Tag: USA

  • ಭಾರತದ ಎನ್‌ಜಿಒಗಳಿಗೆ ಜಾರ್ಜ್ ಸೊರೊಸ್ ನಿಧಿಯಿಂದ ಹಣ ವರ್ಗಾವಣೆ – ಪತ್ತೆ ಹಚ್ಚಿದ ಇಡಿ

    ಭಾರತದ ಎನ್‌ಜಿಒಗಳಿಗೆ ಜಾರ್ಜ್ ಸೊರೊಸ್ ನಿಧಿಯಿಂದ ಹಣ ವರ್ಗಾವಣೆ – ಪತ್ತೆ ಹಚ್ಚಿದ ಇಡಿ

    ನವದೆಹಲಿ: ಭಾರತದಲ್ಲಿನ ಕೆಲ ಎನ್‌ಜಿಒ ಸಂಸ್ಥೆಗಳಿಗೆ ಅಮೆರಿಕದ ಶತಕೋಟ್ಯಧಿಪತಿ ಜಾರ್ಜ್ ಸೊರೊಸ್‌ (George Soros) ನೇತೃತ್ವದ ಆರ್ಥಿಕ ಅಭಿವೃದ್ಧಿ ನಿಧಿಯಿಂದ ಹಣಕಾಸಿನ ನೆರವು ನೀಡಿರುವುದು ಜಾರಿ ನಿರ್ದೇಶನಾಲಯದ (ED) ತನಿಖೆಯಲ್ಲಿ ಬಹಿರಂಗವಾಗಿದೆ.

    ಹೌದು. ಸೊರೊಸ್ ಆರ್ಥಿಕ ಅಭಿವೃದ್ಧಿ ನಿಧಿ (SEDF) ಭಾರತದಲ್ಲಿ ಎನ್‌ಜಿಒ ವಲಯಕ್ಕೆ ಹಣಕಾಸಿನ ನೆರವು ನೀಡಿದೆ ಎಂಬುದು ತನಿಖೆಯಲ್ಲಿ ಬಯಲಾಗಿದೆ. ಇದನ್ನೂ ಓದಿ: ಜಾರ್ಜ್ ಸೊರೊಸ್‌ಗೆ ಇಡಿ ಶಾಕ್‌ – ಓಪನ್ ಸೊಸೈಟಿ ಫೌಂಡೇಶನ್‌ ಕಚೇರಿ ಮೇಲೆ ದಾಳಿ

    ಇಡಿ ತನಿಖೆಯ ಪ್ರಕಾರ, ಸೊರೊಸ್‌ ಆರ್ಥಿಕ ಅಭಿ‌ವೃದ್ಧಿ ನಿಧಿಯು ರೂಟ್‌ಬ್ರಿಡ್ಜ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ (RSPL), ರೂಟ್‌ಬ್ರಿಡ್ಜ್ ಅಕಾಡೆಮಿ ಪ್ರೈವೇಟ್ ಲಿಮಿಟೆಡ್ (RAPL) ಮತ್ತು ಅಸರ್ ಸೋಶಿಯಲ್ ಇಂಪ್ಯಾಕ್ಟ್ ಅಡ್ವೈಸರ್ಸ್ ಪ್ರೈವೇಟ್ ಲಿಮಿಟೆಡ್ (ASAR) ಎಂಬ ಮೂರು ಭಾರತೀಯ ಕಂಪನಿಗಳಿಗೆ ವಿದೇಶಿ ನೇರ ಹೂಡಿಕೆ (FDI) ಮತ್ತು ಸಲಹಾ/ಸೇವಾ ಶುಲ್ಕದ ಹೆಸರಿನಲ್ಲಿ ಹಣದ ನೆರವು ನೀಡಿದೆ. ಈ ಕಂಪನಿಗಳು 2020-21 ರಿಂದ 2023-24ರ ನಡುವೆ ಸುಮಾರು 25 ಕೋಟಿ ರೂ.ಗಳ ನೆರವನ್ನು ಪಡೆದಿವೆ. ಆದ್ರೆ ಸೊರೊಸ್‌ನ ಓಪನ್ ಸೊಸೈಟಿ ಇನ್‌ಸ್ಟಿಟ್ಯೂಟ್ (OSI) ಅನ್ನು ಮೇ 2016 ರಿಂದ ಅನಪೇಕ್ಷಿತ ಚಟುವಟಿಕೆಗಳಿಗಾಗಿ ಗೃಹ ಸಚಿವಾಲಯವು ಕಣ್ಗಾವಲಿನಲ್ಲಿ ಇರಿಸಿದೆ ಎಂದು ತಿಳಿದುಬಂದಿದೆ.

    ಇಡಿ ಪ್ರಕಾರ, ಎಸ್‌ಇಡಿಎಫ್‌ನಿಂದ ಆರ್‌ಎಸ್‌ಪಿಎಲ್ 18.64 ಕೋಟಿ ರೂ.ಗಳನ್ನು ಪರಿವರ್ತಿಸಬಹುದಾದ ಆದ್ಯತೆಯ ಷೇರುಗಳ (CCPS) ರೂಪದಲ್ಲಿ ಪಡೆದುಕೊಂಡಿದೆ. ಇದರ ಮೌಲ್ಯವು ಪ್ರತಿ ಷೇರಿಗೆ 2.5 ರಿಂದ 2.6 ಲಕ್ಷ ರೂ.ಗಳಷ್ಟಿದೆ. ಎಫ್‌ಸಿಆರ್‌ಎ ನಿಬಂಧನೆಗಳನ್ನು ತಪ್ಪಿಸಲು ಇದು ಅಡ್ಡಮಾರ್ಗ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಏಕೆಂದರೆ ಸರ್ಕಾರದ ಪೂರ್ವಾನುಮತಿಯಿಲ್ಲದೇ ಭಾರತೀಯ ಎನ್‌ಜಿಒಗಳಿಗೆ ನೇರವಾಗಿ ದೇಣಿಗೆ ನೀಡಲು SEDFಗೆ ಯಾವುದೇ ಅನುಮತಿ ಇಲ್ಲ ಎಂದು ಹೇಳಲಾಗಿದೆ. ಇನ್ನೂ ರೂಟ್‌ಬ್ರಿಡ್ಜ್ ಅಕಾಡೆಮಿ ಪ್ರೈವೇಟ್ ಲಿಮಿಟೆಡ್‌ಗೆ (RAPL) 2.70 ಕೋಟಿ ರೂ.ಗಳ ನೆರವನ್ನು ಪಡೆದುಕೊಂಡಿದೆ.  ಇದನ್ನೂ ಓದಿ: ಭಾರತ ವಿರೋಧಿ ಸೊರೊಸ್‌ ಸಂಸ್ಥೆಯ ಜೊತೆ ಸೋನಿಯಾಗೆ ನಂಟು – ಚರ್ಚೆಗೆ ಸರ್ಕಾರ ಸಿದ್ಧವಿದೆ ಎಂದ ಕಿರಣ್‌ ರಿಜಿಜು

    ಮಾರಿಷಸ್ ಸಂಪರ್ಕ
    ಮಾರಿಷಸ್ ಮೂಲದ ಆಸ್ಪಾದ ಇನ್ವೆಸ್ಟ್‌ಮೆಂಟ್ ಕಂಪನಿ (ಎಐಸಿ) ಮೂಲಕ ಒಎಸ್‌ಐಗೆ ಸಂಬಂಧಿಸಿದ ಹಣವನ್ನು ಭಾರತಕ್ಕೆ ಕಳುಹಿಸಲಾಗಿದೆ ಎಂದು ಇಡಿ ತನಿಖೆಯಿಂದ ತಿಳಿದುಬಂದಿದೆ. 2013 ರಲ್ಲಿ ಬೆಂಗಳೂರಿನಲ್ಲಿ ನೋಂದಾಯಿಸಲಾದ Aspada Investment Advisors Pvt Ltd (AIAPL), SEDFನ ಭಾರತೀಯ ಹೂಡಿಕೆಗಳನ್ನು ನಿರ್ವಹಿಸಿತು ಮತ್ತು ಸಲಹೆ ನೀಡಿತು ಎಂಬುದನ್ನು ಇಡಿ ತನಿಖೆ ಬಹಿರಂಗಪಡಿಸಿದೆ. ಇದನ್ನೂ ಓದಿ: ಭಾರತೀಯ ವಿದ್ಯಾರ್ಥಿಗಳಿಗೆ ಅಮೆರಿಕ ವೀಸಾ ಬಂದ್‌! ಪರಿಣಾಮವೇನು?

    ಯಾರು ಈ ಸೊರಸ್?
    94 ವರ್ಷದ ಸೊರಸ್ ವಿಶ್ವದ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ. ಯಹೂದಿ ಕುಟುಂಬದಲ್ಲಿ ಜನಿಸಿದ್ದ ಇವರು 17 ವರ್ಷದವರಿದ್ದಾಗ ನಾಝಿಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಹಂಗೇರಿಯನ್ನು ತೊರೆದು 1947ರಲ್ಲಿ ಲಂಡನ್ ಸೇರಿದ್ದರು. ನಂತರ ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್‌ನಲ್ಲಿ ತತ್ವಶಾಸ್ತ್ರ ಅಧ್ಯಯನ ಮಾಡಿದ್ದರು.

    ವಿದ್ಯಾಭ್ಯಾಸದ ನಂತರ ಲಂಡನ್ ಮರ್ಚೆಂಟ್ ಬ್ಯಾಂಕ್ ಸಿಂಗರ್ ಮತ್ತು ಫ್ರೈಡ್‍ಲ್ಯಾಂಡರ್‍ಗೆ ಸೇರಿದರು. 1956ರಲ್ಲಿ ನ್ಯೂಯಾರ್ಕ್‍ಗೆ ತೆರಳಿದ ಅವರು ಯುರೋಪಿಯನ್ ಸೆಕ್ಯುರಿಟಿ ವಿಶ್ಲೇಷಕರಾಗಿ ಸೇರಿಕೊಂಡರು. 1973ರಲ್ಲಿ ಹೂಡಿಕೆ ಸಂಸ್ಥೆಯನ್ನು ಸ್ಥಾಪಿಸಿ ವಿದೇಶದ ಕಂಪನಿಗಳಲ್ಲಿ ಹಣ ಹೂಡಿ ಅದರಲ್ಲಿ ಯಶಸ್ಸು ಕಂಡರು.  ಇದನ್ನೂ ಓದಿ: ಅದಾನಿ ಕಂಪನಿಗಳನ್ನು ಕಾಡಿದ್ದ ಹಿಂಡನ್‌ಬರ್ಗ್‌ಗೆ ಬೀಗ – ಬಂದ್‌ ಆಗಿದ್ದು ಯಾಕೆ?

    ಸದ್ಯ ಸೊರಸ್ 720 ಶತಕೋಟಿ ಡಾಲರ್ ಒಡೆಯರಾಗಿದ್ದಾರೆ. ಪ್ರಜಾಪ್ರಭುತ್ವ ಹಾಗೂ ವಾಕ್ ಸ್ವಾತಂತ್ರ್ಯವನ್ನು ಉತ್ತೇಜಿಸುವ ಸಂಘಟನೆಗಳು ಹಾಗೂ ವ್ಯಕ್ತಿಗಳಿಗೆ ಅನುದಾನ ನೀಡುವ ಓಪನ್ ಸೊಸೈಟಿ ಫೌಂಡೇಶನ್‍ಗಳನ್ನು ಅವರು ಸ್ಥಾಪಿಸಿದ್ದಾರೆ. ಭಾರತದ ಹಲವು ಮಾಧ್ಯಮ ಸಂಸ್ಥೆಗಳಿಗೆ ಓಪನ್ ಸೊಸೈಟಿ ಅನುದಾನ ನೀಡುತ್ತಿದೆ.

  • ಬಾಂಬ್‌ ಬೆದರಿಕೆ ಬೆನ್ನಲ್ಲೇ ಅಮೆರಿಕಕ್ಕೆ ಪ್ರತ್ಯುತ್ತರ ನೀಡಲು ಪ್ಲ್ಯಾನ್‌ – ದೈತ್ಯ ಮಿಸೈಲ್‌ ಸಿದ್ಧಪಡಿಸಿದ ಇರಾನ್‌

    ಬಾಂಬ್‌ ಬೆದರಿಕೆ ಬೆನ್ನಲ್ಲೇ ಅಮೆರಿಕಕ್ಕೆ ಪ್ರತ್ಯುತ್ತರ ನೀಡಲು ಪ್ಲ್ಯಾನ್‌ – ದೈತ್ಯ ಮಿಸೈಲ್‌ ಸಿದ್ಧಪಡಿಸಿದ ಇರಾನ್‌

    ವಾಷಿಂಗ್ಟನ್‌: ಇರಾನ್‌ ಪರಮಾಣು ಒಪ್ಪಂದಕ್ಕೆ ಸಹಿ ಹಾಕದಿದ್ದರೆ ಬಾಂಬ್‌ ದಾಳಿ ಮಾಡುತ್ತೇವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಎಚ್ಚರಿಕೆ ನೀಡಿದ ಬೆನ್ನಲ್ಲೇ ಅಮೆರಿಕಕ್ಕೆ ಪ್ರತ್ಯುತ್ತರ ನೀಡಲು ಇರಾನ್‌ ಪ್ಲ್ಯಾನ್‌ ಮಾಡಿದೆ. ದೇಶದಲ್ಲಿನ ಸಶಸ್ತ್ರ ಪಡೆಗಳು ಉಡಾವಣೆಗಾಗಿ ದೈತ್ಯ ಕ್ಷಿಪಣಿಗಳನ್ನು (Missiles) ಸಿದ್ಧಪಡಿಸಿದೆ ಎಂದು ವರದಿಗಳು ತಿಳಿಸಿವೆ.

    ಮೂಲಗಳ ಪ್ರಕಾರ, ಅಮೆರಿಕ ವಿರುದ್ಧ ಬೃಹತ್‌ ಮಟ್ಟದಲ್ಲಿ ವಾಯುದಾಳಿ ನಡೆಸಲು ಇರಾನ್‌ (Iran) ಪ್ಲ್ಯಾನ್‌ ಮಾಡಿದೆ. ಅದಕ್ಕಾಗಿ ಸಿದ್ಧಪಡಿಸಲಾದ ದೈತ್ಯ ಕ್ಷಿಪಣಿಗಳನ್ನು ತನ್ನ ದೇಶಾದ್ಯಂತ ಇರುವ ಭೂಗತ ನೆಲೆಗಳಲ್ಲಿ ಅಡಗಿಸಿಟ್ಟಿದೆ ಎಂದು ತಿಳಿದುಬಂದಿದೆ. ಒಂದು ವೇಳೆ ಅಮೆರಿಕ ಬಾಂಬ್‌ ದಾಳಿಗೆ (Bomb Attack) ಮುಂದಾದ್ರೆ, ಇರಾನ್‌ ಸಹ ಪ್ರತಿದಾಳಿ ನಡೆಸಲು ಸಿದ್ಧವಾಗಿದೆ ಎನ್ನುವ ಸಂದೇಶ ಈ ಮೂಲಕ ರವಾನೆಯಾಗಿದೆ. ಇದನ್ನೂ ಓದಿ: ಇರಾನ್ ಪರಮಾಣು ಒಪ್ಪಂದಕ್ಕೆ ಸಹಿ ಹಾಕದಿದ್ದರೆ ಬಾಂಬ್ ದಾಳಿ ಮಾಡುತ್ತೇನೆ: ಟ್ರಂಪ್ ಬೆದರಿಕೆ

    ಸಾಂದರ್ಭಿಕ ಚಿತ್ರ

    ಟ್ರಂಪ್‌ ಹೇಳಿದ್ದೇನು?
    ಇರಾನ್‌ ಪರಮಾಣು ಒಪ್ಪಂದಕ್ಕೆ ಸಹಿ ಹಾಕದಿದ್ದರೆ ಬಾಂಬ್‌ ದಾಳಿ ಮತ್ತು ಎರಡು ಪಟ್ಟು ಸುಂಕಗಳನ್ನು ವಿಧಿಸಲಾಗುವುದು. ಅವರು ಒಪ್ಪಂದ ಮಾಡಿಕೊಳ್ಳದಿದ್ದರೆ ಬಾಂಬ್ ದಾಳಿ ನಡೆಯುತ್ತದೆ. ಅಲ್ಲದೇ 4 ವರ್ಷಗಳ ಹಿಂದೆ ಮಾಡಿದಂತೆ ನಾನು ಅವರ ಮೇಲೆ ಎರಡು ಪಟ್ಟು ಸುಂಕಗಳನ್ನು ವಿಧಿಸುವ ಅವಕಾಶವಿದೆ ಎಂದು ಎಚ್ಚರಿಕೆ ನೀಡಿದ್ದರು. ಇದನ್ನೂ ಓದಿ: ವಿದೇಶಿ ಕಾರುಗಳ ಮೇಲೆ ಶೇ.25 ಸುಂಕ – ಟ್ರಂಪ್‌ ಮತ್ತೆ ಹೊಸ ಬಾಂಬ್‌

    2017-21ರ ಮೊದಲ ಅವಧಿಯಲ್ಲಿ ಟ್ರಂಪ್ ಅವರು ಇರಾನ್ ಮತ್ತು ವಿಶ್ವ ಶಕ್ತಿಗಳ ನಡುವಿನ 2015ರ ಒಪ್ಪಂದದಿಂದ ಅಮೆರಿಕವನ್ನು ಹಿಂತೆಗೆದುಕೊಂಡಿದ್ದರು. ಅದು ನಿರ್ಬಂಧಗಳ ಪರಿಹಾರಕ್ಕೆ ಬದಲಾಗಿ ಟೆಹ್ರಾನ್‌ನ ವಿವಾದಿತ ಪರಮಾಣು ಚಟುವಟಿಕೆಗಳ ಮೇಲೆ ಕಟ್ಟುನಿಟ್ಟಾದ ಮಿತಿಗಳನ್ನು ವಿಧಿಸಿತ್ತು. ಟ್ರಂಪ್ ಅಮೆರಿಕದ ನಿರ್ಬಂಧಗಳನ್ನು ಪುನಃ ಹೇರಿದರು. ಅಂದಿನಿಂದ ಇಸ್ಲಾಮಿಕ್ ಗಣರಾಜ್ಯವು ತನ್ನ ಯುರೇನಿಯಂ ಪುಷ್ಟೀಕರಣ ಕಾರ್ಯಕ್ರಮವನ್ನು ಹೆಚ್ಚಿಸುವಲ್ಲಿ ಒಪ್ಪಿದ ಮಿತಿಗಳನ್ನು ಮೀರಿದೆ. ಒಪ್ಪಂದ ಮಾಡಿಕೊಳ್ಳಿ, ಇಲ್ಲವೇ ಮಿಲಿಟರಿ ಪರಿಣಾಮಗಳನ್ನು ಎದುರಿಸಿ ಎಂಬ ಟ್ರಂಪ್ ಎಚ್ಚರಿಕೆಯನ್ನು ಟೆಹ್ರಾನ್ ಇಲ್ಲಿಯವರೆಗೆ ನಿರ್ಲಕ್ಷಿಸಿದೆ. ಇದನ್ನೂ ಓದಿ: ಅಮೆರಿಕ ಜೊತೆಗಿನ ಹಳೆಯ ಸಂಬಂಧಗಳು ಮುಗಿದಿವೆ – ಸುಂಕದ ಬರೆ ಬೆನ್ನಲ್ಲೇ ಕೆನಡಾ ಪ್ರಧಾನಿ ಹೇಳಿಕೆ

    ಹೊಸ ಪರಮಾಣು ಒಪ್ಪಂದ ಮಾಡಿಕೊಳ್ಳುವಂತೆ ಟೆಹ್ರಾನ್‌ಗೆ ಒತ್ತಾಯಿಸಿ ಟ್ರಂಪ್ ಬರೆದ ಪತ್ರಕ್ಕೆ ಇರಾನ್, ಒಮಾನ್ ಮೂಲಕ ಪ್ರತಿಕ್ರಿಯೆ ಕಳುಹಿಸಿದೆ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಾಕ್ಚಿ ತಿಳಿಸಿದ್ದಾರೆ. ಇದನ್ನೂ ಓದಿ: Modi Very Smart Man, ಶ್ರೇಷ್ಠ ಪ್ರಧಾನಿ – ಸುಂಕ ಘರ್ಷಣೆ ನಡುವೆ ಮೋದಿ ಗುಣಗಾನ ಮಾಡಿದ ಟ್ರಂಪ್‌

  • Modi Very Smart Man, ಶ್ರೇಷ್ಠ ಪ್ರಧಾನಿ – ಸುಂಕ ಘರ್ಷಣೆ ನಡುವೆ ಮೋದಿ ಗುಣಗಾನ ಮಾಡಿದ ಟ್ರಂಪ್‌

    Modi Very Smart Man, ಶ್ರೇಷ್ಠ ಪ್ರಧಾನಿ – ಸುಂಕ ಘರ್ಷಣೆ ನಡುವೆ ಮೋದಿ ಗುಣಗಾನ ಮಾಡಿದ ಟ್ರಂಪ್‌

    – ಏ.2ರಿಂದ ವಾಹನಗಳ ಆಮದು ಸುಂಕ ಶೇ.25 ರಷ್ಟು ಹೆಚ್ಚಳ

    ವಾಷಿಂಗ್ಟನ್‌: ಅಮೆರಿಕದ ಅಧ್ಯಕ್ಷರಾಗಿ 2ನೇ ಬಾರಿಗೆ ಟ್ರಂಪ್‌ (Donald Trump) ಅಧಿಕಾರಕ್ಕೆ ಏರಿದ ದಿನದಿಂದಲೂ ಭಾರತದೊಂದಿಗೆ‌ ಸುಂಕ ಹೆಚ್ಚಳ ವಿಚಾರದಲ್ಲಿ ಘರ್ಷಣೆ ನಡೆಯುತ್ತಲೇ ಇದೆ. ಆದ್ರೆ ಈಗ ಅಚ್ಚರಿ ಎನ್ನುವಂತೆ ಟ್ರಂಪ್‌, ಭಾರತದ ಪ್ರಧಾನಿ ಮೋದಿ (Narendra Modi) ಅವರ ಗುಣಗಾನ ಮಾಡಿರುವುದು ಅಚ್ಚರಿವುಂಟುಮಾಡಿದೆ.

    ಮೋದಿ, ತುಂಬಾ ಸ್ಮಾರ್ಟ್ ಮ್ಯಾನ್, ನನ್ನ ಒಳ್ಳೇ ಸ್ನೇಹಿತ ಕೂಡ ಹೌದು. ಇತ್ತೀಚೆಗೆ ಅವರು ಅಮೆರಿಕಕ್ಕೆ ಭೇಟಿ ನೀಡಿದಾಗ ನಾವು ತುಂಬಾ ಒಳ್ಳೆಯ ಚರ್ಚೆ ನಡೆಸಿದ್ದೇವೆ. ಇದು ಭಾರತ ಮತ್ತು ನಮ್ಮ ದೇಶದ ನಡುವೆ ಉತ್ತಮ ಬಾಂಧವ್ಯಕ್ಕೆ ಕಾರಣವಾಗಲಿದೆ ಎಂದು ನಾನು ಭಾವಿಸುತ್ತೇನೆ. ಇದೆಲ್ಲದಕ್ಕಿಂತ ಮುಖ್ಯವಾಗಿ ಭಾರತ ಒಬ್ಬ ಶ್ರೇಷ್ಠ ಪ್ರಧಾನಿಯನ್ನು ಹೊಂದಿದೆ ಎಂದು ಬಣ್ಣಿಸಿದ್ದಾರೆ.

    ಏಪ್ರಿಲ್ 2ರಿಂದ ಭಾರತ ಸೇರಿದಂತೆ ವಿವಿಧ ದೇಶಗಳ ವಿರುದ್ಧ ಪ್ರತೀಕಾರಾತ್ಮಕ ಸುಂಕವನ್ನು ಹೇರಲು ಅಮೆರಿಕ ಸಿದ್ಧತೆ ನಡೆಸುತ್ತಿದೆ. ಭಾರತದ ವ್ಯಾಪಾರ ನೀತಿಗಳನ್ನು ನಿರಂತರವಾಗಿ ಟ್ರಂಪ್ ಟೀಕಿಸುತ್ತಾ ಬಂದಿದ್ದು, ಭಾರತದ ಆಮದು ಸುಂಕಗಳು (Tariffs) ಅತ್ಯಂತ ನ್ಯಾಯಸಮ್ಮತವಲ್ಲದ್ದು ಹಾಗೂ ಪ್ರಬಲ ಎಂದಿದ್ದಾರೆ. ಜೊತೆಗೆ ಭಾರತವನ್ನು ‘ಸುಂಕದ ರಾಜ’ ಎಂದು ಕರೆದಿದ್ದರು.

    ಭಾರತದ ಜೊತೆ ನನಗೆ ಒಳ್ಳೆಯ ಸಂಬಂಧ ಇದೆ. ಆದರೆ ಏಕೈಕ ಸಮಸ್ಯೆಯೆಂದರೆ, ಅದು ವಿಶ್ವದಲ್ಲೇ ಅತ್ಯಧಿಕ ಸುಂಕ ವಿಧಿಸುವ ದೇಶ. ಸುಸ್ಥಿರತೆಯನ್ನು ಕಾಪಾಡುವ ಸಲುವಾಗಿ ಸುಂಕವನ್ನು ಭಾರತ ಕಡಿಮೆ ಮಾಡುತ್ತದೆ ಎಂಬ ನಿರೀಕ್ಷೆ ನನ್ನದು. ಆದರೆ ಏಪ್ರಿಲ್ 2ರಂದು ನಮ್ಮ ಮೇಲೆ ಅವರು ವಿಧಿಸುವಷ್ಟೇ ಸುಂಕವನ್ನು ನಾವೂ ಹೇರಲಿದ್ದೇವೆ ಎಂದು ಈ ಮೊದಲು ಹೇಳಿಕೆ ನೀಡಿದ್ದರು.

    ಕೆಲ ದಿನಗಳ ಹಿಂದೆಯಷ್ಟೇ ಟ್ರಂಪ್‌, ಭಾರತವು ಅಮೆರಿಕ ಆಮದು ಉತ್ಪನ್ನಗಳ ಮೇಲಿನ ಸುಂಕ ಕಡಿಮೆ ಮಾಡಲಿದೆ ಎಂದು ಹೇಳಿಕೊಂಡಿದ್ದರು. ಆದ್ರೆ ಆ ರೀತಿಯ ಯಾವುದೇ ಪ್ರಸ್ತಾವನೆ ಇಲ್ಲವೆಂದು ಭಾರತ ಘೋಷಿಸಿತ್ತು.

  • ರಂಜಾನ್‌ ಪ್ರಯುಕ್ತ ಶ್ವೇತಭವನದಲ್ಲಿ ಇಫ್ತಾರ್ ಕೂಟ – ಟ್ರಂಪ್ ವಿರುದ್ಧ ಅಮೆರಿಕನ್‌ ಮುಸ್ಲಿಮರ ಆಕ್ರೋಶ

    ರಂಜಾನ್‌ ಪ್ರಯುಕ್ತ ಶ್ವೇತಭವನದಲ್ಲಿ ಇಫ್ತಾರ್ ಕೂಟ – ಟ್ರಂಪ್ ವಿರುದ್ಧ ಅಮೆರಿಕನ್‌ ಮುಸ್ಲಿಮರ ಆಕ್ರೋಶ

    ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷರಾದ ಬಳಿಕ ಡೊನಾಲ್ಡ್‌ ಟ್ರಂಪ್‌ (Donald Trump) ಮೊದಲ ಬಾರಿಗೆ ರಂಜಾನ್‌ ಹಬ್ಬದ ಪ್ರಯುಕ್ತ ಇಫ್ತಾರ್‌ ಕೂಟ ಆಯೋಜಿಸಿದ್ದರು. ಆದ್ರೆ ಇಫ್ತಾರ್‌ ಕೂಟಗಳಲ್ಲಿ ಅಮೆರಿಕನ್‌ ಮುಸ್ಲಿಂ ಸಂಸದರು ಹಾಗೂ ಸಮುದಾಯದ ಮುಖಂಡರಿಗೆ ಆಹ್ವಾನ ನೀಡಿಲ್ಲ ಎಂದು ಟ್ರಂಪ್‌ ವಿರುದ್ಧ ಅಮೆರಿಕದ ಮುಸ್ಲಿಮರು (US Muslims) ಆಕ್ರೋಶ ಹೊರಹಾಕಿದ್ದಾರೆ.

    ಶ್ವೇತಭವನದಲ್ಲಿ ಇಫ್ತಾರ್‌ ಕೂಟ ಆಯೋಜಿಸಿದ್ದ ಟ್ರಂಪ್‌, ಇಸ್ಲಾಂ ಧರ್ಮದ ಪವಿತ್ರ ತಿಂಗಳು ರಂಜಾನ್ ಅನ್ನು ಆಚರಿಸುತ್ತಾ ಬಂದಿದ್ದೇವೆ. ಇದು ವಿಶ್ವದಾದ್ಯಂತ ಮುಸ್ಲಿಂ ಬಾಂಧವರಿಗೆ ಪುಣ್ಯ ಸಂಪಾದಿಸುವ ಮಾಸವಾಗಿದೆ. ಅದಕ್ಕಾಗಿ ವಿಶ್ವದ ಅತ್ಯುತ್ತಮ ಧರ್ಮಗಳಲ್ಲಿ ಒಂದಾಗಿರುವ ಮುಸ್ಲಿಂ ಧರ್ಮವನ್ನು ಗೌರವಿಸುತ್ತೇವೆ ಎಂದರಲ್ಲದೇ ಮುಸ್ಲಿಮರಿಗೆ ರಂಜಾನ್‌ ಪ್ರಯುಕ್ತ ಶುಭ ಕೋರಿದ್ದಾರೆ. ಇದನ್ನೂ ಓದಿ: ಅಮೆರಿಕ ಜೊತೆಗಿನ ಹಳೆಯ ಸಂಬಂಧಗಳು ಮುಗಿದಿವೆ – ಸುಂಕದ ಬರೆ ಬೆನ್ನಲ್ಲೇ ಕೆನಡಾ ಪ್ರಧಾನಿ ಹೇಳಿಕೆ

    ಶ್ವೇತಭವನದಲ್ಲಿ ಇಫ್ತಾರ್ ಕೂಟ ಆಯೋಜಿಸುವುದಕ್ಕೆ ಎರಡು ದಶಕಗಳ ಹಿಂದಿನ ಸಂಪ್ರದಾಯವಿದೆ. ಈ ಬಾರಿ ಆಯೋಜಿಸಿದ್ದ ಇಫ್ತಾರ್‌ ಕೂಟ ವಿವಾದಕ್ಕೆ ಕಾರಣವಾಗಿದೆ. ಕೂಟದಲ್ಲಿ ಅಮೆರಿಕನ್‌ ಮುಸ್ಲಿಂ ಸಂಸದರು, ಸಮುದಾಯಕ್ಕೆ ಸಂಬಂಧಿಸಿದ ಮುಖಂಡರನ್ನು ಆಹ್ವಾನಿಸಿಲ್ಲ. ಬದಲಾಗಿ ಮುಸ್ಲಿಂ ರಾಷ್ಟ್ರಗಳ ವಿದೇಶಿ ರಾಯಭಾರಿಗಳನ್ನು ಇಫ್ತಾರ್‌ ಕೂಟಕ್ಕೆ ಆಹ್ವಾನಿಸಲಾಗಿತ್ತು ಎಂದು ಆಕ್ರೋಶ ವ್ಯಕ್ತವಾಗಿದೆ. ಇದನ್ನೂ ಓದಿ: ವಿದೇಶಿ ಕಾರುಗಳ ಮೇಲೆ ಶೇ.25 ಸುಂಕ – ಟ್ರಂಪ್‌ ಮತ್ತೆ ಹೊಸ ಬಾಂಬ್‌

    ಇಲ್ಲಿನ ಮುಸ್ಲಿಂ ನಾಗರಿಕ ಹಕ್ಕುಗಳ ಗುಂಪುಗಳು ಶ್ವೇತಭವನದ ಎದುರು ಪ್ರತಿಭಟನೆ ನಡೆಸಿದ್ದು ತೀವ್ರ ಅಸಮಾಧಾನ ಹೊರಹಾಕಿವೆ. ಇದು ಟ್ರಂಪ್‌ ಅವರ ಬೂಟಾಟಿಕೆ. ಒಂದೆಡೆ ಮಸ್ಲಿಂ ದೇಶಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಮತ್ತೊಂದೆಡೆ ಇಫ್ತಾರ್‌ ಕೂಟ ಆಯೋಜಿಸುತ್ತಾರೆ ಎಂದು ಕಿಡಿ ಕಾರಿವೆ. ಇದನ್ನೂ ಓದಿ: ಭಾರತಕ್ಕಿಂತಲೂ ನಾವು ಹಿಂದಿದ್ದೇವೆ – ಚುನಾವಣಾ ವ್ಯವಸ್ಥೆಯನ್ನೇ ಬದಲಿಸಲು ಮುಂದಾದ ಟ್ರಂಪ್‌

    1996 ರಲ್ಲಿ ಅಂದಿನ ಯುಎಸ್ ಅಧ್ಯಕ್ಷ ಬಿಲ್ ಕ್ಲಿಂಟನ್ ಅವರ ಅಧಿಕಾರಾವಧಿಯಲ್ಲಿ, ಶ್ವೇತಭವನದಲ್ಲಿ ಇಫ್ತಾರ್ ಕೂಟ ಪ್ರಾರಂಭಿಸಲಾಯಿತು, ಇದನ್ನು ನಂತರದ ಅಧ್ಯಕ್ಷರಾದ ಜಾರ್ಜ್ ಬುಷ್ ಮತ್ತು ಬರಾಕ್ ಒಬಾಮಾ ಕೂಡ ಮುಂದುವರಿಸಿದ್ದರು. ಈ ಇಫ್ತಾರ್ ಕೂಟದಲ್ಲಿ ಮುಸ್ಲಿಂ ಸಮುದಾಯದ ಗಣ್ಯರು ಹಾಗೂ ಮುಸ್ಲಿಂ ರಾಷ್ಟ್ರಗಳ ರಾಜತಾಂತ್ರಿಕರು ಮತ್ತು ಸೆನೆಟರ್‌ಗಳು ಭಾಗವಹಿಸುವುದು ಪದ್ಧತಿ. ಆದ್ರೆ ಟ್ರಂಪ್‌ ತಮ್ಮ ಮೊದಲ ಅಧ್ಯಕ್ಷೀಯ ಅವಧಿಯಲ್ಲಿ 2017ರಲ್ಲಿ ಶ್ವೇತಭವನದ ಇಫ್ತಾರ್‌ ಕೂಟವನ್ನು ರದ್ದುಗೊಳಿಸಿದ್ದರು. ಇದೀಗ ಮತ್ತೆ ಆಯೋಜಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಬಾಂಗ್ಲಾ ವಿಮೋಚನಾ ದಿನ – 1971ರ ಯುದ್ಧ ನೆನಪಿಸಿ ಯೂನುಸ್‌ಗೆ ಪತ್ರ ಬರೆದ ಪ್ರಧಾನಿ ಮೋದಿ

  • ಕೊಲಂಬಿಯಾ ವಿಶ್ವವಿದ್ಯಾಲಯ ನನಗೆ ದ್ರೋಹ ಬಗೆದಿದೆ – ಅಮೆರಿಕದಿಂದ ಸ್ವಯಂ ಗಡೀಪಾರಾದ ಭಾರತೀಯ ವಿದ್ಯಾರ್ಥಿನಿ ಅಳಲು

    ಕೊಲಂಬಿಯಾ ವಿಶ್ವವಿದ್ಯಾಲಯ ನನಗೆ ದ್ರೋಹ ಬಗೆದಿದೆ – ಅಮೆರಿಕದಿಂದ ಸ್ವಯಂ ಗಡೀಪಾರಾದ ಭಾರತೀಯ ವಿದ್ಯಾರ್ಥಿನಿ ಅಳಲು

    – ಸಂಸ್ಥೆಯಲ್ಲಿ ವಾರಕ್ಕೆ 100 ಗಂಟೆಗಳ ಕಾಲ ಕೆಲಸ ಮಾಡಿದ್ದೇನೆ: ರಂಜನಿ

    ಒಟ್ಟಾವಾ: ಕೊಲಂಬಿಯಾ ವಿಶ್ವವಿದ್ಯಾಲಯ(Columbia University) ನನಗೆ ದ್ರೋಹ ಬಗೆದಿದೆ ಎಂದು ಅಮೆರಿಕಾದಿಂದ (USA,) ಕೆನಡಾಕ್ಕೆ ಸ್ವಯಂ ಗಡೀಪಾರಾದ ಭಾರತೀಯ (India) ವಿದ್ಯಾರ್ಥಿನಿ ರಂಜಿನಿ ಶ್ರೀನಿವಾಸನ್ (37) (Ranjani Srinivasan) ಅಳಲು ತೋಡಿಕೊಂಡಿದ್ದಾರೆ. ನಾನು ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಐದು ವರ್ಷಗಳನ್ನು ಕಳೆದಿದ್ದೇನೆ. ಕೆಲವೊಮ್ಮೆ ವಾರಕ್ಕೆ 100 ಗಂಟೆಗಳ ಕಾಲ ಕೆಲಸ ಮಾಡಿದ್ದೇನೆ. ಸಂಸ್ಥೆಯು ನನ್ನನ್ನು ನಿರಾಸೆಗೊಳಿಸುತ್ತದೆ ಎಂದು ನಾನು ಎಂದಿಗೂ ಭಾವಿಸಿರಲಿಲ್ಲ ಎಂದು ಹೇಳಿಕೊಂಡಿದ್ದಾರೆ.

    ranjani srinivasan

    ಟ್ರಂಪ್ ಅಧ್ಯಕ್ಷ ಸ್ಥಾನಕ್ಕೇರುವ ಒಂದು ತಿಂಗಳ ಮೊದಲು, ಅಂದರೆ ಡಿಸೆಂಬರ್‌ನಲ್ಲಿ ನನ್ನ ವಿದ್ಯಾರ್ಥಿ ವೀಸಾವನ್ನು (ಎಫ್‌ 1 ವೀಸಾ) ನವೀಕರಿಸಲಾಗಿತ್ತು. ನನ್ನ ಪಿಹೆಚ್‌ಡಿಗೆ ಬೇಕಾದ ಎಲ್ಲಾ ಅರ್ಹತೆಗಳು ಮುಗಿದಿವೆ. ಅದಕ್ಕಾಗಿ ನಾನು ಅಮೆರಿಕದಲ್ಲಿ ಇರಬೇಕಾಗಿಲ್ಲ. ಆದ್ದರಿಂದ, ನಾನು ಕೊಲಂಬಿಯಾಕ್ಕೆ ಮನವಿ ಮಾಡಲು ಪ್ರಯತ್ನಿಸುತ್ತಿದ್ದೇನೆ. ದಾಖಲಾತಿಯನ್ನು ಪುನಃಸ್ಥಾಪಿಸುವ ಪ್ರಯತ್ನದಲ್ಲಿದ್ದೇನೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಹಮಾಸ್‌ ಬೆಂಬಲಿಸಿದ್ದ ಭಾರತೀಯ ವಿದ್ಯಾರ್ಥಿನಿಯನ್ನು ಹೊರದಬ್ಬಿದ ಅಮೆರಿಕ

    ಅಮೆರಿಕ ಸರ್ಕಾರ ʻಭಯೋತ್ಪಾದನಾ ಬೆಂಬಲಿಗʼ ಎಂಬ ಹಣೆಪಟ್ಟಿ ಕಟ್ಟಿದ್ದರೂ, ನಾನು ಸಕ್ರಿಯವಾಗಿ ಭಾಗಿಯಾಗಿದ್ದೇನೆ ಎಂಬುದಕ್ಕೆ ಯಾವುದೇ ಪುರಾವೆಗಳನ್ನು ಹಂಚಿಕೊಳ್ಳಲಾಗಿಲ್ಲ. ಆರೋಪಗಳಿಗೆ ಕಾರಣಗಳನ್ನು ಸ್ಪಷ್ಟಪಡಿಸಲಾಗಿಲ್ಲ ಎಂದು ಅವರು ಹೇಳಿಕೊಂಡಿದ್ದಾರೆ.

    ರಂಜನಿಯವರ ವೀಸಾವನ್ನು ರದ್ದುಗೊಳಿಸಿದಾಗ ಅವರು ಪಿಹೆಚ್‌ಡಿ ಪೂರ್ಣಗೊಳಿಸುವ ಅಂಚಿನಲ್ಲಿದ್ದರು. ಈ ಮೂಲಕ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಫುಲ್‌ಬ್ರೈಟ್ ಸ್ವೀಕರಿಸುವರಿದ್ದರು. ಅಷ್ಟರಲ್ಲಾಗಲೇ ಅವರ ಗಡಿಪಾರಾಗಿದ್ದು, ತೀವ್ರ ನಿರಾಸೆಗೊಳಗಾಗಿದ್ದರು.

    ಮಾ.5 ರಂದು ಚೆನ್ನೈನಲ್ಲಿರುವ ಯುಎಸ್ ಕಾನ್ಸುಲೇಟ್‌ನಿಂದ ತಮ್ಮ ವಿದ್ಯಾರ್ಥಿ ವೀಸಾವನ್ನು ಅನಿರ್ದಿಷ್ಟವಾಗಿ ರದ್ದುಪಡಿಸಲಾಗಿದೆ ಎಂಬ ಇಮೇಲ್‌ನ್ನು ರಂಜನಿ ಪಡೆದುಕೊಂಡಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ, ಅಮೆರಿಕ ವಲಸೆ ಮತ್ತು ಕಸ್ಟಮ್ಸ್ ಅಧಿಕಾರಿಗಳು ಅವರ ಮನೆ ಬಾಗಿಲಿಗೆ ಬಂದು ರೂಮ್‌ಮೇಟ್‌ನ್ನು ವಿಚಾರಿಸಿದ್ದರು. ಇದಾದ ಬಳಿಕ ದಾಖಲೆಗಳು, ಅಗತ್ಯ ವಸ್ತುಗಳನ್ನು ತೆಗೆದುಕೊಂಡು ನ್ಯೂಯಾರ್ಕ್‌ನಿಂದ ಕೆನಡಾಕ್ಕೆ ಅವರು ಬಂದಿದ್ದರು. ಈ ಘಟನೆಯ ಬಗ್ಗೆ ಕೊಲಂಬಿಯಾ ವಿಶ್ವವಿದ್ಯಾಲಯದಿಂದ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

    ಅಮೆರಿಕ ಎರಡು ವಿಧಾನ ಬಳಸಿ ವಿದೇಶಿ ಪ್ರಜೆಗಳನ್ನು ಗಡೀಪಾರು ಮಾಡುತ್ತದೆ. ಒಂದನೇಯದ್ದು ಅಮೆರಿಕದ ಭದ್ರತಾ ಸಿಬ್ಬಂದಿಯೇ ವಿದೇಶಿ ಪ್ರಜೆಗಳನ್ನು ಬಂಧಿಸಿ ಗಡೀಪಾರು ಮಾಡುತ್ತದೆ. ಸ್ವಯಂ ಗಡೀಪಾರಿನಲ್ಲಿ ಅಮೆರಿಕ ವಿದೇಶಿ ಪ್ರಜೆಗಳನ್ನು ಹೊರಗೆ ದಬ್ಬುವುದಿಲ್ಲ. ಬದಲಾಗಿ ಆ ಪ್ರಜೆಗಳೇ ಅಮೆರಿಕವನ್ನು ತೊರೆಯಬೇಕಾಗುತ್ತದೆ.

    ರಂಜನಿ ಶ್ರೀನಿವಾಸನ್ ವಿಮಾನ ನಿಲ್ದಾಣದ ಮೂಲಕ ದೇಶ ತೊರೆಯುತ್ತಿರುವ ವಿಡಿಯೋವನ್ನು ಅಮೆರಿಕದ ಗೃಹ ಕಾರ್ಯದರ್ಶಿ ಕ್ರಿಸ್ಟಿ ನೋಯೆಮ್ ಎಕ್ಸ್‌ನಲ್ಲಿ ಹಂಚಿಕೊಂಡು, ಹಿಂಸೆ ಮತ್ತು ಭಯೋತ್ಪಾದನೆಯನ್ನು ಪ್ರತಿಪಾದಿಸುವ ಯಾರಾದರೂ ದೇಶದಲ್ಲಿ ಇರಬಾರದು ಎಂದು ಪೋಸ್ಟ್‌ ಮಾಡಿದ್ದರು. ಇದನ್ನೂ ಓದಿ: ಪತ್ನಿ ತುಂಡರಿಸಿ ಸೂಟ್‍ಕೇಸ್‍ಗೆ ತುಂಬಿ, ಪುಣೆಯಲ್ಲಿ ವಿಷ ಸೇವಿಸಿದ್ದ ಹಂತಕ!

  • ಗಗನಯಾತ್ರಿಗಳ ಆರೋಗ್ಯದ ಮೇಲೆ ಬಾಹ್ಯಾಕಾಶ ಪ್ರಯಾಣದ ಪರಿಣಾಮಗಳೇನು? – ಪರಿಹಾರವೇನು?

    ಗಗನಯಾತ್ರಿಗಳ ಆರೋಗ್ಯದ ಮೇಲೆ ಬಾಹ್ಯಾಕಾಶ ಪ್ರಯಾಣದ ಪರಿಣಾಮಗಳೇನು? – ಪರಿಹಾರವೇನು?

    ಅಮೆರಿಕ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಾದ ʻನಾಸಾʼದ (NASA) ಗಗನಯಾತ್ರಿಗಳಾದ ಭಾರತೀಯ ಮೂಲದ ಸುನಿತಾ ವಿಲಿಯಮ್ಸ್‌ (Sunita Williams) ಮತ್ತು ಬುಚ್‌ ವಿಲ್ಮೋರ್‌ ಭೂಮಿಗೆ ಸುರಕ್ಷಿತವಾಗಿ ಮರಳಿದ್ದು ಇಡೀ ದೇಶವೇ ಸಂಭ್ರಮಿಸಬೇಕಾದ ಸಂಗತಿ. 8 ದಿನಗಳ ಕಾರ್ಯಾಚರಣೆಗೆಂದು ತೆರಳಿದ್ದ ಇವರು ತಾಂತ್ರಿಕ ದೋಷದಿಂದಾಗಿ ಸುಮಾರು 286 ದಿನಗಳ ಕಾಲ ಬಾಹ್ಯಾಕಾಶದಲ್ಲೇ ಉಳಿಯಬೇಕಾಗಿತ್ತು. ಅದ್ರೆ ಇವರನ್ನು ಹೊತ್ತಿದ್ದ ಸ್ಪೇಸ್‌ಎಕ್ಸ್‌ ಸಂಸ್ಥೆಯ ಕ್ಯಾಪ್ಸೂಲ್‌ ಫ್ಲೋರಿಡಾದ ಸಮುದ್ರದಲ್ಲಿ ಜಲಸ್ಪರ್ಧ ಮಾಡಿರುವುದು ಸುದೀರ್ಘ ಅವಧಿಯಿಂದ ಮನೆ ಮಾಡಿದ್ದ ಅನಿಶ್ಚಿತತೆಯೊಂದನ್ನು ಕೊನೆಗೊಳಿಸಿದೆ. ಹಾಗಾದ್ರೆ ಭೂಮಿಗೆ ಬಂದ ನಂತ್ರ ಮುಂದೇನು? ತಕ್ಷಣಕ್ಕೆ ಸಹಜ ಜೀವನ ನಡೆಸಬಹುದೇ? ಅವರ ಆರೋಗ್ಯದ ಮೇಲೆ ಬೀರುವ ಪರಿಣಾಮಗಳೇನು? ಅದಕ್ಕೆ ಪರಿಹಾರ ಏನು? ಅನ್ನೋದೇ ಪ್ರಶ್ನೆ..

    ನಾವು ಗಗನಯಾತ್ರೆ ಎಂದಾಕ್ಷಣ ಸಾಮಾನ್ಯರ ಮನಸ್ಸಿನಲ್ಲಿ ಏನೋ ಒಂದು ಕೌತುಕ, ಮನಸ್ಸಿನಲ್ಲಿ ತಮ್ಮದೇ ಕಲ್ಪನೆ. ಗುರುತ್ವಾಕರ್ಷಣೆ ಇಲ್ಲದ ಬಾಹ್ಯಾಕಾಶದಲ್ಲಿ (Space) ಹಕ್ಕಿಯಂತೆ ಹಾರಾಡುವ ಅದ್ಭುತವೇ ಸರಿ. ಆದ್ರೆ ಬಾಹ್ಯಾಕಾಶದಲ್ಲಿ ಹಕ್ಕಿಗಳಂತೆ ಹಾರಾಡಿ ಮತ್ತು ಮನುಷ್ಯ ಸಹಜ ಜೀವನಕ್ಕೆ ತೆರೆದುಕೊಳ್ಳುವುದು ಅಷ್ಟು ಸುಲಭವಲ್ಲ. ಅದಕ್ಕೆಂದೇ ಸೂಕ್ತ ಮಾರ್ಪಾಡುಗಳನ್ನ ಮಾಡಿಕೊಳ್ಳಬೇಕಾಗುತ್ತೆ.

    ಹೌದು. ಬಾಹ್ಯಾಕಾಶ ಪ್ರಯಾಣ ಕೈಗೊಂಡ ಬಳಿಕ, ಗಗನಯಾತ್ರಿಗಳು ಬಾಹ್ಯಾಕಾಶದ ಕನಿಷ್ಠ ಗುರುತ್ವಾಕರ್ಷಣೆಯ (Gravity) ಕಾರಣದಿಂದ ಒಂದಷ್ಟು ಆರೋಗ್ಯ ಸಂಬಂಧಿ ವಿಚಾರಗಳು (Health Issues) ಹಾಗೂ ಶಾರೀರಿಕ ಬದಲಾವಣೆಗಳನ್ನ ಎದುರಿಸುವ ಸಾಧ್ಯತೆಗಳಿವೆ. ಅದರಲ್ಲಿನ ಕೆಲವು ಪರಿಸ್ಥಿತಿಗಳನ್ನ ನಾವಿಲ್ಲಿ ಕಾಣಬಹುದು.

    ಮೂಳೆಗಳು ಬಲಹೀನವಾಗುತ್ತವೆ:
    ಬಾಹ್ಯಾಕಾಶ ಪ್ರಯಾಣದ ಸಂದರ್ಭದಲ್ಲಿ ದೀರ್ಘಕಾಲದ ತನಕ ಕನಿಷ್ಠ ಗುರುತ್ವಾಕರ್ಷಣೆಗೆ ಒಳಗಾಗುವುದು ಸ್ನಾಯು ಕ್ಷೀಣತೆಯ ಸಮಸ್ಯೆ ಉಂಟುಮಾಡಬಲ್ಲದು. ಅಂದರೆ, ಕಡಿಮೆ ದೈಹಿಕ ಚಟುವಟಿಕೆಗಳ ಕಾರಣದಿಂದ ಸ್ನಾಯುಗಳ ಅಂಗಾಂಶಗಳು ಕ್ರಮೇಣ ಕಡಿಮೆಯಾಗಿ, ಶಕ್ತಿ ಕಳೆದುಕೊಳ್ಳುತ್ತವೆ.

    ಗಗನಯಾತ್ರಿಗಳು (Astronauts) ಸಾಮಾನ್ಯವಾಗಿ ಈ ಸಮಸ್ಯೆಯನ್ನ ಎದುರಿಸಿ, ಭೂಮಿಗೆ ಮರಳಿದ ಬಳಿಕ, ಸ್ನಾಯು ಭಾರ ಮತ್ತು ಶಕ್ತಿಯನ್ನ ಮರಳಿ ಪಡೆಯಲು ದೈಹಿಕ ಪುನರ್ವಸತಿ ಚಿಕಿತ್ಸೆ ಪಡೆಯಬೇಕಾಗುತ್ತದೆ. ಸ್ನಾಯು ಕ್ಷೀಣತೆಯ ಕಾರಣದಿಂದ, ದುರ್ಬಲತೆ ಮತ್ತು ಚಲನಹೀನತೆ ಉಂಟಾಗಬಹುದು. ಇದನ್ನ ಎದುರಿಸಲು, ಗಗನಯಾತ್ರಿಗಳು ದೈಹಿಕ ಚಿಕಿತ್ಸೆ, ಶಕ್ತಿ ತರಬೇತಿ ಹಾಗೂ ನಿರಂತರ ವ್ಯಾಯಾಮ ನಡೆಸುತ್ತಾರೆ. ಅದರೊಂದಿಗೆ ಮೂಳೆಯ ಸಾಂದ್ರತೆ ಕಳೆದುಕೊಳ್ಳುವುದು ಬಾಹ್ಯಾಕಾಶದಲ್ಲಿ ಇನ್ನೊಂದು ಕಳವಳಕಾರಿ ವಿಚಾರ. ಇದರಿಂದಾಗಿ ಮೂಳೆಗಳು ಬಲಹೀನವಾಗುತ್ತವೆ. ಗಗನಯಾತ್ರಿಗಳು ಇದನ್ನ ಎದುರಿಸಲು ನಿಯಮಿತ ವ್ಯಾಯಾಮ, ಉತ್ತಮ ಪೋಷಕಾಂಶಗಳ ಸೇವನೆಯಂತಹ ಕ್ರಮಗಳನ್ನ ಕೈಗೊಳ್ಳುತ್ತಾರೆ.

    ಹೃದಯ ಬಡಿತ ಹೆಚ್ಚಾಗುತ್ತೆ, ತಲೆ ಸುತ್ತು ಜಾಸ್ತಿಯಾಗುತ್ತೆ:
    ಬಾಹ್ಯಾಕಾಶ ಪ್ರಯಾಣ ಗಗನಯಾತ್ರಿಗಳಲ್ಲಿ ಆರ್ಥೋಸ್ಟಾಟಿಕ್ ಇಂಟಾಲರೆನ್ಸ್ (ಮಾನಸಿಕ ಅಸಹಿಷ್ಣುತೆ) ಸೇರಿದಂತೆ, ಹೃದಯದ ರಕ್ತನಾಳದ ಬದಲಾವಣೆಗಳನ್ನ ತರಬಲ್ಲದು. ಇದರ ಪರಿಣಾಮವಾಗಿ ಅವರಲ್ಲಿ ಕುಳಿತಲ್ಲಿಂದ ಅಥವಾ ಮಲಗಿದಲ್ಲಿಂದ ಎದ್ದು ನಿಲ್ಲುವಾಗ ತಲೆಸುತ್ತು, ಮೂರ್ಛೆ ಹೋಗುವುದು ಅಥವಾ ಹೃದಯ ಬಡಿತ ಪ್ರಮಾಣ ಹೆಚ್ಚಳ ಕಂಡುಬರಬಹುದು. ಈ ಪರಿಸ್ಥಿತಿ ರಕ್ತದೊತ್ತಡದ ನಿಯಂತ್ರಣದಲ್ಲಿನ ಬದಲಾವಣೆ ಹಾಗೂ ಸ್ವಯಂಚಾಲಿತ ನರಮಂಡಲದ ಕಾರ್ಯಾಚರಣೆಯ ಕಾರಣದಿಂದ ಉಂಟಾಗಬಹುದು. ಇದರ ಚಿಕಿತ್ಸೆ ಸಾಮಾನ್ಯವಾಗಿ ಜೀವನಶೈಲಿಯಲ್ಲಿನ ಬದಲಾವಣೆ, ಹೆಚ್ಚಿನ ದ್ರವ ಆಹಾರ ಮತ್ತು ಉಪ್ಪಿನ ಸೇವನೆ, ಸಂಕೋಚನ ವಸ್ತ್ರಗಳನ್ನು ಧರಿಸುವುದು (ದೇಹಕ್ಕೆ ಆರಾಮದಾಯಕ ಹಾಗೂ ಸುರಕ್ಷಿತ ಅನ್ನಿಸುವ ಉಡುಪುಗಳು) ಮತ್ತು ಕೆಲವು ಸಂದರ್ಭಗಳಲ್ಲಿ ಸುಗಮವಾಗಿ ಎದ್ದು ನಿಲ್ಲುವಂತಾಗಲು ಔಷಧೀಯ ಕ್ರಮಗಳನ್ನೂ ಒಳಗೊಂಡಿರುತ್ತದೆ.

    ಜೊತೆಗೆ ಮಾಂಸ ಖಂಡಗಳು, ಕಾರ್ಡಿಯೋ ವಾಸ್ಕುಲರ್‌ ಸಿಸ್ಟಮ್‌ ಭೂಮಿಗೆ ಹೊಂದಿಕೊಳ್ಳುವಂತೆ ಸರಿಪಡಿಸಬೇಕಾಗುತ್ತದೆ. ಇದು ಭೂಮಿಗೆ ಮರಳಿದ ನಂತರ ಸಾಮಾನ್ಯ ಜೀವನಕ್ಕೆ ಕರೆತರುವುದು ಕನಿಷ್ಠ 6 ತಿಂಗಳು ಬೇಕಾಗಬಹುದು ಎನ್ನುತ್ತಾರೆ ಭೌತ ವಿಜ್ಞಾನ ಪ್ರಾಧ್ಯಾಪಕಿ ವೈ.ಸಿ ಕಮಲಾ.

    ದೃಷ್ಟಿಯ ಬದಲಾವಣೆಗಳು:
    ಕೆಲವು ಗಗನಯಾತ್ರಿಗಳು ಬಾಹ್ಯಾಕಾಶದಲ್ಲಿ ಕಣ್ಣಿನ ಸಮಸ್ಯೆಗಳನ್ನೂ ಎದುರಿಸುತ್ತಾರೆ. ಉದಾಹರಣೆಗೆ ಕಣ್ಣುಗಳಲ್ಲಿ ದ್ರವದ ಬದಲಾವಣೆಗಳು ದೃಷ್ಟಿಯನ್ನು ದುರ್ಬಲಗೊಳಿಸಬಹುದು. ಈ ಸ್ಥಿತಿಯನ್ನು ಸ್ಪೇಸ್ ಫ್ಲೈಟ್-ಅಸೋಸಿಯೇಟೆಡ್ ನ್ಯೂರೋ-ಆಕ್ಯುಲರ್ ಸಿಂಡ್ರೋಮ್ (ಎಸ್ಎಎನ್ಎಸ್) ಎಂದು ಕರೆಯಲಾಗುತ್ತದೆ.

    ಕ್ಯಾನ್ಸರ್‌ಗೆ ತುತ್ತಾಗುವ ಅಪಾಯವಿದೆ:
    ಗಗನಯಾತ್ರಿಗಳು ಬಾಹ್ಯಾಕಾಶದಲ್ಲಿ ಅಧಿಕ ಮಟ್ಟದ ಕಾಸ್ಮಿಕ್ ವಿಕಿರಣಕ್ಕೆ ಒಡ್ಡಿಕೊಳ್ಳುತ್ತಾರೆ. ಇದರ ಪರಿಣಾಮವಾಗಿ, ಕಾಲಾನಂತರದಲ್ಲಿ ಕ್ಯಾನ್ಸರ್ ಮತ್ತು ಇತರ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುವ ಅಪಾಯವು ಹೆಚ್ಚಾಗಿರುತ್ತದೆ.

    ಮಾನಸಿಕ ಪರಿಣಾಮಗಳೇನು?
    ಬಾಹ್ಯಾಕಾಶ ಯಾತ್ರೆಯು ಏಕಾಂತತೆ, ಬಂಧನದ ಭಾವ ಮೂಡಿಸುತ್ತದೆ ಮತ್ತು ಇದರಿಂದ ಉಂಟಾಗುವ ಒತ್ತಡವು ಮನಸ್ಥಿತಿಯಲ್ಲಿ ಬದಲಾವಣೆ ಉಂಟುಮಾಡಿ, ಆತಂಕ ಮತ್ತು ಖಿನ್ನತೆಯಂತಹ ಕೆಲವು ಮಾನಸಿಕ ಸಮಸ್ಯೆಗಳನ್ನ ತಂದೊಡ್ಡಬಹುದು.

    ರೋಗನಿರೋಧಕ ಶಕ್ತಿ ಕುಗ್ಗಿಸುತ್ತೆ:
    ಬಾಹ್ಯಾಕಾಶ ಯಾನವು ರೋಗನಿರೋಧಕ ವ್ಯವಸ್ಥೆಯನ್ನು ಬಹುತೇಕ ದುರ್ಬಲಗೊಳಿಸಿ, ಗಗನಯಾತ್ರಿಗಳನ್ನು ಸೋಂಕುಗಳಿಗೆ ಒಳಗಾಗುವ ಸಾಧ್ಯತೆ ಹೆಚ್ಚಿಸುತ್ತದೆ.

    ವೆಸ್ಟಿಬ್ಯುಲರ್ ಸಮಸ್ಯೆಗಳು:
    ಒಳಗಿವಿಯ ಸಮತೋಲನ ವ್ಯವಸ್ಥೆಯಲ್ಲಿ ಉಂಟಾಗುವ ಬದಲಾವಣೆಗಳು ಬಾಹ್ಯಾಕಾಶ ಯಾನದ ಸಮಯದಲ್ಲಿ ಮತ್ತು ಆಮೇಲೂ ದಿಕ್ಕು ತಪ್ಪಿಸುವಿಕೆ ಮತ್ತು ಚಲನೆಯಲ್ಲಿ ಅಸಮತೋಲನಕ್ಕೆ ಕಾರಣವಾಗಬಹುದು.

    ಈ ಎಲ್ಲ ಆರೋಗ್ಯ ಸಮಸ್ಯೆಗಳನ್ನ ನಿಯಂತ್ರಿಸಲು, ಗಗನಯಾತ್ರಿಗಳು ತಮ್ಮ ಕಾರ್ಯಾಚರಣೆಗೆ ಪೂರ್ವದಲ್ಲಿ ಹಾಗೂ ಪೂರ್ಣಗೊಂಡ ಮೇಲೆ ಸಂಪೂರ್ಣ ವೈದ್ಯಕೀಯ ಮೌಲ್ಯಮಾಪನಗಳಿಗೆ ಒಳಗಾಗುತ್ತಾರೆ. ಜೊತೆಗೆ ಸೂಕ್ಷ್ಮ ಗುರುತ್ವಾಕರ್ಷಣೆಯ ನಕಾರಾತ್ಮಕ ಪರಿಣಾಮಗಳನ್ನ ಕಡಿಮೆ ಮಾಡಲು ತಮ್ಮ ಕಾರ್ಯಗಳ ಸಮಯದಲ್ಲೂ ಅವರು ವ್ಯಾಯಾಮ ಮತ್ತು ಪುನರ್ವಸತಿ ಕಾರ್ಯಕ್ರಮಗಳಲ್ಲಿ ತೊಡಗಿಕೊಳ್ಳುತ್ತಾರೆ. ಅಲ್ಲದೇ, ಬಾಹ್ಯಾಕಾಶ ಯಾನಕ್ಕೆ ಸಂಬಂಧಿಸಿದ ಈ ಆರೋಗ್ಯ ಸವಾಲುಗಳನ್ನ ಇನ್ನಷ್ಟು ಚೆನ್ನಾಗಿ ಅರ್ಥ ಮಾಡಿಕೊಳ್ಳಲು ಮತ್ತು ಪರಿಹರಿಸಲು ಅನೇಕ ಸಂಶೋಧನೆಗಳು ಪ್ರಗತಿಯಲ್ಲಿವೆ.

    ಮಾಹಿತಿ:
    ಸುಂದರ್‌, ಭೌತ ವಿಜ್ಞಾನಿ
    ವೈ.ಸಿ ಕಮಲಾ, ಭೌತ ವಿಜ್ಞಾನ ಪ್ರಾಧ್ಯಾಪಕರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ತುಮಕೂರು
    ಗಿರೀಶ್‌ ಲಿಂಗಣ್ಣ, ರಕ್ಷಣಾ ಮತ್ತು ಬಾಹ್ಯಾಕಾಶ ವಿಶ್ಲೇಷಕರು

    ಲೇಖನ: ಮೋಹನ ಬಿ.ಎಂ

  • ಅಮೆರಿಕ | ಗುಜರಾತ್‌ ಮೂಲದ ಅಪ್ಪ-ಮಗಳಿಗೆ ಗುಂಡಿಕ್ಕಿ ಹತ್ಯೆ – ಶೂಟರ್‌ ಅರೆಸ್ಟ್‌

    ಅಮೆರಿಕ | ಗುಜರಾತ್‌ ಮೂಲದ ಅಪ್ಪ-ಮಗಳಿಗೆ ಗುಂಡಿಕ್ಕಿ ಹತ್ಯೆ – ಶೂಟರ್‌ ಅರೆಸ್ಟ್‌

    ವಾಷಿಂಗ್ಟನ್‌: ಅಮೆರಿಕದಲ್ಲಿ (USA) ನಡೆದ ಭೀಕರ ಗುಂಡಿನ ದಾಳಿಗೆ (Shoot out) ಭಾರತೀಯ ಮೂಲದ ಅಪ್ಪ ಮಗಳು ಬಲಿಯಾಗಿದ್ದಾರೆ.

    24 ವರ್ಷದ ಭಾರತೀಯ ಮಹಿಳೆ ಮತ್ತು ಆಕೆಯ 56 ವರ್ಷದ ತಂದೆಯನ್ನು ಅಮೆರಿಕದ ವರ್ಜೀನಿಯಾದಲ್ಲಿ ಅವರು ಕೆಲಸ ಮಾಡುತ್ತಿದ್ದ ಅಂಗಡಿಯೊಂದರಲ್ಲೇ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಅಕೋಮಾಕ್ ಕೌಂಟಿಯಲ್ಲಿ (Accomack County) ಅಂಗಡಿ ತೆರೆದ ಕೆಲವೇ ಸಮಯದ ಬಳಿಕ ಗುಂಡಿನ ದಾಳಿ ನಡೆದಿದೆ.

    ಪ್ರದೀಪ್ ಪಟೇಲ್ (56), ಊರ್ಮಿ (24) ಹತ್ಯೆಯಾದ ತಂದೆ ಮಗಳು. ಶೂಟರ್‌ ಜಾರ್ಜ್ ಫ್ರೇಜಿಯರ್ ಡೆವೊನ್ ವಾರ್ಟನ್ (44) ಬಂಧಿತ ಆರೋಪಿ. ಇದನ್ನೂ ಓದಿ: ದೇಶ ಭ್ರಷ್ಟ ವಜ್ರೋದ್ಯಮಿ ಮೆಹುಲ್ ಚೋಕ್ಸಿ ಬೆಲ್ಜಿಯಂನಲ್ಲಿ ವಾಸ್ತವ್ಯ – ಶೀಘ್ರದಲ್ಲೇ ಭಾರತಕ್ಕೆ ಕರೆತರಲು ಪ್ಲ್ಯಾನ್‌

    ಸ್ಥಳೀಯ ಮೂಲಗಳ ಪ್ರಕಾರ, ಆರೋಪಿ ಮದ್ಯ ಖರೀದಿಸಲು ಅಪ್ಪ-ಮಗಳಿದ್ದ ಅಂಗಡಿಗೆ ಬಂದಿದ್ದರು. ಈ ವೇಳೆ ರಾತ್ರಿ ಅಂಗಡಿ ಏಕೆ ಮುಚ್ಚಲಾಗುತ್ತು ಎಂದು ಕೇಳಿದ್ದಾರೆ. ಈ ವೇಳೆ ಮಾತಿನ ಚಕಮಕಿ ಜೋರಾಗಿದ್ದು, ಆರೋಪಿ ಗುಂಡು ಹಾರಿಸಿದ್ದಾನೆ. ತಂದೆ ಪ್ರದೀಪ್‌ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮಗಳು ಊರ್ಮಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: ಮಸೀದಿ ಮೇಲೆ ಉಗ್ರರಿಂದ ಗುಂಡಿನ ದಾಳಿ – 44 ಸಾವು, 13 ಮಂದಿ ಗಾಯ

    ಪ್ರದೀಪ್‌ ಪಟೇಲ್‌, ಪತ್ನಿ ಹಂಸಾಬೆನ್‌, ಮಗಳು ಊರ್ಮಿ ಗುಜರಾತ್‌ನ ಮೆಹ್ಸಾನಾ ಜಿಲ್ಲೆಯವರು. 6 ವರ್ಷಗಳ ಹಿಂದೆ ಅಮೆರಿಕಾಗೆ ತೆರಳಿದ್ದರು. ಪ್ರದೀಪ್‌ ತನ್ನ ಸಂಬಂಧಿ ಪರೇಶ್‌ ಪಟೇಲ್‌ ಮಾಲೀಕತ್ವದ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು.

    ಸದ್ಯ ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಸ್ಥಳೀಯ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ವಿದ್ಯುತ್‌ ಸಬ್‌ಸ್ಟೇಷನ್‌ನಲ್ಲಿ ಅಗ್ನಿ ಅನಾಹುತ – ಲಂಡನ್‌ ಹೀಥ್ರೂ ವಿಮಾನ ನಿಲ್ದಾಣ ದಿನಪೂರ್ತಿ ಬಂದ್‌

  • ಅಮೆರಿಕದ ಶಿಕ್ಷಣ ಇಲಾಖೆಯೇ ಬಂದ್‌ – ಮಕ್ಕಳ ಮುಂದೆಯೇ ಆದೇಶಕ್ಕೆ ಟ್ರಂಪ್‌ ಸಹಿ

    ಅಮೆರಿಕದ ಶಿಕ್ಷಣ ಇಲಾಖೆಯೇ ಬಂದ್‌ – ಮಕ್ಕಳ ಮುಂದೆಯೇ ಆದೇಶಕ್ಕೆ ಟ್ರಂಪ್‌ ಸಹಿ

    ವಾಷಿಂಗ್ಟನ್‌: ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಅವರು ಸರ್ಕಾರದ ಶಿಕ್ಷಣ ಇಲಾಖೆಯನ್ನು (Department of Education) ಬಂದ್‌ ಮಾಡಿದ್ದಾರೆ.

    ಅಮೆರಿಕ ಚುನಾವಣೆಯ (USA Election) ಸಮಯದಲ್ಲಿ ಟ್ರಂಪ್‌ ಅವರು ಶಿಕ್ಷಣ ಇಲಾಖೆಯನ್ನು ಮುಚ್ಚುವುದಾಗಿ ಭರವಸೆ ನೀಡಿದ್ದರು. ಈ ಭರವಸೆಯಂತೆ ಈಗ ಅವರು ಶಿಕ್ಷಣ ಇಲಾಖೆಯನ್ನು ಮುಚ್ಚುವ ಕಾರ್ಯಕಾರಿ ಆದೇಶಕ್ಕೆ ಸಹಿ ಹಾಕಿದರು. ಟ್ರಂಪ್‌ ಅವರು ಪುಟಾಣಿ ಮಕ್ಕಳನ್ನು ಕುಳ್ಳಿರಿಸಿ ಈ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದಾರೆ.

    ಶಿಕ್ಷಣ ಇಲಾಖೆ ಬಂದ್‌ ಮಾಡಿ ಶಾಲಾ ನೀತಿಯನ್ನು ಸಂಪೂರ್ಣವಾಗಿ ರಾಜ್ಯಗಳಿಗೆ ನೀಡುತ್ತೇನೆ ಎಂದು ಟ್ರಂಪ್‌ ಈ ಹಿಂದೆ ಹೇಳಿದ್ದರು. ಈ ಭರವಸೆಯಂತೆ ಶಿಕ್ಷಣ ಇಲಾಖೆಯ ಟ್ರಂಪ್‌ ಮುಚ್ಚಿದ್ದರಿಂದ ಇನ್ನು ಮುಂದೆ ಶಿಕ್ಷಣದಲ್ಲಿ ಅಮೆರಿಕ ಸರ್ಕಾರದ ಹಸ್ತಕ್ಷೇಪ ಇರುವುದಿಲ್ಲ. ಸಂಪೂರ್ಣವಾಗಿ ರಾಜ್ಯಗಳಿಗೆ ಅಧಿಕಾರ ಇರಲಿದೆ.

     

    ಶಿಕ್ಷಣ ರಾಜ್ಯಗಳಿಗೆ ಸೇರಬೇಕಿತ್ತು. ನಾವು ಮರಳಿ ಶಿಕ್ಷಣವನ್ನು ರಾಜ್ಯಗಳಿಗೆ ನೀಡಿದ್ದೇವೆ ಎಂದು ಪ್ರಕಟಿಸಿದರು. ಕಳೆದ ವಾರ ಇಲಾಖೆಯು ತನ್ನ ಅರ್ಧದಷ್ಟು ಸಿಬ್ಬಂದಿಯನ್ನು ವಜಾಗೊಳಿಸುವುದಾಗಿ ಟ್ರಂಪ್‌ ಘೋಷಣೆ ಮಾಡಿದ್ದರು.

    ಶಿಕ್ಷಣ ಇಲಾಖೆಯು ಅಮೇರಿಕನ್ ಶಿಕ್ಷಣದ ಗುಣಮಟ್ಟವನ್ನು ಸುಧಾರಿಸುವಲ್ಲಿ ವಿಫಲವಾಗಿದೆ. 1979 ರಲ್ಲಿ ಇಲಾಖೆಯ ರಚನೆಗೆ ರಿಪಬ್ಲಿಕನ್ನರಿಂದ ಮಾತ್ರವಲ್ಲದೇ ಆಗಿನ ಅಧ್ಯಕ್ಷ ಜಿಮ್ಮಿ ಕಾರ್ಟರ್ ಅವರ ಸ್ವಂತ ಸಂಪುಟದ ಸದಸ್ಯರಿಂದ ಕೂಡ ಪ್ರತಿರೋಧ ವ್ಯಕ್ತವಾಗಿತ್ತು ಎಂದು ತಿಳಿಸಿದರು.

    ಇಲಾಖೆಯನ್ನು ಮುಚ್ಚಿದ್ದು ಯಾಕೆ?
    ಟ್ರಂಪ್‌ ಆಗಾಗ ಶಿಕ್ಷಣ ಇಲಾಖೆಯ ವಿರುದ್ಧ ಕಿಡಿಕಾರುತ್ತಿದ್ದರು. ಎಡಪಂಥಿಯವಾದಿಗಳು ತಮಗೆ ಬೇಕಾದಂತೆ ಶಿಕ್ಷಣವನ್ನು ರೂಪಿಸಿದ್ದಾರೆ. ತಮ್ಮ ಸಿದ್ಧಾಂತಕ್ಕೆ ಪೂರಕವಾಗಿರುವ ಶಿಕ್ಷಣ ಸಂಸ್ಥೆಗಳಿಗೆ ಅನುದಾನವನ್ನು ನೀಡಲಾಗುತ್ತಿದೆ. ಶಿಕ್ಷಣಕ್ಕಿಂತ ಮುಖ್ಯವಾಗಿ ತಮ್ಮ ಸಿದ್ಧಾಂತವನ್ನು ಪ್ರಚಾರ ಪಡಿಸಲು ಈ ಸಂಸ್ಥೆಯನ್ನು ಬಳಕೆ ಮಾಡಲಾಗುತ್ತಿದೆ. ಟ್ರಾನ್ಸ್‌ಜೆಂಡರ್ ವಿದ್ಯಾರ್ಥಿಗಳನ್ನು ಬೆಂಬಲಿಸುವ ನೀತಿಗಳನ್ನು ಸೇರಿಸಲಾಗಿದೆ. ಸಾರ್ವಜನಿಕ ಶಿಕ್ಷಣ ವಿದ್ಯಾರ್ಥಿಗಳನ್ನು ಧರ್ಮಬೋಧನೆ ಮಾಡುವ ದೊಡ್ಡ ಮಾರ್ಕ್ಸ್‌ವಾದಿ ಪಿತೂರಿಯ ಭಾಗವಾಗಿದೆ. ವಿದೇಶಗಳಲ್ಲೂ ಎಡ ಚಿಂತನೆಯ ಅಧ್ಯಯನಕ್ಕೆ ಅಮೆರಿಕ ಜನರ ತೆರಿಗೆ ದುಡ್ಡನ್ನು ಅನುದಾನವಾಗಿ ನೀಡಲಾಗುತ್ತದೆ ಎಂದು ದೂರಿದ್ದರು.

    ಶ್ವೇತಭವನದ (White House) ದಾಖಲೆಯ ಪ್ರಕಾರ 1979 ರಿಂದ ಶಿಕ್ಷಣ ಇಲಾಖೆ 3 ಲಕ್ಷ ಕೋಟಿ ಡಾಲರ್‌ ಹಣವನ್ನು ಖರ್ಚು ಮಾಡಿದೆ. ಪ್ರತಿ ವಿದ್ಯಾರ್ಥಿಯ ಮೇಲೆ 245% ಗಿಂತ ಹೆಚ್ಚು ಹಣ ಖರ್ಚು ಮಾಡಲಾಗಿದೆ. ಆದರೆ ಈ ಖರ್ಚುಗಳನ್ನು ತೋರಿಸಲು ಯಾವುದೇ ದಾಖಲೆಗಳಿಲ್ಲ.

    13 ವರ್ಷ ವಯಸ್ಸಿನ ಮಕ್ಕಳ ಗಣಿತ ಮತ್ತು ಕಲಿಕಾ ಗುಣಮಟ್ಟ ದಶಕಗಳಲ್ಲಿ ಅತ್ಯಂತ ಕಡಿಮೆ ಮಟ್ಟದಲ್ಲಿವೆ ಎಂದು ಶ್ವೇತಭವನದ ದತ್ತಾಂಶವು ತೋರಿಸುತ್ತದೆ. ನಾಲ್ಕನೇ ತರಗತಿಯ ಹತ್ತರಲ್ಲಿ ಆರು ಮತ್ತು ಎಂಟನೇ ತರಗತಿಯ ಮುಕ್ಕಾಲು ಭಾಗದಷ್ಟು ವಿದ್ಯಾರ್ಥಿಗಳು ಗಣಿತದಲ್ಲಿ ಹಿಂದಿದ್ದಾರೆ. ನಾಲ್ಕನೇ ಮತ್ತು ಎಂಟನೇ ತರಗತಿಯ ಹತ್ತರಲ್ಲಿ ಏಳು ವಿದ್ಯಾರ್ಥಿಗಳು ಓದುವಲ್ಲಿ ಪ್ರವೀಣರಾಗಿಲ್ಲ. ನಾಲ್ಕನೇ ತರಗತಿಯ 40% ರಷ್ಟು ವಿದ್ಯಾರ್ಥಿಗಳು ಓದುವುದರಲ್ಲಿ  ಹಿಂದಿದ್ದಾರೆ ಎಂದು ತಿಳಿಸಿದೆ.

  • ಕೆನಡಾ ಅಮೆರಿಕದ ಭಾಗವಾಗಲ್ಲ – ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಪ್ರಧಾನಿ ಮಾರ್ಕ್‌ ಕಾರ್ನಿ ಘೋಷಣೆ

    ಕೆನಡಾ ಅಮೆರಿಕದ ಭಾಗವಾಗಲ್ಲ – ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಪ್ರಧಾನಿ ಮಾರ್ಕ್‌ ಕಾರ್ನಿ ಘೋಷಣೆ

    ಒಟ್ಟಾವಾ: ಕೆನಡಾದ 24ನೇ ಪ್ರಧಾನ ಮಂತ್ರಿಯಾಗಿ ಮಾರ್ಕ್ ಕಾರ್ನಿ (Mark Carney) ಅವರು ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಟ್ರಂಪ್‌ ಸರ್ಕಾರದ ವಿರುದ್ಧ ಸಮರ ಸಾರಿದ್ದಾರೆ. ಆಕಾರದಲ್ಲಾಗಲಿ, ರೂಪದಲ್ಲಾಗಲಿ ಕೆನಡಾ (Canada), ಅಮೆರಿಕದ ಭಾಗವಾಗುವುದಿಲ್ಲ ಎಂದರಲ್ಲದೇ ಡೊನಾಲ್ಡ್‌ ಟ್ರಂಪ್‌ (Donald Trump) ಅವರ ಸುಂಕ ವಿಧಿಸುವ ಕ್ರಮವನ್ನು ಎದುರಿಸುವುದೇ ನಮ್ಮ ಪ್ರಮುಖ ಆದ್ಯತೆ ಎಂದು ಗುಡುಗಿದ್ದಾರೆ.

    ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಾತನಾಡಿದ ಮಾರ್ಕ್‌ ಕಾರ್ನಿ, ಕೆನಡಾ ಆಕಾರ – ಗಾತ್ರದಲ್ಲಿ, ಯಾವುದೇ ರೀತಿಯಲ್ಲಾಗಲಿ ಅಮೆರಿಕದ ಭಾಗವಾಗುವುದಿಲ್ಲ. ಆದ್ರೆ ನಮ್ಮ ಸರ್ಕಾರ ಎರಡೂ ದೇಶದ ಹಿತಾಸಕ್ತಿಯನ್ನು ಹೆಚ್ಚಿಸಲು ವಾಷಿಂಗ್ಟನ್‌ನೊಂದಿಗೆ ಒಟ್ಟಾಗಿ ಕೆಲಸ ಮಾಡಬಹುದು ಭರವಸೆ ನೀಡಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಇನ್ನು ಮುಂದೆ ಕಸಕ್ಕೂ ಸರ್ವಿಸ್‌ ಚಾರ್ಜ್‌ – ಏ.1 ರಿಂದ ಜಾರಿ

    ಇದೇ ವೇಳೆ ಟ್ರಂಪ್‌ ಅವರನ್ನು ಭೇಟಿಯಾಗುವ ವಿಚಾರ ಕುರಿತು ಪ್ರತಿಕ್ರಿಯಿಸಿ, ಕೆನಡಾ ಅನುಭವಿ ಕ್ಯಾಬಿನೆಟ್‌ ಹೊಂದಿದ್ದು, ಅತ್ಯಂತ ವೇಗವಾಗಿ ಕೆಲಸ ಮಾಡುತ್ತದೆ. ಅಲ್ಲದೇ ಭವಿಷ್ಯವನ್ನು ರಕ್ಷಿಸುತ್ತಾ, ನಮ್ಮ ಆರ್ಥಿಕತೆಯನ್ನು ಸುರಕ್ಷಿತಗೊಳಿಸುತ್ತದೆ. ಕೆನಡಾದ ಸಾರ್ವಭೌಮತ್ವಕ್ಕೆ ಗೌರವ ಕೊಡುವುದಾದರೇ ಟ್ರಂಪ್‌ ಅವರನ್ನು ಭೇಟಿಯಾಗಲು ಒಪ್ಪುತ್ತೇನೆ ಎಂದು ಖಡಕ್ಕಾಗಿ ಹೇಳಿದ್ದಾರೆ. ಇದನ್ನೂ ಓದಿ: ಮಧ್ಯಾಹ್ನ 12 ರಿಂದ 3 ಗಂಟೆ ವರೆಗೆ ಮನೆಯಿಂದ ಹೊರಗೆ ಬರಬೇಡಿ: ದಿನೇಶ್ ಗುಂಡೂರಾವ್

    ಕಳೆದ ಜನವರಿಯಲ್ಲಿ ಟ್ರಂಪ್‌ ಅಧಿಕಾರ ಸ್ವೀಕರಿಸಿದ ಬಳಿಕ ಒಟ್ಟಾವ ಗಡಿಯಾಚೆಗಿನ ಸಂಬಂಧಗಳು ಕುಸಿದಿವೆ. ಅಲ್ಲದೇ ಕೆನಡಾವನ್ನು 51ನೇ ರಾಜ್ಯವಾಗಿ ಮಾಡಿಕೊಳ್ಳುವ ಚಿಂತನೆ ಹಾಗೂ ಕೆನಡಾ ಉತ್ಪನ್ನಗಳ ಮೇಲೆ ಸುಂಕ ವಿಧಿಸುವ ಟ್ರಂಪ್‌ ಅವರ ನಿರ್ಧಾರಗಳು ಉಭಯ ದೇಶಗಳ ಸಂಬಂಧ ಮತ್ತಷ್ಟು ಹಳಸುವಂತೆ ಮಾಡಿದೆ. ‌ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ವಕ್ಫ್‌ ಅಧ್ಯಕ್ಷ ಸ್ಥಾನಕ್ಕೆ ಜಟಾಪಟಿ – ಅಧ್ಯಕ್ಷರಾಗಿ ಸೈಯದ್ ಹುಸೈನಿ ಆಯ್ಕೆ

  • ಹಮಾಸ್‌ ಬೆಂಬಲಿಸಿದ್ದ ಭಾರತೀಯ ವಿದ್ಯಾರ್ಥಿನಿಯನ್ನು ಹೊರದಬ್ಬಿದ ಅಮೆರಿಕ

    ಹಮಾಸ್‌ ಬೆಂಬಲಿಸಿದ್ದ ಭಾರತೀಯ ವಿದ್ಯಾರ್ಥಿನಿಯನ್ನು ಹೊರದಬ್ಬಿದ ಅಮೆರಿಕ

    ವಾಷಿಂಗ್ಟನ್: ಪ್ಯಾಲೆಸ್ತೀನ್‌ ಪರ ಪ್ರತಿಭಟನೆಯಲ್ಲಿ ಭಾಗವಹಿಸಿ ಹಮಾಸ್‌ (Hamas) ಉಗ್ರ ಸಂಘಟನೆಯನ್ನು ಬೆಂಬಲಿಸಿದ್ದಕ್ಕೆ ಭಾರತೀಯ ವಿದ್ಯಾರ್ಥಿನಿಯ ವೀಸಾವನ್ನು (Visa) ಅಮೆರಿಕ ರದ್ದುಗೊಳಿಸಿ ಗಡೀಪಾರು ಮಾಡಿದೆ.

    ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ (Columbia University) ಓದುತ್ತಿದ್ದ ರಂಜನಿ ಶ್ರೀನಿವಾಸನ್ (Ranjani Srinivasan) ಸ್ವಯಂ ಗಡೀಪಾರಾದ ವಿದ್ಯಾರ್ಥಿನಿ. ಎಫ್-1 ವಿದ್ಯಾರ್ಥಿ ಕಲಿಕಾ ವೀಸಾದಲ್ಲಿ ಅಮೆರಿಕಕ್ಕೆ (USA) ತೆರಳಿದ್ದ ರಂಜನಿ ಭಯೋತ್ಪಾದಕ ಸಂಘಟನೆ ಹಮಾಸ್ ಅನ್ನು ಬೆಂಬಲಿಸುವ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಳು ಎಂದು ಹೋಮ್‌ಲ್ಯಾಂಡ್ ಸೆಕ್ಯೂರಿಟಿ ಹೇಳಿದೆ.

    ಹಿಂಸೆ ಮತ್ತು ಭಯೋತ್ಪಾದನೆಯನ್ನು ಪ್ರತಿಪಾದಿಸಿದ್ದಕ್ಕಾಗಿ ಮಾರ್ಚ್ 5 ರಂದು ಅಮೆರಿಕದ ವಿದೇಶಾಂಗ ಇಲಾಖೆ ರಂಜನಿ ಶ್ರೀನಿವಾಸನ್ ವೀಸಾವನ್ನು ರದ್ದುಗೊಳಿಸಿತ್ತು.

     

    ಅಮೆರಿಕ ಎರಡು ವಿಧಾನ ಬಳಸಿ ವಿದೇಶಿ ಪ್ರಜೆಗಳನ್ನು ಗಡೀಪಾರು ಮಾಡುತ್ತದೆ. ಒಂದನೇಯದ್ದು ಅಮೆರಿಕದ ಭದ್ರತಾ ಸಿಬ್ಬಂದಿಯೇ ವಿದೇಶಿ ಪ್ರಜೆಗಳನ್ನು ಬಂಧಿಸಿ ಗಡೀಪಾರು ಮಾಡುತ್ತದೆ. ಸ್ವಯಂ ಗಡೀಪಾರಿನಲ್ಲಿ ಅಮೆರಿಕ ವಿದೇಶಿ ಪ್ರಜೆಗಳನ್ನು ಹೊರಗೆ ದಬ್ಬುವುದಿಲ್ಲ. ಬದಲಾಗಿ ಆ ಪ್ರಜೆಗಳೇ ಅಮೆರಿಕವನ್ನು ತೊರೆಯಬೇಕಾಗುತ್ತದೆ.

    ರಂಜನಿ ಶ್ರೀನಿವಾಸನ್ ವಿಮಾನ ನಿಲ್ದಾಣದ ಮೂಲಕ ದೇಶ ತೊರೆಯುತ್ತಿರುವ ವಿಡಿಯೋವನ್ನು ಅಮೆರಿಕದ ಗೃಹ ಕಾರ್ಯದರ್ಶಿ ಕ್ರಿಸ್ಟಿ ನೋಯೆಮ್ ಎಕ್ಸ್‌ನಲ್ಲಿ ಹಂಚಿಕೊಂಡು, ಹಿಂಸೆ ಮತ್ತು ಭಯೋತ್ಪಾದನೆಯನ್ನು ಪ್ರತಿಪಾದಿಸುವ ಯಾರಾದರೂ ದೇಶದಲ್ಲಿ ಇರಬಾರದು ಎಂದು ಪೋಸ್ಟ್‌ ಮಾಡಿದ್ದಾರೆ.

    ಅಮೆರಿಕದಲ್ಲಿ ವಾಸ ಮಾಡಲು ಮತ್ತು ಅಧ್ಯಯನ ಮಾಡಲು ವೀಸಾ ನೀಡುವುದು ಒಂದು ಸವಲತ್ತು. ಹಿಂಸೆ ಮತ್ತು ಭಯೋತ್ಪಾದನೆಯನ್ನು ಪ್ರತಿಪಾದಿಸಿದಾಗ, ಆ ಸವಲತ್ತನ್ನು ರದ್ದುಗೊಳಿಸಬೇಕಾಗುತ್ತದೆ ಮತ್ತು ನೀವು ಈ ದೇಶದಲ್ಲಿ ಇರಬಾರದು. ಕೊಲಂಬಿಯಾ ವಿಶ್ವವಿದ್ಯಾಲಯದ ಭಯೋತ್ಪಾದಕರ ಪರ ಸಹಾನುಭೂತಿ ಹೊಂದಿದ್ದ ಒಬ್ಬರು ಸ್ವಯಂ ಗಡೀಪಾರು ಮಾಡಲು CBP ಹೋಮ್ ಅಪ್ಲಿಕೇಶನ್ ಅನ್ನು ಬಳಸುವುದನ್ನು ನೋಡಲು ನನಗೆ ಸಂತೋಷವಾಗಿದೆ ಎಂದು ಬರೆದುಕೊಂಡಿದ್ದಾರೆ.  ಇದನ್ನೂ ಓದಿ: ರೈಲು ಹೈಜಾಕ್‌ನಲ್ಲಿ ಸೆರೆಯಾಗಿದ್ದ ಎಲ್ಲಾ 214 ಒತ್ತೆಯಾಳುಗಳ ಸಾಮೂಹಿಕ ಹತ್ಯೆ: ಬಿಎಲ್‌ಎ ಹೇಳಿಕೆ

    ಶ್ರೀನಿವಾಸನ್ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ನಗರ ಯೋಜನೆಯಲ್ಲಿ ಡಾಕ್ಟರೇಟ್ ವಿದ್ಯಾರ್ಥಿಯಾಗಿದ್ದಳು. ಗ್ರಾಜುಯೇಟ್ ಸ್ಕೂಲ್ ಆಫ್ ಆರ್ಕಿಟೆಕ್ಚರ್, ಪ್ಲಾನಿಂಗ್ ಅಂಡ್ ಪ್ರಿಸರ್ವೇಶನ್‌ನಲ್ಲಿ ಸಂಶೋಧನೆ ನಡೆಸುತ್ತಿದ್ದರು. ಅಹಮದಾಬಾದ್‌ನ CEPT ವಿಶ್ವವಿದ್ಯಾಲಯದಿಂದ ಪದವಿ ಮತ್ತು ಫುಲ್‌ಬ್ರೈಟ್ ನೆಹರು ಮತ್ತು ಇನ್‌ಲ್ಯಾಕ್ಸ್ ವಿದ್ಯಾರ್ಥಿವೇತನಗಳೊಂದಿಗೆ ಹಾರ್ವರ್ಡ್‌ನಿಂದ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಳು.

    ಇಸ್ರೇಲ್-ಹಮಾಸ್ ಯುದ್ಧ ನಡೆಯುತ್ತಿದ್ದಾಗ ಪ್ಯಾಲೆಸ್ತೀನ್‌ ಪರವಾಗಿ ಕೊಲಂಬಿಯಾ ವಿಶ್ವವಿದ್ಯಾಲಯದಲ್ಲಿ ಭಾರೀ ಪ್ರತಿಭಟನೆ ನಡೆದಿತ್ತು. ಕಳೆದ ಪರ ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿದ್ದ ಪ್ಯಾಲೆಸ್ತೀನ್‌ ಮೂಲದ ಮಾಜಿ ಕೊಲಂಬಿಯಾ ವಿದ್ಯಾರ್ಥಿ ಮಹಮೂದ್ ಖಲೀಲ್‌ನನ್ನು ಅಮೆರಿಕ ಅಧಿಕಾರಿಗಳು ಬಂಧಿಸಿದ್ದರು. ಖಲೀಲ್‌ ಗ್ರೀನ್‌ ಕಾರ್ಡ್‌ ರದ್ದಾಗಿದ್ದರೂ ಫೆಡರಲ್ ನ್ಯಾಯಾಧೀಶರು ಖಲೀಲ್ ಗಡೀಪಾರು ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆಹಿಡಿದಿದ್ದಾರೆ.