Tag: uttara karnataka

  • ಮಳೆ ಕಡಿಮೆ ಆಗ್ತಿಲ್ಲ, ಪ್ರವಾಹ ನಿಲ್ಲುತ್ತಿಲ್ಲ- 8 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

    ಮಳೆ ಕಡಿಮೆ ಆಗ್ತಿಲ್ಲ, ಪ್ರವಾಹ ನಿಲ್ಲುತ್ತಿಲ್ಲ- 8 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

    ಬೆಂಗಳೂರು: ವರುಣನ ಆರ್ಭಟಕ್ಕೆ ಉತ್ತರ ಕರ್ನಾಟಕ ನಲುಗಿ ಹೋಗಿದೆ. ಇಂದು ಮತ್ತು ಶನಿವಾರವೂ ಕೂಡ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರಾಜ್ಯದ 8 ಜಿಲ್ಲೆಗಳಲ್ಲಿ ರೆಟ್ ಅಲರ್ಟ್ ಘೋಷಿಸಲಾಗಿದೆ.

    ಬೆಳಗಾವಿ, ಬಾಗಲಕೋಟೆ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲೂ ರಣ ಮಳೆ ರೌದ್ರಸ್ವರೂಪ ತಾಳಿದ್ದು, ಈ ಜಿಲ್ಲೆಗಳಲ್ಲಿ ಶನಿವಾರದವರೆಗೂ ರೆಡ್ ಅಲರ್ಟ್ ವಿಸ್ತರಿಸಲಾಗಿದೆ. ಜಲ ಪ್ರಳಯ ಹಿನ್ನೆಲೆಯಲ್ಲಿ ಇಂದು ಕೂಡ ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಉತ್ತರ ಕನ್ನಡ, ಹಾವೇರಿ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಹಾಸನ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

    ಉತ್ತರ ಕರ್ನಾಟಕ, ಮಲೆನಾಡು, ಕರಾವಳಿಯಲ್ಲಿ ಉಂಟಾಗಿರುವ ಪ್ರವಾಹ ಹಿನ್ನೆಲೆಯಲ್ಲಿ ನೆರೆ ಸಂತ್ರಸ್ತರ ಪರಿಹಾರಕ್ಕಾಗಿ ಕೈಲಾದಷ್ಟು ಹಣಕಾಸು ನೆರವು ನೀಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿದ್ದಾರೆ.

    ಸರ್ಕಾರಕ್ಕೆ ದೇಣಿಗೆ ಕೊಡಬಹುದಾದ ಬ್ಯಾಂಕ್ ಖಾತೆ ವಿವರ:
    ಮುಖ್ಯಮಂತ್ರಿಯವರ ನೈಸರ್ಗಿಕ ವಿಕೋಪ ನಿಧಿ
    ಖಾತೆ ಸಂಖ್ಯೆ – 37887098605
    ಬ್ಯಾಂಕ್ ಮತ್ತು ಶಾಖೆ – ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ವಿಧಾನಸೌಧದ ಶಾಖೆ
    ಐಎಫ್‍ಎಸ್‍ಸಿ ಕೋಡ್ – ಎಸ್‍ಬಿಐಎನ್0040277
    ವಿಳಾಸ – ನಂ.235-ಎ, 2ನೇ ಮಹಡಿ, ಮುಖ್ಯಮಂತ್ರಿ ಪರಿಹಾರ ನಿಧಿ ಶಾಖೆ, ವಿಧಾನಸೌಧ, ಬೆಂಗಳೂರು, -1

  • ಉತ್ತರ ಕರ್ನಾಟಕಕ್ಕೆ ಸಹಾಯ ಮಾಡಿ: ಬಾಲಿವುಡ್ ನಟ ಮನವಿ

    ಉತ್ತರ ಕರ್ನಾಟಕಕ್ಕೆ ಸಹಾಯ ಮಾಡಿ: ಬಾಲಿವುಡ್ ನಟ ಮನವಿ

    ಬೆಂಗಳೂರು: ಉತ್ತರ ಕರ್ನಾಟಕ ಹಾಗೂ ರಾಜ್ಯದ ಇತರೇ ಜಿಲ್ಲೆಗಳು ಭೀಕರ ಪ್ರವಾಹ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕಕ್ಕೆ ಸಹಾಯ ಮಾಡಿ ಎಂದು ಬಾಲಿವುಡ್ ನಟ ಕಬೀರ್ ದುಹಾನ್ ಸಿಂಗ್ ಮನವಿ ಮಾಡಿಕೊಂಡಿದ್ದಾರೆ.

    ಕಬೀರ್ ಸಿಂಗ್ ಅವರು ತಮ್ಮ ಟ್ವಿಟ್ಟರಿನಲ್ಲಿ, “ಪ್ರವಾಹದಿಂದ ಸಿಲುಕಿರುವ ಉತ್ತರ ಕರ್ನಾಟಕ ಜನರಿಗೆ ದಯವಿಟ್ಟು ಸಹಾಯ ಮಾಡಿ. ಯಾವುದೇ ರೀತಿಯಲ್ಲಿ ಬೇಕಾದರೂ ಸಹಾಯ ಮಾಡಿ” ಎಂದು ಟ್ವೀಟ್ ಮಾಡುವ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಕಬೀರ್ ಅವರ ಟ್ವೀಟ್‍ಗೆ ಅಭಿಮಾನಿಗಳು ನಾವು ಅವರ ಜೊತೆ ಇದ್ದೇವೆ ಎಂದು ರೀ-ಟ್ವೀಟ್ ಮಾಡುವ ಮೂಲಕ ಸ್ಪಂದಿಸಿದ್ದಾರೆ. ಕಬೀರ್ ಸಿಂಗ್ ಅವರು ಈ ಹಿಂದೆ ಕಿಚ್ಚ ಸುದೀಪ್ ಅವರ ಜೊತೆ ‘ಹೆಬ್ಬುಲಿ’ ಚಿತ್ರದಲ್ಲಿ ಖಳನಾಯಕನ ಪಾತ್ರದಲ್ಲಿ ನಟಿಸಿದ್ದರು.

    ಗೋಲ್ಡನ್ ಸ್ಟಾರ್ ಗಣೇಶ್ ಅವರು ಕೂಡ ತಮ್ಮ ಟ್ವಿಟ್ಟರಿನಲ್ಲಿ, “ನಮ್ಮ ಕರ್ನಾಟಕದ ನೆಲವನ್ನು ಬಹುಪಾಲು ಜಲ ಆವರಿಸಿಕೊಂಡಿದೆ. ಪ್ರವಾಹದ ಅಬ್ಬರಕ್ಕೆ ಉತ್ತರ ಕರ್ನಾಟಕ ತತ್ತರಿಸಿದೆ. ಸಂಕಷ್ಟದಲ್ಲಿ ಇರುವವರಿಗೆ ಸಹಾಯ ಹಸ್ತ ಚಾಚುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ನಮ್ಮಿಂದ ಸಾಧ್ಯವಾದದ್ದನ್ನು ನೆರೆ ಸಂತ್ರಸ್ತರಿಗೆ ತಲುಪಿಸೋಣ. ಇದು ನನ್ನ ಹೃದಯಾಂತರಾಳದ ಕೋರಿಕೆ” ಎಂದು ಟ್ವೀಟ್ ಮಾಡಿದ್ದಾರೆ.

    ಗಣೇಶ್ ಅಲ್ಲದೆ ಸ್ಯಾಂಡಲ್‍ವುಡ್ ಕಲಾವಿದರಾದ ದರ್ಶನ್, ಸುದೀಪ್, ಜಗ್ಗೇಶ್, ಶ್ರೀಮುರಳಿ, ಚಂದನ್ ಶೆಟ್ಟಿ, ಉಪೇಂದ್ರ ಸೇರಿದಂತೆ ಹಲವರು ಉತ್ತರ ಕರ್ನಾಟಕಕ್ಕೆ ಸಹಾಯ ಮಾಡುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

  • ಅತೃಪ್ತರಿಗಾಗಿ ವಿಶೇಷ ವ್ಯವಸ್ಥೆ ಮಾಡ್ದೋರು ಜನಕ್ಕಾಗಿ ಏನೂ ಮಾಡ್ತಿಲ್ಲ- ಸಿಎಂಗೆ ಜೆಡಿಎಸ್ ಟಾಂಗ್

    ಅತೃಪ್ತರಿಗಾಗಿ ವಿಶೇಷ ವ್ಯವಸ್ಥೆ ಮಾಡ್ದೋರು ಜನಕ್ಕಾಗಿ ಏನೂ ಮಾಡ್ತಿಲ್ಲ- ಸಿಎಂಗೆ ಜೆಡಿಎಸ್ ಟಾಂಗ್

    ಬೆಂಗಳೂರು: ಅತೃಪ್ತ ಶಾಸಕರನ್ನು ಮುಂಬೈಗೆ ಕಳುಹಿಸಲು ವಿಶೇಷ ವಿಮಾನ ವ್ಯವಸ್ಥೆ, ಉಳಿಯಲು 5 ಸ್ಟಾರ್ ಹೋಟೆಲ್ ವ್ಯವಸ್ಥೆ ಮಾಡಿದವರು ಪ್ರವಾಹ ಸಂತ್ರಸ್ಥರಿಗೆ ಒಂದು ಹೆಲಿಕಾಪ್ಟರ್ ವ್ಯವಸ್ಥೆ ಕೂಡ ಮಾಡಿಲ್ಲ ಎಂದು ಜೆಡಿಎಸ್ ಮತ್ತೆ ಸಿಎಂ ಹಾಗೂ ಬಿಜೆಪಿಗೆ ಟಾಂಗ್ ಕೊಟ್ಟಿದೆ.

    ಈ ಬಗ್ಗೆ ಟ್ವೀಟ್ ಮಾಡಿರುವ ಜೆಡಿಎಸ್, ಅತೃಪ್ತ ಶಾಸಕರನ್ನ ಮುಂಬೈಗೆ ಕಳುಹಿಸಲು ವಿಶೇಷ ವಿಮಾನ ವ್ಯವಸ್ಥೆ ಕಲ್ಪಿಸಿದವರು ಇಂದು ಬಡ ಜನರು ಪ್ರವಾಹದಲ್ಲಿ ಸಾಯುತ್ತಿದ್ದರೂ ಒಂದು ಹೆಲಿಕಾಪ್ಟರ್ ವ್ಯವಸ್ಥೆ ಕೂಡಾ ಮಾಡಿಲ್ಲ. ಅತೃಪ್ತ ಶಾಸಕರಿಗೆ ಮುಂಬೈನಲ್ಲಿ ಉಳಿಯಲು 5 ಸ್ಟಾರ್ ಹೋಟೆಲ್ ವ್ಯವಸ್ಥೆ ಮಾಡಿದವರು ಇಂದು ಬಡ ಜನರಿಗೆ ಗಂಜಿ ಕೇಂದ್ರವನ್ನೂ ಸ್ಥಾಪಿಸಿಲ್ಲ ಎಂದು ಬಿಜೆಪಿಯ ಕಾಲೆಳೆದಿದೆ. ಇದನ್ನೂ ಓದಿ: ಯಡಿಯೂರಪ್ಪ ಎಲ್ಲಿದ್ದೀಯಪ್ಪ – ಸಿಎಂಗೆ ಎಚ್‍ಡಿಕೆ ಟಾಂಗ್

    ಪ್ರವಾಹದಿಂದ ಉತ್ತರ ಕರ್ನಾಟಕದ ನೂರಾರು ಹಳ್ಳಿಗಳು ಮುಳುಗಿ ಹೋಗಿವೆ. ಸರ್ಕಾರ ನಮ್ಮನ್ನು ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ರವಾನಿಸಬಹುದು ಎಂಬ ನಿರೀಕ್ಷೆಯಲ್ಲಿ ಜನರು ಸಹಾಯಕ್ಕಾಗಿ ಅಧಿಕಾರಿಗಳ ಬಳಿ ಅಂಗಲಾಚುತ್ತಿದ್ದಾರೆ. ಆದರೆ ಸರ್ಕಾರ ಇವರ ನೆರವಿಗೂ ಬಾರದೇ, ಸೇನಾ ಹೆಲಿಕಾಪ್ಟರ್ ನೆರವು ಕೂಡ ಕೇಳದೇ ಇರುವುದು ದುರದೃಷ್ಟಕರ ಎಂದು ಕಿಡಿಕಾರಿದೆ.

    ಬುಧವಾರ ಸರಣಿ ಟ್ವೀಟ್ ಮಾಡಿ ಸಿಎಂ ಅವರನ್ನು ಜೆಡಿಎಸ್ ಟೀಕಿಸಿತ್ತು. ರೋಮ್ ಹೊತ್ತಿ ಉರಿಯುವಾಗ ದೊರೆ ನೀರೋ ಪಿಟೀಲು ಬಾರಿಸುತ್ತಿದ್ದ, ಹಾಗೆಯೇ ಉತ್ತರ ಕರ್ನಾಟಕ ಭಾರೀ ಮಳೆಯಿಂದ ಜರ್ಜರಿತವಾಗಿರುವಾಗ ಯಡಿಯೂರಪ್ಪನವರು ದೆಹಲಿಗೆ ಹೋಗಿ ಕುಳಿತಿದ್ದಾರೆ. ಕರ್ನಾಟಕದಲ್ಲಿ ಸಮಸ್ಯೆ ಹೇಳಿಕೊಳ್ಳೋಕೆ ಮಂತ್ರಿಮಂಡಲವೂ ಇಲ್ಲ. ಇದೇನಾ ನಿಮ್ಮ ಜನಮೆಚ್ಚಿನ ಆಡಳಿತ ಮರ್ಯಾದಾ ಪುರುಷೋತ್ತಮರೇ, ಇದೇನಾ ನಿಮ್ಮ ಜನ ಮೆಚ್ಚಿನ ಆಡಳಿತ ಮರ್ಯಾದ ಪುರುಷೋತ್ತಮರೇ ಎಂದು ವ್ಯಂಗ್ಯವಾಗಿ ಟ್ವೀಟ್ ಮಾಡಿತ್ತು.

    ನಂತರ ಎರಡನೇ ಟ್ವೀಟ್‍ನಲ್ಲಿ ಸರ್ಕಾರ ಕಾಣೆಯಾಗಿದೆ. ಕರ್ನಾಟಕದ ಹಲವಾರು ಪ್ರದೇಶಗಳಲ್ಲಿ ಅತಿವೃಷ್ಟಿಯಿಂದ ಜನ ನರಳುತ್ತಿದ್ದಾರೆ. ಇದೂವರೆಗೂ ಗಂಜಿ ಕೇಂದ್ರವನ್ನು ಸರ್ಕಾರ ಸ್ಥಾಪಿಸಿಲ್ಲ. ಪರ್ಯಾಯ ವಸತಿ ವ್ಯವಸ್ಥೆ ಕಲ್ಪಿಸಿಲ್ಲ. ಮುಖ್ಯಮಂತ್ರಿ ಇಲ್ಲ, ಮಂತ್ರಿಯೂ ಇಲ್ಲ ಎಂದು ಹೇಳುವ ಮೂಲಕ ಬಿಎಸ್‍ವೈ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು.

  • ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಗೆ ಉತ್ತರ ಕರ್ನಾಟಕ ತತ್ತರ- ಭೀಮಾತೀರದಲ್ಲಿ ನೀರಿಗಾಗಿ ಹಾಹಾಕಾರ

    ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಗೆ ಉತ್ತರ ಕರ್ನಾಟಕ ತತ್ತರ- ಭೀಮಾತೀರದಲ್ಲಿ ನೀರಿಗಾಗಿ ಹಾಹಾಕಾರ

    ರಾಯಚೂರು/ಬಾಗಲಕೋಟೆ/ಕಲಬುರಗಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಕುಂಭದ್ರೋಣ ಮಳೆಯಿಂದ ಉತ್ತರ ಕರ್ನಾಟಕ ತತ್ತರಿಸಿ ಹೋಗಿದೆ. ಅದರಲ್ಲೂ ಕೃಷ್ಣಾ ನದಿ ಪಾತ್ರದ ಜಿಲ್ಲೆಗಳು ಅಕ್ಷರಶಃ ಜಲಾವೃತಗೊಂಡು, ಲಕ್ಷಾಂತರ ಜನರು ಸಂತ್ರಸ್ತರಾಗಿದ್ದಾರೆ. ಅಲ್ಲದೆ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಸಿಎಂ ವೈಮಾನಿಕ ಸಮೀಕ್ಷೆ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ನಾರಾಯಣಪುರ ಜಲಾಶಯದಿಂದ ದಿನದಿಂದ ದಿನಕ್ಕೆ ಹೆಚ್ಚು ಪ್ರಮಾಣದಲ್ಲಿ ಕೃಷ್ಣಾ ನದಿಗೆ ನೀರು ಹರಿಬಿಡಲಾಗುತ್ತಿದೆ. ಇದರಿಂದ ರಾಯಚೂರು ಜಿಲ್ಲೆಯಲ್ಲಿ ಪ್ರವಾಹ ಭೀತಿ ಎದುರಾಗಿದೆ. ಜೊತೆಗೆ ಲಿಂಗಸುಗೂರು ತಾಲೂಕಿನಲ್ಲಿ ಹಲವಾರು ಜಮೀನುಗಳಿಗೆ ನೀರು ನುಗ್ಗಿದ್ದು, ಈ ಭಾಗದ ಜನರು ಸುರಕ್ಷಿತ ಪ್ರದೇಶಗಳಿಗೆ ಬಂದಿದ್ದಾರೆ.

    ಮಹಾರಾಷ್ಟ್ರದಲ್ಲಿಯ ಮಹಾಮಳೆಗೆ, ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಬಹುತೇಕ ಗ್ರಾಮಗಳು ನಡುಗಡ್ಡೆಗಳಾಗಿವೆ. ಚಿಕ್ಕಪಡಸಲಗಿ ಬ್ಯಾರೇಜ್‍ಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಜನ ಆತಂಕದ ಪರಿಸ್ಥಿತಿಯಲ್ಲಿದ್ದಾರೆ. ಬ್ಯಾರೇಜ್ ಜಲಾವೃತವಾಗಲು ಕೇವಲ 2 ಮೀಟರ್ ಅಂತರ ಮಾತ್ರವಿದೆ. ಇನ್ನೂ ಹೆಚ್ಚಿನ ಪ್ರಮಾಣದ ನೀರು ಹರಿದು ಬರುವ ನಿರೀಕ್ಷೆ ಇರುವುದರಿಂದ ಬ್ಯಾರೇಜ್ ಮೇಲಿನ ಧಾರವಾಡ-ವಿಜಯಪುರ ರಾಜ್ಯ ಹೆದ್ದಾರಿ ಸಂಪರ್ಕ ಕಡಿದುಕೊಳ್ಳುವ ಸಾಧ್ಯತೆ ಇದೆ.

    ತೋಟ, ಜಾನುವಾರಿಗಳಿಗಾಗಿ ರೈತನ ಗೋಳಾಟ:
    ಲಿಂಗಸುಗೂರು ತಾಲೂಕಿನಲ್ಲಿ ಜಲಾವೃತಗೊಂಡ ಭಾಗದ ಜನರೆಲ್ಲರೂ ತೋಟಗಳನ್ನು ಬಿಟ್ಟು ಸುರಕ್ಷಿತ ಪ್ರದೇಶಗಳಿಗೆ ಬಂದಿದ್ದರೆ, ಆದರೆ ತಾವದಗಡ್ಡೆ ರೈತ ಮೇಲಪ್ಪ ಮಾತ್ರ ದಾಳಿಂಬೆ ತೋಟವನ್ನ ಬಿಟ್ಟು ಬಂದಿರಲಿಲ್ಲ. ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಸದ್ಯ ರೈತ ಮೇಲಪ್ಪ ಅವರು ತೋಟದ ಮನೆಯಲ್ಲಿರುವ ಹಸು, ಕುರಿ, ಆಡು, ಕೋಳಿ, ಎರಡು ನಾಯಿ, ಒಂದು ಬೈಕನ್ನು ನಡುಗಡ್ಡೆಯಿಂದ ಹೊರಗೆ ಸಾಗಿಸದಿದ್ದರೆ ಪುನಃ ಜಮೀನಿಗೆ ತೆರಳುವುದಾಗಿ ರೈತ ಹೇಳುತ್ತಿದ್ದಾರೆ. ಆದರೆ ಜಿಲ್ಲಾಡಳಿತ ರೈತನ ಜಾನುವಾರು ಹಾಗೂ ಸ್ವತ್ತನ್ನ ರಕ್ಷಣೆ ಮಾಡುವ ಕಾರ್ಯಕ್ಕೆ ಇದುವರೆಗೂ ಮುಂದಾಗಿಲ್ಲ.

    ನೀರಿಲ್ಲದೆ ಬರಿದಾದ ಭೀಮಾತೀರ:
    ಒಂದೆಡೆ ಉತ್ತರ ಕರ್ನಾಟಕದಲ್ಲಿ ಪ್ರವಾಹ ಉಂಟಾಗಿದೆ. ನದಿಗಳಿಂದ ಹರಿದು ಬರುತ್ತಿರುವ ನೀರನ್ನು ಹಿಡಿದಿಟ್ಟುಕೊಳ್ಳೋಕೆ ಡ್ಯಾಮ್‍ಗಳಿಂದ ಸಾಧ್ಯವಾಗುತ್ತಿಲ್ಲ. ಅಷ್ಟರ ಮಟ್ಟಿಗೆ ನೀರು ಹರಿದು ಬರುತ್ತಿದೆ. ಆದರೆ, ಇಷ್ಟಲ್ಲ ಮಳೆಯ ನಡುವೆ ವಿಪರ್ಯಾಸ ಎನ್ನುವಂತೆ ಅದೇ ಉತ್ತರ ಕರ್ನಾಟಕದ ಕಲಬುರಗಿಯ ಭೀಮಾ ತೀರದಲ್ಲಿ ನೀರಿಗೆ ಹಾಹಾಕಾರ ಎದ್ದಿದೆ. ಜಿಲ್ಲೆಯಲ್ಲಿ ಜನರಿಗೆ ಬಕೆಟ್ ಲೆಕ್ಕದಲ್ಲಿ ನೀರು ಮಾರಾಟವಾಗುತ್ತಿದೆ.

  • ಸಿಎಂ ಉತ್ತರ ಕರ್ನಾಟಕ ಭಾಗದವರನ್ನು ನೋಡಿದರೆ ಉರಿದು ಬೀಳ್ತಾರೆ: ಶ್ರೀರಾಮುಲು

    ಸಿಎಂ ಉತ್ತರ ಕರ್ನಾಟಕ ಭಾಗದವರನ್ನು ನೋಡಿದರೆ ಉರಿದು ಬೀಳ್ತಾರೆ: ಶ್ರೀರಾಮುಲು

    ವಿಜಯಪುರ: ಮುಖ್ಯಮಂತ್ರಿಗಳು ತಾಳ್ಮೆಯಿಂದ ಇರಬೇಕಾಗಿತ್ತು. ಉತ್ತರ ಕರ್ನಾಟಕ ಭಾಗದವರನ್ನು ನೋಡಿದರೆ ಉರಿದು ಬೀಳುತ್ತಾರೆ. ಕಾವೇರಿ ಹೋರಾಟಗಳಿಗೆ ಬ್ರದರ್ ಎಂದು ಸ್ಪಂದಿಸುವ ಸಿಎಂ ಉತ್ತರ ಕರ್ನಾಟಕ ಭಾಗದ ಕೃಷ್ಣಾ, ತುಂಗಭದ್ರಾ, ಘಟಪ್ರಭಾ ಹೋರಾಟಗಳಿಗೆ ಯಾಕೆ ಸ್ಪಂದಿಸಲ್ಲ ಎಂದು ಬಿಜೆಪಿ ಮುಖಂಡ ಶ್ರೀರಾಮುಲು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಲೋಕಸಭಾ ಚುನಾವಣೆಯಲ್ಲಿ ತಮ್ಮ ತಂದೆ ಹಾಗೂ ಪುತ್ರನ ಸೋಲಿನ ಸಿಟ್ಟನ್ನು ಉತ್ತರ ಕರ್ನಾಟಕ ಜನರ ಮೇಲೆ ಹಾಕುತ್ತಿದ್ದಾರೆ ಎಂದು ಜರಿದರು. ಮಧ್ಯಂತರ ಚುನಾವಣೆ ಹೇಳಿಕೆಗಳು ಕಾಂಗ್ರೆಸ್ ಜೆಡಿಎಸ್ ಜಂಟಿಯಾಗಿ ನಡೆಸುತ್ತಿರುವ ನಾಟಕ. ಸಿದ್ದರಾಮಯ್ಯ ವರ್ಚಸ್ಸು ಕಳೆದುಕೊಂಡಿದ್ದಾರೆ. ಅವರ ತವರು ಜಿಲ್ಲೆ ಹಳೆಯ ಮೈಸೂರಲ್ಲೂ ವರ್ಚಸ್ಸಿಲ್ಲ. ಸಿದ್ದು ಅಂತ್ಯಕಾಲ ಆರಂಭವಾಗಿದೆ ಎಂದರು.

    ಅಲ್ಲದೆ ಸಿದ್ದರಾಮಯ್ಯನವರಿಗಿಂತಲೂ ಹಳೆಯ ಕಾಂಗ್ರೆಸ್ ನಾಯಕರು ರೋಷನ್ ಬೇಗ್ ಅವರಂಥ ಹಿರಿಯ ಕೈ ನಾಯಕರನ್ನು ಉಚ್ಛಾಟಿಸಿದ್ದು ಸಿದ್ದರಾಮಯ್ಯ ಹಠಕ್ಕೆ ಸಾಕ್ಷಿ ಎಂದು ಬೇಗ್ ಪರ ಬ್ಯಾಟಿಂಗ್ ಮಾಡಿದರು. ಕಾಂಗ್ರೆಸ್‍ನಲ್ಲಿ ನಂದೇ ನಡೆಯಬೇಕೆಂಬುದು ಸಿದ್ದರಾಮಯ್ಯ ಹಠ. ಮೈತ್ರಿ ಸರ್ಕಾರ ನಡೆಸಲು ಆಗದಿದ್ದರೆ ಅಧಿಕಾರ ಬಿಟ್ಟು ಕೊಡಿ. ನಾವು ಸರ್ಕಾರ ರಚಿಸಲು ರಾಜ್ಯಪಾಲರನ್ನು ಕೇಳುತ್ತೇವೆ. ಅವರು ಅವಕಾಶ ಕೊಟ್ಟರೆ ಸರ್ಕಾರ ರಚಿಸುತ್ತೇವೆ ಎಂದರು.

    ಪ್ರಸನ್ನಾನಂದಪುರಿ ವಾಲ್ಮೀಕಿ ಸ್ವಾಮೀಜಿ ಸಿಎಂ ಅವರಿಗೆ ಅವಹೇಳನಕಾರಿಯಾಗಿ ಮಾತನಾಡಿಲ್ಲ. ಪ್ರಸನ್ನಾನಂದಪುರಿ ಸ್ವಾಮಿಗಳ ಬೇಡಿಕೆಗೆ ಸರ್ಕಾರ ಸ್ಪಂದಿಸಿಲ್ಲ. ಅದಕ್ಕೆ ಅವರ ನೇತೃತ್ವದಲ್ಲಿ ಪ್ರತಿಭಟನೆ ಮಾಡಿದ್ದೇವು. ಯಾರನ್ನು ಅಪಮಾನ ಮಾಡುವ ಕೆಲಸ ಸ್ವಾಮೀಜಿ ಮಾಡಿಲ್ಲ ಎಂದು ಸ್ವಾಮಿಜಿಗಳನ್ನು ಸಮರ್ಥಿಸಿಕೊಂಡರು. ಅಲ್ಲದೆ ಅಪ್ಪ ಎಂದರೆ ಉತ್ತರ ಕರ್ನಾಟಕದಲ್ಲಿ ತಂದೆಗೆ ಸಮಾನ ಅಷ್ಟೇ ಎಂದು ಸ್ವಾಮಿಜಿ ಹೇಳಿಕೆಗೆ ಸಮಾಜಾಯಿಸಿ ಕೊಟ್ಟರು.

  • ಮುಧೋಳದಲ್ಲಿ ಉತ್ತರಕರ್ನಾಟಕ ಪ್ರತ್ಯೇಕ ರಾಜ್ಯ ಧ್ವಜಾರೋಹಣ

    ಮುಧೋಳದಲ್ಲಿ ಉತ್ತರಕರ್ನಾಟಕ ಪ್ರತ್ಯೇಕ ರಾಜ್ಯ ಧ್ವಜಾರೋಹಣ

    ಬಾಗಲಕೋಟೆ: ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಘೋಷಿಸಬೇಕು ಎಂದು ಆಗ್ರಹಿಸಿ ಮುಧೋಳ ನಗರದಲ್ಲಿರುವ ಉತ್ತರ ಕರ್ನಾಟಕ ಹೋರಾಟ ಸಮಿತಿ ಉಪಕಚೇರಿ ಆವರಣದಲ್ಲಿ ಇಂದು ಧ್ವಜಾರೋಹಣ ನೆರವೇರಿಸಲಾಯಿತು.

    ಮುಧೋಳ ನಗರದಲ್ಲಿ ಉತ್ತರ ಕರ್ನಾಟಕ ಹೋರಾಟ ಸಮಿತಿ ಸದಸ್ಯರು ಪ್ರತ್ಯೇಕ ರಾಜ್ಯಕ್ಕಾಗಿ ಕರ್ನಾಟಕ ಧ್ವಜವನ್ನು ಬಿಟ್ಟು ಹೊಸ ಧ್ವಜವನ್ನು ರಚಿಸಿ ಧ್ವಜಾರೋಹಣ ನಡೆಸಿದ್ದಾರೆ. ಇಂದು ಬೆಳಿಗ್ಗೆ 9 ಗಂಟೆಗೆ ಉತ್ತರ ಕರ್ನಾಟಕ ಹೋರಾಟ ಸಮಿತಿ ಉಪಕಚೇರಿ ಆವರಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿದೆ.

    ಸೆಪ್ಟೆಂಬರ್ 23 2018 ರಂದು ಬಾಗಲಕೋಟೆ ನಗರದಲ್ಲಿ ಹೋರಾಟ ಸಮಿತಿ ಸದಸ್ಯರು ಪಂಚನಿರ್ಣಯ ಕೈಗೊಂಡಿದ್ದರು. ಆಗ ಜನವರಿ 1ರಂದು ಪ್ರತ್ಯೇಕ ಧ್ವಜಾರೋಹಣದ ಮಾಡಬೇಕು ಎಂದು ಹೋರಾಟಗಾರರು ನಿರ್ಧರಿಸಿದ್ದರು. ಇಂದು ಧ್ವಜಾರೋಹಣ ನಡೆಸಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

    ಈ ಪ್ರತ್ಯೇಕ ಧ್ವಜವು 4 ಬಣ್ಣಗಳಿಂದ ಕೂಡಿದ್ದು, ಮಧ್ಯದಲ್ಲಿ ಉತ್ತರ ಕರ್ನಾಟಕದ ನಕ್ಷೆಯನ್ನು ಒಳಗೊಂಡಿದೆ. ಕೇಸರಿ, ಹಳದಿ, ಹಸಿರು ಬಣ್ಣದ ಮಧ್ಯೆ ನೀಲಿ ವರ್ಣದ ಉತ್ತರ ಕರ್ನಾಟಕ ನಕ್ಷೆಯ ಧ್ವಜವನ್ನು ಅನಾವರಣ ಮಾಡಲಾಗಿದೆ. ಈ ಪ್ರತ್ಯೇಕ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಉತ್ತರ ಕರ್ನಾಟಕ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ನಾಗೇಶ್ ಗೋಲಶೆಟ್ಟಿ ಸೇರಿದಂತೆ ಇತರೇ ಹೋರಾಟಗಾರರು ಭಾಗಿಯಾಗಿದ್ದರು.

    ಒಟ್ಟು ಉತ್ತರ ಕರ್ನಾಟಕದ ಹದಿಮೂರು ಜಿಲ್ಲೆಗಳು ಒಳಗೊಂಡ ನಕ್ಷೆಯನ್ನು ಧ್ವಜದ ಮಧ್ಯೆ ರೂಪಿಸಲಾಗಿದೆ. ಹಾಗೆಯೇ ಕೇಸರಿ ಬಣ್ಣ ಧೈರ್ಯ, ಶೌರ್ಯದ ಸಂಕೇತವಾದರೆ, ಹಳದಿ ಹೊಸತನದ ಸಂಕೇತ, ಹಸಿರು ಸಮೃದ್ಧಿಯ ಸಂಕೇತ ಹಾಗೂ ನೀಲಿ ವಿಶಾಲತೆಯ ಸಂಕೇತ ಎಂದು ಹೊಸ ಧ್ವಜದಲ್ಲಿ ಬಳಸಿರುವ ಬಣ್ಣಗಳ ಕುರಿತು ಹೋರಾಟಗಾರರು ತಿಳಿಸಿದರು.

    ಈ ವೇಳೆ ಹೋರಾಟ ಸಮಿತಿಯ ಪ್ರಧಾನ ಕಾರ್ಯದರ್ಶಿ ನಾಗೇಶ್ ಗೋಲಶೆಟ್ಟಿ ಭಾಷಣ ಮಾಡಿ, ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕೆಂಬ ಉದ್ದೇಶದಿಂದ ಹೀಗೆ ನೂತನ ಧ್ವಜವನ್ನು ಸೃಷ್ಟಿಸಿ ಧ್ವಜಾರೋಹಣ ಮಾಡಿದ್ದೇವೆ. ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿ. ಆಗ ಇಲ್ಲಿನ ಮನೆ ಮನೆಯಲ್ಲೂ ಈ ಧ್ವಜವನ್ನು ಹಾರಿಸೋಣ ಎಂದು ಹೇಳಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಂಪುಟ ವಿಸ್ತರಣೆಯೋ? ಸರ್ಜರಿಯೋ? – ಡಿ.22ಕ್ಕೆ ಮುಹೂರ್ತ ಫಿಕ್ಸ್

    ಸಂಪುಟ ವಿಸ್ತರಣೆಯೋ? ಸರ್ಜರಿಯೋ? – ಡಿ.22ಕ್ಕೆ ಮುಹೂರ್ತ ಫಿಕ್ಸ್

    ಹುಬ್ಬಳ್ಳಿ: ಸಚಿವ ಸಂಪುಟ ವಿಸ್ತರಣೆಯೂ ಆಗಬಹುದು ಇಲ್ಲವೇ ಸರ್ಜರಿಯೂ ಆಗಬಹುದು. ಡಿ. 22ರದು ಎಲ್ಲವೂ ತಿಳಿಯುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

    ಉತ್ತರ ಕರ್ನಾಟಕದ ಆಕಾಂಕ್ಷಿಗಳಿಗೆ ಅನ್ಯಾಯವಾಗದಂತೆ ಸಂಪುಟ ವಿಸ್ತರಣೆಯಾಗಲಿದೆ. ಯಾರನ್ನೂ ಸಮಾಧಾನ ಪಡಿಸುವ ಉದ್ದೇಶದಿಂದ ಸಂಪುಟ ವಿಸ್ತರಣೆ ಮಾಡುತ್ತಿಲ್ಲ. ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಇಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಲಾಗುವುದು. ಸಚಿವ ಸಂಪುಟ ವಿಸ್ತರಣೆ ಆಗಬಹುದು ಇಲ್ಲವೇ ಸರ್ಜರಿಯೂ ಆಗಬಹುದು. ಅದನ್ನು ಈಗ ಹೇಳುವುದಕ್ಕೆ ಆಗುವುದಿಲ್ಲ ಡಿ.22 ರಂದು ಎಲ್ಲವೂ ಗೊತ್ತಾಗಲಿದೆ ಎಂದು ದಿನೇಶ್ ಗುಂಡುರಾವ್ ಪ್ರತಿಕ್ರಿಯಿಸಿದ್ದಾರೆ.

    ಸದ್ಯ ಸಮ್ಮಿಶ್ರ ಸರ್ಕಾರದಲ್ಲಿ ಕೆಲವರಿಗೆ ಮಂತ್ರಿಗಳಾಗಬೇಕು ಎಂಬ ಆಸೆ ಇದೆ. ಆದರೆ ಎಲ್ಲರೂ ಮಂತ್ರಿಯಾಗುವುದಕ್ಕೆ ಸಾಧ್ಯವಿಲ್ಲ. ಪ್ರಾಂತ್ಯ, ಜಾತಿ ಜನಾಂಗದ ಮೇಲೆ ಪ್ರಾತಿನಿಧ್ಯ ನೀಡಲಾಗುವುದು. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ. ನಾವೆಲ್ಲರೂ ಒಗ್ಗಾಟ್ಟಾಗಿದ್ದು, ಎಲ್ಲರೂ ಒಗ್ಗಟ್ಟಾಗಿ ಮುಂದಿನ ಚುನಾವಣೆಗೆ ತಯಾರಾಗಲಿದ್ದೇವೆ. ಉತ್ತರ ಕರ್ನಾಟಕದ ಅಭಿವೃದ್ಧಿ ಸರ್ಕಾರದ ಜವಾಬ್ದಾರಿ. ಸಮ್ಮಿಶ್ರ ಸರ್ಕಾರ ಅಖಂಡ ಕರ್ನಾಟಕದ ಅಭಿವೃದ್ಧಿಗೆ ಶ್ರಮಿಸಲಿದೆ ಎಂದರು.

    ಶಾಸಕಾಂಗ ಸಭೆಗೆ ಶಾಸಕರು ಗೈರು ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಶಾಸಕಾಂಗ ಸಭೆಗಳಲ್ಲಿ ಬಹಳಷ್ಟು ಶಾಸಕರು ಗೈರಾಗಿಲ್ಲ. ಬೇರೆ ಬೇರೆ ಕಾರಣಗಳಿಂದ ಕೆಲವು ಶಾಸಕರು ಹಾಜರಾಗಿಲ್ಲ ಅಷ್ಟೇ ಎಂದು ಅವರು ಸ್ಪಷ್ಟಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪ್ರತ್ಯೇಕ ರಾಜ್ಯ ಕೇಳುವ ನಾಯಕರು ಉ.ಕರ್ನಾಟಕದ ಮುಖ್ಯಮಂತ್ರಿ ಆಕಾಂಕ್ಷಿಗಳು: ಸೊಬರದಮಠ

    ಪ್ರತ್ಯೇಕ ರಾಜ್ಯ ಕೇಳುವ ನಾಯಕರು ಉ.ಕರ್ನಾಟಕದ ಮುಖ್ಯಮಂತ್ರಿ ಆಕಾಂಕ್ಷಿಗಳು: ಸೊಬರದಮಠ

    ಗದಗ: ಪ್ರತ್ಯೇಕ ರಾಜ್ಯದ ಧ್ವನಿ ಎತ್ತಿರುವ ನಾಯಕರು ಉತ್ತರ ಕರ್ನಾಟಕ ರಚನೆಯಾದ ಮೇಲೆ ಮುಖ್ಯಮಂತ್ರಿ ಆಕಾಂಕ್ಷಿಗಳಿದ್ದಾರೆ ಎಂದು ರೈತಸೇನಾ ರಾಜ್ಯಾಧ್ಯಕ್ಷ ವೀರೇಶ್ ಸೊಬರದಮಠ ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರತ್ಯೇಕ ರಾಜ್ಯದ ಕೂಗಿಗೆ ಮಹದಾಯಿ ಹೋರಾಟವನ್ನು ಬಳಸುವುದು ಸೂಕ್ತವಲ್ಲ. ಮಹದಾಯಿ ಹೋರಾಟಕ್ಕೂ ಹಾಗೂ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗಿಗೂ ಸಂಬಂಧವಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

    ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳ ಅಭಿವೃದ್ಧಿಯಾಗಿಲ್ಲ ಎನ್ನುವ ಬಗ್ಗೆ ನಮಗೂ ನೋವಿದೆ. ಅಭಿವೃದ್ಧಿ ಕೂಗಿಗೆ ನಮ್ಮ ರೈತಸೇನಾ ಧ್ವನಿಗೂಡಿಸುತ್ತದೆ. ಆದರೆ ಮಹದಾಯಿ ಹೋರಾಟ ಅಖಂಡ ಕರ್ನಾಟಕದ ಹೋರಾಟ ಎಂದು ತಿಳಿಸಿದರು.

    ಮಹದಾಯಿ ಹೋರಾಟ ಉತ್ತರ ಕರ್ನಾಟಕ್ಕೆ ಸೀಮಿತವಾದ ಹೋರಾಟವಲ್ಲ. ದೇಶದಲ್ಲಿ ಪ್ರಚಲಿತವಿರುವ ಹೋರಾಟವಾಗಿದೆ. ಉತ್ತರ ಕರ್ನಾಟಕ ಅಭಿವೃದ್ಧಿ ಆಗಬೇಕಾದರೆ ಜನಪ್ರತಿನಿಧಿಗಳ ಮನೆ ಮುಂದೆ ಪ್ರತಿಭಟಿಸಬೇಕು. ಜಾತಿ ಹೋಗಲಾಡಿಸಿ ನಾವೆಲ್ಲ ಒಗ್ಗಟ್ಟು ತೋರಿಸಿದರೆ ರಾಜಕಾರಣಿಗಳು ಅಭಿವೃದ್ಧಿಗೆ ಮುಂದಾಗುತ್ತಾರೆ. ರಾಜಕಾರಣಿಗಳ ಇಚ್ಛಾಶಕ್ತಿ ಕೊರತೆಯಿಂದ ಮಹದಾಯಿ ಹಾಗೂ ಉತ್ತರ ಕರ್ನಾಟಕ ಅಭಿವೃದ್ಧಿ ಕಂಡಿಲ್ಲ ಎಂದು ಹೇಳಿದರು.

    ಉತ್ತರ ಕರ್ನಾಟಕ ಅಭಿವೃದ್ಧಿಗೆ ಎಲ್ಲ ಸಂಘ, ಸಂಟನೆಗಳು ಒಂದಾಗಬೇಕು. ಇದಕ್ಕೆ ಶಾಸಕರು, ವಿಧಾನ ಪರಿಷತ್ ಸದಸ್ಯರು ಪೂರಕ ಬೆಂಬಲ ಸಿಕ್ಕಾಗ ಮಾತ್ರ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದರು.

  • ಯಡಿಯೂರಪ್ಪ ರಕ್ತ ಕೊಟ್ರೂ ನಾಳೆ ಬೆಳಗ್ಗೆ ನೀರು ಬರಲ್ಲ- ಎಚ್‍ಡಿಕೆ

    ಯಡಿಯೂರಪ್ಪ ರಕ್ತ ಕೊಟ್ರೂ ನಾಳೆ ಬೆಳಗ್ಗೆ ನೀರು ಬರಲ್ಲ- ಎಚ್‍ಡಿಕೆ

    ಬೆಂಗಳೂರು/ಹಾಸನ: ಯಡಿಯೂರಪ್ಪ ರಕ್ತ ಕೊಟ್ರೂ ನಾಳೆ ಬೆಳಗ್ಗೆ ನೀರು ಬರಲ್ಲ ಅಂತಾ ಮಹದಾಯಿ ವಿಚಾರದಲ್ಲಿ ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಮಹದಾಯಿ ನೀರು ಯಡಿಯೂರಪ್ಪ ಮತ್ತು ಪರಿಕ್ಕರ್ ಆಸ್ತಿನಾ? ನಾನು ಸಿದ್ದರಾಮಯ್ಯ ಅವರನ್ನು ನಂಬೋದಿಲ್ಲ ಅಂತ ಪರಿಕ್ಕರ್ ಹೇಳ್ತಾರೆ. ಯಡಿಯೂರಪ್ಪ ಅವರನ್ನು ನಂಬ್ತಾರಂತೆ. ಏನು ಪರಿಕ್ಕರ್ ಮತ್ತು ಅಮಿತ್ ಷಾ ಆಟವಾಡ್ತಾರಾ? ಬಿಜೆಪಿ ನಾಯಕರು ಕರ್ನಾಟಕ ರಾಜ್ಯಕ್ಕೆ ದ್ರೋಹ ಮಾಡ್ತಾ ಇದ್ದಾರೆ. ಬಿಎಸ್‍ವೈ ರಕ್ತ ಕೊಟ್ಟರೂ ನಾಳೆ ಬೆಳಗ್ಗೆ ನೀರು ಬರುವುದಿಲ್ಲ. ನ್ಯಾಯಾಧಿಕರಣದಿಂದಲೇ ಆದೇಶ ಆಗಬೇಕು ಅಂತ ಎಚ್‍ಡಿಕೆ ಹೇಳಿದ್ರು.

    ಮಹದಾಯಿ ನೀರು ಯಡಿಯೂರಪ್ಪ, ಗೋವಾ ಸಿಎಂ ಪರಿಕ್ಕರ್ ಆಸ್ತಿಯಲ್ಲ. ನೀರು ಜನರ ಆಸ್ತಿ. ಎರಡೂ ರಾಜ್ಯಗಳಿಗೆ ಸೇರಿದ ಹಕ್ಕು. ಜನರಿಗೆ ಟೋಪಿ ಹಾಕ್ಬೇಡಿ. ಪರಿಕ್ಕರ್ ಸಿದ್ದರಾಮಯ್ಯ ಮೇಲೆ ನಂಬಿಕೆ ಇಲ್ಲ ಅಂತಾ ಹೇಳ್ತಾರೆ. ಸಿದ್ದರಾಮಯ್ಯ 6 ಕೋಟಿ ಕನ್ನಡಿಗರ ಸಿಎಂ ಅಂತಾ ತಿರುಗೇಟು ನೀಡಿದ್ರು.

    ಕೇಂದ್ರದ ಬಿಜೆಪಿಗರು ಕರ್ನಾಟಕದ ಜನರ ದಾರಿ ತಪ್ಪಿಸಿ, ಮತ ಪಡೆಯಲು ಕೀಳುಮಟ್ಟದ ರಾಜಕಾರಣ ಮಾಡುತ್ತಿದ್ದಾರೆ. ಜನವರಿ 5 ರಿಂದ ಬೆಳಗಾವಿಯಲ್ಲಿ ಕಾಗವಾಡದಿಂದ ಯಾತ್ರೆ ಶುರು ಮಾಡ್ತೀನಿ. ಬಿಜೆಪಿಯವರ ಕೀಳುಮಟ್ಟದ ರಾಜಕಾರಣವನ್ನು ಜನರ ಮುಂದೆ ಇಡ್ತೀನಿ. ಬಿಜೆಪಿಯವರು 17 ಮಂದಿ ಸಂಸದರು, ಸಚಿವರು ಕೈ ಕಟ್ಟಿಕೊಂಡು ನಿಲ್ತಾರೆ. ಅವರು ಮಾತಾಡಿದ್ದೇ ಇಲ್ಲ ಅಂದ್ರು.

    ಇದೇ ವಿಚಾರವಾಗಿ ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡರು ಹಾಸನದಲ್ಲಿ ಮಾತನಾಡಿದ್ದು, ಗುಜರಾತ್ ಎಲೆಕ್ಷನ್ ಮುಗಿದ ಬಳಿಕ ಸಮಸ್ಯೆಗೆ ಒಂದು ಪರಿಹಾರ ಕಂಡು ಹಿಡಿಯಲೇ ಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಗೋವಾ, ಮಹಾರಾಷ್ಟ್ರ ಸಿಎಂಗಳ ಸಭೆ ನಡೆಸಿದರು. ಆ ಸಭೆಯಲ್ಲಿ ನಮ್ಮ ರಾಜ್ಯದ ಯಡಿಯೂರಪ್ಪ ಅವರೂ ಭಾಗಿಯಾಗಿದ್ದರು. ಸಭೆಯಲ್ಲಿ ಒಂದು ತೀರ್ಮಾನಕ್ಕೆ ಬರಲೇಬೇಕು ಎಂದು ಸೂಚನೆ ಕೊಟ್ಟರು. ಆದರೆ ದೆಹಲಿಯಿಂದ ಬಂದ ನಂತರ ಸರ್ಕಾರ ಉಳಿಸಿಕೊಳ್ಳಲು ಗೋವಾ ಸಿಎಂ ಏನು ಹೇಳಿಕೆ ನೀಡಿದರು ಎಂಬುದು ನಾಡಿನ ಜನರಿಗೆ ತಿಳಿದಿದೆ. ಕರ್ನಾಟಕಕ್ಕೆ ಎಷ್ಟು ಕುಡಿಯುವ ನೀರು ಕೊಡಬೇಕು ಎಂಬುದು ನ್ಯಾಯಾಧಿಕರಣದ ಮುಂದೆಯೇ ತೀರ್ಮಾನವಾಗಬೇಕು ಎಂದು ಗೋವಾ ಸಿಎಂ ಹೇಳಿದ್ದಾರೆ. ಆದರೆ ನೀರು ಹಂಚಿಕೆ ನಿಗದಿ ಮಾಡಿದ ನಂತರವೂ ಚರ್ಚೆಗೆ ಗ್ರಾಸವಾಗಲಿದೆ. ಹೀಗಾಗಿ ಇದು ಬಗೆಹರಿಯದ ಸಮಸ್ಯೆ ಎಂದರು.

    ಇದೇ ವೇಳೆ ತಮ್ಮ ವಿರುದ್ಧ ಟೀಕೆ ಮಾಡಿರುವ ಬಂಡಾಯ ಶಾಸಕ ಚಲುವರಾಯಸ್ವಾಮಿ ಬಗ್ಗೆ ಮಾತನಾಡಲು ನಿರಾಕರಿಸಿದ ಗೌಡರು, ಅವರ ಹೆಸರು ಎತ್ತಬೇಡಿ ಎಂದು ಖಾರವಾಗಿ ಉತ್ತರಿಸಿದರು. ಜೆಡಿಎಸ್ ಟಿಕೆಟ್ ಹಂಚಿಕೆ ಸಂಬಂಧ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ರಾಜ್ಯದ ಎಲ್ಲಾ ಜಿಲ್ಲೆಗಳ ಆಕಾಂಕ್ಷಿಗಳ ಸಭೆ ನಡೆಸುತ್ತಿದ್ದಾರೆ. ಪ್ರಜ್ವಲ್ ರೇವಣ್ಣ, ಅನಿತಾ ಕುಮಾರಸ್ವಾಮಿ ಸ್ಪರ್ಧೆ ಮಾಡುವ ಬಗ್ಗೆ ಮತ್ತೆ ಮತ್ತೆ ಚರ್ಚೆ ಬೇಡ ಎಂದರು.

    ಚುನಾವಣೆ ಹೊಸ್ತಿಲಲ್ಲೇ ಉತ್ತರ ಕರ್ನಾಟಕದಲ್ಲಿ ಮಹದಾಯಿ ಹೋರಾಟ ತೀವ್ರಗೊಂಡಿದೆ. ಸಂಧಾನ ಹೆಸರಲ್ಲಿ ಬಿಜೆಪಿ ನಾಯಕರು ಉತ್ತರ ಕರ್ನಾಟಕ ಜನರ ಮೂಗಿಗೆ ತುಪ್ಪ ಸುರಿಯುವ ಕೆಲ್ಸ ಮಾಡ್ತಿದ್ದಾರೆ. ಈ ವಿಚಾರದಲ್ಲಿ ಪ್ರಧಾನಿಯವರೇ ಮಧ್ಯಸ್ಥಿಕೆ ವಹಿಸಬೇಕು ಎಂದು ಆಗ್ರಹಿಸಿ ರೈತ ಮತ್ತು ಕನ್ನಡಪರ ಸಂಘಟನೆಗಳು ಇದೇ ತಿಂಗಳ 27ರಂದು ಬಂದ್‍ಗೆ ಕರೆ ನೀಡಿವೆ.

    https://youtu.be/nK8HD8MjR_0