Tag: Vaikunta Ekadashi

  • ವೈಕುಂಠ ಏಕಾದಶಿ – ಮಂತ್ರಾಲಯ ಶ್ರೀಗಳಿಂದ ವೆಂಕಟೇಶ್ವರ ಸ್ವಾಮಿಗೆ ವಿಶೇಷ ಪೂಜೆ

    ವೈಕುಂಠ ಏಕಾದಶಿ – ಮಂತ್ರಾಲಯ ಶ್ರೀಗಳಿಂದ ವೆಂಕಟೇಶ್ವರ ಸ್ವಾಮಿಗೆ ವಿಶೇಷ ಪೂಜೆ

    ರಾಯಚೂರು: ವೈಕುಂಠ ಏಕಾದಶಿ ಹಿನ್ನೆಲೆ ಮಂತ್ರಾಲಯದ (Mantralaya) ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಗುರು ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ವಿಶೇಷ ಪೂಜೆ ಸಲ್ಲಿಸಿದರು.ಇದನ್ನೂ ಓದಿ: ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗಳಿಗೆ ಬಾಂಬ್ ಬೆದರಿಕೆ – ವಿದ್ಯಾರ್ಥಿ ಅರೆಸ್ಟ್

    ರಾಘವೇಂದ್ರ ಸ್ವಾಮಿಗಳು ಸ್ಥಾಪಿಸಿರುವ ದೇಗುಲದಲ್ಲಿ ತುಳಸಿ ಅರ್ಚನೆ ಮತ್ತು ಪುಷ್ಪಾರ್ಚನೆ ನೆರವೇರಿಸಿ ವೆಂಕಟೇಶ್ವರ ಸ್ವಾಮಿಗೆ ಶ್ರೀಗಳು ಮಂಗಳಾರತಿ ಮಾಡಿದರು. ಬಳಿಕ ವೈಕುಂಠ ದ್ವಾರವನ್ನು ಉದ್ಘಾಟಿಸಿ, ಭಕ್ತರಿಗೆ ಅನುಗ್ರಹ ಸಂದೇಶ ನೀಡಿ ಆಶೀರ್ವದಿಸಿದರು. ಅಪಾರ ಸಂಖ್ಯೆಯ ಭಕ್ತರು ತಮ್ಮ ಪ್ರಾರ್ಥನೆ ಸಲ್ಲಿಸಿ ವೈಕುಂಠ ದ್ವಾರದ ಮೂಲಕ ಪ್ರವೇಶಿಸಿ ಆಶೀರ್ವಾದ ಪಡೆದರು.

    ಇನ್ನೂ ವೈಕುಂಠ ಏಕಾದಶಿ ಹಿನ್ನೆಲೆ ರಾಯಚೂರಿನ (Raichuru) ವೆಂಕಟೇಶ್ವರ ದೇವಾಲಯಗಳಲ್ಲಿ ಬೆಳಿಗ್ಗೆಯಿಂದ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಗುತ್ತಿದೆ. ಮಂತ್ರಾಲಯ ರಸ್ತೆಯ ವೆಂಕಟೇಶ್ವರ ದೇವಾಲಯದಲ್ಲಿ ವಿಶೇಷ ಅಲಂಕಾರಗಳಿಂದ ಇಡೀ ದೇವಾಲಯವನ್ನು ಸಿಂಗಾರ ಮಾಡಲಾಗಿದೆ. ಕಲ್ಯಾಣ ಶ್ರೀನಿವಾಸನಿಗೆ ವಿಶೇಷ ಪೂಜೆ ನೆರವೇರಿಸಿ ಭಕ್ತರ ದರ್ಶನಕ್ಕೆ ಅನುವು ಮಾಡಲಾಗಿದೆ. ಬೆಳಿಗ್ಗೆ 5 ಗಂಟೆಯಿಂದ ಪೂಜೆ ಆರಂಭವಾಗಿದ್ದು, ರಾತ್ರಿ 11 ಗಂಟೆವರೆಗೂ ಭಕ್ತರಿಗೆ ದರ್ಶನ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಪಾರಾಯಣ ನಡೆಯಲಿದೆ. ಸರತಿ ಸಾಲಿನಲ್ಲಿ ನಿಂತು ಭಕ್ತರು ದರ್ಶನ ಪಡೆಯುತ್ತಿದ್ದಾರೆ.ಇದನ್ನೂ ಓದಿ: ಹೊರ ರಾಜ್ಯದ ದೇವಸ್ಥಾನಕ್ಕೆ ತೆರಳಲು ಅನುಮತಿ ನೀಡಿ – ಪವಿತ್ರಾ ಗೌಡ ಅರ್ಜಿ

  • ತಿರುಪತಿ ಕಾಲ್ತುಳಿತಕ್ಕೆ ಸಾವಿನ ಸಂಖ್ಯೆ 7ಕ್ಕೆ ಏರಿಕೆ – ಅಸ್ವಸ್ಥರ ಏರ್‌ಲಿಫ್ಟ್‌ಗೆ ಸಿಎಂ ಸೂಚನೆ

    ತಿರುಪತಿ ಕಾಲ್ತುಳಿತಕ್ಕೆ ಸಾವಿನ ಸಂಖ್ಯೆ 7ಕ್ಕೆ ಏರಿಕೆ – ಅಸ್ವಸ್ಥರ ಏರ್‌ಲಿಫ್ಟ್‌ಗೆ ಸಿಎಂ ಸೂಚನೆ

    -ಭದ್ರತಾ ವೈಫಲ್ಯ ಕುರಿತು ಅಧಿಕಾರಿಗಳಿಗೆ ಆಂಧ್ರ ಸಿಎಂ ಕ್ಲಾಸ್

    ಅಮರಾವತಿ: ತಿರುಪತಿ ಕಾಲ್ತುಳಿತ (Tirupati Stampede) ಪ್ರಕರಣದಲ್ಲಿ ಅಸ್ವಸ್ಥಗೊಂಡವರನ್ನು ಏರ್‌ಲಿಫ್ಟ್ ಮೂಲಕ ರವಾನಿಸುವಂತೆ ಆಂಧ್ರ ಸಿಎಂ ಎನ್.ಚಂದ್ರಬಾಬು ನಾಯ್ಡು ಸೂಚಿಸಿದ್ದಾರೆ. ಕಾಲ್ತುಳಿತದಲ್ಲಿ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

    ಆಂಧ್ರಪ್ರದೇಶ ಸಿಎಂ ಅವರು ಡಿಜಿಪಿ, ಟಿಟಿಡಿ ಇಒ, ಜಿಲ್ಲಾಧಿಕಾರಿ, ಎಸ್ಪಿ ಅವರೊಂದಿಗೆ ಕಾಲ್ತುಳಿತದ ಪರಿಸ್ಥಿತಿಯನ್ನು ಪರಿಶೀಲನೆ ನಡೆಸಿದ್ದು, ಅಧಿಕಾರಿಗಳ ನಿರ್ಲಕ್ಷ್ಯದ ಬಗ್ಗೆ ಕೆಂಡಾಮಂಡಲರಾಗಿ, ಒಂದೇ ಒಂದು ಜೀವಹಾನಿಯಾಗಬಾರದೆಂದು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಜೊತೆಗೆ ಸಾವಿನ ಸಂಖ್ಯೆ ಹೆಚ್ಚಾಗುವುದನ್ನು ತಡೆಯಲು ಸಂತ್ರಸ್ತರಿಗೆ ಉತ್ತಮ ಚಿಕಿತ್ಸೆಗೆ ಸೂಚನೆ ನೀಡಿದ್ದಾರೆ.ಇದನ್ನೂ ಓದಿ: ತಿರುಪತಿಯಲ್ಲಿ ಭಾರಿ ಅನಾಹುತ – ಕಾಲ್ತುಳಿತಕ್ಕೆ 4 ಮಂದಿ ಸಾವು

    ಕಾಲ್ತುಳಿತ ಘಟನೆಯ ಬಗ್ಗೆ ಮುಖ್ಯಮಂತ್ರಿ ತೀವ್ರ ಆಘಾತ ವ್ಯಕ್ತಪಡಿಸಿದ್ದು, ಜ.10ರಿಂದ ಆರಂಭವಾಗುವ 10 ದಿನಗಳ ವೈಕುಂಠ ದ್ವಾರ ದರ್ಶನಕ್ಕೆ ದೇಶ-ವಿದೇಶಗಳಿಂದ ನೂರಾರು ಭಕ್ತರು ಆಗಮಿಸಿದ್ದರು. ದರ್ಶನಕ್ಕೆ ಬಂದ ಭಕ್ತರು ಪ್ರಾಣ ಕಳೆದುಕೊಂಡಿರುವುದು ಅತೀವ ದುಃಖ ತಂದಿದೆ. ಜೊತೆಗೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ ಎಂದು ಗೊತ್ತಿದ್ದರೂ ಅದಕ್ಕೆ ತಕ್ಕಂತೆ ವ್ಯವಸ್ಥೆ ಮಾಡಲು ಏಕೆ ಸಾಧ್ಯವಾಗಲಿಲ್ಲ ಎಂದು ಪ್ರಶ್ನಿಸಿದ್ದಾರೆ.

    ಏನಿದು ಪ್ರಕರಣ?
    ತಿರುಪತಿಯಲ್ಲಿ ನೂರಾರು ಭಕ್ತರು ವೈಕುಂಠ ದ್ವಾರ ದರ್ಶನಕ್ಕಾಗಿ ಟಿಕೆಟ್‌ಗಾಗಿ ಮುಗಿಬಿದ್ದಿದ್ದರಿಂದ ಈ ಕಾಲ್ತುಳಿತ ಉಂಟಾಗಿದ್ದು, ಹಲವರು ಸಾವನ್ನಪ್ಪಿದ್ದಾರೆ. ತಿರುಪತಿಯ ವಿಷ್ಣು ನಿವಾಸದ ಬಳಿ ಇರುವ ತಿರುಮಲ ಶ್ರೀವಾರಿ ವೈಕುಂಠ ದ್ವಾರದಲ್ಲಿ ಬುಧವಾರ ರಾತ್ರಿ ಈ ಅವಘಡ ಸಂಭವಿಸಿದೆ.ಇದನ್ನೂ ಓದಿ: ದೆಹಲಿ ಚುನಾವಣೆಗೆ ಆಪ್‌ಗೆ ಟಿಎಂಸಿ ಬೆಂಬಲ – ಧನ್ಯವಾದ ಎಂದ ಕೇಜ್ರಿವಾಲ್

  • ಇಸ್ಕಾನ್‍ನಲ್ಲಿ ಅದ್ಧೂರಿಯ ವೈಕುಂಠ ಏಕಾದಶಿ ಆಚರಣೆ

    ಇಸ್ಕಾನ್‍ನಲ್ಲಿ ಅದ್ಧೂರಿಯ ವೈಕುಂಠ ಏಕಾದಶಿ ಆಚರಣೆ

    ಬೆಂಗಳೂರು: ಇಂದು ವೈಕುಂಠ ಏಕಾದಶಿ (Vaikunta Ekadashi) ಹಿನ್ನೆಲೆಯಲ್ಲಿ ಬೆಂಗಳೂರಿನ ಇಸ್ಕಾನ್ ದೇವಸ್ಥಾನ (Iskon Temple) ದಲ್ಲಿ ವಿಶೇಷ ಪೂಜೆಗೆ ಚಾಲನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಭಕ್ತರು ನೂರಾರು ಸಂಖ್ಯೆಯಲ್ಲಿ ಸಾಲುಗಟ್ಟಿ ನಿಂತಿದ್ದಾರೆ.

    ಇಂದು ರಾಜ್ಯದೆಲ್ಲೆಡೆ ವೈಕುಂಠ ಏಕಾದಶಿಯ ಸಂಭ್ರಮ. ಅಂತೆಯೇ ಇಸ್ಕಾನ್‍ನಲ್ಲಿ ಅದ್ಧೂರಿಯ ವೈಕುಂಠ ಏಕಾದಶಿ ಆಚರಣೆ ಮಾಡಲಾಯಿತು. ಇಸ್ಕಾನ್ ದೇವಸ್ಥಾನದಲ್ಲಿ ರಾತ್ರಿ 3ಗಂಟೆಯಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ನಡೆಯುತ್ತಿವೆ. ಕೊರೊನಾ ಆತಂಕದ ನಡುವೆಯೂ ವೈಕುಂಠ ಏಕಾದಶಿ ಸಂಭ್ರಮ ಮನೆ ಮಾಡಿದೆ.

    ಬೆಂಗಳೂರಿನ ಇಸ್ಕಾನ್ ನಲ್ಲಿ ಇಂದು ಒಂದು ಲಕ್ಷಕ್ಕೂ ಹೆಚ್ಚು ಭಕ್ತರ ದರ್ಶನ ಸಾಧ್ಯತೆ ಇದೆ. ಇಂದು ರಾತ್ರಿ 11 ರವರಗೂ ಇಸ್ಕಾನ್ ನಲ್ಲಿ ವಿಶೇಷ ಪೂಜೆಗಳು ನಡೆಯಲಿದೆ. ಈಗಾಗಲೇ ದೇವರ ದರ್ಶನಕ್ಕೆ ಭಕ್ತರು ಆಗಮಿಸುತ್ತಿದ್ದಾರೆ. ಇದನ್ನೂ ಓದಿ: ಹೊಸ ವರ್ಷಕ್ಕೆ ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ರು ರಾಧಿಕಾ ಪಂಡಿತ್

    ಕೃಷ್ಣನ ದರ್ಶನ ಪಡೆದ ಬಳಿಕ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ಮತನಾಡಿ, ಪ್ರತಿವರ್ಷದಂತೆ ವೈಕುಂಠ ಏಕಾದಶಿಯಂದು ದೇವರ ದರ್ಶನ ಮಾಡಿದ್ದೇವೆ. ಇಸ್ಕಾನ್ ನಲ್ಲಿ ದೇಗುಲದಲ್ಲಿ ಓಡಾಡಿದ್ರೇ ನೆಮ್ಮದಿ ಸಿಗುತ್ತದೆ. ಅಮಿತ್ ಶಾ ಬಂದು ಹೋದ ಎಂದಿನಂತೆ ನಡೆಯುತ್ತಿದೆ. ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿಗಳ ಪರಮಾಧಿಕಾರ. ಎಲೆಕ್ಷನ್ ಎಪ್ರಿಲ್ ಗೆ ಆಗುತ್ತೆ ಎಂದರು.

    ಅರವಿಂದ ಲಿಂಬಾವಳಿ ಹೆಸರು ಬರೆದು ಡೆತ್ ನೋಟ್ ಪ್ರಕರಣದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ನಾನು ಕ್ಷೇತ್ರದ ಕಾರ್ಯಕ್ರಮದಲ್ಲಿ ಬ್ಯುಸಿ ಇದ್ದೆ ಎಂದು ಹೇಳಿದರು.

    Live Tv
    [brid partner=56869869 player=32851 video=960834 autoplay=true]

  • ಕೊರೊನಾ ಆತಂಕದ ಮಧ್ಯೆ ವೈಕುಂಠ ಏಕಾದಶಿ- ಹೊಸ ವರ್ಷದಲ್ಲಿ ದೇವಸ್ಥಾನಕ್ಕೆ ಭಕ್ತಸಾಗರ

    ಕೊರೊನಾ ಆತಂಕದ ಮಧ್ಯೆ ವೈಕುಂಠ ಏಕಾದಶಿ- ಹೊಸ ವರ್ಷದಲ್ಲಿ ದೇವಸ್ಥಾನಕ್ಕೆ ಭಕ್ತಸಾಗರ

    ಬೆಂಗಳೂರು: ಹೊಸ ವರ್ಷ (New Year 2023) ಒಂದೆಡೆಯಾದರೆ, ಮತ್ತೊಂದೆಡೆ ವೈಕುಂಠ ಏಕಾದಶಿ (Vaikunta Ekadashi). ಬೆಂಗಳೂರಿನ ದೇವಸ್ಥಾನಗಳು ಮದುವಣಗಿತ್ತಿಯಂತೆ ಸಿಂಗಾರಗೊಂಡಿವೆ. ಕಳೆದ 2 ವರ್ಷದಿಂದ ಕೊರೊನಾ ಹಿನ್ನೆಲೆ ವೈಕುಂಠ ಏಕಾದಶಿಯನ್ನ ಸಂಭ್ರಮ, ಸಡಗರದಿಂದ ಆಚರಿಸಲು ಆಗಿರಲಿಲ್ಲ. ಇದೀಗ ಕೊಂಚ ಕೊರೊನಾ ಆತಂಕದ ಮಧ್ಯೆ ವೈಕುಂಠ ಏಕಾದಶಿ ನಡೆಯಲಿದೆ. ದೇವಾಲಯಗಳಿಗೆ ಸಾವಿರಾರು ಭಕ್ತಾದಿಗಳ ದಂಡೇ ಹರಿದು ಬರಲಿದೆ.

    ಹೊಸ ವರ್ಷ ಹಿನ್ನೆಲೆ ನಿನ್ನೆ ವೈಯಾಲಿಕಾವಲ್‍ನ ಟಿಟಿಡಿ ದೇವಸ್ಥಾನಕ್ಕೆ 25 ಸಾವಿರಕ್ಕೂ ಹೆಚ್ಚು ಭಕ್ತರು ಭೇಟಿ ನೀಡಿದ್ರು. ತಿರುಪತಿಯಿಂದ ಲಾಡು ಕಡಿಮೆ ಪ್ರಮಾಣದಲ್ಲಿ ಬಂದ ಹಿನ್ನೆಲೆ 10 ಸಾವಿರ ಲಾಡು ವಿತರಣೆ ಮಾಡಿದ್ರು. ಇಂದು ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಬೆಳಗ್ಗೆ 3 ಗಂಟೆಯಿಂದ ರಾತ್ರಿ 12 ಗಂಟೆವರೆಗೂ ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಭಕ್ತಾದಿಗಳಿಗೆ ಪಾಸ್‍ಗಳನ್ನು ವಿತರಿಸಲಾಗಿದೆ. ಇದನ್ನೂ ಓದಿ: ಕೋಲಾರ ಸಂಸದ ಮುನಿಸ್ವಾಮಿಗೆ ಮುತ್ತು ಕೊಟ್ಟ ಮಾಜಿ ಸಚಿವ ವರ್ತೂರು ಪ್ರಕಾಶ್

    ನಿನ್ನೆ ರಾಜಾಜಿ ನಗರದ ಇಸ್ಕಾನ್‍(Iskon) ನ ರಾಧಾಕೃಷ್ಣ ಮಂದಿರಕ್ಕೆ ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಆಗಮಿಸಿ ಶ್ರೀಕೃಷ್ಣ ಪರಮಾತ್ಮನನ್ನು ಕಣ್ತುಂಬಿಕೊಂಡರು. ಇಂದು ಕೂಡ ಒಂದೂವರೆ ಲಕ್ಷ ಜನ ವೈಕುಂಠ ಏಕಾದಶಿಗೆ ಬರೋ ನಿರೀಕ್ಷೆ ಇದೆ. ಬೆಳಗ್ಗೆ 3 ಗಂಟೆಯಿಂದ ಪೂಜೆಗಳು ನಡೆಯಲಿವೆ. ಸುಪ್ರಭಾತ ಸೇವೆ, ಅರ್ಚನ ಸೇವೆ, ದ್ವಾರ ಸೇವೆ ನಡೆಯುತ್ತವೆ. ಬೆಳಗ್ಗೆ 8 ಗಂಟೆಯಿಂದ ಸಾರ್ವಜನಿಕರು ದರ್ಶನಕ್ಕೆ ಬರಬಹುದು. ರಾತ್ರಿ 11 ಗಂಟೆವರೆಗೂ ದರ್ಶನ ಇರುತ್ತದೆ. ಬೆಳಗ್ಗೆ ಮತ್ತು ಸಂಜೆ ಕಲ್ಯಾಣೋತ್ಸವ ಇರುತ್ತದೆ.

    ಕಳೆದ 2 ವರ್ಷದಿಂದ ಕೊರೊನಾ (Corona Virus) ಹಿನ್ನೆಲೆ ವೈಕುಂಠ ಏಕಾದಶಿಯನ್ನ ಸಂಭ್ರಮ, ಸಡಗರದಿಂದ ಆಚರಿಸಲು ಆಗಿರಲಿಲ್ಲ. ಇದೀಗ ಕೊಂಚ ಕೊರೋನಾ ಆತಂಕದ ಮಧ್ಯೆ ವೈಕುಂಠ ಏಕಾದಶಿ ನಡೆಯಲಿದೆ. ದೇವಾಲಯಗಳಿಗೆ ಸಾವಿರಾರು ಭಕ್ತಾದಿಗಳ ದಂಡೇ ಹರಿದು ಬರಲಿದೆ. ಇದನ್ನೂ ಓದಿ: ಮಹದಾಯಿ ಯೋಜನೆಗೆ ಡಿಪಿಆರ್‌ ಆಗಿದೆ; ಕಾಂಗ್ರೆಸ್‌ ಟೀಕೆಗೆ ತಲೆಕೆಡಿಸಿಕೊಳ್ಳಲ್ಲ – ಸಿಎಂ

    Live Tv
    [brid partner=56869869 player=32851 video=960834 autoplay=true]

  • ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಆಚರಣೆ – ಜಗತ್ ರಕ್ಷಕನ ದರ್ಶನಕ್ಕೂ ಕೊರೊನಾ ಅಡ್ಡಗಾಲು

    ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಆಚರಣೆ – ಜಗತ್ ರಕ್ಷಕನ ದರ್ಶನಕ್ಕೂ ಕೊರೊನಾ ಅಡ್ಡಗಾಲು

    ಬೆಂಗಳೂರು: ಇಂದು ವೈಕುಂಠ ಏಕಾದಶಿ ಸಂಭ್ರಮವಾಗಿದ್ದು, ಸ್ವರ್ಗದ ಬಾಗಿಲು ತೆರೆಯುತ್ತದೆ ಎಂಬ ನಂಬಿಕೆ. ಎಲ್ಲೆಲ್ಲೂ ಗೋವಿಂದ..ಗೋವಿಂದ ನಾಮಸ್ಮರಣೆ ಕೇಳಿಬರುತ್ತಿದೆ. ಆದರೆ ದೇಗುಲಗಳಲ್ಲಿ ದರ್ಶನಕ್ಕೂ ಕೊರೊನಾ ಅಡ್ಡಗಾಲು ಹಾಕಿದೆ.

    ಕೊರೊನಾದಿಂದಾಗಿ ಬಹುತೇಕ ದೇವಾಲಯಗಳಲ್ಲಿ ಭಕ್ತರಿಗೆ ನಿಷೇಧ ಹೇರಲಾಗಿದೆ. ಇಸ್ಕಾನ್ ದೇಗುಲದಲ್ಲಿ ಭಕ್ತರಿಗೆ ನಿರ್ಬಂಧ ವಿಧಿಸಲಾಗಿದೆ. ಭಕ್ತರಿಗೆ ಆನ್‍ಲೈನ್ ಮೂಲಕ ಶ್ರೀವಾರಿಯ ದರ್ಶನ ಭಾಗ್ಯ ಕಲ್ಪಿಸಲಾಗಿದೆ. ಬೆಂಗಳೂರಿನ ಟಿಟಿಡಿ ದೇಗುಲದಲ್ಲಿ ಬೆಳಗ್ಗೆಯಿಂದಲೇ ಭಕ್ತರ ಸಾಲುಗಟ್ಟಿ ನಿಂತಿದ್ದಾರೆ. ಈ ಬಾರಿ 10 ದಿನಗಳ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಗಿದೆ.

    ಮಲ್ಲೇಶ್ವರಂನಲ್ಲಿರೋ ತಿರುಪತಿ ತಿರುಮಲ ದೇವಸ್ಥಾನದ ಬಳಿ ಕೂಡ ಭಕ್ತರು ಕ್ಯೂನಲ್ಲಿ ನಿಂತಿದ್ದಾರೆ. ಕೊವೀಡ್ ಹಿನ್ನೆಲೆ ಈ ಬಾರಿ 10 ದಿನ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಒಂದೇ ದಿನ ಲಕ್ಷಾಂತರ ಭಕ್ತಾದಿಗಳು ದರ್ಶನಕ್ಕೆ ಬರುತ್ತಾರೆ. ಕೋವಿಡ್ ನಿಯಮ ಪಾಲನೆ ಮಾಡೊದಕ್ಕೆ ಆಗೋದಿಲ್ಲ ಅನ್ನೋ ಕಾರಣಕ್ಕೆ 10 ದಿನ ಭಕ್ತಾದಿಗಳ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಿಕೊಡಲಾಗಿದೆ.

    ಮಹಾಲಕ್ಷ್ಮೀ ಲೇಔಟ್ ವೆಂಕಟೇಶ್ವರ ದೇವಾಲಯದಲ್ಲಿ ಸ್ವರ್ಗದ ಬಾಗಿಲು ವ್ಯವಸ್ಥೆ ಇಲ್ಲ. ಕೋವಿಡ್ ಹಿನ್ನೆಲೆಯಲ್ಲಿ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಈವರೆಗೂ ಸಾವಿರಾರು ಭಕ್ತರು ದೇವರ ದರ್ಶನ ಮಾಡಿದ್ದಾರೆ. ಅರ್ಚನೆ, ಪ್ರಸಾದ, ತೀರ್ಥ ಹಾಗೂ ಮಂಗಳಾರತಿ ಸಹ ಕೊಡಲ್ಲ.

  • ಇನ್ಮುಂದೆ ಚಿನ್ನ ಕೊಳ್ಳೋದು ಕಷ್ಟ!

    ಇನ್ಮುಂದೆ ಚಿನ್ನ ಕೊಳ್ಳೋದು ಕಷ್ಟ!

    ಬೆಂಗಳೂರು: ಇಂದು ವೈಕುಂಠ ಏಕಾದಶಿ. ಸ್ವರ್ಗದ ಬಾಗಿಲು ತೆರೆಯೋ ಪುಣ್ಯದಿನ. ಈ ಶುಭ ಘಳಿಗೆಯಲ್ಲಿ ಬಂಗಾರ ಕೊಂಡುಕೊಳ್ಳಬೇಕು ಅನ್ನುವವರಿಗೆ ಗೋಲ್ಡ್ ಶಾಕ್ ಕೊಟ್ಟಿದೆ.

    ಹೌದು. ಹೊಸ ವರ್ಷದಿಂದ ದಿನದಿಂದ ದಿನಕ್ಕೆ ಚಿನ್ನ ಕಹಿಯಾಗುತ್ತಲೇ ಇದೆ. ಇದೇ ತಿಂಗಳ 3ರಂದು 10 ಗ್ರಾಂ ಬಂಗಾರದಲ್ಲಿ 2 ಸಾವಿರದಷ್ಟು ಹೆಚ್ಚಾಗಿತ್ತು. ವೈಕುಂಠ ಏಕಾದಶಿ ದಿನವಾದ ಇಂದು ಬೆಳಗ್ಗೆ 10 ಗ್ರಾಂ ಚಿನ್ನದಲ್ಲಿ 700 ರೂ. ಹೆಚ್ಚಾಗಿದೆ. ಇದು ಗೋಲ್ಡ್ ಲವರ್ಸ್ ಗೆ ಬಿಗ್ ಶಾಕಿಂಗ್ ನ್ಯೂಸ್ ಆಗಿದೆ.

    ಚಿನ್ನಿವಾರ ಪೇಟೆಯಲ್ಲಿ ನಿನ್ನೆ 22 ಕ್ಯಾರೆಟ್ ನ 10 ಗ್ರಾಂ ಚಿನ್ನದ ಬೆಲೆ 37,690ರೂ. ಆಗಿದ್ದರೆ, ಇಂದು 38,390 ರೂ.ಗೆ ಏರಿಕೆಯಾಗಿದೆ. ಅಂದರೆ ಒಂದೇ ದಿನ 700 ರೂ. ಹೆಚ್ಚಾಗಿದೆ. ಹಾಗೆಯೇ 24 ಕ್ಯಾರೆಟ್ 10 ಗ್ರಾಂ ಬಂಗಾರಕ್ಕೆ ನಿನ್ನೆ 41,490 ರೂ. ಇತ್ತು. ಆದರೆ ಇಂದು 42,190 ರೂ.ಗೆ ಹೆಚ್ಚಾಗಿದೆ ಅಂದರೆ ಇಲ್ಲಿಯೂ ಸಹ 700 ರೂ ಏರಿದೆ. ಇದೊಂದು ಸಾರ್ವತ್ರಿಕ ದಾಖಲೆಯಾಗಿದೆ. ಇದು ಚಿನ್ನ ಪ್ರಿಯರಿಗೆ ಸ್ಯಾಡ್ ನ್ಯೂಸ್ ಆಗಿದೆ.

    ಬೆಲೆ ಹೆಚ್ಚಳಕ್ಕೆ ಕಾರಣಗಳೇನು?
    * ಅಮೆರಿಕ ಹಾಗೂ ಇರಾನ್ ನಡುವೆ ಏರ್ಪಿಟ್ಟಿರೋ ಸಂಘರ್ಷ.
    * ಹೂಡಿಕೆದಾರರು ಚಿನ್ನದ ಹೂಡಿಕೆಗೆ ಹೆಚ್ಚು ಒಲವು ತೋರಿಸುತ್ತಿರುವುದು.
    * ಡಾಲರ್ ಎದುರು ರೂಪಾಯಿ ಮೌಲ್ಯ 72 ರೂಗೆ ಕುಸಿತ ಕಂಡಿರುವುದು ಚಿನ್ನದ ದರದಲ್ಲಿ ಏರಿಕೆಯಾಗಲು ಕಾರಣವಾಗಿದೆ.

    ವೈಕುಂಠ ಏಕಾದಶಿಯಂದು ಚಿನ್ನ ಕೊಳ್ಳಬೇಕು ಎನ್ನುವವರು ರೇಟ್ ಕೇಳಿ, ಬೇಡಪ್ಪಾ ಬೇಡ ಚಿನ್ನದ ಸಹವಾಸವೆನ್ನುತ್ತಿದ್ದಾರೆ. ಹಳದಿ ಲೋಹದ ದರ ಹೆಚ್ಚಳಕ್ಕೆ ಸಾರ್ವಜನಿಕರು ಕೂಡ ಫುಲ್ ಗರಂ ಆಗಿದ್ದಾರೆ.

  • ವೈಕುಂಠ ಏಕಾದಶಿಗೆ ಯಲಹಂಕದಲ್ಲಿ 2 ಲಕ್ಷ ಲಾಡು ತಯಾರು

    ವೈಕುಂಠ ಏಕಾದಶಿಗೆ ಯಲಹಂಕದಲ್ಲಿ 2 ಲಕ್ಷ ಲಾಡು ತಯಾರು

    – 27 ವರ್ಷದಿಂದ ಸತತ ಲಾಡು ತಯಾರಿಕೆ

    ಬೆಂಗಳೂರು: ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಪ್ರತಿವರ್ಷದಂತೆ ಯಲಹಂಕದಲ್ಲಿ 2 ಲಕ್ಷ ಲಾಡುಗಳನ್ನು ತಯಾರು ಮಾಡಲಾಗಿದ್ದು, ಬೆಂಗಳೂರಿನ ಅನೇಕ ದೇವಾಲಯಗಳಿಗೆ ತಲುಪಿಸು ಸಿದ್ಧತೆ ನಡೆದಿದೆ.

    ಅರ್ನ ಸೇವಾ ಟ್ರಸ್ಟ್ ವತಿಯಿಂದ ಕೇಶವ ರಾಜಣ್ಣ ನೇತೃತ್ವದಲ್ಲಿ ಲಾಡುಗಳನ್ನ ತಯಾರು ಮಾಡಲಾಗಿದೆ. ಬೆಂಗಳೂರಿನ ಕೆಲವು ದೇವಾಲಯಗಳಿಗೆ ಇವರೇ ಹೋಗಿ ದೇವಾಲಯದಲ್ಲಿ ಹಂಚಿ ಬರುತ್ತಾರೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ವೆಂಕಟೇಶ್ವರ ದೇವಾಲಯದ ಯಾರೇ ಕರೆ ಮಾಡಿ ಲಾಡು ಬೇಕು ಅಂದ್ರು ಅವರಿಗೆ ತಲುಪಿಸುವ ಕೆಲಸವನ್ನ ಮಾಡಲಾಗುತ್ತಿದೆ.

    ದೇವಾಲಯದ ಯಾರಾದರೂ ಕಾಲ್ ಮಾಡಿ ದೇವಾಲಯದ ವಿಳಾಸ ಹೇಳಿದರೆ ಅರ್ನ ಸೇವಾ ಟ್ರಸ್ಟ್ ನವರೇ ಕಳುಹಿಸಿಕೊಡುತ್ತಾರೆ. ಇಲ್ಲವೇ ದೇವಾಲಯದವರೇ ಬಂದು ಲಾಡುಗಳನ್ನು ತೆಗೆದುಕೊಂಡು ಹೋಗಬಹುದು.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಅರ್ನ ಸೇವಾ ಟ್ರಸ್ಟ್ ಸದಸ್ಯರೊಬ್ಬರು, ಎಲ್ಲಾ ಲಾಡುಗಳನ್ನ ಹಲವು ವರ್ಷಗಳಿಂದ ಉಚಿತವಾಗಿ ವಿತರಣೆ ಮಾಡುತ್ತಲೇ ಬಂದಿದ್ದೇವೆ. ಈ ಬಾರಿ ಚಿತ್ರನಟಿ ಸುಧಾರಾಣಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಭಾನುವಾರ ಯಲಹಂಕ ಉಪನಗರದ ದಕ್ಷಿಣ ಕನ್ನಡ ವಿಶ್ವ ಬ್ರಾಹ್ಮಣ ಸಂಘದ ಮೈದಾನದ ಆವರಣದಲ್ಲಿ ನಡೆಯಲಿದೆ. ಯಾರಿಗೆ ಲಾಡುಗಳು ಬೇಕೋ ಅವರು ಒಂದು ಕರೆ ಲಾಡುಗಳನ್ನ ಉಚಿತವಾಗಿ ಪಡೆಯಬಹುದು ಎಂದು ತಿಳಿಸಿದ್ದಾರೆ.

  • ನಾಡಿನಾದ್ಯಂತ ವೈಕುಂಠ ಏಕಾದಶಿ ಸಂಭ್ರಮ – ಪ್ರಸಾದ ವಿತರಣೆಗೆ ರೂಲ್ಸ್

    ನಾಡಿನಾದ್ಯಂತ ವೈಕುಂಠ ಏಕಾದಶಿ ಸಂಭ್ರಮ – ಪ್ರಸಾದ ವಿತರಣೆಗೆ ರೂಲ್ಸ್

    ಬೆಂಗಳೂರು: ಪ್ರಸಾದಕ್ಕೆ ವಿಷವನ್ನು ಬೆರೆಸಿದ ಪ್ರಕರಣದಿಂದ ಎಚ್ಚರಗೊಂಡಿರುವ ಮುಜರಾಯಿ ಇಲಾಖೆ ಪ್ರಸಾದ ವಿತರಣೆಗೆ ನಾನಾ ರೂಲ್ಸ್ ತಂದಿದೆ. ಇಂದು ಹಾಗೂ ನಾಳೆ ನಾನಾ ಕಡೆ ವೈಕುಂಠ ಏಕಾದಶಿಗೆ ಲಡ್ಡು ತಯಾರಿಸುವ ಸ್ಥಳ, ಹಾಗೂ ನಾಳೆ ಲಡ್ಡು ವಿತರಣೆಯ ಸಮಯದಲ್ಲಿ ದೇಗುಲಗಳಿಗೆ ಜಿಲ್ಲಾಧಿಕಾರಿಗಳು ಹಾಗೂ ಸ್ಥಳೀಯ ಮುಜರಾಯಿ ಅಧಿಕಾರಿಗಳು ಭೇಟಿ ಕೊಟ್ಟು ಪರಿಶೀಲಿಸಲಿದ್ದಾರೆ. ಇದನ್ನೂ ಓದಿ: ಸುಳ್ವಾಡಿ ದುರಂತದ ಬಳಿಕ ಎಚ್ಚೆತ್ತ ಮುಜರಾಯಿ ಇಲಾಖೆ! – ಆದೇಶದಲ್ಲಿ ಏನಿದೆ?

    ಬೆಂಗಳೂರು ಹೊರವಲಯದ ನೆಲಮಂಗಲ ತಾಲೂಕು ತಹಶೀಲ್ದಾರ್, ಮುಜರಾಯಿ ಇಲಾಖೆಯ ಅಧೀನದಲ್ಲಿರುವ ದೇಗುಲಕ್ಕೆ ಭೇಟಿ ನೀಡಿ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ನೆಲಮಂಗಲದ ಇತಿಹಾಸ ಪ್ರಸಿದ್ಧ ಶ್ರೀ ಲಕ್ಷ್ಮಿವೆಂಕಟರಮಣ ದೇಗುಲಕ್ಕೆ ತಹಶಿಲ್ದಾರ್ ಕೆ.ಎನ್ ರಾಜಶೇಖರ್ ಲಡ್ಡು ತಯಾರಿಕೆ ವೇಳೆ ಭೇಟಿ ನೀಡಿ, ಲಡ್ಡು ತಯಾರಿಸುವಾಗ ಎಚ್ಚರ ವಹಿಸುವಂತೆ ಮುಜುರಾಯಿ ಅಧಿಕಾರಿಗಳಿಗೆ ಖಡಕ್ ಎಚ್ಚರಿಸಿದ್ದಾರೆ. ದೇವಸ್ಥಾನದ ಪ್ರಸಾದ ತಯಾರಿಕಾ ಕೊಠಡಿಗೆ ಸಿಸಿ ಕ್ಯಾಮೆರಾ ಅಳವಡಿಸುವಂತೆ ಆದೇಶ ಮಾಡಿದ್ದಾರೆ.

    ಇಂದು ವೈಕುಂಠ ಏಕಾದಶಿಯ ಪ್ರಯುಕ್ತ ಬರುವ ಭಕ್ತಾಧಿಗಳಿಗೆ ಈ ದೇವಾಲಯದಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಲಡ್ಡುಗಳನ್ನ ಸಿದ್ಧಪಡಿಸಿಕೊಳ್ಳಲಾಗಿದೆ. ಇಲ್ಲಿನ ದೇವರಿಗೂ ತಿರುಪತಿಯ ತಿರುಮಲದಲ್ಲಿ ಮಾಡುವಂತಹ ಅಲಂಕಾರವನ್ನ ಮಾಡಲಾಗುತ್ತಿದೆ. ಹೀಗಾಗಿ ಪ್ರಾಚೀನ ಕಾಲದ ಇತಿಹಾಸವಿರುವ ಸುಪ್ರಸಿದ್ಧ ಈ ದೇವಾಲಯಲ್ಲಿ, ಅಧಿಕಾರಿಗಳು ಕಟ್ಟುನಿಟ್ಟಿನ ಎಚ್ಚರಿಕೆಯನ್ನ ವಹಿಸಿದ್ದಾರೆ.

    ಇಂದು ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ನಾನಾ ದೇಗುಲಗಳಲ್ಲಿ ವಿಶೇಷ ಪೂಜೆ ನಡೆಲಿದೆ. ಇಸ್ಕಾನ್ ದೇವಾಲಯದಲ್ಲಿ ಬೆಳಗ್ಗೆಯಿಂದಲೇ ಪೂಜೆ ಶುರುವಾಗಿದ್ದು, ಚುಮು ಚುಮು ಚಳಿಯಲ್ಲಿ ಮುಂಜಾನೆಯಿಂದಲೇ ದೇಗುಲಕ್ಕೆ ಭಕ್ತರು ಬರುತ್ತಿದ್ದಾರೆ. ಭಕ್ತರಿಗೆ ವೈಕುಂಠ ದ್ವಾರ ಪ್ರವೇಶಕ್ಕೆ ಎಲ್ಲಾ ವ್ಯವಸ್ಥೆಗಳ ಸಿದ್ಧತೆ ಮಾಡಲಾಗಿದ್ದು, ಸರದಿ ಸುಗಮವಾಗಿ ಸಾಗಲು ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನನ್ನ ಮನೆಗೆ ಕೇಂದ್ರ ಸಚಿವ ಗೋಯಲ್ ಬಂದಿದ್ದು ಯಾಕೆ: ದೇವೇಗೌಡ್ರು ವಿವರಿಸಿದ್ರು

    ನನ್ನ ಮನೆಗೆ ಕೇಂದ್ರ ಸಚಿವ ಗೋಯಲ್ ಬಂದಿದ್ದು ಯಾಕೆ: ದೇವೇಗೌಡ್ರು ವಿವರಿಸಿದ್ರು

    ಮೈಸೂರು: ನನ್ನ ಮತ್ತು ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ಭೇಟಿ ಸೌಜನ್ಯವಾದ ಭೇಟಿ. ಹಾಸನದ ರೈಲ್ವೇ ಯೋಜನೆ ವಿಚಾರವಾಗಿ ನಾನು ಅವರನ್ನು ಭೇಟಿ ಮಾಡಿದ್ದೆ. ಆದ್ದರಿಂದ ಗೋಯಲ್ ಭೇಟಿಗೆ ಅಪಾರ್ಥ ಬೇಡ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಸ್ಪಷ್ಟ ಪಡಿಸಿದ್ದಾರೆ.

    ಇಂದು ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಆದಿ ರಂಗ, ಮಧ್ಯ ರಂಗ ಮತ್ತು ಅಂತ್ಯ ರಂಗದ ದರ್ಶನ ಮಾಡಿದ್ದಾರೆ. ಈ ಮಧ್ಯೆ ಮೈಸೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನನ್ನ ಕೇಂದ್ರ ರೈಲ್ವೇ ಸಚಿವ ಹಾಗೂ ರಾಜ್ಯ ಚುನಾವಣಾ ಸಹ ಉಸ್ತುವಾರಿ ಪಿಯೂಷ್ ಗೋಯಲ್ ಭೇಟಿ ಸೌಜನ್ಯದ ಭೇಟಿಯಾಗಿದೆ. ಹಾಸನದ ರೈಲ್ವೇ ಯೋಜನೆ ವಿಚಾರವಾಗಿ ನಾನು ಅವರನ್ನು ಭೇಟಿ ಮಾಡಿದ್ದೆ. ನಾನೇ ಅವರು ಇರುವ ಸ್ಥಳಕ್ಕೆ ಹೋಗಬೇಕಿತ್ತು. ಆದರೆ ನಾನು ವಯಸ್ಸಿನಲ್ಲಿ ದೊಡ್ಡವರು ಅನ್ನೋ ಕಾರಣಕ್ಕೆ ಅವರೇ ನಮ್ಮ ಮನೆಗೆ ಬಂದಿದ್ದರು. ನನ್ನ ಅವರ ಭೇಟಿಯಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದರು.

    ಇದೇ ವೇಳೆ ಮುಖ್ಯಮಂತ್ರಿ ವಿರುದ್ಧ ವಾಗ್ದಾಳಿ ನಡೆಸಿದ ಗೌಡರು, ರಾಜ್ಯದ ನೀರಾವರಿ ಯೋಜನೆಗಳ ವಿಚಾರವಾಗಿ ಸಿದ್ದರಾಮಯ್ಯ ಪ್ರಜ್ಞೆ ಇಟ್ಟುಕೊಂಡು ಮಾತನಾಡಲಿ. ಡೋಂಗಿ ವ್ಯವಹಾರಗಳನ್ನು ಬಿಟ್ಟು ನನ್ನ ಜೊತೆ ಹೋರಾಟಕ್ಕೆ ಬರಲಿ. ನೀರಾವರಿ ಯೋಜನೆ ಬಗ್ಗೆ ವಾಸ್ತವವಾಗಿ ಮಾತನಾಡಲಿ ಎಂದರು.

    ಕೃಷ್ಣ ನದಿಗೆ ಯೋಜನೆಗಳನ್ನ ರೂಪಿಸಿದವರು ಯಾರು? ದೆಹಲಿಗೆ ಹೋಗಿ ನೀರಾವರಿ ಯೋಜನೆಗಳನ್ನ ಜಾರಿ ಮಾಡಿದ್ದರು ಯಾರು? ಸಿದ್ದರಾಮಯ್ಯನಾ.. ದೇವೇಗೌಡರಾ… ಎಂದು ಪ್ರಶ್ನಿಸಿದ್ದಾರೆ. ನಟ ಸುದೀಪ್ ಜೆಡಿಎಸ್ ಸೇರ್ಪಡೆ ಆಗುತ್ತಾರೆ ಎಂಬ ಬಗ್ಗೆ ಗೌಡರು, ಕುಮಾರಸ್ವಾಮಿ ಅವರೊಂದಿಗೆ ಸುದೀಪ್ ಮಾತನಾಡಿದ್ದಾರೆ. ಆದರೆ ಅವರು ಏನು ನಿರ್ಧಾರ ಮಾಡಿದ್ದಾರೋ ನನಗೆ ಗೊತ್ತಿಲ್ಲ. ನಾನು ಯಾರ ವ್ಯಕ್ತಿತ್ವವನ್ನು ಹಗುರವಾಗಿ ಕಾಣುವುದಿಲ್ಲ. ಸುದೀಪ್ ಅವರೊಂದಿಗೆ ಕುಮಾರಸ್ವಾಮಿ ಮಾತನಾಡಿರೋದು ಸತ್ಯ ಎಂದು ಸ್ಪಷ್ಟನೆ ನೀಡಿದರು.

    ನನಗೆ ದೇವರಲ್ಲಿ ಅಪಾರ ನಂಬಿಕೆ ಇದೆ. 1962 ರಲ್ಲಿ ನಾನು ಚುನಾವಣೆ ಗೆದ್ದಿದ್ದು ದೇವರ ಆಶೀರ್ವಾದಿಂದಲೇ. ಎರಡು ರಾಷ್ಟ್ರೀಯ ಪಕ್ಷಗಳ ವಿರುದ್ಧ ಹೋರಾಟ ಮಾಡಲು ಇರೋ ಶಕ್ತಿಯೇ ದೇವರು. ಈ ಹಿನ್ನೆಲೆಯಲ್ಲಿ ಇಂದು ವೈಕುಂಠ ಏಕಾದಶಿಯ ವಿಶೇಷ ಪೂಜೆ ಕೈಗೊಂಡಿದ್ದೇನೆ. ಆದಿ ರಂಗ, ಮಧ್ಯರಂಗ ಮತ್ತು ಅಂತ್ಯರಂಗನ ದರ್ಶನ ಪಡೆದು ಪುಣ್ಯಪ್ರಾಪ್ತಿ ಆಗುತ್ತದೆ ಎಂಬ ಮಾತಿದೆ. ಆದ್ದರಿಂದ ಕುಟುಂಬ ಸಮೇತರಾಗಿ ಮೂರು ದೇವಾಲಯಗಳಿಗೆ ಭೇಟಿ ನೀಡುತ್ತಿದ್ದೇನೆ ಎಂದು ತಿಳಿಸಿದರು. ಇದನ್ನು ಓದಿ: ಹೆಚ್‍ಡಿಡಿ ವಿರುದ್ಧ ರಫ್&ಟಫ್ ವರ್ತನೆ ಬೇಡ- ಬಿಜೆಪಿ ನಾಯಕರಿಗೆ ಹೈಕಮಾಂಡ್ ಸೂಚನೆ

    https://www.youtube.com/watch?v=2jLUoiKpHp4