Tag: USA

  • ‌250 ಕೋಟಿ ರೂ. ವೆಚ್ಚದಲ್ಲಿ ಐದೇ ತಿಂಗಳಲ್ಲಿ ನಿರ್ಮಿಸಿದ್ದ ನಸ್ಸೌ ಕೌಂಟಿ ಸ್ಟೇಡಿಯಂ ನೆಲಸಮ?

    ‌250 ಕೋಟಿ ರೂ. ವೆಚ್ಚದಲ್ಲಿ ಐದೇ ತಿಂಗಳಲ್ಲಿ ನಿರ್ಮಿಸಿದ್ದ ನಸ್ಸೌ ಕೌಂಟಿ ಸ್ಟೇಡಿಯಂ ನೆಲಸಮ?

    ನ್ಯೂಯಾರ್ಕ್‌: 2024ರ ಟಿ20 ವಿಶ್ವಕಪ್‌ಗಾಗಿ (T20 World Cup) ಕೇವಲ 5 ತಿಂಗಳಲ್ಲಿ ನಿರ್ಮಿಸಲಾಗಿದ್ದ ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಕ್ರೀಡಾಂಗಣವನ್ನು (Nassau County Stadium) ಟೂರ್ನಿಯ ಬಳಿಕ ನೆಲಸಮಗೊಳಿಸಲು‌ ಆಯೋಜಕರು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

    ಈ ಕ್ರೀಡಾಂಗಣವನ್ನು 40 ಎಕರೆ ಭೂ ಪ್ರದೇಶದಲ್ಲಿ 30 ಮಿಲಿಯನ್‌ ಅಮೆರಿಕನ್‌ ಡಾಲರ್‌ (ಅಂದಾಜು 250 ಕೋಟಿ ರೂ.) ವೆಚ್ಚದಲ್ಲಿ ನಿರ್ಮಿಸಲಾಗಿತ್ತು. ಕೇವಲ 4 ತಿಂಗಳಲ್ಲೇ ಕ್ರೀಡಾಂಗಣದ ಕಾಮಗಾರಿ ಪೂರ್ಣಗೊಂಡಿದ್ದು, 35 ಸಾವಿರ ಆಸನ ಸಾಮರ್ಥ್ಯ ಹೊಂದಿದೆ.

    ಭಾರತ – ಪಾಕಿಸ್ತಾನ ಹೈವೋಲ್ಟೇಜ್‌ ಪಂದ್ಯ ಸೇರಿದಂತೆ ಟೂರ್ನಿಯ ಒಟ್ಟು 8 ಪಂದ್ಯಗಳಿಗೆ ಈ ಕ್ರೀಡಾಂಗಣ ಆತಿಥ್ಯ ವಹಿಸಿದೆ. ಬುಧವಾರ ಭಾರತ-ಅಮೆರಿಕ (Ind vs USA) ಪಂದ್ಯ ಇಲ್ಲಿ ನಡೆದ ಕೊನೆಯ ಲೀಗ್‌ ಸುತ್ತಿನ ಪಂದ್ಯ ಎಂದು ಹೇಳಲಾಗುತ್ತಿದೆ. ಈ ಕ್ರೀಡಾಂಗಣಕ್ಕೆ ಆಸ್ಟ್ರೇಲಿಯಾದಿಂದ ತರಿಸಲಾದ ಡ್ರಾಪ್‌ ಇನ್‌ ಪಿಚ್‌ಗಳನ್ನು ಅಳವಡಿಸಲಾಗಿತ್ತು ಎಂದು ತಜ್ಞರು ಹೇಳಿದ್ದಾರೆ. ಇದನ್ನೂ ಓದಿ: India vs Pakistan: ಟ್ರ್ಯಾಕ್ಟರ್‌ ಮಾರಿ ಕ್ರಿಕೆಟ್‌ ನೋಡಲು ಬಂದ ಪಾಕ್ ಅಭಿಮಾನಿಗೆ ನಿರಾಸೆ

    ಶುಕ್ರವಾರ ನೆಲಸಮ?
    ಈಗಾಗಲೇ 8 ಲೀಗ್‌ ಪಂದ್ಯಗಳು ಕೌಂಟಿ ಸ್ಟೇಡಿಯಂನಲ್ಲಿ ನಡೆದಿದ್ದು, ಜೂನ್‌ 14ರಂದೇ ಕ್ರೀಡಾಂಗಣ ಧ್ವಂಸಗೊಳಿಸಲು ನಿರ್ಧರಿಸಲಾಗಿದೆ. ಅದಕ್ಕಾಗಿ ‌ಹತ್ತಾರು‌ ಬುಲ್ಡೋಜರ್‌ಗಳನ್ನು ಕ್ರೀಡಾಂಗಣದ ಹೊರಗೆ ನಿಲ್ಲಿಸಲಾಗಿದೆ. ಈ ಕುರಿತ ವೀಡಿಯೋವೊಂದು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ. ಕ್ರೀಡಾಂಗಣದ ಮಾಡ್ಯುಲರ್ ಘಟಕಗಳನ್ನು ಕಿತ್ತುಹಾಕಿ ಮರುಬಳಕೆ ಮಾಡಲಾಗುತ್ತದೆ, ಸ್ಥಳೀಯ ಕ್ರಿಕೆಟ್ ಕ್ಲಬ್‌ಗಳು ಮತ್ತು ಅಭಿಮಾನಿಗಳು ಉನ್ನತ-ಶ್ರೇಣಿಯ ಟರ್ಫ್ ಮತ್ತು ಮೂಲಸೌಕರ್ಯಗಳಿಗೆ ಬಳಕೆ ಮಾಡಿಕೊಳ್ಳಲಾಗುತ್ತದೆ.

    ಇತ್ತೀಚೆಗೆ ನಡೆದ ಭಾರತ-ಪಾಕಿಸ್ತಾನ ಹೈವೋಲ್ಟೇಜ್‌ ಪಂದ್ಯಕ್ಕೆ ನಸ್ಸೌ ಕೌಂಟಿ ಕ್ರೀಡಾಂಗಣ ಆತಿಥ್ಯ ವಹಿಸಿತ್ತು. ಕೇವಲ 119 ರನ್‌ಗಳಿಗೆ ಭಾರತ ಆಲೌಟ್‌ ಆಗಿತ್ತು. ಅಲ್ಪ ಮೊತ್ತದ ಗುರಿ ಬೆನ್ನಟ್ಟಿದ ಪಾಕ್‌ ಕೇವಲ 113 ರನ್‌ಗಳಿಸಿ ಸೋಲೊಪ್ಪಿಕೊಂಡಿತ್ತು. ಅಲ್ಲದೇ ಬುಧವಾರ ಯುಎಸ್‌ಎ ತಂಡ ನೀಡಿದ್ದ 111 ರನ್‌ಗಳ ತಲುಪುವುದಕ್ಕೂ ಭಾರತ ತಿಣುಕಾಡಿತ್ತು. ಇದನ್ನೂ ಓದಿ:  ಭಾರತಕ್ಕೆ ಮೋಸ – ಚೀಟಿಂಗ್‌ ಕತಾರ್‌ ವಿರುದ್ಧ ಅಭಿಮಾನಿಗಳು ಕೆಂಡ

  • ಭಾರತಕ್ಕೆ ಹ್ಯಾಟ್ರಿಕ್‌ ಗೆಲುವು – ಸೂಪರ್ 8ಕ್ಕೆ ಲಗ್ಗೆ

    ಭಾರತಕ್ಕೆ ಹ್ಯಾಟ್ರಿಕ್‌ ಗೆಲುವು – ಸೂಪರ್ 8ಕ್ಕೆ ಲಗ್ಗೆ

    ನ್ಯೂಯಾರ್ಕ್‌: ಅಮೆರಿಕ (USA) ವಿರುದ್ಧ 7 ವಿಕೆಟ್‌ಗಳ ಜಯ ಸಾಧಿಸಿದ ಭಾರತ (India) ಟಿ20 ವಿಶ್ವಕಪ್‌ (T20 World Cup Cricket) ಕ್ರಿಕೆಟ್‌ನ ಸೂಪರ್‌-8 ಹಂತಕ್ಕೆ ಅಧಿಕೃತವಾಗಿ ಪ್ರವೇಶಿಸಿದೆ.

    ನಿಧಾನಗತಿಯ ಪಿಚ್‌ನಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಅಮೆರಿಕ 8 ವಿಕೆಟ್‌ ನಷ್ಟಕ್ಕೆ 110 ರನ್‌ ಗಳಿಸಿತು. ಸುಲಭದ ಸವಾಲನ್ನು ಬೆನ್ನಟ್ಟಿದ ಭಾರತ ಆರಂಭದಲ್ಲೇ ವಿಕೆಟ್‌ ಕಳೆದುಕೊಂಡರೂ ರಿಷಭ್‌ ಪಂತ್‌, ಸೂರ್ಯಕುಮಾರ್‌ ಯಾದವ್‌, ಶಿವಂ ದುಬೆ ಅವರ ಆಟದ ನೆರವಿನಿಂದ  18.2 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 111 ರನ್‌ ಹೊಡೆಯುವ ಮೂಲಕ 7 ವಿಕೆಟ್‌ಗಳ ಜಯ ಸಾಧಿಸಿತು. ಇದನ್ನೂ ಓದಿ: ಭಾರತಕ್ಕೆ ಮೋಸ – ಚೀಟಿಂಗ್‌ ಕತಾರ್‌ ವಿರುದ್ಧ ಅಭಿಮಾನಿಗಳು ಕೆಂಡ

    ಎ ಗುಂಪಿನಿಂದ ಸೂಪರ್-8‌ ಪ್ರವೇಶಿಸಿದ ಮೊದಲ ತಂಡ ಭಾರತವಾಗಿದೆ. ಈ ಸೋಲಿನ ಹೊರತಾಗಿಯೂ ಅಮೆರಿಕ ಸೂಪರ್-8 ಪ್ರವೇಶಿಸುವ ರೇಸ್‌ನಲ್ಲಿ ಉಳಿದುಕೊಂಡಿದೆ.

    ವಿರಾಟ್‌ ಕೊಹ್ಲಿ 0, ರೋಹಿತ್‌ ಶರ್ಮಾ 3 ರನ್‌ಗೆ ಔಟಾದಾಗ ಜಯ ಸಾಧಿಸುವುದು ಕಷ್ಟ ಎಂದೇ ನಿರೀಕ್ಷಿಸಲಾಗಿತ್ತು. ಆದರೆ ರಿಷಭ್‌ ಪಂತ್‌ 18 ರನ್‌(20 ಎಸೆತ, 1 ಬೌಂಡರಿ, 1 ಸಿಕ್ಸರ್‌), ಸೂರ್ಯಕುಮಾರ್‌ ಯಾದವ್‌ ಔಟಾಗದೇ 50 ರನ್‌ (49 ಎಸೆತ, 2 ಬೌಂಡರಿ, 2 ಸಿಕ್ಸರ್)‌ ಶಿವಂ ದುಬೆ ಔಟಾಗದೇ 31 ರನ್‌ (35 ಎಸೆತ, 1 ಬೌಂಡರಿ, 1 ಸಿಕ್ಸರ್‌) ಹೊಡೆದರು. ಮುರಿಯದ 4ನೇ ವಿಕೆಟಿಗೆ ಸೂರ್ಯಕುಮಾರ್‌ ಯಾದವ್‌ ಮತ್ತು ಶಿವಂ ದುಬೆ 65 ಎಸೆತಗಳಲ್ಲಿ 67 ರನ್‌ ಜೊತೆಯಾಟವಾಡುವ ಮೂಲಕ ಪಂದ್ಯವನ್ನು ಗೆಲ್ಲಿಸಿಕೊಟ್ಟರು.

    ಮೊದಲು ಬ್ಯಾಟ್‌ ಮಾಡಿದ ಅಮೆರಿಕ ಪರ ಸ್ಟೀವನ್‌ ಟೇಲರ್‌ 24 ರನ್‌ (30 ಎಸೆತ) ನಿತೀಶ್‌ ಕುಮಾರ್‌ 27 ರನ್‌ (23 ಎಸೆತ, 2 ಬೌಂಡರಿ, 1 ಸಿಕ್ಸರ್)‌ ಹೊಡೆದು ಔಟಾದರು.

    9 ರನ್‌ ನೀಡಿ 4 ವಿಕೆಟ್‌ ಕಿತ್ತ ಅರ್ಶ್‌ದೀಪ್‌ ಸಿಂಗ್‌ ಅರ್ಹವಾಗಿಯೇ ಪಂದ್ಯಶ್ರೇಷ್ಠ ಗೌರವವನ್ನು ಪಡೆದರು. ಹಾರ್ದಿಕ್‌ ಪಾಂಡ್ಯ 2 ವಿಕೆಟ್‌, ಅಕ್ಷರ್‌ ಪಟೇಲ್‌ 1 ವಿಕೆಟ್‌ ಕಿತ್ತರು.

  • ಬುಮ್ರಾ ಬೆಂಕಿ ಬೌಲಿಂಗ್‌, ಭಾರತಕ್ಕೆ ರೋಚಕ 6 ರನ್‌ ಜಯ – ಗುಂಪು ಹಂತದಲ್ಲೇ ಪಾಕ್‌ ಹೊರಕ್ಕೆ?

    ಬುಮ್ರಾ ಬೆಂಕಿ ಬೌಲಿಂಗ್‌, ಭಾರತಕ್ಕೆ ರೋಚಕ 6 ರನ್‌ ಜಯ – ಗುಂಪು ಹಂತದಲ್ಲೇ ಪಾಕ್‌ ಹೊರಕ್ಕೆ?

    ನ್ಯೂಯಾರ್ಕ್‌: ಜಸ್‌ಪ್ರೀತ್‌ ಬುಮ್ರಾ (Jasprit Bumrah) ಅವರ ಮ್ಯಾಜಿಕ್‌ ಸ್ಪೆಲ್‌ನಿಂದಾಗಿ ಟಿ20 ವಿಶ್ವಕಪ್‌ನಲ್ಲಿ (T20 World Cup) ಭಾರತ ಪಾಕಿಸ್ತಾನದ ವಿರುದ್ಧ ಕೊನೆಯ ಓವರ್‌ನಲ್ಲಿ ರೋಚಕ 6 ರನ್‌ಗಳ ಜಯ ಸಾಧಿಸಿದೆ.

    120 ರನ್‌ಗಳ ಸವಾಲನ್ನು ನೀಡಿದಾಗ ಪಾಕಿಸ್ತಾನ (Pakistan) ಸುಲಭವಾಗಿ ಜಯಗಳಿಸಬಹುದು ಎಂದೇ ನಿರೀಕ್ಷಿಸಲಾಗಿತ್ತು. ಆದರೆ ಬುಮ್ರಾ ಅವರ ಅತ್ಯುತ್ತಮ ಬೌಲಿಂಗ್‌ನಿಂದಾಗಿ ಭಾರತ (India) ರೋಚಕ ಜಯ ಸಾಧಿಸಿದೆ. ಪಾಕ್‌ ಸೇನೆಯಿಂದ ಅಭ್ಯಾಸ ಪಡೆದು ವಿಶ್ವಕಪ್‌ಗೆ ಆಗಮಿಸಿದ್ದ ಪಾಕಿಸ್ತಾನ ತಂಡ ಈಗ ಸತತ ಎರಡು ಸೋಲಿನಿಂದ ಗುಂಪು ಹಂತದಲ್ಲೇ ಹೊರಕ್ಕೆ ಹೋಗುವ ಸಾಧ್ಯತೆಯಿದೆ.

    2 ವಿಕೆಟ್‌ ಕಳೆದುಕೊಂಡು 72 ರನ್‌ಗಳಿಸಿದ್ದಾಗ ಪಾಕ್‌ ಸುಭದ್ರ ಸ್ಥಿತಿಯಲ್ಲಿ ಇತ್ತು. ಆದರೆ ಯಾವಾಗ ಫಕರ್‌ ಜಮಾನ್‌ ಔಟ್‌ ಆದರೋ ಅಲ್ಲಿಂದ ಪತನ ಆರಂಭವಾಯಿತು. ಕೊನೆಯ 36 ಎಸೆತಗಳಲ್ಲಿ ಪಾಕ್‌ ಗೆಲುವಿಗೆ 7 ವಿಕೆಟ್‌ಗಳ ಸಹಾಯದಿಂದ 40 ರನ್‌ ಬೇಕಿತ್ತು. 15ನೇ ಓವರ್‌ ಎಸೆದ ಬುಮ್ರಾ 31 ರನ್‌ (44 ಎಸೆತ, 1 ಬೌಂಡರಿ, 1 ಸಿಕ್ಸರ್‌) ಹೊಡೆದಿದ್ದ ರಿಜ್ವಾನ್‌ ಅವರನ್ನು ಬೌಲ್ಡ್‌ ಮಾಡಿದರು. ಈ ಓವರ್‌ನಲ್ಲಿ ಕೇವಲ 3 ರನ್‌ ಮಾತ್ರ ಬಂತು.

    ಅಕ್ಷರ್‌ ಪಟೇಲ್‌ ಎಸೆದ 16ನೇ ಓವರ್‌ನಲ್ಲಿ 2 ರನ್‌ ಬಂದರೆ, ಹಾರ್ದಿಕ್‌ (Hardik Pandya) ಎಸೆದ 17ನೇ ಓವರ್‌ನಲ್ಲಿ 5 ರನ್‌ ಪಾಕಿಗೆ ಬಂತು. ಸಿರಾಜ್‌ ಎಸೆದ 18ನೇ ಓವರ್‌ನಲ್ಲಿ 9 ರನ್‌ ಬಂದಾಗ ಕೊನೆಯ 12 ಎಸೆತದಲ್ಲಿ 21 ರನ್‌ ಬೇಕಿತ್ತು. ಇದನ್ನೂ ಓದಿ: IND vs PAK T20 World Cup: ಪಾಕಿಸ್ತಾನಕ್ಕೆ 120 ರನ್ ಟಾರ್ಗೆಟ್ ನೀಡಿದ ಟೀಂ ಇಂಡಿಯಾ

    19ನೇ ಓವರ್‌ ಎಸೆದ ಬುಮ್ರಾ ಕೇವಲ 3 ರನ್‌ ನೀಡಿ 1 ವಿಕೆಟ್‌ ಪಡೆಯುವ ಮೂಲಕ ಪಂದ್ಯವನ್ನು ಭಾರತದತ್ತ ತಿರುಗಿಸಿದರು. ಕೊನೆಯ 20ನೇ ಓವರ್‌ನಲ್ಲಿ ಪಾಕಿಸ್ತಾನಕ್ಕೆ 18 ರನ್‌ ಬೇಕಿತ್ತು.

    ಅರ್ಶ್‌ದೀಪ್‌ ಸಿಂಗ್‌ ಎಸೆದ ಮೊದಲ ಓವರ್‌ನಲ್ಲಿ ಇಮಾದ್‌ ವಸೀಂ ಕೀಪರ್‌ಗೆ ಕ್ಯಾಚ್‌ ನೀಡಿ ಹೊರನಡೆದರು. ನಂತರ ಎರಡು ಎಸೆತದಲ್ಲಿ 2ರನ್‌ ಬಂತು. 4ನೇ ಮತ್ತು 5ನೇ ಎಸೆತವನ್ನು ನಸೀಮ್‌ ಶಾ ಬೌಂಡರಿಗೆ ಅಟ್ಟಿ ಪಂದ್ಯಕ್ಕೆ ರೋಚಕ ತಿರುವು ನೀಡಿದರು. ಆದರೆ ಕೊನೆಯ ಎಸೆತದಲ್ಲಿ ಅರ್ಶ್‌ದೀಪ್‌ 1 ರನ್‌ ನೀಡಿದ ಪರಿಣಾಮ ಭಾರತ 6 ರನ್‌ಗಳ ರೋಚಕ ಜಯ ಸಾಧಿಸಿತು. ಪಾಕಿಸ್ತಾನ ಅಂತಿಮವಾಗಿ 7 ವಿಕೆಟ್‌ ನಷ್ಟಕ್ಕೆ 113 ರನ್‌ ಮಾತ್ರ ಗಳಿಸಿತು.

    ಬುಮ್ರಾ 14 ರನ್‌ ನೀಡಿ 3 ವಿಕೆಟ್‌ ಪಡೆದರೆ ಪಾಂಡ್ಯ 24 ರನ್‌ ನೀಡಿ 2 ವಿಕೆಟ್‌ ಪಡೆದರು. ಅತ್ಯುತ್ತಮ ಪ್ರದರ್ಶನ ನೀಡಿದ ಬುಮ್ರಾ ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

    ನಾಯಕ ಬಾಬರ್‌ ಅಜಂ, ಉಸ್ಮನ್‌ ಖಾನ್‌, ಫಖರ್‌ ಜಮಾನ್‌ ತಲಾ 13 ರನ್‌ ಹೊಡೆದರೆ ಇಮಾದ್‌ ವಾಸೀಂ 15 ರನ್‌ ಹೊಡೆದು ಔಟಾದರು.


    ಎ ಗುಂಪಿನಲ್ಲಿ ಆಡಿದ 2 ಪಂದ್ಯಗಳಲ್ಲಿ ಗೆದ್ದಿರುವ ಭಾರತ ಅಂಕಪಟ್ಟಿಯಲ್ಲಿ 4 ಅಂಕ ಪಡೆದು ಮೊದಲ ಸ್ಥಾನದಲ್ಲಿದೆ. ಅಮೆರಿಕ 4 ಅಂಕ ಪಡೆದು ಎರಡನೇ ಸ್ಥಾನದಲ್ಲಿದ್ದರೆ ಕೆನಡಾ 2 ಅಂಕ ಪಡೆದು ಮೂರನೇ ಸ್ಥಾನಲ್ಲಿದೆ. ಎರಡು ಪಂದ್ಯ ಸೋತಿರುವ ಪಾಕಿಸ್ತಾನ ಮತ್ತು ಐರ್ಲೆಂಡ್‌ ಕ್ರಮವಾಗಿ 4 ಮತ್ತು 5ನೇ ಸ್ಥಾನಲ್ಲಿದೆ. ಎರಡು ಪಂದ್ಯಗಳನ್ನು ಸೋತಿರುವ ಮಾಜಿ ಚಾಂಪಿಯನ್‌ ಪಾಕಿಸ್ತಾನ ಗುಂಪು ಹಂತದಲ್ಲೇ ಹೊರಕ್ಕೆ ಹೋಗುವ ಸಾಧ್ಯತೆಯಿದೆ.

    ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ್ದ ಭಾರತ 19 ಓವರ್‌ಗಳಿಗೆ 119 ರನ್‌ಗಳಿಸಿ ಆಲೌಟ್‌ ಆಗಿತ್ತು.

  • ಸೂಪರ್‌ ಓವರ್‌ ಥ್ರಿಲ್ಲರ್‌ – ಕ್ರಿಕೆಟ್‌ ಶಿಶು ಅಮೆರಿಕದ ಮುಂದೆ ಸೋತ ಪಾಕ್‌!

    ಸೂಪರ್‌ ಓವರ್‌ ಥ್ರಿಲ್ಲರ್‌ – ಕ್ರಿಕೆಟ್‌ ಶಿಶು ಅಮೆರಿಕದ ಮುಂದೆ ಸೋತ ಪಾಕ್‌!

    – ಕೊನೆಯ ಎಸೆತದಲ್ಲಿ ಅಮೆರಿಕವನ್ನು ಗೆಲ್ಲಿಸಿದ ನಿತೀಶ್‌ ಕುಮಾರ್‌

    ಡಲ್ಲಾಸ್‌: ಟಿ20 ವಿಶ್ವಕಪ್‌ (T20 World Cup) ಗೆಲ್ಲಲು ಸೇನಾ ಕೇಂದ್ರದಲ್ಲಿ ದೈಹಿಕ ತರಬೇತಿ ಪಡೆದಿದ್ದ ಪಾಕಿಸ್ತಾನ (Pakistan) ತಂಡ ಕ್ರಿಕೆಟ್‌ ಶಿಶು ಅಮೆರಿಕದ (USA) ವಿರುದ್ಧ ಸೋತಿದೆ. ಸೂಪರ್‌ ಓವರ್‌ನಲ್ಲಿ (Super Over) ಅಮೆರಿಕ ಪಾಕಿಸ್ತಾನವನ್ನು ಮಣಿಸಿದೆ.

    ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಪಾಕಿಸ್ತಾನ 7 ವಿಕೆಟ್‌ ನಷ್ಟಕ್ಕೆ 159 ರನ್‌ ಹೊಡೆಯಿತು. ಚೇಸ್‌ ಮಾಡಿದ ಅಮೆರಿಕಕ್ಕೆ ಕೊನೆಯ ಓವರ್‌ನಲ್ಲಿ 15 ರನ್‌ ಬೇಕಿತ್ತು.

    ಹ್ಯಾರಿಸ್‌ ರೌಫ್‌ ಎಸೆದ ಮೊದಲ ಮೂರು ಎಸೆತದಲ್ಲಿ 1 ರನ್‌ ಬಂದಿದ್ದರೆ 4ನೇ ಎಸೆತವನ್ನು ಆರನ್‌ ಜೋನ್ಸ್‌ ಸಿಕ್ಸ್‌ಗೆ ಅಟ್ಟಿದರು. 5ನೇ ಎಸೆತದಲ್ಲಿ 1 ರನ್‌ ಓಡಿದರು. 6ನೇ ಎಸೆತದಲ್ಲಿ ಸ್ಟ್ರೈಕ್‌ನಲ್ಲಿದ್ದ ನಿತೀಶ್‌ ಕುಮಾರ್‌ ಬೌಂಡರಿ ಹೊಡೆಯುವ ಮೂಲಕ ಪಂದ್ಯ ಟೈನಲ್ಲಿ ಅಂತ್ಯವಾಯಿತು.

    ಅಮೀರ್‌ ಎಸೆದ ಸೂಪರ್‌ ಓವರ್‌ನಲ್ಲಿ ಅಮೆರಿಕ 18 ರನ್‌ ಹೊಡೆಯಿತು. ಇದರಲ್ಲಿ ಇತರ ರೂಪದಲ್ಲಿ 7 ರನ್‌ ಬಿಟ್ಟುಕೊಟ್ಟಿದ್ದರು. 19 ರನ್‌ಗಳ ಸವಾಲು ಪಡೆದ ಪಾಕಿಸ್ತಾನ 1 ವಿಕೆಟ್‌ ನಷ್ಟಕ್ಕೆ 13 ರನ್‌ಗಳಿಸಿ ಸೋಲನ್ನು ಒಪ್ಪಿಕೊಂಡಿತು.

    ಮೊದಲು ಬ್ಯಾಟ್‌ ಮಾಡಿದ್ದ ಪಾಕ್‌ ಪರ ನಾಯಕ ಬಾಬರ್‌ ಅಜಂ 44 ರನ್‌(43 ಎಸೆತ, 3 ಬೌಂಡರಿ, 2 ಸಿಕ್ಸರ್‌), ಶಾದಾಬ್‌ ಖಾನ್‌ 40 ರನ್‌(25 ಎಸೆತ, 1 ಬೌಂಡರಿ, 3 ಸಿಕ್ಸರ್‌) ಇಫ್ತಿಕಾರ್‌ ಅಹ್ಮದ್‌ ಔಟಾಗದೇ 18 ರನ್‌ (14 ಎಸೆತ, 3 ಬೌಂಡರಿ), ಶಾಹೀನ್‌ ಅಫ್ರಿದಿ ಔಟಾಗದೇ 23 ರನ್‌ (16 ಎಸೆತ, 1 ಬೌಂಡರಿ, 2 ಸಿಕ್ಸರ್‌) ಹೊಡೆದರು.

    ಅಮೆರಿಕ ಪರ ಮೊನಾಂಕ್‌ ಪಟೇಲ್‌ 50 ರನ್‌ (38 ಎಸೆತ, 7 ಬೌಂಡರಿ, 1 ಸಿಕ್ಸರ್‌), ಅಂಡ್ರಿಸ್‌ ಗೌಸ್‌ 35 ರನ್‌ (26 ಎಸೆತ, 5 ಬೌಂಡರಿ, 1 ಸಿಕ್ಸರ್)‌, ಆರನ್‌ ಜೋನ್ಸ್‌ ಔಟಾಗದೇ 36 ರನ್‌ (26 ಎಸೆತ, 2 ಬೌಂಡರಿ, 2 ಸಿಕ್ಸರ್‌), ನಿತೀಶ್‌ ಕುಮಾರ್‌ ಔಟಾಗದೇ 14 ರನ್‌ (14 ಎಸೆತ, 1 ಬೌಂಡರಿ) ಹೊಡೆದರು. ಪಾಕಿಸ್ತಾನ ಇತರ ರೂಪದಲ್ಲಿ12 ರನ್‌ (1 ನೋಬಾಲ್‌, 11 ವೈಡ್‌) ಬಿಟ್ಟುಕೊಟ್ಟದ್ದು ಮುಳುವಾಯಿತು.

     

  • ವಿಶ್ವಕಪ್‌ ಒಂದು ಪಂದ್ಯಕ್ಕೆ ಕೊಹ್ಲಿ ಗೈರು ಸಾಧ್ಯತೆ

    ವಿಶ್ವಕಪ್‌ ಒಂದು ಪಂದ್ಯಕ್ಕೆ ಕೊಹ್ಲಿ ಗೈರು ಸಾಧ್ಯತೆ

    ಮುಂಬೈ: ಅಮೆರಿಕದಲ್ಲಿ(USA) ನಡೆಯಲಿರುವ ಟಿ20 ವಿಶ್ವಕಪ್‌ನ (T20 World Cup) ಅಭ್ಯಾಸ ಪಂದ್ಯಕ್ಕೆ ಕೊಹ್ಲಿ ಗೈರಾಗುವ ಸಾಧ್ಯತೆಯಿದೆ.

    ಬಾಂಗ್ಲಾದೇಶದ ವಿರುದ್ಧ ಜೂನ್‌ 1 ರಂದು ಭಾರತ ಅಭ್ಯಾಸ ಪಂದ್ಯವನ್ನು ಆಡಲಿದೆ. ವಿರಾಟ್‌ ಕೊಹ್ಲಿ (Virat Kohli) ತಡವಾಗಿ ತಂಡವನ್ನು ಸೇರುವ ಕಾರಣದಿಂದ ಈ ಪಂದ್ಯಕ್ಕೆ ಅವರು ಗೈರಾಗುವ ಸಾಧ್ಯತೆಯಿದೆ ಎಂದು ಮಾಧ್ಯಮ ವರದಿ ಮಾಡಿದೆ. ಇದನ್ನೂ ಓದಿ: ಬ್ರ್ಯಾಂಡ್ ಬೆಂಗಳೂರು ಹೆಸರಲ್ಲಿ ಲೂಟಿ ನಡೀತಿದೆ: ಡಿಕೆಶಿ ವಿರುದ್ಧ ಹೆಚ್‌ಡಿಕೆ ಕಿಡಿ

    ಐಪಿಎಲ್‌ ಎಲಿಮಿನೇಟರ್‌ನಲ್ಲಿ ಆರ್‌ಸಿಬಿ (RCB) ಸೋತ ಬಳಿಕ ಕೊಹ್ಲಿ ಕೆಲ ದಿನ ವಿಶ್ರಾಂತಿ ನೀಡಬೇಕೆಂದು ಬಿಸಿಸಿಐಗೆ (BCCI) ಮನವಿ ಮಾಡಿದ್ದಾರೆ. ಈ ಮನವಿಯನ್ನು ಬಿಸಿಸಿಐ ಪುರಸ್ಕರಿಸಿದ್ದು ತಡವಾಗಿ ಟೀಂ ಇಂಡಿಯಾವನ್ನು ಕೊಹ್ಲಿ ಸೇರಲಿದ್ದಾರೆ.

    ಮಾಧ್ಯಮಗಳಲ್ಲಿ ಬಂದಿರುವ ಮಾಹಿತಿ ಪ್ರಕಾರ ಕೊಹ್ಲಿ ಮೇ 30 ರಂದು ನ್ಯೂಯಾರ್ಕ್‌ಗೆ ಪ್ರಯಾಣ ಬೆಳೆಸಲಿದ್ದಾರೆ. ಇದನ್ನೂ ಓದಿ: ಟೀಂ ಇಂಡಿಯಾದ ಉಪನಾಯಕ ಹಾರ್ದಿಕ್‌ ಪಾಂಡ್ಯ ಈಗ ಎಲ್ಲಿದ್ದಾರೆ?

    ಅಮೆರಿಕ (USA) ಮತ್ತು ವೆಸ್ಟ್‌ ಇಂಡೀಸ್‌ (West Indies) ಜಂಟಿಯಾಗಿ ಈ ಬಾರಿಯ ಟಿ20 ಕ್ರಿಕೆಟ್‌ ಆಯೋಜನೆ ಮಾಡಿದ್ದು ಜೂನ್‌ 2 ರಿಂದ ಜೂನ್‌ 29 ವರೆಗೆ ಪಂದ್ಯಾಟ ನಡೆಯಲಿದೆ. ಜೂನ್‌ 5 ರಂದು ಐರ್ಲೆಂಡ್‌ ವಿರುದ್ಧ, ಜೂನ್‌ 9 ರಂದು ಪಾಕಿಸ್ತಾನದ ವಿರುದ್ಧ ಭಾರತ ಆಡಲಿದೆ.

    ಟೀಂ ಇಂಡಿಯಾದ ಒಂದು ತಂಡ ಈಗಾಗಲೇ ಅಮೆರಿಕಕ್ಕೆ ತೆರಳಿದೆ. ಶನಿವಾರ ನಾಯಕ ರೋಹಿತ್‌ ಶರ್ಮಾ (Rohit Sharma), ಕೋಚ್‌ ರಾಹುಲ್‌ ದ್ರಾವಿಡ್‌ (Rahul Drvaid) ಸೇರಿದಂತೆ ಹಲವು ಮಂದಿ ನ್ಯೂಯಾರ್ಕ್‌ ವಿಮಾನ ಹತ್ತಿದ್ದಾರೆ.

  • USAಗೆ ಹಾರಿದ ಟೀಂ ಇಂಡಿಯಾ ಮೊದಲ ಬ್ಯಾಚ್‌ – ವಿಶ್ವಕಪ್‌ ಗೆದ್ದುಬರುವಂತೆ ಕೋಟ್ಯಂತರ ಅಭಿಮಾನಿಗಳ ಹಾರೈಕೆ!

    USAಗೆ ಹಾರಿದ ಟೀಂ ಇಂಡಿಯಾ ಮೊದಲ ಬ್ಯಾಚ್‌ – ವಿಶ್ವಕಪ್‌ ಗೆದ್ದುಬರುವಂತೆ ಕೋಟ್ಯಂತರ ಅಭಿಮಾನಿಗಳ ಹಾರೈಕೆ!

    ಮುಂಬೈ: ಅಮೆರಿಕ ಹಾಗೂ ವೆಸ್ಟ್‌ ಇಂಡೀಸ್‌ ಆತಿಥ್ಯದಲ್ಲಿ ಮುಂಬರುವ ಜೂನ್‌ ತಿಂಗಳಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಗಾಗಿ ಭಾರತ ತಂಡದ (Team India) 15 ಆಟಗಾರರ ಪೈಕಿ ಮೊದಲ ಬ್ಯಾಚ್‌ ಇಂದು (ಶನಿವಾರ) ಅಮೆರಿಕದತ್ತ (USA) ಹೊರಟಿದೆ.

    ಮೇ 19ಕ್ಕೂ ಮುನ್ನವೇ 2024ರ ಐಪಿಎಲ್‌ನಿಂದ ಔಟ್‌ ಆದ 6 ಫ್ರಾಂಚೈಸಿಯ ಆಟಗಾರರು ಮುಂಬೈ ವಿಮಾನ ನಿಲ್ದಾಣದಿಂದ (Mumbai Airport) ಹೊರಟಿದ್ದಾರೆ. ಇನ್ನುಳಿದ ಆಟಗಾರರು ಮೇ 27 ರಂದು 2ನೇ ಬ್ಯಾಚ್‌ನಲ್ಲಿ ಅಮೆರಿಕಕ್ಕೆ ತೆರಳಲಿದ್ದಾರೆ. ಇದನ್ನೂ ಓದಿ: Malaysia Masters: ಜಿದ್ದಾ ಜಿದ್ದಿ ಕಣದಲ್ಲಿ ಗೆದ್ದು ಫೈನಲ್‌ಗೆ ಲಗ್ಗೆಯಿಟ್ಟ ಸಿಂಧು!

    ಶನಿವಾರ ಯುಎಸ್‌ಗೆ ತೆರಳುತ್ತಿರುವ ಮೊದಲ ಬ್ಯಾಚ್‌ನಲ್ಲಿ ಹಾರ್ದಿಕ್‌ ಪಾಂಡ್ಯ (Hardik Pandya) ಹೊರತುಪಡಿಸಿ ರೋಹಿತ್ ಶರ್ಮಾ (Rohit Sharma), ವಿರಾಟ್ ಕೊಹ್ಲಿ, ರಿಷಭ್‌ ಪಂತ್, ಸೂರ್ಯಕುಮಾರ್ ಯಾದವ್, ಮೊಹಮ್ಮದ್ ಸಿರಾಜ್, ಅರ್ಷ್‌ದೀಪ್ ಸಿಂಗ್, ಕುಲ್ದೀಪ್‌ ಯಾದವ್‌, ಅಕ್ಷರ್ ಪಟೇಲ್, ಶಿವಂ ದುಬೆ, ರವೀಂದ್ರ ಜಡೇಜಾ ಮತ್ತು ಜಸ್ಪ್ರೀತ್ ಬುಮ್ರಾ, ಶುಭಮನ್‌ ಗಿಲ್‌ ಹೊರಟಿದ್ದಾರೆ. ಈ ವೇಳೆ ವಿರಾಟ್‌ ಕೊಹ್ಲಿ ಕಾಣಿಸಿಕೊಳ್ಳದೇ ಇರುವುದು ಕುತೂಹಲ ಮೂಡಿಸಿದೆ. ಉಳಿದ ಆಟಗಾರರಾದ ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್, ಯುಜ್ವೇಂದ್ರ ಚಾಹಲ್ ಮತ್ತು ಮೀಸಲು ಆಟಗಾರರಾದ ಅವೇಶ್ ಖಾನ್, ಖಲೀಲ್ ಅಹ್ಮದ್ ಮತ್ತು ರಿಂಕು ಸಿಂಗ್ ಮೇ 27 ರಂದು 2ನೇ ಬ್ಯಾಚ್‌ನೊಂದಿಗೆ ಹೊರಡಲಿದ್ದಾರೆ. ಹಾರ್ದಿಕ್‌ ಪಾಂಡ್ಯ ಸಹ ಅಂದೇ ಯುಎಸ್‌ಎಗೆ ತೆರಳಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

    ಟಿ20 ವಿಶ್ವಕಪ್‌ಗೆ ಭಾರತ ತಂಡ:
    ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ. ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್‌ ಪಟೇಲ್, ಕುಲ್ದೀಪ್‌ ಯಾದವ್. ಯುಜ್ವೇಂದ್ರ ಚಹಾಲ್, ಅರ್ಷ್‌ದೀಪ್‌ ಸಿಂಗ್‌, ಮೊಹಮ್ಮದ್ ಸಿರಾಜ್, ಜಸ್ಪ್ರೀತ್‌ ಬುಮ್ರಾ. ಇದನ್ನೂ ಓದಿ: IPL 2024: ಫೈನಲ್‌ ಪಂದ್ಯಕ್ಕೆ ʻರೆಮಲ್‌ʼ ಚಂಡಮಾರುತದ ಆತಂಕ – ಮಳೆ ಅಡ್ಡಿಯಾದ್ರೆ ವಿಜೇತರನ್ನ ನಿರ್ಧರಿಸೋದು ಹೇಗೆ?

    ಕೋಟ್ಯಂತರ ಅಭಿಮಾನಿಗಳ ಹಾರೈಕೆ:
    ಟಿ20 ವಿಶ್ವಕಪ್‌ (T20 World Cup) ಟೂರ್ನಿಗಾಗಿ ಹೊರಟಿರುವ ಭಾರತ ತಂಡಕ್ಕೆ ಕೋಟ್ಯಂತರ ಅಭಿಮಾನಿಗಳು ಶುಭ ಹಾರೈಸಿದ್ದಾರೆ. ಸಾವಿರಾರು ಅಭಿಮಾನಿಗಳು ಮುಂಬೈ ವಿಮಾನ ನಿಲ್ದಾಣದ ಮುಂಭಾಗ, ಕೆಲ ಅಭಿಮಾನಿಗಳು ಏರ್ಪೋರ್ಟ್‌ ಆವರಣದಲ್ಲಿ ನಿಂತು ಶುಭಕೋರಿದ್ದಾರೆ. ಕೋಟ್ಯಂತರ ಅಭಿಮಾನಿಗಳು ತಮ್ಮ ತಮ್ಮ ಸೋಷಿಯಲ್‌ ಮೀಡಿಯಾ ಖಾತೆಗಳಲ್ಲಿ ಫೋಟೋ ಹಂಚಿಕೊಂಡಿದ್ದು, ʻಗೆದ್ದು ಬಾ ಭಾರತʼ ಎಂದು ಹಾರೈಸಿದ್ದಾರೆ. ಇದನ್ನೂ ಓದಿ: ಕೋಚ್‌ ಹುದ್ದೆಗೆ ಆಸ್ಟ್ರೇಲಿಯಾದ ಯಾವುದೇ ಆಟಗಾರರನ್ನು ಬಿಸಿಸಿಐ ಸಂಪರ್ಕಿಸಿಲ್ಲ: ಜಯ್‌ಶಾ

    ವಿಶ್ವಕಪ್‌ ಟೂರ್ನಿ ಎಲ್ಲಿ? ಯಾವಾಗ?
    ಜೂನ್‌ 1 ರಿಂದ ಜೂನ್‌ 29ರ ವರೆಗೆ ವಿಶ್ವಕಪ್‌ ಟೂರ್ನಿ ನಡೆಯಲಿದ್ದು, ಜೂನ್‌ 9ರಂದು ನ್ಯೂಯಾರ್ಕ್‌ನಲ್ಲಿ ಭಾರತ ಮತ್ತು ಪಾಕ್‌ ತಂಡಗಳು ಮುಖಾಮುಖಿಯಾಗಲಿವೆ. ಈ ಬಾರಿ 16 ರಿಂದ 20ಕ್ಕೆ ತಂಡಗಳ ಸಂಖ್ಯೆಯನ್ನು ಹೆಚ್ಚಿಸಿದ್ದು, ಒಟ್ಟು 4 ಗುಂಪುಗಳಲ್ಲಿ 20 ತಂಡಗಳು ಕಣಕ್ಕಿಳಿಯಲಿವೆ. ಅಲ್ಲದೇ ಸೂಪರ್‌-12 ಹಂತವನ್ನು ಸೂಪರ್‌-8ಗೆ ಇಳಿಸಲಾಗಿದೆ. ಸೂಪರ್‌-8 ಗುಂಪಿನಲ್ಲಿ ಅಗ್ರಸ್ಥಾನ ಪಡೆದ 4 ತಂಡಗಳು ಸೆಮಿಫೈನಲ್‌ ಪ್ರವೇಶಿಸಲಿವೆ. ಜೂನ್‌ 1 ರಿಂದ 18ರ ವರೆಗೆ ಗುಂಪು ಹಂತದ ಪಂದ್ಯಗಳು ನಡೆಯಲಿದೆ. ಜೂನ್‌ 19 ರಿಂದ 24ರ ವರೆಗೆ ಸೂಪರ್‌-8 ಪಂದ್ಯಗಳು, ಜೂನ್‌ 26 ಮತ್ತು ಜೂನ್‌ 27 ರಂದು ಸೆಮಿಫೈನಲ್‌ ಪಂದ್ಯಗಳು ನಡಯೆಲಿದ್ದು, ಜೂನ್‌ 29ರಂದು ಬಾರ್ಬಡೋಸ್ ಮೈದಾನದಲ್ಲಿ ಫೈನಲ್‌ ಪಂದ್ಯ ನಡೆಯಲಿದೆ.

    ಯಾವ ಗುಂಪಿನಲ್ಲಿ-ಯಾವ ತಂಡಗಳು?
    ಗುಂಪು-ಎ: ಭಾರತ, ಪಾಕಿಸ್ತಾನ, ಐರ್ಲೆಂಡ್‌, ಕೆನಡಾ, ಯುಎಸ್‌ಎ
    ಗ್ರೂಪ್‌-ಬಿ: ಇಂಗ್ಲೆಂಡ್‌, ಆಸ್ಟ್ರೇಲಿಯಾ, ನಮೀಬಿಯಾ, ಸ್ಕಾಟ್‌ಲೆಂಡ್‌, ಒಮನ್‌
    ಗ್ರೂಪ್‌-ಸಿ: ನ್ಯೂಜಿಲೆಂಡ್‌, ವೆಸ್ಟ್‌ ಇಂಡೀಸ್‌, ಅಫ್ಘಾನಿಸ್ತಾನ, ಉಗಾಂಡ, ಪಪುವಾ ನ್ಯೂ ಗಿನಿಯಾ
    ಗ್ರೂಪ್‌-ಡಿ: ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಬಾಂಗ್ಲಾದೇಶ, ನೆದರ್ಲೆಂಡ್ಸ್‌, ನೇಪಾಳ

  • T20 ವಿಶ್ವಕಪ್‌ ಟೂರ್ನಿ ಮೇಲೆ ಉಗ್ರರ ಕರಿನೆರಳು – ಪಾಕ್‌ನಿಂದ ಭಯೋತ್ಪಾದಕ ದಾಳಿ ಬೆದರಿಕೆ!

    T20 ವಿಶ್ವಕಪ್‌ ಟೂರ್ನಿ ಮೇಲೆ ಉಗ್ರರ ಕರಿನೆರಳು – ಪಾಕ್‌ನಿಂದ ಭಯೋತ್ಪಾದಕ ದಾಳಿ ಬೆದರಿಕೆ!

    – ಜೂನ್‌ 9ರಂದು ನ್ಯೂಯಾರ್ಕ್‌ನಲ್ಲಿ ಭಾರತ – ಪಾಕ್‌ ಮುಖಾಮುಖಿ!

    ವಾಷಿಂಗ್ಟನ್‌: ಐಸಿಸಿ ಟಿ20 ವಿಶ್ವಕಪ್‌ (T20 World Cup 2024) ಟೂರ್ನಿಗೆ ಕೆಲವೇ ದಿನಗಳು ಬಾಕಿಯಿದೆ. ಈ ಬಾರಿ ವೆಸ್ಟ್ ಇಂಡೀಸ್ ಮತ್ತು ಅಮೆರಿಕ ಆತಿಥ್ಯದಲ್ಲಿ ವಿಶ್ವಕಪ್‌ ಟೂರ್ನಿ ನಡೆಯುತ್ತಿದ್ದು, ಚುಟುಕು ಕ್ರಿಕೆಟ್ ಕೂಟವನ್ನು ಯಶಸ್ವಿಯಾಗಿ ನಡೆಸಲು ಐಸಿಸಿ ಸಕಲ ಸಿದ್ಧತೆ ಮಾಡಿಕೊಂಡಿದೆ. ಈ ಹೊತ್ತಿನಲ್ಲೇ ಅದ್ಧೂರಿ ಕ್ರೀಡಾಕೂಟಕ್ಕೆ ಉಗ್ರರ ಕರಿನೆರಳು ಬಿದ್ದಿದೆ.

    ಹೌದು. ಜಾಗತಿಕ ಕ್ರಿಕೆಟ್ ಟೂರ್ನಿಗೆ ಉತ್ತರ ಪಾಕಿಸ್ತಾನದದಿಂದ (North Pakistan) ಭಯೋತ್ಪಾದಕರ ದಾಳಿ ಬೆದರಿಕೆ ಬಂದಿದೆ. ಪ್ರೋ-ಇಸ್ಲಾಮಿಕ್ ಸ್ಟೇಟ್‌ನಿಂದ ಭದ್ರತಾ ಬೆದರಿಕೆ (Terror Threat) ಬಂದಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿ (ICC) ಮುಂದಾಗಿದೆ. ಇದನ್ನೂ ಓದಿ: ಟಿ20 ವಿಶ್ವಕಪ್‌ ತಂಡದಿಂದ ರಾಹುಲ್‌ ಬಿಟ್ಟಿದ್ದೇಕೆ? ಕೊಹ್ಲಿ ಸ್ಟ್ರೈಕ್‌ರೇಟ್‌ ಬಗ್ಗೆ ರೋಹಿತ್‌ ಹೇಳಿದ್ದೇನು?

    ಇದಕ್ಕೆ ಪ್ರತಿಕ್ರಿಯಿಸಿರುವ ಕ್ರಿಕೆಟ್ ವೆಸ್ಟ್ ಇಂಡೀಸ್‌ನ ಸಿಇಒ ಜಾನಿ ಗ್ರೇವ್ಸ್, ನಾವು ಆತಿಥೇಯ ದೇಶಗಳು ಮತ್ತು ನಗರಗಳಲ್ಲಿನ ಅಧಿಕಾರಿಗಳೊಂದಿಗೆ ನಿಕಟವಾಗಿ ಸಂಪರ್ಕದಲ್ಲಿದ್ದೇವೆ. ನಮ್ಮ ಕಾರ್ಯಕ್ರಮಕ್ಕೆ ಗುರುತಿಸಲಾದ ಅಪಾಯಗಳನ್ನು ತಗ್ಗಿಸಲು ಸೂಕ್ತವಾದ ಯೋಜನೆಗಳು ಜಾರಿಗೊಳಿಸುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಿಷಭ್‌ ಪಂತ್‌ ಮದುವೆಯಾಗ್ತೀರಾ? – ನೋ ಕಾಮೆಂಟ್ಸ್‌ ಎಂದು ಪಾಕ್‌ ಬೌಲರ್‌ ಹೊಗಳಿದ ಊರ್ವಶಿ ರೌಟೇಲಾ

    ಈ ನಡುವೆ ಪ್ರೊ-ಇಸ್ಲಾಮಿಕ್‌ ಸ್ಟೇಟ್ಸ್‌ (IS) ಮಾಧ್ಯಮ ಮೂಲಗಳು ಕ್ರೀಡಾಕೂಟಗಳ ವಿರುದ್ಧ ಹಿಂಸಾಚಾರವನ್ನು ಪ್ರಚೋದಿಸುವ ಅಭಿಯಾನಗಳನ್ನು ಪ್ರಾರಂಭಿಸಿವೆ. ಇದರಲ್ಲಿ ಅಫ್ಘಾನಿಸ್ತಾನ-ಪಾಕಿಸ್ತಾನ ಶಾಖೆಯ ವೀಡಿಯೊ ಸಂದೇಶಗಳು ಸೇರಿವೆ. ಇದು ಹಲವಾರು ದೇಶಗಳಲ್ಲಿ ನಡೆದ ದಾಳಿಗಳನ್ನು ಎತ್ತಿ ತೋರಿಸಿವೆ. ಅಲ್ಲದೇ ಬೆಂಬಲಿಗರನ್ನು ಅವರ ದೇಶಗಳಲ್ಲಿ ಯುದ್ಧಭೂಮಿಗೆ ಸೇರುವಂತೆ ಒತ್ತಾಯಿಸಿರುವುದು ಕಂಡುಬಂದಿದೆ ಎಂದು ತಿಳಿದುಬಂದಿದೆ.

    ವಿಶ್ವಕಪ್‌ ಟೂರ್ನಿ ಎಲ್ಲಿ? ಯಾವಾಗ?
    ಜೂನ್‌ 1 ರಿಂದ ಜೂನ್‌ 29ರ ವರೆಗೆ ವಿಶ್ವಕಪ್‌ ಟೂರ್ನಿ ನಡೆಯಲಿದ್ದು, ಜೂನ್‌ 9ರಂದು ನ್ಯೂಯಾರ್ಕ್‌ನಲ್ಲಿ ಭಾರತ ಮತ್ತು ಪಾಕ್‌ ತಂಡಗಳು ಮುಖಾಮುಖಿಯಾಗಲಿವೆ. ಈ ಬಾರಿ 16 ರಿಂದ 20ಕ್ಕೆ ತಂಡಗಳ ಸಂಖ್ಯೆಯನ್ನು ಹೆಚ್ಚಿಸಿದ್ದು, ಒಟ್ಟು 4 ಗುಂಪುಗಳಲ್ಲಿ 20 ತಂಡಗಳು ಕಣಕ್ಕಿಳಿಯಲಿವೆ. ಅಲ್ಲದೇ ಸೂಪರ್‌-12 ಹಂತವನ್ನು ಸೂಪರ್‌-8ಗೆ ಇಳಿಸಲಾಗಿದೆ. ಸೂಪರ್‌-8 ಗುಂಪಿನಲ್ಲಿ ಅಗ್ರಸ್ಥಾನ ಪಡೆದ 4 ತಂಡಗಳು ಸೆಮಿಫೈನಲ್‌ ಪ್ರವೇಶಿಸಲಿವೆ. ಜೂನ್‌ 1 ರಿಂದ 18ರ ವರೆಗೆ ಗುಂಪು ಹಂತದ ಪಂದ್ಯಗಳು ನಡೆಯಲಿದೆ. ಜೂನ್‌ 19 ರಿಂದ 24ರ ವರೆಗೆ ಸೂಪರ್‌-8 ಪಂದ್ಯಗಳು, ಜೂನ್‌ 26 ಮತ್ತು ಜೂನ್‌ 27 ರಂದು ಸೆಮಿಫೈನಲ್‌ ಪಂದ್ಯಗಳು ನಡಯೆಲಿದ್ದು, ಜೂನ್‌ 29ರಂದು ಬಾರ್ಬಡೋಸ್ ಮೈದಾನದಲ್ಲಿ ಫೈನಲ್‌ ಪಂದ್ಯ ನಡೆಯಲಿದೆ.

    ಯಾವ ಗುಂಪಿನಲ್ಲಿ-ಯಾವ ತಂಡಗಳು?

    ಗುಂಪು-ಎ:
    ಭಾರತ, ಪಾಕಿಸ್ತಾನ, ಐರ್ಲೆಂಡ್‌, ಕೆನಡಾ, ಯುಎಸ್‌ಎ

    ಗ್ರೂಪ್‌-ಬಿ:
    ಇಂಗ್ಲೆಂಡ್‌, ಆಸ್ಟ್ರೇಲಿಯಾ, ನಮೀಬಿಯಾ, ಸ್ಕಾಟ್‌ಲೆಂಡ್‌, ಒಮನ್‌

    ಗ್ರೂಪ್‌-ಸಿ:
    ನ್ಯೂಜಿಲೆಂಡ್‌, ವೆಸ್ಟ್‌ ಇಂಡೀಸ್‌, ಅಫ್ಘಾನಿಸ್ತಾನ, ಉಗಾಂಡ, ಪಪುವಾ ನ್ಯೂ ಗಿನಿಯಾ

    ಗ್ರೂಪ್‌-ಡಿ:
    ದಕ್ಷಿಣ ಆಫ್ರಿಕಾ, ಶ್ರೀಲಂಕಾ, ಬಾಂಗ್ಲಾದೇಶ, ನೆದರ್ಲೆಂಡ್ಸ್‌, ನೇಪಾಳ

  • ಎಲೋನ್‌ ಮಸ್ಕ್‌ ಭಾರತ ಭೇಟಿ ಮುಂದಕ್ಕೆ – ಸದ್ಯಕ್ಕಿಲ್ಲ ಮೋದಿ ಜೊತೆಗೆ ಮಾತುಕತೆ

    ಎಲೋನ್‌ ಮಸ್ಕ್‌ ಭಾರತ ಭೇಟಿ ಮುಂದಕ್ಕೆ – ಸದ್ಯಕ್ಕಿಲ್ಲ ಮೋದಿ ಜೊತೆಗೆ ಮಾತುಕತೆ

    ನವದೆಹಲಿ: ಕಂಪನಿಯ ಜವಾಬ್ದಾರಿಗಳನ್ನು ನಿಭಾಯಿಸಬೇಕಾಗಿರುವುದರಿಂದ ಭಾರತ ಭೇಟಿ ಮುಂದೂಡಿರುವುದಾಗಿ ಟೆಸ್ಲಾ ಕಂಪನಿಯ ಸಿಇಒ ಎಲೋನ್‌ ಮಸ್ಕ್‌ (Elon Musk) ತಿಳಿಸಿದ್ದಾರೆ.

    ಇದೇ ಏಪ್ರಿಲ್ 21 ಮತ್ತು 22ರಂದು ಎಲೋನ್‌ ಮಸ್ಕ್‌ ಅವರು ಭಾರತಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ವರದಿಯಾಗಿತ್ತು. ಅಲ್ಲದೇ ಭಾರತದಲ್ಲಿ ಟೆಸ್ಲಾ ಕಂಪನಿಯ ಘಟಕದ ಸ್ಥಾಪನೆ ಬಗ್ಗೆ ಅಧಿಕೃತ ಘೋಷಣೆಯಾಗುವ ಸಾಧ್ಯತೆಯಿದೆ ಎನ್ನಲಾಗಿತ್ತು. ಆದ್ರೆ ಎಲಾನ್‌ ಮಸ್ಕ್‌ ಭಾರತದ ಭೇಟಿ ವಿಳಂಬ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

    ದುರಾದೃಷ್ಟವಶಾತ್, ಕಂಪನಿಯ ಕೆಲಸದಲ್ಲಿ ನಿರತರಾಗಿರುವುದರಿಂದ ಭಾರತಕ್ಕೆ ಭೇಟಿ ನೀಡಲಾಗುತ್ತಿಲ್ಲ. ಆದರೆ ಇದೇ ವರ್ಷ ಭಾರತಕ್ಕೆ ಭೇಟಿ ನೀಡುತ್ತೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ದುಬೈ ಬರೋ ಪ್ಲ್ಯಾನ್ ಇದ್ದರೆ ಮುಂದಕ್ಕೆ ಹಾಕಿ- ಭಾರತದ ರಾಯಭಾರಿ ಸೂಚನೆ

    ಸದ್ಯ ಭಾರತದಲ್ಲಿ ಎಲೋನ್‌ ಮಸ್ಕ್‌ ಟೆಸ್ಲಾ ಕಾರು ಉತ್ಪಾದನಾ ಘಟಕ ಸ್ಥಾಪಿಸಲು 2-3 ಶತಕೋಟಿ ಡಾಲರ್‌ ಹೂಡಿಕೆ ಮಾಡುತ್ತಿದ್ದಾರೆ ಎಂಬ ಸುದ್ದಿ ಚರ್ಚೆಯಲ್ಲಿದೆ. 2015ರಲ್ಲಿ ಅಮೆರಿಕ ಪ್ರವಾಸದ ವೇಳೆ ಪ್ರಧಾನಿ ಮೋದಿ ಟೆಸ್ಲಾ ಘಟಕಕ್ಕೆ ಭೇಟಿ ನೀಡಿ ಭಾರತದಲ್ಲೂ ಕಾರು ಉತ್ಪಾದನೆ ಮಾಡುವಂತೆ ಎಲೋನ್‌ ಮಸ್ಕ್‌ ಬಳಿ ಮನವಿ ಮಾಡಿದ್ದರು. ಇದಾದ ಬಳಿಕ 2016ರಲ್ಲೇ ಟೆಸ್ಲಾ ಭಾರತಕ್ಕೆ ಬರುವುದಾಗಿ ಹೇಳಿತ್ತು. ಇದನ್ನೂ ಓದಿ: ಬ್ಲೂ ವೇಲ್‌ ಚಾಲೆಂಜ್‌ಗೆ ಅಮೆರಿಕದಲ್ಲಿ ಭಾರತ ಮೂಲದ ವಿದ್ಯಾರ್ಥಿ ಬಲಿ

    2020ರ ಅಕ್ಟೋಬರ್‌ನಲ್ಲಿ ಟೆಸ್ಲಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಂಪನಿಯು 2021ಕ್ಕೆ ಭಾರತಕ್ಕೆ ಕಾಲಿಡಲಿದೆ ಎಂದಿದ್ದರು. ಆದರೆ ಕೇಂದ್ರ ಸರ್ಕಾರ ಮತ್ತು ಎಲೋನ್‌ ಮಸ್ಕ್‌ ಕಂಪನಿ ಜೊತೆ ತೆರಿಗೆ ವಿಚಾರದಲ್ಲಿ ತಿಕ್ಕಾಟ ನಡೆಯುತ್ತಿದ್ದ ಈ ಪ್ರಕ್ರಿಯೆ ಮುಂದೂಡಲಾಗಿತ್ತು. ಇದೀಗ ಭಾರತದಲ್ಲಿ ಟೆಸ್ಲಾ ಘಟಕ ಸ್ಥಾಪನೆಗೆ ಸ್ಥಳ ಪರಿಶೀಲನೆ ನಡೆಸುತ್ತಿದ್ದು, ಶೀಘ್ರದಲ್ಲೇ ಮಾತುಕತೆ ಮುಕ್ತಾಯಗೊಳ್ಳಲಿದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ಫಿಲಿಪೈನ್ಸ್‌ಗೆ ಭಾರತದ ಬ್ರಹ್ಮೋಸ್ ರಫ್ತು – ಹಲವು ರಾಷ್ಟ್ರಗಳಿಂದ ಬೇಡಿಕೆ 

  • ಗಡಿ ದಾಟುವ ಮೊದಲೇ ಇರಾನ್‌ ಕ್ಷಿಪಣಿಗಳನ್ನಹೊಡೆದುರುಳಿಸಿದ ಇಸ್ರೇಲ್‌ – ಅರಬ್‌ ರಾಷ್ಟ್ರಗಳಿಂದಲೂ ತಡೆ

    ಗಡಿ ದಾಟುವ ಮೊದಲೇ ಇರಾನ್‌ ಕ್ಷಿಪಣಿಗಳನ್ನಹೊಡೆದುರುಳಿಸಿದ ಇಸ್ರೇಲ್‌ – ಅರಬ್‌ ರಾಷ್ಟ್ರಗಳಿಂದಲೂ ತಡೆ

    – 99% ಕ್ಷಿಪಣಿಗಳನ್ನು ತಡೆದ ಇಸ್ರೇಲ್‌

    ಟೆಲ್‌ ಅವೀವ್‌: ಇರಾನ್‌ (Iran) ಹಾರಿಸಿದ್ದ 300 ಕ್ಷಿಪಣಿಗಳ ಪೈಕಿ 99% ರಷ್ಟು ಕ್ಷಿಪಣಿ (Missile), ಯುಎವಿಗಳನ್ನು (UAV) ಹೊಡೆದು ಉರುಳಿಸಿದೆ ಎಂದು ಇಸ್ರೇಲ್‌ (Isreal) ಹೇಳಿದೆ.

    ತನ್ನ ಕಮಾಂಡರ್‌ ಹತ್ಯೆಯ ಪ್ರತೀಕಾರವಾಗಿ ಇಸ್ರೇಲ್‌ ಮೇಲೆ ಇರಾನ್‌ 300 ಕ್ಷಿಪಣಿಗಳನ್ನು ಹಾರಿಸಿತ್ತು. ಇವುಗಳನ್ನು ಇಸ್ರೇಲ್‌ ತಡೆದಿದೆ. 170 ಯುಎವಿಗಳನ್ನು ಇರಾನ್‌ ಹಾರಿಸಿತ್ತು. ಇವುಗಳನ್ನು ಇಸ್ರೇಲ್‌ ತಡೆದಿದೆ. ಇವು ಯಾವುದು ತನ್ನ ವಾಯುನೆಲೆಯನ್ನು ಪ್ರವೇಶ ಮಾಡಿಲ್ಲ ಎಂದು ಇಸ್ರೇನ್‌ ಸೇನೆಯ ವಕ್ತಾರ ಡೇನಿಯಲ್‌ ಹಗೆರಿ ತಿಳಿಸಿದ್ದಾರೆ.

    ಇರಾನ್‌ 30 ಕ್ರೂಸ್‌ ಕ್ಷಿಪಣಿ ಹಾರಿಸಿತ್ತು. ಈ ಪೈಕಿ 25 ಕ್ಷಿಪಣಿಗಳನ್ನು ಇಸ್ರೇಲ್‌ ಫೈಟರ್‌ ವಿಮಾನಗಳು ತಡೆದಿದೆ. 120 ಬ್ಯಾಲಿಸ್ಟಿಕ್‌ ಕ್ಷಿಪಣಿಗಳ ಪೈಕಿ ಕೆಲ ಮಾತ್ರ ಇಸ್ರೇಲ್‌ ಭೂ ಪ್ರದೇಶದ ಒಳಗಡೆ ಬಿದ್ದಿದೆ ಎಂದು ಹೇಳಿದರು. ಇದನ್ನೂ ಓದಿ: ಇಸ್ರೇಲ್‌ನಲ್ಲಿರುವ ಭಾರತೀಯರಿಗೆ ರಾಯಭಾರಿ ಕಚೇರಿ ಮಾರ್ಗಸೂಚಿ ಬಿಡುಗಡೆ

    ನಮ್ಮ ಬಲವಾದ ಮಿತ್ರ ಪಕ್ಷಗಳು ಇರಾನ್‌ನಿಂದ ಬಂದ ಕ್ಷಿಪಣಿಗಳನ್ನು ತಡೆಯುವಲ್ಲಿ ಸಫಲರಾಗಿದ್ದರಿಂದ ಅವುಗಳು ಇಸ್ರೇಲ್‌ ಗಡಿ ದಾಟಿಲ್ಲ ಎಂದು ತಿಳಿಸಿದರು. ಮಿತ್ರ ಪಕ್ಷಗಳ ಹೆಸರನ್ನು ಉಲ್ಲೇಖಿಸದೇ ಇದ್ದರೂ ಅಮೆರಿಕ, ಯುಕೆ,ಫ್ರಾನ್ಸ್‌ ಸೇರಿದಂತೆ ಹಲವು ದೇಶಗಳು ಇಸ್ರೇಲ್‌ ಬೆಂಬಲಕ್ಕೆ ನಿಂತಿವೆ.

    ಜೋರ್ಡಾನ್‌ನಲ್ಲಿ ಹಲವಾರು ಕ್ಷಿಪಣಿಗಳನ್ನು ತಡೆಹಿಡಿಯಲಾಗಿದೆ. ಜೋರ್ಡಾನ್‌ನಲ್ಲಿರುವ ಅಮೆರಿಕ ಹಲವು ಕ್ಷಿಪಣಿಗಳನ್ನು ಹೊಡೆದು ಹಾಕಿದೆ.

    ಕೆಲ ಮಾಧ್ಯಮಗಳು ತನ್ನ ವಾಯು ಸೇಮೆಯನ್ನು ಬಳಸಿದ್ದಕ್ಕೆ ಅರಬ್‌ ರಾಷ್ಟ್ರಗಳೇ ಇರಾನ್‌ ಸಿಡಿಸಿದ ಕ್ಷಿಪಣಿ ಮತ್ತು ಯುಎವಿಯನ್ನು ಹೊಡೆದು ಹಾಕಿವೆ ಎಂದು ವರದಿ ಮಾಡಿವೆ. ಆದರೆ ಯಾವ ದೇಶಗಳು ಎಷ್ಟು ಕ್ಷಿಪಣಿ, ಯುಎವಿ ಹೊಡೆದು ಹಾಕಿವೆ ಎಂಬುದನ್ನು ತಿಳಿಸಿಲ್ಲ. ಕ್ಷಿಪಣಿಯನ್ನು ತಡೆದಿದ್ದ ಸಿಟ್ಟಾಗಿ ತನ್ನ ಮೇಲೂ ಇರಾನ್‌ ದಾಳಿ ಮಾಡಬಹುದು ಎಂಬ ಕಾರಣಕ್ಕೆ ಅರಬ್‌ ದೇಶಗಳು ಈ ವಿಷಯನ್ನು ಬಹಿರಂಗ ಮಾಡಿಲ್ಲ ಎಂದು ವರದಿಯಾಗಿದೆ.

  • ಇರಾನ್‌ ದಾಳಿ ಸಾಧ್ಯತೆ – ಇಸ್ರೇಲ್‌ಗೆ ಯುದ್ಧ ನೌಕೆ ಕಳುಹಿಸಿದ ಅಮೆರಿಕ

    ಇರಾನ್‌ ದಾಳಿ ಸಾಧ್ಯತೆ – ಇಸ್ರೇಲ್‌ಗೆ ಯುದ್ಧ ನೌಕೆ ಕಳುಹಿಸಿದ ಅಮೆರಿಕ

    ವಾಷಿಂಗ್ಟನ್‌: ಇಸ್ರೇಲ್‌ (Israel) ಮೇಲೆ ಇರಾನ್‌ (Iran) ದಾಳಿ ಮಾಡುವ ಸಾಧ್ಯತೆ ಇರುವ ಕಾರಣ ಅಮೆರಿಕ ಈಗ ತನ್ನ ಯುದ್ಧ ನೌಕೆಯನ್ನು (War Ship) ಇಸ್ರೇಲ್‌ಗೆ ಕಳುಹಿಸಿದೆ.

    ಸಂಭವನೀಯ ಇರಾನ್ ದಾಳಿಯನ್ನು ಎದುರಿಸಲು ಅಮೆರಿಕ (USA) ಸನ್ನದ್ಧವಾಗಿದೆ. ಇಸ್ರೇಲ್ ಹಾಗೂ ಅಮೆರಿಕದ ಪಡೆಗಳ ರಕ್ಷಣೆಗಾಗಿ ಯುದ್ಧ ನೌಕೆಗಳು ಧಾವಿಸಿವೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

    ಇಸ್ರೇಲ್ ಮತ್ತು ಅಮೆರಿಕನ್ ಪಡೆಗಳನ್ನು ರಕ್ಷಿಸಲು ಯುಎಸ್ ಹೆಚ್ಚುವರಿ ಮಿಲಿಟರಿ ಸೇನೆಯ ಜೊತೆ ಎರಡು ಯುದ್ಧ ನೌಕೆಗಳನ್ನು ಪೂರ್ವ ಮೆಡಿಟರೇನಿಯನ್‌ ಸಮುದ್ರಕ್ಕೆ ಕಳುಹಿಸಿದೆ.

    ಕ್ಷಿಪಣಿ (Missile) ಮತ್ತು ಡ್ರೋನ್‌ (Drone) ಮೂಲಕ ಇರಾನ್‌ ಇಸ್ರೇಲ್‌ ಮೇಲೆ ದಾಳಿ ನಡೆಸುವ ಸಾಧ್ಯತೆಯಿದೆ. ಇರಾನ್‌ ಬಳಿ ಬ್ಯಾಲಿಸ್ಟಿಕ್‌ (Ballistic) ಮತ್ತು ಕ್ರೂಸ್‌ (Cruise Missiles) ಕ್ಷಿಪಣಿಗಳಿವೆ. ಇವು 2 ಸಾವಿರ ಕಿ.ಮೀ ದೂರದಲ್ಲಿರುವ ಗುರಿಯನ್ನು ಧ್ವಂಸ ಮಾಡುವ ಸಾಮರ್ಥ್ಯ ಹೊಂದಿದೆ.  ಇದನ್ನೂ ಓದಿ: ಇಡಿ ಬಂಧನ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಅರ್ಜಿ – ಸೋಮವಾರ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್

    ಶುಕ್ರವಾರ ಅಮೆರಿಕದ ಅಧ್ಯಕ್ಷ ಜೋ ಬೈಡನ್‌ ಅತೀ ಶೀಘ್ರದಲ್ಲಿ ಇರಾನ್‌ ಇಸ್ರೇಲ್‌ ಮೇಲೆ ದಾಳಿ ನಡೆಸುವ ಸಾಧ್ಯತೆಯಿದೆ ಎಂದು ಹೇಳಿದ್ದರು.

     

    ಮುಂದಿನ 48 ಗಂಟೆಗಳಲ್ಲಿ ಇಸ್ರೇಲ್‌ ಮೇಲೆ ಇರಾನ್‌ ದಾಳಿ ನಡೆಸಬಹುದು ಎಂದು ಅಮೆರಿಕದ ಗುಪ್ತಚರ ಇಲಾಖೆ ಮಾಹಿತಿಯನ್ನು ಆಧಾರಿಸಿ ಮಾಧ್ಯಮಗಳು ವರದಿ ಮಾಡಿದ್ದವು.  ಇದನ್ನೂ ಓದಿ: 6 ವರ್ಷಗಳ ಮುನಿಸು ಮರೆತು ಶ್ರೀನಿವಾಸ್ ಪ್ರಸಾದ್ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ

    ಏಪ್ರಿಲ್‌ 1 ರಂದು ಸಿರಿಯಾದಲ್ಲಿರುವ ಇರಾನ್‌ ರಾಯಭಾರ ಕಚೇರಿಯ ಮೇಲೆ ಬಾಂಬ್‌ ದಾಳಿ ನಡೆದಿತ್ತು. ಈ ದಾಳಿಯಲ್ಲಿ ಕಮಾಂಡರ್‌ ಸೇರಿದಂತೆ 7 ಮಂದಿ ಇರಾನ್‌ ಮಿಲಿಟರಿ ಸಲಹೆಗಾರರು ಮೃತಪಟ್ಟಿದ್ದರು. ಈ ಏರ್‌ ಸ್ಟ್ರೈಕ್‌ ಅನ್ನು ಇಸ್ರೇಲ್‌ ಮಾಡಿದೆ ಎಂದು ಇರಾನ್‌ ದೂರಿದರೆ ಇಸ್ರೇಲ್‌ ಇಲ್ಲಿಯವರೆಗೆ ಈ ದಾಳಿಯ ಹೊಣೆಯನ್ನು ಹೊತ್ತುಕೊಂಡಿಲ್ಲ.