Tag: Vajubhai Vala

  • ದೋಸ್ತಿ ಸರ್ಕಾರಕ್ಕೆ ರಾಜ್ಯಪಾಲರ ಚಾಟಿ

    ದೋಸ್ತಿ ಸರ್ಕಾರಕ್ಕೆ ರಾಜ್ಯಪಾಲರ ಚಾಟಿ

    ಬೆಂಗಳೂರು: ಶಾಸಕರ ರಾಜೀನಾಮೆಯಿಂದ ಬಹುಮತ ಕಳೆದುಕೊಂಡಿರುವ ಸರ್ಕಾರಕ್ಕೆ ರಾಜ್ಯಪಾಲ ವಿ.ಆರ್.ವಾಲಾ ಚಾಟಿ ಬೀಸಿದ್ದಾರೆ.

    ಸಮ್ಮಿಶ್ರ ಸರ್ಕಾರ ಯಾವುದೇ ಆಡಳಿತಾತ್ಮಕ ನಿರ್ಧಾರ ಕೈಗೊಳ್ಳಬಾರದು. ಸರ್ಕಾರ ಅಲ್ಪ ಮತಕ್ಕೆ ಕುಸಿದ ಪರಿಣಾಮ ಕ್ಯಾಬಿನೆಟ್ ಸಭೆಯಲ್ಲಿ ಯಾವುದೇ ನಿರ್ಧಾರ ಕೈಗೊಳ್ಳಬಾರದು ಎಂದು ಸೂಚನೆ ನೀಡಿದ್ದಾರೆ.

    ಸರ್ಕಾರ ಪತನದ ಮುನ್ಸೂಚನೆ ತಿಳಿಯುತ್ತಿದ್ದಂತೆ ರಾತ್ರೋ ರಾತ್ರಿ ಕಡತಗಳಿಗೆ ಸಹಿ ಮತ್ತು ಅಧಿಕಾರಿಗಳಿಗೆ ಭಡ್ತಿ ನೀಡಲಾಗುತ್ತಿದೆ ಎಂದು ಬಿಜೆಪಿ ಆರೋಪಿಸಿತ್ತು. ಈ ವಿಚಾರದ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ರಾಜ್ಯಪಾಲರು ಈ ಆದೇಶವನ್ನು ಹೊರಡಿಸಿದ್ದಾರೆ.

    ಸಚಿವರೆಲ್ಲಾ ರಾಜೀನಾಮೆ ನೀಡಿದ್ದರೂ ಸೋಮವಾರ ರೇವಣ್ಣ ಅವರು ತಮ್ಮ ಲೋಕೋಪಯೋಗಿ ಇಲಾಖೆಯಲ್ಲಿ ಇನ್ನು ಸಕ್ರೀಯವಾಗಿದ್ದು, ಅಧಿಕಾರಿಗಳ ವರ್ಗಾವಣೆ ಮತ್ತು ಬಡ್ತಿ ಸಂಬಂಧ ತರಾತುರಿಯಲ್ಲಿ ಇಲಾಖಾ ಪದೋನ್ನತಿ ಸಮಿತಿ (ಡಿಸಿಪಿ) ಸಭೆಯನ್ನೂ ನಡೆಸಿದ್ದರು.

    ಸರ್ಕಾರ ಪತನದಂಚಿಗೆ ತಲುಪಿರುವ ಸಮಯದಲ್ಲಿ ದಿಢೀರ್ ಎಂದು ಅಧಿಕಾರಿಗಳಿಗೆ ಬಡ್ತಿ ನೀಡಿರುವ ಹಿಂದೆ ಸಚಿವರ ಸ್ವಹಿತಾಸಕ್ತಿ ಅಡಗಿದೆ ಎಂಬ ಆರೋಪ ಕೇಳಿ ಬಂದಿದೆ. ಆತುರದಲ್ಲಿ ಬಡ್ತಿ ನೀಡುವ ವಿಷಯ ಕುರಿತು ಸಭೆ ನಡೆಸಲು ಅಧಿಕಾರಿಗಳ ಮಟ್ಟದಲ್ಲಿ ವಿರೋಧ ವ್ಯಕ್ತವಾಗಿತ್ತು. ವಿಕಾಸಸೌಧದಲ್ಲಿ ನೆಪಮಾತ್ರಕ್ಕೆ ಸಭೆ ನಡೆಸಿದ ಅಧಿಕಾರಿಗಳು ರಹಸ್ಯ ಸ್ಥಳಕ್ಕೆ ತೆರಳಿ ಜ್ಯೇಷ್ಠತಾ ಪಟ್ಟಿ ಸಿದ್ಧಪಡಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿತ್ತು.

    ರೇವಣ್ಣ ಸಚಿವರಾಗುತ್ತಿದ್ದಂತೆ ಹಲವು ವಿಭಾಗೀಯ ಕಚೇರಿಗಳನ್ನು ಹಾಸನಕ್ಕೆ ಸ್ಥಳಾಂತರಿಸಿಕೊಂಡಿದ್ದರು. ರೇವಣ್ಣ ಅವರ ಈ ನಡೆಗೆ ಸಚಿವ ಸಂಪುಟದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಈ ಹಿಂದೆ ಲೋಕೋಪಯೋಗಿ ಇಲಾಖೆಯಲ್ಲಿ ಕೈ ಬಿಟ್ಟ ಪ್ರಕರಣಗಳನ್ನು ಸಹ ಇತ್ಯರ್ಥಪಡಿಸಲು ಸಚಿವರು ಅಧಿಕಾರಿಗಳ ಮೂಲಕ ಮುಂದಾಗಿದ್ದಾರೆ. ಇದರಲ್ಲಿಯೂ ಸಚಿವರ ಸ್ವಹಿತಾಸಕ್ತಿಯೇ ಅಡಗಿದೆ ಎಂಬ ಆರೋಪಗಳು ಬಲವಾಗಿ ಕೇಳಿ ಬಂದಿದೆ.

    ಬಡ್ತಿ ಪಡೆದ ಅಧಿಕಾರಿಗಳ ವಿವರ ಹೀಗಿದೆ
    ಎಇ ಹುದ್ದೆಯಿಂದ ಎಇಇ ಹುದ್ದೆ-100
    ಜೆಇ ಹುದ್ದೆಯಿಂದ ಎಇಇ(2)-200
    ಎಇಇ ಹುದ್ದೆಯಿಂದ ಇಇ – 400
    ಇಇ ಹುದ್ದೆಯಿಂದ ಎಸ್‍ಇ-126

  • ಅರೇ, ಹೊರಟ್ಟಿಯವ್ರೇ ಸೈಡಿಗೆ ಬನ್ರಿ: ಸ್ಪೀಕರ್ ರಮೇಶ್ ಕುಮಾರ್

    ಅರೇ, ಹೊರಟ್ಟಿಯವ್ರೇ ಸೈಡಿಗೆ ಬನ್ರಿ: ಸ್ಪೀಕರ್ ರಮೇಶ್ ಕುಮಾರ್

    ಬೆಂಗಳೂರು: ಇಂದು ಸಮ್ಮಿಶ್ರ ಸರ್ಕಾರದ ಮೊದಲ ಅಧಿವೇಶನ ಆರಂಭವಾಗಿದೆ. ಎರಡು ಜಂಟಿ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲರು ಭಾಷಣವನ್ನು ಮಾಡಿದ್ದಾರೆ. ರಾಜ್ಯಪಾಲರನ್ನು ವಿಧಾನ ಸಭೆಗೆ ಸ್ಪೀಕರ್ ಕರೆತರೋದು ಮತ್ತು ಕಳುಹಿಸಿ ಕೊಡುವುದು ಸಂಪ್ರದಾಯ. ಆದರೆ ರಾಜ್ಯಪಾಲರ ನಿರ್ಗಮನ ವೇಳೆ ಈ ಶಿಷ್ಟಾಚಾರ ಉಲ್ಲಂಘನೆ ಆಗಿತ್ತು.

    ರಾಜ್ಯಪಾಲ ವಜೂಭಾಯಿ ವಾಲಾ ತಮ್ಮ ಭಾಷಣ ಮುಗಿಸಿ ವಿಧಾನಸಭೆಯಿಂದ ನಿರ್ಗಮಿಸುತ್ತಿದ್ದರು. ಈ ವೇಳೆ ರಾಜ್ಯಪಾಲರ ಹಿಂದೆ ವಿಧಾನ ಪರಿಷತ್ ಹಂಗಾಮಿ ಸ್ಪೀಕರ್ ಬಸವರಾಜ ಹೊರಟ್ಟಿ ನಡೆದುಕೊಂಡು ಬರುತ್ತಿದ್ದರು. ಕೂಡಲೇ ಎಚ್ಚೆತ್ತ ವಿಧಾನ ಸಭೆ ಸ್ಪೀಕರ್ ರಮೇಶ್ ಕುಮಾರ್ ಮುಂದೆ ನಡೆದು ಹೋಗುತ್ತಿದ್ದ ಹೊರಟ್ಟಿಯವರ ಬೆನ್ನು ತಟ್ಟಿ ಪಕ್ಕಕ್ಕೆ ತೆರಳಲು ಸೂಚಿಸಿದ್ದಾರೆ. ಈ ವೇಳೆ ಹೊರಟ್ಟಿಯವರ ಪಕ್ಕದಲ್ಲಿದ್ದ ಸಿಎಂ ಸಹ ನನ್ನ ಕಡೆ ಬನ್ನಿ ಅಂತಾ ಸನ್ನೆ ಮಾಡಿದರು.

    ರಾಜ್ಯ ಸರ್ಕಾರ ರೈತರ ಕಲ್ಯಾಣಕ್ಕಾಗಿ ಬದ್ಧವಾಗಿದ್ದು, ಮುಂದಿನ ದಿನಗಳಲ್ಲಿ ನಾಡಿನ ಕೃಷಿಕ ಬಂಧುಗಳು ಸಮಸ್ಯೆಗಳು ಬಗೆಹರಿಯಲಿವೆ. ಯಾವ ರೈತರು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಬಾರದು ಎಂದು ಮನವಿ ಮಾಡಿಕೊಂಡರು. ಸರ್ಕಾರ ಅಖಂಡ ಕರ್ನಾಟಕದ ಅಭಿವೃದ್ಧಿಗಾಗಿ ಕೆಲಸ ಮಾಡಲಿದ್ದು, ಹಳೆಯ ಯೋಜನೆಗಳೊಂದಿಗೆ ಹೊಸ ಕಾರ್ಯಕ್ರಮಗಳು ಜಾರಿಯಾಗಲಿವೆ ಎಂದು ತಿಳಿಸಿದರು.

  • ರಾಜ್ಯಪಾಲರ ಆಗಮನದ ವೇಳೆ ತಪ್ಪಿತು ಭಾರೀ ಅನಾಹುತ!

    ರಾಜ್ಯಪಾಲರ ಆಗಮನದ ವೇಳೆ ತಪ್ಪಿತು ಭಾರೀ ಅನಾಹುತ!

    ಬೆಂಗಳೂರು: ರಾಜ್ಯಪಾಲ ವಜೂಭಾಯಿ ವಾಲಾ ಆಗಮಿಸುತ್ತಿದ್ದ ಮಾರ್ಗದಲ್ಲಿ ಅಪಘಾತ ಸಂಭವಿಸಿದ್ದು, ಪೊಲೀಸರ ಸಮಯ ಪ್ರಜ್ಞೆಯಿಂದಾಗಿ ಭಾರೀ ಅನಾಹುತವೊಂದು ತಪ್ಪಿದೆ.

    ಮಂಗಳವಾರ ರಾತ್ರಿ ಸುಮಾರು 10.50ಕ್ಕೆ ಸುಮಾರಿಗೆ ಯಲಹಂಕ ಏರ್‍ಫೋರ್ಸ್ ಮುಂಭಾಗದಲ್ಲಿ ಎಲಿವೇಟೆಡ್ ರಸ್ತೆ ಸಂಚಾರ ನಿರ್ಬಂಧಿಸಿ ಟ್ರಾಫಿಕ್ ನಿಯಂತ್ರಣ ಮಾಡಲಾಗಿತ್ತು. ರಾಜ್ಯಪಾಲರು ಇನ್ನೇನು ಕೆಲವೇ ನಿಮಿಷಗಳಲ್ಲಿ ಆಗಮಿಸುವ ವೇಳೆ ಕ್ಯಾಬ್, ಚಾಲಕನ ನಿಯಂತ್ರಣ ತಪ್ಪಿ ಬ್ಯಾರಿಕೇಡ್‍ಗಳಿಗೆ ಡಿಕ್ಕಿ ಹೊಡೆದಿದೆ.

    ಬ್ಯಾರಿಕೇಡ್ ಗಳ ಮುಂದೆ ನಿಂತಿದ್ದ 6 ಜನ ಪೇದೆಗಳು ಪಕ್ಕಕ್ಕೆ ಜಿಗಿದು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಯಲಹಂಕ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

  • ರಾಜ್ಯ ಸಚಿವ ಸಂಪುಟ ರಚನೆ – ಮಧ್ಯಾಹ್ನ 2.12ಕ್ಕೆ ರಾಜಭನದಲ್ಲಿ ಸಮಾರಂಭ

    ರಾಜ್ಯ ಸಚಿವ ಸಂಪುಟ ರಚನೆ – ಮಧ್ಯಾಹ್ನ 2.12ಕ್ಕೆ ರಾಜಭನದಲ್ಲಿ ಸಮಾರಂಭ

    ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಇಂದು ನಡೆಯಲಿದೆ. ಮಧ್ಯಾಹ್ನ 02-12 ಕ್ಕೆ ರಾಜಭವನದ ಗ್ಲಾಸ್ ಹೌಸ್ ನಲ್ಲಿ ನೂತನ ಸಚಿವರಿಗೆ ರಾಜ್ಯಪಾಲ ವಜೂಭಾಯಿ ವಾಲಾ ಪ್ರಮಾಣ ವಚನ ಬೋಧಿಸಲಿದ್ದಾರೆ.

    ಜೆಡಿಎಸ್ ನಿಂದ 8 ಜನ ಪ್ರಮಾಣ ವಚನ ಸ್ವೀಕರಿಸುವುದು ಬಹುತೇಕ ಖಚಿತವಾಗಿದೆ. ಇತ್ತ ಕಾಂಗ್ರೆಸ್ ನಲ್ಲಿ 14-17 ಜನ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಕಾಂಗ್ರೆಸ್ ನಿಂದ ಪ್ರಮಾಣ ವಚನ ಸ್ವೀಕರಿಸುವ ವಿಷಯದಲ್ಲಿ ಸಣ್ಣಪುಟ್ಟ ಗೊಂದಲಗಳಿದ್ದು ಇಂದು ಮಧ್ಯಾಹ್ನದ ಒಳಗೆ ಎಲ್ಲವು ಸರಿಯಾಗಲಿದೆ ಎಂಬ ಮಾಹಿತಿಗಳು ಪಬ್ಲಿಕ್ ಟಿವಿಗೆ ಲಭಿಸಿವೆ.

    ರಾಜಭವನದಲ್ಲಿ ನಡೆಯಲಿರುವ ಪ್ರಮಾಣ ವಚನ ಕಾರ್ಯಕ್ರಮಕ್ಕೆ 1,500 ಜನರಿಗೆ ಪ್ರವೇಶ ಪಡೆಯಲು ಪಾಸ್ ವಿತರಿಸುವಂತೆ ಸರ್ಕಾರದಿಂದ ವಾರ್ತಾ ಇಲಾಖೆಗೆ ಸೂಚನೆ ನೀಡಲಾಗಿದೆ. ಒಟ್ಟು ಪ್ರಮಾಣ ವಚನ ಕಾರ್ಯಕ್ರಮ 1 ಗಂಟೆ ಕಾಲ ನಡೆಯಲಿದ್ದು. 03 ಗಂಟೆ 30 ನಿಮಿಷದಲ್ಲಿ ಮುಗಿಯುವ ಸಾಧ್ಯತೆ ಇದೆ.

  • ಬಹುಮತ ಪರೀಕ್ಷೆಗೂ ಮುನ್ನ ಸುಪ್ರೀಂ ಟೆಸ್ಟ್- ಸುಪ್ರೀಂಕೋರ್ಟ್ ನಿಂದ ಇಂದು ಬಿಎಸ್‍ವೈ ಭವಿಷ್ಯ ಪ್ರಕಟ

    ಬಹುಮತ ಪರೀಕ್ಷೆಗೂ ಮುನ್ನ ಸುಪ್ರೀಂ ಟೆಸ್ಟ್- ಸುಪ್ರೀಂಕೋರ್ಟ್ ನಿಂದ ಇಂದು ಬಿಎಸ್‍ವೈ ಭವಿಷ್ಯ ಪ್ರಕಟ

    -ಏಕ್ ದಿನ್ ಕಾ ಸುಲ್ತಾನ್ ಆಗ್ತಾರಾ ನೂತನ ಸಿಎಂ!!

    ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿರುವ ಖುಷಿಯಲಿರುವ ಬಿ.ಎಸ್ ಯಡಿಯೂರಪ್ಪ ಅವರಿಗೆ ಇಂದು ಅತ್ಯಂತ ಪ್ರಮುಖ ದಿನ. ಬಿಜೆಪಿ ಸರ್ಕಾರ ರಚನೆಗೆ ಅವಕಾಶ ನೀಡಿರುವ ರಾಜ್ಯಪಾಲ ವಜುಭಾಯಿ ವಾಲಾರ ನಡೆಯನ್ನು ಪ್ರಶ್ನಿಸಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ಮುಂದುವರಿಯಲಿದೆ.

    ನ್ಯಾ. ಎ.ಕೆ. ಸಿಕ್ರಿ ನೇತೃತ್ವದ ತ್ರಿ ಸದಸ್ಯ ಪೀಠ ವಿಚಾರಣೆ ಮುಂದುವರಿಸಲಿದ್ದು, ಇಂದು ಮಹತ್ವದ ತೀರ್ಪು ನೀಡಲಿದೆ. ಬುಧವಾರ ರಾತ್ರಿ ಐದು ಗಂಟೆಗಳ ಕಾಲ ದೀರ್ಘ ವಿಚಾರಣೆ ನಡೆಸಿದ್ದ ಪೀಠ ಸಾಂವಿಧಾನಕ ಹುದ್ದೆ ರಾಜ್ಯಪಾಲರ ನಿರ್ಣಯಕ್ಕೆ ಹಸ್ತಕ್ಷೇಪ ಮಾಡದೆ ಪ್ರಮಾಣ ವಚನ ತಡೆ ಒಪ್ಪಿಗೆ ನೀಡಲಿಲ್ಲ. ಬದಲಿಗೆ ರಾಜ್ಯಪಾಲರಿಗೆ ಬಿಎಸ್‍ವೈ ಬರೆದಿರುವ ಪತ್ರದ ಪ್ರತಿಯನ್ನು ಸುಪ್ರಿಂಕೊರ್ಟ್ ಗೆ ಸಲ್ಲಿಸುವಂತೆ ಕೇಳಿತ್ತು.

    ರಾಜ್ಯಪಾಲರಿಗೆ ಸರ್ಕಾರ ರಚನೆ ವಿಚಾರವಾಗಿ ಬಿಎಸ್ ಯಡಿಯೂರಪ್ಪ ಬರೆದಿರುವ ಪತ್ರದಲ್ಲಿ ಏನಿದೆ? ಬಹುಮತ ಸಾಬೀತಿಗೆ ಬೇಕಾದ ಬೆಂಬಲ ಯಾರು ನೀಡ್ತಾರೆ? ಎಂಬೆಲ್ಲ ಮಾಹಿತಿ ಆಧರಿಸಿ ವಿಚಾರಣೆ ನಡೆಯಲಿದೆ. ಇದರ ಜೊತೆಗೆ ಹಿರಿಯ ವಕೀಲ ರಾಮ್ ಜೇಠ್ಮಾಲಾನಿ ಕೂಡಾ ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿದ್ದು, ಯಾವ ಆಯಾಮದಲ್ಲಿ ವಾದ ಮಂಡಸಿಲಿದ್ದಾರೆ ಎಂಬ ಕುತೂಹಲ ಮೂಡಿದೆ.

    ಈ ಎಲ್ಲ ಅರ್ಜಿಯ ಜೊತೆಗೆ ಆಂಗ್ಲೋ ಇಂಡಿಯನ್ ಶಾಸಕರನ್ನು ತರಾತುರಿಯಲ್ಲಿ ರಾಜ್ಯಪಾಲರು ನೇಮಕ ಮಾಡಿದ್ದಾರೆ ಅಂತಾ ಆರೋಪಿಸಿರುವ ಕಾಂಗ್ರೆಸ್ ಜೆಡಿಎಸ್ ಜಂಟಿಯಾಗಿ ಮತ್ತೊಂದು ಅರ್ಜಿಯೊಂದನ್ನ ಸುಪ್ರಿಂಕೊರ್ಟ್ ಗೆ ಸಲ್ಲಿಸಿದ್ದು, ಒಟ್ಟು ನಾಲ್ಕು ಅರ್ಜಿಗಳು ಏಕ ಕಾಲದಲ್ಲಿ ವಿಚಾರಣೆಗೆ ಬರಲಿದ್ದು ಇಂದು ಬಿಎಸ್‍ವೈ ಭವಿಷ್ಯ ನಿರ್ಧರಿಸಲಿವೆ.

  • ಕರ್ಮ ಯಾರನ್ನು ಬಿಡಲ್ಲ, ಹಿಂಬಾಲಿಸುತ್ತಲೇ ಇರುತ್ತದೆ: ರಾಮ್ ಮಾಧವ್

    ಕರ್ಮ ಯಾರನ್ನು ಬಿಡಲ್ಲ, ಹಿಂಬಾಲಿಸುತ್ತಲೇ ಇರುತ್ತದೆ: ರಾಮ್ ಮಾಧವ್

    ಬೆಂಗಳೂರು: ಕರ್ನಾಟಕದಲ್ಲಿ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದರೂ ಅಧಿಕಾರ ಸ್ಥಾಪನೆ ಮಾಡಲು ಶತಾಯಗತಾಯ ಪ್ರಯತ್ನ ನಡೆಸುತ್ತಿದೆ. ಇತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ಒಂದಾಗಿ ಸರ್ಕಾರ ಸ್ಥಾಪನೆಗೆ ಮುಂದಾಗುತ್ತಿದೆ.

    ಈ ನಡುವೆ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ವಾಟ್ಸಪ್ ನಲ್ಲಿ ಬಂದಿರುವ ಒಂದು ಮೆಸೇಜ್ ಅನ್ನು ಫೇಸ್‍ಬುಕ್‍ನಲ್ಲಿ ಪ್ರಕಟಿಸಿದ್ದು ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    ಪೋಸ್ಟ್ ನಲ್ಲಿ ಏನಿದೆ?
    1996ರಲ್ಲಿ ಗುಜರಾತಿನಲ್ಲಿ ಆಡಳಿತರೂಢ ಬಿಜೆಪಿ ಸರ್ಕಾರ ಅಧಿಕಾರವನ್ನು ಕಳೆದುಕೊಂಡಿತ್ತು. ನಾಯಕರಾದ ಶಂಕರ್ ಸಿಂಗ್ ವಘೇಲಾ ಮತ್ತು ದಿಲೀಪ್ ಫಾರೀಕ್ ಅವರು ಬಹಿರಂಗವಾಗಿ ಕಾಂಗ್ರೆಸ್ ಬೆಂಬಲಿಸಿದ ಪರಿಣಾಮ ಬಿಜೆಪಿ ಇಬ್ಭಾಗವಾಗಿತ್ತು.

    ವಿಶ್ವಾಸ ಮತಯಾಚನೆಯ ವೇಳೆ ಕಾಂಗ್ರೆಸ್ ವಿಧಾನಸಭೆಯಲ್ಲಿ ಗದ್ದಲ, ಗಲಾಟೆ ಎಬ್ಬಿಸಿತ್ತು. ಗದ್ದಲ ಎಬ್ಬಿಸಿದ್ದಕ್ಕೆ ವಿರೋಧ ಪಕ್ಷದ ಸದಸ್ಯರನ್ನು ಸ್ಪೀಕರ್ ಒಂದು ದಿನ ಅಮಾನತುಗೊಳಿಸಿದರು. ನಂತರ ನಡೆದ ವಿಶ್ವಾಸಮತ ಯಾಚನೆ ಪರೀಕ್ಷೆಯಲ್ಲಿ ಸರ್ಕಾರ ತನ್ನ ಬಹುಮತವನ್ನು ತೋರಿಸಿ ಪಾಸ್ ಆಗಿತ್ತು.

    ನಂತರ ನಡೆದ ರೋಚಕ ವಿದ್ಯಮಾನದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯಸ್ಥೆ ಹದಗೆಟ್ಟಿದೆ. ಅಷ್ಟೇ ಅಲ್ಲದೇ ಸಾಂವಿಧಾನಿಕ ಬಿಕ್ಕಟ್ಟು ಎದುರಾಗಿದೆ ಎಂದು ಹೇಳಿ ರಾಜ್ಯಪಾಲರಾದ ಕೃಷ್ಣಪಾಲ್ ಸಿಂಗ್ ಅವರು ತುರ್ತು ಪರಿಸ್ಥಿತಿ ಇರುವ ಕಾರಣ ರಾಷ್ಟ್ರಪತಿ ಆಡಳಿತವನ್ನು ಹೇರುವಂತೆ ಕೇಂದ್ರಕ್ಕೆ ಶಿಫಾರಸು ಮಾಡಿದರು.

    ಪ್ರಧಾನಿ ಕಚೇರಿಗೆ ಶಿಫಾರಸು ತಲುಪಿದ 15 ನಿಮಿಷದ ಒಳಗಡೆ ಗುಜರಾತ್ ರಾಜ್ಯ ಸರ್ಕಾರವನ್ನು ವಜಾ ಮಾಡಿ, ರಾಷ್ಟ್ರಪತಿ ಆಡಳಿತವನ್ನು ಹೇರಲಾಯಿತು. ವಿಶೇಷ ಏನೆಂದರೆ ಸದನದಲ್ಲಿ ಬಹುಮತ ಸಾಬೀತು ಪಡಿಸಿದರೂ ರಾಷ್ಟ್ರಪತಿ ಆಳ್ವಿಕೆ ಬಂದಿತ್ತು.

    ನಂತರ ವಘೇಲಾ ಒಂದು ವರ್ಷಕ್ಕೆ, ಫರೀಕ್ 5 ತಿಂಗಳು ಮುಖ್ಯಮಂತ್ರಿಯಾಗಿ ಸರ್ಕಾರ ನಡೆಸುತ್ತಿದ್ದಾಗ ಕಾಂಗ್ರೆಸ್ ತಾನು ನೀಡಿದ್ದ ಬೆಂಬಲವನ್ನು ಹಿಂದಕ್ಕೆ ಪಡೆದುಕೊಂಡಿತು. ಇದಾದ ನಂತರ ನಡೆದ ಚುನಾವಣೆಯಲ್ಲಿ ವಘೇಲಾ ಅವರು ಹೊಂದಿದ್ದ ಶಾಸಕರ ಸಂಖ್ಯಾಬಲ 47 ರಿಂದ 4ಕ್ಕೆ ಇಳಿಯಿತು ಅಷ್ಟೇ ಅಲ್ಲದೇ ಕಾಂಗ್ರೆಸ್ಸಿಗೆ ಸೋಲಾಯಿತು. ಕೇಶುಭಾಯಿ ಪಟೇಲ್ ಮತ್ತೆ ಮುಖ್ಯಮಂತ್ರಿಯಾಗಿ ಗದ್ದುಗೆ ಏರಿದರು.

    22 ವರ್ಷಗಳ ನಂತರವೂ ಈ ಘಟನೆ ಈಗ ಪ್ರಸ್ತುತ ಯಾಕೆಂದರೆ ಚುನಾಯಿತ ಸರ್ಕಾರಗಳು ಹೇಗೆ ಕೆಲವೊಮ್ಮೆ ಪ್ರಜಾಪ್ರಭುತ್ವವನ್ನು ಕೊಲೆ ಮಾಡುತ್ತವೆ ಎನ್ನುವುದಕ್ಕೆ ಸಾಕ್ಷಿಯಾಗಿದೆ. ನೆಹರೂ ಅವರ ಕಾಲದಿಂದಲೂ ಸಂವಿಧಾನ ಉಲ್ಲಂಘನೆಯಾಗುತ್ತಲೇ ಇದೆ.

    1996 ರಲ್ಲಿ ರಾಷ್ಟ್ರಪತಿ ಆಡಳಿತವನ್ನು ಹೇರಿದ್ದಾಗ ವಜುಭಾಯಿ ವಾಲಾ ಗುಜರಾತ್ ಬಿಜೆಪಿಯ ಅಧ್ಯಕ್ಷರಾಗಿದ್ದರು. ಈಗ ವಿ.ಆರ್. ವಾಲಾ ಕರ್ನಾಟಕದ ರಾಜ್ಯಪಾಲರಾಗಿದ್ದಾರೆ. ರಾಜ್ಯಪಾಲರ ಶಿಫಾರಸಿಗೆ ರಾಷ್ಟ್ರಪತಿ ಆಡಳಿತವನ್ನು ಗುಜರಾತ್ ನಲ್ಲಿ ಹೇರಿದ ವ್ಯಕ್ತಿ ಬೇರೆ ಯಾರೂ ಅಲ್ಲ. ಅಂದಿನ ಪ್ರಧಾನಿ ಎಚ್‍ಡಿ ದೇವೇಗೌಡರೇ ರಾಷ್ಟ್ರಪತಿ ಆಡಳಿತವನ್ನು ಹೇರಿದ್ದರು. ಈಗ ಕಾಂಗ್ರೆಸ್ ಮತ್ತು ಜೆಡಿಎಸ್ ರಾಜ್ಯಪಾಲರು ಅವರ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುವಂತೆ ಕೇಳಿಕೊಳ್ಳುತ್ತಿವೆ. ಅದಕ್ಕೆ ಹೇಳೋದು ಕರ್ಮ ಯಾರನ್ನು ಬಿಡವುದಿಲ್ಲ ಹಿಂಬಾಲಿಸುತ್ತಲೇ ಇರುತ್ತದೆ ಅಂತ.

     

  • ಗೋಮಾಂಸ ತಿನ್ನೋದಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ- ರಾಜ್ಯಪಾಲ ವಾಲಾ ಅಭಿಪ್ರಾಯ

    ಗೋಮಾಂಸ ತಿನ್ನೋದಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ- ರಾಜ್ಯಪಾಲ ವಾಲಾ ಅಭಿಪ್ರಾಯ

    ದಾವಣಗೆರೆ: ಗೋ ಭಕ್ಷಣೆಗೆ ಸಂವಿಧಾನದಲ್ಲಿ ಅವಕಾಶವಿಲ್ಲ. ಆದ್ರೆ ನಮ್ಮ ಕೆಲ ರಾಜಕಾರಣಿಗಳ ಸಂವಿಧಾನದಲ್ಲಿ ಅಧಿಕಾರವಿದೆ ಎಂದು ಸಮಾಜದ ದಿಕ್ಕು ತಪ್ಪಿಸುತ್ತಿದ್ದಾರೆ. ಅವರಿಗೆ ಕಾನೂನು ಮತ್ತು ಸಂವಿಧಾನದ ಜ್ಞಾನ ಇಲ್ಲ ಎಂದು ರಾಜ್ಯಪಾಲ ವಜುಭಾಯ್ ವಾಲಾ ಆಕ್ರೋಶ ವ್ಯಕ್ತಪಡಿಸಿದ್ರು.

    ಅಧಿವಕ್ತಾ ಪರಿಷತ್ ಬೆಳ್ಳಿ ಮಹೋತ್ಸವ ಅಂಗವಾಗಿ ದಾವಣಗೆರೆಯಲ್ಲಿ ಆಯೋಜಿಸಿದ್ದ ವಕೀಲರ ರಾಜ್ಯ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನದಲ್ಲಿ ಗೋ ಸಾಕಣೆಗೆ ಅವಕಾಶ ಇದೆಯೇ ಹೊರತು ಭಕ್ಷಣೆಗಲ್ಲ. ಸಂವಿಧಾನದ 48 (ಎ) ವಿಧಿಯಲ್ಲಿ ಸ್ಪಷ್ಟವಾಗಿ ಹೇಳಲಾಗಿದೆ. ನಮ್ಮ ಆಹಾರ ಪದ್ಧತಿ, ಸಂವಿಧಾನದಲ್ಲಿ ಅಧಿಕಾರ ಇದೆ ಎನ್ನುವವರಿಗೆ ನಿಮಗೆ ಅಧಿಕಾರ ಇಲ್ಲ ಎಂದು ಸುಪ್ರೀಂ ಕೋರ್ಟ್ ಚಾಟೀ ಬೀಸಿದೆ.

    ರಾಜಕಾರಣಿಗಳು ಮೊದಲು ಸಂವಿಧಾನ ಮತ್ತು ಕಾನೂನಿನ ಜ್ಞಾನ ಬೆಳೆಸಿಕೊಳ್ಳಬೇಕು. ಭಾರತ ದೇಶದಲ್ಲಿ ಏಕರೂಪ ನಾಗರೀಕ ಸಂಹಿತೆ ಜಾರಿಗೆ ಆದ್ಯತೆ ನೀಡಬೇಕು. ಅಲ್ಪಸಂಖ್ಯಾತರಿಗೊಂದು ಮತ್ತೊಬ್ಬರಿಗೊಂದು ಕಾನೂನು ಇರುವುದು ಸೂಕ್ತವಲ್ಲ ಎಂದು ಸಲಹೆ ನೀಡಿದ್ರು.

    ರಾಷ್ಟ್ರೀಯ ಚಿಂತನೆ ಮಾಡಲು ವಕೀಲರೆಲ್ಲ ಒಂದಾಗಿರೋದು ಸಂತೋಷದ ವಿಷಯ. ಎಲ್ಲ ರಾಜಕಾರಣಿಗಳಿಗೂ ಹೇಳ್ತಿನಿ ಮೊದಲು ಸಂವಿಧಾನ ಪಾಲಿಸಿ. ನಾವು ಎಲ್ರಿಗೂ ನ್ಯಾಯ ಒದಗಿಸಬೇಕಿದೆ, ನ್ಯಾಯವೇ ವಕೀಲರ ಧರ್ಮ ಆಗಬೇಕು ಅಂದ್ರು.

    ಸುಪ್ರೀಂ ಕೋರ್ಟ್ ನ ಹಿರಿಯ ವಕೀಲ ವಿನಾಯಕ ದೀಕ್ಷಿತ್, ಪರಿಷತ್ ಕರ್ನಾಟಕ ಅಧ್ಯಕ್ಷ ಎ.ಎಂ.ಸೂರ್ಯಪ್ರಕಾಶ್ ಸಮ್ಮೇಳನದಲ್ಲಿ ಭಾಗಿಯಾಗಿದ್ದರು.

  • ಶ್ರವಣಬೆಳಗೊಳದಲ್ಲಿ ರಾಜ್ಯಪಾಲ ವಿಆರ್ ವಾಲಾ ನೃತ್ಯ: ವಿಡಿಯೋ ನೋಡಿ

    ಶ್ರವಣಬೆಳಗೊಳದಲ್ಲಿ ರಾಜ್ಯಪಾಲ ವಿಆರ್ ವಾಲಾ ನೃತ್ಯ: ವಿಡಿಯೋ ನೋಡಿ

    ಹಾಸನ: ಜೈನರ ಪ್ರಸಿದ್ಧ ಯಾತ್ರ ಸ್ಥಳವಾದ ಶ್ರವಣಬೆಳಗೊಳದಲ್ಲಿ ರಾಜ್ಯಪಾಲ ವಿಆರ್ ವಾಲಾ ಅವರು ನೃತ್ಯ ಮಾಡಿದ್ದಾರೆ.

    2018ರಂದು ನಡೆಯಲಿರುವ ಮಹಾಮಸ್ತಕಾಭಿಷೇಕದ ಅಂಗವಾಗಿ ಇಂದು ಚಾತುರ್ಮಾಸ ಮಂಗಲ ಕಳಶ ಉದ್ಘಾಟನಾ ಕಾರ್ಯಕ್ರಮ ಜರುಗಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ರಾಜ್ಯಪಾಲ ವಿಆರ್ ವಾಲಾ ಅವರಿಗೆ ಮೈಸೂರು ಪೇಟ ತೊಡಿಸಿ ಸ್ವಾಗತ ಕೋರಲಾಯಿತು.

    ಈ ಕಾರ್ಯಕ್ರಮದಲ್ಲಿ ಗುಜರಾತಿ ಕಲಾವಿದರು ಗರ್ಬಾ ನೃತ್ಯ ಪ್ರದರ್ಶಿಸಿದರು. ಈ ವೇಳೆ ವೇದಿಕೆಯಿಂದ ಕೆಳಗಿಳಿದ ರಾಜ್ಯಪಾಲರು ನೃತ್ಯಕ್ಕೆ ಹೆಜ್ಜೆ ಹಾಕುವ ಮೂಲಕ ಎಲ್ಲರ ಗಮನಸೆಳೆದರು.