Tag: utsav

  • ‘ಗಿಣಿರಾಮ’ ಹೀರೋ ಸಿನಿಮಾಗೆ ‘ಉತ್ಸವ’ ಟೈಟಲ್ ಫಿಕ್ಸ್

    ‘ಗಿಣಿರಾಮ’ ಹೀರೋ ಸಿನಿಮಾಗೆ ‘ಉತ್ಸವ’ ಟೈಟಲ್ ಫಿಕ್ಸ್

    ನ್ನಡ ಚಿತ್ರರಂಗದಲ್ಲಿ ಹೊಸಬರ ಆಗಮನದಿಂದ ಹೊಸತನವೆದ್ದಿದೆ. ಭಿನ್ನ-ವಿಭಿನ್ನ ಹಾಗೂ  ಪ್ರಯೋಗಾತ್ಮಕ ಕಥೆಗಳಿಂದ ಚಿತ್ರರಂಗಕ್ಕೆ ಹೊಸ ಮೆರಗು ಸಿಗುತ್ತಿದೆ. ಅಂಥದ್ದೇ‌ ಆವೇಗದಲ್ಲಿ ರೂಪಗೊಂಡಿರುವ ಹೊಸಬರ ಸಿನಿಮಾಗೆ ‘ಉತ್ಸವ’ (Utsav) ಎಂಬ ಟೈಟಲ್ (Title) ಇಡಲಾಗಿದೆ. ಈ ಚಿತ್ರದ ಮೂಲಕ ಯುವ ನಿರ್ದೇಶಕರ ಆಗಮನವಾಗುತ್ತಿದೆ.

    ನಾಗೇಂದ್ರ ಅರಸ್ ಸೇರಿದಂತೆ ಹಲವು ನಿರ್ದೇಶಕ ಗರಡಿಯಲ್ಲಿ ಸಹಾಯಕ ಹಾಗೂ ಸಹ ನಿರ್ದೇಶಕರಾಗಿ ಕೆಲಸ ಮಾಡಿರುವ ಅರುಣ್ ಸೂರ್ಯ (Arun Surya) ನಿರ್ದೇಶಕರಾಗಿ ಮೊದಲ ಹೆಜ್ಜೆ ಇಟ್ಟಿದ್ದಾರೆ. ಸದ್ದಿಲ್ಲದೆ ಶೂಟಿಂಗ್ ಮುಗಿಸಿರುವ ಉತ್ಸವ ಸಿನಿಮಾದಲ್ಲಿ ಗಿಣಿರಾಮ ಸೀರಿಯಲ್ ಖ್ಯಾತಿಯ ರಿತ್ವಿಕ್ ಮಠದ್ (Ritwik Mathad) ನಾಯಕನಾಗಿ ನಟಿಸಿದ್ದು, ಈ ಹಿಂದೆ ಆ ಎರಡು ವರ್ಷಗಳು, ಗಿಫ್ಟ್ ಬಾಕ್ಸ್ ಚಿತ್ರದಲ್ಲಿ ನಟಿಸಿದ್ದ ಇವರಿಗೆ ಇದು ಮೂರನೇ ಸಿನಿಮಾವಾಗಿದೆ. ಇದನ್ನೂ ಓದಿ:ಜುಲೈ 12ಕ್ಕೆ ಸೆಂಚುರಿ ಸ್ಟಾರ್ ಬರ್ತ್‌ಡೇಗೆ ಸಿದ್ಧತೆ ಹೇಗಿದೆ ಗೊತ್ತಾ?

    ಫೇಸ್ಟು ಪೇಸ್ ಸಿನಿಮಾ ಖ್ಯಾತಿಯ ಪೂರ್ವಿ ಜೋಷಿ (Purvi Joshi) ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ಉಳಿದಂತೆ ನಾಗೇಂದ್ರ ಅರಸ್, ಪ್ರಕಾಶ್ ತುಮ್ಮಿನಾಡ್ ತಾರಾಬಳಗದಲ್ಲಿದ್ದಾರೆ. ಪ್ರೇಮಕಥಾ ಹಂದರ ಹೊಂದಿರುವ ಉತ್ಸವ ಸಿನಿಮಾವನ್ನು ಅರಸ ಪ್ರೊಡಕ್ಷನ್ ನಡಿ ಉಷಾ ಶ್ರೀನಿವಾಸ ನಿರ್ಮಾಣ ಮಾಡಿದ್ದಾರೆ.

    ಜಯಂತ್ ಕಾಯ್ಕಿಣಿ ಹಾಡುಗಳಿಗೆ ಎಮಿನಲ್ ಮಹಮ್ಮದ್ ಸಂಗೀತ ಒದಗಿಸಿದ್ದು, ಜಾವೀದ್ ಆಲಿ ಹಾಗೂ ಅಕಿಂತಾ ಕುಂಡು ಧ್ವನಿಯಾಗಿದ್ದಾರೆ. ಶಿವರಾಜ್ ಮೆಹೋ ಸಂಕಲನ, ಗೌತಮ್ ಮನು ಛಾಯಾಗ್ರಹಣ ಚಿತ್ರಕ್ಕಿದೆ. ಮನಾಲಿ ಹಾಗೂ ಗೋವಾದಲ್ಲಿ ಉತ್ಸವ ಶೂಟಿಂಗ್ ನಡೆಸಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೆಂಗ್ಳೂರು ಉತ್ಸವ ಆಚರಿಸಲು ಸರ್ಕಾರ ನಿರ್ಧಾರ: ಸಿಟಿ ರವಿ

    ಬೆಂಗ್ಳೂರು ಉತ್ಸವ ಆಚರಿಸಲು ಸರ್ಕಾರ ನಿರ್ಧಾರ: ಸಿಟಿ ರವಿ

    ಬೆಂಗಳೂರು: ಐಟಿ-ಬಿಟಿ ಸಿಟಿ, ಗಾರ್ಡನ್ ಸಿಟಿ, ಸಿಲಿಕಾನ್ ಸಿಟಿ ಹೀಗೆ ನಾನಾ ಹೆಸರಿನಿಂದ ಪ್ರಖ್ಯಾತ ಹೊಂದಿರುವ ಬೆಂಗಳೂರಿಗೆ ತನ್ನದೇ ಆದ ಸಾಂಸ್ಕೃತಿಕ ಇತಿಹಾಸ ಇದೆ. ನಾಡಪ್ರಭು ಕೆಂಪೇಗೌಡರು ಕಟ್ಟಿದ ಬೆಂಗಳೂರಿನಲ್ಲಿ ಸಾಂಸ್ಕೃತಿಕ ಇತಿಹಾಸಕ್ಕೆ ಕೊರತೆ ಇಲ್ಲ. ಈ ಬೆಂಗಳೂರು ಇತಿಹಾಸವನ್ನು ವೈಭವದಿಂದ ಆಚರಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಹೀಗಾಗಿ ರಾಷ್ಟ್ರೀಯ ಮಟ್ಟದ ಬೆಂಗಳೂರು ಉತ್ಸವ ಆಚರಣೆಗೆ ಸರ್ಕಾರ ಚಿಂತನೆ ನಡೆಸಿದೆ.

    ವಿಧಾನ ಪರಿಷತ್ ಅಧಿವೇಶನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿಟಿ ರವಿ ಬೆಂಗಳೂರು ಉತ್ಸವ ಮಾಹಿತಿ ಬಿಚ್ಚಿಟ್ಟರು. ವಿಶ್ವವಿಖ್ಯಾತ ಮೈಸೂರು ದಸರಾ, ಹಂಪಿ ಉತ್ಸವ ಹಾಗೂ ಬೆಂಗಳೂರು ಉತ್ಸವವನ್ನ ರಾಷ್ಟ್ರೀಯ ಉತ್ಸವವಾಗಿ ಆಚರಣೆ ಮಾಡೋಕೆ ನಮ್ಮ ಸರ್ಕಾರ ಚಿಂತನೆ ನಡೆಸಿದೆ. ಈ ನಿಟ್ಟಿನಲ್ಲಿ ಈಗಾಗಲೇ ಪ್ರಯತ್ನ ನಡೆದಿದೆ. ಸಿಎಂ ಯಡಿಯೂರಪ್ಪರವರ ಜೊತೆ ಚರ್ಚೆ ಮಾಡಿ ಅಂತಿಮ ನಿರ್ಧಾರ ಮಾಡೋದಾಗಿ ಸಚಿವ ಸಿಟಿ ರವಿ ತಿಳಿಸಿದರು.

    ಏನಿದು ಬೆಂಗಳೂರು ಉತ್ಸವ?:
    ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರೋ ಬೆಂಗಳೂರು ಸ್ಥಾಪನೆಯ ಇತಿಹಾಸವೇ ಒಂದು ರೋಚಕ. ಇಲ್ಲಿನ ಕಲೆ, ಸಂಸ್ಕೃತಿ, ಪರಂಪರೆಗೆ ತನ್ನದೇ ಆದ ಇತಿಹಾಸ ಇದೆ. ಈ ಇತಿಹಾಸವನ್ನ ಪ್ರಚಾರ ಮಾಡುವುದೇ ಬೆಂಗಳೂರು ಉತ್ಸವದ ಪ್ರಮುಖ ಉದ್ದೇಶ. ಇತಿಹಾಸ ಪ್ರಚಾರದ ಜೊತೆ ವಾಣಿಜ್ಯಾತ್ಮಕವಾಗಿ ಈ ಬೆಂಗಳೂರು ಉತ್ಸವವನ್ನ ಆಚರಣೆ ಮಾಡಲಾಗುತ್ತೆ. ಕಲೆ ಪರಂಪರೆ ಜೊತೆ ವಾಣಿಜ್ಯ ಚಟುವಟಿಕೆಗಳನ್ನ ಆಯೋಜನೆ ಮಾಡಿ ಸರ್ಕಾರದ ಬೊಕ್ಕಸಕ್ಕೆ ಆದಾಯ ಬರುವ ಹಾಗೇ ಮಾಡಲಾಗುತ್ತೆ.

    ಬೆಂಗಳೂರು ವೈಭವದ ಇತಿಹಾಸ ನೆನಪಿಸೋ ಜೊತೆಗೆ ಜನರಿಗೆ ಅಗತ್ಯ ಮನೋರಂಜನೆಗಳನ್ನ ನೀಡಿ ಅಂತರಾಷ್ಟ್ರೀಯ ಮಟ್ಟದಲ್ಲಿ ಉತ್ಸವ ಆಚರಣೆ ಮಾಡಿ ಮತ್ತಷ್ಟು ಜನರನ್ನ ಬೆಂಗಳೂರಿಗೆ ಆಕರ್ಷಣೆ ಮಾಡೋದು ಸರ್ಕಾರದ ಉದ್ದೇಶ. ಬೆಂಗಳೂರು ಉತ್ಸವವನ್ನ ರಾಷ್ಟ್ರೀಯ ಮಟ್ಟದಲ್ಲಿ ಆಚರಣೆ ಮಾಡೋದ್ರೀಂದ ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ಮತ್ತಷ್ಟು ಬೆಂಗಳೂರನ್ನ ಬೆಳೆಸಬಹುದು. ಜೊತೆಗೆ ವಾಣಿಜ್ಯ ಕ್ಷೇತ್ರದ ಅಭಿವೃದ್ಧಿಗೂ ಅನುಕೂಲ ಮಾಡೋದು ಕೂಡ ಸರ್ಕಾರದ ಉದ್ದೇಶವಾಗಿದೆ. ಉತ್ಸವದ ರೂಪುರೇಷೆಗಳನ್ನು ಇನ್ನೂ ಸಿದ್ಧಪಡಿಸಬೇಕಿದೆ. ಆದಷ್ಟು ಬೇಗ ಬೆಂಗಳೂರು ಉತ್ಸವದ ರೂಪುರೇಷೆ ಸಿದ್ಧಪಡಿಸಿ ಬೆಂಗಳೂರು ಉತ್ಸವ ಆಚರಣೆಗೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ.

  • ಚಿಕ್ಕಮಗ್ಳೂರು ಉತ್ಸವಕ್ಕೆ ನೆರೆ ಸಂತ್ರಸ್ತರ ವಿರೋಧ – ಮೊದ್ಲು ಪರಿಹಾರ ವಿತರಿಸಿ ಎಂದು ಆಗ್ರಹ

    ಚಿಕ್ಕಮಗ್ಳೂರು ಉತ್ಸವಕ್ಕೆ ನೆರೆ ಸಂತ್ರಸ್ತರ ವಿರೋಧ – ಮೊದ್ಲು ಪರಿಹಾರ ವಿತರಿಸಿ ಎಂದು ಆಗ್ರಹ

    ಚಿಕ್ಕಮಗಳೂರು: ಕಳೆದ ವರ್ಷ ಕಾಫಿನಾಡಿನಲ್ಲಿ ಸುರಿದ ಧಾರಾಕಾರ ಮಳೆ ಜಿಲ್ಲೆಯ ಜನಜೀವನವನ್ನು ಸಂಪೂರ್ಣವಾಗಿ ಅಸ್ತವ್ಯಸ್ತಗೊಳಿಸಿತ್ತು. ಭೂಕುಸಿತ, ಬೆಳೆ ನಷ್ಟ, ಮನೆ ಹಾಗೂ ಜೀವಹಾನಿಯ ಕಹಿ ನೆನಪಿನಿಂದ ಜನ ಹೊರ ಬರಲಾಗದೇ ಭವಿಷ್ಯದ ಆತಂಕದಲ್ಲಿದ್ದಾರೆ. ಇಂತಹ ವೇಳೆಯಲ್ಲಿಯೇ ಚಿಕ್ಕಮಗಳೂರು ಉತ್ಸವಕ್ಕೆ ಸಚಿವರು ಗ್ರೀನ್‍ಸಿಗ್ನಲ್ ಕೊಟ್ಟಿದ್ದು, ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದೆ. ಜನ ಸಂಕಷ್ಟದಲಿದ್ದು ಇನ್ನೂ ಸಂತ್ರಸ್ತರ ಪರಿಹಾರ ಸಿಕ್ಕಿಲ್ಲ. ಇಂತಹ ವೇಳೆಯಲ್ಲಿ ಉತ್ಸವ ಬೇಕಿತ್ತಾ ಎನ್ನುವ ವಿವಾದವೂ ಎದ್ದಿದೆ.

    ಹೌದು. ಕಳೆದ ವರ್ಷ ಮಲೆನಾಡು ಭಾಗದಲ್ಲಿ ಸುರಿದ ಮಳೆಯ ಅವಾಂತರ ನೆನಪಿಸಿಕೊಂಡರೆ ಮೈ ಜುಂ ಅನ್ನುತ್ತೆ. ಜನ ಮನೆ-ಮಠ ಕಳೆದುಕೊಂಡು ಬೀದಿಗೆ ಬಿದ್ದರು. ಬದುಕು ಮೂರಾಬಟ್ಟೆಯಾಯ್ತು. ಚಿಕ್ಕಮಗಳೂರು ಜಿಲ್ಲೆಯೊಂದರಲ್ಲೇ 10ಕ್ಕೂ ಹೆಚ್ಚು ಜನ ಪ್ರಾಣ ಕಳೆದುಕೊಂಡರು. ಇಷ್ಟೆಲ್ಲ ಅನಾಹುತ ಸಂಭವಿಸಿದರು ಕೂಡ ಪರಿಹಾರ ಕಾರ್ಯ ಮಾತ್ರ ಆಮೆಗತಿಯಲ್ಲಿ ಸಾಗುತ್ತಿದೆ. ಅಂದು ಇದ್ದವರು ಇಂದು ಇಲ್ಲದಂತಾಗಿದ್ದು ಭವಿಷ್ಯದ ಚಿಂತೆಯಲ್ಲಿದ್ದಾರೆ. ಈ ನಡುವೆ ಜಿಲ್ಲಾಡಳಿತ ಕೋಟಿ-ಕೋಟಿ ಖರ್ಚು ಮಾಡಿ 2 ದಶಕಗಳಿಂದ ನಿಂತು ಹೋಗಿದ್ದ ಚಿಕ್ಕಮಗಳೂರು ಉತ್ಸವ ಮಾಡೋಕೆ ಹೊರಟಿರೋದು ಜನರ ಕೆಂಗಣ್ಣಿಗೆ ಗುರಿಯಾಗಿದೆ ಎಂದು ತಾಲೂಕು ಕಸಾಪ ಅಧ್ಯಕ್ಷ ಪುಟ್ಟಸ್ವಾಮಿ ಹೇಳಿದ್ದಾರೆ.

    ಸಂತ್ರಸ್ತರಿಗಿನ್ನೂ ಶಾಶ್ವತ ಪರಿಹಾರ ಸಿಕ್ಕಿಲ್ಲ. ಮಳೆಯ ಹೊಡೆತದಿಂದ ಜನಜೀವನವೂ ಚೇತರಿಕೆಯಾಗಿಲ್ಲ. ಜನರ ಕಷ್ಟಕ್ಕೆ ಸ್ಪಂದಿಸದೇ ಜಿಲ್ಲಾಡಳಿತ ಅನಗತ್ಯ ದುಂದುವೆಚ್ಚ ಮಾಡ್ತಿರೋದು ಸರಿಯಲ್ಲ ಅಂತ ಜನ ಅಸಮಾಧಾನ ಹೊರ ಹಾಕ್ತಿದ್ದಾರೆ. ವಿರೋಧದ ನಡುವೆಯೂ ಫೆಬ್ರವರಿ 28ರಿಂದ ಮೂರು ದಿನಗಳ ಕಾಲ ಚಿಕ್ಕಮಗಳೂರು ಉತ್ಸವವನ್ನ ಆಚರಿಸಲು ಜಿಲ್ಲಾಡಳಿತ ಭರದ ಸಿದ್ಧತೆ ಮಾಡಿಕೊಳ್ತಿದ್ದು, ಹಬ್ಬದ ಲಾಂಛನವೂ ಬಿಡುಗಡೆಯಾಗಿದೆ. ಈ ಬಗ್ಗೆ ಪ್ರತಿಕ್ರಿಸಿರೋ ಸಚಿವ ಸಿ.ಟಿ.ರವಿ, ಪರಿಹಾರದ ಹಣವನ್ನ ನಾವು ಮುಟ್ಟಿಲ್ಲ. ಉತ್ಸವಗಳಿಗೆಂದೇ ಮೀಸಲಿಟ್ಟಿರೋ ಹಣವಿದು. ಅಂತ ವಿರೋಧಿಗಳಿಗೆ ಟಾಂಗ್ ಕೊಟ್ಟರು.

    ಕಳೆದ 2 ದಶಕಗಳಿಂದ ನಿಂತಿದ್ದ ಉತ್ಸವಕ್ಕೆ ಇದೀಗ ಜೀವಕಳೆ ಬಂದಿದೆ. ಪರ-ವಿರೋಧದ ಮಧ್ಯೆಯೂ ಜಿಲ್ಲಾಡಳಿತ ಉತ್ಸವ ಮಾಡೋಕೆ ಹೊರಟಿದ್ದು, ಮುಂದೇನಾಗುತ್ತೋ ಎಂಬುದನ್ನು ಕಾದು ನೋಡಬೇಕಿದೆ.

  • ಮಡಿಕೇರಿಯ ಅಯ್ಯಪ್ಪ ದೇವಾಲಯದಲ್ಲಿ ಮಕರ ಸಂಕ್ರಾಂತಿ ಉತ್ಸವ

    ಮಡಿಕೇರಿಯ ಅಯ್ಯಪ್ಪ ದೇವಾಲಯದಲ್ಲಿ ಮಕರ ಸಂಕ್ರಾಂತಿ ಉತ್ಸವ

    ಮಡಿಕೇರಿ: ಮಂಜಿನ ನಗರಿ ಮಡಿಕೇರಿ ನಗರದ ಮುತ್ತಪ್ಪ ದೇವಾಲಯ ಆವರಣದ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಇಂದು ವರ್ಷದ ಮಕರ ಸಂಕ್ರಾಂತಿ ಉತ್ಸವವು ವಿಶೇಷ ದೈವಿಕ ಕೈಂಕರ್ಯಗಳೊಂದಿಗೆ ನೆರವೇರಿತು.

    ಮಂಗಳವಾರ ಸಂಜೆಯಿಂದಲೂ ಸನ್ನಿಧಿಯಲ್ಲಿ ನಿರ್ಮಾಲ್ಯ ವಿಸರ್ಜನೆ, ಉಷಾ ಪೂಜೆ, ಗಣಹೋಮ ಹಾಗೂ ಶ್ರೀ ಮುತ್ತಪ್ಪ ಮತ್ತು ಸುಬ್ರಹ್ಮಣ್ಯ ದೇವರಿಗೆ ವಿಶೇಷ ಪೂಜೆ ನಡೆಸಲಾಯಿತು. ಇಂದು ಬೆಳಗ್ಗೆ ದೇವರಿಗೆ ಪಂಚಾಮೃತ ಅಭಿಷೇಕ, ತುಪ್ಪಾಭಿಷೇಕ, ಕ್ಷೀರಾಭಿಷೇಕ, ಭಷ್ಮಾಭಿಷೇಕ, ಎಳನೀರು ಅಭಿಷೇಕ, ಪುಷ್ಪಾರ್ಚನೆಯೊಂದಿಗೆ ಅಲಂಕಾರ ಪೂಜೆ ಜರುಗಿತು. ಅಲ್ಲದೆ ಶ್ರೀ ಅಯ್ಯಪ್ಪ ಉತ್ಸವ ಮೂರ್ತಿಯ ಕ್ಷೇತ್ರ ಪ್ರದಕ್ಷಿಣೆಯೊಂದಿಗೆ ಬಲಿ ಪೂಜೆಯ ಬಳಿಕ ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ನಡೆಯಿತು.

    ನಂತರ ಭಕ್ತರಿಗೆ ಪ್ರಸಾದದೊಂದಿಗೆ ಅನ್ನಸಂತರ್ಪಣೆ ನೆರವೇರಿತು. ಮಕರ ಸಂಕ್ರಾಂತಿ ಪ್ರಯುಕ್ತ ಮುಸ್ಸಂಜೆಯಲ್ಲಿ ವಿಶೇಷ ಭಜನಾ ಕಾರ್ಯಕ್ರಮದ ಬಳಿಕ ದೇವರಿಗೆ ಪಡಿಪೂಜೆ ಹಾಗೂ ದೀಪಾರಾಧನೆಯೊಂದಿಗೆ ರಾತ್ರಿ ಮಹಾಸೇವೆ ಬಳಿಕ ಪ್ರಸಾದ ವಿನಿಯೋಗ ನೆರವೇರಿತು. ದೇವರಿಗೆ ವಿಶೇಷ ಚಂಡು ಸೇವೆಯೊಂದಿಗೆ ಮಂಗಳವಾದ್ಯಗಳನ್ನು ಮಹಾಪೂಜೆ ವೇಳೆ ನುಡಿಸಲಾಯಿತು. ಅಪಾರ ಸಂಖ್ಯೆಯಲ್ಲಿ ಸದ್ಭಕ್ತರು ಪೂಜೆ ಹಾಗೂ ಅನ್ನದಾನದಲ್ಲಿ ಪಾಲ್ಗೊಂಡಿದ್ದರು.