ಬೆಂಗಳೂರು: ಮನೆಗಳ ಹಕ್ಕುಪತ್ರ ನೋಂದಣಿ ಶುಲ್ಕವನ್ನು ಕಡಿಮೆ ಮಾಡಲಾಗಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕರ ಕಚೇರಿಯಲ್ಲಿ ಹಕ್ಕುಪತ್ರ ವಿತರಣೆ ಮತ್ತು ಕೊಳಚೆ ನಿರ್ಮೂಲನ ಮಂಡಳಿ ವತಿಯಿಂದ ಪ್ರಧಾನಿ ಮಂತ್ರಿ ಅವಾಸ್ ಯೋಜನೆಯ ಅಡಿಯಲ್ಲಿ ಮನೆ ಕಟ್ಟಲು ಅನುದಾನ ಬಿಡುಗಡೆಯ ಚಕ್ಕುಗಳನ್ನು ವಿ.ಸೋಮಣ್ಣ ಅರ್ಹ ಫಲಾನುಭವಿಗಳಿಗೆ ವಿತರಿಸಿ, ಬಳಿಕ ಮಾತನಾಡಿದರು.
ಫಲಾನುಭವಿಗಳಿಗೆ ಹಕ್ಕುಪತ್ರ ನೋಂದಣಿ ಶುಲ್ಕವನ್ನು ಸಾಮಾನ್ಯ ವರ್ಗದವರಿಗೆ 10ರಿಂದ 4 ಸಾವಿರ ಮತ್ತು ಎಸ್ಸಿ, ಎಸ್ಟಿ ಸಮುದಾಯದವರಿಗೆ 4 ಸಾವಿರದಿಂದ 2ಸಾವಿರಕ್ಕೆ ಇಳಿಸಲಾಗಿದೆ. ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರ ಬೆಂಗಳೂರಿನ ಹೃದಯಭಾಗದಲ್ಲಿದೆ. ಫಲಾನುಭವಿಗಳು ಮನೆ ಮಾರಟ ಮಾಡಬೇಡಿ, ನಿಮಗೆ ಮನೆ ಮಾಲಿಕತ್ವದ ಪತ್ರ ನೀಡಲಾಗಿದೆ. ಸುಖ ಜೀವನ ಮಾಡಲು ಸ್ವಂತ ಮನೆ ಇದ್ದರೆ ಸಾಕು ಎಂದು ಹೇಳಿದರು.
ಪ್ರಧಾನಿ ನರೇಂದ್ರಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರ ಬಡವರು ಸೂರು ಇಲ್ಲದೇ ಜೀವನ ಸಾಗಿಸಬಾರದು, ಶಾಶ್ವತ ಸೂರು ಪ್ರತಿಯೊಬ್ಬ ನಾಗರಿಕರಿಗೆ ಕಲ್ಪಿಸಿಬೇಕು ಎಂಬ ಆಶಯವನ್ನು ಈಡೇರಿಸಲಾಗುತ್ತಿದೆ. ಎಲ್ಲ ಧರ್ಮ, ವರ್ಗದ ಜನರಿಗೆ ವಸತಿ ಸೌಲಭ್ಯ ಸಿಗಬೇಕು. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ವಸತಿ ಇಲಾಖೆ ಶರವೇಗದಲ್ಲಿ ವಸತಿ ನಿರ್ಮಾಣ ಹಂಚಿಕೆ ಮಾಡುತ್ತಿದೆ. ಕಳೆದ 40 ವರ್ಷಗಳಿಂದ ನೆನಗುದಿಗೆ ಬಿದ್ದಿದ ಹಕ್ಕುಪತ್ರ ನೀಡವ ಕಾರ್ಯವನ್ನು ಇಂದು ಬಡವರಿಗೆ ಕೊಡಮಾಡಲಾಗುತ್ತಿದೆ ಎಂದರು.
ಕೆ.ಉಮೇಶ್ ಶೆಟ್ಟಿ, ಗಂಗಭೈರಯ್ಯ, ರೂಪಲಿಂಗೇಶ್ವರ್, ಗೋವಿಂದರಾಜನಗರ ಬಿಜೆಪಿ ಮಂಡಲ ಅಧ್ಯಕ್ಷ ವಿಶ್ವನಾಥಗೌಡ ಮತ್ತು ಸ್ಥಳೀಯ ಬಿಜೆಪಿ ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು. ಗೋವಿಂದರಾಜನಗರ ವಾರ್ಡ್, ದಾಸರಹಳ್ಳಿ ಮತ್ತು ಡಾ.ರಾಜ್ ಕುಮಾರ್ ವಾರ್ಡ್ ನ ನೂರಾರು ಬಡವರಿಗೆ ಹಕ್ಕುಪತ್ರ ಮತ್ತು ಮನೆ ಕಟ್ಟಲು ಚೆಕ್ ವಿತರಿಸಲಾಯಿತು.
ಮಡಿಕೇರಿ: ಸಿಎಂ ಯಡಿಯೂರಪ್ಪನವರು ತುಂಬಾ ಅನುಭವಿ ಇದ್ದಾರೆ, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಖಾತೆಗಳ ಬದಲಾವಣೆ ಮಾಡಲಾಗುತ್ತಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಪ್ರತಿಕ್ರಿಯಿಸಿದ್ದಾರೆ.
ಮಡಿಕೇರಿಯಲ್ಲಿ ನಡೆದ 72 ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭ ಅವರು ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ. ಖಾತೆ ಬದಲಾವಣೆಯಿಂದ ಕೆಲವು ಸಚಿವರು ಸಚಿವ ಸ್ಥಾನಕ್ಕೇ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅಭಿವೃದ್ಧಿ ದೃಷ್ಟಿಯಿಂದ ಖಾತೆಗಳ ಬದಲಾವಣೆ ಮಾಡಲಾಗಿದೆ. ಈ ಸಂದರ್ಭ ಸಚಿವರಿಗೆ ಸಣ್ಣಪುಟ್ಟ ಮುನಿಸುಗಳಿರುವುದು ಮತ್ತು ವ್ಯತ್ಯಾಸಗಳಾಗುವುದು ಸಹಜ. ಅದಲ್ಲೆವನ್ನೂ ಸಿಎಂ ಸರಿಮಾಡಲಿದ್ದಾರೆ. ಅವರು ತೆಗೆದುಕೊಳ್ಳುವ ನಿರ್ಧಾರಗಳು ಯಾವಾಗಲೂ ಸರಿಯಾಗಿರುತ್ತವೆ ಎಂದು ಹೇಳಿದ್ದಾರೆ.
ದೆಹಲಿಯಲ್ಲಿ ಮತ್ತು ಬೆಂಗಳೂರಿನಲ್ಲಿ ರೈತರು ಟ್ರ್ಯಾಕ್ಟರ್ ಪರೇಡ್ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸೋಮಣ್ಣ, ಹಿಂದೆ ಇದ್ದಿದ್ದು ಯಾವುದೋ ಬ್ರಿಟೀಷರ ಕಾಲದ ಕಾಯ್ದೆ ಆಗಿತ್ತು. ಈ ಕಾಯ್ದೆಯಿಂದ ಜನರಿಗೆ ಅನುಕೂಲವಿರಲಿಲ್ಲ, ಆದರೆ ಕಾಯ್ದೆ ತಿದ್ದುಪಡಿ ಮಾಡುತ್ತಿರುವುದರಿಂದ ರೈತರಿಗೆ ಅನುಕೂಲವಾಗಲಿದೆ. ಈ ಹಿಂದೆ ಯುಪಿಎ ಸರ್ಕಾರವೇ ಕಾಯ್ದೆ ತಿದ್ದುಪಡಿಗೆ ಮುಂದಾಗಿತ್ತು. ಆದರೆ ಅದನ್ನು ಅವರು ಗೌಣವಾಗಿಟ್ಟರು, ನಮ್ಮ ಸರ್ಕಾರ ಅದನ್ನು ಜಾರಿಗೆ ತಂದಿದೆ. ರೈತರು ಅವರ ಹೋರಾಟವನ್ನು ದಾಖಲಿಸುವುದು ಅವರ ಹಕ್ಕು, ಅದನ್ನು ನಾವು ಬೇಡ ಎನ್ನಲಾಗುವುದಿಲ್ಲ. ಆದರೆ ಶಾಂತಿಯುತವಾಗಿ ಪ್ರತಿಭಟನೆ ಮಾಡಬೇಕು ಎನ್ನೋದು ನಮ್ಮ ಇಚ್ಚೆ ಎಂದರು.
– ಆತನ ನನಗೇನೂ ವಂಚನೆ ಮಾಡಿಲ್ಲ – ನನಗೂ ಆತನಿಗೂ ಸಂಬಂಧ ಇಲ್ಲ – ಆತನ ಮನೆಗೆ ಹೋಗಿದ್ದೆ
ಬೆಂಗಳೂರು: ವಂಚಕ ಯುವರಾಜ್ ಸ್ವಾಮಿ ನಡೆ, ವೇಷಭೂಷಣ ನೋಡಿ ದೈವಭಕ್ತ ಇರಬೇಕು ಅನ್ಕೊಂಡೆ. ಹಾಗಾಗಿ ಆತನ ಮನೆಗೆ ಹೋಗಿದ್ದೆ. ಈಗ ಅನಿಸ್ತಿದೆ ಅವನ ಮನೆಗೆ ಹೋಗಿದ್ದು ತಪ್ಪು ಅಂತ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.
ಸಚಿವ ವಿ. ಸೋಮಣ್ಣ ಜೊತೆ ಯುವರಾಜ್ ಫೋಟೋ ವಿಚಾರವಾಗಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಯುವರಾಜ್ ನಮ್ಮ ಕ್ಷೇತ್ರದ ಮತದಾರ ಆಗಿದ್ದಾರೆ. ಒಮ್ಮೆ ಮನೆಗೆ ಕರೆದಾಗ ಹೋಗಿ ಬಂದಿದ್ದೆ. ಫೋಟೋ ಯಾರು ತೆಗೆದರೋ ಗೊತ್ತಿಲ್ಲ, ಆತ ನಾಲ್ಕೈದು ಬಾರಿ ಕರೆ ಮಾಡಿದ್ದ ಎಂದು ಹೇಳಿದ್ದಾರೆ.
ಯುವರಾಜ್ ವಂಚಕ ಅಂತ ಮೊದಲೇ ಅರಿಯಲು ನಾನು ದೇವರಲ್ಲ. ಮಾಧ್ಯಮಗಳಲ್ಲಿ ಬಂದ ಮೇಲೆ ಆತ ವಂಚಕ, ತುಂಬಾ ಜನಕ್ಕೆ ಮೋಸ ಮಾಡಿದ್ದಾನೆ ಅಂತ ಗೊತ್ತಾಗಿದ್ದು. ಆತ ನನಗೇನೂ ವಂಚನೆ ಮಾಡಿಲ್ಲ. ಯಾರಿಗೆ ವಂಚಿಸಿದ್ದಾನೆ ಎಂದೂ ನನಗೆ ಗೊತ್ತಿಲ್ಲ. ಆತನ ವೇಷಭೂಷಣ ನೋಡಿ ದೈವ ಭಕ್ತಕೊಂಡಿದ್ದೆನು. ಹೀಗಾಗಿ ಅವನ ಮನೆಗೆ ಹೋಗಿದ್ದೆ ಅಷ್ಟೇ ಎಂದು ಸ್ಪಷ್ಟನೆ ನೀಡಿದರು.
ಆತನ ಮನೆ ಅದ್ಧೂರಿಯಾಗಿದೆ. ತಪ್ಪು ಮಾಡಿದವರ ಪಾಪದ ಕೊಡ ತುಂಬಿದ್ರೆ ಹೊರಗೆ ಬರುತ್ತೆ. ಅದಕ್ಕೆ ಯುವರಾಜ್ ನೇ ನಿದರ್ಶನವಾಗಿದ್ದಾನೆ. ಆತ ಮಹಾ ಬುದ್ಧಿವಂತ ಅನ್ಕೊಂಡಿದ್ದೆ, ಇಂಥ ಬುದ್ಧಿವಂತ ಅಂತ ಗೊತ್ತಿರಲಿಲ್ಲ ನನಗೆ. ಯುವರಾಜ್ ಮನೆಯಲ್ಲಿ ಕಾಫಿ ಕುಡಿದಿದ್ದೆ, ಆತ ಕೊಟ್ಟ ತಟ್ಟೆ ನೋಡಿಯೇ ದಿಗಿಲಾಗಿತ್ತು. ಆಗ ನಾನು ಇದೇನು ಸ್ವಾಮಿ ಅಂತ ಹೇಳಿದ್ದೆನು. ಆತನ ಹೆಸರು ಮೊದಲು ಯಾವಾಗ ಕೇಳಿದ್ದು ನೆನಪಿಲ್ಲ. ಆತನನ್ನ ಬೇರೆಲ್ಲೂ ನಾನು ನೋಡಿಲ್ಲ ಎಂದರು.
ನನಗೂ ಆತನಿಗೂ ಸಂಬಂಧ ಇಲ್ಲ. ನನ್ನ ಮುಂದೆ ಯಾವುದೇ ಅರ್ಜಿ ಹಿಡಿದು ಆತ ಬಂದಿರ್ಲಿಲ್ಲ. ಒಮ್ಮೆ ಯಾರನ್ನೋ ಪರಿಚಯ ಮಾಡಿಕೊಡ್ತೀನಿ ಅಂದಿದ್ದನು ಬೇಡಪ್ಪ ಅಂತ ಹೇಳಿದ್ದೆ. ಸಿಸಿಬಿ ಕರೆದರೆ ಹೋಗೋಣವಂತೆ. ಆದರೆ ನಾನು ಮತದಾರ ಅಂತಷ್ಟೇ ಮನೆಗೆ ಹೋಗಿದ್ದು, ನಾನು ಯಾರನ್ನೂ ನೋಯಿಸಲ್ಲ. ಆತನ ಮನೆಗೆ ಹೋಗಿದ್ದೇ ಕೊನೆ. ಮತ್ತೆಂದೂ ಆತನನ್ನು ನೋಡಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ ಪ್ರತಿಮೆ ಧ್ವಂಸಕರಿಗೆ ಅಭಿನಯ ಚಕ್ರವರ್ತಿ ರನ್ನ ಸುದೀಪ್ ಖಡಕ್ ಎಚ್ಚರಿಕೆ ನೀಡಿದ್ದು, ನಿಮ್ಮ ಹೆಸರು ತಿಳಿಯುವ ಮೊದಲು ದೇಶ ಬಿಟ್ಟು ಹೋಗಿ ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಈ ಕುರಿತು ಟ್ವಿಟ್ಟರ್ ನಲ್ಲಿ ಎಚ್ಚರಿಕೆ ನೀಡಿರುವ ವೀಡಿಯೋ ಶೇರ್ ಮಾಡಿಕೊಂಡಿದ್ದಾರೆ.
ವಿಷ್ಣು ಸರ್ ಪ್ರತಿಮೆ ಧ್ವಂಸಗೊಳಿಸಿರುವ ವಿಷಯ ನನಗೆ ತಡವಾಗಿ ತಿಳಿಯಿತು. ವಿಷ್ಣು ಸರ್ ಅಭಿಮಾನಿಯಾಗಿ ಮೂರ್ತಿಯನ್ನ ಒಡೆದು ಹಾಕಿರೋರಿಗೆ ಕೆಲ ವಿಷಯಗಳನ್ನ ಹೇಳಲು ಇಷ್ಟಪಡುತ್ತೇನೆ. ಮೂರ್ತಿ ಒಡೆದು ಹಾಕಿರುವ ಧ್ವಂಸಕರು ಸಿಕ್ಕರೆ ವಿಷ್ಣು ಸರ್ ಅಭಿಮಾನಿಗಳು ನಿಮ್ಮನ್ನ ಅದಕ್ಕಿಂತ ಹೀನಾಯವಾಗಿ ಒಡೆದು ಹಾಕುತ್ತಾರೆ. ಮೂರ್ತಿ ಒಡೆದು ಹಾಕಿರುವವರು ಮನುಷ್ಯರೇ ಅಲ್ಲ. ಎಲ್ಲಿಯೂ ಸಿಕ್ಕಿ ಹಾಕಿಕೊಳ್ಳದಂತೆ ನೋಡಿಕೊಳ್ಳಿ. ನಿಮ್ಮ ಹೆಸರು ಗೊತ್ತಾದ ದಿನ ಏನು ನಡೆಯುತ್ತೆ ಅದನ್ನ ಯಾರಿಂದಲೂ ತಡೆಯಲು ಆಗಲ್ಲ.
ಆ ಮೂರ್ತಿಯನ್ನ ಒಡೆಯುವ ಮುನ್ನ ಒಂದು ಸಲ ನೀವೂ ಯೋಚನೆ ಮಾಡಿದ್ದರೆ ಒಬ್ಬ ಮನುಷ್ಯನಾಗಿ ಮಾಡೋ ಕೆಲಸವೇ ಅಲ್ಲ. ಎಂತಹವರು ಅಂತ ಹೇಳೋಕೆ ಹೋದ್ರೆ ಸೆನ್ಸಾರ್ ಸ್ಟಾರ್ಟ್ ಆಗುತ್ತೆ. ನಿಮ್ಮ ಹೆಸರು ಗೊತ್ತಾದ ದಿನ ದಯವಿಟ್ಟು ದೇಶ ಬಿಟ್ಟು ಓಡಿ ಹೋಗಿಬಿಡಿ ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನ ಮಾಗಡಿ ರಸ್ತೆಯ ಟೋಲ್ಗೇಟ್ ಅಂಡರ್ ಪಾಸ್ ಮೇಲಿದ್ದ ನಟ ಸಾಹಸ ಸಿಂಹ ವಿಷ್ಣುವರ್ಧನ್ ಪ್ರತಿಮೆಯನ್ನ ರಾತ್ರೋ ರಾತ್ರಿ ತೆಗೆಯಲಾಗಿದೆ. ವಿಷಯ ತಿಳಿದು ಸ್ಥಳದಲ್ಲಿ ಜಮಾಯಿಸಿರುವ ವಿಷ್ಣುವರ್ಧನ್ ಅಭಿಮಾನಿಗಳು ಆಕ್ರೋಶ ಹೊರ ಹಾಕಿದ್ದಾರೆ.
ಟೋಲ್ಗೇಟ್ ಸರ್ಕಲ್ ಗೆ ಶ್ರೀ ಬಾಲ ಗಂಗಾಧರ ಸ್ವಾಮೀಜಿ ವೃತ್ತ ಅಂತ ಹೆಸರಿಡಲಾಗಿದೆ. ಹಾಗಾಗಿ ವಿಷ್ಣುವರ್ಧನ್ ಪ್ರತಿಮೆ ಸ್ಥಳದಲ್ಲಿ ಬಾಲಗಂಗಾಧರ ಸ್ವಾಮೀಜಿ ಸ್ಟ್ಯಾಚು ಇಡಲು ನಿರ್ಧರಿಸಲಾಗಿದೆ. ಹೀಗಾಗಿ ರಾತ್ರಿ ವಿಷ್ಣು ಪ್ರತಿಮೆ ತೆರವುಗೊಳಿಸಲಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಪ್ರತಿಮೆ ತೆಗೆಯುವ ಮೂಲಕ ಕನ್ನಡಿಗರಿಗೆ ಅವಮಾನಿಸಲಾಗಿದೆ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅನಿರುದ್ಧ, ಪ್ರತಿಷ್ಠಾಪನೆಯಾಗಿರುವ ಮೂರ್ತಿಯನ್ನ ರಾತ್ರೋ ರಾತ್ರಿ ಯಾರಿಗೂ ಹೇಳದೇ ತೆಗೆಯುವುದು ಎಷ್ಟು ಸೂಕ್ತ. ಈ ರೀತಿಯ ಕೆಲಸಗಳಿಂದ ಹಿರಿಯ ವ್ಯಕ್ತಿಗೆ ಅವಮಾನ ಮಾಡಿದಂತೆ ಆಗಲ್ವಾ? ಇದರಿಂದ ಅಭಿಮಾನಿಗಳಿಗೆ ದುಃಖ ಆಗುತ್ತೆ. ವಿಷ್ಣುವರ್ಧನ್ ಅಪ್ಪಾಜಿ ಪ್ರತಿಮೆಯನ್ನ ಯಾರು ತೆಗೆದ್ರು ಮತ್ತು ಯಾಕೆ ತೆಗೆದರು ಎಂದು ಬೇಸರ ವ್ಯಕ್ತಪಡಿಸಿದರು.
To those ******** who broke the statue of my hero and my idol VishnuSir,, Here is my advice,,,,,,, pic.twitter.com/C6zTglMIy3
ನಮ್ಮ ಕುಟುಂಬ ಎಲ್ಲರನ್ನ ಗೌರವಿಸುತ್ತೆ. ನಾವು ಯಾರ ಮಾತಿಗೆ ತಿರುಗೇಟು ನೀಡುವುದು ನಮಗೆ ಗೊತ್ತಿಲ್ಲ. ಸಚಿವರಾಗಿರುವ ಸೋಮಣ್ಣ ಅವರ ಮಾತುಗಳಿಗೆ ನಾವು ಗೌರವ ನೀಡುತ್ತೇವೆ. ಒಂದು ಪುತ್ಥಳಿಯನ್ನ ಪ್ರತಿಷ್ಠಾಪನೆ ಮಾಡುವಾಗಲೇ ಎಲ್ಲ ಮಾಹಿತಿ ಸಂಗ್ರಹಿಸಿಕೊಳ್ಳಬೇಕು. ಪ್ರತಿಷ್ಠಾಪನೆ ವಿಚಾರದಲ್ಲಿ ಯಾವ ತೊಂದರೆಯೂ ಇಲ್ಲ ಅಂದ್ಮೇಲೆ ಪ್ರತಿಮೆ ಸ್ಥಾಪನೆ ಮಾಡಲಾಗುತ್ತದೆ. ಪ್ರತಿ ಬಾರಿಯೂ ಅಪ್ಪಾಜಿ ಅವರ ಬಗ್ಗೆಯೇ ಈ ರೀತಿ ಯಾಕೆ ಆಗ್ತಿದೆ. ಒಂದು ವೇಳೆ ಪ್ರತಿಮೆ ಸ್ಥಳಾಂತರಿಸುವದಿದ್ದರೆ ಎಲ್ಲರ ಜೊತೆ ಮಾತುಕತೆ ನಡೆಸಿ ಗೌರವಯುತವಾಗಿ ತೆಗೆಯಬಹದಿತ್ತು ಎಂದರು.
ವಿ.ಸೋಮಣ್ಣ ಹೇಳಿದ್ದೇನು?: 40 ವರ್ಷಗಳ ಹಿಂದೆಯೇ ಬಾಲಗಂಗಾಧರೇಶ್ವರ ವೃತ್ತ ಎಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ನಾನು ಮತ್ತು ವಿಷ್ಣುವರ್ಧನ್ ಆತ್ಮೀಯರು. ಆದ್ರೆ ಈ ಪ್ರತಿಮೆ ಏಕೆ ತೆರವು ಆಯ್ತು ಅಂತ ಮಾಹಿತಿ ಇಲ್ಲ. ಆದ್ರೆ ಈ ಪ್ರದೇಶದಲ್ಲಿ ತಿಳಿದೋ ಅಥವಾ ತಿಳಿಯದೋ ಅಲ್ಲಿ ಪ್ರತಿಮೆ ಇರಿಸಲಾಗಿತ್ತು. ಮುಂದಿನ ನಾಲ್ಕೈದು ದಿನಗಳಲ್ಲಿ ಒಳ್ಳೆ ಕಡೆ ಪ್ರತಿಮೆ ಸ್ಥಾಪನೆ ಮಾಡಲಾಗುವುದು. ವಿಷ್ಣುವರ್ಧನ್ ನನಗೆ ಆತ್ಮೀಯರಲ್ಲಿ ಆತ್ಮೀಯರು. ನನ್ನ ಜೊತೆಗಿನ ಅವರ ಒಡನಾಟ ಹೇಗಿತ್ತು ಅನ್ನೋದು ಈಗ ಹೇಳಲು ಸಮಯ ಇಲ್ಲ. ಇದೊಂದು ಸೂಕ್ಷ್ಮ ಘಟನೆಯಾಗಿದ್ದು, ನಡೆದ ಅತಾಚುರ್ಯಕ್ಕೆ ನಾನು ಕ್ಷಮೆ ಕೇಳುತ್ತೇನೆ. ನನ್ನ ಕ್ಷೇತ್ರದಲ್ಲಿ ಎಲ್ಲಿ ಬೇಕಾದ್ರೂ ಸ್ಥಾಪಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದ್ದರು.
ಬೆಂಗಳೂರು: ಮಾಗಡಿ ರಸ್ತೆಯ ಅಂಡರ್ ಪಾಸ್ ಮೇಲ್ಭಾಗದಲ್ಲಿ ವಿಷ್ಣುವರ್ಧನ್ ಪ್ರತಿಮೆ ಸ್ಥಳಾಂತರದ ಬಗ್ಗೆ ನಟ ಅನಿರುದ್ಧ್ ಪ್ರತಿಕ್ರಿಯೆ ನೀಡಿದ್ದಾರೆ.
ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅನಿರುದ್ಧ್, ಪ್ರತಿಷ್ಠಾಪನೆಯಾಗಿರುವ ಮೂರ್ತಿಯನ್ನ ರಾತ್ರೋ ರಾತ್ರಿ ಯಾರಿಗೂ ಹೇಳದೇ ತೆಗೆಯುವುದು ಎಷ್ಟು ಸೂಕ್ತ. ಈ ರೀತಿಯ ಕೆಲಸಗಳಿಂದ ಹಿರಿಯ ವ್ಯಕ್ತಿಗೆ ಅವಮಾನ ಮಾಡಿದಂತೆ ಆಗಲ್ವಾ? ಇದರಿಂದ ಅಭಿಮಾನಿಗಳಿಗೆ ದುಃಖ ಆಗುತ್ತೆ. ವಿಷ್ಣುವರ್ಧನ್ ಅಪ್ಪಾಜಿ ಪ್ರತಿಮೆಯನ್ನ ಯಾರು ತೆಗೆದ್ರು ಮತ್ತು ಯಾಕೆ ತೆಗೆದರು ಎಂದು ಬೇಸರ ವ್ಯಕ್ತಪಡಿಸಿದರು.
ನಮ್ಮ ಕುಟುಂಬ ಎಲ್ಲರನ್ನ ಗೌರವಿಸುತ್ತೆ. ನಾವು ಯಾರ ಮಾತಿಗೆ ತಿರುಗೇಟು ನೀಡುವುದು ನಮಗೆ ಗೊತ್ತಿಲ್ಲ. ಸಚಿವರಾಗಿರುವ ಸೋಮಣ್ಣ ಅವರ ಮಾತುಗಳಿಗೆ ನಾವು ಗೌರವ ನೀಡುತ್ತೇವೆ. ಒಂದು ಪುತ್ಥಳಿಯನ್ನ ಪ್ರತಿಷ್ಠಾಪನೆ ಮಾಡುವಾಗಲೇ ಎಲ್ಲ ಮಾಹಿತಿ ಸಂಗ್ರಹಿಸಿಕೊಳ್ಳಬೇಕು. ಪ್ರತಿಷ್ಠಾಪನೆ ವಿಚಾರದಲ್ಲಿ ಯಾವ ತೊಂದರೆಯೂ ಇಲ್ಲ ಅಂದ್ಮೇಲೆ ಪ್ರತಿಮೆ ಸ್ಥಾಪನೆ ಮಾಡಲಾಗುತ್ತದೆ. ಪ್ರತಿ ಬಾರಿಯೂ ಅಪ್ಪಾಜಿ ಅವರ ಬಗ್ಗೆಯೇ ಈ ರೀತಿ ಯಾಕೆ ಆಗ್ತಿದೆ. ಒಂದು ವೇಳೆ ಪ್ರತಿಮೆ ಸ್ಥಳಾಂತರಿಸುವದಿದ್ದರೆ ಎಲ್ಲರ ಜೊತೆ ಮಾತುಕತೆ ನಡೆಸಿ ಗೌರವಯುತವಾಗಿ ತೆಗೆಯಬಹದಿತ್ತು ಎಂದರು.
ವಿ.ಸೋಮಣ್ಣ ಹೇಳಿದ್ದೇನು?: 40 ವರ್ಷಗಳ ಹಿಂದೆಯೇ ಬಾಲಗಂಗಾಧರೇಶ್ವರ ವೃತ್ತ ಎಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ನಾನು ಮತ್ತು ವಿಷ್ಣುವರ್ಧನ್ ಆತ್ಮೀಯರು. ಆದ್ರೆ ಈ ಪ್ರತಿಮೆ ಏಕೆ ತೆರವು ಆಯ್ತು ಅಂತ ಮಾಹಿತಿ ಇಲ್ಲ. ಆದ್ರೆ ಈ ಪ್ರದೇಶದಲ್ಲಿ ತಿಳಿದೋ ಅಥವಾ ತಿಳಿಯದೋ ಅಲ್ಲಿ ಪ್ರತಿಮೆ ಇರಿಸಲಾಗಿತ್ತು. ಮುಂದಿನ ನಾಲ್ಕೈದು ದಿನಗಳಲ್ಲಿ ಒಳ್ಳೆ ಕಡೆ ಪ್ರತಿಮೆ ಸ್ಥಾಪನೆ ಮಾಡಲಾಗುವುದು. ವಿಷ್ಣುವರ್ಧನ್ ನನಗೆ ಆತ್ಮೀಯರಲ್ಲಿ ಆತ್ಮೀಯರು. ನನ್ನ ಜೊತೆಗಿನ ಅವರ ಒಡನಾಟ ಹೇಗಿತ್ತು ಅನ್ನೋದು ಈಗ ಹೇಳಲು ಸಮಯ ಇಲ್ಲ. ಇದೊಂದು ಸೂಕ್ಷ್ಮ ಘಟನೆಯಾಗಿದ್ದು, ನಡೆದ ಅತಾಚುರ್ಯಕ್ಕೆ ನಾನು ಕ್ಷಮೆ ಕೇಳುತ್ತೇನೆ. ನನ್ನ ಕ್ಷೇತ್ರದಲ್ಲಿ ಎಲ್ಲಿ ಬೇಕಾದ್ರೂ ಸ್ಥಾಪಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದ್ದರು.
ಬೆಂಗಳೂರು: ಸಾಹಸಸಿಂಹ ವಿಷ್ಣುವರ್ಧನ್ ಅವರ ಮೂರ್ತಿಯನ್ನ ಮಾತುಕತೆಯೇ ಮೂಲಕವೇ ತೆರವು ಮಾಡಲಾಗಿದೆ. ಆದ್ರೆ ಯಾಕೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ನನಗೂ ಗೊತ್ತಿಲ್ಲ. ಕೂಡಲೇ ವಿಷ್ಣುವರ್ಧನ್ ಅವರ ಅಭಿಮಾನಿಗಳನ್ನ ಕರೆಸಿ ಮಾತನಾಡುತ್ತೇನೆ ಎಂದು ವಸತಿ ಸಚಿವ ವಿ.ಸೋಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಪಬ್ಲಿಕ್ ಟಿವಿ ಜೊತೆ ಮಾತನಾಡಿದ ವಿ.ಸೋಮಣ್ಣ, ನಾನು ನಿನ್ನೆ ಚಿಕ್ಕಮಗಳೂರಿನಲ್ಲಿದ್ದು, ಇಂದು ಮಾತನಾಡುತ್ತೇನೆ. ಶ್ರೀ ಬಾಲಗಂಗಾಧರ ಸ್ವಾಮೀಜಿಗಳ ವೃತ್ತ ಆಗಿರೋದರಿಂದ ಅವರ ಪ್ರತಿಮೆ ಸ್ಥಾಪನೆ ಬಗ್ಗೆ ಚರ್ಚೆ ನಡೆದಿತ್ತು. ಅಲ್ಲಿಯೇ ನಿರ್ಮಾಣವಾಗುತ್ತಿರುವ ಪಾರ್ಕ್ ನಲ್ಲಿ ಅಥವಾ ವಿಜಯನಗರ ಬಸ್ ನಿಲ್ದಾಣದಲ್ಲಿ ವಿಷ್ಣು ಅವರ ಪ್ರತಿಮೆ ಸ್ಥಾಪಿಸುವ ಕುರಿತು ಮಾತುಕತೆ ನಡೆದಿತ್ತು ಎಂದು ಸೋಮಣ್ಣ ಅವರು ತಿಳಿಸಿದರು.
40 ವರ್ಷಗಳ ಹಿಂದೆಯೇ ಬಾಲಗಂಗಾಧರೇಶ್ವರ ವೃತ್ತ ಎಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ನಾನು ಮತ್ತು ವಿಷ್ಣುವರ್ಧನ್ ಆತ್ಮೀಯರು. ಆದ್ರೆ ಈ ಪ್ರತಿಮೆ ಏಕೆ ತೆರವು ಆಯ್ತು ಅಂತ ಮಾಹಿತಿ ಇಲ್ಲ. ಆದ್ರೆ ಈ ಪ್ರದೇಶದಲ್ಲಿ ತಿಳಿದೋ ಅಥವಾ ತಿಳಿಯದೋ ಅಲ್ಲಿ ಪ್ರತಿಮೆ ಇರಿಸಲಾಗಿತ್ತು. ಮುಂದಿನ ನಾಲ್ಕೈದು ದಿನಗಳಲ್ಲಿ ಒಳ್ಳೆ ಕಡೆ ಪ್ರತಿಮೆ ಸ್ಥಾಪನೆ ಮಾಡಲಾಗುವುದು ಎಂದರು.
ವಿಷ್ಣುವರ್ಧನ್ ನನಗೆ ಆತ್ಮೀಯರಲ್ಲಿ ಆತ್ಮೀಯರು. ನನ್ನ ಜೊತೆಗಿನ ಅವರ ಒಡನಾಟ ಹೇಗಿತ್ತು ಅನ್ನೋದು ಈಗ ಹೇಳಲು ಸಮಯ ಇಲ್ಲ. ಇದೊಂದು ಸೂಕ್ಷ್ಮ ಘಟನೆಯಾಗಿದ್ದು, ನಡೆದ ಅತಾಚುರ್ಯಕ್ಕೆ ನಾನು ಕ್ಷಮೆ ಕೇಳುತ್ತೇನೆ. ನನ್ನ ಕ್ಷೇತ್ರದಲ್ಲಿ ಎಲ್ಲಿ ಬೇಕಾದ್ರೂ ಸ್ಥಾಪಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದ್ದರು.
ಮಡಿಕೇರಿ: ಬೆನ್ನಿಗೆ ಚೂರಿ ಹಾಕಿದರು ಎನ್ನೋದು ಸಿದ್ದರಾಮಯ್ಯ ಅವರಿಗೆ ಈಗ ಅರ್ಥವಾಗಿದೆ. ಬೆನ್ನಿಗೆ ಚೂರಿ ಹಾಕುತ್ತಾರೆ ಎನ್ನೋ ಪಕ್ಷದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇನ್ನೂ ಯಾಕೆ ಇದ್ದಾರೋ ಗೊತ್ತಿಲ್ಲ. ಅವರು ಚೆನ್ನಾಗಿ ಯೋಚಿಸಿ ಮುಂದಿನ ಒಳ್ಳೆಯ ಹೆಜ್ಜೆ ಇಡಲಿ ಎಂದು ವಸತಿ ಸಚಿವ ವಿ.ಸೋಮಣ್ಣ ಕಿಚಾಯಿಸಿದರು.
ಕೊಡಗಿನ ಸುಂಟಿಕೊಪ್ಪದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಐದು ವರ್ಷಗಳ ಕಾಲ ಸಿಎಂ ಆಗಿದ್ದವರು, ಅವರ ಪಕ್ಷವನ್ನು ಉತ್ತುಂಗಕ್ಕೆ ಕೊಂಡೊಯ್ಯಲು ಶ್ರಮಿಸಿದವರು. ಅಂತಹವರಿಗೇ ಅವರ ಪಕ್ಷದಲ್ಲಿ ಬೆನ್ನಿಗೆ ಚೂರಿ ಹಾಕುವುದಾದರೆ ಆ ಪಕ್ಷದಲ್ಲಿ ಯಾಕಿದ್ದಾರೆ ಎಂದು ಪ್ರಶ್ನಿಸಿದರು.
ಸಿದ್ದರಾಮಯ್ಯ ಅವರ ನೋವನ್ನು ನಿನ್ನೆ ಹೇಳಿಕೊಂಡಿದ್ದಾರೆ. ಅದಕ್ಕೆ ನಾವು ಅಷ್ಟು ಬೆಲೆ ಕೋಡಬೇಕಿಲ್ಲ, ಸಿದ್ದರಾಮಯ್ಯ ಅವರು ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿಗಳು. ಅವರ ಮೇಲೆ ನನಗೆ ಅಪಾರವಾದ ಗೌರವವಿದೆ ಅವರು ಮಾತಾನಾಡಿರುವುದು ಸರಿ ಇದೆ ಎಂದರು.
ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿ, ಸಿದ್ದರಾಮಯ್ಯ ನಾಲ್ಕು ಬಾರಿ ಆ ಕ್ಷೇತ್ರದಲ್ಲಿ ಹಿಂದೆ ಗೆದ್ದಿದ್ದರು. ಆದರೆ ಇಂದಿಗೂ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ದೀಪದ ಕೆಳಗೆ ಕತ್ತಲು ಅನ್ನೋ ಹಾಗೆ ಆ ಕಡೆ ಕೆಆರ್ಎಸ್ ಈ ಕಡೆ ಕಬಿನಿ ಇದೆ. ಆದರೂ ಕುಡಿಯುವ ನೀರಿನ ಕೊರತೆ ಇದ್ದು, ಆ ಸಮಸ್ಯೆಯನ್ನು ಸಿದ್ದರಾಮಯ್ಯ ಅವರು ಬಗೆಹರಿಸಲಿಲ್ಲ. ಈಗ ಜನರನ್ನು ದೂರಿದರೆ ಏನು ಪ್ರಯೋಜನ ಎಂದು ಟೀಕಿಸಿದರು.
ಮಡಿಕೇರಿ: ಹೊಸಕೋಟೆ ಕ್ಷೇತ್ರದ ಪಕ್ಷೇತರ ಶಾಸಕ, ಬಿಜೆಪಿ ಸಂಸದ ಬಚ್ಚೇಗೌಡರ ಪುತ್ರ ಶರತ್ ಬಚ್ಚೇಗೌಡ ಮುಳುಗುತ್ತಿರುವ ಹಡಗನ್ನ ಏರುತ್ತೇನೆ ಎಂದು ಏನು ಮಾಡಲು ಸಾಧ್ಯ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಸಂಪಾಜೆಯಲ್ಲಿ ನಡೆದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಅವರು ಭಾಗವಹಿಸಿದ್ದ ಸಂದರ್ಭ ಮಾತನಾಡಿದರು.
ಕಾಂಗ್ರೆಸ್ ಸೇರುತ್ತಿರೋದು ಶರತ್ ಅವರ ವೈಯಕ್ತಿಕ ವಿಚಾರ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜೊತೆಗೆ ಈಗಾಗಲೇ ಮಾತುಕತೆ ನಡೆಸಿದ್ದರೆ ಅವರಿಗೆ ಒಳ್ಳೆಯದಾಗಲಿ. ಆದರೆ ಮುಳುಗುತ್ತಿರುವ ಹಡಗನ್ನು ಏರುತ್ತೇನೆ ಎಂದರೆ ಏನು ಮಾಡೋದಕ್ಕೆ ಆಗುತ್ತದೆ. ಅವರ ತಂದೆ ನಮ್ಮ ಪಕ್ಷದಿಂದ ಸಂಸದರಾಗಿದ್ದವರು. ಮಗ ಕಾಂಗ್ರೆಸ್ ಗೆ ಹೋಗುತ್ತೇನೆ ಅಂದರೆ ಏನು ಮಾಡೋದಕ್ಕೆ ಆಗುತ್ತದೆ ಅವರೇ ಈ ಬಗ್ಗೆ ಯೋಚಿಸಲಿ ಎಂದರು.
ಕಾಂಗ್ರೆಸ್ ನೇರ ಕಾರಣ: ವಿಧಾನ ಪರಿಷತ್ ಸಭಾಧ್ಯಕ್ಷರ ರಾಜೀನಾಮೇಗೆ ಸಂಬಂಧಿಸಿದಂತೆ ನಡೆದ ಗಲಾಟೆಗೆ ಕಾಂಗ್ರೆಸ್ ನೇರ ಕಾರಣ. ನಾನು ಸಹ ಎರಡು ಬಾರಿ ಪರಿಷತ್ ಸದಸ್ಯನಾಗಿದ್ದೆ. ಆ ಪರಿಷತ್ತಿನ ಸದಸ್ಯರು ಒಂದು ಘನತೆಯಿಂದ ನಡೆದುಕೊಳ್ಳುತ್ತಿದ್ದರು. ಸ್ಪೀಕರ್ ಅವರೇ ರಾಜೀನಾಮೆ ಕೊಡಗು ಮುಂದಾಗಿದ್ದಾರೆ. ಆದರೆ ಕಾಂಗ್ರೆಸ್ ನವರು ಹತಾಶರಾಗಿ ಅದನ್ನು ತಡೆದರು. ಇದರ ಪರಿಣಾಮವಾಗಿ ಗಲಾಟೆಯಾಗಿದೆ. ಹೀಗಾಗಿ ಆ ಗಲಾಟೆಗೆ ಕಾಂಗ್ರೆಸ್ ನೇರ ಕಾರಣ ಎಂದು ಟೀಕಿಸಿದರು. ಪರಿಷತ್ ಅನ್ನೋದು ಚಿಂತಕರ ಛಾವಡಿ. ಆದರೆ ಅದರ ಮೇಲೆ ಗದಾಪ್ರಹಾರ ಮಾಡಿದ್ದು ಸರಿಯಲ್ಲ ಎಂದು ಅಭಿಪ್ರಾಯಿಸಿದರು.
ವಿಧಾನ ಪರಿಷತ್ ಗಲಾಟೆಗೆ ಸಂಬಂಧಿಸಿ ಮಾತನಾಡಿದ ಕೊಡಗು ಮೈಸೂರು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಘನ ಉದ್ದೇಶಗಳಿಂದ ರಾಜ್ಯಸಭೆ ಮತ್ತು ವಿಧಾನ ಪರಿಷತ್ ಗಳು ರಚನೆಯಾಗಿವೆ. ಅವುಗಳಿಗೆ ಬರುವವರ ಜ್ಞಾನ ದೇಶಕ್ಕೆ ಉಪಯೋಗವಾಗಬೇಕು ಎನ್ನೋ ಉದ್ದೇಶವಿದೆ. ಪರಿಷತ್ ಸದಸ್ಯರು ಅದನ್ನು ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ.
ಮಡಿಕೇರಿ: ಪ್ರವಾಹ, ನೆರೆಯಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸೂರಿಲ್ಲದೆ ಪರಿತಪಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಅಧಿಕಾರಿಗಳು ಲಂಚಕ್ಕೆ ಕೈಚಾಚಿ ಅಮಾನವೀಯವಾಗಿ ವರ್ತಿಸುತ್ತಿದ್ದಾರೆ. ಹೀಗೆ ಹಣ ಪಡೆದು ಅಕ್ರಮವಾಗಿ ಮನೆ ಹಂಚಿಕೆ ಮಾಡಿದ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಚಿವ ವಿ.ಸೋಮಣ್ಣ ಆದೇಶಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣ ಪಡೆದು ಅಕ್ರಮವಾಗಿ ಮನೆ ಹಂಚಿಕೆ ಮಾಡುವ ಮೂಲಕ ಎಸಿ ಕಚೇರಿಯಲ್ಲಿ ಡೆಪ್ಟೇಷನ್ ನಲ್ಲಿ ಇದ್ದ ಹೇಮಂತ್ ಸಂತ್ರಸ್ತರಿಗೆ ಮೋಸ ಮಾಡಿದ್ದ. ಸುಮಾರು 60 ಜನರಿಗೆ ಅಕ್ರಮವಾಗಿ ಮನೆಗಳ ಹಂಚಿಕೆ ಮಾಡಿದ್ದ ಎಂಬ ಆರೋಪ ಕೇಳಿ ಬಂದಿದೆ. ಜಿಲ್ಲಾಧಿಕಾರಿ, ಶಾಸಕರ ಗಮನಕ್ಕೂ ಬಾರದೆ ಬೇಕಾಬಿಟ್ಟಿಯಾಗಿ ಮನೆ ಹಂಚಿಕೆ ಮಾಡಿದ್ದು, ಇದರಿಂದಾಗಿ ಅಗತ್ಯವಿದ್ದವರಿಗೆ ಹಣ ತಲುಪಿಲ್ಲ. ಹೀಗಾಗಿ ಅಧಿಕಾರಿಯನ್ನು ತಕ್ಷಣವೇ ಅಮಾನತು ಮಾಡುವಂತೆ ಆದೇಶ ಹೊರಡಿಸಿದ್ದಾರೆ.
ಬಿಜೆಪಿಯ ಹಿರಿಯ ನಾಯಕರು ಡ್ರಗ್ಸ್ ಇಲ್ಲದೆ ಹೊರಗೆ ಬರುತ್ತಿರಲಿಲ್ಲ ಎಂಬ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ ಅವರ ಹೇಳಿಕೆ ಕುರಿತು ಮಾತನಾಡಿದ ಅವರು, ಹರಿಪ್ರಸಾದ್ ರಾಷ್ಟ್ರ, ರಾಜ್ಯ ರಾಜಕಾರಣದಲ್ಲಿ ಹಿರಿಯರು. ಅವರು ಏನು ಹೇಳಿದ್ದಾರೆ ಎಂಬುದು ತಿಳಿದಿಲ್ಲ. ಆದರೆ ಅಂತಹವರ ಬಾಯಿಯಲ್ಲಿ ಇಂತಹ ಮಾತುಗಳು ಬರಬಾರದು. ಯಾವುದನ್ನೂ ಮುಚ್ಚಿಕೊಳ್ಳುವ ಪ್ರಶ್ನೆ ಇಲ್ಲ. ಡ್ರಗ್ಸ್, ಗಾಂಜಾ ಸಮಾಜಕ್ಕೆ ಕಂಟಕವಾಗಿದೆ. ಯಡಿಯೂರಪ್ಪನವರ ಸರ್ಕಾರ ಇದನ್ನು ಮಟ್ಟಹಾಕಲಿದೆ ಎಂದು ತಿಳಿಸಿದರು.
ಬೆಂಗಳೂರು: ಸಣ್ಣದಾಗಿ ನಡೆದುಕೊಂಡು, ಯಾರ ಬಗ್ಗೆಯಾದರೂ ಅಪಚಾರ ಮಾಡಿದ್ದರೆ ನಾನು ನೇಣು ಹಾಕಿಕೊಳ್ಳೋಕೆ ತಯಾರಿದ್ದೇನೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಾ ಪಿಡಿಓಗಳು ರಾಕ್ಷಸರು ಎಂಬ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಅವರು, ಬಡವರಿಗಾಗಿ ಶಾಸಕರ ಸಲಹೆಯನ್ನು ಸ್ವೀಕರಿಸಬೇಕು. ಅವರು ಹೇಳಿದಂತೆ ಅವರ ಸಲಹೆಗಳನ್ನು ನಾನು ಕಾರ್ಯರೂಪಕ್ಕೆ ತರಬೇಕು. ಇಲ್ಲ ಅಂದರೆ ನಾನು ಕೆಲಸಕ್ಕೆ ಬಾರದ ವ್ಯಕ್ತಿಯಾಗಿ ಬಿಡುತ್ತೇನೆ ಎಂದರು.
ಸಚಿವನಾಗಿ ಒಂದು ವರ್ಷ ಎರಡು ತಿಂಗಳು ಆಗುತ್ತಿದೆ. ಗೊಂದಲದ ಗೂಡಾಗಿದ್ದ ವಸತಿ ಇಲಾಖೆಯನ್ನ ಲಾಜಿಕಲ್ ಎಂಡ್ಗೆ ತಂದಿದ್ದೇವೆ. 188 ವಿಧಾನಸಭಾ ಕ್ಷೇತ್ರದಲ್ಲಿ ಪ್ರಧಾನಮಂತ್ರಿ ಅವಾಸ್ ಯೋಜನೆಯ 5.40 ಲಕ್ಷ ಮನೆಗಳು ಮಂಜೂರಾಗಿದ್ದವು. ಆದರೆ ಬಹಳಷ್ಟು ಜಿಲ್ಲೆಗಳಲ್ಲಿ ಅನರ್ಹ ಫಲಾನುಭವಿಗಳು ಕಂಡುಬರುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
5 ಲಕ್ಷ 40 ಸಾವಿರ ಮನೆ 180 ವಿಧಾನಸಭಾ ಕ್ಷೇತ್ರದಲ್ಲಿ ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿ ಸಿಗಲಿದೆ. ಆದರೆ ಅರ್ಹ ಫಲಾನುಭವಿಗಳ ನಡುವೆ ಅನರ್ಹರು ಸಿಕ್ಕಿದ್ದಾರೆ. ಈ ಯೋಜನೆಯಲ್ಲಿ ಮಿಸ್ ಯೂಸ್ ಆಗ್ತಾ ಇತ್ತು. ಪಿಡಿಓಗಳು ಮಾಡಿರುವ ತಪ್ಪುಗಳಿವು. ಪಿಡಿಓಗಳು ಹೇಳಿದ್ದು ಎಲ್ಲವೂ ಸರಿ ಇರೋದಿಲ್ಲ. ಕೆಲವು ಪಿಡಿಓಗಳು ರಾಕ್ಷಸ ಪ್ರವೃತ್ತಿಯವರು ಇರ್ತಾರೆ ಎಂದಿದ್ದೇನೆ. ಇದನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೇನೆ. ಅದರಲ್ಲಿ ಏನ್ ತಪ್ಪಿದೆ ಎಂದು ಸಿಎಂ ಕೇಳಿದ್ರು. ಪಿಡಿಓಗಳು ಎಲ್ಲರನ್ನೂ ರಾಕ್ಷಸರು ಅಂತ ಹೇಳಿಲ್ಲ. ಕೆಲವರನ್ನಷ್ಟೇ ರಾಕ್ಷಸರು ಎಂದಿದ್ದೇನೆ. ಅದಕ್ಕೆ ನಾನು ಈಗಲೂ ಬದ್ಧನಾಗಿದ್ದೇನೆ. ಒಳ್ಳೆಯ ಪಿಡಿಓಗಳಿಗೆ ರಾಕ್ಷಸರು ಅಂತ ಹೇಳುವ ಚಟ ನನಗಿಲ್ಲ ಎಂದರು.
ಕೆಲವು ಪಿಡಿಓಗಳು ಪ್ರತಿಭಟನೆ ಮಾಡ್ತಾರೋ ಮಾಡಿಕೊಳ್ಳಲಿ, ನನಗೆ ತೊಂದ್ರೆ ಇಲ್ಲ. ಎಲ್ಲವೂ ಸರಿ ಇರಬೇಕು ಅನ್ನೋದು ನನ್ನ ಉದ್ದೇಶ. ದನದ ಕೊಟ್ಟಿಗೆ ಕಟ್ಟಿಸೋಕೆ, ಮತ್ತೇನೊ ಮಾಡೋಕೆ ಹಣ ಕೊಟ್ರೆ ಹೇಗೆ?. ನನಗೆ ಅರ್ಹ ಫಲಾನುಭವಿಗಳಿಗೆ ಮನೆ ಸಿಗಬೇಕು ಅಷ್ಟೇ. ನ್ಯೂನತೆಗಳು ಸರಿಯಾಗಬೇಕು. ಹೀಗಾಗಿ ನಿನ್ನೆ ನಾನು ಕೆಲ ಪಿಡಿಓಗಳು ರಾಕ್ಷಸರು ಎಂದಿದ್ದೇನೆ. ಅರ್ಹ ಫಲಾನುಭವಿಗಳಿಗೆ ಮನೆ ಸಿಗಲಿ ಎಂದು ಶಾಸಕರಲ್ಲಿ ಲಿಸ್ಟ್ ಕೇಳಿದ್ದೀನಿ. ಕೆಲವು ಪಿಡಿಓಗಳು ರಾಕ್ಷಸರು ಎನ್ನುವ ನನ್ನ ಮಾತಿಗೆ ನಾನು ಈಗಲೂ ಬದ್ಧನಾಗಿದ್ದು, ಇತರ ಕೆಲವರಿಗೆ ಬೇಸರ ಆಗಿದ್ರೆ ವಿಷಾದ ವ್ಯಕ್ತಪಡಿಸುತ್ತೇನೆ ಅಂತ ತಿಳಿಸಿದರು.
ಕೆಲವು ಪಿಡಿಓಗಳ ಮೇಲೆ ಎಫ್ ಐಆರ್ ಹಾಕಿದ್ದೇವೆ. ಕೆಲವರು ಜಾಮೀನಿನ ಮೇಲೆ ಹೊರಗಿದ್ದಾರೆ. ಅನರ್ಹರಿಗೂ ಮನೆ ಸಿಕ್ಕಿದೆ ಅಂದ್ರೆ ಕೆಲ ಪಿಡಿಓಗಳೇ ನೇರ ಕಾರಣರಾಗಿರುತ್ತಾರೆ. ಅದನ್ನು ಸರ್ಕಾರ ಒಪ್ಪುವುದಿಲ್ಲ. ಚಿತ್ರದುರ್ಗದ ಹಿರಿಯೂರು ಗ್ರಾಮದಲ್ಲಿ 180 ಅನರ್ಹರು ಇದ್ರು. ಯಾದಗಿರಿಯಲ್ಲಿ ಇದೇ ರೀತಿ ಆಗಿದೆ. ಬಹಳಷ್ಟು ಕಡೆಗಳಲ್ಲಿ ಇದೇ ರೀತಿ ಆಗಿದೆ ಎಂದು ಹೇಳಿದರು.
ಬಡವರ ಪರವಾಗಿ ನಾನು ಪಿಡಿಓಗಳ ಬಳಿ ವಿಷಾದ ವ್ಯಕ್ತಪಡಿಸುತ್ತೇನೆ ಎಂದ ವಿ. ಸೋಮಣ್ಣ, ನನಗೆ ಯಾರ ಒತ್ತಡವೂ ಇಲ್ಲ. ನಾನು ಕೆಲ ಗೌರವಯುತ ಪಿಡಿಓಗಳಿಗೆ ಆಗಿರುವ ನೋವಿನ ಹಿನ್ನೆಲೆಯಲ್ಲಿ ವಿಷಾದ ವ್ಯಕ್ತಪಡಿಸುತ್ತಿದ್ದೇನೆ. ಒಂದಂತೂ ನಿಜ ವಿ.ಸೋಮಣ್ಣ ಇನ್ನೂ ಬದುಕಿದ್ದಾನೆ ಎಂದು ನುಡಿದರು. ಇದನ್ನೂ ಓದಿ: 2021ರ ಜೂನ್ ಒಳಗೆ 25 ಸಾವಿರ ಮನೆ ಆಗದೇ ಹೋದ್ರೆ ರಾಜೀನಾಮೆ ಕೊಡ್ತೀನಿ: ಸೋಮಣ್ಣ