Tag: uttar pradesh

  • ಯುಪಿ ಪೊಲೀಸರಿಗೆ ಹೆದರಿ 12,291 ಕ್ರಿಮಿನಲ್‍ಗಳು ಶರಣು

    ಯುಪಿ ಪೊಲೀಸರಿಗೆ ಹೆದರಿ 12,291 ಕ್ರಿಮಿನಲ್‍ಗಳು ಶರಣು

    ಲಕ್ನೋ: ಕ್ರಿಮಿನಲ್ ಗಳ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ಪೊಲೀಸರಿಗೆ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರ ಸಂಪೂರ್ಣ ಬೆಂಬಲ ನೀಡಿದ್ದು, ಪರಿಣಾಮವಾಗಿ ಇದುವರೆಗೂ 12 ಸಾವಿರದ 291 ಕ್ರಿಮಿನಲ್ ಗಳು ಶರಣಾಗಿದ್ದಾರೆ ಎಂದು ಯುಪಿ ಡಿಜಿಪಿ ಒಪಿ ಸಿಂಗ್ ತಿಳಿಸಿದ್ದಾರೆ.

    ಖಾಸಗಿ ಮಾಧ್ಯಮವೊಂದಕ್ಕೆ ಮಾಹಿತಿ ನೀಡಿರುವ ಡಿಜಿಪಿ, ಕ್ರಿಮಿನಲ್ ಚಟುವಟಿಕೆಯಲ್ಲಿ ಭಾಗಿಯಾಗಿರುವವರಿಗೆ ಭಯ ಆರಂಭವಾಗಿದ್ದು, ಸ್ವತಃ ಅವರೇ ತಮ್ಮ ಜಾಮೀನು ರದ್ದು ಮಾಡಿ ಜೈಲಿನಲ್ಲೇ ಉಳಿದುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.

    ಆಗ್ರಾ ಪೊಲೀಸರು ಸೈಬರ್ ಕ್ರೈಂ ವಿಭಾಗವನ್ನು ಕೂಡ ಆರಂಭಿಸಿದ್ದು, ಇದರಿಂದ ಅಪರಾಧ ಪ್ರಕರಣಗಳನ್ನು ತಡೆಯಲು ಸಹಕಾರಿ ಆಗಲಿದೆ. ಆಗ್ರಾ ಐತಿಹಾಸಿಕ ನಗರ ಆಗಿರುವುದರಿಂದ ಪ್ರವಾಸಿ ತಾಣವಾಗಿದೆ. ವಿಶ್ವದ ಬೇರೆ ಬೇರೆ ಭಾಗದಿಂದ ಇಲ್ಲಿಗೆ ಪ್ರವಾಸಿಗರು ಆಗಮಿಸುತ್ತಾರೆ. ಆದರೆ ಇಂತಹ ಕ್ರಿಮಿನಲ್ ಗಳಿಂದ ಆಗ್ರಾ ನಗರಕ್ಕೆ ಕಪ್ಪು ಚುಕ್ಕೆ ಬರುತ್ತಿತ್ತು. ಅದ್ದರಿಂದ ತಪ್ಪು ಮಾಡಿದವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದೇವೆ ಎಂದು ಆಗ್ರಾ ಎಸ್‍ಎಸ್‍ಪಿ ಅಮಿತ್ ಪಾಠಕ್ ತಿಳಿಸಿದ್ದಾರೆ.

    ಪ್ರತಿ ಪೊಲೀಸ್ ಠಾಣೆಯಲ್ಲಿ ನಡೆಯುವ ಕ್ರಿಮಿನಲ್ ಅಪರಾಧಗಳು ಸೇರಿದಂತೆ, ಟ್ರಾಫಿಕ್ ಸಮಸ್ಯೆಗೆ ಆಯಾ ಪ್ರದೇಶದ ಠಾಣೆಗಳನ್ನೇ ಹೊಣೆ ಮಾಡಲಾಗುತ್ತಿದೆ. ಇತ್ತೀಚೆಗೆ ಕರ್ತವ್ಯಲೋಪ ಆರೋಪ ಮಾಡಿದ ಮೇರೆಗೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಅಲ್ಲದೇ ಪೊಲೀಸರಿಗೆ ಎನ್‍ಜಿಒಗಳು ಕೂಡ ಸಹಕಾರ ನೀಡುತ್ತಿವೆ ಎಂದರು.

    ಕೆಲ ದಿನಗಳ ಹಿಂದೆ ನಡೆದ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಪ್ರಮುಖ 3 ರಾಜ್ಯಗಳನ್ನು ಕಳೆದುಕೊಂಡ್ರೂ ಸಿಎಂ ಯೋಗಿ ಆದಿತ್ಯನಾಥ್ ಅವರು ರಾಜ್ಯದಲ್ಲಿ ಕ್ರಿಮಿನಲ್ ಚಟುವಟಿಕೆ ನಿಯಂತ್ರಣಕ್ಕೆ ಹೆಚ್ಚಿನ ಒತ್ತು ನೀಡಿದ್ದಾರೆ. ಇದರಂತೆ ಕ್ರಿಮಿನಲ್ ಮೇಲೆ ಕಠಿಣ ಕ್ರಮಕ್ಕೆ ಮುಂದಾಗಿರುವ ಉತ್ತರ ಪ್ರದೇಶ ಡಿಜಿಪಿ ಎಲ್ಲಾ ಪೊಲೀಸ್ ಠಾಣೆಗಳು ಕ್ರಿಮಿನಲ್ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಯೋಗಿ ಬೇಡ ಮೋದಿಯೇ ಪ್ರಧಾನಿ ಅಭ್ಯರ್ಥಿ ಆಗಲಿ- ಪೇಜಾವರಶ್ರೀ

    ಯೋಗಿ ಬೇಡ ಮೋದಿಯೇ ಪ್ರಧಾನಿ ಅಭ್ಯರ್ಥಿ ಆಗಲಿ- ಪೇಜಾವರಶ್ರೀ

    ಉಡುಪಿ: ಪಂಚರಾಜ್ಯ ಸೋಲು ಅನುಭವಿಸಿರುವ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಉಡುಪಿಯಲ್ಲಿ ಪೇಜಾವರ ಶ್ರೀಗಳು ಸಾಕಷ್ಟು ಕಿವಿಮಾತು ಹೇಳಿದ್ದಾರೆ. ಆಂಧ್ರ ಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ವಿರೋಧ ಕಟ್ಟಿಕೊಳ್ಳಬೇಡಿ ಅಂತ ಸಲಹೆ ಕೊಟ್ಟಿದ್ದಾರೆ.

    ಪಂಚರಾಜ್ಯ ಫಲಿತಾಂಶವು ಪ್ರಧಾನಿ ಮೋದಿ ಅವರಿಗೆ ಎಚ್ಚರಿಕೆಯಾಗಿದೆ ಎಂದಿರುವ ಶ್ರೀಗಳು, ಆರ್ಥಿಕ ಸುಧಾರಣೆ ಮತ್ತು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಿ ಆದ್ಯತೆ ಕೊಡಲಿ. ಮಂದಿರ ನಿರ್ಮಾಣ ಹಿಂದೂ ಮತದಾರರ ಉತ್ಸಾಹವನ್ನು ಹೆಚ್ಚಿಸಬಹುದು. ಎನ್‍ಡಿಎ ಮೈತ್ರಿಕೂಟದ ಮೂಲಕ ಸಮಾನ ವಿಚಾರಧಾರೆಯುಳ್ಳ ಪಕ್ಷಗಳ ಜೊತೆ ಬಿಜೆಪಿ ಮೈತ್ರಿ ಸಾಧಿಸಬೇಕು ಎಂದು ತಿಳಿಸಿದರು.

    ಚಂದ್ರಬಾಬು ನಾಯ್ಡು ವಿರೋಧ ಕಟ್ಟಿಕೊಳ್ಳಬೇಡಿ:
    ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ವಿರೋಧವನ್ನು ಕಟ್ಟಿಕೊಂಡರೆ ಬಿಜೆಪಿಗೆ ನಷ್ಟವಾಗುತ್ತದೆ. ಚಂದ್ರಬಾಬು ನಾಯ್ಡು ಬಿಜೆಪಿಯನ್ನು ಬಗ್ಗುಬಡಿಯಲು ಹಠ ಹಿಡಿದಿದ್ದಾರೆ. ನೀವು ಮಾಜಿ ಪ್ರಧಾನಿ ವಾಜಪೇಯಿ ಅವರ ನೀತಿಯನ್ನು ಅನುಸರಿಸಬೇಕು ಎಂದು ಕಿವಿಮಾತು ಹೇಳಿದರು.

    ಪ್ರಧಾನಿ ಮೋದಿ ಕೆಲವು ದಿಟ್ಟ ನಿರ್ಧಾರ ತೆಗೆದುಕೊಂಡಿದ್ದಾರೆ. ಮೋದಿ ಬಗ್ಗೆ ಮೊದಲಿದ್ದ ನಿರೀಕ್ಷೆ ಈಗ ಜನರಲ್ಲಿ ಇಲ್ಲ, ಜನ ನಿರೀಕ್ಷೆ ಇಟ್ಟಷ್ಟು ಕೆಲಸ ದೇಶದಲ್ಲಿ ಆಗಿಲ್ಲ ಎಂದು ಟೀಕಿಸಿದರು. ನೋಟ್ ಬ್ಯಾನ್ ಫಲ ಜನಸಾಮಾನ್ಯರಿಗೆ ಮುಟ್ಟಿಲ್ಲ ಎಂದರು.

    ಯೋಗಿ ಪ್ರಧಾನಿ ಅಭ್ಯರ್ಥಿಯಾಗಬಾರದು:
    ಸಿಎಂ ಯೋಗಿ ಆದಿತ್ಯನಾಥ್ ಮುಂದಿನ ಪ್ರಧಾನಿ ಅಭ್ಯರ್ಥಿ ಎನ್ನುವ ವಿಚಾರ ಉತ್ತರ ಪ್ರದೇಶದ ಧರ್ಮ ಸಂಸತ್‍ನಲ್ಲಿ ಪ್ರಕಟವಾಗಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಪೇಜಾವರಶ್ರೀ, ನರೇಂದ್ರ ಮೋದಿ ಅವರೇ ಮುಂದಿನ ಪ್ರಧಾನಿ ಅಭ್ಯರ್ಥಿ ಆಗಬೇಕು. ಸಿಎಂ ಯೋಗಿ ಮೋದಿಯಷ್ಟು ಸಮರ್ಥ ಅಭ್ಯರ್ಥಿ ಅಲ್ಲ. ಆದಿತ್ಯನಾಥ್ ಅವರು ರಾಜಕಾರಣಿಯಲ್ಲ ಅವರು ಸಂತರು. ಸಂತ ಪರಂಪರೆಯ ವ್ಯಕ್ತಿ. ಉತ್ತರ ಪ್ರದೇಶದಲ್ಲಿ ಇಷ್ಟು ಕೆಲಸಗಳನ್ನು ಮಾಡಿರುವುದೇ ವಿಶೇಷ. ಆದರೆ ಅವರು ಈಗ ಪ್ರಧಾನಿ ಅಭ್ಯರ್ಥಿ ಆಗಬಾರದು ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ‘ಯೋಗಿಯನ್ನ ತನ್ನಿ – ದೇಶವನ್ನು ಉಳಿಸಿ’

    ‘ಯೋಗಿಯನ್ನ ತನ್ನಿ – ದೇಶವನ್ನು ಉಳಿಸಿ’

    – ಪ್ರಧಾನಿ ಪಟ್ಟಕ್ಕೆ ಯೋಗಿ ನೇಮಿಸಿ
    – ಉತ್ತರ ಪ್ರದೇಶದಲ್ಲಿ ಯೋಗಿ ಪರ ಬ್ಯಾನರ್

    ನವದೆಹಲಿ: ಪಂಚರಾಜ್ಯ ಚುನಾವಣೆಯಲ್ಲಿ ಮೂರು ಕಡೆಯಲ್ಲಿ ಸೋಲು ಕಂಡ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒತ್ತೊಂದು ಸವಾಲು ಎದುರಾಗಿದೆ.

    ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿಯಾಗಿ ನರೇಂದ್ರ ಮೋದಿ ಸ್ಪರ್ಧಿಸುವುದು ಬೇಡ. ಅವರ ಬದಲಾಗಿ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಕಣಕ್ಕೆ ಇಳಿಯಲಿ ಎನ್ನುವ ಬೇಡಿಕೆ ವ್ಯಕ್ತವಾಗಿದೆ.

    ಯೋಗಿ ಆದಿತ್ಯನಾಥ್ ಅವರಿಂದಾಗಿ ಪ್ರಧಾನಿ ಮೋದಿ ಜನಪ್ರಿಯತೆ ಕುಸಿಯುತ್ತಿದೆ. ಸುಳ್ಳಿಗೆ ಮತ್ತೊಂದು ಹೆಸರು ಮೋದಿ. ಹಿಂದುತ್ವದ ಫೈರ್ ಬ್ರ್ಯಾಂಡ್ ಯೋಗಿ ಆದಿತ್ಯನಾಥ್ ಹೀಗಾಗಿ ಅವರನ್ನೇ ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡಬೇಕು ಎಂದು ಉತ್ತರ ಪ್ರದೇಶದ ಕೆಲವು ಕಾರ್ಯಕರ್ತರು ಒತ್ತಾಯಿಸಿದ್ದಾರೆ.

    ಲಕ್ನೋದಲ್ಲಿ ಫೆಬ್ರವರಿ 10ರಂದು ಧರ್ಮ ಸಂಸತ್ತು ನಡೆಯಲಿದೆ. ಈ ಕಾರ್ಯಕ್ರಮ ಸ್ವಾಗತ ಕೋರಿ ಹಾಕಿರುವ ಪೋಸ್ಟರ್ ಗಳಲ್ಲಿ ಯೋಗಿ ಪರ ಉತ್ತರ ಪ್ರದೇಶ ನವ ನಿರ್ಮಾಣ ಸೇನಾ ಪ್ರಚಾರ ಮಾಡಿದೆ. ‘ಪ್ರಧಾನಿ ಪಟ್ಟಕ್ಕೆ ಯೋಗಿ’, ‘ಯೋಗಿಯನ್ನ ತನ್ನಿ – ದೇಶವನ್ನು ಉಳಿಸಿ’ ಎಂಬ ಘೋಷಣೆಯುಳ್ಳ ಪೋಸ್ಟರ್ ಗಳನ್ನು ಬೀದಿಯ ಬದಿಯಲ್ಲಿ ಹಾಕಲಾಗಿದೆ.

    ಯೋಗಿಯೇ ಯಾಕೆಬೇಕು?:
    ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಭರವಸೆ ನೀಡಿದ್ದರು. ಆದರೆ ಮತ್ತೆ ಚುನಾವಣೆ ಬಂದರೂ ಯಾವುದೇ ಬೆಳವಣಿಗೆ ಕಾಣಲಿಲ್ಲ. ಯೋಗಿ ಆದಿತ್ಯನಾಥ್ ಅವರು ರಾಮಮಂದಿರ ನಿರ್ಮಾಣದಲ್ಲಿ ಬದ್ಧರಾಗಿದ್ದಾರೆ. ಅವರು ತಮ್ಮ ಭಾಷಣದ ಮೂಲಕ ಹಿಂದೂ ಹೃದಯ ಸಾಮ್ರಾಟ್ ಅಂತ ಗುರುತಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಹಿಂದಿ ಭಾಷೆಯನ್ನು ಚೆನ್ನಾಗಿ ಅರಗಿಸಿಕೊಂಡಿರುವ ಯೋಗಿ ಧಾರ್ಮಿಕ ಮಾರ್ಗದ ಮೂಲಕ ಜನರಿಗೆ ಹತ್ತಿರವಾಗಿದ್ದಾರೆ. ಈ ಕಾರಣಕ್ಕೆ ಯೋಗಿ ಪರ ನವ ನಿರ್ಮಾಣ ಸೇನಾ ಬ್ಯಾನರ್ ಹಾಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಗೋ ಹತ್ಯೆ ಆರೋಪಿಸಿ ಗುಂಪು ಘರ್ಷಣೆ

    ಗೋ ಹತ್ಯೆ ಆರೋಪಿಸಿ ಗುಂಪು ಘರ್ಷಣೆ

    – ಉತ್ತರ ಪ್ರದೇಶದಲ್ಲಿ ಕಲ್ಲು ತೂರಿ ಪೊಲೀಸ್ ಇನ್ಸ್​ಪೆಕ್ಟರ್ ಸೇರಿ ಇಬ್ಬರ ಹತ್ಯೆ

    ಲಕ್ನೋ: ಉತ್ತರ ಪ್ರದೇಶದ ಬುಲಂದಶಹರ್ ನಲ್ಲಿ ಗೋ ಹತ್ಯೆ ಸಂಬಂಧ ಆರಂಭವಾದ ಘಟನೆ ವಿಕೋಪಕ್ಕೆ ತಿರುಗಿದ್ದು, ಗಲಾಟೆಯಲ್ಲಿ ಓರ್ವ ಎಸ್‍ಐ ಸೇರಿದಂತೆ ಇಬ್ಬರ ಹತ್ಯೆ ನಡೆದಿದೆ. ಘಟನೆಯಲ್ಲಿ ಹಲವು ಪೊಲೀಸ್ ಪೇದೆಗಳು ಮತ್ತು ಪ್ರತಿಭಟನಾಕಾರರು ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

    ಬುಲಂದ್‍ಷಹರ್ ಗ್ರಾಮದ ಹೊರವಲಯದಲ್ಲಿ ಪ್ರಾಣಿಯ ಪಳಿಯುಳಿಕೆ ಪತ್ತೆಯಾಗಿದ್ದವು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಕೆಲ ಬಲಪಂಥಿಯ ಮುಖಂಡರು ಮತ್ತು ಗ್ರಾಮಸ್ಥರು ಸಯನಾ ರೋಡ್ ಬಂದ್ ಮಾಡಿ ಪ್ರತಿಭಟನೆಗೆ ಮುಂದಾದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ರಸ್ತೆ ಸಂಚಾರ ಸುಗಮಗೊಳಿಸಲು ಪ್ರಯತ್ನಿಸಿದರು. ಈ ವೇಳೆ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ವಾಗ್ವಾದ ಆರಂಭವಾಯಿತು.

    ಪ್ರತಿಭಟನಾಕಾರು ಪತ್ತೆಯಾಗಿದ್ದ ಪ್ರಾಣಿಗಳ ಪಳಿಯುಳಿಕೆಯನ್ನು ಟ್ರಾಲಿಯನ್ನು ತುಂಬಿಕೊಂಡು ಬಂದು ಚಿಂಗಾರವಾಡಿ ಪೊಲೀಸ್ ಠಾಣೆಯೆದರು ತಂದು ನಿಲ್ಲಿಸಿದ್ದಾರೆ. ಈ ಗಲಾಟೆಯಲ್ಲಿ ಕರ್ತವ್ಯ ನಿರತ ಪೊಲೀಸ್ ಇನ್ಸ್ ಪೆಕ್ಟರ್ ಸುಬೋಧ್ ಕುಮಾರ್ ಮತ್ತು ಮತ್ತೋರ್ವ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ ಅಧಿಕಾರಿ ತಿಳಿಸಿದ್ದಾರೆ.

    ಪ್ರತಿಭಟನಾ ಸ್ಥಳ ಬೂದಿ ಮುಚ್ಚಿದ ಕೆಂಡದಂತಿದ್ದು, ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಸದ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಘಟನೆ ಕುರಿತಾಗಿ ಸಾಮಾಜಿಕ ಜಾಲತಾಣದಲ್ಲಿ ಪ್ರಚೋಧನಕಾರಿ ಸಂದೇಶಗಳನ್ನು ಹರಿ ಬಿಡಬಾರರು. ಸಾರ್ವಜನಿಕರು ಕಾನೂನನ್ನು ಕೈಗೆ ತೆಗೆದುಕೊಳ್ಳಬಾರದೆಂದು ಬುಲಂದ್‍ಷಹರ್ ಎಸ್.ಎಸ್.ಪಿ. ಕೆಬಿ ಸಿಂಗ್ ಮನವಿ ಮಾಡಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅಲಹಾಬಾದ್‍ನಲ್ಲಿ ಮೂರು ತಿಂಗಳ ಕಾಲ ಮದುವೆಗೆ ನಿರ್ಬಂಧ!

    ಅಲಹಾಬಾದ್‍ನಲ್ಲಿ ಮೂರು ತಿಂಗಳ ಕಾಲ ಮದುವೆಗೆ ನಿರ್ಬಂಧ!

    ಲಕ್ನೋ: ಕುಂಭಮೇಳದ ಹಿನ್ನೆಲೆಯಲ್ಲಿ ಅಲಹಾಬಾದ್‍ನಲ್ಲಿ 3 ತಿಂಗಳ ಕಾಲ ಕಲ್ಯಾಣ ಮಂಟಪದಲ್ಲಿ ಮದುವೆಯನ್ನು ನಿರ್ಬಂಧಿಸಿ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಆದೇಶ ಹೊರಡಿಸಿದೆ.

    ಉತ್ತರ ಪ್ರದೇಶದ ಅಲಹಬಾದ್‍ನಲ್ಲಿ 2019ರ ಜನವರಿ 15ರಿಂದ ಮಾರ್ಚ್ 4ರವರೆಗೆ ಕುಂಭಮೇಳ ನಡೆಯಲಿದೆ. ಈ ನಿಟ್ಟಿನಲ್ಲಿ ಭಕ್ತರಿಗೆ ವಸತಿ ಸೇರಿದಂತೆ ಮೂಲಸೌಲಭ್ಯ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಕಲ್ಯಾಣ ಮಂಟಪ, ಸಭಾಭವನ ಹಾಗೂ ಛತ್ರಗಳಲ್ಲಿ ಯಾವುದೇ ಕಾರ್ಯಕ್ರಮ, ಮದುವೆ ನಡೆಸುವಂತಿಲ್ಲ ಎಂದು ಸರ್ಕಾರ ಸೂಚನೆ ನೀಡಿದೆ.

    ಕುಂಭಮೇಳದ ವೇಳೆ ಕಲ್ಯಾಣ ಮಂಟಪಗಳಲ್ಲಿ ಯಾವುದೇ ವಿವಾಹ ಹಾಗೂ ಕಾರ್ಯಕ್ರಮ ನಡೆಸಲು ಅವಕಾಶ ನೀಡಿಲ್ಲ. ಈಗಾಗಲೇ ಮದುವೆ ನಿಶ್ಚಯವಾಗಿದ್ದರೆ ದಿನಾಂಕವನ್ನು ಮುಂದೂಡಬೇಕು. ಇಲ್ಲವೇ ಬೇರೆ ಪ್ರದೇಶದಲ್ಲಿ ವಿವಾಹವಾಗಬಹುದು ಎಂದು ತಿಳಿಸಲಾಗಿದೆ.

    ಸರ್ಕಾರದ ಈ ನಿರ್ಧಾರದಿಂದಾಗಿ ಅಂದಾಜು 300 ವಿವಾಹಗಳಿಗೆ ತಡೆ ಬೀಳಲಿದೆ. ಅಲಹಾಬಾದ್‍ನಲ್ಲಿ 106 ಗೆಸ್ಟ್ ಹೌಸ್, ಕಲ್ಯಾಣ ಮಂಟಪ, ಸಭಾಭವನಗಳಿದ್ದು ಎಲ್ಲವನ್ನೂ ಸರ್ಕಾರ ಕಾಯ್ದಿರಿಸಿಕೊಂಡಿದೆ. ಹೀಗಾಗಿ ಮದುವೆ ನಿಶ್ಚಯ ಮಾಡಿಕೊಂಡಿದ್ದವರು ಪರದಾಡುವಂತಾಗಿದೆ.

    ನಮಗೆ ಯಾವುದೇ ಆಯ್ಕೆಯನ್ನು ಸರ್ಕಾರ ನೀಡಿಲ್ಲ. ಈಗಾಗಲೇ ಕಾಯ್ದಿರಿಸಿದ್ದ ಕಲ್ಯಾಣ ಮಂಟಪವನ್ನು ರದ್ದು ಮಾಡುವಂತೆ ಸರ್ಕಾರ ಆದೇಶ ನೀಡಿದೆ. ಸಾಮಾನ್ಯವಾಗಿ ವಿವಾಹ ನಡೆಯುವ ತಿಂಗಳಿನಲ್ಲಿಯೇ ಕುಂಭಮೇಳ ನಡೆಯುತ್ತಿರುವುದು ಸಮಸ್ಯೆಗೆ ಕಾರಣವಾಗಿದೆ. ಹೀಗಾಗಿ ನಾವು ಬೇರೆ ಕಡೆಗೆ ಹೋಗಿ ಮದುವೆ ಮಾಡುವ ನಿರ್ಧಾರಕ್ಕೆ ಮುಂದಾಗಿದ್ದೇವೆ ಎಂದು ಕಲ್ಯಾಣ ಮಂಟಪ ಕಾಯ್ದಿರಿಸಿದ್ದ ರವಿಕುಮಾರ್ ಕೆಸರ್ವಾನಿ ಎಂಬವರು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • 9 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ಕೊಟ್ಟ ಯುವಕ

    9 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ಕೊಟ್ಟ ಯುವಕ

    ಲಕ್ನೋ: ಉತ್ತರ ಪ್ರದೇಶದ ಮುಜಾಫರ್‍ನಗರ ಜಿಲ್ಲೆಯ ಪಿನ್ನಾ ಗ್ರಾಮದಲ್ಲಿ ಯುವಕನೊಬ್ಬ 9 ವರ್ಷದ ಬಾಲಕನಿಗೆ ಲೈಂಗಿಕ ಕಿರುಕುಳ ಕೊಟ್ಟಿರುವ ಘಟನೆ ಸೋಮವಾರದಂದು ನಡೆದಿದೆ.

    ಪಿನ್ನಾ ಗ್ರಾಮದ ನಿವಾಸಿ ಪ್ರವೀನ್ ಕುಮಾರ್ (20) ಕಿರುಕುಳ ಕೊಟ್ಟಿರುವ ಆರೋಪಿ. ಪ್ರವೀನ್ ತನ್ನ ಮನೆ ಹತ್ತಿರವಿದ್ದ ಬಾಲಕನನ್ನು ಗದ್ದೆಗೆ ಕರೆದೊಯ್ದು ಆತನಿಗೆ ಲೈಂಗಿಕ ಕಿರುಕುಳ ನೀಡಿ, ಈ ವಿಷಯವನ್ನು ಯಾರ ಬಳಿಯು ಹೇಳಬಾರದು ಎಂದು ಹೆದರಿಸಿದ್ದನು. ಆದರೆ ಘಟನೆಯಿಂದ ಭಯಗೊಂಡಿದ್ದ ಬಾಲಕ ಮನೆಗೆ ಬಂದು ತನ್ನ ತಂದೆಗೆ ನಡೆದ ವಿಷಯವನ್ನು ತಿಳಿಸಿದ್ದಾನೆ.

    ಮಾಹಿತಿ ತಿಳಿದ ತಕ್ಷಣ ಬಾಲಕನ ತಂದೆ ಆರೋಪಿ ಪ್ರವೀಣ್ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತನನ್ನು ಬಂಧಿಸಲು ಪೊಲೀಸರು ಹುಡುಕಾಟ ನಡೆಸಿದ್ದಾರೆ.

    ಉತ್ತರ ಪ್ರದೇಶದಲ್ಲಿ ಈ ತರಹದ ಘಟನೆಗಳು ಹಿಂದೆಯು ನಡೆದಿತ್ತು. ಮಥುರಾದಲ್ಲಿ ಒಬ್ಬ ಬಾಲಕನಿಗೆ ಇಬ್ಬರು ಯುವಕರು ಲೈಂಗಿಕ ಕಿರುಕುಳವನ್ನು ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದ ಸಲ್ಮಾನ್ ಹಾಗೂ ಹಾಸಿನ್ ಎಂಬ ಆರೋಪಿಗಳನ್ನು ಸೋಮವಾರವಷ್ಟೆ ಬಂಧಿಸಿದ್ದೇವೆ. ಆರೋಪಿ ಪ್ರವೀಣ್‍ನನ್ನು ಕೂಡ ಆದಷ್ಟು ಬೇಗ ಬಂಧಿಸುತ್ತೇವೆ ಎಂದು ಮುಜಾಫರ್‍ನಗರದ ಪೊಲೀಸ್ ಅಧಿಕಾರಿ ಸಂತೋಷ್ ಕುಮಾರ್ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪತಿ ಇಲ್ಲದಿದ್ದಾಗ ಮನೆಗೆ ನುಗ್ಗಿ ಮೂವರಿಂದ ಗ್ಯಾಂಗ್ ರೇಪ್!

    ಪತಿ ಇಲ್ಲದಿದ್ದಾಗ ಮನೆಗೆ ನುಗ್ಗಿ ಮೂವರಿಂದ ಗ್ಯಾಂಗ್ ರೇಪ್!

    ಲಕ್ನೋ: ಪತಿ ಇಲ್ಲವೆಂದು ಖಚಿತಪಡಿಸಿಕೊಂಡು ಮೂವರು ಕಾಮುಕರು ಮನೆಗೆ ನುಗ್ಗಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಉತ್ತರ ಪ್ರದೇದಲ್ಲಿ ನಡೆದಿದೆ.

    ಶಮ್ಲಿ ಜಿಲ್ಲೆಯಲ್ಲಿ ಶವಿವಾರ ದುಷ್ಕರ್ಮಿಗಳು ಕೃತ್ಯ ಎಸೆಗಿ, ಪರಾರಿಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ ಎಂದು ವರದಿಯಾಗಿದೆ.

    ಘಟನೆಯ ವಿವರ: ಸಂತ್ರಸ್ತ ಮಹಿಳೆ ಶನಿವಾರ ಮನೆಯಲ್ಲಿ ಒಬ್ಬಳೆ ಇದ್ದರು. ಇದನ್ನು ಅರಿತಿದ್ದ ಮೂವರು ಕಾಮುಕರು ಮನೆಗೆ ನುಗ್ಗಿ ಬಾಗಿಲು ಹಾಕಿದ್ದಾರೆ. ಬಳಿಕ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಕುರಿತು ಯಾರಿಗೂ ಹೇಳದಂತೆ ಎಚ್ಚರಿಕೆ ನೀಡಿ ಅಲ್ಲಿಂದ ಪರಾರಿಯಾಗಿದ್ದಾರೆ. ಮಹಿಳೆ ಈ ಕುರಿತು ಸಮೀಪದ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.

    ಇಂತಹದ್ದೆ ಘಟನೆಯೊಂದು ಉತ್ತರ ಪ್ರದೇಶದ ಬಾಗ್ಪಾಟ್ ಜಿಲ್ಲೆಯಲ್ಲಿ ನಡೆದಿತ್ತು. ಇಬ್ಬರು ಕಾಮುಕರು 17 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಆಟವಾಡುತ್ತಿದ್ದ 5ರ ಬಾಲೆಯ ಮೇಲೆ 12ರ ಪೋರನಿಂದ ಅತ್ಯಾಚಾರ!

    ಆಟವಾಡುತ್ತಿದ್ದ 5ರ ಬಾಲೆಯ ಮೇಲೆ 12ರ ಪೋರನಿಂದ ಅತ್ಯಾಚಾರ!

    ಲಕ್ನೋ: ಮನೆಯ ಮುಂದೆ ಆಟವಾಡುತ್ತಿದ್ದ 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಅಮಾನವೀಯ ಕೃತ್ಯ ಉತ್ತರ ಪ್ರದೇಶದ ಷಹಜಾನ್‍ಪುರ್ ಜಿಲ್ಲೆಯಲ್ಲಿ ಬುಧವಾರ ನಡೆದಿದೆ.

    ಅತ್ಯಾಚಾರ ಎಸಗಿದ ಬಾಲಕ 12 ವರ್ಷದವನಾಗಿದ್ದು, ಕೃತ್ಯ ಎಸಗಿ ಪರಾರಿಯಾಗಿದ್ದಾನೆ. ಈ ಕುರಿತು ಕಾಲನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಬಂಧನಕ್ಕಾಗಿ ಹುಡುಕಾಟ ನಡೆದಿದೆ ಅಂತಾ ಗುರುವಾರ ಪೊಲೀಸರು ತಿಳಿಸಿದ್ದಾರೆ ಎಂದು ವರದಿಯಾಗಿದೆ.

    ಘಟನೆಯ ವಿವರ:
    ಬಾಲಕಿ ಮನೆಯ ಮುಂದೆ ಆಟವಾಡುತ್ತಿದ್ದಳು. ಈ ವೇಳೆ ಅಲ್ಲಿಯೇ ಇದ್ದ 12 ವರ್ಷದ ಬಾಲಕ ಅಕೆಯನ್ನು ಮನೆಯ ಒಳಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಬಳಿಕ ಅಲ್ಲಿಂದ ಪರಾರಿಯಾಗಿದ್ದಾನೆ. ಈ ಕುರಿತು ಬಾಲಕಿಯ ಪೋಷಕರು ಪ್ರಕರಣ ದಾಖಲಿಸಿದ್ದು, ಅತ್ಯಾಚಾರ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಆರೋಪಿಯ ವಿರುದ್ಧ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    16ರ ಬಾಲೆ ಮೇಲೆ ಅತ್ಯಾಚಾರ:
    ಇಂತಹದ್ದೇ ಘಟನೆಯೊಂದು ಸೋಮವಾರ ರಾಜಸ್ಥಾನದ ಭೋಪಾ ಠಾಣಾ ವ್ಯಾಪ್ತಿಯ ಗ್ರಾಮದಲ್ಲಿ ನಡೆದಿತ್ತು. ನೆರಮನೆಯಲ್ಲಿ ಕೈ ಬೋರ್ ನೀರು ತರಲು ಹೋಗಿದ್ದ 16 ವರ್ಷದ ಬಾಲಕಿಯ ಮೇಲೆ ಯುವಕರು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ಸೋಮವಾರ ನಡೆದಿತ್ತು. ಈ ಕುರಿತು ಸಂತ್ರಸ್ತ ಬಾಲಕಿಯ ಸಹೋದರ ಭೋಪಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದ.

    ಬೋರ್ ನೀರು ತರಲು ಸಹೋದರಿ ಹೋಗಿದ್ದಳು. ಈ ವೇಳೆ ಅಲ್ಲಿಯೇ ಇದ್ದ ಕೆಲವು ಯುವಕರು ಆಕೆಯನ್ನು ಎಳೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಜೊತೆಗೆ ಅತ್ಯಾಚಾರದ ದೃಶ್ಯ ವಿಡಿಯೋ ಮಾಡಿಕೊಂಡಿದ್ದಾರೆ ಎಂದು ಸಂತ್ರಸ್ತ ಬಾಲಕಿಯ ಸಹೋದರ ದೂರಿನಲ್ಲಿ ತಿಳಿಸಿದ್ದ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • 1,398 ರೈತರ ಸಾಲ ಪಾವತಿಸಿದ ಅಮಿತಾಭ್ ಬಚ್ಚನ್

    1,398 ರೈತರ ಸಾಲ ಪಾವತಿಸಿದ ಅಮಿತಾಭ್ ಬಚ್ಚನ್

    ನವದೆಹಲಿ: ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಭ್ ಬಚ್ಚನ್ ಉತ್ತರ ಪ್ರದೇಶದ 1,398 ರೈತರ 3.99 ಕೋಟಿ ರೂ. ಸಾಲವನ್ನು ಮರುಪಾವತಿ ಮಾಡಿದ್ದಾರೆ.

    76 ವರ್ಷದ ಅಮಿತಾಭ್ ಈ ಕುರಿತು ತಮ್ಮ ಬ್ಲಾಗ್‍ನಲ್ಲಿ ಮಾಹಿತಿ ನೀಡಿದ್ದು, ಆಯ್ದ 70 ರೈತರಿಗೆ ವೈಯಕ್ತಿಕವಾಗಿ ಬ್ಯಾಂಕ್ ಸಾಲಮರುಪಾವತಿ ಮಾಡಿರುವ ಪತ್ರಗಳನ್ನು ಹಸ್ತಾಂತರಿಸಲು ಮುಂಬೈಗೆ ಬರಲು ಮಾಹಿತಿ ನೀಡಿದ್ದಾಗಿ ತಿಳಿಸಿದ್ದಾರೆ. ಈ ಮೂಲಕ ಸಂಕಷ್ಟದಲ್ಲಿ ಸಿಲುಕಿದ್ದ ಹಲವು ರೈತರಿಗೆ ಸಹಾಯ ನೀಡಿದ್ದು, ಜನ್ಮ ನೀಡಿದ ನೆಲದ ಋಣ ತೀರಿಸಲು ಮುಂದಾಗಿದ್ದಾರೆ.

    ಇದೇ ಮೊದಲಲ್ಲ: ಅಮಿತಾಭ್ ಬಚ್ಚನ್ ರೈತರ ಸಾಲ ಮರು ಪಾವತಿ ಮಾಡಿ ಅವರ ನೆರವಿಗೆ ಧಾವಿಸುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆಯೂ 350 ರೈತರ ಸಾಲವನ್ನು ಪಾವತಿಸಿದ್ದರು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಮಿತಾಬ್ ರೈತರ ಹೊರೆ ತಗ್ಗಿಸುವ ಆಸೆಯಿಂದ ಈ ಕೆಲಸಕ್ಕೆ ಮುಂದಾದೆ. ಕೆಲಸ ಪೂರ್ಣವಾದಾಗ ತುಂಬ ನೆಮ್ಮದಿ ಸಿಕ್ಕಿತು ಎಂದು ಅವರು ಬರೆದುಕೊಂಡಿದ್ದಾರೆ.

    ಇತ್ತ ಒನ್ ಟೈಮ್ ಪೇಮೆಂಟ್ ನೀಡಲು ಸಹಕಾರ ನೀಡಿದ ಬ್ಯಾಂಕ್‍ಗಳಿಗೂ ಅಮಿತಾಭ್ ಕೃತಜ್ಞತೆ ತಿಳಿಸಿದ್ದಾರೆ. ದೇಶದ ಶೇ.50 ರಷ್ಟು ಮಂದಿ ಕೃಷಿಯಲ್ಲಿ ತೊಡಗಿದ್ದು ದೇಶದ ಜಿಡಿಪಿಗೆ ಶೇ.18 ರಷ್ಟು ಕೊಡುಗೆ ನೀಡುತ್ತಿದ್ದಾರೆ. ಆದರೆ ಅವೈಜ್ಞಾನಿಕ ಬೆಲೆ, ಮಳೆ ಕೊರತೆ ಸೇರಿದಂತೆ ವಿವಿಧ ಕಾರಣಗಳಿಂದ ಸಮಸ್ಯೆ ಎದುರಿಸುತ್ತಿರುವ ರೈತರು ಸಾಲದ ಸುಳಿಯಲ್ಲಿ ಸಿಲುಕಿ ಕಷ್ಟ ಅನುಭವಿಸುತ್ತಿದ್ದಾರೆ.

    ಕೇಂದ್ರ ಸರ್ಕಾರ ನೀಡಿರುವ ಮಾಹಿತಿ ಅನ್ವಯ 2011 ರಲ್ಲಿ 14,027, 2012 ರಲ್ಲಿ 13,754 2014ರಲ್ಲಿ 12,360, 2015ರಲ್ಲಿ 12,602 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

  • ಪತ್ನಿಯ ನಾಲಗೆ ಕತ್ತರಿಸಿ 10 ದಿನ ಕೂಡಿಟ್ಟು ಚಿತ್ರಹಿಂಸೆ ಕೊಟ್ಟ!

    ಪತ್ನಿಯ ನಾಲಗೆ ಕತ್ತರಿಸಿ 10 ದಿನ ಕೂಡಿಟ್ಟು ಚಿತ್ರಹಿಂಸೆ ಕೊಟ್ಟ!

    ಲಕ್ನೋ: ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಯ ಬರ್ರಾ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ವರದಕ್ಷಿಣೆಗಾಗಿ ಪತ್ನಿಯ ನಾಲಗೆ ಕತ್ತರಿಸಿ ಆಕೆಯನ್ನು 10 ದಿನಗಳ ಕಾಲ ಮನೆಯಲ್ಲೇ ಕೂಡಿ ಹಾಕಿದ ವಿಲಕ್ಷಣೀಯ ಘಟನೆ ಭಾನುವಾರದಂದು ಬೆಳಕಿಗೆ ಬಂದಿದೆ.

    ಬರ್ರಾ ಪ್ರದೇಶದ ನಿವಾಸಿ ಆಕಾಶ್ ಎಂಬಾತ ಪತ್ನಿಯ ನಾಲಗೆ ಕತ್ತರಿಸಿದ ಪತಿ. ನವೆಂಬರ್ 06 ರಂದು ಆಕಾಶ್ ಹಾಗೂ ಆತನ ಪತ್ನಿ ನಡುವೆ ವರದಕ್ಷಿಣೆ ವಿಚಾರವಾಗಿ ಜಗಳವಾಗಿತ್ತು. ಜಗಳದಿಂದ ಕೋಪಗೊಂಡ ಆಕಾಶ್ ಪತ್ನಿಯ ನಾಲಗೆಯನ್ನು ಕತ್ತರಿಸಿದ್ದಾನೆ. ಬಳಿಕ ಆಕೆಗೆ ಚಿಕಿತ್ಸೆಯನ್ನು ಕೊಡಿಸದೆ ಸುಮಾರು 10 ದಿನಗಳ ಕಾಲ ಮನೆಯಲ್ಲಿಯೇ ಕೂಡಿ ಹಾಕಿ ಚಿತ್ರಹಿಂಸೆ ಕೊಟ್ಟಿದ್ದಾನೆ. ನಂತರ ಪಾಪಿ ಪತಿ ಕೈಯಿಂದ ತಪ್ಪಿಸಿಕೊಂಡು ಪತ್ನಿ ತನ್ನ ತಂದೆಗೆ ನಡೆದ ಘಟನೆಯನ್ನು ತಿಳಿಸಿದ್ದಾಳೆ.

    ಘಟನೆ ತಿಳಿದ ಮೇಲೆ ನನ್ನ ತಂದೆ ಆಕಾಶ್ ಹಾಗೂ ಆತನ ಕುಟುಂಬದವರ ಮೇಲೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಆದರೆ ಆಕಾಶ್ ತಂದೆ ವೃತ್ತಿಯಲ್ಲಿ ಪೊಲೀಸ್ ಅಧಿಕಾರಿ. ಅದಕ್ಕಾಗಿ ನಾವು ನೀಡಿದ ದೂರನ್ನು ಸ್ಥಳಿಯ ಪೊಲೀಸರು ಕಡೆಗಣಿಸಿದ್ದಾರೆ. ನಮಗೆ ನ್ಯಾಯ ಕೊಡಿಸಿ ಎಂದು ಪತಿಯ ವಿರುದ್ಧ ಪತ್ನಿ ಕಾನ್ಪುರ ಹಿರಿಯ ಪೊಲೀಸ್ ಅಧಿಕಾರಿಗೆ ದೂರು ನೀಡಿದ್ದಾಳೆ.

    ಸದ್ಯ ಆರೋಪಿಯ ಮೇಲೆ ಕಾನ್ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಯನ್ನು ಅದಷ್ಟು ಬೇಗ ಬಂಧಿಸಬೇಕು ಎಂದು ಹಿರಿಯ ಪೊಲೀಸ್ ಅಧಿಕಾರಿ ಆದೇಶಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
    ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
    ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
    ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
    ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews