ಚಿಕ್ಕೋಡಿ: ಅಥಣಿ ಸಮೀಪದ ಭರಮೋಕೋಡಿ ಬಳಿ ನಡೆದ ಬೈಕ್ ಅಪಘಾತದಲ್ಲಿ ಯೋಗ ಗುರು ಹಾಗೂ ಹರಿಹರ ಪೀಠದ ಶ್ರೀ ವಚನಾನಂದ ಸ್ವಾಮೀಜಿಯವರ (Vachanananda Swamiji )ಸಹೋದರ ಅಶೋಕ್ ಗೌರಗೊಂಡ ಸಾವನ್ನಪ್ಪಿದ್ದಾರೆ.
ಬೆಳಗಾವಿ (Belagavi) ಜಿಲ್ಲೆ ಅಥಣಿ ತಾಲೂಕಿನ ತಾಂವಸಿ ಮೂಲದ ಅಶೋಕ್ ತಾಂವಶಿ ಗ್ರಾಮದಿಂದ ಅಥಣಿ ಕಡೆಗೆ ಸಾಗುವಾಗ ಭರಮೋಕೋಡಿ ಹತ್ತಿರ ಈ ಅಪಘಾತ ಸಂಭವಿಸಿದೆ. ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ನಾಯಿ ಅಡ್ಡ ಬಂದಿದ್ದರಿಂದ ಈ ಅಪಘಾತ ಸಂಭವಿಸಿದೆ. ಪರಿಣಾಮ ಅಶೋಕ್ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಈಡೇರದ ಸರ್ಕಾರದ ಭರವಸೆ | ಮತ್ತೆ ಸಾರಿಗೆ ನೌಕರರಿಂದ ಮುಷ್ಕರಕ್ಕೆ ಪ್ಲ್ಯಾನ್ – ಇಂದು ಮಹತ್ವದ ಸಭೆ
ದಾವಣಗೆರೆ: ಸಿಎಂ ಸಿದ್ದರಾಮಯ್ಯ ಅವರಿಗೆ ಪಂಚಮಸಾಲಿ ಪೀಠಕ್ಕೆ ಬರಲು ಬಿಡುವುದಿಲ್ಲ ಎಂದು ಸಮಾಜದ ಮುಖಂಡರು ಆಕ್ರೋಶ ಹೊರಹಾಕಿದ್ದಾರೆ.
ವಚನಾನಂದ ಸ್ವಾಮೀಜಿಗಳು ಹರಿಹರ ಜಾತ್ರೆಗೆ ಸಿಎಂ ಸಿದ್ದರಾಮಯ್ಯನವರನ್ನು ಅಹ್ವಾನ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಪಂಚಮಸಾಲಿ ಮುಖಂಡರು ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಸಿಎಂಗೆ ಆಹ್ವಾನ ನೀಡಿದ್ದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಸಮಾಜದ ಮುಖಂಡರು, ಮೀಸಲಾತಿ ಹೋರಾಟವನ್ನು ಹತ್ತಿಕ್ಕಿ, ಮೀಸಲಾತಿ ಬಹಿರಂಗವಾಗಿ ವಿರೋಧ ಮಾಡಿದವರು ಸಿದ್ದರಾಮಯ್ಯನವರು. ಅವರನ್ನು ಮಠಕ್ಕೆ ಕರೆಸಿ ಸನ್ಮಾನ ಮಾಡಲು ಸ್ವಾಮೀಜಿ ಹೇಳಿದ್ದಾರೆ. ಯಾವುದೇ ಕಾರಣಕ್ಕೂ ಪಂಚಮಸಾಲಿ ಪೀಠಕ್ಕೆ ಬರುವುದಕ್ಕೆ ಬಿಡುವುದಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
ಏನಾದರೂ ಬಂದು ಸನ್ಮಾನ ಸ್ವೀಕಾರ ಮಾಡಿದರೆ ಮಠದ ಹೊರಗೆ ಧಿಕ್ಕಾರ ಕೂಗಿ, ಕಪ್ಪುಬಟ್ಟೆಯ ಪ್ರದರ್ಶನ ಮಾಡುತ್ತೇವೆ. ವಚನಾನಂದ ಸ್ವಾಮೀಜಿಗಳು ಮಠವನ್ನು ಬಿಟ್ಟು ಮೀಸಲಾತಿಗಾಗಿ ಹೋರಾಟ ಮಾಡಬೇಕು. ಅದು ಬಿಟ್ಟು ಮೀಸಲಾತಿ ವಿರೋಧ ಮಾಡಿದವರನ್ನು ಕರೆತಂದು ಸನ್ಮಾನ ಮಾಡಿದರೆ ಹೇಗೆ ಎಂದು ಮುಖಂಡರು ಕಿಡಿಕಾರಿದ್ದಾರೆ.
ಈಗಾಗಲೇ ಶಿವಮೊಗ್ಗ ಜಿಲ್ಲೆಯ ವಿಮಾನ ನಿಲ್ದಾಣಕ್ಕೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರ ಹೆಸರಿಡಬೇಕೆಂದು ರಾಜ್ಯ ಸರ್ಕಾರ ಸಂಪುಟದಲ್ಲಿ ನಿರ್ಧಾರ ಮಾಡಿದೆ. ಅದು ನಮಗೆ ಸ್ವಾಗತಾರ್ಹ. ಅದರೆ ಇದೀಗ ಯಡಿಯೂರಪ್ಪನವರು ವಿಮಾನ ನಿಲ್ದಾಣಕ್ಕೆ ನಮ್ಮ ಹೆಸರಿಡುವುದು ಬೇಡ ಎಂದು ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದಿದ್ದಾರೆ. ಆದ್ದರಿಂದ ಸರ್ಕಾರ ಕೆಳದಿಯ ರಾಣಿ ಚೆನ್ನಮ್ಮಳ ಹೆಸರಿಡುವಂತೆ ಮನವಿ ಮಾಡಿದರು. ಈ ಹಿಂದೆ ಬೆಂಗಳೂರಿನಲ್ಲಿ ಸಿಎಂ ಭೇಟಿಯಾಗಿ, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕೆಳದಿ ರಾಣಿ ಚೆನ್ನಮ್ಮನವರ ಹೆಸರಿಡುವಂತೆ ಮನವಿಯನ್ನು ಸಲ್ಲಿಸಲಾಯಿತು ಎಂದರು. ಇದನ್ನೂ ಓದಿ: ನೈಸ್ ಯೋಜನೆಗೆ ನೀಡಿದ್ದ 543 ಎಕರೆ ಭೂಮಿ ವಾಪಸ್ – ಆರ್.ಅಶೋಕ್
ಯಡಿಯೂರಪ್ಪನವರು ಕೇವಲ ರಾಜಹುಲಿಯಲ್ಲ, ಅವರೊಂದು ಶಕ್ತಿ. ಜನರು ಅವರನ್ನು ವ್ಯಕ್ತಿಗತವಾಗಿ ರಾಜಾಹುಲಿ ಎಂದು ಹೇಳುವುದಿಲ್ಲ. ಅದೊಂದು ಶಕ್ತಿ ಅವರಲ್ಲಿದೆ. ಅವರು ಕೇವಲ ಒಂದು ಜನಾಂಗದ ರಾಜಕಾರಣಿಯಲ್ಲ, ಅವರು ಸರ್ವಜನಾಂಗವನ್ನು ತೆಗೆದುಕೊಂಡು ಹೋಗುವ ಬಲಾಡ್ಯ ಶಕ್ತಿ. ರಾಜ್ಯದಲ್ಲಿ ಜನಪ್ರಿಯ ರಾಜಕಾರಣಿಗಳಲ್ಲಿ ಮೊದಲು ಯಡಿಯೂರಪ್ಪ ಬಳಿಕ ಸಿದ್ದರಾಮಯ್ಯ ಬರುತ್ತಾರೆ. ಯಡಿಯೂರಪ್ಪ ಸಿಎಂ ಆಗಿ ರಾಜ್ಯದಲ್ಲಿ ಮಾಡಿದ ಕೆಲಸವನ್ನು ಜನರು ಮರೆಯುವಂತಿಲ್ಲ. ಮಠಕ್ಕೆ ಅನುದಾನ ಕೊಟ್ಟಿರುವುದು, ಅವರು ತೆಗೆದುಕೊಂಡ ಕೆಲವು ನಿರ್ಣಯಗಳು, ಅಂತಹ ನಿರ್ಣಯಗಳನ್ನು ತೆಗೆದುಕೊಳ್ಳಬೇಕಾದರೆ ಎಂಟು ಎದೆ ಇರಬೇಕು. ಅದು ಯಡಿಯೂರಪ್ಪನವರಿಗೆ ಇದೆ ಎಂದು ಗುಣಗಾನ ಮಾಡಿದರು.
ಕೊಪ್ಪಳ: ನಮ್ಮ ದೇಶದ ಆಧಾರ್ ಕಾರ್ಡ್ ಇರುವವರೆಲ್ಲರೂ ಭಾರತೀಯರು. ಧರ್ಮ ಎನ್ನುವುದು ಅವರ ವ್ಯಕ್ತಿಗತ. ಭಾರತದಲ್ಲಿ ಇರುವವರೆಲ್ಲ ನಮ್ಮವರು ಎಂದು ಪಂಚಮಸಾಲಿ ಹರಿಹರ ಪೀಠದ ವಚನಾನಂದ ಸ್ವಾಮೀಜಿ ಹೇಳಿದ್ದಾರೆ.
ಕೊಪ್ಪಳದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಚನಾನಂದ ಸ್ವಾಮೀಜಿ, ಆಧಾರ್ ಕಾರ್ಡ್ ಯಾರ ಬಳಿ ಇದೆ ಅವರಿಗೆ ನಮ್ಮ ಮಠಕ್ಕೆ ಅವಕಾಶ ಇದೆ. ಭಾರತೀಯರೆಲ್ಲರೂ ಒಂದೇ ಎಂದರು.
ಶಾಸಕ ಬಸವರಾಜ್ ಯತ್ನಾಳ್ ನಿಮ್ಮ ಬಗ್ಗೆ ಹಗುರವಾಗಿ ಮಾತಾಡುತ್ತಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಹಗುರ ವ್ಯಕ್ತಿಗಳು ಹಗುರವಾಗಿ ಮಾತನಾಡುತ್ತಾರೆ. ಅಂತಹ ಹಗುರ ವ್ಯಕ್ತಿಗಳನ್ನು ಕೈ ಬಿಡಬೇಕು. ಪಂಚಮಸಾಲಿ ಸಮುದಾಯ ಯಾರ ಕೈಯಲ್ಲೂ ಇಲ್ಲ. ಅಲ್ಪರ ಬಗ್ಗೆ ನಾವು ವಿಚಾರ ಮಾಡುವುದಿಲ್ಲ. ನಾವು ಅವರ ಮಾತನ್ನು ಸೀರಿಯಸ್ ಆಗಿ ತಗೆದುಕೊಳ್ಳಲ್ಲ ಎಂದು ಯತ್ನಾಳ್ಗೆ ಟಾಂಗ್ ಕೊಟ್ಟರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಭಾರೀ ಮಳೆ – ಧರೆಗೆ ಉರುಳಿದ ಮರ
ಭಗವದ್ಗೀತೆ ಪಠ್ಯದಲ್ಲಿ ಸೇರಿಸಬೇಕಾ ಎಂಬ ಪ್ರಶ್ನೆಗೆ ಉತ್ತರಿಸಿ, ಭಗವದ್ಗೀತೆಯನ್ನು ಎಲ್ಲರೂ ಓದಬೇಕು. ಅದನ್ನು ವಿರೋಧ ಮಾಡಿದವರು ಅದನ್ನು ಓದಿಲ್ಲ. ಹೀಗಾಗಿ ವಿರೋಧ ಮಾಡುವುದಕ್ಕಿಂತಲೂ ಮೊದಲು ಎಲ್ಲರೂ ಅದನ್ನು ಓದಬೇಕು. ಬದುಕಿಗೆ ಭಗವದ್ಗೀತೆ ಬಹಳ ಹತ್ತಿರ ಇದೆ. ಪಠ್ಯದಲ್ಲಿ ಸೇರಿಸುವುದಕ್ಕೆ ನಮ್ಮ ಬೆಂಬಲ ಇದೆ ಎಂದರು. ಇದನ್ನೂ ಓದಿ: ಕಲಾವಿದನ ನಾಲಿಗೆಯಿಂದ ಅರಳಿತು ಅಂಬೇಡ್ಕರ್ ಚಿತ್ರ
ಈ ಮೊದಲು ಮಾತನಾಡಿದ ಸ್ವಾಮೀಜಿ, ಏಪ್ರಿಲ್ 16 ರಂದು ಅಂಜನಾದ್ರಿ ಬೆಟ್ಟದಲ್ಲಿ ವಚನ ಮಹೋತ್ಸವ ನಡೆಯಲಿದೆ. ಯೋಗವನ್ನು ಪ್ರಚಾರ ಮಾಡುವುದಕ್ಕಾಗಿ ರಾಜ್ಯದ 75 ಐಕಾನಿಕ್ ಸ್ಥಳದಲ್ಲಿ ಯೋಗ ಮಹೋತ್ಸವ ಮಾಡಲಾಗುವುದು ಎಂದು ಮಾಹಿತಿ ನೀಡಿದರು.
ಚಿಕ್ಕೋಡಿ: ಪಂಚಮಸಾಲಿ ಪೀಠಗಳ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ, ನಾವು ಗಡುವು ಕೊಡುವ ಸ್ವಾಮೀಜಿ ಅಲ್ಲ, ಮೀಸಲಾತಿ ಕೊಡಿಸುವ ಸ್ವಾಮೀಜಿ ಎಂದು ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಕೂಡಲ ಸಂಗಮ ಜಯಮೃತ್ಯುಂಜಯ ಸ್ವಾಮೀಜಿಯವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮಾಜದಲ್ಲಿ ಪೀಠಗಳು ಹೆಚ್ಚಾದರೆ, ಮಠ-ಸ್ವಾಮೀಜಿಗಳು ಹೆಚ್ಚಾದರೆ ಯಾವುದೇ ತೊಂದರೆ ಇಲ್ಲ. ನಮ್ಮಲ್ಲಿ ಯಾರ ನಡುವೆಯೂ ಭಿನ್ನಾಭಿಪ್ರಾಯ ಇಲ್ಲ, ಪಂಚಮಸಾಲಿ ಸಮಾಜ ಜಾಗೃತವಾಗಿದೆ ಎಂದರು. ಇದನ್ನೂ ಓದಿ: ಉಕ್ರೇನ್ನಲ್ಲಿ ಕರ್ನಾಟಕ ಮೂಲದ ವಿದ್ಯಾರ್ಥಿ ಸಾವು
ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಬೇಡಿಕೆಗೆ ಯಾವುದೇ ಹಿನ್ನಡೆಯಾಗಿಲ್ಲ. ಈ ಹಿಂದೆ 2ಎ ಮೀಸಲಾತಿಗಾಗಿ ಪಂಚಮಸಾಲಿ ಸಮಾಜದ ಜಯಮೃತ್ಯುಂಜಯ ಸ್ವಾಮೀಜಿ ಸರ್ಕಾರಕ್ಕೆ ಗಡುವು ನೀಡಿದ್ದರು. ನಾವು ಗಡುವು ಕೊಡುವ ಸ್ವಾಮೀಜಿ ಅಲ್ಲ, ಮೀಸಲಾತಿ ಕೊಡಿಸುವ ಸ್ವಾಮೀಜಿ ಎಂದು ಕೂಡಲ ಸಂಗಮ ಜಯಮೃತ್ಯುಂಜಯ ಸ್ವಾಮೀಜಿಯವರಿಗೆ ಪರೋಕ್ಷವಾಗಿ ಟಾಂಗ್ ನೀಡಿದ್ದಾರೆ. ಈ ಮೂಲಕ ಇಬ್ಬರು ಪಂಚಮಸಾಲಿ ಸ್ವಾಮೀಜಿಗಳ ನಡುವಿನ ಶೀತಲ ಸಮರ ಮುದುವರಿದಿದೆ. ಇದನ್ನೂ ಓದಿ: ದೇವರ ದರ್ಶನಕ್ಕೆಂದು ಹೋದವರು ದರ್ಶನ ಪಡೆಯುವ ಮೊದಲೇ ಪ್ರಾಣ ಬಿಟ್ರು
ಹುಬ್ಬಳ್ಳಿ: 500 ವರ್ಷಗಳ ಹಿಂದೆಯೇ ಬೆಳವಡಿ ಸಾಮ್ರಾಜ್ಯದಲ್ಲಿ 2 ಸಾವಿರ ಮಹಿಳೆಯರ ಸ್ತ್ರೀ ಸೈನ್ಯ ಕಟ್ಟಿದ್ದ ಬೆಳವಡಿ ಮಲ್ಲಮ್ಮಾಜಿ ಹೆಸರನ್ನು ರಾಷ್ಟ್ರೀಯ ಮಹಿಳಾ ಸೈನ್ಯಕ್ಕೆ ಇಡಬೇಕು ಎಂದು ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠ ಹರಿಹರದ ಪೀಠಾಧ್ಯಕ್ಷ ಜಗದ್ಗುರು ಶ್ರೀ ಶ್ರೀ ಶ್ರೀ ವಚನಾನಂದ ಮಹಾಸ್ವಾಮೀಜಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.
ಸೋಮವಾರ ನಡೆದ ವೀರಮಾತೆ ಬೆಳವಡಿ ರಾಣಿ ಮಲ್ಲಮ್ಮಾಜಿ 374ನೇ ವಿಜಯೋತ್ಸವ ದಿನದ ಹಿನ್ನಲೆಯಲ್ಲಿ ಹುಬ್ಬಳ್ಳಿಯಲ್ಲಿ ಬೆಳವಡಿ ಮಲ್ಲಮ್ಮನ ಭಾವಚಿತ್ರಕ್ಕೆ ಗೌರವಾರ್ಪಣೆಯನ್ನು ಸಲ್ಲಿಸಿ, ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳೊಂದಿಗೆ ಈ ಬಗ್ಗೆ ಚರ್ಚಿಸಲಾಯಿತು.
ಬೆಳವಡಿ ಮಲ್ಲಮ್ಮ ದೇಶದಲ್ಲಿ ಮೊದಲ ಮಹಿಳಾ ಸೈನ್ಯವನ್ನು ರಚಿಸಿ ಅದರ ಮುಂದಾಳತ್ವವನ್ನು ವಹಿಸಿದ್ದರು. ಹಲವಾರು ಯುದ್ಧಗಳಲ್ಲಿ ಈ ವೀರಾಗ್ರಣೀಯರ ಸೈನ್ಯವನ್ನು ಮುನ್ನಡೆಸಿದ ಕೀರ್ತಿ ಮಲ್ಲಮ್ಮಾಜಿ ಅವರದ್ದು. ಇಂತಹ ವೀರಾಗ್ರಣೀ ಮಹಿಳೆಯ ಹೆಸರನ್ನು ನಮ್ಮ ರಾಷ್ಟ್ರೀಯ ಮಹಿಳಾ ಸೈನ್ಯಕ್ಕೆ ಇಡುವುದು ಸೂಕ್ತ. ಇದರಿಂದಾಗಿ ನಮ್ಮ ದೇಶದ ಇತಿಹಾಸದಲ್ಲಿ ರೋಚಕ ಅಧ್ಯಾಯಗಳನ್ನು ಬರೆದಂತಹ ಮಹಿಳೆಗೆ ಇನ್ನಷ್ಟು ಮಹತ್ವ ನೀಡಿದಂತಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಪಠ್ಯ ಪುಸ್ತಕದಲ್ಲಿ ಕೆಳದಿ ರಾಣಿ ಚೆನ್ನಮ್ಮನ ಹೋರಾಟದ ಕತೆ ಅಳವಡಿಸಲು ಚಿಂತನೆ: ಬೊಮ್ಮಾಯಿ
ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುವ ಉದ್ದೇಶದಿಂದ ಮುಖ್ಯಮಂತ್ರಿಗಳಿಗೆ ಮನವಿ ಪತ್ರವನ್ನು ನೀಡಲಾಗಿದೆ. ಶೀಘ್ರದಲ್ಲೇ ದೆಹಲಿಗೆ ತೆರಳಿ ರಕ್ಷಣಾ ಸಚಿವರಿಗೆ ಮನವಿ ಸಲ್ಲಿಸುವುದಾಗಿ ವಚನಾನಂದ ಶ್ರೀಗಳು ತಿಳಿಸಿದರು.
ಬೆಂಗಳೂರು: ಹರಿಹರದ ಗತವೈಭವವನ್ನು ಮರಳಿ ಪಡೆಯುವ ಹಾಗೂ ದೇಶದಲ್ಲೇ ಹಿಂದೂಗಳ ಪ್ರಮುಖ ಯಾತ್ರಾಸ್ಥಳವನ್ನಾಗಿಸುವ ಗುರಿಯನ್ನು ಹೊಂದಿದ್ದೇವೆ ಎಂದು ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದ ಜಗದ್ಗುರು ಶ್ರೀ ಶ್ರೀ ಶ್ರೀ ವಚನಾನಂದ ಮಹಾಸ್ವಾಮೀಜಿಗಳು ಹೇಳಿದರು.
ಇಂದು ಬೆಂಗಳೂರಿನ ಶ್ವಾಸಯೋಗ ಕೇಂದ್ರದಲ್ಲಿ ಫೆಬ್ರವರಿ 20 2022 ರಂದು ಸಿಎಂಗಳಿಂದ ನಡೆಯಲಿರುವ 108 ತುಂಗಾಭದ್ರಾ ಆರತಿ ಮಂಟಪಗಳ ‘ಶಿಲಾನ್ಯಾಸ ಕಾರ್ಯಕ್ರಮ’ದ ಮಾಹಿತಿ ಹಾಗೂ ಕಾನ್ಸೆಪ್ಟ್ ವೀಡಿಯೋವನ್ನು ಬಿಡುಗಡೆಗೊಳಿಸಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಈ ವೇಳೆ ಅವರು, ಉತ್ತರಕ್ಕೆ ಗಂಗೆಯ ರೀತಿ ದಕ್ಷಿಣ ಭಾರತಕ್ಕೆ ತುಂಗಾ ನದಿ ಪವಿತ್ರ ಎನಿಸಿದೆ. ಗಂಗಾ ಸ್ನಾನ-ತುಂಗಾ ಪಾನ ಎನ್ನುವ ಉಕ್ತಿಯೂ ಇದೆ ಎಂದು ಮಾತನಾಡಿದರು. ಇದನ್ನೂ ಓದಿ: ನ್ಯಾಯಾಲಯ ಆದೇಶಕ್ಕೆ ಧಾರ್ಮಿಕ ಮುಖಂಡರಿಂದ ಬೆಂಬಲ: ರಾಯಚೂರಿನಲ್ಲಿ ಗಲಾಟೆ ಇಲ್ಲ
ಗಂಗಾರತಿಯ ರೀತಿಯಲ್ಲಿಯೇ ತುಂಗಾರತಿಯನ್ನು ಏಕೆ ಆರಂಭಿಸಬಾರದು ಎನ್ನುವ ವಿಷಯ ನಮ್ಮ ಮನಸ್ಸಿಗೆ ಬಂದಿತ್ತು. ಈ ಯೋಚನೆ ಬರುತ್ತಿದ್ದಂತೆ, ಹರಿಹರ ಪಂಚಮಸಾಲಿ ಜಗದ್ಗುರು ಪೀಠದ ಬಳಿಯಿರುವ ತುಂಗಾ ತಟದಲ್ಲಿ ತುಂಗಾರತಿಯನ್ನು ಆರಂಭಿಸಲು ಯೋಚಿಸಿದೆವು. ಜೊತೆಗೆ ಗಂಗೆಯಂತೆ ತುಂಗಾ ನದಿಯನ್ನೂ ಶುಚಿಗೊಳಿಸಬೇಕು ಎನ್ನುವ ಮಹತ್ವಾಕಾಂಕ್ಷೆ ಬಂದಾಗ ಭಕ್ತಗಣದೊಂದಿಗೆ ಸೇರಿ ತುಂಗಾ ನದಿಯನ್ನು ಶುಚಿಗೊಳಿಸುವ, ನಮಾಮಿ ತುಂಗೆ ಯೋಜನೆಗೆ ಚಾಲನೆ ನೀಡಿದೆವು ಎಂದು ವಿವರಿಸಿದರು.
ಪ್ರತಿ ನಿತ್ಯ ಸೂರ್ಯಾಸ್ತವಾದ ನಂತರ ಗಂಗೋತ್ರಿ, ರುದ್ರಪ್ರಯಾಗ ದೇವಪ್ರಯಾಗ, ಋಷಿಕೇಶ, ಹರಿದ್ವಾರ ಸೇರಿದಂತೆ ನೂರಾರು ಪವಿತ್ರ ಗಂಗಾ ತಟಗಳಲ್ಲಿ ಗಂಗಾರತಿ ನಡೆಯುವ ರೀತಿಯಲ್ಲಿಯೇ ನಮ್ಮ ತುಂಗಾ ನದಿ ತಟದಲ್ಲೂ ತುಂಗಾರತಿ ಪ್ರಾರಂಭಿಸಬೇಕು. ಹೇಗೆ ಮನಮೋಹಕ ಗಂಗಾರತಿ ಲಕ್ಷಾಂತರ ಭಕ್ತರನ್ನು ಸೆಳೆಯಿತೋ ಹಾಗೆ, ತುಂಗಾರತಿ ಕೂಡ ನಾಡಿನ ಭಕ್ತರನನು ಸೆಳೆಯಬೇಕು ಎನ್ನುವುದು ನಮ್ಮ ಇಚ್ಛೆಯಾಗಿತ್ತು ಎಂದರು.
ಈ ಹಿನ್ನೆಲೆಯಲ್ಲಿ ನಾವು ಮಾಡಿದ ಮನವಿಗೆ ಸೂಕ್ತವಾಗಿ ಕರ್ನಾಟಕ ಸರ್ಕಾರ ಸ್ಪಂದಿಸಿದೆ. ಅಲ್ಲದೇ, 30 ಕೋಟಿ ರೂಪಾಯಿಗಳ ಅನುದಾನವೂ ನೀಡಿದ್ದು, ಭಾನುವಾರ ಫೆಬ್ರವರಿ 20 2022 ರಂದು ಮುಖ್ಯಮಂತ್ರಿಗಳು ಈ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.
ಏನಿದು ‘ತುಂಗಾಭದ್ರಾ ಆರತಿ’ ಯೋಜನೆ?
ಹರಿಹರದ ತುಂಗಭದ್ರಾ ನದಿ ತಟದಲ್ಲಿನ ರಾಘವೇಂದ್ರ ಶ್ರೀಗಳ ದೇವಸ್ಥಾನದಿಂದ ಹರಿಹರೇಶ್ವರ ದೇವಸ್ಥಾನದ ಮಧ್ಯದಲ್ಲಿ ತುಂಗಾ ಮಂಟಪಗಳನ್ನು ನಿರ್ಮಾಣ ಮಾಡುವ ಯೋಜನೆ ಇದಾಗಿದೆ. ಇದಕ್ಕೆ 30 ಕೋಟಿ ರೂ. ಖರ್ಚಾಗಬಹುದೆಂದು ಅಂದಾಜಿಸಲಾಗಿದೆ. 108 ಮಂಟಪ ನಿರ್ಮಾಣ, ಗಂಗಾ ಆರತಿಯಂತೆ ಪ್ರತಿನಿತ್ಯ ತುಂಗಾಭದ್ರಾ ಆರತಿ, ಪೂಜೆ ನಡೆಸುವ ಯೋಜನೆ ಇದಾಗಿದೆ ಎಂದು ವಿವರಿಸಿದರು.
ಉತ್ತರ ಮತ್ತು ದಕ್ಷಿಣ ಕರ್ನಾಟಕ ಒಂದುಗೂಡಿಸುವ ಮಹತ್ವದ ಯೋಜನೆ ಇದಾಗಿರಲಿದೆ. ಇದಕ್ಕೆ ಈಗಾಗಲೇ ಅನುದಾನ ಬಿಡುಗಡೆ ಆಗಿದ್ದು, ಯೋಜನೆಯ ನೀಲೀ ನಕ್ಷೆಯನ್ನು ಅಂತಿಮಗೊಳಿಸಲಾಗಿದೆ. ಅಲ್ಲದೆ, ಫೆಬ್ರವರಿ 20 ರಂದು ಮುಖ್ಯಮಂತ್ರಿಗಳು ಇದಕ್ಕೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.
ಗತವೈಭವ ಮರಳಿಸುವ ಗುರಿ!
ತುಂಗಾಭದ್ರಾ ಆರತಿಯ ಅನುಷ್ಠಾನದಿಂದ ಹರಿಹರ ನಗರ ಹಾಗೂ ತುಂಗಾಭದ್ರಾ ನದಿ ಹರಿಯುವ ಎಲ್ಲ ಕಡೆಯೂ ಪ್ರವಾಸೋದ್ಯಮ, ಉದ್ಯೋಗಾವಕಾಶ ಹಾಗೂ ಗತವೈಭವವನ್ನು ಮರಳಿಸುವ ಗುರಿಯನ್ನು ನಾವು ಹೊಂದಿದ್ದೇವೆ. ಹೇಗೆ ವಾರಣಾಸಿ ಕಾರಿಡಾರ್ನಲ್ಲಿ ಗಂಗಾನದಿ ಹರಿಯುವ ಎಲ್ಲ ಕಡೆಯೂ ಗಂಗಾ ಆರತಿ ನಡೆಯುವಂತೆ ತುಂಗಾಭದ್ರಾ ನದಿ ಹರಿಯುವ ಎಲ್ಲೆಡೆಯೂ ಆರತಿ ಕಾರ್ಯಕ್ರಮ ನಡೆಯಬೇಕು. ಈ ಮೂಲಕ ಜೀವ ನದಿಯನ್ನು ಸ್ವಚ್ಚವಾಗಿಟ್ಟುಕೊಳ್ಳುವ ಹಾಗೂ ಅದರ ಸುತ್ತಮುತ್ತಲಿನ ನಗರಗಳ ಸರ್ವತೋಮುಖ ಅಭಿವೃದ್ದಿಯಾಗುವುದು ನಮ್ಮ ಉದ್ದೇಶ ಮತ್ತು ಗುರಿಯಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಪಂಜಾಬ್ ಚುನಾವಣೆಗೂ ಮುನ್ನಾ ದಿನ 12,430 ಹೊಸ ಸ್ಮಾರ್ಟ್ ತರಗತಿ ಉದ್ಘಾಟಿಸಿದ ಕೇಜ್ರಿವಾಲ್
ತುಂಗಾಭದ್ರಾ ನದಿ ಹರಿಯುವ ಎಲ್ಲ ಸ್ಥಳಗಳಲ್ಲಿಯೂ ಕೂಡಾ ನಾವು ಪ್ರವಾಸೋದ್ಯಮ, ಉದ್ಯೋಗಾವಕಾಶ ಹೆಚ್ಚಿಸುವುದು ಮತ್ತು ದೇಶದ ಪ್ರಮುಖ ಹಿಂದೂಯಾತ್ರಾ ಸ್ಥಳಗಳಲ್ಲಿ ಒಂದಾಗಿ ಗುರುತಿಸುವಂತೆ ಮಾಡುವುದು ನಮ್ಮ ಉದ್ದೇಶವಾಗಿದೆ. ಈ ಕಾರ್ಯಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ನಮ್ಮ ಅಭಿನಂದನೆಗಳನ್ನು ತಿಳಿಸಿದರು.
ದಾವಣಗೆರೆ: ಮೂರನೇ ಪೀಠದ ನಿರ್ಮಾಣಕ್ಕೆ ನಿಮ್ಮ ಸಹಕಾರ ಬೇಕು ಎಂದು ಕೇಳಿದ್ದರು. ನಾವು ಸಹಕಾರ ಕೊಡುತ್ತೇವೆ. ನಮ್ಮ ಸಮಾಜಕ್ಕೆ ಪ್ರತಿ ಜಿಲ್ಲೆಗೆ ಪೀಠಗಳ ಭಯವಿಲ್ಲ. ಪೀಠಗಳು ಹೆಚ್ಚಾದರೆ ನಮ್ಮ ಪೀಠಕ್ಕೆ ಬರುವ ಭಕ್ತರ ಸಂಖ್ಯೆ ಕಡಿಮೆಯಾಗುತ್ತದೆ ಎನ್ನುವ ಭೀತಿ ಇಲ್ಲ ಎಂದು ಪರೋಕ್ಷವಾಗಿ ಕೂಡಲಸಂಗಮ ಜಯಮೃತ್ಯುಂಜಯ ಶ್ರೀ ವಿರುದ್ಧ ಹರಿಹರ ಪಂಚಮಸಾಲಿ ಪೀಠದ ಶ್ವಾಸಗುರು ವಚನಾನಂದ ಸ್ವಾಮೀಜಿ ಕಿಡಿಕಾರಿದರು.
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಪಂಚಮಸಾಲಿ ಪೀಠದಲ್ಲಿ ಮಾತನಾಡಿದ ಅವರು, ಹರಿಹರದ ಪಂಚಮಸಾಲಿ ಪೀಠ 20 ವರ್ಷಗಳಿಂದ ಸಂಘಟನೆ ಮಾಡಿಕೊಂಡು ಬಂದಿದೆ. ವೀರಶೈವ ಪಂಚಮಸಾಲಿ ಒಕ್ಕೂಟ ಈಗಾಗಲೇ ಇದೆ. ಪಂಚಮಸಾಲಿ ಸಮಾಜದವರು ಮತಾಂತರ ಆಗುತ್ತಿದ್ದಾರೆ. ಧಾರ್ಮಿಕವಾಗಿ ಸಂಘಟನೆಯಾಗಬೇಕು ಎಂದು ಸಂಘಟನೆ ಮಾಡಿಕೊಂಡಿದ್ದಾರೆ. ಮೂರನೇ ಪೀಠದ ಗೊಂದಲಗಳ ಬಗ್ಗೆ ಕೆಲವರು ಮಾತನಾಡುತ್ತಿದ್ದಾರೆ ಎಂದು ವಿರೋಧ ವ್ಯಕ್ತಪಡಿಸಿದರು. ಇದನ್ನೂ ಓದಿ: ಸತ್ಯೇಂದ್ರ ಜೈನ್ರನ್ನು ಬಂಧಿಸಲು ಇಡಿ ಯೋಜನೆ ರೂಪಿಸುತ್ತಿದೆ: ಕೇಜ್ರಿವಾಲ್
ಮೂರನೇ ಪೀಠದ ಒಕ್ಕೂಟದ ಅಧ್ಯಕ್ಷರು ಕೂಡ ನಮ್ಮ ಪೀಠಕ್ಕೆ ಬಂದಿದ್ದರು. ಅವರೆಲ್ಲರೂ ಹೇಳಿದ್ದು, ಪಂಚಮಸಾಲಿ ಸಮಾಜದ ಮೂಲ ಪೀಠ ಎಂದರೆ ಅದು ಹರಿಹರದ ಪಂಚಮಸಾಲಿ ಪೀಠ ಎಂದು. ಮೂರನೇ ಪೀಠದ ನಿರ್ಮಾಣಕ್ಕೆ ನಿಮ್ಮ ಸಹಕಾರ ಬೇಕು ಎಂದು ಕೇಳಿದ್ದರು. ನಾವು ಸಹಕಾರ ಕೊಡುತ್ತೇವೆ ಎಂದು ವಿವರಿಸಿದರು.
ಪೀಠಗಳು ಹೆಚ್ಚಾದರೆ ನಮ್ಮ ಸಮಾಜ ಹೆಚ್ಚು ಸಂಘಟನೆಯಾಗುತ್ತದೆ. ಅಯಾ ಭಾಗದಲ್ಲಿ ನಮ್ಮ ಸ್ವಾಮಿಗಳು ಇದ್ದರೆ ಜನರು ಸಂಘಟಕರಾಗುತ್ತಾರೆ. ಅವರು ಕೇಳಿದ್ದಕ್ಕೆ ನಮ್ಮ ಸಂಪೂರ್ಣ ಬೆಂಬಲವನ್ನು ನೀಡಿದ್ದೇವೆ. ಅಲ್ಲದೆ ಮುರುಗೇಶ್ ನಿರಾಣಿ ಅವರನ್ನು ಪೀಠಕ್ಕಾಗಿ ಉಪಯೋಗಿಸಿಕೊಂಡಿದ್ದಾರೆ ಎಂದು ಶ್ರೀ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
ಮುರುಗೇಶ್ ನಿರಾಣಿ ಅವರು ತಮ್ಮ ಸ್ವಾರ್ಥಕ್ಕಾಗಿ ಪೀಠಗಳನ್ನು ಬಳಸಿಲ್ಲ. ನಮ್ಮ ಸಮಾಜದ ನಾಲ್ಕು ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿದ್ದಾರೆ. ಸುಖಾಸುಮ್ಮನೆ ನಿರಾಣಿ ಅವರ ಮೇಲೆ ಆರೋಪ ಸರಿಯಲ್ಲ ಎಂದು ನಿರಾಣಿ ಪರ ಬ್ಯಾಟಿಂಗ್ ಬೀಸಿದರು. ಇದನ್ನೂ ಓದಿ: ಖಾಸಗಿ ಬಸ್ ಮಾಲೀಕ ನಾಪತ್ತೆ- ಸೇತುವೆ ಬಳಿ ಕಾರು, ಫೋನ್ ಪತ್ತೆ
ಪಾದಯಾತ್ರೆ ಹೋರಾಟ ಮಾಡಿದ್ದೀವಿ ಅಂತ ಪದೇ ಪದೇ ನಾವು ಹೇಳಿಲ್ಲ. ಸಮಾಜಕ್ಕೋಸ್ಕರ ಹೋರಾಟ ಮಾಡುವುದು ಅವರ ಕರ್ತವ್ಯ. ಆದರೆ ಅದನ್ನೇ ಹೇಳಿಕೊಳ್ಳುತ್ತಾ ಹೋಗುವುದಲ್ಲ. ನಾವು ಈಗಾಗಲೇ ಮೀಸಲಾತಿ ಬಗ್ಗೆ ನ್ಯಾಯಬದ್ಧವಾಗಿ ಹೋರಾಟ ಮಾಡುತ್ತಿದ್ದೇವೆ ಎಂದ ಆಕ್ರೋಶ ವ್ಯಕ್ತಪಡಿಸಿದರು.
ದಾವಣಗೆರೆ: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಪತನವಾಗಿ ಬಿಜೆಪಿ ಸರ್ಕಾರ ಬಂದಾಗಿನಿಂದಲೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಒಂದಲ್ಲೊಂದು ಸಮಸ್ಯೆ ಬರುತ್ತಲೇ ಇವೆ. ಅದರಲ್ಲೂ ಸಚಿವ ಸ್ಥಾನ ತಮ್ಮ ಸಮಾಜದವರಿಗೆ ನೀಡಿ ಎಂದು ಅಯಾ ಸಮಾಜದ ಸ್ವಾಮೀಜಿಗಳು ಒತ್ತಾಯಿಸುತ್ತಿದ್ದಾರೆ. ಇದರಿಂದಾಗಿ ಪಕ್ಷ ಬಿಟ್ಟು ಬಿಜೆಪಿ ಪಕ್ಷ ಸೇರಿದ 15 ಜನರಿಗೆ ಸಚಿವ ಸ್ಥಾನ ನೀಡಬೇಕೋ ಮತ್ಯಾರಿಗೆ ಸಚಿವ ಸ್ಥಾನ ನೀಡಬೇಕು ಎನ್ನುವ ಗೊಂದಲದಲ್ಲಿ ಸಿಎಂ ಯಡಿಯೂರಪ್ಪನವರು ಇದ್ದಾರೆ. ಇದೇ ವಿಚಾರವಾಗಿ ಸಿಎಂ ಇಂದು ಪಂಚಮಸಾಲಿ ಮಠದ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆಯೇ ಸ್ವಾಮೀಜಿಗಳ ಮೇಲೆಯೇ ಗರಂ ಆದ ಪ್ರಸಂಗ ನಡೆಯಿತು.
ದಾವಣಗೆರೆ ಜಿಲ್ಲೆಯ ಹರಿಹರದ ಪಂಚಮಸಾಲಿ ಗುರುಪೀಠ ಹರ ಜಾತ್ರೆಯಲ್ಲಿ ಇಂದು ಸಿಎಂ ಯಡಿಯೂರಪ್ಪ ಅವರು ಕೆಂಡಾಮಂಡಲವಾದ ಪ್ರಸಂಗ ನಡೆಯಿತು. ಮೊದಲು ಮಾತನಾಡಿದ ವಚನಾನಂದ ಶ್ರೀಗಳು, ನೀವು ಪವರ್ ಫುಲ್ ಮುಖ್ಯಮಂತ್ರಿಯಾಗಿರುವುದರಿಂದ ಪಂಚಮಸಾಲಿ ಸಮಾಜಕ್ಕೆ ಮೂರು ಜನ ಸಚಿವರನ್ನಾಗಿ ಮಾಡಬೇಕು. ಪ್ರಥಮ ಪ್ರಾಶಸ್ತ್ಯವನ್ನು ಮುರುಗೇಶ್ ನಿರಾಣಿಗೆ ಕೊಡಬೇಕು. ಇಲ್ಲದಿದ್ದರೆ ಸಮಾಜ ನಿಮ್ಮನ್ನು ಕೈಬಿಡುತ್ತದೆ ಎಂದು ಹೇಳಿದರು.
ಶ್ರೀಗಳ ಹೇಳಿಕೆಯಿಂದ ಕೆಂಡಾಮಂಡಲವಾದ ಸಿಎಂ, ನೀವು ಹೀಗೆ ಮಾತನಾಡಿದರೆ ನಾನು ಎದ್ದು ಹೋಗುತ್ತೇನೆ ಎಂದು ಗುಡುಗಿದರು. ಆಗ ಶ್ರೀಗಳು ಸಮಾಧಾನದ ಮಾತನಾಡಿ, ನಾವು ಸತ್ಯವನ್ನೇ ಹೇಳುತ್ತಿದ್ದೇವೆ. ಕುಳಿತುಕೊಳ್ಳಿ ಎಂದು ಹೇಳಿದರು. ಆದರೆ ಇದಕ್ಕೆ ಒಪ್ಪದ ಸಿಎಂ, ದಯವಿಟ್ಟು ಕ್ಷಮಿಸಿ, ತಾವು ಈ ಮಾತು ಆಡಬಾರದು. ನಿಮ್ಮ ಬಾಯಲ್ಲಿ ಈ ತರ ಮಾತುಗಳು ಬರಬಾರದು. ಹೀಗೆ ಮಾತನಾಡಿದರೆ ನಾನು ಕೆಲಸ ಮಾಡುವುದಕ್ಕೆ ಆಗುವುದಿಲ್ಲ. ನೀವು ಸಲಹೆ ಕೊಡಬಹುದು ಅಷ್ಟೇ ಎಂದರು.
ಸಿಎಂ ಮಾತಿಗೆ ಪ್ರತಿಕ್ರಿಯಿಸಿದ ಸ್ವಾಮೀಜಿಗಳು, ನಾವು ಸಲಹೆ ಕೊಡುತ್ತಿದ್ದೇವೆ ಎಂದರು. ಆಗ ಸಿಎಂ ಬೆದರಿಸಬೇಡಿ ಎಂದು ಗರಂ ಆದರು. ಈ ವೇಳೆ ಸ್ವಾಮೀಜಿಗಳು, ನಾವು ಬೆದರಿಸುತ್ತಿಲ್ಲ. ನಮ್ಮ ಹಕ್ಕು, ನ್ಯಾಯವನ್ನು ಕೇಳುತ್ತಿದ್ದೇವೆ ಎಂದು ಗುಡುಗಿದರು. ಆಗ ಸಿಎಂ ಶಾಂತರಾಗಿ ಆಸನದ ಮೇಲೆ ಕುಳಿತರು. ಮತ್ತೆ ಮಾತು ಮುಂದುವರಿಸಿದ ಶ್ರೀಗಳು, ಇದು ನಮ್ಮ ಬೇಡಿಕೆಯಲ್ಲ. ಸಮಾಜದ ಕೂಗು. ನೀವು ಸಮಾಧಾನದಿಂದ ಕೇಳಬೇಕು ಎಂದರು.
ಬಳಿಕ ಭಾಷಣ ಮಾಡಿದ ಸಿಎಂ ಯಡಿಯೂರಪ್ಪ ಅವರು, ನಾನು ಕುರ್ಚಿಗೆ ಅಂಟಿಕೊಂಡು ಕೂತ್ತಿಲ್ಲ. ಬೇಕಾದ್ರೆ ನಾಳೆಯೇ ರಾಜೀನಾಮೆ ಕೊಡುತ್ತೇನೆ. ನನ್ನ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು ಎಂದು ನೇರವಾಗಿಯೇ ಅಸಮಾಧಾನ ಹೊರ ಹಾಕಿದರು.
ಎಲ್ಲಾ ಸಮಾಜದ ಶ್ರೀಗಳು ದಯವಿಟ್ಟು ಅರ್ಥ ಮಾಡಿಕೊಳ್ಳಬೇಕು. ಹದಿನೇಳು ಶಾಸಕರು ರಾಜೀನಾಮೆ ನೀಡಿ ವನವಾಸ ಅನುಭವಿಸಿದ್ದಾರೆ. ಅವರಿಗೆ ನ್ಯಾಯ ನೀಡಬೇಕಾಗಿದೆ, ದಯವಿಟ್ಟು ನನ್ನ ಪರಿಸ್ಥಿತಿ ಅರ್ಥ ಮಾಡಿಕೊಳ್ಳಿ. ನನಗೆ ಅಧಿಕಾರದ ಆಸೆ ಇಲ್ಲ. ಬೇಕಿದ್ದರೆ ರಾಜೀನಾಮೆ ಕೊಟ್ಟು ಬರುತ್ತೇನೆ. ಹದಿನೇಳು ಶಾಸಕರ ಋಣ ತೀರಿಸಬೇಕಿದೆ. ಹೀಗಾಗಿ ಎಲ್ಲಾ ಸ್ವಾಮೀಜಿಗಳನ್ನ ಸೇರಿಸೋಣ, ನನ್ನ ಪರಿಸ್ಥಿತಿ ನಿಮಗೆಲ್ಲರಿಗೂ ಅರ್ಥ ಮಾಡಿಸುತ್ತೇನೆ ಎಂದು ಬೇಸರ ಹೊರಹಾಕಿದರು.
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ಈಗ ಲಿಂಗಾಯತ ಸಮುದಾಯದ ಸಂಕಟ ಹೆಚ್ಚಾಗಿದೆ. ಕಾಂಗ್ರೆಸ್, ಜೆಡಿಎಸ್ನಿಂದ ಬಂದು ಗೆದ್ದವರಿಗೆ ಇನ್ನೂ ಮಂತ್ರಿ ಸ್ಥಾನ ಕೊಡೋದಕ್ಕೆ ಆಗಿಲ್ಲ. ಹೈಕಮಾಂಡ್ ಭೇಟಿ ಮಾಡೋದಕ್ಕೆ ಟೈಮ್ ಕೂಡ ಸಿಕ್ಕಿಲ್ಲ. ಆದರೆ ಪಕ್ಷದೊಳಗಿನ ಲಿಂಗಾಯತ ಸಮುದಾಯದ ಆಪ್ತರೇ ಸಚಿವ ಸ್ಥಾನಕ್ಕೆ ಕ್ಯೂ ನಿಂತಿದ್ದಾರೆ. ಈ ನಡುವೆ ಪಂಚಮಸಾಲಿ ಸಮುದಾಯಕ್ಕೆ ಮೂರು ಸಚಿವ ಸ್ಥಾನಗಳನ್ನಾದ್ರೂ ಕೊಡಬೇಕು ಅಂತ ಪಂಚಮಸಾಲಿ ಸಮುದಾಯದ ವಚನಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ.
ನಗರದ ಖಾಸಗಿ ಹೋಟೆಲ್ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯ 15 ಶಾಸಕರನ್ನ ಕೊಟ್ಟಿದೆ. ಬಿಜೆಪಿಯಲ್ಲಿ 15 ಶಾಸಕರು ಪಂಚಮಸಾಲಿ ಸಮುದಾಯದವರು ಇದ್ದಾರೆ. ಕನಿಷ್ಠ ಮೂವರು ಸಚಿವರನ್ನಾಗಿ ಮಾಡಬೇಕು. ಈಗಾಗಲೇ ಒಂದು ಸಚಿವ ಸ್ಥಾನ ಕೊಟ್ಟಿದ್ದಾರೆ. ಆದರೆ 5 ಶಾಸಕರಿಗೆ ಒಬ್ಬರಂತೆಯಾದ್ರೂ 3 ಸಚಿವ ಸ್ಥಾನ ಕೊಡಬೇಕು ಅಂತ ಆಗ್ರಹಿಸಿದರು.
ಅಷ್ಟೇ ಅಲ್ಲ ಉಳಿದ ಎರಡು ಸಚಿವ ಸ್ಥಾನದಲ್ಲಿ ಮುರುಗೇಶ್ ನಿರಾಣಿ ಅವರಿಗೆ ಸಚಿವ ಸ್ಥಾನ ಕೊಡ್ಲೇಬೇಕು. ನಮ್ಮ ಸಮುದಾಯದಿಂದ ಹೆಚ್ಚು ಶಾಸಕರು ಗೆದ್ದಿದ್ದಾರೆ ಎಂದು ಕೇಳ್ತಿದ್ದೀವಿ. ಇದರಲ್ಲಿ ಬೇರೆ ಸಮುದಾಯಕ್ಕೆ ಅನ್ಯಾಯ ಎಲ್ಲಿ ಬಂತು..? ಹೆಚ್ಚು ಸ್ಥಾನ ಗೆದ್ದವರಿಗೆ ಸಚಿವ ಸ್ಥಾನ ಕೊಡದಿರೋದು ಸಾಮಾಜಿಕ ನ್ಯಾಯನಾ..? ಅಂತ ಪ್ರಶ್ನೆ ಮಾಡಿದ್ರು. ನಾವು ಮುಖ್ಯಮಂತ್ರಿಗಳ ಮನೆಬಾಗಿಲಿಗೆ ಹೋಗಲ್ಲ, ಧರಣಿ ಮಾಡುವಷ್ಟು ಕೆಳಮಟ್ಟಕ್ಕೆ ಇಳಿಯಲ್ಲ. ಆದರೆ ಅವರೇ ನಮ್ಮ ಮಠಕ್ಕೆ ಬರುವಂತೆ ಮಾಡುತ್ತೇವೆ ಎಂದು ಮಾರ್ಮಿಕವಾಗಿ ಹೇಳಿದ್ದು ವಿಶೇಷವಾಗಿತ್ತು.
ಇನ್ನೊಂದೆಡೆ ಸುದ್ದಿಗೋಷ್ಟಿಯಲ್ಲಿದ್ದ ಶಾಸಕ ಮುರುಗೇಶ್ ನಿರಾಣಿ, ನಾನು ಸಚಿವನಾಗಬೇಕು ಎಂದು ಶಾಸಕನಾಗಿ ಆಯ್ಕೆಯಾಗಿಲ್ಲ. ನಮ್ಮ ಪಕ್ಷದ ಮುಖಂಡರು ಹಾಗೂ ಜನಾಂಗದ ಪ್ರಮುಖರು ಚರ್ಚಿಸಿ ಯಾವ ನಿರ್ಧಾರ ಕೈಗೊಂಡರೂ, ಯಾವ ಜವಾಬ್ದಾರಿ ಕೊಟ್ಟರೂ ಅದನ್ನು ಒಪ್ಪಿಕೊಳ್ಳುತ್ತೇನೆ ಎಂದು ತಿಳಿಸಿದರು.