Tag: uttar pradesh

  • ಪಬ್‍ಜಿಯಲ್ಲಿ ಮಗ್ನ – ನೀರು ಎಂದು ರಾಸಾಯನಿಕ ಕುಡಿದು ಯುವಕ ಸಾವು

    ಪಬ್‍ಜಿಯಲ್ಲಿ ಮಗ್ನ – ನೀರು ಎಂದು ರಾಸಾಯನಿಕ ಕುಡಿದು ಯುವಕ ಸಾವು

    ಲಕ್ನೋ: ಮೊಬೈಲಿನಲ್ಲಿ ಪಬ್‍ಜಿ ಗೇಮ್ ಆಡುವುದರಲ್ಲಿ ಮಗ್ನನಾಗಿದ್ದ ಯುವಕನೊಬ್ಬ ನೀರು ಎಂದು ಭಾವಿಸಿ ರಾಸಾಯನಿಕವನ್ನು ಕುಡಿದು ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ.

    ಉತ್ತರ ಪ್ರದೇಶದ ಆಗ್ರಾದ ಕಂಟೋನ್ಮೆಂಟ್ ರೈಲು ನಿಲ್ದಾಣದ ಬಳಿ ಘಟನೆ ಸಂಭವಿಸಿದ್ದು, ಸಾವನ್ನಪ್ಪಿರುವ ಯುವಕನನ್ನು 22 ವರ್ಷದ ಸೌರಭ್ ಯಾದವ್ ಎಂದು ಗುರುತಿಸಲಾಗಿದೆ. ರೈಲಿನಲ್ಲಿ ಪ್ರಯಾಣಿಸುವಾಗ ನೀರು ಎಂದುಕೊಂಡು ಆಭರಣಗಳನ್ನು ಪಾಲಿಶ್ ಮಾಡುವ ರಾಸಾಯನಿಕವನ್ನು ಕುಡಿದು ಮೃತಪಟ್ಟಿದ್ದಾನೆ.

    ಈ ಕುರಿತು ಮಾಹಿತಿ ನೀಡಿದ ಆಗ್ರಾ ಕಂಟೋನ್ಮೆಂಟ್ ರೈಲು ನಿಲ್ದಾಣದ ಇನ್ಚಾರ್ಜ್ ವಿಜಯ್ ಸಿಂಗ್, ಆಭರಣಗಳ ಡೀಲರ್ ಆಗಿರುವ ತನ್ನ ಸ್ನೇಹಿತ ಸಂತೋಷ್ ಶರ್ಮಾ ಅವರೊಂದಿಗೆ ಯುವಕ ಸೌರಭ್ ಪ್ರಯಾಣಿಸುತ್ತಿದ್ದ. ಶರ್ಮಾ ಆಭರಣಗಳನ್ನು ಪಾಲಿಶ್ ಮಾಡುವ ರಾಸಾಯನಿಕವನ್ನು ತನ್ನ ಬ್ಯಾಗಿನಲ್ಲಿ ಇಟ್ಟುಕೊಂಡಿದ್ದರು. ಇವರಿಬ್ಬರೂ ಒಂದೇ ಬ್ಯಾಗನ್ನು ಹೊಂದಿದ್ದರು. ಸಂತೋಷ್ ಆಭರಣಗಳನ್ನು ಪಾಲಿಶ್ ಮಾಡುವ ವ್ಯಾಪಾರಕ್ಕಾಗಿ ಆಗ್ರಾಗೆ ತೆರಳುತ್ತಿದ್ದರು ಎಂದು ಮಾಹಿತಿ ನೀಡಿದ್ದಾರೆ.

    ವಿಚಾರಣೆ ವೇಳೆ ಸಂತೋಷ್ ಮಾಹಿತಿ ನೀಡಿ, ಪ್ರಯಾಣದ ವೇಳೆ ಸೌರಭ್ ಮೊಬೈಲಿನಲ್ಲಿ ಪಬ್‍ಜಿ ಗೇಮ್ ಆಡುವುದರಲ್ಲಿ ಬ್ಯುಸಿಯಾಗಿದ್ದ, ಈ ವೇಳೆ ಕುಡಿಯಲು ನೀರು ತೆಗೆದುಕೊಳ್ಳಲು ಹೋಗಿದ್ದಾನೆ. ಆದರೆ ತಿಳಿಯದೇ ರಾಸಾಯನಿಕದ ಬಾಟಲ್ ತೆಗೆದುಕೊಂಡಿದ್ದಾನೆ. ಬಾಟಲಿಯನ್ನು ಪರಿಶೀಲಿಸದೇ ನೀರು ಎಂದು ರಾಸಾಯನಿಕವನ್ನೇ ಕುಡಿದಿದ್ದಾನೆ ಎಂದು ಸಿಂಗ್ ತಿಳಿಸಿದ್ದಾರೆ.

    ಅಭರಣಗಳನ್ನು ಸ್ವಚ್ಛಗೊಳಿಸಲು ಹಾಗೂ ಪಾಲಿಶ್ ಮಾಡಲು ಬಳಸುವ ರಾಸಾಯನಿಕವನ್ನು ಸೌರಭ್ ಯಾದವ್ ಕುಡಿದಿದ್ದಾನೆ. ನಂತರ ಸೌರಭ್ ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗಿದ್ದು, ಮೊರೆನಾ(ಆಗ್ರಾ ಹಾಗೂ ಗ್ವಾಲಿಯರ್ ನಡುವಿನ ನಗರ) ಹತ್ತಿರದಲ್ಲಿ ಕುಸಿದು ಬಿದ್ದಿದ್ದಾನೆ. ರೈಲು ನಿಲ್ದಾಣವನ್ನು ತಲುಪುವಷ್ಟರಲ್ಲಿ ಸೌರಭ್ ಮೃತಪಟ್ಟಿದ್ದಾನೆ. ಪ್ರಕರಣದ ಕುರಿತು ಖಚಿತಪಡಿಸಿಕೊಳ್ಳಲು ಮರಣೋತ್ತರ ಪ್ರರೀಕ್ಷೆಗಾಗಿ ಕಾಯುತ್ತಿದ್ದೇವೆ ಎಂದು ಸಿಂಗ್ ವಿವರಿಸಿದ್ದಾರೆ.

  • ಝೊಮಾಟೊದಲ್ಲಿ ರುಮಾಲಿ ರೊಟ್ಟಿ ಆರ್ಡರ್ ಮಾಡಿ 91 ಸಾವಿರ ಕಳೆದುಕೊಂಡ ವಿದ್ಯಾರ್ಥಿ

    ಝೊಮಾಟೊದಲ್ಲಿ ರುಮಾಲಿ ರೊಟ್ಟಿ ಆರ್ಡರ್ ಮಾಡಿ 91 ಸಾವಿರ ಕಳೆದುಕೊಂಡ ವಿದ್ಯಾರ್ಥಿ

    – 7 ಟ್ರಾನ್ಸಾಕ್ಷನ್‍ನಲ್ಲಿ ಹಣ ಕಡಿತ
    – ಝೊಮಾಟೊ ವಿರುದ್ಧ ದೂರು ದಾಖಲು

    ಲಕ್ನೋ: ಇತ್ತೀಚೆಗೆ ಝೊಮಾಟೊ ಕಂಪನಿಯ ವಿರುದ್ಧ ಅನೇಕ ಪ್ರಕರಣಗಳು ಭಾರೀ ಸುದ್ದಿಯಾಗುತ್ತಿದೆ. ಅದರ ಸಾಲಿಗೆ ಈಗ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ರುಮಾಲಿ ರೋಟಿ ಆರ್ಡರ್ ಮಾಡಿ ಬರೋಬ್ಬರಿ 91 ಸಾವಿರ ರೂ. ಕಳೆದುಕೊಂಡ ಪ್ರಕರಣ ಕೂಡ ಸೇರಿಕೊಂಡಿದೆ

    ಉತ್ತರ ಪ್ರದೇಶದ ಗಾಜಿಯಾಬಾದ್ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿ ಸಿದ್ಧಾರ್ಥ್ ಝೊಮಾಟೊದಲ್ಲಿ ರುಮಾಲಿ ರೊಟ್ಟಿ ಆರ್ಡರ್ ಮಾಡಿ ವಂಚನೆಗೆ ಒಳಗಾಗಿದ್ದಾನೆ. ಸಿದ್ಧಾರ್ಥ್ ಇಂಜಿನಿಯರಿಂಗ್ ಪ್ರಥಮ ವರ್ಷದ ವಿದ್ಯಾರ್ಥಿಯಾಗಿದ್ದು, ಆತನ ತಂದೆ ಸುಪ್ರೀಂ ಕೋರ್ಟಿನಲ್ಲಿ ವಕೀಲರಾಗಿದ್ದಾರೆ, ತಾಯಿ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದಾರೆ. ಝೊಮಾಟೊದಲ್ಲಿ ಸಿದ್ಧಾರ್ಥ್ ರುಮಾಲಿ ರೊಟ್ಟಿ ಆರ್ಡರ್ ಮಾಡಿದ್ದನು ಅದಕ್ಕೆ ಆನ್‍ಲೈನ್‍ನಲ್ಲಿ ಹಣ ಕೂಡ ಪೇ ಮಾಡಿದ್ದನು. ಇದನ್ನೂ ಓದಿ: ಪನೀರ್ ಆರ್ಡರ್ ಮಾಡಿದ್ರೆ ಚಿಕನ್ ಡೆಲಿವರಿ: ಝೊಮ್ಯಾಟೊಗೆ 55 ಸಾವಿರ ರೂ. ದಂಡ

    ಆದರೆ ಆರ್ಡರ್ ಪ್ಲೇಸ್ ಮಾಡಿದ ಕೆಲವೇ ನಿಮಿಷದಲ್ಲಿ ಸಿದ್ಧಾರ್ಥ್ ಫೋನ್‍ಗೆ ಹಣವನ್ನು ಹಿಂದಿರುಗಿಸುತ್ತೇವೆ ನಿಮ್ಮ ಬ್ಯಾಂಕ್ ಮಾಹಿತಿ ತಿಳಿಸಿ ಎಂದು ಝೊಮಾಟೊ ಹೆಸರಿನಲ್ಲಿ ಮೆಸೇಜ್ ಬಂದಿದೆ. ಅದನ್ನು ನಂಬಿ ಸಿದ್ಧಾರ್ಥ್ ಮಾಹಿತಿ ಕಳುಹಿಸಿದ ಬಳಿಕ ಒಟ್ಟು 7 ಟ್ರಾನ್ಸಾಕ್ಷನ್‍ನಲ್ಲಿ ಬರೋಬ್ಬರಿ 91 ಸಾವಿರದ 196 ರೂಪಾಯಿ ಬ್ಯಾಂಕ್ ಅಕೌಂಟ್‍ನಿಂದ ಕಡಿತಗೊಂಡಿದೆ.

    ಈ ಟ್ರಾನ್ಸಾಕ್ಷನ್ ಬಗ್ಗೆ ಫೋನಲ್ಲಿ ಒಂದೊಂದೆ ಮೆಸೇಜ್ ಬಂದಿದ್ದನ್ನು ನೋಡಿ ಸಿದ್ಧಾರ್ಥ್ ಹೌಹಾರಿದ್ದಾನೆ. ತಕ್ಷಣ ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದಾನೆ. ಸದ್ಯ ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಮುಸ್ಲಿಂ ಡೆಲಿವರಿ ಬಾಯ್ ತಂದ ಆಹಾರ ತಿರಸ್ಕರಿಸಿದವನ ಮೇಲೆ ಬಿತ್ತು ಕೇಸ್

    ಈ ಹಿಂದೆ ಸಸ್ಯಹಾರಿ ಆರ್ಡರ್ ಮಾಡಿದ ಗ್ರಾಹಕರಿಗೆ ಝೊಮಾಟೊ ಮಾಂಸಹಾರಿ ಆಹಾರ ಡೆಲಿವರಿ ಮಾಡಿದ ಪ್ರಕರಣಗಳು ಕೂಡ ನಡೆದಿದೆ. ಈ ತಪ್ಪಿಗಾಗಿ ಝೊಮಾಟೊ ಸಾವಿರಾರು ರೂಪಾಯಿ ದಂಡವನ್ನು ಕೂಡ ಕಟ್ಟಿದೆ.

    ಪುಣೆಯ ವಕೀಲರೊಬ್ಬರು ಝೊಮಾಟೊದಲ್ಲಿ ಪನ್ನೀರ್ ಬಟರ್ ಮಸಾಲಾ ಆರ್ಡರ್ ಮಾಡಿದ್ದರು. ಆದರೆ ಅವರಿಗೆ ಪನ್ನೀರ್ ಬದಲು ಚಿಕನ್ ಬಟರ್ ಮಸಾಲಾ ಡೆಲಿವರಿ ಮಾಡಲಾಗಿತ್ತು. ಈ ಬಗ್ಗೆ ತಿಳಿಯದ ವಕೀಲರು ಅದನ್ನೇ ತಿಂದಿದ್ದರು. ಬಳಿಕ ಇದು ಪನ್ನೀರ್ ಅಲ್ಲ ಚಿಕನ್ ಎಂದು ತಿಳಿದ ಮೇಲೆ ಗ್ರಾಹಕರ ನ್ಯಾಯಾಲಯದಲ್ಲಿ ದೂರು ನೀಡಿದ್ದರು. ಆಗ ನ್ಯಾಯಾಲಯ ಝೊಮಾಟೊಗೆ 55 ಸಾವಿರ ರೂಪಾಯಿ ದಂಡ ಹಾಕಿತ್ತು. ಅಲ್ಲದೆ 45 ದಿನಗಳಲ್ಲಿ ಈ ಹಣವನ್ನು ಗ್ರಾಹಕನಿಗೆ ತಲುಪಿಸುವಂತೆ ಆದೇಶಿಸಿತ್ತು. ಇದನ್ನೂ ಓದಿ: ಝೊಮ್ಯಾಟೊದಿಂದ ಮಧ್ಯರಾತ್ರಿ ಮನೆ ತಲುಪಿದ-ಯುವಕನ ಪ್ಲಾನ್‍ಗೆ ಜನರು ಫಿದಾ

    ಈ ಆರೋಪವನ್ನು ಝೊಮಾಟೊ ತಳ್ಳಿಹಾಕಿ, ಇದು ನಮ್ಮ ತಪ್ಪಲ್ಲ. ಆರ್ಡರ್ ಕಳುಹಿಸಿದ ಹೋಟೆಲ್ ತಪ್ಪು. ಅವರು ಆರ್ಡರ್ ತಯಾರಿಸಿ ಕೊಡುವಾಗ ಎಡವಟ್ಟು ಮಾಡಿದ್ದಾರೆ ಎಂದು ವಾದಿಸಿತ್ತು. ಆದರೂ ನೀವು ಮಾಡಿದ್ದು ತಪ್ಪು ಎಂದು ನ್ಯಾಯಾಲಯ ಝೊಮಾಟೊ ಹಾಗೂ ಆಹಾರ ತಯಾರಿಸಿದ ಹೋಟೆಲ್‍ಗೆ ತಲಾ 50 ಸಾವಿರ ರೂಪಾಯಿ ದಂಡ ವಿಧಿಸಿತ್ತು.

  • ಹಣದಾಸೆಗೆ ಸುಳ್ಳು ಗ್ಯಾಂಗ್ ರೇಪ್ ಕಥೆ ಕಟ್ಟಿದ ಇಬ್ಬರು ಮಹಿಳೆಯರು ಅರೆಸ್ಟ್

    ಹಣದಾಸೆಗೆ ಸುಳ್ಳು ಗ್ಯಾಂಗ್ ರೇಪ್ ಕಥೆ ಕಟ್ಟಿದ ಇಬ್ಬರು ಮಹಿಳೆಯರು ಅರೆಸ್ಟ್

    – ಸರ್ಕಾರದಿಂದ ಧನಸಹಾಯ ಪಡೆಯಲು ಖತರ್ನಾಕ್ ಪ್ಲಾನ್

    ಲಕ್ನೋ: ಒಂದೆಡೆ ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ದೇಶಾದ್ಯಂತ ಅತ್ಯಾಚಾರದ ಪ್ರಕರಣಗಳು ಹೆಚ್ಚು ನಡೆಯುತ್ತಿದೆ. ಇನ್ನೊಂದೆಡೆ ಗಾಜಿಯಾಬಾದ್‍ನಲ್ಲಿ ನಮ್ಮ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಹಣ ದೋಚಲು ಮಹಿಳೆಯರಿಬ್ಬರು ಸುಳ್ಳು ಆರೋಪ ಮಾಡಿ ಕಂಬಿ ಎಣೆಸುತ್ತಿದ್ದಾರೆ.

    ಗಾಜಿಯಾಬಾದ್‍ನ ಮುಸ್ಸೂರಿ ಪೊಲೀಸ್ ಠಾಣಾ ವ್ಯಪ್ತಿಯಲ್ಲಿ ಈ ಘಟನೆ ನಡೆದಿದೆ. ರೇಪ್ ಸಂತ್ರಸ್ತೆಯರು ಎಂದು ಸುಳ್ಳು ಹೇಳಿ ಇಬ್ಬರು ಮಹಿಳೆಯರು ಸರ್ಕಾರದಿಂದ ಹಣ ಪಡೆಯಲು ಮಾಡಿದ್ದ ಪ್ಲಾನ್ ಈಗ ಮಕಾಡೆ ಮಲಗಿದೆ. ತಡರಾತ್ರಿ 11 ಗಂಟೆ ವೇಳೆಗೆ ಮಹಿಳೆ ಪೊಲೀಸ್ ಠಾಣೆಗೆ ಕರೆ ಮಾಡಿ, ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಹೇಳಿದ್ದಾಳೆ.

    ಈ ಬಗ್ಗೆ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ದೌಡಾಯಿಸಿದಾಗ ಮಹಿಳೆ ರಸ್ತೆ ಮೇಲೆ ಪ್ರಜ್ಞೆ ತಪ್ಪಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ತಕ್ಷಣ ಆಕೆಯನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದರು. ವಿಚಾರಣೆ ವೇಳೆ, ರಾತ್ರಿ ಲಿಫ್ಟ್ ನೀಡುವ ನೆಪದಲ್ಲಿ ಗುಂಪೊಂದು ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದೆ ಎಂದು ಮಹಿಳೆ ಹೇಳಿದ್ದಳು. ಅಲ್ಲದೆ ವೈದ್ಯಕೀಯ ಪರೀಕ್ಷೆಯನ್ನು ನಿರಾಕರಿಸಿದ್ದಳು. ಆಗ ಪೊಲೀಸರಿಗೆ ಅನುಮಾನ ಮೂಡಿ ಈ ಬಗ್ಗೆ ತನಿಖೆ ಕೈಗೊಂಡಾಗ ಮಹಿಳೆಯ ನಿಜಬಣ್ಣ ಬಯಲಾಗಿದೆ.

    ಮಹಿಳೆ ತನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಸುಳ್ಳು ದೂರು ಕೊಟ್ಟು ನಾಟಕವಾಡಿರುವುದು ಬಯಲಾಗಿದೆ. ಸರ್ಕಾರದಿಂದ ಅತ್ಯಾಚಾರ ಸಂತ್ರಸ್ತೆಗೆ ಸಿಗುವ ಧನ ಸಹಾಯವನ್ನು ಪಡೆಯೋದಕ್ಕೆ ಮಹಿಳೆ ಈ ಖತರ್ನಾಕ್ ಪ್ಲಾನ್ ಮಾಡಿರುವುದು ಬಯಲಾಗಿದೆ.

    ಮಹಿಳೆಯ ಅಸಲಿಯತ್ತು ತಿಳಿಯುತ್ತಿದ್ದಂತೆ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ. ಹಾಗೆಯೇ ಆರೋಪಿ ಜೊತೆಗೆ ಕೈಜೋಡಿಸಿದ್ದ ಇನ್ನೋರ್ವ ಮಹಿಳೆಯನ್ನು ಕೂಡ ಪೊಲೀಸರು ಬಂಧಿಸಿದ್ದಾರೆ. ದೇಶಾದ್ಯಂತ ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ, ದೌರ್ಜನ್ಯಗಳನ್ನು ತಡೆಯಲು ಸರ್ಕಾರ ಹಾಗೂ ಪೊಲೀಸ್ ಇಲಾಖೆ ಮುಂದಾಗಿದೆ. ಆದರೆ ಹೀಗೆ ಮಹಿಳೆಯರೇ ಸುಳ್ಳು ಆರೋಪ ಮಾಡಿ ಹಣ ದೋಚಲು ಮುಂದಾಗಿದ್ದು ವಿಪರ್ಯಾಸವಾಗಿದೆ.

  • ಅತ್ಯಾಚಾರ ಪ್ರಕರಣ ವಿಚಾರಣೆಗೆ 218 ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪಿಸಲು ನಿರ್ಧರಿಸಿದ ಯುಪಿ ಸರ್ಕಾರ

    ಅತ್ಯಾಚಾರ ಪ್ರಕರಣ ವಿಚಾರಣೆಗೆ 218 ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪಿಸಲು ನಿರ್ಧರಿಸಿದ ಯುಪಿ ಸರ್ಕಾರ

    ಲಕ್ನೋ: ಮಕ್ಕಳ ಮೇಲಿನ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ 218 ಫಾಸ್ಟ್ ಟ್ರ್ಯಾಕ್ ಕೋರ್ಟುಗಳನ್ನು ಸ್ಥಾಪಿಸಲು ಉತ್ತರ ಪ್ರದೇಶ ಸರ್ಕಾರ ಮುಂದಾಗಿದೆ.

    ಉತ್ತರ ಪ್ರದೇಶದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಮಕ್ಕಳ ಹಾಗೂ ಮಹಿಳೆಯರ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯಗಳನ್ನು ತಡೆಯುವ ನಿಟ್ಟಿನಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈ ನಿರ್ಧಾರ ಕೈಗೊಂಡಿದ್ದಾರೆ.

    ರಾಜ್ಯ ಕಾನೂನು ಸಚಿವ ಬ್ರಿಜೇಶ್ ಪಠಾಕ್ ಅವರು ಮಾಹಿತಿ ನೀಡಿ, ಮಕ್ಕಳು ಹಾಗೂ ಮಹಿಳೆಯರ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯಗಳನ್ನು ತಡೆಯುವ ನಿಟ್ಟಿನಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಅವರು ಈ ನಿರ್ಧಾರ ಕೈಗೊಂಡಿದ್ದಾರೆ. ಅತ್ಯಾಚಾರ ಪ್ರಕರಣಗಳನ್ನು ಹತ್ತಿಕ್ಕುವ ನಿಟ್ಟಿನಲ್ಲಿ 218 ಫಾಸ್ಟ್ ಟ್ರ್ಯಾಕ್ ಕೋರ್ಟುಗಳನ್ನು ಸ್ಥಾಪಿಸಲು ಉತ್ತರ ಪ್ರದೇಶದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇದರಲ್ಲಿ 144 ಕೋರ್ಟುಗಳು ಅತ್ಯಾಚಾರ ಪ್ರಕರಣಗಳನ್ನು ತ್ವರಿತಗತಿಯಲ್ಲಿ ವಿಚಾರಣೆ ನಡೆಸಲಿವೆ. ಉಳಿದ 74 ಕೋರ್ಟುಗಳು ಪೊಕ್ಸೊ ಕಾಯ್ದೆಯಡಿ ದಾಖಲಿಸಲಾಗುವ ಪ್ರಕರಣಗಳ ವಿಚಾರಣೆ ನಡೆಸಲಿವೆ ಎಂದು ತಿಳಿಸಿದ್ದಾರೆ.

    ಈ 218 ಕೋರ್ಟುಗಳಿಗೆ 218 ಹೆಚ್ಚುವರಿ ಸೆಷನ್ ಜಡ್ಜ್‍ಗಳನ್ನು ನೇಮಿಸಲಾಗುವುದು. ಅಲ್ಲದೆ ಅಗತ್ಯವಿರುವ ಎಲ್ಲ ಸಿಬ್ಬಂದಿಯನ್ನು ಸರ್ಕಾರ ನೇಮಿಸಲಿದೆ ಎಂದು ಅವರು ತಿಳಿಸಿದ್ದಾರೆ. ಈ ಕೋರ್ಟುಗಳನ್ನು ನಡೆಸಲು ತಗಲುವ ವೆಚ್ಚವನ್ನು ಶೇ.60ರಷ್ಟು ಕೇಂದ್ರ ಸರ್ಕಾರ ಭರಿಸಲಿದೆ. ಉಳಿದ ಶೇ.40ರಷ್ಟು ವೆಚ್ಚವನ್ನು ಯುಪಿ ಸರ್ಕಾರ ಭರಿಸಲಿದೆ. ಒಂದು ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪಿಸಲು ಸುಮಾರು 63 ಲಕ್ಷ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ ಎಂದು ಪಠಾಕ್ ತಿಳಿಸಿದರು.

  • ವರ ತಡವಾಗಿ ಮದುವೆಗೆ ಬಂದ ಎಂದು ಬೇರೆಯವನನ್ನು ಮದುವೆಯಾದ ವಧು

    ವರ ತಡವಾಗಿ ಮದುವೆಗೆ ಬಂದ ಎಂದು ಬೇರೆಯವನನ್ನು ಮದುವೆಯಾದ ವಧು

    ಲಕ್ನೋ: ವರ ಮದುವೆ ಮನೆಗೆ ತಡವಾಗಿ ಬಂದ ಎಂದು ವಧು ಬೇರೆ ವ್ಯಕ್ತಿಯನ್ನು ಮದುವೆಯಾಗಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯ ನಂಗಲ್ಜತ್ ಎಂಬ ಹಳ್ಳಿಯಲ್ಲಿ ನಡೆದಿದೆ.

    ಈ ಘಟನೆ ಒಂದು ವಾರದ ಹಿಂದೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ವರದಿಯ ಪ್ರಕಾರ ಈ ಜೋಡಿಯು ಅಕ್ಟೋಬರ್ ನಲ್ಲಿ ಸಾಮೂಹಿಕ ವಿವಾಹವೊಂದರಲ್ಲಿ ಮದುವೆಯಾಗಿದೆ. ಆದರೆ ಸಂಪ್ರಾದಯಿಕವಾಗಿ ಮತ್ತೊಮ್ಮೆ ಮದುವೆಯಾಗಲು ಡಿಸೆಂಬರ್ 4ರಂದು ಮದುವೆ ನಿಶ್ಚಯ ಮಾಡಿದ್ದಾರೆ.

    ಈ ಮದುವೆಗೆ ವಧುವಿನ ಮನೆಗೆ ಮಧ್ಯಾಹ್ನ 2 ಗಂಟೆಗೆ ಬರಬೇಕಾದ ವರನ ಕಡೆಯವರು ರಾತ್ರಿಯ ವೇಳೆಗೆ ಮದುವೆ ಮನೆಗೆ ಬಂದಿದ್ದಾರೆ. ಇದರಿಂದ ಕೋಪಗೊಂಡ ವಧುವಿನ ಕಡೆಯವರು ಗಲಾಟೆ ಮಾಡಿದ್ದಾರೆ. ಇದಕ್ಕೂ ಮುಂಚೆಯೇ ವರದಕ್ಷಿಣೆ ವಿಚಾರವಾಗಿ ವಧು ವರನ ಕುಟುಂಬದ ನಡುವೆ ಜಗಳ ಆಗಿತ್ತು. ಆ ಕಾರಣದಿಂದಲ್ಲೇ ಗಲಾಟೆಯಾಗಿ ಮದುವೆ ಮರಿದು ಬಿದ್ದಿದೆ.

    ತಡವಾಗಿ ಮದುವೆ ಮನೆಗೆ ಬಂದ ವರದ ಕಡೆಯವರನ್ನು ವಧುವಿನ ಕುಟುಂಬದವರು ಒಂದು ಮನೆಯಲ್ಲಿ ಕೂಡಿಹಾಕಿ ಥಳಿಸಿ ಅವರ ಬಳಿ ಇದ್ದ ಬೆಲೆಬಾಳುವ ವಸ್ತುಗಳನ್ನು ಕಿತ್ತುಕೊಂಡಿದ್ದಾರೆ ಎಂದು ವರನ ಕಡೆಯವರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ವಿಚಾರದ ಬಗ್ಗೆ ಮಾಹಿತಿ ನೀಡಿರುವ ಪೊಲೀಸರು, ಎರಡು ಕುಟುಂಬದವರು ರಾಜಿ ಮಾಡಿಕೊಳ್ಳಲು ಬಂದಿದ್ದರು. ಆದರೆ ವಧು ವರನೊಂದಿಗೆ ಹೋಗಲು ಇಷ್ಟವಿಲ್ಲ ಎಂದರು. ಹೀಗಾಗಿ ಎರಡೂ ಕಡೆಯಿಂದ ಯಾವುದೇ ಲಿಖಿತ ದೂರು ದಾಖಲಾಗಿಲ್ಲ ಎಂದು ಹೇಳಿದ್ದಾರೆ.

    ಈ ಘಟನೆ ರಾಜಿ ಪಂಚಾಯಿತಿ ಮೂಲಕ ಸೌಹಾರ್ದಯುತವಾಗಿ ಬಗೆಹರಿಸಲಾಗಿದೆ. ಇದಾದ ನಂತರ ವರ ತನ್ನ ಸಂಬಂಧಿಕರ ಜೊತೆ ತನ್ನ ಊರಿಗೆ ಹಿಂದುರಿಗಿದ್ದಾನೆ. ನಂತರ ವಧು ಗ್ರಾಮದ ಹಿರಿಯ ಸಮ್ಮುಖದಲ್ಲಿ ಅದೇ ಹಳ್ಳಿಯ ಬೇರೆ ವ್ಯಕ್ತಿಯನ್ನು ಮದುವೆಯಾಗಿದ್ದಾಳೆ.

  • ಉನ್ನಾವೋ ಅತ್ಯಾಚಾರ ಪ್ರಕರಣ- ನಿರ್ಲಕ್ಷ್ಯ ತೋರಿದ 7 ಪೊಲೀಸರು ಸಸ್ಪೆಂಡ್

    ಉನ್ನಾವೋ ಅತ್ಯಾಚಾರ ಪ್ರಕರಣ- ನಿರ್ಲಕ್ಷ್ಯ ತೋರಿದ 7 ಪೊಲೀಸರು ಸಸ್ಪೆಂಡ್

    ಲಕ್ನೋ: ಉನ್ನಾವೋ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ಪೊಲೀಸ್ ಅಧಿಕಾರಿಗಳನ್ನು ಉತ್ತರ ಪ್ರದೇಶ ಸರ್ಕಾರವು ಅಮಾನತುಗೊಳಿಸಿ ಆದೇಶ ಹೊರಡಿಸಿದೆ.

    ಏಳೂ ಜನ ಪೊಲೀಸರು ವೃತ್ತಿಯಲ್ಲಿ ನಿರ್ಲಕ್ಷ್ಯ ತೋರಿದ್ದಾರೆ. ಅಷ್ಟೇ ಅಲ್ಲದೆ ಉನ್ನಾವೋ ಜಿಲ್ಲೆಯಲ್ಲಿ ಅಪರಾಧ ನಿಯಂತ್ರಣ ಹಾಗೂ ಕಾನೂನು ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಅಧಿಕಾರಿಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಅಮಾನತು ಮಾಡಲಾಗುತ್ತಿದೆ ಎಂದು ಸರ್ಕಾರದ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

    ಉನ್ನಾವೋ ಜಿಲ್ಲೆಯ ಬಿಹಾರ ಪೊಲೀಸ್ ಠಾಣೆಯ ಅಧಿಕಾರಿ ಅಜಯ್ ಕುಮಾರ್ ತ್ರಿಪಾಠಿ, ಅರವಿಂದ್ ಸಿಂಗ್ ರಘುವಂಶಿ, ಶ್ರೀರಾಮ್ ತಿವಾರಿ, ಪೇದೆ ಅಬ್ದುಲ್ ವಾಸಿಮ್, ರಕ್ಷಾ ಪಂಕಜ್ ಯಾದವ್, ರಕ್ಷಿ ಮನೋಜ್ ಹಾಗೂ ರಕ್ಷಿ ಸಂದೀಪ್ ಕುಮಾರ್ ಅವರನ್ನು ಸರ್ಕಾರ ಅಮಾನತುಗೊಳಿಸಿದೆ.

    ಉನ್ನಾವೋ ಅತ್ಯಾಚಾರದ ಪ್ರಕರಣದ ಸಂತ್ರಸ್ತೆಯ ಅಂತ್ಯಸಂಸ್ಕಾರ ನಡೆದ ಕೆಲವೇ ಗಂಟೆಗಳಲ್ಲಿ ಸರ್ಕಾರ ಈ ಆದೇಶ ಹೊರಡಿಸಿದೆ. ಕೋರ್ಟಿಗೆ ಹೋಗುತ್ತಿದ್ದ 23 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು ಜೀವಂತವಾಗಿ ಸುಡಲಾಗಿತ್ತು. ಈ ಪ್ರಕರಣ ವ್ಯಾಪಕ ಚರ್ಚೆಗೆ ಕಾರಣವಾಗಿತ್ತು. ಹೀಗಾಗಿ ಸರ್ಕಾರ ಈ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

    ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದ ಉತ್ತರ ಪ್ರದೇಶದ ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಅಂತ್ಯಸಂಸ್ಕಾರ ಇಂದು ನೆರವೇರಿತು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬರುವವರೆಗೂ ಅಂತ್ಯಸಂಸ್ಕಾರ ಮಾಡುವುದಿಲ್ಲ ಎಂದು ಮೃತ ಸಂತ್ರಸ್ತೆಯ ಕುಟುಂಬಸ್ಥರು ಪಟ್ಟು ಹಿಡಿದಿದ್ದರು. ಆದರೆ ಯೋಗಿ ಆದಿತ್ಯನಾಥ್ ಅಂತ್ಯಸಂಸ್ಕಾರಕ್ಕೆ ಬರಲಿಲ್ಲ. ಹೀಗಾಗಿ ನೂರಾರು ಪೊಲೀಸರ ಭದ್ರತೆಯಲ್ಲಿ ಯುವತಿಯ ಅಂತ್ಯಸಂಸ್ಕಾರ ಮಾಡಲಾಯಿತು. ಈ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

    ಏನಿದು ಪ್ರಕರಣ?
    ಸಂತ್ರಸ್ತ ಯುವತಿ ಮೇಲೆ 2018ರಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಮಾರ್ಚ್ 5 ಮತ್ತು 6 ರಂದು ಆರೋಪಿಗಳ ವಿರುದ್ಧ ಯುವತಿ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಪ್ರಮುಖ ಆರೋಪಿ ಶುಭಂ ತ್ರಿವೇದಿ ಎಂಬಾತನನ್ನು ಬಂಧಿಸಿದ್ದರು. ಕಳೆದ ನವೆಂಬರ್ 30ರಂದು ಆರೋಪಿ ಶುಭಂಗೆ ಕೋರ್ಟ್ ಜಾಮೀನು ನೀಡಿತ್ತು. ಡಿಸೆಂಬರ್ 5ರಂದು ಸಾಕ್ಷಿ ಹೇಳಲು ಕೋರ್ಟಿಗೆ ತೆರಳುತ್ತಿದ್ದ ಸಂತ್ರಸ್ತೆ ಮೇಲೆ ಆರೋಪಿಗಳು ಹಲ್ಲೆ ನಡೆಸಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದರು.

    ಘಟನೆಯಲ್ಲಿ ಸಂತ್ರಸ್ತೆಯ ದೇಹ ಶೇ.90 ರಷ್ಟು ಹೋಗಿತ್ತು. ಇನ್ನು ಸಾಯುವ ಮುನ್ನ ಸಂತ್ರಸ್ತೆ ”ನನಗೆ ಸಾಯಲು ಇಷ್ಟವಿಲ್ಲ ನನ್ನನ್ನು ಈ ಪರಿಸ್ಥಿತಿಗೆ ತಂದವರು ಸಾಯುವುದನ್ನು ನಾನು ನೋಡಬೇಕು” ಎಂದು ಹೇಳಿಕೊಂಡಿದ್ದರು.

    ಬೆಂಕಿ ಹಚ್ಚಿದ್ರು: ಬೆಂಕಿ ಹೊತ್ತಿಕೊಂಡಿದ್ದ ಸಂತ್ರಸ್ತೆಯು ಕಾಪಾಡಿ, ಕಾಪಾಡಿ ಎಂದು ಕೂಗುತ್ತಿದ್ದಳು. ಆದರೆ ಬೆಂಕಿಯನ್ನು ಕಂಡು ನಾವು ಭಯಭೀತರಾಗಿದ್ದೇವು. ಯಾರೊಬ್ಬರೂ ರಕ್ಷಣೆಗೆ ನಿಲ್ಲದ ಪರಿಣಾಮ ಸಂತ್ರಸ್ತೆಯು ಸಂಪೂರ್ಣವಾಗಿ ಸುಟ್ಟುಹೋದಳು. ಅಷ್ಟೇ ಅಲ್ಲದೆ ಆಕೆ ಮಾಟಗಾತಿ ಎಂದು ಭಾವಿಸಿದ್ದೇವೆ. ಹೀಗಾಗಿ ಆಕೆಯ ಹಿಂದೆ ಓಡಿ ಕೊಲೆಗೆ ಯತ್ನಿಸಿದ್ದೇವು. ಸಂತ್ರಸ್ತೆಯ ದೇಹ ಶೇ.90ರಷ್ಟು ಸುಟ್ಟ ನಂತರವೂ ಆಕೆ ಸಹಾಯಕ್ಕಾಗಿ ಸುಮಾರು ಒಂದು ಕಿಲೋಮೀಟರ್ ಓಡಿ, ಸ್ವತಃ ಪೊಲೀಸರಿಗೆ ಕರೆ ಮಾಡಿದ್ದಾಳೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದರು.

  • ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಅಂತ್ಯಕ್ರಿಯೆ- ಕೊನೆಗೂ ಬರಲಿಲ್ಲ ಯೋಗಿ ಆದಿತ್ಯನಾಥ್

    ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಅಂತ್ಯಕ್ರಿಯೆ- ಕೊನೆಗೂ ಬರಲಿಲ್ಲ ಯೋಗಿ ಆದಿತ್ಯನಾಥ್

    ಲಕ್ನೋ: ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದ ಉತ್ತರ ಪ್ರದೇಶದ ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಅಂತ್ಯಸಂಸ್ಕಾರ ಇಂದು ನೆರವೇರಿತು.

    ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬರುವವರೆಗೂ ಅಂತ್ಯಸಂಸ್ಕಾರ ಮಾಡುವುದಿಲ್ಲ ಎಂದು ಮೃತ ಸಂತ್ರಸ್ತೆಯ ಕುಟುಂಬಸ್ಥರು ಪಟ್ಟು ಹಿಡಿದಿದ್ದರು. ಆದರೆ ಯೋಗಿ ಆದಿತ್ಯನಾಥ್ ಅಂತ್ಯಸಂಸ್ಕಾರಕ್ಕೆ ಬರಲಿಲ್ಲ. ಹೀಗಾಗಿ ನೂರಾರು ಪೊಲೀಸರ ಭದ್ರತೆಯಲ್ಲಿ ಯುವತಿಯ ಅಂತ್ಯಸಂಸ್ಕಾರ ಮಾಡಲಾಯಿತು. ಈ ವೇಳೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

    ಇದಕ್ಕೂ ಮುನ್ನ ಮಾಧ್ಯಮಗಳ ಜೊತೆಗೆ ಮಾತನಾಡಿದ್ದ ಸಂತ್ರಸ್ತೆಯ ಸಹೋದರಿ, ಯೋಗಿ ಆದಿತ್ಯನಾಥ್ ಅವರು ಬರುವವರೆಗೂ ಅಂತ್ಯಸಂಸ್ಕಾರ ಮಾಡಲು ಅವಕಾಶ ನೀಡುವುದಿಲ್ಲ. ಜೊತೆಗೆ ನಮ್ಮ ಕುಟುಂಬಕ್ಕೆ ಸರ್ಕಾರಿ ನೌಕರಿ ಕೊಡಬೇಕು ಹಾಗೂ ಭದ್ರತೆ ಒದಗಿಸಬೇಕು ಎಂದು ಕೇಳಿಕೊಂಡಿದ್ದರು. ಈ ಮಧ್ಯೆ ಸಂತ್ರಸ್ತೆಯ ಅಕ್ಕ, ತಮ್ಮ, ತಂಗಿಗೆ ಆರೋಪಿಗಳು ಬೆಂಕಿ ಹಚ್ಚಿದ್ದ ಜಾಗಕ್ಕೆ ಹೋಗಿ ಹೂವಿನ ಹಾರ ಹಾಕಿ ಕಣ್ಣೀರಿಟ್ಟಿದ್ದರು.

    ಏನಿದು ಪ್ರಕರಣ?:
    ಸಂತ್ರಸ್ತ ಯುವತಿ ಮೇಲೆ 2018ರಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಮಾರ್ಚ್ 5 ಮತ್ತು 6 ರಂದು ಆರೋಪಿಗಳ ವಿರುದ್ಧ ಯುವತಿ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಪ್ರಮುಖ ಆರೋಪಿ ಶುಭಂ ತ್ರಿವೇದಿ ಎಂಬಾತನನ್ನು ಬಂಧಿಸಿದ್ದರು. ಕಳೆದ ನವೆಂಬರ್ 30ರಂದು ಆರೋಪಿ ಶುಭಂಗೆ ಕೋರ್ಟ್ ಜಾಮೀನು ನೀಡಿತ್ತು. ಡಿಸೆಂಬರ್ 5ರಂದು ಸಾಕ್ಷಿ ಹೇಳಲು ಕೋರ್ಟಿಗೆ ತೆರಳುತ್ತಿದ್ದ ಸಂತ್ರಸ್ತೆ ಮೇಲೆ ಆರೋಪಿಗಳು ಹಲ್ಲೆ ನಡೆಸಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದರು.

    ಘಟನೆಯಲ್ಲಿ ಸಂತ್ರಸ್ತೆಯ ದೇಹ ಶೇ.90 ರಷ್ಟು ಹೋಗಿತ್ತು. ಇನ್ನು ಸಾಯುವ ಮುನ್ನ ಸಂತ್ರಸ್ತೆ ”ನನಗೆ ಸಾಯಲು ಇಷ್ಟವಿಲ್ಲ ನನ್ನನ್ನು ಈ ಪರಿಸ್ಥಿತಿಗೆ ತಂದವರು ಸಾಯುವುದನ್ನು ನಾನು ನೋಡಬೇಕು” ಎಂದು ಹೇಳಿಕೊಂಡಿದ್ದರು.

    ಬೆಂಕಿ ಹಚ್ಚಿದ್ರು: ಬೆಂಕಿ ಹೊತ್ತಿಕೊಂಡಿದ್ದ ಸಂತ್ರಸ್ತೆಯು ಕಾಪಾಡಿ, ಕಾಪಾಡಿ ಎಂದು ಕೂಗುತ್ತಿದ್ದಳು. ಆದರೆ ಬೆಂಕಿಯನ್ನು ಕಂಡು ನಾವು ಭಯಭೀತರಾಗಿದ್ದೇವು. ಯಾರೊಬ್ಬರೂ ರಕ್ಷಣೆಗೆ ನಿಲ್ಲದ ಪರಿಣಾಮ ಸಂತ್ರಸ್ತೆಯು ಸಂಪೂರ್ಣವಾಗಿ ಸುಟ್ಟುಹೋದಳು. ಅಷ್ಟೇ ಅಲ್ಲದೆ ಆಕೆ ಮಾಟಗಾತಿ ಎಂದು ಭಾವಿಸಿದ್ದೇವೆ. ಹೀಗಾಗಿ ಆಕೆಯ ಹಿಂದೆ ಓಡಿ ಕೊಲೆಗೆ ಯತ್ನಿಸಿದ್ದೇವು. ಸಂತ್ರಸ್ತೆಯ ದೇಹ ಶೇ.90ರಷ್ಟು ಸುಟ್ಟ ನಂತರವೂ ಆಕೆ ಸಹಾಯಕ್ಕಾಗಿ ಸುಮಾರು ಒಂದು ಕಿಲೋಮೀಟರ್ ಓಡಿ, ಸ್ವತಃ ಪೊಲೀಸರಿಗೆ ಕರೆ ಮಾಡಿದ್ದಾಳೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದರು.

  • ದೂರು ಹಿಂಪಡೆಯಲು ನಿರಾಕರಿಸಿದ ರೇಪ್ ಸಂತ್ರಸ್ತೆ ಮೇಲೆ ಆ್ಯಸಿಡ್ ದಾಳಿ

    ದೂರು ಹಿಂಪಡೆಯಲು ನಿರಾಕರಿಸಿದ ರೇಪ್ ಸಂತ್ರಸ್ತೆ ಮೇಲೆ ಆ್ಯಸಿಡ್ ದಾಳಿ

    ಲಕ್ನೋ: ಅತ್ಯಾಚಾರಿಗಳ ವಿರುದ್ಧ ನೀಡಿದ್ದ ದೂರನ್ನು ಹಿಂಪಡೆಯಲು ನಿರಾಕರಿಸಿದ್ದಕ್ಕೆ ಸಂತ್ರಸ್ತೆಯ ಮೇಲೆ ನಾಲ್ವರು ಆರೋಪಿಗಳು ಆ್ಯಸಿಡ್ ಎರಚಿ ವಿಕೃತಿ ಮೆರೆದಿದ್ದಾರೆ.

    ಉತ್ತರ ಪ್ರದೇಶದಲ್ಲಿ ದಿನೇ ದಿನೇ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದ್ದು, ಮುಜಾಫರ್‌ನಗರದಲ್ಲಿ ತನ್ನನ್ನು ಅತ್ಯಾಚಾರಗೈದ ನಾಲ್ವರು ಕಾಮುಕರ ಮೇಲೆ ಕೊಟ್ಟಿದ್ದ ದೂರನ್ನು ವಾಪಾಸ್ ಪಡೆಯಲು ಸಂತ್ರಸ್ತೆ ಒಪ್ಪದಿದ್ದಕ್ಕೆ ಆಕೆಯ ಮೇಲೆ ಆ್ಯಸಿಡ್ ದಾಳಿ ನಡೆಸಲಾಗಿದೆ. 30 ವರ್ಷದ ಮಹಿಳೆ ಮೇಲೆ ನಾಲ್ವರು ದುರುಳರು ಆ್ಯಸಿಡ್ ದಾಳಿ ನಡೆಸಿದ್ದಾರೆ. ಪರಿಣಾಮ ಶೇ. 30ರಷ್ಟು ಸಂತ್ರಸ್ತೆ ದೇಹದ ಭಾಗ ಸುಟ್ಟಿದ್ದು, ಮೀರತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಕಾಮುಕರ ಅಟ್ಟಹಾಸ- ಶಿಕ್ಷಕಿ ಮೇಲೆ ಗ್ಯಾಂಗ್ ರೇಪ್, ಲೈಂಗಿಕ ಕಿರುಕುಳಕ್ಕೆ ಯುವತಿ ಬಲಿ

    ಬುಧವಾರ ಸಂತ್ರಸ್ತೆ ಮೇಲೆ ಅತ್ಯಾಚಾರಗೈದು ನಾಲ್ವರು ಕಾಮುಕರು ಅಟ್ಟಹಾಸ ಮೆರೆದಿದ್ದರು. ಈ ಸಂಬಂಧ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದರು. ಈ ವೇಳೆ ತಮ್ಮ ವಿರುದ್ಧ ನೀಡಿರುವ ದೂರನ್ನು ವಾಪಾಸ್ ತೆಗೆದುಕೊಂಡು ನಿನ್ನ ಪಾಡಿಗೆ ಸುಮ್ಮನಾಗು ಎಂದು ಆರೋಪಿಗಳು ಸಂತ್ರಸ್ತೆಗೆ ಬೆದರಿಕೆ ಹಾಕಿದ್ದರು. ಆದರೆ ಇದ್ಯಾವುದಕ್ಕೂ ಸಂತ್ರಸ್ತೆ ಬಗ್ಗದೆ ದೂರನ್ನು ಹಿಂಪಡೆಯಲು ನಿರಾಕರಿಸಿದಾಗ, ಆರೋಪಿಗಳು ಆಕೆಯ ಮೇಲೆ ಆ್ಯಸಿಡ್ ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ದುರುಳರ ಕ್ರೌರ್ಯಕ್ಕೆ ಮತ್ತೊಂದು ಬಲಿ – ಬದುಕಲಿಲ್ಲ ಬೆಂಕಿಯಲ್ಲಿ ಬೆಂದ ಉನ್ನಾವ್ ಸಂತ್ರಸ್ತೆ

    ಈ ಬಗ್ಗೆ ಸಂತ್ರಸ್ತೆ ಪೊಲೀಸರಿಗೆ ಸಾಕಷ್ಟು ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಅತ್ಯಾಚಾರವೆಸೆಗಿರುವ ಬಗ್ಗೆ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಪೊಲೀಸರು ಪ್ರಕರಣ ಮುಚ್ಚಿ ಹಾಕಿದ್ದರು. ಆದ್ದರಿಂದ ಸಂತ್ರಸ್ತೆ ನೇರವಾಗಿ ನ್ಯಾಯಾಲಯಕ್ಕೆ ಆರೋಪಿಗಳ ವಿರುದ್ಧ ದೂರು ನೀಡಿದ್ದಾರೆ. ಇದನ್ನೂ ಓದಿ: ಮತ್ತಷ್ಟು ಎನ್‌ಕೌಂಟರ್‌ಗಳನ್ನು ಮಾಡಿ- ತೆಲಂಗಾಣ ಪೊಲೀಸ್ರಿಗೆ ಹೆಚ್ಚಾಯ್ತು ಡಿಮ್ಯಾಂಡ್

    ಈ ಬಗ್ಗೆ ಪೊಲೀಸ್ ಅಧಿಕಾರಿಯೊಬ್ಬರು ಮಾತನಾಡಿ, ಸಂತ್ರಸ್ತೆ ಮನೆಗೆ ನುಗ್ಗಿ ನಾಲ್ವರು ಆರೋಪಿಗಳು ಆ್ಯಸಿಡ್ ದಾಳಿ ನಡೆಸಿದ್ದಾರೆ. ಸದ್ಯ ಸಂತ್ರಸ್ತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತ ಘಟನೆ ನಂತರ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಆದಷ್ಟು ಬೇಗ ಆರೋಪಿಗಳನ್ನು ಪತ್ತೆಮಾಡಿ ಕೈಗೆ ಕೋಳ ಹಾಕುತ್ತೇವೆ ಎಂದು ತಿಳಿಸಿದ್ದಾರೆ.

  • ಪುರುಷರಿಂದ ಅಧಿಕಾರವನ್ನು ಕಸಿದುಕೊಳ್ಳಿ: ಪ್ರಿಯಾಂಕಾ ಗಾಂಧಿ

    ಪುರುಷರಿಂದ ಅಧಿಕಾರವನ್ನು ಕಸಿದುಕೊಳ್ಳಿ: ಪ್ರಿಯಾಂಕಾ ಗಾಂಧಿ

    ಲಕ್ನೋ: ಅಪರಾಧಗಳಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಲು ಜನಸಂಖ್ಯೆಗೆ ಅನುಗುಣವಾಗಿ ಪುರುಷರಿಂದ ಅಧಿಕಾರವನ್ನು ಕಸಿದುಕೊಳ್ಳಿ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.

    ಲಕ್ನೋಗೆ ಎರಡು ದಿನಗಳ ಭೇಟಿಗೆ ಆಗಮಿಸಿದ್ದ ಪ್ರಿಯಾಂಕಾ ಗಾಂಧಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಮಹಿಳೆಯ ಮೇಲೆ ನಡೆಯುತ್ತಿರುವ ಅಪರಾಧಗಳ ಕುರಿತು ಪ್ರತಿಕ್ರಿಯೆ ನೀಡಿದ ಪ್ರಿಯಾಂಕಾ ಗಾಂಧಿ ಅವರು, ಸಮಾಜದಲ್ಲಿ ಮಹಿಳೆಯರು ಅಧಿಕಾರ ಪಡೆಯಬೇಕು ಎಂದು ನಾನು ಬಯಸುತ್ತೇನೆ. ನನ್ನ ಸಹೋದರಿಯರಿಗೆ ನಾನು ಹೇಳುವುದು ಇಷ್ಟೇ, ರಾಜಕೀಯ ಪ್ರವೇಶ ಮಾಡಿ ಪಂಚಾಯಿತಿ, ವಿಧಾನಸಭಾ ಚುನಾವಣೆಯಲ್ಲಿ ಭಾಗಿಯಾಗಿ ಅಧಿಕಾರ ಪಡೆಯಿರಿ. ನಿಮ್ಮ ಮೇಲೆ ನಡೆಯುತ್ತಿರುವ ಅಪರಾಧಗಳಿಂದ ರಕ್ಷಿಸಿಕೊಳ್ಳಲು ಪುರುಷರಿಂದ ಅಧಿಕಾರವನ್ನು ಕಸಿದುಕೊಳ್ಳಿ ಎಂದರು.

    ಇದೇ ವೇಳೆ ಉತ್ತರ ಪ್ರದೇಶ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ಪಕ್ಷ ಮಹಿಳೆಯರ ಹಕ್ಕುಗಳಿಗಾಗಿ ಹೋರಾಟ ನಡೆಸಲಿದೆ. ಕಳೆದ 11 ತಿಂಗಳ ಅವಧಿಯಲ್ಲಿ ಉನ್ನಾವೋ ಪ್ರದೇಶವೊಂದರಲ್ಲೇ 90ಕ್ಕೂ ಹೆಚ್ಚು ಅತ್ಯಾಚಾರ ಪ್ರಕರಣಗಳು ದಾಖಲಾಗಿದೆ. ಇಲ್ಲಿನ ಸರ್ಕಾರ ಅಪರಾಧಿಗಳಿಗೆ ರಕ್ಷಣೆ ನೀಡುತ್ತಿದೆ. ಮಹಿಳೆಯರು ನ್ಯಾಯಕ್ಕಾಗಿ ಯುದ್ಧದಲ್ಲಿ ಹೋರಾಟ ನಡೆಸುವುದು ಎಷ್ಟು ಕಷ್ಟ ಎಂಬುವುದನ್ನು ನೀವೇ ಯೋಚಿಸಿ ಎಂದು ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಶಾಸಕರೊಬ್ಬರು ಆರೋಪಿಯಾಗಿರುವುದನ್ನು ಉಲ್ಲೇಖಿಸಿದರು.

  • ಯುಪಿ, ದೆಹಲಿ ಪೊಲೀಸರು ಹೈದರಾಬಾದ್ ಪೊಲೀಸರನ್ನು ಪ್ರೇರಣೆಯಾಗಿ ಸ್ವೀಕರಿಸಿ: ಮಾಯಾವತಿ

    ಯುಪಿ, ದೆಹಲಿ ಪೊಲೀಸರು ಹೈದರಾಬಾದ್ ಪೊಲೀಸರನ್ನು ಪ್ರೇರಣೆಯಾಗಿ ಸ್ವೀಕರಿಸಿ: ಮಾಯಾವತಿ

    ಲಕ್ನೋ: ಹೈದರಾಬಾದಿನ ದಿಶಾ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ಎನ್‍ಕೌಂಟರ್ ಬಗ್ಗೆ ಬಹುಜನ್ ಸಮಾಜ್ ಪಕ್ಷ(ಬಿಎಸ್‍ಪಿ) ಮುಖ್ಯಸ್ಥೆ ಮಾಯಾವತಿ ಪ್ರತಿಕ್ರಿಯಿಸಿ, ದೆಹಲಿ, ಉತ್ತರ ಪ್ರದೇಶ ಪೊಲೀಸರು ಹೈದರಾಬಾದ್ ಪೊಲೀಸರನ್ನು ಪ್ರೇರಣೆಯಾಗಿ ಸ್ವೀಕರಿಸಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಮಾಯಾವತಿ ಅವರು ಹೈದರಾಬಾದ್ ಪೊಲೀಸರಿಗೆ ಅಭಿನಂದನೆ ತಿಳಿಸಿದರು. ಜೊತೆಗೆ ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಗೆ ಸಾಕಷ್ಟು ಒತ್ತು ಕೊಟ್ಟಿಲ್ಲವೆಂದು ಯೋಗಿ ಸರ್ಕಾರದ ವಿರುದ್ಧ ಕಿಡಿಕಾರಿದರು. ಉತ್ತರ ಪ್ರದೇಶ ಮತ್ತು ದೆಹಲಿ ಪೊಲೀಸ್ ಹೈದರಾಬಾದ್ ಪೊಲೀಸರನ್ನು ಪ್ರೇರಣೆಯಾಗಿ ತೆಗೆದುಕೊಳ್ಳಬೇಕು. ಆದರೆ ದುರಾದೃಷ್ಟವಶಾತ್ ಇಲ್ಲಿ ಕ್ರಿಮಿನಲ್‍ನಳನ್ನು ರಾಜ್ಯದ ಅತಿಥಿಗಳ ರೀತಿ ಸತ್ಕರಿಸುತ್ತಿದ್ದಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ಕಳೆದ 7 ವರ್ಷಗಳಿಂದ ಪ್ರತಿದಿನವೂ ಸಾಯುತ್ತಿದ್ದೇವೆ: ನಿರ್ಭಯಾ ತಾಯಿ

    ಈಗ ಉತ್ತರ ಪ್ರದೇಶದಲ್ಲಿ ಜಂಗಲ್ ರಾಜ್ ನಡೆಯುತ್ತಿದೆ. ಮುಂದೆ ಈ ಮನೋಭಾವ ಬದಲಾಗುತ್ತದೆಂದು ಆಶಿಸುತ್ತೇನೆ. ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ, ಅತ್ಯಚಾರ ಪ್ರಕರಣಗಳು ಹೆಚ್ಚಾಗುತ್ತಿದೆ. ಅದರೆ ರಾಜ್ಯ ಸರ್ಕಾರ ನಿದ್ರೆ ಮಾಡುತ್ತಿದೆ ಎಂದು ಕಿಡಿಕಾಡಿದರು. ಇದನ್ನೂ ಓದಿ: ‘ಹತ್ಯಾಚಾರಿ’ಗಳ ಎನ್‍ಕೌಂಟರ್- ಪೊಲೀಸರಿಗೆ ಸ್ಟಾರ್ಸ್ ಶಬ್ಬಾಶ್

    ಇಂದು ಹೈದರಾಬಾದ್-ಬೆಂಗಳೂರು ಹೈವೇ 44ರಲ್ಲಿ ಸೈಬರಾಬಾದ್ ಪೊಲೀಸರು ದಿಶಾ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳನ್ನು ಎನ್‍ಕೌಂಟರ್ ಮಾಡಿದ್ದಾರೆ. ಹುಬ್ಬಳ್ಳಿ ಮೂಲದ ಪೊಲೀಸ್ ಅಧಿಕಾರಿ ವಿಶ್ವನಾಥ್ ಸಜ್ಜನರ್ ಅವರ ನೇತೃತ್ವದಲ್ಲಿ ಪೊಲೀಸರು ಕಾಮುಕರು ಪಶುವೈದ್ಯೆಯನ್ನು ಬೆಂಕಿ ಹಚ್ಚಿ ಸುಟ್ಟ ಸ್ಥಳದಲ್ಲೇ ಅತ್ಯಾಚಾರಿಗಳ ಮೇಲೆ ಫೈರಿಂಗ್ ಮಾಡಿ ಹತ್ಯೆ ಮಾಡಿದ್ದಾರೆ.

    ಪಶುವೈದ್ಯೆಯನ್ನು ಸುಟ್ಟ ಘಟನಾ ಸ್ಥಳ ಮಹಜರು ವೇಳೆ ಆರೋಪಿಗಳು ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ನಾಲ್ವರು ಅತ್ಯಾಚಾರಿಗಳ ಮೇಲೆ ಎನ್‍ಕೌಂಟರ್ ಮಾಡಿದ್ದಾರೆ. ಇದನ್ನೂ ಓದಿ: ಕಾಮುಕರ ಹುಟ್ಟಡಗಿಸಿದ ವೀರ ಕನ್ನಡಿಗ – ಎನ್‌ಕೌಂಟರ್‌ಗೆ ವಿಶ್ವನಾಥ್ ಸಜ್ಜನರ್ ನೇತೃತ್ವ

    ಸೈಬರಾಬಾದ್ ಪೊಲೀಸರ ಈ ಕಾರ್ಯಕ್ಕೆ ಇಡೀ ದೇಶವೇ ಮೆಚ್ಚುಗೆ ವ್ಯಕ್ತಪಡಿಸುತ್ತಿದೆ. ಸಿನಿಮಾ ಕಲಾವಿದರು, ರಾಜಕಾರಣಿಗಳು, ಸಾರ್ವಜನಿಕರು ಪೊಲೀಸರಿಗೆ ಸಲಾಂ ಎಂದಿದ್ದಾರೆ. ಬೆಳ್ಳಂಬೆಳಗ್ಗೆ ಒಳ್ಳೆ ಸುದ್ದಿ ಕೊಟ್ಟಿದ್ದೀರಿ, ಅತ್ಯಾಚಾರಿಗಳನ್ನು ಹತ್ಯೆಗೈದಿದ್ದು ಸರಿಯಾಗಿದೆ. ಇದು ಬೇರೆಯವರಿಗೆ ಪಾಠವಾಗಲಿದೆ ಎಂದು ಪೊಲೀಸರಿಗೆ ಧನ್ಯವಾದ ತಿಳಿಸುತ್ತಿದ್ದಾರೆ.

    ಏನಿದು ಪ್ರಕರಣ?
    ನವೆಂಬರ್ 27ರಂದು 26 ವರ್ಷದ ಪಶುವೈದ್ಯೆಯನ್ನು ಸ್ಕೂಟಿ ಪಂಕ್ಚರ್ ಹಾಕಿಸಿಕೊಡುವ ನೆಪದಲ್ಲಿ ಲಾರಿ ಚಾಲಕ ಮೊಹಮ್ಮದ್ ಪಾಷಾ, ಮೂವರು ಕ್ಲೀನರ್ ಗಳಾದ ನವೀನ್, ಚೆನ್ನಕೇಶವುಲು ಮತ್ತು ಶಿವಾ ಸೇರಿ ಕಿಡ್ನಾಪ್ ಮಾಡಿ, ಸಾಮೂಹಿಕ ಅತ್ಯಾಚಾರ ಮಾಡಿದ್ದರು. ಅಲ್ಲದೆ ವೈದ್ಯೆಯ ಮೃತ ದೇಹವನ್ನು ಸುಟ್ಟು ಹಾಕಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಸೈಬರಾಬಾದ್ ಪೊಲೀಸರು, ನಾಲ್ವರು ಮೃಗೀಯ ಮನುಷ್ಯರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯ ಈ ಕೃತ್ಯಕ್ಕೆ ಇವರನ್ನು ಏಳು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿತ್ತು.

    ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಗಳು ಪ್ರಕರಣಕ್ಕೆ ಸಂಬಂಧಿಸಿದಂತೆ ಅನೇಕ ವಿಚಾರಗಳನ್ನು ಬಹಿರಂಗಪಡಿಸಿದ್ದರು. ಸಾಮೂಹಿಕ ಅತ್ಯಾಚಾರದ ಬಳಿಕ ಪಶುವೈದ್ಯೆ ಓಡಿಹೋಗಬಾರದು ಎನ್ನುವ ಉದ್ದೇಶದಿಂದ ಅವಳ ಕೈ ಕಾಲುಗಳನ್ನು ಕಟ್ಟಿದ್ದೆವು. ಅತ್ಯಾಚಾರದ ನಂತರವೂ ಸಂತ್ರಸ್ತೆಗೆ ಮದ್ಯಪಾನ ಮಾಡುವಂತೆ ಒತ್ತಾಯಿಸಿದ್ದೆವು. ಸಂತ್ರಸ್ತೆ ಪ್ರಜ್ಞೆ ತಪ್ಪಿದಾಗ ಆಕೆಯನ್ನು ಸೇತುವೆಯ ಕೆಳಗೆ ಸಾಗಿಸಲಾಗಿತ್ತು. ನಂತರ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ವಿ ಎಂದು ಮುಖ್ಯ ಆರೋಪಿ ಮೊಹಮ್ಮದ್ ಪಾಷಾ, ಪೊಲೀಸರ ಮುಂದೆ ತಪ್ಪು ಒಪ್ಪಿಕೊಂಡಿದ್ದಾನೆ ಎಂದು ಮೂಲಗಳನ್ನು ಆಧರಿಸಿ ಮಾಧ್ಯಮ ವರದಿ ಮಾಡಿತ್ತು.

    ಬೆಂಕಿ ಹಚ್ಚುವುದಕ್ಕೂ ಮುನ್ನ ಪಶುವೈದ್ಯೆ ಮೃತಪಟ್ಟಿದ್ದಾಳೆ ಎಂದು ಭಾವಿಸಿದ್ದೇವು. ಆದರೆ ಬೆಂಕಿಯ ಹಚ್ಚಿದಾಗ ಅವಳು ಕಿರುಚಲು ಪ್ರಾರಂಭಿಸಿದಳು. ಹೀಗಾಗಿ ಸಂತ್ರಸ್ತೆ ಸಾಯುವವರೆಗೂ ನೋಡುತ್ತಲೇ ಇದ್ದೆವು. ಏಕೆಂದರೆ ಒಂದು ವೇಳೆ ಆಕೆ ಜೀವಂತವಾಗಿ ಉಳಿದರೆ ಪೊಲೀಸರು ನಮ್ಮನ್ನು ಹಿಡಿಯುತ್ತಾರೆ ಎನ್ನುವ ಭಯ ನಮ್ಮಲ್ಲಿತ್ತು ಎಂದು ಆರೋಪಿ ಪಾಷಾ ಬಾಯಿ ಬಿಟ್ಟಿದ್ದನು.