಿದ್ದಾರೆ. ಓವರ್ ಮೇಕಪ್ ಮಾಡಿಕೊಳ್ಳಬೇಡಿ. ಮಲಗುವಾಗಲೂ ಮೇಕಪ್ ತೆಗೆಯಲ್ಲ ಅನಿಸುತ್ತೆ ಎಂದೆಲ್ಲಾ ನೆಟ್ಟಿಗರು ಬಗೆ ಬಗೆಯ ಕಾಮೆಂಟ್ ಮಾಡಿದ್ದರು. ಒಟ್ನಲ್ಲಿ ಊರ್ವಶಿ ಹೊಸ ಲುಕ್ ಟ್ರೋಲಿಗರ ಬಾಯಿಗೆ ಆಹಾರವಾಗಿತ್ತು.

    ಊರ್ವಶಿ ಸುಂದರವಾಗಿ ರೆಡಿಯಾಗಿದ್ದರು. ಅವರ ಓವರ್ ಮೇಕಪ್‌ಗೆ ಟ್ರೋಲ್ ಆಗ್ತಿದ್ದರು. ಅವರಿಗೆ ಟ್ರೋಲ್ ಆಗೋದು ಇದೇ ಮೊದಲ ಬಾರಿ ಏನೇನಲ್ಲ. ಸಿನಿಮಾಗಿಂತ ಊರ್ವಶಿ ಅವರು ಕಾಂಟ್ರವರ್ಸಿ, ಟ್ರೋಲ್‌ನಿಂದಲೇ ಹೆಚ್ಚೆಚ್ಚು ಸುದ್ದಿಯಾಗಿದ್ದಾರೆ.

    ಡಿಬಾಸ್ (Darshan) ನಾಯಕಿ, ‘ಐರಾವತ’ ನಟಿ ಊರ್ವಶಿ ಅವರು ಕನ್ನಡ, ತೆಲುಗು, ಹಿಂದಿ ಸೇರಿದಂತೆ ಬಹುಭಾಷಾ ನಟಿಯಾಗಿ ಬ್ಯುಸಿಯಾಗಿದ್ದಾರೆ. ಸಾಕಷ್ಟು ಜಾಹೀರಾತುಗಳಿಗೆ ರೂಪದರ್ಶಿಯಾಗಿ ಕೂಡ ಕಾಣಿಸಿಕೊಂಡಿದ್ದಾರೆ.

  • ಓವರ್ ಮೇಕಪ್‌ಗೆ ಟ್ರೋಲ್ ಆದ ಊರ್ವಶಿ ರೌಟೇಲಾ

    ಓವರ್ ಮೇಕಪ್‌ಗೆ ಟ್ರೋಲ್ ಆದ ಊರ್ವಶಿ ರೌಟೇಲಾ

    ‘ಐರಾವತ’ ಬೆಡಗಿ ಊರ್ವಶಿ ರೌಟೇಲಾ (Urvashi Rautela) ಅವರು ಇದೀಗ ಹೊಸ ಫೋಟೋಶೂಟ್‌ನಲ್ಲಿ ಮಿಂಚಿದ್ದಾರೆ. ಹೊಸ ಫೋಟೋದಲ್ಲಿನ ಊರ್ವಶಿ ಓವರ್ ಮೇಕಪ್ ನೋಡಿ ನೆಟ್ಟಿಗರು ಸಖತ್ ಟ್ರೋಲ್ ಮಾಡ್ತಿದ್ದಾರೆ. ಸದ್ಯ ನಟಿಯ ನಯಾ ಲುಕ್ ಸಖತ್ ವೈರಲ್ ಆಗುತ್ತಿದೆ.

    ಸದಾ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ಊರ್ವಶಿ ರೌಟೇಲಾ ಸದ್ದು ಮಾಡುತ್ತಲೇ ಇರುತ್ತಾರೆ. ಈಗ ಸುಂದರವಾದ ಮಿನುಗುವ ಡ್ರೆಸ್‌ನಲ್ಲಿ ಕ್ಯಾಮೆರಾ ಕಣ್ಣಿಗೆ ನಟಿ ಪೋಸ್ ನೀಡಿದ್ದಾರೆ. ಗ್ಲ್ಯಾಮರಸ್ ಆಗಿ ಊರ್ವಶಿ ಕಾಣಿಸಿಕೊಂಡಿದ್ದಾರೆ.

    ಈ ಹೊಸ ಫೋಟೋ ಶೇರ್ ಮಾಡ್ತಿದ್ದಂತೆ ಐರಾವತ ನಟಿಗೆ ನೆಟ್ಟಿಗರು ಕ್ಲಾಸ್ ತೆಗೆದುಕೊಂಡಿದ್ದಾರೆ. ಓವರ್ ಮೇಕಪ್ ಮಾಡಿಕೊಳ್ಳಬೇಡಿ. ಮಲಗುವಾಗಲೂ ಮೇಕಪ್ ತೆಗೆಯಲ್ಲ ಅನಿಸುತ್ತೆ ಎಂದೆಲ್ಲಾ ನೆಟ್ಟಿಗರು ಬಗೆ ಬಗೆಯ ಕಾಮೆಂಟ್ ಮಾಡಿದ್ದಾರೆ. ಒಟ್ನಲ್ಲಿ ಊರ್ವಶಿ ಹೊಸ ಲುಕ್ ಟ್ರೋಲಿಗರ (Troll) ಬಾಯಿಗೆ ಆಹಾರವಾಗಿದೆ.

    ಊರ್ವಶಿ ಸುಂದರವಾಗಿ ರೆಡಿಯಾಗಿದ್ದಾರೆ. ಅವರ ಓವರ್ ಮೇಕಪ್‌ಗೆ ಟ್ರೋಲ್ ಆಗ್ತಿದ್ದಾರೆ. ಅವರಿಗೆ ಟ್ರೋಲ್ ಆಗೋದು ಇದೇ ಮೊದಲ ಬಾರಿ ಏನೇನಲ್ಲ.‌ ಇದನ್ನೂ ಓದಿ:ಇಂದ್ರಜಿತ್ ಲಂಕೇಶ್ ಸಿನಿಮಾದಲ್ಲಿ ‘ಸಲಗ’ ಬ್ಯೂಟಿ ಸಂಜನಾ ಆನಂದ್‌

    ‘ಐರಾವತ’ ನಟಿ ಊರ್ವಶಿ ಕನ್ನಡ, ತೆಲುಗು, ಹಿಂದಿ ಸೇರಿದಂತೆ ಬಹುಭಾಷಾ ನಟಿಯಾಗಿ ಬ್ಯುಸಿಯಾಗಿದ್ದಾರೆ. ಸಾಕಷ್ಟು ಜಾಹೀರಾತುಗಳಿಗೆ ರೂಪದರ್ಶಿಯಾಗಿ ಕೂಡ ಕಾಣಿಸಿಕೊಂಡಿದ್ದಾರೆ.

  • ನಿಮ್ಮ ಚಿನ್ನದ ಮೊಬೈಲ್ ನನಗೆ ಸಿಕ್ಕಿದೆ, ನನ್ನ ಬೇಡಿಕೆ ಈಡೇರಿಸ್ತೀರಾ? ನಟಿಗೆ ಬಂತು ಇ-ಮೇಲ್

    ನಿಮ್ಮ ಚಿನ್ನದ ಮೊಬೈಲ್ ನನಗೆ ಸಿಕ್ಕಿದೆ, ನನ್ನ ಬೇಡಿಕೆ ಈಡೇರಿಸ್ತೀರಾ? ನಟಿಗೆ ಬಂತು ಇ-ಮೇಲ್

    ಇಂಡೋ-ಪಾಕ್ ಕ್ರಿಕೆಟ್ ಪಂದ್ಯ ವೇಳೆ ಬಾಲಿವುಡ್ ನಟಿ ಊರ್ವಶಿ ರೌಟೇಲಾ ತಮ್ಮ ಚಿನ್ನದ ಮೊಬೈಲ್ (Gold Mobile) ಕಳೆದುಕೊಂಡಿದ್ದರು. ಯಾರಿಗಾದರೂ ಈ ಮೊಬೈಲ್ ಸಿಕ್ಕಿದ್ದರೆ ಹಿಂದುರಿಗಿಸುವಂತೆ ಕೇಳಿಕೊಂಡಿದ್ದರು. ಕೊನೆಗೂ ಮೊಬೈಲ್ ಸಿಕ್ಕಿದೆ. ಆದರೆ, ಆ ಮೊಬೈಲ್ ಅನ್ನು ವಾಪಸ್ಸು ಪಡೆಯಲು ಅವರು ಬೇಡಿಕೆಯೊಂದನ್ನು ಈಡೇರಿಸಬೇಕಿದೆ. ಹಾಗಂತ ಅವರಿಗೆ ಇ-ಮೇಲ್ ಬಂದಿದೆ.

    ಗ್ರೋವ್ ಟ್ರೇಡರ್ಸ್ ಹೆಸರಿನಲ್ಲಿ ಊರ್ವಶಿಗೆ ಇ-ಮೇಲ್ ಬಂದಿದ್ದು. ತಮ್ಮ ಮೊಬೈಲ್ ನನಗೆ ಸಿಕ್ಕಿದೆ. ಅದನ್ನು ನಿಮಗೆ ವಾಪಸ್ಸು ಮಾಡಲು ನನ್ನ ಬೇಡಿಕೆಯೊಂದಿಗೆ ಈಡೇರಿಸಬೇಕು. ನನ್ನ ಸಹೋದರ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ. ಅವರ ಚಿಕಿತ್ಸೆಗೆ ನೆರವಾಗಿ ಎಂದು ಕೇಳಿಕೊಂಡಿದ್ದಾರೆ. ಉರ್ವಶಿ ಕೂಡ ಅದಕ್ಕೆ ಸಮ್ಮತಿ ಸೂಚಿಸಿದ್ದಾರೆ.

    ಬಹುಮಾನ ಘೋಷಿಸಿದ್ದ ಊರ್ವಶಿ

    ಊರ್ವಶಿ ರೌಟೇಲಾ (Urvashi Rautela) ಮೊನ್ನೆಯಷ್ಟೇ ತಮ್ಮ ದುಬಾರಿ ಮೊಬೈಲ್ ಕಳೆದುಕೊಂಡಿದ್ದರು. ನಿನ್ನೆವರೆಗೂ ಆ ಫೋನ್ (Mobile) ಪತ್ತೆಯಾಗಿರಲಿಲ್ಲ. ಅಲ್ಲದೇ, ಕೊನೆಯ ಬಾರಿಗೆ ಅದು ಯಾವ ಲೋಕೇಶನ್ ನಲ್ಲಿ ಇತ್ತು ಎನ್ನುವುದನ್ನು ಹೇಳಿಕೊಂಡಿದ್ದರು. ಈಗಾಗಲೇ ಪೊಲೀಸರಿಗೆ ದೂರು ನೀಡಿದ್ದರಿಂದ ತನ್ನ ಮೊಬೈಲ್ ಸಿಕ್ಕವರು ಕೂಡಲೇ ನನ್ನನ್ನು ಸಂಪರ್ಕಿಸಿ ಎಂದು ಕೇಳಿಕೊಂಡಿದ್ದರು.

    ಮೊಬೈಲ್ ತಂದುಕೊಟ್ಟವರಿಗೆ ಬಹುಮಾನ ನೀಡುವುದಾಗಿಯೂ ಅವರು ಹೇಳಿಕೊಂಡಿದ್ದರು. ಆ ಬಹುಮಾನ ಯಾವುದು ಎನ್ನುವುದನ್ನು ತಿಳಿಸಿರಲಿಲ್ಲ. ಮೊಬೈಲ್‍ ಕಳೆದುಕೊಂಡಿರುವ ಕುರಿತು ಪೊಲೀಸರು ಕೂಡ ಕಾಳಜಿ ವಹಿಸಿದ್ದು, ಊರ್ವಶಿ ಮೊಬೈಲ್ ಬೇಗ ಸಿಗಲಿ ಎಂದು ಹಾರೈಸಿದ್ದರು. ಹಾರೈಕೆ ಇದೀಗ ನಿಜವಾಗಿದೆ

    ಕಳೆದದ್ದು ಹೇಗೆ?

    ಅಕ್ಟೋಬರ್ 14ರಂದು ನಡೆದ ಭಾರತ- ಪಾಕಿಸ್ತಾನ ಕ್ರಿಕೆಟ್ (Cricket) ಪಂದ್ಯಾವಳಿ ನೋಡಲು ಹಲವು ಜನಪ್ರಿಯ ಸೆಲೆಬ್ರಿಟಿಗಳು ಆಗಮಿಸಿದ್ದರು. ಈ ವೇಳೆ, ಐರಾವತ ನಟಿ ಊರ್ವಶಿ ರೌಟೇಲಾ ಕೂಡ ಬಂದಿದ್ದರು. ಪಂದ್ಯ ನೋಡುವಾಗ ಅವರು ಅತ್ಯಂತ ದುಬಾರಿ ಚಿನ್ನದ ಐಫೋನ್ ಕಳೆದುಕೊಂಡಿರೋದಾಗಿ ಸೋಷಿಯಲ್ ಮೀಡಿಯಾದಲ್ಲಿ ಅಳಲು ತೋಡಿಕೊಂಡಿದ್ದರು

    ನನ್ನ 24 ಕ್ಯಾರೆಟ್ ಚಿನ್ನದ ಐಫೋನ್ ಅನ್ನು ಅಹಮದಾಬಾದ್‌ನ (Ahmedabad) ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ-ಪಾಕಿಸ್ತಾನ ಮ್ಯಾಚ್ ನಡೆಯುವಾಗ ಕಳೆದುಕೊಂಡಿದ್ದೇನೆ. ದಯವಿಟ್ಟು ಸಹಾಯ ಮಾಡಿ, ಯಾರಿಗಾದರೂ ಮೊಬೈಲ್ ಸಿಕ್ಕರೆ ಮರಳಿಸಿ, ಅಥವಾ ನನ್ನನ್ನು ಸಂಪರ್ಕಿಸಿ ಎಂದು ಊರ್ವಶಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ತಮ್ಮ ಈ ಪೋಸ್ಟ್ ಅನ್ನು ಅಹಮದಾಬಾದ್ ಪೊಲೀಸರಿಗೆ ಹಾಗೂ ನರೇಂದ್ರ ಮೋದಿ ಸ್ಟೇಡಿಯಂನ ಅಧಿಕೃತ ಟ್ವಿಟ್ಟರ್ ಖಾತೆಗೆ ಟ್ಯಾಗ್ ಮಾಡಿದ್ದರು.

     

    ನಟಿ ಊರ್ವಶಿ ಇದೀಗ ಶೇರ್ ಮಾಡಿರುವ ಪೋಸ್ಟ್ ಕೂಡ ಸಖತ್ ಟ್ರೋಲ್ ಆಗುತ್ತಿದೆ. ಸುದ್ದಿಯಾಗಲು ಸದಾ ಒಂದಲ್ಲಾ ಒಂದು ಗಿಮಿಕ್ ಮಾಡುತ್ತಿರುತ್ತಾರೆ ಎಂದು ನೆಟ್ಟಿಗರು ನಟಿಯ ವಿರುದ್ಧ ಕಿಡಿಕಾರಿದ್ದರು. ಐಫೋನ್ ಕಳೆದುಕೊಂಡಿದ್ದಾರೆ ಎಂಬ ವಿಚಾರವೇ ಸುಳ್ಳು ಎಂದು ಸೋಷಿಯಲ್ ಮೀಡಿಯಾದಲ್ಲಿ ನಟಿಯ ಬಗ್ಗೆ ಪರ ವಿರೋಧದ ಚರ್ಚೆ ಕೂಡ ನಡೆದಿತ್ತು. ಆನಂತರ ನಟಿ ಕಂಪ್ಲೆಂಟ್ ಕೊಟ್ಟ ಮಾಹಿತಿ ಹೊರ ಬಿದ್ದಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಫೋನ್ ತಂದುಕೊಟ್ಟವರಿಗೆ ಬಹುಮಾನ ಘೋಷಿಸಿದ ನಟಿ ಊರ್ವಶಿ

    ಫೋನ್ ತಂದುಕೊಟ್ಟವರಿಗೆ ಬಹುಮಾನ ಘೋಷಿಸಿದ ನಟಿ ಊರ್ವಶಿ

    ಬಾಲಿವುಡ್ ಖ್ಯಾತ ನಟಿ ಊರ್ವಶಿ ರೌಟೇಲಾ (Urvashi Rautela) ಮೊನ್ನೆಯಷ್ಟೇ ತಮ್ಮ ದುಬಾರಿ ಮೊಬೈಲ್ ಕಳೆದುಕೊಂಡಿದ್ದರು. ಈವರೆಗೂ ಆ ಫೋನ್ (Mobile) ಪತ್ತೆಯಾಗಿಲ್ಲ. ಅಲ್ಲದೇ, ಕೊನೆಯ ಬಾರಿಗೆ ಅದು ಯಾವ ಲೋಕೇಶನ್ ನಲ್ಲಿ ಇತ್ತು ಎನ್ನುವುದನ್ನು ಹೇಳಿಕೊಂಡಿದ್ದಾರೆ. ಈಗಾಗಲೇ ಪೊಲೀಸರಿಗೆ ದೂರು ನೀಡಿದ್ದರಿಂದ ತನ್ನ ಮೊಬೈಲ್ ಸಿಕ್ಕವರು ಕೂಡಲೇ ನನ್ನನ್ನು ಸಂಪರ್ಕಿಸಿ ಎಂದು ಕೇಳಿಕೊಂಡಿದ್ದಾರೆ.

    ಮೊಬೈಲ್ ತಂದುಕೊಟ್ಟವರಿಗೆ ಬಹುಮಾನ ನೀಡುವುದಾಗಿ ಹೇಳಿರುವ ಊರ್ವಶಿ, ಆ ಬಹುಮಾನ ಯಾವುದು ಎನ್ನುವುದನ್ನು ತಿಳಿಸಿಲ್ಲ. ಮೊಬೈಲ್‍್‍ ಕಳೆದುಕೊಂಡಿರುವ ಕುರಿತು ಪೊಲೀಸರು ಕೂಡ ಕಾಳಜಿ ವಹಿಸಿದ್ದು, ಊರ್ವಶಿ ಮೊಬೈಲ್ ಬೇಗ ಸಿಗಲಿ ಎಂದು ಹಾರೈಸಿದ್ದಾರೆ.

    ಕಳೆದದ್ದು ಹೇಗೆ?

    ಅಕ್ಟೋಬರ್ 14ರಂದು ನಡೆದ ಭಾರತ- ಪಾಕಿಸ್ತಾನ ಕ್ರಿಕೆಟ್ (Cricket) ಪಂದ್ಯಾವಳಿ ನೋಡಲು ಹಲವು ಜನಪ್ರಿಯ ಸೆಲೆಬ್ರಿಟಿಗಳು ಆಗಮಿಸಿದ್ದರು. ಈ ವೇಳೆ, ಐರಾವತ ನಟಿ ಊರ್ವಶಿ ರೌಟೇಲಾ ಕೂಡ ಬಂದಿದ್ದರು. ಪಂದ್ಯ ನೋಡುವಾಗ ಅವರು ಅತ್ಯಂತ ದುಬಾರಿ ಚಿನ್ನದ ಐಫೋನ್ ಕಳೆದುಕೊಂಡಿರೋದಾಗಿ ಸೋಷಿಯಲ್ ಮೀಡಿಯಾದಲ್ಲಿ ಅಳಲು ತೋಡಿಕೊಂಡಿದ್ದರು.

    ನನ್ನ 24 ಕ್ಯಾರೆಟ್ ಚಿನ್ನದ ಐಫೋನ್ ಅನ್ನು ಅಹಮದಾಬಾದ್‌ನ (Ahmedabad) ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ-ಪಾಕಿಸ್ತಾನ ಮ್ಯಾಚ್ ನಡೆಯುವಾಗ ಕಳೆದುಕೊಂಡಿದ್ದೇನೆ. ದಯವಿಟ್ಟು ಸಹಾಯ ಮಾಡಿ, ಯಾರಿಗಾದರೂ ಮೊಬೈಲ್ ಸಿಕ್ಕರೆ ಮರಳಿಸಿ, ಅಥವಾ ನನ್ನನ್ನು ಸಂಪರ್ಕಿಸಿ ಎಂದು ಊರ್ವಶಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು. ತಮ್ಮ ಈ ಪೋಸ್ಟ್ ಅನ್ನು ಅಹಮದಾಬಾದ್ ಪೊಲೀಸರಿಗೆ ಹಾಗೂ ನರೇಂದ್ರ ಮೋದಿ ಸ್ಟೇಡಿಯಂನ ಅಧಿಕೃತ ಟ್ವಿಟ್ಟರ್ ಖಾತೆಗೆ ಟ್ಯಾಗ್ ಮಾಡಿದ್ದರು.

     

    ನಟಿ ಊರ್ವಶಿ ಇದೀಗ ಶೇರ್ ಮಾಡಿರುವ ಪೋಸ್ಟ್ ಕೂಡ ಸಖತ್ ಟ್ರೋಲ್ ಆಗುತ್ತಿದೆ. ಸುದ್ದಿಯಾಗಲು ಸದಾ ಒಂದಲ್ಲಾ ಒಂದು ಗಿಮಿಕ್ ಮಾಡುತ್ತಿರುತ್ತಾರೆ ಎಂದು ನೆಟ್ಟಿಗರು ನಟಿಯ ವಿರುದ್ಧ ಕಿಡಿಕಾರಿದ್ದರು. ಐಫೋನ್ ಕಳೆದುಕೊಂಡಿದ್ದಾರೆ ಎಂಬ ವಿಚಾರವೇ ಸುಳ್ಳು ಎಂದು ಸೋಷಿಯಲ್ ಮೀಡಿಯಾದಲ್ಲಿ ನಟಿಯ ಬಗ್ಗೆ ಪರ ವಿರೋಧದ ಚರ್ಚೆ ಕೂಡ ನಡೆದಿತ್ತು. ಆನಂತರ ನಟಿ ಕಂಪ್ಲೆಂಟ್ ಕೊಟ್ಟ ಮಾಹಿತಿ ಹೊರ ಬಿದ್ದಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭಾರತ-ಪಾಕ್ ಪಂದ್ಯದ ವೇಳೆ ಚಿನ್ನದ ಫೋನ್ ಕಳೆದುಕೊಂಡ ಊರ್ವಶಿ

    ಭಾರತ-ಪಾಕ್ ಪಂದ್ಯದ ವೇಳೆ ಚಿನ್ನದ ಫೋನ್ ಕಳೆದುಕೊಂಡ ಊರ್ವಶಿ

    ಬಾಲಿವುಡ್ ನಟಿ ಊರ್ವಶಿ ರೌಟೇಲಾ (Urvashi Rautela) ಅವರು ಸದಾ ಒಂದಲ್ಲಾ ಒಂದು ವಿಚಾರವಾಗಿ ಸುದ್ದಿಯಾಗುತ್ತಲೇ ಇರುತ್ತಾರೆ. ಅ.14ರಂದು ನಡೆದ ಭಾರತ- ಪಾಕಿಸ್ತಾನ ಕ್ರಿಕೆಟ್ ಪಂದ್ಯಾವಳಿ ನೋಡಲು ಹಲವು ಜನಪ್ರಿಯ ಸೆಲೆಬ್ರಿಟಿಗಳು ಆಗಮಿಸಿದ್ದರು. ಈ ವೇಳೆ, ಐರಾವತ ನಟಿ ಊರ್ವಶಿ ರೌಟೇಲಾ ಕೂಡ ಬಂದಿದ್ದರು. ಪಂದ್ಯ ನೋಡುವಾಗ ಅವರು ಅತ್ಯಂತ ದುಬಾರಿ ಚಿನ್ನದ ಐಫೋನ್ ಕಳೆದುಕೊಂಡಿರೋದಾಗಿ ಸೋಷಿಯಲ್ ಮೀಡಿಯಾದಲ್ಲಿ ನಟಿ ಅಳಲು ತೋಡಿಕೊಂಡಿದ್ದಾರೆ.

     

    View this post on Instagram

     

    A post shared by Urvashi Rautela (@urvashirautela)

    ನನ್ನ 24 ಕ್ಯಾರೆಟ್ ಚಿನ್ನದ ಐಫೋನ್ ಅನ್ನು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ-ಪಾಕಿಸ್ತಾನ ಮ್ಯಾಚ್ ನಡೆಯುವಾಗ ಕಳೆದುಕೊಂಡಿದ್ದೇನೆ. ದಯವಿಟ್ಟು ಸಹಾಯ ಮಾಡಿ, ಯಾರಿಗಾದರೂ ಮೊಬೈಲ್ ಸಿಕ್ಕರೆ ಮರಳಿಸಿ, ಅಥವಾ ನನ್ನನ್ನು ಸಂಪರ್ಕಿಸಿ ಎಂದು ಊರ್ವಶಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ತಮ್ಮ ಈ ಪೋಸ್ಟ್ ಅನ್ನು ಅಹಮದಾಬಾದ್ ಪೊಲೀಸರಿಗೆ ಹಾಗೂ ನರೇಂದ್ರ ಮೋದಿ ಸ್ಟೇಡಿಯಂನ ಅಧಿಕೃತ ಟ್ವಿಟ್ಟರ್ ಖಾತೆಗೆ ಟ್ಯಾಗ್ ಮಾಡಿದ್ದಾರೆ. ಇದನ್ನೂ ಓದಿ:ಪತಿ ರಣ್‌ಬೀರ್, ರಶ್ಮಿಕಾ ಮಂದಣ್ಣ ಲಿಪ್‌ಲಾಕ್‌ಗೆ ಆಲಿಯಾ ಭಟ್ ಪ್ರತಿಕ್ರಿಯೆ

    ನಟಿ ಊರ್ವಶಿ ಇದೀಗ ಶೇರ್ ಮಾಡಿರುವ ಪೋಸ್ಟ್ ಕೂಡ ಸಖತ್ ಟ್ರೋಲ್ ಆಗುತ್ತಿದೆ. ಸುದ್ದಿಯಾಗಲು ಸದಾ ಒಂದಲ್ಲಾ ಒಂದು ಗಿಮಿಕ್ ಮಾಡುತ್ತಿರುತ್ತಾರೆ ಎಂದು ನೆಟ್ಟಿಗರು ನಟಿಯ ವಿರುದ್ಧ ಕಿಡಿಕಾರುತ್ತಿದ್ದಾರೆ. ಐಫೋನ್ ಕಳೆದುಕೊಂಡಿದ್ದಾರೆ ಎಂಬ ವಿಚಾರವೇ ಸುಳ್ಳು ಎಂದು ಸೋಷಿಯಲ್ ಮೀಡಿಯಾದಲ್ಲಿ ನಟಿಯ ಬಗ್ಗೆ ಪರ ವಿರೋಧದ ಚರ್ಚೆ ಕೂಡ ನಡೆಯುತ್ತಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಾಕಿಸ್ತಾನಕ್ಕೆ ಸಪೋರ್ಟ್‌ ಮಾಡ್ತಿದ್ದಾರೆ ʻಐರಾವತʼಬೆಡಗಿ – ಊರ್ವಶಿ ರೌಟೇಲಾ ಕಾಲೆಳೆದ ಟ್ರೋಲ್‌ ಗೆಳೆಯರು

    ಪಾಕಿಸ್ತಾನಕ್ಕೆ ಸಪೋರ್ಟ್‌ ಮಾಡ್ತಿದ್ದಾರೆ ʻಐರಾವತʼಬೆಡಗಿ – ಊರ್ವಶಿ ರೌಟೇಲಾ ಕಾಲೆಳೆದ ಟ್ರೋಲ್‌ ಗೆಳೆಯರು

    ಕ್ಯಾಂಡಿ: ಬಾಲಿವುಡ್ ನಟಿ ಊರ್ವಶಿ ರೌಟೇಲಾ (Urvashi Rautela) ಮತ್ತೆ ಸುದ್ದಿಯಲ್ಲಿದ್ದಾರೆ. ಈ ಹಿಂದೆ ಪಾಕಿಸ್ತಾನಿ ಬೌಲರ್ ನಸೀಮ್ ಶಾ (Naseem Shah) ಜೊತೆಗೆ ಊರ್ವಶಿ ಹೆಸರು ಸಖತ್ ಸದ್ದು ಮಾಡಿತ್ತು. ಇವರಿಬ್ಬರ ಮಧ್ಯೆ ಪ್ರೀತಿಯಿದೆ ಎಂಬರ್ಥದಲ್ಲಿ ಜಾಲತಾಣದಲ್ಲಿ ಪೋಸ್ಟ್‌ಗಳು ಸಖತ್ ಹರಿದಾಡುತ್ತಿದ್ದವು. ಇದೀಗ ಇಂಡೋ-ಪಾಕ್‌ ಪಂದ್ಯದ ವೇಳೆ ಮತ್ತೆ ನೆಟ್ಟಿಗರು ಊರ್ವಶಿ ರೌಟೇಲಾ ಅವರ ಕಾಲೆಳೆದಿದ್ದಾರೆ.

    ಊರ್ವಶಿ ರೌಟೇಲಾ ಹಸಿರು ಸೀರೆಯುಟ್ಟ ಫೋಟೋ ಜೊತೆಗೆ ಪಾಕಿಸ್ತಾನ ಕ್ರಿಕೆಟ್‌ ತಂಡದ ಫೋಟೋವನ್ನ ಹಂಚಿಕೊಂಡಿದ್ದು, ಹಿಗ್ಗಾಮುಗ್ಗಾ ಟ್ರೋಲ್‌ ಮಾಡುತ್ತಿದ್ದಾರೆ. ನಸೀಮ್‌ ಶಾ ಇನ್‌ಸ್ಟಾಗ್ರಾಮ್‌ ಖಾತೆಗೂ ಫೋಟೋವನ್ನ ಟ್ಯಾಗ್‌ ಮಾಡಿ, ಊರ್ವಶಿ ರೌಟೇಲಾ ಸೀಕ್ರೆಟ್‌ ಆಗಿ ಪಾಕಿಸ್ತಾನಕ್ಕೆ ಸಪೋರ್ಟ್‌ ಮಾಡ್ತಿದ್ದಾರೆ ಅಂತಾ ಟಾಂಗ್‌ ಕೊಡುತ್ತಿದ್ದಾರೆ. ಇದನ್ನೂ ಓದಿ: ಪಾಕ್‌ ವಿರುದ್ಧ ಸ್ಮರಣೀಯ ದಾಖಲೆ ಬರೆದ ಟಾಪ್‌-5 ಟೀಂ ಇಂಡಿಯಾ ಬ್ಯಾಟರ್‌ಗಳು ಇವರೇ

     

    ನೆಟ್ಟಿಗರು ಊರ್ವಶಿ ರೌಟೇಲಾ ಅವರಿಂದ ರಿಷಬ್ ಪಂತ್ ಅವರನ್ನ ಕಾಪಾಡುವಂತೆ ಶುಭಮನ್ ಗಿಲ್ ಇಂದು ನಸೀಮ್ ಶಾ ಅವರನ್ನು ಗೌರವದಿಂದ ನಡೆಸಿಕೊಳ್ಳುತ್ತಿದ್ದಾರೆ. ಊರ್ವಶಿ ಸಪೋರ್ಟ್‌ ಮಾಡ್ತಿರೋದು ಪಾಕಿಸ್ತಾನಕ್ಕೋ ಅಥವಾ ನಸೀಮ್‌ ಶಾಗೋ? ಅಂತಾ ಕುಟುಕಿದ್ದಾರೆ. ಇದನ್ನೂ ಓದಿ: `ಐರಾವತ’ ನಟಿ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಪಾಕಿಸ್ತಾನಿ ಬೌಲರ್ ನಸೀಮ್ ಶಾ

    ಕಳೆದ ವರ್ಷ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಬೌಲಿಂಗ್‌ ಮಾಡುತ್ತಿದ್ದ ವೇಳೆ ನಸೀಮ್‌ ಶಾ ಸಣ್ಣ ನಗೆ ಬೀರಿದ್ದ ವೀಡಿಯೋವನ್ನ ಊರ್ವಶಿ ರೌಟೇಲಾ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡು ಟ್ರೋಲ್‌ಗೆ ಗುರಿಯಾಗಿದ್ದರು. ಆದ್ರೆ ಸಂದರ್ಶನದ ವೇಳೆ ಆಕೆ ಯಾರೂ ಅಂತಾನೇ ನನಗೆ ಗೊತ್ತಿಲ್ಲ ಎಂದು ನಸೀಮ್‌ ಶಾ ಊಹಾಪೋಹಗಳಿಗೆ ಬ್ರೇಕ್‌ ಹಾಕಿದ್ದರು. ಇದೀಗ ಮತ್ತೆ ನೆಟ್ಟಿಗರು ಕಾಲೆಳೆದಿದ್ದಾರೆ.

    ಈ ಬಾರಿ ಪ್ಯಾರಿಸ್‌ನ ಐಫೆಲ್‌ ಟವರ್‌ ಮುಂಭಾಗದಲ್ಲಿ ಊರ್ವಶಿ ರೌಟೇಲಾ ವಿಶ್ವಕಪ್‌ ಟ್ರೋಫಿಯನ್ನ ಅನಾವರಣಗೊಳಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಟಿ ಊರ್ವಶಿ ರೌಟೇಲಾ ಗಡಿಪಾರು ಮಾಡಿ : ಆಂಧ್ರ ಸಿಎಂಗೆ ನೆಟ್ಟಿಗರು ಮನವಿ

    ನಟಿ ಊರ್ವಶಿ ರೌಟೇಲಾ ಗಡಿಪಾರು ಮಾಡಿ : ಆಂಧ್ರ ಸಿಎಂಗೆ ನೆಟ್ಟಿಗರು ಮನವಿ

    ಬ್ಬ ನಟನನ್ನು ಹೊಗಳುವುದಕ್ಕಾಗಿ ಮತ್ತು ತಮ್ಮ ಸಿನಿಮಾದ ಪ್ರಚಾರಕ್ಕಾಗಿ ಆಂಧ್ರ ಪ್ರದೇಶದ ಮುಖ್ಯಮಂತ್ರಿಯನ್ನು ಅವಮಾನಿಸಿದ ನಟಿ ಊರ್ವಶಿ ರೌಟೇಲಾ ಅವರನ್ನು ರಾಜ್ಯದಿಂದಲೇ ಗಡಿಪಾರು ಮಾಡುವಂತೆ ಹಲವಾರು ನೆಟ್ಟಿಗರು ಆಂಧ್ರದ ಸಿಎಂ ಜಗನ್ ಮೋಹನ್ ರೆಡ್ಡಿ (Jagan Mohan Reddy) ಅವರಿಗೆ ಮನವಿ ಮಾಡಿದ್ದಾರೆ. ನಟ ಪವನ್ ಕಲ್ಯಾಣ್ ಅವರನ್ನು ಮುಖ್ಯಮಂತ್ರಿ ಎಂದು ಕರೆದಿರುವ ನಟಿಯ ಮೇಲೆ ಕ್ರಮ ತಗೆದುಕೊಳ್ಳುವಂತೆ ಕಾಮೆಂಟ್ ಮಾಡಿದ್ದಾರೆ.

    ತೆಲುಗಿನ ನಟಿ ಊರ್ವಶಿ ರೌಟೇಲಾ (Urvashi Rautela) ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸುದ್ದಿಯಾಗಿದ್ದಾರೆ. ಆಂಧ್ರ ಪ್ರದೇಶದಲ್ಲಿ (Andhra Pradesh) ಯಾವುದೇ ಚುನಾವಣೆ ನಡೆಯದೇ ಇದ್ದರೂ, ಮುಖ್ಯಮಂತ್ರಿಯನ್ನೇ ರೌಟೇಲಾ ಬದಲಾಯಿಸಿದ್ದಾರೆ. ಆಂಧ್ರ ಪ್ರದೇಶದ ಮುಖ್ಯಮಂತ್ರಿ ನಟ ಪವನ್ ಕಲ್ಯಾಣ್ (Pawan Kalyan) ಎಂದು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದಿದ್ದಾರೆ. ಈ ನಡೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ.

    ರಾಜಕೀಯ ಪಡಸಾಲೆಯಲ್ಲಿ ಪವನ್ ಕಲ್ಯಾಣ್ ಹೆಸರು ಇದೀಗ ಪ್ರಮುಖವಾಗಿ ಕೇಳಿ ಬರುತ್ತಿದೆ. ಮುಂದಿನ ಚುನಾವಣೆಯನ್ನು ಗುರಿಯಾಗಿಟ್ಟುಕೊಂಡು ಪವನ್ ರಾಜ್ಯದ ಪ್ರವಾಸ ಮಾಡುತ್ತಿದ್ದಾರೆ. ಅಲ್ಲದೇ, ಚುನಾವಣೆಗೆ ಈಗಿನಿಂದಲೇ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ರೌಟೇಲಾ ಬರೆದುಕೊಂಡು ಬರಹ ವೈರಲ್ ಆಗಿದೆ.

    ಆಂಧ್ರದ ಮುಖ್ಯಮಂತ್ರಿ (Chief Minister)ಪವನ್ ಕಲ್ಯಾಣ್ ಎಂದು ಉದ್ದೇಶಪೂರ್ವಕವಾಗಿಯೇ ಬರೆದಿರುವ ರೌಟೇಲಾ, ಅದರ ಪರಿಣಾಮವನ್ನು ನಾನಾ ರೀತಿಯಲ್ಲಿ ಅನುಭವಿಸುತ್ತಿದ್ದಾರೆ. ಕೆಲವರು ಪವನ್ ಕಲ್ಯಾಣ್ ಪರ ಕಾಮೆಂಟ್ ಮಾಡಿದ್ದರೆ, ಸಾಕಷ್ಟು ಮಂದಿ ರೌಟೇಲಾರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

     

    ಊರ್ವಶಿ ರೌಟೇಲಾ ನಟನೆಯ ‘ಬ್ರೋ’ ಸಿನಿಮಾದಲ್ಲಿ ಪವನ್ ಕಲ್ಯಾಣ್ ಕೂಡ ಪಾತ್ರ ಮಾಡಿದ್ದಾರೆ. ಈ ಸಿನಿಮಾದ ಕಾರ್ಯಕ್ರಮವೊಂದರ ಫೋಟೋ ಹಂಚಿಕೊಂಡಿದ್ದ ಊರ್ವಶಿ, ‘ಗೌರವಾನ್ವಿತ ಮುಖ್ಯಮಂತ್ರಿಗಳಾದ ಪವನ್ ಕಲ್ಯಾಣ್ ಅವರು ನಮ್ಮ ಸಿನಿಮಾದಲ್ಲಿ ನಟಿಸಿದ್ದಾರೆ’ ಎಂದು ಬರೆದುಕೊಂಡಿದ್ದಾರೆ. ಅದೇ ಇದೀಗ ಚರ್ಚೆಯನ್ನು ಹುಟ್ಟು ಹಾಕಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]