Tag: Vaikuntha Dwara Darshan

  • Tirupati Stampede | ವೈಕುಂಠ ಏಕಾದಶಿಯಂದು ತಿರುಪತಿಗೆ ಯಾಕೆ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ?

    Tirupati Stampede | ವೈಕುಂಠ ಏಕಾದಶಿಯಂದು ತಿರುಪತಿಗೆ ಯಾಕೆ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ?

    ತಿರುಪತಿ: ಪ್ರತಿ ವರ್ಷ ವೈಕುಂಠ ಏಕಾದಶಿ (Vaikunta Ekadasi ) ಸಮಯದಲ್ಲಿ ತಿರುಮಲದ ವೆಂಕಟೇಶ್ವರ ಸ್ವಾಮಿ ದೇವಸ್ಥಾನನಕ್ಕೆ (Tirupati Temple) ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಾರೆ. ದೇಶ ವಿದೇಶಗಳಲ್ಲಿ ಭಕ್ತರು ಆಗಮಿಸಿ ದೇವರನ್ನು ಸಂದರ್ಶಿಸಿ ಪುನೀತರಾಗುತ್ತಾರೆ.

    ಸಾಧಾರಣವಾಗಿ ತಿರುಪತಿಯಲ್ಲಿ ಎರಡು ಸಂದರ್ಭದಲ್ಲಿ ಭಾರೀ ಸಂಖ್ಯೆಯಲ್ಲಿ ಜನರು ದೇವಸ್ಥಾನಕ್ಕೆ ಆಗಮಿಸುತ್ತಾರೆ. ಒಂದು ಒಂಬತ್ತು ದಿನಗಳ ಕಾಲ ನಡೆಯಲಿರುವ ಬ್ರಹ್ಮೋತ್ಸವ (Bsrahmotsavam) ಎರಡನೇಯದ್ದು ವೈಕುಂಠ ಏಕಾದಶಿ.

    ಆರಂಭದಲ್ಲಿ ಒಂದೇ ದಿನ ವೈಕುಂಠ ಏಕಾದಶಿಯನ್ನು ಆಚರಿಸಲಾಗುತ್ತಿತ್ತು. ಆದರೆ 1980 ಮತ್ತು 1990 ರ ದಶಕದ ಬಳಿಕ ಭಾರೀ ಸಂಖ್ಯೆಯಲ್ಲಿ ಭಕ್ತರು ದರ್ಶನಕ್ಕೆ ಬರಲು ಆಗಮಿಸತೊಡಗಿದರು. ಹೀಗಾಗಿ ಟಿಟಿಡಿ ವೈಕುಂಠ ದ್ವಾದಶಿಯನ್ನು ಹೆಚ್ಚುವರಿ ಪವಿತ್ರ ದಿನವೆಂದು ಗುರುತಿಸುವ ಮೂಲಕ ಹಬ್ಬದ ಸಂಭ್ರಮವನ್ನು ವಿಸ್ತರಿಸಿತು.

    ಮಕರ ಸಂಕ್ರಾಂತಿ ಹಬ್ಬದ ಹಿಂದಿನ ಎರಡೂ ದಿನಗಳನ್ನು ಅತ್ಯಂತ ಶುಭವೆಂದು ಪರಿಗಣಿಸಲಾಗುತ್ತದೆ. ತಿರುಮಲದಲ್ಲಿ ವೆಂಕಟೇಶ್ವರನೆಂದು ಪೂಜಿಸಲ್ಪಡುವ ವಿಷ್ಣುವನ್ನು ಈ ಅವಧಿಯಲ್ಲಿ ದರ್ಶನ ಮಾಡಿದರೆ ಸ್ವರ್ಗ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯಿದೆ.

    ಸಾಮಾನ್ಯ ಭಕ್ತರು ಅಲ್ಲದೇ ವೈಕುಂಠ ಏಕಾದಶಿಯ ಸಮಯದಲ್ಲಿ ಗೋವಿಂದನ ಮಾಲೆಯನ್ನು ಧರಿಸಿದ ಭಕ್ತರು ತಿರುಪತಿಗೆ ಬರುತ್ತಾರೆ. ವೈಕುಂಠ ಏಕಾದಶಿಗೆ 41 ದಿನಗಳ ಮುಂಚಿತವಾಗಿ ಗೋವಿಂದ ಮಾಲೆಯನ್ನು ಭಕ್ತರು ಧರಿಸಿ ವ್ರತಾಚರಣೆ ಮಾಡುತ್ತಾರೆ. ಭಕ್ತಿಯ ಸಂಕೇತವಾಗಿ ಭಕ್ತರು ನೂರಾರು ಕಿಲೋಮೀಟರ್‌ ದೂರದಿಂದ ಬರಿಗಾಲಿನಲ್ಲಿ ನಡೆದುಕೊಂಡು ತಿರುಪತಿಗೆ ಬರುತ್ತಾರೆ. ಇದನ್ನೂ ಓದಿ: ತಿರುಪತಿಯಲ್ಲಿ ದುರಂತ – ಕಾಲ್ತುಳಿತಕ್ಕೆ ಮೂಲ ಕಾರಣ ಏನು? ದಿಢೀರ್‌ ಗೇಟ್‌ ಓಪನ್‌ ಮಾಡಿದ್ದು ಯಾಕೆ?

    ವರ್ಷದಿಂದ ವರ್ಷಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹಿಂದೂ ಧಾರ್ಮಿಕ ನಾಯಕರ ಜೊತೆ ಚರ್ಚಿಸಿದ ಬಳಿಕ ಟಿಟಿಡಿ 2021-2022 ರಲ್ಲಿ ವೈಕುಂಠ ಏಕಾದಶಿ ಮತ್ತು ದ್ವಾದಶಿಯನ್ನು ಹತ್ತು ದಿನಗಳವರೆಗೆ ವಿಸ್ತರಿಸಿತು. ಈ ನಿರ್ಧಾರದ ನಂತರ ವೆಂಕಟೇಶ್ವರನ ಗರ್ಭಗುಡಿಯ ಸುತ್ತಲಿನ ಉತ್ತರ ದ್ವಾರವನ್ನು ಹತ್ತು ದಿನಗಳವರೆಗೆ ತೆರೆದಿಡಲಾಗುತ್ತದೆ. ಈ ಸಂದರ್ಭದಲ್ಲಿ ಭಕ್ತರು ಉತ್ತರ ದ್ವಾರದ ಮೂಲಕ ಪ್ರವೇಶಿಸಿ ದೇವರ ದರ್ಶನ ಪಡೆದು ಇಷ್ಟಾರ್ಥಸಿದ್ಧಿಗಾಗಿ ಪ್ರಾರ್ಥನೆ ಮಾಡುತ್ತಾರೆ.

     

  • ತಿರುಪತಿಯಲ್ಲಿ ದುರಂತ – ಕಾಲ್ತುಳಿತಕ್ಕೆ ಮೂಲ ಕಾರಣ ಏನು? ದಿಢೀರ್‌ ಗೇಟ್‌ ಓಪನ್‌ ಮಾಡಿದ್ದು ಯಾಕೆ?

    ತಿರುಪತಿಯಲ್ಲಿ ದುರಂತ – ಕಾಲ್ತುಳಿತಕ್ಕೆ ಮೂಲ ಕಾರಣ ಏನು? ದಿಢೀರ್‌ ಗೇಟ್‌ ಓಪನ್‌ ಮಾಡಿದ್ದು ಯಾಕೆ?

    ತಿರುಪತಿ: ಪ್ರಸಿದ್ಧ ವೆಂಕಟೇಶ್ವರಸ್ವಾಮಿ ದೇಗುಲದಲ್ಲಿ (Tirupati Temple) ಬುಧವಾರ ರಾತ್ರಿ ವೈಕುಂಠ ದ್ವಾರ ದರ್ಶನ (Vaikuntha Dwara Darshan) ಟಿಕೆಟ್‌ ಕೌಂಟರ್‌ ಬಳಿ ನೂಕು ನುಗ್ಗಲು ಸಂಭವಿಸಿ ನಡೆದ ಕಾಲ್ತುಳಿತದಲ್ಲಿ (Stampede) ಬಲಿಯಾದವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

    ಬೈರಾಗಿಪಟ್ಟೇಡ, ಶ್ರೀನಿವಾಸಂ ಮತ್ತು ಸತ್ಯನಾರಾಯಣಪುರಂನಲ್ಲಿ ಕಾಲ್ತುಳಿತ ಸಂಭವಿಸಿದ್ದು 60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

    ದುರಂತಕ್ಕೆ ಕಾರಣ ಏನು?
    ಜ. 10, 11 ಮತ್ತು 12 ರಂದು ವೈಕುಂಠ ಏಕಾದಶಿ ಇರುವ ಹಿನ್ನೆಲೆಯಲ್ಲಿ ಗುರುವಾರ ಬೆಳಗ್ಗೆ 5 ಗಂಟೆಯಿಂದ ವೈಕುಂಠದ್ವಾರ ಸರ್ವದರ್ಶನಕ್ಕೆ ಟಿಕೆಟ್​ ನೀಡಲಾಗುವುದು ಎಂದು ತಿರುಮಲ ತಿರುಪತಿ ದೇವಸ್ಥಾನ (TTD)ಪ್ರಕಟಿಸಿತ್ತು. ದಿನಕ್ಕೆ 40 ಸಾವಿರದಂತೆ 3 ದಿನಗಳಲ್ಲಿ 1 ಲಕ್ಷದ 20 ಸಾವಿರ ದರ್ಶನ ಟಿಕೆಟ್​ ನೀಡಲು ಟಿಟಿಡಿ ನಿರ್ಧರಿಸಿತ್ತು. 9 ಕಡೆಗಳಲ್ಲಿ 90 ಕೌಂಟರ್‌ಗಳ ಮೂಲಕ ಸರ್ವದರ್ಶನ ಟಿಕೆಟ್​​ ವಿತರಿಸಲು ಟಿಟಿಡಿ ವ್ಯವಸ್ಥೆ ಮಾಡಿತ್ತು.  ಇದನ್ನೂ ಓದಿ: ತಿರುಪತಿ ಕಾಲ್ತುಳಿತದಲ್ಲಿ ಬಳ್ಳಾರಿ ಮೂಲದ ಮಹಿಳೆ ದುರ್ಮರಣ

    ವೈಕುಂಠ ದ್ವಾರ ದರ್ಶನದ ಟಿಕೆಟ್‌ ಪಡೆಯಲು ಬುಧವಾರ ಸಂಜೆಯಿಂದಲೇ ಭಕ್ತರು ಸಾಲುಗಟ್ಟಿ ನಿಂತಿದ್ದರು. ಭಾರೀ ಸಂಖ್ಯೆಯಲ್ಲಿ ಭಕ್ತರು ಸರದಿಯಲ್ಲಿ ನಿಂತಿದ್ದ ಹಿನ್ನೆಲೆಯಲ್ಲಿ ಬುಧವಾರ ರಾತ್ರಿಯೇ ಟಿಕೆಟ್‌ ನೀಡಲು ಟಿಟಿಡಿ ಮುಂದಾಯಿತು. ಬೈರಾಗಿಪಟ್ಟೇಡ ರಾಮ ನಾಯ್ಡು ಶಾಲೆಯ ಬಳಿಯ ಕೌಂಟರ್‌ನಲ್ಲಿ ಸಾಲಿನಲ್ಲಿ ನಿಂತಿದ್ದ ಭಕ್ತರೊಬ್ಬರಿಗೆ ದಿಢೀರ್‌ ಉಸಿರಾಟದ ಸಮಸ್ಯೆಯಾಗಿದೆ.

    ಆ ಭಕ್ತರನ್ನು ಆಸ್ಪತ್ರೆಗೆ ಕರೆದೊಯ್ಯಲು ಭದ್ರತಾ ಸಿಬ್ಬಂದಿ ಒಮ್ಮೆ ಕೌಂಟರ್‌ ಗೇಟ್‌ ತೆರೆದಿದ್ದಾರೆ. ಈ ವೇಳೆ ಟಿಕೆಟ್‌ ನೀಡಲೆಂದೇ ಈ ಗೇಟ್‌ ತೆರೆಯಲಾಗಿದೆ ಎಂದು ಭಾವಿಸಿದ ಭಕ್ತರು ಏಕಾಏಕಿ ಕೌಂಟರ್‌ ಕಡೆಗೆ ನುಗ್ಗಿದ್ದಾರೆ. ಇದರಿಂದ ನೂಕುನುಗ್ಗಲು ಸಂಭವಿಸಿ ಕೆಲವರು ಕೆಳಗೆ ಬಿದ್ದಿದ್ದಾರೆ. ಬಿದ್ದವರ ಮೇಲೆಯೇ ಕೆಲವರು ಓಡಾಡಿದ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ಎಂದು ವರದಿಯಾಗಿದೆ. ಟಿಕೆಟ್‌ ಪಡೆಯಲು ಎಲ್ಲಾ ಭಕ್ತರು ಸರತಿಯಲ್ಲೇ ನಿಂತಿದ್ದರು. ಎಲ್ಲಾ ಭಕ್ತರು ಒಂದೇ ಬಾರಿಗೆ ಕೌಂಟರ್‌ ಬಳಿ ನುಗ್ಗಿದ್ದರಿಂದ ಹಲವು ಮಂದಿ ಜನ ಸಂದಣಿಯಲ್ಲಿ ಸಿಲುಕಿದ್ದರಿಂದ ದುರಂತ ಸಂಭವಿಸಿದೆ.

     

    ವೈಕುಂಠ ಏಕಾದಶಿ ಸಂಭ್ರಮದಲ್ಲಿ ದೇಶದ ವಿವಿಧೆಡೆಗಳಿಂದ ಸಾವಿರಾರು ಮಂದಿ ಭಕ್ತರು ದೇವಸ್ಥಾನಕ್ಕೆ ಬರುತ್ತಾರೆ.

    ತೀವ್ರವಾಗಿ ಗಾಯಗೊಂಡವರಿಗೆ ಪೊಲೀಸ್‌ ಸಿಬ್ಬಂದಿಯೇ ಪ್ರಾಥಮಿಕ ಆರೈಕೆ ಮಾಡುತ್ತಿರುವುದು ಹಾಗೂ ಗಾಯಾಳುಗಳನ್ನು ಅಂಬುಲೆನ್‌ನಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿರುವ ದೃಶ್ಯಗಳಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.