Tag: vaccines

  • 165 ಕೋಟಿ ಡೋಸ್ ವ್ಯಾಕ್ಸಿನ್ ನೀಡಿದ ಭಾರತ

    165 ಕೋಟಿ ಡೋಸ್ ವ್ಯಾಕ್ಸಿನ್ ನೀಡಿದ ಭಾರತ

    ನವದೆಹಲಿ:  ಕೊರೊನಾ ವಿರುದ್ಧ ಲಸಿಕಾ ಅಭಿಯಾನ ನಡೆಸುತ್ತಿರುವ ಭಾರತ  ಈವರೆಗೆ 165 ಕೋಟಿ ಡೋಸ್ ಲಸಿಕೆ ನೀಡಿದೆ. ಈ ಕುರಿತಾಗಿ ಆರೋಗ್ಯ ಇಲಾಖೆ ತಿಳಿಸಿದೆ.

    ಕಳೆದ 24 ಗಂಟೆಗಳಲ್ಲಿ 56 ಲಕ್ಷಕ್ಕೂ ಹೆಚ್ಚು ಡೋಸ್ ಲಸಿಕೆ ನೀಡಲಾಗಿದೆ. ಇದರೊಂದಿಗೆ ಶನಿವಾರದ ಹೊತ್ತಿಗೆ ಭಾರತದಲ್ಲಿ 165.04 ಕೋಟಿ ಡೋಸ್ ಲಸಿಕೆಗಳನ್ನು ನೀಡಲಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ಇನ್‌ಸ್ಟಾಗ್ರಾಮ್ ನಲ್ಲಿ ಟ್ರೆಂಡ್ ಆಯ್ತು ಕಡಲೆಕಾಯಿ ಮಾರುವವನ ಹಾಡು

    ಟ್ವೀಟ್‍ನಲ್ಲಿ ಏನಿದೆ?: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವ ಮತ್ತು ಕೋವಿಡ್ ವಿರುದ್ಧದ ರಾಷ್ಟ್ರದ ಸಾಮೂಹಿಕ ಹೋರಾಟದೊಂದಿಗೆ, ಭಾರತವು ಈಗ 165 ಕೋಟಿಗೂ ಹೆಚ್ಚು ಡೋಸ್ ಲಸಿಕೆಗಳನ್ನು ನೀಡಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಟ್ವೀಟ್‍ನಲ್ಲಿ ತಿಳಿಸಿದ್ದಾರೆ.

    ಜನವರಿ 3 ರಂದು 15ರಿಂದ 18ರ ವರೆಗಿನ ವಯಸ್ಸಿನವರಿಗೂ ಲಸಿಕೆ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿತ್ತು. ಈವರೆಗೆ 4.5 ಕೋಟಿ ಮಕ್ಕಳು ಕೊರೊನಾ ಲಸಿಕೆಯ ಮೊದಲ ಡೋಸ್‌ ಪಡೆದುಕೊಂಡಿದ್ದಾರೆ. ಲಸಿಕೆ ಪಡೆದ ಯುವ ಸಮುದಾಯಕ್ಕೆ ಸಚಿವ ಮಾಂಡವೀಯ ಅವರು ಇದೇ ವೇಳೆ ಅಭಿನಂದನೆಗಳನ್ನೂ ತಿಳಿಸಿದ್ದಾರೆ.

  • ಉಚಿತ ಕೊರೊನಾ ಲಸಿಕೆ ನೀಡಿದ್ದಕ್ಕೆ ಪೆಟ್ರೋಲ್ ಬೆಲೆ ಹೆಚ್ಚಳ: ಸಚಿವ ತೇಲಿ

    ಉಚಿತ ಕೊರೊನಾ ಲಸಿಕೆ ನೀಡಿದ್ದಕ್ಕೆ ಪೆಟ್ರೋಲ್ ಬೆಲೆ ಹೆಚ್ಚಳ: ಸಚಿವ ತೇಲಿ

    ದಿಸ್ಪುರ: ಉಚಿತವಾಗಿ ಕೊರೊನಾ ಲಸಿಕೆ ನೀಡುತ್ತಿರುವ ಕಾರಣ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ ಎಂದು ಪೆಟ್ರೋಲಿಯಂ ಖಾತೆ ರಾಜ್ಯ ಸಚಿವ ರಾಮೇಶ್ವರ್ ತೇಲಿ ಹೇಳಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್ ದುಬಾರಿಯಲ್ಲ. ಕೇಂದ್ರ ಮತ್ತು ರಾಜ್ಯಗಳು ವಿಧಿಸುತ್ತಿರುವ ತೆರಿಗೆಯಿಂದಾಗಿ ದುಬಾರಿಯಾಗುತ್ತಿದೆ. ನೀವೆಲ್ಲರೂ ಉಚಿತವಾಗಿ ಕೊರೊನಾ ಲಸಿಕೆ ಪಡೆದಿದ್ದೀರಿ. ಅದನ್ನು ಪೂರೈಸಲು ಹಣ ಎಲ್ಲಿಂದ ಬಂದಿತ್ತು? ದೇಶದ 130 ಕೋಟಿ ಜನರಿಗೆ ಉಚಿತವಾಗಿ 2 ಡೋಸ್ ಲಸಿಕೆ ನೀಡಲು ಸರ್ಕಾರ ನಿರ್ಧರಿಸಿದೆ. ಪ್ರತಿ ಡೋಸ್ ಲಸಿಕೆಗೆ 1,200 ರೂ. ವೆಚ್ಚವಾಗುತ್ತದೆ. ಇದು ಸರ್ಕಾರಕ್ಕೆ ಹೊರೆಯಾಗಲಿದೆ. ಲಸಿಕೆ ಹಣವನ್ನು ಪೆಟ್ರೋಲ್ ತೆರಿಗೆ ಮೂಲಕವಾಗಿ ಪಡೆದುಕೊಳ್ಳಲಾಗುತ್ತಿದೆ ಎಂದಿದ್ದಾರೆ. ಇದನ್ನೂ ಓದಿ: ಬೆಂಗ್ಳೂರು ಮಾತ್ರವಲ್ಲ ಜಿಲ್ಲೆಗಳಲ್ಲಿಯೂ ಭಾರೀ ಮಳೆ- ಎಲ್ಲೆಲ್ಲಿ ಏನೇನಾಗಿದೆ?

    ಪೆಟ್ರೋಲ್ ಬೆಲೆಯನ್ನು ನಮ್ಮ ಸಚಿವಾಲಯ ನಿರ್ಧರಿಸುವುದಿಲ್ಲ. ಕಚ್ಚಾತೈಲದ ಬೆಲೆಯಲ್ಲಿ ಬದಲಾವಣೆ ಉಂಟಾದರೆ ಪೆಟ್ರೋಲ್ ಡೀಸೆಲ್ ಬೆಲೆಯಲ್ಲೂ ಬದಲಾವಣೆಯಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮನೆಯಿಂದ ಮಳೆ ನೀರು ಹೊರ ಹಾಕುವ ವೇಳೆ ಕರೆಂಟ್ ಶಾಕ್ – ವ್ಯಕ್ತಿ ದುರ್ಮರಣ

  • ಕೋವಿಡ್ ಲಸಿಕೆಗೆ ನೊಬೆಲ್ ಪ್ರಶಸ್ತಿ ಮಿಸ್ – ರಹಸ್ಯ ಬೆಳಕಿಗೆ

    ಕೋವಿಡ್ ಲಸಿಕೆಗೆ ನೊಬೆಲ್ ಪ್ರಶಸ್ತಿ ಮಿಸ್ – ರಹಸ್ಯ ಬೆಳಕಿಗೆ

    ನ್ಯೂಯಾರ್ಕ್: ಕೊರೊನಾ ಸಾಂಕ್ರಾಮಿಕ ರೋಗದಿಂದಾಗಿ ಇಡೀ ಪ್ರಪಂಚವೇ ತತ್ತರಿಸಿ ಹೋಗಿತ್ತು. ಈ ಸಮಯದಲ್ಲಿ ಸಾಂಕ್ರಾಮಿಕಕ್ಕೆ ಮದ್ದಾಗಿದ್ದೇ ಕೋವಿಡ್ ಲಸಿಕೆ. ಈ ವರ್ಷ ವೈದ್ಯಕೀಯ ವಿಭಾಗದಲ್ಲಿ ನೊಬೆಲ್ ಪ್ರಶಸ್ತಿ ದೊರಕಬಹುದು ಎಂದು ಹಲವು ಊಹೆ ಮಾಡಿದ್ದರು. ಆದರೆ ಅದು ಸಿಗಲಿಲ್ಲ, ಇದಕ್ಕೆ ಕಾರಣ ಏನು ಎಂಬುದು ಬಯಲಾಗಿದೆ.

    ಪ್ರತಿವರ್ಷ ನೊಬೆಲ್ ಪುರಸ್ಕಾರಕ್ಕೆ ಅರ್ಹರ ಹೆಸರು ಶಿಫಾರಸು ಮಾಡಲು ಫೆ.1 ಕಡೆಯ ದಿನ ಅಷ್ಟರೊಳಗೆ ಸಲ್ಲಿಕೆಯಾದ ಹೆಸರುಗಳನ್ನು ಸ್ಟಾಕ್ ಹೋಂ ನೆರಾಯಲ್ ಸ್ವೀಡಿಶ್ ಅಕಾಡೆಮಿ(  Royal Swedish Academy of Sciences in Stockholm) ಪ್ರಶಸ್ತಿಗೆ ಪರಿಗಣತಿಸುತ್ತದೆ. ಇಂಡಿಯಾ ಬುಕ್ ಆಫ್ ರೆಕಾರ್ಡ್ ಸೇರಿದ ಮೂರರ ಪೋರಿ

    ಆದರೆ ಫೆ.1ಕ್ಕೆ ಮೊದಲೇ ಕೋವಿಡ್‍ಗೆ ಮೊದಲು ಎಂಆರ್‍ಎನ್‍ಎ (MRNA) ಲಸಿಕೆಯನ್ನು ಅಭಿವೃದ್ಧಿಪಡಿಸಲಾಗಿತ್ತಾದರೂ, ಅದನ್ನು ಪೂರ್ಣ ಪ್ರಮಾಣದಲ್ಲಿ ನೀಡಲಾಗಿರಲಿಲ್ಲ. ಜೊತೆಗೆ ಅದರ ಪರಿಣಾಮಗಳ ಕುರಿತಾಗಿ ಹೆಚ್ಚನ ಮಾಹಿತಿ ಇರಲಿಲ್ಲ. ಹೀಗಾಗಿ ನಾಮನಿರ್ದೇಶನದ ವೇಳೆ ಕೊರೊನಾ ಲಸಿಕೆ ಅಭಿವೃದ್ಧಿಪಡಿಸಿದವರ ಹೆಸರು ಸೇರ್ಪಡೆಯಾಗಲಿಲ್ಲ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಬೆಂಗ್ಳೂರಲ್ಲಿ 7 ಮಕ್ಕಳ ನಾಪತ್ತೆ ಪ್ರಕರಣ – 4 ತಂಡ ಮಾಡಿ ಪತ್ತೆ ಕಾರ್ಯ

    ನೊಬೆಲ್ ಪ್ರಶಸ್ತಿ ನಾಮ ನಿರ್ದೇಶನ ಮಾಡಲು ನಿಗಧಿ ಕಾಲಮಿತಿ ಇರುತ್ತದೆ. ಇದರೊಟ್ಟಿಗೆ ಹಲವು ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ. ಆದರೆ ಕೋವಿಡ್ ಲಸಿಕೆ ಸಂಬಂಧಿದಂತೆ ಸಕಾಲದಲ್ಲಿ ಸಲ್ಲಿಕೆಯಾಗದಿದ್ದರಿಂದ ಪ್ರಶಸ್ತಿ ಪಟ್ಟಿಯಲ್ಲಿ ಇರಲಿಲ್ಲ. ಸಮಯ ಇದೇ ಕಾಯೋಣ ಎಂದು ರಾಯಲ್ ಸ್ವೀಡಿಶ್ ಅಕಾಡೆಮಿಯ ಮಖ್ಯ ಕಾರ್ಯದರ್ಶಿ ಗೋರನ್ ಹ್ಯಾನ್ಸನ್ ಹೇಳಿದ್ದಾರೆ.

    ಕೋವಿಡ್ ಲಸಿಕೆ ನೀಜಕ್ಕೂ ಅದ್ಭುತವಾದ್ದು, ಮನುಕುಲಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. ಲಸಿಕೆ ತಯಾರಿಸಲು ಶ್ರಮಿಸಿದ ವಿಜ್ಞಾನಿಗಳಿಗೆ ಇಡೀ ಮನುಕುಲವೇ ಆಭಾರಿಯಾಗಿದೆ.

  • ಮಲ್ಲೇಶ್ವರದಲ್ಲಿ ವರ್ತಕರಿಗೆ ವ್ಯಾಕಿನೇಷನ್‍ಗೆ ಚಾಲನೆ ನೀಡಿದ ಡಿಸಿಎಂ

    ಮಲ್ಲೇಶ್ವರದಲ್ಲಿ ವರ್ತಕರಿಗೆ ವ್ಯಾಕಿನೇಷನ್‍ಗೆ ಚಾಲನೆ ನೀಡಿದ ಡಿಸಿಎಂ

    ಬೆಂಗಳೂರು: ಮೂರನೇ ಅಲೆ ತಡೆಗಟ್ಟುವ ಹಾಗೂ ಹೆಚ್ಚಾಗಿ ಜನರ ಸಂಪರ್ಕಕ್ಕೆ ಬರುವ ವರ್ತಕರಿಗಾಗಿ ಮಲ್ಲೇಶ್ವರದಲ್ಲಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಫೌಂಡೇಶನ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ, ವಿಶೇಷ ಲಸಿಕಾ ಅಭಿಯಾನಕ್ಕೆ ಡಿಸಿಎಂ ಅಶ್ವತ್ಥನಾರಾಯಣ ಇಂದು ಚಾಲನೆ ನೀಡಿದರು.

    ಮಲ್ಲೇಶ್ವರದ 8ನೇ ಕ್ರಾಸ್‍ನಲ್ಲಿರುವ ವಾಸವಿ ಮಹಲ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮದಲ್ಲಿ ಕ್ಷೇತ್ರದ ಪ್ರತಿ ವರ್ತಕರಿಗೂ ಲಸಿಕೆ ನೀಡಲಾಗುತ್ತಿದೆ. 1500 ಮಂದಿ ಇಲ್ಲಿ ಲಸಿಕೆ ಪಡೆದರು.

    I seek your wholehearted support to make Malleshwara the first constituency to vaccinate 100% of its citizens above 18 yrs.

    I urge all Apartment Associations, Linguistic Forums, Religious Associations & NGOs in Malleshwara to provide list of those yet to take a single dose. pic.twitter.com/eVaZM6SgsD

    — Dr. Ashwathnarayan C. N. (@drashwathcn) July 1, 2021

    ಈಗಾಗಲೇ ಕ್ಷೇತ್ರದಲ್ಲಿ ಫ್ರಂಟ್‍ಲೈನ್ ವಾರಿಯರುಗಳೆಲ್ಲರಿಗೂ ಲಸಿಕೆ ಹಾಕಲಾಗಿದ್ದು, ಅದರ ಬೆನ್ನಲ್ಲೇ ಆಟೋ ಚಾಲಕರು, ಹಿರಿಯ ನಾಗರೀಕರು, ವೈದ್ಯರು, ವಕೀಲರು, ಶಿಕ್ಷಕರು, ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ವರ್ಗದವರಿಗೂ ವ್ಯಾಕ್ಸಿನೇಷನ್ ಮಾಡಲಾಗಿದೆ. ಈಗ ವರ್ತಕರಿಗಾಗಿ ಲಸಿಕೆ ಕಾರ್ಯಕ್ರಮ ಆಯೋಜಿಸಲಾಗಿದೆ.

    ಈ ಸಂದರ್ಭದಲ್ಲಿ ಮಾತನಾಡಿದ ಉಪ ಮುಖ್ಯಮಂತ್ರಿಗಳು, ಮೂರನೇ ಅಲೆಯಲ್ಲಿ ಸೋಂಕು ಬೇಗ ಬೇಗ ಹರಡುವುದಿದೆ. ಇದನ್ನು ತಡೆಯಲು ಲಸಿಕೆ ರಾಮಬಾಣ. ಆದ್ದರಿಂದ ಕ್ಷೇತ್ರದ ಪ್ರತಿಯೊಬ್ಬರನ್ನೂ ಹುಡುಕಿ ಹುಡುಕಿ ಲಸಿಕೆ ಕೊಡಲಾಗುತ್ತಿದೆ ಎಂದರು.

    ಒಂದು ಕಡೆ ಬಿಬಿಎಂಪಿ ವತಿಯಿಂದ ಲಸಿಕೀಕರಣ ನಡೆಯುತ್ತಿದೆ. ಮತ್ತೊಂದೆಡೆ ಖಾಸಗಿ ಸಂಸ್ಥೆಗಳ ನೆರವಿನಿಂದ ಅಶ್ವತ್ಥನಾರಾಯಣ ಫೌಂಡೇಶನ್ ಇನ್ನೊಂದೆಡೆ ಕ್ಷೇತ್ರದ ಉದ್ದಗಲಕ್ಕೂ ಯಶಸ್ವಿಯಾಗಿ ವ್ಯಾಕ್ಸಿನೇಷನ್ ಮಾಡಲಾಗುತ್ತಿದ್ದು, ಈವರೆಗೆ 60,000ಕ್ಕೂ ಹೆಚ್ಚು ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ. ಇಂದಿನಿಂದ ವಿವಿಧ ಕ್ಷೇತ್ರಗಳಲ್ಲಿನ 1.25 ಲಕ್ಷ ಜನರಿಗೆ ಲಸಿಕೆ ಕೊಡುವ ಕೆಲಸವನ್ನು ಕೈಗೆತ್ತಿಕೊಳ್ಳಲಾಗಿದೆ. ಕೆಲ ದಿನಗಳಲ್ಲೇ ಮಲ್ಲೇಶ್ವರಂ ಕ್ಷೇತ್ರದ ಪ್ರತಿಯೊಬ್ಬರಿಗೂ ಲಸಿಕೆ ನೀಡಲಾಗುವುದು ಎಂದು ಡಿಸಿಎಂ ಮಾಹಿತಿ ನೀಡಿದರು.

    ಇವತ್ತು ಅಂಗಡಿ ಮುಂಗಟ್ಟುಗಳ ವ್ಯಾಪಾರಿಗಳು, ಬೀದಿ ಬದಿ ವ್ಯಾಪಾರಿಗಳಿಗೆ ಲಸಿಕೆ ನೀಡಲಾಗುತ್ತಿದೆ ಎಂದ ಅವರು, ಬೆಂಗಳೂರು ರಾಜ್ಯದಲ್ಲಿಯೇ ಅತಿ ಹೆಚ್ಚು ಜನದಟ್ಟಣಿಯುಳ್ಳ ನಗರವಾಗಿದೆ. ಇಲ್ಲಿಂದ ಬೇರೆ ಕಡೆ ಸೋಂಕು ಹರಡಬಾರದು ಎನ್ನುವ ಕಾರಣಕ್ಕೆ ಇಡೀ ನಗರದಲ್ಲಿ ಭರದಿಂದ ಲಸಿಕೀಕರಣ ಮಾಡಲಾಗುತ್ತಿದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು. ವಾಸವಿ ಸಂಘದ ಅಧ್ಯಕ್ಷ ಡಾ.ಗೋವಿಂದರಾಜು, ಬಿಜೆಪಿಯ ಕೆಲ ಮುಖಂಡರು ಈ ಸಂದರ್ಭದಲ್ಲಿ ಹಾಜರಿದ್ದರು.

    ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳಿಗೆ ಲಸಿಕೆ:

    ಎಂ.ಎಸ್.ರಾಮಯ್ಯ ಆಸ್ಪತ್ರೆ ವತಿಯಿಂದ ವಿದ್ಯಾರ್ಥಿಗಳಿಗೆ ಲಸಿಕೆ ಹಾಕುವ ಕಾರ್ಯಕ್ರಮಕ್ಕೂ ಡಿಸಿಎಂ ಅಶ್ವತ್ಥನಾರಾಯಣ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅವರು ವಿದ್ಯಾರ್ಥಿಗಳ ಜತೆ ಸಂವಾದ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ, ಎಲ್ಲ ಶಿಕ್ಷಣ ಸಂಸ್ಥೆಗಳು ತಮ್ಮ ವಿದ್ಯಾರ್ಥಿಗಳಿಗೆ ಲಸಿಕೆ ಹಾಕಿಸುತ್ತುರುವುದು ಉತ್ತಮವಾದ ಕಾರ್ಯ. ಇದಕ್ಕೆ ಸರಕಾರ ಎಲ್ಲ ರೀತಿಯ ಸಹಕಾರ ನೀಡುತ್ತದೆ. ಶೈಕ್ಷಣಿಕ ವರ್ಷ ನಿರಾಯಾಸವಾಗಿ ನಡೆಯಬೇಕಾದರೆ ವಿದ್ಯಾರ್ಥಿಗಳಿಗೆ ಲಸಿಕೆ ಕೊಡಲೇಬೇಕು ಎಂದರು.

    ಎಂ.ಎಸ್.ರಾಮಯ್ಯ ಆಸ್ಪತ್ರೆ ಅಧ್ಯಕ್ಷ ಎಂ.ಆರ್.ಜಯರಾಂ ಹಾಗೂ ಸಿಇಒ ಎಂ.ಆರ್.ಶ್ರೀನಿವಾಸ ಮೂರ್ತಿ ಸೇರಿದಂತೆ ವೈದ್ಯರು, ಪ್ರಾಧ್ಯಾಪಕರು, ಸಿಬ್ಬಂದಿ ಉಪಸ್ಥಿತರಿದ್ದರು. ಅದಕ್ಕೂ ಡಿಸಿಎಂ ಅವರು ಎಂಎಸ್‍ಆರ್ ನಗರದಲ್ಲಿ ನಡೆದ ಲಸಿಕೆ ಅಭಿಯಾನಕ್ಕೂ ಚಾಲನೆ ನೀಡಿದರು.

  • ನರ್ಸ್ ಬದಲು ತಾನೇ ಲಸಿಕೆ ಕೊಟ್ಟ ಕೌನ್ಸಿಲರ್

    ನರ್ಸ್ ಬದಲು ತಾನೇ ಲಸಿಕೆ ಕೊಟ್ಟ ಕೌನ್ಸಿಲರ್

    ಕೋಲ್ಕತ್ತಾ: ಕೌನ್ಸಿಲರ್ ಒಬ್ಬರು ತಾವೇ ಒಂದು ಮಹಿಳೆಗೆ ಕೊರೊನಾ ಲಸಿಕೆ ನೀಡಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.

    ರಾಜ್ಯದ ಕುಲತಿ ಪ್ರದೇಶದಲ್ಲಿ ಟಿಎಂಸಿ ಕೌನ್ಸಿಲರ್ ಆಗಿರುವ ತಬಸ್ಸುಮ್ ಅರಾ ಕೊರೊನಾ ಲಸಿಕಾ ಕೇಂದ್ರಕ್ಕೆ ಬರುತ್ಥಾರೆ. ಅಲ್ಲಿ ನರ್ಸ್ ಬಳಿ ಬಂದು ಅವರ ಕೈಲಿದ್ದ ಸಿರಿಂಜ್ ಪಡೆದು, ಲಸಿಕೆ ಸ್ವೀಕರಿಸಿಲು ಕುಳಿತಿದ್ದ ಮಹಿಳೆಗೆ ತಾವೇ ಲಸಿಕೆ ಕೊಡುತ್ತಾರೆ. ಇದು ವೀಡಿಯೋದಲ್ಲಿ ಸ್ಪಷ್ಟವಾಗಿ ಚಿತ್ರೀಕರಣವಾಗಿದೆ. ಇದನ್ನೂ ಓದಿ:  ಮಹಿಳೆಯರಿಗೆ ಸೂಟ್ ಆಗುವಂತಹ 5 ಬೆಸ್ಟ್ ಬ್ರೆಸ್ಲೆಟ್‍ಗಳು

    ಬಿಜೆಪಿಯ ಅನೇಕ ನಾಯಕರು ಈ ವೀಡಿಯೋವನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಟಿಎಂಸಿ ಪಕ್ಷಕ್ಕೆ ಅದರ ನಾಯಕರ ಮೇಲೆ ಹಿಡಿತವಿಲ್ಲ ಎಂದು ಪ್ರಶ್ನಿಸುತ್ತಿದೆ. ಈ ರೀತಿ ಅನುಭವವಿಲ್ಲದವರು ಲಸಿಕೆ ಕೊಟ್ಟರೆ ಅದನ್ನಿ ಸ್ವೀಕರಿಸಿದವರ ಕಥೆ ಏನಾಗಬೇಕು ಎಂದು ಕೇಳಲಾರಂಭಿಸಿದ್ದಾರೆ.

    ಆದರೆ ಈ ಆರೋಪವನ್ನು ಕೌನ್ಸಿಲರ್ ತಬಸ್ಸುಮ್ ಅರಾ ತಳ್ಳಿ ಹಾಕಿದ್ದಾರೆ. ಜನರು ಲಸಿಕೆ ಪಡೆಯುವುದಕ್ಕೆ ಹಿಂಜರಿಯುತ್ತಿದ್ದಾರೆ. ಹೀಗಾಗಿ ನಾನು ಸಿರಿಂಜ್ ಹಿಡಿದುಕೋಮಡಿದ್ದೇ ಅಷ್ಟೇ. ನಾನು ಲಸಿಕೆ ಕೊಟ್ಟಿಲ್ಲ. ಕೊರೊನಾ ಲಸಿಕೆ ಕುರಿತು ಜಾಗೃತಿ ಮೂಡಿಸಲು ಸಿರಿಂಜ್ ಹಿಡಿದುಕೋಮಡಿದ್ದೆ. ನನ್ನದು ನರ್ಸಿಂಗ್ ಕೋರ್ಸ್ ಮುಗಿಸಿದೆ. ಇದು ಸುಳ್ಳು ಆರೋಪ ಎಂದು ಹೇಳಿದ್ದಾರೆ.

    ನಾವು ಈ ಬಗ್ಗೆ ತನಿಖೆ ನಡೆಸುತ್ತೇವೆ. ತಬಸ್ಸುಮ್ ಅರಾ ಯಾರಿಗಾದರೂ ಲಸಿಕೆ ನೀಡಿದ್ದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಸಿವಿಕ್ ಆಡಳಿತಾಧಿಕಾರಿ, ಅಸನ್ಸೋಲ್ ಮುನ್ಸಿಪಲ್ ಕಾರ್ಪೊರೇಶನ್ ಅಮರನಾಥ ಚಟರ್ಜಿ ಅವರು ಹೇಳಿದ್ದಾರೆ.

  • 2 ಕೋಟಿ ಲಸಿಕೆ ನೀಡಿ ಇತಿಹಾಸ ನಿರ್ಮಿಸಿದ ಕರ್ನಾಟಕ: ಸುಧಾಕರ್

    2 ಕೋಟಿ ಲಸಿಕೆ ನೀಡಿ ಇತಿಹಾಸ ನಿರ್ಮಿಸಿದ ಕರ್ನಾಟಕ: ಸುಧಾಕರ್

    ಬೆಂಗಳೂರು: ಇಡೀ ದೇಶದಲ್ಲಿ ಲಸಿಕೆ ಅಭಿಯಾನಕ್ಕೆ ವೇಗ ನೀಡಲಾಗಿದೆ. ಇದೇ ವೇಳೆ ಲಸಿಕೆ ನೀಡೋದ್ರಲ್ಲಿ ಕರ್ನಾಟಕ ರಾಜ್ಯ ಇತಿಹಾಸ ನಿರ್ಮಿಸಿದೆ. ಕರ್ನಾಟಕ ಇದುವರೆಗೂ 2 ಕೋಟಿ ಜನರಿಗೆ ಲಸಿಕೆ ನೀಡಿ ಹೊಸ ದಾಖಲೆಯನ್ನು ಬರೆದಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ. ಇದನ್ನೂ ಓದಿ:  ಹೋಟೆಲ್, ರೆಸಾರ್ಟ್, ವಸತಿ ಗೃಹಗಳ ವಿದ್ಯುತ್, ನೀರಿನ ಬಿಲ್ ಮನ್ನಾ ಮಾಡಿ: ಸಿದ್ದರಾಮಯ್ಯ ಪತ್ರ

    ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ಡಾ.ಸುಧಾಕರ್ ಕರ್ನಾಟಕ ಲಸಿಕೆ ನೀಡಿಕೆಯಲ್ಲಿ ಇತಿಹಾಸ ನಿರ್ಮಿಸಿದೆ ಇದೊಂದು ದೊಡ್ಡ ಸಾಧನೆ. ಇದಕ್ಕೆ ಕೆಲಸ ಮಾಡಿದ ಎಲ್ಲಾ ವೈದ್ಯರು, ದಾದಿಯರಿಗೆ, ಆಸ್ಪತ್ರೆಗಳಿಗೆ ಧನ್ಯವಾದ ಎಂದು ಅಂತ ಹೆಮ್ಮೆಯಿಂದ ವ್ಯಕ್ತಪಡಿಸಿದ್ದಾರೆ.

    ಇದೇ ವೇಳೆ ಜನರ ಲಸಿಕೆ ಉತ್ಸಾಹಕ್ಕೂ ಧನ್ಯವಾದ ತಿಳಿಸಿದ ಸಚಿವರು, ಜನರು ಕೂಡಾ ಲಸಿಕೆ ಹಾಕಿಸಿಕೊಳ್ಳೋಕೆ ಬರುತ್ತಿದ್ದಾರೆ. ಇದರಿಂದಾಗಿಯೇ ಲಸಿಕೆ ಅಭಿಯಾನ 2 ಕೋಟಿ ದಾಟಿದೆ. ಯೋಗ ದಿನದಂದು ಒಂದೇ ದಿನ 11 ಲಕ್ಷ ಲಸಿಕೆ ಕೊಟ್ಟಿದ್ದೇವೆ. ದೇಶದಲ್ಲಿ ಅತಿ ಹೆಚ್ಚು ಲಸಿಕೆ ಕೊಟ್ಟ ಎರಡನೇ ಸ್ಥಾನದಲ್ಲಿ ನಾವು ಇದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಧೋನಿ ಮಾಸ್ ಮೀಸೆಗೆ ಅಭಿಮಾನಿಗಳು ಫಿದಾ

    ಲಸಿಕೆ ಉಚಿತವಾಗಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವ್ರಿಗೆ ಧನ್ಯವಾದ. ಜನರು ಕೂಡಾ ಆತಂಕ ಇಲ್ಲದೆ ಎಲ್ಲರೂ ಲಸಿಕೆ ಪಡೆಯಬೇಕು. ಇದೇ ವೇಳೆ ಮಕ್ಕಳಿಗೆ ಲಸಿಕೆ ನೀಡುವ ಬಗ್ಗೆ ಮಾತನಾಡಿದ ಅವರು, ಮಕ್ಕಳಿಗೆ ಲಸಿಕೆ ಟ್ರಯಲ್ ನಡೆಯುತ್ತಿದೆ. ಟ್ರಯಲ್ ಪ್ರಕ್ರಿಯೆ ಮುಗಿದ ಮೇಲೆ ಈ ಬಗ್ಗೆ ನಿರ್ಧಾರ ಮಾಡಲಾಗುತ್ತೆ ಎಂದು ಸ್ಪಷ್ಟಪಡಿಸಿದ್ದಾರೆ.