Tag: uttarakhand election

  • ಆರೋಪಗಳ ಮಧ್ಯೆ ಐವೈಸಿ ಅಧ್ಯಕ್ಷ ಶ್ರೀನಿವಾಸ್‌ಗೆ ಹೊಸ ಜವಾಬ್ದಾರಿ

    ಆರೋಪಗಳ ಮಧ್ಯೆ ಐವೈಸಿ ಅಧ್ಯಕ್ಷ ಶ್ರೀನಿವಾಸ್‌ಗೆ ಹೊಸ ಜವಾಬ್ದಾರಿ

    ನವದೆಹಲಿ: ಉತ್ತರಾಖಂಡ ವಿಧಾನಸಭೆ ಚುನಾವಣೆ ಹಿನ್ನೆಲೆ ರಚಿಸಲಾದ ಪ್ರಚಾರ ಸಮಿತಿಯಲ್ಲಿ ರಾಷ್ಟ್ರೀಯ ಯೂಥ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಬಿ.ವಿ ಗೆ ಅವಕಾಶ ನೀಡಿದೆ. ಶ್ರೀನಿವಾಸ್ ವಿರುದ್ಧ ಕೇಳಿ ಬಂದ ಹಲವು ಆರೋಪಗಳ ನಡುವೆ ಹೊಸ ಅವಕಾಶ ನೀಡುವ ಮೂಲಕ ಹೈಕಮಾಂಡ್ ಅಚ್ಚರಿ ಮೂಡಿಸಿದೆ.

    ಇಂದು ಕಾಂಗ್ರೆಸ್ ಮೂವತ್ತು ಜನರ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಸೋನಿಯಾಗಾಂಧಿ, ರಾಹುಲ್ ಗಾಂಧಿ ಆದಿಯಾಗಿ ಹಲವು ಹಿರಿಯ ನಾಯಕರಿದ್ದು, ಶ್ರೀನಿವಾಸ್‌ಗೆ ಅವಕಾಶ ನೀಡುವ ಉತ್ತರಾಖಂಡ ಚುನಾವಣೆಯಲ್ಲಿ ಪ್ರಚಾರದ ಜವಾಬ್ದಾರಿ ಹೊರಿಸಿದೆ. ಇದನ್ನೂ ಓದಿ: ಯೋಗಿ ಆದಿತ್ಯನಾಥ್‍ಗೆ ಕಪ್ಪು ಬಾವುಟ ಪ್ರದರ್ಶಿಸಿದ್ದ ಯುವತಿ ಸಮಾಜವಾದಿ ಪಕ್ಷದ ಅಭ್ಯರ್ಥಿ

    ಐವೈಸಿ ಅಧ್ಯಕ್ಷರಾಗಿರುವ ಶ್ರೀನಿವಾಸ್ ವಿರುದ್ಧ ಇತ್ತೀಚೆಗೆ ರಾಹುಲ್ ಗಾಂಧಿ ಅವರಿಗೆ ಇಮೇಲ್ ಮೂಲಕ ರಾಜ್ಯ ಯುವ ಕಾಂಗ್ರೆಸ್ ಸದಸ್ಯರೊಬ್ಬರು ದೂರು ನೀಡಿದ್ದರು. ಯೂಥ್ ಕಾಂಗ್ರೆಸ್ ಅಧ್ಯಕ್ಷರ ಚುನಾವಣೆಯಲ್ಲಿ ಹಣ ಪಡೆದಿದ್ದಾರೆ. ಪದಾಧಿಕಾರಿಗಳ ನೇಮಕದಲ್ಲೂ ಹಣ ಪಡೆದಿದ್ದಾರೆ. ಏನು ಇಲ್ಲದ ಶ್ರೀನಿವಾಸ್ ಕೋಟಿಗಟ್ಟಲೇ ಆಸ್ತಿ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

    ಈ ದೂರು ನೀಡಿ ಇನ್ನು ಒಂದು ವಾರವೂ ಕಳೆದಿರಲಿಲ್ಲ. ಅಷ್ಟರಲ್ಲೇ ಶ್ರೀನಿವಾಸ್‌ಗೆ ಹೈಕಮಾಂಡ್ ಮಹತ್ವದ ಜವಾಬ್ದಾರಿ ನೀಡಿದ್ದು, ಶ್ರೀನಿವಾಸ್ ವಿರುದ್ಧ ನೀಡಿದ ದೂರನ್ನು ಹೈಕಮಾಂಡ್ ಕಸದ ಬುಟ್ಟಿಗೆ ಎಸೆದಂತಾಗಿದೆ. ಇದನ್ನೂ ಓದಿ: ಯುಪಿ ಚುನಾವಣೆಯಲ್ಲಿ ಅಖಿಲೇಶ್ ಯಾದವ್‍ಗೆ ನಮ್ಮ ಬೆಂಬಲ: ಮಮತಾ ಬ್ಯಾನರ್ಜಿ

  • ಉತ್ತರಾಖಂಡ ಚುನಾವಣೆ: ಅತ್ಯಾಚಾರ ಆರೋಪಿ ಸೇರಿ 10 ಶಾಸಕರನ್ನು ಪಟ್ಟಿಯಿಂದ ಕೈಬಿಟ್ಟ ಬಿಜೆಪಿ

    ಉತ್ತರಾಖಂಡ ಚುನಾವಣೆ: ಅತ್ಯಾಚಾರ ಆರೋಪಿ ಸೇರಿ 10 ಶಾಸಕರನ್ನು ಪಟ್ಟಿಯಿಂದ ಕೈಬಿಟ್ಟ ಬಿಜೆಪಿ

    ಡೆಹ್ರಾಡೂನ್: ಉತ್ತರಾಖಂಡ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅತ್ಯಾಚಾರ ಆರೋಪಿ ಸೇರಿದಂತೆ 10 ಮಂದಿ ಹಾಲಿ ಶಾಸಕರನ್ನು ಬಿಜೆಪಿ ಪಟ್ಟಿಯಿಂದ ಕೈಬಿಟ್ಟಿದೆ.

    59 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಪ್ರಕಟಿಸಿದ್ದು, ಹೊಸ ಮುಖಗಳಿಗೆ ಮಣೆ ಹಾಕಿದೆ. ಅತ್ಯಾಚಾರ ಆರೋಪಿ ಮಹೇಶ್‌ ನೇಗಿ ಹಾಗೂ ಮಾಜಿ ಮುಖ್ಯಮಂತ್ರಿ ಭುವನ್‌ ಚಂದ್ರ ಖಂಡೂರಿ ಪುತ್ರಿ ರಿತು ಖಂಡೂರಿ ಅವರಿಗೆ ಟಿಕೆಟ್‌ ಕೈತಪ್ಪಿದೆ. ಇದನ್ನೂ ಓದಿ: ಯುಪಿ ಕಾಂಗ್ರೆಸ್‍ನ ‘ನಾನು ಹುಡುಗಿ ಹೋರಾಡಬಲ್ಲೆ’ ಪೋಸ್ಟರ್ ಗರ್ಲ್ ಬಿಜೆಪಿಗೆ ಸೇರ್ಪಡೆ

    ಇನ್ನುಳಿದ 11 ಸ್ಥಾನಗಳಿಗೆ ಆಡಳಿತಾರೂಢ ಪಕ್ಷ ಅಭ್ಯರ್ಥಿಗಳನ್ನು ಘೋಷಿಸಬೇಕಿದೆ. ಈ ಸ್ಥಾನಗಳಲ್ಲಿ ಕಾಂಗ್ರೆಸ್‌ ಪ್ರಾಬಲ್ಯ ಇದೆ. ರಾಜ್ಯದಲ್ಲಿ ಬದಲಾದ ರಾಜಕೀಯ ಪರಿಸ್ಥಿತಿಯಿಂದಾಗಿ ಈ ಸ್ಥಾನಗಳ ಬಗ್ಗೆ ಬಿಜೆಪಿ ಆತುರದ ನಿರ್ಧಾರ ಕೈಗೊಂಡಿಲ್ಲ ಎಂದು ಮೂಲಗಳು ತಿಳಿಸಿವೆ.

    ಹಾಲಿ ಸಿಎಂ ಪುಷ್ಕರ್‌ ಸಿಂಗ್‌ ಧಾಮಿ ಅವರು ಖತೀಮಾ ಕ್ಷೇತ್ರದಿಂದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಮದನ್‌ ಕೌಶಿಕ್‌ ಹರಿದ್ವಾರದಿಂದಲೂ ಕಣಕ್ಕಿಳಿಯಲಿದ್ದಾರೆ. ಸಂಪುಟದ ಬಹುಪಾಲು ಸಚಿವರು ಹಾಗೂ ಶಾಸಕರು ಸದ್ಯ ತಾವು ಪ್ರತಿನಿಧಿಸುತ್ತಿರುವ ಕ್ಷೇತ್ರಗಳಿಂದಲೇ ಸ್ಪರ್ಧಿಸಲಿದ್ದಾರೆ. ಇದನ್ನೂ ಓದಿ: UP Election: ಚುಣಾವಣಾ ಪ್ರಚಾರಕ್ಕೆ ತೆರಳಿದ್ದ ಬಿಜೆಪಿ ಶಾಸಕನನ್ನು ಓಡಿಸಿದ ಗ್ರಾಮಸ್ಥರು

    ಶಾಸಕ ಮಹೇಶ್‌ ನೇಗಿ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಆರೋಪ ಹೊರಿಸಿದಾಗಿನಿಂದ ಬಿಜೆಪಿ ಭಾರೀ ಮುಜುಗರ ಅನುಭವಿಸಿದೆ. ಪರಿಣಾಮವಾಗಿ ನೇಗಿ ಅವರನ್ನು ಪಕ್ಷ ಕೈಬಿಟ್ಟಿದ್ದು, ಅನಿಲ್‌ ಶಾಹಿ ಅವರಿಗೆ ಅವಕಾಶ ನೀಡಿದೆ.