Tag: V.Somanna

  • ನಮ್ಮ ಮೊದಲ ಆದ್ಯತೆ ದೇಶ – ಬಾಯಿ ಚಪಲಕ್ಕೆ ಹೇಳಿಕೆ ಸರಿಯಲ್ಲ: ವಿ ಸೋಮಣ್ಣ

    ನಮ್ಮ ಮೊದಲ ಆದ್ಯತೆ ದೇಶ – ಬಾಯಿ ಚಪಲಕ್ಕೆ ಹೇಳಿಕೆ ಸರಿಯಲ್ಲ: ವಿ ಸೋಮಣ್ಣ

    ಕಲಬುರಗಿ: ನಮಗೆ ಎಲ್ಲದಕ್ಕಿಂತ ಮೊದಲು ದೇಶ, ನಂತರ ಪಕ್ಷ. ಬಾಯಿ ಚಪಲಕ್ಕೆ ಹೇಳಿಕೆ ನೀಡಿರುವುದು ಸರಿಯಲ್ಲ. ಇಂತಹ ಸಣ್ಣ ಪುಟ್ಟ ವಿಚಾರಗಳನ್ನು ಮಾಧ್ಯಮಗಳು ಪ್ರಸಾರ ಮಾಡುವುದನ್ನು ಕಡಿಮೆ ಮಾಡಿದರೆ ಇವರೆಲ್ಲ ಕಳೆದುಹೋಗುತ್ತಾರೆ ಎಂದು ಬಿಜೆಪಿ ಶಾಸಕ ವಿ ಸೋಮಣ್ಣ ಅವರು ಹೇಳಿದ್ದಾರೆ.

    ಬಿಜೆಪಿ ಸಂಸದರಾದ ಅನಂತ್ ಕುಮಾರ್ ಹೆಗ್ಡೆ ಹಾಗೂ ನಳಿನ್ ಕುಮಾರ್ ಕಟೀಲ್ ಟ್ವೀಟ್ ವಿಚಾರ ಚಿಂಚೋಳಿಯಲ್ಲಿ ಮಾತನಾಡಿದ ಅವರು, ಅನಂತಕುಮಾರ್ ಹೆಗ್ಡೆ ಅವರ ಮಾತನ್ನು ನಾನು ಎಂದೂ ಬೆಂಬಲಿಸುವುದಿಲ್ಲ. ಅವರು ಆರನೇ ಬಾರಿಗೆ ಸಂಸದರಾಗುತ್ತಿದ್ದಾರೆ ಎಂಬ ಸುಳಿವಿದೆ. ಆದರೆ ಮಾಧ್ಯಮದಲ್ಲಿ ಇಂತಹ ಸುದ್ದಿ ಕಡಿಮೆಯಾದರೆ ಅವರಷ್ಟಕ್ಕೆ ಅವರು ದಾರಿಗೆ ಬರುತ್ತಾರೆ. ಅವರನ್ನೆಲ್ಲಾ ಸರಿ ಮಾಡೋಕೆ ನಾವು ಇದ್ದೇವೆ, ಪ್ರಧಾನಿ ಇದ್ದಾರೆ ಎಂದು ತಿಳಿಸಿದರು.

    ಕೇವಲ ಒಬ್ಬ ಅನಂತಕುಮಾರ್ ಹೆಗಡೆ ಅಲ್ಲ, ಸಿದ್ದರಾಮಯ್ಯ, ಪರಮೇಶ್ವರ, ಪ್ರಿಯಾಂಕ್ ಖರ್ಗೆ ಎಲ್ಲರ ಭಾಷೆಯೂ ಹೀಗೆ ಆಗಿದೆ. ಪ್ರಿಯಾಂಕ್ ಖರ್ಗೆ ಅವರಿಗೂ ಎಷ್ಟು ಸೊಕ್ಕು ಇದ್ದರೆ ಪ್ರಧಾನಿ ಅವರನ್ನ ನನ್ನ ಕಾಲು ತೊಳೆಯಲಿ ಎಂದು ಹೇಳುತ್ತಾರೆ. ಇದನ್ನೆನಾ ಅವರ ತಂದೆ ಕಲಿಸಿಕೊಟ್ಟಿರುವುದು ಎಂದು ಪ್ರಶ್ನೆ ಮಾಡಿದರು. ಅಲ್ಲದೇ ಉಮೇಶ್ ಜಾಧವ್ 50 ಕೋಟಿ ರೂ. ತೆಗೆದುಕೊಂಡಿದ್ದಾರೆ ಎಂದು ಹೇಳುವ ಕಾಂಗ್ರೆಸ್ ಹೇಳುತ್ತಾರೆ. ಆದರೆ 78 ಜನ ಶಾಸಕರು ಹೋಗಿ ಜೆಡಿಎಸ್ ಜೊತೆ ಸೇರಿಕೊಳ್ಳಲು ದೇವೇಗೌಡರ ಜೊತೆ ಎಷ್ಟು ತೆಗೆದುಕೊಂಡಿದ್ದೀರಿ ಎಂದು ಪ್ರಶ್ನಿಸಿದರು.

    ಸಿದ್ದರಾಮಯ್ಯ ಅವರು ರೇವಣ್ಣ ಸಿಎಂ ಆಗುವ ಆರ್ಹತೆ ಇದೆ ಎಂದು ಬೆಳ್ಳುಳ್ಳಿ ಪಟಾಕಿ ಹಾಕಿದ್ದು, ಆದರೆ ಅವರು ಟೈಮ್ ಬಾಂಬ್ ಹಾಕುತ್ತಾರೆ. ಈಗಾಗಲೇ ದೇವೇಗೌಡರು, ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದಾರೆ. ನಾನು ಕೂಡಾ ದೇವೇಗೌಡರ ಗರಡಿಯಲ್ಲಿ ಬೆಳೆದವನು. ಅವರ ಎಲ್ಲಾ ಮುಖಗಳನ್ನೂ ನೋಡಿದ್ದೇನೆ. ಇನ್ನೂ ಎರಡು ಮೂರು ದಿನಗಳಲ್ಲಿ ಕಾಲಚಕ್ರ ಹೇಗೆ ತಿರುಗುತ್ತದೆ ನೋಡುತ್ತಿರಿ ಎಂದರು.

    ಇಂದು ಸಂಜೆ ಆರು ಗಂಟೆ ನಂತರ ಕಾಂಗ್ರೆಸ್ ನವರನ್ನು ಕ್ಷೇತ್ರದಲ್ಲಿ ಉಳಿಯಲು ಅವಕಾಶ ಕೊಟ್ಟರೆ ನಾವು ನೇರವಾಗಿ ನಿಮ್ಮನ್ನು ಟಾರ್ಗೆಟ್ ಮಾಡಬೇಕಾಗುತ್ತದೆ ಎಂದು ಕಲ್ಬುರ್ಗಿ ಡಿಸಿ, ಎಸ್‍ಪಿ ಅವರಿಗೆ ದೂರವಾಣಿ ಮೂಲಕ ಹೇಳಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ಮಗ ಎಂದು ಪ್ರಿಯಾಂಕ್ ಖರ್ಗೆಗೆ ಆದ್ಯತೆ ಕೊಡಬಾರದು. ಚಿಂಚೋಳಿಯಲ್ಲಿ ಬಿಜೆಪಿ ಅಭ್ಯರ್ಥಿ ಸೋತರೆ ಮತ್ತೆ ನಾನು ಯಾವುದೇ ಉಪಚುನಾವಣಾ ಪ್ರಚಾರಕ್ಕೆ ಹೋಗುವುದಿಲ್ಲ ಎಂದು ಸವಾಲು ಎಸೆದರು.

  • ರೆಸಾರ್ಟ್, ಟೆಂಪಲ್ ರನ್ ಬಿಟ್ಟರೆ ಸಿಎಂಗೆ ಏನೂ ಕೆಲಸವಿಲ್ಲ: ವಿ. ಸೋಮಣ್ಣ ಟಾಂಗ್

    ರೆಸಾರ್ಟ್, ಟೆಂಪಲ್ ರನ್ ಬಿಟ್ಟರೆ ಸಿಎಂಗೆ ಏನೂ ಕೆಲಸವಿಲ್ಲ: ವಿ. ಸೋಮಣ್ಣ ಟಾಂಗ್

    ಲಬುರಗಿ: ಒಂದೆಡೆ ರೆಸಾರ್ಟ್ ಇನ್ನೊಂದೆಡೆ ಟೆಂಪಲ್ ರನ್, ಇವೆರಡು ಬಿಟ್ಟರೆ ಸಿಎಂ ಕುಮಾರಸ್ವಾಮಿ ಅವರಿಗೆ ಏನೂ ಕೆಲಸವಿಲ್ಲ ಅನಿಸುತ್ತೆ ಎಂದು ಚಿಂಚೋಳಿಯಲ್ಲಿ ಬಿಜೆಪಿ ಶಾಸಕ ವಿ. ಸೋಮಣ್ಣ ವ್ಯಂಗ್ಯವಾಡಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ವಿ.ಸೋಮಣ್ಣ, ಕಾಂಗ್ರೆಸ್ ನವರಿಗೆ ಅಸ್ತಿತ್ವವೇ ಇಲ್ಲ. ಅವರು ತೋಡಿಕೊಂಡಿರುವ ಗುಂಡಿಯಲ್ಲಿ ಅವರೇ ಬಿದ್ದು ಹೋಗುತ್ತಾರೆ. ಯಾವತ್ತೂ ಕೂಡಾ ಕಲಿಯುಗ ಅಷ್ಟು ಸುಲಭ ಇಲ್ಲ. ಅವರ ಅವನತಿಯನ್ನು ಅವರೇ ಸೃಷ್ಟಿ ಮಾಡಿಕೊಳ್ಳುತ್ತಿದ್ದಾರೆ. ಒಂದೆಡೆ ರೆಸಾರ್ಟ್ ಇನ್ನೊಂದೆಡೆ ಟೆಂಪಲ್ ರನ್, ಇವೆರಡು ಬಿಟ್ಟರೆ ಸಿಎಂ ಕುಮಾರಸ್ವಾಮಿ ಅವರಿಗೆ ಏನೂ ಕೆಲಸವಿಲ್ಲ ಅನಿಸುತ್ತೆ ಎಂದು ಟೀಕಿಸಿದರು.

    ಬಸವಣ್ಣನವರ ವಿಷಯವನ್ನು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಂಗ್ರೆಸ್ ಮುಂದಾದರೆ ಅವರಂತಹ ಶತ ದಡ್ಡರು ಯಾರೂ ಇಲ್ಲ. ಜನರ ಕಷ್ಟ ಕೇಳಲು ಒಬ್ಬ ಅಧಿಕಾರಿ, ಸಿಎಂ ಇಲ್ಲ ಅನ್ನೋದು ವಿಪರ್ಯಾಸನಾ ಅಥವಾ ಹುಡುಗಾಟನಾ ಅಂತಾ ಅವರು ಅರ್ಥ ಮಾಡಿಕೊಳ್ಳಬೇಕು ಎಂದು ಪ್ರಶ್ನಿಸಿದರು.

    ಮಲ್ಲಿಕಾರ್ಜುನ ಖರ್ಗೆ ಸಾಹೇಬರು ದೊಡ್ಡ ನಾಯಕರು. ತುಂಬಾ ದಿನ ಕಣ್ಣು ಮುಚ್ಕೊಂಡು ಹಾಲು ಕುಡಿಯಲು ಆಗಲ್ಲ. ಬೆಕ್ಕು ಕಣ್ಣು ಮುಚ್ಕೊಂಡು ಹಾಲು ಕುಡಿದ ಹಾಗೆ ನಾವು ಕೆಲಸ ಮಾಡಬಹುದು ಎಂಬ ಕಾಲ ಹೊರಟುಹೋಗಿದೆ. ಅವರು ಮಠಕ್ಕಾದರೂ ಹೋಗಲಿ, ದೇವಸ್ಥಾನಕ್ಕಾದರೂ ಹೋಗಲಿ. ಇನ್ನು ಮುಂದಾದರೂ ಅವರು ಆತ್ಮವನ್ನು ಶುದ್ಧವಾಗಿ ಇಟ್ಟುಕೊಂಡು ಎಲ್ಲರನ್ನೂ ಸಮಾನತೆಯಿಂದ ಕಾಣಲಿ ಎಂದು ಕಿಡಿಕಾರಿದರು.

  • ಕಾಂಗ್ರೆಸ್ ಮಾಜಿ ಶಾಸಕರನ್ನ ಹೊಗಳಿದ ಸೋಮಣ್ಣ, ಬಿಜೆಪಿ ಶಾಸಕಿ – ಗೌಡರಿಗೆ `ಕೈ’ ಕೊಡ್ತಾರಾ ಭಿನ್ನ ನಾಯಕ?

    ಕಾಂಗ್ರೆಸ್ ಮಾಜಿ ಶಾಸಕರನ್ನ ಹೊಗಳಿದ ಸೋಮಣ್ಣ, ಬಿಜೆಪಿ ಶಾಸಕಿ – ಗೌಡರಿಗೆ `ಕೈ’ ಕೊಡ್ತಾರಾ ಭಿನ್ನ ನಾಯಕ?

    ತುಮಕೂರು: ಮೈತ್ರಿ ಅಭ್ಯರ್ಥಿಯಾಗಿ ತುಮಕೂರಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಸ್ಪರ್ಧಿಸುವುದು ಖಚಿತವಾಗುತ್ತಿದಂತೆ ಕಾಂಗ್ರೆಸ್ ಮುಖಂಡದಲ್ಲಿ ಬಂಡಾಯಕ್ಕೆ ಕಾರಣವಾಗಿದ್ದು ತಿಳಿದ ವಿಚಾರ. ಆದರೆ ಆ ಬಳಿಕ ನಡೆದ ಬೆಳವಣಿಗೆಗಳಲ್ಲಿ ಪಕ್ಷದ ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ ಅವರು ಬಂಡಾಯ ಶಮನಗೊಳಿಸಿದ್ದರು. ಆದರೆ ಚುನಾವಣೆಗೆ ಕೆಲ ದಿನಗಳು ಇರುವ ಸಂದರ್ಭದಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ಮಾಜಿ ಶಾಸಕ ರಾಜಣ್ಣ ಅವರನ್ನು ಹಾಡಿ ಹೊಗಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

    ಇಂದು ಕ್ಷೇತ್ರದ ಮಧುಗಿರಿಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ್ ಪರ ಪ್ರಚಾರ ನಡೆಸಿ ಮಾತನಾಡಿದ ವಿ.ಸೋಮಣ್ಣ ಹಾಗೂ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು, ಕೆಎನ್ ರಾಜಣ್ಣ ಅವರನ್ನು ಹಾಡಿ ಹೊಗಳಿದರು. ಅಲ್ಲದೇ ರಾಜಣ್ಣರ ಬೆಂಬಲ ನಮಗಿದೆ. ನೇರವಾಗಿ ಅಲ್ಲದಿದ್ದರೂ ಪರೋಕ್ಷವಾಗಿ ರಾಜಣ್ಣ ನಮಗೆ ಬೆಂಬಲ ನೀಡುತ್ತಾರೆ ಎಂದು ಶಾಸಕಿ ಪೂರ್ಣಿಮಾ ಅವರು ಹೇಳಿದರು.

    ಮಾಧ್ಯಮಗಳೊಂದಿಗೆ ಮತನಾಡಿದ ಸೋಮಣ್ಣ ಅವರು, ರಾಜಣ್ಣ ಅವರ ಅಭಿವೃದ್ಧಿ ಕೆಲಸ ನಮಗೆ ಅನುಕೂಲವಾಗಲಿದೆ. ಅವರು ಸಾಕಷ್ಟು ಬುದ್ಧಿಜೀವಿಗಳಾಗಿದ್ದು, ಇಲ್ಲಿ ಸೋಮಣ್ಣ, ರಾಜಣ್ಣ ಎಂಬುವುದು ಇಲ್ಲ. ಕ್ಷೇತ್ರದಲ್ಲಿ ಕಾಂಗ್ರೆಸ್ ಆಸ್ಥಿತ್ವ ಕಳೆದುಕೊಂಡಿದೆ. ಈ ಚುನಾವಣೆ ದೇಶದ ಚುನಾವಣೆ ಆಗಿರುವುದಿಂದ ಜನರು ದೇಶಕ್ಕಾಗಿ ಮೋದಿ ಎನ್ನುತ್ತಾರೆ. ರಾಜಣ್ಣರ ಅಭಿವೃದ್ಧಿ ಕೆಲಸಗಳ ನಮಗೂ ಸಹಕಾರಿ ಆಗಲಿದೆ ಎಂದರು.

    ಮೈತ್ರಿ ಬಗ್ಗೆ ಬೇಸರ ಇರುವುದಾಗಿ ರಾಜಣ್ಣ ಅವರು ಮಾಧ್ಯಮಗಳಲ್ಲಿ ಹೇಳಿದ್ದಾರೆ. ಹಾಗಾಗಿ ಆಂತರಿಕವಾಗಿ ನಮಗೆ ಬೆಂಬಲ ನೀಡುತ್ತಾರೆ. ಅವರ ನಾಮಪತ್ರವನ್ನು ಒತ್ತಾಯದಿಂದ ಹಿಂಪಡೆಯುವಂತೆ ಮಾಡಿದ್ದಾರೆ. ಅವರಿಗೆ ಮೈತ್ರಿಯಲ್ಲಿ ಅಸಮಾಧಾನ ಇದೆ. ಈ ಅಸಮಾಧಾನ ನಮಗೆ ಅನುಕೂಲ ಆಗಲಿದೆ ಎಂದು ಶಾಸಕಿ ಹೇಳಿದರು. ರೋಡ್ ಶೋ ದಲ್ಲಿ ನಿರೀಕ್ಷೆಗೂ ಮೀರಿ ಸೇರಿದ ಜನ ಬಿಜೆಪಿಗೆ ಬೆಂಬಲ ನೀಡಿದರು. ರಸ್ತೆಯುದ್ದಕ್ಕೂ ಕೇಸರಿ ಬಾವುಟ ರಾರಾಜಿಸುತ್ತಿತ್ತು.

  • ತೇಜಸ್ವಿನಿ ಅನಂತ್‍ಕುಮಾರ್ ಟಿಕೆಟ್ ಕೈತಪ್ಪಿದಕ್ಕೆ ಕಾರಣವೇನು ಎಂಬುವುದು ಗೊತ್ತಾಗಬೇಕು: ವಿ ಸೋಮಣ್ಣ

    ತೇಜಸ್ವಿನಿ ಅನಂತ್‍ಕುಮಾರ್ ಟಿಕೆಟ್ ಕೈತಪ್ಪಿದಕ್ಕೆ ಕಾರಣವೇನು ಎಂಬುವುದು ಗೊತ್ತಾಗಬೇಕು: ವಿ ಸೋಮಣ್ಣ

    ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ತೇಜಸ್ವಿನಿ ಅನಂತ್‍ಕುಮಾರ್ ಅವರಿಗೆ ಟಿಕೆಟ್ ಕೈ ತಪ್ಪಿದ ಹಿಂದಿನ ಕಾರಣವೇನು ಎಂಬುವುದು ಗೊತ್ತಾಗಬೇಕಿದೆ ಎಂದು ಪಕ್ಷದ ಮುಖಂಡ ವಿ ಸೋಮಣ್ಣ ಹೇಳಿದ್ದಾರೆ.

    ಬಸವನಗುಡಿಯ ತೇಜಸ್ವಿನಿ ಅನಂತಕುಮಾರ್ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ ಬಳಿಕ ಶಾಸಕ ವಿ.ಸೋಮಣ್ಣ ಮಾಧ್ಯಮಗಳೊಂದಿಗೆ ಮಾತನಾಡಿದರು. ಇದೊಂದು ದುರ್ದೈವದ ಸಂಗತಿ. ಹೀಗೆ ಆಗಬಾರದಿತ್ತು, ವಿಧಿ ಇದು ಅಷ್ಟೇ. ತೇಜಸ್ವಿನಿ ಅವರು ಯಾವುದೇ ತಪ್ಪು ಮಾಡಿಲ್ಲ. ಅಂತಹವರಿಗೆ ಹೀಗೆ ಮಾಡಿದ್ದು ಸರಿಯಿಲ್ಲ. ಏನಾಗಿದೆ ಎಂಬುವುದು ನಾಲ್ಕು ಗೋಡೆ ಮಧ್ಯೆಯಾದರು ನಮಗೆ ಗೊತ್ತಾಗಬೇಕು. ರವಿಸುಬ್ರಮಣ್ಯ, ಪಕ್ಷದ ನೇತಾರರು ಕಾಲ್ ಮಾಡಿದ್ದರು. ಅವರಿಗೆ ಸ್ಪಷ್ಟವಾಗಿ ಹೇಳಿದ್ದೀನಿ, ಇದರಲ್ಲಿ ನಮ್ಮ ಭವಿಷ್ಯವೂ ಆಡಗಿದೆ. ಹಾಗಾಗಿ ಟಿಕೆಟ್ ಕಡೇ ಕ್ಷಣದಲ್ಲಿ ಕೈ ತಪ್ಪಿದ್ದು ಹೇಗೆ, ಏಕೆ? ಯಾರು ಕಾರಣ? ಎಲ್ಲವೂ ಗೊತ್ತಾಗಬೇಕಿದೆ ಎಂದರು.

    ತೇಜಸ್ವಿನಿ ಅನಂತಕುಮಾರ್ ಅವರಿಗೆ ಟಿಕೆಟ್ ತಪ್ಪಿದ ಹಿಂದಿನ ಸತ್ಯವೇನು ಎಂದು ತಿಳಿಸುವಂತೆ ಶಾಸಕ ರವಿಸುಬ್ರಮಣ್ಯಗೆ ಕೇಳಿದ್ದೇನೆ. ಇದರ ಹಿಂದೆ ಶಾಸಕ ರವಿಸುಬ್ರಮಣ್ಯ ಪಾತ್ರ ದೊಡ್ಡದಿದೆ. ಇದಲ್ಲದೆ ಬಿಜೆಪಿ ಹಿರಿಯ ನಾಯಕರೊಂದಿಗೆ ಇನ್ನು ಮೂರು ದಿನದ ಒಳಗೆ ಸಭೆ ನಡೆಸಲು ಸೂಚಿಸಿದ್ದೇನೆ. ಆ ಬಳಿಕ ಹೈಕಮಾಂಡ್ ನಿರ್ಧಾರದ ಬಗ್ಗೆ ಸ್ಪಷ್ಟತೆ ಸಿಗಲಿದೆ ಎಂದು ಹೇಳಿದರು.

    ಈಗಾಗಲೇ ರವಿಸುಬ್ರಮಣ್ಯ ಅವರು ಶಾಸಕರಾಗಿದ್ದಾರೆ ಅವರ ಅಣ್ಣನ ಮಗನಿಗೆ ಲೋಕಸಭಾ ಚುನಾವಣೆಗೆ ಟಿಕೆಟ್ ನೀಡಿದ್ದಾರೆ. ತೇಜಸ್ವಿ ಸೂರ್ಯ ಇನ್ನೂ ಯುವಕ, ಅನುಭವದ ಅವಶ್ಯಕತೆಯಿದೆ. ಅನಂತ್‍ಕುಮಾರ್ ರಾಷ್ಟ್ರ ರಾಜಕಾರಣದಲ್ಲಿ ಅಜಾತಶತ್ರು. ಅಂತಹ ವ್ಯಕ್ತಿಯ ಪತ್ನಿಗೆ ಅನ್ಯಾಯವಾಗಿದ್ದು ತಮಗೆ ನೋವಾಗಿದೆ ಎಂದರು. ಅಲ್ಲದೇ ಈಗಲೇ ಟೇಕನ್ ಫಾರ್ ಗ್ರ್ಯಾಂಟ್ ಪಾಲಿಸಿ ಆದರೆ ನಮ್ಮ ಭವಿಷ್ಯಕ್ಕೂ ಕುತ್ತು ಬರುತ್ತೆ ಎಂದರು.

    ನಾವು ಪಕ್ಷ ಶಿಸ್ತಿನ ಸಿಪಾಯಿಗಳು, ಪಕ್ಷ ಏನು ನಿರ್ಧಾರ ಕೈಗೊಂಡರು ಸಮ್ಮತಿ. ಗೊತ್ತಿದ್ದು ತಪ್ಪು ಆದ್ರೆ ಮಾತ್ರ ವಿವರಣೆ ಕೇಳುತ್ತೆವೆ. ಬೇರೆ ಯಾವ ಕುಟುಂಬಕ್ಕೂ ಇಂತಹ ಸ್ಥಿತಿ ಉಂಟಾಗಬಾರದು. ಮನಸ್ಸಿನಲ್ಲಿ ಏನಿದೆ ಎಂಬುದನ್ನು ಹೇಳಿದ್ದೇನೆ. ದಿಢೀರ್ ಬೆಳವಣಿಗೆ ಒಪ್ಪಿಕೊಳ್ಳಲು ವಿವರಣೆ ಹೇಳಿದ್ದೇನೆ. ಪಕ್ಷವೇ ನಮಗೇ ತಾಯಿ. ನಮ್ಮ ಮನಸ್ಸಿನ ಭಾರವನ್ನಷ್ಟೇ ಕಡಿಮೆ ಮಾಡಿಕೊಳ್ಳಲು ಯತ್ನಿಸುತ್ತಿದ್ದೇವೆ ಎಂದರು.

    ಇದಕ್ಕೂ ಮುನ್ನ ತೇಜಸ್ವಿನಿ ಅನಂತ್‍ಕುಮಾರ್ ನಿವಾಸಕ್ಕೆ ಶಾಸಕ ರಾಮದಾಸ್ ಭೇಟಿ ನೀಡಿ ಮಾತುಕತೆ ನಡೆಸಿದರು.

  • ಎಚ್‍ಡಿಡಿ ಕೊನೆಯ ಚುನಾವಣೆಯಲ್ಲಿ ಸೋತು ಮಾನಸಿಕವಾಗಿ ಕುಗ್ಗುತ್ತಾರೆ: ವಿ.ಸೋಮಣ್ಣ

    ಎಚ್‍ಡಿಡಿ ಕೊನೆಯ ಚುನಾವಣೆಯಲ್ಲಿ ಸೋತು ಮಾನಸಿಕವಾಗಿ ಕುಗ್ಗುತ್ತಾರೆ: ವಿ.ಸೋಮಣ್ಣ

    ತುಮಕೂರು: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ತಮ್ಮ ಕೊನೆಯ ಚುನಾವಣೆಯಲ್ಲಿ ಸೋತು ಮಾನಸಿಕವಾಗಿ ಕುಗ್ಗುತ್ತಾರೆ. ಇದಂತು ಸತ್ಯ ಎಂದು ಬಿಜೆಪಿ ಶಾಸಕ ವಿ.ಸೋಮಣ್ಣ ವ್ಯಂಗ್ಯವಾಡಿದ್ದಾರೆ.

    ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜು ನಾಮಪತ್ರ ಸಲ್ಲಿಕೆ ವೇಳೆ ಶಾಸಕರು, ಈ ಬಾರಿಯ ಲೋಕಸಭಾ ಚುನಾವಣೆ ಎಚ್.ಡಿ.ದೇವೇಗೌಡ ಅವರಿಗೆ ಅವಶ್ಯಕವಿರಲಿಲ್ಲ. ಅನವಶ್ಯಕವಾಗಿ ಸ್ಪರ್ಧಿಸಿ ಯಾಕೆ ಗೊಂದಲ ಸೃಷ್ಟಿ ಮಾಡಿಕೊಂಡರು ಅಂತ ಗೊತ್ತಾಗುತ್ತಿಲ್ಲ. ಒಂದೇ ಕುಟುಂಬದವರು ಇಷ್ಟೊಂದು ಜನ ರಾಜಕೀಯಕ್ಕೆ ಬಂದಿರುವುದನ್ನು ನಾನು ಪ್ರಪಂಚದಲ್ಲಿಯೇ ನೋಡಿಲ್ಲ ಎಂದು ದೇವೇಗೌಡರ ಕುಟುಂಬ ರಾಜಕಾರಣದ ವಿರುದ್ಧ ಲೇವಡಿ ಮಾಡಿದರು.

    ಯಾವ ಅಸ್ತ್ರ ಹೋಗಿ ದೇವೇಗೌಡರ ತಲೆ ತಿಂದಿತು ಅಂತ ಗೊತ್ತಿಲ್ಲ. ಅವರು ಸ್ಪರ್ಧೆ ಮಾಡುತ್ತಿದ್ದಾರೆ. ಫಲಿತಾಂಶ ಬಂದ ಮೇಲೆ ಮಾನಸಿಕವಾಗಿ ನೋವನ್ನ ಅನುಭವಿಸುತ್ತಾರೆ ಎಂದ ಅವರು, ರಾಜ್ಯದ ನಾಲ್ಕೈದು ಬೃಹತ್ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಬರುತ್ತಾರೆ. ಈ ಸಂಬಂಧ ಮೂರ್ನಾಲ್ಕು ದಿನಗಳಲ್ಲಿ ದಿನಾಂಕ ತಿಳಿಯಲಿದೆ ಎಂದರು.

    ಜಿಲ್ಲೆಯಲ್ಲಿ ಬಿಜೆಪಿ ಎಲ್ಲಾ ಕಾರ್ಯಕರ್ತರು ಒಂದಾಗಿದ್ದಾರೆ. ಇದು ಸಂತೋಷದ ವಿಚಾರ. ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಪ್ರಾಮಾಣಿಕ ಪ್ರಯತ್ನ ನಡೆದಿದೆ. ದೇಶ ಮೊದಲು, ನಂತರ ಬೇರೆ ಎಲ್ಲಾ ಎನ್ನುವ ಸಂದೇಶ ಇದಾಗಿದೆ. ಹಣದ ಹೊಳೆ ಹರಿಸಿ ಗೆಲ್ಲಲು ಯೋಚಿಸಿದರೆ ಅದು ಸಾಧ್ಯವಾಗಲ್ಲ. ಮತದಾರರು ಜಾಗೃತರಾಗಿದ್ದಾರೆ. ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ತುಮಕೂರು ಕ್ಷೇತ್ರದಿಂದ ಬಿಜೆಪಿ ಗೆಲುವು ಖಚಿತ. ಮತದಾರರು ಏಪ್ರಿಲ್ 18ರಂದು ಅಪವಿತ್ರ ಮೈತ್ರಿ ವ್ಯವಸ್ಥೆಗೆ ಉತ್ತರ ನೀಡಿ, ದೋಸ್ತಿ ಸರ್ಕಾರವನ್ನು ತಿರಸ್ಕಾರ ಮಾಡಲಿದ್ದಾರೆ. ರಾಜ್ಯದಲ್ಲಿ 20-22 ಸ್ಥಾನ ಗೆಲ್ಲುತ್ತೇವೆ ಎನ್ನುವ ಭರವಸೆಯಿದೆ ಎಂದರು.

  • ಅದೃಷ್ಟ ಒಲಿದರೆ ಬಿಎಸ್‍ವೈ, ಪರಮೇಶ್ವರ್ ಕೂಡ ಸಿಎಂ ಆಗಬಹುದು: ವಿ ಸೋಮಣ್ಣ

    ಅದೃಷ್ಟ ಒಲಿದರೆ ಬಿಎಸ್‍ವೈ, ಪರಮೇಶ್ವರ್ ಕೂಡ ಸಿಎಂ ಆಗಬಹುದು: ವಿ ಸೋಮಣ್ಣ

    ಬೆಂಗಳೂರು: ನಾನು ಡಿಸಿಎಂ ಜಿ ಪರಮೇಶ್ವರ್ ಅವರನ್ನು ಕಳೆದ 40 ವರ್ಷದಿಂದ ನೋಡುತ್ತಿದ್ದೇನೆ. ಅವರು ನನಗೆ ಆಪ್ತರಾಗಿದ್ದು, ಅದೃಷ್ಟ ಒಲಿದರೆ ಸಿಎಂ ಆಗಬಹುದು ಎಂದು ಬಿಜೆಪಿ ಮುಖಂಡ ವಿ ಸೋಮಣ್ಣ ಹೇಳಿದ್ದಾರೆ.

    ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಸೋಮಣ್ಣ ಅವರು, ವೇದಿಕೆ ಮೇಲಿದ್ದ ಡಿಸಿಎಂ ಅವರೊಂದಿಗೆ ಇರುವ ಆಪ್ತತೆಯ ಬಗ್ಗೆ ಬಿಚ್ಚಿಟ್ಟರು. ಸಿದ್ದಗಂಗಾ ಮಠಕ್ಕೆ ಅವರ ಕುಟುಂಬದ ಕೊಡುಗೆ ಆಪಾರ. ಸಿದ್ದಗಂಗಾ ಶ್ರೀಗಳಿಂದಲೇ ನನಗೆ ಪರಮೇಶ್ವರ್ ಅವರ ಪರಿಚಯ ಆಯಿತು. ಅಂದಿನಿಂದ ಇಲ್ಲಿಯವರೆಗೂ ಕೂಡ ಅವರನ್ನು ನೋಡಿದ್ದೇನೆ. ಅವರು ಸಿಎಂ ಆಗುವುದು ಹಲವರ ಆಸೆ. ಆದ್ದರಿಂದ ಮುಂದಿನ ದಿನದಲ್ಲಿ ಆದರೂ ಅವರು ಸಿಎಂ ಆಗುತ್ತಾರೆ ಎಂದರು.

    ರಾಜ್ಯದ ನಾಯಕರಲ್ಲಿ ಅವಕಾಶ ಸಿಕ್ಕರೆ ಯಾರು ಬೇಕಾದರು ಸಿಎಂ ಆಗಬಹುದು. ಅಂತೆಯೇ ಅದೃಷ್ಟ ಒಲಿದರೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಕೂಡ ಸಿಎಂ ಆಗುತ್ತಾರೆ. ಪರಮೇಶ್ವರ್ ಅವರು ಕೂಡ ಅವಕಾಶ ಸಿಕ್ಕರೆ ಸಿಎಂ ಆಗುತ್ತಾರೆ. ಕುಮಾರಸ್ವಾಮಿ ಅವರು ಕಡಿಮೆ ಸ್ಥಾನ ಪಡೆದು ಸಿಎಂ ಆಗಲಿಲ್ಲವಾ ಎಂದು ಉದಾಹರಣೆ ಕೂಡ ನೀಡಿ, ಯಾರೂ ಅದೃಷ್ಟಕ್ಕಿಂತ ದೊಡ್ಡವರು ಅಲ್ಲ. ಪರಮೇಶ್ವರ್ ಅವರು ಎಲ್ಲ ಪಕ್ಷದ ನಾಯಕರನ್ನು ಒಂದಾಗಿ ಕರೆದುಕೊಂಡು ಹೋಗುವ ಸಾಮಥ್ರ್ಯ ಹೊಂದಿದ್ದಾರೆ ಎಂದರು.

    ಇದೇ ವೇಳೆ ಮಾತನಾಡಿದ ಪರಮೇಶ್ವರ್ ಅವರು, ಸೋಮಣ್ಣ ಕ್ರಿಯಾಶೀಲ ಶಾಸಕರು. ಯಾವುದಾದ್ರು ಒಂದು ಕಾರ್ಯದಲ್ಲಿ ನಿರಂತರವಾಗಿ ತೊಡಗಿರುತ್ತಾರೆ. ನನ್ನ ಪಕ್ಕದ ಕುರ್ಚಿಯಲ್ಲೇ ಅವರನ್ನು ಇಟ್ಟುಕೊಂಡಿದ್ದೆ. ಆದರೆ ರಾತ್ರೋ ರಾತ್ರಿ ಬದಲಾದರು. ಆದರೆ ಒಬ್ಬ ಕ್ರಿಯಾಶೀಲ ನಾಯಕ ಏನ್ನೆಲ್ಲಾ ಕಾರ್ಯ ಮಾಡಬಹುದೋ ಅದೆಲ್ಲಾ ಅವರು ಮಾಡಿದ್ದಾರೆ. ಹಲವು ಯುವ ನಾಯಕರಿಗೆ ಮಾರ್ಗದರ್ಶಿ ನಾಯಕರಾಗಿದ್ದಾರೆ ಎಂದು ಹಾಡಿ ಹೊಗಳಿದರು.

     

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮಾಜಿ ಶಿಷ್ಯನ ಮೇಲೆ ಬಿಎಸ್‍ವೈ ಮುನಿಸು….?

    ಮಾಜಿ ಶಿಷ್ಯನ ಮೇಲೆ ಬಿಎಸ್‍ವೈ ಮುನಿಸು….?

    -ನಾಲಿಗೆ ಮೇಲೆ ಹಿಡಿತ ಇರಬೇಕು ಏನೇನೋ ಮಾತಾಡೋದು ಪ್ರಚಾರವಲ್ಲ

    ಬಳ್ಳಾರಿ: ಕರ್ನಾಟಕದಲ್ಲಿ ಉಪ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಸಿಎಂ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಮ್ಮ ಆಪ್ತ ಶಿಷ್ಯನ ಮೇಲೆ ಮುನಿಸಿಕೊಂಡಿದ್ದಾರಂತೆ. ಇಂದು ನಡೆದ ಪಕ್ಷದ ಮುಖಂಡ ರ ಸಭೆಯಲ್ಲಿ ಹೆಸರು ಪ್ರಸ್ತಾಪಿಸದೇ ನಮ್ಮ ನಾಲಿಗೆ ಮೇಲೆ ಹಿಡಿತ ಇರಬೇಕು. ಚುನಾವಣೆ ಪ್ರಚಾರದಲ್ಲಿ ಏನೇನೋ ಮಾತನಾಡಬಾರದು ಎಂದು ಹೇಳುವ ಶಾಸಕ ವಿ.ಸೋಮಣ್ಣರಿಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

    ಇಂದು ಬಳ್ಳಾರಿಯ ಖಾಸಗಿ ಹೋಟೆಲ್‍ನಲ್ಲಿ ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಮುಖಂಡರ ಸಭೆ ನಡೆದಿತ್ತು. ಈ ವೇಳೆ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರ ಉದ್ದೇಶಿಸಿ ಮಾತನಾಡುತ್ತಿರುವಾಗ, ಯಾವುದೇ ಸಂದರ್ಭದಲ್ಲಿ ಭಾವೋದ್ವೇಗಕ್ಕೆ ಒಳಗಾಗಿ ಹೇಳಿಕೆ ನೀಡಬಾರದು. ಬಾಯಿಗೆ ಬಂದಂತೆ ಭರವಸೆ ಕೊಡುವುದಕ್ಕೆ ಚುನಾವಣೆ ಪ್ರಚಾರ ಅಂತಾ ಹೇಳಲ್ಲ. ಜನರು ನಿಮ್ಮ ಮಾತನ್ನು ಗಮನಿಸುತ್ತಾ ಇರುತ್ತಾರೆ. ಮುಂದಿನ ದಿನಗಳಲ್ಲಿ ಅದು ಬೇರೆ ಬೇರೆ ಬೆಳವಣಿಗೆಗೆ ಕಾರಣವಾಗುತ್ತೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ ಎಂಬ ಮಾಹಿತಿಗಳು ಲಭ್ಯವಾಗಿವೆ.

    ಸಭೆಯಲ್ಲಿ ಯಡಿಯೂರಪ್ಪನವರು ಪರೋಕ್ಷವಾಗಿ ಅಸಮಾಧಾನ ಹೊರಹಾಕುತ್ತಿದ್ದಂತೆ ವಿ.ಸೋಮಣ್ಣ ಸಭೆಯಿಂದ ಹೊರ ಬಂದಿದ್ದಾರೆ ಎಂದು ಹೇಳಲಾಗುತ್ತಿದೆ.

    ಯಾಕೆ ಈ ಮುನಿಸು..?
    ಈ ಹಿಂದೆ ಬಳ್ಳಾರಿ ಲೋಕಸಭಾ ಉಪಚುನಾವಣೆ ಪ್ರಚಾರದಲ್ಲಿ ಮಾತನಾಡಿದ್ದ ವಿ.ಸೋಮಣ್ಣ, ಪ್ರಧಾನಿ ನರೇಂದ್ರ ಮೋದಿ ಅವರ ಲಕ್ಷಣಗಳನ್ನು ರಾಜ್ಯದಲ್ಲಿ ಶ್ರೀರಾಮುಲು ಹೊಂದಿದ್ದಾರೆ. ಇತ್ತ ಕೇದಾರನಾಥ ಸ್ವಾಮೀಜಿ ಕೂಡ ಶ್ರೀರಾಮುಲು ಅವರಿಗೆ ಮುಖ್ಯಮಂತ್ರಿ ಆಗುವ ಲಕ್ಷಣಗಳಿವೆ. ಅವರಿಗೆ ಆಶೀರ್ವಾದ ಮಾಡಿ, ಬೆಳವಣಿಗೆಗೆ ಶ್ರಮಿಸಿ ಅಂತಾ ಸಲಹೆ ನೀಡಿದ್ದಾರೆ. ಹೀಗಾಗಿ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಶ್ರೀರಾಮುಲು ಖಂಡಿತ ಉಪಮುಖ್ಯಮಂತ್ರಿ ಅಲ್ಲ, ಮುಖ್ಯಮಂತ್ರಿಯೇ ಆಗುತ್ತಾರೆ ಎಂದು ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಿಜೆಪಿ ಅಧಿಕಾರಕ್ಕೆ ಬಂದ್ರೆ ಶ್ರೀರಾಮುಲು ನಮ್ಮ ಮುಖ್ಯಮಂತ್ರಿ : ವಿ.ಸೋಮಣ್ಣ

    ಬಿಜೆಪಿ ಅಧಿಕಾರಕ್ಕೆ ಬಂದ್ರೆ ಶ್ರೀರಾಮುಲು ನಮ್ಮ ಮುಖ್ಯಮಂತ್ರಿ : ವಿ.ಸೋಮಣ್ಣ

    ಬಳ್ಳಾರಿ: ಒಂದು ವೇಳೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಶಾಸಕ ಶ್ರೀರಾಮುಲು ಮುಖ್ಯಮಂತ್ರಿ ಆಗುತ್ತಾರೆ ಎಂದು ಮಾಜಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.

    ಬಳ್ಳಾರಿ ಲೋಕಸಭಾ ಉಪಚುನಾವಣೆ ಪ್ರಚಾರದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಲಕ್ಷಣಗಳನ್ನು ರಾಜ್ಯದಲ್ಲಿ ಶ್ರೀರಾಮುಲು ಹೊಂದಿದ್ದಾರೆ. ಇತ್ತ ಕೇದಾರನಾಥ ಸ್ವಾಮೀಜಿ ಕೂಡ ಶ್ರೀರಾಮುಲು ಅವರಿಗೆ ಮುಖ್ಯಮಂತ್ರಿ ಆಗುವ ಲಕ್ಷಣಗಳಿವೆ. ಅವರಿಗೆ ಆಶೀರ್ವಾದ ಮಾಡಿ, ಬೆಳವಣಿಗೆಗೆ ಶ್ರಮಿಸಿ ಅಂತಾ ಸಲಹೆ ನೀಡಿದ್ದಾರೆ. ಹೀಗಾಗಿ ಅವರು ಖಂಡಿದ ಉಪಮುಖ್ಯಮಂತ್ರಿ ಅಲ್ಲಲ್ಲ, ಮುಖ್ಯಮಂತ್ರಿಯೇ ಆಗುತ್ತಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

    ಒಂದು ಕಾಲದಲ್ಲಿ ವಿ.ಸೋಮಣ್ಣ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಆಪ್ತರಾಗಿದ್ದರು. ಆದರೆ ಕಳೆದ ವಿಧಾನಸಭೆ ಚುನಾವಣೆಯ ಟಿಕೆಟ್ ಹಂಚಿಕೆಯಲ್ಲಿ ಇಬ್ಬರ ನಡುವೆ ಭಿನ್ನಾಭಿಪ್ರಾಯತ್ತು. ಹೀಗಾಗಿ ಸೋಮಣ್ಣ ಅವರು ಬಿ.ಎಸ್.ಯಡಿಯೂಪ್ಪ ಅವರ ವಿರುದ್ಧ ಕಿಡಿಕಾರುತ್ತಿದ್ದರು. ಈಗ ಉತ್ತಮ ವೇದಿಕೆ ಸಿಕ್ಕಿತು ಅಂತಾ ಶ್ರೀರಾಮುಲು ಅವರನ್ನು ಎತ್ತಿಕಟ್ಟಿ ಪ್ರಚಾರ ಮಾಡುತ್ತಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಈಗ ಪ್ರಚಾರದ ಪ್ರತಿ ಹಂತದಲ್ಲಿಯೂ ಶ್ರೀರಾಮುಲು ಪರ ಬ್ಯಾಟ್ ಬೀಸುತ್ತಿದ್ದಾರೆ.

    ವಿ.ಸೋಮಣ್ಣ ಅವರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಬಿ.ಎಸ್.ಯಡಿಯೂರಪ್ಪ ಅವರು, ನನಗೆ ಏನು ಗೊತ್ತಿಲ್ಲ ಎಂದು ಹಾರಿಕೆ ಉತ್ತರ ಕೊಟ್ಟಿದ್ದಾರೆ. ವಿ.ಸೋಮಣ್ಣ ಅವರ ಹೇಳಿಕೆ ಪಕ್ಷದಲ್ಲಿ ಭಾರೀ ಚರ್ಚೆಯಾಗುತ್ತಿದ್ದು, ಶ್ರೀರಾಮುಲು ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿ ಅಂತಾ ಬಿಜೆಪಿ ನಾಯಕರು ಎಂದಿಗೂ ಹೇಳಿಲ್ಲ. ಆದರೆ ವಿ.ಸೋಮಣ್ಣ ಅವರ ದಿಢೀರ್ ಹೇಳಿಕೆಯಿಂದಾಗಿ ನಾಯಕರನ್ನು ಮುಜುಗುರಕ್ಕೆ ಗುರಿಯಾಗಿಸಿದೆ ಎನ್ನಲಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಾಂಗ್ರೆಸ್, ಜೆಡಿಎಸ್‍ನವರು ಬಟ್ಟೆ ಬಿಚ್ಚಿ ಬೇಕಾದ್ರೆ ಕುಣಿಲಿ-ನಮಗೆ ಸಂಬಂಧ ಇಲ್ಲ: ಸೋಮಣ್ಣ ವ್ಯಂಗ್ಯ

    ಕಾಂಗ್ರೆಸ್, ಜೆಡಿಎಸ್‍ನವರು ಬಟ್ಟೆ ಬಿಚ್ಚಿ ಬೇಕಾದ್ರೆ ಕುಣಿಲಿ-ನಮಗೆ ಸಂಬಂಧ ಇಲ್ಲ: ಸೋಮಣ್ಣ ವ್ಯಂಗ್ಯ

    ತುಮಕೂರು: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್, ಜೆಡಿಸ್ ಮೈತ್ರಿ ಮಾಡಿಕೊಂಡರೆ ಮಾಡಿಕೊಳ್ಳಲಿ ಇಲ್ಲವೇ ಬಟ್ಟೆ ಬಿಚ್ಚಿ ಕುಣಿಯಲಿ, ನಮ್ಮ ಕೆಲಸ ನಾವು ಮಾಡಿಕೊಂಡು ಹೋಗುತ್ತೇವೆ ಎಂದು ಮಾಜಿ ಸಚಿವ ವಿ ಸೋಮಣ್ಣ ವ್ಯಂಗ್ಯವಾಡಿದ್ದಾರೆ.

    ಇಂದು ತುಮಕೂರು ಸಿದ್ದಗಂಗಾ ಮಠ ಭೇಟಿ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಮುಖ್ಯ ಮಂತ್ರಿಯಾಗಿ ಕುಮಾರಸ್ವಾಮಿ ಸಂಕಷ್ಟ ಪರಿಸ್ಥಿತಿಯಲ್ಲಿ ಇದ್ದಾರೆ. ಸಿಎಂ ಆಗಿ ಅವರು ತಮ್ಮ ಕೆಲಸ ತಾವು ಮಾಡುತ್ತಿದ್ದಾರೆ. ಆದರೆ 37 ಶಾಸಕರೊಂದಿಗೆ ಅವರೊಂದಿಗೆ ಸಂಕಷ್ಟ ಅನುಭವಿಸುತ್ತಿದ್ದು, ಮತ್ತೊಬ್ಬ ಶಾಸಕನನ್ನು ಕರೆತರುವ ಶಕ್ತಿ ಇಲ್ಲ. ಅದ್ದರಿಂದ ಅವರು ಎರವಲು ವ್ಯವಸ್ಥೆಯಲ್ಲಿ ಮುಖ್ಯಮಂತ್ರಿಯಾಗಿ ಜನರಲ್ಲಿ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ಅವರು ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳಲಿ ಅಥವಾ ಬಟ್ಟೆ ಬಿಚ್ಚಿ ಬೇಕಾದರು ಕುಣಿಯಲಿ ನಮಗೇ ಸಂಬಂಧವಿಲ್ಲ ಎಂದರು.

    ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳನ್ನು ನಿಲ್ಲಿಸಿ ಜನರ ಮುಂದೇ ಹೋಗುತ್ತೇವೆ. ಆದರೆ ಜನರು ಯಾರು ಗೆಲ್ಲ ಬೇಕು ಎಂದು ತೀರ್ಮಾನಿಸುತ್ತಾರೆ. ಬಿಜೆಪಿ ಏಕಾಂಗಿಯಾಗಿ ಹೋರಾಟ ಮಾಡಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

  • ಬೆಲ್ಟ್ ಬಿಚ್ಚಿ ಹೊಡಿತೀನಿ, ಏನ್ ಮಾಡ್ತೀನಿ ನೋಡು-ಮಹಿಳೆಗೆ ಶಾಸಕ ವಿ.ಸೋಮಣ್ಣ ಅವಾಜ್

    ಬೆಲ್ಟ್ ಬಿಚ್ಚಿ ಹೊಡಿತೀನಿ, ಏನ್ ಮಾಡ್ತೀನಿ ನೋಡು-ಮಹಿಳೆಗೆ ಶಾಸಕ ವಿ.ಸೋಮಣ್ಣ ಅವಾಜ್

    -ನಾನು ಹಲ್ಕಟ್ ರಾಜಕಾರಣಿ ಅಲ್ಲ ಅಂದ್ರು ಸೋಮಣ್ಣ

    ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ, ಗೋವಿಂದರಾಜ ನಗರ ಶಾಸಕ ವಿ.ಸೋಮಣ್ಣ ಅವರು, ಮಹಿಳೆಗೆ ಏಕವಚನದಲ್ಲಿಯೇ ಕೆಳಮಟ್ಟದ ಪದ ಪ್ರಯೋಗಿಸಿ ನಿಂದಿಸಿರುವ ವಿಡಿಯೋ ವೈರಲ್ ಆಗಿದೆ.

    ರಾಜಕಾರಣದಲ್ಲಿ ಸಭ್ಯ, ಮೃದು ಸ್ವಭಾವದ ನಾಯಕ ಅಂತಾ ಗುರುತಿಸಿಕೊಳ್ಳುವ ವಿ.ಸೋಮಣ್ಣರ ಕೆಳಮಟ್ಟದ ಮಾತುಗಳನ್ನು ಕೇಳಿದ ಜನರು ಶಾಕ್ ಆಗಿದ್ದಾರೆ. ಚುನಾವಣೆ ಸಮಯದಲ್ಲಿ ಮಹಿಳೆಯರಿಗೆ ಅಮ್ಮಾ.. ತಾಯಿ ಎಂದು ಕರೆಯುವ ರಾಜಕೀಯ ನಾಯಕರು ಸಹಾಯ ಕೇಳಲು ಹೋದಾಗ ಈ ರೀತಿಯ ಪದ ಪ್ರಯೋಗ ಎಷ್ಟು ಸರಿ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.

    ವಿಡಿಯೋದಲ್ಲಿ ಏನಿದೆ?: ಶಾಲಾ ಕಟ್ಟಡದ ವಿಚಾರಕ್ಕಾಗಿ ಕೆಲ ಸ್ಥಳೀಯ ಮಹಿಳೆಯರು ಶಾಸಕರನ್ನು ಭೇಟಿ ಆಗಿದ್ದರು. ಇದೇ ವೇಳೆ ಶಾಸಕರು, ಈಯಮ್ಮ ಏನ್ ಕಡಿಮೆ ಇಲ್ಲ, ಬೆಲ್ಟ್ ಬಿಚ್ಚಿ ಹೊಡೀತಿನಿ ನಿಂಗೆ, ಇರು ಏನ್ ಮಾಡ್ತೀನಿ ನೋಡು ಎಂದು ಅವಾಜ್ ಹಾಕಿದ್ದಾರೆ.

    ಈ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ವಿ.ಸೋಮಣ್ಣ, ನಾನು 40 ವರ್ಷದಿಂದ ರಾಜಕೀಯದಲ್ಲಿ ಇದ್ದೇನೆ. ವಿಡಿಯೋದಲ್ಲಿರುವ ಧ್ವನಿ ನನ್ನದಲ್ಲ, ಯಾರೋ ಎಡಿಟ್ ಮಾಡಿರುವ ಕೆಲಸ ಇದಾಗಿದ್ದು, ಉದ್ದೇಶ ಪೂರ್ವಕವಾಗಿ ನನ್ನ ತೇಜೋವಧೆಗಾಗಿ ವಿಡಿಯೋ ಮಾಡಿಸಲಾಗಿದೆ ಎಂದು ಆರೋಪಿಸಿದ್ದಾರೆ. 40 ವರ್ಷಗಳ ನನ್ನ ರಾಜಕಾರಣದಲ್ಲಿ ಎಂದಿಗೂ ನಾನು ಇಷ್ಟು ಕೆಳಮಟ್ಟದ ಪದಗಳನ್ನು ಬಳಸಿಲ್ಲ. ಅದರಲ್ಲಿಯೂ ಮಹಿಳೆಯರ ಬಗ್ಗೆ ಅಪಾರ ಗೌರವವನ್ನು ಹೊಂದಿದ್ದೇನೆ. ಪ್ರತಿದಿನ ಕಚೇರಿಗೆ ಆಗಮಿಸಿ ಸಾವಿರಾರು ಜನರ ಸಮಸ್ಯೆಗಳನ್ನು ಕೇಳಿ ಬಗೆಹರಿಸುವ ಪ್ರಯತ್ನ ಮಾಡುತ್ತೇನೆ.

    ನನ್ನ ಕಚೇರಿಗೆ ಸುಮಾರು 20 ರಿಂದ 30 ಮಹಿಳೆಯರು ಬಂದಿದ್ದರು. ಶಾಲಾ ಆವರಣದಲ್ಲಿರುವ ದೇವಸ್ಥಾನಕ್ಕೆ ಕಾಂಪೌಂಡ್ ಕಟ್ಟಬೇಕೆಂದು ಕೇಳಿಕೊಂಡಿದ್ದರು. ಕಾಂಪೌಂಡ್ ನಿರ್ಮಿಸುವುದರಿಂದ ಶಾಲೆಯ ಮಕ್ಕಳಿಗೆ ತೊಂದರೆ ಆಗಲಿದ್ದು, ದೇವಸ್ಥಾನಕ್ಕಾಗಿ ಬೇರೆ ಸ್ಥಳ ನಿಗದಿ ಮಾಡುತ್ತೇನೆ. ಸರ್ಕಾರದಿಂದ 10 ಲಕ್ಷ ರೂ.ಯನ್ನು ಸಹ ಕೊಡಿಸುತ್ತೇನೆ ಅಂತಾ ಹೇಳಿ ಕಳುಹಿಸಿದ್ದೆ ಎಂದು ಸೋಮಣ್ಣ ಅವರು ಸ್ಪಷ್ಟನೆ ನೀಡಿದ್ದಾರೆ.

    ಮಾತು ಬದಲಿಸಿದ ಸೋಮಣ್ಣ: ವಿಡಿಯೋ ಕುರಿತು ಸ್ಪಷ್ಟನೆ ನೀಡುತ್ತಿದ್ದ ಶಾಸಕರು ಕ್ಷಣಾರ್ಧದಲ್ಲಿ ತಮ್ಮ ಮಾತುಗಳನ್ನು ಬದಲಿಸಿದ್ದಾರೆ. ಸ್ಪಷ್ಟನೆ ಆರಂಭದಲ್ಲಿ ನಾನು ಈ ಬಗ್ಗೆ ಸಿಬಿಐಗೆ ದೂರು ಸಲ್ಲಿಸುತ್ತೇನೆ ಅಂತಾ ಹೇಳಿದರು. ಕೊನೆಗೆ ನಾನು ಯಾವುದೇ ದೂರು ನೀಡಲ್ಲ ಅಂದರು. ನಾನೇನು ತಪ್ಪು ಮಾಡಿಲ್ಲ, ಅಲ್ಲಿರುವ ಧ್ವನಿ ನನ್ನದಲ್ಲ. ವಿಡಿಯೋ ವೈರಲ್ ಮಾಡಿರುವವರೇ ಅದಕ್ಕೆ ಸಾಕ್ಷ್ಯಾಧಾರ ಒದಗಿಸಲಿ. ಚುನಾವಣೆಯಲ್ಲಿ ಸೋತ ಹಿನ್ನೆಲೆಯಲ್ಲಿ ಕಾಂಗ್ರೆಸ್‍ನ ಮಾಜಿ ಶಾಸಕ ಪ್ರಿಯಾ ಕೃಷ್ಣ ಅವರೇ ಈ ವಿಡಿಯೋ ಮಾಡಿಸಿರುವ ಸಾಧ್ಯತೆಗಳಿವೆ ಎಂದು ಆರೋಪ ಮಾಡಿದರು.

    ಇದೆಲ್ಲಾ ಸುಳ್ಳು ಅಂತಾದ್ರೆ, ವಿಡಿಯೋ ಮೂಲಕ ನಿಮ್ಮ ತೇಜೋವಧೆ ಆಗುತ್ತಿದ್ದರೆ ನೀವು ಯಾಕೆ ದೂರು ದಾಖಲಿಸಿಬರದು ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಯಾರು ಏನ್ ಬೇಕಾದರೂ ಮಾಡಿಕೊಳ್ಳಲಿ, ನಾನೇನು ತಲೆ ಕೆಡಿಸಿಕೊಳ್ಳಲ್ಲ. ವಿಡಿಯೋದಲ್ಲಿರುವ ಧ್ವನಿ ಮಾತ್ರ ನನ್ನದಲ್ಲ ಎಂಬುದನ್ನು ಮಾತ್ರ ಸ್ಪಷ್ಟಪಡಿಸುತ್ತೇನೆ. ಗೌರವ, ಸಂಸ್ಕಾರದಿಂದ ರಾಜಕಾರಣ ಮಾಡಿಕೊಂಡು ಬಂದಿದ್ದೇನೆ ಅಂತಾ ಅಂದ್ರು.