Tag: varamahalakshmi festival

  • ವರಮಹಾಲಕ್ಷ್ಮೀ ಹಬ್ಬದ ಎಫೆಕ್ಟ್ – ಹೂ, ಹಣ್ಣಿನ ದರ ಭಾರೀ ಏರಿಕೆ

    ವರಮಹಾಲಕ್ಷ್ಮೀ ಹಬ್ಬದ ಎಫೆಕ್ಟ್ – ಹೂ, ಹಣ್ಣಿನ ದರ ಭಾರೀ ಏರಿಕೆ

    ಬೆಂಗಳೂರು: ವರಮಹಾಲಕ್ಷ್ಮೀ ಹಬ್ಬದ (Varamahalakshmi Festival) ಹಿನ್ನೆಲೆಯಲ್ಲಿ ಹಣ್ಣು ಹಾಗೂ ಹೂವಿನ ಬೆಲೆಯಲ್ಲಿ ಭಾರೀ ಏರಿಕೆ (Price Hike) ಕಂಡಿದೆ. ಇದರ ನಡುವೆಯೇ ಗ್ರಾಹಕರು ಕೆ.ಆರ್.ಮಾರ್ಕೆಟ್‍ನಲ್ಲಿ ಹಬ್ಬದ ಖರೀದಿಯನ್ನು ಮುಂದುವರೆಸಿದ್ದಾರೆ.

    ಹಬ್ಬಕ್ಕೆ ಪ್ರಮುಖವಾಗಿ ಬೇಕಾದ ಹೂ ಹಾಗೂ ಹಣ್ಣುಗಳ ದರದಲ್ಲಿ ಏರಿಕೆಯಾಗಿರುವುದು ಹಬ್ಬದ ಸಂಭ್ರಮದಲ್ಲಿದ್ದವರಿಗೆ ನುಂಗಲಾರದ ತುಪ್ಪವಾಗಿ ಪರಿಣಮಿಸಿದೆ. ಬೆಲೆ ದುಬಾರಿಯಾದರೂ ಗ್ರಾಹಕರು ಖರೀದಿಯಲ್ಲಿ ಹಿಂದೆ ಬಿದ್ದಿಲ್ಲ. ಶುಕ್ರವಾರ ನಡೆಯಲಿರುವ ಹಬ್ಬಕ್ಕೆ ಜನ ಮಾರುಕಟ್ಟೆಯಲ್ಲಿ ಮುಗಿಬಿದ್ದಿದ್ದಾರೆ. ಇದನ್ನೂ ಓದಿ: ಚಂದ್ರನ ಮೇಲೆ ಭಾರತದ ಮುದ್ರೆ – ಚಂದ್ರಯಾನ 3 ಸಕ್ಸಸ್ ಮುಂದೇನು?

    ಹೂವಿನ ದರ ಎಷ್ಟಿದೆ?
    ಕನಕಾಂಬರ ಕೆಜಿಗೆ 1,200 – 1,500
    ಮಲ್ಲಿಗೆ ಕೆಜಿಗೆ 600 – 800 ರೂ.
    ಗುಲಾಬಿ 150 – 200 ರೂ.
    ಚಿಕ್ಕ ಹೂವಿನ ಹಾರ 150 – 200 ರೂ.
    ದೊಡ್ಡ ಹೂವಿನ ಹಾರ 300 – 500 ರೂ.
    ಸೇವಂತಿಗೆ 250 – 300 ರೂ.
    ತಾವರೆ ಹೂ ಜೋಡಿ 50 – 100 ರೂ.

    ಹಣ್ಣುಗಳ ದರ ಎಷ್ಟಿದೆ?
    ಏಲಕ್ಕಿ ಬಾಳೆ 120 – 140 ರೂ.
    ಸೀಬೆ 120 ರೂ.
    ಸೇಬು 200 – 300 ರೂ.
    ಕಿತ್ತಲೆ 150 – 200 ರೂ.
    ದ್ರಾಕ್ಷಿ 180 – 200 ರೂ.
    ಪೈನಾಪಲ್ 80/1ಕ್ಕೆ ರೂ.
    ದಾಳಿಂಬೆ-150-200 ರೂ.

    ಇತರೆ ವಸ್ತುಗಳ ಬೆಲೆ ಎಷ್ಟಿದೆ?
    ಬಾಳೆ ಕಂಬ ಜೋಡಿಗೆ 50 ರೂ.
    ಮಾವಿನ ತೋರಣ 20 ರೂ.
    ವಿಳ್ಯದೆಲೆ 100 ಕ್ಕೆ 150 ರೂ.
    ತೆಂಗಿನಕಾಯಿ 5ಕ್ಕೆ 100 ರೂ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 60 ಸಾವಿರ ಮನೆಗಳಿಗೆ ಸೀರೆ, 20 ಮಕ್ಕಳಿಗೆ ಬಟ್ಟೆ – ಶಾಸಕ ಪ್ರದೀಪ್ ಈಶ್ವರ್ ಗಿಫ್ಟ್

    60 ಸಾವಿರ ಮನೆಗಳಿಗೆ ಸೀರೆ, 20 ಮಕ್ಕಳಿಗೆ ಬಟ್ಟೆ – ಶಾಸಕ ಪ್ರದೀಪ್ ಈಶ್ವರ್ ಗಿಫ್ಟ್

    ಚಿಕ್ಕಬಳ್ಳಾಪುರ: ಸದಾ ಒಂದಲ್ಲ ಒಂದು ವಿಚಾರವಾಗಿ ಸದ್ದು ಮಾಡುತ್ತಿರುವ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಈಗ ಮತ್ತೊಂದು ವಿಚಾರವಾಗಿ ಸುದ್ದಿಯಲ್ಲಿದ್ದಾರೆ.

    ಕ್ಷೇತ್ರ ಸಂಚಾರ ಮಾಡುತ್ತಿರುವ ಪ್ರದೀಪ್ ಈಶ್ವರ್, ಚಿಕ್ಕಬಳ್ಳಾಪುರ ಕ್ಷೇತ್ರದ ಮಹಿಳೆಯರಿಗೆ ಸೀರೆಗಳ ಉಡುಗೊರೆ ನೀಡಿದ್ದಾರೆ. ವರಮಹಾಲಕ್ಷ್ಮಿ ಹಬ್ಬದ (Varamahalakshmi Festival) ಹೆಸರಲ್ಲಿ ಮಹಿಳೆಯರಿಗೆ ಬಾಗಿನ ಕೊಟ್ಟಿದ್ದಾರೆ. ಮನೆ-ಮನೆಗೆ ತೆರಳಿ ಮಹಿಳೆಯರಿಗೆ ಸೀರೆ, ಬಳೆ, ಹರಿಶಿನ, ಕುಂಕಮ ಬಾಗಿನ ಕೊಟ್ಟಿದ್ದಾರೆ. ಹಳ್ಳಿ-ಹಳ್ಳಿಗೂ ತೆರಳಿ ಸೀರೆ ವಿತರಣೆ (Saree Gift) ಮಾಡಲಿದ್ದಾರೆ. ಜೊತೆಗೆ 20 ಸಾವಿರ ಶಾಲಾ ಮಕ್ಕಳಿಗೆ ಬಟ್ಟೆ ನೀಡುವ ಕಾರ್ಯಕ್ರಮಕ್ಕೂ ಚಾಲನೆ ಕೊಟ್ಟಿದ್ದಾರೆ. ಇದನ್ನೂ ಓದಿ: ಕಾರ್ಯಕ್ರಮಕ್ಕೆ ಆಟೋ ಚಲಾಯಿಸಿಕೊಂಡು ಬಂದ ಶಾಸಕ ಪ್ರದೀಪ್ ಈಶ್ವರ್

    ಈ ವೇಳೆ ಮಾತನಾಡುತ್ತಾ ಪ್ರದೀಪ್ ಈಶ್ವರ್, 5 ವರ್ಷವೂ 60 ಸಾವಿರ ಮನೆಗಳಿಗೆ ವರಮಹಾಲಕ್ಷ್ಮಿ ಹಬ್ಬಕ್ಕೂ ಸೀರೆ ಕೊಡ್ತೀನಿ. 20 ಸಾವಿರ ಶಾಲಾ ಮಕ್ಕಳಿಗೆ ಪ್ರತಿವರ್ಷ ಬಟ್ಟೆ ಕೊಡಿಸ್ತೇನೆ. ರಸ್ತೆ ಅಭಿವೃದ್ಧಿಯನ್ನೂ ಮಾಡಿಸ್ತೀನಿ. ಏನೇ ಆದರೂ ನಾನಿದ್ದೇನೆ. ಒಂದೊಳ್ಳೆ ಕೆಲಸ ಮಾಡಬೇಕು ಅನ್ನೋದಷ್ಟೇ ನನ್ನ ಕನಸು ಅಂತಾ ಜನರಿಗೆ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಸುಧಾಕರ್ ನಮ್ಮೂರ ಹುಡ್ಗ, ಬೇರೆ ಕ್ಷೇತ್ರ ನೋಡಿಕೊಂಡ್ರೆ ಮುಂದಿನ ಸಲ ವಿಧಾನಸೌಧಕ್ಕೆ ಬರ್ತಾರೆ: ಪ್ರದೀಪ್ ಈಶ್ವರ್ ಟಾಂಗ್

    ಮಾಧ್ಯಮಗಳೊಂದಿಗೆ ಮಾತನಾಡಿ, ಒಂದು ಕಾಲದಲ್ಲಿ ಊಟ, ಬಟ್ಟೆಗೂ ಕಷ್ಟ ಇತ್ತು. ಕ್ಷೇತ್ರದ ಜನತೆ ನನ್ನನ್ನ ಅಣ್ಣ, ತಮ್ಮನ ತರ ಅಂದುಕೊಂಡು ಗೆಲ್ಲಿಸಿದ್ದಾರೆ. ನಾನೂ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇನೆ. ಆದ್ದರಿಂದ 60 ಸಾವಿರ ಮನೆಗಳಿಗೆ ಸೀರೆ, 20 ಸಾವಿರ ಶಾಲೆ ಮಕ್ಕಳಿಗೆ ಬಟ್ಟೆ ಕೊಡುತ್ತಿದ್ದೇನೆ. ಐದು ವರ್ಷವೂ ಇದು ಮುಂದುವರಿಯುತ್ತೆ ಅಂತಾ ಭರವಸೆ ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವರಮಹಾಲಕ್ಷ್ಮಿ ಪೂಜೆ ಮಾಡಿ ಸಾಮರಸ್ಯಕ್ಕೆ ಸಾಕ್ಷಿಯಾದ ಮುಸ್ಲಿಂ ಕುಟುಂಬ

    ವರಮಹಾಲಕ್ಷ್ಮಿ ಪೂಜೆ ಮಾಡಿ ಸಾಮರಸ್ಯಕ್ಕೆ ಸಾಕ್ಷಿಯಾದ ಮುಸ್ಲಿಂ ಕುಟುಂಬ

    ಕೊಪ್ಪಳ: ಹಿಂದೂ ಮತ್ತು ಮುಸ್ಲಿಂ ಸಾಮರಸ್ಯಕ್ಕೆ ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದ ಮುಸ್ಲಿಂ ಕುಟುಂಬ ಸಾಕ್ಷ್ಯಿಯಾಗಿದೆ.

    ಶುಕ್ರವಾರ ಹಿಂದೂ ಸಂಸ್ಕøತಿಯ ವರಮಹಾಲಕ್ಷ್ಮಿ ಹಬ್ಬವನ್ನು ನೆರವೇರಿಸುವ ಭಾವೈಕ್ಯತೆಯನ್ನು ಅಳವಂಡಿ ಗ್ರಾಮದ ನಜೀರುದ್ದಿನ್ ಕುಟುಂಬ ಸಾರಿದೆ. ಧಾರ್ಮಿಕ ಆಚರಣೆಗಳನ್ನು ಗ್ರಾಮದಲ್ಲಿ ಹಿಂದೂ-ಮುಸ್ಲಿಂ ಬಾಂಧವರು ಭಾವೈಕ್ಯತೆಯಿಂದ ಆಚರಿಸುತ್ತಾ ಬಂದಿದ್ದಾರೆ. ಪ್ರತಿಯೊಂದು ಧಾರ್ಮಿಕ ಆಚರಣೆಗಳನ್ನು ಒಗ್ಗಟ್ಟಾಗಿ ಆಚರಿಸುತ್ತಾರೆ. ಅದರಂತೆ ಮುಸ್ಲಿಂ ಸಮುದಾಯದ ಕುಟುಂಬವೊಂದು ಕಳೆದ ಮೂರು ವರ್ಷಗಳಿಂದ ತಮ್ಮ ಹಬ್ಬಗಳನ್ನು ಆಚರಿಸುವ ರೀತಿಯಲ್ಲಿಯೇ ಸಂಪ್ರದಾಯ ಬದ್ಧವಾಗಿ ವರಮಹಾಲಕ್ಷ್ಮಿ ಹಬ್ಬವನ್ನು ಆಚರಿಸುತ್ತಾ ಬಂದಿದ್ದಾರೆ. ಇದನ್ನೂ ಓದಿ: ನನ್ನ ಪತ್ನಿ ಜೊತೆ ಮಾತನಾಡಬೇಡ ಅಂದಿದ್ದಕ್ಕೆ ಕ್ರಿಕೆಟ್ ಬ್ಯಾಟ್, ವಿಕೆಟ್‌ನಿಂದ ಹೊಡೆದು ಕೊಲೆಗೈದ್ರು 

    ಅಳವಂಡಿ ಗ್ರಾಮದ ನಜುರುದ್ದೀನ್ ಬಿಸರಳ್ಳಿ ಅವರು ಮುಸ್ಲಿಂ ಕುಟುಂಬದ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬವನ್ನು ಮನೆತನದ ಹಬ್ಬದ ರೀತಿ ಆಚರಿಸುತ್ತಿದ್ದಾರೆ. ಹಬ್ಬದ ಪ್ರಯುಕ್ತ ಮನೆಯನ್ನು ದೀಪಾಲಂಕಾರ ಮಾಡುವ ಮೂಲಕ ವಿಶೇಷ ಪೂಜೆ ನೆರವೇರಿಸಿದ್ದಾರೆ. ಹೋಳಿಗೆ ನೈವೇದ್ಯ, ವಿವಿಧ ತರಹದ ಹಣ್ಣುಗಳು ಸಮರ್ಪಿಸಿ, ಹಣತೆ ಹಚ್ಚಿ ಭಾವೈಕ್ಯತೆ ಮೆರೆದಿದ್ದಾರೆ.

    ಮನೆಯನ್ನು ವಿದ್ಯುತ್ ದೀಪ ಹಾಗೂ ತೋರಣ ಕಟ್ಟಿ ಸಿಂಗರಿಸಲಾಗಿತ್ತು. ನಜುರುದ್ದೀನ್ ಬಿಸರಳ್ಳಿ ಅವರು ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಸರ್ವ ಧರ್ಮದ ಸ್ನೇಹಿತರನ್ನು ಆಹ್ವಾನಿಸಿ   ಸತ್ಕರಿಸಿದರು.

    ನಜುರುದ್ದೀನ್ ಬಿಸರಳ್ಳಿ ಈ ಕುರಿತು ಮಾತನಾಡಿದ್ದು, ಕಳೆದ ಮೂರು ವರ್ಷದ ಹಿಂದೆ ವರಮಹಾಲಕ್ಷ್ಮಿ ಹಬ್ಬದ ದಿನದಂದು, ನನ್ನ ಮನೆಯ ಗೃಹ ಪ್ರವೇಶ ಕಾರ್ಯಕ್ರಮ ನಡೆಯಿತು. ಅದರಂತೆ ಪ್ರತಿವರ್ಷ ಹಿಂದೂ ಸಂಪ್ರದಾಯದಂತೆ ವರಮಹಾಲಕ್ಷ್ಮಿ ಹಬ್ಬ ಮಾಡುತ್ತಾ ಬಂದಿದ್ದೇನೆ. ಇದರಿಂದ ಒಳ್ಳೆಯದು ಆಗಿದೆ. ನಾನು ಕೂಡ ಗ್ರಾಮದಲ್ಲಿ ಪ್ರತಿಯೊಂದು ಧಾರ್ಮಿಕ ಆಚರಣೆಗಳನ್ನು ಪಾಲ್ಗೋಳ್ಳುತ್ತೇನೆ ಎಂದರು. ಇದನ್ನೂ ಓದಿ: ‘ಇಂಡಿಯಾ ಕಿ ಉಡಾನ್’ ಮೂಲಕ ಸ್ವಾತಂತ್ರ್ಯ ನಂತರದ ದಿನ ನೆನಪಿಸಲಿರುವ ಗೂಗಲ್ 

    Live Tv
    [brid partner=56869869 player=32851 video=960834 autoplay=true]

  • ವರಮಹಾಲಕ್ಷ್ಮಿ ಹಬ್ಬದ ವಿಶೇಷ ‘ಹೋಳಿಗೆ’ – ಮಾಡುವ ಸುಲಭ ವಿಧಾನ

    ವರಮಹಾಲಕ್ಷ್ಮಿ ಹಬ್ಬದ ವಿಶೇಷ ‘ಹೋಳಿಗೆ’ – ಮಾಡುವ ಸುಲಭ ವಿಧಾನ

    ರಮಹಾಲಕ್ಷ್ಮಿ ಹಬ್ಬದ ಎಂದಾಕ್ಷಣ ನಮಗೆ ಅಡುಗೆಯಲ್ಲಿ ನೆನಪಾಗುವುದೇ ‘ಹೋಳಿಗೆ’. ಎಲ್ಲರೂ ಇಷ್ಟಪಟ್ಟು ತಿನ್ನುವ ಸಿಹಿ ತಿಂಡಿಯಲ್ಲಿ ಹೋಳಿಗೆ ಆಗ್ರಸ್ಥಾನದಲ್ಲಿದೆ. ಅದರಲ್ಲಿಯೂ ಈ ವರಮಹಾಲಕ್ಷ್ಮಿ ಹಬ್ಬದಲ್ಲಿ ‘ಹೋಳಿಗೆ’ ವಿಶೇಷ ರೆಸಿಪಿಯಾಗಿರುತ್ತೆ. ಅದಕ್ಕೆ ಇಂದು ನೀವು ಸುಲಭವಾಗಿ ಮತ್ತು ಬೇಗ ಹೇಗೆ ‘ಹೋಳಿಗೆ’ ಮಾಡಬಹುದು ಎಂದು ಹೇಳಿಕೊಡುತ್ತೇವೆ.

    ಬೇಕಾಗಿರುವ ಪದಾರ್ಥಗಳು:
    * ಮೈದಾ – 1 ಕಪ್
    * ಕಡ್ಲೆ ಬೇಳೆ – 1 ಕಪ್
    * ಅರಿಶಿನ – 2 ಟೀಸ್ಪೂನ್
    * ಉಪ್ಪು – 1 ಟೀಸ್ಪೂನ್


    * ನೀರು – ಅರ್ಧ ಕಪ್
    * ಎಣ್ಣೆ – ಅರ್ಧ ಕಪ್
    * ಬೆಲ್ಲ – 1 ಕಪ್
    * ಏಲಕ್ಕಿ ಪುಡಿ / ಎಲಾಚಿ ಪು – 1 ಟೀಸ್ಪೂನ್
    * ಬೇಕಾಗಿರುವಷ್ಟು ತುಪ್ಪ

    ಮಾಡುವ ವಿಧಾನ:
    * ಮೊದಲನೆಯದಾಗಿ, ದೊಡ್ಡ ಮಿಕ್ಸಿಂಗ್ ಬೌಲ್‍ನಲ್ಲಿ 1 ಕಪ್ ಮೈದಾ, 1 ಟೀಸ್ಪೂನ್ ಅರಿಶಿನ ಮತ್ತು 1 ಟೀಸ್ಪೂನ್ ಉಪ್ಪು ಚೆನ್ನಾಗಿ ಮಿಕ್ಸ್ ಮಾಡಿ. ಅಗತ್ಯವಿರುವಷ್ಟು ನೀರನ್ನು ಸೇರಿಸಿ ಹಿಟ್ಟನ್ನು ತಯಾರಿಸಿ.
    * ಹಿಟ್ಟಿಗೆ ಹೆಚ್ಚು ಎಣ್ಣೆಯನ್ನು ಹಾಕಿ ಮೃದುವಾಗಿ ಕಲಸಿ. ಕನಿಷ್ಠ 3 ಗಂಟೆಗಳ ಕಾಲ ಮುಚ್ಚಿ ಇಡಿ.
    * ಪ್ರೆಶರ್ ಕುಕ್ಕರ್‍ನಲ್ಲಿ ಕಡ್ಲೆ ಬೇಳೆ, 1 ಕಪ್ ನೀರು ,1 ಟೀಸ್ಪೂನ್ ಅರಿಶಿನ ಮತ್ತು 1 ಟೀಸ್ಪೂನ್ ಎಣ್ಣೆಯನ್ನು ಸೇರಿಸಿ 2 ಸೀಟಿಗಳಿಗೆ ಬೇಯಿಸಿರಿ.
    * 10 ನಿಮಿಷಗಳ ಕಾಲ ಹಾಗೆ ಇಡಿ, ಇದರಿಂದ ನೀರನ್ನು ಹೊರಹಾಕಿ. ಅದಕ್ಕೆ 1 ಕಪ್ ಬೆಲ್ಲವನ್ನು ಸೇರಿಸಿ ಮತ್ತು ಚೆನ್ನಾಗಿ ಮಿಶ್ರಣ ಮಾಡಿ. ಬೆಲ್ಲ ಕರಗುವ ತನಕ ಮಿಶ್ರಣವನ್ನು ಮಧ್ಯಮ ಉರಿಯಲ್ಲಿ ಬೇಯಿಸಿ.


    * ಹೆಚ್ಚುವರಿಯಾಗಿ 1 ಟೀಸ್ಪೂನ್ ಏಲಕ್ಕಿ ಪುಡಿಯನ್ನು ಸೇರಿಸಿ, 5 ನಿಮಿಷಗಳ ಕಾಲ ತಣ್ಣಗಾಗಲು ಬಿಡಿ.
    * ಈ ಮಿಶ್ರಣವನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಿ. ಹೆಚ್ಚು ನುಣ್ಣಗೆ ರುಬ್ಬಿಕೊಳ್ಳಬೇಡಿ. ಇಲ್ಲಿಗೆ ನಿಮ್ಮ ಹೋಳಿಗೆ ಮಿಶ್ರಣ ರೆಡಿ.
    * ಹಿಟ್ಟಿನ ಮಿಶ್ರಣವನ್ನು ಸಣ್ಣ ಚೆಂಡಿನ ಗಾತ್ರ ಮಾಡಿ ಅದನ್ನು ಚಪ್ಪಟೆಯಾಕಾರದಲ್ಲಿ ತಟ್ಟಿ ನಂತರ ಹೋಳಿಗೆ ಮಿಶ್ರಣವನ್ನು ಮಧ್ಯದಲ್ಲಿ ಇಟ್ಟು ಜೋಳದ ರೊಟ್ಟಿಯಂತೆ ತಟ್ಟಿ.

    * ಇತ್ತ ಮೊದಲೇ ಗ್ಯಾಸ್ ಆನ್ ಮಾಡಿಟ್ಟುಕೊಂಡು ಹೋಳಿಗೆ ತಟ್ಟಿದ ತಕ್ಷಣ ತವಾದ ಮೇಲೆ ಹಾಕಿ ಬೇಯಿಸಿ. ಅದರ ಮೇಲೆ ತುಪ್ಪ ಹಾಕಿ.
    * ಎರಡು ಬದಿಯು ಚೆನ್ನಾಗಿ ಬೇಯಿಸಿ.

    – ಅಂತಿಮವಾಗಿ, ತುಪ್ಪ / ತೆಂಗಿನ ಹಾಲು / ಮಾವಿನ ರಸಾಯನದೊಂದಿಗೆ ಹೋಳಿಗೆ / ಒಬ್ಬಟ್ಟು ಬಡಿಸಿ.

    Live Tv
    [brid partner=56869869 player=32851 video=960834 autoplay=true]

  • ವರಮಹಾಲಕ್ಷ್ಮೀ ಪೂಜೆಗೆ ತಂದಿದ್ದ 3.90 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

    ವರಮಹಾಲಕ್ಷ್ಮೀ ಪೂಜೆಗೆ ತಂದಿದ್ದ 3.90 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

    – ಪೂಜೆ ಮಾಡಿ ಚಿನ್ನದ ಆಭರಣಗಳನ್ನು ದೇವರ ಮೇಲೆಯೇ ಬಿಟ್ಟಿದ್ರು

    ದಾವಣಗೆರೆ: ವರಮಹಾಲಕ್ಷ್ಮೀ ಪೂಜೆಗೆಂದು ಚಿನ್ನದ ಆಭರಣಗಳನ್ನು ಹೊರ ತೆಗೆದು, ಮಹಾಲಕ್ಷ್ಮೀಗೆ ತೊಡಿಸಿ ಪೂಜೆ ಮಾಡಿದ್ದಾರೆ. ಈ ವೇಳೆ ಕಳ್ಳರು ತಮ್ಮ ಕೈ ಚಳಕ ತೋರಿಸಿದ್ದು, 3.90 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣ ಎಗರಿಸಿದ್ದಾರೆ.

    ನಗರದ ಡಿಸಿಎಂ ಟೌನ್ ಶಿಪ್ ನಲ್ಲಿರುವ ಪ್ರಸನ್ನ ಅವರ ಮನೆಯಲ್ಲಿ ಕಳವು ಮಾಡಿದ್ದು, ಮನೆಯಲ್ಲಿದ್ದ 3.90 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳ್ಳತನವಾಗಿದೆ. ವರಮಹಾಲಕ್ಷ್ಮೀ ಪೂಜೆಗೆಂದು ಚಿನ್ನದ ಆಭರಣಗಳನ್ನು ತರಲಾಗಿತ್ತು. ಪೂಜೆ ಮಾಡಿದ ಬಳಿಕ ಮನೆಯವರು ದೇವರ ಮೇಲೆ ಆಭರಣಗಳನ್ನು ಹಾಗೇ ಬಿಟ್ಟಿದ್ದರು. ಈ ವೇಳೆ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಇದನ್ನೂ ಓದಿ: ಮಧ್ಯರಾತ್ರಿ ಆಪರೇಷನ್ ಇಂಡಿಯನ್ಸ್ – ಕಾಬೂಲ್‍ನಿಂದ ದೋಹಾ ಮೂಲಕ ದೆಹಲಿಗೆ ಭಾರತೀಯರು

    ಕಿಟಕಿ ತೆಗೆದು ದೇವರ ಮೇಲಿದ್ದ ಆಭರಣಗಳನ್ನು ಕಳವು ಮಾಡಿದ್ದಾರೆ. ಆರಂಭದಲ್ಲಿ ಚಿನ್ನಾಭರಣ ಕಳವಾಗಿರುವುದು ಯಾರಿಗೂ ತಿಳಿದಿಲ್ಲ. ಬಳಿಕ ಅರಿವಾಗಿದ್ದು, ತಕ್ಷಣ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಇದೀಗ ತನಿಖೆ ಕೈಗೊಂಡಿದ್ದಾರೆ.

  • 10 ವರ್ಷಗಳ ಬಳಿಕ ಹುಟ್ಟೂರಿಗೆ ಬಂದಿದ್ದೇನೆ: ಜನಾರ್ದನ ರೆಡ್ಡಿ

    10 ವರ್ಷಗಳ ಬಳಿಕ ಹುಟ್ಟೂರಿಗೆ ಬಂದಿದ್ದೇನೆ: ಜನಾರ್ದನ ರೆಡ್ಡಿ

    ಬಳ್ಳಾರಿ: ಕಳೆದ ಹತ್ತು ವರ್ಷಗಳ ಬಳಿಕ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಇಂದು ಗಣಿ ನಾಡು ಬಳ್ಳಾರಿಗೆ ಆಗಮಿಸಿದ್ದಾರೆ. ಬಳ್ಳಾರಿಗೆ ಬಂದ ಖುಷಿಯನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

    ಕುಟುಂಬ ಸಮೇತರಾಗಿರುವ ಪೋಟೋ ಪೋಸ್ಟ್ ಮಾಡಿ ರೆಡ್ಡಿ ಸಂತಸ ಹಂಚಿಕೊಂಡಿದ್ದಾರೆ. ಹತ್ತು ವರ್ಷ ಬಳಿಕ ಹುಟ್ಟೂರಿಗೆ ಬಂದಿದ್ದೇನೆ, ಬಳ್ಳಾರಿ ನಿವಾಸದಲ್ಲಿ ನನ್ನ ಕುಟುಂಬಸ್ಥರೊಂದಿಗೆ ವರ ಮಹಾಲಕ್ಷ್ಮಿ ಹಬ್ಬದಲ್ಲಿ ಭಾಗಿಯಾಗಿರುವೆ ಎಂದು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಬಳ್ಳಾರಿಗೆ ಗೌಪ್ಯವಾಗಿ ಎಂಟ್ರಿ ಕೊಟ್ರು ಜನಾರ್ದನ ರೆಡ್ಡಿ – ಕುಟುಂಬಸ್ಥರ ಜೊತೆ ವರಮಹಾಲಕ್ಷ್ಮಿ ಹಬ್ಬ ಆಚರಣೆ

    ಅಕ್ರಮ ಗಣಿಗಾರಿಕೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಜೈಲು ಸೇರಿ ಜಾಮೀನು ಪಡೆದರು ಜನಾರ್ದನ ರೆಡ್ಡಿ ಅವರಿಗೆ ಬಳ್ಳಾರಿಗೆ ಬರುವ ಭಾಗ್ಯ ಮಾತ್ರ ದೊರೆತಿರಲಿಲ್ಲ. ಆದರೆ ಈಗ ಸುಪ್ರೀಂ ಕೋರ್ಟ್ ಈ ಹಿಂದೆ ನೀಡಿದ್ದ ಷರತ್ತು ಬದ್ಧ ಜಾಮೀನಿನ ಷರತ್ತುಗಳನ್ನು ಸಡಿಲಿಕೆ ಮಾಡಿದ ಹಿನ್ನೆಲೆಯಲ್ಲಿ 10 ವರ್ಷಗಳ ಬಳಿಕ ರೆಡ್ಡಿ ಅವರು ಹುಟ್ಟೂರಿಗೆ ಬರುವಂತಾಗಿದೆ. ಈ ಹಿನ್ನೆಲೆಯಲ್ಲಿ ತಮ್ಮ ಸಂತೋಷದ ಕ್ಷಣಗಳನ್ನು ರೆಡ್ಡಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

  • ಬಳ್ಳಾರಿಗೆ ಗೌಪ್ಯವಾಗಿ ಎಂಟ್ರಿ ಕೊಟ್ರು ಜನಾರ್ದನ ರೆಡ್ಡಿ – ಕುಟುಂಬಸ್ಥರ ಜೊತೆ ವರಮಹಾಲಕ್ಷ್ಮಿ ಹಬ್ಬ ಆಚರಣೆ

    ಬಳ್ಳಾರಿಗೆ ಗೌಪ್ಯವಾಗಿ ಎಂಟ್ರಿ ಕೊಟ್ರು ಜನಾರ್ದನ ರೆಡ್ಡಿ – ಕುಟುಂಬಸ್ಥರ ಜೊತೆ ವರಮಹಾಲಕ್ಷ್ಮಿ ಹಬ್ಬ ಆಚರಣೆ

    – ಇತ್ತ ಜಾಮೀನು ಸಿಕ್ರೂ ವಿನಯ್ ಬಿಡುಗಡೆ ವಿಳಂಬ

    ಬಳ್ಳಾರಿ: ಗಣಿ ಅಕ್ರಮದ ಪ್ರಮುಖ ಆರೋಪಿ, ಮಾಜಿ ಮಂತ್ರಿ ಗಾಲಿ ಜನಾರ್ದನ ರೆಡ್ಡಿ ಕೊನೆಗೂ ಬಳ್ಳಾರಿಗೆ ಕಾಲಿಟ್ಟಿದ್ದಾರೆ. ಎರಡು ತಿಂಗಳ ಮಟ್ಟಿಗೆ ಬಳ್ಳಾರಿಯಲ್ಲಿ ಇರಲು ಸುಪ್ರೀಂಕೋರ್ಟ್ ಆದೇಶ ನೀಡಿದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಗೌಪ್ಯವಾಗಿ ಬಳ್ಳಾರಿಯ ನಿವಾಸಕ್ಕೆ ಧಾವಿಸಿದ್ದಾರೆ.

    ಕುಟುಂಬ ಸಮೇತ ವರಮಹಾಲಕ್ಷ್ಮಿ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ. ಕಳೆದ 10 ವರ್ಷಗಳಲ್ಲಿ ಜನಾರ್ದನ ರೆಡ್ಡಿ ಬಳ್ಳಾರಿಗೆ ಆಗಮಿಸಿರೋದು ಇದು ಮೂರನೇ ಬಾರಿ. ಜನಾರ್ದನ ರೆಡ್ಡಿ ಆಗಮನ ಕುಟುಂಬ ಸದಸ್ಯರ ಸಂಭ್ರಮಕ್ಕೆ ಕಾರಣವಾಗಿದೆ. ಈ ಸಂಭ್ರಮದಲ್ಲಿ ಪುತ್ರಿ ಬ್ರಹ್ಮಿಣಿ, ಆಪ್ತ ಆಲಿಖಾನ್ ಕೂಡ ಪಾಲ್ಗೊಂಡಿದ್ದಾರೆ.

    ಇಲ್ಲಿ ಗಮನಿಸಬೇಕಾದ ವಿಷಯ ಎಂದರೇ ಜರ್ನಾದನ ರೆಡ್ಡಿ ಬಳ್ಳಾರಿಗೆ ಬಂದ್ರೂ ಉದ್ದೇಶಪೂರ್ವಕವಾಗಿ ಬೆಂಬಲಿಗರಿಂದ ದೂರ ಉಳಿದಿದ್ದಾರೆ. ಈ 8 ವಾರಗಳ ಅವಧಿಯಲ್ಲಿ ಜನಾರ್ದನ ರೆಡ್ಡಿ ಹೇಗಿರಲಿದ್ದಾರೆ ಎಂಬುದರ ಬಗ್ಗೆ ನಿಗಾ ಇಡಲಾಗುತ್ತದೆ. ಜನಾರ್ದನ ರೆಡ್ಡಿಯ ನಡವಳಿಕೆ ಆಧಾರದ ಮೇಲೆ, ಅವರಿಗೆ ಇಲ್ಲಿಯೇ ಇರಲು ಅನುಮತಿ ಸಿಗಲಿದೆ ಎಂಬ ವಿಶ್ವಾಸವನ್ನು ಸಹೋದರ, ಶಾಸಕ ಸೋಮಶೇಖರ ರೆಡ್ಡಿ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಜಾಮೀನು ಸಿಕ್ಕರೂ ವಿನಯ್ ಕುಲಕರ್ಣಿಗಿಲ್ಲ ಬಿಡುಗಡೆ ಭಾಗ್ಯ

    ಇತ್ತ ಯೋಗೀಶ್ ಗೌಡ ಹತ್ಯೆ ಕೇಸ್‍ನಲ್ಲಿ ನಿನ್ನೆಯೇ ಜಾಮೀನು ಸಿಕ್ಕಿದ್ರೂ ವಿನಯ್ ಕುಲಕರ್ಣಿಗೆ ಇಂದು ಜೈಲಿಂದ ಬಿಡುಗಡೆ ಆಗುವ ಭಾಗ್ಯ ಸಿಗಲಿಲ್ಲ. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ನೀಡಿರುವ ಜಾಮೀನಿನ ಆದೇಶ ಪ್ರತಿಯನ್ನು ಸ್ಪೀಡ್ ಪೋಸ್ಟ್ ನಲ್ಲಿ ಬೆಳಗಾವಿಯ ಹಿಂಡಲಗಾ ಜೈಲಿಗೆ ಕಳಿಸಲಾಗಿದೆ.

    ಆದರೆ ಅದಿನ್ನೂ ಹಿಂಡಲಗಾ ಜೈಲನ್ನು ತಲುಪಿಲ್ಲ. ಹೀಗಾಗಿ ವಿನಯ್ ಕುಲಕರ್ಣಿ ಬಿಡುಗಡೆ ವಿಳಂಬವಾಗಿದೆ. ನಾಳೆ ವಿನಯ್ ಕುಲಕರ್ಣಿ ಜೈಲಿಂದ ಹೊರಬರೋದು ಹೆಚ್ಚು ಕಡಿಮೆ ಖಚಿತವಾಗಿದೆ. ವಿನಯ್ ಕುಲಕರ್ಣಿ ಬಿಡುಗಡೆಯಾಗುವ ಹಿನ್ನೆಲೆಯಲ್ಲಿ ಹಿಂಡಲಗಾ ಜೈಲಿನ ಮುಂದೆ ಭದ್ರತೆ ಹೆಚ್ಚಿಸಲಾಗಿದೆ. ಜಾಮೀನು ಷರತ್ತುಗಳ ಪ್ರಕಾರ ಧಾರವಾಡಕ್ಕೆ ವಿನಯ್ ಕುಲಕರ್ಣಿ ಹೋಗುವಂತಿಲ್ಲ.

  • ಸ್ಯಾಂಡಲ್‍ವುಡ್‍ನ ವರಮಹಾಲಕ್ಷ್ಮಿ ಹಬ್ಬ ಸಖತ್ ಗ್ರ್ಯಾಂಡ್

    ಸ್ಯಾಂಡಲ್‍ವುಡ್‍ನ ವರಮಹಾಲಕ್ಷ್ಮಿ ಹಬ್ಬ ಸಖತ್ ಗ್ರ್ಯಾಂಡ್

    ಬೆಂಗಳೂರು: ಸ್ಯಾಂಡಲ್‍ವುಡ್ ಅನೇಕ ತಾರೆಗಳ ಮನೆಯಲ್ಲಿ ಹಬ್ಬವನ್ನು ಆಚರಿಸಿದ್ದಾರೆ. ಅದ್ದೂರಿ ಹಬ್ಬಗಳ ಆಚರಣೆಗೆ ಇದು ಒಳ್ಳೆ ಸಮಯ ಇದಲ್ಲ. ಆದರೆ ಪದ್ಧತಿ ಬಿಡಲಾದೀತೇ, ಹೀಗಂದುಕೊಂಡೇ ಸ್ಯಾಂಡಲ್‍ವುಡ್ ಮಂದಿ ವರಮಹಾಲಕ್ಷ್ಮಿ ಹಬ್ಬವನ್ನ ಸರಳವಾಗಿ ಮನೆಯಲ್ಲೇ ಆಚರಿಸಿದ್ದಾರೆ.

    ರಿಯಲ್ ಸ್ಟಾರ್ ಉಪೇಂದ್ರ ಅವರ ಮನೆಯಲ್ಲಿ ಪ್ರತಿವರ್ಷದಂತೆಯೇ ಈ ಸಲವೂ ವರಮಹಾಲಕ್ಷ್ಮಿ ಪೂಜೆಯನ್ನು ಶ್ರದ್ಧೆ ಹಾಗೂ ಭಕ್ತಿಯಿಂದ ಆಚರಿಸಲಾಗಿದೆ. ಮನೆಯಲ್ಲಿ ಲಕ್ಷ್ಮಿ ಪ್ರತಿಷ್ಠಾಪನೆ ಮಾಡಿರುವ ಈ ಸೆಲೆಬ್ರಿಟಿ ಜೋಡಿ ಬೆಳಿಗ್ಗೆಯೇ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನೂರಾರು ಮುತೈದೆಯರನ್ನ ಕರೆದು ಬಾಗಿನ ಕೊಡುತ್ತಿದ್ದ ನಟಿ ಪ್ರಿಯಾಂಕ ಉಪೇಂದ್ರ ಈ ಬಾರಿ ಸರಳವಾಗಿ ಕೆಲವೇ ಕೆಲವರನ್ನ ಕರೆದು ಹಬ್ಬ ಆಚರಿಸಿದ್ದಾರೆ.ಪೂಜೆಯಲ್ಲಿ ಯಾವುದೇ ವ್ಯತ್ಯಾಸವಿರಲಿಲ್ಲ.

     

    View this post on Instagram

     

    A post shared by priyanka upendra (@priyanka_upendra)

    ತಂದೆಯಾಗುತ್ತಿರೋ ಖುಷಿಯಲ್ಲಿರೋ ನಿಖಿಲ್ ಕುಮಾರಸ್ವಾಮಿ, ಕುಟುಂಬದ ಜೊತೆ ವರಮಹಾಲಕ್ಷ್ಮೀ ಹಬ್ಬ ಆಚರಿಸಿದ್ದಾರೆ. ಪತ್ನಿ ರೇವತಿ ವರಮಹಾಲಕ್ಷ್ಮಿ ಪೂಜೆ ಮಾಡಿದ್ದಾರೆ. ನಿಖಿಲ್ ಪೂಜೆಯಲ್ಲಿ ಪಾಲ್ಗೊಂಡು ಖುಷಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:  ಧರೆಗಿಳಿದ ದೇವತೆಯಾದ ದಿಯಾ ಖ್ಯಾತಿಯ ನಟಿ ಖುಷಿ

    ಮದುವೆಗೂ ಮುನ್ನ ಸದಾ ಶೂಟಿಂಗ್‍ನಲ್ಲಿ ಬ್ಯುಸಿ ಇರುತ್ತಿದ್ದ ನಟಿ ಪ್ರಣೀತ ಮದುವೆಯಾದ ಬಳಿಕ ಮೊದಲ ವರಮಹಾಲಕ್ಷ್ಮಿ ಹಬ್ಬ ಆಚರಿಸಿದ್ದಾರೆ. ಪೂಜೆಯ ಬಳಿಕ ತಮ್ಮಭಿಮಾನಿಗಳಿಗೆ ಶುಭಾಷಯ ಕೋರಿದ್ದಾರೆ.

    ಬಿಗ್‍ಬಾಸ್ ಮುಗಿಸಿ ಮನೆಗೆ ಬಂದಿರುವ ಶುಭಾ ಪೂಂಜಾ ಕೂಡ ಮನೆಯಲ್ಲಿ ವರಮಹಾಲಕ್ಷ್ಮಿ ಹಬ್ಬವನ್ನ ಆಚರಿಸಿದ್ದಾರೆ. ಲಕ್ಷ್ಮಿದೇವಿಗೆ ಪೂಜೆ ಮಾಡಿ ಫೋಟೋ ತೆಗೆಸಿಕೊಂಡಿದ್ದಾರೆ. ಲಕ್ಷ್ಮಿ ಪೂಜೆ ಮಾಡಿರುವ ನಟಿ ಕೆಲವು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

     

    View this post on Instagram

     

    A post shared by shubha Poonja . (@shubhapoonja)

    ಮಗಳ ಜೊತೆ ಸಂದರ್ಭಕ್ಕೆ ತಕ್ಕಂತೆ ಫೋಟೋಶೂಟ್ ಮಾಡಿಸಿದ ಸುದ್ದಿಯಾಗುವ ಶ್ವೇತಾ ಶ್ರೀವಾತ್ಸವ್ ಕೂಡ ಹಬ್ಬ ಆಚರಿಸಿದ್ದಾರೆ. ಕೆಂಪು ಹಸಿರು ದಿರಿಸು ಧರಿಸಿ ಮಗಳೊಂದಿಗೆ ಫೋಟೋಶೂಟ್ ಮಾಡಿಸಿದ್ದಾರೆ. ಮನೆಯಲ್ಲಿ ಶೃದ್ಧಾ ಭಕ್ತಿಯಿಂದ ಪೂಜೆ ಮಾಡಿದ್ದಾರೆ.

     

    View this post on Instagram

     

    A post shared by Shwetha Srivatsav (@shwethasrivatsav)

    ಹಬ್ಬದ ದಿನವೆಂದರೆ ಹೆಣ್ಮಕ್ಕಳಿಗಂತೂ ಖುಷಿಯೋ ಖುಷಿ. ಹೀಗಾಗಿ ಹರ್ಷಿಕಾ ಪೂಣಚ್ಚ, ಮಾನ್ವಿತಾ ಹರೀಶ್, ಕಾರುಣ್ಯ ರಾಮ್ ಸೇರಿದಂತೆ ಹಲವರು ಹಬ್ಬ ಮುಗಿಸಿ ಫೋಟೋ ಹಂಚಿಕೊಂಡಿದ್ದಾರೆ. ಸರಳವಾಗಿ ಮನೆಯಲ್ಲಿ ಸುಮಲತಾ ಅಂಬರೀಶ್ ಕೂಡ ವರಮಹಾಲಕ್ಷ್ಮಿ ಪೂಜೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ಕನ್ನಡತಿ ಖ್ಯಾತಿಯ ರಂಜನಿ ರಾಘವನ್ ಸಾಂಪ್ರದಾಯಿಕವಾಗಿ ವರಮಹಾಲಕ್ಷ್ಮೀಯ ಪೂಜೆ ಮಾಡಿದ್ದಾರೆ.

  • ಪವರ್ ಸ್ಟಾರ್ ಪವರ್ ಫುಲ್ ವರ್ಕೌಟ್ – ಅಭಿಮಾನಿಗಳಿಗೆ ವಿಭಿನ್ನವಾಗಿ ವಿಶ್

    ಪವರ್ ಸ್ಟಾರ್ ಪವರ್ ಫುಲ್ ವರ್ಕೌಟ್ – ಅಭಿಮಾನಿಗಳಿಗೆ ವಿಭಿನ್ನವಾಗಿ ವಿಶ್

    ಬೆಂಗಳೂರು: ಇಂದು ಎಲ್ಲೆಡೆ ವರಮಹಾಲಕ್ಷ್ಮೀ ಹಬ್ಬದ ಸಂಭ್ರಮ. ಈ ವಿಶೇಷ ದಿನದಂದು ಸ್ಯಾಂಡಲ್‍ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್‌ರವರು ವರ್ಕೌಟ್ ಮಾಡುತ್ತಿರುವ ಪವರ್ ಫುಲ್ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುವ ಮೂಲಕ ಅಭಿಮಾನಿಗಳಿಗೆ ವಿಭಿನ್ನವಾಗಿ ಹಬ್ಬಕ್ಕೆ ಶುಭಾಶಯ ತಿಳಿಸಿದ್ದಾರೆ.

    ಚಂದನವನದಲ್ಲಿ ತಮ್ಮದೇ ಆದ ಅಭಿನಯ, ಡ್ಯಾನ್ಸ್ ಹಾಗೂ ಸ್ಟಂಟ್ಸ್ ಮೂಲಕವೇ ಕನ್ನಡ ಪ್ರೇಕ್ಷಕರ ಮನಗೆದ್ದಿರುವ ಪುನೀತ್ ಅಪಾರ ಅಭಿಮಾನಿ ಬಳಗ ಹೊಂದಿದ್ದಾರೆ. ಯಾವುದೇ ಕಷ್ಟಕರ ಪಾತ್ರ ಕೊಟ್ಟರೂ ಸುಲಭವಾಗಿ ನಟಿಸಿ ಸೈ ಎನಿಸಿಕೊಳ್ಳುವ ಪುನೀತ್ ಮೊದಲಿನಿಂದಲೂ ಸಖತ್ ಫಿಟ್ ಹಾಗೂ ಆ್ಯಕ್ಟೀವ್ ಆಗಿದ್ದಾರೆ. ಸದ್ಯ ಪುನೀತ್ ತಮ್ಮ ಮನೆಯಲ್ಲಿರುವ ಜಿಮ್‍ನಲ್ಲಿ ಸಖತ್ ವರ್ಕೌಟ್ ಮಾಡಿದ್ದು, ಈ ವೀಡಿಯೋವನ್ನು ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ದ್ವಿತ್ವ ಸಿನಿಮಾಗೆ ಪುನೀತ್ ರಾಜ್‍ಕುಮಾರ್ ಜೋಡಿಯಾದ ತ್ರಿಷಾ ಕೃಷ್ಣ

    ವೀಡಿಯೋದಲ್ಲಿ ಪುನೀತ್ ಹಸಿರು ಕಲರ್ ಟಿ-ಶರ್ಟ್ ಹಾಗೂ ಶಾರ್ಟ್ಸ್ ಧರಿಸಿ ಕಿಕ್ ಬಾಕ್ಸಿಂಗ್ ಬ್ಯಾಗ್‍ಗೆ ಒದೆಯುತ್ತಿರುವುದನ್ನು ಕಾಣಬಹುದಾಗಿದೆ. ವೀಡಿಯೋ ಜೊತೆಗೆ ಆರೋಗ್ಯವೇ ನಿಜವಾದ ಸಂಪತ್ತು ಎಂಬುವುದನ್ನು ನಾವು ಅರಿತುಕೊಳ್ಳೋಣ. ಹ್ಯಾಪಿ ವರಮಹಾಲಕ್ಷ್ಮೀ ಎಂದು ಎಂದು ವಿಶ್ ಮಾಡಿದ್ದಾರೆ.

    ಇತ್ತೀಚೆಗಷ್ಟೇ ನಗರದ ಖಾಸಗಿ ಹೋಟೆಲ್‍ನಲ್ಲಿ ಡಾ. ರಾಜ್ ಕುಮಾರ್ ಅಕಾಡೆಮಿಯಿಂದ ಡಾ. ರಾಜ್‍ಕುಮಾರ್ ಲರ್ನಿಂಗ್ ಆ್ಯಪ್‍ನನ್ನು ಲೋಕಾರ್ಪಣೆ ಸಮಾರಂಭ ನಡೆಯಿತು. ಪುನೀತ್ ರಾಜ್‌ಕುಮಾರ್‌ರವರು ಈ ಆ್ಯಪ್‍ನ ಬ್ರಾಂಡ್ ಅಂಬಾಸಿಡರ್ ಆಗಿದ್ದು, ಸಭೆಯನ್ನುದ್ದೇಶಿಸಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿಯವರು ಅಪ್ಪು ನೀವು ಫಾರ್ಮಲ್ ಎಜುಕೇಶನ್ ಬಗ್ಗೆ ಕಲಿಯಲಿಲ್ಲ ಅಂದರೂ ಪರವಾಗಿಲ್ಲ. ಫಾರ್ಮಲ್ ಎಜುಕೇಶನ್ ಮುಖ್ಯವಲ್ಲ. ಜ್ಞಾನ ಬಹಳ ಮುಖ್ಯ. ಜ್ಞಾನದಿಂದಲೇ ವಿದ್ಯೆ. ನೀವೊಬ್ಬರು ಐಕಾನ್ ಎಂದು ಹಾಡಿ ಹೊಗಳಿದ್ದರು.  ಇದನ್ನೂ ಓದಿ:ಅಪ್ಪು ಡೋಂಟ್‍ವರಿ, ನೀವು ಓದಿಲ್ಲ ಆದ್ರೂ ನೀವೊಬ್ಬರು ಐಕಾನ್: ಬೊಮ್ಮಾಯಿ

  • ಚಾಮುಂಡಿ ಬೆಟ್ಟದಲ್ಲಿ ಜನಸ್ತೋಮ – ಇಂದು ಸೇರಿದಂತೆ 3 ದಿನ ಭಕ್ತರ ಪ್ರವೇಶಕ್ಕೆ ನಿರ್ಬಂಧ

    ಚಾಮುಂಡಿ ಬೆಟ್ಟದಲ್ಲಿ ಜನಸ್ತೋಮ – ಇಂದು ಸೇರಿದಂತೆ 3 ದಿನ ಭಕ್ತರ ಪ್ರವೇಶಕ್ಕೆ ನಿರ್ಬಂಧ

    ಮೈಸೂರು: ಶ್ರಾವಣ ಮಾಸದ ಎರಡನೇ ಶುಕ್ರವಾರ ದಿನವಾದ ಇಂದು ವರಮಹಾಲಕ್ಷ್ಮೀ ಹಬ್ಬವನ್ನು ರಾಜ್ಯದೆಲ್ಲೆಡೆ ಬಹಳ ಸಡಗರದಿಂದ ಜನರು ಆಚರಿಸುತ್ತಿದ್ದಾರೆ. ಹಬ್ಬದ ವಿಶೇಷ ದಿನವಾದ ಇಂದು ಮೈಸೂರು ಜಿಲ್ಲೆಯ ಚಾಮುಂಡಿ ಬೆಟ್ಟಕ್ಕೆ ಭಕ್ತಸಾಗರವೇ ಹರಿದು ಬರುತ್ತಿರುವುದರಿಂದ ಮೂರು ದಿನ ಚಾಮುಂಡಿ ಬೆಟ್ಟಕ್ಕೆ ಪ್ರವೇಶವನ್ನು ನಿಷೇಧಿಸಲಾಗಿದೆ.

    ವರಮಹಾಲಕ್ಷ್ಮೀ ಹಬ್ಬದ ದಿನ ಸಾಮಾನ್ಯವಾಗಿ ದೇವಿಯ ದರ್ಶನಕ್ಕಾಗಿ ಹೆಚ್ಚಾಗಿ ಭಕ್ತರು ಮುಗಿಬೀಳುತ್ತಾರೆ. ಈ ವಿಶೇಷ ದಿನದಂದು ನಾಡದೇವತೆ ತಾಯಿ ಚಾಮುಂಡೇಶ್ವರಿ ದೇವಾಲಯಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿರುವ ಕಾರಣ ಕೊರೊನಾ ಮುನ್ನೆಚ್ಚರಿಕಾ ಕ್ರಮವಾಗಿ ಮೈಸೂರು ಜಿಲ್ಲಾಡಳಿತ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಿದೆ. ಇದನ್ನೂ ಓದಿ: ಚಾಮುಂಡಿ ಬೆಟ್ಟಕ್ಕೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ ಶಿವಣ್ಣ

    ಈಗಾಗಲೇ ಕೊರೊನಾದಿಂದ ವೀಕೆಂಡ್ ಕರ್ಫ್ಯೂ ಹಾಗೂ ಭಾನುವಾರ ಬೆಟ್ಟಕ್ಕೆ ನಿರ್ಬಂಧ ಹೇರಲಾಗಿದೆ. ಜೊತೆಗೆ ಶ್ರಾವಣ ಶನಿವಾರ ಹಿನ್ನಲೆ ಚಿಕ್ಕ ತಿರುಪತಿ ಎಂದೇ ಪ್ರಸಿದ್ಧಿಯಾಗಿರುವ ವಿವಿಪುರಂನ ವೆಂಕಟೇಶ್ವರ ಸ್ವಾಮಿ ದೇಗುಲಕ್ಕೂ ಪ್ರವೇಶವನ್ನು ನಿಷೇಧಿಸಲಾಗಿದೆ. ಇದನ್ನೂ ಓದಿ:ಚಾಮುಂಡಿ ಬೆಟ್ಟಕ್ಕೆ ಡಿ ಬಾಸ್ ಭೇಟಿ- ಮುಗಿಬಿದ್ದ ಅಭಿಮಾನಿಗಳು