Tag: Uttar prdesh

  • ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣ

    ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ ಪೂರ್ಣ

    – ನ.25 ರಂದು ಪ್ರಧಾನಿ ಮೋದಿ ಧ್ವಜಾರೋಹಣ

    ಲಕ್ನೋ: ಅಯೋಧ್ಯೆಯಲ್ಲಿ (Ayodhya) ನಿರ್ಮಾಣವಾಗುತ್ತಿದ್ದ ಶ್ರೀರಾಮ ಮಂದಿರ (Shri Ram Mandir) ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ಮುಖ್ಯ ಮಂದಿರ ಮತ್ತು ಆರು ಇತರೆ ಮಂದಿರಗಳ ನಿರ್ಮಾಣ ಕಾರ್ಯ ಪೂರ್ಣವಾಗಿದೆ ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ತಿಳಿಸಿದೆ.

    ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿರುವ ಟ್ರಸ್ಟ್, ಮಂದಿರದ ನಿರ್ಮಾಣ ಕಾರ್ಯ ಮುಗಿದಿದೆ ಎಂದು ಪ್ರಭು ಶ್ರೀರಾಮನ ಭಕ್ತರಿಗೆ ತಿಳಿಸಲು ಸಂತೋಷವಾಗುತ್ತದೆ. ಮುಖ್ಯಮಂದಿರದ ಜೊತೆಗೆ ಮಹಾದೇವ, ಗಣೇಶ, ಹನುಮಾನ್, ಸೂರ್ಯದೇವ, ಮಾ ಭಗವತಿ ಮತ್ತು ಮಾ ಅನ್ನಪೂರ್ಣ ಜೊತೆಗೆ ಶೇಷಾವತಾರ ಮಂದಿರವೂ ನಿರ್ಮಾಣ ಕಾರ್ಯ ಪೂರ್ಣವಾಗಿದೆ. ಈ ಮಂದಿರಗಳ ಮೇಲೆ ಧ್ವಜಗಳು ಮತ್ತು ಕಲಶವನ್ನು ಸ್ಥಾಪಿಸಲಾಗಿದೆ.

    ಹೆಚ್ಚುವರಿಯಾಗಿ, ಋಷಿ ವಾಲ್ಮೀಕಿ, ಋಷಿ ವಶಿಷ್ಠ, ಋಷಿ ವಿಶ್ವಾಮಿತ್ರ, ಋಷಿ ಅಗಸ್ತ್ಯ, ನಿಷಾದರಾಜಅಯೋ, ಶಬರಿ ಮತ್ತು ದೇವಿ ಅಹಲ್ಯರಿಗೆ ಸಮರ್ಪಿತವಾದ ಏಳು ಮಂಟಪಗಳು ಸಹ ಪೂರ್ಣಗೊಂಡಿವೆ. ಸಂತ ತುಳಸಿದಾಸ ಮಂದಿರವೂ ಪೂರ್ಣಗೊಂಡಿದೆ. ಜಟಾಯು ಮತ್ತು ಅಳಿಲಿನ ಪ್ರತಿಮೆಗಳನ್ನು ನಿರ್ಮಾಣ ಮಾಡಲಾಗಿದೆ.

    ಭಕ್ತರ ಅನುಕೂಲತೆ ಮತ್ತು ವ್ಯವಸ್ಥೆಗಳಿಗೆ ಸಂಬಂಧಿಸಿದ ಎಲ್ಲಾ ಕಾರ್ಯಗಳನ್ನು ಸಂಪೂರ್ಣವಾಗಿ ಪೂರ್ಣಗೊಳಿಸಲಾಗಿದೆ. ರಸ್ತೆ ನಿರ್ಮಾಣ ಮತ್ತು ಕಲ್ಲಿನ ನೆಲಹಾಸು ಹಾಕುವ ಕೆಲಸವನ್ನು ಎಲ್&ಟಿ ಕಂಪನಿ ನಿರ್ವಹಿಸುತ್ತಿದೆ. ಅಲ್ಲದೇ ಮಂದಿರದ ಸುತ್ತ ಹಸಿರಿನಿಂದ ಕಂಗೊಳಿಸುವಂತೆ ಮಾಡುವ ಮತ್ತು 10 ಎಕ್ರೆಗೂ ಹೆಚ್ಚು ವಿಸ್ತೀರ್ಣದ ‘ಪಂಚವಟಿ’ಯ (ಶ್ರೀರಾಮ, ಸೀತೆ, ಲಕ್ಷ್ಮಣ ವನವಾಸದ ಸಮಯದಲ್ಲಿ ನೆಲೆಸಿದ್ದ ಜಾಗದ ಹೆಸರು) ಅಭಿವೃದ್ಧಿ ಕಾರ್ಯವು ತ್ವರಿತಗತಿಯಲ್ಲಿ ಸಾಗುತ್ತಿದೆ. 3.5 ಕಿ.ಮೀ ಉದ್ದದ ತಡೆಗೋಡೆ, ಟ್ರಸ್ಟ್ ಕಚೇರಿ, ಅತಿಥಿ ಗೃಹ, ಸಭಾಂಗಣ ಮುಂತಾದ ಕಾಮಗಾರಿಗಳು ಮಾತ್ರ ನಡೆಯುತ್ತಿವೆ ಎಂದು ಮಾಹಿತಿ ನೀಡಿದೆ.

    ನವೆಂಬರ್ 25 ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಅಯೋಧ್ಯೆಗೆ ಭೇಟಿ ನೀಡಲಿದ್ದು, ಶ್ರೀರಾಮ ಮಂದಿರದ ಧ್ವಜಾರೋಹಣ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಮಾಜದ ವಿವಿಧ ವರ್ಗಗಳನ್ನು ಪ್ರತಿನಿಧಿಸುವ 6,000 ದಿಂದ 8,000 ರಿಂದ ಆಹ್ವಾನಿತರು ಭಾಗವಹಿಸಲಿದ್ದಾರೆ. ರಾಮ ಪರಿವಾರವನ್ನು ದೇವಾಲಯದ ಮೊದಲ ಮಹಡಿಯಲ್ಲಿ ನಿರ್ಮಿಸಿದೆ. ಪ್ರಧಾನಿ ಮೋದಿ ಅವರು ರಾಮ ಪರಿವಾರದಲ್ಲಿ ಆರತಿ ನೆರವೇರಿಸಿ, ದೇವಾಲಯದ ಧ್ವಜಾರೋಹಣ ಮಾಡಲಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷ ನೃಪೇಂದ್ರ ಮಿಶ್ರಾ ತಿಳಿಸಿದ್ದಾರೆ.

  • ಸಿಡಿಲ ಬಡಿತಕ್ಕೆ 35 ಮಂದಿ ಬಲಿ

    ಸಿಡಿಲ ಬಡಿತಕ್ಕೆ 35 ಮಂದಿ ಬಲಿ

    ಲಕ್ನೋ: ಉತ್ತರ ಪ್ರದೇಶದ ಹಲವು ಕಡೆ ನಿರಂತರ ಮಳೆಯಾಗುತ್ತಿದ್ದು, ಸಿಡಿಲು ಬಡಿದು ಸುಮಾರು 35 ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

    ಭಾನುವಾರದಂದು ರಾಜ್ಯದ ವಿವಿಧೆಡೆಯಲ್ಲಿ ಸಿಡಿಲು ಬಡಿದು 35 ಮಂದಿ ಪ್ರಾಣಬಿಟ್ಟಿದ್ದು, 13 ಮಂದಿ ಗಾಯಗೊಂಡಿದ್ದಾರೆ. ಒಂದೇ ದಿನದಲ್ಲಿ ಕಾನ್ಪುರ್ ಮತ್ತು ಫತೇಪುರ್ ಜಿಲ್ಲೆಗಳಲ್ಲಿ ಸಿಡಿಲು ಬಡಿದ ಪರಿಣಾಮ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸಾವನ್ನಪ್ಪ್ದಿದ್ದಾರೆ.

    ವರದಿ ಪ್ರಕಾರ ಕಾನ್ಪುರದಲ್ಲಿ 7 ಮಂದಿ ಹಾಗೂ ಫತೇಪುರದಲ್ಲಿ 7 ಮಂದಿ ಬಲಿಯಾಗಿದ್ದಾರೆ. ಅಲ್ಲದೆ ಝಾನ್ಸಿಯಲ್ಲಿ 5, ಜಾಲೌನ್ ನಲ್ಲಿ 4, ಹಮೀರ್‍ಪುರದಲ್ಲಿ 3 ಮಂದಿ ಸಾವನ್ನಪ್ಪಿದ್ದಾರೆ, ಗಾಜಿಪುರದಲ್ಲಿ 2 ಮತ್ತು ಜಾನ್‍ಪುರದಲ್ಲಿ 1 ಮತ್ತು ಪ್ರತಾಪಗಢದಲ್ಲಿ ಓರ್ವ ವ್ಯಕ್ತಿ ಜೀವಬಿಟ್ಟಿದ್ದಾನೆ.

    ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಿಡಿಲು ಬಡಿದು ಹಾಗೂ ಹಾವು ಕಚ್ಚಿ ಸಾವನ್ನಪ್ಪಿರುವ ಕುಟುಂಬಕ್ಕೆ ಸಂತಾಪ ಸೂಚಿಸಿ, ರಾಜ್ಯದಲ್ಲಿ ಮಳೆಯಿಂದಾಗಿ ಆಗಿರುವ ಸಾರ್ವಜನಿಕ ನಷ್ಟದ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಸಂತ್ರಸ್ತರ ಕುಟುಂಬಕ್ಕೆ ತಲಾ 4 ಲಕ್ಷ ರೂ.ಗಳ ಪರಿಹಾರವನ್ನು ನೀಡುವಂತೆ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ಆದೇಶಿಸಿದ್ದಾರೆ.

    ಅಷ್ಟೇ ಅಲ್ಲದೆ ಸಿಡಿಲ ಬಡಿತಕ್ಕೆ ಗಾಯಗೊಂಡಿರುವ ಮಂದಿಗೂ ಕೂಡ ಸರ್ಮಪಕವಾಗಿ ಚಿಕಿತ್ಸೆ ಒದಗಿಸಿ. ಸಂತ್ರಸ್ತರಿಗೆ ನೀಡುವ ಪರಿಹಾರ ಕಾರ್ಯದಲ್ಲಿ ಲೋಪವಾಗದಂತೆ ನೋಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

  • ಶಾಲಾ ಕಟ್ಟಡದ ಮೇಲೆ ಬಿದ್ದ ಹೈಟೆನ್ಷನ್ ತಂತಿ – 55 ವಿದ್ಯಾರ್ಥಿಗಳಿಗೆ ಗಾಯ

    ಶಾಲಾ ಕಟ್ಟಡದ ಮೇಲೆ ಬಿದ್ದ ಹೈಟೆನ್ಷನ್ ತಂತಿ – 55 ವಿದ್ಯಾರ್ಥಿಗಳಿಗೆ ಗಾಯ

    ಲಕ್ನೋ: ಶಾಲಾ ಕಟ್ಟಡದ ಛಾವಣಿಯ ಮೇಲೆ 11,000 ಕೆವಿ ಅಧಿಕ ಒತ್ತಡದ ತಂತಿ(ಹೈಟೆನ್ಷನ್ ವೈರ್) ಬಿದ್ದು, ಸುಮಾರು 55 ಮಂದಿ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಲರಾಂಪುರ ಜಿಲ್ಲೆಯಲ್ಲಿ ನಡೆದಿದೆ.

    ಸೋಮವಾರದಂದು ಬಲರಾಂಪುರ ಜಿಲ್ಲೆಯ ಉಟ್ರೌಲಾದ ವಿಷ್ಣುಪುರ ಸರ್ಕಾರಿ ಪ್ರಾಥಮಿಕ ಕಟ್ಟಡದ ಛಾವಣಿಯ ಮೇಲೆ 11,000 ಕೆವಿಗೂ ಅಧಿಕ ಒತ್ತಡದ ತಂತಿ(ಹೈಟೆನ್ಷನ್ ವೈರ್) ಬಿದ್ದು ಈ ಅವಘಡ ಸಂಭವಿಸಿದೆ. ಘಟನೆ ನಡೆದ ಸಂದರ್ಭದಲ್ಲಿ ಶಾಲೆಯಲ್ಲಿ ಸುಮಾರು 100 ಮಕ್ಕಳಿದ್ದರು ಎನ್ನಲಾಗಿದ್ದು, 55 ಮಕ್ಕಳಿಗೆ ಸುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.

    ಸದ್ಯ ಗಾಯಗೊಂಡ ಮಕ್ಕಳಲ್ಲಿ ಕೆಲವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇನ್ನೂ ಕೆಲವರನ್ನು ಬಲರಾಂಪುರದ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಅಲ್ಲದೆ ನಾಲ್ಕು ಮಕ್ಕಳ ಸ್ಥಿತಿ ಗಂಭೀರವಾಗಿದೆ.

    ಹೈಟೆನ್ಷನ್ ವೈರ್ ಶಾಲಾ ಕಟ್ಟಡದ ಮೇಲೆ ಬಿದ್ದ ತಕ್ಷಣವೇ ವಿದ್ಯುತ್ ಕಡಿತಗೊಳಿಸಿದ್ದರಿಂದ ಹೆಚ್ಚಿನ ಸಾವುನೋವುಗಳಾಗಿಲ್ಲ. ಈ ಬಗ್ಗೆ ತಿಳಿಯುತ್ತಿದ್ದಂತೆ ಆತಂಕಗೊಂಡ ಪೋಷಕರು ಶಾಲೆಗೆ ಧಾವಿಸಿದ್ದು, ಸಿಟ್ಟಿಗೆದ್ದು ಶಾಲಾ ಸಿಬ್ಬಂದಿ ಮೇಲೆ ಕ್ರಿಮಿನಲ್ ನಿರ್ಲಕ್ಷ್ಯದ ಆರೋಪ ಮಾಡಿದ್ದಾರೆ.

    ಅಷ್ಟೇ ಅಲ್ಲದೆ, ಈ ಘಟನೆ ನಡೆದ ಬಳಿಕ ಎಚ್ಚೆತ್ತುಕೊಂಡ ಬಲರಾಂಪುರ ಜಿಲ್ಲಾ ಮ್ಯಾಜಿಸ್ಟ್ರೇಟ್ ಕೃಷ್ಣ ಕರುಣೇಶ್ ಅವರು ಓರ್ವ ಗುತ್ತಿಗೆದಾರರನ್ನು ಸೇವೆಯಿಂದ ತಕ್ಷಣವೇ ವಜಾಗೊಳಿಸಿದ್ದಾರೆ. ಅಲ್ಲದೆ ಸಂಬಂಧಪಟ್ಟ ಕಿರಿಯ ಎಂಜಿನಿಯರ್ ವಿರುದ್ಧವೂ ಇಲಾಖಾ ತನಿಖೆಗೆ ಆದೇಶಿಸಿದ್ದಾರೆ. ಜೊತೆಗೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಗಾಯಗೊಂಡಿರುವ ಶಾಲಾ ಮಕ್ಕಳಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.

    ಈ ಅವಘಡ ಸಂಭವಿಸಿದ್ದು ಹೇಗೆ? ಕಾರಣವೇನು ಎನ್ನುವ ಬಗ್ಗೆ 24 ಗಂಟೆಗಳ ಒಳಗೆ ವರದಿಯನ್ನು ಸಲ್ಲಿಸಿ ಎಂದು ಮಧ್ಯಾಂಚಲ್ ವಿದ್ಯುತ್ ವಿತರಣಾ ನಿಗಮದ ಯೋಜನಾ ನಿರ್ದೇಶಕರಿಗೆ ಆದೇಶಿಸಿದ್ದಾರೆ. ಅಲ್ಲದೇ ತಪ್ಪಿತ್ತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಭರವಸೆಯನ್ನೂ ಕೂಡ ಕೊಟ್ಟಿದ್ದಾರೆ.

    ರಾಜ್ಯದಲ್ಲಿ ಇಂತಹ ಘಟನೆಗಳು ಮತ್ತೆ ನಡೆಯದಂತೆ ನಿಗವಹಿಸಿ, ಜೊತೆಗೆ ಹೈಟೆನ್ಷನ್ ತಂತಿಗಳ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸಿ ಹಾಗೂ ರಾಜ್ಯವ್ಯಾಪಿ ಅಭಿಯಾನ ಆರಂಭಿಸಿ ಎಂದು ಸಿಎಂ ಉತ್ತರ ಪ್ರದೇಶ ವಿದ್ಯುತ್ ನಿಗಮದ ಪ್ರಧಾನ ಕಾರ್ಯದರ್ಶಿ ಮತ್ತು ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.