Tag: uttar pradesh

  • ವಿದ್ಯಾರ್ಥಿನಿಯನ್ನು ಹಲ್ಲೆಗೈದು ಮರಕ್ಕೆ ನೇಣು ಹಾಕಿದ್ರು: ಮೂವರು ಅಪ್ರಾಪ್ತರು ಅರೆಸ್ಟ್

    ವಿದ್ಯಾರ್ಥಿನಿಯನ್ನು ಹಲ್ಲೆಗೈದು ಮರಕ್ಕೆ ನೇಣು ಹಾಕಿದ್ರು: ಮೂವರು ಅಪ್ರಾಪ್ತರು ಅರೆಸ್ಟ್

    ಲಕ್ನೋ: ಕಾಲೇಜಿನಿಂದ ಮನೆಗೆ ಮರಳುತ್ತಿದ್ದ ವಿದ್ಯಾರ್ಥಿನಿಯನ್ನು ತಡೆದು ಆಕೆಯ ಪ್ರಿಯಕರ ಸೇರಿ ಮೂವರು ಥಳಿಸಿ, ಮರಕ್ಕೆ ನೇಣು ಹಾಕಿದ ಘಟನೆ ಉತ್ತರ ಪ್ರದೇಶದ ಮೇನ್ಪುರಿ ಜಿಲ್ಲೆಯಲ್ಲಿ ನಡೆದಿದೆ.

    ಮೇನ್ಪುರಿ ಜಿಲ್ಲೆಯ ಹವಿಲಿಯಾ ಗ್ರಾಮದ ಸಮಿತಾ ಯಾದವ್ ಕೊಲೆಯಾದ ವಿದ್ಯಾರ್ಥಿನಿ. ಸವಿತಾ 11ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಬಾಲಾಪರಾಧಿಗಳನ್ನು ಪೊಲೀಸರು ಬಂಧಿಸಿದ್ದಾರೆ.

    ನಡೆದದ್ದು ಏನು?:
    ಸವಿತಾ ಮಂಗಳವಾರ ಕಾಲೇಜಿನ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಮುಗಿಸಿಕೊಂಡು ಮರಳುತ್ತಿದ್ದಳು. ಆಕೆಯನ್ನು ಗ್ರಾಮದ ಹೊರವಲಯದಲ್ಲಿ ತಡೆದ ಮೂವರು ಹಲ್ಲೆ ಎಸಗಿ ಮರಕ್ಕೆ ನೇಣು ಹಾಕಿ ಪರಾರಿಯಾಗಿದ್ದಾರೆ. ಈ ವೇಳೆ ಸವಿತಾ ಕಿರುಚಿದ ಧ್ವನಿ ಕೇಳಿದ ವಿದ್ಯಾರ್ಥಿನಿಯ ಸಹೋದರ ಅಲ್ಲಿಗೆ ಬಂದಿದ್ದಾನೆ. ಆಗ ಸವಿತಾ ಮೃತ ದೇಹ ಪತ್ತೆಯಾಗಿದೆ.

    ಯಾರೋ ಕಾಪಾಡಿ, ಕಾಪಾಡಿ ಅಂತಾ ಕಿರುಚಿದ ಧ್ವನಿ ಕೇಳಿತು. ತಕ್ಷಣವೇ ಅಲ್ಲಿಗೆ ಹೋಗುತ್ತಿದ್ದಂತೆ ಸವಿತಾ ಮೃತದೇಹ ನೇಣು ಬೀಗಿದ ಸ್ಥಿತಿಯಲ್ಲಿ ಕಂಡಿದೆ ಎಂದು ಅವಿನಾಶ್, ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.

    ಕೊಲೆ ಮಾಡಿದ ಮೂವರಲ್ಲಿ ಒಬ್ಬನ ಜೊತೆಗೆ ಸವಿತಾ ಮೊಬೈಲ್‍ನಲ್ಲಿ ಮಾತನಾಡುತ್ತಿದ್ದಳು. ಆತನು ಸವಿತಾ ಕಾಲೇಜಿನಲ್ಲಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಕಳೆದ ಕೆಲವು ತಿಂಗಳಿನಿಂದ ಇಬ್ಬರ ಮಧ್ಯೆ ಸಂಬಂಧವಿತ್ತು ಎನ್ನಲಾಗಿದ್ದು, ಸವಿತಾ ಯುವಕನ ಜೊತೆ ಮೊಬೈಲ್‍ನಲ್ಲಿ ಮಾತನಾಡುತ್ತಿದ್ದಾಗ ಮನೆಯವರ ಕೈಗೆ ಸಿಕ್ಕಿಬಿದ್ದಿದ್ದಳು ಅಂತಾ ಸ್ಥಳೀಯರು ಮಾಹಿತಿ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಮೂವರು ಬಾಲಕರನ್ನು ಬಂಧಿಸಿ, ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದು ಆತ್ಮಹತ್ಯೆಯೇ ಅಥವಾ ಕೊಲೆಯೇ ಅಂತಾ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಕೊಲೆ ಮಾಡಿದ ನಂತರ ಮರಕ್ಕೆ ನೇಣು ಹಾಕಿದ್ದು ಯಾಕೆ ಎನ್ನುವ ಪ್ರಶ್ನೆ ಈಗ ಮೂಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪ್ರತಿಭಟನಾನಿರತ ರೈತರ ಮೇಲೆ ಪೊಲೀಸರಿಂದ ಜಲಫಿರಂಗಿ, ಅಶ್ರುವಾಯು ಪ್ರಯೋಗ!

    ಪ್ರತಿಭಟನಾನಿರತ ರೈತರ ಮೇಲೆ ಪೊಲೀಸರಿಂದ ಜಲಫಿರಂಗಿ, ಅಶ್ರುವಾಯು ಪ್ರಯೋಗ!

    ನವದೆಹಲಿ: ಸಾಲಮನ್ನಾ ಸೇರಿ 15 ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಉತ್ತರಪ್ರದೇಶದ ಸುಮಾರು 70 ಸಾವಿರ ರೈತರು ಹರಿದ್ವಾರದಿಂದ ದೆಹಲಿ ಚಲೋ ಪ್ರತಿಭಟನೆ ಹಮ್ಮಿಕೊಂಡಿದ್ದರು. ಇದನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ, ದೆಹಲಿ ಹಾಗೂ ಉತ್ತರಪ್ರದೇಶ ಗಡಿ ಭಾಗದಲ್ಲಿ ರೈತರ ಮೇಲೆ ದಾಳಿ ನಡೆಸಿದೆ.

    ಹೌದು, ಸುಮಾರು 70 ಸಾವಿರಕ್ಕೂ ಹೆಚ್ಚು ರೈತರು ಸಾಲಮನ್ನಾ ಹಾಗು 15 ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದು ದೆಹಲಿ ಚಲೋ ಪ್ರತಿಭಟನೆಯನ್ನು ಹರಿದ್ವಾರದಿಂದ ಹಮ್ಮಿಕೊಂಡಿದ್ದರು. ಘಾಜಿಯಾಪುರ ಮಾರ್ಗವಾಗಿ ದೆಹಲಿಗೆ ತೆರಳಿ ಪ್ರತಿಭಟನೆ ನಡೆಸಿದ್ದರು. ಆದರೆ ದೆಹಲಿ ಹಾಗೂ ಉತ್ತರ ಪ್ರದೇಶದ ಗಡಿಭಾಗ ಗಾಜೀಯಾಬಾದ್ ನಲ್ಲಿ ಬೃಹತ್ ಬ್ಯಾರಿಕೇಡ್‍ಗಳನ್ನು ಹಾಕುವ ಮೂಲಕ ಕೇಂದ್ರ ಸರ್ಕಾರ ರೈತರ ಪ್ರತಿಭಟನೆಯನ್ನು ನಿಯಂತ್ರಿಸಲು ಯತ್ನಿಸಿದ್ದಾರೆ. ಆದರೆ ಸಾಗರೋಪಾದಿಯಲ್ಲಿ ಬಂದಿದ್ದ ಪ್ರತಿಭಟನಾಕಾರರು ಪೊಲೀಸರು ಹಾಕಿದ್ದ ಬ್ಯಾರಿಕೇಡ್‍ಗಳನ್ನು ತಮ್ಮ ಟ್ರ್ಯಾಕ್ಟರ್ ಗಳ ಮೂಲಕ ಕೀಳಲು ಮುಂದಾಗಿದ್ದರು. ಈ ವೇಳೆ ಪೊಲೀಸರು ಪ್ರತಿಭಟನಾ ನಿರತರ ಮೇಲೆ ಜಲಫಿರಂಗಿ ಹಾಗೂ ಅಶ್ರುವಾಯು ಪ್ರಯೋಗವನ್ನು ಮಾಡಿದ್ದಾರೆ.

    ಇದಲ್ಲದೇ ಪರಿಸ್ಥಿತಿ ಕೈ ಮೀರುವ ಹಂತ ತಲುಪಿದಾಗ ಪೊಲೀಸರು ಲಾಠಿ ಪ್ರಹಾರವನ್ನೂ ಕೂಡ ನಡೆಸಿದ್ದಾರೆ. ಈ ವೇಳೆ ಹಲವು ರೈತರು ಗಾಯಗೊಂಡಿದ್ದಾರೆ. ಪ್ರತಿಭಟನಾ ನಿರತ ರೈತರು ಕೇಂದ್ರ ಸರ್ಕಾರ ಮತ್ತು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಈ ಪ್ರತಿಭಟನೆ ಹಿಂಸಾತ್ಮಾಕ ತಿರುವು ಪಡೆಯುತ್ತಿದ್ದು, ಪೊಲೀಸರು ವ್ಯಾಪಕ ಬಂದೋಬಸ್ತ್ ಕೈಗೊಂಡಿದ್ದಾರೆ.

    ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ತಮ್ಮ ನಿವಾಸದಲ್ಲಿ ತುರ್ತು ಅಧಿಕಾರಿಗಳ ಸಭೆ ಕರೆದಿದ್ದು, ಸಭೆಯಲ್ಲಿ ರೈತರ ಬೇಡಿಕೆಗಳ ಕುರಿತು ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಅಲ್ಲದೆ ರೈತರು ದೆಹಲಿಗೆ ಆಗಮಿಸುವಷ್ಟರಲ್ಲಿ ಅವರ ಬೇಡಿಕೆಗಳನ್ನು ಈಡೇರಿಸುವ ಮೂಲಕ ಪ್ರತಿಭಟನೆಯನ್ನು ಶಾಂತರೂಪಕ್ಕೆ ತರುವ ಬಗ್ಗೆ ಮಾತುಕತೆ ನಡೆಸಲಾಗುತ್ತಿದೆ ಎನ್ನುವ ಮಾಹಿತಿಗಳು ಲಭ್ಯವಾಗಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • `ನನ್ನ ಎಲ್ಲ ಬೇಡಿಕೆಯನ್ನು ಆದಿತ್ಯನಾಥ್ ಒಪ್ಪಿಕೊಂಡಿದ್ದಾರೆ’- ಖಾಕಿಗಳ ಗುಂಡೇಟಿಗೆ ಬಲಿಯಾದ ಆಪಲ್ ಸಿಬ್ಬಂದಿಯ ಪತ್ನಿ

    `ನನ್ನ ಎಲ್ಲ ಬೇಡಿಕೆಯನ್ನು ಆದಿತ್ಯನಾಥ್ ಒಪ್ಪಿಕೊಂಡಿದ್ದಾರೆ’- ಖಾಕಿಗಳ ಗುಂಡೇಟಿಗೆ ಬಲಿಯಾದ ಆಪಲ್ ಸಿಬ್ಬಂದಿಯ ಪತ್ನಿ

    ಲಕ್ನೋ: ಪೊಲೀಸರ ಗುಂಡಿಗೆ ಬಲಿಯಾಗಿದ್ದ ಆ್ಯಪಲ್ ಕಂಪನಿ ಸೇಲ್ಸ್ ಮಾನೇಜರ್ ವಿವೇಕ್ ತಿವಾರಿ ಕುಟುಂಬಕ್ಕೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರು 35 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

    ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿವಾಸಕ್ಕೆ ಇಂದು ವಿವೇಕ್ ತಿವಾರಿ ಪತ್ನಿ ಕಲ್ಪನಾ ತಿವಾರಿ ಭೇಟಿ ನೀಡಿದ್ದರು. ಅವರ ಜೊತೆಗೆ 25 ನಿಮಿಷಗಳ ಕಾಲ ಮಾತುಕತೆ ನಡೆಸಿ, ಅಳಲು ಕೇಳಿದ ಸಿಎಂ ಆದಿತ್ಯನಾಥ್ ಅವರು, ಮಕ್ಕಳ ಶಿಕ್ಷಣ, ಕುಟುಂಬ ನಿರ್ವಹಣೆಗೆ ಉದ್ಯೋಗ, ವಿವೇಕ್ ತಾಯಿಗೆ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

    ಎಷ್ಟು ಪರಿಹಾರ?
    ಮೃತ ವಿವೇಕ್ ತಿವಾರಿ ಕುಟುಂಬಕ್ಕೆ ಒಟ್ಟು 35 ಲಕ್ಷ ರೂ. ಪರಿಹಾರ ನೀಡಲು ಸಿಎಂ ಯೋಗಿ ಆದಿತ್ಯನಾಥ್ ನಿರ್ಧರಿಸಿದ್ದಾರೆ. ಅದರಲ್ಲಿ 25 ಲಕ್ಷ ರೂ. ಕುಟುಂಬ ನಿರ್ವಹಣೆಗೆ, 5 ಲಕ್ಷ ರೂ. ಮಕ್ಕಳ ಶಿಕ್ಷಣಕ್ಕೆ ಹಾಗೂ 5 ಲಕ್ಷ ರೂ. ವಯಸ್ಸಾಗಿರುವ ವಿವೇಕ್ ತಾಯಿಗೆ ನೀಡಲು ಮುಂದಾಗಿದ್ದಾರೆ.

    ಸಿಎಂ ಭೇಟಿ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಕಲ್ಪನಾ ತಿವಾರಿ ಅವರು, ಯೋಗಿ ಆದಿತ್ಯವಾಥ್ ಅವರು ನನ್ನ ಸಮಸ್ಯೆಯನ್ನು ಆಲಿಸಿದರು. ಮುಂದಿನ ಜೀವನ ನಡೆಸಲು ಸಹಕಾರ ನೀಡುವುದಾಗಿ ತಿಳಿಸಿದ್ದಾರೆ. ಅವರ ಮೇಲೆ ನನಗೆ ವಿಶ್ವಾಸವಿದೆ. ನನ್ನ ಎಲ್ಲ ಬೇಡಿಕೆಯನ್ನು ಈಡೇರಿಸುವುದಾಗಿ ಒಪ್ಪಿಗೆ ನೀಡಿದ್ದಾರೆ ಎಂದು ಹೇಳಿದರು.

    ಮಾಯಾವತಿ ಕಿಡಿ: ಉತ್ತರ ಪ್ರದೇಶದಲ್ಲಿ ಕಾನೂನು ವ್ಯವಸ್ಥೆ ಹಾಳಾಗಿದೆ. ರಾಜ್ಯದ ಜನತೆ ಆತಂಕದ ವಾತಾವರಣದಲ್ಲಿ ಕಾಲ ಕಳೆಯುತ್ತಿದ್ದಾರೆ ಎಂದು ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ ಆರೋಪಿಸಿದ್ದಾರೆ. ವಿವೇಕ್ ತಿವಾರಿ ಕೊಲೆಯ ಆರೋಪಿ ಪೊಲೀಸ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ನಂತರ ಮೃತರ ಕುಟುಂಬ ಭೇಟಿ ಆಗಬೇಕಿತ್ತು ಎಂದು ವಾಗ್ದಾಳಿ ನಡೆಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಹಿಳಾ ಪೇದೆಯ ಮೇಲೆ ಸಬ್-ಇನ್ಸ್‌ಪೆಕ್ಟರ್‌ನಿಂದಲೇ ಅತ್ಯಾಚಾರ!

    ಮಹಿಳಾ ಪೇದೆಯ ಮೇಲೆ ಸಬ್-ಇನ್ಸ್‌ಪೆಕ್ಟರ್‌ನಿಂದಲೇ ಅತ್ಯಾಚಾರ!

    ಲಕ್ನೋ: ಮಹಿಳಾ ಪೇದೆಯ ಮೇಲೆ ಸಬ್ ಇನ್ಸ್‌ಪೆಕ್ಟರ್ ಅತ್ಯಾಚಾರ ಎಸಗಿರುವ ಘಟನೆ ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ನಡೆದಿದೆ.

    ಪಿಯೂಷ್ ಸಿಂಗ್ ಅತ್ಯಾಚಾರ ಎಸಗಿದ ಆರೋಪಿ. ಪಿಯೂಷ್ ಸಿಂಗ್ ಅನೇಕ ತಿಂಗಳಿನಿಂದ ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಹಲ್ಲೆ ಮಾಡುತ್ತಿದ್ದ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಆರೋಪಿ ಪಿಯೂಷ್ ಸಿಂಗ್ ಮೇಲೆ ಐಪಿಸಿ ಸೆಕ್ಷನ್ 376 ಹಾಗೂ ಎಸಿ, ಎಸ್ಟಿ ಕಾಯ್ದೆ ಅಡಿಯಲ್ಲಿ ಪ್ರಕರಣ ಈಗ ದಾಖಲಾಗಿದೆ.

    ಆರೋಪಿ ಪಿಯೂಷ್ ಸಿಂಗ್‍ನನ್ನು ಕೆಲಸದಿಂದ ಅಮಾನತು ಮಾಡಲಾಗಿದ್ದು, ಆತನನ್ನು ಜೈಲಿಗೆ ಕಳುಹಿಸಲಾಗುವುದು. ಅಷ್ಟೇ ಅಲ್ಲದೇ ಅಪರಾಧ ಕೃತ್ಯವನ್ನು ಎಸಗಿದ ಯಾರೇ ಆಗಿರಲಿ ಅವರಿಗೆ ಶಿಕ್ಷೆ ನೀಡಲಾಗುತ್ತದೆ ಎಂದು ಕಾಸ್ಗಂಜ್‍ನ ಪೊಲೀಸ್ ಅಧೀಕ್ಷಕ ಅಶೋಕ್ ಕುಮಾರ್ ಶುಕ್ಲಾ ಅವರು ಪ್ರತಿಕ್ರಿಯಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • 19 ವರ್ಷಗಳ ಹಿಂದಿನ ಕೊಲೆ ಕೇಸಿಗೆ ಮರುಜೀವ-ಯುಪಿ ಸಿಎಂ ಯೋಗಿ ಆದಿತ್ಯನಾಥ್‍ಗೆ ಸಂಕಷ್ಟ

    19 ವರ್ಷಗಳ ಹಿಂದಿನ ಕೊಲೆ ಕೇಸಿಗೆ ಮರುಜೀವ-ಯುಪಿ ಸಿಎಂ ಯೋಗಿ ಆದಿತ್ಯನಾಥ್‍ಗೆ ಸಂಕಷ್ಟ

    ಲಕ್ನೋ: ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ 19 ವರ್ಷಗಳ ಹಿಂದಿನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.

    1999 ಜನವರಿಯಲ್ಲಿ ಸಮಾಜವಾದಿ ಪಕ್ಷದ ಗೋರಖ್‍ಪುರ ಮುಖಂಡರೊಬ್ಬರ ವೈಯಕ್ತಿಕ ಭದ್ರತಾ ಅಧಿಕಾರಿ ಕೊಲೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಜಗಂಜ್ ಜಿಲ್ಲಾ ಸೆಷನ್ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.

    2018 ಮಾರ್ಚ್ ನಲ್ಲಿ ಈ ಪ್ರಕರಣವನ್ನು ಮರು ವಿಚಾರಣೆ ನಡೆಸಲು ಸೂಚನೆ ನೀಡುವಂತೆ ಸೆಷನ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಈ ವೇಳೆ ನ್ಯಾಯಾಲಯ ಸಾಕ್ಷ್ಯಗಳ ಕೊರತೆಯಿಂದ ಅರ್ಜಿಯನ್ನು ತಿರಸ್ಕರಿಸಿತ್ತು. ಇದರ ಬಳಿಕ ಸಮಾಜವಾದಿ ಮುಖಂಡ ತಾಲತ್ ಅಜಿಜ್ ಲಕ್ನೋ ಹೈಕೋರ್ಟ್ ನಲ್ಲಿ, ಪ್ರಕರಣದ ಮರುವಿಚಾರಣೆ ನಡೆಸುವಂತೆ ಸೆಷನ್ ಕೋರ್ಟ್‍ಗೆ ಸೂಚನೆ ನೀಡುವಂತೆ ಮನವಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಪುರಸ್ಕರಿಸಿದ ಕೋರ್ಟ್ ಕೊಲೆ ಪ್ರಕರಣವನ್ನು ಮತ್ತೆ ವಿಚಾರಣೆ ನಡೆಸುವಂತೆ ಆದೇಶಿಸಿತ್ತು.

    ಹೈಕೋರ್ಟ್ ಸೂಚನೆಯ ಹಿನ್ನೆಲೆಯಲ್ಲಿ ಜಿಲ್ಲಾ ಸೆಷನ್ ಕೋರ್ಟ್ ಸದ್ಯ ಪ್ರಕರಣದ ಆರೋಪಿಯಾಗಿರುವ ಯೋಗಿ ಆದಿತ್ಯನಾಥ್ ಹಾಗೂ ಇತರರಿಗೆ ನೋಟಿಸ್ ಜಾರಿ ಮಾಡಿ 1 ವಾರಗಳ ಒಳಗಡೆ ಉತ್ತರಿಸುವಂತೆ ಸೂಚಿಸಿದೆ.

    ಸದ್ಯ ನ್ಯಾಯಾಲಯದ ಸೂಚನೆ ಮೇರೆಗೆ ಪ್ರಕರಣದ ಮರುವಿಚಾರಣೆ ಆರಂಭವಾಗುವುದರಿಂದ ಸಿಎಂ ಯೋಗಿ ಆದಿತ್ಯನಾಥ್ ಅವರು ನೈತಿಕ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಲು ಸಮಾಜವಾದಿ ಪಕ್ಷದ ನಾಯಕರು ಆಗ್ರಹಿಸಿದ್ದಾರೆ.

    ಏನಿದು ಪ್ರಕರಣ?
    1999 ರ ಫೆಬ್ರವರಿ 10 ರಂದು ನಡೆದ ಪ್ರತಿಭಟನೆಯೊಂದರಲ್ಲಿ ಸಮಾಜವಾದಿ ಪಕ್ಷದ ನಾಯಕ ತಲಾತ್ ಅಜಿಜ್ ಅವರ ವೈಯಕ್ತಿಕ ಭದ್ರತಾ ಅಧಿಕಾರಿ ಕೊಲೆಯಾಗಿತ್ತು. ಅಂದು ಯೋಗಿ ಆದಿತ್ಯನಾಥ್ ನೇತೃತ್ವದ ಗುಂಪು ಸಮಾಜವಾದಿ ಪಕ್ಷದ ವಿರುದ್ಧ ಜೈಲ್ ಚಲೋ ಹೋರಾಟವನ್ನು ಹಮ್ಮಿಕೊಂಡಿತ್ತು. ಈ ವೇಳೆಯೇ ಗುಂಡಿಟ್ಟು ಇಬ್ಬರನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಆದಿತ್ಯನಾಥ್ ಅವರನ್ನು ಆರೋಪಿಯನ್ನಾಗಿಸಿ ಪ್ರಕರಣ ದಾಖಲು ಮಾಡಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಾಧ್ಯಮಗಳನ್ನು ಕರೆಸಿ ಕುಖ್ಯಾತ ರೌಡಿಗಳನ್ನು ಎನ್‍ಕೌಂಟರ್ ಮಾಡಿದ್ರು ಯುಪಿ ಪೊಲೀಸರು!

    ಮಾಧ್ಯಮಗಳನ್ನು ಕರೆಸಿ ಕುಖ್ಯಾತ ರೌಡಿಗಳನ್ನು ಎನ್‍ಕೌಂಟರ್ ಮಾಡಿದ್ರು ಯುಪಿ ಪೊಲೀಸರು!

    ಲಕ್ನೋ: ಕೊಲೆ ಪ್ರಕರಣದಲ್ಲಿ ಪೊಲೀಸರಿಗೆ ಬೇಕಾಗಿದ್ದ ಇಬ್ಬರು ಕುಖ್ಯಾತ ರೌಡಿಗಳನ್ನು ಎನ್‍ಕೌಂಟರ್ ಮಾಡಿರುವ ಘಟನೆ ಉತ್ತರ ಪ್ರದೇಶದ ಅಲಿಘಡ ಬಳಿ ಇಂದು ಬೆಳಗ್ಗೆ ನಡೆದಿದೆ.

    ಮುಸ್ತಾಕಿಮ್ ಹಾಗೂ ನೌಶಾದ್ ಎನ್‍ಕೌಂಟರ್ ನಲ್ಲಿ ಹತ್ಯೆಯಾದ ರೌಡಿಗಳಾಗಿದ್ದು, ಕಳೆದ ಒಂದು ತಿಂಗಳ ಅವಧಿಯಲ್ಲಿ 6 ಕೊಲೆಯ ಪ್ರಕರಣದಲ್ಲಿ ಇವರು ಆರೋಪಿಗಳಾಗಿದ್ದರು. ಪೊಲೀಸರು ರೌಡಿಗಳ ಎನ್‍ಕೌಂಟರ್ ಮಾಡುವ ಮುನ್ನ ಮಾಧ್ಯಮಗಳನ್ನು ಕರೆದು ಕಾರ್ಯಾಚರಣೆಯನ್ನು ಸೆರೆ ಹಿಡಿಯುವಂತೆ ಹೇಳಿದ್ದು ವಿಶೇಷವಾಗಿತ್ತು.

    ನಡೆದಿದ್ದು ಏನು? ಪೊಲೀಸರು ಬೆಳಗ್ಗೆ ಅಲಿಘಡದಲ್ಲಿ ಗಸ್ತು ನಡೆಸುತ್ತಿದ್ದ ವೇಳೆ ವಾಹನಗಳನ್ನು ತಡೆದು ಪರಿಶೀಲನೆ ನಡೆಸಿದ್ದರು. ಈ ಸಮಯದಲ್ಲಿ ಬೈಕಿನಲ್ಲಿ ಬಂದ ಈ ರೌಡಿಗಳು ಪೊಲೀಸರ ಮೇಲೆಯೇ ಗುಂಡು ಹಾರಿಸಿ ಪರಾರಿಯಾಗಲು ಯತ್ನಿಸಿದ್ದಾರೆ. ಬಳಿಕ ರೌಡಿಗಳು ಪೊಲೀಸರಿಂದ ತಪ್ಪಿಸಿಕೊಂಡು ಸರ್ಕಾರಿ ಕಟ್ಟಡವೊಂದನ್ನು ಪ್ರವೇಶಿಸಿ ಅವಿತುಕೊಂಡಿದ್ದರು. ಅಲ್ಲೇ ಅವಿತಿದ್ದರೂ ಈ ರೌಡಿಗಳು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

    ರೌಡಿಗಳು ಒಳಗಡೆ ಇರುವುದನ್ನು ಖಚಿತಪಡಿಸಿದ ಪೊಲೀಸರು ಆ ಕಟ್ಟಡವನ್ನು ಸುತ್ತುವರಿದಿದ್ದಾರೆ. ಅಷ್ಟೇ ಅಲ್ಲದೇ ಮಾಧ್ಯಮಗಳಿಗೆ ಎನ್ ಕೌಂಟರ್ ಕಾರ್ಯಾಚರಣೆ ಮಾಡುತ್ತಿದ್ದೇವೆ ಸ್ಥಳಕ್ಕೆ ಬನ್ನಿ ಎಂದು ಮಾಹಿತಿ ನೀಡಿದ್ದಾರೆ. ಮಾಧ್ಯಮಗಳು ಸ್ಥಳಕ್ಕೆ ಬಂದ ಬಳಿಕ ಪೊಲೀಸರು ರೌಡಿಗಳಿಗೆ ಶರಣಾಗುವಂತೆ ಸೂಚಿಸಿದ್ದಾರೆ. ಪೊಲೀಸರ ಮನವಿಗೆ ಸ್ಪಂದಿಸದೇ ರೌಡಿಗಳು ಗುಂಡಿನ ದಾಳಿ ನಡೆಸಿ ಪ್ರತಾಪ ತೋರಿಸಿದ್ದಾರೆ. ಮನವಿಗೆ ಬಗ್ಗದ ಹಿನ್ನೆಲೆಯಲ್ಲಿ ಪೊಲೀಸರು ಪ್ರತಿದಾಳಿ ನಡೆಸಿ ರೌಡಿಗಳನ್ನು ಹತ್ಯೆ ಮಾಡಿದ್ದಾರೆ.

    ಈ ಘಟನೆಯಲ್ಲಿ ಒಬ್ಬ ಪೊಲೀಸ್ ಆಧಿಕಾರಿಯೂ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಅಲಿಘಡ ಪೊಲೀಸ್ ಮುಖ್ಯಸ್ಥ ಅಜಯ್ ಸಾಹ್ನಿ ತಿಳಿಸಿದ್ದಾರೆ. ಕಳೆದ 1 ತಿಂಗಳ ಅವಧಿಯಲ್ಲಿ ಇಬ್ಬರು ಧಾರ್ಮಿಕ ಮುಖಂಡರು ಸೇರಿ 6 ಮಂದಿ ಕೊಲೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬುಧವಾರ 5 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ಇದನ್ನು ಓದಿ: ಯೋಗಿ ಸರ್ಕಾರದ ಎನ್‍ಕೌಂಟರ್ ಎಫೆಕ್ಟ್- ಸೈಕಲ್ ಶಾಪ್, ಹಣ್ಣಿನ ವ್ಯಾಪಾರ, ರಿಕ್ಷಾ ಚಾಲನೆ ಆರಂಭಿಸಿದ ರೌಡಿಶೀಟರ್ ಗಳು

    ಉತ್ತರ ಪ್ರದೇಶ ಸರ್ಕಾರ ನೀಡಿರುವ ಮಾಹಿತಿ ಅನ್ವಯ 2017 ಮಾರ್ಚ್ ಬಳಿಕ 66 ಮಂದಿಯನ್ನು ಎನ್‍ಕೌಂಟರ್ ಮಾಡಲಾಗಿದೆ. ಆದರೆ ಯೋಗಿ ಆದಿತ್ಯನಾಥ್ ಉತ್ತರ ಪ್ರದೇಶದ ಸಿಎಂ ಆದ ಬಳಿಕ ಎನ್‍ಕೌಂಟರ್ ಗಳ ಸಂಖ್ಯೆ ಹೆಚ್ಚಾಗಿತ್ತು. ಅಲ್ಲದೇ ಕ್ರಿಮಿನಲ್ ಚಟುವಟಿಕೆಯಲ್ಲಿ ತೊಡಗಿದ್ದ ಹಲವು ಆರೋಪಿಗಳು ಜೈಲು ಸೇರಿದ್ದರು. ಈ ಅವಧಿಯಲ್ಲಿ 500ಕ್ಕೂ ಹೆಚ್ಚು ಮಂದಿ ಎನ್‍ಕೌಂಟರ್ ನಲ್ಲಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಎನ್‍ಕೌಂಟರ್ ಗಳ ಕುರಿತು ಪ್ರತಿಕ್ರಿಯೆ ನೀಡಿರುವ ಉತ್ತರ ಪ್ರದೇಶ ಪೊಲೀಸ್ ಮುಖ್ಯಸ್ಥ ಒಪಿ ಸಿಂಗ್, ಎನ್‍ಕೌಂಟರ್ ಗಳು ಕ್ರಿಮಿನಲ್‍ಗಳನ್ನು ಬಂಧಿಸಲು ಇರುವ ತಂತ್ರಗಾರಿಕೆ ಅಷ್ಟೇ. ಅಲ್ಲದೇ ಇದರಿಂದ ಕ್ರೈಂ ಪ್ರಕರಣಗಳ ಪ್ರಮಾಣ ಕಡಿಮೆಯಾಗಲಿದೆ ಎಂದು ಹೇಳಿ ಪೊಲೀಸರ ಕಾರ್ಯವನ್ನು ಸಮರ್ಥಿಸಿಕೊಂಡಿದ್ದಾರೆ.  ಇದನ್ನು ಓದಿನನ್ನ ಅರೆಸ್ಟ್ ಮಾಡಿ, ಎನ್‍ಕೌಂಟರ್ ನಲ್ಲಿ ಸಾಯಲು ಇಷ್ಟವಿಲ್ಲ- ಯುಪಿ ಪೊಲೀಸರಿಗೆ ಕೊಲೆ ಆರೋಪಿ ಶರಣು

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಗಳ ಪ್ರಿಯಕರನ ಮರ್ಮಾಂಗವನ್ನೇ ಕತ್ತರಿಸಿದ ತಂದೆ- ಸಾವು ಬದುಕಿನ ಮಧ್ಯೆ ಯುವಕ ಹೋರಾಟ

    ಮಗಳ ಪ್ರಿಯಕರನ ಮರ್ಮಾಂಗವನ್ನೇ ಕತ್ತರಿಸಿದ ತಂದೆ- ಸಾವು ಬದುಕಿನ ಮಧ್ಯೆ ಯುವಕ ಹೋರಾಟ

    ಗೋರಖ್‍ಪುರ: ಮಗಳ ಜತೆ ಆಕ್ಷೇಪಾರ್ಹ ಸ್ಥಿತಿಯಲ್ಲಿದ್ದ ಯುವಕನನ್ನು ನೋಡಿದ ತಂದೆಯೊಬ್ಬ ಆತನನ್ನು ಥಳಿಸಿ ಮರ್ಮಾಂಗವನ್ನು ಕತ್ತರಿಸಿದ ಘಟನೆ ಉತ್ತರಪ್ರದೇಶದ ಗೋರಖ್‍ಪುರದಲ್ಲಿ ನಡೆದಿದೆ.

    11ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ದೀಪಚಂದ ಗುಪ್ತಾ ಹಲ್ಲೆಗೊಳಗಾದ ಯುವಕ. ಗಂಭೀರವಾಗಿ ಗಾಯಗೊಂಡಿರುವ ಯುವಕನನ್ನು ಲಖ್ನೋದ ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಿದ್ದು, ಈಗ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾನೆ ಎಂದು ವರದಿಯಾಗಿದೆ.

    ಐಪಿಸಿ ಸೆಕ್ಷನ್ 323 (ಸ್ವ ಇಚ್ಚೆಯಿಂದ ಗಾಯ ಉಂಟುಮಾಡುವುದು) ಹಾಗೂ 326 (ಮಾರಕಾಸ್ತ್ರಗಳಿಂದ ಹಲ್ಲೆ)ರ ಅಡಿ ಪ್ರಕರಣ ದಾಖಲಾಗಿದ್ದು, ಯುವತಿಯ ತಂದೆ ಗುಡ್ಡು ನಿಶಾದ್ ಮತ್ತು ಸೋದರರಾದ ಸಂದೀಪ್ ಪ್ರದೀಪ್‍ನನ್ನು ಪೊಲೀಸರು ಬಂಧಿಸಿದ್ದಾರೆ.

     

    ಮನೆಯಲ್ಲಿ ತನ್ನ ಪುತ್ರಿ ಜತೆ ಆಕ್ಷೇಪಾರ್ಹ ಸ್ಥಿತಿಯಲ್ಲಿದ್ದ ಯುವಕನನ್ನು ನೋಡಿದ ಹಾಗೂ ಇಬ್ಬರು ಪುತ್ರರು ಈ ಕೃತ್ಯವನ್ನು ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ಘಟನೆ ಬಳಿಕ ಸಂತ್ರಸ್ತ ಯುವಕ ನೋವಿನಿಂದ ನರಳಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಠಾಣೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ ಎಂದು ಖಜ್ನಿ ಪೊಲೀಸ್ ಠಾಣೆಯ ಉಸ್ತುವಾರಿ ಮನೋಜ್ ರೈ ಮಾಹಿತಿ ನೀಡಿದ್ದಾರೆ.

    11ನೇ ತರಗತಿ ಓದುತ್ತಿದ್ದ ಯುವಕ ಮತ್ತು ಯುವತಿ ಪ್ರೀತಿಸುತ್ತಿದ್ದರು. ಈ ಪ್ರೀತಿಗೆ ಯುವತಿಯ ಮನೆಯವರು ವಿರೋಧ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲದೇ ಸಾಕಷ್ಟು ಬಾರಿ ಇಬ್ಬರಿಗೂ ಬುದ್ಧಿವಾದ ಹೇಳಿದ್ದರೂ ಇಬ್ಬರು ಪ್ರೀತಿ ಮುಂದುವರಿಸಿದ್ದರು ಎಂದು ವರದಿಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನಾವು ಕೇಳಿದಷ್ಟು ಸೀಟ್ ನೀಡಿದ್ರೆ ಮಾತ್ರ ಮೈತ್ರಿ- ಮಾಯಾವತಿ

    ನಾವು ಕೇಳಿದಷ್ಟು ಸೀಟ್ ನೀಡಿದ್ರೆ ಮಾತ್ರ ಮೈತ್ರಿ- ಮಾಯಾವತಿ

    ನವದೆಹಲಿ: ನಾವು ಕೇಳಿದಷ್ಟು ಕ್ಷೇತ್ರಗಳನ್ನು ಬಿಟ್ಟುಕೊಟ್ಟರೆ ಮಾತ್ರ ಎಲ್ಲ ಚುನಾವಣೆಯಲ್ಲಿಯೂ ಮೈತ್ರಿಗೆ ಸಿದ್ಧ. ಇಲ್ಲದಿದ್ದರೆ ಏಕಾಂಗಿಯಾಗಿ ಸ್ಪರ್ಧಿಸುತ್ತೇವೆ ಎಂದು ಷರತ್ತು ವಿಧಿಸುವ ಮೂಲಕ ಬಹುಜನ ಸಮಾಜ ಪಕ್ಷದ (ಬಿಎಸ್‍ಪಿ) ಮುಖ್ಯಸ್ಥೆ ಮಾಯಾವತಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಕ್ಕೆ ಕಠಿಣ ಸಂದೇಶ ಕಳುಹಿಸಿದ್ದಾರೆ.

    ಭಾನುವಾರ ಲಕ್ನೋದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮ ಬೇಡಿಕೆ ಸ್ಪಂದಿಸುವ ಯಾವುದೇ ಪಕ್ಷವಾದರೂ ಸರಿ ಮೈತ್ರಿ ಸಿದ್ಧ. ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಯಲ್ಲಿ ಜಂಟಿಯಾಗಿ ಕಣಕ್ಕೆ ಇಳಿಯುತ್ತೇವೆ. ಇಲ್ಲದಿದ್ದರೆ ಏಕಾಂಗಿಯಾಗಿಯೇ ಮುಂಬರುವ ಚುನಾವಣೆ ಎದುರಿಸುತ್ತೇವೆ ಎಂದಿದ್ದಾರೆ.

    ಕೇಂದ್ರ ಹಾಗೂ ಉತ್ತರ ಪ್ರದೇಶದ ಬಿಜೆಪಿ ಸರ್ಕಾರವು ತಮ್ಮ ವಿಫಲತೆಗಳನ್ನು ಮುಚ್ಚಿಹಾಕಲು ಯತ್ನಿಸುತ್ತಿವೆ. ಮುಂಬರುವ ಲೋಕಸಭೆ ಚುನಾವಣೆಗೆ ಅಟಲ್ ಬಿಹಾರಿ ವಾಜಪೇಯಿ ನಿಧನವನ್ನೇ ಅಸ್ತ್ರವಾಗಿ ಬಳಸುತ್ತಿವೆ ಎಂದು ದೂರಿದರು.

    ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ಲೋಕಸಭಾ ಸ್ಥಾನಗಳಿದ್ದು, 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 71 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಹೀಗಾಗಿ 2019ರಲ್ಲಿ ಮೋದಿ ಸರ್ಕಾರವನ್ನು ಸೋಲಿಸಲು ಉತ್ತರ ಪ್ರದೇಶದಲ್ಲಿ ಬಿಎಸ್‍ಪಿ, ಎಸ್‍ಪಿ, ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಲಿದೆ ಎನ್ನುವ ಮಾತು ಕೇಳಿ ಬಂದಿತ್ತು. ಆದರೆ ಚುನಾವಣೆ ಘೋಷಣೆಯಾಗುವ ಮುನ್ನವೇ ಮಾಯಾವತಿ ಸ್ಥಾನ ಹಂಚಿಕೆ ಸಂಬಂಧ ಮಾತನಾಡಿದ್ದು ಕಾಂಗ್ರೆಸ್ ಮತ್ತು ಎಸ್‍ಪಿ ಈ ಷರತ್ತನ್ನು ಹೇಗೆ ಸ್ವೀಕರಿಸುತ್ತದೆ ಎನ್ನುವ ಕುತೂಹಲ ಹೆಚ್ಚಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಡೆಲ್ಲಿ ಡ್ಯಾಶರ್ ಗೌತಮ್ ಗಂಭೀರ್ ಕಮ್ ಬ್ಯಾಕ್

    ಡೆಲ್ಲಿ ಡ್ಯಾಶರ್ ಗೌತಮ್ ಗಂಭೀರ್ ಕಮ್ ಬ್ಯಾಕ್

    ನವದೆಹಲಿ: ಟೀಂ ಇಂಡಿಯಾ ಹಿರಿಯ ಆಟಗಾರ ಗೌತಮ್ ಗಂಭೀರ್ ಡೆಲ್ಲಿ ತಂಡಕ್ಕೆ ಕಮ್ ಬ್ಯಾಕ್ ಮಾಡುತ್ತಿದ್ದು, ಸೆಪ್ಟೆಂಬರ್ 19 ರಿಂದ ಆರಂಭವಾಗುವ ವಿಜಯ್ ಹಜಾರೆ ಟೂರ್ನಿಯಲ್ಲಿ ದೆಹಲಿ ತಂಡದ ನಾಯಕತ್ವ ವಹಿಸಲಿದ್ದಾರೆ.

    ದೆಹಲಿ ಕ್ರಿಕೆಟ್ ಸಂಸ್ಥೆ ಈ ಕುರಿತು ಖಚಿತ ಪಡಿಸಿದ್ದು, ಗಂಭೀರ್ ತಂಡ ನಾಯಕರಾಗಿ ಮುನ್ನಡೆಸಲಿದ್ದಾರೆ ಎಂದು ತಿಳಿಸಿದೆ. ದೆಹಲಿ ತಂಡದ ಇಶಾಂತ್ ಶರ್ಮಾ ಗಾಯಗೊಂಡಿದ್ದು, ರಿಷಭ್ ಪಂತ್ ಮತ್ತು ದ್ರುವ ಶೊರೆ ಸದ್ಯ ಟೀಂ ಇಂಡಿಯಾ ಹಾಗೂ ಇಂಡಿಯಾ ಎ ತಂಡದ ಪರ ಆಡುತ್ತಿದ್ದಾರೆ. ಅದ್ದರಿಂದ ಆಯ್ಕೆ ಸಮಿತಿ ಅನಿವಾರ್ಯವಾಗಿ ಗಂಭೀರ್ ಅವರಿಗೆ ಕರೆ ನೀಡಿದೆ. ಕಳೆದ ಟೂರ್ನಿಯ ವೇಳೆ ಗಂಭೀರ್ ನಾಯಕತ್ವದಿಂದ ಹಿಂದೆ ಸರಿದಿದ್ದರು. ಅಲ್ಲದೇ ಐಪಿಎಲ್ ನಲ್ಲೂ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ನಾಯಕತ್ವದಿಂದ ಕೆಳಗಿಳಿದಿದ್ದರು. ಸತತವಾಗಿ ಐಪಿಎಲ್ ಟೂರ್ನಿಯಲ್ಲಿ ನಾಯಕರಾಗಿ ವಿಫಲರಾಗಿದ್ದು ಅವರ ನಿರ್ಧಾರದ ಹಿಂದಿನ ಪ್ರಮುಖ ಕಾರಣ ಎನ್ನಲಾಗಿತ್ತು.

    ಒಂದು ವರ್ಷದ ಬಳಿಕ ಗಂಭಿರ್ ಮತ್ತೆ ತಂಡದ ನಾಯಕತ್ವ ವಹಿಸಿಕೊಳ್ಳಲಿದ್ದಾರೆ. ಟೂರ್ನಿಯ ಮೊದಲ ಮೂರು ಪಂದ್ಯಗಳಲ್ಲಿ ರಿಷಭ್ ಪಂತ್ ದ್ರುವ ಸೊರೆ ಆಡುವುದು ಖಚಿತವಾಗಿದೆ. ಇನ್ನು ತಂಡದಲ್ಲಿ ಎಲ್ಲಾ ಯುವ ಆಟಗಾರರಿಗೆ ಕೂಡಿದ್ದು, ಗಂಭೀರ್ ನಾಯಕತ್ವದಲ್ಲಿ ಮುನ್ನಡೆಯಲಿದ್ದಾರೆ ಎಂದು ಡೆಲ್ಲಿ ಕ್ರಿಕೆಟ್ ಸಂಸ್ಥೆ ತಿಳಿಸಿದೆ.

    ಡೆಲ್ಲಿ ತಂಡದಲ್ಲಿರುವ ರಿಷಭ್ ಪಂತ್ ಇಂಗ್ಲೆಂಡ್ ವಿರುದ್ಧ ಸರಣಿಯಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿ ಗಮನಸೆಳೆದಿದ್ದರು. ಕೊನೆಯ ಪಂದ್ಯದಲ್ಲಿ ಶತಕ ಸಿಡಿಸಿ ಟೀಂ ಇಂಡಿಯಾ ಪರ 4ನೇ ಇನ್ನಿಂಗ್ಸ್ ನಲ್ಲಿ ಶತಕ ಸಿಡಿಸಿದ ವಿಕೆಟ್ ಕೀಪರ್ ಎಂಬ ಹೆಗ್ಗಳಿಕೆಯನ್ನು ಪಡೆದರು. ಈ ಹಿಂದೆ ಎಂಎಸ್ ಧೋನಿ 2007 ರಲ್ಲಿ ಇಂಗ್ಲೆಂಡ್ ವಿರುದ್ಧ 76* ರನ್ ಸಿಡಿಸಿದ್ದರು. ಅಲ್ಲದೇ ಪಾರ್ಥಿವ್ ಪಾಟೇಲ್ 67* ರನ್ ನಂತರದ ಸ್ಥಾನದಲ್ಲಿದ್ದಾರೆ.

    ಉತ್ತರ ಪ್ರದೇಶ ತಂಡದ ನಾಯಕತ್ವ ಪಟ್ಟ ಸುರೇಶ್ ರೈನಾಗೆ ಒಲಿದು ಬಂದಿದ್ದು, ತಂಡದಲ್ಲಿ ರಿಂಕೂ ಸಿಂಗ್, ಅಂಕಿತ್ ರಾಜಪುತ್ ಸ್ಥಾನ ಪಡೆದಿದ್ದಾರೆ. ಶ್ರೀಲಂಕಾ ವಿರುದ್ಧದ ತ್ರಿಕೋನ ಸರಣಿಯಲ್ಲಿ ಸ್ಥಾನ ಪಡೆದಿದ್ದ ರೈನಾ ಬಳಿಕ ನಡೆದ ಇಂಗ್ಲೆಂಡ್ ವಿರುದ್ಧದ ಟೂರ್ನಿಯಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದರು. ಅಲ್ಲದೇ ಏಷ್ಯಾಕಪ್ ಟೂರ್ನಿಗೂ ರೈನಾರನ್ನು ಆಯ್ಕೆ ಸಮಿತಿ ಕೈಬಿಟ್ಟಿತ್ತು. ಸದ್ಯ ಉತ್ತರ ಪ್ರದೇಶ ತಂಡದ ನಾಯಕತ್ವ ಪಡೆದಿರುವ ರೈನಾಗೆ ಟೀಂ ಇಂಡಿಯಾಗೆ ಕಮ್ ಬ್ಯಾಕ್ ಮಾಡಲು ಅವಕಾಶ ಲಭಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ನರೇಂದ್ರ ಮೋದಿ ಗೆಲುವಿನ ರೂವಾರಿ ಪ್ರಶಾಂತ್ ಕಿಶೋರ್ ಜೆಡಿಯುಗೆ ಸೇರ್ಪಡೆ

    ನರೇಂದ್ರ ಮೋದಿ ಗೆಲುವಿನ ರೂವಾರಿ ಪ್ರಶಾಂತ್ ಕಿಶೋರ್ ಜೆಡಿಯುಗೆ ಸೇರ್ಪಡೆ

    ನವದೆಹಲಿ: 2019ರ ಚುನಾವಣೆಯಲ್ಲಿ ನಾನು ಯಾರ ಪರವೂ ಕೆಲಸ ಮಾಡುವುದಿಲ್ಲ ಎಂದು ಹೇಳಿದ್ದ ರಾಜಕೀಯ ತಂತ್ರಗಾರ ಪ್ರಶಾಂತ್ ಕಿಶೋರ್ ಬಿಹಾರದ ಸಿಎಂ ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.

    ಭಾನುವಾರ ಪಾಟ್ನಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಯು ವರಿಷ್ಠ ಹಾಗೂ ಬಿಹಾರದ ಸಿಎಂ ನಿತೀಶ್ ಕುಮಾರ್ ಅವರ ನೇತೃತ್ವದಲ್ಲಿ ಪ್ರಶಾಂತ್ ಕಿಶೋರ್ ಸೇರಿಕೊಂಡಿದ್ದಾರೆ. ಬಿಜೆಪಿ, ಜೆಡಿಯು ಮತ್ತು ಕಾಂಗ್ರೆಸ್ ಪಕ್ಷದಲ್ಲಿ ಚುನಾವಣಾ ತಂತ್ರಗಾರರಾಗಿ ಕಾರ್ಯನಿರ್ವಹಿಸಿದ್ದ ಕಿಶೋರ್ ರಾಜಕೀಯ ಪ್ರವೇಶ ಮಾಡಿದ್ದು, ರಾಷ್ಟ್ರ ರಾಜಕಾರಣದಲ್ಲಿ ಭಾರೀ ಚರ್ಚೆಯಾಗುತ್ತಿದೆ.

    ಹಿಂದೆ ಕಿಶೋರ್ ಹೇಳಿದ್ದು ಏನು?
    ಹೈದರಾಬಾದ್‍ನ ಇಂಡಿಯನ್ ಸ್ಕೂಲ್ ಆಫ್ ಬಿಸಿನೆಸ್‍ನಲ್ಲಿ ವಿದ್ಯಾರ್ಥಿಗಳ ನಡೆದ ಸಂವಾದದ ವೇಳೆ, 2 ವರ್ಷಗಳ ಹಿಂದೆ ನಾನು ಈ ಕ್ಷೇತ್ರವನ್ನು ತೊರೆಯಬೇಕೆಂದುಕೊಂಡಿದ್ದೆ. ತೊರೆಯುವ ಮುನ್ನ ನನ್ನ ಐಪ್ಯಾಕ್ ಸಂಸ್ಥೆಯನ್ನು ಒಬ್ಬರ ಕೈಗೆ ನೀಡುವ ಜವಾಬ್ದಾರಿ ಇತ್ತು ಎಂದು ತಿಳಿಸಿದ್ದರು.

    ರಾಜಕೀಯಕ್ಕೆ ಬರುತ್ತೀರಾ ಎನ್ನುವ ಪ್ರಶ್ನೆಗೆ, ನಾನು ಯಾವುದೇ ರಾಜಕೀಯ ಪಕ್ಷಕ್ಕೆ ಸೇರ್ಪಡೆಯಾಗುವುದಿಲ್ಲ. ಗುಜರಾತ್ ಅಥವಾ ಬಿಹಾರಕ್ಕೆ ನಾನು ಹೋಗಿ ಕೆಲಸ ಮಾಡುತ್ತೇನೆ. ಪ್ರಧಾನಿ ಮೋದಿ ಬಿಜೆಪಿ ಪರ ಕೆಲಸ ಮಾಡುವಂತೆ ಹೇಳಿದ್ದರು. ಆದರೆ ನಾನು ಇದೂವರೆಗೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದಿದ್ದರು.

    ಕಾಂಗ್ರೆಸ್, ರಾಹುಲ್ ಗಾಂಧಿ ಜೊತೆಗಿನ ಸಂಬಂಧದ ಬಗ್ಗೆ ಕೇಳಲಾದ ಪ್ರಶ್ನೆಗೆ, ನಾನು ಮತ್ತು ರಾಹುಲ್ ಸ್ನೇಹಿತರು. ರಾಹುಲ್ ಗಾಂಧಿ ಅವರಿಗೆ ಅವರದ್ದೇ ಆದ ಕಲ್ಪನೆ ಮತ್ತು ದೃಷ್ಟಿಗಳಿವೆ. ಆದರೆ ಈ ಕಲ್ಪನೆಗಳು ನನಗೆ ಮನವರಿಕೆಯಾಗದ ಹಿನ್ನೆಲೆಯಲ್ಲಿ ನಾನು ಅವರ ಜೊತೆ ಕೆಲಸ ಮಾಡುತ್ತಿಲ್ಲ ಎಂದು ತಿಸಿದ್ದರು.

    ಪ್ರಶಾಂತ್ ಹೆಜ್ಜೆ ಗುರುತು:
    2014ರ ಲೋಕಸಭಾ ಚುನಾವಣೆಯಲ್ಲಿ ಮೋದಿ ಕ್ಯಾಂಪ್‍ನಲ್ಲಿ ಗುರುತಿಸಿಕೊಂಡಿದ್ದ ಪ್ರಶಾಂತ್ ಕಿಶೋರ್ ನಂತರ ಬಿಹಾರ ಚುನಾವಣೆಯಲ್ಲಿ ನಿತೀಶ್ ಕುಮಾರ್ ಕ್ಯಾಂಪ್‍ನಲ್ಲಿ ಗುರುತಿಸಿಕೊಂಡು ಗೆಲುವಿನ ರೂವಾರಿಯಾಗಿದ್ದರು. ಈ ಕಾರಣಕ್ಕಾಗಿ ಪ್ರಶಾಂತ್ ಕಿಶೋರ್ ಅವರಿಗೆ ರಾಹುಲ್ ಗಾಂಧಿ ಉತ್ತರ ಪ್ರದೇಶ ಚುನಾವಣೆ ಉಸ್ತುವಾರಿ ವಹಿಸಿದ್ದರು. ಆದರೆ ಉತ್ತರ ಪ್ರದೇಶದಲ್ಲಿ ಪ್ರಶಾಂತ್ ಕಿಶೋರ್ ತಂತ್ರಗಾರಿಕೆಗೆ ಸೋಲಾಗಿತ್ತು. ಮೇಲ್ವರ್ಗದ ಮತಗಳನ್ನು ಸೆಳೆಯುವ ಉದ್ದೇಶ ಮತ್ತು ಕಾಂಗ್ರೆಸ್ ಯಾವಾಗಲೂ ಅಲ್ಪಸಂಖ್ಯಾತ ಮತ್ತು ಹಿಂದುಳಿದ ವರ್ಗಗಳ ಪಕ್ಷ ಎನ್ನುವ ಕಲ್ಪನೆಯಿಂದ ಹೊರಬರಲು ಪ್ರಶಾಂತ್ ಕಿಶೋರ್ ಅವರು ಈ ಬಾರಿ ಬ್ರಾಹ್ಮಣ ಸಮುದಾಯ ವ್ಯಕ್ತಿಯನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಲು ಶೀಲಾ ದೀಕ್ಷಿತ್ ಅವರನ್ನು ಸಿಎಂ ಅಭ್ಯರ್ಥಿಯನ್ನಾಗಿ ಘೋಷಿಸುವಂತೆ ಸಲಹೆ ನೀಡಿದ್ದರು. ಈ ಸಲಹೆಗೆ ಕಾಂಗ್ರೆಸ್ ವಲಯದಲ್ಲಿ ವಿರೋಧ ವ್ಯಕ್ತವಾಗಿತ್ತು.

    2014ರ ಚುನಾವಣೆಯ ವೇಳೆ ಪ್ರಶಾಂತ್ ಕಿಶೋರ್ ಸಲಹೆಯಂತೆ ಚಾಯ್‍ಪೇ ಚರ್ಚಾ ಬಿಜೆಪಿಗೆ ಭಾರೀ ಯಶಸ್ಸನ್ನು ತಂದುಕೊಟ್ಟಿತ್ತು. ಇದಾದ ಬಳಿಕ ಅಮಿತ್ ಶಾ ಜೊತೆಗಿನ ಭಿನ್ನಾಭಿಪ್ರಾಯದಿಂದಾಗಿ ಪ್ರಶಾಂತ್ ಕಿಶೋರ್ ಬಿಜೆಪಿ ಪಾಳೆಯವನ್ನು ತೊರೆದಿದ್ದರು. ಬಿಹಾರದಲ್ಲಿ ಮಹಾಘಟ್‍ಬಂಧನ್ ಮೈತ್ರಿಕೂಟ ನಡೆಸಿ ನಿತೀಶ್ ಕುಮಾರ್ ಅವರನ್ನು ಪ್ರಶಾಂತ್ ಕಿಶೋರ್ ಗೆಲ್ಲಿಸಿದ್ದರು. 2017ರ ಪಂಜಾಬ್ ವಿಧಾನಸಭಾ ಚುನಾವಣೆ ವೇಳೆ ಪ್ರಶಾಂತ್ ಕಿಶೋರ್ ತಂಡ ಕಾಂಗ್ರೆಸ್‍ನೊಂದಿಗೆ ಕೈಜೋಡಿಸಿತ್ತು. ಆಗಲೂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಎದುರಾಳಿಯನ್ನ ಮಣಿಸಿ ಅಧಿಕಾರ ಹಿಡಿದರು. ಹಲವು ವರ್ಷಗಳಿಂದ ಚುನಾವಣೆಯಲ್ಲಿ ಸತತ ಸೋಲು ಕಂಡಿದ್ದ ಕಾಂಗ್ರೆಸ್‍ಗೆ ಈ ಗೆಲುವು ಸಮಾಧಾನ ತಂದುಕೊಟ್ಟಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv