Tag: uttar pradesh

  • 12 ವರ್ಷದ ಬಾಲಕನಿಂದ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ

    12 ವರ್ಷದ ಬಾಲಕನಿಂದ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ

    ಲಕ್ನೋ: ಎಂಟು ವರ್ಷದ ಬಾಲಕಿ ಮೇಲೆ 12 ವರ್ಷದ ಬಾಲಕ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ.

    ಸಂತ್ರಸ್ತೆಯ ಪೋಷಕರು ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಇಬ್ಬರು ಆಟವಾಡುವ ವೇಳೆ ಆರೋಪಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

    ಸಂತ್ರಸ್ತೆಯ ಪೋಷಕರು ನೀಡಿದ ದೂರಿನ ಅನ್ವಯ ಪೊಲೀಸರು ಆರೋಪಿಯ ವಿರುದ್ಧ ಅತ್ಯಾಚಾರಕ್ಕೆ ಯತ್ನದ ಆರೋಪದಡಿ ಪ್ರಕರಣ ದಾಖಲಿಸಿದ್ದಾರೆ. ಬಾಲಕಿಯನ್ನು ಶನಿವಾರ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಭಾನುವಾರ ವರದಿ ಕೈ ಸೇರುವ ಸಾಧ್ಯತೆ ಇದೆ. ಬಾಲಕಿಯ ಹೇಳಿಕೆಯನ್ನು ನ್ಯಾಯಾಧೀಶರ ಮುಂದೆ ದಾಖಲು ಮಾಡಿಕೊಳ್ಳಲಾಗುವುದು. ಆದರೆ ಬಾಲಕನನ್ನು ಇನ್ನು ವಶಕ್ಕೆ ಪಡೆದಿಲ್ಲ ಎಂದು ಹಿರಿಯ ಪೊಲೀಸ್ ಆಧಿಕಾರಿ ಆರ್.ಪಿ ಶರ್ಮಾ ತಿಳಿಸಿದ್ದಾರೆ.

    ಸಂತ್ರಸ್ತೆಯ ಪೋಷಕರು ದೂರಿನಲ್ಲಿ ತಿಳಿಸಿರುವಂತೆ ಬಾಲಕಿ 4ನೇ ತರಗತಿಯಲ್ಲಿ ಓದುತ್ತಿದ್ದು, ಶುಕ್ರವಾರ ಸಂಜೆ ಆರೋಪಿ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಬಾಲಕಿ ಜೋರಾಗಿ ಕೂಗಿಕೊಂಡ ಕಾರಣ ಆತ ಅಲ್ಲಿಂದ ಪರಾರಿಯಾಗಿದ್ದಾನೆ. ಅನಂತರ ಆಕೆ ಮನೆಗೆ ವಾಪಸ್ ಬಂದಿದ್ದು ಈ ವೇಳೆ ತನಗದ ದೌರ್ಜನ್ಯವನ್ನು ಪೋಷಕರಿಗೆ ತಿಳಿಸಿದ್ದಾಳೆ. ಬಾಲಕ ಕೂಡ ಆದೇ ಗ್ರಾಮದ ನಿವಾಸಿಯಾಗಿದ್ದು, 8 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.

    ಬಾಲಕಿಯಿಂದ ಮಾಹಿತಿ ಪಡೆದ ಪೋಷಕರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ವೇಳೆ ಆರೋಪಿ ಕುಟುಂಬ ಬಗ್ಗೆ ನಮಗೆ ಯಾವುದೇ ದ್ವೇಷವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆರೋಪಿ ಮತ್ತು ಸಂತ್ರಸ್ತೆಯ ಎರಡು ಕುಟುಂಬಗಳು ಬಡತನದಿಂದ ಕೂಡಿದ್ದು, ಬಾಲಕಿ ತಂದೆ ದಿನಗೂಲಿ ನೌಕರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

  • ಉತ್ತರ ಪ್ರದೇಶ ಬೋರ್ಡ್ ಪರೀಕ್ಷೆಯ ಸ್ಟ್ರಿಕ್ಟ್ ರೂಲ್ಸ್ ಗೆ ಹೆದರಿ 10 ಲಕ್ಷ ವಿದ್ಯಾರ್ಥಿಗಳು ಗೈರು!

    ಉತ್ತರ ಪ್ರದೇಶ ಬೋರ್ಡ್ ಪರೀಕ್ಷೆಯ ಸ್ಟ್ರಿಕ್ಟ್ ರೂಲ್ಸ್ ಗೆ ಹೆದರಿ 10 ಲಕ್ಷ ವಿದ್ಯಾರ್ಥಿಗಳು ಗೈರು!

    ಲಕ್ನೋ: ಈ ಬಾರಿಯ ಉತ್ತರ ಪ್ರದೇಶದ ಬೋರ್ಡ್ ಪರೀಕ್ಷೆಯಲ್ಲಿ ಕಟ್ಟುನಿಟ್ಟಿನ ನಿಯಮವನ್ನು ಅಳವಡಿಸಿದ ಪರಿಣಾಮ ಕಳೆದ ನಾಲ್ಕು ದಿನಗಳಲ್ಲಿ 10 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಗೈರು ಹಾಜರಿ ಹಾಕಿದ್ದಾರೆ.

    ಭಾರೀ ಸಂಖ್ಯೆಯಲ್ಲಿ ಗೈರು ಹಾಜರಿ ಕಂಡು ಬಂದ ಪರಿಣಾಮ ಮುಂದೆ ಪರೀಕ್ಷಾ ಪ್ರಕ್ರಿಯೆಗಳನ್ನು ಸರಳಗೊಳಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

    ಪ್ರಧಾನಿ ಮೋದಿ ಅವರ `ಎಕ್ಸಾಂ ವಾರಿಯರ್’ ಹಿಂದಿ ಅವತರಣಿಕೆ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು, ಪರೀಕ್ಷೆಗಳ ಕುರಿತ ಭಯ ವಿದ್ಯಾರ್ಥಿಗಳಲ್ಲಿ ಮೂಡಿದೆ. ಇದನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಪರೀಕ್ಷಾ ಕ್ರಮಗಳನ್ನು ಸರಳಗೊಳಿಸಲು ಬೇಕಾದ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುವುದು. ಪರೀಕ್ಷೆಗಳು ವಿದ್ಯಾರ್ಥಿಗಳಿಗೆ ಸವಾಲಾಗಿ ನಿರ್ಮಾಣವಾಗದೇ ದೈನಂದಿನ ಪ್ರಕ್ರಿಯೆಯಂತೆ ನಡೆಯಬೇಕು ಎಂದು ತಿಳಿಸಿದರು.

    ಕಳೆದ ನಾಲ್ಕು ದಿನಗಳಿಂದ ಉತ್ತರಪ್ರದೇಶದಲ್ಲಿ ಬೋರ್ಡ್ ಪರೀಕ್ಷೆ ನಡೆಸಲಾಗುತ್ತಿದ್ದು, ಈ ಪರೀಕ್ಷೆಗೆ ಭಯದಿಂದ ಸುಮಾರು 10 ಲಕ್ಷ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ಈ ಕುರಿತು ಶನಿವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಯುಪಿ ಸಿಎಂ ಯೋಗಿ ಅದಿತ್ಯನಾಥ್ ಪರೀಕ್ಷೆಗಳನ್ನು ಕಟ್ಟು ನಿಟ್ಟಿನಿಂದ ನಡೆಸಲು ಸೂಚನೆ ನೀಡಲಾಗಿತ್ತು. ಆದರೆ ಪರೀಕ್ಷಾ ಭಯಕ್ಕೆ ಹೆದರಿ 10 ಲಕ್ಷ ವಿದ್ಯಾರ್ಥಿಗಳು ಹಾಜರಾಗಿಲ್ಲ. ಇದು ಸದ್ಯದ ಅಂಕಿ ಅಂಶಗಳು ಮಾತ್ರ. ಆದರೆ ಮುಂದಿನ ದಿನಗಳಲ್ಲಿ ಏನಾಗುತ್ತದೆ ಎಂಬುವುದು ನನಗೂ ತಿಳಿದಿಲ್ಲ ಎಂದು ಹೇಳಿದರು.

    ಇದೇ ವೇಳೆ ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಒತ್ತಡವನ್ನು ಹಾಕದಂತೆ ಪೋಷಕರಿಗೆ ಸಿಎಂ ಯೋಗಿ ಕರೆ ನೀಡಿದರು. ಕಳೆದ 10 ತಿಂಗಳಿನಲ್ಲಿ 6 ಲಕ್ಷ ವಿದ್ಯಾರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಲಾಗಿದೆ. 2.5 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿದ್ದಾರೆ. 1.4 ಲಕ್ಷ ವಿದ್ಯಾರ್ಥಿಗಳಿಗೆ ಉದ್ಯೋಗ ಅವಕಾಶ ನೀಡಲಾಗಿದೆ. ಹಳ್ಳಿಯಲ್ಲಿ ಇದ್ದುಕೊಂಡೆ ತಿಂಗಳಿಗೆ 14 ರಿಂದ 15 ಸಾವಿರ ರೂ. ಗಳಿಸಬಹುದಾಗಿದೆ ಎಂದು ಮಾಹಿತಿ ನೀಡಿದರು.

    ಕೌಶಲ್ಯ ಅಭಿವೃದ್ಧಿಯಲ್ಲಿ ನೀಡಲಾಗಿದ್ದ ತಾಂತ್ರಿಕ ಕೌಶಲ್ಯಗಳ ಅಳವಡಿಕೆಯಿಂದ ರಾಜ್ಯದ 14 ಸಾವಿರ ನ್ಯಾಯಬೆಲೆ ಅಂಗಡಿಯಲ್ಲಿ ಪ್ರತಿ ತಿಂಗಳು 35 ಕೋಟಿ ರೂ. ಉಳಿತಾಯ ಮಾಡಲಾಗುತ್ತಿದೆ ಎಂದು ಹೇಳಿದರು. ಉತ್ತರ ಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಅವರು ಅಧಿಕಾರ ವಹಿಸಿಕೊಂಡ ಬಳಿಕ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಶಿಕ್ಷಣ ಕ್ಷೇತ್ರದಲ್ಲಿ ನಡೆಯುತ್ತಿದ್ದ ಮಾಫಿಯಾ ವಿರುದ್ಧವೂ ಕಠಿಣ ಕ್ರಮಕೈಗೊಳ್ಳಲು ಸೂಚಿಸಿದ್ದರು.

  • ಚುನಾವಣೆ ಗೆಲ್ಲಲು ಸಿದ್ದು ಸರ್ಕಾರದ ವಿರುದ್ಧ `ರಾಮ’ ಅಸ್ತ್ರ!

    ಚುನಾವಣೆ ಗೆಲ್ಲಲು ಸಿದ್ದು ಸರ್ಕಾರದ ವಿರುದ್ಧ `ರಾಮ’ ಅಸ್ತ್ರ!

    ನವದೆಹಲಿ: ಕರ್ನಾಟಕ ವಿಧಾನಸಭೆಯ ಚುನಾವಣೆಯ ದಿನಾಂಕ ಹತ್ತಿರ ಬರುತ್ತಿದ್ದಂತೆ ರಾಜ್ಯದಲ್ಲಿ ರಾಮ ರಥ ಸಂಚರಿಸಲಿದೆ. ಈ ಮೂಲಕ ಚುನಾವಣೆ ಗೆಲ್ಲಲು ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ ಎಸ್‍ಎಸ್) ಸಿದ್ದರಾಮಯ್ಯ ಸರ್ಕಾರದ ವಿರುದ್ಧ ರಾಮ ಅಸ್ತ್ರವನ್ನು ಪ್ರಯೋಗಿಸಲು ಮುಂದಾಗಿದೆ.

    ಉತ್ತರಪ್ರದೇಶದಿಂದ ಕರ್ನಾಟಕಕ್ಕೆ ರಾಮರಾಜ್ಯ ರಥಯಾತ್ರೆ ಬರಲಿದ್ದು, 6 ರಾಜ್ಯಗಳಲ್ಲಿ ರಥ ಸಂಚರಿಸಲಿದೆ. ರಾಷ್ಟ್ರೀಯ ಸ್ವಯಂ ಸೇವಾ ಸಂಘದ ವತಿಯಿಂದ ನಡೆಯಲಿರುವ ಈ ಯಾತ್ರೆ ಉತ್ತರಪ್ರದೇಶದ ಲಕ್ನೋದಿಂದ ಫೆಬ್ರವರಿ 13ರಿಂದ ಹೊರಡಲಿದ್ದು, ಫೆಬ್ರವರಿ 25ಕ್ಕೆ ತಮಿಳುನಾಡಿನ ರಾಮೇಶ್ವರದಲ್ಲಿ ಕೊನೆಗೊಳ್ಳಲಿದೆ.

    ಫೆಬ್ರವರಿ 13 ರಿಂದ ಆರಂಭವಾಗುವ ಯಾತ್ರೆ 39 ದಿನಗಳ ಕಾಲ ನಡೆಯಲಿದೆ. ಈ ವೇಳೆ ಸುಮಾರು 40 ಸಾರ್ವಜನಿಕ ಸಭೆಗಳು ಆಯೋಜನೆ ಮಾಡಲಾಗುತ್ತಿದೆ. ಈ ಸಭೆಗಳಲ್ಲಿ ಪ್ರಮುಖವಾಗಿ ರಾಮಮಂದಿರ ನಿರ್ಮಾಣದ ಕುರಿತು ಚರ್ಚೆ ನಡೆಯಲಿದೆ. ಈ ವರ್ಷ ಕರ್ನಾಟಕದಲ್ಲಿ ನಡೆಯಲಿರುವ ಚುನಾವಣೆ ಸೇರಿದಂತೆ, ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆಗೆ ರಾಮಮಂದಿರ ವಿಚಾರವನ್ನೇ ಪ್ರಮುಖ ಆಸ್ತ್ರವಾಗಿ ಬಿಜೆಪಿ ಬಳಕೆ ಮಾಡುವ ಸಾಧ್ಯತೆಗಳಿವೆ.

    ಯಾತ್ರೆಗೆ ಉತ್ತರಪ್ರದೇಶದ ಕರಸೇವಾಕಪುರ ದಿಂದ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಅವರು ಚಾಲನೆ ನೀಡಲಿದ್ದಾರೆ. ಉತ್ತರ ಪ್ರದೇಶದಿಂದ ಆರಂಭವಾಗುವ ಯಾತ್ರೆ ಮಧ್ಯಪ್ರದೇಶ, ಮಹಾರಾಷ್ಟ್ರ ಮೂಲಕ ಕರ್ನಾಟಕ್ಕೆ ಪ್ರವೇಶ ಪಡೆಯಲಿದ್ದು, ನಂತರ ಕೇರಳಕ್ಕೆ ಸಾಗಿ ತಮಿಳುನಾಡಿನ ರಾಮೇಶ್ವರದಲ್ಲಿ ಅಂತ್ಯಗೊಳ್ಳಲಿದೆ.

    1990ರ ಸೆಪ್ಟೆಂಬರ್ ಅಕ್ಟೋಬರ್ ನಲ್ಲಿ ಬಿಜೆಪಿಯ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ರಾಮ ರಥ ಯಾತ್ರೆ ನಡೆಸಿದ್ದರು. ಈ ಮೂಲಕ ರಾಷ್ಟ್ರಮಟ್ಟದಲ್ಲಿ ಬಿಜೆಪಿ ಯನ್ನು ಪ್ರಮುಖ ರಾಜಕೀಯ ಪಕ್ಷವಾಗಿ ಬೆಳೆಯುವಂತೆ ಮಾಡಿದ್ದರು.

  • ದುಷ್ಕರ್ಮಿಗಳ ಮೇಲೆ ಗುಂಡು ಹಾರಿಸಿ ಪತಿ ಜೀವ ರಕ್ಷಿಸಿದ ಪತ್ನಿ- ವಿಡಿಯೋ ವೈರಲ್

    ದುಷ್ಕರ್ಮಿಗಳ ಮೇಲೆ ಗುಂಡು ಹಾರಿಸಿ ಪತಿ ಜೀವ ರಕ್ಷಿಸಿದ ಪತ್ನಿ- ವಿಡಿಯೋ ವೈರಲ್

    ಲಕ್ನೋ: ಪತಿ ಮೇಲೆ ಹಲ್ಲೆ ನಡೆಸುತ್ತಿದ್ದ ದುಷ್ಕರ್ಮಿಗಳ ಮೇಲೆ ಪತ್ನಿ ಗುಂಡು ಹಾರಿಸುವ ಮೂಲಕ ಪತಿಯ ಜೀವ ರಕ್ಷಣೆ ಮಾಡಿದ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ.

    ನಗರದ ಸ್ಥಳೀಯ ನಿವಾಸಿ ಅಬಿದ್ ಅಲಿ ಎಂಬವರು ಭಾನುವಾರ ತಮ್ಮ ನಿವಾಸದ ಮುಂದೆ ನಿಂತಿದ್ದ ವೇಳೆ 6 ಮಂದಿ ದುಷ್ಕರ್ಮಿಗಳ ಗುಂಪು ಅವರ ಮೇಲೆ ಹಲ್ಲೆ ನಡೆಸಿದೆ. ಈ ವೇಳೆ ಮನೆ ಹೊರಗೆ ಪತಿ ಮೇಲೆ ಹಲ್ಲೆ ಮಾಡುತ್ತಿದ್ದನ್ನು ಕಂಡ ಪತ್ನಿ ರಿವಾಲ್ವರ್ ನಿಂದ ದುಷ್ಕರ್ಮಿಗಳ ಮೇಲೆ ಗುಂಡು ಹಾರಿಸಿದ್ದಾರೆ.

    ಪತ್ನಿ ಫೈರ್ ಮಾಡಿದ್ದನ್ನು ನೋಡಿ ಭಯಗೊಂಡ ದುಷ್ಕರ್ಮಿಗಳು ಅಲ್ಲಿಂದ ಓಡಿ ಹೋಗಿದ್ದಾರೆ ಈ ಎಲ್ಲಾ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಕಾರಣ ಅಬಿದ್ ಅಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಹಿಳೆ ವೃತ್ತಿಯಲ್ಲಿ ವಕೀಲರಾಗಿದ್ದು, ಪರವನಾಗಿ ಹೊಂದಿರುವ ಪಿಸ್ತೂಲ್ ಹೊಂದಿದ್ದರು.

    ಘಟನೆ ವೇಳೆ ಹಲ್ಲೆ ನಡೆಸಿದ ದುಷ್ಕರ್ಮಿಗಳು ದಂಪತಿಯನ್ನು ಕೊಲೆ ಮಾಡುವ ಬೆದರಿಕೆಯನ್ನು ಹಾಕಿದ್ದಾರೆ ಎನ್ನಲಾಗಿದೆ. ಈ ಕುರಿತು ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಿದ ಸಂದರ್ಭದಲ್ಲಿ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ್ದರು. ಆದರೆ ಈ ಪ್ರಕರಣ ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದು, ಲಕ್ನೋದ ಕಕೋರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

    https://www.youtube.com/watch?v=fPhSiI4KtwM

     

     

  • ವಿಡಿಯೋ ಲೀಕ್ ಆದ್ಮೇಲೆ ಅತ್ಯಾಚಾರವೆಂದ್ಳು, ಕೋರ್ಟ್ ನಲ್ಲಿ ಉಲ್ಟಾ ಹೊಡೆದ್ಳು!

    ವಿಡಿಯೋ ಲೀಕ್ ಆದ್ಮೇಲೆ ಅತ್ಯಾಚಾರವೆಂದ್ಳು, ಕೋರ್ಟ್ ನಲ್ಲಿ ಉಲ್ಟಾ ಹೊಡೆದ್ಳು!

    ಲಕ್ನೋ: ತನ್ನ ಮೇಲೆ ಅತ್ಯಾಚಾರ ನಡೆಸಲಾಗಿದೆ ಎಂದು ದೂರು ನೀಡಿದ್ದ ಯುವತಿ ನ್ಯಾಯಾಲಯದಲ್ಲಿ ಆರೋಪಿಯ ಪರ ಹೇಳಿಕೆ ನೀಡಿ ಆತನನ್ನು ಶಿಕ್ಷೆಯಿಂದ ತಪ್ಪಿಸುವ ಯತ್ನ ನಡೆಸಿದ ಘಟನೆ ಉತ್ತರ ಪ್ರದೇಶದ ಹಮ್ರೀಪುರ್ ಜಿಲ್ಲೆಯಲ್ಲಿ ನಡೆದಿದೆ.

    ಪ್ರೀತಿಯ ನಾಟಕವಾಡಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಯುವತಿ ಪೊಲೀಸರಿಗೆ ದೂರು ನೀಡಿದ್ದಳು. ಯುವತಿ ದೂರಿನ ಆನ್ವಯ ಪೊಲೀಸರು ತನಿಖೆ ಸಹ ನಡೆಸಿದ್ದರು. ಈ ವೇಳೆ ಯುವತಿ ಮೇಲೆ ಅತ್ಯಾಚಾರ ನಡೆಸಿದ ವಿಡಿಯೋವನ್ನು ಆರೋಪಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ. ಈ ವಿಡಿಯೋ ಹೆಚ್ಚು ವೈರಲ್ ಆಗಿತ್ತು. ಆದರೆ ಪ್ರಕರಣದ ವಿಚಾರಣೆ ನಡೆಸಿದ ವೇಳೆ ಯುವತಿ ನ್ಯಾಯಾಧೀಶರ ಮುಂದೆ ಆರೋಪಿ ಪರ ಹೇಳಿಕೆ ನೀಡಿದ್ದಾಳೆ. ಆತ ತನ್ನ ಮೇಲೆ ಅತ್ಯಾಚಾರ ನಡೆಸಿಲ್ಲ ಮತ್ತು ರೇಪ್ ನಡೆಸಿರುವ ವಿಡಿಯೋವನ್ನು ಬಿಡುಗಡೆಗೊಳಿಲ್ಲ ಎಂದು ಹೇಳಿಕೆ ನೀಡಿದ್ದಾಳೆ.

    ಮೂಲಗಳ ಪ್ರಕಾರ ಆರೋಪಿಯ ಪರ ಯುವತಿಯೊಂದಿಗೆ ಸಂಧಾನವನ್ನು ನಡೆಸಲಾಗಿದ್ದು, ಪರಿಣಾಮವಾಗಿ ಆತನ ಪರ ಹೇಳಿಕೆ ನೀಡಿ ತನ್ನ ದೂರನ್ನು ಹಿಂಪಡೆದಿದ್ದಾಳೆ ಎಂದು ಹೇಳಲಾಗಿದೆ. ಪೊಲೀಸ್ ತನಿಖೆ ವೇಳೆ ಆರೋಪಿ ಉದ್ದೇಶ ಪೂರ್ವವಾಗಿ ವಿಡಿಯೋವನ್ನು ಲೀಕ್ ಮಾಡಿದ್ದ ಎಂಬ ಅಂಶ ಬೆಳಕಿಗೆ ಬಂದಿತ್ತು. ಆದರೆ ಈಗ ಯುವತಿಯ ಮೇಲೆ ಸುಳ್ಳು ಆರೋಪ ಮತ್ತು ಹೇಳಿಕೆ ನೀಡಿರುವ ಕುರಿತು ಪ್ರಕರಣ ದಾಖಲಾಗಿದೆ.

    ಘಟನೆ ಕುರಿತು ಹೇಳಿಕೆ ನೀಡಿರುವ ಯುವತಿಯ ತಾಯಿ, ಯಾರದರೂ ಮಗಳನ್ನು ಭೇಟಿ ಮಾಡಲು ಬಂದರೆ ಆಕೆ ತನ್ನ ಕೊಠಡಿಗೆ ತೆರಳಿ ಲಾಕ್ ಮಾಡಿಕೊಳ್ಳುತ್ತಾಳೆ. ಅಲ್ಲದೇ ಸರಿಯಾಗಿ ಊಟ ಮಾಡುತ್ತಿಲ್ಲ. ಘಟನೆಯಿಂದ ನಮ್ಮ ಮಗಳು ತೀವ್ರವಾಗಿ ನೊಂದಿದ್ದಾಳೆ. ಕೆಲವು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದು ಈ ವೇಳೆ ಆಕೆಯನ್ನು ರಕ್ಷಣೆ ಮಾಡಿರುವುದಾಗಿ ತಿಳಿಸಿದ್ದಾರೆ.

    ವಕೀಲ ಶೈಲೇಶ್ ಸ್ವರೂಪ್ ಅವರು ತಿಳಿಸುವಂತೆ, ಸಂತ್ರಸ್ತೆ ಶಿಕ್ಷಕಿಯಾಗಿದ್ದು ಶಾಲೆಯಿಂದ ಹಿಂದಿರುಗುವ ವೇಳೆ ಗೋವಿಂದ್ ಒಮರ್ ಎಂಬಾತ ತನ್ನನ್ನು ಬಲವಂತವಾಗಿ ತನ್ನ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದ. ಅಲ್ಲದೇ ಈ ದೃಶ್ಯವಾಳಿಗಳನ್ನು ತನ್ನ ಮೊಬೈಲ್ ನಲ್ಲಿ ಸೆರೆಹಿಡಿದಿದ್ದ ಎಂದು ದೂರು ನೀಡಿದ್ದರು. ಆದರೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಸುವ ವೇಳೆ ಯುವತಿ ತನ್ನ ದೂರಿಗೆ ವಿರುದ್ಧವಾಗಿ ಹೇಳಿಕೆ ನೀಡಿದ್ದಾಳೆ. ಇದು ಹೆಚ್ಚಿನ ಅನುಮಾನಗಳಿಗೆ ಕಾರಣವಾಗಿದೆ. ಆದರೆ ಐಟಿ ಕಾಯ್ದೆಯ 66ಇ ಸೆಕ್ಷನ್ ಅಡಿ ವಿಡಿಯೋವನ್ನು ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

    ವಿಡಿಯೋ ಆಧಾರಿಸಿ ವಿಚಾರಣೆ ನಡೆಸಿದ ನ್ಯಾ. ಶೋಲಾಜ್ ಚಂದ್ರ ಅವರು ಆರೋಪಿಗೆ 4 ವರ್ಷ ಜೈಲು ಶಿಕ್ಷೆ ಹಾಗೂ 1.5 ಲಕ್ಷ ರೂ. ಗಳನ್ನು ದಂಡವಾಗಿ ವಿಧಿಸಿದ್ದಾರೆ. ಅಲ್ಲದೇ ಪ್ರಕರಣದ ಸಂಬಂಧ ಯುವತಿಗೆ ನ್ಯಾಯಾಲಯ ನೋಟಿಸ್ ಜಾರಿ ಮಾಡಿದೆ.

  • ಅತ್ಯಾಚಾರಿಯನ್ನು ಮದ್ವೆಯಾದ ಸಂತ್ರಸ್ತೆಗೆ ಸಿಕ್ತು ತ್ರಿವಳಿ ತಲಾಖ್!

    ಅತ್ಯಾಚಾರಿಯನ್ನು ಮದ್ವೆಯಾದ ಸಂತ್ರಸ್ತೆಗೆ ಸಿಕ್ತು ತ್ರಿವಳಿ ತಲಾಖ್!

    ಲಕ್ನೋ: ಸ್ಥಳೀಯ ಪಂಚಾಯತ್ ನೀಡಿದ ತೀರ್ಪಿನಂತೆ ತನ್ನ ಮೇಲೆ ಅತ್ಯಾಚಾರ ಮಾಡಿದ ವ್ಯಕ್ತಿಯನ್ನು ಮದುವೆಯಾದ ಮಹಿಳೆಗೆ ಆತ ತ್ರಿವಳಿ ತಲಾಖ್ ನೀಡಿದ ಪ್ರಕರಣ ಉತ್ತರ ಪ್ರದೇಶದ ಹಾಪೂರ್ ನಲ್ಲಿ ನಡೆದಿದೆ.

    ಸ್ಥಳೀಯ ಪಂಚಾಯತ್ ಅತ್ಯಾಚಾರ ನಡೆಸಿದ ಘಟನೆ ಕುರಿತು ವಿಚಾರಣೆ ನಡೆಸಿ ಅತ್ಯಾಚಾರಿಯನ್ನೇ ಮದುವೆಯಾಗುವಂತೆ ತೀರ್ಪು ನೀಡಿತ್ತು. ಇದರಂತೆ ಅತ್ಯಾಚಾರಿ ಜೊತೆಯೇ ಸಂತ್ರಸ್ತೆಯ ವಿವಾಹ ನೆರವೇರಿಸಿದ್ದರು. ಆದರೆ ಮದುವೆಯಾದ ನಂತರ ಪತಿ ಆಕೆಗೆ ತ್ರಿವಳಿ ತಲಾಕ್ ನೀಡಿದ್ದಾನೆ ಎಂದು ಸಂತ್ರಸ್ತೆ ಮಹಿಳೆಯ ಚಿಕ್ಕಪ್ಪ ತಮ್ಮ ಅಳಲು ತೋಡಿಕೊಂಡಿದ್ದಾರೆ. ಅಲ್ಲದೇ ಮದುವೆಯಾದ ಬಳಿಕ ತಮ್ಮ ಮಗಳಿಗೆ ಸಾಕಷ್ಟು ಚಿತ್ರಹಿಂಸೆ ನೀಡಿದ್ದು, ನನ್ನ ಮಗಳು ಹೆಚ್ಚು ನೋವು ಅನುಭವಿಸಿದ್ದಾಳೆ ಎಂದು ಹೇಳಿದ್ದಾರೆ.

    ಘಟನೆ ಕುರಿತು ವಿವರಿಸಿರುವ ಸಂತ್ರಸ್ತೆ, ತನ್ನನ್ನು ಪತಿ ಹಾಗೂ ಆತನ ತಂದೆ ನಿರ್ಜನಾ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಒತ್ತಾಯ ಪೂರ್ವಕವಾಗಿ ವಿಚ್ಛೇದನ ಪತ್ರಕ್ಕೆ ಸಹಿ ಮಾಡಿಸಿಕೊಂಡಿದ್ದಾರೆ. ಅಲ್ಲದೇ ಅದೇ ಸ್ಥಳದಲ್ಲಿ ಮೂರು ಬಾರಿ ತಲಾಖ್ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.

    ಘಟನೆ ಕುರಿತು ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಂತ್ರಸ್ತೆ ನೀಡಿದ ದೂರಿನ ಅನ್ವಯ ಹಪೂರ್ ಪೊಲೀಸರು ದೂರು ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

     

  • ಹೋಂವರ್ಕ್ ಮಾಡದ್ದಕ್ಕೆ 3ನೇ ಕ್ಲಾಸ್ ವಿದ್ಯಾರ್ಥಿಗೆ ಸಹಪಾಠಿಗಳಿಂದ 40 ಬಾರಿ ಕಪಾಳಮೋಕ್ಷ

    ಹೋಂವರ್ಕ್ ಮಾಡದ್ದಕ್ಕೆ 3ನೇ ಕ್ಲಾಸ್ ವಿದ್ಯಾರ್ಥಿಗೆ ಸಹಪಾಠಿಗಳಿಂದ 40 ಬಾರಿ ಕಪಾಳಮೋಕ್ಷ

    ಲಕ್ನೋ: 3 ನೇ ತರಗತಿಯ ವಿದ್ಯಾರ್ಥಿ ಹೋಂ ವರ್ಕ್ ಮಾಡದಿದ್ದಕ್ಕೆ ಶಿಕ್ಷಕ, ಬಾಲಕನ ಸಹಪಾಠಿಗಳಿಂದಲೇ 40 ಬಾರಿ ಕಪಾಳಮೋಕ್ಷ ಮಾಡಿಸಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

    ಇಲ್ಲಿನ ಯುನೈಟೆಡ್ ಪಬ್ಲಿಕ್ ಸ್ಕೂಲ್‍ನಲ್ಲಿ ಈ ಘಟನೆ ನಡೆದಿದೆ. ಕಪಾಳಮೋಕ್ಷ ಮಾಡಿಸಿದ ನಿರ್ದಯಿ ಶಿಕ್ಷಕನನ್ನು ಅಮಾನತು ಮಾಡಲು ಆದೇಶ ಹೊರಡಿಸಲಾಗಿದೆ ಎಂದು ಶಾಲೆಯಪ್ರಾಂಶುಪಾಲರು ತಿಳಿಸಿದ್ದಾರೆ. ನನ್ನ ಮಗ ಯುವರಾಜ್ ಕಳೆದ 15 ದಿನಗಳಿಂದ ಖಿನ್ನತೆಗೊಳಗಾಗಿದ್ದ. ಶಾಲೆಗೆ ಹೋಗಲು ಹಿಂದೇಟು ಹಾಕುತ್ತಿದ್ದ. ನಾವು ಬಲವಂತ ಮಾಡಿ ಕೇಳಿದಾಗ ಹೋಂ ವರ್ಕ್ ಪೂರ್ಣಗೊಳಿಸದ ಕಾರಣ ಶಾಲಾ ಶಿಕ್ಷಕರೊಬ್ಬರು ಸಹಪಾಠಿಗಳಿಂದ ಕಪಾಳಮೋಕ್ಷ ಮಾಡಿಸಿದ್ದಾರೆ ಎಂದು ಹೇಳಿಕೊಂಡಿದ್ದಾನೆ ಎಂದು ಬಾಲಕನ ಪೋಷಕರು ಹೇಳಿದ್ದಾರೆ.

    ಈ ಘಟನೆ ಸಂಬಂಧ ಬಾಲಕನ ಪೋಷಕರು ನೀಡಿರುವ ದೂರನ್ನು ಸ್ವೀಕರಿಸಿದ್ದು, ಶಿಕ್ಷಕನನ್ನು ಅಮಾನತುಗೊಳಿಸಲಾಗಿದೆ ಎಂದು ಶಾಲಾ ಪ್ರಾಂಶುಪಾಲ ಶ್ಯಾಲಿ ಧೀರ್ ತಿಳಿಸಿದ್ದಾರೆ.

  • ಗರ್ಭಿಣಿಯ ಕೈ-ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಗ್ಯಾಂಗ್‍ರೇಪ್

    ಗರ್ಭಿಣಿಯ ಕೈ-ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಗ್ಯಾಂಗ್‍ರೇಪ್

    ಲಕ್ನೋ: 32 ವರ್ಷದ ಗರ್ಭಿಣಿ ಮೇಲೆ ಅಪರಿಚಿತ ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉತ್ತರಪ್ರದೇಶದ ಬದೌನ್ ನ ಕಾಚುಲಾ ಗ್ರಾಮದಲ್ಲಿ ನಡೆದಿದೆ.

    ಶುಕ್ರವಾರ ಬೆಳಗ್ಗೆ ಸುಮಾರು 5 ಗಂಟೆಗೆ ಈ ಘಟನೆ ನಡೆದಿದ್ದು, ಗರ್ಭಿಣಿಯ ಕೈ ಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಾಮುಕರು ಈ ದುಷ್ಕೃತ್ಯವೆಸಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಚಂದ್ರಪ್ರಕಾಶ್ ತಿಳಿಸಿದ್ದಾರೆ.

    ಮಹಿಳೆ ಎಷ್ಟು ಹೊತ್ತಾದರೂ ಮನೆಗೆ ಬರದ ಕಾರಣ ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ. ಬಳಿಕ ಪಕ್ಕದ ಅರಣ್ಯ ಪ್ರದೇಶದಲ್ಲಿ ಮಹಿಳೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದು ಕಂಡುಬಂದಿದೆ. ನಂತರ ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದು, ತಕ್ಷಣ ಆಕೆಯನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ.

    ಪೊಲೀಸರು ಈ ಬಗ್ಗೆ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಸಂತ್ರಸ್ತೆಯ ಹೇಳಿಕೆಯನ್ನು ದಾಖಲಿಸುವುದಾಗಿ ಹೇಳಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮಹಿಳೆಯನ್ನ ಬರೇಲಿಗೆ ರವಾನಿಸಲಾಗಿದ್ದು, ವೈದ್ಯಕೀಯ ಪರೀಕ್ಷೆಗೂ ಒಳಪಡಿಸಲಾಗುತ್ತದೆ ಎಂದು ಹೇಳಿದ್ದಾರೆ. ಪೊಲೀಸರು ಆರೋಪಿಗಳಿಗಾಗಿ ಶೋಧಕಾರ್ಯ ನಡೆಸುತ್ತಿದ್ದಾರೆ ಎಂದು ಚಂದ್ರಪ್ರಕಾಶ್ ಹೇಳಿದ್ದಾರೆ.

  • ಗಾಯಾಳುಗಳನ್ನು ಸಾಗಿಸಿದ್ರೆ ಪೊಲೀಸ್ ಕಾರಿನಲ್ಲಿ ರಕ್ತದ ಕಲೆಯಾಗುತ್ತೆ: ಖಾಕಿಗಳ ಅಮಾನವೀಯತೆಗೆ ಇಬ್ಬರು ಬಲಿ

    ಗಾಯಾಳುಗಳನ್ನು ಸಾಗಿಸಿದ್ರೆ ಪೊಲೀಸ್ ಕಾರಿನಲ್ಲಿ ರಕ್ತದ ಕಲೆಯಾಗುತ್ತೆ: ಖಾಕಿಗಳ ಅಮಾನವೀಯತೆಗೆ ಇಬ್ಬರು ಬಲಿ

    ಲಕ್ನೋ: ರಸ್ತೆ ಅಪಘಾತದಲ್ಲಿ ಗಾಯಗೊಂಡ ಸವಾರರನ್ನು ಪೊಲೀಸರು ನೋಡಿಯೂ ಕೂಡಲೇ ಆಸ್ಪತ್ರೆಗೆ ದಾಖಲಿಸದ ಪರಿಣಾಮ ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ನಡೆದಿದೆ.

    17 ವರ್ಷದ ಅರ್ಪಿತ್ ಖುರಾನಾ ಮತ್ತು ಸನ್ನಿ ಮೃತ ದುರ್ದೈವಿಗಳು. ಗುರುವಾರ ರಾತ್ರಿ ಇಬ್ಬರು ಬೈಕಿನಲ್ಲಿ ಬರುತ್ತಿದ್ದಾಗ ಅಪಘಾತ ಸಂಭವಿಸಿ ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದಾರೆ. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು, ತಮ್ಮ ಪೊಲೀಸ್ ಕಾರಿನಲ್ಲಿ ಗಾಯಾಳುಗಳನ್ನು ಸಾಗಿಸಿದರೆ ಕಲೆಯಾಗುತ್ತದೆ ಎಂದು ನೆಪ ಹೇಳಿ ಕರೆದುಕೊಂಡು ಹೋಗಲು ನಿರಾಕರಿಸಿದ್ದಾರೆ.

    ರಕ್ತದ ಮಡುವಿನಲ್ಲಿ ಬಿದ್ದಿದ್ದ ಇಬ್ಬರು ಯುವಕರನ್ನು ನೋಡಲಾಗದೇ ಸ್ಥಳದಲ್ಲಿದ್ದವರು ದಯವಿಟ್ಟು ಕರೆದುಕೊಂಡು ಹೋಗಿ ಎಂದು ಮನವಿ ಮಾಡಿದ್ದಾರೆ. ಆದರೆ ಪೊಲೀಸರು ನಮ್ಮ ಕಾರಿಗೆ ಕಲೆಯಾಗುತ್ತದೆ ಎಂದು ಮಾನವೀಯತೆ ಇಲ್ಲದವರಂತೆ ಮಾತನಾಡಿ ನಿರಾಕರಿಸಿದ್ದಾರೆ.

    ಈ ವೇಳೆ ಅಲ್ಲಿದ್ದ ವ್ಯಕ್ತಿಯೊಬ್ಬರು ನಿಮ್ಮ ಕಾರನ್ನು ಮತ್ತೆ ತೊಳೆದುಕೊಳ್ಳಬಹುದು. ಯುವಕರ ಜೀವ ಮುಖ್ಯ ಎಂದು ಹೇಳಿದಾಗ ಕಾರನ್ನು ತೊಳೆದರೆ ನಾವು ಕುಳಿತುಕೊಳ್ಳುವುದು ಎಲ್ಲಿ ಎಂದು ಬೇಜವಾಬ್ದಾರಿಯ ಪ್ರಶ್ನೆಯನ್ನು ಕೇಳಿದ್ದಾರೆ. ಇಷ್ಟೆಲ್ಲ ಘಟನೆಗಳು ನಡೆದ ಬಳಿಕ ಸ್ಥಳೀಯ ಪೊಲೀಸ್ ಠಾಣೆಯಿಂದ ಮತ್ತೊಂದು ವಾಹನ ಬಂದಿದ್ದು, ಆ ವಾಹನದಲ್ಲಿ ಸವಾರರನ್ನು ಸಾಗಿಸಲಾಗಿತ್ತು. ಆದರೆ ಆ ಹೊತ್ತಿಗೆ ಸಾವು ಬದುಕಿನ ಹೋರಾಟ ನಡೆಸುತ್ತಿದ್ದ ಇಬ್ಬರು ಯುವಕರ ಪ್ರಾಣ ಪಕ್ಷಿ ಹಾರಿ ಹೋಗಿತ್ತು.

    ಪೊಲೀಸರು ಮತ್ತು ಸ್ಥಳೀಯರ ನಡುವಿನ ಮಾತುಕತೆಯ ದೃಶ್ಯವನ್ನು ವ್ಯಕ್ತಿಯೊಬ್ಬರು ವಿಡಿಯೋ ಮಾಡಿದ್ದು, ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಡಿಯೋ ನೋಡಿದ ಬಳಿಕ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ನಂತರ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಹರಾನ್ಪುರದ ಪೊಲೀಸ್ ಮುಖ್ಯಸ್ಥ ಪ್ರಭಾದ್ ಪ್ರತಾಪ್ ತಿಳಿಸಿದ್ದಾರೆ.

  • 97 ಕೋಟಿ ರೂ. ಹಳೇನೋಟು ಜಪ್ತಿ ಪ್ರಕರಣಕ್ಕಿದೆ ಬೆಂಗಳೂರು ನಂಟು

    97 ಕೋಟಿ ರೂ. ಹಳೇನೋಟು ಜಪ್ತಿ ಪ್ರಕರಣಕ್ಕಿದೆ ಬೆಂಗಳೂರು ನಂಟು

    ಕಾನ್ಪುರ: ಉತ್ತರಪ್ರದೇಶದ ಕಾನ್ಪುರದ ಮನೆಯೊಂದರಲ್ಲಿ ಬರೋಬ್ಬರಿ 97 ಕೋಟಿ ರೂ. ಮೌಲ್ಯದ ಹಳೇನೋಟು ಜಪ್ತಿ ಮಾಡಿ 2 ದಿನಗಳು ಕಳೆದಿವೆ. ಆದ್ರೆ ಆರೋಪಿ ಇಷ್ಟು ದೊಡ್ಡ ಮೊತ್ತದ ಹಣವನ್ನು ಹೊಸ ನೋಟುಗಳಿಗೆ ಬದಲಾಯಿಸಿಕೊಳ್ಳಲು ಹೇಗೆ ಪ್ಲ್ಯಾನ್ ಮಾಡಿದ್ದ ಎಂಬ ಬಗ್ಗೆ ತನಿಖಾ ಸಂಸ್ಥೆಗಳು ತಲೆಕೆಡಿಸಿಕೊಂಡಿವೆ.

    ಬೆಂಗಳೂರು ಮೂಲದ ಹರಿ ಕೃಷ್ಣ ಎಂಬಾತ ತಮಗೆ ನೋಟುಗಳನ್ನ ಅವುಗಳ ಮುಖಬೆಲೆಯ 40% ಗೆ ಬದಲಾಯಿಸಿಕೊಡುವುದಾಗಿ ಹೇಳಿದ್ದ ಎಂದು ಆರೋಪಿಗಳು ಹೇಳಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 16 ಜನರನ್ನ ಬಂಧಿಸಲಾಗಿದೆ. ಆರೋಪಿಗಳ ವಿರುದ್ಧ ದೃಢವಾದ ಸಾಕ್ಷಿಗಳನ್ನು ಸಂಗ್ರಹಿಸಿದ ನಂತರ ಅವರನ್ನ ವಶಕ್ಕೆ ಕೊಡಲು ಕೋರ್ಟ್‍ನಲ್ಲಿ ಕೇಳಲಿದ್ದೇವೆ. ಸದ್ಯ ಆರೋಪಿಗಳನ್ನ ಜನವರಿ 30ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಎಸ್‍ಪಿ ಅನುರಾಗ್ ಆರ್ಯ ಹೇಳಿದ್ದಾರೆ.

    ಪ್ರಕರಣ ಹಲವಾರು ಕಾರಣಗಳಿಂದ ನಿಗೂಢವಾಗಿದೆ ಎಂದು ಆರ್ಯ ಹೇಳಿದ್ದಾರೆ. 16 ಆರೋಪಿಗಳಲ್ಲಿ ಯಾರೊಬ್ಬರೂ ಕೂಡ ತಾವು ಕೊನೆಯದಾಗಿ ಹಳೇ ನೋಟುಗಳನ್ನ ತಲುಪಿಸಬೇಕಿದ್ದ ವ್ಯಕ್ತಿಯ ಹೆಸರನ್ನು ಇದುವರೆಗೂ ಬಾಯ್ಬಿಟ್ಟಿಲ್ಲ. ಮತ್ತೊಂದು ದೊಡ್ಡ ಸಂಸ್ಥೆಯ ಮೂಲಕ ಹಣವನ್ನ ಬದಲಾವಣೆ ಮಾಡಬೇಕಿತ್ತು ಎಂದು ಕೆಲವರು ಹೇಳಿದ್ದಾರೆ. ಆದ್ರೆ ಆ ಸಂಸ್ಥೆಯ ಹೆಸರನ್ನ ಹೇಳಿಲ್ಲ. ಕಾನ್ಪುರದ ಸಸ್ಯಶಾಸ್ತ್ರ ಪ್ರಾಧ್ಯಾಪಕ ಸಂತೋಷ್ ಯಾದವ್ ಎಂಬಾತ ಕಾನ್ಪುರ ಹಾಗೂ ಲಕ್ನೋದಿಂದ ಹಣವನ್ನ ಸಂಗ್ರಹಿಸುತ್ತಿದ್ದ. ಜೊತೆಗೆ ಹಣ ಬದಲಾವಣೆಕಾರನಾಗಿ ಕಾರ್ಯ ನಿರ್ವಹಿಸುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.

    ಪಶ್ಚಿಮ ಬಂಗಾಳದ ರಿಯಲ್ ಎಸ್ಟೇಟ್ ಉದ್ಯಮಿಗಳಾದ ಸಂಜೀವ್ ಅಗರ್‍ವಾಲ್ ಹಾಗೂ ಮನೀಷ್ ಅಗರ್‍ವಾಲ್ ಕಮಿಷನ್ ಏಜೆಂಟ್‍ಗಳಾಗಿ ಕೆಲಸ ಮಾಡುತ್ತಿದ್ದರು. ಹಾಗೇ ಹೈದರಾಬದ್‍ನ ಕೋಟೇಶ್ವರ್ ರಾವ್ ಬೆಂಗಳೂರಿನ ಹರಿಕೃಷ್ಣಗೆ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದ. ಆರೋಪಿಗಳ ಪ್ರಾಥಮಿಕ ಹೇಳಿಕೆಯ ಆಧಾರದ ಮೇಲೆ ನಮ್ಮ ತನಿಖೆ ಈಗ ಹರಿಕೃಷ್ಣ ಮೇಲೆ ಕೇಂದ್ರೀಕೃತವಾಗಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

    ಇವರ ಜಾಲ 5 ರಾಜ್ಯಗಳಾದ ಆಂಧ್ರಪ್ರದೇಶ, ತೆಲಂಗಾಣ, ಪಶ್ಚಿಮ ಬಂಗಾಳ, ಉತ್ತರಪ್ರದೇಶ, ದೆಹಲಿ ಹಾಗೂ ಕರ್ನಾಟಕದಲ್ಲಿ ಕಾರ್ಯ ನಿರ್ವಹಿಸುತ್ತಿತ್ತು. ಹಳೇ ನೋಟುಗಳನ್ನ ತರಲು ಏಜೆಂಟ್‍ಗಳು ಕಾನ್ಪುರ- ವಾರಣಾಸಿ-ಕೋಲ್ಕತ್ತ- ಹೈದರಾಬಾದ್ ಮಾರ್ಗ, ಕಾನ್ಪುರ- ವಾರಣಾಸಿ- ಹೈದರಾಬಾದ್ ಮಾರ್ಗ ಹಾಗೂ ಕಾನ್ಪುರ- ಪಶ್ಚಿಮ ಉತ್ತರಪ್ರದೇಶ- ದೆಹಲಿ ಮಾರ್ಗವನ್ನು ಬಳಸುತ್ತಿದ್ದರು. ಆನಂದ್ ಖತ್ರಿ ಅವರಿಗೆ 15 ಕೋಟಿ ರೂ. ಹಣವನ್ನು ಬದಲಾಯಿಸಿ ಕೊಟ್ಟಿದ್ದಾರೆ ಎಂದು ತಿಳಿದುಬಂದಿರುವುದಾಗಿ ವರದಿಯಾಗಿದೆ.