Tag: USA

  • ಅಮೆರಿಕ, ಭಾರತದ ತಂತ್ರಕ್ಕೆ ಒಪೆಕ್‌ ಗರಂ – ಮತ್ತೆ ಏರಿಕೆ ಆಗುತ್ತಾ ತೈಲ ಬೆಲೆ?

    ಅಮೆರಿಕ, ಭಾರತದ ತಂತ್ರಕ್ಕೆ ಒಪೆಕ್‌ ಗರಂ – ಮತ್ತೆ ಏರಿಕೆ ಆಗುತ್ತಾ ತೈಲ ಬೆಲೆ?

    – ತೈಲ ಆಮದು ರಾಷ್ಟ್ರಗಳು Vs ಒಪೆಕ್‌ ಮಧ್ಯೆ ತೈಲ ಸಮರ
    – ತಂತ್ರದಿಂದ ಹಿಂದಕ್ಕೆ ಸರಿಯದೇ ಇದ್ದಲ್ಲಿ ಉತ್ಪಾದನೆ ಕಡಿತದ ಬೆದರಿಕೆ

    ವಿಶ್ವದಲ್ಲೇ ಅತಿ ಹೆಚ್ಚು ಕಚ್ಚಾ ತೈಲವನ್ನು ಆಮದು ಮಾಡುವ ರಾಷ್ಟ್ರಗಳು ಮತ್ತು ತೈಲ ಉತ್ಪಾದನೆ ಮಾಡುವ ರಾಷ್ಟ್ರಗಳ ಮಧ್ಯೆ ತೈಲ ಸಮರ ಸೃಷ್ಟಿಯಾಗಿದೆ. ಅಮೆರಿಕ ತಂತ್ರಗಾರಿಕೆ ಈಗ ಉಳಿದ ರಾಷ್ಟ್ರಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಹೀಗಾಗಿ ಏನಿದು ತಿಕ್ಕಾಟ? ತೈಲ ಆಮದು ಮಾಡುವ ರಾಷ್ಟ್ರಗಳ ಪ್ಲ್ಯಾನ್‌ ಏನು? ಒಪೆಕ್‌ ರಾಷ್ಟ್ರಗಳ ತಿರುಗೇಟು ಏನು ಇತ್ಯಾದಿ ವಿಚಾರಗಳನ್ನು ಇಲ್ಲಿ ನೀಡಲಾಗಿದೆ.

    ತಿಕ್ಕಾಟ ಸೃಷ್ಟಿಯಾಗಿದ್ದು ಯಾಕೆ?
    ಕೋವಿಡ್ 19 ನಿಯಂತ್ರಣಕ್ಕೆ ವಿಶ್ವದ ಹಲವು ರಾಷ್ಟ್ರಗಳು ಲಾಕ್‍ಡೌನ್ ಹೇರಿತ್ತು. ಈ ವೇಳೆ ಬೇಡಿಕೆ ಕಡಿಮೆಯಾಗಿ ಬ್ಯಾರೆಲ್ ತೈಲ ದರ 19 ಡಾಲರ್​ಗೆ ಇಳಿಕೆಯಾಗಿತ್ತು. ಈ ವೇಳೆ ತೈಲ ಉತ್ಪಾದನೆ ಮಾಡುತ್ತಿರುವ ಒಪೆಕ್ ರಾಷ್ಟ್ರಗಳು ತೈಲ ಉತ್ಪಾದನೆಯನ್ನು ಕಡಿಮೆ ಮಾಡಿದ್ದವು. 2020ರ ಮಧ್ಯ ಭಾಗದ ಬಳಿಕ ರಾಷ್ಟ್ರಗಳು ಲಾಕ್‍ಡೌನ್ ತೆರವು ಮಾಡಿದ್ದರೂ ಒಪೆಕ್ ರಾಷ್ಟ್ರಗಳು ತೈಲ ಉತ್ಪಾದನೆ ಹೆಚ್ಚಳ ಮಾಡುತ್ತಿಲ್ಲ.

    ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ಸೃಷ್ಟಿಯಾದ ಆರ್ಥಿಕ ಸಮಸ್ಯೆಗೆ ಉತ್ತರ ಕಂಡುಕೊಳ್ಳಲು ಒಪೆಕ್‌ ಕಚ್ಚಾ ತೈಲ ಉತ್ಪಾದನೆಯನ್ನು ಕಡಿಮೆ ಮಾಡಿವೆ. ಬೇಡಿಕೆಗೆ ತಕ್ಕಷ್ಟು ಉತ್ಪಾದನೆ ಮಾಡದ ಕಾರಣ ತೈಲ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಳೆದ 7 ವರ್ಷಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದೆ.

    ತೈಲವನ್ನು ಆಮದು ಮಾಡಿಕೊಳ್ಳುವ ರಾಷ್ಟ್ರಗಳಲ್ಲಿ ಆರ್ಥಿಕ ಚಟುವಟಿಕೆಗಳು ಆರಂಭಗೊಂಡರೂ ಒಪೆಕ್‌ ರಾಷ್ಟ್ರಗಳು ಮಾತ್ರ ಉತ್ಪಾದನೆ ಹೆಚ್ಚಿಸುತ್ತಿಲ್ಲ. ಭಾರತ, ಅಮೆರಿಕ ಸೇರಿದಂತೆ ಹಲವು ರಾಷ್ಟ್ರಗಳು ಮನವಿ ಮಾಡಿದರೂ ಒಪೆಕ್‌ ರಾಷ್ಟ್ರಗಳು ಬಗ್ಗುತ್ತಿಲ್ಲ. ಹೀಗಾಗಿ ಒಪೆಕ್‌ ರಾಷ್ಟ್ರಗಳನ್ನು ಬಗ್ಗು ಬಡಿಯಲು ಅಮೆರಿಕ ಹೂಡಿದ ತಂತ್ರವೇ ಈಗ ತಿಕ್ಕಾಟಕ್ಕೆ ಕಾರಣವಾಗಿದೆ.

    ಅಮೆರಿಕ ತಂತ್ರ ಏನು?
    ತುರ್ತು ಬಳಕೆಗೆಂದು ಸಂಗ್ರಹಿಸಿದ್ದ ಕಚ್ಚಾತೈಲವನ್ನು ಹೊರತೆಗೆಯಲು ಅಮೆರಿಕ ಮುಂದಾಗಿದೆ. ಅಮೆರಿಕದ ಅಧ್ಯಕ್ಷ ಜೋ ಬೈಡೆನ್‌ ಭಾರತ, ಜಪಾನ್‌, ಚೀನಾ, ದಕ್ಷಿಣ ಕೊರಿಯಾ, ಬ್ರಿಟನ್‌ ಸೇರಿದಂತೆ ಅತಿ ಹೆಚ್ಚು ಕಚ್ಚಾತೈಲ ಬಳಸುವ ದೇಶಗಳ ಮನವೊಲಿಸಿದ್ದರು. ಹೀಗಾಗಿ ಅಮೆರಿಕ 5 ಕೋಟಿ ಬ್ಯಾರಲ್‌, ಭಾರತ 50 ಲಕ್ಷ ಬ್ಯಾರಲ್‌ ಕಚ್ಚಾತೈಲವನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲು ಒಪ್ಪಿದ್ದವು. 1970ರಲ್ಲಿ ಲಿಬಿಯಾ ಯುದ್ಧದ ಬಳಿಕ ಅಮೆರಿಕ ತನ್ನ ಭೂಗತ ಸಂಗ್ರಹಾಗಾರದಿಂದ ಕಚ್ಚಾತೈಲವನ್ನು ಈ ಪ್ರಮಾಣವನ್ನು ಬಿಡುಗಡೆ ಮಾಡುತ್ತಿರುವುದು ಇದೇ ಮೊದಲು ಎನ್ನುವುದು ವಿಶೇಷ. ಇದನ್ನೂ ಓದಿ: ಮಂಗಳೂರು ಸಂಗ್ರಹಗಾರದಿಂದ ಕಚ್ಚಾ ತೈಲ ಮಾರಾಟಕ್ಕೆ ಮುಂದಾದ ಸರ್ಕಾರ

    ಒಪೆಕ್‌ ಪ್ರತಿತಂತ್ರ:
    ತುರ್ತು ಬಳಕೆಗೆ ಸಂಗ್ರಹ ಮಾಡಿದ ತೈಲವನ್ನು ಬಿಡುಗಡೆ ಮಾಡಿದರೆ ಕಚ್ಚಾ ತೈಲದ ಬೇಡಿಕೆ ಇಳಿಯಬಹುದು ಎನ್ನುವುದು ಅಮೆರಿಕದ ಲೆಕ್ಕಾಚಾರವಾಗಿತ್ತು. ಆದರೆ ಈ ತಂತ್ರಕ್ಕೆ ಒಪೆಕ್‌ ರಾಷ್ಟ್ರಗಳು ಸೆಡ್ಡು ಹೊಡೆದಿವೆ. ತೈಲ ಆಮದು ಮಾಡುವ ದೇಶಗಳು ಕೈಗೊಂಡ ನಿರ್ಧರದಿಂದ ಹಿಂದಕ್ಕೆ ಸರಿಯಬೇಕು. ಇಲ್ಲದೇ ಇದ್ದಲ್ಲಿ ಮುಂದಿನ ಜನವರಿ ತಿಂಗಳಿನಿಂದ ಉದ್ದೇಶಿಸಿದ್ದ ಉತ್ಪಾದನೆ ಹೆಚ್ಚಳವನ್ನು 2 ತಿಂಗಳು ಮುಂದೂಡುವುದಾಗಿ ತಿಳಿಸಿವೆ. ಅಷ್ಟೇ ಅಲ್ಲದೇ ಈಗಾಗಲೇ ಮಾಡುತ್ತಿರುವ ಉತ್ಪಾದನೆಯನ್ನೇ ಕಡಿತ ಮಾಡುವ ಬೆದರಿಕೆಯನ್ನು ಹಾಕಿದೆ. ಇದನ್ನೂ ಓದಿ: ಅಮೆರಿಕದ ಸಂಗ್ರಹಾಗಾರಗಳಲ್ಲಿ ಸಂಗ್ರಹವಾಗಲಿದೆ ಭಾರತದ ಕಚ್ಚಾ ತೈಲ

    ಮತ್ತೆ ಬೆಲೆ ಏರಿಕೆ?
    ತುರ್ತು ಬಳಕೆಗೆ ಇರಿಸಿದ ತೈಲವನ್ನು ತೆಗೆದರೂ ಮತ್ತೆ ಆಮದು ಮಾಡಲೇಬೇಕು. ಒಂದು ವೇಳೆ ತೈಲ ಉತ್ಪಾದನೆ ಕಡಿಮೆ ಮಾಡಿದರೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಭಾರೀ ಏರಿಕೆಯಾಗುವ ಸಾಧ್ಯತೆಯಿದೆ. ಹೀಗಾಗಿ ಒಪೆಕ್‌ ಮತ್ತು ತೈಲ ಆಮದು ಮಾಡುವ ರಾಷ್ಟ್ರಗಳ ನಡುವಿನ ಕಿತ್ತಾಟ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಲ್ಲೋಲ ಕಲ್ಲೋಲ ಉಂಟು ಮಾಡುವ ಸಾಧ್ಯತೆಯಿದೆ. ವಿಶೇಷವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಷ್ಟ್ರಗಳಲ್ಲಿ ಭಾರೀ ಸಮಸ್ಯೆಗೆ ಕಾರಣವಾಗಬಹುದು.

    ಐಇಎ ಒತ್ತಾಯ:
    ಅಂತಾರಾಷ್ಟ್ರೀಯ ಇಂಧನ ಸಂಸ್ಥೆ(ಐಇಎ) ತೈಲ ಉತ್ಪಾದನೆ ಹೆಚ್ಚು ಮಾಡಲು ಒಪೆಕ್‌ ರಾಷ್ಟ್ರಗಳಿಗೆ ಒತ್ತಾಯ ಮಾಡಿದೆ. 1 ಬ್ಯಾರೆಲ್‌ ತೈಲದ ಬೆಲೆ 80 ಡಾಲರ್‌ ದಾಟಿದೆ. ಕೊರೊನಾದಿಂದ ಆರ್ಥಿಕ ಚಟುವಟಿಕೆಗಳು ಚೇತರಿಸುವ ಸಮಯದಲ್ಲಿ ತೈಲ ಉತ್ಪಾದನೆ ಕಡಿತ ಮಾಡುವುದು ಸರಿಯಲ್ಲ. ಇದರಿಂದ ವಿಶ್ವದ ಆರ್ಥಿಕ ಬೆಳವಣಿಗೆ ಕುಂಠಿತವಾಗುತ್ತದೆ ಎಂದು ಹಲವು ಆರ್ಥಿಕ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಭಾರತದ ಪ್ಲ್ಯಾನ್‌ ಏನು?
    ಒಪೆಕ್‌ ರಾಷ್ಟ್ರಗಳು ಏಪ್ರಿಲ್‌ ತಿಂಗಳಿನಲ್ಲೂ ಕಚ್ಚಾ ತೈಲ ಉತ್ಪಾದನೆ ಹೆಚ್ಚಿಸದ ಹಿನ್ನೆಲೆಯಲ್ಲಿ ಭಾರತ ಮಧ್ಯಪ್ರಾಚ್ಯ ದೇಶಗಳನ್ನು ಹೊರತು ಪಡಿಸಿ ಬೇರೆ ದೇಶಗಳಿಂದ ಕಚ್ಚಾ ತೈಲ ಆಮದು ಮಾಡಲು ಮುಂದಾಗಿದೆ ಎಂದು ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ಈ ಹಿಂದೆ ವರದಿ ಮಾಡಿತ್ತು.

    ತೈಲ ಆಮದಿನ ವಿಚಾರದಲ್ಲಿ ಬೇರೆ ಬೇರೆ ಮೂಲಗಳನ್ನು ಹುಡುಕುವಂತೆ ನಾವು ಕಂಪನಿಗಳಿಗೆ ತಿಳಿಸಿದ್ದೇವೆ. ತೈಲ ಉತ್ಪಾದಿಸುತ್ತಿರುವ ಮಧ್ಯಪ್ರಾಚ್ಯದ ದೇಶಗಳು ನಮ್ಮನ್ನು ಒತ್ತೆಯಾಳುಗಳಂತೆ ನೋಡಲು ನಾವು ಅವಕಾಶ ನೀಡುವುದಿಲ್ಲ. ಒಪೆಕ್‌ ರಾಷ್ಟ್ರಗಳು ತೈಲ ಮಾರುಕಟ್ಟೆಯಲ್ಲಿ ಅಸ್ಥಿರತೆ ನಿವಾರಣೆಯಾಬೇಕೆಂದು ಬಯಸಿದಾಗ ನಾವು ಅವರ ಬೆಂಬಲಕ್ಕೆ ನಿಂತಿದ್ದೆವು ಎಂದು ಸರ್ಕಾರದ ಅಧಿಕಾರಿಯೊಬ್ಬರು ತಿಳಿಸಿದ್ದರು.

    ಬೇರೆ ದೇಶಗಳಿಂದ ತೈಲ ಆಮದು ಮಾಡಿಕೊಂಡರೆ ಆರಂಭದಲ್ಲಿ ಹೆಚ್ಚು ಹಣ ಪಾವತಿಸಬೇಕಾದರೂ ಭವಿಷ್ಯದಲ್ಲಿ ಇದರಿಂದ ದೇಶಕ್ಕೆ ಪ್ರಯೋಜನ ಸಿಗಲಿದೆ ಎಂದು ಅಧಿಕಾರಿ ಹೇಳಿದ್ದಾರೆ. ಗಯಾನಾದಿಂದ ತೈಲ ಆಮದು ಮಾಡಿಕೊಳ್ಳುವ ಒಂದು ಪ್ಲಾನ್‌ ಇದೆ. ಇದರ ಜೊತೆ ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವ ಒಪ್ಪಂದವನ್ನು ಇಂಡಿಯನ್ ಆಯಿಲ್‌ ಕಾರ್ಪೊರೇಷನ್‌ ಕಂಪನಿಯು ನವೀಕರಿಸಿದೆ ಎಂದು ಮೂಲಗಳು ಹೇಳಿವೆ. ಈ ವರ್ಷದಿಂದ ಮತ್ತೆ ಇರಾನ್‌ನಿಂದ ತೈಲ ಆಮದು ಮಾಡಿಕೊಳ್ಳುಬಹುದು ಎಂಬ ಭರವಸೆ ಭಾರತಕ್ಕಿದೆ.

  • ಅಮೇರಿಕಾದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

    ಅಮೇರಿಕಾದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು

    ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್(75) ಅವರನ್ನು ರಕ್ತ ಸೋಂಕಿನ ಕಾರಣದಿಂದ ಕ್ಯಾಲಿಫೋರ್ನಿಯಾದ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

     Bill Clinton

    ಕ್ಯಾಲಿಫೋರ್ನಿಯಾದ ಇರ್ವಿನ್ ಮೆಡಿಕಲ್ ಸೆಂಟರ್‌ನಲ್ಲಿ ಬಿಲ್ ಕ್ಲಿಂಟನ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ಹೇಳುವ ಪ್ರಕಾರ, ಕ್ಲಿಂಟನ್ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟಿದ್ದು, ಪರ್ಸನಲ್ ಆಗಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದ್ದು, ಯಾವುದೇ ಉಸಿರಾಟದ ಸಮಸ್ಯೆಗಳಿಲ್ಲ ಎಂದು ತಿಳಿಸಿದ್ದಾರೆ. ಅಲ್ಲದೇ ಬಿಲ್ ಕ್ಲಿಂಟನ್ ಅವರನ್ನು ಕೋವಿಡ್-19 ಹೊರತಾದ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: 85 ವರ್ಷದ ಅಜ್ಜಿಗೆ ಒಲಿದುಬಂತು ಪಂಚಾಯತ್ ಅಧ್ಯಕ್ಷೆ ಸ್ಥಾನ

    ಈ ಕುರಿತಂತೆ ಕ್ಲಿಂಟನ್ ವಕ್ತಾರ ಏಂಜೆಲ್ ಯುರೇನಾ ಟ್ವಿಟ್ಟರ್‌ನಲ್ಲಿ, ಕ್ಲಿಂಟನ್ ಅವರ ಮನಸ್ಥಿತಿ ಉತ್ತಮವಾಗಿದೆ. ಅವರಿ ಆರೈಕೆ ಅತ್ಯುತ್ತಮವಾಗಿ ಆರೈಕೆ ಮಾಡುತ್ತಿರುವ ವೈದ್ಯರು, ನರ್ಸ್ ಹಾಗೂ ಸಿಬ್ಬಂದಿಗೆ ಧನ್ಯವಾದ ತಿಳಿಸಿದ್ದಾರೆ. ಇದನ್ನೂ ಓದಿ: ಸೋನಿಯಾ ಗಾಂಧಿ ನಾಯಕತ್ವದಲ್ಲಿ ಸಂಪೂರ್ಣ ನಂಬಿಕೆ ಇದೆ: ಸಿಧು

    ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ.ಅಲ್ಪೇಶ್ ಅಮೀನ್ ಮತ್ತು ಡಾ. ಲಿಸಾ ಬಾರ್ಡಾಕ್ ಅವರು, ಕ್ಲಿಂಟನ್ ಅವರನ್ನು “ಆರೋಗ್ಯ ಮೇಲ್ವಿಚಾರಣೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಆರೋಗ್ಯವಾಗಿದ್ದಾರೆ. “ಎರಡು ದಿನಗಳ ಚಿಕಿತ್ಸೆಯ ನಂತರ, ಅವರ ಬಿಳಿ ರಕ್ತ ಕಣಗಳ ಎಣಿಕೆ ಕಡಿಮೆಯಾಗುತ್ತಿದೆ ಮತ್ತು ಅವರು ಚಿಕಿತ್ಸೆಗೆ ಉತ್ತಮವಾಗಿ ಪ್ರತಿಕ್ರಿಯಿಸುತ್ತಿದ್ದಾರೆ.” ಆದಷ್ಟು ಬೇಗ ಅವರು ಗುಣಮುಖರಾಗಿ ಮನೆಗೆ ಹಿಂದಿರುಗುತ್ತಾರೆ ಎಂದು ನಾವು ಭಾವಿಸುತ್ತೇನೆ ಎಂದು ಹೇಳಿದ್ದಾರೆ.

  • ಬರ್ತ್‍ಡೇ ಕ್ಯಾಂಡಲ್ ಊದುವಾಗ ಕೂದಲಿಗೆ ಬೆಂಕಿ – ಕಿರುಚಾಡಿದ ಟಿವಿ ಸ್ಟಾರ್

    ಬರ್ತ್‍ಡೇ ಕ್ಯಾಂಡಲ್ ಊದುವಾಗ ಕೂದಲಿಗೆ ಬೆಂಕಿ – ಕಿರುಚಾಡಿದ ಟಿವಿ ಸ್ಟಾರ್

    ವಾಷಿಂಗ್ಟನ್: ಹುಟ್ಟುಹಬ್ಬದ ಸಮಾರಂಭದಲ್ಲಿ ಬರ್ತ್‍ಡೇ ಕ್ಯಾಂಡಲ್ ಊದುವಾಗ ಅಮೇರಿಕ ಸ್ಟಾರ್ ನಟಿ ನಿಕೋಲ್ ರಿಚಿ ಕೂದಲಿಗೆ ಬೆಂಕಿ ಹೊತ್ತಿ ಕಿರುಚಾಡಿದ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

    birthday candle

    ಸಾಮಾನ್ಯವಾಗಿ ಬರ್ತ್‍ಡೇ ದಿನ ಪ್ರತಿಯಬ್ಬರು ತಮ್ಮ ಪ್ರೀತಿ ಪಾತ್ರರೊಂದಿಗೆ ಇರಲು ಇಚ್ಛಿಸುತ್ತಾರೆ. ಅದರಲ್ಲಿಯೂ ಕೇಕ್, ಮೇಣದ ಬತ್ತಿ, ಬರ್ತ್‍ಡೇ ಕ್ಯಾಪ್ ಇವೆಲ್ಲವೂ ಸದಾ ನೆನಪಿನಲ್ಲಿ ಉಳಿಯುತ್ತದೆ. ಆದರೆ ಅಮೇರಿಕದ ಟಿವಿ ಸ್ಟಾರ್ ನಿಕೋಲ್ ರಿಚಿಯವರ 40ನೇ ವರ್ಷದ ಹುಟ್ಟುಹಬ್ಬದ ದಿನದಂದು ನಡೆದಿದ್ದೇ ಬೇರೆಯಾಗಿದೆ. ಸದ್ಯ ಈ ವೀಡಿಯೋವನ್ನು ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ಬರ್ತ್‍ಡೇ ಸಮಾರಂಭದಲ್ಲಿ ನಿಕೋಲ್ ರಿಚಿ ಮಾತ್ರವಲ್ಲ ಪಾರ್ಟಿಗೆ ಆಗಮಿಸಿದ್ದವರು ಕೂಡ ಈ ಘಟನೆಯನ್ನು ಸದಾ ನೆನಪಿನಲ್ಲಿಟ್ಟುಕೊಂಡಿರುತ್ತಾರೆ. ಇದನ್ನೂ ಓದಿ: ಮೂಲೆಗುಂಪಾಗಿರೋ ಕಾಂಗ್ರೆಸ್ ಟಾಂಗಾ, ಸೈಕಲ್ ಓಡಿಸೋದಕ್ಕೆ ಮಾತ್ರ ಸೀಮಿತ: ಆರ್. ಅಶೋಕ್

    ಸೆಪ್ಟೆಂಬರ್ 21ರಂದು 40ನೇ ವಸಂತಕ್ಕೆ ಕಾಲಿಟ್ಟ ರಿಚಿ, ಕುಟುಂಬ ಮತ್ತು ಸ್ನೇಹಿತರೊಂದಿಗೆ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಈ ವೇಳೆ ಕಪ್ಪು ಬಣ್ಣದ ಆಫ್ ಶೋಲ್ಡರ್ ಟಾಪ್ ಧರಿಸಿ, ಕೇಕ್ ಮೇಲೆ ನಿಲ್ಲಿಸಿದ್ದ ಕ್ಯಾಂಡಲ್‍ನನ್ನು ಊದಲು ಮುಂದಕ್ಕೆ ವಾಲಿದಾಗ ರಿಚಿ ಗುಂಗುರು ಕೂದಲು ಕ್ಯಾಂಡಲ್‍ಗೆ ತಾಗಿ ಬೆಂಕಿ ಹೊತ್ತಿಕೊಳ್ಳುತ್ತದೆ. ಈ ವೇಳೆ ಗಾಬರಿಗೊಂಡ ರಿಚಿ ಕಿರುಚಾಡುತ್ತಾ ಕೂದಲನ್ನು ಹೊಡೆದುಕೊಳ್ಳುತ್ತಾರೆ. ಆಗ ಇತರರು ಕೂಡ ಆಕೆಗೆ ಸಹಾಯ ಮಾಡುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ.

    ಸದ್ಯ ಹುಟ್ಟುಹಬ್ಬದ ದಿನದಂದು ತಮ್ಮ ಅನುಯಾಯಿಗಳೊಂದಿಗೆ ನಡೆದ ಈ ಅಹಿತಕರವಾದ ಘಟನೆಯನ್ನು ರಿಚಿಯವರು ಹಂಚಿಕೊಂಡಿದ್ದಾರೆ. ವೈರಲ್ ಆಗುತ್ತಿರುವ ಈ ವೀಡಿಯೋ, ಇಲ್ಲಿಯವರೆಗೂ 2.8 ಮಿಲಿಯನ್‌ಗೂ  ಅಧಿಕ ಮಂದಿ ವೀಕ್ಷಿಸಿದ್ದು, ಕೆಲವರು  ಅದೃಷ್ಟವಶಾತ್ ಒಳ್ಳೆಯದಾಯಿತು ಎಂದರೆ, ಮತ್ತಷ್ಟು ಮಂದಿ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ. ಇದನ್ನೂ ಓದಿ: ನಾನು ಸಾಮಾನ್ಯ ಮುನುಷ್ಯ, ನನಗೆ ಸೆಕ್ಯೂರಿಟಿ ಬೇಡವೆಂದ: ಪಂಜಾಬ್ ಸಿಎಂ

  • ಲಸಿಕೆ ಪಡೆದವರಿಗೆ ನವೆಂಬರ್‌ನಿಂದ ಅಮೆರಿಕಾ ಪ್ರಯಾಣಕ್ಕೆ ಅವಕಾಶ

    ಲಸಿಕೆ ಪಡೆದವರಿಗೆ ನವೆಂಬರ್‌ನಿಂದ ಅಮೆರಿಕಾ ಪ್ರಯಾಣಕ್ಕೆ ಅವಕಾಶ

    ವಾಷಿಂಗ್ಟನ್: ಅಮೇರಿಕಾ ಪ್ರವಾಸಕ್ಕೆ ಹೋಗಲು ಪ್ಲಾನ್ ಹೊಂದಿರುವವರಿಗೆ ಇದೀಗ ಗುಡ್ ನ್ಯೂಸ್ ಸಿಕ್ಕಿದೆ. ಕೊರೊನಾ ಸಾಂಕ್ರಮಿಕ ರೋಗದಿಂದಾಗಿ ಹೇರಲಾಗಿದ್ದ ನಿರ್ಬಂಧವನ್ನು ಇದೀಗ ದೇಶವು ಸಡಿಲಗೊಳಿಸಲಾಗಿದ್ದು, ಸಂಪೂರ್ಣ ವ್ಯಾಕ್ಸಿನ್ ಪಡೆದಿರುವವರು ನವೆಂಬರ್‌ನಿಂದ ಯುಎಸ್‍ಗೆ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ.

    ಭಾರತದಿಂದ ಅಮೇರಿಕಾಗೆ ಪ್ರಯಾಣಿಸುವ ಪ್ರಯಾಣಿಕರು ಇನ್ನೂ ಮುಂದೆ ವ್ಯಾಕ್ಸಿನ್ ಪಡೆದ ಪ್ರಮಾಣ ಪತ್ರದ ಜೊತೆಗೆ ಯುಎಸ್‍ಗೆ ಪ್ರಯಾಣಿಸಬಹುದಾಗಿದೆ ಎಂದು ವೈಟ್ ಹೌಸ್ ಅಧಿಕಾರಿಗಳು ತಿಳಿಸಿದ್ದಾರೆ. 2020 ಆರಂಭದಲ್ಲಿ ಕೊರೊನಾ ವೈರಸ್‍ನಿಂದಾಗಿ ಅಮೇರಿಕಾ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಯುಎಸ್‍ಗೆ ವಿದೇಶಿ ಪ್ರಯಾಣಿಕರ ಪ್ರವೇಶವನ್ನು ನಿಷೇಧಿಸಿದ್ದರು. ಇದೀಗ ಈ ನಿಯಮಾವಳಿಗಳು ಬದಲಾಗಿದೆ. ಇದನ್ನೂ ಓದಿ: ಕಾಲಿನಲ್ಲಿ ತುಳಿಯುವುದಲ್ಲದೆ ನೆಕ್ಕಿ ರಸ್ಕ್ ಪ್ಯಾಕ್ – ವೀಡಿಯೋ ವೈರಲ್

    ಈ ಬಗ್ಗೆ ಜೆಫ್ ಜೈಂಟ್ಸ್ ವರ್ಚುವಲ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ನಾವು ಅಂತರಾಷ್ಟ್ರೀಯ ವಿಮಾನ ಪ್ರಯಾಣ ವ್ಯವಸ್ಥೆಯ ಬಗ್ಗೆ ಘೋಷಿಸುತ್ತಿದ್ದೇವೆ. ಈ ವ್ಯವಸ್ಥೆಯು ಯುನೈಟೆಡ್ ಸ್ಟೇಟ್‍ಗೆ ಆಗಮಿಸುವ ಪ್ರಯಾಣಿಕರ ಮೇಲೆ ಕೋವಿಡ್-19 ಹರಡುವಿಕೆಯನ್ನು ತಡೆಯಲು ಕೆಲವು ಕಠಿಣ ನಿರ್ಬಂಧಗಳನ್ನು ಹೇರಲಾಗುತ್ತಿದೆ. ಇದು ಅಮೇರಿಕರನ್ನು ರಕ್ಷಿಸುವುದರ ಜೊತೆಗೆ ವಿಮಾನದಲ್ಲಿ ಪ್ರಯಾಣಿಸುವ ಪ್ರಯಾಣಿಕರನ್ನು ಸುರಕ್ಷಿವಾಗಿರಿಸುತ್ತದೆ. ನವೆಂಬರ್ ನಿಂದ ಅಮೇರಿಕಾಕ್ಕೆ ಪ್ರಯಾಣಿಸುವವರು ಕೊರೊನಾ ಲಸಿಕೆಯನ್ನು ಹಾಕಿಸಿಕೊಂಡಿರುವುದನ್ನು ಖಡ್ಡಾಯವಾಗಿದೆ. ಯುಎಸ್‍ಗೆ ಹೋಗುವ ವಿಮಾನ ಹತ್ತುವ ಮುನ್ನ ಕೋವಿಡ್-19 ಲಸಿಕೆ ಪಡೆದಿದಕ್ಕೆ ಪುರಾವೆಗಳನ್ನು ತೋರಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಇಂದಿನಿಂದ ಸೆ.24 ರ ವರೆಗೆ ಭಾರೀ ಮಳೆ ಸಾಧ್ಯತೆ

  • ಅಟ್ಲಾಂಟಾ ಮೃಗಾಲಯದ ಗೊರಿಲ್ಲಾಗಳಲ್ಲಿ ಕೊರೊನಾ ಸೋಂಕು ದೃಢ

    ಅಟ್ಲಾಂಟಾ ಮೃಗಾಲಯದ ಗೊರಿಲ್ಲಾಗಳಲ್ಲಿ ಕೊರೊನಾ ಸೋಂಕು ದೃಢ

    ವಾಷಿಂಗ್ಟನ್: ಅಮೇರಿಕಾದ ಅಟ್ಲಾಂಟಾ ಮೃಗಾಲಯದಲ್ಲಿರುವ ಗೊರಿಲ್ಲಾಗಳಿಗೆ ಕೊರೊನಾ ಸೋಂಕು ದೃಢ ಪಟ್ಟಿದೆ.

    ಗೊರಿಲ್ಲಾಗಳಲ್ಲಿ ಕೆಲವು ದಿನಗಳಿಂದ ಕೆಮ್ಮು, ನೆಗಡಿ ಮತ್ತು ಹಸಿವಿಲ್ಲದಿರುವಿಕೆ ಮುಂತಾದ ಬದಲಾವಣೆಗಳು ಗೋಚರಿಸಿರುವುದಾಗಿ ಶುಕ್ರವಾರ ಮೃಗಾಲಯದ ಅಧಿಕಾರಿಗಳು ಹಾಗೂ ಸಿಬ್ಬಂದಿ ತಿಳಿಸಿದ್ದಾರೆ. ಇನ್ನೂ ಗೋರಿಲ್ಲಾಗಳ ಮಲ, ಮೂಗಿನ ಗಂಟಲಿನ ದ್ರವ ಮಾದರಿಯನ್ನು ಜಾರ್ಜಿಯಾ ವಿಶ್ವವಿದ್ಯಾಲಯದ ಪಶುವೈದ್ಯಕೀಯ ಪ್ರಯೋಗಾಲಯವು ಪರೀಕ್ಷಿಸಿದಾಗ ಗೊರಿಲ್ಲಾಗಳಿಗೆ ಸೋಂಕು ದೃಢಪಟ್ಟಿರುವ ವಿಚಾರ ತಿಳಿದುಬಂದಿದೆ.

    Gorilla

    ಸದ್ಯ ಈ ಕುರಿತ ಮಾಹಿತಿಯನ್ನು ಮೃಗಾಲಯವು ಏಮ್ಸ್‌ನಲ್ಲಿರುವ ರಾಷ್ಟ್ರೀಯ ಪಶುವೈದ್ಯಕೀಯ ಸೇವಾ ಪ್ರಯೋಗಾಲಯಕ್ಕೆ ಕಳುಹಿಸಿಕೊಟ್ಟಿದೆ. ಪ್ರಾಣಿಗಳನ್ನು ನೋಡಿಕೊಳ್ಳುವ ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಅವರಿಂದ ಪ್ರಾಣಿಗಳಿಗೂ ಸೋಂಕು ಹರಡಿದೆ ಎಂದು ಹೇಳಲಾಗುತ್ತಿದೆ. ಅಲ್ಲದೇ ಆ ಸಿಬ್ಬಂದಿ ಲಸಿಕೆ ಪಡೆದು ಪ್ರಾಣಿಗಳನ್ನು ನೋಡಿಕೊಳ್ಳುತ್ತಿದ್ದರು ಎನ್ನಲಾಗುತ್ತಿದೆ. ಇದನ್ನೂ ಓದಿ:  ಕಲಬುರಗಿ ಪಾಲಿಕೆಯಲ್ಲಿ ಗದ್ದುಗೆ ಗದ್ದಲ ಮುಂದುವರಿಕೆ – ಜೆಡಿಎಸ್ ಒಲವು ಯಾರ ಕಡೆಗೆ?

    ಇದೀಗ ಮೃಗಾಲಯದಲ್ಲಿರುವ ಎಲ್ಲಾ ಪ್ರಾಣಿಗಳ ಮಾದರಿಗಳನ್ನು ಮೃಗಾಲಯ ಸಿಬ್ಬಂದಿ ಸಂಗ್ರಹಿಸಿ, ಪರೀಕ್ಷೆಸಲು ಕಳುಹಿಸಲಾಗುತ್ತಿದೆ. ಇದನ್ನೂ ಓದಿ: ಗುಜರಾತ್ ಮುಂದಿನ ಸಿಎಂ ಯಾರು?- ಪಟೇಲ್ ಸಮುದಾಯಕ್ಕೆ ಮಣೆ ಹಾಕುವ ಚಿಂತನೆ

  • ಆರು ಬಾಲಿಗೆ ಆರು ಸಿಕ್ಸರ್ ಸಿಡಿಸಿದ ಅಮೆರಿಕದ ಆಟಗಾರ

    ಆರು ಬಾಲಿಗೆ ಆರು ಸಿಕ್ಸರ್ ಸಿಡಿಸಿದ ಅಮೆರಿಕದ ಆಟಗಾರ

    ಮಸ್ಕತ್: ಯುಎಸ್‍ಎ ಕ್ರಿಕೆಟ್ ಆಟಗಾರ ಜಸ್ಕರನ್ ಮಲ್ಹೋತ್ರ ಆರು ಬಾಲಿಗೆ ಆರು ಸಿಕ್ಸರ್ ಸಿಡಿಸಿದ್ದಾರೆ.

    ವಿಕೆಟ್ ಕೀಪರ್ ಹಾಗೂ ಬಲಗೈ ದಾಂಡಿಗ ಜಸ್ಕರನ್, ಪಪುವಾ ನ್ಯೂಗಿನಿ ವಿರುದ್ಧ ಒಮನ್ ನಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಆರು ಬಾಲಿಗೆ ಆರು ಸಿಕ್ಸರ್ ಸಿಡಿಸುವ ಮೂಲಕ ಕ್ರಿಕೆಟಿನಲ್ಲಿ ಯುವರಾಜ್ ಸಿಂಗ್, ಹರ್ಷಲ್ ಗಿಬ್ಸ್, ಹಾಗೂ ಪೊರ್ಲಾಡ್ ರ ವಿಶ್ವದಾಖಲೆ ಸಾಲಿಗೆ ಸೇರಿದ್ದಾರೆ.  ಇದನ್ನೂ ಓದಿ: ಟಿ20 ವಿಶ್ವಕಪ್ ದಕ್ಷಿಣ ಆಫ್ರಿಕಾ, ಇಂಗ್ಲೆಂಡ್ ತಂಡದಲ್ಲಿ ಸ್ಟಾರ್ ಆಟಗಾರರಿಗಿಲ್ಲ ಸ್ಥಾನ

    16 ಸಿಕ್ಸರ್ ಹಾಗೂ 4 ಫೋರ್‍ಗಳನ್ನು ಸಿಡಿಸಿದ ಜಸ್ಕರನ್ 124 ಬಾಲ್‍ಗಳಲ್ಲಿ ಒಟ್ಟು 173 ರನ್ ಗಳಿಸಿ ನಾಟೌಟ್ ಆಗಿ ಉಳಿದರು ಭಾರತದ ಚಂಡೀಗಡದ ಮೂಲದವರಾದ ಜಸ್ಕರನ್ ಮಲ್ಹೋತ್ರ ಯುಎಸ್‍ಎ ಕ್ರಿಕೆಟ್ ತಂಡದ ಪರವಾಗಿ ಕ್ರಿಕೆಟ್ ಆಡುತ್ತಿದ್ದಾರೆ. ಇದನ್ನೂ ಓದಿ: ಇದೇ ಧೋನಿಯ ಕೊನೆಯ ಐಪಿಎಲ್?

    ಈ ಹಿಂದೆ 2007ರ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಸೌತ್ ಆಫ್ರಿಕಾದ ಹರ್ಷಲ್ ಗಿಬ್ಸ್ ಒಂದೇ ಓವರ್‍ನಲ್ಲಿ ಆರು ಸಿಕ್ಸರ್ ಚಚ್ಚಿ ವಿಶ್ವ ದಾಖಲೆ ಮಾಡಿದ್ದರು. ಇದೀಗ ಜಸ್ಕರನ್ ಏಕದಿನ ಕ್ರಿಕೆಟ್‍ನಲ್ಲಿ ಆರು ಬಾಲಿಗೆ ಆರು ಸಿಕ್ಸರ್ ಸಿಡಿಸಿದ ಎರಡನೇ ಆಟಗಾರ ಎಂಬ ಹೆಗ್ಗಳಿಕೆ ಪಾತ್ರವಾಗಿದ್ದಾರೆ.  ಇದನ್ನೂ ಓದಿ: ಟೀಂ ಇಂಡಿಯಾ ಮೆಂಟರ್ ಸ್ಥಾನ ಸಿಗುತ್ತಿದ್ದಂತೆ ಧೋನಿಗೆ ಸ್ವಹಿತಾಸಕ್ತಿ ಸಂಕಷ್ಟ

    https://twitter.com/usacricket/status/1436060985610100738

    ಯುವರಾಜ್ ಸಿಂಗ್ 2007ರಲ್ಲಿ ನಡೆದ ಮೊದಲ ಟಿ20 ವಿಶ್ವಕಪ್ ಕ್ರಿಕೆಟ್‍ನಲ್ಲಿ ಇಂಗ್ಲೆಂಡಿನ ಸ್ಟುವರ್ಟ್ ಬ್ರಾಡ್ ಅವರ 6 ಎಸೆತವನ್ನು ಸಿಕ್ಸರ್‍ಗೆ ಅಟ್ಟಿದ್ದರು.

  • ಅಮೆರಿಕದಲ್ಲಿ ಓದಬೇಕೇ? – ವಿಶ್ವವಿದ್ಯಾಲಯಗಳ ಜೊತೆ ಮಾತನಾಡಿ, ಅನುಮಾನ ಬಗೆಹರಿಸಿಕೊಳ್ಳಿ

    ಅಮೆರಿಕದಲ್ಲಿ ಓದಬೇಕೇ? – ವಿಶ್ವವಿದ್ಯಾಲಯಗಳ ಜೊತೆ ಮಾತನಾಡಿ, ಅನುಮಾನ ಬಗೆಹರಿಸಿಕೊಳ್ಳಿ

    ಚೆನ್ನೈ: ಭಾರತದ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ 100ಕ್ಕೂ ಹೆಚ್ಚು ಅಮೆರಿಕದ ವಿಶ್ವವಿದ್ಯಾಲಯಗಳು ಮತ್ತು ಕಾಲೇಜು ಪ್ರತಿನಿಧಿಗಳೊಂದಿಗೆ ಮಾತನಾಡಲು ಚೆನ್ನೈನಲ್ಲಿರುವ ಅಮೆರಿಕ ರಾಯಭಾರ ಕಚೇರಿ  ಯುಎಸ್ಎ  ಯುನಿವರ್ಸಿಟಿ ವರ್ಚುಯಲ್ ಫೇರ್ಸ್ ಆಯೋಜಿಸಿದೆ.

    ಈ ಕಾರ್ಯಕ್ರಮದಲ್ಲಿ  ವಿದ್ಯಾರ್ಥಿಗಳು ಮತ್ತು ಅವರ ಪೋಷಕರು  ಅಮೆರಿಕ ವಿಶ್ವವಿದ್ಯಾಲಯಗಳಲ್ಲಿ ಕ್ಯಾಂಪಸ್ ಲೈಫ್, ಹಣಕಾಸು ನೆರವಿನ ಆಯ್ಕೆಗಳು, ಅರ್ಜಿ ಸಲ್ಲಿಸುವ ಪ್ರಕ್ರಿಯೆಗಳು ಮತ್ತು ಕೋವಿಡ್-19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಸುರಕ್ಷತೆಯ ಮುನ್ನೆಚ್ಚರಿಕೆಗಳ ಕುರಿತು ಮಾಹಿತಿ ಪಡೆಯಬಹುದು.

    ಅಮೆರಿಕದ ಮೂಲೆ ಮೂಲೆಯಲ್ಲಿರುವ ಉನ್ನತ ಶಿಕ್ಷಣ ಸಂಸ್ಥೆಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು, ಸ್ನಾತಕ, ಸ್ನಾತಕೋತ್ತರ ಮತ್ತು ಡಾಕ್ಟೊರಲ್ ಮಟ್ಟಗಳ ವಿಸ್ತಾರ ಶ್ರೇಣಿಯ ಶೈಕ್ಷಣಿಕ ಕಾರ್ಯಕ್ರಮಗಳ ವಿವರಗಳನ್ನು ನೀಡುತ್ತವೆ. ಭಾಗವಹಿಸಲು ಯಾವುದೇ ಯಾವುದೇ ನೋಂದಣಿ ಶುಲ್ಕವಿಲ್ಲ. ಇದನ್ನೂ ಓದಿ: ಕೋಲಾರದಲ್ಲಿ ಭಾರೀ ಮಳೆ- ಬೆಳೆಗಳು ಜಲಾವೃತ, ಸಂಕಷ್ಟದಲ್ಲಿ ರೈತರು

    ಅಮೆರಿಕದಲ್ಲಿ  ಮಾಸ್ಟರ್ಸ್ ಅಥವಾ ಪಿಎಚ್.ಡಿ. ಕಾರ್ಯಕ್ರಮಗಳಿಗೆ ಸೇರಲು ಬಯಸುವವರಿಗೆ ಎಜುಕೇಷನ್ ಯು.ಎಸ್.ಎ. ಯು.ಎಸ್. ಯೂನಿವರ್ಸಿಟಿ ಗ್ರಾಜುಯೇಟ್ ವರ್ಚುಯಲ್ ಫೇರ್ ಆಗಸ್ಟ್ 27ರಂದು ಶುಕ್ರವಾರ ಸಂಜೆ ಭಾರತೀಯ ಕಾಲಮಾನ 5:30ರಿಂದ ರಾತ್ರಿ 10:30ರವರೆಗೆ ನಡೆಯಲಿದೆ. ಆಸಕ್ತರು ಈ ವೆಬ್ ಸೈಟ್ ಮೂಲಕ  ನೋಂದಾಯಿಸಿಕೊಳ್ಳಬಹುದು: www.educationusa.events/undergraduatefair

    ಅಮೆರಿಕದಲ್ಲಿ ಅಸೋಸಿಯೇಟ್ ಅಥವಾ ಬ್ಯಾಚುಲರ್ ಪದವಿ ಕಾರ್ಯಕ್ರಮಗಳನ್ನು ಬಯಸುವ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಎಜುಕೇಷನ್ ಯು.ಎಸ್.ಎ., ಯು.ಎಸ್. ಯೂನಿವರ್ಸಿಟಿ ಅಂಡರ್ ಗ್ರಾಜುಯೇಟ್ ವರ್ಚುಯಲ್ ಫೇರ್ ಅನ್ನು ಸೆಪ್ಟೆಂಬರ್ 3ರಂದು ಶುಕ್ರವಾರ ಭಾರತೀಯ ಕಾಲಮಾನ ಸಂಜೆ 5.30ರಿಂದ ರಾತ್ರಿ 10.30ರವರೆಗೆ ಆಯೋಜಿಸಿದೆ. ಇದನ್ನೂ ಓದಿ: ಅಘ್ಘಾನ್ ಪ್ರಜೆಗಳಲ್ಲಿ ಇ-ವೀಸಾವಿದ್ದರೆ ಮಾತ್ರ ಭಾರತ ಪ್ರವೇಶ

    ಚೆನ್ನೈನ ಯು.ಎಸ್. ಕಾನ್ಸುಲ್ ಜನರಲ್ ಜ್ಯುಡಿತ್ ರೇವಿನ್ ಪ್ರತಿಕ್ರಿಯಿಸಿ, ಯು.ಎಸ್. ವಿಶ್ವವಿದ್ಯಾಲಯಗಳು ಭಾರತದ ವಿದ್ಯಾರ್ಥಿಗಳನ್ನು ಅವರ ಕಠಿಣ ಪರಿಶ್ರಮ, ಪ್ರತಿಭೆ ಮತ್ತು ಯು.ಎಸ್. ತರಗತಿಗೆ ಅವರ ಸಾಂಸ್ಕೃತಿಕ ಮತ್ತು ಬೌದ್ಧಿಕ ಕೊಡುಗೆಗಾಗಿ ನಿಜಕ್ಕೂ ಗೌರವಿಸುತ್ತವೆ. ಯುನೈಟೆಡ್ ಸ್ಟೇಟ್ಸ್ ನಲ್ಲಿ 4,500ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಕಲ್ಪಿಸಿಕೊಳ್ಳಬಲ್ಲ ಅಧ್ಯಯನ ಕ್ಷೇತ್ರದಲ್ಲೂ ಕಾರ್ಯಕ್ರಮಗಳನ್ನು ನೀಡುತ್ತಿವೆ ಎಂದರು.

    ನಾವು ಭಾರತೀಯ ವಿದ್ಯಾರ್ಥಿಗಳನ್ನು ಮತ್ತು ಅವರ ಪೋಷಕರನ್ನು ನಮ್ಮ ಮುಂಬರುವ ಉಚಿತ ಎಜುಕೇಷನ್ ಯು.ಎಸ್.ಎ. ಫೇರ್ಸ್ ನಲ್ಲಿ ಭಾಗವಹಿಸಲು ಆಹ್ವಾನಿಸುತ್ತೇವೆ. ನೀವು ನೇರವಾಗಿ 100 ಯು.ಎಸ್.ಉನ್ನತ ಶಿಕ್ಷಣ ಸಂಸ್ಥೆಗಳೊಂದಿಗೆ ಸಂವಹನ ನಡೆಸಬಹುದು ಮತ್ತು ಭಾರತೀಯ ವಿದ್ಯಾರ್ಥಿಗಳಿಗೆ ಏಕೆ ಯುನೈಟೆಡ್ ಸ್ಟೇಟ್ಸ್ ಆದ್ಯತೆಯ ಆಯ್ಕೆಯಾಗಿ ಉಳಿದಿದೆ ಎಂದು ಅರಿಯಬಹುದು ಎಂದು ತಿಳಿಸಿದರು.

    ಯುನೈಟೆಡ್ ಸ್ಟೇಟ್ಸ್-ಇಂಡಿಯಾ ಎಜುಕೇಷನಲ್ ಫೌಂಡೇಷನ್ ನ ಎಕ್ಸಿಕ್ಯೂಟಿವ್ ಡೈರೆಕ್ಟರ್ ಆಡಂ ಗ್ರೊಸ್ಕಿ ಮಾತನಾಡಿ, ವಿಶ್ವದಾದ್ಯಂತ ಈ ಅಸಾಧಾರಣ ಸಮಯದಲ್ಲಿ ಎಜುಕೇಷನ್ ಯು.ಎಸ್.ಎ. ಇಂಡಿಯಾ ವಿದ್ಯಾರ್ಥಿಗಳಿಗೆ ಯು.ಎಸ್.ನ ಉನ್ನತ ಶಿಕ್ಷಣದ ಕುರಿತಾದ ಮಾಹಿತಿಯನ್ನು ನಮ್ಮ ಹಲವು ಆನ್ಲೈನ್ ಸಂಪನ್ಮೂಲಗಳಾದ ಮುಂದಿನ ವರ್ಚುಯಲ್ ಮೇಳಗಳ ಮೂಲಕ ದೊರೆಯುವಂತೆ ಮಾಡುತ್ತಿದೆ. ನಾವು ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ಯುನೈಟೆಡ್ ಸ್ಟೇಟ್ಸ್ ನಲ್ಲಿ ಅಧ್ಯಯನ ನಡೆಸುವ ಅವರ ಕನಸುಗಳಿಗೆ ಹತ್ತಿರವಾಗಬೇಕೆಂದು ಆಹ್ವಾನಿಸುತ್ತೇವೆ ಎಂದರು.

    ಎಜುಕೇಷನ್ ಯುಎಸ್ಎ ಕುರಿತು
    ಎಜುಕೇಷನ್ ಯು.ಎಸ್.ಎ, ಯು.ಎಸ್. ಉನ್ನತ ಶಿಕ್ಷಣದ ಅಧಿಕೃತ ಮೂಲವಾಗಿದೆ ಮತ್ತು ಯು.ಎಸ್. ಡಿಪಾರ್ಟ್ ಮೆಂಟ್ ಆಫ್ ಸ್ಟೇಟ್ ನ ಜಾಲದ ಸದಸ್ಯನಾಗಿದ್ದು ವಿಶ್ವದಾದ್ಯಂತ 425 ಅಂತಾರಾಷ್ಟ್ರೀಯ ವಿದ್ಯಾರ್ಥಿ ಸಲಹಾ ಕೇಂದ್ರಗಳನ್ನು ಹೊಂದಿದೆ. ಎಜುಕೇಷನ್ ಯು.ಎಸ್.ಎ. ಕೇಂದ್ರಗಳು ಶಿಕ್ಷಣ ಮೇಳಗಳು ಮತ್ತು ಶಾಲೆಗಳು, ಯೂನಿವರ್ಸಿಟಿಗಳು ಮತ್ತಿತರೆ ಸಾರ್ವಜನಿಕ ಕಾರ್ಯಕ್ರಮಗಳ ಮೂಲಕ ಆನ್ಲೈನ್ ಕಾರ್ಯಕ್ರಮ ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಸಂಭವನೀಯ ವಿದ್ಯಾರ್ಥಿಗಳನ್ನು ತಲುಪುವ ಮೂಲಕ ಯುನೈಟೆಡ್ ಸ್ಟೇಟ್ಸ್ ನಲ್ಲಿ ಕಲಿಯುವ ಕುರಿತು ನಿಖರ, ಸಮಗ್ರ ಮತ್ತು ಪ್ರಸ್ತುತ ಮಾಹಿತಿ ನೀಡುತ್ತದೆ.

    ಎಂಟು ಎಜುಕೇಷನ್ ಯು.ಎಸ್.ಎ ಕೇಂದ್ರಗಳು ಅಹಮದಾಬಾದ್, ಬೆಂಗಳೂರು, ಚೆನ್ನೈ, ಹೈದರಾಬಾದ್, ಕೊಲ್ಕತಾ, ಮತ್ತು ದೆಹಲಿಗಳಲ್ಲಿದ್ದು ಭಾರತದ ವಿವಿಧ ಸಂಸ್ಥೆಗಳಾದ ಯುನೈಟೆಡ್ ಸ್ಟೇಟ್ಸ್-ಇಂಡಿಯಾ ಎಜುಕೇಷನಲ್ ಫೌಂಡೇಷನ್(ಯು.ಎಸ್.ಐ.ಇ.ಎಫ್); ಇಂಡೋ ಅಮೆರಿಕನ್ ಎಜುಕೇಷನ್ ಸೊಸೈಟಿ, ಅಹಮದಾಬಾದ್; ಯಷ್ನ ಟ್ರಸ್ಟ್, ಬೆಂಗಳೂರು; ಮತ್ತು ವೈ-ಆಕ್ಸಿಸ್ ಫೌಂಡೇಷನ್(ವೈಎಎಫ್), ಹೈದರಾಬಾದ್ ಆಯೋಜಿಸುತ್ತವೆ.

     ಹೆಚ್ಚಿನ ಮಾಹಿತಿಗೆ ಇ ಮೇಲ್ edusa@yashnatrust.org ಅಥವಾ 98800 41115 ಸಂಖ್ಯೆಗೆ ಕರೆ ಮಾಡಿ.

  • ಕಾಬೂಲ್ ವಿಮಾನ ನಿಲ್ದಾಣಕ್ಕೆ 5 ಸಾವಿರ ಅಮೆರಿಕ ಸೈನಿಕರ ನಿಯೋಜನೆ

    ಕಾಬೂಲ್ ವಿಮಾನ ನಿಲ್ದಾಣಕ್ಕೆ 5 ಸಾವಿರ ಅಮೆರಿಕ ಸೈನಿಕರ ನಿಯೋಜನೆ

    ಕಾಬೂಲ್: ಕಾಬೂಲ್‍ನ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಇದೀಗ ಸುರಕ್ಷಿತವಾಗಿದೆ ಮತ್ತು ವಿಮಾನ ಕಾರ್ಯಾಚರಣೆ ಮುಕ್ತವಾಗಿದೆ ಎಂದು ಅಮೆರಿಕ ಸೇನೆಯ ಮೇಜರ್ ಜನರಲ್ ವಿಲಿಯಂ ಹ್ಯಾಂಕ್ ಟೇಲರ್ ಹೇಳಿದ್ದಾರೆ.

    ಸದ್ಯ ಕಾಬೂಲ್ ವಿಮಾನ ನಿಲ್ದಾಣದಲ್ಲಿ ಅಮೆರಿಕದ 5,200ಕ್ಕೂ ಹೆಚ್ಚು ಸೈನಿಕರನ್ನು ನಿಯೋಜಿಸಲಾಗಿದ್ದು, ವಿಮಾನ ನಿಲ್ದಾಣವು ಸುರಕ್ಷಿತವಾಗಿದೆ ಮತ್ತು ವಿಮಾನ ಕಾರ್ಯಾಚರಣೆ ಮುಕ್ತಗೊಳಿಸಲಾಗಿದೆ. ಆಗಸ್ಟ್ 14ರಿಂದ ಇಲ್ಲಿಯವರೆಗೂ ಸುಮಾರು 7 ಸಾವಿರ ಜನರನ್ನು ಸ್ಥಳಾಂತರಿಸಿದ್ದೇವೆ ಎಂದು ತಿಳಿಸಿದ್ದಾರೆ.

    ನಾವು ಅಮೇರಿಕನ್ನರನ್ನು ಸುರಕ್ಷಿತವಾಗಿ ರಕ್ಷಿಸಲು ನಿರಂತರವಾಗಿ ಜಾಗರೂಕತೆಯಿಂದ ಕಾರ್ಯಾಚರಣೆ ನಡೆಸುತ್ತಿದ್ದೇವೆ. ಈ ಗುರಿಯನ್ನು ತಲುಪಲು ನಮ್ಮ ಬಳಿ ಇರುವ ಎಲ್ಲಾ ಶಸ್ತ್ರಾಸ್ತ್ರ ಸಾಧನಗಳನ್ನು ಬಳಸುತ್ತಿದ್ದೇವೆ. ಎಷ್ಟು ಬೇಗ ಸಾಧ್ಯವಾಗುತ್ತದೆಯೋ ಅಷ್ಟು ಬೇಗ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸುತ್ತೇವೆ ಎಂದಿದ್ದಾರೆ. ಇದನ್ನೂ ಓದಿ:ನೀನು ಮಹಿಳೆ ಉದ್ಯೋಗ ಮಾಡುವಂತಿಲ್ಲ, ಮನೆಗೆ ತೆರಳು – ಮಹಿಳಾ ಪತ್ರಕರ್ತೆಗೆ ಗೇಟ್‍ಪಾಸ್

    ಕಾಬೂಲ್‍ನಲ್ಲಿರುವ ಹಮೀದ್ ಕರ್ಜೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸುರಕ್ಷಿತವಾಗಿರಿಸಲು ಪ್ರಸ್ತುತ ಅಮೆರಿಕ ಸೇನೆ ಮುಖ್ಯ ಪಾತ್ರವಹಿಸುತ್ತಿದೆ. ಇದನ್ನೂ ಓದಿ:ಭಾರತೀಯ ರಾಯಭಾರ ಕಚೇರಿ ಮೇಲೆ ತಾಲಿಬಾನ್ ದಾಳಿ

  • ಹೈಟಿಯಲ್ಲಿ ಪ್ರಬಲ ಭೂಕಂಪಕ್ಕೆ 304 ಬಲಿ

    ಹೈಟಿಯಲ್ಲಿ ಪ್ರಬಲ ಭೂಕಂಪಕ್ಕೆ 304 ಬಲಿ

    ಪೋರ್ಟ್-ಔ-ಪ್ರಿನ್ಸ್: ಕೆರೆಬಿಯನ್ ರಾಷ್ಟ್ರ ಹೈಟಿಯಲ್ಲಿ ಸಂಭವಿಸಿದ ಭೀಕರ ಭೂಕಂಪದಲ್ಲಿ 304ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ.

    ರಿಕ್ಟರ್ ಮಾಪಕದಲ್ಲಿ 7.2ರಷ್ಟು ತೀವ್ರತೆ ದಾಖಲಾಗಿದ್ದು, ನೋಡನೋಡುತ್ತಿದ್ದಂತೆಯೇ ನೂರಾರು ಕಟ್ಟಡಗಳು ಸಂಪೂರ್ಣ ನೆಲಸಮವಾಗಿವೆ. ಹೈಟಿ ರಾಜಧಾನಿ ಪೋರ್ಟ್-ಔ-ಪ್ರಿನ್ಸ್ ನಿಂದ 160 ಕಿಲೋಮೀಟರ್ ದೂರದಲ್ಲಿ ಭೂಕಂಪ ಸಂಭವಿಸಿದೆ.

    ಭೂಕಂಪವಾಗ್ತಿದ್ದಂತೆಯೇ ಎಲ್ಲರೂ ತಮ್ಮ ತಮ್ಮ ಮನೆಗಳನ್ನ ಬಿಟ್ಟು ಹೊರಗೆ ಓಡೋಡಿ ಬಂದಿದ್ದಾರೆ. ಆದರೆ ಮನೆಯಲ್ಲೇ ಇದ್ದವರು ಅವಶೇಷಗಳಡಿ ಸಿಲುಕಿ ಸಾವು-ಬದುಕಿನ ನಡುವೆ ಹೋರಾಟ ಮಾಡ್ತಿದ್ದಾರೆ.

    ನೂರಾರು ಮಂದಿ ಭೂಕಂಪಕ್ಕೆ ಸಿಲುಕಿ ಕಣ್ಮರೆಯಾಗಿದ್ದಾರೆ. ಸದ್ಯ ಅವಶೇಷಗಳಡಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಇನ್ನು ಭೂಕಂಪದಿಂದ ಹೈಟಿಯಲ್ಲಿ ತರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ. ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಕೂಡಲೇ ಸೂಕ್ತ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

  • ಚಿನ್ನದ ಪದಕಕ್ಕೆ ಕನ್ನ – ಟ್ರೋಲ್ ಆಯ್ತು ಚೀನಾ

    ಚಿನ್ನದ ಪದಕಕ್ಕೆ ಕನ್ನ – ಟ್ರೋಲ್ ಆಯ್ತು ಚೀನಾ

    ಬೀಜಿಂಗ್: ಟೋಕಿಯೋ ಒಲಿಂಪಿಕ್ಸ್ ಪದಕ ಪಟ್ಟಿಯಲ್ಲಿ ಚೀನಾ ಎರಡನೇ ಸ್ಥಾನ ಪಡೆದಿದ್ದರೂ ಚೀನಾದಲ್ಲಿ ಮಾತ್ರ ಮೊದಲ ಸ್ಥಾನ ಪಡೆದಿದೆ.

    ಚೀನಾ ಸೆಂಟ್ರಲ್ ಟೆಲಿವಿಶನ್(ಸಿಸಿಟಿವಿ) ಟೋಕಿಯೋ ಒಲಿಂಪಿಕ್ಸ್ ಪದಕ ಪಟ್ಟಿಯನ್ನು ತಿರುಚಿ ಸುದ್ದಿಯನ್ನು ಪ್ರಕಟಿಸಿದ್ದು ಈಗ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗುತ್ತಿದೆ.

    ಒಲಿಂಪಿಕ್ಸ್ ನಲ್ಲಿ ಅಮೆರಿಕ 39 ಚಿನ್ನ, 41 ಬೆಳ್ಳಿ, 33 ಕಂಚಿನ ಪದಕದೊಂದಿಗೆ ಒಟ್ಟು 113 ಪದಕ ಪಡೆಯುವ ಮೂಲಕ ಮೊದಲ ಸ್ಥಾನ ಪಡೆದುಕೊಂಡಿದೆ. ಚೀನಾ 38 ಚಿನ್ನ, 32 ಬೆಳ್ಳಿ, 18 ಕಂಚಿನ ಪದಕ ಸೇರಿ ಒಟ್ಟು 88 ಪದಕ ಪಡೆಯುವ ಮೂಲಕ ಎರಡನೇ ಸ್ಥಾನ ಪಡೆದುಕೊಂಡಿದೆ. ಆದರೆ ಸಿಸಿಟಿವಿ 42 ಚಿನ್ನ, 37 ಬೆಳ್ಳಿ, 27 ಕಂಚಿನ ಪದಕ ಸೇರಿ ಒಟ್ಟು 16 ಪದಕ ಪಡೆಯುವ ಮೂಲಕ ಚೀನಾ ಮೊದಲ ಸ್ಥಾನ ಪಡೆದುಕೊಂಡಿದೆ ಎಂದು ಹೇಳಿ ವರದಿ ಪ್ರಕಟಿಸಿದೆ.

    ಹಾಂಕಾಂಗ್ ಮತ್ತು ಚೈನೀಸ್ ತೈಪೆ(ತೈವಾನ್) ಚೀನಾದ ಭಾಗವಾಗಿರುವ ಈ ದೇಶಗಳು ಪಡೆದಿರುವ ಪದಕಗಳನ್ನು ಸಿಸಿಟಿವಿ ಚೀನಾಗೆ ಸೇರಿಸಿದೆ. ಹೀಗಾಗಿ ಪದಕ ಪಟ್ಟಿಯಲ್ಲಿ ಚೀನಾ ಮೊದಲ ಸ್ಥಾನ ಪಡೆದಿದೆ ಎಂದು ಬಿಂಬಿಸಿ ವರದಿ ಮಾಡಿದೆ.

    ಒಲಿಂಪಿಕ್ಸ್ ನಲ್ಲಿ ಹಾಂಕಾಂಗ್ 1 ಚಿನ್ನ, 2 ಬೆಳ್ಳಿ, 3 ಕಂಚಿನ ಪದಕ ಪಡೆಯುವ ಮೂಲಕ 49ನೇ ಸ್ಥಾನ ಪಡೆದರೆ, 2 ಚಿನ್ನ, 4 ಬೆಳ್ಳಿ, 6 ಚಿನ್ನ ಪಡೆಯುವ ಮೂಲಕ ಚೈನೀಸ್ ತೈಪೆ ಪಟ್ಟಿಯಲ್ಲಿ 34ನೇ ಸ್ಥಾನ ಪಡೆದಿದೆ. ಇದನ್ನೂ ಓದಿ: ಕ್ರೀಡೆಯಲ್ಲಿ ಅಲ್ಲ, ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ‘ಚಿನ್ನ’ 

    ಸಿಸಿಟಿವಿ ಈ ತಿರುಚಿನ ವರದಿ ಪ್ರಕಟಗೊಂಡ ಬೆನ್ನಲ್ಲೇ ಭಾರೀ ಟ್ರೋಲ್ ಆಗುತ್ತಿದೆ. ಕೊರೊನಾ ವಿಚಾರದಲ್ಲೂ ವಿಶ್ವಕ್ಕೆ ಸುಳ್ಳು ಹೇಳಿದ ಚೀನಾ ಈಗ ಒಲಿಂಪಿಕ್ಸ್ ಪದಕ ಪಟ್ಟಿಯಲ್ಲೂ ಸುಳ್ಳು ಹೇಳಿ ಚೀನಾ ಜನರನ್ನು ವಂಚಿಸುತ್ತಿದೆ ಎಂದು ನೆಟ್ಟಿಗರು ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ.