Tag: uttarakarnataka

  • ಮಠಕ್ಕೆ ಅನುದಾನ ಬೇಕಿದ್ರೆ ಶೇ.30 ಕಮಿಷನ್ ಕೊಡಿ ಅಂತಾರೆ ಅಧಿಕಾರಿಗಳು: ದಿಂಗಾಲೇಶ್ವರ ಸ್ವಾಮೀಜಿ

    ಮಠಕ್ಕೆ ಅನುದಾನ ಬೇಕಿದ್ರೆ ಶೇ.30 ಕಮಿಷನ್ ಕೊಡಿ ಅಂತಾರೆ ಅಧಿಕಾರಿಗಳು: ದಿಂಗಾಲೇಶ್ವರ ಸ್ವಾಮೀಜಿ

    ಬಾಗಲಕೋಟೆ: ಸದ್ಯ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಕೆ.ಎಸ್.ಈಶ್ವರಪ್ಪ ಅವರ ಪರ್ಸೆಂಟೇಜ್ ಪ್ರಕರಣ ಕಾವು ಪಡೆದುಕೊಂಡಿರುವ ಹೊತ್ತಿನಲ್ಲೇ ಶಿರಹಟ್ಟಿ ಜಗದ್ಗುರು ದಿಂಗಾಲೇಶ್ವರ ಸ್ವಾಮೀಜಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಗುಡುಗಿದ್ದಾರೆ.

    DINGALESWARA

    ಈ ಕುರಿತು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿರುವ ಅವರು, ಈಚೆಗೆ ಸರ್ಕಾರದ ಯೋಜನೆಗಳು ಸಮರ್ಪಕವಾಗಿ ಕೆಲಸ ಮಾಡುವುದಿಲ್ಲ. ಅವು ಏನಾಗ್ತಿವೆ ಎಂದು ಎಲ್ಲರಿಗೂ ಗೊತ್ತಿದೆ. ಒಬ್ಬ ಸ್ವಾಮೀಜಿಗೆ ಅನುದಾನ ಬಿಡುಗಡೆ ಮಾಡಬೇಕಿದ್ರೆ 30 ಪರ್ಸೆಂಟ್ ಕಮಿಷನ್ ಕೊಡಬೇಕು. ಆಗಲೇ ಮಠಗಳಳಲ್ಲಿ ಕಟ್ಟಡ ಕೆಲಸ ಶುರುವಾಗುತ್ತದೆ. ನೀವು ಇಷ್ಟು ದುಡ್ಡು ಕಟ್ಟದಿದ್ರೆ ನಿಮ್ಮ ಕೆಲಸ ಆಗಲ್ಲ ಎಂದು ಅಧಿಕಾರಿಗಳೇ ಹೇಳುವ ಪರಿಸ್ಥಿತಿ ಬಂದಿದೆ ಅಂದರೆ, ಭ್ರಷ್ಟಾಚಾರ ಎಲ್ಲಿಗೆ ಬಂದಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಎಚ್ಚರಿಸಿದ್ದಾರೆ. ಇದನ್ನೂ ಓದಿ: ಇಬ್ಬರು, ಮೂವರು ಸಚಿವರನ್ನು ಬಿಟ್ಟು ಎಲ್ರೂ 40% ಕಮಿಷನ್ ಪಡೆಯುತ್ತಿದ್ದಾರೆ: ಎಂ.ಬಿ ಪಾಟೀಲ್

    prahlad joshi

    ಈಗ ಕಿಡಿಗೇಡಿಗಳ ಸರ್ಕಾರವೇ ಬರುತ್ತಿದೆ. ಉತ್ತರ ಕರ್ನಾಟಕಕ್ಕಾಗಿ ಕಾಕಾಗಳು (ಖಾದಿ -ಖಾವಿ) ಒಂದಾಗಿವೆ. ಆದರೆ, ಎಂದಿಗೂ ನಮ್ಮ ಹಕ್ಕು, ಸ್ವತ್ತನ್ನು ಕಳೆದುಕೊಳ್ಳಬಾರದು, ಅನ್ನೋದು ಎಸ್.ಆರ್.ಪಾಟೀಲ್ ಅವ್ರ ತಂಡದ ಮಾತಾಗಿದೆ. ಇನ್ನೇನು ಕೃಷ್ಣಾ ಮಹದಾಯಿ, ನವಲಿ ಯೋಜನೆಗಳು ಕಾರ್ಯರೂಪಕ್ಕೆ ಬಂದ್ರೆ ನಿಮ್ಮ ಭಾಗದ ಜನರ ಬಾಳು ಹಸನಾಗುತ್ತದೆ. ಒಂದು ವೇಳೆ ನಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸದಿದ್ದರೆ ಜನರೇ ತಕ್ಕಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಹೆಣ್ಣುಮಕ್ಕಳು ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು: ಡಾ.ನಾರಾಯಣ ಗೌಡ

    SR PATIL

    ಕೆಲಸ ಮಾಡದಿದ್ರೆ ಏನ್ ಉಪಯೋಗ?: ಈ ಭಾಗದ ಮಂತ್ರಿಯೊಬ್ಬ ಸದಾ ಪ್ರಧಾನಮಂತ್ರಿ ಅವರೊಂದಿಗೆ ಇರ್ತಾನೆ. ಆದರೆ, ಕೇಂದ್ರದಿಂದ ರಾಜ್ಯಕ್ಕೆ ಏನೂ ಕೊಡುಗೆ ನೀಡ್ತಿಲ್ಲ. ಪ್ರಧಾನಿ ಹಿಂದೆ ಓಡಾಡೋದೆ ದೊಡ್ಡ ಕೆಲಸ ಅನ್ಕೊಂಡಿದ್ದಾನೆ. ನೀನು ಪಿಎಂ ಜೊತೆ ಅಡ್ಡಾಡಿದ್ರೂ, ಈ ಭಾಗಕ್ಕೆ ಏನು ಮಾಡದೇ ಇದ್ರೆ, ಪ್ರಯೋಜನ ಇಲ್ಲ ಎಂದು ಪರೋಕ್ಷವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ವಿರುದ್ಧ ಏಕವಚನದಲ್ಲೇ ಸ್ವಾಮೀಜಿ ಲೇವಡಿ ಮಾಡಿದರು.

    ದೆಹಲಿ ಸರ್ಕಾರಕ್ಕೆ ಟಾಂಗ್: ನಮ್ಮ ಉತ್ತರ ಕರ್ನಾಟಕದವರು ಸ್ವಲ್ಪ ಜಾಗೃತರಾಗಿ ಸರ್ಕಾರಕ್ಕೆ ಬಿಸಿ ಮುಟ್ಟಿಸಬೇಕು. ಕೆಲ ಭಾಗಗಳಲ್ಲಿ ಸ್ವಾಮೀಜಿಗಳಲ್ಲೇ ಇರುವ ತಾರತಮ್ಯ ನಿಲ್ಲಬೇಕು. ಈ ಹೋರಾಟ ಇಲ್ಲಿಗೆ ನಿಲ್ಲೋದು ಬೇಡ. ಇದು ಮುಂದುವರಿಯಬೇಕು. ಎಲ್ಲಿಯ ತನಕ ಈ ಭಾಗ ಅಭಿವೃದ್ಧಿ ಆಗುವವರೆಗೆ ನಿಮ್ಮ ಹೋರಾಟ ನಿಲ್ಲಬಾರದು. ನಾವೆಲ್ಲ ನಿಮ್ಮ ಜೊತೆಗಿರುತ್ತೇವೆ ಎಂದು ಹೋರಾಟಕ್ಕೆ ಬೆಂಬಲ ಘೋಷಿಸಿದರು.

  • ಕೆಶಿಪ್ ಎತ್ತಂಗಡಿಗೆ ಉತ್ತರ ಕರ್ನಾಟಕದಲ್ಲಿ ಭಾರೀ ವಿರೋಧ- ಸೂಪರ್ ಸಿಎಂ ವಿರುದ್ಧ ಖಂಡನೆ

    ಕೆಶಿಪ್ ಎತ್ತಂಗಡಿಗೆ ಉತ್ತರ ಕರ್ನಾಟಕದಲ್ಲಿ ಭಾರೀ ವಿರೋಧ- ಸೂಪರ್ ಸಿಎಂ ವಿರುದ್ಧ ಖಂಡನೆ

    ಬೆಳಗಾವಿ: ಜಿಲ್ಲೆಯಿಂದ ಕೆಶಿಪ್ ಕಚೇರಿಯನ್ನ ಹಾಸನಕ್ಕೆ ಸ್ಥಳಾಂತರ ಮಾಡಿರುವುದಕ್ಕೆ ಉತ್ತರ ಕರ್ನಾಟಕದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಕರ್ನಾಟಕ ,ರಾಜ್ಯ ಹೆದ್ದಾರಿ ಯೋಜನೆಯನ್ನ ಬೆಳಗಾವಿಯಂದ ಸ್ಥಳಾಂತರ ಮಾಡಿರುವುದಕ್ಕೆ ಸೂಪರ್ ಸಿಎಂ ರೇವಣ್ಣ ಅವರ ವಿರುದ್ಧ ತೀವ್ರ ಖಂಡನೆ ವ್ಯಕ್ತವಾಗಿದೆ.

    ಬೆಳಗಾವಿ ಜಿಲ್ಲೆಯ ನಿಪ್ಪಾಣಿ ನಗರದಿಂದ ಬಾಗಲಕೋಟೆ ಜಿಲ್ಲೆಯ ಮುಧೋಳ ಪಟ್ಟಣದವರೆಗೂ 107 ಕಿ.ಮೀ ಅಂತರದ ರಸ್ತೆಯನ್ನ ವಿಶ್ವಬ್ಯಾಂಕ್ ಸಹಯೋಗದಲ್ಲಿ 317 ಕೋಟಿ ರೂ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆ ಅಧೀನದ ಕೆಶಿಪ್ ವತಿಯಿಂದ ಕಾಮಗಾರಿಯನ್ನ ಕೈಗೆತ್ತಿಕೊಳ್ಳಲಾಗಿತ್ತು. 2014 ಡಿಸೆಂಬರ್ ನಲ್ಲಿ ಆರಂಭವಾದ ಕಾಮಗಾರಿ 2016 ಡಿಸೆಂಬರ್ ನಲ್ಲಿ ಪೂರ್ಣಗೊಳಿಸಬೇಕಿತ್ತು. ಆದರೆ ರಸ್ತೆ ಕಾಮಗಾರಿ ಪೂರ್ಣಗೊಂಡಿದ್ದರೂ ತಡೆಗೋಡೆ, ಬೀದಿ ದೀಪ ಅಳವಡಿಕೆ ಸೇರಿದಂತೆ ಸಾಕಷ್ಟು ಪ್ರಮಾಣದ ಕಾಮಗಾರಿಗಳು ಇನ್ನೂ ಪೂರ್ಣಗೊಳ್ಳಬೇಕಿದೆ. ಕಾಮಗಾರಿಗಳು ಇನ್ನೂ ನಡೆಯುತ್ತಿದ್ದರೂ ಕೆಶಿಪ್ ಕಚೇರಿಯನ್ನ ಬೆಳಗಾವಿಯಿಂದ ಹಾಸನಕ್ಕೆ ಸ್ಥಳಾಂತರಿಸಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ.

    ಬೆಳಗಾವಿಯಲ್ಲಿರುವ ಕರ್ನಾಟಕ ರಾಜ್ಯ ಹೆದ್ದಾರಿಗಳ ಅಭಿವೃದ್ಧಿ ಯೋಜನೆ(ಕೆಶಿಪ್)ಯ ಕಚೇರಿಯನ್ನು ಹಾಸನಕ್ಕೆ ಸ್ಥಳಾಂತರ ಮಾಡಲು ರಾಜ್ಯ ಸರ್ಕಾರ ಜುಲೈ 27, 2018ರಂದು ಆದೇಶ ಹೊರಡಿಸಿತ್ತು. ಬೆಳಗಾವಿ ನಗರದಲ್ಲಿರುವ ಕೆಶಿಪ್ ವಿಭಾಗದ ಮಟ್ಟದ ಕಚೇರಿಯನ್ನು ಹಾಸನಕ್ಕೆ ಹಾಗೂ ಉಪ ವಿಭಾಗೀಯ ಕಚೇರಿಯನ್ನು ಬೆಳಗಾವಿಯಿಂದ ಮಡಿಕೇರಿಗೆ ಸ್ಥಳಾಂತರಕ್ಕೆ ಸೂಚಿಸಲಾಗಿತ್ತು. ಸಕಲೇಶಪುರದ ರಾಷ್ಟ್ರೀಯ ಹೆದ್ದಾರಿ ಉಪವಿಭಾಗ ಕಚೇರಿಯನ್ನು ಹೊಳೆನರಸೀಪುರಕ್ಕೆ ಶಿಫ್ಟ್ ಮಾಡಲು ಹಾಗೂ ಬಸವನಬಾಗೇವಾಡಿಯ ಕೆಶಿಪ್ ಉಪವಿಭಾಗ ಕಚೇರಿಯನ್ನು ಬೇಲೂರಿಗೆ ಸ್ಥಳಾಂತರಿಸಲು ಆದೇಶಿಸಲಾಗಿತ್ತು. ಅಲ್ಲದೆ ಶಿವಮೊಗ್ಗ ಲೋಕೋಪಯೋಗಿ ವಿಶೇಷ ಉಪ ವಿಭಾಗೀಯ ಕಚೇರಿಯನ್ನು ಅರಸೀಕೆರೆಗೆ ಶಿಫ್ಟ್ ಮಾಡಲು ಸೂಚಿಸಲಾಗಿತ್ತು.

    ಸಮ್ಮಿಶ್ರ ಸರ್ಕಾರದ ಸೂಪರ್ ಸಿಎಂ ಎಂದೇ ಬಿಂಬಿತವಾಗಿರುವ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಪ್ರಭಾವದಿಂದಲೇ ಹುದ್ದೆಗಳ ಸಮೇತವಾಗಿ ಈ ಎಲ್ಲಾ ಕಚೇರಿಗಳ ಸ್ಥಳಾಂತರಕ್ಕೆ ಆದೇಶ ಹೊರ ಬಿದ್ದಿದೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಇದು ಉತ್ತರ ಕರ್ನಾಟಕದ ಜನತೆಯ ಆಕ್ರೋಶಕ್ಕೆ ಕಾರಣವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews