Tag: Varada

  • ವರದಾ, ತುಂಗಭದ್ರಾ ನದಿಯಲ್ಲಿ ಹೆಚ್ಚಿದ ನೀರು – ಮೆಕ್ಕೆಜೋಳ ಸೇರಿ ವಿವಿಧ ಬೆಳೆ ಜಲಾವೃತ

    ವರದಾ, ತುಂಗಭದ್ರಾ ನದಿಯಲ್ಲಿ ಹೆಚ್ಚಿದ ನೀರು – ಮೆಕ್ಕೆಜೋಳ ಸೇರಿ ವಿವಿಧ ಬೆಳೆ ಜಲಾವೃತ

    ಹಾವೇರಿ: ರಾಜ್ಯಾದ್ಯಂತ ಮಳೆರಾಯನ ಅರ್ಭಟ ಮುಂದುವರಿದಿದೆ. ಅದರಲ್ಲೂ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆ ಹಾವೇರಿ ಜಿಲ್ಲೆಯ ವರದಾ, ತುಂಗಭದ್ರಾ ನದಿ ನೀರಿನ ಪ್ರಮಾಣ ಹೆಚ್ಚಾಗುತ್ತಿದೆ.

    ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಕುಣಿಮೆಳ್ಳಿಹಳ್ಳಿ, ಹಲಸೂರು, ಹಾನಗಲ್ ತಾಲೂಕಿನ ಹರವಿ, ಕೂಡಲ, ಹಾವೇರಿ ತಾಲೂಕಿನ ವರದಹಳ್ಳಿ, ನಾಗನೂರು ಸೇರಿದಂತೆ ಹಲವು ಗ್ರಾಮಗಳ ರೈತರ ಜಮೀನುಗಳು ಜಲಾವೃತಗೊಂಡಿವೆ. ಜಮೀನಿನಲ್ಲಿ ಬೆಳೆದಿದ್ದ ಸುಗಂಧಿ ಹೂವು, ಗಲಾಟೆ ಹೂವು, ಮೆಕ್ಕೆಜೋಳ, ಕಬ್ಬು, ಹೂಕೋಸು ಸೇರಿದಂತೆ ಹಲವು ಬೆಳೆಗಳು ಸಂಪೂರ್ಣ ಜಲಾವೃತಗೊಂಡಿವೆ. ಇದನ್ನೂ ಓದಿ:  ಎಸಿಬಿ ವಿರುದ್ಧ ನ್ಯಾ. ಸಂದೇಶ್ ಮಾಡಿದ್ದ ಆರೋಪಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್

    ನೀರಿನಲ್ಲಿ ನಿಂತು ಎಲ್ಲ ಬೆಳೆಗಳು ಕೊಳೆತು ಹಾಳಾಗುತ್ತಿದ್ದು, ಬೋರವೇಲ್, ಪಂಪ್‍ಸೇಟ್ ಹಾಗೂ ಪೈಪ್ ಮುಳುಗಡೆಯಾಗಿವೆ. ಇದರಿಂದ ಅನ್ನದಾತರು ದಿಕ್ಕು ತೋಚದಂತಾಗಿದೆ. ನದಿ ಪಾತ್ರಗಳ ಸಾವಿರಾರು ಎಕರೆ ಪ್ರದೇಶದಲ್ಲಿನ ಬೆಳೆಗಳು ಹಾಳಾಗಿವೆ. ಸರ್ಕಾರ ರೈತರಿಗೆ ಸೂಕ್ತವಾದ ಪರಿಹಾರ ಘೋಷಣೆ ಮಾಡಬೇಕು ಎಂದು ರೈತರು ಆಗ್ರಹಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಾಜ್ಯ ಸರ್ಕಾರದ ನದಿ ಜೋಡಣೆ ವಿರೋಧಿಸಿ ಸಮಾವೇಶ : ಸ್ವರ್ಣವಲ್ಲಿ ಶ್ರೀ

    ರಾಜ್ಯ ಸರ್ಕಾರದ ನದಿ ಜೋಡಣೆ ವಿರೋಧಿಸಿ ಸಮಾವೇಶ : ಸ್ವರ್ಣವಲ್ಲಿ ಶ್ರೀ

    ಕಾರವಾರ : ರಾಜ್ಯ ಸರ್ಕಾರ ಬೇಡ್ತಿ-ವರದಾ ನದಿ ಜೋಡಣೆ ಯೋಜನೆ ಕೈ ಬಿಡಬೇಕು. ಈ ನಿಟ್ಟಿನಲ್ಲಿ ಒತ್ತಡ ಹೇರಲು ಜೂನ್ ಮೊದಲ ವಾರ ಜನ ಸಮಾವೇಶ ನಡೆಸಲಾಗುವುದು ಎಂದು ಸೋಂದಾ ಸ್ವರ್ಣವಲ್ಲಿ ಮಠದ ಗಂಗಾಧರೇಂದ್ರ ಸರಸ್ವತಿ ಸ್ವಾಮೀಜಿ ಹೇಳಿದ್ದಾರೆ.

    ಶಿರಸಿ ತಾಲೂಕಿನ ಸೋಂದಾದ ಸ್ವರ್ಣವಲ್ಲಿ ಮಠದ ಸಭಾಂಗಣದಲ್ಲಿ ಬೇಡ್ತಿ ಅಘನಾಶಿನಿಕೊಳ್ಳ ಸಂರಕ್ಷಣಾ ಸಮಿತಿಯ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜನಾಂದೋಲನದ ಮೂಲಕ ಯೋಜನೆಯ ವಿರುದ್ಧ ಅಭಿಪ್ರಾಯ ಸಂಗ್ರಹವಾಗಬೇಕು. ಜನ ಜಾಗೃತಿ ಕಾರ್ಯಗಳ ಮೂಲಕ ಬೇಡ್ತಿ ಕಣಿವೆ ಸಂರಕ್ಷಣೆಗೆ ಮುಂದಾಗಬೇಕು ಎಂದರು.
    ಇದನ್ನೂ ಓದಿ: ಕೇಂದ್ರದ ಮರು ಪರಿಶೀಲನೆ ಪೂರ್ಣಗೊಳ್ಳುವವರೆಗೂ ದೇಶದ್ರೋಹ ಕೇಸ್‌ ದಾಖಲಿಸುವಂತಿಲ್ಲ: ಸುಪ್ರೀಂ

    ಸಮಿತಿಯ ಕಾರ್ಯದರ್ಶಿ ಅನಂತ ಹೆಗಡೆ ಅಶೀಸರ, ನದಿ ಜೋಡಣೆ ಯೋಜನೆಯ ವಿಸ್ತೃತ ಯೋಜನಾ ವರದಿಯಲ್ಲಿ ಹಲವು ಲೋಪದೋಷಗಳಿವೆ. ಸಮೀಕ್ಷೆ ನಡೆಸದೇ ವಿವರ ಯೋಜನಾ ವರದಿ ಸಿದ್ಧಪಡಿಸಲಾಗಿದ್ದು ಸರ್ಕಾರ ಡಿಪಿಆರ್(ಸಮಗ್ರ ಯೋಜನಾ ವರದಿ) ರದ್ದು ಮಾಡಬೇಕು ಎಂದು ಒತ್ತಾಯಿಸಿದರು.  ಇದನ್ನೂ ಓದಿ: ಕಾಂಗ್ರೆಸ್ ಒಂದೇ ಘಟಕವಾಗಿ ಚುನಾವಣೆ ಎದುರಿಸಬೇಕಲ್ಲವೇ? ಡಿಕೆಶಿಗೆ ನಟಿ ರಮ್ಯಾ ಪ್ರಶ್ನೆ

    ಭೂ ವಿಜ್ಞಾನಿ ಡಾ.ಜಿ.ವಿ. ಹೆಗಡೆ ಮಾತನಾಡಿ, ಶಾಲ್ಮಲಾ ಮತ್ತು ಬೇಡ್ತಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯಲ್ಲಿ ಬೇಡ್ತಿ, ವರದಾ ಯೋಜನೆ ಜಾರಿ ಸಾಧ್ಯವಾಗದು. ಇದರಿಂದ ಅಪಾರ ಅರಣ್ಯ ನಾಶವಾಗಲಿದೆ ಎಂದರು.