Tag: US

  • ಗೆಳತಿಗಾಗಿ 13ರ ಪೋರ ಬಿಎಂಡಬ್ಲ್ಯು ಕಾರ್ ಕದ್ದ: ಕಾರಲ್ಲಿ ಚೇಸ್ ಮಾಡಿ ಮಗನನ್ನು ಹಿಡಿದ ತಾಯಿ

    ಗೆಳತಿಗಾಗಿ 13ರ ಪೋರ ಬಿಎಂಡಬ್ಲ್ಯು ಕಾರ್ ಕದ್ದ: ಕಾರಲ್ಲಿ ಚೇಸ್ ಮಾಡಿ ಮಗನನ್ನು ಹಿಡಿದ ತಾಯಿ

    ವಾಷಿಂಗ್ಟನ್: 13 ವರ್ಷದ ಅಮೆರಿಕದ ಬಾಲಕನೊಬ್ಬ ಬಿಎಂಡಬ್ಲ್ಯು ಕಾರನ್ನು ಕದ್ದು ತನ್ನ ಗರ್ಲ್ ಫ್ರೆಂಡ್ ಮನೆಗೆ ಹೋಗುವಾಗ ತನ್ನ ತಾಯಿಯ ಕೈಗೆ ಸಿಕ್ಕಿ ಹಾಕಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಟೆಕ್ಸಾಸ್ ನ ಎಲ್ ಪಾಸೋ ನಗರದ 13 ವರ್ಷದ ಆರೋನ್ ತನ್ನ ತಾಯಿಯ ಬಿಎಂಡಬ್ಲ್ಯು ಕಾರನ್ನ ಕದ್ದು, ತನ್ನ ಗರ್ಲ್ ಫ್ರೆಂಡ್ ಮನೆಗೆ ಹೋಗುತ್ತಿರುತ್ತಾನೆ. ಕಾರ್ ಕದ್ದಿರುವ ವಿಷಯ ತಿಳಿದ ತಾಯಿ ತನ್ನ ಮಗನನ್ನು ಹಿಂಬಾಲಿಸಿ ಆತನನ್ನು ಕಾರಿನಿಂದ ಹೊರತಂದು ಬೆಲ್ಟಿನಿಂದ ಹೊಡೆದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಆರೋನ್ ಅಕ್ಕ ಲಿಜಾ ಟ್ವಿಟ್ಟರ್ ನಲ್ಲಿ ಈ ದೃಶ್ಯವನ್ನ ಹಂಚಿಕೊಂಡಿದ್ದು, “ನನ್ನ ತಮ್ಮ ಆರೋನ್, ನನ್ನ ತಾಯಿ ಕ್ಯಾಮೆರಾ ನೋಡಬಾರದು ಎಂದು ನಮ್ಮ ಮನೆಯ ವೈಫೈ ಕನೆಕ್ಷನ್ ಅನ್ನು ಕಡಿತಗೊಳಿಸಿ, ಹೊಸ ಬಿಎಂಡಬ್ಲ್ಯು ಕಾರ್ ಅನ್ನು ಕದ್ದಿದ್ದಾನೆ” ಎಂದು ಟ್ವೀಟ್ ಮಾಡಿದ್ದಳು. ಈ ವಿಡಿಯೋವನ್ನು 1.4 ಲಕ್ಷ ಜನರು ಲೈಕ್ ಮಾಡಿದ್ದು, 43 ಸಾವಿರ ಜನರು ರೀ ಟ್ವೀಟ್ ಮಾಡಿದ್ದಾರೆ.

    ತಾಯಿ ಮಗನನ್ನು ಹಿಂಬಾಲಿಸುತ್ತಿರುವ ವಿಡಿಯೋಗೆ ಜನರು ಹೆಚ್ಚು ಲೈಕ್ ಮತ್ತು ರೀ ಟ್ವೀಟ್ ಮಾಡಿದ್ದು, ಆ ತಾಯಿಯನ್ನ ಹೊಗಳಿ, ನಮ್ಮ ಮನೆಯಲ್ಲಿ ಹೀಗೇನಾದರು ನಡೆದರೆ ಪೊಲೀಸರ ಬದಲಿಗೆ ನಿಮ್ಮನ್ನೇ ಕರೆಯುತ್ತೇವೆ ಎಂದು ಕಮೆಂಟ್ ಮಾಡಿ ಮೆಚ್ಚುಗೆ ಸೂಚಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://twitter.com/LilaaBites/status/1050843628585738240

  • ಅಮೆರಿಕ, ಚೀನಾ ಸಮರದಿಂದ ಭಾರತಕ್ಕೆ ಲಾಭ: ಅರುಣ್ ಜೇಟ್ಲಿ

    ಅಮೆರಿಕ, ಚೀನಾ ಸಮರದಿಂದ ಭಾರತಕ್ಕೆ ಲಾಭ: ಅರುಣ್ ಜೇಟ್ಲಿ

    ನವದೆಹಲಿ: ಅಮೆರಿಕ ಮತ್ತು ಚೀನಾ ಮಧ್ಯೆ ನಡೆಯುತ್ತಿರುವ ವಾಣಿಜ್ಯ ಸಮರದಿಂದ ಭಾರತಕ್ಕೆ ಲಾಭವಾಗುವ ಸಾಧ್ಯತೆ ಹೆಚ್ಚಿದೆ ಎಂದು ಕೇಂದ್ರ ಹಣಕಾಸು ಮಂತ್ರಿ ಅರುಣ್ ಜೇಟ್ಲಿ ಹೇಳಿದ್ದಾರೆ.

    ಪಿಎಚ್‍ಡಿ ಚೇಂಬರ್ ಆಫ್ ಕಾಮರ್ಸ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಎರಡು ರಾಷ್ಟ್ರಗಳ ನಡುವೆ ಮಧ್ಯೆ ಆಮದು ಮತ್ತು ರಫ್ತು ಸಮಸ್ಯೆ ಸೃಷ್ಟಿಯಾಗಿದೆ. ಅಮೆರಿಕ ಚೀನಾದ ಉತ್ಪನ್ನಗಳ ಮೇಲೆ ಆಮದು ಸುಂಕ ಹೆಚ್ಚಿಗೆ ಹಾಕಿದರೆ ಇತ್ತ ಚೀನಾವು ಅಮೆರಿಕದ ವಸ್ತುಗಳ ಮೇಲೆ ತೆರಿಗೆ ಹೆಚ್ಚಿಸಿದೆ. ಇದರಿಂದಾಗಿ ಅಮೆರಿಕ ಮತ್ತು ವಿಶ್ವದ ಮಾರುಕಟ್ಟೆಯಲ್ಲಿ ಭಾರತದ ವಸ್ತುಗಳಿಗೆ ಬೇಡಿಕೆ ಹೆಚ್ಚಾಗಿದೆ ಎಂದಿದ್ದಾರೆ.

    ವಾಹನ ಮತ್ತು ಬಿಡಿಭಾಗಗಳು, ಎಲೆಕ್ಟ್ರಾನಿಕ್ ಉತ್ಪನ್ನ, ಯಂತ್ರೋಪಕರಣ, ಪ್ಲಾಸ್ಟಿಕ್, ಕೆಮಿಕಲ್, ಮತ್ತು ರಬ್ಬರ್ ಉತ್ಪನ್ನಗಳು ಈಗ ಅಮೆರಿಕ ಮಾರುಕಟ್ಟೆಯಲ್ಲಿ ಸ್ಪರ್ಧೆ ನೀಡುವ ಜೊತೆಗೆ ಬೇಡಿಕೆಯನ್ನು ಹೆಚ್ಚಿಸಿದೆ ಎಂದು ತಿಳಿಸಿದ್ದಾರೆ.

    ತೈಲ ಬೆಲೆ ಏರಿಕೆ ಮತ್ತು ಡಾಲರ್ ಮುಂದೆ ರೂಪಾಯಿ ಮೌಲ್ಯ ಕುಸಿಯುತ್ತಿರುವುದು ಭಾರತದ ಆರ್ಥಿಕತೆ ಸವಾಲಾಗಿದೆ. ಆದರೆ ಅಮೆರಿಕ ಮತ್ತು ಚೀನಾ ನಡುವಿನ ವ್ಯಾಪಾರ ಸಮರದಿಂದ ಭಾರತ ಉತ್ಪನ್ನಗಳಿಗೆ ಅಂತರಾಷ್ಟ್ರೀಯ ಮಾರುಕಟ್ಟೆ ಕಲ್ಪಿಸಿದೆ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publict

  • ಸಿಂಗಾಪುರದಲ್ಲೇ ಟ್ರಂಪ್-ಕಿಮ್ ಭೇಟಿಯಾಗಿದ್ದು ಯಾಕೆ?

    ಸಿಂಗಾಪುರದಲ್ಲೇ ಟ್ರಂಪ್-ಕಿಮ್ ಭೇಟಿಯಾಗಿದ್ದು ಯಾಕೆ?

    ಸಿಂಗಾಪುರ: ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಾಂಗ್ ಉನ್ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಿಂಗಾಪುರದಲ್ಲಿ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದು, ಆದರೆ ಎರಡು ದೇಶಗಳ ಗಣ್ಯರ ಭೇಟಿಗೆ ಸಿಂಗಾಪುರ ಆಯ್ಕೆ ಆಗಿದ್ದು ಮಾತ್ರ ಮಹತ್ವದಾಗಿದೆ.

    ಸತತ 7 ದಶಕಗಳ ಬಳಿಕ ಅಮೆರಿಕ ಹಾಗೂ ಉತ್ತರ ಕೊರಿಯಾ ನಡುವೆ ಮಾತುಕತೆ ನಡೆದಿದ್ದು, ವಿಶ್ವದ ಗಮನವನ್ನು ಸೆಳೆದಿದೆ. ಆದರೆ ಎರಡು ದೇಶಗಳ ನಾಯಕರ ಭೇಟಿಗೆ ಈ ಹಿಂದೆ ಹಲವು ರಾಷ್ಟ್ರಗಳ ಹೆಸರುಗಳು ಕೇಳಿ ಬಂದಿತ್ತು. ಅಂತಿಮವಾಗಿ ಐತಿಹಾಸಿಕ ಘಟನೆಗೆ ಸಿಂಗಾಪುರ ಸಾಕ್ಷಿಯಾಗಿದೆ.

    ಈ ಮೊದಲು ದಕ್ಷಿಣ ಕೊರಿಯಾದ ಮಿಲಿಟರಿ ಚಟುವಟಿಕೆ ನಿಷೇಧಿತ ಪ್ರದೇಶವನ್ನು (Korean Demilitarized Zone) ನಾಯಕರ ಸೂಕ್ತ ಭದ್ರತೆಯ ಸ್ಥಳವಾಗಿ ಆಯ್ಕೆ ಮಾಡಲಾಗಿತ್ತು. ಆದರೆ ಬಳಿಕ ಈ ಪಟ್ಟಿಯಲ್ಲಿ ಸ್ವೀಡನ್, ಮಂಗೋಲಿಯಾ, ಜಿನೀವಾ ಹೆಸರು ಕೇಳಿ ಬಂದಿತ್ತು. ಆದರೆ ಅಂತಿಮವಾಗಿ ಪಟ್ಟಿಯಲ್ಲಿ ಇಲ್ಲದ ಸಿಂಗಾಪುರ ಕಾರ್ಯಕ್ರಮದ ಜವಾಬ್ದಾರಿ ಪಡೆಯಿತು.

    ಸಿಂಗಾಪುರವೇ ಯಾಕೆ?
    ಸಿಂಗಾಪುರ ಭೇಟಿಯ ಹಿಂದೆ ಹಲವು ರಾಜತಾಂತ್ರಿಕ ಅಂಶಗಳನ್ನು ಸೂಕ್ಷ್ಮವಾಗಿ ಗಮನಿಸಲಾಗಿದ್ದು, ವಿಶ್ವದ ಅತ್ಯಂತ ಸುರಕ್ಷಿತಾ ಸ್ಥಳ ಎಂಬ ಕಾರಣಕ್ಕೆ ಆಯ್ಕೆ ಮಾಡಲಾಗಿತ್ತು. ಸಿಂಗಾಪುರ ಕೊರಿಯಾದೊಂದಿಗೆ ಕಳೆದ 4 ದಶಕಗಳಿಂದ ಉತ್ತಮ ರಾಜತಾಂತ್ರಿಕ ಸಂಬಂಧವನ್ನು ಹೊಂದಿದೆ. ಅಲ್ಲದೇ ಅಮೆರಿಕದೊಂದಿಗೆ ಉತ್ತಮ ವ್ಯಾಪಾರಿ ಸಂಬಂಧವನ್ನು ಹೊಂದಿದ್ದು, ತಜ್ಞರ ಅಭಿಪ್ರಾಯದ ಮೇಲೆ ನಿರ್ಧಾರ ಕೈಗೊಳ್ಳಲಾಗಿದೆ.

    ಇದೇ ಮೊದಲಲ್ಲ: ಸಿಂಗಾಪುರ ಭಾರತ ಹಾಗೂ ಚೀನಾ ನಡುವಿನ ಶಾಂಘಿಲಾ ಸಭೆಯನ್ನು ಸಹ ಯಶಸ್ವಿಯಾಗಿ ಆಯೋಜಿಸಿತ್ತು. ಅಲ್ಲದೇ 2015 ರಲ್ಲಿ ಚೀನಾ ಬದ್ಧ ವೈರಿ ತೈವಾನ್ ಅಧ್ಯಕ್ಷ ಹಾಗೂ ಕ್ಸಿ ಜಿನ್ ಪಿಂಗ್ ರ ದ್ವಿಪಕ್ಷೀಯ ಸಭೆಯನ್ನು ಏರ್ಪಡಿಸಿತ್ತು.

    ಬದ್ಧ ವೈರಿಗಳಾಗಿ ಗುರುತಿಸಿಕೊಂಡಿದ್ದ ಎರಡು ರಾಷ್ಟ್ರಗಳ ನಾಯಕರ ಭೇಟಿ ಹಲವು ರಾಷ್ಟ್ರಗಳ ಗಮನಸೆಳೆದಿದೆ. ಸದ್ಯ ಸಿಂಗಾಪುರದ ಐತಿಹಾಸಿಕ ಸಭೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕಿಮ್ ಜಾಂಗ್ ಉನ್ ನಮ್ಮ ಇಂದಿನ ಭೇಟಿ ಅಷ್ಟು ಸುಲಭದ ಮಾತಲ್ಲ, ಈ ಹಿಂದಿನ ಹಳೆಯ ಅಡೆತಡೆಗಳನ್ನು ಮೀರಿ ಬಂದಿದ್ದಾಗಿ ಹೇಳಿದ್ದಾರೆ.

    ಇಬ್ಬರ ಮಾತುಕತೆಯ ವೇಳೆ ಅಣ್ವಸ್ತ್ರ ಯೋಜನೆಯ ಹಾಗೂ ಪರಸ್ಪರ ಸಹಕಾರ, ಆರ್ಥಿಕ ಬಂಧನ ಕುರಿತು ಮಹತ್ವದ ಚರ್ಚೆ ನಡೆದಿದೆ ಎನ್ನಲಾಗಿದ್ದು, ನಾಲ್ಕು ಮಹತ್ವದ ದಾಖಲೆಗಳಿಗೆ ಸಹಿ ಹಾಕಿದ್ದಾರೆ. ಇದರಲ್ಲಿ ಕಿಮ್ ಮಹತ್ವದ ಅಣ್ವಸ್ತ್ರ ನಿಶ್ಯಸ್ತ್ರೀಕರಣ ಕುರಿತ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದ್ದು ಅಧಿಕೃತ ಮಾಹಿತಿ ಲಭಿಸಬೇಕಿದೆ.

  • ರಾಮ ಸೇತುವೆ ಅಸ್ತಿತ್ವ ನಿಜ ಅಂತಿದೆ ಅಮೆರಿಕ ವಾಹಿನಿಯ ಈ ಪ್ರೋಮೋ

    ರಾಮ ಸೇತುವೆ ಅಸ್ತಿತ್ವ ನಿಜ ಅಂತಿದೆ ಅಮೆರಿಕ ವಾಹಿನಿಯ ಈ ಪ್ರೋಮೋ

    ನವದೆಹಲಿ: ರಾಮ ಸೇತುವೆ ಅಸ್ತಿತ್ವದ ಬಗ್ಗೆ ಮತ್ತೆ ಚರ್ಚೆ ಶುರುವಾಗಿದೆ. ಭಾರತ ಮತ್ತು ಶ್ರೀಲಂಕಾ ನಡುವೆ ಸಾವಿರಾರು ವರ್ಷಗಳ ಹಿಂದೆ ಕಟ್ಟಲಾಗಿರೋ ರಾಮಸೇತುವೆ ಬಗ್ಗೆ ಅಮೆರಿಕದ ವಾಹಿನಿಯೊಂದು ಕಾರ್ಯಕ್ರಮ ಮಾಡಿದೆ. ವಿಜ್ಞಾನಿಕವಾಗಿ ವಿಶ್ಲೇಷಣೆ ಮಾಡಿದಾಗ ಸೇತುವೆ ಅಸ್ತಿತ್ವದಲ್ಲಿರುವ ಸಾಧ್ಯತೆಯಿದೆ ಎಂದು ಹೇಳಿದೆ.

    ಸೈನ್ಸ್ ಚಾನೆಲ್ ಈ ಕಾರ್ಯಕ್ರಮದ ಪ್ರೋಮೋವನ್ನ ಟ್ವಿಟ್ಟರ್‍ನಲ್ಲಿ ಹಂಚಿಕೊಂಡಿದ್ದು, ಈ ಸೇತುವೆ ನೈಸರ್ಗಿಕವಾಗಿ ನಿರ್ಮಾಣವಾಗಿಲ್ಲ. ಇದು ಮಾನವ ನಿರ್ಮಿತ ಎಂದು ಹೇಳಿದೆ. ಬುಧವಾರ ರಾತ್ರಿ 7.30ಕ್ಕೆ ಡಿಸ್ಕವರಿ ಕಮ್ಯುನಿಕೇಷನ್ಸ್ ಮಾಲೀಕಕತ್ವದ ಅಮೆರಿಕದ ಸೈನ್ಸ್ ಚಾನೆಲ್‍ನಲ್ಲಿ “ಏನ್ಶಿಯಂಟ್ ಲ್ಯಾಂಡ್ ಬ್ರಿಡ್ಜ್” ಎಂಬ ಕಾರ್ಯಕ್ರಮ ಪ್ರಸಾರವಾಗಲಿದೆ.

    ನಾಸಾದ ಫೋಟೋಗಳನ್ನ ಉದಾಹರಣೆಯಾಗಿ ನೀಡಿ 50 ಕಿ.ಮೀ ಉದ್ದದ ಈ ಸೇತುವೆ ಮಾನವ ನಿರ್ಮಿತವಾದುದು ಎಂದು ಕಾರ್ಯಕ್ರಮದಲ್ಲಿ ಅಮೆರಿಕದ ಪುರಾತತ್ವಶಾಸ್ತ್ರಜ್ಞರು ಹೇಳಿದ್ದಾರೆ.

    https://twitter.com/ScienceChannel/status/940259901166600194?ref_src=twsrc%5Etfw&ref_url=http%3A%2F%2Fzeenews.india.com%2Findia%2Fram-setu-exists-us-promo-reignites-debate-on-the-mythological-bridge-2065734.html

    ಮರಳಿನ ಮೇಲಿರುವ ಕಲ್ಲುಗಳು ಮರಳಿಗಿಂತ ಹಿಂದಿನ ಕಾಲದ್ದಾಗಿರುವುದರಿಂದ, ಕಥೆಯಲ್ಲಿ ಹೆಚ್ಚಿನದ್ದೇನೋ ಇದೆ ಎಂದು ಪ್ರೋಮೋದಲ್ಲಿ ಅಮೆರಿಕದ ಪುರಾತತ್ವಶಾಸ್ತ್ರಜ್ಞರೊಬ್ಬರು ಹೇಳೋದನ್ನ ಕೇಳಬಹುದು. ಇದರ ಆಧಾರದ ಮೇಲೆ ಹೇಳುವುದಾದರೆ ಮರಳು ನೈಸರ್ಗಿಕವಾಗಿ ರಚನೆಯಾಗಿದ್ದು, 7 ಸಾವಿರ ವರ್ಷಗಳಷ್ಟು ಹಳೆಯದ್ದು ಎನ್ನಲಾದ ಕಲ್ಲುಗಳನ್ನು ಅದರ ಮೇಲೆ ಇರಿಸಲಾಗಿದೆ ಎಂದು ಹೇಳಿದ್ದಾರೆ.

    ಈ ಪ್ರೋಮೋವನ್ನ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಪಕ್ಷದ ಮುಖಂಡರಾದ ತರುಣ್ ವಿಜಯ್ ಹಾಗೂ ಪ್ರತಾಪ್ ಸಿಂಹ ರೀಟ್ವೀಟ್ ಮಾಡಿದ್ದಾರೆ.

  • ಸಿರಿಯಾದಲ್ಲಿ ಅಮೆರಿಕ ದಾಳಿಗೆ ಕೇರಳ ಮೂಲದ ಶಂಕಿತ ಐಸಿಸ್ ಉಗ್ರ ಬಲಿ

    ಸಿರಿಯಾದಲ್ಲಿ ಅಮೆರಿಕ ದಾಳಿಗೆ ಕೇರಳ ಮೂಲದ ಶಂಕಿತ ಐಸಿಸ್ ಉಗ್ರ ಬಲಿ

    ಡಮಾಸ್ಕಸ್: ಸಿರಿಯಾದಲ್ಲಿ ಅಮೆರಿಕ ನಡೆಸಿದ ವೈಮಾನಿಕ ದಾಳಿಗೆ ಕೇರಳ ಮೂಲದ ಶಂಕಿತ ಉಗ್ರನೊಬ್ಬ ಬಲಿಯಾಗಿದ್ದಾನೆ. ಅಬು ತಾಹಿರ್ ಬಲಿಯಾದ ಶಂಕಿತ ಉಗ್ರನಾಗಿದ್ದಾನೆ. ಈತ ಕೇರಳದ ಪಾಲ್ಛಾಟ್ ನಿವಾಸಿ ಎಂಬುದಾಗಿ ತಿಳಿದುಬಂದಿದೆ.

    ಅಬು ತಾಹಿರ್, ಕಳೆದ 2013ರಲ್ಲಿ ಉಮ್ರಾಗೆ ತೆರಳಿದ್ದು, ಆ ಬಳಿಕ ತಾಯ್ನಾಡಿಗೆ ಮರಳಿಲ್ಲ. ಆದ್ರೆ ಇದೀಗ ಶಾರ್ಜಾದಲ್ಲಿರುವ ಸಂಬಂಧಿಕರೊಬ್ಬರಿಗೆ ಅಬುತಾಹಿರ್ ಮೃತಪಟ್ಟಿರುವ ಕುರಿತು ಏಪ್ರಿಲ್ 4 ರಂದು ಮೆಸೇಜ್ ಬಂದಿತ್ತು.

    ಮೆಸೇಜ್ ನಲ್ಲಿ `ಐಸಿಸ್ ಸಂಘಟನೆಗೆ ಸೇರಿದ್ದ ಕೇರಳ ಮೂಲದ ಅಬು ತಾಹಿರ್ ಅಫ್ಗಾನಿಸ್ತಾನದ ನಂಗಾರ್ಹರ್ ಪ್ರಾಂತ್ಯದಲ್ಲಿ ಅಮೆರಿಕ ನಡೆಸಿದ ವೈಮಾನಿಕ ದಾಳಿಯಲ್ಲಿ ಮೃತಪಟ್ಟಿದ್ದಾನೆ’ ಅಂತಾ ಬರೆದಿತ್ತು.

    ಇದಕ್ಕೂ ಮೊದಲು ಅಂದ್ರೆ ಫೆಬ್ರವರಿಯಲ್ಲಿ ಇದೇ ಸಂಘಟನೆಯ ಉಗ್ರನೊಬ್ಬ ಅಫ್ಘಾನಿಸ್ತಾನ ಅಮೆರಿಕ ನಡೆಸಿದ ವೈಮಾನಿಕ ದಾಳಿಗೆ ಬಲಿಯಾಗಿದ್ದನು. ಕಳೆದ ಒಂದು ವರ್ಷದಿಂದ ಕ್ರಿಶ್ಚಿಯನ್ ಹಾಗೂ ಹಿಂದೂ ಕುಟುಂಬದಿಂದ ಬಂದ ಸುಮಾರು 12 ಮಂದಿ ಇಸ್ಲಾಂಗೆ ಮತಾಂತರಗೊಂಡು ಬಳಿಕ ಇಂತಹ ಸಂಘಟನೆಗಳಿಗೆ ಸೇರುತ್ತಿದ್ದಾರೆ. ಇದರಲ್ಲಿ ಇಬ್ಬರು ಮೆಸೇಜ್ ಹಾಗೂ ವಾಯ್ಸ್ ಮೆಸೇಜ್ ಮೂಲಕ ತಾವು ಸಂಘಟನೆಗಳಿಗೆ ಸೇರುವ ಬಗ್ಗೆ ತಮ್ಮ ಕುಟುಂಬಕ್ಕೂ ತಿಳಿಸಿದ್ದಾರೆ ಅಂತಾ ವರದಿಯಾಗಿದೆ.