Tag: UU Lalit

  • ಭಾರತದ 50ನೇ CJI ಆಗಿ ಡಿ.ವೈ ಚಂದ್ರಚೂಡ್ ಪ್ರಮಾಣ ವಚನ ಸ್ವೀಕಾರ

    ಭಾರತದ 50ನೇ CJI ಆಗಿ ಡಿ.ವೈ ಚಂದ್ರಚೂಡ್ ಪ್ರಮಾಣ ವಚನ ಸ್ವೀಕಾರ

    ನವದೆಹಲಿ: ಭಾರತದ ಸುಪ್ರೀಂ ಕೋರ್ಟ್ (Supreme Court) 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಡಿ.ವೈ ಚಂದ್ರಚೂಡ್ (DY Chandrachud) ಇಂದು ಪ್ರಮಾಣವಚನ ಸ್ವೀಕರಿಸಿದರು.

    ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ದ್ರೌಪದಿ ಮುರ್ಮು (Droupadi Murmu) ಅವರು ಪ್ರಮಾಣವಚನ ಬೋಧಿಸಿದರು. ಇದನ್ನೂ ಓದಿ: ಪಾಕ್-ಕಿವೀಸ್ ಸೆಮಿಫೈನಲ್‌ – T20 ವಿಶ್ವಕಪ್ ಕ್ರಿಕೆಟ್‌ನಲ್ಲಿಂದು ಬಿಗ್ ಫೈಟ್

    ನಿವೃತ್ತ ನ್ಯಾಯಮೂರ್ತಿ ಎನ್.ವಿ ರಮಣ (NV Ramana) ಅವರ ನಿವೃತ್ತಿಯ ನಂತರ 49ನೇ ಸಿಜೆಐ ಆಗಿ ಅಧಿಕಾರ ಸ್ವೀಕರಿಸಿದ್ದ ಯು.ಯು ಲಲಿತ್ (UU Lalit) ಮಂಗಳವಾರ (ನವೆಂಬರ್ 8) ತಮ್ಮ ಕರ್ತವ್ಯ ಮುಕ್ತಾಗೊಳಿಸಿದರು. ಇಂದು 50ನೇ ನ್ಯಾಯಮೂರ್ತಿಯಾಗಿ ಚಂದ್ರಚೂಡ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಹಿಂದೆಯೇ ಚಂದ್ರಚೂಡ್ ಅವರ ಹೆಸರನ್ನು ಶಿಫಾರಸು ಮಾಡಲಾಗಿತ್ತು. ಇದನ್ನೂ ಓದಿ: ಗುಡ್ಡ ಹತ್ತಿ ಆಯುಷ್ಮಾನ್ ಕಾರ್ಡ್ ನೋಂದಣಿ – ಧರ್ಮಸ್ಥಳ ಸಂಘದ ಕಾರ್ಯಕ್ಕೆ ಭಾರೀ ಮೆಚ್ಚುಗೆ

    ಯಾರಿದು ಚಂದ್ರಚೂಡ್:
    1959 ನವೆಂಬರ್ 11 ರಂದು ಜನಿಸಿದ ಡಿ.ವೈ ಚಂದ್ರಚೂಡ್ ಸುಪ್ರೀಂ ಕೋರ್ಟ್ ಮತ್ತು ಬಾಂಬೆ ಹೈಕೋರ್ಟ್ನಲ್ಲಿ ವಕೀಲರಾಗಿ ಪ್ರಾಕ್ಟೀಸ್ ಮಾಡಿದ್ದರು. ನಂತರ ಬಾಂಬೆ ಹೈಕೋರ್ಟ್ ಅವರಗೆ 1998ರ ಜೂನ್‌ನಲ್ಲಿ ಹಿರಿಯ ವಕೀಲರಾಗಿ ಪದೋನ್ನತಿ ನೀಡಿತ್ತು. 2000 ದಲ್ಲಿ ಬಾಂಬೆ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕವಾಗುವುದಕ್ಕೂ ಮೊದಲು 1998ರಿಂದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ಅವರು ಕೆಲಸ ಮಾಡಿದ್ದರು. 2013ರ ಅಕ್ಟೋಬರ್ 31ರಂದು ನ್ಯಾ. ಚಂದ್ರಚೂಡ್ ಅವರನ್ನು ಅಲಾಹಾಬಾದ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಲಾಗಿತ್ತು. 2016ರ ಮೇ 13ರಂದು ನ್ಯಾ. ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪದೋನ್ನತಿ ಪಡೆದರು.

    Live Tv
    [brid partner=56869869 player=32851 video=960834 autoplay=true]

  • ಮೇಲ್ವರ್ಗದ ಬಡವರಿಗೆ ಶೇ.10 ಮೀಸಲಾತಿ ಅಳಿವು-ಉಳಿವು- ಇಂದು ಸುಪ್ರೀಂನಲ್ಲಿ ನಿರ್ಧಾರ

    ಮೇಲ್ವರ್ಗದ ಬಡವರಿಗೆ ಶೇ.10 ಮೀಸಲಾತಿ ಅಳಿವು-ಉಳಿವು- ಇಂದು ಸುಪ್ರೀಂನಲ್ಲಿ ನಿರ್ಧಾರ

    ನವದೆಹಲಿ: ಶಿಕ್ಷಣ (Education) ಹಾಗೂ ಸರ್ಕಾರಿ ಉದ್ಯೋಗದಲ್ಲಿ (Government Job) ಆರ್ಥಿಕವಾಗಿ ಹಿಂದುಳಿದ ಮೇಲರ್ಗದ ಬಡ ಅಭ್ಯರ್ಥಿಗಳಿಗೆ ಶೇ.10ರಷ್ಟು ಮೀಸಲಾತಿ (Reservation) ನೀಡಲು ಕೇಂದ್ರ ಸರ್ಕಾರ ಸಂವಿಧಾನಕ್ಕೆ ತಂದಿದ್ದ 103ನೇ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಲಾಗಿರುವ ಹಲವು ಅರ್ಜಿಗಳ ವಿಚಾರಣೆ ಕುರಿತಂತೆ ಸುಪ್ರೀಂಕೋರ್ಟ್ (Supreme Court) ಸೋಮವಾರ ಮಹತ್ವದ ತೀರ್ಪು ಪ್ರಕಟಿಸಲಿದೆ.

    ಹೀಗಾಗಿ `ಮೇಲ್ವರ್ಗದ ಮೀಸಲು’ ಎಂದೇ ಕರೆಯಲ್ಪಡುವ ಈ ಮೀಸಲಾತಿ ಮುಂದುವರಿಯುತ್ತದೆಯೇ? ಅಥವಾ ರದ್ದಾಗುತ್ತದೆಯೇ? ಅಥವಾ ಬದಲಾವಣೆಯಾಗುತ್ತದೆಯೇ ಎಂಬ ಕುತೂಹಲ ಗರಿಗೆದರಿದೆ. ಇದನ್ನೂ ಓದಿ: ಹೇಮಾವತಿ ಹಿನ್ನೀರಿನಲ್ಲಿ ತೇಲುವ ಹಡಗು- ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ ಶೆಟ್ಟಿಹಳ್ಳಿ ಚರ್ಚ್

    ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿ (CJI) ಉದಯ್ ಉಮೇಶ್ ಲಲಿತ್ (UU Lalit), ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ, ನ್ಯಾಯಮೂರ್ತಿ ಎಸ್.ರವೀಂದ್ರ ಭಟ್, ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಹಾಗೂ ನ್ಯಾಯಮೂರ್ತಿ ಜೆ.ಬಿ.ಪರ್ದಿವಾಲಾ ಅವರನ್ನೊಳಗೊಂಡ ಸಾಂವಿಧಾನಿಕ ಪೀಠ ತೀರ್ಪು ಪ್ರಕಟಿಸಲಿದೆ. ಇದನ್ನೂ ಓದಿ: ಚಂದ್ರಗ್ರಹಣ – ನಾಳೆ ರಾಜ್ಯದಲ್ಲಿ ಹಲವು ದೇವಾಲಯಗಳು ಬಂದ್

    court order law

    ಏನಿದು ಪ್ರಕರಣ?
    ಶಿಕ್ಷಣ ಹಾಗೂ ಉದ್ಯೋಗದಲ್ಲಿ ಸಾಮಾಜಿಕ ಸಮಾನತೆ ತರಲು ಮೇಲ್ವರ್ಗಗಳಲ್ಲಿರುವ ಬಡವರಿಗೆ ಕೇಂದ್ರ ಸರ್ಕಾರ 2019ರಲ್ಲಿ ಶೇ.10 ಮೀಸಲಾತಿ ನೀಡಿ ಕಾಯ್ದೆ ಜಾರಿಗೊಳಿಸಿತ್ತು. ಇದು ಒಟ್ಟು ಮೀಸಲಾತಿಗೆ ಇರುವ ಶೇ.50 ಮಿತಿಗೆ ಹೊರತಾಗಿದೆ. ಇದನ್ನು ಪ್ರಶ್ನಿಸಿ 40ಕ್ಕೂ ಹೆಚ್ಚು ಅರ್ಜಿಗಳು ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆಯಾಗಿದ್ದವು, ಸಾಂವಿಧಾನಿಕ ಪೀಠ ಅವುಗಳ ವಿಚಾರಣೆ ಪೂರ್ಣಗೊಳಿಸಿದ್ದು, ಇಂದು ಮೀಸಲಾತಿ ಬಗ್ಗೆ ತೀರ್ಪು ಪ್ರಕಟಿಸಲಿದೆ.

    Live Tv
    [brid partner=56869869 player=32851 video=960834 autoplay=true]

  • ದಯವಿಟ್ಟು ಪ್ರಜಾಪ್ರಭುತ್ವ ಉಳಿಸಿ – ಸಿಜೆಐಗೆ ಮಮತಾ ಬ್ಯಾನರ್ಜಿ ಮನವಿ

    ದಯವಿಟ್ಟು ಪ್ರಜಾಪ್ರಭುತ್ವ ಉಳಿಸಿ – ಸಿಜೆಐಗೆ ಮಮತಾ ಬ್ಯಾನರ್ಜಿ ಮನವಿ

    ಕೋಲ್ಕತ್ತಾ: ದಯವಿಟ್ಟು ಪ್ರಜಾಪ್ರಭುತ್ವವನ್ನು ಉಳಿಸಿ ಎಂದು ಸುಪ್ರೀಂ ಕೋರ್ಟ್‌ (Supreme Court) ಮುಖ್ಯ ನ್ಯಾಯಮೂರ್ತಿಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಒತ್ತಾಯಿಸಿದ್ದಾರೆ.

    ದೇಶದಲ್ಲಿ ಪ್ರಜಾಪ್ರಭುತ್ವ ಸಂಸ್ಥೆಗಳ ಉಸಿರುಗಟ್ಟಿಸಲಾಗುತ್ತಿದೆ. ಇದೇ ಪ್ರವೃತ್ತಿಯನ್ನು ಮುಂದುವರಿಸಿದರೆ, ರಾಷ್ಟ್ರವು ಅಧ್ಯಕ್ಷೀಯ ಸರ್ಕಾರಕ್ಕೆ ನೇತೃತ್ವ ವಹಿಸಬೇಕಾಗುತ್ತದೆ ಎಂದು ಎಚ್ಚರಿಸಿದ ಬ್ಯಾನರ್ಜಿ ಅವರು, ಪ್ರಜಾಪ್ರಭುತ್ವ ಮತ್ತು ಫೆಡರಲ್ ರಚನೆಯ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸಿಜೆಐಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮನ್ ಕಿ ಬಾತ್‍ನಲ್ಲಿ ಬೆಂಗಳೂರಿನ ಸುರೇಶ್ ಕುಮಾರ್​ರನ್ನು ಪ್ರಶಂಸಿಸಿದ ಮೋದಿ

    ಕೋಲ್ಕತ್ತಾದಲ್ಲಿ ನ್ಯಾಷನಲ್ ಯೂನಿವರ್ಸಿಟಿ ಆಫ್ ಜ್ಯೂರಿಡಿಕಲ್ ಸೈನ್ಸಸ್ (ಎನ್‌ಯುಜೆಎಸ್) ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿದ ಸಿಜೆಐ ಯು.ಯು.ಲಲಿತ್ (UU Lalit) ಅವರ ಉಪಸ್ಥಿತಿಯಲ್ಲಿ ಬ್ಯಾನರ್ಜಿ ಮಾತನಾಡಿದ್ದಾರೆ.

    ಜನರನ್ನು ಕಿರುಕುಳದಿಂದ ರಕ್ಷಿಸಲು ನ್ಯಾಯಾಂಗ ಮುಂದಾಗಬೇಕು. ಎಲ್ಲಾ ಪ್ರಜಾಸತ್ತಾತ್ಮಕ ಅಧಿಕಾರವನ್ನು ಸಮಾಜದ ಒಂದು ನಿರ್ದಿಷ್ಟ ವರ್ಗವು ವಶಪಡಿಸಿಕೊಳ್ಳುತ್ತಿದೆ. ಪ್ರಜಾಪ್ರಭುತ್ವ ಎಲ್ಲಿದೆ? ದಯವಿಟ್ಟು ಪ್ರಜಾಪ್ರಭುತ್ವವನ್ನು ಉಳಿಸಿ ಎಂದು ಕೇಳಿಕೊಂಡಿದ್ದಾರೆ. ಇದನ್ನೂ ಓದಿ: ಒಟ್ಟು 9 ಸಾವಿರ ವ್ಯಾಗನ್ ಆರ್, ಸೆಲೆರಿಯೊ, ಇಗ್ನಿಸ್ ಕಾರುಗಳನ್ನು ಹಿಂದಕ್ಕೆ ಪಡೆದ ಮಾರುತಿ

    ನಾನು ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಅವರನ್ನು ಅಭಿನಂದಿಸಬೇಕು. ನಾನು ಈ ವೇದಿಕೆಯನ್ನು ಬಳಸಬಹುದೇ ಎಂದು ನನಗೆ ತಿಳಿದಿಲ್ಲ. ಆದರೆ ಎರಡು ತಿಂಗಳಲ್ಲಿ ಅವರು ನ್ಯಾಯಾಂಗ ಎಂದರೆ ಏನು ಎಂದು ತೋರಿಸಿದ್ದಾರೆ ಎಂದು ಬಣ್ಣಿಸಿದ್ದಾರೆ.

    ಜನರು ನ್ಯಾಯಾಂಗದ ಮೇಲಿನ ನಂಬಿಕೆಯನ್ನು ಕಳೆದುಕೊಂಡಿದ್ದಾರೆ ಎಂದು ನಾನು ಹೇಳುತ್ತಿಲ್ಲ. ಆದರೆ ಇತ್ತೀಚಿನ ದಿನಗಳಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ನ್ಯಾಯಾಂಗವು ಜನರನ್ನು ಅನ್ಯಾಯದಿಂದ ರಕ್ಷಿಸಬೇಕು. ಜನರ ಕೂಗನ್ನು ಆಲಿಸಬೇಕು. ಇದೀಗ ಜನರು ಮುಚ್ಚಿದ ಬಾಗಿಲುಗಳ ಹಿಂದೆ ಅಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಭಾರತದ 50ನೇ CJI ಆಗಿ ಡಿ.ವೈ ಚಂದ್ರಚೂಡ್ ನೇಮಕ

    ಭಾರತದ 50ನೇ CJI ಆಗಿ ಡಿ.ವೈ ಚಂದ್ರಚೂಡ್ ನೇಮಕ

    ನವದೆಹಲಿ: ಭಾರತದ ಸುಪ್ರೀಂ ಕೋರ್ಟ್‌ನ (Supreme Court) ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಡಿ.ವೈ ಚಂದ್ರಚೂಡ್ (DY Chandrachud) ಅವರನ್ನು ನೇಮಿಸಿ ಕೇಂದ್ರ ಸರ್ಕಾರ (Government Of India) ಅಧಿಸೂಚನೆ ಹೊರಡಿಸಿದೆ.

    ನವೆಂಬರ್ 8ರಂದು ಹಾಲಿ ಸಿಜೆಐ ಉದಯ್ ಉಮೇಶ್ ಲಲಿತ್ (UU Lalit) ಅವರು ನಿವೃತ್ತಿ ಹೊಂದಲಿದ್ದು, ಸುಪ್ರೀಂ ಕೋರ್ಟ್‌ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಚಂದ್ರಚೂಡ್ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ (CJI) ಅವರು 2 ವರ್ಷ ಅಧಿಕಾರದಲ್ಲಿ ಇರಲಿದ್ದು, 2024ರ ನವೆಂಬರ್ 10ರಂದು ಚಂದ್ರಚೂಡ್ ನಿವೃತ್ತಿ ಹೊಂದಲಿದ್ದಾರೆ. ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನ ಮುಂದಿನ CJI ಆಗಿ ಯು.ಯು.ಲಲಿತ್‌ ಹೆಸರು ಶಿಫಾರಸು

    ಸಂವಿಧಾನದ 124ನೇ (Constitution of India) ವಿಧಿಯ ಕಲಂ (2)ರ ಅಡಿ ಅಧಿಕಾರ ಚಲಾಯಿಸಿ ನ್ಯಾಯಮೂರ್ತಿ ಡಾ. ಧನಂಜಯ ಯಶವಂತ್ ಚಂದ್ರಚೂಡ್ ಅವರನ್ನು ಸಿಜೆಐ ಆಗಿ 2022ರ ನವೆಂಬರ್ 9ರಿಂದ ಅನ್ವಯವಾಗುವಂತೆ ರಾಷ್ಟ್ರಪತಿ (President Of Inida) ಅವರು ಆದೇಶ ಮಾಡಿದ್ದಾರೆ ಎಂದು ಕಾನೂನು ಇಲಾಖೆ (Law) ಹೊರಡಿಸಿರುವ ಅಧಿಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.

    ಅಕ್ಟೋಬರ್ 11ರಂದೇ ಹಾಲಿ ಸಿಜೆಐ ಲಲಿತ್ (UU Lalit) ಅವರು ಚಂದ್ರಚೂಡ್ ಅವರ ಹೆಸರನ್ನು ಶಿಫಾರಸು ಮಾಡಿದ್ದರು. ಇದನ್ನೂ ಓದಿ: 200 ವರ್ಷಗಳಿಂದ ವಕ್ಪ್ ಆಸ್ತಿ , ಎರಡು ಬಾರಿ ನಮಾಜ್‌ಗೆ ಮಾತ್ರ ಅವಕಾಶ – ಸುಪ್ರೀಂ ಕೋರ್ಟ್‌ನಲ್ಲಿ ವಾದ ಹೇಗಿತ್ತು?

    ಚಂದ್ರಚೂಡ್ ಹಿನ್ನೆಲೆ ಏನು?
    ಎಲ್‌ಎಲ್‌ಎಂ (LLM) ಪೂರ್ಣಗೊಳಿಸಿದ ನ್ಯಾ. ಚಂದ್ರಚೂಡ್ ಅವರು ಡಾಕ್ಟರ್ ಇನ್ ಜುಡಿಷಿಯಲ್ ಸೈನ್ಸಸ್ ಪದವಿಯನ್ನು ಅಮೆರಿಕದ ಹಾರ್ವರ್ಡ್ ಕಾನೂನು ಶಾಲೆಯಿಂದ ಪಡೆದಿದ್ದಾರೆ. ಇದಕ್ಕೂ ಮುನ್ನ ಅವರು ದೆಹಲಿಯ ಸೇಂಟ್ ಸ್ಟೀಫನ್ಸ್ ಕಾಲೇಜಿನಿಂದ ಅರ್ಥಶಾಸ್ತ್ರದಲ್ಲಿ ಬಿಎ ಪದವಿ ಪಡೆದಿದ್ದರು. ದೆಹಲಿ ವಿಶ್ವವಿದ್ಯಾಲಯದ ಕ್ಯಾಂಪಸ್ ಲಾ ಸೆಂಟರ್‌ನಿಂದ ಎಲ್‌ಎಲ್‌ಬಿ ಪದವಿ ಪಡೆದಿದ್ದರು. ಸುಪ್ರೀಂ ಕೋರ್ಟ್ ಮತ್ತು ಬಾಂಬೆ ಹೈಕೋರ್ಟ್‌ನಲ್ಲಿ ವಕೀಲರಾಗಿ ಪ್ರಾಕ್ಟೀಸ್ ಮಾಡಿದ್ದ ನ್ಯಾ. ಚಂದ್ರಚೂಡ್ ಅವರನ್ನು ಬಾಂಬೆ ಹೈಕೋರ್ಟ್ 1998ರ ಜೂನ್‌ನಲ್ಲಿ ಹಿರಿಯ ವಕೀಲರಾಗಿ ಪದೋನ್ನತಿ ನೀಡಿತ್ತು.

    2000ದಲ್ಲಿ ಬಾಂಬೆ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕವಾಗುವುದಕ್ಕೂ ಮೊದಲು 1998ರಿಂದ ಹೆಚ್ಚುವರಿ ಸಾಲಿಸಿಟರ್ ಜನರಲ್ ಆಗಿ ಅವರು ಕೆಲಸ ಮಾಡಿದ್ದರು. 2013ರ ಅಕ್ಟೋಬರ್ 31ರಂದು ನ್ಯಾ. ಚಂದ್ರಚೂಡ್ ಅವರನ್ನು ಅಲಾಹಾಬಾದ್ ಹೈಕೋರ್ಟ್ (Allahabad High Court) ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಕ ಮಾಡಿತ್ತು. 2016ರ ಮೇ 13ರಂದು ನ್ಯಾ. ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪದೋನ್ನತಿ ಪಡೆದರು.

    Live Tv
    [brid partner=56869869 player=32851 video=960834 autoplay=true]

  • CJI ಹುದ್ದೆಗೆ ನ್ಯಾಯಮೂರ್ತಿ ಚಂದ್ರಚೂಡ್ ಹೆಸರು ಶಿಫಾರಸು

    CJI ಹುದ್ದೆಗೆ ನ್ಯಾಯಮೂರ್ತಿ ಚಂದ್ರಚೂಡ್ ಹೆಸರು ಶಿಫಾರಸು

    ನವದೆಹಲಿ: ಸುಪ್ರೀಂಕೋರ್ಟ್ (Supreme Court) ಹಾಲಿ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ (UU Lalit) ಅವರು, ಮುಂದಿನ ಸಿಜೆಐ (CJI) ಆಗಿ ಅಧಿಕಾರ ವಹಿಸಿಕೊಳ್ಳಲು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ (DY ChandraChud) ಅವರ ಹೆಸರನ್ನು ಶಿಫಾರಸು ಮಾಡಿದ್ದಾರೆ.

    ಸಿಜೆಐ ಲಲಿತ್ ಈ ಸಂಬಂಧ ಕೇಂದ್ರ ಸರ್ಕಾರಕ್ಕೆ (Central Government Of India) ಪತ್ರ ಬರೆದಿದ್ದು, 2 ವರ್ಷಗಳ ಸುದೀರ್ಘ ಅಧಿಕಾರವಧಿಯನ್ನು ಹೊಂದಿರುವ ನ್ಯಾಯಮೂರ್ತಿ ಚಂದ್ರಚೂಡ್ ಅವರ ಹೆಸರನ್ನು ಶಿಫಾರಸು ಮಾಡಿದ್ದಾರೆ. ಇದನ್ನೂ ಓದಿ: ರಾಜೀವ್‌ ಗಾಂಧಿ ಹತ್ಯೆ ಪ್ರಕರಣ – ಬಿಡುಗಡೆ ಕೋರಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ನಳಿನಿ

    ಇಂದು ನ್ಯಾಯಾಧೀಶರ ಲಾಂಜ್‌ನಲ್ಲಿ ಸುಪ್ರೀಂ ಕೋರ್ಟ್‌ನ (Supreme Court) ಎಲ್ಲಾ ನ್ಯಾಯಾಧೀಶರು ಹಾಜರಿರಬೇಕು ಎಂದು ಹಾಲಿ ಸಿಜೆಐ (CJI) ಮನವಿ ಮಾಡಿದ್ದರು. ಈ ವೇಳೆ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರನ್ನು ಮುಂದಿನ ಸಿಜೆಐ ಆಗಿ ಶಿಫಾರಸು ಮಾಡುವ ಬಗ್ಗೆ ಪ್ರಸ್ತಾಪಿಸಲಾಯಿತು. ತಮ್ಮ ಉತ್ತರಾಧಿಕಾರಿಯ ಹೆಸರನ್ನು ಶಿಫಾರಸು ಮಾಡುವಂತೆ ಅಕ್ಟೋಬರ್ 7 ರಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರಿಂದ ಸಿಜೆಐ ಸಚಿವಾಲಯವು ಸಂದೇಶವನ್ನು ಸ್ವೀಕರಿಸಿತ್ತು. ನವೆಂಬರ್ 8 ರಂದು ಸಿಜೆಐ ಲಲಿತ್ ಅವರ ಅಧಿಕಾರಾವಧಿ ಅಂತ್ಯವಾಗುತ್ತಿರುವ ಹಿನ್ನಲೆ ಈ ಸಂದೇಶ ಕಳುಹಿಸಲಾಗಿತ್ತು. ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನ ಮುಂದಿನ CJI ಆಗಿ ಯು.ಯು.ಲಲಿತ್‌ ಹೆಸರು ಶಿಫಾರಸು

    ಈ ವರ್ಷ ಆಗಸ್ಟ್ 27ರಂದು ಎನ್.ವಿ.ರಮಣ (NV Ramana) ಅವರು 48ನೇ ಸಿಜೆಐ ಆಗಿ ನಿವೃತ್ತಿ ಹೊಂದಿದ ಬಳಿಕ 49ನೇ ಸಿಜೆಐ ಆಗಿ ಯುಯು ಲಲಿತ್ ಅಧಿಕಾರ ವಹಿಸಿಕೊಂಡಿದ್ದರು. ಲಲಿತ್ ಅವರ ನಂತರ ಸುಪ್ರೀಂ ಕೋರ್ಟ್‌ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅಧಿಕಾರದ ಗದ್ದುಗೆ ಏರಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಭಾರತದ 49ನೇ CJI ಆಗಿ ಯುಯು ಲಲಿತ್ ಪ್ರಮಾಣ ವಚನ ಸ್ವೀಕಾರ

    ಭಾರತದ 49ನೇ CJI ಆಗಿ ಯುಯು ಲಲಿತ್ ಪ್ರಮಾಣ ವಚನ ಸ್ವೀಕಾರ

    ನವದೆಹಲಿ: ಸುಪ್ರೀಂ ಕೋರ್ಟ್ನ 49ನೇ ಮುಖ್ಯ ನ್ಯಾಯಮೂರ್ತಿಯಾಗಿ (ಸಿಜೆಐ) ಯು.ಯು ಲಲಿತ್ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದು ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಬೋಧಿಸಿದ್ದಾರೆ.

    ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು ವಕೀಲ ವರ್ಗದಿಂದ ನೇರವಾಗಿ ಪದೋನ್ನತಿ ಪಡೆದ 2ನೇ ಸಿಜೆಐ ಆಗಿದ್ದಾರೆ. ಪದೋನ್ನತಿ ಪಡೆದ ಮೊದಲ ಸಿಜೆಐ ಆಗಿ ಎಸ್.ಎಂ ಸಿಕ್ರಿ ಅವರು 1971 ರಿಂದ ಏಪ್ರಿಲ್ 1973ರ ವರೆಗೆ ಸೇವೆ ಸಲ್ಲಿಸಿದ್ದರು. ಇದನ್ನೂ ಓದಿ: ಬಿಗ್‌ ಬಾಸ್‌ ಮನೆಯಿಂದ ಉದಯ್‌ ಸೂರ್ಯ ಔಟ್

    ನ್ಯಾಯಮೂರ್ತಿ ಲಲಿತ್ ಅವರು ಹಿರಿಯ ವಕೀಲ ಯು.ಆರ್ ಲಲಿತ್ ಪುತ್ರನಾಗಿ 1957ರ ನವೆಂಬರ್ 9ರಲ್ಲಿ ಜನಿಸಿದರು. 1983ರ ಜೂನ್‌ನಲ್ಲಿ ವಕೀಲರಾಗಿ ಸೇವೆ ಆರಂಭಿಸಿದ ಲಲಿತ್ ಅವರು ಡಿಸೆಂಬರ್ 1985ರ ವರೆಗೆ ಬಾಂಬೆ ಹೈಕೋರ್ಟ್ನಲ್ಲಿ ಅಭ್ಯಾಸ ಮಾಡಿದರು. 1986ರಲ್ಲಿ ರಾಷ್ಟ್ರ ರಾಜಧಾನಿಗೆ ತೆರಳಿ ಅಲ್ಲಿ ವಕೀಲರಾಗಿ ಸೇವೆ ಸಲ್ಲಿಸಿದ ಅವರು 2004ರ ಏಪ್ರಿಲ್‌ನಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡರು. ಇದನ್ನೂ ಓದಿ: 2 ಮಕ್ಕಳ ತಾಯಿಯೊಂದಿಗೆ ಪರಾರಿಯಾಗಿ ಜೀವನಕ್ಕೆ ಗಾರೆ ಕೆಲಸ ಮಾಡ್ತಿದ್ದ BE ಗ್ರ್ಯಾಜುಯೆಟ್‌ – ಪೊಲೀಸರ ಅತಿಥಿ

    ಮುಂದೆ ಅವರು 2014ರ ಆಗಸ್ಟ್ 13ರಂದು ವಕೀಲ ವರ್ಗದಿಂದ ನೇರವಾಗಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿ ಪದೋನ್ನತಿ ಪಡೆದರು. ಇದೇ ವರ್ಷ ನವೆಂಬರ್ 8 ರಂದು ಅವರು ಸಿಜೆಐ ಹುದ್ದೆಯಿಂದ ನಿವೃತ್ತರಾಗಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸುಪ್ರೀಂ ಕೋರ್ಟ್ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಯು.ಯು.ಲಲಿತ್ ನೇಮಕ

    ಸುಪ್ರೀಂ ಕೋರ್ಟ್ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಯು.ಯು.ಲಲಿತ್ ನೇಮಕ

    ನವದೆಹಲಿ: ನ್ಯಾಯಮೂರ್ತಿ ಯು.ಯು.ಲಲಿತ್ (ಉದಯ್ ಉಮೇಶ್ ಲಲಿತ್) ಅವರನ್ನ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡುವಂತೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.

    ಪ್ರಸ್ತುತ ಸುಪ್ರೀಂ ಕೋರ್ಟ್ ಮುಖ್ಯನ್ಯಾಯಮೂರ್ತಿಯಾಗಿರುವ ಎನ್.ವಿ.ರಮಣ ಇದೇ ತಿಂಗಳ ಆಗಸ್ಟ್ 26ರಂದು ನಿವೃತ್ತಿ ಹೊಂದಲಿದ್ದು, ನಂತರ ಆಗಸ್ಟ್ 27ರಿಂದ ಲಲಿತ್ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ. ಅಲ್ಲದೇ ಲಲಿತ್ ಈ ವರ್ಷದ ನವಂಬರ್ 8 ವರೆಗೆ ಮಾತ್ರವೇ ಮುಖ್ಯನ್ಯಾಯಮೂರ್ತಿಯಾಗಿ ಇರಲಿದ್ದಾರೆ.

    ಪ್ರಸ್ತುತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಯಾಗಿರುವ ಲಲಿತ್ 1957 ನವಂಬರ್ 9 ರಲ್ಲಿ ಜನಿಸಿದರು. 1983ರಲ್ಲಿ ವಕೀಲರಾಗಿ ನೇಮಕವಾದರು. ನಂತರ 1985ರ ವರೆಗೆ ಬಾಂಬೆ ಹೈಕೋರ್ಟ್‌ನಲ್ಲಿ ಅಭ್ಯಾಸ ಮಾಡಿದರು. 1986ರ ಜನವರಿ ವರೆಗೆ ದೆಹಲಿ ಹೈಕೋರ್ಟ್ನಲ್ಲಿ ಕರ್ತವ್ಯ ನಿರ್ವಹಿಸಿದರು. ಆ ನಂತರ 2004ರಲ್ಲಿ ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲರಾಗಿ ನೇಮಕಗೊಂಡರು. 10 ವರ್ಷಗಳ ಬಳಿಕ ಅಂದರೆ 2014 ಆಗಸ್ಟ್ 13ರಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದರು.

    Live Tv
    [brid partner=56869869 player=32851 video=960834 autoplay=true]

  • ಸಮಸ್ಯೆಗಳನ್ನು ಚರ್ಚಿಸಿ, ಪರಿಹರಿಸದಿದ್ದರೆ ನ್ಯಾಯಾಂಗ ವ್ಯವಸ್ಥೆ ದುರ್ಬಲವಾಗುತ್ತದೆ – CJI

    ಸಮಸ್ಯೆಗಳನ್ನು ಚರ್ಚಿಸಿ, ಪರಿಹರಿಸದಿದ್ದರೆ ನ್ಯಾಯಾಂಗ ವ್ಯವಸ್ಥೆ ದುರ್ಬಲವಾಗುತ್ತದೆ – CJI

    ನವದೆಹಲಿ: ನ್ಯಾಯಾಂಗ ವ್ಯವಸ್ಥೆಯ ಮೇಲೆ ಪರಿಣಾಮ ಬೀರುವ ಸಮಸ್ಯೆಗಳ ಬಗ್ಗೆ ನ್ಯಾಯಾಧೀಶರು ಚರ್ಚಿಸಿ ಪರಿಹರಿಸದಿದ್ದರೆ, ನ್ಯಾಯಾಂಗ ವ್ಯವಸ್ಥೆ ದುರ್ಬಲಗೊಳ್ಳುತ್ತದೆ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಎಚ್ಚರಿಸಿದ್ದಾರೆ.

    ನವದೆಹಲಿಯ ವಿಜ್ಞಾನ ಭವನದಲ್ಲಿಂದು ಅಖಿಲ ಭಾರತ ಜಿಲ್ಲಾ ಕಾನೂನು ಸೇವೆಗಳ ಅಧಿಕಾರಿಗಳ ಸಭೆ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ತಮಿಳುನಾಡು ರಾಜ್ಯ ಶೂಟಿಂಗ್ ಚಾಂಪಿಯನ್‌ಶಿಪ್: 4 ಚಿನ್ನದ ಪದಕ ಗೆದ್ದ ಅಜಿತ್ ಕುಮಾರ್

    ನ್ಯಾಯಾಂಗ ತನ್ನ ಕಾರ್ಯಚಟುವಟಿಕೆಗೆ ಅಡ್ಡಿಯಾಗುವ ಸಮಸ್ಯೆಗಳನ್ನು ಮರೆಮಾಚದೆ, ಮುಚ್ಚಿಡದೇ ಚರ್ಚಿಸಬೇಕು. ಇದರಿಂದ ಜನರಿಗೆ ಉತ್ತಮ ಸೇವೆ ಒದಗಿಸಬಹುದು ಎಂದು ಸಿಜೆಐ ರಮಣ ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಲಂಕಾ ಅಧ್ಯಕ್ಷರ ನಿವಾಸದಲ್ಲಿ ದೊರೆತ ಹಣ ನ್ಯಾಯಾಲಯಕ್ಕೆ ಸಲ್ಲಿಕೆ

    ಜನರಿಗೆ ಉತ್ತಮ ಸೇವೆ ಸಲ್ಲಿಸುವ ಉದ್ದೇಶ ನಮಗಿದ್ದರೆ, ನಮ್ಮ ಕಾರ್ಯಚಟುವಟಿಕೆಗೆ ಅಡ್ಡಿಯಾಗುವ ಸಮಸ್ಯೆಗಳನ್ನೂ ನಾವು ಎತ್ತಿ ತೋರಿಸಬೇಕು. ಸಮಸ್ಯೆಗಳನ್ನು ಮರೆಮಾಚುವುದರಲ್ಲಿ ಅಥವಾ ಬಚ್ಚಿಡುವುದರಲ್ಲಿ ಯಾವುದೇ ಅರ್ಥವಿಲ್ಲ. ನಾವು ಈ ಸಮಸ್ಯೆ ಚರ್ಚಿಸದಿದ್ದರೆ, ಬಿಕ್ಕಟ್ಟುಗಳನ್ನು ಪರಿಹರಿಸದಿದ್ದರೆ, ಆಗ ನ್ಯಾಯಾಂಗ ವ್ಯವಸ್ಥೆ ದುರ್ಬಲಗೊಳ್ಳುತ್ತದೆ. ನಮ್ಮ ಸಾಂವಿಧಾನಿಕ ಆಶಯವಾದ ಸಾಮಾಜಿಕ ನ್ಯಾಯವನ್ನು ಪೂರೈಸಲು ಸಾಧ್ಯವಾಗದಿರಬಹುದು ಎಂದು ನನಗೆ ಭಯವಾಗುತ್ತಿದೆ. ಹಾಗಾಗಿ ನಾನು ಚರ್ಚಿಸಿ(ಡಿಸ್ಕಸ್), ಸಂವಾದಿಸಿ (ಡಿಬೇಟ್) ನಂತರ ನಿರ್ಧರಿಸಿ (ಡಿಸೈಡ್) ಎಂದು ಹೇಳುತ್ತೇನೆ. ನಾನೂ ಇದೇ ತತ್ವವನ್ನು ಅನುಸರಿಸುತ್ತಿದ್ದೇನೆ ಎಂದು ಅವರು ವಿವರಿಸಿದ್ದಾರೆ.

    ಜಿಲ್ಲಾ ನ್ಯಾಯಾಧೀಶರು ಬಹುಮುಖಿ ಪಾತ್ರ ನಿರ್ವಹಿಸಬೇಕು. ಜನರ ಮತ್ತು ಸಾಮಾಜಿಕ ಸಮಸ್ಯೆ ಅರ್ಥ ಮಾಡಿಕೊಳ್ಳುವ ಉತ್ತಮ ಹುದ್ದೆಯಲ್ಲಿ ನೀವು (ಜಿಲ್ಲಾ ನ್ಯಾಯಾಧೀಶರು) ಇದ್ದೀರಿ. ಭಾರತದಲ್ಲಿ ಕಾನೂನು ನೆರವು ಆಂದೋಲನಕ್ಕೆ ಜಿಲ್ಲಾ ನ್ಯಾಯಾಂಗವೇ ಪ್ರೇರಕ ಶಕ್ತಿ. ಜಿಲ್ಲಾ ನ್ಯಾಯಾಂಗವನ್ನು ಬಲಪಡಿಸುವುದು ಇಂದಿನ ಅಗತ್ಯವಾಗಿದೆ ಎಂದು ಅವರು ಹೇಳಿದ್ದಾರೆ.

    ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಯು.ಯು.ಲಲಿತ್, ಡಿ.ವೈ.ಚಂದ್ರಚೂಡ್ ಹಾಗೂ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]

  • ಪಾಪಿಗೂ ಭವಿಷ್ಯವಿದೆ – ಅತ್ಯಾಚಾರಿಗೆ ಗಲ್ಲು ಶಿಕ್ಷೆ ವಿಧಿಸಲು ನಿರಾಕರಿಸಿದ ಸುಪ್ರೀಂ

    ಪಾಪಿಗೂ ಭವಿಷ್ಯವಿದೆ – ಅತ್ಯಾಚಾರಿಗೆ ಗಲ್ಲು ಶಿಕ್ಷೆ ವಿಧಿಸಲು ನಿರಾಕರಿಸಿದ ಸುಪ್ರೀಂ

    ನವದೆಹಲಿ: ಪ್ರತಿಯೊಬ್ಬ ಸಂತನಿಗೂ ಭೂತಕಾಲವಿರುವಂತೆ ಪ್ರತಿ ಪಾಪಿಗೂ ಭವಿಷ್ಯವಿದೆ ಎಂದು ಹೇಳಿರುವ ಸುಪ್ರೀಂ ಕೋರ್ಟ್ ನಾಲ್ಕು ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದೆ.

    ಮಧ್ಯಪ್ರದೇಶದಲ್ಲಿ 4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿ ಆಕೆಯನ್ನು ಕೊಂದಿದ್ದ ವ್ಯಕ್ತಿಯೊಬ್ಬನಿಗೆ ವಿಧಿಸಿದ್ದ ಮರಣದಂಡನೆ ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ತಗ್ಗಿಸಿದ್ದ ಸುಪ್ರೀಂ ತೀರ್ಪನ್ನು ಪ್ರಶ್ನಿಸಿ ಮೃತ ಬಾಲಕಿಯ ತಾಯಿ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

    ಎಲ್ಲ ಸೂಕ್ತ ಅಂಶಗಳನ್ನು ಪರಿಗಣಿಸಿದ ಬಳಿಕವೇ ಅಪರಾಧಿಯ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಭಿನ್ನ ದೃಷ್ಟಿಕೋನದಿಂದ ಪ್ರಕರಣವನ್ನು ಪರಿಗಣಿಸುವ ರೀತಿಯಲ್ಲಿ ಯಾವುದೇ ವಾದ ಮಂಡನೆಯಾಗಿಲ್ಲ. ಹೀಗಾಗಿ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಲಾಗಿದೆ ಎಂದು ನ್ಯಾಯಮೂರ್ತಿಗಳಾದ ಯು.ಯು.ಲಲಿತ್, ಎಸ್.ರವೀಂದ್ರ ಭಟ್ ಹಾಗೂ ಬೇಲಾ ಎಂ.ತ್ರಿವೇದಿ ಅವರಿದ್ದ ಪೀಠ ತಿಳಿಸಿದೆ. ಇದನ್ನೂ ಓದಿ: ಶಿಕ್ಷಕರ ನೇಮಕಾತಿ ಹಗರಣ ಪಾರ್ಥ ಚಟರ್ಜಿ ಆಪ್ತೆ ಮನೆ ಮೇಲೆ ಇಡಿ ದಾಳಿ – 50 ಕೋಟಿ ರೂ., 5 ಕೆ.ಜಿ ಚಿನ್ನ ಪತ್ತೆ

    ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಯಾಗಿರುವ ಮೊಹಮ್ಮದ್‌ಗೆ ವಿಧಿಸಿದ್ದ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಿದ್ದ ಸುಪ್ರೀಂ ಕೋರ್ಟ್ ತೀರ್ಪನ್ನು ಪರಿಶೀಲಿಸುವಂತೆ ಮೃತ ಬಾಲಕಿಯ ತಾಯಿ ಅರ್ಜಿ ಸಲ್ಲಿಸಿದ್ದರು. 2021ರ ಏಪ್ರಿಲ್ 19ರಂದು ನೀಡಿದ್ದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಇದು ಮರಣ ದಂಡನೆ ನೀಡುವಂತಹ ಅಪರೂಪದಲ್ಲೇ ಅಪರೂಪದ ಪ್ರಕರಣವಲ್ಲ ಎಂದು ಹೇಳಿತ್ತು. ಇದನ್ನೂ ಓದಿ: 300 ವರ್ಷಗಳ ನಂತ್ರ ಅಂಗೋಲಾದಲ್ಲಿ ಪಿಂಕ್ ಡೈಮಂಡ್ ಪತ್ತೆ!

    ವಿಚಾರಣೆ ವೇಳೆ ಲೇಖಕ ಆಸ್ಕರ್ ವೈಲ್ಡ್‌ನ ಕೆಲ ಸಾಲುಗಳನ್ನು ಉದ್ಗರಿಸಿದ ಸುಪ್ರೀಂ ಕೋರ್ಟ್ `ಸಂತನಿಗೂ ಪಾಪಿಗೂ ಇರುವ ವ್ಯತ್ಯಾಸವೆಂದರೆ ಪ್ರತಿಯೊಬ್ಬ ಸಂತನಿಗೂ ಭೂತಕಾಲವಿದೆ, ಹಾಗೆಯೇ ಪ್ರತಿ ಪಾಪಿಗೂ ಭವಿಷ್ಯವಿದೆ. ಅಪರಾಧಿ ಜೈಲಿನಿಂದ ಬಿಡುಗಡೆಯಾಗಿ ತನ್ನಿಂದಾದ ತಪ್ಪನ್ನು ಸರಿಪಡಿಸಲು ಪ್ರಯತ್ನಿಸುವುದು ಹಾಗೂ ಸಮಾಜಕ್ಕೆ ಉಪಯೋಗವಾಗುವಂತ ಮನುಷ್ಯನಾಗಲು ಒಂದು ಅವಕಾಶ ನೀಡುವುದು ಆಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

    ಆರೋಪಿ ಮೊಹಮ್ಮದ್ ಫಿರೋಜ್‌ಗೆ ಸಿಯೋನಿಯಲ್ಲಿನ ಸೆಷನ್ಸ್ ನ್ಯಾಯಾಲಯ ಮರಣದಂಡನೆ ವಿಧಿಸಿತ್ತು. ಸಂತ್ರಸ್ತ ಬಾಲಕಿಯನ್ನು ಅಪಹರಿಸಿದ್ದ ಸಹ ಆರೋಪಿಗೆ ಜೈಲು ಶಿಕ್ಷೆ ನೀಡಿತ್ತು. ಮಧ್ಯಪ್ರದೇಶ ಹೈಕೋರ್ಟ್ ಗಲ್ಲುಶಿಕ್ಷೆಯನ್ನು ಎತ್ತಿ ಹಿಡಿದಿತ್ತು. ಇದನ್ನು ಆರೋಪಿ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದ್ದ. ಶಿಕ್ಷೆಯನ್ನು ನ್ಯಾಯಾಲಯ ಎತ್ತಿ ಹಿಡಿಯಿತಾದರೂ ಮರಣದಂಡನೆಯನ್ನು ರದ್ದುಗೊಳಿಸಿತ್ತು.

    Live Tv
    [brid partner=56869869 player=32851 video=960834 autoplay=true]

  • ಅಯೋಧ್ಯೆ ಪ್ರಕರಣದ ವಿಚಾರಣೆಯಿಂದ ಹಿಂದಕ್ಕೆ ಸರಿದ ಜಡ್ಜ್ – ನ್ಯಾ.ಲಲಿತ್ ಹಿಂದಕ್ಕೆ ಸರಿದಿದ್ದು ಯಾಕೆ?

    ಅಯೋಧ್ಯೆ ಪ್ರಕರಣದ ವಿಚಾರಣೆಯಿಂದ ಹಿಂದಕ್ಕೆ ಸರಿದ ಜಡ್ಜ್ – ನ್ಯಾ.ಲಲಿತ್ ಹಿಂದಕ್ಕೆ ಸರಿದಿದ್ದು ಯಾಕೆ?

    ನವದೆಹಲಿ: ಅಯೋಧ್ಯೆ ಭೂಪ್ರದೇಶ ಹಂಚಿಕೆ ಪ್ರಕರಣದ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ನ್ಯಾ. ಲಲಿತ್ ಉದಯ್ ಹಿಂದಕ್ಕೆ ಸರಿದಿದ್ದಾರೆ.

    ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಅಯೋಧ್ಯೆ ಪ್ರಕರಣದ ವಿಚಾರಣೆಗೆ ನ್ಯಾಯಮೂರ್ತಿಗಳಾದ ಎಸ್‍ಎ ಬೊಬ್ಡೆ, ಎನ್‍ವಿ ರಮಣ್, ಡಿವೈ ಚಂದ್ರಚೂಡ್, ಲಲಿತ್ ಉದಯ್ ಅವರಿದ್ದ ಸಂವಿಧಾನ ಪೀಠವನ್ನು ರಚಿಸಿದ್ದರು.

     

    ನ್ಯಾ.ರಂಜನ್ ಗೊಗೋಯ್ ಅವರಿದ್ದ ಸಂವಿಧಾನ ಪೀಠ ಇಂದಿನಿಂದ ವಿಚಾರಣೆ ಆರಂಭಿಸುವುದಾಗಿ ಹೇಳಿತ್ತು. ಇಂದು ವಿಚಾರಣೆ ಆರಂಭಗೊಂಡಾಗ ನ್ಯಾ.ಲಲಿತ್ ಉದಯ್ ವೈಯಕ್ತಿಕ ಕಾರಣದಿಂದ ನಾನು ಪ್ರಕರಣದ ವಿಚಾರಣೆಯಿಂದ ಹಿಂದಕ್ಕೆ ಸರಿಯುತ್ತಿರುವುದಾಗಿ ತಿಳಿಸಿದರು.

    ನ್ಯಾ.ಲಲಿತ್ ಉದಯ್ ಹಿಂದಕ್ಕೆ ಸರಿದ ಕಾರಣ ಮುಖ್ಯ ನ್ಯಾ.ರಂಜನ್ ಗೊಗೊಯ್ ಅವರು ಸಂವಿಧಾನ ಪೀಠಕ್ಕೆ ಇನ್ನೊಬ್ಬರು ನ್ಯಾಯಾಧೀಶರನ್ನು ನೇಮಿಸಬೇಕಿದ್ದು, ಜನವರಿ 29ಕ್ಕೆ ವಿಚಾರಣೆ ಮುಂದೂಡಿಕೆಯಾಗಿದೆ.

    ಹಿಂದಕ್ಕೆ ಸರಿದಿದ್ದು ಯಾಕೆ?
    ಇಂದಿನ ವಿಚಾರಣೆ ವೇಳೆ ವಕೀಲ ರಜೀವ್ ಧವನ್ ಅವರು ನ್ಯಾ.ಲಲಿತ್ ಉದಯ್ ಅವರು ಕಲ್ಯಾಣ್ ಸಿಂಗ್ ಪರವಾಗಿ ಈ ಪ್ರಕರಣದಲ್ಲಿ ವಾದವನ್ನು ಮಂಡಿಸಿದ್ದ ವಿಚಾರವನ್ನು ಸುಪ್ರೀಂ ಕೋರ್ಟ್ ಗಮನಕ್ಕೆ ತಂದರು. ಈ ಹಿನ್ನೆಲೆಯಲ್ಲಿ ಲಲಿತ್ ಉದಯ್ ಅವರು ಪ್ರಕರಣದ ವಿಚಾರಣೆಯಿಂದ ಹಿಂದಕ್ಕೆ ಸರಿದರು.

    ಲಲಿತ್ ಉದಯ್ ಯಾರು?
    1983ರಲ್ಲಿ ಬಾರ್ ಕೌನ್ಸಿಲ್ ಗೆ ಸೇರಿದ ಲಲಿತ್ ಉದಯ್ ಅವರು 1986ರಿಂದ ಸುಪ್ರೀಂ ಕೋರ್ಟ್ ನಲ್ಲಿ ವಕೀಲ ವೃತ್ತಿಯನ್ನು ಆರಂಭಿಸಿದ್ದರು. ಆಗಸ್ಟ್ 13, 2014ರಲ್ಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನೇಮಕವಾಗಿದ್ದಾರೆ. ನೇರವಾಗಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನೇಮಕಗೊಂಡ 6ನೇ ಹಿರಿಯ ವಕೀಲ ಮತ್ತು ಕೋಲಿಜಿಯಂ ವ್ಯವಸ್ಥೆಯ ಮೂಲಕ ನ್ಯಾಯಾಧೀಶರಾಗಿ ನೇಮಕವಾದ ಕೊನೆಯ ವಕೀಲ ಇವರಾಗಿದ್ದಾರೆ.

     

    ಪ್ರಸ್ತುತ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿರುವ ಅಮಿತ್ ಶಾ ಮೇಲಿದ್ದ ಸೊಹ್ರಾಬುದ್ದೀನ್ ಎನ್‍ಕೌಂಟರ್ ಪ್ರಕರಣ, ಸಲ್ಮಾನ್ ಖಾನ್ ಮೇಲಿದ್ದ ಕೃಷ್ಣ ಮೃಗ ಬೇಟೆ ಪ್ರಕರಣ, ಹಾಲಿ ಪಂಜಾಬ್ ಮುಖ್ಯಮಂತ್ರಿ ಆಗಿರುವ ಅಮರಿಂದರ್ ಸಿಂಗ್ ಅವರ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ವಕೀಲರಾಗಿ ಕೋರ್ಟ್ ವಿಚಾರಣೆಗೆ ಲಲಿತ್ ಉದಯ್ ಹಾಜರಾಗಿದ್ದರು.

    2010ರ ಅಯೋಧ್ಯೆ ಭೂ ವಿವಾದಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ನ್ಯಾಯಾಲಯ ನೀಡಿದ್ದ ತೀರ್ಪನ್ನು ಪ್ರಶ್ನಿಸಿ, ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿಯನ್ನು ಸಲ್ಲಿಸಲಾಗಿತ್ತು. ಅಕ್ಟೋಬರ್ 29ರಂದು ಮುಖ್ಯ ನ್ಯಾಯಮೂರ್ತಿಗಳಾದ ರಂಜನ್ ಗೊಗೊಯ್ ನ್ಯಾ. ಎಸ್.ಕೆ.ಕೌಲ್ ಹಾಗೂ ಕೆ.ಎಂ ಜೋಸೆಫ್ ನೇತೃತ್ವದ ತ್ರಿಸದಸ್ಯ ಪೀಠ ಅರ್ಜಿಯ ವಿಚಾರಣೆಯನ್ನು ಜನವರಿ, ಫೆಬ್ರವರಿ ಇಲ್ಲವೇ ಮೇ ತಿಂಗಳಲ್ಲಿ ವಿಚಾರಣೆ ನಡೆಸುವುದಾಗಿ ಹೇಳಿ ಮುಂದೂಡಿತ್ತು. ನಮಗೆ ನಮ್ಮದೇ ಆದ ಆದ್ಯತೆಗಳಿವೆ. ಹೀಗಾಗಿ ಅಯೋಧ್ಯೆ ಕುರಿತು ಪ್ರತಿನಿತ್ಯ ವಿಚಾರಣೆ ನಡೆಸಬೇಕೇ? ಬೇಡವೇ ಎನ್ನುವ ಬಗ್ಗೆ ತೀರ್ಮಾನವನ್ನು ಅಂದೇ ಕೈಗೊಳ್ಳುತ್ತೇವೆಂದು ಪೀಠ ತಿಳಿಸಿತ್ತು. ನಂತರದ ಬೆಳವಣಿಗೆಯಲ್ಲಿ ನ್ಯಾ. ರಂಜನ್ ಗೊಗೊಯ್ ಅವರು ಸಂವಿಧಾನ ಪೀಠ ರಚಿಸಿ ಜನವರಿ 10 ರಿಂದ ತ್ವರಿತ ವಿಚಾರಣೆ ನಡೆಸುವುದಾಗಿ ತಿಳಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv