Tag: Vande Bharat

  • ನಮ್ಮ ಮೆಟ್ರೋಗೆ ರಾಜ್ಯದ ಪಾಲೇ ಹೆಚ್ಚು – ಮೋದಿ ಎದುರೇ ಸಿದ್ದರಾಮಯ್ಯ ‘ಕ್ರೆಡಿಟ್‌’ ಕ್ಲೈಮ್

    ನಮ್ಮ ಮೆಟ್ರೋಗೆ ರಾಜ್ಯದ ಪಾಲೇ ಹೆಚ್ಚು – ಮೋದಿ ಎದುರೇ ಸಿದ್ದರಾಮಯ್ಯ ‘ಕ್ರೆಡಿಟ್‌’ ಕ್ಲೈಮ್

    – ಕೇಂದ್ರದಿಂದ 7,468.86 ಕೋಟಿ, ರಾಜ್ಯದಿಂದ 25,387 ಕೋಟಿ ರೂ. ಖರ್ಚು; ವಿವರ ಕೊಟ್ಟ ಸಿಎಂ

    ಬೆಂಗಳೂರು: ಮೆಟ್ರೋ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆ. ಕೇಂದ್ರ 50%, ರಾಜ್ಯ 50% ಖರ್ಚು ಮಾಡುವ ಒಪ್ಪಂದ ಆಗಿದೆ. ಆದ್ರೆ ರಾಜ್ಯ ಸರ್ಕಾರವೇ ಹೆಚ್ಚು ಖರ್ಚು ಮಾಡ್ತಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಪ್ರಧಾನಿ ಮೋದಿ ಎದುರೇ ಕ್ರೆಡಿಟ್‌ ಕ್ಲೈಮ್‌ ಮಾಡಿಕೊಂಡರು.

    ಐಐಐಟಿಯಲ್ಲಿ ನಮ್ಮ ಮೆಟ್ರೋದ ಕಿತ್ತಳೆ ಮಾರ್ಗಕ್ಕೆ (Orange Line) ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತಮಾಡಿದ ಸಿಎಂ ಮೋದಿ ಎದುರೇ ಕ್ರೆಡಿಟ್‌ ತೆಗೆದುಕೊಂಡರು. ಇದನ್ನೂ ಓದಿ: ಬೆಂಗಳೂರಿಗೆ ಬಿಜೆಪಿಯ ಯಾವೊಬ್ಬ ನಾಯಕ 10 ರೂ. ಅನುದಾನ ತಂದಿಲ್ಲ: ಡಿಕೆಶಿ ಆಕ್ರೋಶ

    ಮೋದಿಯವ್ರು (Narendra Modi) ಮೂರು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಮೆಟ್ರೋ ಕೇಂದ್ರ ರಾಜ್ಯಗಳ ಸಹಯೋಗದೊಂದಿಗೆ ನಡೆಯುವ ಯೋಜನೆ. ಈ ಯೋಜನೆಗೆ ಕೇಂದ್ರ 50%, ರಾಜ್ಯ 50% ಖರ್ಚು ಮಾಡುವ ಒಪ್ಪಂದ ಆಗಿದೆ. ಆದ್ರೆ ರಾಜ್ಯ ಸರ್ಕಾರವೇ ಹೆಚ್ಚು ಕರ್ಚು ಮಾಡ್ತಿದೆ, ಕೇಂದ್ರ ತಾಂತ್ರಿಕ ಮತ್ತು ಹಣಕಾಸು ನೆರವು ಕೊಡ್ತಿದೆ. ಹಾಗಾಗಿ ಇದು ಕೇಂದ್ರ, ರಾಜ್ಯಗಳ ಜಂಟಿ ಕಾರ್ಯಕ್ರಮ ಎಂದು ಹೇಳಿದರು. ಇದನ್ನೂ ಓದಿ: ಆಪರೇಷನ್ ಸಿಂಧೂರ ನಂತರ ಮೊದಲ ಬಾರಿಗೆ ಬೆಂಗಳೂರಿಗೆ ಬಂದಿದ್ದೇನೆ: ಮೋದಿ

    ಈಗಾಗಲೇ 96.10 ಕಿಮೀ ಮೆಟ್ರೋ ರೈಲು ಕೆಲಸ ಮುಗಿದಿದೆ. ಇದಕ್ಕೆ ರಾಜ್ಯ 25,387 ಕೋಟಿ ರೂ. ಖರ್ಚು ಮಾಡಿದೆ. ಕೇಂದ್ರ 7,468.86 ಕೋಟಿ ಖರ್ಚು ಮಾಡಿದೆ, ಹಳದಿ ಮಾರ್ಗಕ್ಕೆ 7,160 ಕೋಟಿ ಖರ್ಚಾಗಿದೆ ಎಂದು ಹೇಳಿದ ಸಿಎಂ ಮೋದಿ ಎದುರಲ್ಲೇ ಕ್ರೆಡಿಟ್‌ ಕ್ಲೈಮ್‌ ಮಾಡಿಕೊಂಡರು. ಇದನ್ನೂ ಓದಿ: ಆಪರೇಷನ್‌ ಸಿಂಧೂರ ಯಶಸ್ಸಿನ ಹಿಂದೆ ಬೆಂಗಳೂರಿನ ತಂತ್ರಜ್ಞಾನವಿದೆ: ಮೋದಿ ಅಭಿನಂದನೆ

    2030ರ ಹೊತ್ತಿಗೆ 220 ಕಿ.ಮೀ ಉದ್ದದ ಮೆಟ್ರೋ ಮಾಡುವುದು ಕೇಂದ್ರದ ಉದ್ದೇಶ. ಇದು ಆದರೆ, ನಿತ್ಯ 30 ಲಕ್ಷ ಪ್ರಯಾಣಿಕರು ಮೆಟ್ರೋದಲ್ಲಿ ಪ್ರಯಾಣಿಸಬಹುದು. ಇವತ್ತು 3ನೇ ಹಂತಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ. 3ಎ ಯೋಜನೆಗೆ ಡಿಪಿಆರ್ ರೆಡಿಯಾಗಿದೆ, ಕೇಂದ್ರಕ್ಕೆ ಕಳಿಸಿದ್ದೇವೆ. ಕೇಂದ್ರ ಇದಕ್ಕೆ ಅನುಮತಿ ಕೊಟ್ರೆ ಶೀಘ್ರ ಕಾಮಗಾರಿ ಶುರು ಮಾಡಬಹುದು ಎಂದರಲ್ಲದೇ ಮಹಾರಾಷ್ಟ್ರ, ಗುಜರಾತ್‌ ರಾಜ್ಯಗಳಿಗೆ ಒತ್ತು ಕೊಡುವಷ್ಟೇ ಕರ್ನಾಟಕಕ್ಕೂ ಒತ್ತು ಕೊಡಿ ಎಂದು ವೇದಿಕೆಯಲ್ಲೇ ಪ್ರಧಾನಿಗೆ ಸಿಎಂ ಆಗ್ರಹಿಸಿದರು. ಇದನ್ನೂ ಓದಿ: ಭಾರತೀಯ ವಿಮಾನಗಳಿಗೆ ನಿರ್ಬಂಧ – ಪಾಕಿಗೆ 1,240 ಕೋಟಿ ನಷ್ಟ

  • ಬೆಂಗಳೂರು-ಬೆಳಗಾವಿ ವಂದೇಭಾರತ್‌ ರೈಲಿಗೆ ಮೋದಿ ಹಸಿರು ನಿಶಾನೆ

    ಬೆಂಗಳೂರು-ಬೆಳಗಾವಿ ವಂದೇಭಾರತ್‌ ರೈಲಿಗೆ ಮೋದಿ ಹಸಿರು ನಿಶಾನೆ

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಮೆಜೆಸ್ಟಿಕ್‌ ಬಳಿ ಇರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಿಂದ ಮೂರು ವಂದೇಭಾರತ್‌ ರೈಲಿಗೆ (Vande Bharat Express) ಹಸಿರು ನಿಶಾನೆ ತೋರಿಸಿದ್ದಾರೆ.

    ಇದೇ ಸಮಯದಲ್ಲಿ ಅಮೃತ್‍ಸರ್ ದಿಂದ ಶ್ರೀ ಮಾತಾ ವೈಷ್ಣೋದೇವಿ ಕತ್ರಾ ಹಾಗೂ ನಾಗ್‍ಪುರ್ (ಅಜ್ನಿ) ಯಿಂದ ಪುಣೆಯ ವರೆಗೆ ಚಲಿಸಲಿರುವ ವಂದೇ ಭಾರತ್ ಎಕ್ಸ್‍ಪ್ರೆಸ್ ರೈಲುಗಳಿಗೂ ಸಹ ವರ್ಚುವಲ್ ಮೂಲಕ ಚಾಲನೆ ನೀಡಿದರು.

    ಈ ಸಮಯದಲ್ಲಿ ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಸೇರಿದಂತೆ ಗಣ್ಯರು ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಮೋದಿ Live – 3 ವಂದೇ ಭಾರತ್‌ ರೈಲುಗಳಿಗೆ ಮೋದಿ ಚಾಲನೆ

    ಬೆಂಗಳೂರು- ಬೆಳಗಾವಿ  ರೈಲು ಸಂಚಾರದಿಂದ ಬೆಂಗಳೂರು, ತುಮಕೂರು, ದಾವಣಗೆರೆ, ಹಾವೇರಿ, ಧಾರವಾಡ ಹಾಗೂ ಬೆಳಗಾವಿ ಮಧ್ಯೆ ಸಂಪರ್ಕ ಹೆಚ್ಚಲಿದ್ದು, ಈ ಭಾಗದ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

    ಈ ರೈಲು 8 ಜಿಲ್ಲೆಗಳ ಮೂಲಕ ಹಾದು ಹೋಗಲಿದ್ದು, ಬುಧವಾರ ಹೊರತುಪಡಿಸಿ ವಾರದ 6 ದಿನ ಈ ರೈಲು ಸಂಚರಿಸಲಿದೆ. ಕಿತ್ತೂರು ಕರ್ನಾಟಕ, ದಕ್ಷಿಣ ಕರ್ನಾಟಕ ಮೂಲಕ ರಾಜ್ಯ ರಾಜಧಾನಿ ಸಂಪರ್ಕಿಸಲಿದೆ. ಬೆಳಗಾವಿಯಿಂದ ಬೆಳಗ್ಗೆ 5:20ಕ್ಕೆ ಹೊರಟು ಮಧ್ಯಾಹ್ನ 1:50ಕ್ಕೆ ಬೆಂಗಳೂರು ತಲುಪುವ ರೈಲು, ಮಧ್ಯಾಹ್ನ 2:20ಕ್ಕೆ ಬೆಂಗಳೂರಿನಿಂದ ಹೊರಟು ರಾತ್ರಿ 10:40ಕ್ಕೆ ಬೆಳಗಾವಿ ತಲುಪಲಿದೆ. ಈ ರೈಲು ತುಮಕೂರು, ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ಧಾರವಾಡ ನಡುವೆ ಸಂಪರ್ಕಿಸಲಿದೆ.

    ಒಟ್ಟಿನಲ್ಲಿ ಈ ವಂದೇ ಭಾರತ್ ರೈಲು 8 ಗಂಟೆ 50 ನಿಮಿಷಗಳಲ್ಲಿ 611 ಕಿಲೋ ಮೀಟರ್ ದೂರ ಕ್ರಮಿಸಲಿದ್ದು, ರಾಜ್ಯದ ರೈಲ್ವೆ ಇತಿಹಾಸದಲ್ಲಿ ಮೈಲುಗಲ್ಲಾಗಿದೆ.

  • ವಿಶ್ವದ ಅತಿ ಎತ್ತರದ ಚೆನಾಬ್‌ ರೈಲ್ವೆ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ – ವಂದೇ ಭಾರತ್ ರೈಲಿಗೂ ಚಾಲನೆ

    ವಿಶ್ವದ ಅತಿ ಎತ್ತರದ ಚೆನಾಬ್‌ ರೈಲ್ವೆ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ – ವಂದೇ ಭಾರತ್ ರೈಲಿಗೂ ಚಾಲನೆ

    ಶ್ರೀನಗರ: ಪಹಲ್ಗಾಮ್‌ ಭಯೋತ್ಪಾದಕ ದಾಳಿ ಬಳಿಕ ಜಮ್ಮು ಮತ್ತು ಕಾಶ್ಮೀರಕ್ಕೆ ಮೊದಲ ಬಾರಿಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದು ವಿಶ್ವದ ಅತಿ ಎತ್ತರದ ಚೆನಾಬ್‌ ರೈಲ್ವೆ ಸೇತುವೆಯನ್ನು (Chenab Bridge) ಉದ್ಘಾಟಿಸಿದರು.

    ಜೊತೆಗೆ ಅಂಜಿ ನದಿಯ ಮೇಲೆ ನಿರ್ಮಿಸಲಾದ ಭಾರತದ ಮೊಟ್ಟ ಮೊದಲ ಕೇಬಲ್-ಸ್ಟೇಡ್ ರೈಲು ಸೇತುವೆಯನ್ನೂ (Anji bridge) ಉದ್ಘಾಟಿಸಿದರು. ಈ ವೇಳೆ ಜಮ್ಮು-ಕಾಶ್ಮೀರ ಸಿಎಂ ಒಮರ್‌ ಅಬ್ದುಲ್ಲಾ (Omar Abdullah) ಹಾಗೂ ರಾಜ್ಯಪಾಲ ಮನೋಜ್‌ ಸಿನ್ಹಾ ಉಪಸ್ಥಿತರಿದ್ದರು. ಚೆನಾಬ್‌ ಸೇತುವೆಯನ್ನು ಉದ್ಘಾಟಿಸಿದ ಬಳಿಕ ರಾಷ್ಟ್ರಧ್ವಜ ಹಿಡಿದು ಒಂದು ಸುತ್ತು ಪ್ರದಕ್ಷಿಣೆ ಹಾಕಿದರು.

    ಚೆನಾಬ್‌ ಸೇತುವೆ ಬಳಿಕ ಜಮ್ಮು ಮತ್ತು ಕಾಶ್ಮೀರದ ಕತ್ರಾ-ಶ್ರೀನಗರ (Katra To Srinagar) ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲಿಗೆ ಹಸಿರು ನಿಶಾನೆ ತೋರಿದರು. ಹಾಗೂ ವಿದ್ಯಾರ್ಥಿಗಳೊಂದಿಗೆ ಕೆಲ ಕಾಲ ಸಂವಾದ ಸಹ ನಡೆಸಿದರು. ಇದನ್ನೂ ಓದಿ: ತನ್ನ ಬಾಯ್‌ಫ್ರೆಂಡ್‌ನಿಂದ ಮಗಳ ಮೇಲೆಯೇ ರೇಪ್‌ ಮಾಡಿಸಿದ್ದ ಬಿಜೆಪಿ ನಾಯಕಿ ಅರೆಸ್ಟ್‌

    ವಿವಿಧ ಅಭಿವೃದ್ಧಿ ಕಾಮಗಾರಿ ಯೋಜನೆಗಳಿಗೆ ಚಾಲನೆ ನೀಡುವ ಹಿನ್ನೆಲೆ ಜಮ್ಮು ಕಾಶ್ಮೀರಕ್ಕಿಂದು ಪ್ರಧಾನಿ ಮೋದಿ ಪ್ರವಾಸ ಕೈಗೊಂಡಿದ್ದಾರೆ. ಮಾತಾ ವೈಷ್ಣೋದೇವಿ ದೇವಾಲಯದ ನೆಲೆಯಾದ ಕತ್ರಾದಲ್ಲಿ 46,000 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಮೋದಿ ಚಾಲನೆ ನೀಡಲಿದ್ದಾರೆ. ಕತ್ರಾದಲ್ಲಿ 350 ಕೋಟಿ ರೂ.ಗಿಂತಲೂ ಹೆಚ್ಚು ವೆಚ್ಚದ ಶ್ರೀ ಮಾತಾ ವೈಷ್ಣೋದೇವಿ ವೈದ್ಯಕೀಯ ಸಂಸ್ಥೆಯ ಶಂಕುಸ್ಥಾಪನೆಯನ್ನೂ ನೆರವೇರಿಸಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಸತತ 3ನೇ ಬಾರಿ ರೆಪೋ ದರ ಇಳಿಕೆ – ಗೃಹ ಸಾಲ, ಇಎಂಐ ಸೌಲಭ್ಯದಾರರಿಗೆ ಗುಡ್‌ನ್ಯೂಸ್‌

    ಚೆನಾಬ್‌ ಸೇತುವೆ ವಿಶೇಷತೆ ಏನು?
    ಜಮ್ಮು ಕಾಶ್ಮೀರದ ಚೇನಾಬ್ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಚೆನಾಬ್‌ ಸೇತುವೆ ಐಫೆಲ್ ಟವರ್‌ಗಿಂತಲೂ ಎತ್ತರವಾಗಿ ನಿರ್ಮಾಣವಾಗಿರುವ, ವಿಶ್ವದಲ್ಲೇ ಅತಿ ಎತ್ತರದ ರೈಲ್ವೆ ಸೇತುವೆ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ. 2021ರಲ್ಲಿ ಸೇತುವೆಯ ಕಮಾನು ಕೆಲಸ ಪೂರ್ಣಗೊಂಡಿತ್ತು. ಇದನ್ನೂ ಓದಿ: ಇನ್ಮುಂದೆ ಭಾರತದಲ್ಲೇ ತಯಾರಾಗುತ್ತೆ ರಫೇಲ್ ಬಿಡಿಭಾಗಗಳು – ಟಾಟಾ ಜೊತೆ ಡಸಾಲ್ಟ್ ಒಪ್ಪಂದ

    ಈ ಸೇತುವೆಯನ್ನು ಅಂದಾಜು 18 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಇದು ಪ್ಯಾರಿಸ್‌ನ ಐಫೆಲ್ ಟವರ್‌ಗಿಂತಲೂ 35 ಮೀ. ಎತ್ತರದಲ್ಲಿ ನಿರ್ಮಾಣವಾಗಿದೆ. ಚೆನಾಬ್ ಸೇತುವೆ ಚೆನಾಬ್ ನದಿ ಮಟ್ಟದಿಂದ 359 ಮೀ. ಎತ್ತರದಲ್ಲಿ ನಿರ್ಮಾಣವಾಗಿದ್ದು, 1.3 ಕಿ.ಮೀ. ಉದ್ದವಿದೆ. ಇದರ ಉಕ್ಕಿನ ಕಮಾನುಗಳು ಭೂಕಂಪನ, ಬಲವಾದ ಗಾಳಿಯನ್ನೂ ತಡೆಯುವ ಸಾಮರ್ಥ್ಯ ಹೊಂದಿದೆ, ಆ ರೀತಿ ಕಮಾನುಗಳನ್ನು ವಿನ್ಯಾಸಗೊಳಿಸಲಾಗಿದೆ.

    ರೈಲ್ವೇ ಸೇತುವೆ ನಿರ್ಮಾಣಕ್ಕೆ ಕಮಾನು ಸ್ಥಾಪನೆ ಎಂಜಿನಿಯರುಗಳಿಗೆ ದೊಡ್ಡ ಸವಾಲಾಗಿತ್ತು. ರೈಲ್ವೇ ಮಾರ್ಗದ 111 ಕಿ.ಮೀ ನಲ್ಲಿ 97 ಕಿ.ಮೀ ನಷ್ಟು ಸುರಂಗ ಮಾರ್ಗವೇ ಇದೆ. ಇಷ್ಟು ದೂರದ ಸುರಂಗ ಮಾರ್ಗ ದೇಶದ ಬೇರೆ ಯಾವ ಭಾಗಗಳಲ್ಲೂ ಮಾಡಲಾಗಿಲ್ಲ. ಇದನ್ನೂ ಓದಿ: ದೆಹಲಿ ನಿವಾಸದ ಎದುರು ಸಿಂದೂರ ಸಸಿ ನೆಟ್ಟ ಮೋದಿ

    ಸೇತುವೆ ನಿರ್ಮಾಣಕ್ಕೆ 17 ಕಂಬಗಳನ್ನು ನಿರ್ಮಿಸಲಾಗಿದ್ದು, ಒಟ್ಟು 28,660 ಮೆಟ್ರಿಕ್ ಟನ್‌ನಷ್ಟು ಉಕ್ಕನ್ನು ಬಳಸಲಾಗಿದೆ. ಕಮಾನಿನ ತೂಕ 10,619 ಮೆಟ್ರಿಕ್ ಟನ್ ಇದೆ. ಸೇತುವೆಗೆ ಬಳಸಲಾದ ಉಕ್ಕು 10 ಡಿಗ್ರಿ ಸೆಲ್ಸಿಯಸ್‌ನಿಂದ ಮೈನಸ್ 40 ಡಿಗ್ರಿ ಸೆಲ್ಸಿಯಸ್‌ವರೆಗಿನ ತಾಪಮಾನಕ್ಕೆ ಸೂಕ್ತವಾಗಿದೆ. ಕನಿಷ್ಠ 120 ವರ್ಷಗಳ ಜೀವಿತಾವಧಿ ಈ ರಚನೆಗಿದ್ದು, ಗಂಟೆಗೆ 266 ಕಿ.ಮೀ ವೇಗದ ಗಾಳಿಯನ್ನು ತಡೆದುಕೊಳ್ಳುವ ಸಾಮರ್ಥ್ಯವನ್ನು ಹೊಂದಿದೆ.

    ಕಾಶ್ಮೀರಕ್ಕೆ ರೈಲು ಮಾರ್ಗವನ್ನು ಹಾಕುವ ಯೋಜನೆಯನ್ನು 1990ರ ದಶಕದಲ್ಲಿ ಆಗಿನ ಪ್ರಧಾನಿ ಪಿ.ವಿ ನರಸಿಂಹರಾವ್ ಅವರು ಪ್ರಕಟಿಸಿದ್ದರು. 2002ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಅವರು ಆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಕರೆದಿದ್ದರು. ಇದನ್ನೂ ಓದಿ: ಆರ್‌ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ | ಇದು ಹೃದಯ ವಿದ್ರಾವಕ ಘಟನೆ – ಮೃತರಿಗೆ ಮೋದಿ ಸಂತಾಪ

  • ಮುಂದಿನ ವರ್ಷ ವಂದೇ ಭಾರತ್‌ ಸ್ಲೀಪರ್‌ ಕೋಚ್‌ ರೈಲು ಬಿಡುಗಡೆ

    ಮುಂದಿನ ವರ್ಷ ವಂದೇ ಭಾರತ್‌ ಸ್ಲೀಪರ್‌ ಕೋಚ್‌ ರೈಲು ಬಿಡುಗಡೆ

    ನವದೆಹಲಿ: ವಂದೇ ಭಾರತ್‌ ಸ್ಲೀಪರ್‌ ಕೋಚ್‌ (Vande Bharat Express Sleeper Trains) ಮತ್ತು ವಂದೇ ಮೆಟ್ರೋ (Vande Metro) ರೈಲು ಮುಂದಿನ ವರ್ಷ ಬಿಡುಗಡೆಯಾಗಲಿದೆ.

    2024ರ ಮಾರ್ಚ್‌ ಒಳಗಡೆ ಇಂಟಿಗ್ರಲ್‌ ಕೋಚ್‌ ಫ್ಯಾಕ್ಟರಿ (ICF) ವಂದೇ ಭಾರತ್‌ ಸ್ಲೀಪರ್‌ ಕೋಚ್‌ ರೈಲನ್ನು ಬಿಡುಗಡೆ ಮಾಡಲಿದೆ. ಮೊದಲ ರೈಲಿನ ನಿರ್ಮಾಣ ಕಾರ್ಯ ಈಗಾಗಲೇ ಆರಂಭಗೊಂಡಿದೆ ಎಂದು ಎಂದು ಐಸಿಎಫ್‌ ಜನರಲ್‌ ಮ್ಯಾನೇಜರ್‌ ಬಿಜಿ ಮಲ್ಯ ತಿಳಿಸಿದ್ದಾರೆ. ಇದನ್ನೂ ಓದಿ: ಪೂಜೆಗೆ ತೆರಳಿದ್ದ ವೈದ್ಯ ಹೇಮಾವತಿ ನದಿಯಲ್ಲಿ ಮುಳುಗಿ ಸಾವು

     

    ಸ್ಲೀಪರ್‌ ಕೋಚ್‌ ಜೊತೆಗೆ ಕಡಿಮೆ ದರ ಇರುವ ವಂದೇ ಮೆಟ್ರೋ ರೈಲನ್ನು ಐಸಿಎಫ್‌ ನಿರ್ಮಾಣ ಮಾಡುತ್ತಿದೆ. 12 ಬೋಗಿಗಳು ಇರುವ ವಂದೇ ಮೆಟ್ರೋ ಕಡಿಮೆ ದೂರದ ನಗರಗಳನ್ನು ಸಂಪರ್ಕಿಸಲಿದೆ. ಜನವರಿ 2024ರ ಒಳಗಡೆ ವಂದೇ ಮೆಟ್ರೋ ಬಿಡುಗಡೆಯಾಗುವ ನಿರೀಕ್ಷೆಯಿದೆ.

    ರಾತ್ರಿ ವೇಳೆ ವಂದೇ ಭಾರತ್‌ ರೈಲನ್ನು ಓಡಿಸಬೇಕು ಎಂಬ ಬೇಡಿಕೆ ಪ್ರಯಾಣಿಕರ ಕಡೆಯಿಂದ ಬಂದಿದ್ದರೂ ಸದ್ಯ ಸ್ಲೀಪರ್‌ ಕೋಚ್‌ ಇಲ್ಲದ ಕಾರಣ ರೈಲ್ವೇ ವಂದೇ ಭಾರತ್‌ ರೈಲನ್ನು ಓಡಿಸುತ್ತಿಲ್ಲ. ಈ ಕಾರಣಕ್ಕೆ ರಾತ್ರಿಯ ಸಂಚಾರ ಸುಗಮವಾಗಲೆಂದು ರೈಲ್ವೇ ಈಗ ವಂದೇ ಭಾರತ್‌ ಸ್ಲೀಪರ್‌ ಕೋಚ್‌ ನಿರ್ಮಾಣ ಮಾಡುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಂದೇ ಭಾರತ್​ ರೈಲಿನ ಒಳಗಡೆ ಲಗ್ಗೆ ಇಡಲು ನಂದಿನಿ ತಯಾರಿ!

    ವಂದೇ ಭಾರತ್​ ರೈಲಿನ ಒಳಗಡೆ ಲಗ್ಗೆ ಇಡಲು ನಂದಿನಿ ತಯಾರಿ!

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ (Narendra Modi) ಕನಸಿನ ವಂದೇ ಭಾರತ್​ ರೈಲಿನ (Vande Bharat Train) ಒಳಗಡೆ ನಂದಿನಿ (Nandini) ಲಗ್ಗೆ ಇಡಲು ಸಜ್ಜಾಗಿದೆ.

    ಹೌದು. ಕರ್ನಾಟಕ ಚುನಾವಣೆಯ ಸಮಯದಲ್ಲಿ ನಂದಿನಿ ವರ್ಸಸ್​ ಅಮುಲ್ (Amul) ವಿಚಾರ ಜೋರು ಚರ್ಚೆಯಾಗಿತ್ತು. ನಂದಿನಿಯ ಮಾರುಕಟ್ಟೆಯನ್ನು ಅಮುಲ್‌ ಕಬಳಸಿಲು ಮುಂದಾಗಿದೆ ಎಂದು ಬಿಂಬಿಸಲಾಗುತ್ತಿತ್ತು. ಆದರೆ ಈಗ ನಂದಿನಿ ಉತ್ಪನ್ನಗಳನ್ನು ವಂದೇ ಭಾರತ್‌ ರೈಲಿನಲ್ಲಿ ವಿತರಿಸಲು ಕೆಎಂಎಫ್‌ (KMF) ಚಿಂತನೆ ನಡೆಸಿದೆ. ಇದನ್ನೂ ಓದಿ: ಅಯೋಧ್ಯೆ ರಾಮಮಂದಿರ ನಿರ್ಮಾಣಕ್ಕೆ ಮುಸ್ಲಿಮರಿಗೆ ಟೆಂಡರ್: ಪ್ರಮೋದ್ ಮುತಾಲಿಕ್ ಕಿಡಿ

    ಸದ್ಯ ರಾಜ್ಯದಲ್ಲಿ ಪ್ರತಿ ದಿನ ಸುಮಾರು 75-85 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತಿದ್ದು, ಈ ಪೈಕಿ 8ರಿಂದ 9 ಲಕ್ಷ ಲೀಟರ್ ಹಾಲಿನಿಂದ ಇತರೆ ಉತ್ಪನ್ನಗಳ ತಯಾರಿ ನಡೆಸಲಾಗುತ್ತಿದೆ. ಉತ್ಪನ್ನಗಳ ಬಳಕೆಯ ಹಾಲಿನ ಪ್ರಮಾಣ ಏರಿಸಲು ಚಿಂತಿಸಿರುವ ಕೆಎಂಎಫ್ 9 ರಿಂದ 11 ಅಥವಾ 12 ಲಕ್ಷ ಲೀಟರ್ ಹಾಲನ್ನು ಬಳಸಲು ಚಿಂತನೆ ನಡೆಸುತ್ತಿದೆ.

    ಲಸ್ಸಿ, ಮಜ್ಜಿಗೆ, ಪೇಡಾ, ನಂದಿನಿ ಕೋಲ್ಡ್ ಹಾಲು, ಪ್ಲೇವರ್ಡ್ ಡ್ರಿಂಕ್ ಸೇರಿದಂತೆ ನಂದಿನ ಉತ್ಪನ್ನಗಳ ಮಾರಾಟಕ್ಕೆ ಕೆಎಂಎಫ್‌ ಪ್ಲ್ಯಾನ್ ಮಾಡಿದ್ದು ಈ ಸಂಬಂಧ ಸವಿಸ್ತಾರ ಪ್ರಸ್ತಾವನೆ ಸಲ್ಲಿಸಲು ಮುಂದಾಗಿದೆ.

     

    ಕೆಎಂಎಫ್ ಪ್ಲ್ಯಾನ್ ಏನು?
    ಸದ್ಯ ರಾಜ್ಯದಲ್ಲಿ ಪ್ರತಿ ದಿನ ಸುಮಾರು 75-85 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು ಈ ಪೈಕಿ 8 ರಿಂದ 9 ಲಕ್ಷ ಲೀಟರ್ ಹಾಲಿನಿಂದ ಇತರೇ ಉತ್ಪನ್ನಗಳ ತಯಾರಿಸಲಾಗುತ್ತಿದೆ. ಉತ್ಪನ್ನಗಳ ಬಳಕೆಯ ಹಾಲಿನ ಪ್ರಮಾಣ ಏರಿಸಲು ಕೆಎಂಎಫ್ ಚಿಂತಿಸಿದೆ. 9 ರಿಂದ 11 ಅಥವಾ 12 ಲಕ್ಷ ಲೀಟರ್ ಬಳಕೆಗೆ ಚಿಂತನೆ ಮಾಡಿದೆ. ಉತ್ಪಾದನೆ ಜಾಸ್ತಿಯಾದರೆ ನಂದಿನಿ ಉತ್ಪನ್ನಗಳ ಮಾರುಕಟ್ಟೆಯನ್ನು ಮತ್ತಷ್ಟು ವಿಸ್ತಾರಗೊಳಿಸಲು ಸಹಾಯವಾಗಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಟಿಕೆಟ್ ದರ ಇಳಿಕೆ ಸಾಧ್ಯತೆ

    ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಟಿಕೆಟ್ ದರ ಇಳಿಕೆ ಸಾಧ್ಯತೆ

    ನವದೆಹಲಿ: ವಂದೇ ಭಾರತ್ (Vande Bharat) ಎಕ್ಸ್‌ಪ್ರೆಸ್ ರೈಲು ನಿಗದಿತ ಪ್ರಮಾಣದಲ್ಲಿ ಭರ್ತಿಯಾಗದ ಹಿನ್ನೆಲೆ ಕೆಲವು ಮಾರ್ಗಗಳಲ್ಲಿ ಅದರ ಟಿಕೆಟ್ ದರ (Ticket Price) ಇಳಿಕೆ ಮಾಡಲು ರೈಲ್ವೆ ಇಲಾಖೆ (Railway Department) ಚಿಂತಿಸಿದೆ. ಈ ಮೂಲಕ ಬಹು ನಿರೀಕ್ಷಿತ ರೈಲು ಸೇವೆಯನ್ನು ಹೆಚ್ಚಿಸಲು ಇಲಾಖೆ ನಿರ್ಧರಿಸಿದೆ.

    ಇಂದೋರ್-ಭೋಪಾಲ್, ಭೋಪಾಲ್-ಜಬಲ್‌ಪುರ್ ಮತ್ತು ನಾಗ್ಪುರ-ಬಿಲಾಸ್‌ಪುರ ಮಾರ್ಗದ ವಂದೇ ಭಾರತ್ ರೈಲಿನ ಟಿಕೆಟ್ ದರದಲ್ಲಿ ಇಳಿಕೆಯಾಗುವ ಸಾಧ್ಯತೆಗಳಿದೆ. ಭೋಪಾಲ್-ಜಬಲ್ಪುರ್ ವಂದೇ ಭಾರತ್ ಸೇವೆಯು 29% ರಷ್ಟು, ಇಂದೋರ್-ಭೋಪಾಲ್ ವಂದೇ ಭಾರತ್ ಎಕ್ಸ್‌ಪ್ರೆಸ್ ಕೇವಲ 21% ರಷ್ಟು ಪ್ರಯಾಣಿಕರನ್ನು ಮಾತ್ರ ಹೊಂದಿದೆ. ಇದನ್ನೂ ಓದಿ: ದೆಹಲಿಗೆ ಮಾನ್ಸೂನ್ ಎಂಟ್ರಿ- ರಾಷ್ಟ್ರ ರಾಜಧಾನಿ ಕೂಲ್ ಕೂಲ್

    ಈ ಮಾರ್ಗದಲ್ಲಿ ಪ್ರಯಾಣಕ್ಕೆ ಎಸಿ ಚೇರ್ ಕಾರ್ ಟಿಕೆಟ್‌ಗೆ 950 ರೂ. ಮತ್ತು ಎಕ್ಸಿಕ್ಯುಟಿವ್ ಚೇರ್ ಕಾರ್‌ಗೆ 1,525 ರೂ. ಟಿಕೆಟ್ ದರ ನಿಗದಿಪಡಿಸಿದೆ. ರೈಲ್ವೆ ಇಲಾಖೆಯ ಪರಿಶೀಲನೆ ಬಳಿಕ ಈ ಮಾರ್ಗಗಳಲ್ಲಿ ಗಣನೀಯವಾಗಿ ಟಿಕೆಟ್ ದರ ಇಳಿಸಿ ಜನರು ಹೆಚ್ಚು ಸೇವೆಯನ್ನು ಪಡೆಯುವಂತೆ ಮಾಡುವ ಚಿಂತನೆ ಹೊಂದಲಾಗಿದೆ. ಇದನ್ನೂ ಓದಿ: ಮಣಿಪುರ ಹಿಂಸಾಚಾರ – ಇಂಟರ್ನೆಟ್ ಸೇವೆ ನಿಷೇಧ ಜು.10 ರವರೆಗೆ ವಿಸ್ತರಣೆ

    ನಾಗ್ಪುರ-ಬಿಲಾಸ್‌ಪುರ ವಂದೇ ಭಾರತ್ ಎಕ್ಸ್‌ಪ್ರೆಸ್ ಟಿಕೆಟ್ ದರದಲ್ಲೂ ಇಳಿಕೆಯಾಗಬಹುದು ಎನ್ನಲಾಗುತ್ತಿದೆ. ಸದ್ಯ 55% ರಷ್ಟು ರೈಲು ಭರ್ತಿಯಾಗುತ್ತಿದ್ದು, ದರ ಇಳಿಕೆಯಾದಲ್ಲಿ ಜನರ ಪ್ರಮಾಣ ಹೆಚ್ಚಬಹುದು ಎಂದು ನಿರೀಕ್ಷೆ ಮಾಡಲಾಗುತ್ತಿದೆ. ಈವರೆಗೂ 46 ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ದೇಶಾದ್ಯಂತ ಹಲವು ಮಾರ್ಗಗಳಲ್ಲಿ ಸೇವೆ ನೀಡುತ್ತಿವೆ. ಇದನ್ನೂ ಓದಿ: ಯುಪಿಯಲ್ಲಿ ಮುಂದುವರೆದ ಬುಲ್ಡೋಜರ್ ಅಸ್ತ್ರ – ಲವ್ ಜಿಹಾದ್ ಆರೋಪಿ ಮನೆ ಉಡೀಸ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಂದೇ ಭಾರತ್ ರೈಲಿಗೆ ಕಲ್ಲು ಹೊಡೆತ – ಮಕ್ಕಳಿಬ್ಬರು ಪೊಲೀಸರ ವಶಕ್ಕೆ

    ವಂದೇ ಭಾರತ್ ರೈಲಿಗೆ ಕಲ್ಲು ಹೊಡೆತ – ಮಕ್ಕಳಿಬ್ಬರು ಪೊಲೀಸರ ವಶಕ್ಕೆ

    ದಾವಣಗೆರೆ: ವಂದೇ ಭಾರತ್ (Vande Bharat) ರೈಲಿಗೆ ಕಲ್ಲು ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ 12 ವರ್ಷದ ಇಬ್ಬರು ಮಕ್ಕಳನ್ನು ರೈಲ್ವೆ ಪೊಲೀಸರು ದಾವಣಗೆರೆಯಲ್ಲಿ (Davanagere) ವಶಕ್ಕೆ ಪಡೆದಿದ್ದಾರೆ.

    ವಂದೇ ಭಾರತ್ ರೈಲು ಧಾರವಾಡದಿಂದ (Dharwad) ದಾವಣಗೆರೆಗೆ ಆಗಮಿಸುತ್ತಿದ್ದ ಸಂದರ್ಭ ಇಬ್ಬರು ಮಕ್ಕಳು ರೈಲಿಗೆ ಕಲ್ಲು ಹೊಡೆದಿದ್ದು, ಕಲ್ಲಿನ ಹೊಡೆತಕ್ಕೆ ರೈಲಿನ ಕಿಟಕಿ ಗಾಜು ಬಿರುಕು ಬಿಟ್ಟಿತ್ತು. ಈ ಹಿನ್ನೆಲೆ ಇಬ್ಬರು ಮಕ್ಕಳನ್ನು ಆರ್‌ಪಿಎಫ್ (RPF) ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಪೊಲೀಸರ ಎದುರೇ ಎಸ್‌ಎಸ್‌ಎಲ್‌ಸಿ ಹುಡುಗರ ಫೈಟ್ – ಎಸ್‌ಐ ಮೂಗಿಗೆ ಗಾಯ

    ಇವರಿಬ್ಬರು ದಾವಣಗೆರೆಯ ಎಸ್‌ಎಸ್ ನಗರ ಹಾಗೂ ಭಾಷಾ ನಗರದವರಾಗಿದ್ದು, ದಾವಣಗೆರೆ ರೈಲ್ವೆ ಪೊಲೀಸರು ಹಾಗೂ ಆರ್‌ಪಿಎಫ್ ಪೊಲೀಸರ ನೇತೃತ್ವದಲ್ಲಿ ಇವರಿಬ್ಬರನ್ನು ವಶಕ್ಕೆ ಪಡೆದು ಚಿತ್ರದುರ್ಗದ ಬಾಲಮಂದಿರದಲ್ಲಿ ಇರಿಸಿದ್ದಾರೆ. ಇದನ್ನೂ ಓದಿ: ಇಂದಿನಿಂದ ನ್ಯಾಯಬೆಲೆ ಅಂಗಡಿ ಬಂದ್

    ಜೂನ್ 26ರಂದು ಪ್ರಧಾನಿ ನರೇಂದ್ರ ಮೋದಿ ಈ ವಂದೇ ಭಾರತ್ ರೈಲನ್ನು ಲೋಕಾರ್ಪಣೆಗೊಳಿಸಿದ್ದರು. ಜುಲೈ 1ರ ಶನಿವಾರ 3:30ಕ್ಕೆ ಇಬ್ಬರು ಮಕ್ಕಳು ಈ ಕೃತ್ಯವೆಸಗಿದ್ದಾರೆ. ಘಟನೆಯ ಹಿನ್ನೆಲೆ ಆರ್‌ಪಿಎಫ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇದನ್ನೂ ಓದಿ: ಬುಡಕಟ್ಟು ವ್ಯಕ್ತಿ ಮೇಲೆ ಮೂತ್ರವಿಸರ್ಜಿಸಿ ವಿಕೃತಿ- ದುಷ್ಕರ್ಮಿ ಅರೆಸ್ಟ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮತ್ತೆ ವಂದೇ ಭಾರತ್‌ ರೈಲಿಗೆ ಕಲ್ಲು ತೂರಾಟ

    ಮತ್ತೆ ವಂದೇ ಭಾರತ್‌ ರೈಲಿಗೆ ಕಲ್ಲು ತೂರಾಟ

    ಹೈದರಾಬಾದ್‌: ಮತ್ತೆ ವಂದೇ ಭಾರತ್‌ ರೈಲಿನ (Vande Bharat) ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದಾರೆ.

    ವಿಶಾಖಪಟ್ಟಣಂನಲ್ಲಿ (Visakhapatnam) ಜನವರಿ 19 ರಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಚಾಲನೆ ನೀಡಬೇಕಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ಕೋಚ್‌ನ ಎರಡು ಕಿಟಕಿಯ ಗಾಜುಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಕಂಚರಪಾಲೆಂ ಬಳಿ ರೈಲು ನಿರ್ವಹಣೆಗಾಗಿ ನಿಂತಿದ್ದಾಗ ಈ ಘಟನೆ ನಡೆದಿದೆ.

    ಬುಧವಾರ ಸಂಜೆ 6:30 ಕ್ಕೆ ವಿಶಾಖಪಟ್ಟಣಂನಲ್ಲಿ ವಂದೇ ಭಾರತ್ ರೈಲಿಗೆ ಯಾರೋ ಕಲ್ಲು ತೂರಾಟ ನಡೆಸಿದರು. ಎರಡು ಕಿಟಕಿ ಗಾಜುಗಳು ಸಂಪೂರ್ಣವಾಗಿ ಒಡೆದುಹೋಗಿದ್ದು ಇದನ್ನು ಬದಲಾಯಿಸಬೇಕಾಗಿದೆ. ಇದು ಅತ್ಯಂತ ದುರದೃಷ್ಟಕರ ಎಂದು ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಅನುಪ್ ಕುಮಾರ್ ಹೇಳಿದ್ದಾರೆ. ಇದನ್ನೂ ಓದಿ: ಜ.15 ರಿಂದ ಗಾರ್ಡನ್ ಟರ್ಮಿನಲ್ -2 ಸಾರ್ವಜನಿಕರ ಸೇವೆಗೆ ಲಭ್ಯ

    ಈ ರೈಲು ಸಿಕಂದರಾಬಾದ್ ಮತ್ತು ವಿಶಾಖಪಟ್ಟಣಂ ನಡುವೆ ಚಲಿಸಲಿದೆ. ವಾರಂಗಲ್, ಖಮ್ಮಂ, ವಿಜಯವಾಡ ಮತ್ತು ರಾಜಮಂಡ್ರಿಯಲ್ಲಿ ನಿಲುಗಡೆಯಿದೆ.

    ಈ ಹಿಂದೆ ಪಶ್ಚಿಮ ಬಂಗಾಳದಲ್ಲಿ ವಂದೇ ಭಾರತ್‌ ರೈಲು ಸೇವೆ ಆರಂಭಿಸಿದ ನಾಲ್ಕೇ ದಿನಕ್ಕೆ ಕಲ್ಲು ತೂರಾಟ ನಡೆದಿತ್ತು. ಜನವರಿ 3 ಮತ್ತು 4 ರಂದು ಹೌರಾ- ಜಲಪೈಗುರಿ ನಡುವೆ ಆರಂಭಗೊಂಡಿದ್ದ ರೈಲಿಗೆ ಕಲ್ಲು ಎಸೆಯಲಾಗಿತ್ತು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಿಮ್ಮ ತಾಯಿ ಎಂದರೆ ನಮಗೂ ತಾಯಿ: ಭಾವನಾತ್ಮಕವಾಗಿ ಮೋದಿಗೆ ಸಂತಾಪ ತಿಳಿಸಿದ ಮಮತಾ

    ನಿಮ್ಮ ತಾಯಿ ಎಂದರೆ ನಮಗೂ ತಾಯಿ: ಭಾವನಾತ್ಮಕವಾಗಿ ಮೋದಿಗೆ ಸಂತಾಪ ತಿಳಿಸಿದ ಮಮತಾ

    ಕೋಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ತಾಯಿ ಹೀರಾಬೆನ್ ಮೋದಿ (Heeraben Modi) ಅವರು ಇಂದು ಮುಂಜಾನೆ ವಿಧಿವಶರಾಗಿದ್ದು, ಮೋದಿ ತಾಯಿಯ ಎಲ್ಲಾ ಅಂತಿಮ ಸಂಸ್ಕಾರವನ್ನು ಮುಗಿಸಿ ತಮ್ಮ ಕರ್ತವ್ಯಕ್ಕೆ ಮತ್ತೆ ಹಾಜರಾಗಿದ್ದಾರೆ. ತಾಯಿಯ ಅಗಲಿಕೆಯ ದುಃಖದ ನಡುವೆಯೂ ಮೋದಿ ಬಿಡುವನ್ನು ಪಡೆದುಕೊಳ್ಳದೇ ಎಲ್ಲಾ ಕಾರ್ಯಕ್ರಮಗಳಲ್ಲೂ ಹಾಜರಾಗುತ್ತಿರುವುದಕ್ಕೆ ಪಶ್ಚಿಮ ಬಂಗಾಳದ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಭಾವುಕರಾಗಿ ಮೋದಿಗೆ ವಿಶ್ರಾಂತಿ ತೆಗೆದುಕೊಳ್ಳುವಂತೆ ಸಲಹೆಯನ್ನು ನೀಡಿದ್ದಾರೆ.

    ಇಂದು ಪಶ್ಚಿಮ ಬಂಗಾಳದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಹಾಗೂ ಇತರ ಹಲವಾರು ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಮೋದಿ ಬಂಗಾಳ ಭೇಟಿ ನೀಡಬೇಕಿತ್ತು. ಆದರೆ ತಮ್ಮ ತಾಯಿಯ ಮರಣದ ಹಿನ್ನೆಲೆ ಅವರು ಬಂಗಾಳ ಭೇಟಿಯನ್ನು ರದ್ದುಗೊಳಿಸಿದ್ದಾರೆ. ಆದರೂ ಮೋದಿ ಯಾವುದೇ ವಿಶ್ರಾಂತಿ ಪಡೆಯದೇ ವೀಡಿಯೋ ಕಾನ್ಫರೆನ್ಸ್ ಮುಖಾಂತರ ವರ್ಚುವಲ್ ಆಗಿ ತಮ್ಮ ಹುಟ್ಟೂರಿನಿಂದಲೇ ಬಂಗಾಳದ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ್ದಾರೆ.

    ತಾಯಿಯ ಶವಸಂಸ್ಕಾರ ಮುಗಿಸಿದ ಬಳಿಕ ವೀಡಿಯೋ ಕಾನ್ಫರೆನ್ಸ್ನಲ್ಲಿ ಭಾಗಿಯಾದ ಮೋದಿಗೆ ಮಮತಾ ಬ್ಯಾನರ್ಜಿ ಸಂತಾಪ ತಿಳಿಸಿದ್ದಾರೆ. ನಿಮ್ಮ ತಾಯಿ ಎಂದರೆ ನಮಗೂ ತಾಯಿಯೇ. ದಯವಿಟ್ಟು ಕಾರ್ಯಕ್ರಮಗಳನ್ನು ಮೊಟಕುಗೊಳಿಸಿ ಸ್ವಲ್ಪ ಸಮಯ ವಿಶ್ರಾಂತಿ ತೆಗೆದುಕೊಳ್ಳಿ ಎಂದು ಅವರು ಭಾವನಾತ್ಮಕವಾಗಿ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮಗ ಮನೆ ಬಿಟ್ಟು ಹೋದಾಗ್ಲೂ ಕುಗ್ಗಿರಲಿಲ್ಲ ಹೀರಾಬೆನ್!

    ಪಶ್ಚಿಮ ಬಂಗಾಳದ ಜನರ ಪರವಾಗಿ ಸಂತಾಪ ಸೂಚಿಸಿದ ಬ್ಯಾನರ್ಜಿ, ನನ್ನ ಸಂತಾಪ ಮತ್ತು ಸಂದೇಶಗಳನ್ನು ನಿಮ್ಮ ಕುಟುಂಬದ ಸದಸ್ಯರಿಗೆ ಮತ್ತು ಇತರರಿಗೆ ಹೇಗೆ ತಿಳಿಸಬೇಕು ಎಂದು ತೋಚುತ್ತಿಲ್ಲ. ಏಕೆಂದರೆ ತಾಯಿ ಎಂಬುವುದು ಬೇರೆಯವರಿಗೆ ಹೊರತಾದುದಲ್ಲ. ಪಶ್ಚಿಮ ಬಂಗಾಳದ ಜನರ ಪರವಾಗಿ, ನಮಗೆ ಈ ಅವಕಾಶವನ್ನು ನೀಡಿದ್ದಕ್ಕಾಗಿ ನಾನು ನಿಮಗೆ ತುಂಬಾ ಧನ್ಯವಾದಗಳನ್ನು ಹೇಳಲು ಬಯಸುತ್ತೇನೆ. ನಿಮ್ಮ ತಾಯಿ ಎಂದರೆ ನಮಗೂ ತಾಯಿ. ಈ ಸಂದರ್ಭ ನಾನು ನನ್ನ ತಾಯಿಯನ್ನೂ ನೆನಪಿಸಿಕೊಳ್ಳುತ್ತೇನೆ ಎಂದು ಹೇಳುತ್ತಾ ಗದ್ಗದಿತರಾದ ಮಮತಾ, ನಿಮ್ಮ ಕೆಲಸವನ್ನು ಮುಂದುವರಿಸಲು ದೇವರು ನಿಮಗೆ ಶಕ್ತಿಯನ್ನು ನೀಡಲಿ ಎಂದು ಬೇಡಿಕೊಂಡರು.

    ಕಳೆದ 2 ದಿನಗಳ ಹಿಂದೆ ಅಹಮದಾಬಾದ್‌ನ ಯುಎನ್ ಮೆಹ್ತಾ ಇನ್‌ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಮತ್ತು ರಿಸರ್ಚ್ ಸೆಂಟರ್‌ಗೆ ದಾಖಲಾಗಿದ್ದ ಹೀರಾಬೆನ್ ಮೋದಿ ಇಂದು ಮುಂಜಾನೆ ನಿಧನರಾದರು. ಪ್ರಧಾನಿಯವರು ತಮ್ಮ ತಾಯಿಯ ಅಂತಿಮ ಸಂಸ್ಕಾರವನ್ನು ನೆರವೇರಿಸಲು ತಕ್ಷಣವೇ ಹುಟ್ಟೂರಿಗೆ ತೆರಳಿದರು. ತಾಯಿಯ ಅಂತಿಮ ಯಾತ್ರೆಗೆ ಪ್ರಧಾನಿಯೂ ಹೆಗಲಾಗಿ, ಬರಿಗಾಲಿನಲ್ಲಿ ನಡೆದರು. ತಮ್ಮ ಸಹೋದರರೊಂದಿಗೆ ತಾಯಿಯ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. ಇದನ್ನೂ ಓದಿ: ಬಿಳಿ ಸೀರೆಯೊಂದಿಗೆ ಕರವಸ್ತ್ರ ಯಾವಾಗ್ಲೂ ಇರುತ್ತಿತ್ತು- ಹೀರಾಬೆನ್ ಕುತೂಹಲಕಾರಿ ಸಂಗತಿ

    Live Tv
    [brid partner=56869869 player=32851 video=960834 autoplay=true]

  • ಮೋದಿಯಿಂದ ವಂದೇ ಭಾರತ್‌, ಕಾಶಿ ದರ್ಶನ್ ರೈಲಿಗೆ ಚಾಲನೆ

    ಮೋದಿಯಿಂದ ವಂದೇ ಭಾರತ್‌, ಕಾಶಿ ದರ್ಶನ್ ರೈಲಿಗೆ ಚಾಲನೆ

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ದಕ್ಷಿಣ ಭಾರತದ ಮೊದಲ ವಂದೇ ಭಾರತ್‌(Vande Bharat) ರೈಲಿಗೆ ಚಾಲನೆ ನೀಡಿದ್ದಾರೆ.

    ಮೆಜೆಸ್ಟಿಕ್‌ನಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಲ್ಲಿ ಮೈಸೂರು- ಚೆನ್ನೈಗೆ ಸಂಪರ್ಕ ಕಲ್ಪಿಸುವ ವಂದೇ ಭಾರತ್‌ ರೈಲು ಮತ್ತು ಕರ್ನಾಟಕದಿಂದ ಕಾಶಿಗೆ ತೆರಳಲಿರುವ ಕರ್ನಾಟಕ ಭಾರತ್‌ ಗೌರವ್‌ ಕಾಶಿ(Bharat Gaurav Kashi Yatra) ದರ್ಶನ ರೈಲಿಗೆ ಹಸಿರು ನಿಶಾನೆ ತೋರಿದರು. ಇದನ್ನೂ ಓದಿ: ಬೆಂಗ್ಳೂರಿಗೆ ಮೋದಿ ಆಗಮನ – BMTC, KSRTC ಬಸ್ ಸಂಚಾರ 2 ಗಂಟೆ ಸ್ಥಗಿತ

    ಈ ಕಾರ್ಯಕ್ರಮಕ್ಕೆ ಮೊದಲು ಬೆಳಗ್ಗೆ ವಿಧಾನಸೌಧಕ್ಕೆ ಆವರಣಕ್ಕೆ ಆಗಮಿಸಿ ಶಾಸಕರ ಭವನದ ಮುಂದೆ ಇರುವ ಕನಕದಾಸ ಮತ್ತು ವಾಲ್ಮಿಕಿ ಪ್ರತಿಮೆಗಳಿಗೆ ಪುಷ್ಪಾರ್ಚನೆ ಮಾಡಿದ್ದಾರೆ. ಇಂದು ಕನಕದಾಸ ಜಯಂತಿ ಹಿನ್ನೆಲೆಯಲ್ಲಿ ಮೋದಿ ಪುಷ್ಪಾರ್ಚನೆ ಮಾಡಿರುವುದು ವಿಶೇಷ.

    ಇಂದು ಬೆಳಗ್ಗೆ 9 ಗಂಟೆಗೆ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋದಿ ಅವರನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ ಸ್ವಾಗತಿಸಿದರು.

    Live Tv
    [brid partner=56869869 player=32851 video=960834 autoplay=true]