Tag: v

  • Chhattisgarh | ಭದ್ರತಾ ಸಿಬ್ಬಂದಿಯಿದ್ದ ವಾಹನ ಸ್ಫೋಟಿಸಿದ ನಕ್ಸಲರು – 9 ಮಂದಿ ದುರ್ಮರಣ

    Chhattisgarh | ಭದ್ರತಾ ಸಿಬ್ಬಂದಿಯಿದ್ದ ವಾಹನ ಸ್ಫೋಟಿಸಿದ ನಕ್ಸಲರು – 9 ಮಂದಿ ದುರ್ಮರಣ

    ರಾಯ್‌ಪುರ: ಭದ್ರತಾ ಸಿಬ್ಬಂದಿಯಿದ್ದ ವಾಹನವನ್ನು ನಕ್ಸಲರು (Naxals) ಐಇಡಿ (ಸುಧಾರಿತ ಸ್ಫೋಟಕ ಸಾಧನ) ಬಳಸಿ ಸ್ಫೋಟಿಸಿದ್ದಾರೆ (IED Blast). ಘಟನೆಯಲ್ಲಿ 8 ಮಂದಿ ಭದ್ರತಾ ಸಿಬ್ಬಂದಿ ಹಾಗೂ ಓರ್ವ ಚಾಲಕ ಸೇರಿ 9 ಮಂದಿ ಸಾವನ್ನಪ್ಪಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

    ಕಾರ್ಯಾಚರಣೆ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಛತ್ತೀಸ್‌ಗಢದ (Chhattisgarh) ಬಿಜಾಪುರ ಜಿಲ್ಲೆಯ ಬೇದ್ರೆ-ಕುತ್ರು ರಸ್ತೆಯಲ್ಲಿ ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ) ಸಿಬ್ಬಂದಿಯಿದ್ದ ವಾಹನವನ್ನು ನಕ್ಸಲರು ಐಇಡಿಯಿಂದ ಸ್ಫೋಟಿಸಿದ್ದಾರೆ.

    ಒಂದು ದಿನದ ಹಿಂದೆಯಷ್ಟೇ ಛತ್ತಿಸ್‌ಗಢದ ಬಸ್ತಾರ್‌ ಪ್ರದೇಶದಲ್ಲಿ ಭದ್ರತಾ ಪಡೆ (Security Personnel) ಹಾಗೂ ಮಾವೋವಾದಿಗಳ (Maoists) ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ನಾಲ್ವರು ಮಾವೋವಾದಿಗಳು ಸಾವನ್ನಪ್ಪಿದರು. ಇದನ್ನೂ ಓದಿ: ಭದ್ರತಾ ಪಡೆ ಗುಂಡಿನ ದಾಳಿಗೆ ನಾಲ್ವರು ಮಾವೋವಾದಿಗಳು ಬಲಿ – ಓರ್ವ ಸಿಬ್ಬಂದಿ ಸಾವು 

    ನಾರಾಯಣಪುರ ಮತ್ತು ದಾಂತೇವಾಡ ಜಿಲ್ಲೆಗಳ ಗಡಿಯಲ್ಲಿರುವ ದಕ್ಷಿಣ ಅಬುಜ್‌ಮಾದ್‌ನ ಕಾಡಿನಲ್ಲಿ ಭದ್ರತಾ ಸಿಬ್ಬಂದಿ ಹಾಗೂ ಮಾವೋವಾದಿಗಳ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಗುಂಡಿನ ದಾಳಿಗೆ ನಾಲ್ವರು ಮಾವೋವಾದಿಗಳು ಬಲಿಯಾಗಿದ್ದಾರೆ. ಅಲ್ಲದೇ ಜಿಲ್ಲಾ ಮೀಸಲು ಗಾರ್ಡ್‌ನ (DRG) ಹೆಡ್ ಕಾನ್ಸ್‌ಟೇಬಲ್ ಸನ್ನು ಕರಮ್ ತೀವ್ರಗಾಯಗೊಂಡು ಸಾವನ್ನಪ್ಪಿದ್ದರು. ಇದನ್ನೂ ಓದಿ: ಬೀಳ್ಕೊಡುಗೆ ಸಮಾರಂಭದ ವೇಳೆ ವಿದ್ಯಾರ್ಥಿಗಳಿಂದ ಗಾಳಿಯಲ್ಲಿ ಗುಂಡು – ಕೇಸ್‌ ದಾಖಲು

    ಗುಂಡಿನ ದಾಳಿ ಬಳಿಕ ನಾಲ್ವರು ಮಾವೋವಾದಿಗಳ ಮೃತದೇಹ ಮತ್ತು ಎಕೆ -47 ರೈಫಲ್ ಮತ್ತು ಸ್ವಯಂ ಲೋಡಿಂಗ್ ರೈಫಲ್ (SLR) ಸೇರಿದಂತೆ ಸ್ವಯಂಚಾಲಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಇದಾದ ಒಂದು ದಿನ ನಂತರ ನಕ್ಸಲರು ಪ್ರತಿದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

  • ವೇದಿಕೆಯ ಮೇಲೆ ಕುಸಿದ ಸಿಎಂ ವಿಜಯ್ ರೂಪಾನಿ

    ವೇದಿಕೆಯ ಮೇಲೆ ಕುಸಿದ ಸಿಎಂ ವಿಜಯ್ ರೂಪಾನಿ

    ಅಹಮದಾಬಾದ್: ಚುನಾವಣೆ ಪ್ರಚಾರದ ವೇಳೆ ವೇದಿಕೆ ಮೇಲೆ ಭಾಷಣ ಮಾಡುತ್ತಿದ್ದಾಗಲೇ ಗುಜರಾತ್ ಸಿಎಂ ವಿಜಯ್ ರೂಪಾನಿ ಕುಸಿದಿದ್ದಾರೆ. ಭಾನುವಾರ ವಡೋದರಾದ ನಿಜಾಮಪುರನಲ್ಲಿ ಮುಖ್ಯಮಂತ್ರಿಗಳು ಎಲೆಕ್ಷನ್ ಕ್ಯಾಂಪನ್ ನಲ್ಲಿ ಭಾಗಿಯಾಗಿದ್ದ ವೇಳೆ ಈ ಘಟನೆ ಸಂಭವಿಸಿದೆ.

    ಸಿಎಂ ಕುಸಿಯುತ್ತಿದ್ದಂತೆ ಅಧಿಕಾರಿಗಳು ಕಾರ್ಯಕ್ರಮವನ್ನ ರದ್ದುಗೊಳಿಸಿ, ವೇದಿಕೆಯಲ್ಲಿಯೇ ವೈದ್ಯರು ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮುಖ್ಯಮಂತ್ರಿಗಳನ್ನ ಅಹಮಾದಾಬಾದ್ ಗೆ ಶಿಫ್ಟ್ ಮಾಡಲಾಗಿದೆ. ಸಿಎಂ ಅವರ ವೈದ್ಯಕೀಯ ವರದಿ ಬಂದಿದ್ದು, ಗಾಬರಿಯಾಗುವಂತಿದಿಲ್ಲ. ಇಸಿಜಿ, ಸಿಟಿ ಸ್ಕ್ಯಾನ್ ಸೇರಿದಂತೆ ಎಲ್ಲ ವೈದ್ಯಕೀಯ ಪರೀಕ್ಷೆಗಳನ್ನ ನಡೆಸಲಾಗಿದ್ದು, ಸಿಎಂ ಆರೋಗ್ಯವಾಗಿದ್ದಾರೆ. 24 ಗಂಟೆ ವೈದ್ಯರ ನಿಗಾದಲ್ಲಿ ಇರಿಸಲಾಗಿದೆ ಎಂದು ಯು.ಎನ್. ಆಸ್ಪತ್ರೆಯ ಡಾಕ್ಟರ್ ಆರ್.ಕೆ.ಪಟೇಲ್ ಮಾಹಿತಿ ನೀಡಿದ್ದಾರೆ.

    ವಡೋದರಾದ ನಿಜಾಮಪುರನಲ್ಲಿ ಮೂರನೇ ಬಾರಿ ಚುನಾವಣೆ ಪ್ರಚಾರ ನಡೆಸುತ್ತಿದ್ದರು. ವೇದಿಕೆ ಮೇಲೆ ಮತದಾರರನ್ನು ಉದ್ದೇಶಿಸಿ ಮತನಾಡುವಾಗ ಸಿಎಂ ದಿಢೀರ್ ಕುಸಿದರು. ಚುನಾವಣೆ ಹಿನ್ನೆಲೆ ನಿರಂತರ ಪ್ರಚಾರದಲ್ಲಿ ತೊಡಗಿಕೊಂಡಿರುವ ಸಿಎಂ ಕಳೆದ ಎರಡು ದಿನಗಳಿಂದ ಸರಿಯಾಗಿ ವಿಶ್ರಾಂತಿ ಸಹ ಪಡೆದುಕೊಂಡಿರಲಿಲ್ಲ. ಈ ಹಿನ್ನೆಲೆ ಕಡಿಮೆ ರಕ್ತದೊತ್ತಡದಿಂದಾಗಿ ಕುಸಿದಿದ್ದಾರೆ ಎಂದು ವರದಿಯಾಗಿದೆ.

    ವಡೋದರ ಸೇರಿದಂತೆ 6 ಮಹಾನಗರ ಪಾಲಿಕೆಗಳಲ್ಲಿ ಫೆಬ್ರವರಿ 21ರಂದು ಚುನಾವಣೆ ನಡೆಯಲಿದೆ. ಇತ್ತ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ಮಾಡಿ ಸಿಎಂ ಆರೋಗ್ಯ ವಿಚಾರಿಸಿದ್ದಾರೆ ಡಿಸಿಎಂ ನಿತಿನ್ ಪಟೇಲ್ ಹೇಳಿದ್ದಾರೆ.

  • ಸೂರ್ಯಗ್ರಹಣದ ಎಫೆಕ್ಟ್ – KSRTC ಕಲೆಕ್ಷನ್‍ಗೆ ಬಿತ್ತು ಹೊಡೆತ

    ಸೂರ್ಯಗ್ರಹಣದ ಎಫೆಕ್ಟ್ – KSRTC ಕಲೆಕ್ಷನ್‍ಗೆ ಬಿತ್ತು ಹೊಡೆತ

    ಚಿಕ್ಕಬಳ್ಳಾಪುರ: ಶತಮಾನದ ಕೇತುಗ್ರಸ್ಥ ಸೂರ್ಯಗ್ರಹಣದಿಂದ ರಾಜ್ಯ ಸಾರಿಗೆ ಸಂಸ್ಥೆಗೆ ಭಾರೀ ಹೊಡೆತ ಬಿದ್ದಿದೆ. ನಿರೀಕ್ಷಿತ ಪ್ರಮಾಣದ ಪ್ರಯಾಣಿಕರಿಲ್ಲದೆ ಈ ದಿನದ ಕಲೆಕ್ಷನ್‍ನಲ್ಲಿ ಭಾರೀ ಪ್ರಮಾಣದಲ್ಲಿ ಕಡಿಮೆಯಾಗಿದೆ.

    ಸೂರ್ಯ ಗ್ರಹಣದ ಹಿನ್ನೆಲೆಯಲ್ಲಿ ಜನ ಮನೆಯಿಂದ ಹೊರಗೆ ಬಾರದ ಕಾರಣ ಬಸ್‍ಗಳೆಲ್ಲವೂ ಬೆರಳಣಿಕೆ ಪ್ರಯಾಣಿಕರನ್ನು ಹೊತ್ತು ಸಾಗುವಂತಾಗಿದೆ. ಚಿಕ್ಕಬಳ್ಳಾಪುರ ನಗರದ ಕೆಎಸ್‍ಆರ್ ಟಿಸಿ ಬಸ್ ನಿಲ್ದಾಣ ಗ್ರಹಣದ ಎಫೆಕ್ಟ್ ನಿಂದ ಬಿಕೋ ಎನ್ನುವಂತಿತ್ತು. ಪ್ರಯಾಣಿಕರಿಲ್ಲದೆ ಖಾಲಿ ಖಾಲಿ ಹೊಡೆಯುತ್ತಿದ್ದ ಬಸ್ ಗಳು ನಿಂತಲ್ಲೇ ನಿಂತ ದೃಶ್ಯಗಳು ಸಾಮಾನ್ಯವಾಗಿತ್ತು. ಇಷ್ಟು ದಿನ ಬಸ್ ಗಳಿಗಾಗಿ ಪ್ರಯಾಣಿಕರು ಕಾಯುವಂತಹ ಪರಿಸ್ಥಿತಿ ಇರುತ್ತಿತ್ತು. ಆದರೆ ಇಂದು ಬಸ್ ಚಾಲಕ, ನಿರ್ವಾಹಕರು ಪ್ರಯಾಣಿಕರಿಗಾಗಿ ಕಾಯುವಂತಾಗಿತ್ತು.

    ಸಾಮಾನ್ಯ ದಿನಗಳಲ್ಲಿ ಚಿಕ್ಕಬಳ್ಳಾಪುರದಿಂದ ಬೆಂಗಳೂರು ಕಡೆಗೆ 10 ರಿಂದ 15 ನಿಮಿಷಕ್ಕೆ ಒಂದು ಬಸ್ ಪ್ರಯಾಣಿಕರನ್ನು ಹೊತ್ತ ಬಸ್ ಸಾಗುತ್ತಿತ್ತು. ಆದರೆ ಇಂದು ಅರ್ಧ ಗಂಟೆಯಾದರು ಒಂದು ಬಸ್ ಕೂಡ ತುಂಬಿರಲಿಲ್ಲ. ಪರಿಣಾಮ ಟಿಕೆಟ್ ಕಲೆಕ್ಷನ್‍ನಲ್ಲೂ ಸಹ ಸಾಕಷ್ಟು ಕಡಿಮೆಯಾಗಿದೆ. ಗ್ರಹಣದ ಸಮಯದಲ್ಲಿ 8 ರಿಂದ 11:30ರ ವೇಳೆಗೆ ಸುಮಾರು 45 ಬಸ್ ಗಳು ಬೆಂಗಳೂರು ಕಡೆಗೆ ಸಾಗಬೇಕಿತ್ತು. ಆದರೆ ಎಲ್ಲಾ ಬಸ್ ಗಳು ಅರ್ಧ ಗಂಟೆ ಲೇಟಾಗಿ ಖಾಲಿ ಖಾಲಿಯಾಗಿ ಬೆರಳಣೆಕೆ ಪ್ರಯಾಣಿಕರನ್ನ ಹೊತ್ತು ರಾಜಧಾನಿಯತ್ತ ಸಾಗಿವೆ. ಇದರಿಂದ ಸಹಜವಾಗಿ ಕಲೆಕ್ಷನ್ ಸಾಕಷ್ಟು ಕಡಿಮೆ ಆಗಿದೆ ಎಂದು ಚಿಕ್ಕಬಳ್ಳಾಪುರ ಕೆಎಸ್‍ಆರ್ ಟಿಸಿ ಬಸ್ ನಿಲ್ದಾಣದ ಟಿಸಿ ಬಿ.ಸೊಣ್ಣಪ್ಪ ಪಬ್ಲಿಕ್ ಟಿ ವಿಗೆ ಮಾಹಿತಿ ನೀಡಿದರು.

    ಖಾಸಗಿ ಬಸ್‍ಗಳಿಗೂ ಎಫೆಕ್ಟ್: ಕೆಎಸ್‍ಆರ್ ಟಿಸಿ ಬಸ್ ಗಳ ಒಂದೆಡೆಯಾದರೆ ಖಾಸಗಿ ಬಸ್ ಗಳ ವ್ಯಥೆಯೂ ಸಾಕಷ್ಟಿದೆ. ಚಿಕ್ಕಬಳ್ಳಾಪುರ ನಗರದ ಖಾಸಗಿ ಬಸ್ ನಿಲ್ದಾಣದಲ್ಲೂ ಪ್ರಯಾಣಿಕರಿಲ್ಲದೆ ಬಸ್ ಗಳೆಲ್ಲವೂ ಖಾಲಿ ಖಾಲಿಯಾಗಿ ನಿಂತಿತ್ತು. ಬೆಂಗಳೂರು ಕಡೆಗೆ ಎರಡು ಟ್ರಿಪ್ ಹೊಡೆದರೂ ಪ್ರಯಾಣಿಕರು ಬರುತ್ತಿಲ್ಲ. ಬೆರಳೆಣಿಕೆ ಪ್ರಯಾಣಿಕರು ಮಾತ್ರ ಬಸ್ ಹತ್ತಲು ಬರುತ್ತಿದ್ದಾರೆ. ಕನಿಷ್ಠ ಡಿಸೇಲ್‍ಗೂ ಸಹ ಕಲೆಕ್ಷಕನ್ ಆಗುತ್ತಿಲ್ಲ ಎಂದು ಖಾಸಗಿ ಬಸ್ ಚಾಲಕ ಪಬ್ಲಿಕ್ ಟಿವಿ ಬಳಿ ಅಳಲು ತೋಡಿಕೊಂಡರು.

    ಒಂದೆಡೆ ವಾಹನಗಳ ಸಂಚಾರ ವಿರಳವಾಗಿ ರಸ್ತೆಗಳು ಬಿಕೋ ಎನ್ನುತ್ತಿದ್ದರೆ, ಮತ್ತೊಂದೆಡೆ ಎಂದಿನಂತೆ ಅಂಗಡಿ ಮುಂಗಟ್ಟುಗಳು ತೆರೆದಿದ್ದರೂ ವ್ಯಾಪಾರ ವಹಿವಾಟು ಇಲ್ಲದೆ ವ್ಯಾಪಾರಸ್ಥರು ನಿರಾಸೆ ಅನುಭವಿಸಿದರು.