Tag: uttar pradesh

  • ಬೆಂಗಳೂರಿನಿಂದ ಉತ್ತರಪ್ರದೇಶಕ್ಕೆ ಸಿಆರ್‍ಪಿಎಫ್ ಕೇಂದ್ರ ಸ್ಥಳಾಂತರಕ್ಕೆ ಚಿಂತನೆ

    ಬೆಂಗಳೂರಿನಿಂದ ಉತ್ತರಪ್ರದೇಶಕ್ಕೆ ಸಿಆರ್‍ಪಿಎಫ್ ಕೇಂದ್ರ ಸ್ಥಳಾಂತರಕ್ಕೆ ಚಿಂತನೆ

    ಬೆಂಗಳೂರು: ನಗರದಲ್ಲಿರುವ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ(ಸಿಆರ್‍ಪಿಎಫ್) ಕೇಂದ್ರ ಕಚೇರಿಯನ್ನು ಉತ್ತರಪ್ರದೇಶಕ್ಕೆ ಶಿಫ್ಟ್ ಮಾಡುವುದಕ್ಕೆ ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

    ಇಡೀ ದೇಶಾದ್ಯಂತ ಎಲ್ಲೇ ಕಾನೂನು ಸುವ್ಯವಸ್ಥೆಗೆ ಹದಗೆಟ್ಟರೂ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ಸಿಆರ್‍ಪಿಎಫ್ ಯೋಧರು ಅತಂಕದಲ್ಲಿದ್ದಾರೆ. ಹೌದು ಕೇಂದ್ರ ಸರ್ಕಾರ ಅನುಸರಿಸುತ್ತಿರುವ ಮಲ ತಾಯಿ ದೋರಣೆಯೇ ಇದಕ್ಕೆ ಪ್ರಮುಖ ಕಾರಣವಾಗಿದೆ.

    ಸದ್ಯ ಬೆಂಗಳೂರಿನ ತರಳು ಹಾಗೂ ಯಲಹಂಕಲ್ಲಿರುವ ಎರಡು ಸಿಆರ್‍ಪಿಎಫ್ ಗ್ರೂಪ್ ಕೇಂದ್ರಗಳಲ್ಲಿ ಒಂದನ್ನು ಯಾವುದೇ ಕಾರಣ ನೀಡದೇ ಕೇಂದ್ರ ಸರ್ಕಾರ ಉತ್ತರಪ್ರದೇಶದ ಚಂದೋಲಿ ಪ್ರದೇಶಕ್ಕೆ ಶಿಫ್ಟ್ ಮಾಡುವುದಕ್ಕೆ ಚಿಂತನೆ ನಡೆಸಿದೆ.

    ಈಗಾಗಲೇ ಉತ್ತರ ಪ್ರದೇಶದಲ್ಲಿ ಐದು ಸಿಆರ್‍ಪಿಎಫ್ ಗ್ರೂಪ್ ಸೆಂಟರ್‍ಗಳಿವೆ. ಪ್ರಸ್ತುತ ಕೇಂದ್ರ ಸರ್ಕಾರ ಶಿಪ್ಟ್ ಮಾಡಲು ನಿರ್ಧಾರಿಸಿರುವ ಪ್ರದೇಶ ಕೇಂದ್ರ ಗೃಹಮಂತ್ರಿ ರಾಜನಾಥ್ ಸಿಂಗ್ ಅವರ ಸ್ವಕ್ಷೇತ್ರವಾಗಿದೆ. ಹೀಗಾಗಿ ಕೇಂದ್ರದ ನಿರ್ಧಾರಕ್ಕೆ ರಾಜ್ಯದಲ್ಲಿ ತೀವ್ರ ಆಕ್ಷೇಪ ಎದ್ದಿದೆ.

    ಕೇಂದ್ರ ಈ ನಿರ್ಣಯದಿಂದ ಉತ್ತರ ಪ್ರದೇಶಕ್ಕೆ ಐದು ಸಿಆರ್‍ಪಿಎಫ್ ಕೇಂದ್ರಗಳ ಅವಶ್ಯಕತೆಯಾದರೂ ಏಕೆ ಎನ್ನುವ ಪ್ರಶ್ನೆ ಉದ್ಭವಿಸಿದೆ. ಅಲ್ಲದೇ ಸಿಆರ್‍ಪಿಎಫ್ ಕೇಂದ್ರವನ್ನು ಶಿಫ್ಟ್ ಮಾಡುವುದರಿಂದ ಕರ್ನಾಟಕದ ಮೂಲದ ಸಿಆರ್‍ಪಿಎಫ್ ಪೊಲೀಸರು, ತಮ್ಮ ಕುಟುಂಬಗಳ ಸಮೇತ ಉತ್ತರಪ್ರದೇಶಕ್ಕೆ ಶಿಫ್ಟ್ ಆಗಬೇಕಾಗುತ್ತದೆ.

    ಕೇಂದ್ರದ ಚಿಂತನೆಯ ಕುರಿತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‍ಡಿ ಕುಮಾರ ಸ್ವಾಮಿ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿದ್ದು, ಸಿಆರ್‍ಪಿಎಫ್ ಕೇಂದ್ರವನ್ನು ಸ್ಥಾಪನೆ ಮಾಡುವುದಕ್ಕಾಗಿ ರಾಜ್ಯ ಸರ್ಕಾರವು 230 ಎಕರೆ ಭೂಮಿಯನ್ನು ಮಂಜೂರು ಮಾಡಿದೆ. ಅಲ್ಲದೇ ಈ ಕೇಂದ್ರವನ್ನು ಆಧರಿಸಿರುವ ಸುಮಾರು 15 ಸಾವಿರ ಕನ್ನಡಿಗರಿಗೆ ಇದರಿಂದ ಅನ್ಯಾಯವಾಗುತ್ತದೆ ಎಂದು ವಿವರಿಸಿದ್ದಾರೆ.

    ಇನ್ನೂಳಿದಂತೆ ಕರ್ನಾಟಕ ಎಲ್ಲಾ ರಾಜಕೀಯ ನಾಯಕರು ಈ ಕುರಿತು ಯಾವುದೇ ಪ್ರತಿಕ್ರಿಯೇಯನ್ನು ನೀಡಿಲ್ಲ. ರಾಜಕಾರಣಿಗಳ ಜಾಣಕುರುಡುನಿಂದ ದೇಶದ ವಿವಿಧ ರಾಜ್ಯಗಳಲ್ಲಿ ಕೆಲಸ ಮಾಡುವ ಯೋಧರಿಗೆ ತಮ್ಮ ಸರ್ವಿಸ್‍ನ ಕೊನೆಯ ದಿನಗಳನ್ನು ಕರ್ನಾಟದಲ್ಲಿ ಸೇವೆ ಸಲ್ಲಿಸಬೇಕು ಅನ್ನೋ ಆಸೆಗೆ ತಣ್ಣೀರು ಎರಚಿದ್ದಂತಾಗಿದೆ.

  • ಆರುಷಿ ಕೊಲೆ ಮಾಡಿದವರು ಯಾರು: ದೇಶಾದ್ಯಂತ ಕೇಳೋ ಪ್ರಶ್ನೆಗೆ ಉತ್ತರ ಸಿಗುತ್ತಾ?

    ಆರುಷಿ ಕೊಲೆ ಮಾಡಿದವರು ಯಾರು: ದೇಶಾದ್ಯಂತ ಕೇಳೋ ಪ್ರಶ್ನೆಗೆ ಉತ್ತರ ಸಿಗುತ್ತಾ?

    ನವದೆಹಲಿ: ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದ ಆರುಷಿ ಕೊಲೆ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಪೋಷಕರಾದ ರಾಜೇಶ್ ಮತ್ತು ನೂಪುರ್ ತಲ್ವಾರ್ ಅವರನ್ನು ಅಲಹಾಬಾದ್ ಹೈಕೋರ್ಟ್ ಆರೋಪ ಮುಕ್ತಗೊಳಿಸಿತ್ತು. ಆದರೆ ಈಗ ಪ್ರಕರಣದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯಾಗುತ್ತಿದ್ದು ಕೊಲೆ ಮಾಡಿದವರು ಯಾರು ಎನ್ನುವ ಪ್ರಶ್ನೆ ಎದ್ದಿದೆ.

    ಏನಿದು ಪ್ರಕರಣ? 9 ವರ್ಷಗಳ ಹಿಂದೆ ಉತ್ತರ ಪ್ರದೇಶದ ನೊಯಿಡಾದಲ್ಲಿ ಆರಿಷಿ ಕೊಲೆಯಾಗಿತ್ತು. ಈ ಕೊಲೆಗೆ ಸಂಬಂಧಿಸಿದಂತೆ ಮೃತ ಯುವತಿಯ ಪೋಷಕರಾದ ರಾಜೇಶ್ ತಲ್ವಾರ್ ಮತ್ತು ನೂಪುರ್ ತಲ್ವಾರ್ ಅವರು ಈ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಿ ಪೊಲೀಸರು ಬಂಧಿಸಿದ್ದರು. ಅಲ್ಲದೇ ವಿಚಾರಣೆ ನಡೆಸಿದ್ದ ಸಿಬಿಐ ನ್ಯಾಯಾಲಯ ಪೋಷಕರಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿತ್ತು.

    ಆದರೆ ಈ ಕುರಿತು ಮೇಲ್ಮನವಿ ಸಲ್ಲಿಸಿದ್ದ ತಲ್ವಾರ್ ದಂಪತಿಯನ್ನು ಗುರುವಾರ ಅಲಹಾಬಾದ್ ಹೈಕೋರ್ಟ್ ಆರೋಪ ಮುಕ್ತಗೊಳಿಸಿದೆ. ಅಲ್ಲದೇ ಸಿಬಿಐ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆ ರದ್ದುಗೊಳಿಸಿ, ಗಾಜಿಯಾಬಾದ್‍ನ ದಾಸ್ನಾ ಕಾರಾಗೃಹದಲ್ಲಿರುವ ತಲ್ವಾರ್ ದಂಪತಿಯನ್ನು ತಕ್ಷಣ ಬಿಡುಗಡೆ ಮಾಡುವಂತೆ ಆದೇಶಿಸಿದೆ.

    ಪ್ರಕರಣದ ವಿಚಾರಣೆಯನ್ನು ನಡೆಸಿದ ನ್ಯಾಯಾಲಯ ಆರೋಪಿಗಳನ್ನು ಕೇವಲ ಅನುಮಾನದ ಆಧಾರದಲ್ಲಿ ಅಪರಾಧಿಗಳು ಎಂದು ಘೋಷಿಸಲು ಸಾಧ್ಯವಿಲ್ಲ. ಮೃತ ಆರುಷಿ ಪೋಷಕರ ವಿರುದ್ಧ ಸಾಕಷ್ಟು ಸಾಕ್ಷ್ಯಾಧಾರಗಳು ಇಲ್ಲ, ಲಭ್ಯವಿರುವ ಸಾಕ್ಷ್ಯಗಳು ಆರೋಪವನ್ನು ಸಾಬೀತು ಮಾಡುವಲ್ಲಿ ವಿಫಲವಾಗಿವೆ ಎಂದು ಅಭಿಪ್ರಾಯ ಪಟ್ಟಿತ್ತು.

    ಪ್ರಸ್ತುತ ನ್ಯಾಯಾಲಯ ತೀರ್ಪಿನ ಕುರಿತು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ ನಡೆಯುತ್ತಿದ್ದು, ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ಬುಲ್ಲಾ, ನನಗೆ ಆರುಷಿ ಕೊಲೆ ಮಾಡಿದ್ದ ಯಾರು ಎಂದು ತಿಳಿದಿಲ್ಲ, ಆದರೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಬಂಧಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.

    ಬಾಲಿವುಡ್ ನಟ ಕಬೀರ್ ಬೇಡಿ, ಮೃತ ಅರುಷಿ ಪೋಷಕರು ಬಿಡುಗಡೆಯಾಗಿದ್ದು, ನ್ಯಾಯ ದೊರೆತಿದೆ. ದುಸ್ವಪ್ನ ದೂರವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

    ಪೋಷಕರು ತಮ್ಮ ಮಗಳನ್ನು ಕಳೆದುಕೊಂಡಿದ್ದಾರೆ. ಅಲ್ಲದೇ ಹಲವು ವರ್ಷಗಳು ಜೈಲುಶಿಕ್ಷೆಯನ್ನು ಅನುಭವಿಸಿದ್ದಾರೆ. ಆದರೆ ನಮಗೇ ಆಕೆಯನ್ನು ಕೊಲೆ ಮಾಡಿದ್ದು ಯಾರು ಎಂಬುವುದು ತಿಳಿದಿಲ್ಲ. ಎಲ್ಲಿದೆ ನ್ಯಾಯ? ಎಂದು ಕೀರ್ತನ ಕರ್ಮ ಎಂಬವರು ಟ್ವೀಟ್ ಮಾಡಿದ್ದಾರೆ.

    ಹೈಕೋರ್ಟ್‍ನ ತೀರ್ಪಿನ ಅನ್ವಯ ಶುಕ್ರವಾರ ಪೊಲೀಸರು ಅರುಷಿ ಪೋಷಕರನ್ನು ಜೈಲಿನಿಂದ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಆದರೆ ಸಿಬಿಐ ವಕೀಲರು ಅಲಹಾಬಾದ್ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

  • ಗ್ರಾಮೀಣ ಭಾಗದ ಜನರಿಗೆ ಕೇಸರಿ ಬಣ್ಣದ ಬಸ್ ಸೇವೆ ಆರಂಭಿಸಿದ ಯೋಗಿ ಸರ್ಕಾರ

    ಗ್ರಾಮೀಣ ಭಾಗದ ಜನರಿಗೆ ಕೇಸರಿ ಬಣ್ಣದ ಬಸ್ ಸೇವೆ ಆರಂಭಿಸಿದ ಯೋಗಿ ಸರ್ಕಾರ

    ಲಕ್ನೋ: ಉತ್ತರ ಪ್ರದೇಶದ ಯೋಗಿ ಸರ್ಕಾರ ಬುಧವಾರ ರಾಜ್ಯ ಗ್ರಾಮೀಣ ಸಾರಿಗೆ ವ್ಯವಸ್ಥೆಗೆ ಹೊಸ ಕೇಸರಿ ಬಣ್ಣದ ಸಾರಿಗೆ ಬಸ್‍ಗಳ ಸೇವೆಯನ್ನು ಆರಂಭಿಸಿದ್ದು, ಸಿಎಂ ಯೋಗಿ ಅದಿತ್ಯನಾಥ್ ಬುಧವಾರ 50 ಬಸ್‍ಗಳಿಗೆ ಚಾಲನೆ ನೀಡಿದರು.

    ಬಸ್ ಸೇವೆಗೆ ಸರ್ಕಾರಿ ಸಾರಿಗೆ ಇಲಾಖೆಯು `ಸಂಕಲ್ಪ್’ ಎಂದು ಹೆಸರಿಟ್ಟಿದ್ದು, ಸುಮಾರು 40 ಸಾವಿರ ಹಳ್ಳಿಗಳಿಗೆ ಮುಂದಿನ ನಾಲ್ಕು ವರ್ಷಗಳಲ್ಲಿ ಸೇವೆಯನ್ನು ನೀಡುವ ಗುರಿಯನ್ನು ಹೊಂದಿದೆ.

    ಪ್ರಸ್ತುತ ಈ ಯೋಜನೆಯು ರಾಜ್ಯದ ವಾರಣಾಸಿ, ಗೋರಖ್‍ಪುರ, ಕಾನ್‍ಪುರ, ಅಲಹಾಬಾದ್, ಬರೇಲಿ ಮತ್ತು ಮೊರಾದಾಬಾದ್ ಜಿಲ್ಲೆಗಳ ಗ್ರಾಮಗಳಿಗೆ ಸೇವೆಯನ್ನು ನೀಡಲಿದೆ. 16 ಸಾವಿರ ಗ್ರಾಮಗಳಿಗೆ ಸಾರಿಗೆ ವ್ಯವಸ್ಥೆ ಒದಗಿಸಲು 1,500 ಬಸ್‍ಗಳು ಸಿದ್ಧವಾಗಿವೆ.

    `ಗೌರವ್ ಪಥ್’ ರಸ್ತೆ ನಿರ್ಮಾಣ ಯೋಜನೆಯನ್ನು ಆರಂಭಿಸುವ ಮೂಲಕ ಯೋಗಿ ಅದಿತ್ಯನಾಥ್ ಸರ್ಕಾರವು ರಾಜ್ಯದ ಕುಗ್ರಾಮಗಳಿಗೂ ಸಾರಿಗೆ ಸಂಪರ್ಕ ವ್ಯವಸ್ಥೆಯನ್ನು ನಿರ್ಮಾಣ ಮಾಡುವ ಮೂಲಕ ಗ್ರಾಮೀಣ ಭಾಗದ ಜನರಿಗೆ ಸೇವೆಯನ್ನು ನೀರುವ ಉದ್ದೇಶವನ್ನು ಹೊಂದಿದೆ. ಹುತಾತ್ಮ ಯೋಧರ ಗ್ರಾಮಗಳಿಗೆ ಗೌರವ್ ಪಥ್/ಸಂಪರ್ಕ ರಸ್ತೆಗಳನ್ನ ನಿರ್ಮಿಸಲು ಬಿಜೆಪಿ ಸರ್ಕಾರ ಯೋಜನೆ ರೂಪಿಸಿದ್ದು, ಈ ಗ್ರಾಮಗಳಿಗೆ ಬಸ್ ವ್ಯವಸ್ಥೆ ಸಂಪರ್ಕ ಕಲ್ಪಿಸಲಿದೆ.

    ಈ ಹಿಂದೆ ಉತ್ತರ ಪ್ರದೇಶದಲ್ಲಿ ಆಡಳಿತ ವಹಿಸಿದ್ದ ಸಮಾಜವಾದಿ ಪಕ್ಷವು ಲೋಹಿಯಾ ಬಸ್ ಸೇವಾ ಯೋಜನೆಯನ್ನು ಜಾರಿಗೆ ತಂದು ಶೇ.25 ರಷ್ಟು ರಿಯಾಯಿತಿ ದರದಲ್ಲಿ ಸೇವೆಯನ್ನು ನೀಡುತ್ತಿದೆ. ಆದರೆ ಸಂಕಲ್ಪ್ ಬಸ್‍ಗಳಲ್ಲಿ ಸಾಮಾನ್ಯ ಟಿಕೆಟ್ ದರವೇ ಇದೆ. ಏಕೆಂದರೆ ಸಂಕಲ್ಪ್ ಯೋಜನೆಗೆ ಧನಸಹಾಯದ ಕೊರತೆ ಇದ್ದು, ಮುಂದಿನ ದಿನಗಳಲ್ಲಿ ಧನಸಹಾಯ ಸಿಕ್ಕರೆ ರಿಯಾಯಿತಿನ್ನು ನೀಡಲಾಗುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಸುಮಾರು 38,254 ಗ್ರಾಮಗಳನ್ನು ಈ ಯೋಜನೆ ಅಡಿಯಲ್ಲಿ ಗುರುತಿಸಲಾಗಿದೆ ಎಂದು ಉತ್ತರ ಪ್ರದೇಶ ಕಿರಿಯ ಸಾರಿಗೆ ಸಚಿವ ಸ್ವಾತಂತ್ ದೇವ್ ಸಿಂಗ್ ಮಾಹಿತಿ ನೀಡಿದ್ದಾರೆ.

    ಪ್ರಯಾಣಿಕರಿಗೆ ಅನುಕೂಲಕಾರ ಹಾಗೂ ಸುರಕ್ಷಿತ ಸೇವೆ ನೀಡುವುದು ಸರ್ಕಾರದ ಉದ್ದೇಶವಾಗಿದೆ. ಪ್ರಮುಖವಾಗಿ ಜಿಲ್ಲಾ ಕೇಂದ್ರಗಳಿಂದ ಗ್ರಾಮಗಳಿಗೆ ಹೆಚ್ಚು ಪ್ರಯಾಣ ಸೇವೆಯನ್ನು ನೀಡಲಿದ್ದು, ಖಾಸಗಿ ಸೇವಾ ಸಂಸ್ಥೆಗೆ ಮುಂದಿನ ದಿನಗಳಲ್ಲಿ ಬಸ್‍ಗಳ ನಿರ್ವಹಣೆಯನ್ನು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

    ಸಂಕಲ್ಪ್ ಯೋಜನೆಯಿಂದ ಪ್ರತಿವರ್ಷ 9,563 ಹಳ್ಳಿಗಳಿಗೆ ಸೇವೆಯನ್ನು ವಿಸ್ತರಿಸುವ ಚಿಂತನೆಯನ್ನು ನಡೆಸಿದ್ದು, ನಾಲ್ಕು ವರ್ಷಗಳಲ್ಲಿ ರಾಜ್ಯದ ಎಲ್ಲಾ ಗ್ರಾಮಗಳು ಬಸ್ ವ್ಯವಸ್ಥೆಯನ್ನು ಹೊಂದಿರಲಿವೆ. ಉತ್ತರ ಪ್ರದೇಶ ಸಾರಿಗೆ ಸಂಸ್ಥೆಯು ಇದುವರೆಗೂ ಸುಮಾರು 5 ಸಾವಿರ ಹಳ್ಳಿಗಳಿಗೆ ತನ್ನ ಸೇವೆಯನ್ನು ನೀಡುತ್ತಿದೆ ಎಂದು ಹೇಳಿದ್ದಾರೆ.

  • ಮುಸ್ಲಿಂ ಮಹಿಳೆಯರು ಐಬ್ರೊ ಮಾಡಿಸಬಾರದು: ಫತ್ವಾಗೆ ಟೀಕೆ

    ಮುಸ್ಲಿಂ ಮಹಿಳೆಯರು ಐಬ್ರೊ ಮಾಡಿಸಬಾರದು: ಫತ್ವಾಗೆ ಟೀಕೆ

    ಲಕ್ನೋ: ಮುಸ್ಲಿಂ ಮಹಿಳೆಯರು ಇನ್ನೂ ಮುಂದೇ ಐಬ್ರೊ ಮಾಡಿಸುವಂತಿಲ್ಲ ಹಾಗೂ ಕೂದಲನ್ನು ಕತ್ತರಿಸುವಂತಿಲ್ಲ ಎಂದು ಉತ್ತರ ಪ್ರದೇಶದ ದರುಲ್ ಉಲೂಮ್ ದಿಯೋಬಂದ್ ಸಂಸ್ಥೆಯೊಂದು ಫತ್ವಾ ಹೊರಡಿಸಿದೆ.

    ಆದರೆ ದರುಲ್ ಉಲೂಮ್ ದಿಯೋಬಂದ್ ಉನ್ನತ ಶಿಕ್ಷಣ ಸಂಸ್ಥೆಯ ಶಾಸನಗಳನ್ನು ಪ್ರಕಟಿಸುವ ದರುಲ್ ಇಫ್ತಾ ಈ ಫತ್ವಾವನ್ನು ಟೀಕಿಸಿದೆ.

    ಫತ್ವಾದಲ್ಲಿ ಏನಿದೆ?

    ಮುಸ್ಲಿಂ ಧರ್ಮದಲ್ಲಿ ಮಹಿಳೆಯರಿಗೆ ಕೂದಲು ಕತ್ತರಿಸುವುದು ಹಾಗೂ ಐಬ್ರೊ ಮಾಡಿಸುವುದು ನಿಷೇಧಿಸಲಾಗಿದೆ, ಅಲ್ಲದೇ ಇನ್ನೂ ಇಂತಹ ಹತ್ತು ನಿಷೇಧಗಳು ಮಹಿಳೆಯರ ವಿಧಿಸಲಾಗಿದೆ. ಮಹಿಳೆಯರಿಗೆ ಬ್ಯೂಟಿ ಪಾರ್ಲರ್‍ಗೆ ತೆರಳಲು ಇಸ್ಲಾಂ ಧರ್ಮದಲ್ಲಿ ಅವಕಾಶವಿಲ್ಲ, ಅಷ್ಟೇ ಅಲ್ಲ ಪುರುಷರಿಗೂ ಗಡ್ಡವನ್ನು ಶೇವ್ ಮಾಡಿಸಲು ಅನುಮತಿ ಇಲ್ಲ. ದೇಶಾದ್ಯಂತ ಇತ್ತೀಚೆಗೆ ಮುಸ್ಲಿಂ ಮಹಿಳೆಯರು ಬ್ಯೂಟಿ ಪಾರ್ಲರ್‍ಗೆ ತೆರಳುವುದು ಅಭ್ಯಾಸವಾಗಿದೆ. ಇದು ಸಾಂಪ್ರದಾಯಿಕ ಮುಸ್ಲಿಂರ ಲಕ್ಷಣವಲ್ಲ. ಇದನ್ನು ಕೂಡಲೇ ನಿಲ್ಲಸಬೇಕು ಎಂದು ತಿಳಿಸಲಾಗಿದೆ.

    ಮುಸ್ಲಿಂ ಮಹಿಳೆಯರಿಂದಲೂ ಫತ್ವಾ ವಿರುದ್ಧ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಇವರಿಗೆ ಫತ್ವಾ ಹೊರಡಿಸಲು ಯಾವುದೇ ಹಕ್ಕಿಲ್ಲ, ಪ್ರಪಂಚ ಬದಲಾಗುತ್ತಿದೆ. ಮುಸ್ಲಿಂ ರಾಷ್ಟ್ರಗಳಾದ ಗಲ್ಫ್ ದೇಶಗಳಲ್ಲಿ ಮಹಿಳೆಯರಿಗೆ ವಾಹನ ಚಲಾಯಿಸಲು ಅನುಮತಿಯನ್ನು ನೀಡಲಾಗಿದೆ. ಆದರೇ ನಮ್ಮ ದೇಶದಲ್ಲಿ ಇನ್ನೂ ಮಹಿಳೆಯ ಐಬ್ರೊ ಬಗ್ಗೆ ಫತ್ವಾ ಹೊರಡಿಸಲಾಗುತ್ತಿದೆ. ಇದು ನಮ್ಮ ವಿದ್ವಾಂಸರು ಹಾಗೂ ಮೌಲ್ವಿಗಳಿಗೆ ಅವಮಾನ ಎಂದು ತ್ರಿವಳಿ ತಲಾಕ್ ಸಂತ್ರಸ್ತೆ ಸೋಫಿಯಾ ಅಹ್ಮದ್ ಕಿಡಿಕಾರಿದ್ದಾರೆ.

    ಈ ಫತ್ವಾ ಇಸ್ಲಾಂ ಪುರುಷರಿಗೂ ಅನ್ವಯವಾಗುತ್ತದೆ, ಇಂದು ಎಷ್ಟು ಜನ ಮುಸ್ಲಿಂ ಪುರುಷರು ಈ ನಿಯಮವನ್ನು ಪಾಲಿಸುತ್ತಿದ್ದಾರೆ ಇಂತಹ ನಕಲಿ ಮೌಲ್ವಿಗಳನ್ನು ಬಿಟ್ಟು, ನಾವು ಎಲ್ಲವನ್ನು ಬುರ್ಕಾದಾಡಿಯಲ್ಲಿ ಮುಚ್ಚಿಡಲು ಯತ್ನಿಸುತ್ತಿದ್ದೇವೆ. ಇಂತಹ ವ್ಯಕ್ತಿಗಳು `ಲಿಪ್‍ಸ್ಪಿಕ್ ಅಂಡರ್ ಮೈ ಬುರ್ಕಾ’ ಸಿನಿಮಾವನ್ನು ಒಮ್ಮೆ ವಿಕ್ಷೀಸಬೇಕು ಎಂದು ಸಾಫಿಯಾ ಬೇಗಂ ಎಂಬವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • 12 ಮದುವೆ, 13ನೇ ಹೆಂಡ್ತಿಯನ್ನ ಕೊಲೆ ಮಾಡ್ದ- 14ನೇ ಮದುವೆಗೂ ರೆಡಿ!

    12 ಮದುವೆ, 13ನೇ ಹೆಂಡ್ತಿಯನ್ನ ಕೊಲೆ ಮಾಡ್ದ- 14ನೇ ಮದುವೆಗೂ ರೆಡಿ!

    ಲಕ್ನೋ: 12 ಮಹಿಳೆಯರಿಗೆ ವಿಚ್ಛೇದನ ನೀಡಿದ್ದ ವ್ಯಕ್ತಿಯೊಬ್ಬ 14ನೇ ಮದುವೆ ಮಾಡಿಕೊಳ್ಳಲು ಮುಂದಾಗಿ, ತನ್ನ 13ನೇ ಹೆಂಡತಿಯನ್ನು ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ರಾಯ್‍ಬರೇಲಿಯಲ್ಲಿ ನಡೆದಿದೆ.

    ಪತ್ನಿಯನ್ನು ಕೊಲೆ ಮಾಡಿರುವ ಆರೋಪಿ ರಾಯ್‍ಬರೇಲಿಯ ಅಮೇಥಿ ಪ್ರದೇಶದ ನಿವಾಸಿ ಮೊಹಮ್ಮದ್ ಮುಸ್ತಕೀಮ್ ಎಂದು ತಿಳಿದು ಬಂದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಆರೋಪಿ ಮುಸ್ತಕೀಮ್ ನಾಲ್ಕು ವರ್ಷಗಳ ಹಿಂದೆ 13ನೇ ಮದುವೆಯಾಗಿದ್ದು, ದಂಪತಿಗೆ ಮೂರು ತಿಂಗಳ ಮಗು ಸಹ ಇದೆ. ಸ್ಥಳೀಯರು ನೀಡಿರುವ ಮಾಹಿತಿಯಂತೆ ಆರೋಪಿ ಪ್ರತಿದಿನ ತನ್ನ ಪತ್ನಿಯೊಂದಿಗೆ ಜಗಳವಾಡ್ತಿದ್ದ. ನಾಲ್ಕು ದಿನಗಳ ಹಿಂದೆ ಮೃತ ಮಹಿಳೆ ತಂದೆಯನ್ನು ಭೇಟಿ ಮಾಡಿ ಮಗಳಿಗೆ ವಿಚ್ಛೇದನ ನೀಡುವುದಾಗಿ ತಿಳಿಸಿದ್ದ.

    ಮೃತ ಮಹಿಳೆಯು ಸೋಮವಾರ ಮನೆಯಿಂದ ಕಾಣೆಯಾಗಿದ್ದು, ಮಂಗಳವಾರ ರಾತ್ರಿ ಆಕೆಯ ದೇಹ ಗ್ರಾಮದ ಗದ್ದೆಯೊಂದರಲ್ಲಿ ಪತ್ತೆಯಾಗಿತ್ತು. ಅಲ್ಲದೆ ಆಕೆಯ ದೇಹದ ಮೇಲೆ ಹಲವು ಗಾಯದ ಗುರುತುಗಳಾಗಿದ್ದು, ಕತ್ತು ಹಿಸುಕಿ ಕೊಲೆ ಮಡುವ ಮುನ್ನ ಆಕೆಯ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿಯನ್ನು ನೀಡಿದ್ದಾರೆ. ಅದೇ ರಾತ್ರಿ ಮುಸ್ತಕೀಮ್‍ನನ್ನು ಪೊಲೀಸರು ಬಂಧಿಸಿದ್ದಾರೆ.

    ಮುಸ್ತಕೀಮ್ ತನ್ನ ಮಗಳನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ ಎಂದು ಅಶ್ವಾಸನೆ ನೀಡಿದ್ದರಿಂದ ಮಗಳನ್ನು ಕೊಟ್ಟು ಮದುವೆ ಮಾಡಿಕೊಟ್ಟೆ ಎಂದು ಮೃತ ಮಹಿಳೆಯ ತಂದೆ ಹೇಳಿದ್ದಾರೆ. ಮೂಲಗಳ ಪ್ರಕಾರ ಆರೋಪಿ ಮುಸ್ತಕೀಮ್ 14 ನೇ ಮದುವೆ ಮಾಡಿಕೊಳ್ಳಲು ಯೋಚಿಸಿದ್ದ. ಅದಕ್ಕಾಗಿ ಹುಡುಗಿಯನ್ನೂ ಆರಿಸಿದ್ದ ಎಂದು ವರದಿಯಾಗಿದೆ.

  • ಗಂಡನ ಎದುರೇ ಮಹಿಳೆಯ ಮೇಲೆ ಗ್ಯಾಂಗ್‍ರೇಪ್

    ಗಂಡನ ಎದುರೇ ಮಹಿಳೆಯ ಮೇಲೆ ಗ್ಯಾಂಗ್‍ರೇಪ್

    ಲಕ್ನೋ: ಗಂಡನ ಎದುರೆ ಮಹಿಳೆಗೆ ಗನ್ ತೋರಿಸಿ ಬೆದರಿಸಿ ನಾಲ್ವರು ಸಾಮೂಹಿಕ ಅತ್ಯಾಚಾರವೆಸಗಿರುವ ಆರೋಪ ಕೇಳಿಬಂದಿದೆ. ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ಈ ಘಟನೆ ನಡೆದಿದೆ.

    ಗನ್ ತೋರಿಸಿ ಬೆದರಿಸಿ ನಾಲ್ವರು ದುಷ್ಕರ್ಮಿಗಳು ಅತ್ಯಾಚಾರವನ್ನು ಮಾಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಅಲ್ಲದೇ ಆಕೆಯ ಮಗನನ್ನು ಕೊಲೆ ಮಾಡುವುದಾಗಿ ಬೆದರಿಸಿದ್ದು, ಗಂಡನ ಮೇಲೂ ಹಲ್ಲೆ ಮಾಡಿದ್ದಾಗಿ ಮಹಿಳೆ ಹೇಳಿದ್ದಾರೆ.

    ಈ ಕುರಿತು ಸಂತ್ರಸ್ತೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ನಾಲ್ವರು ದುಷ್ಕರ್ಮಿಗಳು ತನ್ನನ್ನು ಕಬ್ಬಿನ ಗದ್ದೆಗೆ ಎಳೆದೊಯ್ದು ಅತ್ಯಾಚಾರ ಎಸಗಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

    ಘಟನೆಯ ಕುರಿತು ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದು, ಸಂತ್ರಸ್ತೆ ಮತ್ತು ಆಕೆಯ ಪತಿಯನ್ನು ವೈದ್ಯಕೀಯ ಪರೀಕ್ಷೆ ಒಳಪಡಿಸಲಾಗಿದೆ ಎಂದು ತಿಳಿಸಿದ್ದರೆ. ಮುಂದಿನ ತನಿಖೆಯನ್ನು ನಡೆಸುವುದಾಗಿ ಪೊಲೀಸ್ ಅಧೀಕ್ಷಕರು ಮಾಹಿತಿ ನೀಡಿದ್ದಾರೆ.

  • ಗ್ಯಾಂಗ್‍ರೇಪ್ ಎಸಗಿ ಗುಪ್ತಾಂಗಕ್ಕೆ ಆಸಿಡ್ ಹಾಕಿದ್ರು!

    ಗ್ಯಾಂಗ್‍ರೇಪ್ ಎಸಗಿ ಗುಪ್ತಾಂಗಕ್ಕೆ ಆಸಿಡ್ ಹಾಕಿದ್ರು!

    ಅಲಹಾಬಾದ್: ಮಹಿಳೆಯ ಮೇಲೆ ಇಬ್ಬರೂ ಸೇರಿ ಅತ್ಯಾಚಾರ ಎಸಗಿ ಬಳಿಕ ಆಕೆಯ ಗುಪ್ತಾಂಗಕ್ಕೆ ಆಸಿಡ್ ಎರಚಿರುವ ಅಮಾನೀಯ ಘಟನೆ ಉತ್ತರ ಪ್ರದೇಶದ ಅಲಹಾಬಾದ್ ಜಿಲ್ಲೆಯ ಘೋರ್‍ಪುರ್ ಪ್ರದೇಶದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.  ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

    ಸಂತ್ರಸ್ತೆ ಘೋರ್‍ಪುರ್‍ನ ಶಾಲೆಯೊಂದರಲ್ಲಿ ಕ್ಲೀನರ್ ಕೆಲಸವನ್ನು ಮಾಡುತ್ತಿದ್ದರು. ಆರೋಪಿಯಲ್ಲಿ ಒಬ್ಬನಾದ ಪಂಚರಾಜ್ ಎಂಬುವನೂ ಕೂಡ ಅದೇ ಶಾಲೆಯಲ್ಲಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

    ನಾನು ಅವಳು ಕೆಲ ವರ್ಷಗಳಿಂದ ಸಂಬಂಧ ಇಟ್ಟುಕೊಂಡಿದ್ದೆವು. ನನಗೆ ಬೇರೆಯವರ ಜೊತೆ ಮದುವೆ ನಿಶ್ಚಯವಾಗಿತ್ತು. ಆದ್ದರಿಂದ ನಾನು ಆಕೆಯಿಂದ ದೂರವಿದ್ದೆ. ಆದರೆ ಆಕೆ ಯಾವಗಲೂ ನನ್ನ ಜೊತೆಯಲ್ಲಿಯೇ ಇರುವಂತೆ ಒತ್ತಾಯಿಸಿ ಪೀಡಿಸುತ್ತಿದ್ದಳು. ಇದರಿಂದ ಬೇಸತ್ತು ಕೋಪದಿಂದ ಈ ಕೃತ್ಯ ಎಸಗಿದೆ ಎಂದು ಆರೋಪಿ ಪಂಚ್‍ರಾಜ್ ವಿಚಾರಣೆಯ ವೇಳೆ ತಿಳಿಸಿದ್ದಾನೆ.

    ಶಾಲೆಗೆ ದಸರಾ ರಜೆ ಇರುವುದರಿಂದ ಯಾರು ಬರುತ್ತಿರಲಿಲ್ಲ. ಈ ಸಂದರ್ಭವನ್ನು ಉಪಯೋಗಿಸಿಕೊಂಡು ಪಂಚರಾಜ್ ಸಂತ್ರಸ್ತೆಯನ್ನು ನಿನ್ನ ಬಳಿ ಮಾತಾಡಬೇಕು ಎಂದು ಹೇಳಿ ಶಾಲೆಗೆ ಕರೆಸಿಕೊಂಡಿದ್ದಾನೆ. ನಂತರ ಏಕಾಂತವಾಗಿ ಇರಬೇಕೆಂದು ಯಾರು ಇಲ್ಲದ ಕಡೆ ಕರೆದುಕೊಂಡು ಹೋಗಿ ಸಹಚರನ ಜೊತೆ ಸೇರಿ ಅತ್ಯಾಚಾರ ಎಸಗಿದ್ದಾನೆ. ಬಳಿಕ ಆಕೆಯ ಖಾಸಗಿ ಭಾಗಗಳಿಗೆ ಆಸಿಡ್ ಎರಚಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದರು.

    ಸದ್ಯಕ್ಕೆ ಸಂತ್ರೆಸ್ತೆಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆತಯುತ್ತಿದ್ದಾರೆ. ಆದರೆ ಆಕೆಯ ಆರೋಗ್ಯದ ಬಗ್ಗೆ ಯಾವುದೇ ಮಾಹಿತಿ ದೊರಕಿಲ್ಲ. ಕಳೆದ ಮೂರು ವರ್ಷಗಳ ಹಿಂದೆ ಆಕೆಯ ಪತಿ ಸಾವನ್ನಪ್ಪಿದ್ದಾರೆ ಹಾಗೂ ಆಕೆಯ ಮಕ್ಕಳ ಬಗ್ಗೆನೂ ಮಾಹಿತಿ ಸಿಕ್ಕಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

  • ಕಾಂಗ್ರೆಸ್‍ಗೆ ಅಧಿಕಾರ ಕೊಟ್ಟರೆ 6 ತಿಂಗಳಲ್ಲಿ ದೇಶದ ಸಮಸ್ಯೆಗೆ ಪರಿಹಾರ: ರಾಹುಲ್ ಗಾಂಧಿ

    ಕಾಂಗ್ರೆಸ್‍ಗೆ ಅಧಿಕಾರ ಕೊಟ್ಟರೆ 6 ತಿಂಗಳಲ್ಲಿ ದೇಶದ ಸಮಸ್ಯೆಗೆ ಪರಿಹಾರ: ರಾಹುಲ್ ಗಾಂಧಿ

    ಅಮೇಥಿ: ದೇಶದಲ್ಲಿ ನಿರುದ್ಯೋಗ ಹೆಚ್ಚಾಗಿದ್ದು ಉದ್ಯೋಗ ಸೃಷ್ಟಿ ಮಾಡುವುದು ಬಿಟ್ಟು ಸಭೆಗಳಲ್ಲಿ ಕೇವಲ ಅಭಿವೃದ್ಧಿ ಮಾತುಗಳನ್ನಾಡಿ ತಾಳ್ಮೆ ಪರೀಕ್ಷೆ ಮಾಡಬೇಡಿ. ಸಮಯ ವ್ಯರ್ಥಮಾಡದೇ ನಿರುದ್ಯೋಗ ನಿರ್ಮೂಲನೆ ಮಾಡಿ ಉದ್ಯೋಗ ಕಲ್ಪಿಸಿ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ತಮ್ಮ ಸ್ವಕ್ಷೇತ್ರ ಉತ್ತರ ಪ್ರದೇಶದ ಅಮೇಥಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಇತ್ತೀಚೆಗೆ ರಾಷ್ಟ್ರದ ಮೇಲೆ ಬೀರುತ್ತಿರುವ ದುಷ್ಪರಿಣಾಮಗಳನ್ನು ಪ್ರಧಾನಿ ಮೋದಿ ಕೈಯಲ್ಲಿ ನಿಭಾಯಿಸುವುದಕ್ಕೆ ಆಗುತ್ತಿಲ್ಲ. ಹೀಗಾಗಿ ಒಂದು ವೇಳೆ ಕುರ್ಚಿಯಿಂದ ಕೆಳಗಿಳಿದು ನಮಗೆ ಅಧಿಕಾರವನ್ನು ಹಸ್ತಾಂತರ ಮಾಡಿದರೆ ಕಾಂಗ್ರೆಸ್ ಅಧಿಕಾರ ವಹಿಸಿಕೊಂಡ ಕೇವಲ ಆರು ತಿಂಗಳಲ್ಲಿ ಎಲ್ಲಾ ಸಮಸ್ಯೆಗಳನ್ನು ಸರಿಪಡಿಸುತ್ತದೆ. ಅಲ್ಲದೇ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಭರವಸೆ ನೀಡಿದರು.

    ಸುಮಾರು 16 ನಿಮಿಷಗಳ ಕಾಲ ಭಾಷಣ ಮಾಡಿದ ರಾಹುಲ್, ದೇಶದಲ್ಲಿ ಉದ್ಯೋಗ ಪ್ರಮಾಣ ಕ್ಷೀಣಿಸುತ್ತಿದೆ. ದೇಶದಲ್ಲಿ ಪ್ರತಿ ದಿನ 30 ಸಾವಿರ ಭಾರತೀಯರು ಉದ್ಯೋಗ ಹುಡುಕುತ್ತಿದ್ದಾರೆ. ಅದರಲ್ಲಿ ಕೇವಲ 400 ಜನರಿಗೆ ಮಾತ್ರ ಕೆಲಸ ಸಿಗುತ್ತಿದೆ. ಅದೇ ನೆರೆಯ ಚೀನಾ ಸರ್ಕಾರ ದಿನಕ್ಕೆ 50 ಸಾವಿರ ಜನರಿಗೆ ಉದ್ಯೋಗ ನೀಡುತ್ತಿದೆ. ಉದ್ಯೋಗ ಸೃಷ್ಟಿಯಲ್ಲಿ ಎನ್‍ಡಿಎ ಸರ್ಕಾರ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದರು.

    ಚುನಾವಣೆಯಲ್ಲಿ ಗೆಲ್ಲಲು ಮೋದಿ ಏನೆಲ್ಲಾ ಭರವಸೆಗಳನ್ನು ನೀಡಿದರು. ಆದರೆ ಇದುವರೆಗೂ ಒಂದು ಯೋಜನೆಯೂ ಸರಿಯಾದ ರೀತಿಯಲ್ಲಿ ಅನುಷ್ಟಾನವಾಗಿಲ್ಲ. ಮೇಕ್ ಇನ್ ಇಂಡಿಯಾ, ಸ್ಟಾರ್ಟ್‍ಅಪ್ ನಂತಹ ಅಭಿವೃದ್ಧಿ ಕಾರ್ಯಗಳು ಜಾರಿಯಾದರೂ ಸಹ ನಿರುದ್ಯೋಗ ಮಾತ್ರ ನಿವಾರಣೆಯಾಗುತ್ತಿಲ್ಲ. ದೇಶದ ಶಕ್ತಿಯಾದ ಯುವಜನತೆಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ಬದಲು ನೆಲಕ್ಕಚ್ಚುವಂತೆ ಬಿಜೆಪಿ ಮಾಡುತ್ತಿದೆ ಎಂದು ಕಿಡಿಕಾರಿದರು.

    ಸ್ವಚ್ಛ ಭಾರತ ಅಭಿಯಾನದ ಬಗ್ಗೆ ಮಾತನಾಡಿ, ಪ್ರಧಾನಿ ಮೋದಿ ಸ್ವಚ್ಛ ಭಾರತ ಅಭಿಯಾನದ ಭ್ರಮೆಯಿಂದ ಹೊರ ಬರಬೇಕು. ಪ್ರತಿಯೊಬ್ಬರೂ ಕೈಯಲ್ಲಿ ಪೊರಕೆ ಹಿಡಿದರೆ ಸ್ವಚ್ಛ ಆದಾಗೆ ಆಗುತ್ತದೆ. ಅಲ್ಲದೇ ಪ್ರಧಾನಿ ಮೋದಿಯ ವಿಚಿತ್ರ ಯೋಜನೆಗಳ ಅನುಷ್ಟಾನ ಹಾಗೂ ಕೆಲಸದ ಬಗ್ಗೆ ಮಾತನಾಡಿಕೊಳ್ಳುತ್ತಿದ್ದಾರೆ. ಈಗಲಾದರು ಜನಪರ ಕಾರ್ಯಗಳನ್ನು ಕೈಗೊಳ್ಳಲಿ ಎಂದು ಸಲಹೆ ನೀಡಿದರು.

     

    ದೇಶದ ಜನರ ಅಭಿಪ್ರಾಯ ಹಾಗೂ ಅನಿಸಿಕೆಗಳನ್ನು ಪಡೆಯದೇ ಯೋಜನೆಗಳ ಅನುಷ್ಟಾನವಾಗುತ್ತಿದೆ. ಈ ಹಿಂದೆ ಕೇಂದ್ರದಲ್ಲಿದ್ದ ಕಾಂಗ್ರೆಸ್ ಆಹಾರ ಭದ್ರತೆ ಹಾಗೂ ಭೂಸ್ವಾಧೀನ ಮಸೂದೆಗಳಿಂದ ದೇಶಕ್ಕೆ ಒಳ್ಳೆದಾಗುತ್ತಿದೆ ಎಂದರು.

  • ಆತ್ಮರಕ್ಷಣೆಗಾಗಿ ರೇಪಿಸ್ಟ್ ಕಾಮಿ ಅಪ್ಪನನ್ನು ಕೊಂದ್ಳು ಅಪ್ರಾಪ್ತ ಮಗಳು!

    ಆತ್ಮರಕ್ಷಣೆಗಾಗಿ ರೇಪಿಸ್ಟ್ ಕಾಮಿ ಅಪ್ಪನನ್ನು ಕೊಂದ್ಳು ಅಪ್ರಾಪ್ತ ಮಗಳು!

    ಲಕ್ನೋ: ನಿರಂತರವಾಗಿ ಅತ್ಯಾಚಾರ ಎಸಗುತ್ತಿದ್ದ ಹಿನ್ನೆಲೆಯಲ್ಲಿ ರೋಸಿ ಹೋಗಿದ್ದ ಮಗಳು ತನ್ನ ತಂದೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಸಾಂಭಾಲ್ ಜಿಲ್ಲೆಯಲ್ಲಿ ನಡೆದಿದೆ.

    ಕಳೆದ ಎರಡು ವರ್ಷಗಳಿಂದ ಪಾಪಿ ತಂದೆ ನಿರಂತರವಾಗಿ ಮಗಳ ಮೇಲೆ ಅತ್ಯಾಚಾರ ಮಾಡುತ್ತಾ ಬಂದಿದ್ದ. ಸೋಮವಾರ ರಾತಿಯ್ರೂ ತಂದೆ ಮನೆಗೆ ಬಂದು ಅತ್ಯಾಚಾರ ಎಸಗಿದ್ದಾನೆ. ಇದರಿಂದ ರೊಚ್ಚಿಗೆದ್ದ 16 ವರ್ಷದ ಮಗಳು ತನ್ನ ಆತ್ಮ ರಕ್ಷಣೆಗಾಗಿ ಕೊಲೆ ಮಾಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

    ಬಾಲಕಿ ಮಂಗಳವಾರ ತನ್ನ 12 ವರ್ಷದ ತಂಗಿ ಹಾಗೂ ನೆರೆಹೊರೆಯವರನ್ನು ಕರೆದುಕೊಂಡು ಪೊಲೀಸ್ ಠಾಣೆಗೆ ಬಂದು ತಾನು ಮಾಡಿದ ಕೊಲೆಯನ್ನು ಒಪ್ಪಿಕೊಂಡಿದ್ದಾಳೆ. ಆದರೆ ಬಾಲಕಿ ಅನಕ್ಷರಸ್ಥಳಾಗಿದ್ದರಿಂದ ತನ್ನ ರಕ್ಷಣೆಗಾಗಿ ಈ ರೀತಿ ಮಾಡಿದ್ದಾಳೆ. ಆದ್ದರಿಂದ ಆಕೆಯ ವಿರುದ್ಧ ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಆಕೆ ತಂದೆ ವಿರುದ್ಧ ದೂರು ನೀಡಿದ್ದ ಹಿನ್ನೆಲೆಯಲ್ಲಿ ಪೋಸ್ಕೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದೇವೆ ಎಂದು ತನಿಖಾಧಿಕಾರಿ ಶಮ್ಶಾದ್ ಅಲಿ ಅವರು ಹೇಳಿದರು.

    ಬಾಲಕಿ ದೂರಿನಲ್ಲಿ, ನನ್ನ ತಂದೆ 2 ವರ್ಷದಿಂದ ನನ್ನ ಮೇಲೆ ಅತ್ಯಾಚಾರ ಮಾಡುತ್ತಿದ್ದ. ನನ್ನ ತಾಯಿಯನ್ನೂ ಕೂಡ 9 ವರ್ಷಗಳ ಹಿಂದೆ ಕೊಲೆ ಮಾಡಿದ್ದನು. ಮನೆಯಲ್ಲಿ ನಾನು, ಅಜ್ಜಿ, ತಂದೆ ಹಾಗೂ ನನ್ನ ತಂಗಿ ವಾಸವಾಗಿದ್ದೆವು. ದಿನ ಕುಡಿದುಕೊಂಡು ಬಂದು ಅತ್ಯಾಚಾರ ಮಾಡುತ್ತಿದ್ದ. ಅಜ್ಜಿಗೆ ಕಣ್ಣು ಕಾಣುವುದಿಲ್ಲ ಆದ್ದರಿಂದ ಅವರಿಂದ ಯಾವುದೇ ಸಹಾಯ ಸಿಗುತ್ತಿರಲಿಲ್ಲ. ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಗೆ ಒಡ್ಡಿದ್ದ. ಅದೇ ರೀತಿ ಸೋಮವಾರ ರಾತ್ರಿ ಕುಡಿದು ಅತ್ಯಾಚಾರ ಎಸಗಿದ್ದಾನೆ. ಕೊನೆಗೆ ನನ್ನ ರಕ್ಷಣೆಗಾಗಿ ಕೋಲಿನಿಂದ ಅವನ ತಲೆಗೆ ಜೋರಾಗಿ ಹೊಡೆದೆ, ತಲೆಗೆ ಏಟು ಬಿದ್ದಿದ್ದರಿಂದ ಸ್ಥಳದಲ್ಲಿಯೇ ತಂದೆ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾಳೆ.

    ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಪೊಲೀಸರು ಕಳುಹಿಸಿದ್ದಾರೆ. ಅಷ್ಟೇ ಅಲ್ಲದೇ ಡಿಎನ್‍ಎ ವರದಿಯನ್ನು ಕೇಳಿದ್ದಾರೆ. ಹಾಗೆಯೇ ಹಲವಾರು ಗ್ರಾಮಸ್ಥರ ಹೇಳಿಕೆಯನ್ನು ಪಡೆದುಕೊಂಡಿದ್ದೇವೆ. ಹೇಳಿಕೆಯಂತೆ ಆಕೆಯ ತಂದೆಯ ನಡವಳಿಕೆ ಸರಿಯಿರಲಿಲ್ಲ ಎಂದು ತಿಳಿದು ಬಂದಿದೆ. ಈ ಪ್ರಕರಣವನ್ನು ಐಪಿಸಿ ಸೆಕ್ಷನ್ 304 (ಉದ್ದೇಶಪೂರ್ವಕ ಅಲ್ಲದ ಕೊಲೆ) ರ ಅಡಿಯಲ್ಲಿ ದಾಖಲಿಸಿಕೊಂಡಿದ್ದೇವೆ ಎಂದು ಹೇಳಿದ್ದಾರೆ.

    ಕೆಲವು ಸಾಕ್ಷ್ಯಾಧಾರಗಳ ಆಧಾರದ ಮೇಲೆ ಈ ಪ್ರಕರಣವನ್ನು ಐಪಿಸಿ ಸೆಕ್ಷನ್ 100(ಆತ್ಮರಕಕ್ಷಣೆ) ಅಡಿಯಲ್ಲಿ ದಾಖಲಿಸಿದ್ದು, ತನಿಖೆಯನ್ನು ಪ್ರಾರಂಭಿಸಿದ್ದೇವೆ. ಈ ಪ್ರಕರಣದಲ್ಲಿ ಹೆಚ್ಚುವರಿಯಾಗಿ ಕಾನೂನಿನ ಅಭಿಪ್ರಾಯವನ್ನು ಕೇಳಬೇಕಿದೆ ಎಂದು ಪೊಲೀಸ್ ಅಧಿಕಾರಿ ಪಂಕಜ್ ಕುಮಾರ್ ಪಾಂಡೆ ತಿಳಿಸಿದ್ದಾರೆ.

  • ಉತ್ತರಪ್ರದೇಶ ಪ್ರವಾಸೋದ್ಯಮಕ್ಕೆ ಶಿವಮೊಗ್ಗದ ಸಕ್ರೆಬೈಲಿನಿಂದ ಹೋಗುತ್ತೆ 5 ಆನೆಗಳು

    ಉತ್ತರಪ್ರದೇಶ ಪ್ರವಾಸೋದ್ಯಮಕ್ಕೆ ಶಿವಮೊಗ್ಗದ ಸಕ್ರೆಬೈಲಿನಿಂದ ಹೋಗುತ್ತೆ 5 ಆನೆಗಳು

    ಶಿವಮೊಗ್ಗ: ಸಕ್ರೆಬೈಲು ಆನೆ ಬಿಡಾರದಲ್ಲಿ ಈಗ ಶೋಕಛಾಯೆ ವ್ಯಕ್ತವಾಗಿದೆ. ಕಳೆದ ತಿಂಗಳು ಕಾಡಾನೆ ದಾಳಿಯಲ್ಲಿ ಬಿಡಾರದ ಹಿರಿಯಾನೆ ಟಸ್ಕರ್ ಮೃತಪಟ್ಟಿತ್ತು. ಈ ದು:ಖ ಮರೆಯಾಗುವ ಮುನ್ನವೇ ಇಲ್ಲಿಂದ ವಿವಿಧ ವಯೋಮಾನದ ಐದು ಆನೆಗಳನ್ನು ಉತ್ತರ ಪ್ರದೇಶ ರಾಜ್ಯಕ್ಕೆ ಕಳುಹಿಸಲು ಸಿದ್ಧತೆ ನಡೆದಿದೆ.

    ಶಿವಮೊಗ್ಗ ಸಮೀಪ ಇರುವ ಸಕ್ರೆಬೈಲು ಆನೆ ಬಿಡಾರದಲ್ಲಿನ ಆನೆಗಳನ್ನು ಉತ್ತರ ಪ್ರದೇಶದ ಪ್ರವಾಸೋದ್ಯಮ ಅಭಿವೃದ್ಧಿಗೆ ಕಳಿಸಲಾಗುತ್ತಿದೆ. ಪ್ರವಾಸಿಗರ ಆಕರ್ಷಣೆಯಾಗಿರುವುದು ಬಿಡಾರದಲ್ಲಿನ 22 ಆನೆಗಳಿದ್ದು, ಇವುಗಳಲ್ಲಿ ಈಗ ಉತ್ತರ ಪ್ರದೇಶಕ್ಕೆ ಕೊಡಲು ಐದು ಆನೆಗಳನ್ನು ಗುರುತಿಸಲಾಗಿದೆ. ರಾಜ್ಯದಿಂದ ಐದು ಆನೆಗಳನ್ನು ಒಟ್ಟಿಗೆ ಬೇರೆ ರಾಜ್ಯಕ್ಕೆ ಕೊಡುಗೆಯಾಗಿ ಕೊಡುತ್ತಿರುವುದು ಇದೇ ಮೊದಲಾಗಿದೆ.

    ಒಂದೂವರೆ ವರ್ಷದ ಪಾರ್ವತಿ, ನಾಲ್ಕು ವರ್ಷದ ಕಿರಣ, ಐದು ವರ್ಷದ ಭಾಸ್ಕರ, ಹದಿಮೂರು ವರ್ಷದ ಅಮೃತಾ, ಮೂವತ್ತು ವರ್ಷದ ರಾಘವೇಂದ್ರ ಈಗ ಉತ್ತರ ಪ್ರದೇಶಕ್ಕೆ ಹೊರಡಲಿರುವ ಆನೆಗಳು. ಈ ಆನೆಗಳನ್ನು ಪ್ರದೇಶದ ದುದ್ವಾ ರಾಷ್ಟ್ರೀಯ ಅಭಯಾರಣ್ಯದಲ್ಲಿ ಸಫಾರಿಗಾಗಿ ಬಳಸಲಾಗುವುದು ಎಂದು ಅರಣ್ಯ ಇಲಾಖೆ ತಿಳಿಸಿದೆ.

    ಈ ಐದು ಆನೆಗಳಿಗೆ ಹೊಂದಿಕೊಳ್ಳಲು ಉತ್ತರ ಪ್ರದೇಶದ ಮಾವುತರು ಇಲ್ಲಿಗೆ ಬಂದು ತರಬೇತಿ ಪಡೆಯಲಿದ್ದಾರೆ. ನಂತರ ನವೆಂಬರ್ ಮೊದಲ ವಾರದಲ್ಲಿ ಈ ಆನೆಗಳನ್ನು ಸಾಗಿಸಲಾಗುವುದು. ಇಲ್ಲಿಂದ ಕೆಲ ಮಾವುತರು ಅಲ್ಲಿಗೆ ತೆರಳಿ ಆನೆಗಳು ಹೊಂದಿಕೊಂಡ ನಂತರ ಹಿಂತಿರುಗಲಿದ್ದಾರೆಂದು ವನ್ಯಜೀವಿ ವಿಭಾಗ ಇಲಾಖೆ ಅರಣ್ಯಾಧಿಕಾರಿ ಮುಕುಂದ್ ರಾಜ್ ತಿಳಿಸಿದರು.