Tag: Vallabhbhai Patel

  • ಏಕತಾ ಪ್ರತಿಮೆ ಅನಾವರಣವಾದ ಮರುದಿನವೇ ನೇತಾಜಿ ಪ್ರತಿಮೆಗೆ ಬೇಡಿಕೆ ಇಟ್ಟ ಕುಟುಂಬಸ್ಥರು

    ಏಕತಾ ಪ್ರತಿಮೆ ಅನಾವರಣವಾದ ಮರುದಿನವೇ ನೇತಾಜಿ ಪ್ರತಿಮೆಗೆ ಬೇಡಿಕೆ ಇಟ್ಟ ಕುಟುಂಬಸ್ಥರು

    ಕೋಲ್ಕತ್ತಾ: ಗುಜರಾತ್‍ನಲ್ಲಿ ವಲ್ಲಭಭಾಯಿ ಪಟೇಲ್ ಅವರ ಏಕತಾ ಪ್ರತಿಮೆ ಅನಾವರಣದ ಬೆನ್ನಲ್ಲೇ ನೇತಾಜಿ ಸುಭಾಷ್‍ಚಂದ್ರ ಬೋಸ್ ಕುಟುಂಬಸ್ಥರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎರಡು ಬೇಡಿಕೆ ಇಟ್ಟಿದ್ದಾರೆ.

    ಹೌದು, ನವದೆಹಲಿ ಇಂಡಿಯಾ ಗೇಟ್ ಆವರಣದಲ್ಲಿ ನೇತಾಜಿ ಸುಭಾಷ್‍ಚಂದ್ರ ಬೋಸ್ ಪ್ರತಿಮೆ ನಿರ್ಮಿಸಿ ಹಾಗೂ ಅವರ ಜನ್ಮದಿನವಾದ ಜನವರಿ 23ರನ್ನು ‘ವಿಮೋಚನಾ ದಿನ’ವೆಂದು ಘೋಷಿಸಬೇಕು ಎಂದು ನೇತಾಜಿ ಕುಟುಂಬಸ್ಥರು ಮನವಿ ಮಾಡಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರವು ಏಕತಾ ಪ್ರತಿಮೆ ನಿರ್ಮಾಣದಲ್ಲಿ ತನ್ನ ದಿಟ್ಟತನವನ್ನು ತೋರಿದೆ. ಹಾಗೇ ಮುಂದಿನ ವರ್ಷ ಸುಭಾಷ್ ಚಂದ್ರ ಬೋಸ್ ಜನ್ಮದಿನವನ್ನು ವಿಮೋಚನಾ ದಿನವೆಂದು ಘೋಷಿಸಬೇಕು. ಜೊತೆಗೆ ಅವರ ಪ್ರತಿಮೆ ನಿರ್ಮಾಣಕ್ಕೆ ಮುಂದಾಗಬೇಕು ಎಂದು ನೇತಾಜಿ ಸೋದರನ ಮೊಮ್ಮಗ ಚಂದ್ರಕುಮಾರ್ ಭೋಸ್ ಅವರು ಟ್ವೀಟ್ ಮೂಲಕ ಹೇಳಿಕೊಂಡಿದ್ದಾರೆ.

    ಇದಕ್ಕೂ ಮುನ್ನ ಸುಭಾಷ್‍ಚಂದ್ರ ಬೋಸ್ ಅವರ ಆಝಾದ್ ಹಿಂದ್ ಫೌಜ್ ಸ್ಥಾಪನೆ 75ನೇ ವರ್ಷದ ನೆನಪಿಗಾಗಿ ಪ್ರಧಾನಿ ನರೇಂದ್ರ ಮೋದಿ ಕೆಂಪು ಕೋಟೆಯ ಮೇಲೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದರು. ವಿಶೇಷವಾಗಿ ಕಾರ್ಯಕ್ರಮಕ್ಕೆ ಆಝಾದ್ ಹಿಂದ್ ಫೌಜ್ ಟೋಪಿಯನ್ನು ಧರಿಸಿ ಗಮನಸೆಳೆದಿದ್ದರು. ಈಗ ಹೊಸ ಬೇಡಿಕೆಯನ್ನು ಬೋಸ್ ಕುಟುಂಬಸ್ಥರು ಇಟ್ಟಿದ್ದು ಈಗ ಭಾರೀ ಚರ್ಚೆ ಆಗುತ್ತಿದೆ. ಇದನ್ನು ಓದಿ: ಸ್ವಾತಂತ್ರ್ಯ ಸಿಕ್ಕಿ ವರ್ಷಗಳು ಕಳೆದರೂ ನೇತಾಜಿ ಕನಸ್ಸನ್ನು ನನಸು ಮಾಡಲು ಸಾಧ್ಯವಾಗಿಲ್ಲ: ಮೋದಿ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪಟೇಲರ ಪ್ರತಿಮೆ ಉದ್ಘಾಟನೆ ಮೋದಿಯ ಗಿಮಿಕ್ ಅಷ್ಟೇ: ಮಲ್ಲಿಕಾರ್ಜುನ ಖರ್ಗೆ

    ಪಟೇಲರ ಪ್ರತಿಮೆ ಉದ್ಘಾಟನೆ ಮೋದಿಯ ಗಿಮಿಕ್ ಅಷ್ಟೇ: ಮಲ್ಲಿಕಾರ್ಜುನ ಖರ್ಗೆ

    ಹುಬ್ಬಳ್ಳಿ: ಸರ್ದಾರ್ ವಲ್ಲಭಭಾಯಿ ಪಟೇಲರ ಮೂರ್ತಿ ಉದ್ಘಾಟಿಸಿರುವುದು ಪ್ರಧಾನಿ ನರೇಂದ್ರ ಮೋದಿಯವರ ಮುಂಬರುವ ಲೋಕಸಭಾ ಚುನಾವಣೆಯ ಗಿಮಿಕ್ ಎಂದು ಲೋಕಸಭೆಯ ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರಿಗೆ ಒಂದೊಂದು ವರ್ಷ, ಒಂದೊಂದು ರಾಷ್ಟ್ರ ನಾಯಕರ ನೆನಪು ಬರುತ್ತದೆ. ಇದು ಸಹ ಹಾಗೆ. ಇದೆಲ್ಲವೂ ಬಿಜೆಪಿಯವರ ಚುನಾವಣೆ ಗಿಮಿಕ್ ಅಷ್ಟೇ. ಆರ್‍ಎಸ್‍ಎಸ್ ಮತ್ತು ಬಿಜೆಪಿಯ ಯಾವುದೇ ಕಚೇರಿಗಳಲ್ಲಿ ಸ್ವತಂತ್ರ ಹೋರಾಟಗಾರರು ಹಾಗೂ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಭಾವಚಿತ್ರಗಳಿಲ್ಲ. ಅವರ ಕಚೇರಿಯಲ್ಲಿ ಕೇವಲ ಆರ್‍ಎಸ್‍ಎಸ್ ನಾಯಕರ ಫೋಟೋಗಳಿವೆ. ಕಾಂಗ್ರೆಸ್ ಮೊದಲಿನಿಂದಲೂ ರಾಷ್ಟ್ರ ನಾಯಕರನ್ನು ಗೌರವಿಸುತ್ತಾ ಬಂದಿದೆ ಎಂದು ಹೇಳಿದರು.

    ಪ್ರಧಾನಿ ಮೋದಿ ಅವರ ಅಪ್ಪಣೆ ಇಲ್ಲದೇ, ಯಾವ ಗೃಹ ಮಂತ್ರಿಗಳು ಕೆಲಸ ಮಾಡುವುದಿಲ್ಲ. ಹೊಸ ಮೂರ್ತಿಗಳನ್ನು ಕಟ್ಟಿ, ಅವರು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಮೋದಿಯವರು ಹಲವು ಹಗರಣಗಳನ್ನು ಎದುರಿಸುತ್ತಿದ್ದಾರೆ. ಅದನ್ನು ಬೇರೆಡೆ ಸೆಳೆಯಲು ಬಿಜೆಪಿ ಈ ರೀತಿಯ ನಾಟಕ ಮಾಡುತ್ತಿದೆ ಎಂದು ಆರೋಪಿಸಿದರು.

    ರಾಜ್ಯದಲ್ಲಿ ನಡೆಯುತ್ತಿರುವ ಐದು ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸುತ್ತದೆ. ಅಲ್ಲದೇ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿಯವರೇ ನಮ್ಮ ಪ್ರಧಾನಿ ಅಭ್ಯರ್ಥಿ. ರಾಹುಲ್ ಗಾಂಧಿಯವರು ಖಚಿತವಾಗಿ ಪ್ರಧಾನಿಯಾಗುತ್ತಾರೆ. ಪಿ.ಚಿದಂಬರಂ ಅವರು ತಮ್ಮ ವೈಯಕ್ತಿವಾಗಿ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ ಅಷ್ಟೇ ಎಂದು ಸ್ಪಷ್ಟಪಡಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ದೇಶದ ಮಹಾಪುರುಷರನ್ನ ಸ್ಮರಿಸೋದು ಅಪರಾಧವೇ – ಟೀಕೆಗಳಿಗೆ ಮೋದಿ ಟಾಂಗ್

    ದೇಶದ ಮಹಾಪುರುಷರನ್ನ ಸ್ಮರಿಸೋದು ಅಪರಾಧವೇ – ಟೀಕೆಗಳಿಗೆ ಮೋದಿ ಟಾಂಗ್

    ಕೇವಾಡಿಯಾ: ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಚಿಂತನೆಗಳು ಈಗಲೂ ಪ್ರಸ್ತುತವಾಗಿದ್ದು, 500ಕ್ಕೂ ಪ್ರತ್ಯೇಕ ಸಂಸ್ಥಾನಗಳನ್ನು ಒಂದಾಗಿಸುವ ಪಟೇಲರ ಚಿಂತನೆ ಇಂದು ಭಾರತವನ್ನು ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಒಂದಾಗಿಸಿದೆ ಎಂದು ಪ್ರಧಾನಿ ನರೇದ್ರ ಮೋದಿ ಹೇಳಿದ್ದಾರೆ.

    ನರ್ಮದಾ ಜಿಲ್ಲೆಯಲ್ಲಿರುವ ಕೇವಾಡಿಯಾ ಬಳಿ `ಏಕತಾ ಪ್ರತಿಮೆ’ ಅನಾವರಣ ಮಾಡಿ ಮಾತನಾಡಿದ ಪ್ರಧಾನಿ ಮೋದಿ, ದೇಶದ ಅದ್ಭುತ ಶಿಲ್ಪಿಗಳು ಪಟೇಲರ ಅದ್ಭುತ ವಿಗ್ರಹವನ್ನು ಪೂರ್ಣಗೊಳಿಸಿದ್ದಾರೆ. ಈ ಮೂರ್ತಿ ಅದಿವಾಸಿಗಳ ಯೋಗದಾನವಾಗಿದ್ದು, ಇದು ನಿರ್ಮಾಣವಾಗಲು ಪ್ರತ್ಯಕ್ಷವಾಗಿ ಪರೋಕ್ಷವಾಗಿ ಸಹಕರಿಸಿದ ಎಲ್ಲರ ಕಾರ್ಯ ಇತಿಹಾಸದ ಪುಟ ಸೇರಲಿದೆ. ಇದು ಭಾರತದ ಇತಿಹಾಸಲ್ಲಿ ಅರ್ಥಪೂರ್ಣ ದಿನವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಪಟೇಲರ ಪ್ರತಿಮೆ ಅನಾವರಣ ಮಾಡಿದ್ದು ನನ್ನ ಜೀವನದ ಮಹತ್ವದ ಕ್ಷಣವಾಗಿದ್ದು, ಇದು ನಿಮ್ಮ ಆರ್ಶೀವಾದದಿಂದ ಆಗಿದೆ. ಈ ಪತ್ರಿಮೆ ಶ್ರಮ ವಹಿಸಿದ ಪ್ರತಿಯೊಬ್ಬರಿಗೂ ಇದರ ಗೌರವವನ್ನು ಸಲ್ಲಿಸುತ್ತೇನೆ. ಪಟೇಲರ ದೂರದೃಷ್ಟಿ ಮತ್ತು ಕಠಿಣ ನಿಲುವುಗಳೇ ಭಾರತದ ಏಕೀಕರಣಕ್ಕೆ ಕಾರಣ. ಒಂದೊಮ್ಮೆ ಅವರ ಆ ನಿಲುವು ತೆಗೆದುಕೊಳ್ಳದಿದ್ದರೆ ಹೈದರಾಬಾದ್ ಚಾರ್ ಮಿನಾರ್ ಹಾಗೂ ಸೋಮನಾಥ ದೇವಾಲಯವನ್ನು ನೋಡಲು ವೀಸಾ ತೆಗೆದುಕೊಂಡು ಹೋಗುವ ಸ್ಥಿತಿ ನಿರ್ಮಾಣವಾಗುತ್ತಿತ್ತು ಎಂದು ಹೇಳಿದರು. ಇದನ್ನು ಓದಿ: ಏಕತಾ ಪ್ರತಿಮೆಯ ವಿಶೇಷತೆ ಏನು? ಎಷ್ಟು ಬಲಶಾಲಿಯಾಗಿದೆ? ಖರ್ಚು ಎಷ್ಟಾಗಿದೆ? – ಇಲ್ಲಿದೆ ಪೂರ್ಣ ವಿವರ

    ಇದೇ ವೇಳೆ ದೇಶಕ್ಕೆ ಸೇವೆ ಸಲ್ಲಿಸಿದ ಮಹಾನ್ ನಾಯಕರನ್ನು ನೆನೆದರೆ ಕೆಲವರು ತಮ್ಮ ರಾಜಕೀಯ ದೃಷ್ಟಿಯಿಂದ ಇದನ್ನು ಕ್ರೈಂ ಎಂದು ಟೀಕೆ ಮಾಡಿದ್ದಾರೆ. ಇದನ್ನು ನೋಡಿದರೆ ನನಗೆ ಅಚ್ಚರಿಯಾಗುತ್ತಿದೆ. ಒಬ್ಬ ಮಹಾನ್ ದೇಶ ಪ್ರೇಮಿಯನ್ನು ನೆನೆಯುವುದು ಅಪರಾಧವಾಗುತ್ತದಯೇ ಎಂದು ಪ್ರಶ್ನೆ ಮಾಡಿ ಪಟೇಲರ ಸ್ಮಾರಕ ನಿರ್ಮಾಣ ಕುರಿತು ಕೇಳಿ ಬಂದ ಟೀಕೆಗಳಿಗೆ ತಿರುಗೇಟು ನೀಡಿದರು.

    ನಾನು ಸಿಎಂ ಆಗಿದ್ದ ವೇಳೆ ಏಕತಾ ಪ್ರತಿಮೆ ನಿರ್ಮಾಣದ ಕನಸು ಕಂಡಿದ್ದೆ, ಇದಕ್ಕೆ ಲಕ್ಷಾಂತರ ರೈತರು ಕಬ್ಬಿಣವನ್ನು ನೀಡುವ ಮೂಲಕ ಬೆಂಬಲ ನೀಡಿದರು. ಇಂತಹ ದಿನಗಳನ್ನು ದೇಶದ ಚರಿತ್ರೆಯಿಂದ ತೆಗೆದು ಹಾಕುವುದು ಕಷ್ಟಸಾಧ್ಯವಾಗುತ್ತದೆ. ಭಾರತೀಯರಿಗೆ ಇದು ಪ್ರೇರಣೆಯ ಸಂಕೇತವಾಗಿ ನಿಲ್ಲಲಿದೆ ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಗುಜರಾತ್ ಸಿಎಂ ವಿಜಯ್ ರೂಪಾಣಿ, ಮಧ್ಯಪ್ರದೇಶ ರಾಜ್ಯಪಾಲರದ ಆನಂದಿಬೆನ್ ಪಟೇಲ್ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದರು. ಈ ಕಾರ್ಯಕ್ರಮವನ್ನು ಸುಮಾರು 20ಕ್ಕೂ ಹೆಚ್ಚು ಡ್ರೋನ್ ಮೂಲಕ ಸೆರೆಹಿಡಿಯುವ ವ್ಯವಸ್ಥೆ ಮಾಡಲಾಗಿತ್ತು. ಅಲ್ಲದೇ ಪ್ರತಿಮೆಯ ಅನಾವರಣ ಬೆನ್ನಲ್ಲೇ ಐಎಎಫ್ ಪ್ಲೇನ್ ಗಳು ಪ್ರತಿಮೆ ಬಳಿ ತ್ರಿವರ್ಣ ಧ್ವಜವನ್ನು ಗಾಳಿಯಲ್ಲೇ ಸೃಷ್ಟಿಸಿದ್ದವು. ಇದಾದ ಬಳಿಕ 29 ರಾಜ್ಯಗಳು ಹಾಗೂ 2 ಕೇಂದ್ರಾಡಳಿತ ಪ್ರದೇಶಗಳ ಕಲಾವಿದರು ನೃತ್ಯ, ಸಂಗೀತ ಕಲಾ ಪ್ರದರ್ಶನ ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಏಕತಾ ಪ್ರತಿಮೆ ಉದ್ಘಾಟನೆಗೆ ಬರುತ್ತಿರುವ ನಿಮಗೆ ಬಹಿಷ್ಕಾರ: ಮೋದಿಗೆ ಗ್ರಾಮಸ್ಥರ ಪತ್ರ

    ಏಕತಾ ಪ್ರತಿಮೆ ಉದ್ಘಾಟನೆಗೆ ಬರುತ್ತಿರುವ ನಿಮಗೆ ಬಹಿಷ್ಕಾರ: ಮೋದಿಗೆ ಗ್ರಾಮಸ್ಥರ ಪತ್ರ

    ಗಾಂಧಿನಗರ: ಸರ್ದಾರ್ ವಲ್ಲಭಭಾಯಿ ಅವರ ಏಕತಾ ಪ್ರತಿಮೆಯನ್ನು ಲೋರ್ಕಾಪಣೆಗೊಳಿಸಲು ಆಗಮಿಸುತ್ತಿರುವ ಪ್ರಧಾನಿ ಮೋದಿಗೆ 22 ಗ್ರಾಮಗಳ ಬುಡಕಟ್ಟು ಜನಾಂಗದ ಮುಖಂಡರು ಭಾರೀ ಆಕ್ರೋಶ ವ್ಯಕ್ತಪಡಿಸಿ ಬಹಿಷ್ಕಾರ ಹಾಕಿದ್ದಾರೆ.

    ಕೇವಾಡಿಯಾ ಸೇರಿದಂತೆ 22 ಗ್ರಾಮಗಳ ಬುಡಕಟ್ಟು ಜನಾಂಗದ ಮುಖಂಡರು ಪ್ರಧಾನಿ ಮೋದಿಗೆ ಪತ್ರ ಬರೆದು ಪ್ರತಿಮೆ ಹಾಗೂ ಸ್ಮಾರಕ ಅನಾವರಣ ಕಾರ್ಯಕ್ರಮ ನಿಜಕ್ಕೂ ಸಾವಿನ ಸಂಭ್ರಮಾಚರಣೆ ಎಂದು ಹೇಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನು ಓದಿ: ಏಕತಾ ಪ್ರತಿಮೆಯ ವಿಶೇಷತೆ ಏನು? ಎಷ್ಟು ಬಲಶಾಲಿಯಾಗಿದೆ? ಖರ್ಚು ಎಷ್ಟಾಗಿದೆ? – ಇಲ್ಲಿದೆ ಪೂರ್ಣ ವಿವರ

    ಬಹಿರಂಗ ಪತ್ರದಲ್ಲಿ ಏನಿದೆ?:
    ನಿಮ್ಮನ್ನು ನಾವು ಸ್ವಾಗತಿಸುವುದಿಲ್ಲ. ನೀವು ನಮಗೆ ಬೇಡವಾಗಿರುವ ಅತಿಥಿ. ಸರ್ದಾರ್ ಸ್ಮಾರಕ ನಿರ್ಮಾಣಕ್ಕಾಗಿ ಅರಣ್ಯ, ನದಿ, ಜಲಪಾತ, ಭೂಮಿ ಮತ್ತು ಕೃಷಿ ಪ್ರದೇಶಗಳನ್ನು ನಾಶಮಾಡಲಾಗಿದೆ. ನಮ್ಮ ಪೂರ್ವಿಕರ ಕಾಲದಿಂದಲೂ ಇವುಗಳನ್ನೇ ನಂಬಿಕೊಂಡು, ಬದುಕು ಕಟ್ಟಿಕೊಂಡು ಬಂದಿದ್ದೇವೆ. ನಮ್ಮ ಬದುಕನ್ನು ಕಸಿಕೊಂಡು, ಸ್ಮಾರಕ ನಿರ್ಮಾಣ ಮಾಡಲಾಗಿದೆ. ಪ್ರತಿಮೆ ಹಾಗೂ ಸ್ಮಾರಕ ಅನಾವರಣ ಕಾರ್ಯಕ್ರಮ ನಿಜಕ್ಕೂ ಸಾವಿನ ಸಂಭ್ರಮಾಚರಣೆ. ಇದು ನಿಮಗೆ ತೋಚಲಿಲ್ಲವೇ ಎಂದು ಬುಡಕಟ್ಟು ಜನಾಂಗದ ಮುಖಂಡರು ಪ್ರಶ್ನಿಸಿದ್ದಾರೆ.

    ಗುಜರಾತ್ ನಲ್ಲಿ ಅದೆಷ್ಟೋ ಹಳ್ಳಿಗಳಿಗೆ ಶಾಲೆ, ಆಸ್ಪತ್ರೆ, ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯಗಳೇ ಸಿಗುತ್ತಿಲ್ಲ. ತೆರಿಗೆ ರೂಪದಲ್ಲಿ ಪಡೆದ ಜನರ ಹಣವನ್ನು ಜನರ ಮೂಲ ಅವಶ್ಯಕತೆ ಒದಗಿಸಲು ಬಳಸಬೇಕಿತ್ತು. ಆದರೆ ಹಾಗೆ ಮಾಡಲಿಲ್ಲ. ಒಂದು ವೇಳೆ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರಿ ಈಗಲೂ ಬದುಕಿರುತ್ತಿದ್ದರೆ ಇಂತಹ ಪ್ರತಿಮೆ ನಿರ್ಮಾಣಕ್ಕೆ ಯಾರದರೂ ಮುಂದಾಗಿದ್ದರೆ ಅವರು ಕೂಡ ವಿರೋಧ ವ್ಯಕ್ತಪಡಿಸುತ್ತಿದ್ದರು ಎಂದು ಪತ್ರದ ಮೂಲಕ ಕಿಡಿಕಾರಿದ್ದಾರೆ.

    ಏಕತಾ ಪ್ರತಿಮೆ ಯೋಜನೆಗೆ ಕಾಂಗ್ರೆಸ್ ಅಷ್ಟೇ ಅಲ್ಲದೆ, ಹಿರಿಯ ಗುಜರಾತ್ ರಾಜಕಾರಣಿ ಶಂಕರ್ ಸಿಂಗ್ ವಘೇಲಾ ಅವರು ವಿರೋಧ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಭೂಮಿ, ನೆಲೆ ಕಳೆದುಕೊಂಡ 22 ಗ್ರಾಮಗಳ ಬುಡಕಟ್ಟು ಜನಾಂಗದ ನಾಯಕರು ಕಿಡಿ ಹೊರಹಾಕಿದ್ದಾರೆ.

    ಪ್ರವಾಸೋದ್ಯಮ ಕ್ಷೇತ್ರದಲ್ಲಿ ಗುಜರಾತ್ ರಾಜ್ಯವನ್ನು ಅಭಿವೃದ್ಧಿ ಪಡಿಸಲು ಮುಖ್ಯಮಂತ್ರಿಯಾಗಿದ್ದಾಗ ನರೇಂದ್ರ ಮೋದಿ ಈ ಯೋಜನೆಯನ್ನು 2010ರಲ್ಲಿ ಘೋಷಣೆ ಮಾಡಿದ್ದರು. 2010ರಲ್ಲೇ ಘೋಷಣೆ ಮಾಡಿದಾಗಲೇ ಈ ಯೋಜನೆಗೆ ಅಲ್ಲಿನ ಗ್ರಾಮಸ್ಥರಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಗ್ರಾಮಸ್ಥರ ಪ್ರತಿಭಟನೆಯಿಂದಾಗಿ ವಿಳಂಬವಾಗಿ 2013ರ ಅಕ್ಟೋಬರ್ ನಲ್ಲಿ ನಿರ್ಮಾಣ ಕಾರ್ಯ ಆರಂಭಗೊಂಡಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv