Tag: Uttarakhand

  • ಜೋಶಿಮಠದ ಬಳಿಕ ಜಮ್ಮು-ಕಾಶ್ಮೀರದಲ್ಲೂ ಮನೆ, ರಸ್ತೆಗಳು ಬಿರುಕು

    ಜೋಶಿಮಠದ ಬಳಿಕ ಜಮ್ಮು-ಕಾಶ್ಮೀರದಲ್ಲೂ ಮನೆ, ರಸ್ತೆಗಳು ಬಿರುಕು

    ಶ್ರೀನಗರ: ಉತ್ತರಾಖಂಡದ (Uttarakhand) ಜೋಶಿಮಠದಲ್ಲಿ ಮನೆಗಳು, ರಸ್ತೆಗಳಲ್ಲಿ ಬಿರುಕು ಕಾಣಿಸಿಕೊಂಡು ಅನಾಹುತ ಸೃಷ್ಟಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲೂ (Jammu and Kashmir) ದೊಡ್ಡ ಮಟ್ಟದಲ್ಲಿ ಬಿರುಕು ಕಾಣಿಸಿಕೊಳ್ಳುತ್ತಿದೆ.

    ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಮನೆ, ರಸ್ತೆಗಳಲ್ಲಿ ಬಿರುಕು ಕಾಣಿಸಿಕೊಳ್ಳಲು ಪ್ರಾರಂಭಿಸಿದೆ. ಇದರೊಂದಿಗೆ ಭೂಮಿ ಕುಸಿತವಾಗಿರುವುದೂ ಕಂಡುಬಂದಿದೆ. ಇದನ್ನೂ ಓದಿ: ಇಡೀ ಜೋಶಿಮಠ ಮುಳುಗುವ ಎಚ್ಚರಿಕೆ ನೀಡಿದ ಇಸ್ರೋ – ಆತಂಕ ಮೂಡಿಸುತ್ತಿದೆ ಉಪಗ್ರಹ ಚಿತ್ರ

    ಕಳೆದ ವರ್ಷ ಡಿಸೆಂಬರ್ ವೇಳೆ ಮನೆಯೊಂದರಲ್ಲಿ ಕಾಣಿಸಿಕೊಂಡ ಬಿರುಕುಗಳು ಈಗ ವ್ಯಾಪಿಸಲು ಪ್ರಾರಂಭಿಸಿದೆ ಎಂದು ದೋಡಾದ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಅಥರ್ ಅಮೀನ್ ಜರ್ಗರ್ ಹೇಳಿದ್ದಾರೆ.

    ದೋಡಾ ಜಿಲ್ಲೆಯ (Doda District) ಮನೆಯೊಂದರಲ್ಲಿ ಬಿರುಕು ಕಾಣಿಸಿಕೊಂಡಿತ್ತು. ಇದು ವ್ಯಾಪಿಸುತ್ತಿದ್ದು, ಎರಡು ದಿನಗಳಲ್ಲಿ 6 ಕಟ್ಟಡಗಳು ಬಿರುಕು ಬಿಟ್ಟಿವೆ. ಈ ಬಿರುಕುಗಳನ್ನು ಸರಿಪಡಿಸಿದ ಪ್ರದೇಶಗಳಲ್ಲಿ ಕೆಲ ಭಾಗಗಳು ಮುಳುಗಡೆಯಾಗುವ ಆತಂಕ ಶುರುವಾಗಿದೆ ಎಂದು ಜರ್ಗರ್ ಹೇಳಿದರು.

    ಫೆ.3ರಂದು ಪ್ರಾಥಮಿಕ ಮೌಲ್ಯಮಾಪನ ಮಾಡಲಾಗಿದ್ದು, ಭೂವಿಜ್ಞಾನಿಗಳು ಪ್ರದೇಶಕ್ಕೆ ಭೇಟಿ ಪರಿಶೀಲಿಸುತ್ತಿದ್ದಾರೆ. ಇದನ್ನೂ ಓದಿ: ಜೋಶಿಮಠದ ಅಪಾಯಕಾರಿ ಕಟ್ಟಡ ನೆಲಸಮ ಕಾರ್ಯಾಚರಣೆ ಪ್ರಾರಂಭ – 600ಕ್ಕೂ ಹೆಚ್ಚು ಕಡೆ ಗುರುತು

    ಕಳೆದ ತಿಂಗಳು ಉತ್ತರಾಖಂಡದ ಜೋಶಿಮಠದಲ್ಲಿ (Joshimath) ಮನೆ ಹಾಗೂ ರಸ್ತೆಗಳು ಬಿರುಕು ಕಾಣಿಸಿಕೊಂಡಿತ್ತು. ಬಳಿಕ ಸರ್ಕಾರ ಪ್ರತಿ ಸಂತ್ರಸ್ತ ಕುಟುಂಬಳಿಗೆ 1.5 ಲಕ್ಷ ಪರಿಹಾರ ಘೋಷಣೆ ಮಾಡಿತು. ಈ ಬೆನ್ನಲ್ಲೇ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಜೋಶಿಮಠದಲ್ಲಿ ಆಗುತ್ತಿರುವ ಭೂ ಕುಸಿತದ ಪ್ರಾಥಮಿಕ ವರದಿಯೊಂದನ್ನು ಬಿಡುಗಡೆ ಮಾಡಿ ಮುಂದೆ ಭೂಕುಸಿತ ಮತ್ತಷ್ಟು ಹೆಚ್ಚಾಗಬಹುದು ಎಂದು ಎಚ್ಚರಿಕೆ ನೀಡಿತ್ತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಾಜೀವ್ ಗಾಂಧಿ, ಇಂದಿರಾ ಗಾಂಧಿ ಹತ್ಯೆ ಆಕಸ್ಮಿಕವಷ್ಟೇ: ಉತ್ತರಾಖಂಡ ಸಚಿವ

    ರಾಜೀವ್ ಗಾಂಧಿ, ಇಂದಿರಾ ಗಾಂಧಿ ಹತ್ಯೆ ಆಕಸ್ಮಿಕವಷ್ಟೇ: ಉತ್ತರಾಖಂಡ ಸಚಿವ

    ಡೆಹ್ರಾಡೂನ್: ಹುತಾತ್ಮ ಪಟ್ಟ ಗಾಂಧಿ ಕುಟುಂಬದ ಏಕಸ್ವಾಮ್ಯವಲ್ಲ. ಇಂದಿರಾ ಗಾಂಧಿ (Indira Gandhi) ಹಾಗೂ ರಾಜೀವ್ ಗಾಂಧಿ (Rajiv Gandhi) ಅವರ ಹತ್ಯೆಗಳು ಆಕಸ್ಮಿಕವಷ್ಟೇ ಎಂದು ಉತ್ತರಾಖಂಡದ (Uttarakhand) ಸಚಿವ ಗಣೇಶ್ ಜೋಶಿ (Ganesh Joshi) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ಅವರ ಬುದ್ಧಿಮತ್ತೆಗೆ ವಿಷಾದಿಸುತ್ತೇನೆ. ಆದರೆ ಹುತಾತ್ಮ ಪಟ್ಟ ಗಾಂಧಿ ಕುಟುಂಬದ ಏಕಸ್ವಾಮ್ಯವಲ್ಲ. ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ಸಾವರ್ಕರ್ ಹಾಗೂ ಚಂದ್ರಶೇಖರ್ ಆಜಾದ್ ಅವರಂತಹ ಅನೇಕರು ಈ ದೇಶಕ್ಕಾಗಿ ಹೋರಾಡಿ ಹುತಾತ್ಮರಾಗಿದ್ದಾರೆ. ಗಾಂಧಿ ಕುಟುಂಬದ ಸದಸ್ಯರೊಂದಿಗೆ ನಡೆದಿದ್ದು ಆಕಸ್ಮಿಕವಷ್ಟೇ. ಆಕಸ್ಮಿಕಕ್ಕೂ ಹಾಗೂ ಹುತಾತ್ಮಕ್ಕೂ ಬಹಳ ವ್ಯತ್ಯಾಸವಿದೆ ಎಂದರು.

    ಶ್ರೀನಗರದಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಕಾಂಗ್ರೆಸ್ (Congress) ನಾಯಕನ ಭಾಷಣ ಕುರಿತು ಪ್ರತಿಕ್ರಿಯಿಸಿ, ಒಬ್ಬರ ಬುದ್ಧಿವಂತಿಕೆಯ ಮಟ್ಟಕ್ಕೆ ಅನುಗುಣವಾಗಿ ಮಾತ್ರ ಮಾತನಾಡಬಹುದು ಎಂದು ತಿಳಿಸಿದರು.

    ಜಮ್ಮು ಮತ್ತು ಕಾಶ್ಮೀರದಲ್ಲಿ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆ ಸುಗಮವಾಗಿ ಮುಗಿಸಿದ ಕೀರ್ತಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಸಲ್ಲುತ್ತದೆ. ಮೋದಿ ನೇತೃತ್ವದಲ್ಲಿ 370ನೇ ವಿಧಿಯನ್ನು ರದ್ದುಪಡಿಸದಿದ್ದರೆ ಹಾಗೂ ಜಮ್ಮು ಮತ್ತು ಕಾಶ್ಮೀರ ಸಹಜ ಸ್ಥಿತಿಗೆ ಮರಳದಿದ್ದರೆ ರಾಹುಲ್ ಗಾಂಧಿ (Rahul Gandhi) ಅವರು ಲಾಲ್ ಚೌಕ್‍ನಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲು ಸಾಧ್ಯವಾಗುತ್ತಿರಲಿಲ್ಲ ಎಂದು ಅಭಿಪ್ರಾಯಪಟ್ಟರು.

    ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ ಅವರು, ತಮ್ಮ ಅಜ್ಜಿ ಇಂದಿರಾ ಗಾಂಧಿ ಹಾಗೂ ತಂದೆ ರಾಜೀವ್ ಗಾಂಧಿ ಅವರ ಹತ್ಯೆಯ ಬಗ್ಗೆ ದೂರವಾಣಿಯ ಮೂಲಕ ಮಾಹಿತಿ ನೀಡಿದ್ದ ಕ್ಷಣಗಳನ್ನು ನೆನಪಿಸಿಕೊಂಡು, ಹಿಂಸಾಚಾರವನ್ನು ಪ್ರಚೋದಿಸುವವರಿಗೆ ಆ ನೋವು ಎಂದಿಗೂ ಅರ್ಥವಾಗುವುದಿಲ್ಲ ಎಂದು ಹೇಳಿದ್ದರು. ಇದನ್ನೂ ಓದಿ: ಅಜ್ಜಿ ಹೊರಹಾಕಲು ಹೋಗಿ ತಾನೇ ಮನೆಯಿಂದ ಹೊರಬಿದ್ದ ಮೊಮ್ಮಗ!

    ಆ ಕರೆ ಬಂದಾಗ ಆ ನೋವು ಮೋದಿ, ಅಮಿತ್ ಶಾ, ಬಿಜೆಪಿ ಮತ್ತು ಆರ್‌ಎಸ್‍ಎಸ್‍ನಂತಹ ಹಿಂಸಾಚಾರವನ್ನು ಪ್ರಚೋದಿಸುವವರಿಗೆ ಈ ನೋವು ಎಂದಿಗೂ ಅರ್ಥವಾಗುವುದಿಲ್ಲ. ಒಬ್ಬ ಸೈನಿಕನ ಕುಟುಂಬಕ್ಕೆ ಆ ನೋವು ಅರ್ಥವಾಗುತ್ತದೆ. ಪುಲ್ವಾಮಾದಲ್ಲಿ ಹುತಾತ್ಮರಾದ ಸಿಆರ್‌ಪಿಎಫ್ ಸಿಬ್ಬಂದಿಯ ಕುಟುಂಬಕ್ಕೆ ಅರ್ಥವಾಗುತ್ತದೆ. ಕಾಶ್ಮೀರಿಗಳು ಅರ್ಥಮಾಡಿಕೊಳ್ಳುತ್ತಾರೆ ಎಂದಿದ್ದರು. ಇದನ್ನೂ ಓದಿ: ನಾಗರಹಾವು ಹಿಡಿದು ಜೆಡಿಎಸ್ ಅಭ್ಯರ್ಥಿ ಗೆಲುವಿನ ಬಗ್ಗೆ ಭವಿಷ್ಯ ನುಡಿದ ವ್ಯಕ್ತಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • `ಈ ಇಬ್ಬರು ವೀರರನ್ನು ಸ್ಮರಿಸಲೇಬೇಕು’ – ರಿಷಬ್‌ ಪಂತ್ ಮೊದಲ ರಿಯಾಕ್ಷನ್

    `ಈ ಇಬ್ಬರು ವೀರರನ್ನು ಸ್ಮರಿಸಲೇಬೇಕು’ – ರಿಷಬ್‌ ಪಂತ್ ಮೊದಲ ರಿಯಾಕ್ಷನ್

    ಮುಂಬೈ: ಭೀಕರ ಕಾರು ಅಪಘಾತದಿಂದ (Car Accident) ಗಂಭೀರ ಗಾಯಗೊಂಡಿದ್ದ ಟೀಂ ಇಂಡಿಯಾ (Team India) ಕ್ರಿಕೆಟಿಗ ರಿಷಬ್ ಪಂತ್‌ಗೆ (Rishabh Pant) ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ.

    ಮಂಗಳವಾರ ಬೆಳಗ್ಗೆ ಶಸ್ತ್ರಚಿಕಿತ್ಸೆ ಯಶಸ್ವಿಯಾದ ಬಳಿಕ ಅಪಘಾತದ ನಂತರ ತಮಗೆ ಸಹಾಯ ಮಾಡಿದ ಇಬ್ಬರು ಯುವಕರನ್ನ ಸ್ಮರಿಸಿದ್ದಾರೆ. ರಜತ್ ಕುಮಾರ್ ಮತ್ತು ನಿಶು ಕುಮಾರ್ ಚಿತ್ರವನ್ನ ಟ್ವೀಟರ್‌ನಲ್ಲಿ ಹಂಚಿಕೊಂಡಿರುವ ಪಂತ್ ಭಾವುಕ ಸಂದೇಶ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ದೇವರೆಂದು ಕಾಲಿಗೆ ಬಿದ್ದ ಅಭಿಮಾನಿಯ ಆಸೆ ಪೂರೈಸಿದ ಕೊಹ್ಲಿ – ನೆಟ್ಟಿಗರಿಂದ ಭಾರೀ ಮೆಚ್ಚುಗೆ

    `ನನ್ನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂದು ಎಲ್ಲರಿಗೂ ತಿಳಿಸಲು ಬಯಸುತ್ತೇನೆ. ನಾನೀಗ ಚೇತರಿಕೆಯ ಹಾದಿಯಲ್ಲಿದ್ದೇನೆ. ನಿಮ್ಮೆಲ್ಲರ ಹಾರೈಕೆಗಾಗಿ ನಾನು ಕೃತಜ್ಞನಾಗಿದ್ದೇನೆ. ನನ್ನ ಉತ್ಸಾಹ ಹೆಚ್ಚಿದೆ. ನಾನು ಪ್ರತಿದಿನ ಚೇತರಿಸಿಕೊಳ್ಳುತ್ತಿದ್ದೇನೆ. ಮುಂದಿನ ಸವಾಲುಗಳನ್ನು ಸ್ವೀಕರಿಸಲು ಸಿದ್ಧನಿದ್ದೇನೆ. ಈ ಕಷ್ಟದ ಸಮಯದಲ್ಲಿ ಸಿಕ್ಕ ನಿಮ್ಮ ಪ್ರೀತಿಯ ಮಾತುಗಳು, ಬೆಂಬಲಕ್ಕಾಗಿ ನಾನು ಕೃತಜ್ಞತೆ ಸಲ್ಲಿಸಲು ಬಯಸುತ್ತೇನೆ’ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸಹ ಆಟಗಾರನ ಗೆಳತಿಯೊಂದಿಗೆ ಪಾಕ್ ನಾಯಕ ಚಾಟಿಂಗ್ – ಹನಿಟ್ರ್ಯಾಪ್‍ಗೆ ಸಿಲುಕಿದ್ರಾ ಬಾಬರ್ ಅಜಮ್?

    `ನಾನು ಎಲ್ಲರಿಗೂ ವೈಯಕ್ತಿಕವಾಗಿ ಧನ್ಯವಾದ ಹೇಳಲು ಸಾಧ್ಯವಾಗದೇ ಇರಬಹುದು. ಆದರೆ ನಾನು ಈ ಇಬ್ಬರು ವೀರರನ್ನು ಸ್ಮರಿಸಬೇಕು. ನನ್ನನ್ನು ಸುರಕ್ಷಿತವಾಗಿ ಆಸ್ಪತ್ರೆಗೆ ಸೇರಿಸಿದವರು ಇವರು. ಇವರಿಗೆ ನಾನು ಶಾಶ್ವತವಾಗಿ ಕೃತಜ್ಞನಾಗಿರುತ್ತೇನೆ. ಅಲ್ಲದೇ ನನ್ನ ಅಭಿಮಾನಿಗಳು, ನನ್ನ ತಂಡ ಸಹಪಾಠಿಗಳು ಚಿಕಿತ್ಸೆ ನೀಡಿದ ವೈದ್ಯರು ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ನಿಮ್ಮೆಲ್ಲರನ್ನೂ ನಾನು ಮತ್ತೆ ಮೈದಾನದಲ್ಲಿ ನೋಡಲು ಎದುರುನೋಡುತ್ತಿದ್ದೇನೆ ಎಂದು ಭಾವುಕ ನುಡಿಗಳನ್ನ ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.

    ರಿಷಬ್‌ಗೆ ಏನಾಗಿತ್ತು?
    2022ರ ಡಿಸೆಂಬರ್ 30ರಂದು ಟೀಂ ಇಂಡಿಯಾ ಆಟಗಾರ ರಿಷಭ್ ಪಂತ್ ಅವರು ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿತ್ತು. ಉತ್ತರಾಖಂಡದಲ್ಲಿರುವ ತಮ್ಮ ನಿವಾಸಕ್ಕೆ ತೆರಳುತ್ತಿದ್ದಾಗ ಹಮ್ಮದ್‌ಪುರ ಝಾಲ್ ಬಳಿ ರೂರ್ಕಿಯ ನರ್ಸನ್ ಗಡಿಯಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು, ಪಂತ್ ಗಂಭೀರವಾಗಿ ಗಾಯಗೊಂಡಿದ್ದರು. ರಿಷಭ್ ಪಂತ್ ಅವರ ತಲೆ (ಹಣೆಯ ಭಾಗ), ಕಾಲಿಗೆ ಗಂಭೀರ ಪೆಟ್ಟಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿತ್ತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜೋಶಿಮಠ ಮುಳುಗಡೆ – ಪ್ರತಿ ಸಂತ್ರಸ್ತ ಕುಟುಂಬಕ್ಕೆ 1.5 ಲಕ್ಷ ಪರಿಹಾರ

    ಜೋಶಿಮಠ ಮುಳುಗಡೆ – ಪ್ರತಿ ಸಂತ್ರಸ್ತ ಕುಟುಂಬಕ್ಕೆ 1.5 ಲಕ್ಷ ಪರಿಹಾರ

    ಡೆಹ್ರಾಡೂನ್: ಭೂಮಿ ಕುಸಿತದಿಂದಾಗಿ ತತ್ತರಿಸುತ್ತಿರುವ ಉತ್ತರಾಖಂಡದ (Uttarakhand) ಜೋಶಿಮಠದಲ್ಲಿ (Joshimath) ಮನೆಗಳನ್ನು ಕಳೆದುಕೊಂಡಿರುವ ಸಂತ್ರಸ್ತ ಕುಟುಂಬಗಳಿಗೆ ಅಲ್ಲಿನ ಸರ್ಕಾರ ತಲಾ 1.5 ಲಕ್ಷ ರೂ. ಪರಿಹಾರ (compensation) ನೀಡುವುದಾಗಿ ಘೋಷಿಸಿದೆ.

    ಕಳೆದ ವರ್ಷ ಡಿಸೆಂಬರ್‌ನಲ್ಲಿ ಜೋಶಿಮಠದ ಕೆಲವೆಡೆ ಬಿರುಕುಗಳು ಒಂದೊಂದಾಗಿಯೇ ಕಾಣಿಸಿಕೊಳ್ಳಲು ಪ್ರಾರಂಭಿಸಿತ್ತು. ಕೆಲವು ದಿನಗಳಲ್ಲಿ ಇದರ ತೀವ್ರತೆ ಹೆಚ್ಚಾಗಿ, ದುರಂತವಾಗಿ ಮಾರ್ಪಟ್ಟಿತು. ನಗರ ಮುಳುಗಡೆಯಾಗುವ ಭೀತಿಯಲ್ಲಿ (Joshimath Sinking) ಅಲ್ಲಿನ ನಿವಾಸಿಗಳಿದ್ದು, ಅಪಾಯದ ಸ್ಥಿತಿಯಲ್ಲಿರುವ ಕಟ್ಟಡಗಳನ್ನು ನೆಲಸಮಗೊಳಿಸಲು ಸರ್ಕಾರ ಮುಂದಾಗಿದೆ.

    ಜೋಶಿಮಠದಲ್ಲಿನ ರಸ್ತೆ, ಮನೆಗಳು ಸೇರಿದಂತೆ ಅನೇಕ ಕಡೆ ಬಿರುಕುಗಳು ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದೆ. ಅಲ್ಲಿ ವಾಸಿಸಲು ಅಪಾಯಕಾರಿ ಎಂದು ಗುರುತಿಸಲಾಗಿರುವ 600ಕ್ಕೂ ಹೆಚ್ಚು ಕಟ್ಟಡಗಳನ್ನು ನೆಲಸಮಗೊಳಿಸಲು ಸರ್ಕಾರ ಮಂಗಳವಾರ ಮುಂದಾಗಿತ್ತು. ಆದರೆ ಸ್ಥಳಿಯರು ಈ ನಡೆಗೆ ವಿರೋಧ ವ್ಯಕ್ತಪಡಿಸಿದ್ದರಿಂದ ನೆಲಸಮ ಕಾರ್ಯವನ್ನು ಸ್ಥಗಿತಗೊಳಿಸಲಾಗಿದೆ. ಇದನ್ನೂ ಓದಿ: ಜಾನ್ಸನ್‌ & ಜಾನ್ಸನ್‌ ಬೇಬಿ ಪೌಡರ್‌ ಉತ್ಪಾದನೆ, ಮಾರಾಟಕ್ಕೆ ಬಾಂಬೆ ಹೈಕೋರ್ಟ್‌ ಅನುಮತಿ

    ಸದ್ಯಕ್ಕೆ ನಗರದ ಮಲಾರಿ ಇನ್ ಹಾಗೂ ಮೌಂಟ್ ವ್ಯೂ ಹೆಸರಿನ 2 ಹೋಟೆಲ್‌ಗಳನ್ನು ಮಾತ್ರವೇ ನೆಲಸಮ ಮಾಡಲಾಗುತ್ತಿರುವುದಾಗಿ ವರದಿಯಾಗಿದೆ. ಸರ್ಕಾರ 1 ವಾರದೊಳಗೆ ಸ್ಥಳೀಯ ಮನೆಗಳ ಸಮೀಕ್ಷೆ ನಡೆಸಿ ಬಳಿಕ ನೆಲಸಮ ಕಾರ್ಯ ಮಾಡುವ ಬಗ್ಗೆ ತೀರ್ಮಾನ ಮಾಡಲಿದೆ ಎಂದು ವರದಿಯಾಗಿದೆ.

    ಜೋಶಿಮಠ ಮುಳುಗಡೆಯ ಹಿನ್ನೆಲೆ ಅಲ್ಲಿ ಸಾವಿರಾರು ನಿವಾಸಿಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಗೊಳಿಸಲಾಗುತ್ತಿದೆ. ಉತ್ತರಾಖಂಡ ಸರ್ಕಾರ ಸಂತ್ರಸ್ತ ಕುಟುಂಬಗಳಿಗೆ 1.5 ಲಕ್ಷ ರೂ. ಪರಿಹಾರ ಘೋಷಿಸಿದೆ. ಕೆಡವಲಾಗುತ್ತಿರುವ ಹೋಟೆಲ್‌ಗಳ ಆಸ್ತಿಯ ಬಗ್ಗೆ ಸಮೀಕ್ಷೆ ನಡೆಸಿ ಪರಿಹಾರವನ್ನು ಘೋಷಿಸಲಾಗುವುದು ಎಂದು ತಿಳಿಸಲಾಗಿದೆ. ಇದನ್ನೂ ಓದಿ: ಮೆಟ್ರೋ ದುರಂತ: ತನಿಖೆ ನಡೆಸಿ ವರದಿ ಸಲ್ಲಿಸಿಲು ಐಐಎಸ್‍ಸಿಗೆ ಮನವಿ – ಮತ್ತಷ್ಟು ಅಧಿಕಾರಿಗಳ ತಲೆದಂಡ ಸಾಧ್ಯತೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜೋಶಿಮಠದ ಅಪಾಯಕಾರಿ ಕಟ್ಟಡ ನೆಲಸಮ ಕಾರ್ಯಾಚರಣೆ ಪ್ರಾರಂಭ – 600ಕ್ಕೂ ಹೆಚ್ಚು ಕಡೆ ಗುರುತು

    ಜೋಶಿಮಠದ ಅಪಾಯಕಾರಿ ಕಟ್ಟಡ ನೆಲಸಮ ಕಾರ್ಯಾಚರಣೆ ಪ್ರಾರಂಭ – 600ಕ್ಕೂ ಹೆಚ್ಚು ಕಡೆ ಗುರುತು

    ಡೆಹ್ರಾಡೂನ್: ಮುಳುಗಡೆಯಾಗುತ್ತಿರುವ ಪಟ್ಟಣ ಎಂದೇ ಕರೆಸಿಕೊಳ್ಳುತ್ತಿರುವ ಉತ್ತರಾಖಂಡದ (Uttarakhand) ಜೋಶಿಮಠದಲ್ಲಿ (Joshimath) ತೀವ್ರವಾಗಿ ಬಿರುಕುಬಿಟ್ಟಿರುವ ಹಾಗೂ ಅಪಾಯದ ಸ್ಥಿತಿಯಲ್ಲಿರುವ ಕಟ್ಟಡಗಳನ್ನು ನೆಲಸಮಗೊಳಿಸುವ (Demolition) ಕಾರ್ಯ ಮಂಗಳವಾರದಿಂದ ಪ್ರಾರಂಭವಾಗಿದೆ.

    ಉತ್ತರಾಖಂಡದ ಜೋಶಿಮಠದಲ್ಲಿ ಎಲ್ಲೆಡೆ ಭೂಕುಸಿತಗಳು ಉಂಟಾಗುತ್ತಿದ್ದು, ಕಟ್ಟಡಗಳು ಬಿರುಕು ಬಿಡುತ್ತಿವೆ. ರಸ್ತೆಗಳಲ್ಲಿಯೂ ತೀವ್ರ ಸ್ವರೂಪದ ಬಿರುಕುಗಳು ಕಾಣಿಸಿಕೊಳ್ಳುತ್ತಿವೆ. ಕ್ಷಣ ಕ್ಷಣಕ್ಕೂ ಅಲ್ಲಿನ ಜನರು ನಗರ ಮುಳುಗಡೆಯ (Joshimath Sinking) ಭೀತಿಯಲ್ಲಿ ದಿನದೂಡುತ್ತಿದ್ದಾರೆ.

    ಈಗಾಗಲೇ ನಗರದ ಸುಮಾರು 670 ಮನೆಗಳು ಬಿರುಕುಬಿಟ್ಟಿದ್ದು, ಅವುಗಳಲ್ಲಿ ಹೆಚ್ಚಿನವುಗಳನ್ನು ನೆಲಸಮಗೊಳಿಸಲು ನಿರ್ಧರಿಸಲಾಗಿದೆ. ನೆಲಸಮಗೊಳಿಸುವಂತಹ ಕಟ್ಟಡಗಳಿಗೆ ಈಗಾಗಲೇ ಕೆಂಪು ಬಣ್ಣದ ಗುರುತುಗಳನ್ನು ಮಾಡಲಾಗಿದೆ.

    ನಗರದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ನಿವಾಸಿಗಳನ್ನು ತಾತ್ಕಾಲಿಕ ಆಶ್ರಯಗಳಿಗೆ ಕಳುಹಿಸಲಾಗುತ್ತಿದೆ. ಈಗಾಗಲೇ 678 ಕಟ್ಟಡಗಳನ್ನು ಅಸುರಕ್ಷಿತ ಎಂದು ಗುರುತಿಸಲಾಗಿದ್ದು, ಅವುಗಳನ್ನು ತೆರವುಗೊಳಿಸಲು ಪ್ರಾರಂಭಿಸಲಾಗಿದೆ. 81 ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಅಗತ್ಯವಿರುವಂತಹ ಕೆಲವು ಪ್ರದೇಶಗಳನ್ನು ಸೀಲ್ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮೆಟ್ರೋ ಪಿಲ್ಲರ್ ಕುಸಿತ – ಮೃತ ಕುಟುಂಬಕ್ಕೆ 20 ಲಕ್ಷ ಪರಿಹಾರ : BMRC

    ಜೋಶಿಮಠವನ್ನು ಈಗಾಗಲೇ ವಿಪತ್ತು ಪೀಡಿತ ವಲಯವೆಂದು ಘೋಷಿಸಲಾಗಿದೆ. ಜೋಶಿಮಠ ಮತ್ತು ಸಮೀಪದ ಪ್ರದೇಶಗಳಲ್ಲಿ ನಿರ್ಮಾಣ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ. ಜೋಶಿಮಠದ ಶೇ.30 ರಷ್ಟು ಹಾನಿಯಾಗಿದೆ ಎಂದು ವರದಿಯಾಗಿದೆ. ತಜ್ಞರ ಸಮಿತಿಯಿಂದ ವರದಿಯನ್ನು ಸಂಗ್ರಹಿಸಲಾಗುತ್ತಿದೆ. ಅದನ್ನು ಪ್ರಧಾನ ಮಂತ್ರಿ ಕಚೇರಿಗೆ ಸಲ್ಲಿಸಲಾಗುವುದು ಎಂದು ಅಕಾರಿಯೊಬ್ಬರು ತಿಳಿಸಿದ್ದಾರೆ.

    ಸಂತ್ರಸ್ತರ ರಕ್ಷಣೆ ಹಾಗೂ ಜೋಶಿಮಠವನ್ನು ಉಳಿಸುವ ಕಾರ್ಯಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮನವಿ ಮಾಡಿಕೊಂಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೇಂದ್ರ ಸರ್ಕಾರದಿಂದ ಎಲ್ಲಾ ರೀತಿಯ ನೆರವು ನೀಡಲಾಗುವುದು ಎಂದು ಈಗಾಗಲೇ ಘೋಷಿಸಿದ್ದಾರೆ. ಇದನ್ನೂ ಓದಿ: ಪೆರುವಿನಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆ – ಭದ್ರತಾ ಪಡೆ ಗುಂಡೇಟಿಗೆ 12 ಬಲಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜೋಶಿಮಠ ಮುಳುಗುವ ಆತಂಕ – ಪರಿಸ್ಥಿತಿ ಅವಲೋಕಿಸಲು ತಜ್ಞರ ತಂಡಕ್ಕೆ ಸೂಚನೆ

    ಜೋಶಿಮಠ ಮುಳುಗುವ ಆತಂಕ – ಪರಿಸ್ಥಿತಿ ಅವಲೋಕಿಸಲು ತಜ್ಞರ ತಂಡಕ್ಕೆ ಸೂಚನೆ

    ಡೆಹ್ರಾಡೂನ್: ಜೋಶಿಮಠದ (Joshimath) ನಿವಾಸಿಗಳು ತಮ್ಮ ಮನೆಗಳು, ರಸ್ತೆಗಳಲ್ಲಿ ಉಂಟಾಗಿರುವ ದೊಡ್ಡ ಬಿರುಕುಗಳಿಂದ ಅತೀವ ಅತಂಕಕ್ಕೀಡಾಗಿದ್ದಾರೆ. 500ಕ್ಕೂ ಹೆಚ್ಚು ಮನೆಗಳು ಬಿರುಕು ಬಿಟ್ಟಿರುವ ಹಿನ್ನೆಲೆಯಲ್ಲಿ ಜನರು ಮನೆಗಳನ್ನು ತೊರೆದು ಸುರಕ್ಷಿತ ಸ್ಥಳಗಳಿಗೆ ತೆರಳುತ್ತಿದ್ದಾರೆ.

    ಈ ಕುರಿತು ಕೇಂದ್ರ ಗೃಹ ಸಚಿವಾಲಯದ ಉನ್ನತ ಅಧಿಕಾರಿಗಳು ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (NDMA) ಸದಸ್ಯರು ಉತ್ತರಾಖಂಡದ (Uttarakhand) ಜೋಶಿಮಠಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಲಿದ್ದಾರೆ. ಚಮೋಲಿ ಜಿಲ್ಲೆಯಲ್ಲಿರುವ ಜೋಶಿಮಠ ಉಳಿಸುವ ಎಲ್ಲ ಕ್ರಮ ಕೈಗೊಳ್ಳಲಿದ್ದಾರೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ (PMO) ಹೇಳಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಸ್ಪರ್ಧೆ ಘೋಷಣೆ ಮಾಡಿದ್ರೆ ರಾಜಕೀಯ ಎದುರಾಳಿಗಳಿಗೆ ಸಂಕಷ್ಟನಾ..?

    ಭಾನುವಾರ ಪ್ರಧಾನಮಂತ್ರಿ ಕಾರ್ಯಾಲಯದಲ್ಲಿ ನಡೆದ ಪರಿಶೀಲನಾ ಸಭೆಯ ನಂತರ ಗೃಹ ಸಚಿವಾಲಯದ ಗಡಿ ನಿರ್ವಹಣಾ ಕಾರ್ಯದರ್ಶಿ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸದಸ್ಯರು ಉತ್ತರಾಖಂಡಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಅವಲೋಕಿಸಲು ನಿಧರ್ರಿಸಲಾಯಿತು. ಪ್ರಧಾನಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಪಿ.ಕೆ ಮಿಶ್ರಾ, ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ ಅವರು ನಡೆಸಿದ ಸಭೆಯಲ್ಲಿದ್ದರು. ಇದನ್ನೂ ಓದಿ:  ಬಂಗಾಳದಲ್ಲಿ ವಂದೇ ಭಾರತ್ ರೈಲಿಗೆ ಕಲ್ಲು ಎಸೆದಿಲ್ಲ: NFR ಸ್ಪಷ್ಟನೆ

    ಸದ್ಯ ಸಂತ್ರಸ್ತರಿಗೆ ನೈತಿಕ ಬೆಂಬಲದ ಅಗತ್ಯವಿದೆ. ಆದ್ದರಿಂದ ವಿಭಿನ್ನ ಕ್ಷೇತ್ರಗಳಲ್ಲಿ ಪರಿಣತಿ ಹೊಂದಿರುವ ತಜ್ಞರನ್ನು ಆಹ್ವಾನಿಸಿದ್ದೇವೆ. ಜ್ಯೋತಿಷಿಗಳಿಂದ ಧರ್ಮ ಶಾಸ್ತ್ರಿಗಳವರೆಗೂ ಜ್ಯೋತಿರ್ಮಠವನ್ನು ಸಂರಕ್ಷಿಸುವ ಆಚರಣೆಗಳ ಬಗ್ಗೆ ಅವರು ನಮಗೆ ತಿಳಿಸಿದ್ದಾರೆ ಎಂದು ಧಾರ್ಮಿಕ ಗುರು ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಹೇಳಿದ್ದಾರೆ.

    ಇದೇ ತಿಂಗಳ ಜನವರಿ 22-31ರ ವರೆಗೆ ನರಸಿಂಗ ದೇವಸ್ಥಾನದಲ್ಲಿ ವಿಶೇಷ ಯಾಗ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಅದನ್ನು ನಾವು ಮಾಡೇ ಮಾಡುತ್ತೇವೆ. ಹೊರತಾಗಿ ಪರಿಸ್ಥಿತಿಗೆ ಕಾರಣವೇನೆಂಬುದನ್ನು ತನಿಖೆ ಮಾಡಲು ತಜ್ಞರನ್ನು ಸಹ ಕರೆಸಬೇಕು. ಅಲ್ಲಿವರೆಗೆ ನಾವು ನೊಂದ ಜನರೊಂದಿಗೆ ನಿಲ್ಲುತ್ತೇವೆ ಎಂದು ಗುರು ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ತಿಳಿಸಿದ್ದಾರೆ.

    ನಾವು ಸಹ ಸುಪ್ರೀಂ ಕೋರ್ಟ್‌ (Supreme Court) ಮೊರೆ ಹೋಗಿದ್ದೇವೆ. ನಮ್ಮೊಂದಿಗೆ ನಮ್ಮ ಕಾನೂನು ತಂಡವಿದೆ. ಈ ವಿಷಯವನ್ನು ಸಿಜೆಐ ಮುಂದೆ ಮಂಡಿಸಿ ತುರ್ತು ವಿಚಾರಣೆಗೆ ಮನವಿ ಮಾಡಲಾಗುವುದು. ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಒತ್ತಾಯಿಸಲಾಗುವುದು ಎಂದು ಧಾರ್ಮಿಕ ಗುರು ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಹೇಳಿದ್ದಾರೆ.

    ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ, ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ, ಐಐಟಿ ರೂರ್ಕಿ, ವಾಡಿಯಾ ಇನ್‌ಸ್ಟಿಟ್ಯೂಟ್ ಆಫ್ ಹಿಮಾಲಯನ್ ಜಿಯಾಲಜಿ, ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹೈಡ್ರಾಲಜಿ ಮತ್ತು ಸೆಂಟ್ರಲ್ ಬಿಲ್ಡಿಂಗ್ ರಿಸರ್ಚ್ ಇನ್‌ಸ್ಟಿಟ್ಯೂಟ್‌ನ ತಜ್ಞರ ತಂಡಗಳು ಅಧ್ಯಯನ ಮಾಡುವಂತೆ ನಿರ್ದೇಶನ ನೀಡಲಾಗಿದೆ.

    ಎನ್‌ಡಿಆರ್‌ಎಫ್‌ನ ಒಂದು ತಂಡ ಮತ್ತು ಎಸ್‌ಡಿಆರ್‌ಎಫ್‌ನ 4 ತಂಡಗಳು ಈಗಾಗಲೇ ಜೋಶಿಮಠಕ್ಕೆ ತಲುಪಿದ್ದು, ಸಂತ್ರಸ್ತ ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರೊಂದಿಗೆ ಮಾತನಾಡಿದ್ದಾರೆ. ಪುನರ್ವಸತಿ ಹಾಗೂ ಪರಿಹಾರ ಕಾರ್ಯಗಳಲ್ಲಿ ಎಲ್ಲಾ ರೀತಿಯ ನೆರವನ್ನು ನೀಡುವುದಾಗಿ ಘೋಷಣೆ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜೋಶಿಮಠದ ಬಳಿಕ ಕರ್ಣಪ್ರಯಾಗದಲ್ಲಿ ಭೂಮಿ, ಮನೆಯ ಗೋಡೆ ಬಿರುಕು – ಮುಳುಗಡೆ ಭೀತಿ, ಆತಂಕದಲ್ಲಿ ಜನ

    ಜೋಶಿಮಠದ ಬಳಿಕ ಕರ್ಣಪ್ರಯಾಗದಲ್ಲಿ ಭೂಮಿ, ಮನೆಯ ಗೋಡೆ ಬಿರುಕು – ಮುಳುಗಡೆ ಭೀತಿ, ಆತಂಕದಲ್ಲಿ ಜನ

    ಡೆಹ್ರಾಡೂನ್: ಉತ್ತರಾಖಂಡದ (Uttarakhand) ಬೆಟ್ಟ ಪ್ರದೇಶಗಳ ಭೂಮಿ ಮುಳುಗಡೆ ಭೀತಿ ಎದುರಾಗಿದೆ. ಜೋಶಿಮಠದಲ್ಲಿ (Joshimath) ಕೆಲದಿನಗಳಿಂದ ಅಲ್ಲಲ್ಲಿ ಭೂಮಿಯಲ್ಲಿ ಬಿರುಕು ಕಾಣಿಸಿಕೊಳ್ಳುತ್ತಿದೆ. ಈ ನಡುವೆ ಕರ್ಣಪ್ರಯಾಗದಲ್ಲೂ (Karnaprayag) ಇದೇ ರೀತಿಯ ಪ್ರಕರಣಗಳು ವರದಿಯಾಗಿದ್ದು ಜನ ಭಯಭೀತರಾಗಿದ್ದಾರೆ.

    ಕರ್ಣಪ್ರಯಾಗದಲ್ಲಿ 50ಕ್ಕೂ ಹೆಚ್ಚು ಮನೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ. ಭೂಮಿ ಮುಳುಗಡೆಯ ಭೀತಿ ಕಾಡುತ್ತಿದೆ. ಶನಿವಾರ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ (Pushkar Singh Dhami) ಭೇಟಿ ನೀಡಿ ಪರಿಸ್ಥಿಯ ಕುರಿತು ಮಾಹಿತಿ ಸಂಗ್ರಹಿಸಲಿದ್ದಾರೆ. ಈಗಾಗಲೇ ಕುಸಿತದ ಭೀತಿಯಲ್ಲಿರುವ 600ಕ್ಕೂ ಹೆಚ್ಚು ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

    ಗರ್ವಾಲ್ ಕಮಿಷನರ್ ಸುಶೀಲ್ ಕುಮಾರ್ ಮತ್ತು ವಿಪತ್ತು ನಿರ್ವಹಣಾ ಕಾರ್ಯದರ್ಶಿ ರಂಜಿತ್ ಕುಮಾರ್ ಸಿನ್ಹಾ ಸೇರಿದಂತೆ ತಜ್ಞ ಭೂವಿಜ್ಞಾನಿಗಳ ತಂಡವು ಜೋಶಿಮಠದಲ್ಲಿ ಭೂ ಮುಳುಗಡೆ ಪೀಡಿತ ಪ್ರದೇಶಗಳ ಆಳವಾದ ಸಮೀಕ್ಷೆಯನ್ನು ನಡೆಸಿದೆ. ಭೂಮಿಯಲ್ಲಿ ಬಿರುಕು ಕಣಿಸಿಕೊಳ್ಳಲು ಕಾರಣ ಏನು ಎಂಬ ಕುರಿತು ಪತ್ತೆ ಕಾರ್ಯ ನಡೆಯುತ್ತಿದೆ. ಜೋಶಿಮಠದಲ್ಲಿ ಎನ್‍ಡಿಆರ್‌ಎಫ್‌ ತಂಡವನ್ನು ನಿಯೋಜಿಸಲು ಸೂಚನೆ ನೀಡಲಾಗಿದೆ. ಬಿರುಕು ಕಾಣಿಸಿಕೊಂಡ ರಸ್ತೆ, ಮನೆ, ಕಟ್ಟಡ ಸೇರಿದಂತೆ ಎಲ್ಲಾಕಡೆ ತಜ್ಞರ ತಂಡ ಭೇಟಿ ನೀಡಿ ಪರಿಶೀಲಿಸಿದೆ. ಇದನ್ನೂ ಓದಿ: 13 ವರ್ಷಗಳ ಬಳಿಕ ಗಣರಾಜ್ಯೋತ್ಸವ ಪರೇಡ್‍ನಲ್ಲಿ ಕರ್ನಾಟಕದ ಟ್ಯಾಬ್ಲೋಗಿಲ್ಲ ಅವಕಾಶ

    ಈ ವೇಳೆ ಜೋಶಿಮಠದ ಮನೋಹರ್ ಬಾಗ್, ಸಿಂಗ್ಧರ್, ಜೆಪಿ, ಮಾರ್ವಾರಿ, ಸುನೀಲ್ ಗಾಂವ್, ವಿಷ್ಣು ಪ್ರಯಾಗ, ರವಿಗ್ರಾಮ, ಗಾಂಧಿನಗರ ಮೊದಲಾದ ಪ್ರದೇಶಗಳಲ್ಲಿ ಮನೆ ಮನೆಗೆ ತೆರಳಿ ಸಮೀಕ್ಷೆ ನಡೆಸಲಾಗಿದೆ. ಜೊತೆಗೆ ತಪೋವನಕ್ಕೆ ಭೇಟಿ ನೀಡಿ ಎನ್‍ಟಿಪಿಸಿ ಸುರಂಗದ ಒಳಗೆ ಮತ್ತು ಹೊರಗೆ ನಡೆಯುತ್ತಿರುವ ಕಾಮಗಾರಿಗಳ ಪರಿಶೀಲನೆ ನಡೆಸಲಾಗಿದೆ. ಸುಮಾರು 50,000 ಜನಸಂಖ್ಯೆಯೊಂದಿಗೆ, ಕರ್ಣಪ್ರಯಾಗವು ಸಮುದ್ರ ಮಟ್ಟದಿಂದ 860 ಮೀಟರ್ ಎತ್ತರದಲ್ಲಿದೆ. ಜೋಶಿಮಠವು 1,890 ಮೀಟರ್ ಎತ್ತರದಲ್ಲಿದೆ. ಕರ್ಣಪ್ರಯಾಗವು ಜೋಶಿಮಠದಿಂದ 80 ಕಿ.ಮೀ ದೂರದಲ್ಲಿದೆ ಆದರೂ ಈ ಎರಡೂ ಪ್ರದೇಶಗಳಲ್ಲಿ ಇದೀಗ ಭೂಮಿ ಬಿರುಕು ಬಿಡುತ್ತಿರುವುದು ಕಂಡುಬರುತ್ತಿದೆ. ಇದನ್ನೂ ಓದಿ: ಜೋಶಿಮಠದಲ್ಲಿ ಬಿರುಕು ಬಿಟ್ಟ 500ಕ್ಕೂ ಹೆಚ್ಚು ಮನೆಗಳು – ನಗರ ಮುಳುಗುವ ಆತಂಕದಲ್ಲಿ ಜನರು

    ಬಹುಗುಣನಗರ, ಸಿಎಂಪಿ ಬ್ಯಾಂಡ್ ಮತ್ತು ಕರ್ಣಪ್ರಯಾಗದ ಸಬ್ಜಿ ಮಂಡಿಯ ಮೇಲ್ಭಾಗದಲ್ಲಿ ವಾಸಿಸುವ 50ಕ್ಕೂ ಹೆಚ್ಚು ಕುಟುಂಬಗಳು ಆತಂಕದಲ್ಲಿವೆ. ಇಲ್ಲಿ ಮನೆಗಳ ಗೋಡೆ, ಅಂಗಳದಲ್ಲಿ ಬಿರುಕು ಕಾಣಿಸಿಕೊಂಡಿದ್ದು ಮನೆಗಳ ಮೇಲ್ಛಾವಣಿ ಕುಸಿತದ ಭೀತಿ ಹುಟ್ಟಿಸಿದೆ. 25 ಮನೆಗಳು ಬಿರುಕು ಬಿಟ್ಟಿವೆ. ಜೋಶಿಮಠದಲ್ಲಿ ಭೂ ಕುಸಿತದ ಕುರಿತು ಅಧ್ಯಯನ ನಡೆಸಲು ಕೇಂದ್ರವು ಸಮಿತಿಯನ್ನು ರಚಿಸಿದೆ. ಸಮಿತಿಯು ಪರಿಸರ ಮತ್ತು ಅರಣ್ಯ ಸಚಿವಾಲಯ, ಕೇಂದ್ರ ಜಲ ಆಯೋಗ, ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ಮತ್ತು ಗಂಗಾ ಶುದ್ಧೀಕರಣಕ್ಕಾಗಿ ರಾಷ್ಟ್ರೀಯ ಮಿಷನ್ ಪ್ರತಿನಿಧಿಗಳನ್ನು ಒಳಗೊಂಡಿದ್ದು ಸರ್ವೆ ಕಾರ್ಯ ಆರಂಭಿಸಿದ್ದಾರೆ.

    ಬಿರುಕು ಯಾಕೆ?
    ಬಿರುಕು ಬಿಡುವುದಕ್ಕೆ ಕಾರಣ ಭೂಕುಸಿತ. ಭೂಮಿ ಅಡಿಯಲ್ಲಿರುವ ಬಂಡೆಯಿಂದ ಅಂತರ್ಜಲ ಈಗ ಹರಿದು ಬರುತ್ತಿದೆ. ಗಣಿಗಾರಿಕೆ ಇತ್ಯಾದಿ ಚಟುವಟಿಕೆಯಿಂದ ಅಡಿಯಿಂದ ಅಂತರ್ಜಲ ಅಥವಾ ಇಂಧನದಂತಹ ದ್ರವಗಳನ್ನು ಪಂಪ್ ಮಾಡುವುದರಿಂದ ಶಿಲೆಗಳು ಅದುರುತ್ತಿವೆ. ಇದರಿಂದಾಗಿ ಮಣ್ಣು ಸವೆಯುತ್ತಿದ್ದು ಭೂಮಿ ಬಿರುಕು ಬಿಡುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜೋಶಿಮಠದಲ್ಲಿ ಬಿರುಕು ಬಿಟ್ಟ 500ಕ್ಕೂ ಹೆಚ್ಚು ಮನೆಗಳು – ನಗರ ಮುಳುಗುವ ಆತಂಕದಲ್ಲಿ ಜನರು

    ಜೋಶಿಮಠದಲ್ಲಿ ಬಿರುಕು ಬಿಟ್ಟ 500ಕ್ಕೂ ಹೆಚ್ಚು ಮನೆಗಳು – ನಗರ ಮುಳುಗುವ ಆತಂಕದಲ್ಲಿ ಜನರು

    ಡೆಹ್ರಾಡೂನ್: ಉತ್ತರಾಖಂಡದ (Uttarakhand) ಜೋಶಿಮಠದಲ್ಲಿ (Joshimath) ಇತ್ತೀಚಿನ ದಿನಗಳಲ್ಲಿ 561 ಮನೆಗಳು ಬಿರುಕು (Cracks) ಬಿಟ್ಟಿವೆ. ಕೆಲವು ರಸ್ತೆಗಳಲ್ಲಿಯೂ ಬಿರುಕು ಕಾಣಿಸಿಕೊಂಡಿವೆ. ಜೋಶಿಮಠ ಮುಳುಗುತ್ತಿದೆ (Joshimath Sinking) ಎಂಬ ಆತಂಕ ಇಲ್ಲಿನ ನಿವಾಸಿಗಳು ಹಾಗೂ ಸರ್ಕಾರವನ್ನು ಆತಂಕಕ್ಕೆ ದೂಡಿದೆ. ಬಿರುಕು ಬಿಟ್ಟಿರುವ ಹಿನ್ನೆಲೆಯಲ್ಲಿ ಜನರು ಮನೆಗಳನ್ನು ತೊರೆದು ಸುರಕ್ಷಿತ ಸ್ಥಳಗಳಿಗೆ ತೆರಳುತ್ತಿದ್ದಾರೆ. ಭೂಕುಸಿತದಿಂದ (Landslide) ಮನೆ ಕುಸಿದು ಬೀಳುವ ಭೀತಿ ನಗರದ ನಿವಾಸಿಗಳನ್ನು ಕಾಡುತ್ತಿದೆ.

    ಉತ್ತರಾಖಂಡದಲ್ಲಿ ಆಗುತ್ತಿರುವ ಈ ಬದಲಾವಣೆ ಹಾಗೂ ಅದರಿಂದಾಗುತ್ತಿರುವ ಹಾನಿಯನ್ನು ನಿರ್ಣಯಿಸಲು ಉತ್ತರಾಖಂಡ ಭಾರತೀಯ ಜನತಾ ಪಕ್ಷ (ಬಿಜೆಪಿ) 14 ಸದಸ್ಯರ ಸಮಿತಿಯನ್ನು ರಚಿಸಿದೆ. ಜಿಲ್ಲೆಯಲ್ಲಿ ಭೂ ಕುಸಿತ ಮುಂದುವರಿದಿದ್ದು, ಮಾರ್ವಾಡಿಯ ಜೆಪಿ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ 561 ಮನೆಗಳು ಬಿರುಕು ಬಿಟ್ಟಿವೆ. ಭೂಗರ್ಭದಿಂದ ನೀರು ಸೋರಿಕೆಯಾಗುತ್ತಿದೆ ಎಂದು ಚಮೋಲಿ ಜಿಲ್ಲಾ ವಿಪತ್ತು ನಿರ್ವಹಣಾ ಇಲಾಖೆ ತಿಳಿಸಿದೆ.

    ಸಿಂಘಧಾರ್, ಮಾರ್ವಾಡಿ, ಕೆಲವು ಸಾರ್ವಜನಿಕ ರಸ್ತೆಗಳು ಹಾಗೂ ಮುಖ್ಯ ರಸ್ತೆಗಳ ಬಿರುಕುಗಳನ್ನು ಸರಿಪಡಿಸಲಾಗುತ್ತಿದೆ. ಪ್ರತಿ ಗಂಟೆಗೊಮ್ಮೆ ಬಿರುಕುಗಳು ಹೆಚ್ಚಾಗುತ್ತಲೇ ಇವೆ. ಇದು ಆತಂಕಕ್ಕೆ ಕಾರಣವಾಗುತ್ತಿದೆ ಎಂದು ಜೋಶಿಮಠ ಪುರಸಭೆ ಅಧ್ಯಕ್ಷ ಶೈಲೇಂದ್ರ ಪನ್ವಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಮುಂದಿನ ತಿಂಗಳು ಪ್ರಧಾನಿ, ರಾಷ್ಟ್ರಪತಿಗಳಿಂದ ದಶಪಥ ರಸ್ತೆ ಲೋಕಾರ್ಪಣೆ

    ಬಿರುಕು ಯಾಕೆ?
    ಜೋಶಿಮಠದಲ್ಲಿ ತೀವ್ರವಾಗಿ ರಸ್ತೆ ಹಾಗೂ ಮನೆಗಳಲ್ಲಿ ಬಿರುಕು ಬಿಡುವುದಕ್ಕೆ ಕಾರಣ ಭೂಕುಸಿತ. ಭೂಮಿ ಅಡಿಯಲ್ಲಿರುವ ಬಂಡೆಯಿಂದ ಅಂತರ್ಜಲ ಈಗ ಹರಿದು ಬರುತ್ತಿದೆ. ಗಣಿಗಾರಿಕೆ ಇತ್ಯಾದಿ ಚಟುವಟಿಕೆಯಿಂದ ಅಡಿಯಿಂದ ಅಂತರ್ಜಲ ಅಥವಾ ಇಂಧನದಂತಹ ದ್ರವಗಳನ್ನು ಪಂಪ್ ಮಾಡುವುದರಿಂದ ಶಿಲೆಗಳು ಅದುರುತ್ತಿವೆ. ಇದರಿಂದಾಗಿ ಮಣ್ಣು ಸವೆಯುತ್ತಿದ್ದು ಭೂಮಿ ಬಿರುಕು ಬಿಡುತ್ತಿದೆ.

    ಈಗಾಗಲೇ ಜಿಲ್ಲೆಯ 500ಕ್ಕೂ ಹೆಚ್ಚು ಮನೆಗಳು ಹಾನಿಯಾಗಿದ್ದು, ಇದು ಸುಮಾರು 3,000 ಜನರ ಮೇಲೆ ಪರಿಣಾಮ ಬೀರಿದೆ. ಜಿಲ್ಲೆಯ ನಿವಾಸಿಗಳಿಗೆ ಎಲ್ಲಾ ರೀತಿಯ ಅಗತ್ಯಗಳನ್ನು ಪೂರೈಸಲು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಕಸ ಗುಡಿಸುವ ಮೂಲಕ ಕ್ಲೀನ್ ಚಿಕ್ಕಬಳ್ಳಾಪುರ ಅಭಿಯಾನಕ್ಕೆ ಸುಧಾಕರ್ ಚಾಲನೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ರಿಷಭ್ ಪಂತ್ ತಾಯಿಗೆ ಕರೆ ಮಾಡಿ ಅಭಯ ನೀಡಿದ ಮೋದಿ

    ರಿಷಭ್ ಪಂತ್ ತಾಯಿಗೆ ಕರೆ ಮಾಡಿ ಅಭಯ ನೀಡಿದ ಮೋದಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ತಮ್ಮ ತಾಯಿ ಹೀರಾಬೆನ್ ಕಳೆದುಕೊಂಡ ದುಃಖದಲ್ಲಿದ್ದರೂ ರಿಷಭ್ ಪಂತ್ (Rishabh Pant) ಅವರ ಆರೋಗ್ಯದ ಬಗ್ಗೆ ಕ್ಷಣ-ಕ್ಷಣದ ಮಾಹಿತಿ ಪಡೆಯುತ್ತಿದ್ದಾರೆ. ನಿನ್ನೆಯಷ್ಟೇ ಟ್ವೀಟ್ ಮೂಲಕ ಶೀಘ್ರ ಗುಣಮುಖರಾಗುವಂತೆ ಪ್ರಾರ್ಥಿಸಿದ್ದ ಮೋದಿ ಅವರಿಂದು ಪಂತ್ ಅವರ ಕುಟುಂಬಕ್ಕೆ ಕರೆ ಮಾಡಿ ಅಭಯ ನೀಡಿದ್ದಾರೆ.

    ಇಂದು ಬೆಳಗ್ಗೆ ಪಂತ್ ಅವರ ತಾಯಿಗೆ ಕರೆ ಮಾಡಿ, ರಿಷಭ್ ಅವರ ಆರೋಗ್ಯ ಸ್ಥಿತಿಗತಿಯ ಬಗ್ಗೆ ಸಮಗ್ರ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೇ ರಿಷಭ್ ಅವರು ಶೀಘ್ರವೇ ಗುಣಮುಖರಾಗಿ ಬರಲಿದ್ದಾರೆ. ಅದಕ್ಕೆ ಅಗತ್ಯ ರೀತಿಯ ಎಲ್ಲ ಸಹಕಾರಗಳನ್ನು ನೀಡಲಾಗುವುದು ಎಂದು ಅಭಯ ನೀಡಿದ್ದಾರೆ. ಇದನ್ನೂ ಓದಿ: ಮ್ಯಾಂಚೆಸ್ಟರ್ ಯುನೈಟೆಡ್ ತಂಡಕ್ಕೆ ಗುಡ್ ಬೈ – ಸೌದಿ ಅರೇಬಿಯಾ ಪಾಲಾದ ರೊನಾಲ್ಡೊ

    `ಖ್ಯಾತ ಕ್ರಿಕೆಟಿಗ ಪಂತ್ ಅಪಘಾತಕ್ಕೀಡಾಗಿ ಆಸ್ಪತ್ರೆ ಸೇರಿರುವುದನ್ನು ಅರಿತು ಪಂತ್‌ಗೆ ಅಪಘಾತವಾಗಿರುವ ಸುದ್ದಿ ಕೇಳಿ ದುಃಖವಾಗಿದೆ. ಆದಷ್ಟು ಬೇಗ ಆರೋಗ್ಯ ಸುಧಾರಿಸಲಿ, ಚೇತರಿಕೆ ಕಾಣಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ’ ಎಂದು ನಿನ್ನೆಯಷ್ಟೇ ಟ್ವೀಟ್ ಮಾಡಿದ್ದರು. ಇದನ್ನೂ ಓದಿ: ತಾಯಿ ಮಡಿದ ನೋವಿನಲ್ಲೂ ಪಂತ್ ಆರೋಗ್ಯ ಚೇತರಿಕೆಗಾಗಿ ಹಾರೈಸಿದ ಮೋದಿ

    ಕ್ರಿಕೆಟ್ ನೋಡಬೇಡಿ: ರಿಷಭ್ ಪಂತ್ ಅವರನ್ನು ಅಪಘಾತ ಸ್ಥಳದಿಂದ ರಕ್ಷಿಸಿದ ಬಸ್ ಡ್ರೈವರ್ ಸುಶೀಲ್ ಕುಮಾರ್ ಘಟನೆಯ ಸನ್ನಿವೇಶವನ್ನು ಎಳೆ-ಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಅಲ್ಲದೇ ಅವರನ್ನು ಗುರುತಿಸದಿದ್ದ ಮೇಲೆ ಕ್ರಿಕೆಟ್ ನೋಡಬೇಡಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಭಯೋತ್ಪಾದನೆಯಿಂದ ಭಾರತ ನೊಂದಷ್ಟು ಬೇರಾವ ದೇಶವೂ ನೊಂದಿಲ್ಲ: ಜೈಶಂಕರ್

    ರಿಷಭ್ ಪಂತ್ ಅವರನ್ನು ನೋಡಿದಾಗ ಮುಖವೆಲ್ಲಾ ರಕ್ತದ ಮಡುವಿನಲ್ಲಿತ್ತು. ಬಟ್ಟೆ ಚಿಂದಿಯಾಗಿ ಅವರ ಬೆನ್ನೆಲ್ಲಾ ತರಚಿದ ಗಾಯಗಳಾಗಿತ್ತು. ಅತೀವ ನೋವಿನಿಂದ ಬಳಲಿದ್ದ ಅವರು ಕುಂಟುತ್ತಿದ್ದರು, ಎಂದು ಸುಶೀಲ್ ಕುಮಾರ್ ಸಂದರ್ಶನದಲ್ಲಿ ಘಟನೆಯ ವಿವರಗಳನ್ನು ತೆರೆದಿಟ್ಟಿದ್ದಾರೆ. ನಾವು ಸಹಾಯಕ್ಕಾಗಿ ಕೂಗಿದರೂ ಯಾರೊಬ್ಬರೂ ಬರಲಿಲ್ಲ. ರಾಷ್ಟ್ರೀಯ ಹೈದಾರಿ ಸಹಾಯವಾಣಿಗೆ ಕರೆ ಮಾಡಿದೆವು. ಯಾವ ಅಧಿಕಾರಿಗಳಿಂದಲೂ ಸ್ಪಂದನೆ ಸಿಗಲಿಲ್ಲ. ಬಳಿಕ ನಾನು ಪೊಲೀಸ್‌ಗೆ ಮಾಹಿತಿ ನೀಡಿದೆ. ಬಸ್ ಕಂಡಕ್ಟರ್ ಅಂಬುಲೆನ್ಸ್ಗೆ ಕರೆ ಮಾಡಿದರು. ಅವರ ಸ್ಥಿತಿ ಬಗ್ಗೆ ನಾವು ಕೇಳುತ್ತಲೇ ಇದ್ದೆವು. ನೀರು ಕೂಡ ಕೊಟ್ಟೆವು. ಕೊಂಚ ಸುಧಾರಿಸಿದ ಬಳಿಕ ಅವರೇ `ನಾನು ರಿಷಭ್ ಪಂತ್’ ಎಂದು ಹೇಳಿಕೊಂಡಿರುವುದಾಗಿ ತಿಳಿಸಿದ್ದಾರೆ.

    ಪಂತ್ ಉತ್ತರಾಖಂಡದಿಂದ ದೆಹಲಿಗೆ ಹಿಂದಿರುಗುತ್ತಿದ್ದ ವೇಳೆ ರೂರ್ಕಿಯ ನರ್ಸನ್ ಗಡಿಯಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ಕೆಲ ಕ್ಷಣಗಳಲ್ಲೇ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ಕೂಡಲೇ ಕಾರಿನಲ್ಲಿದ್ದ ಪಂತ್ ಗಾಜನ್ನು ಹೊಡೆದುಕೊಂಡು ಹೊರ ಬಂದು ಗ್ರೇಟ್ ಎಸ್ಕೇಪ್ ಆಗಿದ್ದರು. ಸದ್ಯ ರಿಷಭ್ ಆರೋಗ್ಯ ಸ್ಥಿರವಾಗಿದ್ದು, ಆತಂಕ ಪಡಬೇಕಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ನಾವು ಕೂಗಾಡಿದ್ರೂ ಸಹಾಯಕ್ಕೆ ಯಾರೊಬ್ಬರೂ ಬರಲಿಲ್ಲ- ಪಂತ್ ರಕ್ಷಿಸಿದ ಬಸ್ ಡ್ರೈವರ್‌ ಬಿಚ್ಚಿಟ್ಟ ಸತ್ಯ

    ನಾವು ಕೂಗಾಡಿದ್ರೂ ಸಹಾಯಕ್ಕೆ ಯಾರೊಬ್ಬರೂ ಬರಲಿಲ್ಲ- ಪಂತ್ ರಕ್ಷಿಸಿದ ಬಸ್ ಡ್ರೈವರ್‌ ಬಿಚ್ಚಿಟ್ಟ ಸತ್ಯ

    ಡೆಹ್ರಾಡೂನ್: ಅತ್ಯಂತ ಭೀಕರ ರಸ್ತೆ ಅಪಘಾತದಲ್ಲಿ (Road Accident) ಟೀಂ ಇಂಡಿಯಾ (Team India) ಸ್ಟಾರ್ ಆಟಗಾರ ರಿಷಭ್ ಪಂತ್ (Rishabh Pant) ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಪಂತ್ ಅವರ ರಕ್ಷಣೆಗೆ ಧಾವಿಸಿದ ಬಸ್ ಡ್ರೈವರ್‌ (Bus Driver) ಆ ಕ್ಷಣದ ರೋಚಕತೆಯನ್ನು ವಿವರಿಸಿದ್ದಾರೆ.

    ಗಂಭೀರವಾಗಿ ಗಾಯಗೊಂಡಿದ್ದ ಪಂತ್ ಅವರನ್ನು ಘಟನಾ ಸ್ಥಳದಲ್ಲಿದ್ದವರು ರಕ್ಷಿಸಿದ್ದಾರೆ. ಅದರಲ್ಲೂ ಪಂತ್‌ಗೆ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಬಸ್‌ನ ಡ್ರೈವರ್‌ ಸುಶೀಲ್ ಕುಮಾರ್ ( ಸಹಾಯಕ್ಕೆ ಮೊದಲಿಗರಾಗಿ ಧಾವಿಸಿದ್ದಾರೆ ಎಂಬುದು ಗೊತ್ತಾಗಿದೆ. ಬಳಿಕ ರಕ್ಷಣೆಗೆ ಧಾವಿಸಿದ ಬಸ್ ಡ್ರೈವರ್‌ ಸುಶೀಲ್ ಕುಮಾರ್ (Sushil Kumar) ಹಾಗೂ ಕಂಡಕ್ಟರ್ ಪರಮ್ ಜೀತ್‌ನನ್ನು (Paramjit) ಹರಿಯಾಣ ಸಾರಿಗೆ ಇಲಾಖೆ  ಉನ್ನತಾಧಿಕಾರಿಗಳು ಅಭಿನಂದಿಸಿದ್ದಾರೆ. ಸ್ಮರಣಿಕೆ ನೀಡಿ ಗೌರವಿಸಿದ್ದಾರೆ. ಇದನ್ನೂ ಓದಿ: ಭೀಕರ ಕಾರು ಅಪಘಾತ- ಟೀಂ ಇಂಡಿಯಾ ಆಟಗಾರ ರಿಷಭ್ ಪಂತ್ ಸ್ಥಿತಿ ಗಂಭೀರ

    ಅಪಘಾತಕ್ಕೀಡಾಗಿದ್ದ ವ್ಯಕ್ತಿ ಯಾರೆಂದು ತಿಳಿಯುವ ಮೊದಲೇ ಸಹಾಯಕ್ಕೆ ಧಾವಿಸಿದ್ದ ಸುಶೀಲ್ ಕುಮಾರ್ ಹೇಳಿರುವ ಪ್ರಕಾರ, ರಿಷಭ್ ಅವರ ಕಾರಲ್ಲಿದ್ದ ವಸ್ತುಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿತ್ತು. ಸುಶೀಲ್ ಕುಮಾರ್ ಅವೆಲ್ಲವನ್ನೂ ಸಂಗ್ರಹಿಸಿ ಪಂತ್‌ಗೆ ಹಿಂದಿರುಗಿಸಿದ್ದಾಗಿ ಹೇಳಿದ್ದಾರೆ. ಇದನ್ನೂ ಓದಿ: ತಾಯಿ ಮಡಿದ ನೋವಿನಲ್ಲೂ ಪಂತ್ ಆರೋಗ್ಯ ಚೇತರಿಕೆಗಾಗಿ ಹಾರೈಸಿದ ಮೋದಿ

    ಪ್ರಾಥಮಿಕ ವರದಿಯ ಪ್ರಕಾರ, ಸ್ಥಳೀಯರು ಪಂತ್ ಅವರ ಸಾಮಗ್ರಿಗಳನ್ನು ಲೂಟಿ ಮಾಡಿದ್ದರು ಎಂಬುದು ವಾಸ್ತವಕ್ಕೆ ದೂರದ ಸಂಗತಿಗಳು ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿತ್ತು. ಆದರೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದ ಪೊಲೀಸ್ ಅಧಿಕಾರಿಗಳು ಕೂಡ, ಯಾರೊಬ್ಬರೂ ಏನನ್ನೂ ಲೂಟಿ ಮಾಡಿಲ್ಲ ಎಂಬ ಸಂಗತಿಯನ್ನು ಖಾತ್ರಿ ಪಡಿಸಿದ್ದಾರೆ. ಇದನ್ನೂ ಓದಿ: ತಾಯಿಗೆ ಸರ್ಪ್ರೈಸ್‌ ಕೊಡಲು ತೆರಳ್ತಿದ್ದಾಗಲೇ ದುರಂತ – ಪಂತ್ ಅಭಿಮಾನಿಗಳ ಆಕ್ರಂದನ

    ಮೈ ಜುಮ್ಮೆನ್ನಿಸುವಂತಿತ್ತು ಆ ರೋಚಕ ಕ್ಷಣ?: ರಿಷಭ್ ಪಂತ್ ಅವರನ್ನು ನೋಡಿದಾಗ ಮುಖವೆಲ್ಲಾ ರಕ್ತದ ಮಡುವಿನಲ್ಲಿತ್ತು. ಬಟ್ಟೆ ಚಿಂದಿಯಾಗಿ ಅವರ ಬೆನ್ನೆಲ್ಲಾ ತರಚಿದ ಗಾಯಗಳಾಗಿತ್ತು. ಅತೀವ ನೋವಿನಿಂದ ಬಳಲಿದ್ದ ಅವರು ಕುಂಟುತ್ತಿದ್ದರು, ಎಂದು ಸುಶೀಲ್ ಕುಮಾರ್ ಸಂದರ್ಶನದಲ್ಲಿ ಘಟನೆಯ ವಿವರಗಳನ್ನು ತೆರೆದಿಟ್ಟಿದ್ದಾರೆ. ನಾವು ಸಹಾಯಕ್ಕಾಗಿ ಕೂಗಿದರೂ ಯಾರೊಬ್ಬರೂ ಬರಲಿಲ್ಲ. ರಾಷ್ಟ್ರೀಯ ಹೈದಾರಿ ಸಹಾಯವಾಣಿಗೆ ಕರೆ ಮಾಡಿದೆವು. ಯಾವ ಅಧಿಕಾರಿಗಳಿಂದಲೂ ಸ್ಪಂದನೆ ಸಿಗಲಿಲ್ಲ. ಬಳಿಕ ನಾನು ಪೊಲೀಸ್‌ಗೆ ಮಾಹಿತಿ ನೀಡಿದೆ. ಬಸ್ ಕಂಡಕ್ಟರ್ ಅಂಬುಲೆನ್ಸ್ಗೆ ಕರೆ ಮಾಡಿದರು. ಅವರ ಸ್ಥಿತಿ ಬಗ್ಗೆ ನಾವು ಕೇಳುತ್ತಲೇ ಇದ್ದೆವು. ನೀರು ಕೂಡ ಕೊಟ್ಟೆವು. ಕೊಂಚ ಸುಧಾರಿಸಿದ ಬಳಿಕ ಅವರೇ `ನಾನು ರಿಷಭ್ ಪಂತ್’ ಎಂದು ಹೇಳಿಕೊಂಡರು ಎಂದು ಆ ಕ್ಷಣದ ರೋಚಕತೆಯನ್ನು ವಿವರಿಸಿದ್ದಾರೆ.

    ನಾವು ರಕ್ಷಣೆಗೆ ಧಾವಿಸಿದಾಗ ರಿಷಭ್ ಪಂತ್ ನಮಗೆ ಅವರ ತಾಯಿಯ ನಂಬರ್ ಕೊಟ್ಟರು. ಆ ಸಂಖ್ಯೆಗೆ ಕರೆ ಮಾಡಿದಾಗ ಅದು ಸ್ವಿಚ್ ಆಫ್ ಬಂದಿತು. 15 ನಿಮಿಷಗಳ ನಂತರ ಅಂಬುಲೆನ್ಸ್ ಬಂದಿತ್ತು. ರಸ್ತೆಯಲ್ಲಿ ಬಿದ್ದಿದ್ದ ಅವರ ಹಣವನ್ನು ಒಗ್ಗೂಡಿಸಿಕೊಟ್ಟೆವು. ಕಾರಿನಲ್ಲಿ ಬೇರೆ ಯಾರಾದ್ರೂ ಇದ್ದಾರೆಯೇ ಎಂದೆಲ್ಲಾ ವಿಚಾರಿಸಿದೆವು. ಕಾರಲ್ಲಿ ಬೇರೆ ಯಾರೂ ಇರಲಿಲ್ಲ ಎಂದು ಅವರು ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]