Tag: Vaccine Campaign

  • ಕೋವಿಡ್‌ ಎರಡನೇ ಲಸಿಕಾ ಅಭಿಯಾನದಲ್ಲಿ ಬೆಂಗಳೂರು ನಗರ ಜಿಲ್ಲೆ ರಾಜ್ಯಕ್ಕೆ ಪ್ರಥಮ

    ಕೋವಿಡ್‌ ಎರಡನೇ ಲಸಿಕಾ ಅಭಿಯಾನದಲ್ಲಿ ಬೆಂಗಳೂರು ನಗರ ಜಿಲ್ಲೆ ರಾಜ್ಯಕ್ಕೆ ಪ್ರಥಮ

    ಬೆಂಗಳೂರು:  ಎರಡನೇ ಸುತ್ತಿನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವಲ್ಲಿ ಬೆಂಗಳೂರು ನಗರ ಜಿಲ್ಲೆಯು ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ. ಬಿಬಿಎಂಪಿ ಹೊರತುಪಡಿಸಿ 10,34,184 ಜನರಿಗೆ ಲಸಿಕೆ ನೀಡಿದ್ದು, ನೂರಕ್ಕೆ ನೂರರಷ್ಟು ಗುರಿ ಸಾಧಿಸಿದ ಜಿಲ್ಲೆಯಾಗಿದೆ ಎಂದು ಜಿಲ್ಲಾಧಿಕಾರಿ ಜೆ. ಮಂಜುನಾಥ್ ತಿಳಿಸಿದರು.

    ಜಿಲ್ಲಾಧಿಕಾರಿಗಳ ಕಚೇರಿ ಆವರಣದ ಕಂದಾಯ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ನಗರ ಜಿಲ್ಲೆಯಲ್ಲಿ ಮೊದಲ ಸುತ್ತಿನಲ್ಲಿ 13,26,255 ಜನರಿಗೆ ಲಸಿಕೆ ಹಾಕಲಾಗಿದ್ದು, ಶೇ.129 ಸಾಧನೆಯಾಗಿದೆ. ಇಡೀ ರಾಜ್ಯದಲ್ಲಿ ಗುರಿ ಮೀರಿ ಸಾಧನೆಗೈದ ಏಕೈಕ ಜಿಲ್ಲೆಯಾಗಿದೆ ಎಂದರು. ಇದನ್ನೂ ಓದಿ: ಮತಾಂತರ ಕಾಯ್ದೆ ವಿಧಾನಸಭೆಯಲ್ಲಿ ಪಾಸ್: ಕಟೀಲ್ ಸ್ವಾಗತ

    ಆರೋಗ್ಯ ಇಲಾಖೆಯ ವೈದ್ಯರು-ಸಿಬ್ಬಂದಿ, ಜಿಲ್ಲಾ ಪಂಚಾಯತ್, ಆಶಾ ಕಾರ್ಯಕರ್ತೆಯರು, ಕಂದಾಯ ಇಲಾಖೆ ಸಿಬ್ಬಂದಿ ಹಾಗೂ ಮತ್ತಿತರ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಹಾಗೂ ಪ್ರತಿ ಗ್ರಾಮ ಪಂಚಾಯಿತಿಗಳ ಮನೆ ಮನೆಗೆ ಹೋಗಿ ಲಸಿಕೆ ಹಾಕಿಸಿದ ಕಾರಣ ಈ ಯಶಸ್ಸು ಸಾಧಿಸಲು ಸಾಧ್ಯವಾಗಿದೆಯೆಂದು ತಿಳಿಸಿದ್ದಾರೆ. ಇದನ್ನೂ ಓದಿ:  ಗೋವು ನಮಗೆ ತಾಯಿ, ಪವಿತ್ರ: ನರೇಂದ್ರ ಮೋದಿ

    ಹೊಸ ವರ್ಷದ ಹೊಸ್ತಿಲಲ್ಲಿರುವ ನಾವುಗಳು ಸಂಭ್ರಮ ಆಚರಿಸಲು ಮುಂದಾಗಿದ್ದು, ಸಾರ್ವಜನಿಕರು ಅನಾವಶ್ಯಕವಾಗಿ ಗುಂಪು ಸೇರುವುದನ್ನು ಕಡಿಮೆ ಮಾಡಬೇಕು. ಎರಡು ಡೋಸ್ ಮುಗಿದಿದೆಯೆಂದು ಮೈಮರೆಯದೆ ಕೋವಿಡ್ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದರು. ಇದನ್ನೂ ಓದಿ: ವಿಧಾನಸಭೆಯಲ್ಲಿ ಮತಾಂತರ ತಡೆ ವಿಧೇಯಕ ಅಂಗೀಕಾರ

  • ಮುಂದಿನ ದಿನಗಳಲ್ಲಿ ಕ್ಷೇತ್ರವಾರು ಶಾಸಕರ ಜೊತೆ ಸಭೆ ಮಾಡಿ ಲಸಿಕೆ ಅಭಿಯಾನ ಮಾಡ್ತೇವೆ: ಆರ್.ಅಶೋಕ್

    ಮುಂದಿನ ದಿನಗಳಲ್ಲಿ ಕ್ಷೇತ್ರವಾರು ಶಾಸಕರ ಜೊತೆ ಸಭೆ ಮಾಡಿ ಲಸಿಕೆ ಅಭಿಯಾನ ಮಾಡ್ತೇವೆ: ಆರ್.ಅಶೋಕ್

    ಬೆಂಗಳೂರು: ಮುಂದಿನ ದಿನಗಳಲ್ಲಿ ಕ್ಷೇತ್ರವಾರು ಶಾಸಕರ ಜೊತೆ ಸಭೆ ಮಾಡಿ ಲಸಿಕೆ ಅಭಿಯಾನ ಮಾಡ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಹಿನ್ನಲೆ ರಾಜ್ಯಾದ್ಯಂತ ನಡೆಯುತ್ತಿರುವ ಬೃಹತ್ ಲಸಿಕೆ ಅಭಿಯಾನ ಕಾರ್ಯಕ್ರಮಕ್ಕೆ ನಗರದ ಹೆಬ್ಬಾಳ ವ್ಯಾಪ್ತಿಯ ವಾರ್ಡ್ 18ರ ಗೆದ್ದಲಹಳ್ಳಿ ಅಂಗನವಾಡಿ ಕೇಂದ್ರದಲ್ಲಿ ಆರ್.ಅಶೋಕ್ ಚಾಲನೆ ನೀಡಿದರು.

    ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿಗಳ ಹುಟ್ಟುಹಬ್ಬದ ಹಿನ್ನೆಲೆ ಲಸಿಕೆ ಅಭಿಯಾನ ಮಾಡುತ್ತಿದ್ದೇವೆ. ಬೆಂಗಳೂರಲ್ಲಿ ಒಟ್ಟು 2,200 ವ್ಯಾಕ್ಸಿನ್ ಸೆಂಟರ್ ಮಾಡಿದ್ದೇವೆ. ಬೆಂಗಳೂರಿನಾದ್ಯಾಂತ ಇವತ್ತು ಒಂದೇ ದಿನ 5 ಲಕ್ಷ ಲಸಿಕೆ ನೀಡುವ ಗುರಿಹೊಂದಿದ್ದೇವೆ. ಜನರಿಗೆ ಎರಡು ಡೋಸ್ ಸಿಗಬೇಕು ಅನ್ನೋದು ಅಭಿಯಾನದ ಉದ್ದೇಶ ಎಂದರು. ಇದನ್ನೂ ಓದಿ:  ರಾಹುಲ್‍ಗೆ ಪಿಸ್ತೂಲ್ ಬಳಸಲು ತರಬೇತಿಯನ್ನು ನೀಡಲಾಗಿತ್ತು: ಡಿಸಿಪಿ ಅನುಚೇತ್

    ಹುಟ್ಟುಹಬ್ಬದ ಹಿನ್ನೆಲೆ ಬೇರೆ ಬೇರೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮುಂದೆಯೂ ಬೆಂಗಳೂರಿನಲ್ಲಿ ಕ್ಷೇತ್ರವಾರು ಅಭಿಯಾನ ಮಾಡ್ತೆವೆ. ಬೆಂಗಳೂರಿನ ಎಲ್ಲಾ ಕ್ಷೇತ್ರದ ಶಾಸಕರ ಜೊತೆ ಮಾತನಾಡಿ ಯಾರಿಗೆ ಲಸಿಕೆ ಸಿಕ್ಕಿಲ್ಲ ಅಂತವರಿಗೆ ಒಂದೇ ಬಾರಿ ಐದು ಹತ್ತು ಸಾವಿರ ಲಸಿಕೆ ಕೊಡುವ ಬಗ್ಗೆ ಚರ್ಚೆ ಮಾಡ್ತೀನಿ. ಈ ಬಗ್ಗೆ ಒಂದೊಂದು ದಿನ ಒಬ್ಬೊಬ್ಬ ಶಾಸಕರ ಜೊತೆ ಚರ್ಚೆ ಮಾಡಿ ಅಭಿಯಾನ ಮಾಡ್ತೇವೆ. ವಿಶೇಷವಾಗಿ ಬಡವರು, ಕೂಲಿ ಕಾರ್ಮಿಕರು, ಹಕ್ಕಿಪಿಕ್ಕಿ ಇಂತವರನ್ನು ಗಮನದಲ್ಲಿಟ್ಟುಕೊಂಡು ಅಭಿಯಾನ ಮಾಡ್ತೇವೆ. ಲಸಿಕೆ ಬಗ್ಗೆ ಸಾಕಷ್ಟು ಹಳ್ಳಿಗಳಲ್ಲೂ ಭಯ ಬೀಳುತ್ತಿದ್ದಾರೆ. ಈ ಕಾರಣಕ್ಕೆ ಎಲ್ಲಾ ಜಿಲ್ಲಾಧಿಕಾರಿಗಳು ಸಭೆ ಮಾಡಿದ್ದೇನೆ. ಆ ಭಾಗದ ನಾಯಕರು ಸಮುದಾಯ ಮುಖಂಡರ ಜೊತೆ ಮಾತನಾಡಿ ಅವರಿಗೂ ಲಸಿಕೆ ನೀಡುವ ವ್ಯವಸ್ಥೆ ಮಾಡುತ್ತೇವೆ ಎಂದು ವಿಶ್ವಾಸದ ಮಾತುಗಳನ್ನಾಡಿದ್ದಾರೆ. ಇದನ್ನೂ ಓದಿ:  ಜಮೀನಿನಲ್ಲಿ ಗಾಂಜಾ ಬೆಳೆದ ಮೂವರು ರೈತರ ಬಂಧನ

    ಕಾರ್ಯಕ್ರಮದಲ್ಲಿ ಶಾಸಕ ಭೈರತಿ ಸುರೇಶ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸೇರಿದಂತೆ ಸ್ಥಳೀಯ ಮುಖಂಡರು, ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.