Tag: varthur

  • ನಾಮಿನೇಟ್ ಮಾಡೋಕೆ ಪ್ಲ್ಯಾನ್ ಮಾಡಿದ ಬಿಗ್ ಬಾಸ್

    ನಾಮಿನೇಟ್ ಮಾಡೋಕೆ ಪ್ಲ್ಯಾನ್ ಮಾಡಿದ ಬಿಗ್ ಬಾಸ್

    ಬಿಗ್‌ಬಾಸ್ (Bigg Boss Kannada) ಕನ್ನಡ ಹತ್ತನೇ ಸೀಸನ್‌ ಫೈನಲ್‌ ಹಂತಕ್ಕೆ ಇನ್ನು ಎರಡೇ ಹೆಜ್ಜೆ ಬಾಕಿ ಇದೆ. ಈ ಹಂತದಲ್ಲಿ ಮನೆಯೊಳಗೆ ಪೈಪೋಟಿ ಜೋರಾಗಿಯೇ ನಡೆಯುತ್ತಿದೆ. ಅದರ ಒಂದು ಭಾಗವಾಗಿ ನಾಮಿನೇಷನ್‌ ಚಟುವಟಿಕೆ ನಡೆದಿದೆ. ಅದರ ಝಲಕ್ ಬಿಡುಗಡೆ ಮಾಡಿರುವ ಪ್ರೋಮೊದಲ್ಲಿ ಕಾಣಿಸಿಕೊಂಡಿದೆ. ಎಲ್ಲ ಸ್ಪರ್ಧಿಗಳ ಎದೆಯ ಮೇಲೆ ಹೃದಯಾಕಾರದ ಬೋರ್ಡ್‌ ಅನ್ನು ನೇತುಹಾಕಲಾಗಿದೆ. ಸಂಗೀತಾ ಹೊರತುಪಡಿಸಿ ಎಲ್ಲ ಸ್ಪರ್ಧಿಗಳೂ ತಾವು ನಾಮಿನೇಷನ್ ಮಾಡಲು ಇಚ್ಛಿಸುವ ಇಬ್ಬರು ಸ್ಪರ್ಧಿಗಳ ಹೆಸರು ಹೇಳಿ ಅವರ ಕತ್ತಿನಲ್ಲಿ ತೂಗು ಹಾಕಿದ್ದ ಬೋರ್ಡ್‌ಗೆ ಚೂರಿ ಹಾಕಬೇಕು.

    ಈ ಚಟುವಟಿಕೆಯಲ್ಲಿ ಕಾರ್ತಿಕ್‌ ಅವರು ವರ್ತೂರು ಸಂತೋಷ್ ಮತ್ತು ತನಿಷಾ ಅವರ  ಹೆಸರನ್ನು ಸೂಚಿಸಿ ಚೂರಿ ಹಾಕಿದ್ದಾರೆ. ಪ್ರೇಕ್ಷಕರಲ್ಲಿ ನಿಜಕ್ಕೂ ಇದು ಸಖತ್ ಬೇಸರ ತರಿಸಿದೆ. ವರ್ತೂರು (Varthur) ಮತ್ತು ತನಿಷಾ (Tanisha) ಅವರನ್ನು ಲವ್ ಬರ್ಡ್ಸ್ ಎಂದು ಕರೆಯಲಾಗಿತ್ತು. ಅದೆಷ್ಟೋ ಬಾರಿ ತಮ್ಮ ತೊಡೆಯ ಮೇಲೆ ತನಿಷಾರನ್ನು ಮಲಗಿಸಿಕೊಂಡು ಪ್ರೀತಿ ತೋರಿದ್ದಾರೆ ವರ್ತೂರು. ತನಿಷಾ ಕೂಡ ವರ್ತೂರು ಮೇಲೆ ಅಷ್ಟೇ ಇಷ್ಟ ಪಟ್ಟಿದ್ದಾರೆ. ಆದರೆ, ನಾಮಿನೇಷನ್ ಟಾಸ್ಕ್ ನಲ್ಲಿ ಮಾತ್ರ ಇಬ್ಬರೂ ದುಷ್ಮನ್ ರೀತಿಯಲ್ಲಿ ಕಂಡಿದ್ದಾರೆ.

    ಮತ್ತೊಂದು ಕಡೆ ತನಿಷಾ ಅವರು ತಮ್ಮ ಸರದಿ ಬಂದಾಗ, ವರ್ತೂರು ಸಂತೋಷ್ ಅವರ ಹೆಸರನ್ನು ತೆಗೆದುಕೊಳ್ಳುತ್ತಾರೆ ಎಂದು ಅಂದಾಜಿಸಲಾಗಿತ್ತು. ಆದರೆ, ವರ್ತೂರು ಮೇಲಿನ ಪ್ರೀತಿಯನ್ನು ಹಾಗೆಯೇ ಉಳಿಸಿಕೊಂಡು ನಮ್ರತಾ ಅವರ ಹೆಸರು ಹೇಳಿದ್ದಾರೆ. ವಿನಯ್‌ ಮತ್ತು ಪ್ರತಾಪ್ ಫೈಟ್‌ನ ಪರಿಣಾಮ ಈ ಚಟುವಟಿಕೆಯಲ್ಲಿಯೂ ಕಾಣಿಸಿಕೊಂಡಿದೆ. ಅವರಿಬ್ಬರೂ ಪರಸ್ಪರ ಚೂರಿ ಹಾಕಿಕೊಂಡಿದ್ದಾರೆ. ಈ ಮೂಲಕ ನಾವಿಬ್ಬರೂ ಬದ್ಧ ವೈರಿಗಳು ಎನ್ನುವುದನ್ನು ಮತ್ತೆ ಸಾರಿದ್ದಾರೆ.

     

    ಒಟ್ಟಾರೆ ಈ ವಾರ ನಾಮಿನೇಟ್ ಆಗುವ ಸ್ಪರ್ಧಿಗಳು ಯಾರು ಯಾರು? ಅವರಲ್ಲಿ ಯಾರು ಸೇವ್ ಆಗಲಿದ್ದಾರೆ? ಯಾರು ಬಿಗ್‌ಬಾಸ್ ಮನೆಯಿಂದ ಹೊರಗೆ ಹೋಗಲಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ವಾರಾಂತ್ಯದವರೆಗೂ ಕಾಯಲೇಬೇಕು. ಆದರೆ, ಟಾಸ್ಕ್ ನಲ್ಲಿ ಮಾತ್ರ ಬೆಂಕಿ, ಬಿರುಗಾಳಿ ಎರಡೂ ಕಾಣಿಸಿಕೊಂಡಿವೆ. ಬೆಳ್ಳಂ ಬೆಳಗ್ಗೆ ಬಿಗ್ ಬಾಸ್ ಮನೆ ಬಿಸಿಯಾಗಿದೆ. ಇದರಲ್ಲಿ ಯಾರೆಲ್ಲ ಬೆಂದು ಹೋಗುತ್ತಾರೆ ಎಂದು ಕಾದು ನೋಡಬೇಕಿದೆ.

  • ಬೆಂಗಳೂರು ಹಾರರ್ – ಬಾಲಕಿಯ ಮೇಲೆ ರೂಮಿನಲ್ಲೇ ಪ್ರಾಂಶುಪಾಲನಿಂದ ಅತ್ಯಾಚಾರ

    ಬೆಂಗಳೂರು ಹಾರರ್ – ಬಾಲಕಿಯ ಮೇಲೆ ರೂಮಿನಲ್ಲೇ ಪ್ರಾಂಶುಪಾಲನಿಂದ ಅತ್ಯಾಚಾರ

    ಬೆಂಗಳೂರು: ನಗರದ ಖಾಸಗಿ ಶಾಲೆಯ (School) ಪ್ರಾಂಶುಪಾಲನೊಬ್ಬ 10 ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದೆ.

    ವರ್ತೂರು (Varthur) ಸಮೀಪದ ಶಾಲೆಗೆ ಬಾಲಕಿ ಎಂದಿನಂತೆ ತೆರಳಿ ಮನೆಗೆ ವಾಪಸ್ ಆಗಿದ್ದಳು. ಮನೆಗೆ ಮರಳಿದ ವೇಳೆ ಬಾಲಕಿಯ ಆರೋಗ್ಯದಲ್ಲಿ ವ್ಯತ್ಯಯವಾಗಿದೆ. ವಿಪರೀತ ನೋವಿನಿಂದ ಬಳಲಿದ ಆಕೆಯನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ವೇಳೆ ತಪಾಸಣೆ ನಡೆಸಿದ ವೈದ್ಯರು ಬಾಲಕಿಯ ಮೇಲೆ ಅತ್ಯಾಚಾರ ನಡೆದಿರುವುದು ದೃಢಪಡಿಸಿದ್ದಾರೆ ಎಂದು ಪೋಷಕರು ಹೇಳಿದ್ದಾರೆ. ಇದನ್ನೂ ಓದಿ: ಅಣ್ಣ ಹೇಳಿದ್ದಾರೆ ತಮ್ಮ ಕೇಳುತ್ತಿರಬೇಕು: ಹೆಚ್‌ಡಿಕೆಗೆ ಡಿಕೆಶಿ ಟಾಂಗ್‌

    ಈ ಬಗ್ಗೆ ಬಾಲಕಿಯನ್ನು ವಿಚಾರಿಸಿದಾಗ ಶಾಲಾ ಸಂಸ್ಥಾಪಕ ಮತ್ತು ಪ್ರಾಂಶುಪಾಲನೇ ಆಕೆಯನ್ನು ಖಾಲಿ ರೂಮಿಗೆ ಕರೆದೊಯ್ದು ಕೃತ್ಯ ಎಸಗಿರುವುದಾಗಿ ತಿಳಿಸಿದ್ದಾಳೆ. ಈ ಸಂಬಂಧ ವರ್ತೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು (Police) ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಅಮಾಯಕ ವ್ಯಾಪಾರಿ ಮೇಲೆ ಕಳ್ಳತನ ಆರೋಪ ಹೊರಿಸಿ ಲಾಠಿಯಿಂದ ಹಲ್ಲೆ – ಹೆಡ್‌ಕಾನ್‌ಸ್ಟೇಬಲ್ ಅಮಾನತು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೆಂಗ್ಳೂರಲ್ಲಿ ಆಂಟಿಯ ಓಲೈಕೆಗಾಗಿ ಅಂಕಲ್‍ನನ್ನೇ ಕೊಂದ್ರು!

    ಬೆಂಗ್ಳೂರಲ್ಲಿ ಆಂಟಿಯ ಓಲೈಕೆಗಾಗಿ ಅಂಕಲ್‍ನನ್ನೇ ಕೊಂದ್ರು!

    -ತಲೆಗೆ ರಾಡ್‍ನಿಂದ ಹೊಡೆದು, ಕತ್ತು ಕೊಯ್ದು ಕುದುರೆಮುಖದ ನದಿಗೆ ಬಿಸಾಡಿದ್ರು

    ಬೆಂಗಳೂರು: ಮಹಿಳೆಗೋಸ್ಕರ ಪತಿಯನ್ನ ಕೊಲೆ ಮಾಡಿ ಮೂಟೆ ಕಟ್ಟಿ ನಂತರ ಶವವನ್ನು ಕಾರಿನ ಡಿಕ್ಕಿಯಲ್ಲಿ ಸಾಗಿಸಿ ಕುದುರೆಮುಖದ ಬಳಿ ನದಿಗೆ ಎಸೆದ ಘಟನೆಯೊಂದು ನಡೆದಿರುವ ಬಗ್ಗೆ ಸಿಲಿಕಾನ್ ಸಿಟಿಯಲ್ಲಿ ಬೆಳಕಿಗೆ ಬಂದಿದೆ.

    ನವಾಜ್(30) ಹತ್ಯೆಗೀಡಾದ ವ್ಯಕ್ತಿ. ಹಂತಕರು ಆಗಸ್ಟ್ 20 ರಂದು ನಸುಕಿನ ಜಾವ ನವಾಜ್ ನನ್ನು ಕ್ಯಾಂಟರ್ ವಾಹನ ಬಾಡಿಗೆಗೆ ಬೇಕು ಅಂತಾ ಕರೆಸಿಕೊಂಡು ಕೊಲೆ ಮಾಡಿದ್ದರು.

    ಬೆಳಕಿಗೆ ಬಂದಿದ್ದು ಹೇಗೆ?:
    ನವಾಜ್ ತಲೆಗೆ ರಾಡ್‍ನಿಂದ ಹೊಡೆದು ಕುತ್ತಿಗೆ ಕೊಯ್ದು ಕೊಲೆ ಮಾಡಿದ್ದರು. ನಂತರ ಶವವನ್ನು ಇಟಿಯೋಸ್ ಕಾರಿನ ಡಿಕ್ಕಿಯಲ್ಲಿಟ್ಟು ಕುದುರೆಮುಖ ಹತ್ತಿರ ನದಿಗೆ ಎಸೆದಿದ್ದರು. ಇತ್ತ ಹೊರ ಹೋಗಿದ್ದ ನವಾಜ್ ಮನೆಗೆ ಬಾರದಿದ್ದಾಗ ಪತ್ನಿ ಆಯೇಷಾ ವರ್ತೂರು ಪೊಲೀಸರಿಗೆ ದೂರು ನೀಡಿದ್ದರು. ಎರಡು ದಿನವಾದ್ರೂ ನವಾಜ್ ಬಗ್ಗೆ ಯಾವುದೇ ಸುಳಿವೂ ಸಿಕ್ಕಿರಲಿಲ್ಲ. ಹಾಗಾಗಿ ಪೊಲೀಸರು ನವಾಜ್ ಮೊಬೈಲ್‍ನ ಸಿಡಿಆರ್ ಪರಿಶೀಲನೆ ನಡೆಸಿದ್ದರು. ನಸುಕಿನ ಜಾವ 3.10ಕ್ಕೆ ಬಂದಿದ್ದ ಕರೆ ಬಗ್ಗೆ ತನಿಖೆ ನಡೆಸಿದ್ದರು.

    ವರ್ತೂರು ಪೊಲೀಸರು ತನಿಖೆ ನಡೆಸಿದ ವೇಳೆ ಶಿವಕುಮಾರ್ ಸ್ನೇಹಿತ ಪವನ್ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದರು. ಪವನ್ ವಿಚಾರಣೆ ವೇಳೆ ನವಾಜ್ ಕೊಲೆ ಮಾಡಿದ ವಿಚಾರ ಬೆಳಕಿಗೆ ಬಂದಿತ್ತು. ಬಳಿಕ ಪೊಲೀಸರು ಶಿವಕುಮಾರ್ ಸಹಿತ ನಾಲ್ವರನ್ನು ಬಂಧಿಸಿದ್ದರು. ವಿಚಾರಣೆ ವೇಳೆ ಶಿವಕುಮಾರ್ ಕೊಲೆ ಹಿಂದಿನ ಕಾರಣ ಬಾಯ್ಬಿಟ್ಟಿದ್ದಾನೆ.

    ಕೊಲೆಗೆ ಕಾರಣವೇನು:
    ಕೊಲೆಯಾದ ನವಾಜ್ ಪತ್ನಿ ಆಯಿಷಾಳನ್ನು ಶಿವಕುಮಾರ್ ಪ್ರೀತಿಸುತ್ತಿದ್ದನು. ಆದರೆ ಆಯಿಷಾಳಿಗೆ ಮದುವೆಯಾಗಿದೆ ಅಂತ ತಡವಾಗಿ ಗೊತ್ತಾಗಿತ್ತು. ಹೀಗಾಗಿ ಹೇಗಾದ್ರೂ ಮಾಡಿ ಆಕೆಯನ್ನು ಪಡೆದುಕೊಳ್ಳಬೇಕು ಅಂತ ಹಠ ಹಿಡಿದಿದ್ದನು. ಇದಕ್ಕಾಗಿ ಪ್ರೇಯಸಿಯ ಪತಿಯನ್ನು ಕೊಲೆ ಮಾಡುವ ನಿರ್ಧಾರ ಮಾಡಿದ್ದನು. ಅಲ್ಲದೇ ಈ ಬಗ್ಗೆ ತನ್ನ ಗೆಳೆಯರಿಗೂ ತಿಳಿಸಿ ಅವರ ಜೊತೆಗೂಡಿ ನವಾಜ್ ನನ್ನು ಹತ್ಯೆ ಮಾಡಲಾಯಿತು ಅಂತ ಹೇಳಿದ್ದಾನೆ.

    1 ವರ್ಷದ ಹಿಂದೆ ಆಯಿಷಾ ಮತ್ತು ನವಾಜ್ ಮದುವೆಯಾಗಿದ್ದರು. ದಂಪತಿ ಬಾಡಿಗೆ ಮನೆಯಲ್ಲಿದ್ದಾಗ ಆಯಿಷಾಗೆ ಶಿವಕುಮಾರ್ ಪರಿಚಯವಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಹಾಡಹಗಲೇ ಪೊಲೀಸರ ಮೇಲೆ ಹಲ್ಲೆಗೈದ ಯುವನಾಯಕ ಬಿಜೆಪಿಯಿಂದ ಅಮಾನತು: ಆರ್. ಅಶೋಕ್

    ಹಾಡಹಗಲೇ ಪೊಲೀಸರ ಮೇಲೆ ಹಲ್ಲೆಗೈದ ಯುವನಾಯಕ ಬಿಜೆಪಿಯಿಂದ ಅಮಾನತು: ಆರ್. ಅಶೋಕ್

    ಬೆಂಗಳೂರು: ಪೊಲೀಸರ ಮೇಲೆ ಹಾಡಹಗಲೇ ಹಲ್ಲೆ ನಡೆಸಿದ ಆರೋಪಿಗಳಲ್ಲಿ ಓರ್ವ ಬಿಜೆಪಿ ಮುಖಂಡನಾಗಿದ್ದು, ಆತನನ್ನು ಪಕ್ಷದಿಂದ ಅಮಾನತು ಮಾಡುವಂತೆ ಈಗಾಗಲೇ ಸೂಚನೆ ನೀಡಿರುವುದಾಗಿ ಬಿಜೆಪಿ ನಾಯಕ ಆರ್ ಅಶೋಕ್ ತಿಳಿಸಿದ್ದಾರೆ.

    ಪೊಲೀಸರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿಸದಂತೆ ಆರೋಪಿಗಳಲ್ಲಿ ಒಬ್ಬನಾದ ಸಂದೀಪ್, ಶಾಸಕ ಅರವಿಂದ ಲಿಂಬಾವಳಿ ಬೆಂಬಲಿಗನಾಗಿದ್ದಾನೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿದ ಅಶೋಕ್, ಆರೋಪಿ ಸಂದೀಪ್, ಗುಂಡೂರು ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷನಾಗಿದ್ದಾನೆ. ಹೀಗಾಗಿ ಆತನನ್ನು ಪಕ್ಷದಿಂದ ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದೇನೆ ಅಂದ್ರು. ಇದನ್ನೂ ಓದಿ: ಇಸ್ಪೀಟ್ ಅಡ್ಡೆ ಮೇಲೆ ದಾಳಿ ಮಾಡಿದ್ದಕ್ಕೆ ಪೊಲೀಸರ ಮೇಲೆಯೇ ಹಲ್ಲೆ- ಪುಡಿರೌಡಿಗಳ ಅಟ್ಟಹಾಸಕ್ಕೆ ಓಡಿಹೋದ ಪೇದೆಗಳು

    ಉಳಿದ ಮೂವರು ಆರೋಪಿಗಳು ಯಾವ ಪಕ್ಷದವರು ಅಂತಾ ಗೃಹಸಚಿವರು ಸ್ಪಷ್ಟಪಡಿಸಬೇಕು. ಆ ಮೂವರು ಕಾಂಗ್ರೆಸ್ ನವರು ಅಂತಾ ಹೇಳಲಾಗ್ತಿದೆ. ಅವರ ಹೆಸರು ಯಾಕೆ ಹೇಳ್ತಿಲ್ಲ ಅಂತ ಪ್ರಶ್ನಿಸಿದ್ರು.

    ಪೊಲೀಸರ ಮೇಲಿನ ಹಲ್ಲೆಗಳನ್ನು ನೋಡಿದ್ರೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಎಷ್ಟರ ಮಟ್ಟಿಗಿದೆ ಅನ್ನೋದು ಗೊತ್ತಾಗುತ್ತೆ. ಯಾರೇ ತಪ್ಪು ಮಾಡಿದ್ರು, ಅದು ತಪ್ಪು. ಹಲ್ಲೆ ಮಾಡಿದವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸುತ್ತೇನೆ ಅಂತ ಅವರು ಹೇಳಿದ್ದಾರೆ.

    ನಗರದ ವರ್ತೂರು ಮುಖ್ಯರಸ್ತೆಯ ಸಿದ್ದಾಪುರ ಬಳಿ ಭಾನುವಾರ ಪೇದೆಗಳಾದ ಬಸಪ್ಪ ಗಾಣೆಗಾರ, ಶರಣಬಸಪ್ಪ ಇಸ್ಪೀಟ್ ಅಡ್ಡೆ ಮೇಲೆ ದಾಳಿ ನಡೆಸಿದ್ದರು. ಈ ವೇಳೆ ಕುಡಿತ ಮತ್ತಿನಲ್ಲಿದ್ದ ಗ್ಯಾಂಗ್ ಪೊಲೀಸರ ಮೇಲೆಯೇ ಹಾಡಹಗಲೇ ಹಲ್ಲೆ ನಡೆಸಿವೆ. ಪ್ರಕರಣ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಕುಮಾರ್, ಸುದೀಪ್, ಮೂರ್ತಿ, ಮುರಳಿ ಮೋಹನ್ ಎಂಬ ನಾಲ್ವರನ್ನು ಬಂಧಿಸಿದ್ದಾರೆ. ಉಳಿದ ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

    https://www.youtube.com/watch?v=6caEcDoIStw

    https://www.youtube.com/watch?v=DrZ-G_iCIfI

  • ನೊರೆ ಆಯ್ತು, ಇದೀಗ ಬೆಂಕಿ: ಬೆಳ್ಳಂದೂರು- ವರ್ತೂರು ಕೆರೆ ಪ್ರದೇಶ ಧಗಧಗ

    ನೊರೆ ಆಯ್ತು, ಇದೀಗ ಬೆಂಕಿ: ಬೆಳ್ಳಂದೂರು- ವರ್ತೂರು ಕೆರೆ ಪ್ರದೇಶ ಧಗಧಗ

    ಆನೆಕಲ್: ಮಳೆ ಬಂದ ಕಾರಣ ಕೆರೆಯಿಂದ ನೊರೆ ಬಂದಿದ್ದಾಯ್ತು. ಇದೀಗ ಬೆಳ್ಳಂದೂರು-ವರ್ತೂರು ಕೆರೆ ಮಧ್ಯೆ ಮತ್ತೆ ಬೆಂಕಿ ಕಾಣಿಸಿಕೊಂಡಿದೆ.

    ವರ್ತೂರು-ಬೆಳ್ಳಂದೂರು ಕೆರೆಗಳ ನಡುವೆ ಸಂಪರ್ಕ ಕಲ್ಪಿಸುವ ಪ್ರದೇಶದಲ್ಲಿ ಬೆಂಕಿ ಹೊತ್ತಿ ಉರಿಯುತ್ತಿದ್ದು, ದಟ್ಟ ಹೊಗೆ ಆವರಿಸಿದೆ. ಅದು ಕಸ ವಿಂಗಡಿಸುವ ಸ್ಥಳದಲ್ಲೇ ಈ ಬೆಂಕಿ ಕಾಣಿಸಿಕೊಂಡಿದೆ.

    ಮೊನ್ನೆಯಷ್ಟೇ ನೊರೆ ಸಮಸ್ಯೆ ಉದ್ಭವವಾಗಿತ್ತು. ಈಗ ಮತ್ತೆ ಬೆಂಕಿ ಕಾಣಿಸಿಕೊಂಡಿರೋದಕ್ಕೆ ವರ್ತೂರು ಕೆರೆ ಸುತ್ತಮುತ್ತಲಿನ ಜನ ಆಕ್ರೋಶಗೊಂಡಿದ್ದಾರೆ. ಎನ್‍ಜಿಟಿ ಖಡಕ್ ಆದೇಶದ ಬಳಿಕವೂ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ಲಕ್ಷ್ಯ ತಾಳಿರುವುದು ವಿಪರ್ಯಾಸ.

    https://www.youtube.com/watch?v=EOK1LzZ6wp0&feature=youtu.be

  • ವರ್ತೂರು ಕೋಡಿಯಲ್ಲಿ ಮುಂದುವರಿದ ನೊರೆಯ ಆರ್ಭಟ – ಸ್ಥಳೀಯರ ಪರದಾಟ

    ವರ್ತೂರು ಕೋಡಿಯಲ್ಲಿ ಮುಂದುವರಿದ ನೊರೆಯ ಆರ್ಭಟ – ಸ್ಥಳೀಯರ ಪರದಾಟ

    ಬೆಂಗಳೂರು: ವರ್ತೂರು ಕೋಡಿಯಲ್ಲಿ ಇಂದು ಸಹ ನೊರೆಯ ಅರ್ಭಟ ಮುಂದುವರೆದಿದೆ. ನಗರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನೊರೆಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ.

    ರಸ್ತೆಗೆ ಹಾರುತ್ತಿರುವ ನೊರೆಯಿಂದಾಗಿ ವಾಹನ ಸವಾರರು ಪರದಾಡುತ್ತಿದ್ದಾರೆ. ನೊರೆಯ ಅರ್ಭಟದ ನಡುವೆಯೇ ವಾಹನ ಸವಾರರು ಸಾಗುತ್ತಿದ್ದಾರೆ. ಇದರಿಂದಾಗಿ ಸಾಂಕಾಮಿಕ ರೋಗಗಳು ಹರಡಬಹುದೆಂದು ಜನರು ಆತಂಕದಲ್ಲಿದ್ದಾರೆ.

    https://www.youtube.com/watch?v=5ijDLdSCP98&feature=youtu.be

    ಕಳೆದೆರಡು ದಿನಗಳಿಂದ ಸುರಿದ ಭಾರಿ ಮಳೆಯಿಂದಾಗಿ ಬೆಳ್ಳಂದೂರು ವಾರ್ಡ್‍ನ ಯುತೋಪಿಯಾ ಅಪಾರ್ಟ್ಮೆಂಟ್ ಕಾಂಪೌಂಡ್ ಗೋಡೆ ಕುಸಿದಿದ್ದು ಇಂದು ಮುಂಜಾನೆ ಮೇಯರ್ ಪದ್ಮಾವತಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮಹದೇವಪುರ ಜಂಟಿ ಆಯುಕ್ತೆ ವಾಸಂತಿ ಅಮರ್, ಬೆಳ್ಳಂದೂರು ವಾರ್ಡ್ ಕಾರ್ಪೋರೇಟರ್ ಆಶಾ ಸುರೇಶ್ ಸೇರಿದಂತೆ ಬಿಬಿಎಂಪಿ ಅಧಿಕಾರಿಗಳು ಹಾಜರಿದ್ದರು.

    ಈ ವೇಳೆ ತಂತ್ರಜ್ಞರು ಪರಿಶೀಲನೆ ನಡೆಸಿದ್ದು ಕಾಂಪೌಂಡ್ ಗೋಡೆ ಕುಸಿತದಿಂದ ಯುತೊಪಿಯಾ ಅಪಾರ್ಟ್‍ಮೆಂಟ್‍ಗೆ ಯಾವುದೇ ತೊಂದರೆಯಿಲ್ಲ ಎಂದು ತಿಳಿಸಿದ್ದಾರೆ. ಕಟ್ಟಡದ ಕಾಂಪೌಂಡ್ ಕುಸಿದ ಸ್ಥಳ ಮತ್ತು ಮಣ್ಣುಗೋಡೆ ಕುಸಿದ ಸ್ಥಳದಲ್ಲಿ ಸೂಕ್ತ ಬಂದೋಬಸ್ತ್ ಸಲಾರ್ ಪುರಿಯಾ ಸಂಸ್ಥೆ ನೆರವೇರಿಸಬೇಕು. ಅಲ್ಲಿವರೆಗೆ ಸಾಫ್ಟ್ ವೇರ್ ಪಾರ್ಕ್ ಕಾಮಗಾರಿ ನಿಲ್ಲಿಸುವಂತೆ ಆದೇಶಿಸಲಾಗಿದ್ದು, ಒಂದೊಮ್ಮೆ ಸಾಫ್ಟ್ ವೇರ್ ಪಾರ್ಕ್ ಕಟ್ಟಡ ಕಾಮಗಾರಿಯಲ್ಲಿ ನಿಯಮ ಉಲ್ಲಂಘಿಸಿದ್ದು ಕಂಡುಬಂದಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಮೇಯರ್ ಪದ್ಮಾವತಿ ತಿಳಿಸಿದ್ದಾರೆ.