Tag: USA

  • WHO | ಅತಿ ದೊಡ್ಡ ದಾನಿಯೇ ಹೊರಕ್ಕೆ – ಭಾರತದ ಮೇಲೂ ಎಫೆಕ್ಟ್?

    WHO | ಅತಿ ದೊಡ್ಡ ದಾನಿಯೇ ಹೊರಕ್ಕೆ – ಭಾರತದ ಮೇಲೂ ಎಫೆಕ್ಟ್?

    ಮೆರಿಕ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ (Donald Trump) ಅವರು ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಂಡಿದ್ದಾರೆ. ಈ ಪೈಕಿ ಕೆಲವು ನಿರ್ಧಾರಗಳು ವಿವಾದವನ್ನು ಸೃಷ್ಟಿಸಿವೆ. ವಿಶ್ವ ಆರೋಗ್ಯ ಸಂಸ್ಥೆಯಿಂದ (WHO) ಹಿಂದೆ ಸರಿಯುವ ಕಾರ್ಯಕಾರಿ ಆದೇಶಕ್ಕೆ ಟ್ರಂಪ್ ಸಹಿ ಹಾಕಿದ್ದು, ಜಾಗತಿಕ ಮಟ್ಟದಲ್ಲಿ ಚರ್ಚೆ ಹುಟ್ಟುಹಾಕಿದೆ. ಡಬ್ಲ್ಯೂಹೆಚ್‌ಒದಿಂದ ಹಿಂದೆ ಸರಿಯುವುದಕ್ಕೆ ಟ್ರಂಪ್ ಕೋವಿಡ್ ಸೇರಿದಂತೆ ಅನೇಕ ಬಲವಾದ ಕಾರಣಗಳನ್ನು ನೀಡಿದ್ದಾರೆ. ಜಾಗತಿಕ ಆರೋಗ್ಯ ವಿಚಾರದಲ್ಲಿ ಸಂಸ್ಥೆಯ ನಡೆಯನ್ನು ಪ್ರಶ್ನಿಸಿದ್ದಾರೆ. ಅವರ ನಿರ್ಧಾರದ ಹಿಂದೆ ಚೀನಾ ಕೂಡ ಟಾರ್ಗೆಟ್ ಆಗಿದೆ.

    ಸಾಂಕ್ರಾಮಿಕ ರೋಗಗಳು, ಹವಾಮಾನ-ಸಂಬಂಧಿತ ಕಾಯಿಲೆಗಳು ಮತ್ತು ತುರ್ತು ಆರೋಗ್ಯ ಸವಾಲುಗಳೊಂದಿಗೆ ಜಗತ್ತು ಹಿಡಿತ ಸಾಧಿಸುತ್ತಿರುವ ಹೊತ್ತಿನಲ್ಲಿ ಅಮೆರಿಕ ಶಾಕಿಂಗ್ ನ್ಯೂಸ್ ಕೊಟ್ಟಿದೆ. ಡಬ್ಲ್ಯೂಹೆಚ್‌ಒಗೆ ಅಮೆರಿಕ ಅತಿದೊಡ್ಡ ದಾನಿ. ಆ ದೇಶವೇ ಸಂಸ್ಥೆಯಿಂದ ಹೊರನಡೆದಿರುವುದು ಸಹಜವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟçಗಳಲ್ಲಿ ಆತಂಕ ಮೂಡಿಸಿದೆ. ಇದರಿಂದ ಜಾಗತಿಕ ಆರೋಗ್ಯದ ಮೇಲೆ ಯಾವ ರೀತಿ ಪರಿಣಾಮ ಬೀರುತ್ತದೆ? ಭಾರತದ ಆರೋಗ್ಯ ಕ್ಷೇತ್ರದ ಮೇಲಾಗುವ ಎಫೆಕ್ಟ್ ಏನು? ಡಬ್ಲ್ಯೂಹೆಚ್‌ಒಗೆ ಚೀನಾ ಬೆಂಬಲವಾಗಿ ನಿಲ್ಲುತ್ತಾ ಎಂಬ ಪ್ರಶ್ನೆಗಳು ಉದ್ಭವಿಸಿವೆ.

    ಡಬ್ಲ್ಯೂಹೆಚ್‌ಒ ಜಾಗತಿಕ ಆರೋಗ್ಯದ ಮೇಲೆ ಕೆಲಸ ಮಾಡುವ ಯುಎನ್ ಸಂಸ್ಥೆಯಾಗಿದೆ. ತಮ್ಮ ಪ್ರಾಥಮಿಕ ಆರೋಗ್ಯ ರಕ್ಷಣೆಯನ್ನು ಬಲಪಡಿಸಲು ಜಾಗತಿಕ ದೇಶಗಳೊಂದಿಗೆ ಇದು ಕೆಲಸ ಮಾಡುತ್ತದೆ. ಡಬ್ಲ್ಯೂಹೆಚ್‌ಒ ಮಾರ್ಗಸೂಚಿಗಳು ಸರ್ಕಾರದ ನೀತಿಗಳನ್ನು ತಯಾರಿಸಲು ಸಹಾಯ ಮಾಡುತ್ತದೆ. ನಿರ್ದಿಷ್ಟ ರೋಗಗಳನ್ನು ನಿಭಾಯಿಸಲು ಕಾರ್ಯಕ್ರಮಗಳನ್ನು ಆಯೋಜಿಸಲು ಸಹಕಾರ ನೀಡುತ್ತದೆ.

    who

    ಟ್ರಂಪ್ ಹೇಳಿದ್ದೇನು?
    ಕೊರೊನಾ ಸಾಂಕ್ರಾಮಿಕ ಸೇರಿ ಇತರ ಅಂತರರಾಷ್ಟ್ರೀಯ ಆರೋಗ್ಯ ಬಿಕ್ಕಟ್ಟುಗಳ ನಿರ್ವಹಣೆಯಲ್ಲಿ ಡಬ್ಲ್ಯೂಹೆಚ್‌ಒ ವಿಫಲವಾಗಿದೆ. ಇದು ನಮ್ಮನ್ನು (ಅಮೆರಿಕ) ಅಳಿಸಿ ಹಾಕಲು ನೋಡಿತ್ತು. ಎಲ್ಲರೂ ನಮ್ಮನ್ನು ತುಳಿಯಲು ನೋಡಿದ್ದರು. ಆದರೆ, ಇನ್ಮುಂದೆ ಇದು ನಡೆಯುವುದಿಲ್ಲ. ಮುಂದಿನ 12 ತಿಂಗಳಲ್ಲಿ ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕ ಹೊರಬರಲಿದೆ ಎಂದು ಟ್ರಂಪ್ ಹೇಳಿದ್ದಾರೆ. ಇದನ್ನೂ ಓದಿ: ಅಮೆರಿಕದ ಇತಿಹಾಸದಲ್ಲೇ ಬೃಹತ್‌ ಗಡಿಪಾರು ಕಾರ್ಯಾಚರಣೆ – 538 ಅಕ್ರಮ ವಲಸಿಗರು ಅರೆಸ್ಟ್‌, ನೂರಾರು ಮಂದಿ ಗಡಿಪಾರು

    ಟ್ರಂಪ್ ಕಾರ್ಯಕಾರಿ ಆದೇಶದಲ್ಲೇನಿದೆ?
    * ಡಬ್ಲ್ಯೂಹೆಚ್‌ಒ ನೀಡುತ್ತಿದ್ದ ಆರ್ಥಿಕ ನೆರವನ್ನು ಅಮೆರಿಕ ನಿಲ್ಲಿಸಲಿದೆ. (ಯುಎಸ್ ನಿಧಿಗಳು ಮತ್ತು ಸಂಪನ್ಮೂಲಗಳ ಯಾವುದೇ ವರ್ಗಾವಣೆ ಇರಲ್ಲ)
    * ವಿಶ್ವ ಆರೋಗ್ಯ ಸಂಸ್ಥೆಯೊಂದಿಗೆ ಕೆಲಸ ಮಾಡುವ ಅಮೆರಿಕದ ಸರ್ಕಾರಿ ಸಿಬ್ಬಂದಿಯನ್ನು ವಾಪಸ್ ಕರೆಸಿಕೊಳ್ಳುವುದು.
    * ಡಬ್ಲ್ಯೂಹೆಚ್‌ಒ ಜೊತೆ ಅಗತ್ಯ ಮಾತುಕತೆ ನಡೆಸಲು ಪಾಲುದಾರರನ್ನು ಮರು ನೇಮಕ ಮಾಡುವುದು.
    * ಸಾಂಕ್ರಾಮಿಕ ರೋಗಗಳ ನಿರ್ವಹಣೆ ಒಪ್ಪಂದ ಮಾತುಕತೆಗಳು ನಿಲ್ಲಿಸಲಿದೆ. (ಸಾಂಕ್ರಾಮಿಕ ರೋಗಗಳಿಗೆ ಪ್ರತಿರೋಧ ಒಡ್ಡಲು ದೇಶಗಳನ್ನು ಸಜ್ಜುಗೊಳಿಸುವುದು. ಸಾಂಕ್ರಾಮಿಕ ರೋಗ ಸಂಭವಿಸಿದರೆ ಜಾಗತಿಕ ಸಹಕಾರಕ್ಕಾಗಿ ಚೌಕಟ್ಟನ್ನು ರಚಿಸುವುದು. ಔಷಧಗಳು ಮತ್ತು ಲಸಿಕೆಗಳಂತಹ ವೈದ್ಯಕೀಯ ಸಹಕಾರ ನೀಡುವ ಕಾರ್ಯವಿಧಾನಗಳನ್ನು ಅಭಿವೃದ್ಧಿಪಡಿಸುವುದು ಒಪ್ಪಂದದ ಗುರಿಯಾಗಿತ್ತು.)

    ಅತಿ ದೊಡ್ಡ ದಾನಿ ಅಮೆರಿಕ
    ಅಮೆರಿಕವು ಡಬ್ಲ್ಯೂಹೆಚ್‌ಒಗೆ ಅತಿ ದೊಡ್ಡ ದಾನಿಯಾಗಿತ್ತು. ಹೆಚ್ಚಿನ ಆರ್ಥಿಕ ಬೆಂಬಲ ಯುಎಸ್‌ನಿಂದಲೇ ಸಿಗುತ್ತಿತ್ತು. ವಿಶ್ವ ಆರೋಗ್ಯ ಸಂಸ್ಥೆ ಒಟ್ಟು ನಿಧಿಯ 18% ನೆರವನ್ನು ಅಮೆರಿಕ ನೀಡುತ್ತಿತ್ತು. ಹೀಗಿರುವಾಗ, ಅಮೆರಿಕ ಹೊರನಡೆಯುವುದು ಡಬ್ಲ್ಯೂಹೆಚ್‌ಒ ಮೇಲೆ ಭಾರಿ ಆರ್ಥಿಕ ಪರಿಣಾಮ ಬೀರುತ್ತದೆ. 140 ಕೋಟಿ ಜನಸಂಖ್ಯೆ ಹೊಂದಿರುವ ದೇಶ ಚೀನಾ. ಅಮೆರಿಕ 300% ನಷ್ಟು ಜನಸಂಖ್ಯೆಯನ್ನು ಈ ದೇಶ ಹೊಂದಿದೆ. ಆದರೆ, ಡಬ್ಲ್ಯೂಹೆಚ್‌ಒ ಸುಮಾರು 90% ನಷ್ಟು ಕಡಿಮೆ ಆರ್ಥಿಕ ನೆರವು ನೀಡುತ್ತದೆ ಎಂಬುದು ಟ್ರಂಪ್ ಕಾರ್ಯಕಾರಿ ಆದೇಶದ ವಾದ.

    ನಿಧಿಗೆ ಹಣ ಹೇಗೆ ಬರುತ್ತೆ?
    ಆರೋಗ್ಯ ಸಂಸ್ಥೆಯ ನಿಧಿಯು ಮೂಲಭೂತವಾಗಿ ಎರಡು ರೀತಿಯಲ್ಲಿ ಬರುತ್ತದೆ. ಒಂದು- ಅದರ ಎಲ್ಲಾ ಸದಸ್ಯ ರಾಷ್ಟ್ರಗಳಿಂದ ಕಡ್ಡಾಯವಾಗಿ ನಿಧಿ ಸಂಗ್ರಹವಾಗುತ್ತದೆ. ಎರಡು- ವಿವಿಧ ದೇಶಗಳು ಮತ್ತು ಸಂಸ್ಥೆಗಳು ಸ್ವಯಂಪ್ರೇರಿತ ಕೊಡುಗೆಗಳನ್ನು ನೀಡುತ್ತವೆ. ಅತಿದೊಡ್ಡ ಪಾವತಿದಾರನಾಗಿರುವ ಅಮೆರಿಕ 22.05% ಕೊಡುಗೆ ನೀಡುತ್ತದೆ. ಚೀನಾ 15% ಆರ್ಥಿಕ ನೆರವು ಕೊಡುತ್ತದೆ. ಆರೋಗ್ಯ ಸಂಸ್ಥೆಗೆ ಹರಿದು ಬರುವ ಒಟ್ಟು 578 ಮಿಲಿಯನ್ ಯುಎಸ್ ಡಾಲರ್‌ನಲ್ಲಿ ಅಮೆರಿಕವೇ ಸರಿಸುಮಾರು 138 ಮಿಲಿಯನ್ ಡಾಲರ್ ನೆರವು ನೀಡುತ್ತಿದೆ. ಚೀನಾ 87.6 ಮಿಲಿಯನ್ ಡಾಲರ್ ಕೊಡುಗೆ ಕೊಡುತ್ತಿದೆ. ಸ್ವಯಂಪ್ರೇರಿತ ಕೊಡುಗೆಗಳಲ್ಲಿಯೂ ಅಮೆರಿಕವೇ ದೊಡ್ಡ ದಾನಿಯಾಗಿದ್ದು, 2023 ರಲ್ಲಿ ಒಟ್ಟು ಕೊಡುಗೆಗಳಲ್ಲಿ ಸುಮಾರು 13% (356.3 ಮಿಲಿಯನ್ ಡಾಲರ್) ಪಾಲನ್ನು ಹೊಂದಿದೆ. ಚೀನಾ ಒಟ್ಟು ಕೊಡುಗೆಗಳು 0.14% (3.9 ಮಿಲಿಯನ್ ಡಾಲರ್) ಮಾತ್ರ. ಎರಡನೆಯ ಅತಿ ದೊಡ್ಡ ಸ್ವಯಂಪ್ರೇರಿತ ಕೊಡುಗೆದಾರರೆಂದರೆ ಬಿಲ್ ಮತ್ತು ಮೆಲಿಂಡಾ ಗೇಟ್ಸ್ ಫೌಂಡೇಶನ್.

    ಯುಎಸ್ ಅಧ್ಯಕ್ಷೀಯ ಚುನಾವಣೆಗಳ ಕಾರಣ ಅನಿಶ್ಚಿತತೆಯಿಂದ ಕಳೆದ ವರ್ಷ ಡಬ್ಲ್ಯೂಹೆಚ್‌ಒ ಹೆಚ್ಚು ಸ್ವಯಂಪ್ರೇರಿತ ಕೊಡುಗೆಗಳನ್ನು ಸ್ವೀಕರಿಸಲು ಕಾರಣವಾಯಿತು. ನವೆಂಬರ್‌ನಲ್ಲಿ ಕೊನೆಗೊಂಡ 2024 ರ ಫಂಡಿಂಗ್ ಸುತ್ತಿನಲ್ಲಿ, ಆಸ್ಟ್ರೇಲಿಯಾ, ಇಂಡೋನೇಷ್ಯಾ ಮತ್ತು ಸ್ಪೇನ್ 1.7 ಬಿಲಿಯನ್ ಡಾಲರ್ ನೀಡುವುದಾಗಿ ವಾಗ್ದಾನ ಮಾಡಿದ್ದವು. ಇದು 2025-28 ರ ನಡುವೆ ಕಾರ್ಯಕ್ರಮದ ಅನುಷ್ಠಾನಕ್ಕೆ ಅಗತ್ಯವಿರುವ 7.1 ಡಾಲರ್ ಶತಕೋಟಿಯ 53% ಅನ್ನು ಡಬ್ಲ್ಯೂಹೆಚ್‌ಒ ಪಡೆಯಲು ಕಾರಣವಾಯಿತು. ಇದು 2020 ರಲ್ಲಿ ಅದರ ಹಿಂದಿನ ನಾಲ್ಕು ವರ್ಷಗಳ ಅವಧಿಗೆ ಪಡೆದುಕೊಂಡ 17% ಕ್ಕಿಂತ ಹೆಚ್ಚಾಗಿದೆ.

    ಡಬ್ಲ್ಯೂಹೆಚ್‌ಒ ಪ್ರತಿಕ್ರಿಯೆ ಏನು?
    ಅಮೆರಿಕದ ಈ ನಿರ್ಧಾರಕ್ಕೆ ವಿಶ್ವ ಆರೋಗ್ಯ ಸಂಸ್ಥೆಯು ವಿಷಾದಿಸಿದೆ. ಯುಎಸ್ ತನ್ನ ನಿಲುವನ್ನು ಪುನರ್‌ವಿಮರ್ಶೆಗೆ ಒಳಪಡಿಸುತ್ತದೆ ಎಂದು ನಂಬಿದ್ದೇವೆ. ಅಮೆರಿಕನ್ನರು ಸೇರಿದಂತೆ ವಿಶ್ವದ ಜನರ ಆರೋಗ್ಯ ಮತ್ತು ಸುರಕ್ಷತೆಯನ್ನು ರಕ್ಷಿಸುವಲ್ಲಿ ಡಬ್ಲ್ಯೂಹೆಚ್‌ಒ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಯುಎಸ್ ಮತ್ತು ಇತರೆ ಸದಸ್ಯ ರಾಷ್ಟ್ರಗಳ ಭಾಗವಹಿಸುವಿಕೆಯಿಂದ ಡಬ್ಲ್ಯೂಹೆಚ್‌ಒ ಕಳೆದ 7 ವರ್ಷಗಳಲ್ಲಿ ತನ್ನ ಹೊಣೆಗಾರಿಕೆಯನ್ನು ಸಮರ್ಥವಾಗಿ ನಿಭಾಯಿಸಿದೆ ಎಂದು ಹೇಳಿಕೊಂಡಿದೆ.

    ಭಾರತದ ಮೇಲೆ ಬೀಳುತ್ತಾ ಎಫೆಕ್ಟ್?
    ಡಬ್ಲ್ಯೂಹೆಚ್‌ಒ ತನ್ನ ನಿಧಿಯ ಗಮನಾರ್ಹ ಪ್ರಮಾಣವನ್ನು ಕಳೆದುಕೊಳ್ಳುವುದರಿಂದ, ಭಾರತ ಸೇರಿದಂತೆ ಅನೇಕ ದೇಶಗಳ ಆರೋಗ್ಯ ವಲಯದಲ್ಲಿ ಪರಿಣಾಮ ಬೀರುವ ಸಾಧ್ಯತೆಯಿದೆ. ಹೆಚ್‌ಐವಿ-ಮಲೇರಿಯಾ-ಕ್ಷಯರೋಗ, ಸೂಕ್ಷ್ಮಾಣುಜೀವಿಗಳ ವಿರುದ್ಧದ ಪ್ರತಿರೋಧ ಮೊದಲಾದ ಭಾರತ ಸರ್ಕಾರದ ಹಲವಾರು ಆರೋಗ್ಯ ಕಾರ್ಯಕ್ರಮಗಳಲ್ಲಿ ಡಬ್ಲ್ಯೂಹೆಚ್‌ಒ ಭಾಗವಹಿಸುತ್ತದೆ. ಮುಖ್ಯವಾಗಿ, ಇದು ದೇಶದ ಪ್ರತಿರಕ್ಷಣೆ ಕಾರ್ಯಕ್ರಮದಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ. ಸಂಸ್ಥೆಯ ತಂಡಗಳು ಲಸಿಕೆ ವ್ಯಾಪ್ತಿಯನ್ನು ಸಹ ಮೇಲ್ವಿಚಾರಣೆ ಮಾಡುತ್ತವೆ. ಅಷ್ಟೇ ಅಲ್ಲ, ಡಬ್ಲ್ಯೂಹೆಚ್‌ಒ ಪ್ರಪಂಚದಾದ್ಯಂತದ ದೇಶಗಳ ಆರೋಗ್ಯ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತದೆ. ನಿಧಿ ಕಡಿತವು ಈ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸಲು ಸಂಸ್ಥೆಗೆ ಸಾಧ್ಯವಾಗುವುದಿಲ್ಲ ಎಂದು ಭಾರತದ ಸಾರ್ವಜನಿಕ ಆರೋಗ್ಯ ತಜ್ಞರು ವಿಶ್ಲೇಷಿಸಿದ್ದಾರೆ.

    ಅಮೆರಿಕ ತಜ್ಞರು ಹೊರಕ್ಕೆ?
    ವಿಶ್ವ ಆರೋಗ್ಯ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಅಮೆರಿಕ ತಜ್ಞರು ಹೊರನಡೆಯುವ ಸಾಧ್ಯತೆ ಕೂಡ ಇದೆ. ಯುಎಸ್ ಪರಿಣಿತರ ನಷ್ಟವು ಡಬ್ಲ್ಯೂಹೆಚ್‌ಒ ಪಾತ್ರದ ಮೇಲೆ ಪರಿಣಾಮ ಬೀರಲಿದೆ. ವೈರಸ್, ದೀರ್ಘ ಕಾಯಿಲೆ, ಸಾಂಕ್ರಾಮಿಕ ರೋಗಗಳು ಮೊದಲಾದವುಗಳಿಗೆ ಸಂಬಂಧಿಸಿದಂತೆ ಡಬ್ಲ್ಯೂಹೆಚ್‌ಒ ಮಾರ್ಗಸೂಚಿಗಳನ್ನು ಒದಗಿಸುತ್ತದೆ. ಅದನ್ನು ಜಾಗತಿಕ ದೇಶಗಳು ತಮ್ಮ ಸ್ಥಳೀಯ ಕಾರ್ಯಕ್ರಮಗಳಿಗೆ (ಆರೋಗ್ಯಕ್ಕೆ ಸಂಬಂಧಿಸಿ) ಬಳಸಿಕೊಳ್ಳುತ್ತವೆ. ಈ ಮಾರ್ಗಸೂಚಿಗಳನ್ನು ಸಾಮಾನ್ಯವಾಗಿ ಎಲ್ಲಾ ಪ್ರಕಟಿತ ಪುರಾವೆಗಳನ್ನು ಸಂಗ್ರಹಿಸಿ, ಅವುಗಳನ್ನು ಶ್ರೇಣೀಕರಿಸಿ ನಂತರ ತಜ್ಞರ ಸಮಿತಿಗಳಲ್ಲಿಟ್ಟು ಚರ್ಚಿಸುವ ಮೂಲಕ ಅಭಿವೃದ್ಧಿಪಡಿಸಲಾಗುತ್ತದೆ. ರೋಗ ಸ್ಥಳೀಯತೆ ಮತ್ತು ಅಲ್ಲಿ ನಡೆಸುವ ಸಂಶೋಧನೆಗಳನ್ನು ಗಮನದಲ್ಲಿಟ್ಟುಕೊಂಡು ಈ ಸಮಿತಿಗಳನ್ನು ರಚಿಸಲಾಗುತ್ತದೆ. ಬೇರೆ ಬೇರೆ ದೇಶಗಳ ಪ್ರತಿನಿಧಿಗಳೂ ಆ ಸಮಿತಿಯಲ್ಲಿರುತ್ತದೆ. ಯುಎಸ್ ತಜ್ಞರು ಅಂತಹ ಹಲವಾರು ಸಮಿತಿಗಳ ಭಾಗವಾಗಿದ್ದಾರೆ. ಅವರನ್ನು ಹೊರತೆಗೆದರೆ ಡಬ್ಲ್ಯೂಹೆಚ್‌ಒ ಕೆಲಸದ ಮೇಲೆ ಪರಿಣಾಮ ಬೀರುತ್ತದೆ.

    ಸದಸ್ಯ ರಾಷ್ಟ್ರಗಳು ಹೊರಬರಬಹುದೇ?
    ಡಬ್ಲ್ಯೂಹೆಚ್‌ಒನ ಸಂವಿಧಾನದಲ್ಲಿ ಸದಸ್ಯ ರಾಷ್ಟ್ರಗಳು ಹೊರಬರುವುದಕ್ಕೆ ಯಾವುದೇ ಅವಕಾಶವಿಲ್ಲ. ಆದಾಗ್ಯೂ, 1948 ರಲ್ಲಿ ಸಂಸ್ಥೆಗೆ ಸೇರುವ ಸಮಯದಲ್ಲಿ ಯುಎಸ್ ಕಾಂಗ್ರೆಸ್ ಒಂದು ಷರತ್ತನ್ನು ಹಾಕಿತು. ಒಂದು ವರ್ಷದ ಸೂಚನೆಯನ್ನು ನೀಡಿದ ನಂತರ ಮತ್ತು ಪ್ರಸಕ್ತ ವರ್ಷದ ಹಣಕಾಸಿನ ಜವಾಬ್ದಾರಿಗಳನ್ನು ಪೂರೈಸಿದ ನಂತರ ದೇಶವು ಸಂಸ್ಥೆಯಿAದ ಹೊರನಡೆಯಬಹುದು. ಹೊರನಡೆಯುವ ಪ್ರಕ್ರಿಯೆ ಕೂಡ ತಕ್ಷಣಕ್ಕೆ ಆಗುವುದಿಲ್ಲ. ಒಂದು ವರ್ಷದವರೆಗಿನ ಅವಧಿ ಇರುತ್ತದೆ. ಈ ಅವಧಿಯಲ್ಲಿ ಯುಎಸ್‌ನ ನಿರ್ಧಾರದ ಮರುಪರಿಶೀಲನೆಗೆ ಅವಕಾಶವೂ ಇರುತ್ತದೆ.

    ಅಮೆರಿಕ ಎಷ್ಟು ಮುಖ್ಯ?
    1948 ರಲ್ಲಿ ಸ್ಥಾಪನೆಯಾದಾಗಿನಿಂದ ಡಬ್ಲ್ಯೂಹೆಚ್‌ಒಗೆ ಮೂಲಾಧಾರವಾಗಿ ವಾಷಿಂಗ್ಟನ್ ಸೇವೆ ಸಲ್ಲಿಸಿದೆ. ಸಂಸ್ಥೆಯ ಅತಿದೊಡ್ಡ ಏಕೈಕ ದಾನಿಯಾಗಿದೆ. ಸಂಸ್ಥೆಯ 2023 ಬಜೆಟ್‌ನ 18% ರಷ್ಟು ಕೊಡುಗೆಯನ್ನು ಅಮೆರಿಕ ನೀಡಿತು. ಇದು ವಾರ್ಷಿಕವಾಗಿ ನೂರಾರು ಮಿಲಿಯನ್ ಡಾಲರ್‌ಗಳಷ್ಟಿದೆ. ಈ ನಿಧಿಗಳು ರೋಗಗಳನ್ನು ನಿರ್ಮೂಲನೆ ಮಾಡುವುದರಿಂದ ಹಿಡಿದು ಹಿಂದುಳಿದ ಪ್ರದೇಶಗಳಲ್ಲಿ ಆರೋಗ್ಯ ತುರ್ತುಸ್ಥಿತಿಗಳಿಗೆ ಸ್ಪಂದಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ. 2024-2025ರಲ್ಲಿ ಡಬ್ಲೂö್ಯಹೆಚ್‌ಒನ ಬಜೆಟ್ 6.8 ಶತಕೋಟಿ ಡಾಲರ್‌ನಷ್ಟಿದೆ. ಅದರಲ್ಲಿ ಯುಎಸ್ ಕೊಡುಗೆಗಳು 22% ಕಡ್ಡಾಯ ನಿಧಿಯನ್ನು ಹೊಂದಿವೆ. ಈ ಪ್ರಮಾಣದ ಆರ್ಥಿಕ ಬೆಂಬಲವನ್ನು ಜಗತ್ತಿನ ಯಾವ ದೇಶವೂ ನೀಡಿಲ್ಲ.

    ಡಬ್ಲ್ಯೂಹೆಚ್‌ಒ ಕೈ ಹಿಡಿಯುತ್ತ ಭಾರತ, ದಕ್ಷಿಣ ದೇಶಗಳು?
    ಯುನೈಟೆಡ್ ಸ್ಟೇಟ್ಸ್ ಸೃಷ್ಟಿಸಿದ ನಿರ್ವಾತವನ್ನು ಚೀನಾ (China) ಮತ್ತು ಭಾರತ (India) ಸೇರಿದಂತೆ ಜಾಗತಿಕ ದಕ್ಷಿಣದ ದೇಶಗಳು ತುಂಬುವ ಸಾಧ್ಯತೆಯಿದೆ ಎಂದು ತಜ್ಞರು ಹೇಳಿದ್ದಾರೆ. ‘ಪ್ರಧಾನಿ ಮೋದಿ ಅವರು ಜನರಿಗಾಗಿ ಸಮಗ್ರ ಆರೋಗ್ಯದಲ್ಲಿ ಹೂಡಿಕೆ ಮಾಡುವ ಮೂಲಕ ಉತ್ತಮ ಉದಾಹರಣೆಯನ್ನು ನೀಡುತ್ತಿದ್ದಾರೆ. ಜಾಗತಿಕ ದಕ್ಷಿಣದ ಧ್ವನಿಯಾಗಿ ಭಾರತವು ಅಗ್ರಸ್ಥಾನದಲ್ಲಿದೆ. ಹೊಸ ಜಾಗತಿಕ ಕ್ರಮದಲ್ಲಿ ಭಾರತ, ದಕ್ಷಿಣ ಆಫ್ರಿಕಾ ಮತ್ತು ಇತರರ ದೇಶಗಳು ನಮಗೆ ಬೇಕು. ಅವರ ಜೊತೆಗೆ ಇತರೆ ದೇಶಗಳನ್ನು ಮೇಲೆತ್ತುವ ಕಾರ್ಯ ಆಗಬೇಕಿದೆ’ ಎಂದು ತಜ್ಞರಾದ ಡಾ. ಅಲಕಿಜಾ ಅಭಿಪ್ರಾಯಪಟ್ಟಿದ್ದಾರೆ.

     

  • ಭಾರತೀಯರ ಕಾನೂನು ಬದ್ಧ ವಾಪಸಾತಿಗೆ ದೆಹಲಿ ಮುಕ್ತ – ಜೈಶಂಕರ್‌

    ಭಾರತೀಯರ ಕಾನೂನು ಬದ್ಧ ವಾಪಸಾತಿಗೆ ದೆಹಲಿ ಮುಕ್ತ – ಜೈಶಂಕರ್‌

    ವಾಷಿಂಗ್ಟನ್‌: ಅಮೆರಿಕ (USA) ಸೇರಿದಂತೆ ವಿದೇಶಗಳಲ್ಲಿ ಕಾನೂನು ಬಾಹಿರವಾಗಿ ವಾಸಿಸುತ್ತಿರುವ ಭಾರತೀಯರ ಕಾನೂನು ಬದ್ಧ ವಾಪಸಾತಿಗೆ ನವದೆಹಲಿ ಮುಕ್ತವಾಗಿದೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌. ಜೈಶಂಕರ್‌ (S Jaishankar) ಹೇಳಿದ್ದಾರೆ.

    ಈ ಕುರಿತು ವಾಷಿಂಗ್ಟನ್‌ (Washington) ಡಿಸಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಜೈಶಂಕರ್‌, ಕಾನೂನು ಬಾಹಿರವಾಗಿ ಯಾರಾದ್ರೂ ಇದ್ದರೆ, ಅವರು ನಮ್ಮ ದೇಶದ ಪ್ರಜೆಗಳೆಂದು ಖಚಿತವಾಗಿದ್ದರೆ, ಭಾರತಕ್ಕೆ ಮರಳಬಹುದು. ಅದಕ್ಕೆ ದೆಹಲಿ ಮುಕ್ತವಾಗಿರುತ್ತದೆ. ಈ ಬಗ್ಗೆ ಭಾರತದ ನಿಲುವು ಸ್ಪಷ್ಟ ಎಂದಿದ್ದಾರೆ. ಈ ಬಗ್ಗೆ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಅವರೊಂದಿಗೆ ಚರ್ಚಿಸಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಯುದ್ಧವನ್ನು ಕೊನೆಗೊಳಿಸದಿದ್ದರೆ ಮತ್ತಷ್ಟು ನಿರ್ಬಂಧ, ಸುಂಕ – ಪುಟಿನ್‌ಗೆ ಟ್ರಂಪ್‌ ಬೆದರಿಕೆ

    ಭಾರತವು ತನ್ನ ದೇಶದ ಪ್ರತಿಭೆಗಳು ಜಾಗತಿಕ ಮಟ್ಟದಲ್ಲಿ ಹೆಚ್ಚು ಅವಕಾಶ ಹೊಂದಬೇಕೆಂದು ಬಯಸುತ್ತದೆ. ಅದೇ ಸಮಯದಲ್ಲಿ ಅಕ್ರಮ ವಲಸೆಯನ್ನು ದೃಢವಾಗಿ ವಿರೋಧಿಸುತ್ತದೆ. ಏಕೆಂದರೆ ಅಕ್ರಮ ವಲಸೆಯು ಕಾನೂನು ಬಾಹಿರ ಚಟುವಟಿಕೆಗಳು ಹೆಚ್ಚಾಗುವ ಸಾಧ್ಯತೆಗಳೂ ಇರುತ್ತವೆ ಎಂದು ಜೈಶಂಕರ್‌ ಹೇಳಿದ್ದಾರೆ. ಇದನ್ನೂ ಓದಿ: ಜನ್ಮತಃ ಪೌರತ್ವ ಕಾಯ್ದೆ ರದ್ದತಿಗೆ ಅಮೆರಿಕದಲ್ಲೇ ಆಕ್ರೋಶ – 18,000 ಭಾರತೀಯರು ಗಡಿಪಾರಾಗ್ತಾರಾ?

    ಸಚಿವ ಜೈಶಂಕರ್‌ ಅವರು ಇತ್ತೀಚೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. ಅ ಬಳಿಕ ಮೊದಲ ಕ್ವಾಡ್‌ ಸಭೆಯಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ಮೌಂಟ್‌ ಎವರೆಸ್ಟ್‌ ಇನ್ನು ಮುಂದೆ ದುಬಾರಿ| ಶುಲ್ಕ ಭಾರೀ ಏರಿಕೆ – ಹಿಂದೆ ಎಷ್ಟಿತ್ತು? ಈಗ ಎಷ್ಟು ಏರಿಕೆ? 

  • ಟ್ರಂಪ್‌ ಆಡಳಿತದ ಮೊದಲ ಕ್ವಾಡ್‌ ಸಭೆಯಲ್ಲಿ ಸಚಿವ ಎಸ್.‌ ಜೈಶಂಕರ್‌ ಭಾಗಿ

    ಟ್ರಂಪ್‌ ಆಡಳಿತದ ಮೊದಲ ಕ್ವಾಡ್‌ ಸಭೆಯಲ್ಲಿ ಸಚಿವ ಎಸ್.‌ ಜೈಶಂಕರ್‌ ಭಾಗಿ

    ವಾಷಿಂಗ್ಟನ್‌: ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್‌ ಟ್ರಂಪ್‌ (Donald Trump) ಪ್ರಮಾಣ ವಚನ ಸ್ವೀಕರಿಸಿದ ಒಂದು ದಿನದ ನಂತರ ವಾಷಿಂಗ್ಟನ್‌ ಡಿಸಿಯಲ್ಲಿ ನಡೆದ ʻಕ್ವಾಡ್‌ʼ ವಿದೇಶಾಂಗ ಸಚಿವರ ಸಚಿವರ ಸಭೆಯಲ್ಲಿ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ (S. Jaishankar) ಭಾಗವಹಿಸಿದ್ದರು.

    ಆಸ್ಟ್ರೇಲಿಯಾ, ಜಪಾನ್ ಮತ್ತು ಅಮೆರಿಕದ ವಿದೇಶಾಂಗ ಸಚಿವರೊಂದಿಗೆ ಟ್ರಂಪ್ ಅಧಿಕಾರಕ್ಕೆ ಬಂದ ನಂತರ ನಡೆದ ಮೊದಲ ಕ್ವಾಡ್‌ ಸಭೆ (Quad meet) ಇದಾಗಿದೆ. ಇದನ್ನೂ ಓದಿ: ಬ್ರಹ್ಮಪುತ್ರದ ನದಿಗೆ ಬೃಹತ್ ಡ್ಯಾಮ್‌ ಕಟ್ಟಲು ಮುಂದಾದ ಚೀನಾ – ಭಾರತದ ಆತಂಕವೇನು?

    ಇದೇ ವೇಳೆ ಟ್ರಂಪ್‌ ಆಡಳಿತದಲ್ಲಿ ಹೊಸದಾಗಿ ನೇಮಕಗೊಂಡ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಮೈಕ್ ವಾಲ್ಟ್ ಅವರೊಂದಿಗೆ ಸಭೆ ನಡೆಸಿದರು. ಜೊತೆಗೆ ಕ್ವಾಡ್‌ ಸಭೆ ಆಯೋಜಿಸಿದ್ದಕ್ಕಾಗಿ ರೂಬಿಯೊ ಅವರಿಗೆ ಧನ್ಯವಾದ ತಿಳಿಸಿದರು.

    ಕ್ವಾಡ್ ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಗುರಿ ಹೊಂದಿರುವ ನಾಲ್ಕು (ಭಾರತ, ಅಮೆರಿಕ. ಜಪಾನ್, ಆಸ್ಟ್ರೇಲಿಯಾ) ದೇಶಗಳ ಗುಂಪಾಗಿದೆ. ಇದನ್ನೂ ಓದಿ: ಲಾಸ್‌ ಏಂಜಲೀಸ್‌ನಲ್ಲಿ ಕಾಡ್ಗಿಚ್ಚು ನಂದಿಸಲು‌ ಪಿಂಕ್‌ ಪೌಡರ್, ಸೂಪರ್‌ ಸ್ಕೂಪರ್ಸ್‌ ವಿಮಾನಗಳ ಬಳಕೆ- ವಿಶೇಷತೆ ಏನು?

    ಸ್ಥಿರ ಮತ್ತು ಸಮೃದ್ದ ಇಂಡೊ-ಫೆಸಿಫಿಕ್ ರಾಷ್ಟ್ರಗಳ ನಿರ್ಮಾಣ, ಮಿತ್ರ ರಾಷ್ಟ್ರಗಳೊಂದಿಗೆ ಕೆಲಸ ಮಾಡುವ ಕುರಿತು ಚರ್ಚಿಸಲಾಯಿತು. ಕ್ವಾಡ್ ಜಾಗತಿಕ ಒಳಿತಿಗಾಗಿ ಒಂದು ಶಕ್ತಿಯಾಗಿ ಮುಂದುವರಿಯಲಿದೆ ಎನ್ನುವ ಸಂದೇಶವನ್ನು ಈ ಸಭೆ ನೀಡಲಿದೆ ಎಂದು ರೂಬಿಯೊ ವಾಹಿನಿಯೊಂದಕ್ಕೆ ತಿಳಿಸಿದರು.

  • ಡೊನಾಲ್ಡ್‌ ಟ್ರಂಪ್‌ ಪ್ರಮಾಣವಚನ ಕಾರ್ಯಕ್ರಮ – ಯಾರೆಲ್ಲ ಭಾಗಿಯಾಗುತ್ತಾರೆ? ಗಣ್ಯರ ಲಿಸ್ಟ್‌ ಇಲ್ಲಿದೆ

    ಡೊನಾಲ್ಡ್‌ ಟ್ರಂಪ್‌ ಪ್ರಮಾಣವಚನ ಕಾರ್ಯಕ್ರಮ – ಯಾರೆಲ್ಲ ಭಾಗಿಯಾಗುತ್ತಾರೆ? ಗಣ್ಯರ ಲಿಸ್ಟ್‌ ಇಲ್ಲಿದೆ

    ವಾಷಿಂಗ್ಟನ್‌: ಡೊನಾಲ್ಡ್ ಟ್ರಂಪ್ (Donald Trump) ಸೋಮವಾರ ವಾಷಿಂಗ್ಟನ್ ಡಿಸಿ ಯ ಕ್ಯಾಪಿಟಲ್‌ನಲ್ಲಿ (Capitol in Washington D/C) ನಡೆಯುವ ಐತಿಹಾಸಿಕ ಸಮಾರಂಭದಲ್ಲಿ ಅಮೆರಿಕದ 47 ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

    ಈ ಕಾರ್ಯಕ್ರಮದಲ್ಲಿ ಸೆಲೆಬ್ರಿಟಿಗಳು, ವಿದೇಶಿ ಗಣ್ಯರು ಮತ್ತು ಕಂಪನಿಗಳ ಮುಖ್ಯಸ್ಥರು ಭಾಗಿಯಾಗಲಿದ್ದಾರೆ. ಭಾರತದ ವಿದೇಶಾಂಗ ಸಚಿವ ಎಸ್ ಜೈಶಂಕರ್ ಭಾರತವನ್ನು ಪ್ರತಿನಿಧಿಸಲಿದ್ದಾರೆ.

    ವಿದೇಶಿ ಅತಿಥಿಗಳು ಯಾರು?
    ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್, ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ, ಅರ್ಜೆಂಟೀನಾ ಅಧ್ಯಕ್ಷ -ಜೇವಿಯರ್ ಮಿಲಿ, ಹಂಗೇರಿಯನ್ ಪ್ರಧಾನಿ ವಿಕ್ಟರ್ ಓರ್ಬನ್, ಜಪಾನಿನ ವಿದೇಶಾಂಗ ಸಚಿವ ಟಕೇಶಿ ಇವಾಯಾ ಅವರು ಭಾಗವಹಿಸಲಿದ್ದಾರೆ. ಇದನ್ನೂ ಓದಿ: ರಷ್ಯಾದ ತೈಲ ವ್ಯಾಪಾರದ ಮೇಲೆ ಬೈಡೆನ್‌ ಹೊಸ ನಿರ್ಬಂಧ – ಭಾರತಕ್ಕೆ ಬೀಳುತ್ತಾ ಹೊಡೆತ?

    ಬಲ ಪಂಥೀಯ ನಾಯಕರಾದ ನಿಗೆಲ್ ಫರಾಜ್ (ಯುಕೆ), ಎರಿಕ್ ಜೆಮ್ಮೌರ್ (ಫ್ರಾನ್ಸ್) ಮತ್ತು ಬ್ರೆಜಿಲ್‌ನ ಮಾಜಿ ಅಧ್ಯಕ್ಷ ಜೈರ್ ಬೋಲ್ಸನಾರೊ ಭಾಗಿಯಾಗಿವ ಸಾಧ್ಯತೆಯಿದೆ.

    ಗೈರಾಗಲಿರುವ ಗಣ್ಯರು
    ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಆಹ್ವಾನವಿಲ್ಲ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಕೂಡ ಗೈರುಹಾಜರಾಗಿದ್ದಾರೆ. ಮಾಜಿ ಪ್ರಥಮ ಮಹಿಳೆ ಮಿಚೆಲ್ ಒಬಾಮಾ ಗೈರಾಗಲಿದ್ದಾರೆ.

    ಭಾಗವಹಿಸುವ ಉದ್ಯಮಿಗಳು:
    ಟೆಸ್ಲಾ ಮತ್ತು ಸ್ಪೇಸ್‌ಎಕ್ಸ್‌ನ ಸಿಇಒ ಎಲಾನ್ ಮಸ್ಕ್, ಅಮೆಜಾನ್ ಕಾರ್ಯನಿರ್ವಾಹಕ ಅಧ್ಯಕ್ಷ ಜೆಫ್ ಬೆಜೋಸ್, ಗೂಗಲ್‌ ಸಿಇಒ ಸುಂದರ್‌ ಪಿಚೈ, ಆಪಲ್‌ ಸಿಇಒ ಟಿಮ್‌ ಕುಕ್‌, ಓಪನ್‌ಎಐ ಸಿಇಒ ಸ್ಯಾಮ್ ಆಲ್ಟ್‌ಮನ್, ಮೆಟಾ ಸಿಇಒ ಮಾರ್ಕ್ ಜುಕರ್‌ಬರ್ಗ್, ಟಿಕ್‌ ಟಾಕ್‌ ಸಿಇಒ ಶೌ ಜಿ ​​ಚೆವ್ ಭಾಗಿಯಾಗಲಿದ್ದಾರೆ.

     

  • ಇನ್ಮುಂದೆ ಚೆನ್ನೈಗೆ ಹೋಗಬೇಕಿಲ್ಲ – ಬೆಂಗಳೂರಿನಲ್ಲಿ ಸಿಗುತ್ತೆ ಅಮೆರಿಕ ವೀಸಾ

    ಇನ್ಮುಂದೆ ಚೆನ್ನೈಗೆ ಹೋಗಬೇಕಿಲ್ಲ – ಬೆಂಗಳೂರಿನಲ್ಲಿ ಸಿಗುತ್ತೆ ಅಮೆರಿಕ ವೀಸಾ

    – ಅಮೆರಿಕ ದೂತವಾಸ ಕಚೇರಿ ಉದ್ಘಾಟನೆ

    ಬೆಂಗಳೂರು: ಇನ್ನು ಮುಂದೆ ಅಮೆರಿಕದ ವೀಸಾ (Visa) ಪಡೆಯಲು ಬೆಂಗಳೂರಿಗರು ಚೆನ್ನೈ, ಹೈದರಾಬಾದ್‌ಗೆ ಹೋಗದೇ ಬೆಂಗಳೂರಿನಲ್ಲೇ (Bengaluru) ಪಡೆಯಬಹುದು. ಬೆಂಗಳೂರಿನಲ್ಲೇ ದೂತವಾಸ ಕಚೇರಿ (US Consulate) ಅಧಿಕೃತವಾಗಿ ಆರಂಭವಾಗಿದ್ದು ಇಂದು (ಜ.17) ಉದ್ಘಾಟನೆಯಾಗಿದೆ.

    ಡಿಸಿಎಂ ಡಿಕೆ ಶಿವಕುಮಾರ್‌, ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್(Jaishankar), ಭಾರತದಲ್ಲಿರುವ ಅಮರಿಕದ ರಾಯಭಾರಿ ಎರಿಕ್ ಗಾರ್ಸೆಟ್ಟಿ ಅವರು ತಾತ್ಕಾಲಿಕ ದೂತವಾಸ ಕಚೇರಿಯನ್ನು ಉದ್ಘಾಟಿಸಿದರು.

    ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯಲ್ಲಿರುವ ಜೆ.ಡಬ್ಲ್ಯು.ಮಾರಿಯೆಟ್ ಹೋಟೆಲ್‌ನಲ್ಲಿ ತಾತ್ಕಾಲಿಕ ದೂತಾವಾಸ ಕಚೇರಿ ಕಾರ್ಯಾರಂಭವಾಗಿದೆ. ಮುಂದಿನ ದಿನದಲ್ಲಿ ನಗರದ ಆಯಕಟ್ಟಿನ ಭಾಗದಲ್ಲಿ ಶಾಶ್ವತ ಕಚೇರಿ ಸ್ಥಾಪಿಸಲಾಗುವುದು. ಶಾಶ್ವತ ಕಚೇರಿ ಸ್ಥಾಪನೆಯಾಗುವರೆಗೂ ಖಾಸಗಿ ಹೋಟೆಲಿನಲ್ಲಿ ಕಾರ್ಯನಿರ್ವಹಿಸಲಿದೆ.

    ಇಲ್ಲಿಯವರೆಗೆ ಚೆನ್ನೈ, ಹೈದರಾಬಾದ್, ಮುಂಬೈ, ಕೋಲ್ಕತ್ತಾಗಳಲ್ಲಿ ಅಮೆರಿಕದ ದೂತಾವಾಸ ಕಚೇರಿಗಳು ಕಾರ್ಯನಿರ್ವಹಿಸುತ್ತಿದ್ದವು. ಭಾರತ ಮತ್ತು ಅಮೆರಿಕ ಸಂಬಂಧ ಬಲವರ್ಧನೆಯಾಗಿ ಬೆಂಗಳೂರಿನಲ್ಲಿ ಅಮೆರಿಕದ ದೂತಾವಾಸ ಕಚೇರಿ ಆರಂಭವಾಗಿದೆ. ಇದನ್ನೂ ಓದಿ: ಮಹಾ ಕುಂಭಮೇಳದಲ್ಲಿ ಚಿತ್ರವಿಚಿತ್ರ ಸನ್ನಿವೇಶ – 9 ವರ್ಷದಿಂದ ಸಾಧು ತಲೆಯ ಮೇಲೆ ಕುಳಿತ ಪಾರಿವಾಳ!

    ಅಮೆರಿಕದ ಪ್ರಮುಖ ನಗರಗಳಿಂದ ಬೆಂಗಳೂರಿಗೆ ನೇರ ವಿಮಾನಯಾನ ಸೌಲಭ್ಯ ಇದೆ. ಆದರೆ ಆದರೆ ವೀಸಾ ಮತ್ತಿತರ ಕೆಲಸಗಳಿಗೆ ಬೇಕಾದ ಸೌಕರ್ಯ ಇರಲಿಲ್ಲ. ಇನ್ನು ಮುಂದೆ ಅಮೆರಿಕಕ್ಕೆ ಶಿಕ್ಷಣ, ಉದ್ಯೋಗ, ವ್ಯವಹಾರಕ್ಕೆ ಹೋಗೋರಿಗೆ ಇಲ್ಲೇ ವೀಸಾ ಸಿಗಲಿದೆ.

    ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಎಂಬಿ ಪಾಟೀಲ್, ಸಚಿವ ಪ್ರಿಯಾಂಕ್ ಖರ್ಗೆ, ಸಂಸದರಾದ ತೇಜಸ್ವಿಸೂರ್ಯ, ಪಿ ಸಿ ಮೋಹನ್, ಡಾ ಮಂಜುನಾಥ್, ಐಟಿ ಉದ್ಯಮಿಗಳಾದ ಕಿರಣ್ ಮಜುಂದಾರ್ ಷಾ, ಕ್ರಿಸ್ ಗೋಪಾಲಕೃಷ್ಣನ್, ಯುಎಸ್ ದೂತವಾಸ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

    ಆರಂಭದಲ್ಲಿ ಒಂದು ಒಂದು ಮಿತಿಯಲ್ಲಿ ವೀಸಾ ನೀಡಲಾಗುತ್ತದೆ. ಶಾಶ್ವತ ಕಚೇರಿ ಆರಂಭವಾದ ಬಳಿಕ ಸಂಪೂರ್ಣವಾಗಿ ಕಚೇರಿ ಸಿಬ್ಬಂದಿ ತಮ್ಮ ಕೆಲಸದಲ್ಲಿ ತೊಡಗಲಿದ್ದಾರೆ.

  • ವಿಶ್ವದ ಪ್ರತಿ ದೇಶದಲ್ಲೂ ನನ್ನದೊಂದು ಮಗು ಇರಬೇಕು – ಅಮೆರಿಕದ ವೀರ್ಯದಾನಿಯ ಹೆಬ್ಬಯಕೆ

    ವಿಶ್ವದ ಪ್ರತಿ ದೇಶದಲ್ಲೂ ನನ್ನದೊಂದು ಮಗು ಇರಬೇಕು – ಅಮೆರಿಕದ ವೀರ್ಯದಾನಿಯ ಹೆಬ್ಬಯಕೆ

    – 100 ಮಕ್ಕಳ ತಂದೆಯಾಗುವ ಸನಿಹದಲ್ಲಿ ಕೈಲ್‌ ಗೋರ್ಡಿ

    ವಾಷಿಂಗ್ಟನ್‌: ಪ್ರಸಿದ್ಧ ವೀರ್ಯ ದಾನಿ (Sperm Donor) ಎಂದು ಖ್ಯಾತಿ ಪಡೆದಿರುವ ಅಮೆರಿಕದ ಕೈಲ್‌ ಗೋರ್ಡಿ (Kyle Gordy) ಇದೀಗ 100 ಮಕ್ಕಳ ತಂದೆಯಾಗುವ ಸನಿಹದಲ್ಲಿದ್ದಾರೆ.

    ಕಳೆದ ಕೆಲ ವರ್ಷಗಳಿಂದ ಅಮೆರಿಕದ (America) ಲಾಸ್‌ ಏಂಜಲೀಸ್‌ನಲ್ಲಿ ಗರ್ಭಧಾರಣೆಗಾಗಿ ಹೋರಾಡುತ್ತಿದ್ದ ಮಹಿಳೆಯರಿಗೆ ಉಚಿತ ವೀರ್ಯಧಾನ ಮಾಡುತ್ತಿದ್ದ ಗೋರ್ಡಿ ಈವರೆಗೆ 87 ಮಕ್ಕಳ (Childrens) ತಂದೆಯಾಗಿದ್ದಾರೆ. ʻಬಿ ಪ್ರೆಗ್ನೆಂಟ್ ನೌʼ ವೆಬ್‌ಸೈಟ್‌ ಆರಂಭಿಸಿ ಮಹಿಳೆಯರಿಗೆ ವೀರ್ಯದಾನ ಮಾಡುತ್ತಾ ಬರುತ್ತಿದ್ದಾರೆ. ಇದೀಗ ಅವರು ನೂರು ಮಕ್ಕಳಿಗೆ ತಂದೆಯಾಗುವ ಸನಿಹದಲ್ಲಿದ್ದಾರೆ ಎಂದು ನ್ಯೂಯಾರ್ಕ್‌ಪೋಸ್ಟ್‌ ವರದಿ ಮಾಡಿದೆ. ಇದನ್ನೂ ಓದಿ: 12 ಗಂಟೆಯಲ್ಲಿ 1,057 ಪುರುಷರೊಂದಿಗೆ ಸೆಕ್ಸ್‌ – ವಿಶ್ವದಾಖಲೆ ಬರೆದ ನೀಲಿ ತಾರೆ

    ನೂರು ಮಕ್ಕಳ ಗುರಿ ಪೂರೈಸಲು ಸ್ವೀಡನ್, ನಾರ್ವೆ, ಇಂಗ್ಲೆಂಡ್ ಮತ್ತು ಸ್ಕಾಟ್ಲೆಂಡ್‌ನ 13 ಮಹಿಳೆಯರಿಗೆ ವೀರ್ಯದಾನ ಮಾಡಲು ಮುಂದಾಗಿದ್ದಾರೆ.‌ ಇದನ್ನೂ ಓದಿ: ಅದಾನಿ ಕಂಪನಿಗಳನ್ನು ಕಾಡಿದ್ದ ಹಿಂಡನ್‌ಬರ್ಗ್‌ಗೆ ಬೀಗ – ಬಂದ್‌ ಆಗಿದ್ದು ಯಾಕೆ?

    ಅಲ್ಲದೇ ಕೈಲ್‌ ಗೋರ್ಡಿ ವಿಶ್ವದ ಎಲ್ಲಾ ದೇಶಗಳಲ್ಲೂ ಒಂದೊಂದು ಮಗು ಹೊಂದಬೇಕೆಂಬ ಹೆಬ್ಬಯಕೆಯನ್ನೂ ವ್ಯಕ್ತಪಡಿಸಿದ್ದಾರೆ. ಅದ್ಕಕಾಗಿ ತಾನು ನಿರ್ದಿಷ್ಟ ಮಕ್ಕಳನ್ನು ಹೊಂದಬೇಕೆಂಬ ಗುರಿ ಹಾಕಿಕೊಂಡಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಸುದೀರ್ಘ ಯುದ್ಧ ಅಂತ್ಯಗೊಳಿಸಲು ನಿರ್ಧಾರ; ಕದನ ವಿರಾಮ ಒಪ್ಪಂದಕ್ಕೆ ಇಸ್ರೇಲ್-ಹಮಾಸ್ ಒಪ್ಪಿಗೆ

    ಪ್ರಸಕ್ತ ವರ್ಷದಲ್ಲಿ ಜಾಗತೀಕ ಪ್ರವಾಸ ಹಮ್ಮಿಕೊಂಡಿದ್ದೇನೆ. ಜಪಾನ್‌, ಐರ್ಲೆಂಡ್‌ ಮತ್ತು ಕೊರಿಯಾ ಸೇರಿದಂತೆ ಹಲವು ಹೊಸ ರಾಷ್ಟ್ರಗಳಿಗೆ ಪ್ರವಾಸ ಕೈಗೊಂಡಿದ್ದೇನೆ. ಅಲ್ಲಿ ನಿರ್ದಿಷ್ಟ ಸಂಸ್ಥೆಗಳನ್ನು ಸಂಪರ್ಕಿಸಿ, ಗರ್ಭಧರಿಸಲು ಹಂಬಲಿಸುತ್ತಿರುವ ಮಹಿಳೆಯರಿಗೆ ವೀರ್ಯದಾನ ಮಾಡುತ್ತೇನೆ. ಈ ಮೂಲಕ 2026ರ ವೇಳೆಗೆ ವಿಶ್ವದ ಪ್ರತಿಯೊಂದು ದೇಶದಲ್ಲೂ ಒಂದೊಂದು ಮಗುವನ್ನು ಹೊಂದುವ ಯೋಜನೆ ಹಾಕಿಕೊಂಡಿದ್ದೇನೆ ಎಂಬುದಾಗಿ ಹೇಳಿಕೊಂಡಿದ್ದಾರೆ.

  • ಸುದೀರ್ಘ ಯುದ್ಧ ಅಂತ್ಯಗೊಳಿಸಲು ನಿರ್ಧಾರ; ಕದನ ವಿರಾಮ ಒಪ್ಪಂದಕ್ಕೆ ಇಸ್ರೇಲ್-ಹಮಾಸ್ ಒಪ್ಪಿಗೆ

    ಸುದೀರ್ಘ ಯುದ್ಧ ಅಂತ್ಯಗೊಳಿಸಲು ನಿರ್ಧಾರ; ಕದನ ವಿರಾಮ ಒಪ್ಪಂದಕ್ಕೆ ಇಸ್ರೇಲ್-ಹಮಾಸ್ ಒಪ್ಪಿಗೆ

    ಟೆಲ್‌ ಅವಿವ್‌: ಕಳೆದ 15 ತಿಂಗಳಿಂದ ಸುದೀರ್ಘ ಯುದ್ಧದಲ್ಲಿ ಸಿಲುಕಿರುವ ಇಸ್ರೇಲ್‌-ಹಮಾಸ್‌ (Israel, Hamas) ಕೊನೆಗೂ ಕದನ ವಿರಾಮ ಒಪ್ಪಂದಕ್ಕೆ ಒಪ್ಪಿಗೆ ಸೂಚಿಸಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಸುದ್ದಿಸಂಸ್ಥೆ ವರದಿ ಮಾಡಿದೆ.

    ಜಗತ್ತಿನಾದ್ಯಂತ ಅಲ್ಲಲ್ಲಿ ನಡೆಯುತ್ತಿರುವ ಯುದ್ಧಗಳಿಗೂ ವಿರಾಮ (Ceasefire Agreement) ಹಾಕೋಕೆ ದೇಶ ದೇಶಗಳ ನಡುವೆ ಒಪ್ಪಂದ ಏರ್ಪಡುವುದು ಹೊಸದೇನೂ ಅಲ್ಲ. ಆದರೆ, ಜಿದ್ದಿಗೆ ಬಿದ್ದವರಂತೆ ನಿರಂತರವಾಗಿ ವರ್ಷಕ್ಕೂ ಹೆಚ್ಚು ಸಮಯದಿಂದ ಸಮರ ನಡೆಸುತ್ತಿರುವ ಇಸ್ರೇಲ್‌-ಹಮಾಸ್, ರಷ್ಯಾ-ಉಕ್ರೇನ್‌ ರಾಷ್ಟ್ರಗಳ ನಡುವೆ ಶಾಂತಿ ಸ್ಥಾಪನೆಗೆ ಜಾಗತಿಕ ನಾಯಕರು ನಿರಂತರ ಯತ್ನ ನಡೆಸಿದ್ದರು. ಇದೀಗ ಇಸ್ರೇಲ್‌ ಮತ್ತು ಹಮಾಸ್‌ ನಡುವಿನ ಮಾತುಕತೆ ಬಹುತೇಕ ಯಶಸ್ವಿಯಾಗಿದೆ. ಇದೀಗ ಇಸ್ರೇಲ್‌ ಮತ್ತು ಹಮಾಸ್‌ ನಡುವೆ ಯುದ್ಧ ವಿರಾಮಕ್ಕೆ ಸಂಬಂಧಿಸಿದಂತೆ ಒಪ್ಪಂದದ ಅಂತಿಮ ಡ್ರಾಫ್ಟ್‌ ಸಿದ್ಧವಾಗಿದ್ದು, ಇಸ್ರೇಲ್‌-ಹಮಾಸ್‌ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿವೆ.

    2023ರ ಅಕ್ಟೋಬರ್‌ 7ರಂದು ಹಮಾಸ್‌ ಉಗ್ರರ ಗುಂಪು ಇಸ್ರೇಲ್‌ ಮೇಲೆ 5,000 ರಾಕೆಟ್‌ಗಳಿಂದ ದಾಳಿ ನಡೆಸಿತ್ತು. ಅಂದಿನಿಂದ ಸಾವಿರಾರು ಪ್ಯಾಲೆಸ್ತೀನಿಯನ್ನರನ್ನು ಇಸ್ರೇಲ್‌ ಕೊಂದಿತ್ತು. ಮಧ್ಯ ಪ್ರಾಚ್ಯದಲ್ಲಿ ಯುಧ್ಧದ ಕಾರ್ಮೋದಿಂದ ಸಾವು ನೋವು ಮುಂದುವರಿದಿತ್ತು. ಇದೀಗ ಇಸ್ರೇಲ್‌ ಮತ್ತು ಹಮಾಸ್‌ ಕದನ ವಿರಾಮ ಒಪ್ಪಂದಕ್ಕೆ ಒಪ್ಪಿಗೆ ಸೂಚಿಸಿವೆ ಎಂದು ವರದಿಗಳು ತಿಳಿಸಿವೆ.

    ಇಸ್ರೇಲ್‌ ಮತ್ತು ಹಮಾಸ್‌ ಯುದ್ಧ ವಿರಾಮ ಹಾಗೂ ಒತ್ತೆಯಾಳುಗಳ ಬಿಡುಗಡೆಗೆ ಸಂಬಂಧಿಸಿದಂತೆ ಕರಡನ್ನು ಸಿದ್ಧಪಡಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಅವರು ಇತ್ತೀಚೆಗಷ್ಟೇ ದೂರವಾಣಿ ಮೂಲಕ ಚರ್ಚೆ ಮಾಡಿದ್ದರು.

    ಈಗಾಗಲೇ ಹತ್ತಾರು ತಿಂಗಳಿನಿಂದಲೂಸ ಅಮೆರಿಕ, ಈಜಿಪ್ಟ್ ಮತ್ತು ಕತಾರ್ ದೇಶಗಳ ಮಧ್ಯಸ್ಥಿಕೆಯಲ್ಲಿ ಮಾತುಕತೆ ನಡೆಯುತ್ತಿತ್ತು. ಯುದ್ಧಕ್ಕೆ ಬ್ರೇಕ್ ಹಾಕುವ ಒಪ್ಪಂದವು ಇನ್ನೇನು ಆಗಿಯೇ ಹೋಯ್ತು ಅನ್ನುವಷ್ಟರಲ್ಲಿ ಅಹಂ ಎದುರಾಯಿತು. ಎಲ್ಲ ಪ್ರಯತ್ನಗಳೂ, ಮಾತುಗತೆಗಳೂ ಅರ್ಧಕ್ಕೆ ನಿಂತು ಹೋದವು. ಅತ್ತ ಇಸ್ರೇಲ್‌ ಕೂಡ ತಣ್ಣಗಾಗಲು ಬಯಸಲಿಲ್ಲ, ಇತ್ತ ಹಮಾಸ್ ಕೂಡ ಅಡಗಿ ನಡೆಸುವ ದಾಳಿಗಳನ್ನು ನಿಲ್ಲಿಸಲಿಲ್ಲ. ಇನ್ನು ಸಂಧಾನಕ್ಕೆ ಬಂದ ದೇಶಗಳು ಸುಮ್ಮನೆ ನಮಗ್ಯಾಕೆ ತಲೆನೋವು ಅಂತ ಸುಮ್ಮನಾಗಿದ್ದವು. ಇಸ್ರೇಲ್‌ನ ವಿದೇಶಿ ಗುಪ್ತಚರ ಸಂಸ್ಥೆಯ ಮುಖ್ಯಸ್ಥ ಡೇವಿಡ್ ಬಾರ್ನಿಯಾ ಮತ್ತು ಬೈಡನ್ ಅವರ ಉನ್ನತ ಸಲಹೆಗಾರ ಬ್ರೆಟ್ ಮೆಕ್‌ಗುರ್ಕ್‌ ಇಬ್ಬರೂ ಕತಾರ್ ರಾಜಧಾನಿ ದೋಹಾದಲ್ಲಿದ್ದಾರೆ. ಅಲ್ಲಿಯೂ ಒಪ್ಪಂದದ ಬಗ್ಗೆ ಅಂತಿಮ ಚರ್ಚೆಗಳು ನಡೆದಿವೆ.

    ಈಗ ಇಸ್ರೇಲ್, ಹಮಾಸ್ ಎರಡೂ ಕಡೆಯವರಿಗೆ ಪ್ರಸ್ತುತಪಡಿಸಬೇಕಾದ ಅಂತಿಮ ವಿವರಗಳನ್ನು ಸಿದ್ಧಪಡಿಸಲಾಗಿದೆ. ಇನ್ನು ಟ್ರಂಪ್ ಅಧಿಕಾರ ಸ್ವೀಕಾರ ಜನವರಿ 20ರಂದು ನಡೆಯಲಿದೆ. ಅದಕ್ಕೂ ಮುಂಚೆಯೇ ಕದನ ವಿರಾಮ ಒಪ್ಪಂದ ಪೂರ್ಣಗೊಂಡರೆ, ಬೈಡನ್‌ ಪ್ರಯತ್ನವೂ ಇತಿಹಾಸದಲ್ಲಿ ಉಳಿಯಲಿದೆ. ಈ ಕಾರಣಕ್ಕಾಗಿಯೇ ನಿರ್ಗಮಿತ ಅಧ್ಯಕ್ಷ ಜೋ ಬೈಡನ್‌ ಇದರ ಮಧ್ಯಸ್ಥಿತಿ ವಹಿಸಿದ್ದಾರೆ ಎನ್ನಲಾಗಿದೆ.

    2023ರ ಅಕ್ಟೋಬರ್‌ 7ರಂದು ಹಮಾಸ್‌ ಬಂಡುಕೋರರು ಇಸ್ರೇಲ್‌ನ ಗಡಿಯೊಳಕ್ಕೆ ನುಗ್ಗಿ ಮನಬಂದಂತೆ ಸಿಕ್ಕ ಸಿಕ್ಕವರ ಮೇಲೆ ಗುಂಡು ಹಾರಿಸಿದ್ದರು. ಸುಮಾರು 1,200 ಜನರ ಹತ್ಯೆ ನಡೆದಿತ್ತು ಹಾಗೂ 250 ಜನರನ್ನು ಒತ್ತೆಯಾಳುಗಳನ್ನಾಗಿ ಮಾಡಿಕೊಂಡಿದ್ದರು. ಅದರ ಬೆನ್ನಲ್ಲೇ ಇಸ್ರೇಲ್‌ ಪಡೆಗಳು ಗಾಜಾ ಮೇಲೆ ಆಕ್ರಮ ಶುರು ಮಾಡಿತ್ತು. ಈವರೆಗೂ ಯುದ್ಧದಿಂದ ಗಾಜಾದಲ್ಲಿ 46 ಸಾವಿರಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ.

  • ಭೂಮಿಯೊಳಗೊಂದು ರಹಸ್ಯ ʻಮಿಸೈಲ್‌ ಸಿಟಿʼ – ಬೆಚ್ಚಿಬಿದ್ದ ಇಸ್ರೇಲ್‌

    ಭೂಮಿಯೊಳಗೊಂದು ರಹಸ್ಯ ʻಮಿಸೈಲ್‌ ಸಿಟಿʼ – ಬೆಚ್ಚಿಬಿದ್ದ ಇಸ್ರೇಲ್‌

    ಧ್ಯಪ್ರಾಚ್ಯದಲ್ಲಿನ ಬೆಳವಣಿಗೆಗಳಿಂದ ಇಸ್ರೇಲ್‌ ಜೊತೆ ಕಣ್ಣು ಕೆಂಪಗೆ ಮಾಡಿಕೊಂಡಿರುವ ಇರಾನ್‌ ಈಗ ತನ್ನ ಭೂಗತ ಮಿಸೈಲ್‌ ನಗರವನ್ನ (Iran Missile City) ಜಗತ್ತಿಗೆ ಪರಿಚಯಿಸಿದೆ. ಇಸ್ಲಾಮಿಕ್‌ ರೆವಲ್ಯೂಷನರಿ ಗಾರ್ಡ್‌ ಕಾರ್ಪ್ಸ್‌ ಹೊಸ ವಿಡಿಯೋವೊಂದನ್ನ ಹಂಚಿಕೊಂಡಿದೆ.

    ಈ ವಿಡಿಯೋನಲ್ಲಿ ಇರಾನ್ ಭೂಗತ ಕ್ಷಿಪಣಿ (Missile)  ಸಂಗ್ರಹಣಾ ಸೌಲಭ್ಯವನ್ನು ಪರಿಚಯಿಸಿದೆ. ಇಲ್ಲಿಂದಲೇ ಹೊಸ ಕ್ಷಿಪಣಿಗಳನ್ನು ತಯಾರಿಸುತ್ತಿದ್ದೇವೆ ಎಂದು ಕೂಡ ಇರಾನ್‌ ತಿಳಿಸಿದೆ. ಇರಾನ್‌ನ ಸರ್ಕಾರಿ ಪ್ರಾಯೋಜಿತ ವಾಹಿನಿಯಲ್ಲಿ ವಿಡಿಯೋ ಬಿಡುಗಡೆಯಾಗಿದ್ದು, ಐಆರ್‌ಜಿಸಿ ಕಮಾಂಡರ್ ಮೇಜರ್ ಜನರಲ್ ಹುಸೇನ್ ಸಲಾಮಿ ಮತ್ತು ಬ್ರಿಗೇಡಿಯರ್ ಜನರಲ್ ಅಮೀರ್ ಅಲಿ ಹಾಜಿಜಾದೆ ಮಿಸೈಲ್‌ ಸಿಟಿಯನ್ನು ವೀಕ್ಷಿಸುತ್ತಿರುವುದು ಕಂಡುಬಂದಿದೆ. ಹಾಜಿಜಾದೆ ಈ ಸ್ಥಳವನ್ನು ಸುಪ್ತ ಜ್ವಾಲಾಮುಖಿ ಎಂದು ಕರೆದಿದ್ದಾರೆ ಎಂದು ಹೇಳಲಾಗಿದೆ. ಅಷ್ಟಕ್ಕೂ ಇರಾಜ್‌ ಈ ಭೂಗತ ನಗರ ಹೇಗಿದೆ? ಎಲ್ಲಿದೆ? ಇರಾನ್‌ ಹಾಗೂ ಇಸ್ರೇಲ್‌ ಸೇನೆಗಳ ಬಲಾಬಲ ಹೇಗಿದೆ ಎಂಬುದನ್ನು ತಿಳಿಯೋಣ…

    ಇನ್ನು, ಕಳೆದ ವರ್ಷ ಏಪ್ರಿಲ್‌ ಹಾಗೂ ಅಕ್ಟೋಬರ್‌ನಲ್ಲಿ ಇಸ್ರೇಲ್‌ ವಿರುದ್ಧ ನಡೆದ ಕ್ಷಿಪಣಿ ಕಾರ್ಯಾಚರಣೆಗೆ ಈ ಮಿಸೈಲ್‌ ಸೌಲಭ್ಯವನ್ನು ಬಳಸಿಕೊಳ್ಳಲಾಗಿತ್ತು ಎಂಬುದು ಬಹಿರಂಗವಾಗಿದೆ. ಆದರೆ, ಈ ಸ್ಥಳ ಎಲ್ಲಿದೆ ಎಂಬುದು ಇರಾನ್‌ನ ಕೆಲವೇ ಕೆಲ ಮಂದಿಗೆ ಬಿಟ್ಟು ಬೇರೆಯವರಿಗೆ ಗೊತ್ತಿಲ್ಲ. ಅಂಡರ್‌ಗ್ರೌಂಡ್‌ನಲ್ಲಿ ಮಿಸೈಲ್‌ ಹಾಗೂ ಡ್ರೋನ್‌ ಸಿಟಿಗಳನ್ನು ಜಗತ್ತಿಗೆ ಪರಿಚಯಿಸುತ್ತೇವೆ ಎಂದು ಇರಾನ್‌ ಹೇಳಿದೆ. ಇರಾನ್‌ನ ಭೂಗತ ಸಿಟಿಯನ್ನು ನೋಡಿ ಇಸ್ರೇಲ್‌ ಬೆಚ್ಚಿಬಿದ್ದಿರುವುದಂತೂ ನಿಜ.

    ಯುದ್ಧಕ್ಕೆ ಟ್ರಂಪ್‌ನಿಂದ ಬ್ರೇಕ್‌ – ಸೌದಿ ಹೇಳೋದೇನು?
    ಇರಾನ್‌ನ ಈ ಭೂಗತ ನಗರಕ್ಕೆ ಅಮೆರಿಕ ಕೂಡ ಕಾರಣ ಎಂಬುದು ಸೌದಿ ಅರೇಬಿಯಾದ ಆರೋಪ. ಅಮೆರಿಕದ ನಿರ್ಗಮಿತ ಅಧ್ಯಕ್ಷ ಜೋ ಬೈಡನ್‌ ಇರಾನ್‌ ಸೇನೆಗೆ ಶಸ್ತ್ರಾಸ್ತ್ರ ಪೂರೈಕೆ ಮಾಡುತ್ತಿದ್ದರು. ಇದೀಗ ಟ್ರಂಪ್‌ (Donald Trump) ಅಧಿಕಾರಕ್ಕೇರುತ್ತಿದ್ದಂತೆ ಯುದ್ಧಗಳಿಗೆ ಬ್ರೇಕ್‌ ಹಾಕುವ ಮುನ್ಸೂಚನೆ ನೀಡಿದ್ದಾರೆ. ಅಮೆರಿಕದ ಸಹಾಯ ನಿರಾಕರಿಸಿದ್ರೆ ಇರಾನ್‌-ಇಸ್ರೇಲ್‌ ನಡುವಿನ ಯುದ್ಧ ಬಹುತೇಕ ಮುಕ್ತಾಯಗೊಂಡಂತೆ ಆಗುತ್ತದೆ. ಅಲ್ಲದೇ ಇದು ಇತರ ದೇಶಗಳ ಮೇಲೆ ಉಂಟಾಗುತ್ತಿರುವ ಆರ್ಥಿಕ ಹೊಡೆತವನ್ನೂ ಕಡಿಮೆ ಮಾಡಲಿದೆ ಎಂದು ಸೌದಿ ಅರೇಬಿಯಾ ಹೇಳಿದೆ.

    ಇರಾನ್‌ ಯುದ್ಧಕ್ಕೆ ಎಂಟ್ರಿಯಾಗಿದ್ದು ಹೇಗೆ?
    ಹಿಜ್ಬುಲ್ಲಾ ಸೇನೆಯ ಮುಖ್ಯಸ್ಥ ಹಸನ್‌ ನಸ್ರಲ್ಲಾನನ್ನೂ ಇಸ್ರೇಲ್‌ ಹತ್ಯೆಗೈದಾಗ ಪರೋಕ್ಷವಾಗಿ ಇವರನ್ನೆಲ್ಲ ಬೆಂಬಲಿಸುತ್ತಿದ್ದ ಇರಾನ್‌ ನೇರವಾಗಿ ಇಸ್ರೇಲ್‌ ವಿರುದ್ಧ ತೊಡೆ ತಟ್ಟಿತ್ತು. ಏಕಾಏಕಿ 180ಕ್ಕೂ ಹೆಚ್ಚು ಕ್ಷಿಪಣಿಗಳನ್ನು ಹಾರಿಸಿ, ಇಸ್ರೇಲನ್ನು ಗಾಬರಿಗೊಳಿಸಲೂ ಇರಾನ್‌ ಯತ್ನಿಸಿದ್ದು ಸ್ವತಃ ಇಸ್ರೇಲನ್ನು ಮತ್ತಷ್ಟು ಕೆರಳಿಸಿದೆ. ಆದ್ರೆ ಇಸ್ರೇಲ್‌ ಕ್ಷಿಪಣಿ ಹಾರಿಸುವುದಕ್ಕೆ 2 ಗಂಟೆ ಮುಂಚಿತವಾಗಿಯೇ ಅಮೆರಿಕ ದಾಳಿಯ ಸುಳಿವು ಕೊಟ್ಟಿತ್ತು ಎಂಬುದು ಗಮನಾರ್ಹ.

    ಸ್ನೇಹಿತರಾಗಿದ್ದವರೀಗ ಬದ್ಧ ವೈರಿಗಳು
    ಹೌದು. 1948ರ ಮೇ 14. ಪ್ಯಾಲೆಸ್ತೀನ್‌ನಿಂದ ಇಸ್ರೇಲ್‌ ಬೇರ್ಪಟ್ಟು ಹೊಸ ಯಹೂದಿ ದೇಶ ಉದಯವಾಯಿತು. ಆ ಸಮಯದಲ್ಲಿ ಇಸ್ರೇಲ್‌ ಎಂಬ ಶಿಶುವಿನ ಜತೆಗೆ ನಿಂತ ಏಕೈಕ ಇಸ್ಲಾಮಿಕ್‌ ರಾಷ್ಟ್ರ ಇರಾನ್‌. 1948ರಲ್ಲಿ ಅರಬ್‌ ರಾಷ್ಟ್ರಗಳು ಇಸ್ರೇಲ್‌ ವಿರುದ್ಧ ಯುದ್ಧ ಆರಂಭಿಸಿದರೂ, ಆ ಯುದ್ಧದಲ್ಲಿ ಇರಾನ್‌ ಭಾಗವಹಿಸಲಿಲ್ಲ. ಇಸ್ರೇಲ್‌ ಗೆದ್ದ ಬಳಿಕ ಇರಾನ್‌ ಅದರೊಂದಿಗೆ ಸಂಬಂಧ ಬೆಸೆಯಿತು. ಇರಾನ್‌ನಲ್ಲಿ ಮೊಹಮ್ಮದ್‌ ರಜಾ ಶಾ ಪಹ್ಲವಿ ಆಳ್ವಿಕೆಯಲ್ಲಿ ಈ ಎರಡೂ ರಾಷ್ಟ್ರಗಳು ಮಿತ್ರರು. ಆ ವೇಳೆ, ಪಶ್ಚಿಮ ಏಷ್ಯಾದಲ್ಲಿ ಇರಾನ್‌ ಅತಿದೊಡ್ಡ ಯಹೂದಿ ಸಮುದಾಯಕ್ಕೆ ನೆಲೆ ಕಲ್ಪಿಸಿದ್ದ ರಾಷ್ಟ್ರ. ಉಭಯ ದೇಶಗಳ ನಡುವೆ ಆಮದು ಮತ್ತು ರಫ್ತು ವ್ಯವಹಾರ ಜೋರಾಗಿತ್ತು. ಇಸ್ರೇಲ್‌ ತನ್ನಲ್ಲಿನ ಶಸ್ತ್ರಾಸ್ತ್ರ ತಂತ್ರಜ್ಞಾನ ಮತ್ತು ಕೃಷಿ ಉತ್ಪನ್ನಗಳನ್ನು ಇರಾನ್‌ಗೆ ಕಳುಹಿಸುತ್ತಿದ್ದರೆ, ಅದಕ್ಕೆ ಪ್ರತಿಯಾಗಿ ಇರಾನ್‌ ಶೇ.40ರಷ್ಟು ತೈಲವನ್ನು ಇಸ್ರೇಲ್‌ಗೆ ನೀಡುತ್ತಿತ್ತು. ಇಷ್ಟೇ ಅಲ್ಲ, ಇರಾನ್‌ನ ಗುಪ್ತಚರ ಸಂಸ್ಥೆ SAVAK, ತರಬೇತಿ ಪಡೆದಿದ್ದೇ ಇಸ್ರೇಲಿ ಗುಪ್ತಚರ ಸಂಸ್ಥೆ ಮೊಸಾದ್‌ನ ಕೈಯಲ್ಲಿ ಅನ್ನೋದು ವಿಶೇಷ.

    1960ರ ದಶಕದಲ್ಲಿ, ಇರಾನ್‌ನಲ್ಲಿ ಇಸ್ಲಾಮಿಕ್‌ ರಾಷ್ಟ್ರದ ಬೇಡಿಕೆ ತೀವ್ರವಾಯಿತು. ಧಾರ್ಮಿಕ ನಾಯಕ ಅಯಾತೊಲ್ಲಾ ರುಹೊಲ್ಲಾ ಖಮೇನಿ ಇರಾನ್‌ ಅನ್ನು ಮುಸ್ಲಿಂ ರಾಷ್ಟ್ರವನ್ನಾಗಿಸಲು ಹೋರಾಟ ತೀವ್ರಗೊಳಿಸಿದ. 1964ರಲ್ಲಿ ಈ ಧ್ವನಿಗೆ ಅಪಾರ ಜನಬೆಂಬಲ ವ್ಯಕ್ತವಾದಾಗ ರಜಾ ಶಾ ಪಹ್ಲವಿಗೆ ಇರಾನನ್ನು ತೊರೆಯುವಂತೆ ಖಮೇನಿ ಆದೇಶಿಸಿದ. ಕಡೆಗೂ 1969ರಲ್ಲಿ ಪಹ್ಲವಿಯನ್ನು ಅಧಿಕಾರದಿಂದ ಕೆಳಗಿಳಿಸಲಾಯಿತು. ಇದರೊಂದಿಗೆ ಇರಾನ್‌ನಲ್ಲಿ ಇಸ್ಲಾಮಿಕ್‌ ರಾಜ್ಯ ಸ್ಥಾಪನೆಯಾಯಿತು. ಷರಿಯಾ ಕಾನೂನೂ ಜಾರಿಗೆ ಬಂತು. ಇದರೊಂದಿಗೆ ಇರಾನ್‌ನ ಖಮೇನಿ ಸರ್ಕಾರವು ಯಹೂದಿ ರಾಜ್ಯವಾದ ಇಸ್ರೇಲ್‌ನೊಂದಿಗೆ ಎಲ್ಲನಂಟನ್ನೂ ಕಡಿದುಕೊಂಡಿತು. ಉಭಯ ದೇಶಗಳ ನಡುವಿನ ವಿಮಾನ ಮಾರ್ಗವನ್ನೇ ಸಂಪೂರ್ಣವಾಗಿ ಮುಚ್ಚಲಾಯಿತು.

    ಇಸ್ರೇಲ್‌-ಇರಾನ್‌ ಸೇನಾಬಲ ಮೈ ನಡುಗಿಸುತ್ತೆ
    ಇಸ್ರೇಲ್‌ ಶಕ್ತಿಶಾಲಿ ರಾಷ್ಟ್ರವೇ ಆದರೂ ಇರಾನ್‌ ಸಹ ಸರಿಸಮನಾಗಿ ಶಸ್ತ್ರಾಸ್ತ್ರಗಳನ್ನು ಹೊಂದಿದೆ. ಹಾಗಾಗಿ ಮಿಲಿಟರಿ ಶಕ್ತಿಯಲ್ಲಿ ಒಬ್ಬರಿಗಿಂತ ಮತ್ತೊಬ್ಬರು ಕಡಿಮೆಯೇನಿಲ್ಲ ಅಂತಲೇ ಹೇಳಬಹುದು. ಇತ್ತೀಚಿನ ಗ್ಲೋಬಲ್‌ ಫೈರ್‌ ವರದಿ ಪ್ರಕಾರ, ವಾಯು ಸೇನೆ ಮತ್ತು ರಕ್ಷಣಾ ವ್ಯವಸ್ಥೆಯಲ್ಲಿ ಇರಾನ್‌ 14ನೇ ಸ್ಥಾನದಲ್ಲಿದ್ದರೆ, ಇಸ್ರೇಲ್‌ 17ನೇ ಸ್ಥಾನದಲ್ಲಿದೆ ಎಂದು ಉಲ್ಲೇಖಿಸಲಾಗಿದೆ.

    ಇರಾನ್‌ 1996 ಟ್ಯಾಂಕ್‌ಗಳನ್ನು ಹೊಂದಿದೆ, ಅವುಗಳಲ್ಲಿ 1397 ಪ್ರಸ್ತುತ ಯುದ್ಧಕ್ಕೆ ಸಿದ್ಧವಾಗಿವೆ. ಇಸ್ರೇಲ್ 1,370 ಟ್ಯಾಂಕ್‌ಗಳನ್ನು ಹೊಂದಿದೆ, ಅವುಗಳಲ್ಲಿ 1,096 ಯುದ್ಧಕ್ಕೆ ಸಿದ್ಧವಾಗಿವೆ. ಇರಾನ್ 65,765 ಮಿಲಿಟರಿ ವಾಹನಗಳನ್ನು ಹೊಂದಿದ್ದು, ಅದರಲ್ಲಿ 46 ಸಾವಿರಕ್ಕೂ ಹೆಚ್ಚು ಸಕ್ರಿಯವಾಗಿವೆ. ಇನ್ನೂ ಇಸ್ರೇಲ್ 43,407 ಮಿಲಿಟರಿ ವಾಹನಗಳನ್ನು ಹೊಂದಿದೆ, ಅದರಲ್ಲಿ 34,736 ಸಕ್ರಿಯವಾಗಿವೆ. ಸ್ವಯಂ ಚಾಲಿತ ಪಿರಂಗಿಗಳ ಬಗ್ಗೆ ನೋಡಿದ್ರೆ, ಇರಾನ್‌ 580 ಫಿರಂಗಿ ಹೊಂದಿದ್ದು, ಅದರಲ್ಲಿ 406 ಸಕ್ರಿಯ ಸೇವೆಯಲ್ಲಿವೆ. ಇಸ್ರೇಲ್ 650 ಸ್ವಯಂ ಚಾಲಿತ ಫಿರಂಗಿಗಳನ್ನು ಹೊಂದಿದ್ದು, ಅದರಲ್ಲಿ 540 ಯುದ್ಧಕ್ಕೆ ಸಿದ್ಧವಾಗಿದೆ. ಸ್ವಯಂಚಾಲಿತವಲ್ಲದ ಫಿರಂಗಿಗಳಲ್ಲಿ ಇರಾನ್ 2050, ಇಸ್ರೇಲ್ ಕೇವಲ 300 ಹೊಂದಿದೆ. ಇಲ್ಲದೇ ಮಲ್ಟಿ ರಾಕೆಟ್‌ ಲಾಂಚರ್‌ಗಳ ಪೈಕಿ ಇರಾನ್‌ ಬಳಿ 775 ಮಲ್ಟಿ ಲಾಂಚರ್‌ ಇದ್ದರೆ, ಇಸ್ರೇಲ್‌ ಬಳಿ ಕೇವಲ 150 ರಾಕೆಟ್‌ ಲಾಂಚರ್‌ಗಳಿವೆ.

    ಸೈನಿಕರ ಬಲದಲ್ಲಿ ಇರಾನ್‌ 11.80 ಲಕ್ಷ ಸೈನಿಕರನ್ನು ಹೊಂದಿದೆ. ಈ ಪೈಕಿ 3.50 ಲಕ್ಷ ಮೀಸಲು ಸೇನಾ ಪಡೆ, 2.20 ಲಕ್ಷ ಸೈನಿಕರ ಪ್ಯಾರಾ ಮಿಲಿಟರಿ ಪಡೆಯನ್ನು ಹೊಂದಿದೆ. ಇಸ್ರೇಲ್‌ 6.70 ಲಕ್ಷ ಸೈನಿಕರ ಬಲ ಹೊಂದಿದೆ. ಈ ಪೈಕಿ ಇಸ್ರೇಲ್ 4.65 ಲಕ್ಷ ಮೀಸಲು ಪಡೆ, 35 ಸಾವಿರ ಪ್ಯಾರಾ ಮಿಲಿಟರಿ ಪಡೆ ಸೈನಿಕರನ್ನು ಹೊಂದಿದೆ. ಇದಲ್ಲದೇ ಇರಾನ್‌ ಬಳಿ 42 ಸಾವಿರ ಜೆಟ್‌ಮೆನ್‌ಗಳಿದ್ದರೆ, ಇಸ್ರೇಲ್‌ 89 ಸಾವಿರ ಜೆಟ್‌ಮೆನ್‌ ಬಲ ಹೊಂದಿದೆ. ಜೊತೆಗೆ ಇರಾನ್ ಒಟ್ಟು 18,500 ನೌಕಾ ಸಿಬ್ಬಂದಿ ಹೊಂದಿದ್ದರೆ, ಇಸ್ರೇಲ್ 19,500 ನೌಕಾದಳ ಸಿಬ್ಬಂದಿಯನ್ನು ಹೊಂದಿದೆ.

    ಸದ್ಯ ಇದೇ ತಿಂಗಳಲ್ಲಿ ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ 2ನೇ ಬಾರಿಗೆ ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ಇರಾನ್‌-ಇಸ್ರೇಲ್‌, ಸಿರಿಯಾ ಆಂತಕ ರಿಕ ಕದನಗಳಿಗೆ ಬ್ರೇಕ್‌ ಬೀಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಇದು ಯಾವ ಹಂತ ತಲುಪಲಿದೆ ಎಂಬುದು ಕಾದುನೋಡಬೇಕಿದೆ.

  • ಲಾಸ್‌ ಏಂಜಲೀಸ್‌ ಕಾಡ್ಗಿಚ್ಚು – ಆಸ್ತಿ ರಕ್ಷಿಸಿಕೊಳ್ಳಲು ಶ್ರೀಮಂತರಿಂದ ಗಂಟೆಗೆ 1.7 ಲಕ್ಷ ಪಾವತಿ

    ಲಾಸ್‌ ಏಂಜಲೀಸ್‌ ಕಾಡ್ಗಿಚ್ಚು – ಆಸ್ತಿ ರಕ್ಷಿಸಿಕೊಳ್ಳಲು ಶ್ರೀಮಂತರಿಂದ ಗಂಟೆಗೆ 1.7 ಲಕ್ಷ ಪಾವತಿ

    ಕ್ಯಾಲಿಫೋರ್ನಿಯಾ: ಲಾಸ್‌ ಏಂಜಲೀಸ್‌ನಲ್ಲಿ (Los Angeles) ಹೊತ್ತಿಕೊಂಡಿರುವ ಭೀಕರ ಕಾಡ್ಗಿಚ್ಚು ಇಡೀ ಅಮೆರಿಕ ದೇಶವನ್ನೇ ತಲ್ಲಣಗೊಳಿಸಿದೆ. ಅಪಾರ ಆರ್ಥಿಕ ನಷ್ಟ ಉಂಟುಮಾಡಿರುವ ಕಾಡ್ಗಿಚ್ಚು 24 ಮಂದಿಯನ್ನ ಬಲಿಪಡೆದಿದೆ. ಲಕ್ಷಾಂತರ ಮಂದಿಯನ್ನ ಸ್ಥಳಾಂತರಗೊಳಿಸಲಾಗಿದೆ. ಈ ನಡುವೆ ಮಿಲಿಯನೇರ್‌ಗಳು (Millionaires)  ತಮ್ಮ ಆಸ್ತಿ ರಕ್ಷಣೆ ಮಾಡಿಕೊಳ್ಳಲು ಗಂಟೆಗೆ ಲಕ್ಷ ಲಕ್ಷ ಹಣ ಪಾವತಿಸಲು ಮುಂದಾಗಿದ್ದಾರೆ.

    ಹೌದು. ಸರ್ಕಾರಿ ಅಗ್ನಿಶಾಮಕ ದಳಗಳು ಈಗಾಗಲೇ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿವೆ. ಅಮೆರಿಕಕ್ಕೆ ಕೆನಡಾ, ಮೆಕ್ಸಿಕೊ ಸೇರಿದಂತೆ ಅನೇಕ ನೆರೆಯ ರಾಷ್ಟ್ರಗಳು ನೆರವು ನೀಡಿವೆ. ಹೀಗಾಗಿ ಖಾಸಗಿ ಅಗ್ನಿಶಾಮಕ ಸಿಬ್ಬಂದಿ (Fire services) ಮೊರೆ ಹೋಗಿರುವ ಮಿಲಿಯನೇರ್‌ಗಳು ಗಂಟೆ ಲೆಕ್ಕದಲ್ಲಿ ಲಕ್ಷ ಲಕ್ಷ ಹಣ ಪಾವತಿಸುತ್ತಿದ್ದಾರೆ.

    ವರದಿಗಳ ಪ್ರಕಾರ, ಮಿತಿಮೀರಿ ವ್ಯಾಪಿಸುತ್ತಿರುವ ಅಗ್ನಿಜ್ವಾಲೆಯಿಂದ ಆಸ್ತಿ ರಕ್ಷಿಸಲು ಶ್ರೀಮಂತರು ಗಂಟೆಗೆ 1.7 ಲಕ್ಷ ರೂ. (2,000 ಡಾಲರ್‌) ಪಾವತಿಸುತ್ತಿದ್ದಾರೆ. ಬೆಂಕಿಯ ಜ್ವಾಲೆ ಸಮೀಪಿಸಿದಂತೆಲ್ಲಾ ಮನೆ ಮೇಲಿಂದ ಹಾಗೂ ತಮಗೆ ಸೇರಿದ ಆಸ್ತಿಯ ಮೇಲೆ ನೀರು ಹಾಯಿಸುವುದು ಸಿಬ್ಬಂದಿಯ ಕೆಲಸವಾಗಿದೆ. ಈ ಸೇವೆಗೆ ಮಿಲಿಯನೇರ್‌ಗಳಿಂದ ಬೇಡಿಕೆ ಹೆಚ್ಚಾಗಿದೆ. ಇದನ್ನೂ ಓದಿ: ಲಾಸ್‌ ಏಂಜಲೀಸ್‌ನಲ್ಲಿ ಕಾಡ್ಗಿಚ್ಚು – 57,000 ಕಟ್ಟಡ, 1.66 ಲಕ್ಷ ಮಂದಿಗೆ ಕಾದಿದೆ ಆಪತ್ತು

    ಉನ್ನತಮಟ್ಟದ ತನಿಖೆ:
    ಕಾಡ್ಗಿಚ್ಚಿಗೆ ಕಾರಣವೇನು ಎಂಬುದನ್ನು ತಿಳಿಯಲು ಎಫ್‌ಬಿಐ ಮತ್ತು ಸ್ಥಳೀಯ ಅಧಿಕಾರಿಗಳ ತಂಡಗಳು ಸೇರಿ ಉನ್ನತ ಮಟ್ಟದ ತನಿಖೆಗೆ ಮುಂದಾಗಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿಮಾಡಿವೆ. ಇದನ್ನೂ ಓದಿ: ಲಾಸ್‌ ಏಂಜಲೀಸ್‌ ಕಾಡ್ಗಿಚ್ಚು – ಸಾವಿನ ಸಂಖ್ಯೆ 24ಕ್ಕೆ ಏರಿಕೆ, ಟ್ರಂಪ್‌ ತೀವ್ರ ಅಸಮಾಧಾನ

    ಪ್ರಮುಖ ಬೆಳವಣಿಗೆಗಳು

    • ಕ್ಯಾಲಿಫೋರ್ನಿಯಾದ ಪಾಲಿಸೇಡ್ಸ್‌ ಪ್ರದೇಶವೊಂದರಲ್ಲೇ ಸುಟ್ಟು ಭಸ್ಮವಾದ ಭೂಪ್ರದೇಶದ ಪ್ರಮಾಣ 23,600 ಎಕ್ರೆಗೆ ಏರಿಕೆಯಾಗಿದೆ.
    • 12,000ಕ್ಕೂ ಹೆಚ್ಚು ಕಟ್ಟಡಗಳು ನಾಶವಾಗಿದೆ. ಸಾವಿನ ಸಂಖ್ಯೆ 24ಕ್ಕೆ ಏರಿಕೆಯಾಗಿದ್ದು, ಶ್ವಾನದಳದ ಮೂಲಕ ಶವಗಳ ಹುಟುಕಾಟ ಕಾರ್ಯನಡೆದಿದೆ. ಜ.7ರಂದು ಹೊತ್ತಿಕೊಂಡ ಕಾಡ್ಗಿಚ್ಚಿನಿಂದ ಈವರೆಗೆ ಅಂದಾಜು 150 ಶತಕೋಟಿ ಡಾಲರ್‌ನಷ್ಟು ಆರ್ಥಿಕ ನಷ್ಟ ಉಂಟಾಗಿದೆ.
    • ಬಿಸಿ ಗಾಳಿ, ಫೈರ್ನಾಡೋ (ಅಗ್ನಿ ಜ್ವಾಲೆ)ಗಳು ಮುಗಿಲೆತ್ತರಕ್ಕೆ ಚಿಮ್ಮುತ್ತಿದ್ದು, ವ್ಯಾಪ್ತಿಯನ್ನು ವಿಸ್ತರಿಸುತ್ತಲೇ ಇದೆ. ಅಮೆರಿಕದ ಇತಿಹಾಸದಲ್ಲೇ ಇದು ಕಂಡೂ ಕೇಳರಿಯದ ಕಾಡ್ಗಿಚ್ಚು ಎಂದು ಅಧಿಕಾರಿಗಳು ಬಣ್ಣಿಸಿದ್ದಾರೆ.
    • ಈಗಾಗಲೇ 1.53 ಲಕ್ಷ ಮಂದಿಯನ್ನು ಸ್ಥಳಾಂತರಿಸಲು ಆದೇಶ ನೀಡಲಾಗಿದೆ. ಅಲ್ಲದೇ ಇನ್ನೂ 57,000 ಕಟ್ಟಡಗಳು ಅಪಾಯದಲ್ಲಿವೆ. 1.66 ಲಕ್ಷ ಮಂದಿ ಸ್ಥಳಾಂತರಿಸುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ತಿಳಿದುಬಂದಿದೆ.
    • ಈ ಮಧ್ಯೆ ಕೆನಡಾ ಹಾಗೂ ಮೆಕ್ಸಿಕೋ ದೇಶಗಳು ಕ್ಯಾಲಿಫೋರ್ನಿಯಾದಲ್ಲಿ ಕಾಡ್ಗಿಚ್ಚು ನಂದಿಸಲು ನೆರವು ಚಾಚಿವೆ.

  • ಲಾಸ್‌ ಏಂಜಲೀಸ್‌ ಕಾಡ್ಗಿಚ್ಚು – ಸಾವಿನ ಸಂಖ್ಯೆ 24ಕ್ಕೆ ಏರಿಕೆ, ಟ್ರಂಪ್‌ ತೀವ್ರ ಅಸಮಾಧಾನ

    ಲಾಸ್‌ ಏಂಜಲೀಸ್‌ ಕಾಡ್ಗಿಚ್ಚು – ಸಾವಿನ ಸಂಖ್ಯೆ 24ಕ್ಕೆ ಏರಿಕೆ, ಟ್ರಂಪ್‌ ತೀವ್ರ ಅಸಮಾಧಾನ

    ವಾಷಿಂಗ್ಟನ್:‌ ಅಮೆರಿಕದ ಲಾಸ್ ಏಂಜಲೀಸ್‌ನಲ್ಲಿ ಹೊತ್ತಿಕೊಂಡ ಕಾಡ್ಗಿಚ್ಚು (Los Angeles Wildfire) ತನ್ನ ಅಗ್ನಿ ನರ್ತನ ಮುಂದುವರಿಸಿದೆ. ಸದ್ಯ ಸಾವಿನ ಸಂಖ್ಯೆ 24ಕ್ಕೆ ಏರಿಕೆಯಾಗಿದೆ. ಸಾವಿರಾರು ಎಕರೆ ಭೂಪ್ರದೇಶ ಬೆಂಕಿಜ್ವಾಲೆಗೆ ಭಸ್ಮವಾಗಿದ್ದು, ಆರ್ಥಿಕ ನಷ್ಟವುಂಟುಮಾಡಿದೆ. ಈ ನಡುವೆ ಬೆಂಕಿ ನಂದಿಸುವಲ್ಲಿ ವಿಫಲವಾಗಿರುವ ಕ್ಯಾಲಿಫೋರ್ನಿಯಾ ಅಧಿಕಾರಿಗಳ ವಿರುದ್ಧ ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

    ಲಾಸ್‌ ಏಂಜಲೀಸ್‌ನಲ್ಲಿ (Los Angeles) ಹರಡುತ್ತಿರುವ ಕಾಡ್ಗಿಚ್ಚು ಅಧಿಕಾರಿಗಳ ಅಸಮರ್ಥತೆ ತೋರಿಸುತ್ತದೆ. ಇದು ದೇಶದ ಇತಿಹಾಸದಲ್ಲೇ ಅತ್ಯಂತ ಭೀಕರ ದುರಂತಗಳಲ್ಲಿ ಒಂದಾಗಿದೆ ಎಂದು ಹೇಳಿದ್ದಾರೆ. ಈ ಬೆನ್ನಲ್ಲೇ ನಿರ್ಗಮಿತ ಅಧ್ಯಕ್ಷ ಜೋ ಬೈಡನ್‌ ಪಕ್ಷದ ಸದಸ್ಯರೊಬ್ಬರು, ಲಾಸ್‌ ಏಂಜಲೀಸ್‌ ನಗರವನ್ನು 2.0 ಪ್ಲ್ಯಾನ್‌ ಅಡಿ ಮರು ನಿರ್ಮಾಣ ಮಾಡಲಾಗುವುದು ಎಂದು ಪ್ರತಿಜ್ಞೆ ಮಾಡಿದ್ದಾರೆ.

    ಉನ್ನತಮಟ್ಟದ ತನಿಖೆ:
    ಕಾಡ್ಗಿಚ್ಚಿಗೆ ಕಾರಣವೇನು ಎಂಬುದನ್ನು ತಿಳಿಯಲು ಎಫ್‌ಬಿಐ ಮತ್ತು ಸ್ಥಳೀಯ ಅಧಿಕಾರಿಗಳ ತಂಡಗಳು ಸೇರಿ ಉನ್ನತ ಮಟ್ಟದ ತನಿಖೆಗೆ ಮುಂದಾಗಿವೆ ಎಂದು ಸ್ಥಳೀಯ ಮಾಧ್ಯಮಗಳು ವರದಿಮಾಡಿವೆ.

    ಪ್ರಮುಖ ಬೆಳವಣಿಗೆಗಳು:

    • ಕ್ಯಾಲಿಫೋರ್ನಿಯಾದ ಪಾಲಿಸೇಡ್ಸ್‌ ಪ್ರದೇಶವೊಂದರಲ್ಲೇ ಸುಟ್ಟು ಭಸ್ಮವಾದ ಭೂಪ್ರದೇಶದ ಪ್ರಮಾಣ 23,600 ಎಕ್ರೆಗೆ ಏರಿಕೆಯಾಗಿದೆ.
    • 12,000ಕ್ಕೂ ಹೆಚ್ಚು ಕಟ್ಟಡಗಳು ನಾಶವಾಗಿದೆ. ಸಾವಿನ ಸಂಖ್ಯೆ 24ಕ್ಕೆ ಏರಿಕೆಯಾಗಿದ್ದು, ಶ್ವಾನದಳದ ಮೂಲಕ ಶವಗಳ ಹುಟುಕಾಟ ಕಾರ್ಯನಡೆದಿದೆ. ಜ.7ರಂದು ಹೊತ್ತಿಕೊಂಡ ಕಾಡ್ಗಿಚ್ಚಿನಿಂದ ಈವರೆಗೆ ಅಂದಾಜು 150 ಶತಕೋಟಿ ಡಾಲರ್‌ನಷ್ಟು ಆರ್ಥಿಕ ನಷ್ಟ ಉಂಟಾಗಿದೆ.
    • ಬಿಸಿ ಗಾಳಿ, ಫೈರ್ನಾಡೋ (ಅಗ್ನಿ ಜ್ವಾಲೆ)ಗಳು ಮುಗಿಲೆತ್ತರಕ್ಕೆ ಚಿಮ್ಮುತ್ತಿದ್ದು, ವ್ಯಾಪ್ತಿಯನ್ನು ವಿಸ್ತರಿಸುತ್ತಲೇ ಇದೆ. ಅಮೆರಿಕದ ಇತಿಹಾಸದಲ್ಲೇ ಇದು ಕಂಡೂ ಕೇಳರಿಯದ ಕಾಡ್ಗಿಚ್ಚು ಎಂದು ಅಧಿಕಾರಿಗಳು ಬಣ್ಣಿಸಿದ್ದಾರೆ.
    • ಈಗಾಗಲೇ 1.53 ಲಕ್ಷ ಮಂದಿಯನ್ನು ಸ್ಥಳಾಂತರಿಸಲು ಆದೇಶ ನೀಡಲಾಗಿದೆ. ಅಲ್ಲದೇ ಇನ್ನೂ 57,000 ಕಟ್ಟಡಗಳು ಅಪಾಯದಲ್ಲಿವೆ. 1.66 ಲಕ್ಷ ಮಂದಿ ಸ್ಥಳಾಂತರಿಸುವ ಸಾಧ್ಯತೆಗಳು ಹೆಚ್ಚಾಗಿವೆ ಎಂದು ತಿಳಿದುಬಂದಿದೆ.
    • ಈ ಮಧ್ಯೆ ಕೆನಡಾ ಹಾಗೂ ಮೆಕ್ಸಿಕೋ ದೇಶಗಳು ಕ್ಯಾಲಿಫೋರ್ನಿಯಾದಲ್ಲಿ ಕಾಡ್ಗಿಚ್ಚು ನಂದಿಸಲು ನೆರವು ಚಾಚಿವೆ..