Tag: Van Mahotsav

  • ಬೆಂಗಳೂರಿನ ಚೆನ್ನಸಂದ್ರ ಅರಣ್ಯ ಪ್ರದೇಶದಲ್ಲಿ ವನಮಹೋತ್ಸವ

    ಬೆಂಗಳೂರಿನ ಚೆನ್ನಸಂದ್ರ ಅರಣ್ಯ ಪ್ರದೇಶದಲ್ಲಿ ವನಮಹೋತ್ಸವ

    ಬೆಂಗಳೂರು: ಕಸ್ತೂರಿ ನಗರ ಬಡಾವಣೆಯಲ್ಲಿರುವ (Kasturi Nagar Layout) ಚೆನ್ನಸಂದ್ರ ಕೆರೆ / ಅರಣ್ಯ ಪ್ರದೇಶದಲ್ಲಿ ಕಸ್ತೂರಿ ನಗರ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವದಲ್ಲಿ, ಸಮಸ್ತ ನಾಗರೀಕರ ಸಮ್ಮುಖದಲ್ಲಿ, ಸಸಿ ನೆಡುವ ಮತ್ತು ಸ್ವಚ್ಛತೆ  ಮಾಡುವ ಮೂಲಕ ಸಂಭ್ರಮದಿಂದ ವನಮಹೋತ್ಸವ ಕಾರ್ಯಕ್ರಮವನ್ನು (Van Mahotsav Program) ಆಚರಿಸಲಾಯಿತು.

    ಸುಮಾರು ನೂರಕ್ಕೂ ಅಧಿಕ ಬೇರೆ ಬೇರೆ ತಳಿಯ ಸಸಿಗಳನ್ನು ನೆಡಲಾಯಿತು. ಅದರ ಜೊತೆಗೆ ಸ್ವಚ್ಚತಾ ಕಾರ್ಯಕ್ರಮದ ಅಂಗವಾಗಿ, ಅರಣ್ಯ ಪ್ರದೇಶದಲ್ಲಿದ್ದ ಪ್ಲಾಸ್ಟಿಕ್, ಬಾಟಲಿ ಮತ್ತು ಇತರ ಮಣ್ಣಿನಲ್ಲಿ ಕರಗದೇ ಇರುವಂತ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿ ವಿಲೇವಾರಿ ಮಾಡಲಾಯಿತು.  ಇದನ್ನೂ ಓದಿ: ಬಬಲೇಶ್ವರದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯ ಬಾಯ್ಲರ್ ಸ್ಫೋಟ

    ಅರಣ್ಯ ಪ್ರದೇಶದ ಸುತ್ತಲಿನ ಬೇಲಿಯನ್ನು ಬಲಪಡಿಸಿ, ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ನಾಮಫಲಕಗಳನ್ನು ಅಳವಡಿಸಲಾಯಿತು. ಸುಮಾರು ನೂರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಹಿರಿಯ ನಾಗರೀಕರು, ಮಹಿಳೆಯರು, ಮಕ್ಕಳು ಭಾಗವಹಿಸಿದ್ದು ವಿಶೇಷವಾಗಿತ್ತು.

  • ಶಿವಮೊಗ್ಗದಲ್ಲಿ ವನಮಹೋತ್ಸವ ಮೂಲಕ ಪಬ್ಲಿಕ್ ಟಿವಿ ದಶಮಾನೋತ್ಸವ ಸಂಭ್ರಮಾಚರಣೆ

    ಶಿವಮೊಗ್ಗದಲ್ಲಿ ವನಮಹೋತ್ಸವ ಮೂಲಕ ಪಬ್ಲಿಕ್ ಟಿವಿ ದಶಮಾನೋತ್ಸವ ಸಂಭ್ರಮಾಚರಣೆ

    ಶಿವಮೊಗ್ಗ: ರಾಜ್ಯದ ಜನರ ಮನದಲ್ಲಿ ಮನೆ ಮಾತಾಗಿರುವ ನಿಮ್ಮ ಪಬ್ಲಿಕ್ ಟಿವಿಗೆ ದಶಮಾನೋತ್ಸವ ಸಂಭ್ರಮ. ಪಬ್ಲಿಕ್ ಟಿವಿ ವಾಹಿನಿ ಆರಂಭವಾಗಿ 10 ವರ್ಷಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ ಮುನ್ನುಗುತ್ತಿದ್ದು, ದಶಮಾನೋತ್ಸವ ಸಂಭ್ರಮವನ್ನು ವನಮಹೋತ್ಸವ ಆಚರಿಸುವ ಮೂಲಕ ವಿಭಿನ್ನವಾಗಿ ಆಚರಿಸಿದೆ.

    ದಶಮಾನೋತ್ಸವ ಕಾರ್ಯಕ್ರಮವನ್ನು ರಾಜ್ಯದಾದ್ಯಂತ ವನಮಹೋತ್ಸವವಾಗಿ ಆಚರಿಸಲು ಪಬ್ಲಿಕ್ ಟಿವಿ ಆಡಳಿತ ಮಂಡಳಿ ನಿರ್ಧರಿಸಿದೆ. ಅದರಂತೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಗಿಡ ನೆಡುವ ಕಾರ್ಯಕ್ರಮ ಆಯೋಜಿಸಿದೆ. ಇದರ ಹಿನ್ನೆಲೆಯಲ್ಲಿ ಶಿವಮೊಗ್ಗದ ಬಯೋ ಡೈವರ್ಸಿಟಿ ಪಾರ್ಕ್ ಆವರಣದಲ್ಲಿ ಪಬ್ಲಿಕ್ ಟಿವಿ, ರೋಟರಿ ಸಹಯೋಗದೊಂದಿಗೆ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಇದನ್ನೂ ಓದಿ: ಸಿದ್ದಗಂಗಾ ಮಠದಲ್ಲಿ ಪಬ್ಲಿಕ್ ಟಿವಿ ದಶಮಾನೋತ್ಸವ ಸಂಭ್ರಮಕ್ಕೆ ಚಾಲನೆ

    ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಮೇಯರ್ ಸುನೀತಾ ಅಣ್ಣಪ್ಪ ಹಾಗು ರೋಟರಿ ಕ್ಲಬ್ ಸದಸ್ಯರು ಭಾಗವಹಿಸಿ ಗಿಡ ನೆಡುವ ಮೂಲಕ ಪಬ್ಲಿಕ್ ಟಿವಿಗೆ ಹಾಗೂ ವಾಹಿನಿ ಮುಖ್ಯಸ್ಥ ಎಚ್.ಆರ್.ರಂಗನಾಥ್ ಅವರಿಗೆ ಶುಭಾಶಯ ಕೋರಿದರು. ಇದನ್ನೂ ಓದಿ: ಸಂಸ್ಕೃತದಲ್ಲಿ 5 ಚಿನ್ನದ ಪದಕಗಳನ್ನ ಗೆದ್ದ ಮುಸ್ಲಿಂ ದಿನಗೂಲಿ ಕಾರ್ಮಿಕನ ಮಗಳು

    ಕೋವಿಡ್ ಸಂದರ್ಭದಲ್ಲಿ ಶಾಲೆಗಳು ಬಂದ್ ಆಗಿದ್ದ ವೇಳೆ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಪಬ್ಲಿಕ್ ಟಿವಿ, ರೋಟರಿ ಸಹಯೋಗದೊಂದಿಗೆ ಸರ್ಕಾರಿ ಪ್ರೌಢಶಾಲೆಯ 10 ನೇ ತರಗತಿ ಮಕ್ಕಳಿಗೆ ಟ್ಯಾಬ್ ವಿತರಣೆ ಮಾಡಿತ್ತು. ಪಬ್ಲಿಕ್ ಟಿವಿಯ ಈ ಕಾರ್ಯಕ್ಕೆ ರಾಜ್ಯದ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇದೀಗ ಪಬ್ಲಿಕ್ ಟಿವಿಯ ದಶಮಾನೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಪರಿಸರದ ಬಗ್ಗೆ ವಾಹಿನಿಗೆ ಇರುವ ಕಾಳಜಿಯನ್ನು ತೋರಿಸುತ್ತಿದೆ ಎಂದು ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.