Tag: uttar pradesh

  • ಕಮಲೇಶ್ ತಿವಾರಿ ಕೊಲೆಗಾರರ ಶಿರಚ್ಛೇದನ ಮಾಡಿದವರಿಗೆ 1 ಕೋಟಿ ರೂ. ಬಹುಮಾನ- ಶಿವಸೇನೆ ಮುಖಂಡ

    ಕಮಲೇಶ್ ತಿವಾರಿ ಕೊಲೆಗಾರರ ಶಿರಚ್ಛೇದನ ಮಾಡಿದವರಿಗೆ 1 ಕೋಟಿ ರೂ. ಬಹುಮಾನ- ಶಿವಸೇನೆ ಮುಖಂಡ

    ಮುಂಬೈ: ಲಖನೌದಲ್ಲಿ ಕಮಲೇಶ್ ತಿವಾರಿ ಕೊಲೆ ಮಾಡಿದ ಆರೋಪದ ಮೇಲೆ ಬಂಧಿತರಾಗಿರುವ ಮೂವರನ್ನು ಶಿರಚ್ಛೇದನ ಮಾಡಿದರೆ 1 ಕೋಟಿ ರೂ. ಬಹುಮಾನ ನೀಡುವುದಾಗಿ ಶಿವಸೇನೆ ಮುಖಂಡರೊಬ್ಬರು ಘೋಷಿಸಿದ್ದಾರೆ.

    ಈ ಕುರಿತು ಶಿವ ಸೇನೆ ಮುಖಂಡ ಅರುಣ್ ಪಾಠಕ್ ವಿಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ಕಮಲೇಶ್ ತಿವಾರಿ ಅವರನ್ನು ಕ್ರೂರವಾಗಿ ಕೊಂದ ಜನರ ವಿರುದ್ಧ ಯಾವುದೇ ಕಾನೂನು ಕ್ರಮಗಳನ್ನು ಜರುಗಿಸಬಾರದು. ಬದಲಿಗೆ ಕಮಲೇಶ್ ಅವರನ್ನು ಕೊಂದ ರೀತಿಯಲ್ಲೇ ಕ್ರೂರವಾಗಿ ಶಿರಚ್ಛೇದನ ಮಾಡಬೇಕು. ಶಿರಚ್ಛೇದನ ಮಾಡಿದವರಿಗೆ ನಾನು ಒಂದು ಕೋಟಿ ರೂ.ಗಳ ಬಹುಮಾನ ಘೋಷಿಸುತ್ತೇನೆ. ಆ ಹಣವನ್ನು ಅವರ ಕುಟುಂಬದ ಸದಸ್ಯರಿಗೆ ನೀಡುತ್ತೇನೆ ಎಂದು ತಿಳಿಸಿದ್ದಾರೆ.

    ತಿವಾರಿ ಅವರು ಹಿಂದೂಗಳ ಪರವಾಗಿ ಮಾತನಾಡಿದ್ದಕ್ಕೆ ಅವರನ್ನು ಹತ್ಯೆ ಮಾಡಲಾಗಿದೆ. ಅವರ ಹತ್ಯೆಯಿಂದ ಹಿಂದೂಗಳ ಪರವಾಗಿ ಮಾತನಾಡುವುದನ್ನು ನಿಲ್ಲಿಸಲಾಗದು ಎಂದು ಸಂದೇಶ ರವಾನಿಸುವ ಪ್ರಯತ್ನವಾಗಬೇಕಿದೆ. ಇನ್ನು ಮುಂದೆ ದೇಶದಲ್ಲಿ ಈ ರೀತಿಯಾಗಲು ನಾವು ಬಿಡುವುದಿಲ್ಲ ಎಂದು ಪಾಠಕ್ ಎಚ್ಚರಿಸಿದ್ದಾರೆ.

    ಕಮಲೇಶ್ ತಿವಾರಿ ಅವರು ಹಿಂದೂ ಸಮಾಜ ಪಾರ್ಟಿಯ ಮುಖ್ಯಸ್ಥರು ಹಾಗೂ ಹಿಂದೂ ಮಹಾಸಭಾ ಮಾಜಿ ನಾಯಕರಾಗಿದ್ದು, ಶುಕ್ರವಾರ ಲಕ್ನೋದಲ್ಲಿ ಗುಂಡು ಹಾರಿಸಿ ಕೊಲೆ ಮಾಡಲಾಗಿತ್ತು. ಪ್ರಕರಣದ ತನಿಖೆಗೆ ಎಸ್‍ಐಟಿ ತಂಡ ರಚಿಸಲಾಗಿತ್ತು. ಘಟನೆ ನಡೆದ 24 ಗಂಟೆಯೊಳಗೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯ ಮೌಲಾನಾ ಅನ್ವರ್ಲ್ ಹಕ್, ಮುಫ್ತಿ ನಯೀಮ್ ಖಾಜ್ಮಿ, ಗುಜರಾತ್ ಮೂಲದ ಮೌಲಾನಾ ಮೊಹ್ಸಿನ್ ಶೇಖ್ (24), ರಶೀದ್ ಅಹ್ಮದ್ ಪಠಾಣ್ (23) ಮತ್ತು ಫೈಜಾನ್ (21) ಬಂಧಿತ ಆರೋಪಿಗಳು. ಉತ್ತರ ಪ್ರದೇಶ ಹಾಗೂ ಗುಜರಾತ್ ಪೊಲೀಸರ ಜಂಟಿ ಕಾರ್ಯಾಚರಣೆ ಮೂಲಕ 24 ಗಂಟೆಯೊಳಗೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಉತ್ತರ ಪ್ರದೇಶ ಡಿಜಿಪಿ ಓ.ಪಿ.ಸಿಂಗ್, ಘಟನೆ ನಡೆದ ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವು. ಬಳಿಕ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾ ಫುಟೇಜ್ ಪಡೆದು ನೋಡಿದಾಗ ಗುಜರಾತ್ ಮೂಲದವರು ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಎರಡು ತಂಡಗಳನ್ನು ರಚಿಸಿ ಆರೋಪಿಗಳ ಬಂಧನಕ್ಕೆ ಜಂಟಿ ಕಾರ್ಯಚರಣೆ ನಡೆಸಲಾಗಿತ್ತು ಎಂದು ಮಾಹಿತಿ ನೀಡಿದ್ದಾರೆ.

    ಕಮಲೇಶ್ ತಿವಾರಿ 2015ರಲ್ಲಿ ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿಗಳು ಕೊಲೆಗೈದಿರುವುದು ಪ್ರಾಥಮಿಕ ವಿಚಾರಣೆಯಲ್ಲಿ ತಿಳಿದು ಬಂದಿದೆ. ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಿ ಕೊಲೆಯ ಹಿಂದಿರುವ ವ್ಯಕ್ತಿಗಳ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತದೆ ಎಂದು ಓ.ಪಿ.ಸಿಂಗ್ ತಿಳಿಸಿದ್ದಾರೆ.

    ಆರೋಪಿಗಳು ಕೇಸರಿ ಬಟ್ಟೆ ಧರಿಸಿ ದೀಪಾವಳಿ ಉಡುಗೊರೆ ನೀಡುವ ನೆಪದಲ್ಲಿ ಕಮಲೇಶ್ ತಿವಾರಿ ಅವರ ಕಚೇರಿಗೆ ಬಂದಿದ್ದರು. ಈ ವೇಳೆ ತಿವಾರಿ ಅವರ ಜೊತೆಗೆ ಚಹಾ ಕುಡಿದು ಹತ್ಯೆಗೆ ಪ್ಲ್ಯಾನ್ ರೂಪಿಸಿದ್ದರು. ಸ್ವೀಟ್ ನೀಡುವ ನೆಪದಲ್ಲಿ ಬಾಕ್ಸ್ ತೆರೆದ ಆರೋಪಿಗಳು ಅದರಲ್ಲಿದ್ದ ಗನ್‍ನಿಂದ ಗುಂಡು ಹಾರಿಸಿದ್ದರು. ಬಳಿಕ ಮಾರಕಾಸ್ತ್ರಗಳಿಂದ ಕುತ್ತಿಗೆ, ಎದೆ, ಮುಖದ ಮೇಲೆ ಹಲ್ಲೆ ಮಾಡಿ, ಪರಾರಿಯಾಗಿದ್ದರು.

  • ಕಮಲೇಶ್ ತಿವಾರಿ ಹತ್ಯೆ ಪ್ರಕರಣ: ಐವರು ಆರೋಪಿಗಳು ಅರೆಸ್ಟ್

    ಕಮಲೇಶ್ ತಿವಾರಿ ಹತ್ಯೆ ಪ್ರಕರಣ: ಐವರು ಆರೋಪಿಗಳು ಅರೆಸ್ಟ್

    ಲಕ್ನೋ: ಹಿಂದೂ ಮಹಾಸಭಾದ ನಾಯಕ, ರಾಜಕಾರಣಿ ಕಮಲೇಶ್ ತಿವಾರಿ ಅವರನ್ನು ಬರ್ಬರವಾಗಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯ ಮೌಲಾನಾ ಅನ್ವರ್ಲ್ ಹಕ್, ಮುಫ್ತಿ ನಯೀಮ್ ಖಾಜ್ಮಿ, ಗುಜರಾತ್ ಮೂಲದ ಮೌಲಾನಾ ಮೊಹ್ಸಿನ್ ಶೇಖ್ (24), ರಶೀದ್ ಅಹ್ಮದ್ ಪಠಾಣ್ (23) ಮತ್ತು ಫೈಜಾನ್ (21) ಬಂಧಿತ ಆರೋಪಿಗಳು. ಉತ್ತರ ಪ್ರದೇಶ ಹಾಗೂ ಗುಜರಾತ್ ಪೊಲೀಸರ ಜಂಟಿ ಕಾರ್ಯಾಚರಣೆ ಮೂಲಕ 24 ಗಂಟೆಯೊಳಗೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಉತ್ತರ ಪ್ರದೇಶ ಡಿಜಿಪಿ ಓ.ಪಿ.ಸಿಂಗ್ ಅವರು, ಘಟನೆ ನಡೆದ ತಕ್ಷಣವೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವು. ಬಳಿಕ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾ ಫುಟೇಜ್ ಪಡೆದು ನೋಡಿದಾಗ ಗುಜರಾತ್ ಮೂಲದವರು ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಎರಡು ತಂಡಗಳನ್ನು ರಚಿಸಿ ಆರೋಪಿಗಳ ಬಂಧನಕ್ಕೆ ಜಂಟಿ ಕಾರ್ಯಚರಣೆ ನಡೆಸಲಾಗಿತ್ತು ಎಂದು ಮಾಹಿತಿ ನೀಡಿದ್ದಾರೆ.

    ಕಮಲೇಶ್ ತಿವಾರಿ 2015ರಲ್ಲಿ ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಆರೋಪಿಗಳು ಕೊಲೆಗೈದಿರುವುದು ಪ್ರಾಥಮಿಕ ವಿಚಾರಣೆಯಲ್ಲಿ ತಿಳಿದು ಬಂದಿದೆ. ಬಂಧಿತರನ್ನು ತೀವ್ರ ವಿಚಾರಣೆಗೆ ಒಳಪಡಿಸಿ ಕೊಲೆಯ ಹಿಂದೆ ಇರುವ ವ್ಯಕ್ತಿಗಳ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತದೆ ಎಂದು ಓ.ಪಿ.ಸಿಂಗ್ ತಿಳಿಸಿದ್ದಾರೆ.

    ಆರೋಪಿಗಳು ಕೇಸರಿ ಬಟ್ಟೆ ಧರಿಸಿ ದೀಪಾವಳಿ ಉಡುಗೊರೆ ನೀಡುವ ನೆಪದಲ್ಲಿ ಕಮಲೇಶ್ ತಿವಾರಿ ಅವರ ಕಚೇರಿಗೆ ಬಂದಿದ್ದರು. ಈ ವೇಳೆ ತಿವಾರಿ ಅವರ ಜೊತೆಗೆ ಚಹಾ ಕುಡಿದು ಹತ್ಯೆಗೆ ಪ್ಲ್ಯಾನ್ ರೂಪಿಸಿದ್ದರು. ಸ್ವೀಟ್ ನೀಡುವ ನೆಪದಲ್ಲಿ ಬಾಕ್ಸ್ ತೆರೆದ ಆರೋಪಿಗಳು ಅದರಲ್ಲಿದ್ದ ಗನ್‍ನಿಂದ ಗುಂಡು ಹಾರಿಸಿದ್ದರು. ಬಳಿಕ ಮಾರಕಾಸ್ತ್ರಗಳಿಂದ ಕುತ್ತಿಗೆ, ಎದೆ, ಮುಖದ ಮೇಲೆ ಹಲ್ಲೆ ಮಾಡಿ, ಪರಾರಿಯಾಗಿದ್ದರು.

    ಗುಂಡಿ ಶಬ್ದ ಕೇಳಿ ಕೂಡಲೇ ಸ್ಥಳಕ್ಕೆ ಬಂದಿದ್ದ ಸ್ಥಳೀಯರು ಕಮಲೇಶ್ ತಿವಾರಿ ಅವರನ್ನು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತಿವಾರಿ ಮೃತಪಟ್ಟಿದ್ದರು. ತಿವಾರಿ ಹತ್ಯೆ ಖಂಡಿಸಿ ಹಿಂದೂ ಮಹಾಸಭಾ ಸದಸ್ಯರು ಪ್ರತಿಭಟನೆ ನಡೆಸಿ, ಆರೋಪಿಗಳನ್ನು ಬಂಧಿಸಿ ಸೂಕ್ತ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದ್ದರು. ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದ ಪೊಲೀಸರು ಘಟನಾ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ನಡೆಸಿದ್ದರು.

  • ಉಡುಗೊರೆ ನೀಡುವ ನೆಪದಲ್ಲಿ ಬಂದು ಹಿಂದೂ ಮಹಾಸಭಾ ನಾಯಕನನ್ನು ಗುಂಡಿಕ್ಕಿ ಹತ್ಯೆ

    ಉಡುಗೊರೆ ನೀಡುವ ನೆಪದಲ್ಲಿ ಬಂದು ಹಿಂದೂ ಮಹಾಸಭಾ ನಾಯಕನನ್ನು ಗುಂಡಿಕ್ಕಿ ಹತ್ಯೆ

    ಲಕ್ನೋ: ಹಿಂದೂ ಮಹಾಸಭಾ ನಾಯಕ ಕಮಲೇಶ್ ತಿವಾರಿ ಅವರಿಗೆ ಗುಂಡಿಕ್ಕಿ ದುಷ್ಕರ್ಮಿಗಳು ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ಶುಕ್ರವಾರ ನಡೆದಿದೆ.

    ಗುಂಡು ತಗುಲಿ ಹಾಗೂ ಮಾರಣಾಂತಿಕ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಕಮಲೇಶ್ ತಿವಾರಿ ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ತಿವಾರಿ ಮೃತಪಟ್ಟಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

    ಕೇಸರಿ ಬಟ್ಟೆಯನ್ನು ಧರಿಸಿದ್ದ ದುಷ್ಕರ್ಮಿಗಳು ದೀಪಾವಳಿ ಉಡುಗೊರೆ ನೀಡುವ ನೆಪದಲ್ಲಿ ಕಮಲೇಶ್ ತಿವಾರಿ ಅವರ ಕಚೇರಿಗೆ ಬಂದಿದ್ದರು. ಕಚೇರಿಯಲ್ಲಿ ಚಹಾ ಕುಡಿದು ಹತ್ಯೆಗೆ ಪ್ಲ್ಯಾನ್ ರೂಪಿಸಿದ್ದ ದುಷ್ಕರ್ಮಿಗಳು, ಕಮಲೇಶ್ ತಿವಾರಿ ತಮ್ಮ ಬಳಿಗೆ ಬರುತ್ತಿದ್ದಂತೆ ಸ್ವೀಟ್ ಬಾಕ್ಸ್ ನಲ್ಲಿ ತಂದಿದ್ದ ಗನ್‍ನಿಂದ ಗುಂಡು ಹಾರಿಸಿದ್ದಾರೆ. ಬಳಿಕ ಮಾರಕಾಸ್ತ್ರಗಳಿಂದ ಕುತ್ತಿಗೆ, ಎದೆ, ಮುಖದ ಮೇಲೆ ಹಲ್ಲೆ ಮಾಡಿದ್ದಾರೆ. ಗುಂಡಿನ ಶಬ್ದ ಕೇಳಿದ ಸ್ಥಳೀಯರು ತಕ್ಷಣವೇ ಕಚೇರಿಯೊಳಗೆ ಬರುತ್ತಿದ್ದಂತೆ ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗಿದ್ದಾರೆ.

    ಕಮಲೇಶ್ ತಿವಾರಿ ಅವರ ಮೇಲಿನ ಹಳೆಯ ದ್ವೇಷದಿಂದ ದುಷ್ಕರ್ಮಿಗಳ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ. ಘಟನೆಯನ್ನು ಖಂಡಿಸಿ ಹಿಂದೂ ಮಹಾಸಭಾ ಸದಸ್ಯರು ಪ್ರತಿಭಟನೆ ಆರಂಭಿಸಿದ್ದು, ಆರೋಪಿಗಳನ್ನು ಬಂಧಿಸಿ ಸೂಕ್ತ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದೆ. ಈ ಸಂಬಂಧ ತನಿಖೆ ಆರಂಭಿಸಿರುವ ಪೊಲೀಸರು ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾ ಪರಿಶೀಲನೆ ನಡೆಸಿದ್ದಾರೆ ಎಂದು ವರದಿಯಾಗಿದೆ.

    ಕಮಲೇಶ್ ತಿವಾರಿ ಅವರು ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದು ಭಾರೀ ಸುದ್ದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಕಮಲೇಶ್ ತಿವಾರಿ ಅವರಿಗೆ ಹಾಕಿದ್ದ ರಾಷ್ಟ್ರೀಯ ಭದ್ರತಾ ಕಾಯ್ದೆಯನ್ನು ಇತ್ತೀಚೆಗೆ ಅಲಹಾಬಾದ್ ಹೈಕೋರ್ಟ್ ನ ಲಕ್ನೋ ನ್ಯಾಯಪೀಠವು  ರದ್ದುಪಡಿಸಿದೆ.

  • ಪುತ್ರಿಯನ್ನು ಹೂಳಲು ಹೋದ ತಂದೆಗೆ ಸಿಕ್ಕಳು ಜೀವಂತ ಹೆಣ್ಣುಮಗಳು

    ಪುತ್ರಿಯನ್ನು ಹೂಳಲು ಹೋದ ತಂದೆಗೆ ಸಿಕ್ಕಳು ಜೀವಂತ ಹೆಣ್ಣುಮಗಳು

    ಲಕ್ನೋ: ಮರಣ ಹೊಂದಿದ ತನ್ನ ಹೆಣ್ಣು ಮಗುವಿನ ಶವನ್ನು ಹೂಳಲು ಹೋದ ತಂದೆಯೊಬ್ಬರಿಗೆ ಜೀವಂತ ಹೆಣ್ಣು ಮಗು ಸಿಕ್ಕಿರುವ ವಿಚಿತ್ರ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ.

    ವೃತ್ತಿಯಲ್ಲಿ ವ್ಯಾಪಾರಿಯಾಗಿರುವ ಹಿತೇಶ್ ಕುಮಾರ್ ಸಿರೋಹಿ ಅವರ ಪತ್ನಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆದರೆ ಅವಧಿಗೂ ಮುನ್ನಾ ಅಂದರೆ ಏಳು ತಿಂಗಳಿಗೆ ಮಗು ಹುಟ್ಟಿದ ಕಾರಣ ಕೆಲವೇ ಗಂಟೆಗಳಲ್ಲಿ ಮಗು ಸಾವನ್ನಪ್ಪಿತ್ತು. ಈ ಮಗುವಿನ ಶವವನ್ನು ಅಂತ್ಯಕ್ರಿಯೆ ಮಾಡಲು ಗುಂಡಿ ತೆಗೆಯುವಾಗ ಇನ್ನೊಂದು ಜೀವಂತ ಹೆಣ್ಣು ಮಗು ಅವರಿಗೆ ಸಿಕ್ಕಿದೆ.

    ಮಗುವಿನ ಶವ ಹೂಳಲು ಗುಂಡಿ ತೆಗೆಯುವ ಸಮಯದಲ್ಲಿ ಸುಮಾರು ಮೂರು ಅಡಿ ಗುಂಡಿ ತೆಗೆದ ನಂತರ ಮಣ್ಣಿನ ಮಡಿಕೆಯಲ್ಲಿ ಒಂದು ಹೆಣ್ಣು ಮಗು ಇರುವುದು ಕಂಡುಬಂದಿದೆ. ತಕ್ಷಣ ಅದನ್ನು ಹೊರತೆಗೆದ ಹಿತೇಶ್ ಮಗುವಿಗೆ ಹಾಲು ಕುಡಿಸಿ, ಹತ್ತಿರದ ಆಸ್ಪತ್ರೆಗೆ ಮಗುವನ್ನು ದಾಖಲು ಮಾಡಿದ್ದಾರೆ. ಈಗ ಮಗು ಆರೋಗ್ಯವಾಗಿದೆ ಎಂದು ವೈದ್ಯರು ಹೇಳಿದ್ದಾರೆ.

    ಈ ವಿಚಾರವಾಗಿ ಮಾತನಾಡಿರುವ ಪೊಲೀಸ್ ಅಧಿಕಾರಿ ಶೈಲೇಂದ್ರ ಪಾಂಡೆ, ಈ ವಿಚಾರವಾಗಿ ಪ್ರಕರಣ ದಾಖಲಾಗಿದೆ. ನಾವು ಈ ಮಗುವನ್ನು ಜೀವಂತ ಸಮಾಧಿ ಮಾಡಿರುವ ಪೋಷಕರನ್ನು ಹುಡುಕುತ್ತಿದ್ದೇವೆ. ಈ ವಿಚಾರ ತಿಳಿದು ಬರೇಲಿಯ ಚೀನಾಪುರಾದ ಶಾಸಕ ರಾಜೇಶ್ ಮಿಶ್ರಾ ಮಗುವಿನ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ಹೇಳಿದ್ದಾರೆ. ಈಗ ಮಗುವನ್ನು ನಾವು ಜಿಲ್ಲಾಸ್ಪತ್ರೆಗೆ ದಾಖಲು ಮಾಡಿದ್ದು, ಮಗು ಸುರಕ್ಷಿತವಾಗಿದೆ ಎಂದು ಹೇಳಿದ್ದಾರೆ.

  • ಮೋದಿ ಮಂದಿರ ನಿರ್ಮಾಣಕ್ಕೆ ಮುಂದಾದ ಮುಸ್ಲಿಂ ದಂಪತಿ

    ಮೋದಿ ಮಂದಿರ ನಿರ್ಮಾಣಕ್ಕೆ ಮುಂದಾದ ಮುಸ್ಲಿಂ ದಂಪತಿ

    ಲಕ್ನೋ: ಪ್ರಧಾನಿ ಮೋದಿ ಅವರ ಹೆಸರಿನಲ್ಲಿ ಮೋದಿ ಮಂದಿರ ಎಂಬ ಮ್ಯೂಸಿಯಂ ಕಟ್ಟಲು ಮುಜಪ್ಫರ್‍ನಗರದ ಮುಸ್ಲಿಂ ದಂಪತಿ ತೀರ್ಮಾನಿಸಿದ್ದಾರೆ.

    ಬಿಜೆಪಿಯ ಕಾರ್ಯಕರ್ತರಾದ ಸಮರ್ ಗಜ್ನಿ ಮತ್ತು ನಗರದ ಅಲ್ಪಸಂಖ್ಯಾತ ಬಿಜೆಪಿ ಮಹಿಳಾ ಮೋರ್ಚಾ ಘಟಕದ ಅಧ್ಯಕ್ಷೆಯಾದ ಸಮರ್ ಪತ್ನಿ ರೂಬಿ ಗಜ್ನಿ ಸೇರಿದಂತೆ ಹಲವು ಕಾರ್ಯಕರ್ತರು ಮೋದಿ ಮಂದಿರ ಕಟ್ಟಲು ಅನುಮತಿ ಕೊಡುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ.

    ಈ ವಿಚಾರವಾಗಿ ಮಾತನಾಡಿರುವ ಸಮರ್ ಗಜ್ನಿ, ಪ್ರಧಾನಿ ಮೋದಿ ಅವರು ದೇಶದಲ್ಲಿ ಉತ್ತಮವಾದ ಆಡಳಿತ ನಡೆಸಿದ್ದಾರೆ. ಮುಸ್ಲಿಂ ಮಹಿಳೆಯರಿಗೆ ಕಂಟಕವಾದ ತ್ರಿವಳಿ ತಲಾಖ್ ಅನ್ನು ರದ್ದು ಮಾಡಿದ್ದಾರೆ. ಹೊರ ದೇಶಗಳಲ್ಲೂ ಮೋದಿ ಅವರ ಸಾಧನೆ ಗುರುತಿಸಿ ಪ್ರಶಸ್ತಿ ನೀಡುತ್ತಿದ್ದಾರೆ. ಅದ್ದರಿಂದ ನಾವು ನಮ್ಮ ಪ್ರದೇಶದಲ್ಲಿ ಮೋದಿ ಮಂದಿರ ಎಂಬ ಹೆಸರಿನ ಮ್ಯೂಸಿಯಂ ಅನ್ನು ಕಟ್ಟಲು ಮುಂದಾಗಿದ್ದೇವೆ ಎಂದು ಹೇಳಿದ್ದಾರೆ.

    ಯುಎಇ ಸರ್ಕಾರ ತಮ್ಮ ದೇಶದ ಅತ್ಯುತ್ತಮ ನಾಗರಿಕ ಪ್ರಶಸ್ತಿಯಾದ ‘ಆರ್ಡರ್ ಆಫ್ ಜಾಯದ್’ ಪ್ರಶಸ್ತಿ ನೀಡಿ ಗೌರವಿಸಿದ ಮೇಲೆ ನಮಗೂ ಈ ರೀತಿಯಲ್ಲಿ ಮೋದಿ ಅವರಿಗೇ ಏನಾದರೂ ಕಾಣಿಕೆ ನೀಡಬೇಕು ಎಂದು ನಾವು ತೀರ್ಮಾನ ಮಾಡಿದ್ದೆವು. ಈಗ ಅದರಂತೆ ನಮ್ಮ ಸ್ವಂತ ಜಾಗದಲ್ಲೇ ಮೋದಿ ಮಂದಿರ ಎಂಬ ಹೆಸರಿನಲ್ಲಿ ಒಂದು ಮ್ಯೂಸಿಯಂ ಕಟ್ಟಲು ತೀರ್ಮಾನ ಮಾಡಿದ್ದೇವೆ ಎಂದು ಹೇಳಿದ್ದಾರೆ.

    ಈ ಯೋಜನೆಯ ಬಗ್ಗೆ ಮಾಹಿತಿ ನೀಡಿರುವ ಸಮರ್ ಅವರ ಪತ್ನಿ ರೂಬಿ ಗಜ್ನಿ, ನಾವು ಮೋದಿ ಅವರ ಹೆಸರಿನಲ್ಲಿ ಮ್ಯೂಸಿಯಂ ಕಟ್ಟಲು ತೀರ್ಮಾನ ಮಾಡಿದ್ದೇವೆ. ಈ ಮ್ಯೂಸಿಯಂಗೆ ಮೋದಿ ಮಂದಿರ್ ಎಂಬ ಹೆಸರು ಇಡುತ್ತೇವೆ. ಈ ಮ್ಯೂಸಿಯಂನಲ್ಲಿ ಮೋದಿಗೆ ಸಂಬಂಧ ಪಟ್ಟ ಮಾಹಿತಿ ಎಲ್ಲವನ್ನು ಇಲ್ಲಿ ಪ್ರದರ್ಶನ ಮಾಡುತ್ತೇವೆ ಎಂದು ಹೇಳಿದ್ದಾರೆ.

  • 87ನೇ ವಾಯಪಡೆಯ ದಿನಾಚರಣೆಯಲ್ಲಿ ಭಾಗವಹಿಸಿದ ಕ್ಯಾಪ್ಟನ್ ಸಚಿನ್ ತೆಂಡೂಲ್ಕರ್

    87ನೇ ವಾಯಪಡೆಯ ದಿನಾಚರಣೆಯಲ್ಲಿ ಭಾಗವಹಿಸಿದ ಕ್ಯಾಪ್ಟನ್ ಸಚಿನ್ ತೆಂಡೂಲ್ಕರ್

    ಲಕ್ನೋ: ಇಂದು ಗಾಜಿಯಾಬಾದ್‍ನ ಹಿಂಡನ್ ವಾಯುಪಡೆ ನಿಲ್ದಾಣದಲ್ಲಿ ನಡೆದ ಭಾರತೀಯ ವಾಯುಪಡೆಯ (ಐಎಎಫ್) 87 ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ ಸಚಿನ್ ತೆಂಡೂಲ್ಕರ್ ಭಾಗವಹಿಸಿದ್ದರು.

    2010ರ ಸೆಪ್ಟೆಂಬರ್ ನಲ್ಲಿ ಭಾರತೀಯ ವಾಯುಸೇನೆಯಲ್ಲಿ ಗ್ರೂಪ್ ಕ್ಯಾಪ್ಟನ್ ರ‌್ಯಾಂಕ್ ಪಡೆದ ಸಚಿನ್ ಅವರು, ಸಮವಸ್ತ್ರ ಧರಿಸಿ ಪಾಲ್ಗೊಂಡರು. ಇವರ ಜೊತೆಗೆ ಕಳೆದ ತಿಂಗಳು ಅಧಿಕಾರ ವಹಿಸಿಕೊಂಡ ಏರ್ ಚೀಫ್ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ ಸೇರಿದಂತೆ ಭಾರತೀಯ ವಾಯುಪಡೆಯ ಹಲವಾರು ಉನ್ನತ ಶ್ರೇಣಿಯ ಅಧಿಕಾರಿಗಳು ಭಾಗವಹಿಸಿದರು.

    ತಮ್ಮ ಪತ್ನಿ ಅಂಜಲಿ ತೆಂಡೂಲ್ಕರ್ ಅವರೊಂದಿಗೆ ಮೆರವಣಿಗೆಗೆ ಆಗಮಿಸಿದ ಸಚಿನ್ ಅವರನ್ನು ವಾಯುಪಡೆಯ ಅಧಿಕಾರಿಗಳು ಸ್ವಾಗತಿಸಿದರು. ಕಳೆದ ವರ್ಷ ನಡೆದ ಭಾರತೀಯ ವಾಯುಪಡೆಯ ದಿನಾಚರಣೆಯ ಸಂದರ್ಭದಲ್ಲೂ ಸಚಿನ್ ಪಾಲ್ಗೊಂಡಿದ್ದರು.

    ಇಂದು ಹಿಂಡನ್ ವಾಯುನೆಲೆಯಲ್ಲಿ ನಡೆಯುವ ವಾಯುಪಡೆಯ ದಿನದ ಮೆರವಣಿಗೆಯಲ್ಲಿ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮನ್ ಮಿಗ್ ಬೈಸನ್ ವಿಮಾನವನ್ನು ಹಾರಿಸಿದ್ದಾರೆ. ಇದರ ಜೊತೆಗೆ ಈ ವರ್ಷದ ಆರಂಭದಲ್ಲಿ ಫೆಬ್ರವರಿ 26 ರಂದು ಭಾರತೀಯ ವಾಯುಪಡೆಯು ನಡೆಸಿದ ಬಾಲಕೋಟ್ ವೈಮಾನಿಕ ದಾಳಿಯ ಭಾಗವಾಗಿದ್ದ ಎಲ್ಲ ಏರ್ ಫೈಟರ್ ಪೈಲಟ್‍ಗಳು ಈ ದಿನ ತಮ್ಮ ವಿಮಾನಗಳನ್ನು ಹಾರಿಸಲಿದ್ದಾರೆ.

    ವಾಯುಪಡೆಯ ಮುಖ್ಯಸ್ಥ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ ಮಾತನಾಡಿ, ನಮ್ಮ ಮೇಲೆ ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸಕ್ಕೆ ವಾಯುಪಡೆ ಕೃತಜ್ಞವಾಗಿದೆ. ನಾವು ನಮ್ಮ ರಾಷ್ಟ್ರೀಯ ಹಿತಾಸಕ್ತಿ ಕಾಪಾಡುವ ನಿಟ್ಟಿನಲ್ಲಿ ಹೋರಾಡುತ್ತೇವೆ. ನಾನು ನಮ್ಮ ವಾಯು ಪಡೆಯ ಯೋಧರ ಪರವಾಗಿ ನಮ್ಮ ರಾಷ್ಟ್ರಕ್ಕೆ ಈ ಭರವಸೆ ನೀಡುತ್ತೇನೆ ಎಂದು ತಿಳಿಸಿದರು.

    ವಿಶ್ವ ಕ್ರಿಕೆಟ್‍ನಲ್ಲೇ ವಿಶ್ವ ದಾಖಲೆಯನ್ನು ನಿರ್ಮಿಸಿರುವ ಸಚಿನ್ ತೆಡೂಲ್ಕರ್ ಅವರಿಗೆ, 1994 ರಲ್ಲಿ ಅರ್ಜುನ ಪ್ರಶಸ್ತಿ, ರಾಜೀವ್ ಗಾಂಧಿ ಖೇಲ್ ರತ್ನ (1997-98), ಪದ್ಮಶ್ರೀ (1999) ಮತ್ತು 2008 ರಲ್ಲಿ ಪದ್ಮವಿಭೂಷಣ ಪ್ರಶಸ್ತಿಗಳನ್ನು ಭಾರತ ಸರ್ಕಾರ ನೀಡಿದೆ.

  • ಪ್ರಿಯಾಂಕ ಗಾಂಧಿ ಮುಂದೆ ಮಿಷನ್-2022

    ಪ್ರಿಯಾಂಕ ಗಾಂಧಿ ಮುಂದೆ ಮಿಷನ್-2022

    ಲಕ್ನೋ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಸದ್ಯ ಮಿಷನ್-2022ಗಾಗಿ ಕೆಲಸ ಮಾಡುತ್ತಿದ್ದಾರೆ. ಪೂರ್ವ ಉತ್ತರ ಪ್ರದೇಶದ ಉಸ್ತುವಾರಿಯಾಗಿರುವ ಪ್ರಿಯಾಂಕ ಗಾಂಧಿ 2022ರ ವಿಧಾನಸಭಾ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದಾರೆ. ಈ ಸಂಬಂಧ ಉತ್ತರ ಪ್ರದೇಶದಲ್ಲಿಯೇ ಉಳಿದುಕೊಳ್ಳಲು ನಿರ್ಧರಿಸಿದ್ದು, ಮನೆಯನ್ನು ಸಹ ಹುಡುಕುತ್ತಿದ್ದಾರೆ.

    ಲೋಕಸಭಾ ಚುನಾವಣೆಯಿಂದ ಸಕ್ರಿಯ ರಾಜಕಾರಣದಲ್ಲಿ ತೊಡಗಿಕೊಂಡಿರುವ ಪ್ರಿಯಾಂಕ ಗಾಂಧಿ ಉತ್ತರ ಪ್ರದೇಶದ ಬಿಜೆಪಿ ಸರ್ಕಾರವನ್ನು ಟೀಕಿಸುತ್ತಾ ಬಂದಿದ್ದಾರೆ. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುವ ಜವಾಬ್ದಾರಿಯನ್ನು ಹೈಕಮಾಂಡ್ ಪ್ರಿಯಾಂಕ ಅವರಿಗೆ ನೀಡಿದೆ. ಹೀಗಾಗಿ ರಾಜ್ಯಾದ್ಯಂತ ಪಕ್ಷ ಸಂಘಟನೆಗೆ ಪ್ರಿಯಾಂಕ ಮುಂದಾಗಿದ್ದಾರೆ ಎಂದು ವರದಿಯಾಗಿದೆ.

    ಮನೆಯಲ್ಲಿ ಕಾರ್ಯಕ್ರಮ ನಡೆಸಲು, ಸಾಲು ಸಾಲು ಸಭೆಗಳನ್ನು ನಡೆಸಲು ಮತ್ತು ಕಾರ್ಯಕರ್ತರಿಗೆ ವಿಶ್ರಾಂತಿಗೆ ಅನುಕೂಲವಾಗುವಂತಹ ಬೃಹತ್ ಮನೆಯ ಹುಡುಕುವಂತೆ ಪ್ರಿಯಾಂಕ ಸೂಚಿಸಿದ್ದಾರೆ. ಸ್ಥಳೀಯ ಕೈ ಮುಖಂಡರು ಕೆಲವು ಮನೆಗಳನ್ನು ತೋರಿಸಿದ್ದು, ಪ್ರಿಯಾಂಕ ಗಾಂಧಿ ಒಪ್ಪಿಗೆ ಸೂಚಿಸಬೇಕಿದೆ. ಲಕ್ನೋ ನಗರದ ನಾರಾಯಣ ರಸ್ತೆಯಲ್ಲಿರುವ ಹಿರಿಯ ಕಾಂಗ್ರೆಸ್ ನಾಯಕಿ ಶೀಲಾ ಕೌಲ್ ಅವರ ಮನೆಯನ್ನು ಅಂತಿಮಗೊಳಿಸುವ ಸಾಧ್ಯತೆಗಳಿವೆ.

    ಉತ್ತರ ಪ್ರದೇಶದಲ್ಲಿ ಸರಿಯಾದ ರೀತಿಯಲ್ಲಿ ಪಕ್ಷ ಸಂಘಟನೆ ಆಗುತ್ತಿಲ್ಲ ಮತ್ತು ಕಾರ್ಯಕರ್ತರಿಗೆ ಸೂಕ್ತ ತರಬೇತಿ ಸಿಗುತ್ತಿಲ್ಲ ಎಂದು ಉತ್ತರ ಪ್ರದೇಶದ ಹಿರಿಯ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗಾಗಿ ಪ್ರಿಯಾಂಕ ಉತ್ತರ ಪ್ರದೇಶದಲ್ಲಿ ಮನೆ ಮಾಡಲಿದ್ದಾರೆ.

  • ಕೋತಿ ಕೊಂದಿದ್ದಕ್ಕೆ ಸಿಡಿದೆದ್ದ ಭಜರಂಗದಳ- ಶುರುವಾಯ್ತು ಕೋಮು ಗಲಭೆ

    ಕೋತಿ ಕೊಂದಿದ್ದಕ್ಕೆ ಸಿಡಿದೆದ್ದ ಭಜರಂಗದಳ- ಶುರುವಾಯ್ತು ಕೋಮು ಗಲಭೆ

    ಲಕ್ನೋ: ಅನ್ಯ ಕೋಮಿನ ಯುವಕರು ಕೋತಿಯನ್ನು ಗುಂಡಿಕ್ಕಿ ಕೊಂದಿದ್ದಕ್ಕೆ ಉತ್ತರ ಪ್ರದೇಶದ ಶಾಮ್ಲಿ ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ಎದುರಾಗಿದೆ. ಕೋತಿಯನ್ನ ಹತ್ಯೆಗೈದಿರುವುದೇ ಕೋಮು ಗಲಭೆಗೆ ಕಾರಣವಾಗಿದೆ.

    ಶಾಮ್ಲಿ ಗ್ರಾಮದ ನಿವಾಸಿಗಳಾದ ಆಸೀಫ್, ಹಫೀಜ್ ಮತ್ತು ಅನೀಸ್ ಮೂವರು ಸಹೋದರರು ಕೋತಿಯೊಂದನ್ನ ಗುಂಡಿಕ್ಕಿ ಕೊಂದಿದ್ದರು. ಯುವಕರ ಈ ಕೃತ್ಯ ಭಜರಂಗದಳ ಹಾಗೂ ಸ್ಥಳೀಯರ ಕೆಂಗಣ್ಣಿಗೆ ಕಾರಣವಾಗಿದೆ. ಹಿಂದೂ ಧರ್ಮದಲ್ಲಿ ಕೋತಿಯನ್ನು ಆಂಜನೇಯ ದೇವರೆಂದು ಪೂಜಿಸಲಾಗುತ್ತದೆ. ಹೀಗಾಗಿ ಕೋತಿಗಳನ್ನು ಹಿಂಸಿಸಲು ಹಾಗೂ ಕೊಲ್ಲಲು ನಮ್ಮ ಅವಕಾಶವಿಲ್ಲ. ಹೀಗಿರುವಾಗ ಈ ಮೂವರು ಅನ್ಯ ಕೋಮಿನ ಯುವಕರು ಬೇಕು ಬೇಕಂತಲೇ ಕೋತಿಯನ್ನು ಕೊಂದು ಕ್ರೌರ್ಯ ಮೆರೆದಿದ್ದಾರೆ ಎಂದು ಭಜರಂಗದಳ ಕಾರ್ಯಕರ್ತರು ಹಾಗೂ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಆಸೀಫ್, ಹಫೀಜ್ ಮತ್ತು ಅನೀಸ್ ಮೂವರು ಕೋತಿಯೊಂದನ್ನು ಸುತ್ತುವರಿದು ನಿಂತಿದ್ದರು. ಅವರಲ್ಲಿ ಓರ್ವ ಯುವಕ ಬಂದೂಕಿನಿಂದ ಕೋತಿಗೆ ಗುಂಡು ಹೊಡೆದಿದ್ದು, ಕೋತಿಯ ಸೊಂಟದ ಭಾಗದಲ್ಲಿ ಗುಂಡು ತಗುಲಿ ಗಾಯಗೊಂಡು ಮೂಕ ಪ್ರಾಣಿ ಪ್ರಾಣ ಬಿಟ್ಟಿತು ಎಂದು ಸ್ಥಳೀಯರು ಆರೋಪಿಸಿದ್ದಾರೆ.

    ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ತಿಳಿದ ಬಳಿಕ ಸ್ಥಳಕ್ಕೆ ಬಂದ ಸಿಬ್ಬಂದಿ ಕೋತಿಯ ಮರಣೋತ್ತರ ಪರೀಕ್ಷೆ ಮಾಡಿಸಿ, ಅದರ ಅಂತ್ಯಸಂಸ್ಕಾರ ಮಾಡಿದ್ದಾರೆ. ಅಲ್ಲದೆ ಮೂವರು ಆರೋಪಿಗಳ ವಿರುದ್ಧ ಪ್ರಕರಣವನ್ನೂ ದಾಖಲಿಸಲಾಗಿದೆ.

    ಇದರ ಜೊತೆಗೆ ಭಜರಂಗದಳದ ಕಾರ್ಯಕರ್ತರು ಸಹ ಯುವಕರ ಕೃತ್ಯವನ್ನು ತೀವ್ರವಾಗಿ ಖಂಡಿಸಿ, ಆದಷ್ಟು ಬೇಗ ಆರೋಪಿಗಳನ್ನು ಬಂಧಿಸಿ ಶಿಕ್ಷೆ ನೀಡಿ. ಇಲ್ಲವಾದರೆ ಕೋತಿ ಸಾವಿಗೆ ನ್ಯಾಯ ಸಿಗುವವರೆಗೂ ಹೋರಾಡುತ್ತೇವೆ ಎಂದು ಹರಿಹಾಯ್ದಿದ್ದಾರೆ.

  • ದುರ್ಗಾ ಪೂಜೆಗೆ ತೆರಳುತ್ತಿದ್ದಾಗ 4ರ ಬಾಲಕಿ ಮೇಲೆ ಅತ್ಯಾಚಾರ

    ದುರ್ಗಾ ಪೂಜೆಗೆ ತೆರಳುತ್ತಿದ್ದಾಗ 4ರ ಬಾಲಕಿ ಮೇಲೆ ಅತ್ಯಾಚಾರ

    ಲಕ್ನೋ: 4 ವರ್ಷದ ಬಾಲಕಿ ಮೇಲೆ 28 ವರ್ಷದ ಯುವಕನೋರ್ವ ಅತ್ಯಾಚಾರ ಎಸಗಿರುವ ಘಟನೆ ಶುಕ್ರವಾರ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ.

    ಪೊಲೀಸರ ಮಾಹಿತಿ ಪ್ರಕಾರ, ಬಾಲಕಿ ‘ದುರ್ಗಾ ಪೂಜೆ’ ನೋಡಲು ತನ್ನ ಮನೆಯಿಂದ ಹೊರಗೆ ಹೋದಾಗ ಈ ಘಟನೆ ಸಂಭವಿಸಿದೆ. ಸ್ಥಳೀಯರು ಆರೋಪಿಯನ್ನು ಹಿಡಿದಿದ್ದು, ಆರೋಪಿಯನ್ನು ವಿನೋದ್ ಗಿರಿ ಎಂದು ಗುರುತಿಸಲಾಗಿದೆ. ನಂತರ ಆತ ಪರಾರಿಯಾಗಿದ್ದಾನೆ ಎಂದು ತಿಳಿಸಿದ್ದಾರೆ.

    ಪೋಕ್ಸೊ ಮತ್ತು ಐಪಿಸಿ ಸೆಕ್ಷನ್ 376(ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯ ತಡೆ) ಅಡಿ ಬಸ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

    ಬಾಲಕಿಗೆ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಚೇತರಿಸಿಕೊಳ್ಳುತ್ತಿದ್ದಾಳೆ. ಶೀಘ್ರದಲ್ಲೇ ಬಾಲಕಿಯನ್ನು ಡಿಸ್ಚಾರ್ಜ್ ಮಾಡಲಾಗುವುದು. ಸ್ಥಳೀಯರು ಆರೋಪಿಯನ್ನು ಹಿಡಿದಿದ್ದರೂ ಆತ ತಪ್ಪಿಸಿಕೊಂಡಿದ್ದಾನೆ ಎಂದು ಬಸ್ತಿ ಎಸ್‍ಪಿ ಪಂಕಜ್ ಕುಮಾರ್ ಮಾಹಿತಿ ನೀಡಿದ್ದಾರೆ.

    ಆರೋಪಿಯನ್ನು ಹಿಡಿಯಲು ತಂಡವನ್ನು ರಚಿಸಲಾಗಿದ್ದು, ಶೀಘ್ರದಲ್ಲೇ ಆತನನ್ನು ಬಂಧಿಸಿ ಜೈಲಿಗಟ್ಟಲಾಗುವುದು ಎಂದು ಐಜಿ ಅಶುತೋಷ್ ಕುಮಾರ್ ಭರವಸೆ ನೀಡಿದ್ದಾರೆ.

  • ಸೈಕಲ್ ನೀಡಲು ನಿರಾಕರಿಸಿದ ಬಾಲಕನ ಗುಪ್ತಾಂಗ ಕತ್ತರಿಸಲು ಯತ್ನಿಸಿದ ಸಾಧು

    ಸೈಕಲ್ ನೀಡಲು ನಿರಾಕರಿಸಿದ ಬಾಲಕನ ಗುಪ್ತಾಂಗ ಕತ್ತರಿಸಲು ಯತ್ನಿಸಿದ ಸಾಧು

    ಲಕ್ನೋ: ಸೈಕಲ್ ಕೇಳಿದಾಗ ನೀಡಲು ನಿರಾಕರಿಸಿದ್ದಕ್ಕೆ ಸಿಟ್ಟಿಗೆದ್ದ ಸಾಧುವೊಬ್ಬ ಕತ್ತಿಯಿಂದ ಬಾಲಕನ ಗುಪ್ತಾಂಗ ಕತ್ತರಿಸಲು ಯತ್ನಿಸಿ, ಹಲ್ಲೆ ಮಾಡಿ ಕ್ರೌರ್ಯ ಮೆರೆದ ಘಟನೆ ಉತ್ತರ ಪ್ರದೇಶದ ಫರುಖಾಬಾದ್‍ನಲ್ಲಿ ನಡೆದಿದೆ.

    ಬುಧವಾರ ರಾತ್ರಿ ಈ ಘಟನೆ ನಡೆದಿದೆ. ಚೋನಪುರ ನಿವಾಸಿಯಾಗಿರುವ 12 ವರ್ಷದ ಬಾಲಕ ಮೇಲೆ ಅದೇ ಗ್ರಾಮದ ಸಾಧು ಹಲ್ಲೆ ಮಾಡಿದ್ದಾನೆ. ಬುಧವಾರ ರಾತ್ರಿ ಬಾಲಕ ರಸ್ತೆಯಲ್ಲಿ ಸೈಕಲ್ ಮೇಲೆ ಹೋಗುತ್ತಿದ್ದನು. ಈ ವೇಳೆ ಆತನಿಗೆ ಅಡ್ಡಗಟ್ಟಿದ ಸಾಧು ಬಾಲಕನ ಸೈಕಲ್ ತನಗೆ ಕೊಡುವಂತೆ ಕೇಳಿದ್ದಾನೆ. ಆಗ ಬಾಲಕ ಸೈಕಲ್ ನೀಡಲು ನಿರಾಕರಿಸಿದ್ದಾನೆ. ಇಷ್ಟಕ್ಕೆ ಕೋಪಗೊಂಡ ಸಾಧು ತನ್ನ ಬಳಿ ಇದ್ದ ಕತ್ತಿಯಿಂದ ಬಾಲಕನ ಗುಪ್ತಾಂಗ ಕತ್ತರಿಸಲು ಯತ್ನಿಸಿ ಹಲ್ಲೆ ಮಾಡಿದ್ದಾನೆ.

    ಸಾಧುವಿನ ಕೃರ್ತಕ್ಕೆ ಬಾಲಕ ಗಂಭಿರ ಗಾಯಗೊಂಡಿದ್ದು, ನೋವಿನಿಂದ ಕೂಗಿಕೊಳ್ಳುತ್ತಿದ್ದಂತೆ ಸಾಧು ಸ್ಥಳದಿಂದ ಪರಾರಿಯಾಗಿದ್ದಾನೆ. ಬಾಲಕನ ಕಿರುಚಾಟ ಕೇಳಿ ಗ್ರಾಮಸ್ಥರು ಸ್ಥಳಕ್ಕೆ ಬಂದು ಆತನನ್ನು ಕರೆದುಕೊಂಡು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಬಾಲಕನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

    ಬಾಲಕನ ಪೋಷಕರು ಹಾಗೂ ಗ್ರಾಮಸ್ಥರು ಸೇರಿ ಸಾಧು ವಿರುದ್ಧ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಈ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು, ಸಾಧುವನ್ನು ಆದಷ್ಟು ಬೇಗ ಪತ್ತೆಹಚ್ಚಿ ಬಂಧಿಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.