Tag: uttar pradesh

  • ಉತ್ತರ ಪ್ರದೇಶದಲ್ಲಿ ಲೋಕಸಭಾ ಎಲೆಕ್ಷನ್ ಫಲಿತಾಂಶ ಮತ್ತೊಮ್ಮೆ ಪ್ರಕಟವಾಯ್ತು!

    ಉತ್ತರ ಪ್ರದೇಶದಲ್ಲಿ ಲೋಕಸಭಾ ಎಲೆಕ್ಷನ್ ಫಲಿತಾಂಶ ಮತ್ತೊಮ್ಮೆ ಪ್ರಕಟವಾಯ್ತು!

    ನವದೆಹಲಿ: ಉತ್ತರ ಪ್ರದೇಶದಲ್ಲಿ 2014ರ ಲೋಕಸಭಾ ಚುನಾವಣೆಯ ಫಲಿತಾಂಶ ಮತ್ತೊಮ್ಮೆ ಮರುಕಳಿಸಿದ್ದು ಬಿಜೆಪಿ ಜಯಭೇರಿ ಬಾರಿಸಿದೆ.

    2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಇಲ್ಲಿ ಜಯಭೇರಿ ಬಾರಿಸಿತ್ತು. ಆದರೆ ಈ ಬಾರಿ ಕಾಂಗ್ರೆಸ್ ಮತ್ತು ಎಸ್‍ಪಿ ಮೈತ್ರಿಕೂಟದಿಂದಾಗಿ ಬಿಜೆಪಿಗೆ ಸ್ವಲ್ಪ ಮತ ಹಂಚಿಕೆ ಕಡಿಮೆಯಾಗಬಹುದು. ಆದರೆ ಅಷ್ಟೇ ಪ್ರಮಾಣದ ವೋಟ್ ಬಿಜೆಪಿಗೆ ಬಿದ್ದರೆ 300 ಕ್ಕಿಂತ ಹೆಚ್ಚಿನ ಸೀಟ್ ಬರಬಹುದು ಎನ್ನುವ ವಿಶ್ಲೇಷಣೆಯ ಸುದ್ದಿಯನ್ನು ಪಬ್ಲಿಕ್ ಟಿವಿ ಗುರುವಾರ ಪ್ರಕಟಿಸಿತ್ತು. ಈ ವಿಶ್ಲೇಷಣಾತ್ಮಕ ಸುದ್ದಿ ನಿಜವಾಗುತ್ತಿದ್ದು, 300ಕ್ಕಿಂತ ಹೆಚ್ಚಿನ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿನ ಸಮೀಪ ಬಂದಿದೆ.

    ಎಷ್ಟು ಸ್ಥಾನಗಳಿಸಬೇಕು? 2012ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 47 ಸ್ಥಾನಗಳನ್ನು ಗೆದ್ದಿದ್ದರೆ, 2014 ಲೋಕಸಭಾ ಚುನಾವಣೆಯ 80 ಕ್ಷೇತ್ರಗಳಲ್ಲಿ 71ರಲ್ಲಿ ಜಯವನ್ನು ಸಾಧಿಸುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿತ್ತು. ಶೇ.42.6 ಮತಗಳನ್ನು ಬಿಜೆಪಿ ಪಡೆಯುವ ಮೂಲಕ ಮೋದಿ, ಅಮಿತ್ ಶಾ ರಣತಂತ್ರ ಯಶಸ್ವಿಯಾಗಿತ್ತು. ಇಷ್ಟೇ ಶೇಕಡವಾರು ಮತಗಳು ಈ ಚುನಾವಣೆಯಲ್ಲಿ ಬಿದ್ದರೆ ಬಿಜೆಪಿ 318 ಕ್ಷೇತ್ರಗಳನ್ನು ಗಳಿಸಬೇಕು.

    ಉತ್ತರ ಪ್ರದೇಶದಲ್ಲಿ 403 ವಿಧಾನಸಭಾ ಕ್ಷೇತ್ರಗಳಿದ್ದು, ಬಹುಮತಕ್ಕೆ 202 ಸ್ಥಾನಗಳು ಬೇಕು. 2012ರ ಚುನಾವಣೆಯಲ್ಲಿ ಮುಲಾಯಂ ಸಿಂಗ್ ನೇತೃತ್ವದ ಸಮಾಜವಾದಿ ಪಕ್ಷ 224 ಸ್ಥಾನವನ್ನು ಗೆದ್ದುಕೊಂಡಿತ್ತು. ಈ ಮೂಲಕ ಅಖಿಲೇಶ್ ಯಾದವ್ ಮೊದಲ ಬಾರಿಗೆ ಉತ್ತರಪ್ರದೇಶದ ಮುಖ್ಯಮಂತ್ರಿ ಪಟ್ಟವನ್ನು ಆಲಂಕರಿಸಿದ್ದರು.

    ಇದನ್ನೂ ಓದಿ: ಲೋಕಸಭಾ ವೋಟ್ ನೋಡಿದ್ರೆ ಉತ್ತರ ಪ್ರದೇಶದಲ್ಲಿ ಯಾರಿಗೆ ಎಷ್ಟು ಸ್ಥಾನ ಸಿಗಬಹುದು?

  • ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆಲುವಿಗೆ ಕಾರಣವಾದ 10 ಅಂಶಗಳು

    ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆಲುವಿಗೆ ಕಾರಣವಾದ 10 ಅಂಶಗಳು

    ನವದೆಹಲಿ: ಉತ್ತರ ಪ್ರದೇಶದಲ್ಲಿ ಮೋದಿ ಸುನಾಮಿಗೆ ಎಸ್‍ಪಿ ಕಾಂಗ್ರೆಸ್ ಮೈತ್ರಿಕೂಟ, ಬಿಎಸ್‍ಪಿ ಧೂಳೀಪಟವಾಗಿದೆ. ಹೀಗಾಗಿ ಬಿಜೆಪಿ ಗೆಲುವಿಗೆ ಕಾರಣವಾದ 10 ಅಂಶಗಳನ್ನು ಇಲ್ಲಿ ನೀಡಲಾಗಿದೆ.

    1. ಮೋದಿ ಮುಖ:
    ಉತ್ತರ ಪ್ರದೇಶದಲ್ಲಿ ಮೋದಿ ಮುಖವನ್ನು ಇಟ್ಟುಕೊಂಡೇ ಬಿಜೆಪಿ ನಾಯಕರು ಪ್ರಚಾರ ಮಾಡಿದ್ದರು. ಭ್ರಷ್ಟಾಚಾರ ರಹಿತ ಆಡಳಿತಕ್ಕಾಗಿ ಮೋದಿಗಾಗಿ ಬಿಜೆಪಿ ಮತ ನೀಡಿ ಎಂದಿದ್ದು ವರವಾಗಿದೆ. ಅಷ್ಟೇ ಅಲ್ಲದೇ ಮೋದಿ ತಮ್ಮ ಭಾಷಣದಲ್ಲಿ ಸ್ಕ್ಯಾಮ್(ಸಮಾಜವಾದಿ, ಕಾಂಗ್ರೆಸ್, ಅಖಿಲೇಶ್ ಯಾದವ್, ಮಾಯಾವತಿ), ಕಸಬ್ (ಕಾಂಗ್ರೆಸ್, ಸಮಾಜವಾದಿ ಪಾರ್ಟಿ, ಬಹುಜನ ಸಮಾಜವಾದಿ ಪಾರ್ಟಿ) ಹೋಲಿಸಿ ವಾಗ್ದಾಳಿ ನಡೆಸುವ ಮೂಲಕ ಮೂರು ಪಕ್ಷಗಳ ಒಂದೇ ತಟ್ಟೆಗೆ ತಂದು ಬಿಜೆಪಿ ಪರ ಅಲೆಯನ್ನು ಸೃಷ್ಟಿಸುವಲ್ಲಿ ಸಫಲರಾದರು.

    2. ನೋಟ್‍ಬ್ಯಾನ್:
    ನವೆಂಬರ್ 8ರ ನೋಟು ಬ್ಯಾನ್ ಬಳಿಕ ಬಿಜೆಪಿ ವಿವಿಧ ರಾಜ್ಯಗಳ ಸ್ಥಳೀಯ ಆಡಳಿತ ಮತ್ತು ಪಾಲಿಕೆ ಚುನಾವಣೆ ಯಶಸ್ಸನ್ನು ಗಳಿಸಿತ್ತು. ಈ ಫಲಿತಾಂಶ ಉತ್ತರ ಪ್ರದೇಶದಲ್ಲಿ ಪರಿವರ್ತನೆಯಾಗಿದೆ. ಬಿಎಸ್‍ಪಿ, ಕಾಂಗ್ರೆಸ್, ಎಸ್‍ಪಿ ನೋಟ್‍ಬ್ಯಾನ್ ವಿರುದ್ಧ ಎಷ್ಟೇ ಪ್ರತಿಭಟಿಸಿದರೂ ಜನ ಮಾತ್ರ ಬಿಜೆಪಿಗೆ ಮತ ನೀಡಿದ್ದಾರೆ.

    3. ಎಸ್‍ಪಿ ಆಂತರಿಕ ಕಿತ್ತಾಟ:
    ಅಖಿಲೇಶ್ ಯಾದವ್, ಮುಲಾಯಂ ಸಿಂಗ್ ಯಾದವ್, ಶಿವಪಾಲ್ ಜಗಳದಿಂದಾಗಿ ಜನ ರೋಸಿ ಹೋಗಿದ್ದರು. ತದ ನಂತರ ನಮ್ಮಲ್ಲಿ ಒಗ್ಗಟ್ಟು ಇದೆ ಎಂದು ಬಿಂಬಿಸಿದ್ದರು. ಆದರೆ ಇವರ ಕಿತ್ತಾಟ ನಾಟಕವನ್ನು ನೋಡುತ್ತಿದ್ದ ಜನ ಈ ಬಾರಿ ಬಿಜೆಪಿಯ ಕೈ ಹಿಡಿದಿದ್ದಾರೆ.

    4. ಕಾಂಗ್ರೆಸ್ ಮೈತ್ರಿಕೂಟ:
    ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದ್ದ ಕಾಂಗ್ರೆಸ್ ಬಿಹಾರದಲ್ಲಿ ಯಶಸ್ವಿಯಾದಂತೆ ಉತ್ತರ ಪ್ರದೇಶಲ್ಲಿ ಎಸ್‍ಪಿ ಜೊತೆಗೂಡಿ ಮೈತ್ರಿ ಮಾಡಿಕೊಂಡಿತ್ತು. ಆದರೆ ಪ್ರಶಾಂತ್ ಕಿಶೋರ್ ಈ ತಂತ್ರಗಾರಿಕೆ ವೈಫಲ್ಯ ಕಂಡಿದ್ದು ಮೈತ್ರಿಕೂಟಕ್ಕೆ ಹೀನಾಯ ಸೋಲಾಗಿದೆ. ಆಡಳಿತ ವಿರೋಧಿ ಅಲೆ ಇರುವಾಗಲೇ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದು ಬಿಜೆಪಿ ಗೆಲ್ಲಲು ವರದಾನವಾಯ್ತು.

    5. ಮಾಯಾವತಿ ವೈಫಲ್ಯ:
    ಹಿಂದುಳಿದ ವರ್ಗಗಳ ಮತಗಳನ್ನು ಪಡೆದು ದಲಿತ ಮಹಿಳಾ ಮುಖ್ಯಮಂತ್ರಿಯಾಗಿದ್ದ ಮಾಯಾವತಿ ಈ ಬಾರಿ ಚುನಾವಣಾ ನಡೆಯುವ ಮೊದಲೇ ಸೋಲನ್ನು ಒಪ್ಪಿಕೊಂಡಿದ್ದಂತೆ ಕಾಣುತಿತ್ತು. ಎಸ್‍ಪಿ ಕಾಂಗ್ರೆಸ್ ಮೈತ್ರಿ ಕೂಟ ಮತ್ತು ಬಿಜೆಪಿಯ ಅಬ್ಬರದ ಪ್ರಚಾರ ನಡುವೆ ಬಿಎಸ್‍ಪಿ ಮಂಕಾಗಿತ್ತು. ಇದರ ಜೊತೆ ಹಣ ಪಡೆದು ಟಿಕೆಟ್ ಹಂಚಿಕೆ ಮಾಡಿದ್ದರು ಎನ್ನುವ ಆರೋಪವೂ ಮಾಯಾವತಿ ವಿರುದ್ಧ ಕೇಳಿ ಬಂದಿತ್ತು.

    6. ಮುಖ್ಯಮಂತ್ರಿ ಅಭ್ಯರ್ಥಿ ಇಲ್ಲ:
    ಕಾಂಗ್ರೆಸ್ ಎಸ್‍ಪಿಯ ಅಖಿಲೇಶ್ ಯಾದವ್ ಮುಂದಿನ ಮುಖ್ಯಮಂತ್ರಿ ಎಂದು ಪ್ರಕಟಿಸಿದ್ದರೆ, ಬಿಎಸ್‍ಪಿಯಿಂದ ಮಾಯಾವತಿ ಮುಖ್ಯಮಂತ್ರಿ ರೇಸ್‍ನಲ್ಲಿದ್ದರು. ಆದರೆ ಈ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ಪ್ರಕಟಿದೇ ಚುನಾವಣೆಗೆ ಇಳಿದಿತ್ತು. ಇದರಿಂದಾಗಿ ಬಿಜೆಪಿ ನಾಯಕರ ಆಂತರಿಕ ಜಗಳಕ್ಕೆ ಆಸ್ಪದವೇ ಇರಲಿಲ್ಲ. ಎಲ್ಲ ನಾಯಕರ ಹೋರಾಟ ಮತ್ತು ತಳ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿದ್ದು ಬಿಜೆಪಿಯ ಗೆಲುವಿಗೆ ಕಾರಣವಾಯ್ತು.

    7. ಕೈ ಹಿಡಿದ ಯುವ ಮತದಾರರು:
    ಈ ಹಿಂದಿನ ಜಾತಿ ರಾಜಕಾರಣವನ್ನು ಬಿಟ್ಟು ಬಿಜೆಪಿ ಈ ಬಾರಿ ಯುವ ಜನತೆಯನ್ನು ಗುರಿಯಾಗಿಸಿಕೊಂಡು ಪ್ರಚಾರ ನಡೆಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಐಟಿ ಸೆಲ್ ಕಾಂಗ್ರೆಸ್, ಎಸ್‍ಪಿ, ಬಿಎಸ್‍ಪಿ ವೈಫಲ್ಯಗಳನ್ನು ಪ್ರಚಾರ ಮಾಡಿತ್ತು. ಈ ಪ್ರಚಾರದಿಂದಾಗಿ ಹೊಸ ಮತದಾರರು ಬಿಜೆಪಿಗೆ ಮತ ನೀಡಿದ್ದಾರೆ ಎನ್ನುವ ವಿಶ್ಲೇಷಣೆ ಈಗ ಆರಂಭವಾಗಿದೆ.

    8. ಮೈತ್ರಿ ಲಾಭ:
    ಬಿಜೆಪಿ ಅಪ್ನಾ ದಳ(ಎಸ್) ಮತ್ತು ಸುಹಲ್ದೇವ್ ಭಾರತೀಯ ಸಮಾಜ ಪಾರ್ಟಿ (ಎಸ್‍ಬಿಎಸ್‍ಪಿ) ಜೊತೆ ಮೈತ್ರಿ ಮಾಡಿಕೊಂಡಿತ್ತು ಪೂರ್ವಾಂಚಲ ಮತ್ತು ಮಧ್ಯ ಉತ್ತರ ಪ್ರದೇಶದ ಪಟೇಲ್ ಕುಮಿ ದಳವನ್ನು ಅಪ್ನಾ ದಳ ಪ್ರತಿನಿಧಿಸಿದರೆ, ಎಸ್‍ಬಿಎಸ್‍ಪಿ 17 ಹಿಂದುಳಿದ ವರ್ಗಗಳನ್ನು ಪೂರ್ವ ಉತ್ತರ ಪ್ರದೇಶ ಪ್ರತಿನಿದಿಸುತ್ತದೆ. ಈ ಎರಡು ಪಕ್ಷಗಳ ಜೊತೆಗಿನ ಮೈತ್ರಿ ಬಿಜೆಪಿಗೆ ವರವಾಗಿದೆ.

    9. ಹಿಂದುತ್ವ ಟ್ರಂಪ್ ಕಾರ್ಡ್:
    19.98 ಕೋಟಿ ಜನ ಸಂಖ್ಯೆಯಲ್ಲಿ 14.05 ಕೋಟಿ ಮತದರಾರ ಪೈಕಿ ಹಿಂದುಳಿದ ವರ್ಗ ಶೇ.34.7, ದಲಿತರು ಶೇ. 20.5, ಮುಸ್ಲಿಮ್ ಶೇ.19, ಬ್ರಾಹ್ಮಣ ಶೇ.10.5, ಬುಡಕಟ್ಟು ಜನಾಂಗ ಶೇ.2, ವೈಶ್ಯ ಶೇ.4.3, ಠಾಕೂರ್ ಶೇ.7.6 ಮಂದಿ ಇದ್ದರು. ಆದರೆ ಬಿಜೆಪಿ ಯಾವೊಬ್ಬ ಮುಸ್ಲಿಮ್ ಧರ್ಮದ ವ್ಯಕ್ತಿಗೆ ಟಿಕೆಟ್ ಹಂಚಿಕೆ ಮಾಡಿರಲಿಲ್ಲ. ಈ ವಿಚಾರವನ್ನೇ ಇಟ್ಟುಕೊಂಡು ವಿರೋಧಿಗಳು ಬಿಜೆಪಿ ವಿರುದ್ಧ ಪ್ರಚಾರ ಮಾಡಿದ್ದರು. ಆದರೆ ಬಿಜೆಪಿ ಹಿಂದುಳಿದ ವರ್ಗ, ಮೇಲ್ವರ್ಗ, ದಲಿತರ ಮತಗಳನ್ನು ಬುಟ್ಟಿಗೆ ಹಾಕಿಕೊಳ್ಳುವ ಮೂಲಕ ವಿಜಯ ಸಾಧಿಸಿದೆ.

    10. ಕೋಮು ಗಲಾಟೆ ಇಲ್ಲ:
    ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಗೆ ಮುನ್ನ ಕೋಮು ಗಲಾಟೆ ನಡೆಯುವುದು ಉತ್ತರಪ್ರದೇಶಲ್ಲಿ ಸಾಮಾನ್ಯ. ಆದರೆ ಈ ಬಾರಿ ಒಂದೇ ಒಂದು ಕೋಮು ಗಲಾಟೆಯಾಗಿಲ್ಲ. ಮಂಗಳವಾರ ಲಕ್ನೋದಲ್ಲಿ ಶಂಕಿತ ಐಸಿಸ್ ಉಗ್ರನ ಹತ್ಯೆ ಮಾಡಲಾಗಿತ್ತು. ಆದರೆ ಈ ಎನ್‍ಕೌಂಟರ್ ಫೇಕ್ ಆಗಿದ್ದು, ಅಖಿಲೇಶ್ ಯಾದವ್ ಸರ್ಕಾರ ಚುನಾವಣೆಗೂ ಮುನ್ನ ಕೋಮುಗಲಾಟೆ ಸೃಷ್ಟಿಸಲು ಉಗ್ರ ನಿಗ್ರಹ ದಳದ ಮೂಲಕ ಈ ಎನ್‍ಕೌಂಟರ್ ಮಾಡಲಾಗಿದೆ ಎಂದು ಈಗ ಅಲ್ಲಿನ ಸ್ಥಳಿಯ ಮುಸ್ಲಿಮ್ ನಾಯಕರು ಆರೋಪಿಸಿದ್ದಾರೆ.

    ಈ ಎಲ್ಲ ಕಾರಣದ ಜೊತೆಗೆ ಸರ್ಜಿಕಲ್ ಸ್ಟ್ರೈಕ್ ಎಫೆಕ್ಟ್, ಕೇಂದ್ರ ಸರ್ಕಾರದ ಯಶಸ್ವಿ ಯೋಜನೆಗಳು, ಮುಸ್ಲಿಂಯೇತರ ಓಬಿಸಿ ವರ್ಗ ಬಿಜೆಪಿಯನ್ನು ಕೈ ಹಿಡಿದ ಕಾರಣ ಬಿಜೆಪಿ ಈ ಬಾರಿ ಉತ್ತರ ಪ್ರದೇಶದಲ್ಲಿ ಜಯಭೇರಿ ಬಾರಿಸಿದೆ.

    ಮಧ್ಯಾಹ್ನ 1 ಗಂಟೆಯ ಟ್ರೆಂಡ್ಸ್ ಪ್ರಕಾರ ಬಿಜೆಪಿ 307 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಎಸ್‍ಪಿ ಕಾಂಗ್ರೆಸ್ 82, ಬಿಎಸ್‍ಪಿ 18, ಇತರರು 6 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

    2012ರ ಚುನಾವಣೆಯಲ್ಲಿ ಎಸ್‍ಪಿ 224, ಬಿಎಸ್‍ಪಿ 80, ಬಿಜೆಪಿ 47, ಕಾಂಗ್ರೆಸ್ 28 ಸ್ಥಾನಗಳನ್ನು ಗೆದ್ದುಕೊಂಡಿತ್ತು.

    ಇದನ್ನೂ ಓದಿ: ಬಿಹಾರ ಚುನಾವಣೆಯ ಸೋಲಿನ ಪಾಠದಿಂದಾಗಿ ಉತ್ತರಪ್ರದೇಶದಲ್ಲಿ ಜಯಭೇರಿ ಬಾರಿಸಿತು ಬಿಜೆಪಿ. ಪಕ್ಷ ಸಂಘಟನೆಯಾಗಿದ್ದು ಹೇಗೆ?

  • ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಭಾರೀ ಮುನ್ನಡೆ

    ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಭಾರೀ ಮುನ್ನಡೆ

    ನವದೆಹಲಿ: ಪಂಚರಾಜ್ಯಗಳ ಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಉತ್ತರ ಪ್ರದೇಶದಲ್ಲಿ ಚುನಾವಣೋತ್ತರ ಸಮೀಕ್ಷೆಯಂತೆ ಬಿಜೆಪಿ 200ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

    ಬೆಳಗ್ಗೆ 9 ಗಂಟೆಯ ವೇಳೆ ಟ್ರೆಂಡ್ಸ್ ಪ್ರಕಾರ ಬಿಜೆಪಿ 205, ಎಸ್‍ಪಿ ಕಾಂಗ್ರೆಸ್ ಮೈತ್ರಿಕೂಟ 51, ಬಿಎಎಸ್‍ಪಿ 24, ಇತರರು 7 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಒಟ್ಟು 403 ಕ್ಷೇತ್ರಗಳಿರುವ ಉತ್ತರ ಪ್ರದೇಶದಲ್ಲಿ 202 ಸ್ಥಾನಗಳನ್ನು ಗೆದ್ದವರು ಅಧಿಕಾರ ಹಿಡಿಯಲಿದ್ದಾರೆ.

    ಪಂಜಾಬ್‍ನಲ್ಲಿ ಕಾಂಗ್ರೆಸ್ 25, ಆಪ್ 8, ಅಕಾಲಿದಳ 5 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

    ಉತ್ತರಾಖಂಡ್‍ನಲ್ಲಿ 20 ಕ್ಷೇತ್ರಗಳಲ್ಲಿ ಬಿಜೆಪಿ, 5ರಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದರೆ ಗೋವಾದ 3 ಕ್ಷೇತ್ರಗಳಲ್ಲಿ ಬಿಜೆಪಿ, 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಮಣಿಪುರದ 2 ಕ್ಷೇತ್ರಗಳಲ್ಲಿ ಕಾಂಗ್ರೆಸ್, 1ರಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.

  • ಪಂಚ ರಾಜ್ಯಗಳ ಚುನಾವಣೆ: ಯಾವ ರಾಜ್ಯದಲ್ಲಿ ಎಷ್ಟು ಹಣ, ಮದ್ಯ, ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ?

    ಪಂಚ ರಾಜ್ಯಗಳ ಚುನಾವಣೆ: ಯಾವ ರಾಜ್ಯದಲ್ಲಿ ಎಷ್ಟು ಹಣ, ಮದ್ಯ, ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ?

    ದು ರಾಜ್ಯಗಳಲ್ಲಿ ಚುನಾವಣೆ ಮುಕ್ತಾಯವಾಗಿದ್ದು, ಮಾರ್ಚ್ 11ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಹೀಗಾಗಿ ಇಲ್ಲಿ ಚುನಾವಣೆಯ ಸಂದರ್ಭದಲ್ಲಿ ವಶಪಡಿಸಿಕೊಂಡಿರುವ ಹಣ, ಮದ್ಯ, ಡ್ರಗ್ಸ್ ಪ್ರಮಾಣದ ಮಾಹಿತಿಯನ್ನು ನೀಡಲಾಗಿದೆ.

    ಹಣ: 2017ರ ಚುನಾವಣೆ ಸಂದರ್ಭದಲ್ಲಿ ದಾಖಲೆ ಇಲ್ಲದ ಒಟ್ಟು 184.85 ಕೋಟಿ ರೂಪಾಯಿ ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ. 2012 ರ ಚುನಾವಣೆ ಸಮಯದಲ್ಲಿ 50.78 ಕೋಟಿ ರೂ. ಹಣವನ್ನು ವಶಕ್ಕೆ ಪಡೆಯಲಾಗಿತ್ತು.

    ಮದ್ಯ: ಚುನಾವಣೆಯ ಹೊಸ್ತಿಲಲ್ಲಿ ಎಲ್ಲ ಐದು ರಾಜ್ಯಗಳಿಂದ 83.21 ಕೋಟಿ ರೂ. ಮೌಲ್ಯದ ಮದ್ಯವನ್ನು ವಶ ಪಡೆಯಲಾಗಿದೆ. ಇನ್ನು ಕಳೆದ ವಿಧಾನಸಭಾ ಚುನಾವಣೆಯಲ್ಲಿ 2.82 ಕೋಟಿ ರೂ. ಮೌಲ್ಯದ ಮದ್ಯ ಅಧಿಕಾರಿಗಳು ವಶ ಪಡೆದಿದ್ದರು.

    ಡ್ರಗ್ಸ್: ಐದು ರಾಜ್ಯಗಳಲ್ಲಿ 31.78 ಕೋಟಿ ರೂ. ಮೌಲ್ಯದ ಡ್ರಗ್ಸ್ ಪತ್ತೆಯಾಗಿದೆ. 2012 ರ ಚುನಾವಣೆಯ ವೇಳೆಯಲ್ಲಿ 54.0 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆಯಾಗಿತ್ತು.

    ರಾಜ್ಯಗಳಲ್ಲಿ ಸಿಕ್ಕಿರುವ, ಹಣ, ಮದ್ಯ, ಡ್ರಗ್ಸ್ ವಿವರ:

    ಉತ್ತರಪ್ರದೇಶ:
    ಹಣ: 2017 ರ ಚುನಾವಣೆಯಲ್ಲಿ 119.03 ಕೋಟಿ ರೂ. ವಶಕ್ಕೆ ಪಡೆದಿದ್ರೆ, 2012 ರಲ್ಲಿ 36.29 ಕೋಟಿ ರೂ. ವಶಕ್ಕೆ ಪಡೆಯಲಾಗಿತ್ತು.

    ಮದ್ಯ: 2017 ರ ಚುನಾವಣೆಯಲ್ಲಿ 64.66 ಕೋಟಿ ಮೌಲ್ಯದ ಮದ್ಯವನ್ನು ವಶಕ್ಕೆ ಪಡೆದಿದ್ರೆ. 2012 ರಲ್ಲಿ 0.07 ಕೋಟಿ ಮೌಲ್ಯದ ಮದ್ಯವನ್ನು ವಶಕ್ಕೆ ಪಡಯಲಾಗಿತ್ತು.

    ಡ್ರಗ್ಸ್: 2017 ಚುನಾವಣೆಯಲ್ಲಿ 9.60 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ.

    ಪಂಜಾಬ್ :

    ಹಣ: 2017 ರ ಚುನಾವಣೆಯಲ್ಲಿ 58.02 ಕೋಟಿ ರೂ. ನಗದು ವಶಕ್ಕೆ ಪಡೆಯಲಾಗಿದೆ. ಕಳೆದ 2012ರ ಚುನಾವಣೆಯಲ್ಲಿ 11.51 ಕೋಟಿ ರೂ. ನಗದನ್ನು ವಶಕ್ಕೆ ಪಡೆಯಲಾಗಿತ್ತು.

    ಮದ್ಯ: 2017 ರ ಚುನಾವಣೆಯಲ್ಲಿ 13.36 ಕೋಟಿ ರೂ. ಮೌಲ್ಯದ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ. ಕಲೇದ 2012 ರ ಚುನಾವಣೆಯಲ್ಲಿ 2.59 ಕೋಟಿ ರೂ. ಮೌಲ್ಯದ ಮದ್ಯವನ್ನು ವಶ ಪಡೆಯಲಾಗಿತ್ತು.

    ಡ್ರಗ್ಸ್: 2017 ರ ಚುನಾವಣೆಯಲ್ಲಿ 18.26 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ. 2012 ಚುನಾವಣೆಯಲ್ಲಿ 54.0 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿತ್ತು.

    ಉತ್ತರಾಖಂಡ:
    ಹಣ: 2017 ರಚುನಾವಣೆಯಲ್ಲಿ 3.38 ಕೋಟಿ ರೂ. ವಶಕ್ಕೆ ಪಡೆದಿದ್ರೆ, 2012 ರ ಚುನಾವಣೆಯಲ್ಲಿ 1.30 ಕೋಟಿ ರೂ. ವಶಕ್ಕೆ ಪಡೆಯಲಾಗಿತ್ತು.

    ಮದ್ಯ: 2017 ರ ಚುನಾವಣೆಯಲ್ಲಿ 3.10 ಕೋಟಿ ರೂ. ಮೌಲ್ಯದ ಮದ್ಯ ವಶಕ್ಕೆ ಪಡೆದಿದ್ರೆ, 2012ರ ಚುನಾವಣೆಯಲ್ಲಿ 0.15 ಕೋಟಿ ಮೌಲ್ಯದ ಮದ್ಯವನ್ನು ವಶಕ್ಕೆ ಪಡೆಯಲಾಗಿತ್ತು.

    ಡ್ರಗ್ಸ್: 2017ರ ಚುನಾವಣೆಯಲ್ಲಿ 0.37 ಕೋಟಿ ರೂ. ಮೌಲ್ಯದ ಡ್ರಗ್ಸ್ ನ್ನು ವಶಕ್ಕ ಪಡೆಯಲಾಗಿದೆ.

    ಮಣಿಪುರ:
    ಹಣ: 2017 ರ ಚುನಾವಣೆಯಲ್ಲಿ 2.18 ಕೋಟಿ ರೂ. ನಗದು ಹಣವನ್ನು ವಶಕ್ಕೆ ಪಡೆದಿದ್ರೆ, 2012 ರ ಚುನಾವಣೆ ಸಮಯದಲ್ಲಿ 1.08 ಕೋಟಿ ರೂ. ನಗದು ಹಣವನ್ನು ವಶಕ್ಕೆ ಪಡೆಯಲಾಗಿತ್ತು.

    ಮದ್ಯ: 2017 ರ ಚುನಾವಣೆಯಲ್ಲಿ 1.02 ಕೋಟಿ ರೂ. ಮೌಲ್ಯದ ಮದ್ಯವನ್ನು ವಶಕ್ಕೆ ಅಧಿಕಾರಿಗಳು ವಶಕ್ಕೆ ಪಡೆದಿದ್ರು. ಇನ್ನೂ 2012 ರ ಚುನಾವಣೆಯಲ್ಲಿ 0.02 ಕೋಟಿ ಮೌಲ್ಯದ ಮದ್ಯವನ್ನ ವಶಕ್ಕೆ ಪಡೆಯಲಾಗಿತ್ತು.

    ಡ್ರಗ್ಸ್: 2017 ರ ಚುನಾವಣೆಯಲ್ಲಿ 3.32 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ.

    ಗೋವಾ:
    ಹಣ: ಈ ಬಾರಿಯ 2017 ರ ಚುನಾವಣೆಯಲ್ಲಿ 2.24 ಕೋಟಿ ರೂ. ನಗದು ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. 2012ರ ಚುನಾವಣೆ ವೇಳೆಯಲ್ಲಿ 0.60 ಕೋಟಿ ರೂ. ನಗದು ಚವಶಕ್ಕೆ ಪಡೆಯಲಾಗಿತ್ತು.

    ಮದ್ಯ: 2017ರ ಚುನಾವಣೆಯಲ್ಲಿ 1.07 ಕೋಟಿ ರೂ. ಮೌಲ್ಯದ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ.

    ಡ್ರಗ್ಸ್: ಈ ಬಾರಿಯ ಚುನಾವಣೆಯಲ್ಲಿ 0.33 ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ.

     

  • ಲೋಕಸಭಾ ವೋಟ್ ನೋಡಿದ್ರೆ ಉತ್ತರ ಪ್ರದೇಶದಲ್ಲಿ ಯಾರಿಗೆ ಎಷ್ಟು ಸ್ಥಾನ ಸಿಗಬಹುದು?

    ಲೋಕಸಭಾ ವೋಟ್ ನೋಡಿದ್ರೆ ಉತ್ತರ ಪ್ರದೇಶದಲ್ಲಿ ಯಾರಿಗೆ ಎಷ್ಟು ಸ್ಥಾನ ಸಿಗಬಹುದು?

    ಬೆಂಗಳೂರು: ಪಂಚರಾಜ್ಯಗಳ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳಿರುವ ಉತ್ತರ ಪ್ರದೇಶದಲ್ಲಿ ಈ ಬಾರಿ ಗದ್ದುಗೆಯನ್ನು ಯಾರು ಏರಲಿದ್ದಾರೆ ಎನ್ನುವ ಕುತೂಹಲ ಹೆಚ್ಚಾಗಿದೆ.

    2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಇಲ್ಲಿ ಜಯಭೇರಿ ಬಾರಿಸಿತ್ತು. ಆದರೆ ಈ ಬಾರಿ ಕಾಂಗ್ರೆಸ್ ಮತ್ತು ಎಸ್‍ಪಿ ಮೈತ್ರಿಕೂಟದಿಂದಾಗಿ ಬಿಜೆಪಿಗೆ ಸ್ವಲ್ಪ ಮತ ಹಂಚಿಕೆ ಕಡಿಮೆಯಾಗಬಹುದು. ಅಷ್ಟೇ ಅಲ್ಲದೇ ದಲಿತರ ಸಂಖ್ಯೆ ಹೆಚ್ಚು ಇರುವುದರಿಂದ ಲೋಕಸಭೆಯಲ್ಲಿ ಬಿಎಸ್‍ಪಿಗೆ ಯಾವುದೇ ಸ್ಥಾನ ಸಿಗದೇ ಇದ್ದರೂ ವಿಧಾನಸಭಾ ಚುನಾವಣೆಯಲ್ಲಿ ಕೆಲವೆಡೆ ಜಯಭೇರಿ ಭಾರಿಸಲಿದೆ ಎನ್ನುವ ವಿಶ್ಲೇಷಣೆ ಆರಂಭವಾಗಿದೆ.

    ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶ ಹೆಚ್ಚು ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಹೀಗಾಗಿ 2014ರ ಲೋಕಸಭಾ ಚುನಾವಣೆಯಲ್ಲಿ ಬಿದ್ದ ಮತಗಳನ್ನು ಲೆಕ್ಕಾಚಾರದಲ್ಲಿ ಈ ಬಾರಿ ಯಾರು ಎಷ್ಟು ಸ್ಥಾನವನ್ನು ಗೆಲ್ಲಬಹುದು ಎನ್ನುವ ವಿಶ್ಲೇಷಣಾ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

    ಉತ್ತರಪ್ರದೇಶದಲ್ಲಿ ಒಟ್ಟು 403 ವಿಧಾನಸಭಾ ಕ್ಷೇತ್ರಗಳಿದ್ದು, ಬಹುಮತಕ್ಕೆ 202 ಸ್ಥಾನಗಳು ಬೇಕು. 2012ರ ಚುನಾವಣೆಯಲ್ಲಿ ಮುಲಾಯಂ ಸಿಂಗ್ ನೇತೃತ್ವದ ಸಮಾಜವಾದಿ ಪಕ್ಷ 224 ಸ್ಥಾನವನ್ನು ಗೆದ್ದುಕೊಂಡಿತ್ತು. ಈ ಮೂಲಕ ಅಖಿಲೇಶ್ ಯಾದವ್ ಮೊದಲ ಬಾರಿಗೆ ಉತ್ತರಪ್ರದೇಶದ ಮುಖ್ಯಮಂತ್ರಿ ಪಟ್ಟವನ್ನು ಆಲಂಕರಿಸಿದ್ದರು.

    ಲೋಕಸಭಾ ಚುನಾವಣೆಗೆ ಹೋಲಿಸಿದ್ರೆ ಯಾರಿಗೆ ಎಷ್ಟು ಸ್ಥಾನ ಬರುತ್ತೆ?
    2012ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 47 ಸ್ಥಾನಗಳನ್ನು ಗೆದ್ದಿದ್ದರೆ, 2014 ಲೋಕಸಭಾ ಚುನಾವಣೆಯ 80 ಕ್ಷೇತ್ರಗಳಲ್ಲಿ 71ರಲ್ಲಿ ಜಯವನ್ನು ಸಾಧಿಸುವ ಮೂಲಕ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿತ್ತು. ಶೇ.42.6 ಮತಗಳನ್ನು ಬಿಜೆಪಿ ಪಡೆಯುವ ಮೂಲಕ ಮೋದಿ, ಅಮಿತ್ ಶಾ ರಣತಂತ್ರ ಯಶಸ್ವಿಯಾಗಿತ್ತು. ಇಷ್ಟೇ ಶೇಕಡವಾರು ಮತಗಳು ಈ ಚುನಾವಣೆಯಲ್ಲಿ ಬಿದ್ದರೆ ಬಿಜೆಪಿ 318 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಜಯಭೇರಿ ಬಾರಿಸುವ ಸಾಧ್ಯತೆಯಿದೆ.

    ಎಸ್‍ಪಿ ಶೇ.22.3 ರಷ್ಟು ಮತಗಳನ್ನು ಪಡೆಯುವ ಮೂಲಕ 5 ಸ್ಥಾನವನ್ನು ಗಳಿಸಿತ್ತು. ಈ ಲೆಕ್ಕವನ್ನು ಪರಿಗಣಿಸಿದರೆ ಈ ಬಾರಿ 42 ಸ್ಥಾನಗಳನ್ನು ಪಡೆಯುವ ಸಾಧ್ಯತೆಯಿದೆ. ಕಾಂಗ್ರೆಸ್ ಶೇ.7.5 ರಷ್ಟು ಮತಗಳನ್ನು ಪಡೆಯುವ ಮೂಲಕ 15 ಸ್ಥಾನವನ್ನು ಗೆಲ್ಲಬಹುದು.

     

  • ಉತ್ತರಪ್ರದೇಶದಲ್ಲಿ ನಾಳೆ ಮೊದಲ ಹಂತದ ಚುನಾವಣೆ: ಅಖಾಡ ಹೇಗಿದೆ?

    ನವದೆಹಲಿ: ಉತ್ತರ ಪ್ರದೇಶ ಎಂದ ಕೂಡಲೇ ತಕ್ಷಣ ನೆನಪಾಗೋದು ಭಾರತದ ಅತಿದೊಡ್ಡ ರಾಜ್ಯ, ಅಷ್ಟೇ ಅಲ್ಲ ರಾಷ್ಟ್ರ ರಾಜಕಾರಣ ವನ್ನ ನಿರ್ಧರಿಸುವ ಸಮರ ಭೂಮಿ. ಇಲ್ಲಿ ಗೆದ್ದವರು ದೇಶವನ್ನೇ ಆಳ್ತಾರೆ ಅನ್ನೂ ಅಲಿಖಿತ ನಿಯಮ. ಜೊತೆಗೆ ದೇಶದ ಅತಿ ಹೆಚ್ಚು ಮತದಾರರು ಇರುವ ರಾಜ್ಯ ಅನ್ನೂ ಹೆಗ್ಗಳಿಕೆ ಉತ್ತರ ಪ್ರದೇಶದು. ಈ ಕಾರಣಕ್ಕೆ ಉತ್ತರ ಪ್ರದೇಶ ರಾಜಕೀಯ ವಿಚಾರದಲ್ಲಿ ರಾಷ್ಟ್ರದಲ್ಲಿ ಹೆಚ್ಚು ಸುದ್ದಿಯಾಗುತ್ತೆ.

    ಇಂತಹ ರಾಜಕೀಯ ರಾಜ್ಯದಲ್ಲಿ ಕಳೆದ ಒಂದು ತಿಂಗಳಿನಿಂದ ಚುನಾವಣಾ ಕಾವು ಜೋರಾಗಿದೆ. ಏಳು ಹಂತದಲ್ಲಿ ನಡೆಯುವ ಚುನಾವಣೆಗೆ ಮುನ್ನುಡಿ  ಎನ್ನುವುಂತೆ ಶನಿವಾರ ಮೊದಲ ಹಂತದ ಚುನಾವಣೆಗೆ ಮತದಾನ ನಡೆಯಲಿದೆ.

    ಮೊದಲ ಹಂತದಲ್ಲಿ 15 ಜಿಲ್ಲೆಗಳ ಪೈಕಿ 73 ವಿಧಾನ ಸಭೆ ಕ್ಷೇತ್ರಗಳಿಗೆ ಚುನಾವಣೆ ಕಸರತ್ತು ನಡೆಯಲಿದೆ. ಶಾಮಲಿ, ಮಥುರಾ, ಮುಝಪ್ಫರ್ ನಗರ ಬಾಗ್ಫತ್, ಅಲಿಗಡ್ ಸೇರಿದಂತೆ ಹಲವು ಮತ ಕ್ಷೇತ್ರಗಳು ಭಾರಿ ನಿರೀಕ್ಷೆ ಮತ್ತು ಕುತೂಹಲ ಮೂಡಿಸುನ ಕ್ಷೇತ್ರಗಳಳಾಗಿದ್ದು ಇದೇ 15 ರಂದು 11 ಜಿಲ್ಲೆಗಳ ಪೈಕಿ 67 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು ಎರಡು ಹಂತದಲ್ಲಿ ಉತ್ತರ ಪ್ರದೇಶದ ಪಶ್ಚಿಮ ಭಾಗದ ಚುನಾವಣೆ ಮಾಡಿ ಮುಗಿಸಲು  ಆಯೋಗ ನಿರ್ಧರಿಸಿದೆ.

    ಜಾತಿ ಲೆಕ್ಕಾಚಾರ: ಉತ್ತರ ಪ್ರದೇಶದ ರಾಜಕಾರಣ ನಿಂತಿರುವುದು ಜಾತಿ ಲೆಕ್ಕಾಚಾರದಲ್ಲಿ ಹಾಗಾಗೀ ಯಾದವ, ಜಾಟ್, ಮುಸ್ಲಿಂ, ದಲಿತರು ನಿರ್ಣಾಯಕ ಪಾತ್ರ ವನ್ನು ವಹಿಸ್ತಾರೆ. ಹಾಗಾಗೀ ಈ ಬಾರಿಯ ಮತದಾರರು ಎಷ್ಟಿದ್ದಾರೆ? ಜೊತೆಗೆ ಜಾತಿ ಲೆಕ್ಕಾಚಾರ ಹೇಗಿದೆ ಎಂದು ನೋಡುವುದಾದರೆ,

    ಉತ್ತರ ಪ್ರದೇಶ ದ ಒಟ್ಟು ಮತದಾರರ ಸಂಖ್ಯೆ -14.05 ಕೋಟಿ
    ಪುರುಷರು ಮತದಾರರು – 7.7 ಕೋಟಿ
    ಮಹಿಳಾ ಮತದಾರರು – 6.3 ಕೋಟಿ
    ತೃತೀಯ ಲಿಂಗ ಮತದಾರರು – 6,983
    ಒಟ್ಟು ಮತದಾರರ ಪೈಕಿ – 4.4 ಕೋಟಿಯಷ್ಟು ಯುವ ಮತದಾರರು ಉತ್ತರ ಪ್ರದೇಶದಲ್ಲಿದ್ದಾರೆ

    ಇನ್ನೂ ಜಾತಿ ಲೆಕ್ಕಚಾರ ನೋಡುವುದಾದ್ರೆ
    ದಲಿತರು – 21.5% (ಜಾಟ್ ದಲಿತರು 11% )
    ಮುಸ್ಲಿಂಮರು – 19. 3%
    ಮೆಲ್ವವರ್ಗದ ಜಾತಿಗಳು – 22%
    ಕ್ರಿಶ್ಚಿಯನ್ನರು -0.18%
    ಹಿಂದುಳಿದ ವರ್ಗ – 40% ರಷ್ಟಿದ್ದು ಅದರಲ್ಲಿ (ಯಾದವ – 8% , ಲೋಧಿ -7%, ಜಾಟ್ – 1.7% , ಗುಜ್ಜರ್ – 1.3%, ಹೀಗೆ ಹಲವು ಉಪ ಪಂಗಡಗಳಿವೆ)

    ಉತ್ತರ ಪ್ರದೇಶದ ಪಶ್ಚಿಮ ವಲಯ ಅತಿ ಹೆಚ್ಚು ಮುಸ್ಲಿಂ, ದಲಿತ ಹಾಗೂ ಹಿಂದೂಳಿದ ವರ್ಗದ ಮತದಾರರಿದ್ದಾರೆ. ಹಾಗಾಗೀ ಈಬಾರಿ 99 ಸೀಟುಗಳನ್ನು ಮುಸ್ಲಿಂರಿಗೆ ನೀಡುವ ಮೂಲಕ ದಲಿತ ಮತ್ತು ಮುಸ್ಲಿಮರಿಗೆ ಬಿಎಸ್ಪಿಯ ನಾಯಕಿ ಮಾಯಾವತಿ ಮಣೆ ಹಾಕಿದ್ರೆ, ಎಸ್ಪಿ ಕೂಡಾ 59 ಸೀಟುಗಳನ್ನು ಮುಸ್ಲಿಂ ರಿಗೆ ನೀಡಿ ಕಾಂಗ್ರೆಸ್ ನೊಂದಿಗೆ ಮೈತ್ರಿ ಮಾಡಿಕೊಂಡಿದ್ದು ಮುಸ್ಲಿಂ ಓಟ್ ಇಬ್ಭಾಗವಾಗದಂತೆ ಯಾದವ- ಮುಸ್ಲಿಂ ಧೃವೀಕರಣ ಮಾಡಿಕೊಂಡಿದ್ದಾರೆ.

    ಕಳೆದ ಲೋಕಸಭೆಯಲ್ಲಿ ಅತಿ ಹೆಚ್ಚು ಸೀಟುಗಳು ಗೆಲ್ಲುವ ಮೂಲಕ ಸದ್ದು ಮಾಡಿದ ಬಿಜೆಪಿ ಈ ಬಾರಿ ವಿಧಾನ ಸಭೆಯಲ್ಲಿ ನಿರ್ಲಕ್ಷ್ಯ ಮಾಡುವಂತಿಲ್ಲ. ನೋಟ್ ಬ್ಯಾನ್ ಎಫೆಕ್ಟ್, ಮೋದಿ ಅಲೆ ಮುಖ್ಯವಾಗಿದ್ದು ಸ್ವತಃ ಪ್ರಧಾನ ಮಂತ್ರಿ ಅಖಾಡಕ್ಕೆ ಇಳಿದು ಪ್ರಚಾರದಲ್ಲಿ ಭಾಗವಹಿಸುತ್ತಿದ್ದು,  ಜೊತೆಗೆ ರಾಮ ಮಂದಿರ ನಿರ್ಮಾಣದ ಆಸೆ ತೋರಿಸುವ ಬಿಜೆಪಿ ಗೆಲ್ಲುವ ತಂತ್ರ ಹೆಣೆದಿದೆ. ಇದರ ಜೊತೆಗೆ ಪಶ್ಚಿಮ ಭಾಗದಲ್ಲಿ ಅತಿ ಹೆಚ್ಚು ಪ್ರಭಾವಶಾಲಿಯಾದ ಪಕ್ಷ ಪಕ್ಷ ಆರ್‍ಎಲ್‍ಡಿ. ಆರ್‍ಎಲ್‍ಡಿ ಪ್ರತಿನಿಧಿಸುವ ಜಾಟ್ ಸಮುದಾಯದ ಸಂಖ್ಯೆ ಕಡಿಮೆ ಇದ್ದರೂ ಇತರರ ಮೇಲೆ ಪರಿಣಾಮ ಬೀರುವ ಪ್ರಭಾವ ಜಾಸ್ತಿ. ಮಾಜಿ ಪ್ರಧಾನಿ ಚೌದರಿ ಚರಣ್ ಸಿಂಗ್ ನೇತೃತ್ವದಲ್ಲಿ ಸಾಕಷ್ಟು ರಣ ತಂತ್ರಗಳನ್ನು ಹೂಡಿ ಒಂದಿಷ್ಟು ಸೀಟುಗಳು ಬಾಚ್ಚಿಕೊಳ್ಳುವ ಸಾಧ್ಯತೆಯಿದೆ.

    ಒಟ್ಟಿನಲ್ಲಿ ಮೊದಲ ಹಂತದಲ್ಲಿ ಹೆಚ್ಚು ಖಾತೆಗಳನ್ನು ತೆಗೆಯಲು ಹರ ಸಾಹಸಪಟ್ಟು ಪಕ್ಷಗಳು ಈಗಾಗಲೇ ಸಾಕಷ್ಟು ಪ್ರಚಾರ ಮಾಡಿದೆ. ಅಖಿಲೇಶ್ ಮತ್ತು ರಾಹುಲ್ ಗಾಂಧಿ ಯುವ ನಾಯಕರು, ಯುವಕರ ಮತ ತೆಕ್ಕೆಗೆ ತೆಗೆದುಕೊಳ್ಳುವುವರ ಅಥವಾ ಮೋದಿ ಅಲೆಯಲ್ಲಿ ಆನೆಯೂ ಕೂಡಾ ತೂರಿ ಹೋಗುತ್ತಾ ಎನ್ನುವುದನ್ನು ಮತದಾರ ಪ್ರಭುಗಳು ನಿರ್ಧರಿಸಲಿದ್ದಾರೆ.