Tag: Usha Shivakumar

  • ಡಿಕೆಶಿ ಪರ ಅಖಾಡಕ್ಕಿಳಿದ ಪತ್ನಿ, ಪುತ್ರ – ಕನಕಪುರದ ಹಲವೆಡೆ ಬಿರುಸಿನ ಪ್ರಚಾರ

    ಡಿಕೆಶಿ ಪರ ಅಖಾಡಕ್ಕಿಳಿದ ಪತ್ನಿ, ಪುತ್ರ – ಕನಕಪುರದ ಹಲವೆಡೆ ಬಿರುಸಿನ ಪ್ರಚಾರ

    ಬೆಂಗಳೂರು: ಚುನಾವಣಾ ಪ್ರಚಾರಕ್ಕೆ (Election Campaign) ಇನ್ನೊಂದೇ ದಿನ ಬಾಕಿಯಿದ್ದು, ಪ್ರಚಾರದ ಭರಾಟೆ ಜೋರಾಗಿ ನಡೆದಿದೆ.

    ಇದರಿಂದಾಗಿ ಕೆಪಿಸಿಸಿ (KPCC) ಅಧ್ಯಕ್ಷರೂ ಆಗಿರುವ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ ಶಿವಕುಮಾರ್‌ (DK Shivakumar) ಪರ ಪತ್ನಿ ಉಷಾ ಶಿವಕುಮಾರ್‌ (Usha Shivakumar) ಹಾಗೂ ಪುತ್ರ ಆಕಾಶ್‌ ಕೆಂಪೇಗೌಡ ಕನಕಪುರ ಕ್ಷೇತ್ರದಲ್ಲಿ ಭರ್ಜರಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ಇದನ್ನೂ ಓದಿ: ಕರ್ನಾಟಕವನ್ನ ಭಾರತದಿಂದ ಬೇರೆ ಮಾಡುವ ಹುನ್ನಾರ ನಡೆಸಿದೆ ಕಾಂಗ್ರೆಸ್ – ಮೋದಿ ವಾಗ್ದಾಳಿ

    ಕನಕಪುರದ ಕೋಡಿಹಳ್ಳಿ ಭಾಗದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪುತ್ರ ಆಕಾಶ್ ಕೆಂಪೇಗೌಡ ಅಪ್ಪನ ಪರ ಇದೇ ಮೊದಲ ಬಾರಿಗೆ ಭರ್ಜರಿ ಪ್ರಚಾರ ನಡೆಸಿದ್ದಾರೆ. ಪ್ರಚಾರ ಕಾರ್ಯದಲ್ಲಿ ಕೈ ಮುಖಂಡರು ಹಾಗೂ ಮಹಿಳಾ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಾಥ್‌ ನೀಡಿದ್ದಾರೆ. ಇದನ್ನೂ ಓದಿ: ಶ್ರೀಕಂಠೇಶ್ವರನ ದರ್ಶನ ಪಡೆದು ಚುನಾವಣಾ ಪ್ರಚಾರ ಮುಗಿಸಿದ ಮೋದಿ

    ಉಷಾ ಶಿವಕುಮಾರ್‌ ಕಳೆದ 15 ದಿನಗಳಿಂದಲೂ ಪತಿ ಡಿಕೆಶಿ ಪರ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದಾರೆ. ಈ ಬಾರಿ ಡಿಕೆಶಿ ಮುಖ್ಯಮಂತ್ರಿ ಆಗುವ ಸಾಧ್ಯತೆ ಇದೆ. ನಿಮ್ಮ ಕ್ಷೇತ್ರದ ಮಗ ಸಿಎಂ ಆಗಲು ನೀವು ಶಕ್ತಿ ತುಂಬಬೇಕು ಎಂದು ಮನೆಮನೆಗೆ ತಿರುಗಿ ಪತಿ ಡಿ.ಕೆ.ಶಿವಕುಮಾರ್‌ಗೆ ಮತ ನೀಡುವಂತೆ ಉಷಾ ಶಿವಕುಮಾರ್ ಮನವಿ ಮಾಡುತ್ತಿದ್ದಾರೆ. ಇದಕ್ಕೆ ಸಕಾರಾತ್ಮಕವಾಗಿಯೇ ಸ್ಪಂದಿಸುತ್ತಿರುವ ಮತದಾರರು ಆರತಿ ಸಹಿತ ಸ್ವಾಗತಕೋರಿದ್ದಾರೆ.

  • ಡಿಕೆಶಿ ಪರ ಅಖಾಡಕ್ಕಿಳಿದ ಪತ್ನಿ – ಕನಕಪುರದ ಹಲವೆಡೆ ಪ್ರಚಾರ

    ಡಿಕೆಶಿ ಪರ ಅಖಾಡಕ್ಕಿಳಿದ ಪತ್ನಿ – ಕನಕಪುರದ ಹಲವೆಡೆ ಪ್ರಚಾರ

    ರಾಮನಗರ: ಕೆಪಿಸಿಸಿ (KPCC) ಅಧ್ಯಕ್ಷ ಡಿಕೆ ಶಿವಕುಮಾರ್ (D.K.Shivakumar) ಪತ್ನಿ ಉಷಾ ಶಿವಕುಮಾರ್ (Usha Shivakumar) ತನ್ನ ಪತಿಯ ಪರವಾಗಿ ಮಂಗಳವಾರ ಕನಕಪುರದ (Kanakapura) ವಿವಿಧ ವಾರ್ಡ್‌ಗಳಲ್ಲಿ ಪ್ರಚಾರ ನಡೆಸಿದರು.

    ಈ ಬಾರಿ ಡಿಕೆಶಿ ಮುಖ್ಯಮಂತ್ರಿ ಆಗುವ ಸಾಧ್ಯತೆ ಇದೆ. ನಿಮ್ಮ  ಕ್ಷೇತ್ರದ ಮಗ ಸಿಎಂ ಆಗಲು ನೀವು ಶಕ್ತಿ ತುಂಬಬೇಕು ಎಂದು ಮನೆಮನೆಗೆ ತಿರುಗಿ ಪತಿ ಡಿ.ಕೆ.ಶಿವಕುಮಾರ್‌ಗೆ ಮತ ನೀಡುವಂತೆ ಉಷಾ ಶಿವಕುಮಾರ್ ಮನವಿ ಮಾಡಿದರು. ಈ ವೇಳೆ ಕನಕಪುರದ ಜನತೆ ಉಷಾ ಅವರನ್ನು ಕಂಡು ಮಾತನಾಡಿಸಿ ಶುಭ ಹಾರೈಸಿದರು. ಇದನ್ನೂ ಓದಿ: ಹೊಳಲ್ಕೆರೆ ಅಖಾಡ ಹೇಗಿದೆ? ಬಿಜೆಪಿ, ಕಾಂಗ್ರೆಸ್ ಮಧ್ಯೆ ನೇರ ಸ್ಪರ್ಧೆ

    ಈ ವೇಳೆ ಮಾತನಾಡಿದ ಉಷಾ, ನಾನು ವೋಟಿಂಗ್ (Voting) ಮುಗಿಯುವವರೆಗೂ ಕ್ಯಾಂಪೇನ್ ಮಾಡುತ್ತೇನೆ. ನಾನು ವೋಟ್ ಕೇಳುವುದೇ ಬೇಕಿಲ್ಲ. ಜನರೇ ಮತ ಕೊಡುತ್ತಾರೆ. ನಾನು ಪ್ರತೀ ಚುನಾವಣೆಯಲ್ಲೂ (Election) ನನ್ನ ಪತಿಯ ಪರ ಪ್ರಚಾರ ಮಾಡುತ್ತೇನೆ. ಈ ಬಾರಿಯೂ ಜನ ನಮ್ಮನ್ನು ಆಶೀರ್ವದಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಹಾಲಿ ಸಚಿವರ ಕ್ಷೇತ್ರದಲ್ಲಿ ಇದೇ ಮೊದಲ ಬಾರಿಗೆ ತ್ರಿಕೋನ ಪೈಪೋಟಿ