Tag: Vartika Katiyar

  • ವರ್ತಿಕಾ ಕಟಿಯಾರ್ ದೂರು ನೀಡಿದ ಬೆನ್ನಲ್ಲೇ ಐಎಸ್‌ಡಿಯಿಂದ ಡಿ.ರೂಪಾ ವರ್ಗಾವಣೆ

    ವರ್ತಿಕಾ ಕಟಿಯಾರ್ ದೂರು ನೀಡಿದ ಬೆನ್ನಲ್ಲೇ ಐಎಸ್‌ಡಿಯಿಂದ ಡಿ.ರೂಪಾ ವರ್ಗಾವಣೆ

    ಬೆಂಗಳೂರು: ಇತ್ತೀಚಿಗಷ್ಟೇ ಡಿ.ರೂಪಾ ವಿರುದ್ಧ ವರ್ತಿಕಾ ಕಟಿಯಾರ್ ಸಿಎಸ್‌ಗೆ ದೂರು ನೀಡಿದ್ದರು. ದೂರು ನೀಡಿದ ಬೆನ್ನಲ್ಲೇ ಇದೀಗ ಐಜಿಪಿ ಡಿ.ರೂಪಾರನ್ನು ಐಎಸ್‌ಡಿಯಿಂದ ವರ್ಗಾವಣೆ ಮಾಡಿದೆ.

    ರಾಜ್ಯದಲ್ಲಿ ಇಬ್ಬರು ಐಪಿಎಸ್ ಅಧಿಕಾರಿಗಳ ಸಂಘರ್ಷ ಸರ್ಕಾರಕ್ಕೆ ಮುಜುಗರ ಉಂಟು ಮಾಡಿತ್ತು. ಫ್ರೆ.೨೦ ರಂದು ವರ್ತಿಕಾ ಕಟಿಯಾರ್ ೨೦೦೦ನೇ ಬ್ಯಾಚ್‌ನ ಅಧಿಕಾರಿಯಾಗಿರುವ ಡಿ.ರೂಪಾ ವಿರುದ್ಧ ಸಿಎಸ್‌ಗೆ ದೂರು ನೀಡಿದ್ದರು. ಕಳೆದ ವರ್ಷದ ಸೆ.೬ರಂದು ತಮ್ಮ ಅನುಮತಿಯಿಲ್ಲದೇ ಚೇಂಬರ್‌ನಿಂದ ಮಹತ್ವದ ಕಡತಗಳನ್ನು ಪೊಲೀಸ್ ಸಿಬ್ಬಂದಿಯಿಂದ ಡಿ. ರೂಪಾ ತರಿಸಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ಎರಡು ದಿನಗಳ ಹಿಂದೆಯಷ್ಟೇ ವರ್ತಿಕಾ ಕಟಿಯಾರ್‌ನ್ನು ಗೃಹರಕ್ಷಕ ಮತ್ತು ಪೌರ ರಕ್ಷಣಾ ದಳದ ಡಿಐಜಿ ಹುದ್ದೆಗೆ ಸರ್ಕಾರ ವರ್ಗಾವಣೆ ಮಾಡಿತ್ತು. ಅದರ ಬೆನ್ನಲ್ಲೇ ಇದೀಗ ಡಿ.ರೂಪಾರನ್ನು ಐಎಸ್‌ಡಿಯಿಂದ ಕರ್ನಾಟಕ ಸಿಲ್ಕ್‌ ಬೋರ್ಡ್‌ ಎಂಡಿ ಹುದ್ದೆಗೆ ವರ್ಗ ಮಾಡಿದೆ.ಇದನ್ನೂ ಓದಿ: ಐಜಿಪಿ ರೂಪಾ ವಿರುದ್ಧ ಸಿಎಸ್‌ಗೆ ಡಿಐಜಿ ವರ್ತಿಕಾ ಕಟಿಯಾರ್ ದೂರು

    ಈ ಹಿಂದೆ ಹಿರಿಯ ಅಧಿಕಾರಿಗಳ ಮುಂದೆಯೇ ಸಭೆ ಕೊಠಡಿಯಲ್ಲಿ ಗಲಾಟೆ ಮಾಡಿಕೊಂಡಿದ್ದ ಐಎಸ್‌ಡಿ ಐಜಿಪಿ ರೂಪಾ ಮೌದ್ಗಿಲ್ ಮತ್ತು ಡಿಐಜಿ ವರ್ತಿಕಾ ಕಟಿಯಾರ್ ಸುದ್ದಿ ಆಗಿದ್ರು. ಇತ್ತೀಚಿಗಷ್ಟೇ ಒಂದು ಹಂತ ಮುಂದೆ ಹೋಗಿ ಐಜಿಪಿ ರೂಪಾ ವಿರುದ್ಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ವರ್ತಿಕಾ ಕಟಿಯಾರ್ ದೂರು ನೀಡಿದ್ದರು.

    ರೂಪಾ ಅವರು ನನ್ನ ಕೊಠಡಿಯಲ್ಲಿ ಕೆಳಹಂತದ ಸಿಬ್ಬಂದಿ ಬಳಸಿಕೊಂಡು ದಾಖಲೆಗಳನ್ನು ಇರಿಸಿದ್ದಾರೆ. ಅಲ್ಲದೇ ಆ ದಾಖಲೆಗಳನ್ನು ಬಳಸಿ ನನ್ನ ವಿರುದ್ಧ ಷಡ್ಯಂತ್ರ ಹೇರುವ ಸಾಧ್ಯತೆ ಇದೆ ಎಂದು ವರ್ತಿಕಾ ಕಟಿಯಾರ್ ದೂರಿದ್ದರು.ಇದನ್ನೂ ಓದಿ: ಭಾರತಕ್ಕೂ ತೆರಿಗೆ ಶಾಕ್‌ – ಪ್ರತಿ ಸುಂಕದ ಘೋಷಣೆ ಮಾಡಿದ ಟ್ರಂಪ್

  • ಐಜಿಪಿ ರೂಪಾ ವಿರುದ್ಧ ಸಿಎಸ್‌ಗೆ ಡಿಐಜಿ ವರ್ತಿಕಾ ಕಟಿಯಾರ್ ದೂರು

    ಐಜಿಪಿ ರೂಪಾ ವಿರುದ್ಧ ಸಿಎಸ್‌ಗೆ ಡಿಐಜಿ ವರ್ತಿಕಾ ಕಟಿಯಾರ್ ದೂರು

    ಬೆಂಗಳೂರು: ಪೊಲೀಸ್ ಇಲಾಖೆ ಶಿಸ್ತಿನ ಇಲಾಖೆ. ಈ ಶಿಸ್ತಿನ ಇಲಾಖೆಯಲ್ಲಿ ಮಹಿಳಾ ಅಧಿಕಾರಿಗಳ ಜಟಾಪಟಿ ಮುಗಿಯೋ ಲಕ್ಷಣಗಳೇ ಕಾಣುತ್ತಿಲ್ಲದಂತಾಗಿದೆ. ಐಪಿಎಸ್‌ ಅಧಿಕಾರಿ‌ ರೂಪಾ (Roopa Moudgil) ವಿರುದ್ಧ ಮತ್ತೋರ್ವ ಮಹಿಳಾ ಅಧಿಕಾರಿ ದೂರು ನೀಡಿರುವುದು ಇದಕ್ಕೆ ಸಾಕ್ಷಿಯಾಗಿದೆ.

    ಈ ಹಿಂದೆ ಹಿರಿಯ ಅಧಿಕಾರಿಗಳ ಮುಂದೆಯೇ ಸಭೆ ಕೊಠಡಿಯಲ್ಲಿ ಗಲಾಟೆ ಮಾಡಿಕೊಂಡಿದ್ದ ಐಎಸ್‌ಡಿ ಐಜಿಪಿ ರೂಪಾ ಮೌದ್ಗಿಲ್‌ ಮತ್ತು ಡಿಐಜಿ ವರ್ತಿಕಾ ಕಟಿಯಾರ್ (Vartika Katiyar) ಸುದ್ದಿ ಆಗಿದ್ರು. ಈಗ ಒಂದು ಹಂತ ಮುಂದೆ ಹೋಗಿದ್ದು ಐಜಿಪಿ ರೂಪಾ ವಿರುದ್ಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ವರ್ತಿಕಾ ಕಟಿಯಾರ್ ದೂರು ನೀಡಿದ್ದಾರೆ. ಇದನ್ನೂ ಓದಿ: ಆಸ್ತಿ ತೆರಿಗೆ ಬಾಕಿ – ವಿಧಾನಸೌಧ, ರಾಜಭವನ ಸೇರಿ 258 ಸರ್ಕಾರಿ ಕಟ್ಟಡಗಳಿಗೆ ಬಿಬಿಎಂಪಿ ನೋಟೀಸ್

    ರೂಪಾ ಅವರು ನನ್ನ ಕೊಠಡಿಯಲ್ಲಿ ಕೆಳಹಂತದ ಸಿಬ್ಬಂದಿ ಬಳಸಿಕೊಂಡು ದಾಖಲೆಗಳನ್ನು ಇರಿಸಿದ್ದಾರೆ. ಅಲ್ಲದೇ  ಆ ದಾಖಲೆಗಳನ್ನು ಬಳಸಿ  ನನ್ನ ವಿರುದ್ಧ ಷಡ್ಯಂತ್ರ ಹೇರುವ ಸಾಧ್ಯತೆ ಇದೆ ಎಂದು ವರ್ತಿಕಾ ಕಟಿಯಾರ್ ದೂರಿದ್ದಾರೆ. ಇದನ್ನೂ ಓದಿ: ಹೃದಯಾಘಾತದಿಂದ ಕಾರಿನಲ್ಲೇ ವ್ಯಕ್ತಿ ಸಾವು – ಕೈ ಮೇಲೆ ಗಾಯ ನೋಡಿ ಅನುಮಾನ ವ್ಯಕ್ತಪಡಿಸಿದ ಕುಟುಂಬಸ್ಥರು

    ವರ್ತಿಕಾ ಕಟಿಯಾರ್ ದೂರಿನಲ್ಲಿ ಏನಿದೆ?
    ಸದ್ಯ ರೂಪಾ ವಿರುದ್ಧ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ವರ್ತಿಕಾ ಕಟಿಯಾರ್ ದೂರು ನೀಡಿದ್ದಾರೆ. ಕೆಳಹಂತದ ಮೂವರು ಅಧಿಕಾರಿಗಳನ್ನ (ಮಲ್ಲಿಕಾರ್ಜುನ್, ಮಂಜುನಾಥ್ ಮತ್ತು ಕಿರಣ್) ಬಳಸಿ ದಾಖಲೆಗಳನ್ನು ನನ್ನ ಕೊಠಡಿಯಲ್ಲಿ ಇರಿಸಿದ್ದಾರೆ.  ವಾಟ್ಸಪ್‌ ಮೂಲಕ ಫೋಟೋ ತೆಗೆಸಿದ್ದಾರೆ. ಕಂಟ್ರೋಲ್‌ ರೂಮ್‌ನಿಂದ ಕೀ ತಂದು ಕೊಠಡಿ ತೆರೆಯಲಾಗಿದೆ. ದುರುದ್ದೇಶದಿಂದ ಫೋಟೋ ತೆಗೆಸಲಾಗಿದ್ದು, ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ ಎಂದು ವರ್ತಿಕಾ ಕಟಿಯಾರ್‌ ಆರೋಪಿಸಿದ್ದಾರೆ. ಇದನ್ನೂ ಓದಿ: ವರ್ಷದ ಪ್ರಯತ್ನದ ಫಲ, `ಕಾಜೂರು ಕರ್ಣ’ ಸೆರೆ – ರೈತರ ಗುಂಡಿನ ದಾಳಿಯಿಂದ ಆನೆ ನರಳಾಟ

  • 100ಕ್ಕೂ ಹೆಚ್ಚು ಜನರಿಗೆ ಊಟ ಹಾಕಿದ ಧಾರವಾಡ ಎಸ್‍ಪಿ – ಸ್ವತಃ ನಿಂತು ಊಟ ಬಡಿಸಿದ್ರು

    100ಕ್ಕೂ ಹೆಚ್ಚು ಜನರಿಗೆ ಊಟ ಹಾಕಿದ ಧಾರವಾಡ ಎಸ್‍ಪಿ – ಸ್ವತಃ ನಿಂತು ಊಟ ಬಡಿಸಿದ್ರು

    ಧಾರವಾಡ: ಕೊರೊನಾ ಭೀತಿಯಿಂದ ರಸ್ತೆ ಮೂಲಕ ನಡೆದುಕೊಂಡು ಹೋಗುತ್ತಿದ್ದ ಕಾರ್ಮಿಕರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವರ್ತಿಕಾ ಕಟಿಯಾರ್ ಸೇರಿದಂತೆ ಕರ್ತವ್ಯದ ಮಧ್ಯೆಯೂ ಅನೇಕ ಪೊಲೀಸರು ಊಟ ಹಾಕಿ ಮಾನವೀಯತೆ ಮೆರೆದಿದ್ದಾರೆ.

    ಶಿವಮೊಗ್ಗದಿಂದ ರಾಜಸ್ಥಾನಕ್ಕೆ ನಡೆದುಕೊಂಡೇ ಹೊರಟಿದ್ದ ಅನೇಕ ಕಾರ್ಮಿಕರು ಹಾಗೂ ಕಾರಿನಲ್ಲಿ ಹೊರಟಿದ್ದ ರಾಜಸ್ಥಾನ ಮೂಲದ ಕುಟುಂಬಗಳಿಗೆ ತೆಗೂರ ಬಳಿ ಖುದ್ದು ಎಸ್‍ಪಿಯೇ ಊಟ ಬಡಿಸಿ ಎಲ್ಲರ ಉಪಚಾರ ಮಾಡಿದರು. ಬೆಳಗಾವಿ ರಸ್ತೆಗೆ ಸಂಪರ್ಕ ಕಲ್ಪಿಸುವ ಟೋಲ್ ಗೇಟ್‍ನಲ್ಲಿ ಕೂಲಿ ಕಾರ್ಮಿಕರಿಗೆ ಖಾಕಿ ಪಡೆ ಒಂದು ಹೊತ್ತಿನ ಊಟದ ವ್ಯವಸ್ಥೆ ಮಾಡಿದ್ದರು.

    ಧಾರವಾಡದ ಹೊರವಲಯದ ನರೇಂದ್ರ ಕ್ರಾಸ್ ಬಳಿ ಇರುವ ಟೋಲ್ ಗೇಟ್‍ನಲ್ಲಿ ಡಿವೈಎಸ್‍ಪಿ, ಪಿಎಸ್‍ಐ ಅವರಿಂದ ನೂರಾರು ಮಂದಿಗೆ ಊಟದ ವ್ಯವಸ್ಥೆ ಮಾಡಿದ್ದರು. ಬಳಿಕ ಅವರನ್ನು ಸ್ಥಳೀಯ ಹಾಸ್ಟೇಲ್‍ನಲ್ಲಿ ಆಶ್ರಯಕ್ಕಾಗಿ ಕಳುಹಿಸಲಾಗಿದೆ. ಕಳೆದ 5 ದಿನಗಳ ಹಿಂದೆಯೇ ಶಿವಮೊಗ್ಗದಿಂದ ರಾಜಸ್ಥಾನಕ್ಕೆ ಹೊರಟ 30 ಜನರ ತಂಡ, ಬಿಸಿಲಿನಿಂದ ತೊಂದರೆ ಅನುಭವಿಸುತ್ತಿತ್ತು. ಅವರನ್ನು ಪೊಲೀಸ್ ವಾಹನದಲ್ಲಿ ತೆಗೂರ ಬಳಿ ಕರೆಸಿ ಎಸ್‍ಪಿ ಅವರು ಊಟ ಬಡಿಸಿದ್ದಾರೆ.

    ರಾಜಸ್ಥಾನಕ್ಕೆ ಹೋಗಲು ಚೆನ್ನೈದಿಂದ ಬಂದ ಎರಡು ಕುಟುಂಬ ಎರಡು ದಿನಗಳಿಂದ ಹೋಗೋಕೆ ಆಗದೇ ರಸ್ತೆಯಲ್ಲೇ ಪರದಾಟ ಮಾಡಿತ್ತು. ಇದರ ಜೊತೆಗೆ ಬೆಳಗಾವಿಯ ಸಂಕೇಶ್ವರದಿಂದ ಬೆಂಗಳೂರ ಕಡೆ ಹೊರಟಿದ್ದ 30 ಜನರನ್ನ ಚೆಕ್‍ಪೋಸ್ಟನಲ್ಲಿ ತಡೆದು ಅವರಿಗೂ ಕೂಡ ಊಟಕ್ಕೆ ಹಾಕಲಾಗಿದೆ. ಆದರೆ ಬೇರೆ ಜಿಲ್ಲೆಗಳಿಂದ ಬಂದವರಿಗೆ ಧಾರವಾಡ ಜಿಲ್ಲೆಗೆ ಪ್ರವೇಶ ಇಲ್ಲದ ಕಾರಣ ಗಡಿಯಲ್ಲೇ ಅವರನ್ನ ನಿಲ್ಲಿಸಲಾಗುತ್ತಿದೆ. ಸದ್ಯ ಎಸ್‍ಪಿ ವರ್ತಿಕಾ ಕಟಿಯಾರ್ ಈ ಜನರಿಗೆ ಒಂದು ಕಡೆ ಉಳಿಯಲು ಜಿಲ್ಲಾಡಳಿತದ ಜೊತೆ ಮಾತನಾಡಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.