Tag: uttar pradesh

  • ತಂದೆ, ವಿಕಲಚೇತನ ಬಾಲಕನನ್ನು ಸುತ್ತಿಗೆಯಿಂದ ಹೊಡೆದು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಕೊಂದ ದಂಪತಿ

    ತಂದೆ, ವಿಕಲಚೇತನ ಬಾಲಕನನ್ನು ಸುತ್ತಿಗೆಯಿಂದ ಹೊಡೆದು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಕೊಂದ ದಂಪತಿ

    ಲಕ್ನೋ: ಸಂಬಂಧಿಕರನ್ನೇ ದಂಪತಿ ಸುತ್ತಿಗೆಯಿಂದ ಹೊಡೆದು, ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಕೊಂದ ಪ್ರಕರಣವನ್ನು ಉತ್ತರ ಪ್ರದೇಶ ಪೊಲೀಸರು ಭೇದಿಸಿದ್ದು, ಖತರ್ನಾಕ್ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಬಂಧಿತ ಆರೋಪಿಗಳನ್ನು ಪ್ರೇಮ್ ಕುಮಾರ್ ಮತ್ತು ಮಾಧುರಿ ಎಂದು ಗುರುತಿಸಲಾಗಿದೆ. ಈ ದಂಪತಿ ನವೆಂಬರ್ 8ರ ರಾತ್ರಿ ತಮ್ಮ ಸಂಬಂಧಿಕ ಹಾಗೂ ಆತನ ವಿಕಲಚೇತನ ಮಗನನ್ನು ಸುತ್ತಿಗೆಯಿಂದ ಹೊಡೆದು, ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಕೊಲೆ ಮಾಡಿದ್ದರು. ಆದರೆ ಆರೋಪಿಗಳು ಯಾರೆಂದು ಪತ್ತೆಯಾಗಿರಲ್ಲಿಲ್ಲ. ಆದರೆ ನವೆಂಬರ್ 10ರಂದು ಕೊಲೆಯಾದ ವ್ಯಕ್ತಿಯ ಸಹೋದರ ರಾಮ್‍ಚರಣ್ ತಿವಾರಿ ಅವರು ಸಿವಿಲ್ ಲೈನ್ ಪೊಲೀಸ್ ಠಾಣೆಯಲ್ಲಿ ನನ್ನ ಸಹೋದರ ಹಾಗೂ ಆತನ ಕಿರಿಯ ಮಗನ ಕೊಲೆಯಾಗಿದೆ ಎಂದು ದೂರು ನೀಡಿದ್ದರು.

    ಈ ದೂರಿನ ಆಧಾರದ ಮೇಲೆ ಘಟನಾ ಸ್ಥಳಕ್ಕೆ ಭೇಟಿಕೊಟ್ಟ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ ತನಿಖೆ ಆರಂಭಿಸಿದರು. ಈ ಸಂಬಂಧ ಘಟನಾ ಸ್ಥಳದ ಅಕ್ಕ ಪಕ್ಕದ ಮನೆಯವರನ್ನು ವಿಚಾರಿಸಿದಾಗ ಆರೋಪಿಗಳ ಬಗ್ಗೆ ಸುಳಿವು ಸಿಕ್ಕಿತು. ಬಳಿಕ ತನಿಖೆ ಚುರುಕುಗೊಳಿಸಿದಾಗ ಗುರುವಾರ ಆರೋಪಿಗಳು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

    ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ತಾವೇ ಕೊಲೆ ಮಾಡಿರುವುದಾಗಿ ಪೊಲೀಸರು ತಪ್ಪೊಪ್ಪಿಕೊಂಡಿದ್ದಾರೆ. ಮೃತ ವ್ಯಕ್ತಿ ನಮ್ಮ ಸಂಬಂಧಿಕ. ಆತನಿಗೆ ಇಬ್ಬರು ಗಂಡು ಮಕ್ಕಳು. ಆದರೆ ಆತನ ನಡತೆ ಸರಿಯಿರಲಿಲ್ಲ, ಹಲವು ಅಕ್ರಮ ಸಂಬಂಧವನ್ನು ಆತ ಹೊಂದಿದ್ದ. ಆದ್ದರಿಂದ ಹಿರಿಯ ಮಗನಿಗೆ ಮದುವೆ ಆಗಿರಲಿಲ್ಲ. ಜೊತೆಗೆ ಸಂತ್ರಸ್ತನ ನಡತೆ ಸರಿಯಿಲ್ಲದ ಕಾರಣಕ್ಕೆ ಊರಿನಲ್ಲಿ ನಮ್ಮ ಕುಟುಂಬದ ಹೆಸರು ಹಾಳಾಗಿತ್ತು. ಇದರಿಂದ ಬೇಸತ್ತು ಸಂಬಂಧಿಕನನ್ನು ನಾವು ಕೊಲೆ ಮಾಡಲು ನಿರ್ಧರಿಸಿದೆವು.

    ನವೆಂಬರ್ 8ರ ರಾತ್ರಿ 3 ಗಂಟೆ ವೇಳೆಗೆ ಸಂತ್ರಸ್ತನ ಮನೆಗೆ ನುಗ್ಗಿ ಆತನನ್ನು ಸುತ್ತಿಗೆ ಹಾಗೂ ಸ್ಕ್ರೂಡ್ರೈವರ್ ನಿಂದ ಕೊಲೆ ಮಾಡಿದೆವು. ಈ ವೇಳೆ ಆತನ ಕಿರಿಯ ಮಗ ನಿದ್ರೆಯಿಂದ ಎದ್ದು ಗಲಾಟೆ ಮಾಡಲು ಆರಂಭಿಸಿದ. ಆತನನ್ನು ಸುಮ್ಮನಾಗಿಸಲು ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾದೆವು. ಆದರೆ ಗಂಭಿರ ಗಾಯಗೊಂಡಿದ್ದ ಬಾಲಕ ಕೂಡ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ. ನಮಗೆ ಬಾಲಕನನ್ನು ಕೊಲೆ ಮಾಡುವ ಉದ್ದೇಶವಿರಲಿಲ್ಲ, ಆತನ ತಂದೆಯನ್ನು ಮಾತ್ರ ನಾವು ಕೊಲೆ ಮಾಡಲು ಹೋಗಿದ್ದೆವು ಎಂದು ಆರೋಪಿಗಳು ಪೊಲೀಸರಿಗೆ ತಿಳಿಸಿದ್ದಾರೆ. ಸದ್ಯ ಆರೋಪಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ವಿಚಾರಣೆ ಮುಂದುವರಿಸಿದ್ದಾರೆ.

  • ವ್ಹೀಲ್ ಚೇರ್ ಇಲ್ಲದೇ ರೇಪ್ ಆಗಿದ್ದ ಅಪ್ರಾಪ್ತ ಮಗಳನ್ನು ಬೆನ್ನಿನ ಮೇಲೆ ಹೊತ್ತೊಯ್ದ ತಂದೆ

    ವ್ಹೀಲ್ ಚೇರ್ ಇಲ್ಲದೇ ರೇಪ್ ಆಗಿದ್ದ ಅಪ್ರಾಪ್ತ ಮಗಳನ್ನು ಬೆನ್ನಿನ ಮೇಲೆ ಹೊತ್ತೊಯ್ದ ತಂದೆ

    ಲಕ್ನೋ: ಆಸ್ಪತ್ರೆಯಲ್ಲಿ ಸ್ಟ್ರೆಚರ್ ಹಾಗೂ ವ್ಹೀಲ್ ಚೇರ್ ಸೌಲಭ್ಯವಿಲ್ಲದೇ ಅತ್ಯಾಚಾರಗೊಂಡಿದ್ದ ಅಪ್ರಾಪ್ತ ಮಗಳನ್ನು ತಂದೆಯೋರ್ವ ಬೆನ್ನಿನ ಮೇಲೆ ಹೊತ್ತೊಯ್ದ ಘಟನೆ ಉತ್ತರ ಪ್ರದೇಶದ ಮಾರ್ಹೆರಾ ಪ್ರದೇಶದಲ್ಲಿ ನಡೆದಿದೆ.

    ಡಿಸೆಂಬರ್ 14 ರಂದು ಅತ್ಯಾಚಾರವಾದ ಮಗಳನ್ನು ವೈದ್ಯಕೀಯ ತಪಾಸಣೆಗೆಂದು ಕರೆದುಕೊಂಡ ಬಂದ ತಂದೆಯೋರ್ವ ಆಸ್ಪತ್ರೆಯಲ್ಲಿ ಸ್ಟ್ರೆಚರ್ ಹಾಗೂ ವ್ಹೀಲ್ ಚೇರ್ ಸೌಲಭ್ಯವಿಲ್ಲದೆ ತನ್ನ ಮಗಳನ್ನು ಬೆನ್ನಿನ ಮೇಲೆ ಹೋತ್ತುಕೊಂಡು ಹೋಗಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಡಿ.14 ರಂದು ತನ್ನ ಮನೆಯಲ್ಲಿದ್ದ 15 ವರ್ಷದ ಬಾಲಕಿಯನ್ನು ಆಕೆಯ ಮನೆಯ ಪಕ್ಕದಲ್ಲಿ ವಾಸವಿದ್ದ 19 ವರ್ಷದ ಯುವಕ ಅಂಕಿತ್ ಯಾದವ್ ಮನೆಯಿಂದ ಎಳೆದುಕೊಂಡು ಹೋಗಿ ಹಲವು ಗಂಟೆಗಳ ಕಾಲ ಅತ್ಯಾಚಾರ ಮಾಡಿದ್ದಾನೆ. ಈ ವೇಳೆ ಬಾಲಕಿಯು ಆತನಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಮಾಡಿದ್ದಾಳೆ. ಆಗ ಅವಳ ಕಾಲು ಮತ್ತು ಕೈಗೆ ಗಂಭೀರವಾದ ಗಾಯವಾಗಿದ್ದು, ನಡೆಯಲು ಆಗದ ಸ್ಥಿತಿಗೆ ತಲುಪಿದ್ದಾಳೆ.

    ಇದಾದ ನಂತರ ಬಾಲಕಿಯ ತಂದೆ ದೂರು ನೀಡಲು ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ. ಈ ವೇಳೆ ದೂರು ದಾಖಲಿಸಿಕೊಂಡ ಪೊಲೀಸರು ಬಾಲಕಿಯನ್ನು ವೈದ್ಯಕೀಯ ತಪಾಸಣೆ ಕರೆದುಕೊಂಡು ಬರುವಂತೆ ಹೇಳಿದ್ದಾರೆ. ಆಗ ತಂದೆ ಮತ್ತು ಬಾಲಕಿ ಹಾಗೂ ಅವರ ಜೊತೆ ಒಬ್ಬರು ಮಹಿಳಾ ಪೇದೆ ಆಸ್ಪತ್ರೆಗೆ ಹೋಗಿದ್ದಾರೆ. ಆಸ್ಪತ್ರೆಗೆ ಬಂದ ಸಮಯದಲ್ಲಿ ನಡೆಯಲಾರದ ಮಗಳನ್ನು ವೈದ್ಯರ ಬಳಿ ಕರೆದುಕೊಂಡು ಹೋಗಲು ವ್ಹೀಲ್ ಚೇರ್ ಅಥವಾ ಸ್ಟ್ರೆಚರ್ ಸಿಗದೇ ಇದ್ದಾಗ ತಂದೆ ತನ್ನ ಮಗಳನ್ನು ಬೆನ್ನಿನ ಮೇಲೆ ಹೊತ್ತುಕೊಂಡು ಹೋಗಿ ವೈದ್ಯಕೀಯ ತಪಾಸಣೆ ಮಾಡಿಸಿದ್ದಾರೆ.

    ಈ ಫೋಟೋವನ್ನು ಸ್ಥಳೀಯರು ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು, ಈ ಫೋಟೋ ವೈರಲ್ ಆಗಿದೆ. ಹಾಗೆಯೇ ಈ ರೀತಿಯ ಘಟನೆಗಳು ಮತ್ತು ಅತ್ಯಾಚಾರ ಪ್ರಕರಣಗಳನ್ನು ತಡೆಯುವಲ್ಲಿ ವಿಫಲವಾಗಿರುವ ಯೋಗಿ ಅದಿತ್ಯನಾಥ್ ಸರ್ಕಾರವನ್ನು ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಪ್ರಕರಣದ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ನಾವು ಡಿಸೆಂಬರ್ 14 ರಂದು ದೂರು ಪಡೆದ ನಂತರ, ಆರೋಪಿಯಾದ 19 ವರ್ಷದ ಅಂಕಿತ್ ಯಾದವ್ ನನ್ನು ಬಂಧಿಸಿದ್ದೇವೆ ಹಾಗೂ ಹೆಚ್ಚಿನ ತನಿಖೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

    ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ, ಈ ಬಗ್ಗೆ ಆಸ್ಪತ್ರೆಯ ಅಡಳಿತ ಮಂಡಳಿಯನ್ನು ವಿಚಾರಿಸಿದಾಗ ಹಾರಿಕೆಯ ಉತ್ತರ ನೀಡಿರುವ ಅವರು, ಈ ಆಸ್ಪತ್ರೆ ಈಗ ತಾನೇ ಆರಂಭಗೊಂಡಿದೆ. ಆದ ಕಾರಣ ಇಲ್ಲಿ ಸೌಲ್ಯಭ್ಯಗಳು ಕಮ್ಮಿ, ಈ ಕಾರಣದಿಂದಲೇ ಅವರಿಗೆ ಬಾಲಕಿಯನ್ನು ಕರೆದುಕೊಂಡು ಹೋಗಲು ಸ್ಟ್ರೆಚರ್ ಹಾಗೂ ವ್ಹೀಲ್ ಚೇರ್ ಸಿಕ್ಕಿಲ್ಲ ಎಂದು ಹೇಳಿದ್ದಾರೆ.

  • ಮೊಬೈಲಿನಲ್ಲಿ ದೆಹಲಿಯ ಹಿಂಸಾತ್ಮಕ ಪ್ರತಿಭಟನೆ ವಿಡಿಯೋ ಇಟ್ಟುಕೊಂಡಿದ್ದ ವ್ಯಕ್ತಿ ಅರೆಸ್ಟ್

    ಮೊಬೈಲಿನಲ್ಲಿ ದೆಹಲಿಯ ಹಿಂಸಾತ್ಮಕ ಪ್ರತಿಭಟನೆ ವಿಡಿಯೋ ಇಟ್ಟುಕೊಂಡಿದ್ದ ವ್ಯಕ್ತಿ ಅರೆಸ್ಟ್

    ಲಕ್ನೋ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯ ಜಾಮಿಯಾ ಮಿಲಿಯಾ ಇಸ್ಲಾಮಿಯಾ(ಜೆಎಂಐ) ವಿದ್ಯಾರ್ಥಿಗಳ ಪ್ರತಿಭಟನೆ ಹಿಂಸಾಚಾರ ತಿರುಗಿತ್ತು. ಈ ವಿಡಿಯೋವನ್ನು ತನ್ನ ಮೊಬೈಲಿನಲ್ಲಿ ಇಟ್ಟುಕೊಂಡಿದ್ದ ಎಂದು ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

    ಉತ್ತರ ಪ್ರದೇಶದ ಚಂದೌಸಿ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಖಚಿತ ಮಾಹಿತಿ ಮೇರೆಗೆ ವ್ಯಕ್ತಿಯನ್ನು ಹಾಗೂ ಆತನ ಮೊಬೈಲ್ ಪರಿಶೀಲಿಸಿದ್ದು, ಈ ವೇಳೆ ವಿಡಿಯೋಗಳಿರುವುದು ಬೆಳಕಿಗೆ ಬಂದಿದೆ. ತಕ್ಷಣ ಮೊಬೈಲನ್ನು ಮುಟ್ಟುಗೋಲು ಹಾಕಿಕೊಂಡು, ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 505(ಯಾವುದೇ ವರ್ಗ ಅಥವಾ ಸುಮುದಾಯದ ವಿರುದ್ಧ ಅಪರಾಧ ಹಾಗೂ ಪ್ರಚೋದನೆ ನೀಡುವುದು) ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್ 66ಎ ಅಡಿ ಪ್ರಕರಣ ದಾಖಲಿಸಲಾಗಿದೆ.

    ಜೆಎಂಐ ವಿದ್ಯಾರ್ಥಿಗಳು ದೆಹಲಿಯಲ್ಲಿ ನಡೆಸಿದ ಪ್ರತಿಭಟನೆಯ ಡಜನ್‍ಗೂ ಅಧಿಕ ವಿಡಿಯೋಗಳನ್ನು ಮೊಬೈಲಿನಲ್ಲಿ ಇಟ್ಟುಕೊಂಡಿದ್ದನೆಂದು ಪೊಲೀಸರು ಆರೋಪಿಸಿದ್ದಾರೆ. ಇಂತಹ ವಿಡಿಯೋಗಳು ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಹದಗೆಡಿಸುತ್ತವೆ ಹೀಗಾಗಿ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳ ಪ್ರತಿಭಟನೆಗೆ ಸಂಬಂಧಿಸಿದ ಸುಮಾರು 10-11 ವಿಡಿಯೋಗಳು ಮೊಬೈಲಿನಲ್ಲಿದ್ದವು. ಈ ವಿಡಿಯೋಗಳು ಸಮಾಜದ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತರುವಂತಿದ್ದವು ಎಂದು ಎಫ್‍ಐಆರ್‍ನಲ್ಲಿ ನಮೂದಿಸಲಾಗಿದೆ. ಪ್ರತಿಭಟನೆ ವೇಳೆ ಹಿಂಸಾಚಾರ ನಡೆಸಿದ್ದಕ್ಕಾಗಿ ದೆಹಲಿ ಪೊಲೀಸರು ಈಗಾಗಲೇ ಸ್ಥಳೀಯ ಕಾಂಗ್ರೆಸ್ ಮುಖಂಡರು ಸೇರಿದಂತೆ 10 ಜನ ಪ್ರತಿಭಟನಾಕಾರರನ್ನು ಬಂಧಿಸಿದ್ದಾರೆ. ಇದರಲ್ಲಿ ಜಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳನ್ನು ಬಂಧಿಸಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

    ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಹೀಗಾಗಿ ಪೊಲೀಸರು ಮೂವರು ವಿದ್ಯಾರ್ಥಿಗಳು ಹಾಗೂ ಕಾಂಗ್ರೆಸ್‍ನ ಮಾಜಿ ಶಾಸಕನ ವಿರುದ್ಧ ಬುಧವಾರ ಎಫ್‍ಐಆರ್ ದಾಖಲಿಸಿದ್ದರು. ಡಿ.17ರಂದು ನಡೆದ ತೀವ್ರ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳು ಹಾಗೂ ಪ್ರತಿಭಟನಾಕಾರರು ಪೊಲೀಸರ ಮೇಲೆ ಸಹ ಹಲ್ಲೆ ನಡೆಸಿದ್ದರು. ಹೀಗಾಗಿ ಪೊಲೀಸರು ಹಿಂಸಾತ್ಮಕ ಪ್ರತಿಭಟನಾಕಾರರ ವಿರುದ್ಧ ಗಲಭೆ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ಹಾನಿ ತಡೆ ಕಾಯ್ದೆಯಡಿ ಎಫ್‍ಐಆರ್ ದಾಖಲಿಸಿದ್ದರು.

    ಪ್ರತಿಭಟನೆಯ ವೇಳೆ ದೆಹಲಿ ನಗರ ಸಾರಿಗೆ ಬಸ್ಸುಗಳಿಗೆ ಬೆಂಕಿ ಹಚ್ಚಿ, ರಸ್ತೆ ಹಾಗೂ ಸಾರೈ ಜುಲೆನಾ ಪೊಲೀಸ್ ಬೂತ್‍ನಲ್ಲಿದ್ದ ಹಲವು ವಾಹನಗಳನ್ನು ಧ್ವಂಸ ಮಾಡಿದ್ದರು. ಪರಿಸ್ಥಿತಿ ಹತೋಟಿಗೆ ಬಾರದೇ ಇದ್ದಾಗ ಗುಂಪು ಚದುರಿಸಲು ಪೊಲೀಸರು ಗ್ಯಾಸ್ ಫಿರಂಗಿ ಬಳಸಿದ್ದರು. ಆದರೂ ಪ್ರತಿಭಟನಾಕಾರರು ಗೇಟ್ ನಂ.4.7 ಹಾಗೂ 8ರಿಂದ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಆಗ ಪೊಲೀಸ್ ಸಿಬ್ಬಂದಿ ವಿಶ್ವವಿದ್ಯಾಲಯದೊಳಗೆ ಪ್ರವೇಶಿಸಿ ಹಿಂಸಾತ್ಮಕ ಪ್ರತಿಭನಾಕಾರರನ್ನು ಎಳೆತಂದು ಎಫ್‍ಐಆರ್ ದಾಖಲಿಸಿದ್ದರು.

    ಈ ಸಂದರ್ಭದಲ್ಲಿ ಹಲವು ಪೊಲೀಸ್ ಸಿಬ್ಬಂದಿಗೆ ತೀವ್ರ ಗಾಯಗಳಾಗಿದ್ದವು. ಇಷ್ಟಾದರೂ ಪ್ರತಿಭಟನಾಕಾರರು ಟಿಕೋನಾ ಪಾರ್ಕ್, ಝಾಕೀರ್ ನಗರ, ಧಲನ್ ಪೊಲೀಸ್ ಬೂತ್ ಬಳಿಯ ಸುಮಾರು 70 ರಿಂದ 80 ಬೈಕ್‍ಗಳನ್ನು ಧ್ವಂಸ ಮಾಡಿದ್ದರು.

  • ಲೈಂಗಿಕ ಕಿರುಕುಳದ ದೂರು ನೀಡಲು ಹೊರಟಿದ್ದ ಹುಡುಗಿಯನ್ನ ಅರೆಬೆತ್ತಲಾಗಿಸಿ, ಥಳಿಸಿದ್ರು

    ಲೈಂಗಿಕ ಕಿರುಕುಳದ ದೂರು ನೀಡಲು ಹೊರಟಿದ್ದ ಹುಡುಗಿಯನ್ನ ಅರೆಬೆತ್ತಲಾಗಿಸಿ, ಥಳಿಸಿದ್ರು

    ಲಕ್ನೋ: ಲೈಂಗಿಕ ಕಿರುಕುಳದ ವಿರುದ್ಧ ದೂರು ನೀಡಲು ಹೊರಟ್ಟಿದ್ದ 17 ವರ್ಷದ ಹುಡುಗಿಯನ್ನು ಆರೋಪಿಗಳು ಅರೆಬೆತ್ತಲಾಗಿಸಿ, ಹಲ್ಲೆಗೈದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

    ಉತ್ತರ ಪ್ರದೇಶದ ಚೌರಿ ಚೌರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಮಾನುಷ ಘಟನೆ ನಡೆದಿದೆ. ಭಾನುವಾರ ಹುಡುಗಿಗೆ ಇಬ್ಬರು ಕಾಮುಕರು ಲೈಂಗಿಕ ಕಿರುಕುಳ ನೀಡಿದ್ದರು. ಇದರಿಂದ ನೊಂದ ಸಂತ್ರಸ್ತೆ ಕಾಮುಕರ ವಿರುದ್ಧ ದೂರು ದಾಖಲಿಸಲು ಚೌರಿ ಚೌರಾ ಪೊಲೀಸ್ ಠಾಣೆಗೆ ಹೋಗುತ್ತಿದ್ದಳು. ಈ ವೇಳೆ ಆಕೆಯನ್ನು ಅಡ್ಡಗಟ್ಟಿದ್ದ ಆರೋಪಿಗಳು ತಮ್ಮ ವಿರುದ್ಧ ದೂರು ನೀಡಬಾರದು ಎಂದು ಬೆದರಿಕೆಯೊಡ್ಡಿದ್ದರು. ಇದ್ಯಾವುದಕ್ಕೂ ಜಗ್ಗದೆ ಹುಡುಗಿ ದೂರು ನೀಡಲು ಹೊರಟಾಗ ಆಕೆಯನ್ನು ಅಲೆಬೆತ್ತಲೆಗೊಳಿಸಿ, ಮನಬಂದಂತೆ ಥಳಿಸಿ ವಿಕೃತಿ ಮೆರೆದಿದ್ದಾರೆ.

    ಈ ವೇಳೆ ಆಕೆಯ ರಕ್ಷಣೆಗೆ ಬಂದ ತಂದೆ ಹಾಗೂ ಸಂಬಂಧಿಕರನ್ನೂ ಕೂಡ ಆರೋಪಿಗಳು ಥಳಿಸಿದ್ದಾರೆ. ಸೋಮವಾರ ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಸರ್ಕಲ್ ಇನ್ಸ್‌ಪೆಕ್ಟರ್ ರಚನಾ ಮಿಶ್ರಾ ತಿಳಿಸಿದ್ದಾರೆ.

    ಆರೋಪಿಗಳ ವಿರುದ್ಧ ಪೋಸ್ಕೋ ಕಾಯ್ದೆ ಅಡಿಯಲ್ಲಿ, ಐಪಿಸಿ ಸೆಕ್ಷನ್ 323, 354, 341ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

  • ನಿದ್ದೆ ಮಾತ್ರೆ ಹಾಕಿ, ಚಿನ್ನ, ಹಣ ದೋಚಿ ಪರಾರಿಯಾದ ವಧು

    ನಿದ್ದೆ ಮಾತ್ರೆ ಹಾಕಿ, ಚಿನ್ನ, ಹಣ ದೋಚಿ ಪರಾರಿಯಾದ ವಧು

    – ಬೆಳಗ್ಗೆ ಎದ್ದು ನೋಡಿದಾಗ ಮನೆಮಂದಿಯೆಲ್ಲ ಶಾಕ್

    ಲಕ್ನೋ: ನವವಿವಾಹಿತೆ ಮನೆ ಮಂದಿಗೆಲ್ಲ ನಿದ್ದೆ ಔಷಧಿ ನೀಡಿ ಮಾವನ ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ನಗದನ್ನು ಹೊತ್ತು ಪರಾರಿಯಾಗಿದ್ದಾಳೆ.

    ಉತ್ತರ ಪ್ರದೇಶದ ಬಾದಾನ್ ಜಿಲ್ಲೆಯ ಚೋಟಾ ಪಾರಾ ಪ್ರದೇಶದಲ್ಲಿ ಘಟನೆ ನಡೆದಿದ್ದು, ಬೆಳಗ್ಗೆ ಮನೆ ಮಂದಿಗೆಲ್ಲ ಎಚ್ಚರವಾದ ನಂತರ ಮನೆಯಲ್ಲಿ ಚಿನ್ನಾಭರಣ, ಹಣ ಹಾಗೂ ಇತರೆ ಬೆಲೆ ಬಾಳವ ವಸ್ತುಗಳು ಕಾಣದಿರುವುದನ್ನು ಕಂಡು ದಂಗಾಗಿದ್ದಾರೆ.

    ಈ ಕುರಿತು ಎಸ್‍ಪಿ ಜಿತೇಂದ್ರ ಕುಮಾರ್ ಶ್ರೀವಾಸ್ತವ್ ಮಾಹಿತಿ ನೀಡಿ, ಪ್ರವೀಣ್ ಮತ್ತು ರೈ ಡಿಸೆಂಬರ್ 9ರಂದು ಮದುವೆಯಾಗಿದ್ದಾರೆ. ಮಹಿಳೆಯು ಅಜಂಗಢಗೆ ಸೇರಿದವಳಾಗಿದ್ದಾಳೆ. ಸುಮಾರು 70 ಸಾವಿರ ರೂ. ನಗದು, ಮೂರು ಲಕ್ಷ ರೂ. ಬೆಲೆಯ ಆಭರಣಗಳನ್ನು ಮಹಿಳೆ ಹೊತ್ತೊಯ್ದಿದ್ದಾಳೆ. ಈ ಕುರಿತು ತನಿಖೆ ನಡೆಸಲಾಗುತ್ತಿದ್ದು, ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

    ಪೊಲೀಸರು ಇದೀಗ ಮದುವೆ ಮಾಡಿಸಿದ ಮಧ್ಯವರ್ತಿ ಟಿಂಕುಗಾಗಿ ಹುಡುಕಾಟ ನಡೆಸಿದ್ದಾರೆ. ಮದುವೆ ನಂತರ ಟಿಂಕು ವಧುವಿನೊಂದಿಗೆ ಹೊಸ ಮನೆಗೆ ಹೋಗಿದ್ದ. ಆಗ ವಧುವಿನೊಂದಿಗೆ ಇವನೂ ಸಹ ಕಾಣೆಯಾಗಿದ್ದಾನೆ.

    ವರನ ತಂದೆ ರಾಮ್ ಲೆಡೆಟೆ ಈ ಕುರಿತು ಮಾಹಿತಿ ನೀಡಿ, ಪ್ರವೀಣ್ ಮದುವೆ ಸಂದರ್ಭದಲ್ಲಿ ನಾವು ಒಟ್ಟು ನಾಲ್ಕು ಲಕ್ಷ ರೂ.ಗಳನ್ನು ಖರ್ಚು ಮಾಡಿದ್ದೇವೆ. ಮದುವೆಯನ್ನು ಅಜಂಗಢನಲ್ಲಿ ನಡೆಸಿದ್ದೆವು. ಆಗ ಟಿಂಕು ಸ್ವಲ್ಪ ಹಣವನ್ನು ತೆಗೆದುಕೊಂಡಿದ್ದ ಎಂದು ವಿವರಿಸಿದ್ದಾರೆ.

    ವರ ಪ್ರವೀಣ್ ಈ ಕುರಿತು ಪ್ರತಿಕ್ರಿಯಿಸಿ, ಪತ್ನಿ ಈ ರೀತಿಯಾಗಿ ನನಗೆ ಮೋಸ ಮಾಡುತ್ತಾಳೆ ಎಂದು ನನಗೆ ತಿಳಿದಿರಲಿಲ್ಲ. ಹಳ್ಳಿಯಲ್ಲಿ ನನ್ನ ಕುಟುಂಬವು ತುಂಬಾ ಮುಜುಗರಕ್ಕೊಳಗಾಗಿದೆ. ಅಲ್ಲದೆ ಆರ್ಥಿಕವಾಗಿ ಸಹ ನಾವು ಹಿಂದುಳಿದಿದ್ದೇವೆ. ಅವಳನ್ನು ಬಂಧಿಸಬೇಕೆಂದು ನಾನು ಆಗ್ರಹಿಸುತ್ತೇನೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

  • ಅತ್ಯಾಚಾರಿ ಆರೋಪಿಗಳನ್ನು ಕೊಂದವರಿಗೆ 1 ಲಕ್ಷ ರೂ.ಬಹುಮಾನ: ಅರ್ಚಕರಿಂದ ಘೋಷಣೆ

    ಅತ್ಯಾಚಾರಿ ಆರೋಪಿಗಳನ್ನು ಕೊಂದವರಿಗೆ 1 ಲಕ್ಷ ರೂ.ಬಹುಮಾನ: ಅರ್ಚಕರಿಂದ ಘೋಷಣೆ

    ಲಕ್ನೋ: ಅತ್ಯಾಚಾರಿ ಆರೋಪಿಗಳನ್ನು ಕೊಲೆ ಮಾಡಿದರೆ ಒಂದು ಲಕ್ಷ ರೂ. ಬಹುಮಾನ ನೀಡುವುದಾಗಿ ಅರ್ಚಕರೊಬ್ಬರು ಘೋಷಿಸಿದ್ದಾರೆ.

    ಅತ್ಯಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಜನತೆ ಪೊಲೀಸ್ ಹಾಗೂ ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಕಳೆದುಕೊಳ್ಳುತ್ತಿರುವ ಬೆನ್ನಲ್ಲೇ ಅತ್ಯಾಚಾರಿ ಆರೋಪಿಗಳಿಗೆ ತಾವೇ ಶಿಕ್ಷೆ ನೀಡಬೇಕೆಂಬ ಉದ್ದೇಶದಿಂದ ಈ ಇಂತಹ ಕೆಲಸಗಳಿಗೆ ಕೈ ಹಾಕುತ್ತಿದ್ದಾರೆ. ಇಲ್ಲೊಬ್ಬ ಅರ್ಚಕರು ಇದೇ ರೀತಿ ಆಫರ್ ನೀಡಿದ್ದು, ಯಾವುದೇ ಪ್ರಕರಣದ ಅತ್ಯಾಚಾರಿಯನ್ನು ಕೊಲೆ ಮಾಡಿದವರಿಗೆ ಒಂದು ಲಕ್ಷ ರೂ.ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ.

    ಅಯೋಧ್ಯೆಯ ಹನುಮಾನ್ ಗಿರಿ ದೇವಸ್ಥಾನದ ಅರ್ಚಕರೊಬ್ಬರು ಅತ್ಯಾಚಾರಿಗಳನ್ನು ಕೊಲೆ ಮಾಡಿದವರಿಗೆ 1 ಲಕ್ಷ ರೂ.ಬಹುಮಾನವನ್ನು ಘೋಷಿಸಿದ್ದಾರೆ. ಅಲ್ಲದೆ ಒಂದು ವೇಳೆ ಪೊಲೀಸರೇ ಆರೋಪಿಗಳನ್ನು ಕೊಲೆ ಮಾಡಿದಲ್ಲಿ ಪೊಲೀಸರ ಕುಟುಂಬಕ್ಕೆ ಸಹಾಯ ಮಾಡುವುದಾಗಿ ತಿಳಿಸಿದ್ದಾರೆ.

    ತಮ್ಮ ಘೋಷಣೆ ಕುರಿತು ಸ್ಪಷ್ಟೀಕರಣ ನೀಡಿರುವ ಅರ್ಚಕರು, ಅತ್ಯಾಚಾರದಂತಹ ಗಂಭೀರ ಪ್ರಕರಣಗಳಲ್ಲಿ ಆರೋಪಿಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಇದರ ಉದ್ದೇಶವಾಗಿದೆ. ಅಲ್ಲದೆ ಇಂತಹ ಕೃತ್ಯಗಳು ಮಕ್ಕಳ ಮೇಲೆಯೇ ನಡೆಯುತ್ತಿದ್ದು ಆಘಾತಕಾರಿ ಸಂಗತಿಯಾಗಿದೆ. ಈ ಕುರಿತು ಸಮಾಜವೇ ಎಚ್ಚೆತ್ತುಕೊಳ್ಳದಿದ್ದರೆ, ಇಂತಹ ಅಪರಾಧಗಳನ್ನು ತಡೆಯಲು ಸಾಧ್ಯವಿಲ್ಲ ಎಂದು ಅರ್ಚಕರು ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.

    ಅರ್ಚಕರ ಘೋಷಣೆ ಕುರಿತು ಈ ವರೆಗೆ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಅಯೋಧ್ಯೆಯ ಹಿರಿಯ ಪೊಲೀಸ್ ಅಧಿಕಾರಿ ಅಮರ್ ಸಿಂಗ್ ಈ ಕುರಿತು ಪ್ರತಿಕ್ರಿಯಿಸಿ, ಇಂತಹ ಹೇಳಿಕೆ ಕುರಿತು ನಮ್ಮ ಅರಿವಿಗೆ ಬಂದಿಲ್ಲ. ಒಂದು ವೇಳೆ ಸಾರ್ವಜನಿಕವಾಗಿ ಈ ರೀತಿಯಾಗಿ ಹೇಳಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

    ಈ ಹಿಂದೆ ಶಿವಸೇನಾ ನಾಯಕ ಅರುಣ್ ಪಾಠಕ್ ಇದೇ ರೀತಿ ಹೇಳಿಕೆ ನೀಡಿ, ಹಿಂದೂ ಮಹಾಸಭಾದ ಕಮಲೇಶ್ ತಿವಾರಿಯವರನ್ನು ಕೊಲೆ ಮಾಡಿ ಬಂಧನಕ್ಕೊಳಗಾಗಿರುವ ಆರೋಪಿಗಳನ್ನು ಕೊಲೆ ಮಾಡಿದವರಿಗೆ 1 ಕೋಟಿ ರೂ. ಬಹುಮಾನ ನೀಡುವುದಾಗಿ ಘೋಷಿಸಿದ್ದರು. ಈ ವಿಡಿಯೋ ಹೇಳಿಕೆಯಲ್ಲಿ ಯಾರಾದರೂ ಕಮಲೇಶ್ ತಿವಾರಿಯವರನ್ನು ಕೊಲೆ ಮಾಡಿದ ಆರೋಪಿಗಳನ್ನು ಕೊಲೆ ಮಾಡಿದರೆ 1 ಕೋಟಿ ರೂ. ಬಹುಮಾನ ನೀಡುವುದಾಗಿ ತಿಳಿಸಿದ್ದರು.

  • ಕುಡಿದ ಮತ್ತಿನಲ್ಲಿ ವ್ಯಕ್ತಿಗೆ ಥಳಿಸಿದ ಟೀಂ ಇಂಡಿಯಾ ಮಾಜಿ ಆಟಗಾರ

    ಕುಡಿದ ಮತ್ತಿನಲ್ಲಿ ವ್ಯಕ್ತಿಗೆ ಥಳಿಸಿದ ಟೀಂ ಇಂಡಿಯಾ ಮಾಜಿ ಆಟಗಾರ

    – 7 ವರ್ಷದ ಮಗುವಿನ ಮೇಲೂ ಹಲ್ಲೆ

    ಮೀರತ್: ಕುಡಿದ ಮತ್ತಿನಲ್ಲಿ ವ್ಯಕ್ತಿಯನ್ನು ಥಳಿಸಿ, ಅವರ 7 ವರ್ಷದ ಮಗನ ಮೇಲೂ ಹಲ್ಲೆ ಮಾಡಿದ ಆರೋಪವೊಂದು ಟೀಂ ಇಂಡಿಯಾ ಮಾಜಿ ಆಟಗಾರ ಪ್ರವೀಣ್ ಕುಮಾರ್ ವಿರುದ್ಧ ಕೇಳಿ ಬಂದಿದೆ.

    ಉತ್ತರ ಪ್ರದೇಶದ ಮೀರತ್‍ನಲ್ಲಿ ವಾಸಿಸುತ್ತಿರುವ ಪ್ರವೀಣ್ ಕುಮಾರ್ ಅವರ ಮೇಲೆ ನೆರೆಮನೆಯ ನಿವಾಸಿ ದೀಪಕ್ ಶರ್ಮಾ ಗಂಭೀರ ಆರೋಪವನ್ನು ಮಾಡಿದ್ದು, ಕುಡಿದ ಮತ್ತಿನಲ್ಲಿ ಪ್ರವೀಣ್ ತಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೇ ಈ ಘಟನೆ ಕುರಿತು ಪೊಲೀಸರಿಗೂ ಮಾಹಿತಿ ನೀಡಿದ್ದು, ಪ್ರಕರಣ ಕುರಿತು ಸ್ಥಳೀಯ ಎಸ್‍ಪಿ ವಿಚಾರಣೆ ನಡೆಸಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ಪೊಲೀಸ್ ಮಾಹಿತಿ ಅನ್ವಯ, ಇಬ್ಬರೂ ನೆರೆಮನೆಯ ನಿವಾಸಿಗಳಾಗಿದ್ದು, ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆ ಕುರಿತು ಪಡೆದ ಹೇಳಿಕೆಯ ಆಧಾರವಾಗಿ ನಾವು ಹೆಚ್ಚಿನ ವಿಚಾರಣೆಯನ್ನು ನಡೆಸಿದ್ದಾಗಿ ಎಸ್‍ಪಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

    ದೀಪಕ್ ಶರ್ಮಾ ಪೊಲೀಸರ ವಿರುದ್ಧವೂ ಆರೋಪ ಮಾಡಿದ್ದು, ಘಟನೆಯ ಬಗ್ಗೆ ಪ್ರಕರಣವನ್ನು ದಾಖಲು ಮಾಡಿಕೊಳ್ಳಲು ಪೊಲೀಸರು ನಿರಾಕರಿಸಿದ್ದರು. ಅಂತಾರಾಷ್ಟ್ರೀಯ ಮಾಜಿ ಕ್ರಿಕೆಟ್ ಆಟಗಾರರಾದ ಕಾರಣ ಪ್ರಕರಣದ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕ ಮಾಡಲು ಹೇಳಿದ್ದರು ಎಂದು ತಿಳಿಸಿದ್ದಾರೆ.

    ದೀಪಕ್ ಶರ್ಮಾ ಹೇಳಿಕೆ ಪ್ರಕಾರ, ‘ಸಂಜೆ 3 ಗಂಟೆಯ ಸಮಯದಲ್ಲಿ ನನ್ನ ಮಗನನ್ನು ಕರೆದುಕೊಂಡು ಹೋಗಲು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದೆ. ಅಲ್ಲಿಗೆ ಬಂದ ಪ್ರವೀಣ್ ಕುಮಾರ್ ಮೊದಲು ಬಸ್ ಚಾಲಕನನ್ನು ನಿಂದಿಸಿದ್ದರು. ಆ ಬಳಿಕ ನನ್ನನ್ನು ನಿಂದಿಸಿದರು. ಆ ವೇಳೆ ಅವರು ಸ್ಥಿತಿ ಉತ್ತಮವಾಗಿರಲಿಲ್ಲ. ನನ್ನನ್ನು ಥಳಿಸಿ, ಕೈ ಮುರಿದರು. ಅಲ್ಲದೇ ನನ್ನ ಮಗನನ್ನು ಕೂಡ ತಳ್ಳಿದರು. ಇದರಿಂದ ಮಗನ ಬೆನ್ನಿಗೆ ಗಾಯವಾಗಿದೆ. ಆದರೆ ಈಗ ಪೊಲೀಸರು ಪ್ರಕರಣವನ್ನು ರಾಜಿ ಮಾಡಿಕೊಳ್ಳಲು ಒತ್ತಾಯ ಮಾಡುತ್ತಿದ್ದಾರೆ. ಅಲ್ಲದೇ ನನಗೆ ಕೊಲೆ ಬೆದರಿಕೆಗಳು ಕೂಡ ಬರುತ್ತಿದೆ ಎಂದಿದ್ದಾರೆ. ಪ್ರಕರಣದ ಬಗ್ಗೆ ಪ್ರವೀಣ್ ಇದುವರೆಗೂ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.

    2007ರಲ್ಲಿ ಪಾಕ್ ವಿರುದ್ಧ ನಡೆದ ಏಕದಿನ ಸರಣಿಯಲ್ಲಿ ಪ್ರವೀಣ್ ಕುಮಾರ್ ಟೀಂ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದರು. 2018 ಅಕ್ಟೋಬರ್ ನಲ್ಲಿ ಎಲ್ಲಾ ಮಾದರಿಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ್ದರು. 68 ಏಕದಿನ ಪಂದ್ಯಗಳನ್ನು ಆಡಿರುವ ಪ್ರವೀಣ್ 77 ವಿಕೆಟ್ ಪಡೆದಿದ್ದು, 6 ಟೆಸ್ಟ್ ಪಂದ್ಯಗಳಿಂದ 27 ವಿಕೆಟ್ ಹಾಗೂ 10 ಟಿ20 ಪಂದ್ಯಗಳಿಂದ 8 ವಿಕೆಟ್ ಪಡೆದಿದ್ದಾರೆ.

  • ಹುಬ್ಬಳ್ಳಿಯಲ್ಲಿ ಯುಪಿ – ಕರ್ನಾಟಕ ರಣಜಿ ಪಂದ್ಯ

    ಹುಬ್ಬಳ್ಳಿಯಲ್ಲಿ ಯುಪಿ – ಕರ್ನಾಟಕ ರಣಜಿ ಪಂದ್ಯ

    ಹುಬ್ಬಳ್ಳಿ: ತಮಿಳುನಾಡು ವಿರುದ್ಧ ರಣಜಿ ಪಂದ್ಯ ಗೆದ್ದು ಬೀಗುತ್ತಿರುವ ಕರ್ನಾಟಕ ರಣಜಿ ತಂಡ ಡಿಸೆಂಬರ್ 17ರಿಂದ ಉತ್ತರ ಪ್ರದೇಶ ತಂಡದ ವಿರುದ್ಧ ನಡೆಯಲಿರುವ ರಣಜಿ ಪಂದ್ಯಕ್ಕಾಗಿ ಸಜ್ಜಾಗಿದೆ.

    ಜಿಲ್ಲೆಯ ಕೆಎಸ್‍ಸಿಎ ಮೈದಾನದಲ್ಲಿ ನಡೆಯಲಿರುವ ಪಂದ್ಯದಲ್ಲಿ ಪಾಲ್ಗೊಳ್ಳಲು ಈಗಾಗಲೇ ಉತ್ತರ ಪ್ರದೇಶ ತಂಡ ಹುಬ್ಬಳ್ಳಿಗೆ ಆಗಮಿಸಿದೆ. ಕರ್ನಾಟಕ ತಂಡ ಇಂದು ಸಂಜೆ ಹುಬ್ಬಳ್ಳಿಗೆ ಆಗಮಿಸಲಿದೆ.

    ಕೆಎಸ್‍ಸಿಎ ಮೈದಾನದಲ್ಲಿ ನಡೆಯಲಿರುವ ಪಂದ್ಯಕ್ಕಾಗಿ ಈಗಾಗಲೇ ಕ್ರೀಡಾಂಗಣ ಸಿದ್ಧಗೊಂಡಿದ್ದು, ಎರಡು ತಂಡಗಳು, ಎರಡು ದಿನಗಳ ಕಾಲ ಅಭ್ಯಾಸ ನಡೆಸಲಿವೆ. ಇದೇ ಮೊದಲ ಬಾರಿಗೆ ರಣಜಿ ಪಂದ್ಯ ಒಂದರ ನೇರಪ್ರಸಾರ ಕೂಡ ನಡೆಯಲಿರುವುದು ವಿಶೇಷವಾಗಿದೆ. 2018ರ ಕೆಪಿಎಲ್ ಪಂದ್ಯಾವಳಿ ಬಳಿಕ ಪ್ರಸ್ತುತ ರಣಜಿ ಪಂದ್ಯ ನೇರ ಪ್ರಸಾರವಾಗಲಿದೆ.

    ಪಂದ್ಯ ವೀಕ್ಷಣೆಗಾಗಿ ಪೇಕ್ಷಕರ ಗ್ಯಾಲರಿ ಸಜ್ಜುಗೊಳಿಸಲಾಗುತ್ತಿದ್ದು, ಪಂದ್ಯಾವಳಿಗಾಗಿ ಪ್ರೇಕ್ಷಕರ ವೀಕ್ಷಣೆಗೆ 1500 ಆಸನಗಳ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ರಣಜಿ ಪಂದ್ಯಕ್ಕಾಗಿ ಹೊಸ ಪೆವಿಲಿಯನ್ ಸಿದ್ಧಪಡಿಸಲಾಗುತ್ತಿದ್ದು, ಡ್ರೇಸಿಂಗ್ ರೂಂ, ಕಾಮೆಂಟೆಟರ್ ಬಾಕ್ಸ್ ಸಹ ಸಿದ್ದಗೊಂಡಿದೆ.

    ಹುಬ್ಬಳ್ಳಿ ನಡೆಯಲಿರುವ ಉತ್ತರಪ್ರದೇಶ ಹಾಗೂ ಕರ್ನಾಟಕ ರಣಜಿ ಪಂದ್ಯಾವಳಿ ಹುಬ್ಬಳ್ಳಿಯಲ್ಲಿ ಮತ್ತೊಮ್ಮೆ ನಡೆಯುತ್ತಿರುವುದು ಕ್ರಿಕೆಟ್ ಕ್ರೀಡಾಭಿಮಾನಿಗಳಲ್ಲಿ ಹರ್ಷ ಮೂಡಿಸಿದೆ.

  • ಮೆಟ್ಟಿಲು ಹತ್ತುವಾಗ ಎಡವಿ ಬಿದ್ದ ಮೋದಿ

    ಮೆಟ್ಟಿಲು ಹತ್ತುವಾಗ ಎಡವಿ ಬಿದ್ದ ಮೋದಿ

    ಲಕ್ನೋ: ನಮಾಮಿ ಗಂಗಾ ಯೋಜನೆಯ ಪರಿಶೀಲನೆಗಾಗಿ ಗಂಗಾ ಘಾಟಿಗೆ ತೆರಳಿದ್ದ ವೇಳೆ ಪ್ರಧಾನಿ ನರೇಂದ್ರ ಮೋದಿಯವರು ಮೆಟ್ಟಿಲನ್ನು ಎಡವಿ ಬಿದ್ದಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿಯವರು ನಮಾಮಿ ಗಂಗಾ ಯೋಜನೆಯ ಪರಿಶೀಲನೆಗಾಗಿ ಕಾನ್ಪುರದ ಗಂಗಾ ಘಾಟಿಗೆ ತೆರಳಿದ್ದರು. ಆಗ ಮೆಟ್ಟಿಲುಗಳನ್ನು ಹತ್ತುವ ವೇಳೆ ಎಡವಿ ಬಿದ್ದಿದ್ದಾರೆ. ತಕ್ಷಣವೇ ಭದ್ರತಾ ಸಿಬ್ಬಂದಿ ಮೋದಿಯವರನ್ನು ಮೇಲಕ್ಕೆತ್ತಿದ್ದಾರೆ.

    ಪ್ರಧಾನಿ ಮೋದಿಯವರು ಶನಿವಾರ ಕಾನ್ಪುರಕ್ಕೆ ಆಗಮಿಸಿ, ಬೆಳಗ್ಗೆ ರಾಷ್ಟ್ರೀಯ ಗಂಗಾ ಮಂಡಳಿಯ ಸಭೆ ನಡೆಸಿದ್ದಾರೆ. ನಂತರ ಗಂಗಾ ಸ್ವಚ್ಛತೆ ಬಗ್ಗೆ ಖುದ್ದು ಪರಿಶೀಲಿಸಲು ನಿರ್ಧರಿಸಿದ್ದಾರೆ. ಆಗ ಗಂಗಾ ಸ್ವಚ್ಛತೆ ಪರಿಶೀಲಿಸಲು ಮುಂದಾಗಿದ್ದಾರೆ, ಈ ವೇಳೆ ಮೆಟ್ಟಿಲುಗಳನ್ನು ಹತ್ತುವಾಗ ಎಡವಿ ಬಿದ್ದಿದ್ದಾರೆ. ತಕ್ಷಣವೇ ಪ್ರಧಾನಿ ಮೋದಿಯವರನ್ನು ಅಲ್ಲಿದ್ದ ಸಿಬ್ಬಂದಿ ರಕ್ಷಿಸಿದ್ದಾರೆ.

    ಈ ವಿಡಿಯೋ ಇದೀಗ ಭಾರೀ ವೈರಲ್ ಆಗುತ್ತಿದೆ. ಕಾಂಗ್ರೆಸ್ ನಾಯಕರು ಈ ವಿಚಾರದಲ್ಲೂ ಟೀಕಿಸುತ್ತಿದ್ದು, ಆರ್ಥಿಕತೆಗೆ ಹೋಲಿಸಿ, ವಿಡಿಯೋವನ್ನು ಟ್ರೋಲ್ ಮಾಡುತ್ತಿದ್ದಾರೆ.

  • ಈರುಳ್ಳಿ ಹಾರ ಬದಲಿಸಿದ ವಧು, ವರರು

    ಈರುಳ್ಳಿ ಹಾರ ಬದಲಿಸಿದ ವಧು, ವರರು

    – ವಿಶೇಷ ಮದುವೆಯಲ್ಲಿ ಈರುಳ್ಳಿ, ಬೆಳ್ಳುಳ್ಳಿಯದ್ದೇ ಕಾರುಬಾರು

    ಲಕ್ನೋ: ದೇಶಾದ್ಯಂತ ಈರುಳ್ಳಿ ಬೆಲೆ ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಲೇ ಇದೆ. ಸಾರ್ವಜನಿಕರು ಸಹ ಈರುಳ್ಳಿ ಬಂಗಾರಕ್ಕಿಂತಲೂ ಬೆಲೆ ಬಾಳುವಂತಹದ್ದು ಎಂದು ಭಾವಿಸಿ ಸಮಾರಂಭಗಳಲ್ಲಿ ಇದರದ್ದೇ ಹಾರ, ಆಭರಣಗಳ ಮೂಲಕ ಗಮನ ಸೆಳೆಯುತ್ತಿದ್ದಾರೆ.

    ಈರುಳ್ಳಿ ಬಂಗಾರದಷ್ಟೇ ಅಮೂಲ್ಯವಾದದ್ದು ಎಂದು ಭಾವಿಸಿ, ಉತ್ತರ ಪ್ರದೇಶದ ವಾರಾಣಸಿಯಲ್ಲಿ ಮದುವೆ ವೇಳೆ ದಂಪತಿ ಈರುಳ್ಳಿ ಹಾಗೂ ಬೆಳ್ಳುಳ್ಳಿ ಹಾರಗಳನ್ನೇ ಬದಲಾಯಿಸಿಕೊಳ್ಳುವ ಮೂಲಕ ಗಮನ ಸೆಳೆದಿದ್ದಾರೆ. ಅಲ್ಲದೆ ಉಡುಗೊರೆ ನೀಡುವವರೂ ಸಹ ಹೂವಿನ ಬೊಕ್ಕೆಗಳನ್ನು ನೀಡುವ ಬದಲು ಈರುಳ್ಳಿ ಬುಟ್ಟಿಗಳನ್ನು ನೀಡಿದ್ದಾರೆ. ಇದನ್ನೂ ಓದಿ: ಅಕ್ಷಯ್‍ರಿಂದ ಪತ್ನಿಗೆ ಈರುಳ್ಳಿ ಕಿವಿಯೋಲೆ ಗಿಫ್ಟ್

    ಈರುಳ್ಳಿ ಹಾಗೂ ತರಕಾರಿ ಬೆಲೆ ಹೆಚ್ಚಿರುವುದನ್ನು ಎತ್ತಿ ತೋರಿಸಲು ದಂಪತಿ ಈ ರೀತಿ ಮಾಡಿದ್ದು, ವಿಶೇಷವೆಂದರೆ ಮದುವೆಗೆ ಆಗಮಿಸಿದ ಸಂಬಂಧಿಕರು, ಕುಟುಂಬಸ್ಥರು ಸ್ನೇಹಿತರೂ ಈರುಳ್ಳಿ ಬುಟ್ಟಿಗಳನ್ನು ಉಡುಗೊರೆಯಾಗಿ ನೀಡಿದ್ದಾರೆ.

    ಕಳೆದ 15 ದಿನಗಳಿಂದ ಈರುಳ್ಳಿ ಬೆಲೆ ಗಗನಕ್ಕೆ ತಲುಪಿದ್ದು, ಹೀಗಾಗಿ ಜನತೆ ಈರುಳ್ಳಿಯನ್ನು ಚಿನ್ನದಷ್ಟೇ ಅಮೂಲ್ಯ ಎಂದು ಪರಿಗಣಿಸಿದ್ದಾರೆ. ಅದೇ ರೀತಿ ಮದುವೆ ಮನೆಗಳಲ್ಲಿ ಸಹ ಈರುಳ್ಳಿ ಹಾಗೂ ಬೆಳ್ಳುಳ್ಳಿಯ ಆಭರಣಗಳನ್ನೇ ಧರಿಸಿ ಗಮನ ಸೆಳೆಯುತ್ತಿದ್ದಾರೆ. ಈ ದಂಪತಿ ಸಹ ಇದೇ ರೀತಿ ಮಾಡಿದ್ದು, ಹಾರ, ಗಿಫ್ಟ್ ಎಲ್ಲವನ್ನೂ ಈರುಳ್ಳಿ ಮಯವಾಗಿಸಿದ್ದಾರೆ.

    ದೇಶದ ಬಹುತೇಕ ಭಾಗಗಳಲ್ಲಿ ಈರುಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 100-150 ರೂ.ಗೆ ತಲುಪಿದೆ. ಬೆಲೆಯ ಕುರಿತು ತಿಳಿಸಲು ಜನತೆ ವಿವಿಧ ರೀತಿಯಲ್ಲಿ ಗಮನ ಸೆಳೆಯುತ್ತಿದ್ದಾರೆ. ಇತ್ತೀಚೆಗೆ ತಮಿಳುನಾಡಿಲ್ಲಿ ಸಹ ಇದೇ ರೀತಿಯ ಘಟನೆ ನಡೆದಿತ್ತು. ಮದುವೆಗೆ ತೆರಳಿದ್ದ ಸ್ನೇಹಿತರು ಈರಳ್ಳಿ ಬಕೆಟ್ ಉಡುಗೊರೆ ನೀಡುವ ಮೂಲಕ ವಿಭಿನ್ನ ಉಡುಗೊರೆ ನೀಡಿದ್ದರು. 2.5 ಕೆ.ಜಿ.ಈರುಳ್ಳಿ ನೀಡುವ ಮೂಲಕ ಮದುವೆಯಲ್ಲಿ ನೆರೆದಿದ್ದ ಜನರ ಗಮನ ಸೆಳೆದಿದ್ದರು. ಅಲ್ಲದೆ ತಮಿಳು ನಾಡಿನಲ್ಲಿ ಇನ್ನೂ ಕೆಲವೆಡೆ ಹಲವು ವ್ಯಾಪಾರಿಗಳು ಸರಕು ಕೊಂಡರೆ 1 ಕೆ.ಜಿ. ಈರುಳ್ಳಿ ಉಚಿತ ಎಂದು ಆಫರ್ ನೀಡಿದ್ದರು.