Tag: uttar pradesh

  • ಸಂಪೂರ್ಣ ಅಪರಾಧ ಮುಕ್ತ ರಾಜ್ಯವನ್ನಾಗಿಸಲು ರಾಮನೂ ಭರವಸೆ ನೀಡುತ್ತಿರಲಿಲ್ಲ – ಯುಪಿ ಮಂತ್ರಿ

    ಸಂಪೂರ್ಣ ಅಪರಾಧ ಮುಕ್ತ ರಾಜ್ಯವನ್ನಾಗಿಸಲು ರಾಮನೂ ಭರವಸೆ ನೀಡುತ್ತಿರಲಿಲ್ಲ – ಯುಪಿ ಮಂತ್ರಿ

    ಲಕ್ನೋ: ಪ್ರಸ್ತುತ ಸನ್ನಿವೇಶದಲ್ಲಿ ಶ್ರೀರಾಮನೂ ಸಹ ಸಂಪೂರ್ಣ ಅಪರಾಧ ಮುಕ್ತ ರಾಜ್ಯವನ್ನಾಗಿಸುವ ಭರವಸೆ ನೀಡುತ್ತಿರಲಿಲ್ಲ ಎಂಬ ಉತ್ತರ ಪ್ರದೇಶ ಸರ್ಕಾರದ ಸಚಿವರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ತೆಲಂಗಾಣದ ಪಶುವೈದ್ಯೆ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ನಡೆದ ಬೆನ್ನಲ್ಲೇ ಉತ್ತರ ಪ್ರದೇಶದ ಉನ್ನಾವ್‍ನಲ್ಲಿ ಅದೇ ರೀತಿಯ ಪ್ರಕರಣ ಜರುಗಿತ್ತು. ಅತ್ಯಾಚಾರಗೈದಿದ್ದಲ್ಲದೆ ಮಹಿಳೆ ಮೇಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿದ್ದರು.

    ಈ ಕುರಿತು ಆಹಾರ ಮತ್ತು ನಾಗರಿಕ ಸರಬರಾಜು ಖಾತೆಯ ಸಚಿವ ರಣವೇಂದ್ರ ಪ್ರತಾಪ್ ಸಿಂಗ್ ಮಾತನಾಡಿ, ಅಪರಾಧಿಗಳು ಯಾರೇ ಆಗಿದ್ದರೂ ಶಿಕ್ಷೆ ವಿಧಿಸಬೇಕು. ಈ ಕುರಿತು ರಾಜಕೀಯ ಮಾಡಬಾರದು. ಉನ್ನಾವ್ ಪ್ರಕರಣಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಸ್ಪಷ್ಟಪಡಿಸಲು ಬಯಸುತ್ತೇನೆ. ಈ ಸಂದರ್ಭದಲ್ಲಿ ಶ್ರೀ ರಾಮನಿದ್ದಿದ್ದರೂ ಅಪರಾಧ ಮುಕ್ತ ಸಮಾಜವನ್ನು ನಿರ್ಮಿಸುವ ಕುರಿತು ಶೇ.100ರಷ್ಟು ಭರವಸೆ ನೀಡುತ್ತಿರಲಿಲ್ಲ. ಅಪರಾಧಿಗಳು ತಪ್ಪನ್ನು ಒಪ್ಪಿಕೊಂಡಿದ್ದಾರೆ. ಇದಕ್ಕೆ ಪ್ರತಿಯಾಗಿ ಜೈಲು ಶಿಕ್ಷೆ ಅನುಭವಿಸುತ್ತಾರೆ. ಇದೀಗ ಉತ್ತರ ಪ್ರದೇಶದಲ್ಲಿ ಯಾವುದೇ ರೀತಿಯ ಭಯದ ವಾತಾವರಣವಿಲ್ಲ ಎಂದು ಹೇಳಿದ್ದಾರೆ.

    ಕೋರ್ಟಿಗೆ ಹೋಗುತ್ತಿದ್ದ 23 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಸಂತ್ರಸ್ತೆಗೆ ಬೆಂಕಿ ಹಚ್ಚಿ, ಕೊಲೆಗೆ ಯತ್ನಿಸಿದ ಅಮಾನವೀಯ ಘಟನೆ ಉತ್ತರ ಪ್ರದೇಶ ಉನ್ನಾವೋದಲ್ಲಿ ನಡೆದಿದೆ. ಇದನ್ನೂ ಓದಿ: ಅತ್ಯಾಚಾರಿಗಳನ್ನು ಗಲ್ಲಿಗೇರಿಸುವುದಕ್ಕೆ ನನ್ನ ಸಹಮತವಿಲ್ಲ – ಪವನ್ ಕಲ್ಯಾಣ್

    ಸಂತ್ರಸ್ತೆಯ ದೇಹ ಶೇ.90ರಷ್ಟು ಸುಟ್ಟ ನಂತರವೂ ಸಹಾಯಕ್ಕಾಗಿ ಸುಮಾರು ಒಂದು ಕಿಲೋಮೀಟರ್ ಓಡಿ, ಸ್ವತಃ ಅವಳೇ ಪೊಲೀಸರಿಗೆ ಕರೆ ಮಾಡಿದ್ದಾಳೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ. ಈ ಅಮಾನವೀಯ ಘಟನೆಯ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಮಹಿಳೆಯು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾಳೆ.

    ಈ ಪ್ರಕರಣದ ಪ್ರತ್ಯಕ್ಷದರ್ಶಿ ರವೀಂದ್ರ ಪ್ರಕಾಶ್ ಪ್ರಮುಖ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಬೆಂಕಿ ಹೊತ್ತಿಕೊಂಡಿದ್ದ ಸಂತ್ರಸ್ತೆಯು ಕಾಪಾಡಿ, ಕಾಪಾಡಿ ಎಂದು ಕೂಗುತ್ತಿದ್ದಳು. ಆದರೆ ಬೆಂಕಿಯನ್ನು ಕಂಡು ನಾವು ಭಯಭೀತರಾಗಿದ್ದೇವು. ಯಾರೊಬ್ಬರೂ ರಕ್ಷಣೆಗೆ ನಿಲ್ಲದ ಪರಿಣಾಮ ಸಂತ್ರಸ್ತೆಯು ಸಂಪೂರ್ಣವಾಗಿ ಸುಟ್ಟುಹೋದಳು ಎಂದು ತಿಳಿಸಿದರು. ಇದನ್ನೂ ಓದಿ: ಶೇ.90ರಷ್ಟು ದೇಹ ಸುಟ್ಟ ನಂತರವೂ 1 ಕಿ.ಮೀ ಓಡಿ ಅತ್ಯಾಚಾರ ಸಂತ್ರಸ್ತೆಯಿಂದ 100ಕ್ಕೆ ಕರೆ

    ಮಹಿಳೆಯನ್ನು ಕೆಲ ತಿಂಗಳ ಹಿಂದೆ ಅತ್ಯಾಚಾರ ಮಾಡಲಾಗಿತ್ತು. ಮಾರ್ಚ್‍ನಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು. ನಂತರ ಕುಟುಂಬದವರ ಒತ್ತಾಯದ ಮೇರೆಗೆ ಮಹಿಳೆಯು ಪ್ರಮುಖ ಆರೋಪಿಯನ್ನೇ ವಿವಾಹವಾಗಿದ್ದಳು. ಮದುವೆ ನಂತರ ಒಬ್ಬರೂ ಬೇರೆ ಮನೆ ಮಾಡಿದ್ದು, ಈ ವೇಳೆ ಆರೋಪಿಯು ಈಕೆಯನ್ನು ಪತ್ನಿಯಾಗಿ ಸ್ವೀಕರಿಸಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಪ್ರಕರಣ ಇಡಿ ಉತ್ತರ ಪ್ರದೇಶದಲ್ಲಿ ತೀವ್ರಸಂಚಲನವನ್ನೇ ಮೂಡಿಸಿದ್ದು, ಮುಖ್ಯಮಂತ್ರಿ ಆದಿತ್ಯನಾಥ್ ಸಹ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

  • ಶೇ.90ರಷ್ಟು ದೇಹ ಸುಟ್ಟ ನಂತರವೂ 1 ಕಿ.ಮೀ ಓಡಿ ಅತ್ಯಾಚಾರ ಸಂತ್ರಸ್ತೆಯಿಂದ 100ಕ್ಕೆ ಕರೆ

    ಶೇ.90ರಷ್ಟು ದೇಹ ಸುಟ್ಟ ನಂತರವೂ 1 ಕಿ.ಮೀ ಓಡಿ ಅತ್ಯಾಚಾರ ಸಂತ್ರಸ್ತೆಯಿಂದ 100ಕ್ಕೆ ಕರೆ

    – ಕೋರ್ಟಿಗೆ ಹೋಗುತ್ತಿದ್ದ ಸಂತ್ರಸ್ತೆಯ ಕೊಲೆಗೆ ಯತ್ನ

    ಲಕ್ನೋ: ಕೋರ್ಟಿಗೆ ಹೋಗುತ್ತಿದ್ದ 23 ವರ್ಷದ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಗೆ ಬೆಂಕಿ ಹಚ್ಚಿ, ಕೊಲೆಗೆ ಯತ್ನಿಸಿದ ಅಮಾನವೀಯ ಘಟನೆ ಉತ್ತರ ಪ್ರದೇಶ ಉನ್ನಾವೋದಲ್ಲಿ ನಡೆದಿದೆ.

    ಸಂತ್ರಸ್ತೆಯ ದೇಹ ಶೇ.90ರಷ್ಟು ಸುಟ್ಟ ನಂತರವೂ ಆಕೆ ಸಹಾಯಕ್ಕಾಗಿ ಸುಮಾರು ಒಂದು ಕಿಲೋಮೀಟರ್ ಓಡಿ, ಸ್ವತಃ ಪೊಲೀಸರಿಗೆ ಕರೆ ಮಾಡಿದ್ದಾಳೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ. ಈ ಅಮಾನವೀಯ ಘಟನೆಯ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಮಹಿಳೆಯು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾಳೆ. ಇದನ್ನೂ ಓದಿ: ಅತ್ಯಾಚಾರಿಗಳನ್ನು ಗಲ್ಲಿಗೇರಿಸುವುದಕ್ಕೆ ನನ್ನ ಸಹಮತವಿಲ್ಲ – ಪವನ್ ಕಲ್ಯಾಣ್

    ಈ ಪ್ರಕರಣದ ಪ್ರತ್ಯಕ್ಷದರ್ಶಿ ರವೀಂದ್ರ ಪ್ರಕಾಶ್ ಪ್ರಮುಖ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ಬೆಂಕಿ ಹೊತ್ತಿಕೊಂಡಿದ್ದ ಸಂತ್ರಸ್ತೆಯು ಕಾಪಾಡಿ, ಕಾಪಾಡಿ ಎಂದು ಕೂಗುತ್ತಿದ್ದಳು. ಆದರೆ ಬೆಂಕಿಯನ್ನು ಕಂಡು ನಾವು ಭಯಭೀತರಾಗಿದ್ದೇವು. ಯಾರೊಬ್ಬರೂ ರಕ್ಷಣೆಗೆ ನಿಲ್ಲದ ಪರಿಣಾಮ ಸಂತ್ರಸ್ತೆಯು ಸಂಪೂರ್ಣವಾಗಿ ಸುಟ್ಟುಹೋದಳು. ಅಷ್ಟೇ ಅಲ್ಲದೆ ಆಕೆ ಮಾಟಗಾತಿ ಎಂದು ಭಾವಿಸಿದ್ದೇವೆ. ಹೀಗಾಗಿ ಆಕೆಯ ಹಿಂದೆ ಓಡಿ ಕೋಲೆಗೆ ಯತ್ನಿಸಿದ್ದೇವು ಎಂದು ತಿಳಿಸಿದ್ದಾರೆ.

    ಶೇ.90ರಷ್ಟು ಸುಟ್ಟ ನಂತರವೂ ಸಂತ್ರಸ್ತೆ ಸಹಾಯಕ್ಕಾಗಿ ಸುಮಾರು ಒಂದು ಕಿಲೋಮೀಟರ್ ಓಡಿದಳು. ಮಹಿಳೆಯ ಗುರುತು ತಿಳಿದ ನಂತರವೂ ನಮ್ಮ ಭಯ ಕಡಿಮೆಯಾಗಲಿಲ್ಲ. ಆಕೆಯಿಂದ ದೂರವೇ ನಿಂತಿದ್ದೇವು. ಈ ವೇಳೆ ನಮ್ಮ ಬಳಿ ಫೋನ್ ಪಡೆದು, ಸ್ವತಃ 100 ನಂಬರ್‌ಗೆ ಕರೆ ಮಾಡಿ ಘಟನೆಯ ಕುರಿತು ಪೊಲೀಸರಿಗೆ ಮಾಹಿತಿ ನೀಡಿದಳು. ಸಂತ್ರಸ್ತೆಯೊಂದಿಗೆ ಮಾತನಾಡಿದ ತಕ್ಷಣವೇ ಪೊಲೀಸರು ಸ್ಥಳಕ್ಕೆ ತಲುಪಿದರು ಎಂದು ರವೀಂದ್ರ ಪ್ರಕಾಶ್ ಹೇಳಿದ್ದಾರೆ.

    ಏನಿದು ಪ್ರಕರಣ: ಮಹಿಳೆಯ ಮೇಲೆ ಇಬ್ಬರು ಸಾಮೂಹಿಕ ಅತ್ಯಾಚಾರ ಎಸಗಿದ್ದರು. ಈ ಸಂಬಂಧ ಸಂತ್ರಸ್ತೆ ಪೊಲೀಸರಿಗೆ ದೂರು ನೀಡಿದ್ದಳು. ಕೋರ್ಟ್  ವಿಚಾರಣೆಗೆ ಹಾಜರಾಗಲು ಮಹಿಳೆ ಹೋಗುತ್ತಿದ್ದಳು. ಈ ವೇಳೆ ಆಕೆಯ ಮೇಲೆ ಹಲ್ಲೆ ಮಾಡಿದ ಆರೋಪಿಗಳು, ಬೆಂಕಿ ಹಚ್ಚಿದ್ದಾರೆ.

    ಸಂತ್ರಸ್ತೆಯ ಹೇಳಿಕೆ ಆಧಾರದ ಮೇಲೆ ಪೊಲೀಸರು ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ಆರಂಭಿಸಿದ್ದಾರೆ. ಈಗಾಗಲೇ ಇಬ್ಬರನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.

  • 10ನೇ ತರಗತಿ ಬಾಲಕಿ ಮೇಲೆ ಗ್ಯಾಂಗ್ ರೇಪ್ – ಪೊಲೀಸ್ ಮಗನ ಜೊತೆ ಸಿಆರ್​ಪಿಎಫ್​  ಯೋಧನಿಂದ ಕೃತ್ಯ

    10ನೇ ತರಗತಿ ಬಾಲಕಿ ಮೇಲೆ ಗ್ಯಾಂಗ್ ರೇಪ್ – ಪೊಲೀಸ್ ಮಗನ ಜೊತೆ ಸಿಆರ್​ಪಿಎಫ್​ ಯೋಧನಿಂದ ಕೃತ್ಯ

    – ಪೋಲೀಸ್ ಲೋಗೋ ಇರುವ ಕಾರನ್ನೇ ಬಳಸಿ ಕೃತ್ಯ

    ಲಕ್ನೋ: ಸಿಆರ್​ಪಿಎಫ್​ ಯೋಧ ಹಾಗೂ ನಿವೃತ್ತ ಪೊಲೀಸ್ ಅಧಿಕಾರಿ ಮಗ ಸೇರಿ ನಾಲ್ವರು 10ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

    ಉತ್ತರ ಪ್ರದೇಶದ ಮಿರ್ಜಾಪುರದ ಹಳಿಯಾ ಎಂಬಲ್ಲಿ ಘಟನೆ ನಡೆದಿದ್ದು, ಆರೋಪಿಗಳಾದ ಜೈಲರ್ ಮಗ ಜೈ ಪ್ರಕಾಶ್, ಸುಲ್ತಾನ್‍ಪುರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಆರ್​ಪಿಎಫ್​ ಕಾನ್ಸ್‍ಟೇಬಲ್ ಮಹೇಂದ್ರ ಕುಮಾರ್ ಯಾದವ್, ಲವ್ ಕುಮಾರ್ ಪಾಲ್, ಗಣೇಶ್ ಪ್ರಸಾದ್ ಬಂಧಿತ ಆರೋಪಿಗಳು. ಪೊಲೀಸ್ ಲೋಗೋ ಇರುವ ಕಾರಿನಲ್ಲೇ ವಿದ್ಯಾರ್ಥಿನಿಯನ್ನು ಅಪಹರಿಸಿ ಕೃತ್ಯ ಎಸಗಿದ್ದಾರೆ.

    ಹಳಿಯಾ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್‌ ದೇವಿವರ್ ಶುಕ್ಲಾ ಈ ಕುರಿತು ಮಾಹಿತಿ ನೀಡಿ, ಆರೋಪಿಗಳ ವಿರುದ್ಧ ಅಪಹರಣ ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೊಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

    ಆರೋಪಿಗಳು ಹಳಿಯಾದ ನಿರ್ಜನ ಪ್ರದೇಶದಲ್ಲಿ 15 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ನಾಲ್ವರು ಆರೋಪಿಗಳ ಪೈಕಿ ಒಬ್ಬ ನಿವೃತ್ತ ಜೈಲರ್ ಬ್ರಿಜ್‍ಲಾಲ್ ಮೌರ್ಯ ಅವರ ಮಗ ಜೈ ಪ್ರಕಾಶ್ ಮೌರ್ಯ ಆಗಿದ್ದಾನೆ ಎಂದು ವಿವರಿಸಿದರು.

    ಜೈ ಪ್ರಕಾಶ್ ಸಹೋದರಿ ಮದುವೆಯ ನಂತರ ಹಳಿಯಾದಲ್ಲಿಯೇ ವಾಸವಿದ್ದು, ಈತ ಪದೇ ಪದೆ ಸಹೋದರಿ ಮನೆಗೆ ಭೇಟಿ ನೀಡುತ್ತಿದ್ದ. ಆಗ ಕೆಲವು ತಿಂಗಳ ಹಿಂದೆ ಬಾಲಕಿಯನ್ನು ಪರಿಚಯ ಮಾಡಿಕೊಂಡಿದ್ದ ಎಂದು ಶುಕ್ಲಾ ಮಾಹಿತಿ ನೀಡಿದ್ದಾರೆ.

    ಸಂತ್ರಸ್ತೆಯ ತಂದೆ ಈ ಕುರಿತು ಪ್ರತಿಕ್ರಿಯಿಸಿ, ಜೈ ಶಂಕರ್ ಬಾಲಕಿಯ ಮೊಬೈಲ್‍ಗೆ ಕರೆ ಮಾಡಿದ್ದಾನೆ. ನಂತರ ಊರಿನ ಹೊರಗಡೆ ನನ್ನನ್ನು ಭೇಟಿಯಾಗು ಸೂಚಿಸಿದ್ದಾನೆ. ನಂತರ ಕಾರಿನಲ್ಲಿ ತನ್ನ ಮೂವರು ಸ್ನೇಹಿತರೊಂದಿಗೆ ಆ ಸ್ಥಳಕ್ಕೆ ಜೈ ಶಂಕರ್ ತೆರಳಿದ್ದ. ನಾಲ್ವರೂ ಸೇರಿ ಅವಳನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದು, ಅಲ್ಲಿ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿದ್ದಾರೆ.

    ಜೈ ಪ್ರಕಾಶ್, ಲುವ್ ಕುಮಾರ್ ಪಾಲ್, ಗಣೇಶ್ ಪ್ರಸಾದ್ ಹಾಗೂ ಸುಲ್ತಾನ್‍ಪುರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಆರ್ ಪಿಎಫ್  ಪೇದೆ ಮಹೇಂದ್ರ ಕುಮಾರ್ ಯಾದವ್ ನಾಲ್ವರ ವಿರುದ್ಧ ಬಾಲಕಿಯ ತಂದೆ ಪ್ರಕರಣ ದಾಖಲಿಸಿದ್ದಾರೆ.

    ಕಾರನ್ನು ನಿಲ್ಲಿಸಿದಾಗ ಬಾಲಕಿ ಅಳಲು ಪ್ರಾರಂಭಿಸಿದ್ದು, ಆಗ ಕಾರಿನ ಸೈರನ್ ಶಬ್ದವನ್ನು ಜೋರು ಮಾಡಿದ್ದಾರೆ. ಪರಿಶೀಲನೆಗೆ ತೆರಳಿದಾಗ ಬಾಲಕಿಯನ್ನು ಕರೆದೊಯ್ದಿದ್ದ ಕಾರನ್ನು ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕಾರು ಮೌರ್ಯ ಅವರಿಗೆ ಸೇರಿದ್ದಾಗಿದ್ದು, ಇದರ ಮೇಲೆ ಹೇಗೆ ಪೊಲೀಸ್ ಲೋಗೋ ಹಾಕಿದ್ದ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    ಮಿರ್ಜಾಪುರ ಎಸ್‍ಪಿ ಧರ್ಮ ವೀರ್ ಈ ಕುರಿತು ಪ್ರತಿಕ್ರಿಯಿಸಿ, ಸಂತ್ರಸ್ತೆ ಹಾಗೂ ನಾಲ್ವರೂ ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.

  • ಕೊಲೆಗೈದು ಮಹಿಳೆ ಶವದ ಮೇಲೆ ರೇಪ್ – ವಿಡಿಯೋ ಸೆರೆಹಿಡಿದ ವಿಕೃತಕಾಮಿ ಅರೆಸ್ಟ್

    ಕೊಲೆಗೈದು ಮಹಿಳೆ ಶವದ ಮೇಲೆ ರೇಪ್ – ವಿಡಿಯೋ ಸೆರೆಹಿಡಿದ ವಿಕೃತಕಾಮಿ ಅರೆಸ್ಟ್

    – ಮನೆಗೆ ನುಗ್ಗಿ ಪತಿಯನ್ನು ಕಲ್ಲಿಂದ ಜಜ್ಜಿ ಕೊಂದ
    – ದಂಪತಿಯ ಮಗಳ ಮೇಲೂ ಅತ್ಯಾಚಾರ
    – ಒಂದೇ ಕುಟುಂಬದ ಮೂವರನ್ನು ಬಲಿ ಪಡೆದ

    ಲಕ್ನೋ: ವಿಕೃತಕಾಮಿಯೋರ್ವ ಮನೆಯೊಂದಕ್ಕೆ ನುಗ್ಗಿ ದಂಪತಿಯನ್ನು ಕೊಲೆ ಮಾಡಿ ಮಹಿಳೆ ಶವದ ಮೇಲೆ ಅತ್ಯಾಚಾರವೆಸೆಗಿದ್ದಲ್ಲದೆ, ಅವರ 10 ವರ್ಷದ ಮಗಳನ್ನು ರೇಪ್‍ಗೈದ ಭಯಾನಕ ಪ್ರಕರಣ ಉತ್ತರ ಪ್ರದೇಶದ ಅಜಮ್‍ಗಢ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

    ಆರೋಪಿಯನ್ನು ನಾಸಿರುದ್ಧೀನ್(38) ಎಂದು ಗುರುತಿಸಲಾಗಿದೆ. ಈತ ನವೆಂಬರ್ 24ರಂದು ಮುಬಾರಕ್‍ಪುರ ಪ್ರದೇಶದಲ್ಲಿನ ಮನೆಯೊಂದಕ್ಕೆ ನುಗ್ಗಿ ದಂಪತಿ ಹಾಗೂ ಅವರ 4 ತಿಂಗಳ ಮಗನನ್ನು ಕಲ್ಲಿಂದ ಜಜ್ಜಿ, ಚಾಕುವಿನಿಂದ ಇರಿದು ಕೊಲೆ ಮಾಡಿದ್ದನು. ಅಲ್ಲದೆ ದಂಪತಿಯ 10 ವರ್ಷದ ಮಗಳ ಮೇಲೆ ರೇಪ್ ಮಾಡಿ, ಮಹಿಳೆಯ ಮೃತದೇಹದ ಮೇಲೆ 3 ಗಂಟೆ ಸತತವಾಗಿ ಅತ್ಯಾಚಾರಗೈದು, ದಂಪತಿಯ ಇನ್ನಿಬ್ಬರು ಮಕ್ಕಳನ್ನು ಕೊಲ್ಲಲು ಯತ್ನಿಸಿದ ಬಳಿಕ ಸ್ಥಳದಿಂದ ಎಸ್ಕೇಪ್ ಆಗಿದ್ದನು. ಇದನ್ನೂ ಓದಿ: ಮಲಗಿದ್ದ ಮಕ್ಕಳ ಕತ್ತು ಹಿಸುಕಿ ಕೊಂದು 8ನೇ ಮಹಡಿಯಿಂದ ಜಿಗಿದ ದಂಪತಿ

    ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದರು. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ವಿಚಾರಣೆ ನಡೆಸಿದಾಗ ಆರೋಪಿಯೋರ್ವ ವಿಕೃತಕಾಮಿ, ಸೈಕೋಪಾತ್ ಎಂಬುದು ಬೆಳಕಿಗೆ ಬಂದಿದೆ. ಈ ಪ್ರಕರಣ ಮಾತ್ರವಲ್ಲದೆ ಆರೋಪಿ ಬೇರೆ ರಾಜ್ಯಗಳಲ್ಲಿ ಇನ್ನೂ ಅನೇಕ ರೇಪ್, ಕೊಲೆಗಳನ್ನು ಮಾಡಿರುವುದರ ಬಗ್ಗೆಯೂ ಬಾಯಿಬಿಟ್ಟಿದ್ದಾನೆ. ಇದನ್ನೂ ಓದಿ: ಆತ್ಮಹತ್ಯೆಗೆ ಶರಣಾಗಿ ಪ್ರೀತಿ ನಿರೂಪಿಸೆಂದ – ನಿರಾಕರಿಸಿದ ಪ್ರೇಯಸಿಯ ಕತ್ತು ಸೀಳಿದ

    ನ. 24ರಂದು ದಂಪತಿ, ಮಕ್ಕಳು ಮಲಗಿದ್ದಾಗ ಮನೆಗೆ ನುಗ್ಗಿ, ಮೊದಲು ಪತಿಯನ್ನು ಕಲ್ಲಿಂದ ಜಜ್ಜಿ ಕೊಲೆ ಮಾಡಿದೆ. ಬಳಿಕ ಮಹಿಳೆಯನ್ನು ಕೊಲೆಗೈದು ಮೃತದೇಹದ ಮೇಲೆ ಅತ್ಯಾಚಾರವೆಸಗಿದೆ. ಆ ನಂತರ ದಂಪತಿಯ ಮಗಳ ಮೇಲೂ ಅತ್ಯಾಚಾರಗೈದು, ಅವರ 4 ತಿಂಗಳ ಮಗನನ್ನು ಹತ್ಯೆ ಮಾಡಿದೆ. ಉಳಿದ ಇಬ್ಬರು ಮಕ್ಕಳ ಮೇಲೂ ಹಲ್ಲೆ ಮಾಡಿದೆ. ಕೃತ್ಯವೆಸೆಗಿದ ಬಳಿಕ ಸ್ಥಳದಿಂದ ಓಡಿಹೋದೆ ಎಂದು ಆರೋಪಿ ಸತ್ಯಾಂಶ ಬಿಚ್ಚಿಟ್ಟಿದ್ದಾನೆ.

    https://twitter.com/azamgarhpolice/status/1201470409746464770

    ಜೊತೆಗೆ ಈ ಕೃತ್ಯವನ್ನು ಮೊಬೈಲ್‍ನಲ್ಲಿ ಸೆರೆಹಿಡಿದು, ನನ್ನ ನಾದಿನಿಯರಿಗೂ ವಿಡಿಯೋ ತೋರಿಸಿದೆನು. ಅದನ್ನು ನೋಡಿ ಅವರು ಬೆಚ್ಚಿಬಿದ್ದಿದ್ದರು. ನಾನು ಇಲ್ಲಿಯವರೆಗೆ ಎಲ್ಲರನ್ನೂ ಕಲ್ಲಿನಿಂದ ಜಜ್ಜಿ, ಚಾಕುವಿನಿಂದ ಇರಿದೇ ಕೊಲೆ ಮಾಡಿದ್ದು ಎನ್ನುವ ಭಯಾನಕ ವಿಚಾರವನ್ನು ಪೊಲೀಸರಿಗೆ ಆರೋಪಿ ಹೇಳಿದ್ದಾನೆ. ಆರೋಪಿಯ ಈ ವಿಕೃತ ಮನಸ್ಥಿತಿ ನೋಡಿ ಸ್ವತಃ ಪೊಲೀಸರೇ ದಂಗಾಗಿದ್ದಾರೆ.

    ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನ್ನನ್ನು ವಿಚಾರಣೆ ನಡೆಸುತ್ತಿದ್ದಾರೆ. ಅಲ್ಲದೆ ಆರೋಪಿ ತಾನು ಮಾಡಿದ ಒಂದೊಂದೆ ಕೃತ್ಯಗಳನ್ನು ಪೊಲೀಸರ ಬಳಿ ಬಾಯಿಬಿಡುತ್ತಿದ್ದಾನೆ.

  • ಆತ್ಮಹತ್ಯೆಗೆ ಶರಣಾಗಿ ಪ್ರೀತಿ ನಿರೂಪಿಸೆಂದ – ನಿರಾಕರಿಸಿದ ಪ್ರೇಯಸಿಯ ಕತ್ತು ಸೀಳಿದ

    ಆತ್ಮಹತ್ಯೆಗೆ ಶರಣಾಗಿ ಪ್ರೀತಿ ನಿರೂಪಿಸೆಂದ – ನಿರಾಕರಿಸಿದ ಪ್ರೇಯಸಿಯ ಕತ್ತು ಸೀಳಿದ

    – ಪ್ರೇಯಸಿ ಕತ್ತು ಸೀಳಿ ತಾನೂ ವಿಷಕುಡಿದ
    – ಕೊನೆಗೆ ತಪ್ಪೊಪ್ಪಿಕೊಂಡು ಪೊಲೀಸರ ಮುಂದೆ ಜೀವಬಿಟ್ಟ

    ಲಕ್ನೋ: ನನ್ನೊಂದಿಗೆ ಆತ್ಮಹತ್ಯೆಗೆ ಶರಣಾಗಿ ನಿನ್ನ ಪ್ರೀತಿ ನಿರೂಪಿಸು ಎಂದು ಪಾಗಲ್ ಪ್ರೇಮಿಯೋರ್ವ ತನ್ನ ಪ್ರೇಯಸಿಗೆ ಹೇಳಿದಾಗ ಆಕೆ ನಿರಾಕರಿಸಿದ್ದಕ್ಕೆ ಕೊಲೆ ಮಾಡಿ, ಕೊನೆಗೆ ತಾನೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯ ಖಾಕೇಗಢದಲ್ಲಿ ನಡೆದಿದೆ.

    ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ಛಿಚ್ಚವಾಲಿ ಗ್ರಾಮದ ನಿವಾಸಿ ಹೇತ್ ಸಿಂಗ್ ಥೋಮರ್(21) ತನ್ನ 19 ವರ್ಷದ ಪ್ರೇಯಸಿಯನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನವೆಂಬರ್ 30ರಂದು ಯುವಕ ತನ್ನ ಪ್ರೇಯಸಿಯನ್ನು ಕತ್ತು ಸೀಳಿ ಕೊಲೆಗೈದು ತಲೆಮರಿಸಿಕೊಂಡಿದ್ದನು. ಆದರೆ ಸೋಮವಾರ ಆಗ್ರಾಕ್ಕೆ ವಾಪಸ್ ಬಂದ ಯುವಕ ಕ್ರಿಮಿನಾಶಕವನ್ನು ನೀರಿನಲ್ಲಿ ಬೆರೆಸಿ ಸೇವಿಸಿ, ಖಾಕೇಗಢ ಪೊಲೀಸ್ ಠಾಣೆಗೆ ಬಂದು ತಾನೇ ಪ್ರೇಯಸಿಯನ್ನು ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ಬೇರೆ ವ್ಯಕ್ತಿ ಜೊತೆ ಮಾತನಾಡಿದ್ದಕ್ಕೆ ಪ್ರಿಯಕರನಿಂದ ಕಪಾಳಮೋಕ್ಷ- ಯುವತಿ ಸಾವು

    ಅಲ್ಲದೆ ತಾನೂ ವಿಷ ಸೇವಿಸಿದ್ದೇನೆ ಎಂದು ಪೊಲೀಸರ ಬಳಿ ಹೇಳಿದಾಗ ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಮಾರ್ಗ ಮಧ್ಯೆ ಯುವಕ ಸಾವನ್ನಪ್ಪಿದ್ದಾನೆ. ಠಾಣೆಗೆ ಬಂದ ಯುವಕ ಮೊದಲು ತಾನು ಯಾಕೆ ಪ್ರೇಯಸಿಯನ್ನು ಕೊಲೆ ಮಾಡಿದೆ? ಹೇಗೆ ಕೊಲೆ ಮಾಡಿದೆ? ನಡೆದಿದ್ದೇನು ಎಂಬ ಎಲ್ಲಾ ವಿಚಾರವನ್ನು ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾನೆ. ಇದನ್ನು ಪೊಲೀಸರು ವಿಡಿಯೋ ಕೂಡ ಮಾಡಿಕೊಂಡಿದ್ದಾರೆ. ಸತ್ಯಾಂಶವನ್ನು ಹೇಳಿದ ಬಳಿಕ ಕೊನೆಯಲ್ಲಿ ನಾನು ಕೂಡ ವಿಷ ತೆಗೆದುಕೊಂಡಿದ್ದೇನೆ ಎಂದಿದ್ದಾನೆ.

    ಯುವತಿ ಖಾಕೇಗಢ ನಿವಾಸಿಯಾಗಿದ್ದು, ಆಕೆಯ ಪಕ್ಕದ ಮನೆಯ ಯುವಕನೊಂದಿಗೆ ಥೋಮರ್ ಸಹೋದರಿ ವಿವಾಹವಾಗಿತ್ತು. ಆಗ ಥೋಮರ್ ಗೆ ಯುವತಿ ಪರಿಚಯವಾಗಿತ್ತು. ಬಳಿಕ ಅವರಿಬ್ಬರು ಪ್ರೀತಿಸಲು ಆರಂಭಿಸಿದ್ದರು. ಮೊದಮೊದಲು ಎಲ್ಲವೂ ಚೆನ್ನಾಗಿಯೇ ಇತ್ತು. ಆದರೆ ಇತ್ತೀಚೆಗೆ ಯುವತಿಗೆ ತನ್ನ ಊರಿನ ಮತ್ತೊಬ್ಬ ಯುವಕನ ಪರಿಚಯವಾಗಿತ್ತು. ಆತನೊಂದಿಗೆ ಯುವತಿ ಚೆನ್ನಾಗಿ ಮಾತನಾಡಿಕೊಂಡಿದ್ದಳು. ಇದು ಥೋಮರ್ ಕೋಪಕ್ಕೆ ಕಾರಣವಾಗಿದ್ದು, ನ.30ರಂದು ತನ್ನ ಪ್ರೇಯಸಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಜಗಳವಾಡಿದ್ದನು. ಇದನ್ನೂ ಓದಿ: ಪ್ರೇಯಸಿಗೆ ಚಾಕು ಇರಿದ – ತಾನೂ ಇರಿದ್ಕೊಂಡು, ಆಕೆಯ ಮೇಲೆಯೇ ಬಿದ್ದ

    ನೀನು ನನ್ನನ್ನು ನಿಜವಾಗಿಯೂ ಪ್ರೀತಿಸುತ್ತಿದ್ದರೆ ನನ್ನೊಡನೆ ಆತ್ಮಹತ್ಯೆ ಮಾಡಿಕೋ, ಆಗ ನಿನ್ನ ಪ್ರೀತಿ ನಿಜ ಎಂದು ಸಾಬೀತಾಗುತ್ತೆ ಎಂದು ಥೋಮರ್ ಹೇಳಿದನು. ಆದರೆ ಪ್ರೇಮಿಯ ಹುಚ್ಚು ನಿರ್ಧಾರಕ್ಕೆ ಯುವತಿ ಒಪ್ಪಿರಲಿಲ್ಲ. ಇದರಿಂದ ಮತ್ತಷ್ಟು ಕೋಪಗೊಂಡ ಥೋಮರ್ ಹಿಂದೆ ಮುಂದೆ ಯೋಚಿಸದೆ ಚಾಕುವಿನಿಂದ ಪ್ರೇಯಸಿಯ ಕತ್ತು ಸೀಳಿ ಕೊಲೆ ಮಾಡಿದ್ದ. ನಂತರ ಅಲ್ಲಿಂದ ಪರಾರಿಯಾಗಿ ತಲೆಮರಿಸಿಕೊಂಡಿದ್ದನು. ಇದನ್ನೂ ಓದಿ: ಪ್ರೀತಿ ನಿರಾಕರಿಸಿದ ಯುವತಿಗೆ ಭಗ್ನ ಪ್ರೇಮಿಯಿಂದ ಚಾಕು ಇರಿತ

    ಎರಡು ದಿನಗಳ ಬಳಿಕ ಆತನಿಗೆ ಏನಾಯಿತೋ ಗೊತ್ತಿಲ್ಲ. ಆತನೇ ಖಾಕೇಗಢ ಪೊಲೀಸ್ ಠಾಣೆಗೆ ಬಂದು ಶರಣಾಗಿ, ತಪ್ಪೊಪ್ಪಿಕೊಂಡಿದ್ದ. ಆದರೆ ಠಾಣೆಗೆ ಬರುವ ಮುನ್ನವೇ ಥೋಮರ್ ತನ್ನ ನೀರಿನ ಬಾಟಲಿಯಲ್ಲಿ ಕ್ರಿಮಿನಾಶ ಬೆರೆಸಿ ಕುಡಿದಿದ್ದನು. ಪೊಲೀಸರ ಮುಂದೆ ನಡೆದಿದ್ದ ವಿಷಯವನ್ನೆಲ್ಲಾ ಹೇಳಿ ಕೊನೆಗೆ ಜೀವಬಿಟ್ಟಿದ್ದಾನೆ.

    ಸದ್ಯ ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಯುವಕ ಠಾಣೆಗೆ ಬಂದ ಸಮಯದಲ್ಲಿ ಆತನೊಂದಿಗೆ ಯಾರಾದರು ಬಂದಿದ್ದರಾ ಎಂದು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ತನಿಖೆ ನಡೆಸುತ್ತಿದ್ದಾರೆ.

  • ಪೋರ್ನ್ ವಿಡಿಯೋ ಹುಚ್ಚು- 8ನೇ ತರಗತಿ ವಿದ್ಯಾರ್ಥಿಯಿಂದ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ

    ಪೋರ್ನ್ ವಿಡಿಯೋ ಹುಚ್ಚು- 8ನೇ ತರಗತಿ ವಿದ್ಯಾರ್ಥಿಯಿಂದ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ

    ಲಕ್ನೋ: 6 ವರ್ಷದ ಬಾಲಕಿಗೆ ಚಾಕಲೇಟ್ ಆಸೆ ತೋರಿಸಿ 8ನೇ ತರಗತಿ ವಿದ್ಯಾರ್ಥಿ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಲಖಿಮ್‍ಪುರ ಖೇರಿ ಜಿಲ್ಲೆಯಲ್ಲಿ ನಡೆದಿದೆ.

    ಲಖಿಮ್‍ಪುರ ಖೇರಿ ಜಿಲ್ಲೆಯ ಗೋಲಾ ಗ್ರಾಮದಲ್ಲಿ ಘಟನೆ ನಡೆದಿದ್ದು, ಬಾಲಕಿ ತನ್ನ ಮನೆಯ ಆವರಣದಲ್ಲಿ ಆಟವಾಡುತ್ತಿದ್ದಾಗ ಆರೋಪಿ 8ನೇ ತರಗತಿ ಬಾಲಕ ಚಾಕಲೇಟ್ ಆಸೆ ತೋರಿಸಿದ್ದಾನೆ. ನಂತರ ನಮ್ಮ ಮನೆಯಲ್ಲಿ ಆಟ ಆಡೋಣ ಬಾ ಎಂದು ಪುಸಲಾಯಿಸಿ ಬಾಲಕಿಯನ್ನು ಕರೆದೊಯ್ದಿದ್ದಾನೆ. ನಂತರ ತನ್ನ ಮನೆಯಲ್ಲಿ ಬಾಲಕಿಯನ್ನು ಅತ್ಯಾಚಾರಗೈದಿದ್ದಾನೆ.

    ವಿದ್ಯಾರ್ಥಿಯು ಬಾಲಕಿಗೆ ಪರಿಚಯಸ್ಥನಾಗಿದ್ದಾನೆ, ಹೀಗಾಗಿ ಬಾಲಕಿ ಅವನೊಂದಿಗೆ ಆಟವಾಡಲು ತೆರಳಿದ್ದಾಳೆ. ಘಟನೆ ಕುರಿತು ತಿಳಿಯುತ್ತಿದ್ದಂತೆ ಹುಡುಗಿಯ ಪೋಷಕರು ಆಘಾತಕ್ಕೊಳಗಾಗಿದ್ದಾರೆ ಎಂದು ಗೋಲಾ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಡಿ.ಪಿ.ತಿವಾರಿ ಮಾಹಿತಿ ನೀಡಿದ್ದಾರೆ.

    ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 372(ಅತ್ಯಾಚಾರ) ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ(ಪೊಕ್ಸೊ)ಯಡಿ ಪ್ರಕರಣ ದಾಖಲಿಸಲಾಗಿದೆ. ವೈದ್ಯಕೀಯ ಪರೀಕ್ಷೆ ನಂತರ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಖಚಿತವಾಗಿದೆ. ಬಾಲಕಿಯ ಆರೋಗ್ಯ ಸಹಜ ಸ್ಥಿತಿಯಲ್ಲಿದೆ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

    ಬಾಲಕನನ್ನು ಬಂಧಿಸಲಾಗಿದ್ದು, ಬಾಲಪರಾಧಿಗಳ ಕಾರಾಗೃಹಕ್ಕೆ ಕಳುಹಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ವಿದ್ಯಾರ್ಥಿಗೆ ಪೋರ್ನ್ ವಿಡಿಯೋಗಳನ್ನು ನೋಡುವ ಹುಚ್ಚಿತ್ತು. ಈ ಕುರಿತು ಅವನ ಮೊಬೈಲ್‍ನಲ್ಲಿ ಸರ್ಚ್ ಮಾಡಲಾಗಿತ್ತು. ತನ್ನ ಸ್ನೇಹಿತರೊಂದಿಗೆ ಪೋರ್ನ್ ವಿಡಿಯೋಗಳನ್ನು ನೋಡುತ್ತಿದ್ದ. ಆರೋಪಿಯನ್ನು ಪ್ರಶ್ನಿಸಿದಾಗ ತಪ್ಪು ಒಪ್ಪಿಕೊಂಡಿದ್ದಾನೆ ಎಂದು ವರದಿಯಾಗಿದೆ.

  • ಬೀದಿ ಗೋವುಗಳಿಗಾಗಿ ‘ಗೋವು ಸಫಾರಿ’ ತೆರೆಯಲು ಚಿಂತನೆ

    ಬೀದಿ ಗೋವುಗಳಿಗಾಗಿ ‘ಗೋವು ಸಫಾರಿ’ ತೆರೆಯಲು ಚಿಂತನೆ

    ಲಕ್ನೋ: ಬೀದಿಗಳಲ್ಲಿ ಇರುವ ಗೋವುಗಳ ಹಾವಳಿ ತಪ್ಪಿಸಲು ‘ಗೋವು ಸಫಾರಿ’ ಆರಂಭಿಸುವ ಬಗ್ಗೆ ಉತ್ತರ ಪ್ರದೇಶದ ಸಚಿವರೊಬ್ಬರು ಸರ್ಕಾರಕ್ಕೆ ಶಿಫಾರಸು ಮಾಡಿದ್ದಾರೆ.

    ಉತ್ತರ ಪ್ರದೇಶದ ಹೈನು ಅಭಿವೃದ್ಧಿ ಸಚಿವ ಲಕ್ಷ್ಮೀನಾರಾಯಣ ಚೌಧರಿ ಅವರು ಗೋವು ಸಫಾರಿ ತೆರೆಯುವ ಪ್ರಸ್ತಾಪವನ್ನು ಸರ್ಕಾರದ ಮುಂದಿಟ್ಟಿದ್ದಾರೆ. ಬೀದಿಯಲ್ಲಿ ಓಡಾಡಿಕೊಂಡು ವಾಹನಗಳಿಗೆ ಸಿಲುಕಿ ಗೋವುಗಳು ಸಾವನ್ನಪ್ಪುವುದು, ಗಾಯಗೊಳ್ಳುವುದನ್ನು ತಪ್ಪಿಸಲು ಈ ಯೋಜನೆ ಬಗ್ಗೆ ಚಿಂತನೆ ನಡೆಸಿದ್ದಾರೆ. ಈ ಬಗ್ಗೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಗೋವುಗಳು ಆರಾಮಾಗಿ ಓಡಾಡಲು ಖಾಲಿ ಜಾಗ ಗುರುತಿಸಲು ಸೂಚಿಸಿದ್ದಾರೆ. ಇದನ್ನೂ ಓದಿ: ಚಳಿಯಿಂದ ಗೋವುಗಳನ್ನು ರಕ್ಷಿಸಲು ಕೋಟು ಖರೀದಿಸಲು ಮುಂದಾದ ಅಯೋಧ್ಯಾ ಪಾಲಿಕೆ

    ಅಲ್ಲದೆ ಈ ಕುರಿತು ಶೀಘ್ರವೇ ಸಿಎಂ ಯೋಗಿ ಆದಿತ್ಯನಾಥ್ ಜೊತೆ ಮಾತನಾಡುವುದಾಗಿ ಸಚಿವರು ತಿಳಿಸಿದ್ದಾರೆ. ಉತ್ತರ ಪ್ರದೇಶದಲ್ಲಿ ಗೋವು ಸಫಾರಿ ಸ್ಥಾಪಿಸಿ, ಅದನ್ನು ಮಥುರಾ ಮಾದರಿಯ ಪ್ರವಾಸಿ ಕೇಂದ್ರ ಆಗಿಸುವುದು ಸಚಿವರ ಉದ್ದೇಶವಾಗಿದೆ. ಮಥುರಾದಲ್ಲಿ ದನ-ಕರುಗಳಿಗಾಗಿ ಸಫಾರಿ ಮಾಡಲಾಗಿದ್ದು, ಅಲ್ಲಿ ಅವುಗಳನ್ನು ಕಟ್ಟಿ ಹಾಕದೆ ಆರಾಮಾಗಿ ಓಡಾಡಲು ಬಿಟ್ಟಿರುತ್ತಾರೆ. ಅಲ್ಲದೆ ಪ್ರವಾಸಿಗರು ಅಲ್ಲಿ ಬಂದು ಅವುಗಳ ಜೊತೆ ಸಮಯ ಕಳೆಯಲು ಅವಕಾಶ ನೀಡುತ್ತಾರೆ. ಹೀಗಾಗಿ ಮಥುರಾದಲ್ಲಿರುವ ಗೋವು ಸಫಾರಿಯಂತೆ ಉತ್ತರ ಪ್ರದೇಶದಲ್ಲಿಯೂ ಮಾಡುವುದು ಸಚಿವರ ಚಿಂತನೆಯಾಗಿದೆ. ಇದನ್ನೂ ಓದಿ: ವಿಶ್ವದಲ್ಲೇ ಮೊದಲು – ಹೆಚ್ಚು ಹಾಲು ಸಿಗಲು ಹಸುವಿನ ಕಣ್ಣಿಗೆ ವಿಆರ್ ಗ್ಲಾಸ್ ಅಳವಡಿಕೆ

    ಪ್ರವಾಸೋದ್ಯಮವನ್ನು ಹೊರತುಪಡಿಸಿ ಈ ಗೋವು ಸಫಾರಿ ಸ್ಥಾಪನೆಯಿಂದ ಬೀದಿ ಗೋವುಗಳಿಗೆ ಆಶ್ರಯ ಸಿಕ್ಕಂತಾಗುತ್ತದೆ. ಅವುಗಳಿಗೂ ಹೊಸ ಬದುಕು ದೊರಕಿದಂತಾಗುತ್ತದೆ. ಸರ್ಕಾರ ರಾಜ್ಯದಲ್ಲಿರುವ ಎಲ್ಲಾ ಬೀದಿ ಹಸುಗಳನ್ನು ಗೋವುಗಳ ಆಶ್ರಯ ಸ್ಥಳಕ್ಕೆ ಕರೆದೊಯ್ಯಲು ಸಾಧ್ಯವಾಗುವುದಿಲ್ಲ. ಹೀಗಾಗಿ ಗೋವು ಸಫಾರಿ ಸ್ಥಾಪಿಸಿದರೆ ಆಶ್ರಯ ಸ್ಥಳಕ್ಕೆ ಕಳುಹಿಸಲು ಆಗದ ಗೋವುಗಳನ್ನು ಇಲ್ಲಿ ತಂದು ಬಿಟ್ಟು ನೋಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.

    ಇದೇ ವೇಳೆ ಬೀದಿ ಹಸುಗಳನ್ನು ಜನರು ದತ್ತು ಪಡೆಯುವಂತೆ ಸಚಿವರು ಕರೆ ಕೊಟ್ಟರು. ಹಾಗೆಯೇ ಅಧಿಕಾರಿಗಳಿಗೆ ಡಿ. 10ರ ಒಳಗೆ ರಾಜ್ಯದಲ್ಲಿರುವ ಎಲ್ಲಾ ಗೋವುಗಳ ಆಶ್ರಯ ತಾಣಗಳನ್ನು ಪರಿಶೀಲಿಸಿ, ಗೋವುಗಳಿಗೆ ಬೇಕಾಗುವ ಔಷಧಗಳು, ಮೇವುಗಳನ್ನು ನೀಡುವಂತೆ ಸೂಚಿಸಿದ್ದಾರೆ. ಹಾಗೆಯೇ ಗೋವುಗಳನ್ನು ಚಳಿಯಿಂದ ರಕ್ಷಿಸಲು ಕೂಡ ಕ್ರಮ ತೆಗೆದುಕೊಳ್ಳಲು ತಿಳಿಸಿದ್ದಾರೆ.

  • ಗಂಡ-ಹೆಂಡತಿ ಜಗಳಕ್ಕೆ ಮಕ್ಕಳಿಬ್ಬರು ಬಲಿ

    ಗಂಡ-ಹೆಂಡತಿ ಜಗಳಕ್ಕೆ ಮಕ್ಕಳಿಬ್ಬರು ಬಲಿ

    ಲಕ್ನೋ: ಮದ್ಯ ಸೇವಿಸಿ ವ್ಯಕ್ತಿಯೋರ್ವ ಪತ್ನಿ ಜೊತೆ ಜಗಳವಾಡಿದ್ದು, ಈ ವೇಳೆ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ಕೊಲೆಗೈಯುವ ಮೂಲಕ ಅಮಾನವೀಯವಾಗಿ ವರ್ತಿಸಿದ್ದಾನೆ.

    ಉತ್ತರ ಪ್ರದೇಶದ ಸೂರಜ್‍ಪುರದಲ್ಲಿ ಘಟನೆ ನಡೆದಿದ್ದು, ಆರೋಪಿ ಹರಿ ಸೊಳಂಕಿಯನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಪತ್ನಿ ಜೊತೆ ಜಗಳವಾಡುತ್ತಿದ್ದಾಗ 6 ಹಾಗೂ 3 ವರ್ಷದ ಇಬ್ಬರು ಮಕ್ಕಳನ್ನು ಆರೋಪಿ ಕೊಲೆಗೈದಿದ್ದಾನೆ.

    ಗ್ರಾಮೀಣ ಎಸ್‍ಪಿ ಸಂಜೀವ್ ಸಿಂಗ್ ಪ್ರಕರಣದ ಕುರಿತು ಮಾಹಿತಿ ನೀಡಿದ್ದು, ಸೊಳಂಕಿ ತುಂಬಾ ಕುಡಿದು ಜಗಳ ಮಾಡುತ್ತಿದ್ದ ಎಂದು ಆರೋಪಿಯ ಪತ್ನಿ ನಮಗೆ ತಿಳಿಸಿದ್ದಾರೆ ಎಂದು ವಿವರಿಸಿದ್ದಾರೆ.

    ಘಟನೆ ನಡೆದ ಮರುದಿನ ಬೆಳಗ್ಗೆ ಒಬ್ಬ ಮಗಳ ಮೃತ ದೇಹವು ಮನೆಯಲ್ಲಿ ಪತ್ತೆಯಾಗಿದೆ. ಇನ್ನೊಬ್ಬ ಮಗಳ ದೇಹವು ಪಾಳು ಬಿದ್ದ ಕಟ್ಟಡದಲ್ಲಿ ಪತ್ತೆಯಾಗಿದೆ. ಘಟನೆ ನಂತರ ಆರೋಪಿ ನಾಪತ್ತೆಯಾಗಿದ್ದು, ಆತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

    ಸೊಳಂಕಿ ಹಲ್ಲೆ ಮಾಡಿದ್ದರ ಕುರಿತು ಮಕ್ಕಳ ತಲೆಗೆ ಗಾಯವಾಗಿರುವ ಗುರುತುಗಳಿವೆ. ಪ್ರಕರಣದ ಕುರಿತು ಎಫ್‍ಐಆರ್ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆಯನ್ನು ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • ಮಗನನ್ನು ಕೊಚ್ಚಿ ಕೊಲೆಗೈದು, ಮೃತದೇಹ ತುಂಡರಿಸಿ ಬಿಸಾಡಿದ ಮಲತಂದೆ

    ಮಗನನ್ನು ಕೊಚ್ಚಿ ಕೊಲೆಗೈದು, ಮೃತದೇಹ ತುಂಡರಿಸಿ ಬಿಸಾಡಿದ ಮಲತಂದೆ

    – ಮೃತದೇಹದ ಭಾಗವನ್ನು ವಿವಿಧ ಸ್ಥಳದಲ್ಲಿ ಎಸೆದ
    – ಕೊಲೆಗೈದು ಮಗ ಕಾಣೆಯಾದ ಎಂದು ಕಣ್ಣೀರಿಟ್ಟ

    ಲಕ್ನೋ: ಇಷ್ಟವಿಲ್ಲವೆಂದು ಮಲತಂದೆಯೋರ್ವ ಮಗನನ್ನು ಕೊಚ್ಚಿ ಕೊಲೆಗೈದು, ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಬಿಸಾಡಿ ವಿಕೃತಿ ಮೆರೆದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

    ಬಹ್ರೇಚ್ ಜಿಲ್ಲೆಯ ಭೈನ್ಸಿಯಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ನವೆಂಬರ್ 19ರಂದು ಬಾಲಕನ ಕೊಲೆ ನಡೆದಿದ್ದು, ಈಗ ಆರೋಪಿಗಳು ಯಾರು ಎಂದು ಬೆಳಕಿಗೆ ಬಂದಿದೆ. ಸೂರಜ್ ಯಾದವ್(6) ಮೃತ ಬಾಲಕ. ಆತನ ಮಲತಂದೆ ರಾಮ್ ಸಾರ್ವೆ ಯಾದವ್ ಕೊಲೆ ಮಾಡಿದ ಆರೋಪಿ. ಇತ್ತೀಚೆಗೆ ಸೂರಜ್ ತಾಯಿ ಹೀನಾ ಅವರನ್ನು ರಾಮ್ ಮದುವೆ ಆಗಿದ್ದನು. ಮೊದಲು ಎಲ್ಲವೂ ಚೆನ್ನಾಗಿತ್ತು. ಆದರೆ ದಿನಗಳು ಕಳೆಯುತ್ತಿದ್ದಂತೆ ರಾಮ್ ಹಾಗೂ ಆತನ ಸಹೋದರನಿಗೆ ಸೂರಜ್ ಇಷ್ಟವಾಗಲಿಲ್ಲ. ಆದಕ್ಕೆ ಇಬ್ಬರೂ ಸೇರಿಕೊಂಡು ಮುಗ್ದ ಬಾಲಕನ ಜೀವ ತೆಗೆದಿದ್ದಾರೆ.

    ನವೆಂಬರ್ 19ರಂದು ರಾಮ್ ಹಾಗೂ ಆತನ ಸಹೋದರ ಸೇರಿಕೊಂಡು ಬಾಲಕನನ್ನು ಕೊಚ್ಚಿ ಅಮಾನುಷವಾಗಿ ಕೊಲೆ ಮಾಡಿದ್ದರು. ಬಳಿಕ ಈ ಬಗ್ಗೆ ಯಾರಿಗೂ ತಿಳಿಯಬಾರದೆಂದು ಬಾಲಕನ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಯಾವುದೇ ಸಾಕ್ಷ್ಯ ಸಿಗಬಾರದೆಂದು ತುಂಡರಿಸಿದ ದೇಹದ ಭಾಗಗಳನ್ನು ಗ್ರಾಮದಿಂದ ದೂರ ತೆಗೆದುಕೊಂಡು ಹೋಗಿದ್ದರು. ನಂತರ ಅವುಗಳನ್ನು ಬೇರೆ ಬೇರೆ ಪ್ರದೇಶಗಳಲ್ಲಿ ಬಿಸಾಡಿ ಮನೆಗೆ ಮರಳಿ ಬಂದಿದ್ದರು.

    ಈ ಘಟನೆ ಬಳಿಕ ಎಲ್ಲರನ್ನು ನಂಬಿಸಲು ಸೂರಜ್ ಮನೆಬಿಟ್ಟು ಹೋಗಿದ್ದಾನೆ, ಕಾಣೆಯಾಗಿದ್ದಾನೆ ಎಂದು ಕಣ್ಣಿರು ಹಾಕಿದ್ದರು. ಆದರೆ ಇವರ ವರ್ತನೆ ಬಗ್ಗೆ ಅನುಮಾನಗೊಂಡ ಗ್ರಾಮಸ್ಥರು ಬಾಲಕ ಕಾಣೆಯಾಗಿರುವ ಬಗ್ಗೆ ಪೊಲೀಸರಿಗೆ ದೂರು ಕೊಟ್ಟಿದ್ದರು. ಈ ಬಗ್ಗೆ ಪೊಲೀಸರು ತನಿಖೆ ನಡೆಸಿದಾಗ ಆರೋಪಿಗಳ ಕೃತ್ಯ ಬೆಳಕಿಗೆ ಬಂದಿದೆ.

    ತಾವೇ ಕೊಲೆ ಮಾಡಿರುವುದಾಗಿ ಆರೋಪಿಗಳು ಪೊಲೀಸರ ಬಳಿ ತಪ್ಪೊಪ್ಪಿಕೊಂಡಿದ್ದಾರೆ. ಸದ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಆವರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗಿದೆ.

  • ಒನ್ ಸೈಡ್ ಲವ್- ಮದುವೆ ನಿಶ್ಚಯವಾಯಿತೆಂದು ಯುವತಿಯನ್ನೇ ಕೊಂದ

    ಒನ್ ಸೈಡ್ ಲವ್- ಮದುವೆ ನಿಶ್ಚಯವಾಯಿತೆಂದು ಯುವತಿಯನ್ನೇ ಕೊಂದ

    ಲಕ್ನೋ: ಮದುವೆ ನಿಶ್ಚಯವಾಯಿತೆಂದು ಭಗ್ನ ಪ್ರೇಮಿಯೊಬ್ಬ ಹುಡುಗಿಯನ್ನೇ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಅಲೀಘರ್ ಜಿಲ್ಲೆಯ ಇಗ್ಲಾಸ್‍ನಲ್ಲಿ ನಡೆದಿದೆ.

    ಜರೋಥ್ ಗ್ರಾಮದಲ್ಲಿ ಘಟನೆ ನಡೆದಿದ್ದು, ಯುವತಿಯು ಬೇರೆ ಯುವಕನನ್ನು ಮದುವೆಯಾಗುತ್ತಿರುವುದನ್ನು ತಿಳಿದು ಕೋಪಿತನಾಗಿ ಆರೋಪಿ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಯುವತಿಯ ಮದುವೆ ಡಿಸೆಂಬರ್ 15ರಂದು ನಿಗದಿಯಾಗಿತ್ತು. ಇದನ್ನು ತಿಳಿದ ಆರೋಪಿ ಯುವತಿಯ ತಂದೆ ಹಾಗೂ ಸಹೋದರ ಕೆಲಸಕ್ಕೆ ತೆರಳಿದಾಗ ಕೊಲೆ ಮಾಡಿದ್ದಾನೆ. ಮನೆಯವರೆಲ್ಲರೂ ದಿನದ ಕೆಲಸ ಮುಗಿಸಿ ಮರಳಿದರೂ ಯುವತಿ ಕಾಣದ್ದನ್ನು ಕಂಡು ಕುಟುಂಬಸ್ಥರು ಗಾಬರಿಯಾಗಿದ್ದರು.

    ನಂತರ ಯುವತಿಯನ್ನು ಹುಡುಕಲು ಪ್ರಾರಂಭಿಸಿದ್ದಾರೆ. ಬಟ್ಟೆ ಒಣಗಿಸಲು ಮನೆಯ ಮೇಲಿನ ಮಹಡಿ ತೆರಳಿದ್ದಳು ಎಂದು ಯುವತಿಯ ಅತ್ತಿಗೆ ಕುಟುಂಬದ ಸದಸ್ಯರಿಗೆ ತಿಳಿಸಿದ್ದಾಳೆ. ಎಲ್ಲರೂ ಟೆರೇಸ್ ಮೇಲೆ ಹುಡುಕಲು ಪ್ರಾರಂಭಿಸಿದ್ದು, ಮನೆಯ ಮೊದಲನೇ ಮಹಡಿಯಲ್ಲಿ ಯುವತಿ ರಕ್ತದ ಮಡುವಿನಲ್ಲಿ ಬಿದ್ದಿರುವುದನ್ನು ಕಂಡಿದ್ದಾರೆ. ಆಗ ನೆರೆಯ ಮನೆಯ ರಾಹುಲ್ ಕೊಲೆ ಮಾಡಿದ್ದಾನೆ ಎಂದು ಕುಟುಂಬಸ್ಥರು ಶಂಕಿಸಿದ್ದಾರೆ.

    ಆರೋಪಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದೇವೆ. ಬಂಧಿಸಲು ಎರಡು ತಂಡಗಳನ್ನು ರಚಿಸಲಾಗಿದೆ. ಯುವತಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅಲೀಘರ್ ಎಸ್‍ಎಸ್‍ಪಿ ಆಕಾಶ್ ಕುಲ್ಹಾರಿ ಮಾಹಿತಿ ನೀಡಿದ್ದಾರೆ.

    ಆರೋಪಿ ರಾಹುಲ್ ತನ್ನ ಕುಟುಂಬದ ಸದಸ್ಯರೊಂದಿಗೆ ಪರಾರಿಯಾಗಿದ್ದು, ಸಂತ್ರಸ್ತೆಯ ಕುಟುಂಬದ ಸದಸ್ಯರು ತೀವ್ರ ಆತಂಕಕ್ಕೊಳಗಾಗಿದ್ದಾರೆ. ಡಿಸೆಂಬರ್ 15ರಂದು ಯುವತಿಯ ಮದುವೆ ನಡೆಯಬೇಕಿತ್ತು. ಇದಕ್ಕಾಗಿ ಕುಟುಂಬಸ್ಥರು ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದರು.

    ಈ ಕುರಿತು ಪೊಲೀಸರು ಮಾತನಾಡಿ, ಆರೋಪಿ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ಶೀಘ್ರವೇ ಬಂಧಿಸಲಾಗುವುದು. ಆರೋಪಿಯು ಯುವತಿಯ ಮದುವೆ ನಿಶ್ಚಯವಾಗಿದ್ದರಿಂದ ಬೇಸರಗೊಂಡಿದ್ದ. ಅಲ್ಲದೆ ಮದುವೆ ನಿಶ್ಚಯವಾದಾಗಿನಿಂದ ಯುವತಿಗೆ ಕಿರುಕುಳ ನೀಡುತ್ತಿದ್ದ ಎಂದು ಕುಟುಂಬಸ್ಥರು ನಮಗೆ ತಿಳಿಸಿದ್ದಾರೆ. ಆರೋಪಿಯು ಯುವತಿಯನ್ನು ಪ್ರೀತಿಸುತ್ತಿದ್ದ. ಆದರೆ ಯುವತಿ ಅವನನ್ನು ಪ್ರೀತಿಸುತ್ತಿರಲಿಲ್ಲ ಎಂದು ತಿಳಿಸಿದರು.