Tag: Varun Gandhi

  • ಭಾರತದ ಆಂತರಿಕ ಸವಾಲುಗಳನ್ನು ಅಂತರಾಷ್ಟ್ರೀಯ ವೇದಿಕೆಯಲ್ಲಿ ಚರ್ಚಿಸಲಾರೆ: ವರುಣ್ ಗಾಂಧಿ

    ಭಾರತದ ಆಂತರಿಕ ಸವಾಲುಗಳನ್ನು ಅಂತರಾಷ್ಟ್ರೀಯ ವೇದಿಕೆಯಲ್ಲಿ ಚರ್ಚಿಸಲಾರೆ: ವರುಣ್ ಗಾಂಧಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭಾರತ ಸರಿ ದಾರಿಯಲ್ಲಿ ಸಾಗುತ್ತಿದೆಯೇ ಎಂಬ ವಿಚಾರದ ಕುರಿತು ಮಾತನಾಡಲು ಆಹ್ವಾನಿಸಿದ ಆಕ್ಸ್‌ಫರ್ಡ್ ವಿಶ್ವ ವಿದ್ಯಾನಿಲಯದ (Oxford University) ಆಹ್ವಾನವನ್ನು ಬಿಜೆಪಿ ಸಂಸದ ವರುಣ್ ಗಾಂಧಿ (Varun Gandhi) ತಿರಸ್ಕರಿಸಿದ್ದಾರೆ. ದೇಶದ ಆಂತರಿಕ ಸವಾಲುಗಳನ್ನು ಅಂತರಾಷ್ಟ್ರೀಯ ವೇದಿಕೆಯಲ್ಲಿ ಚರ್ಚಿಸುವುದು ಸೂಕ್ತವಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

    ಸ್ವಾತಂತ್ರ್ಯದ ನಂತರದ ಕಳೆದ ಏಳು ದಶಕಗಳಲ್ಲಿ ಭಾರತ ವಿವಿಧ ಸರ್ಕಾರಗಳಿಂದ ರೂಪುಗೊಂಡಿದೆ. ದೇಶವು ಅಭಿವೃದ್ಧಿಯ ಸರಿ ದಾರಿಯಲ್ಲಿ ಸಾಗುತ್ತಿದೆ. ಚುನಾಯಿತ ಪ್ರತಿನಿಧಿಯಾಗಿ, ಆಗುಹೋಗುಗಳನ್ನು ಪರಿಶೀಲಿಸಿ ಸಂಸತ್ತಿನ ಒಳಗೆ ಚರ್ಚಿಸುವುದು ಸೂಕ್ತ ನಡೆಯಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಬೇಸಿಗೆಯಲ್ಲಿ ಆಲಿಕಲ್ಲು ಮಳೆ – ಕಲಬುರಗಿಯಲ್ಲಿ ‘ಹಿಮಾಲಯದ ರಸ್ತೆ’!

    ಇತ್ತೀಚೆಗೆ ರಾಹುಲ್ ಗಾಂಧಿ (Rahul Gandhi) ಲಂಡನ್‍ನಲ್ಲಿ ಭಾರತದ ಪ್ರಜಾಪ್ರಭುತ್ವದ ಬಗ್ಗೆ ಚರ್ಚೆ ನಡೆಸಿದ್ದು ಕೋಲಾಹಲಕ್ಕೆ ಕಾರಣವಾಗಿತ್ತು. ಈ ಬಗ್ಗೆ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ (BJP) ಒತ್ತಾಯಿಸಿತ್ತು. ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್, ವಿದೇಶ ಪ್ರವಾಸದಲ್ಲಿದ್ದಾಗ ಮೋದಿ, ಕಾಂಗ್ರೆಸ್ (Congress) ವಿರುದ್ಧ ವಾಗ್ದಾಳಿ ನಡೆಸಿದ್ದನ್ನು ಎತ್ತಿಹಿಡಿದಿತ್ತು.

    ಲಂಡನ್ ಕೇಂಬ್ರಿಡ್ಜ್ ವಿಶ್ವವಿದ್ಯಾನಿಲಯದಲ್ಲಿ (University of Cambridge)‌ ರಾಹುಲ್ ಗಾಂಧಿ, ಭಾರತದಲ್ಲಿ ಪ್ರಜಾಪ್ರಭುತ್ವ ಕ್ಷೀಣಿಸುತ್ತಿದೆ ಮತ್ತು ಪ್ರಶ್ನಿಸುವ ದ್ವನಿಯನ್ನು ಹತ್ತಿಕ್ಕಲಾಗುತ್ತಿದೆ ಎಂದಿದ್ದರು. ಇದನ್ನೂ ಓದಿ: ಆಲೂಗಡ್ಡೆ ಕೋಲ್ಡ್ ಸ್ಟೋರೇಜ್‍ನ ಮೇಲ್ಛಾವಣಿ ಕುಸಿತ – 8 ಮಂದಿ ದುರ್ಮರಣ

  • MIG-21 ವಿಮಾನವನ್ನು ಸೇವೆಯಿಂದ ವಜಾಗೊಳಿಸೋದು ಯಾವಾಗ? – ವರುಣ್ ಗಾಂಧಿ

    MIG-21 ವಿಮಾನವನ್ನು ಸೇವೆಯಿಂದ ವಜಾಗೊಳಿಸೋದು ಯಾವಾಗ? – ವರುಣ್ ಗಾಂಧಿ

    ನವದೆಹಲಿ: MIG-21 ತರಬೇತಿ ವಿಮಾನದಲ್ಲಿ ಹಾರಾಟ ನಡೆಸುತ್ತಿದ್ದ ಭಾರತೀಯ ವಾಯುಪಡೆಯ ಇಬ್ಬರು ಪೈಲಟ್‌ಗಳು ನಿನ್ನೆ ನಡೆದ ಅಪಘಾತದಿಂದ ಮೃತಪಟ್ಟಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ಸಂಸದ ವರುಣ್ ಗಾಂಧಿ, ಮಿಗ್-21 ವಿಮಾನಗಳನ್ನು `ಹಾರುವ ಶವಪೆಟ್ಟಿಗೆ’ ಎಂದು ಕರೆದಿದ್ದಾರೆ. ಈ ವಿಮಾನವನ್ನು ಸೇವೆಯಿಂದ ತೆಗೆದು ಹಾಕೋದು ಯಾವಾಗ ಎಂದು ಪ್ರಶ್ನಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ  ಓದಿ: ಭಾರತೀಯ ವಾಯುಪಡೆಯ ವಿಮಾನ ಪತನ – ಇಬ್ಬರು ಪೈಲಟ್ ದುರ್ಮರಣ

    ಗುರುವಾರ ರಾತ್ರಿ ನಡೆದ ಘಟನೆಯಿಂದ ಇಡೀ ದೇಶ ಬೆಚ್ಚಿಬಿದ್ದಿದೆ ಹಾಗೂ ದುಃಖಿತವಾಗಿದೆ. ಇತ್ತೀಚಿನ ಕೆಲವು ವರ್ಷಗಳಲ್ಲಿ ಮಿಗ್-21 ವಿಮಾನಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿವೆ. ಈ ವಿಮಾನವು ಇಲ್ಲಿಯ ವರೆಗೆ 200 ಪೈಲೆಟ್‌ಗಳನ್ನು ಬಲಿ ಪಡೆದಿವೆ. ಈ ಹಾರುವ ಶವಪೆಟ್ಟಿಗೆಯನ್ನು ನಮ್ಮ ವಾಯುಪಡೆಯಿಂದ ಯಾವಾಗ ತೆಗೆದುಹಾಕಲಾಗುತ್ತದೆ? ಸಂಸತ್ತು ಯೋಚಿಸಬೇಕು, ನಾವು ನಮ್ಮ ಮಕ್ಕಳಿಗಾದರೆ ಈ ವಿಮಾನವನ್ನು ಹಾರಿಸಲು ಬಿಡುತ್ತೇವೆಯೇ ಎಂದು ಟ್ವೀಟ್‌ನಲ್ಲಿ ಪ್ರಶ್ನಿಸಿದ್ದಾರೆ. ಇದನ್ನೂ  ಓದಿ: ರಾಷ್ಟ್ರಪತ್ನಿ ಹೇಳಿಕೆ ವಿವಾದ – ದ್ರೌಪದಿ ಮುರ್ಮುಗೆ ಪತ್ರ ಬರೆದು ಕ್ಷಮೆಯಾಚಿಸಿದ ಅಧೀರ್

    ಏನಿದು ಘಟನೆ?
    ನಿನ್ನೆ ರಾಜಾಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ಭಾರತೀಯ ವಾಯುಪಡೆಯ (IAF) ವಿಮಾನ ಪತನಗೊಂಡು ವಿಂಗ್ ಕಮಾಂಡರ್ ಎಂ.ರಾಣಾ ಮತ್ತು ಫೈಟ್ ಲೆಫ್ಟಿನೆಂಟ್ ಅದ್ವಿತೀಯ ಬಾಲ್ ಮೃತಪಟ್ಟಿದ್ದಾರೆ. ಜಿಲ್ಲೆಯ ಬೇಟೂದಲ್ಲಿನ ಭೀಮಡಾ ಗ್ರಾಮದ ಬಳಿ ಅಪಘಾತಕ್ಕೀಡಾಗಿ, ಅಲ್ಲಲ್ಲಿ ವಿಮಾನದ ಅವಶೇಷಗಳು ಪತ್ತೆಯಾಗಿದ್ದವು. ಅಲ್ಲಿನ ಸ್ಥಿತಿಗತಿಯ ಬಗ್ಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಐಎಎಫ್ ಮುಖ್ಯಸ್ಥರೊಂದಿಗೆ ಮಾತುಕತೆ ನಡೆಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ದೇಶದ ಭವಿಷ್ಯದ ಬಗ್ಗೆ ಚಿಂತಿತನಾಗಿದ್ದೇನೆ: ವರುಣ್‍ ಗಾಂಧಿ

    ದೇಶದ ಭವಿಷ್ಯದ ಬಗ್ಗೆ ಚಿಂತಿತನಾಗಿದ್ದೇನೆ: ವರುಣ್‍ ಗಾಂಧಿ

    ಲಕ್ನೋ: ಖಾಸಗೀಕರಣದಿಂದಾಗಿ ಉದ್ಯೋಗಗಳು ಸೀಮಿತವಾಗುತ್ತವೆ. ಇದರಿಂದಾಗಿ ಭಾರತದ ಭವಿಷ್ಯದ ಬಗ್ಗೆ ಚಿಂತಿತನಾಗಿದ್ದೇನೆ ಎಂದು ಸಂಸದ ವರುಣ್ ಗಾಂಧಿ ಕಳವಳ ವ್ಯಕ್ತಪಡಿಸಿದರು.

    ಸುದ್ದಿಗರಾರರೊಂದಿಗೆ ಮಾತನಾಡಿದ ಅವರು, ನಿರುದ್ಯೋಗ ಸಮಸ್ಯೆಯ ಬಗ್ಗೆ ತಮ್ಮದೇ ಪಕ್ಷವನ್ನು ತರಾಟೆಗೆ ತೆಗೆದುಕೊಂಡರು. ದೇಶದ ಕನಸುಗಳು ದೊಡ್ಡದಾಗಿದೆ. ಆದರೆ ಸಂಪನ್ಮೂಲಗಳು ಸೀಮಿತವಾಗಿವೆ. ದೇಶದಲ್ಲಿ 1.5 ಕೋಟಿ ಹುದ್ದೆಗಳು ಖಾಲಿ ಇದ್ದರೂ ನಿರುದ್ಯೋಗಿಗಳು ಹೆಚ್ಚುತ್ತಿದ್ದರು. ಕೋಟ್ಯಂತರ ನಿರುದ್ಯೋಗಿಗಳಿಗೆ ಮುಂದೆ ಏನಾಗುತ್ತದೆ ಎಂದು ತಿಳಿದಿಲ್ಲ ಎಂದು ಕಿಡಿಕಾರಿದರು.

    ನಮ್ಮ ಹೋರಾಟ ಉದ್ಯೋಗ ಮತ್ತು ಆರ್ಥಿಕ ಸಮಾನತೆಗಾಗಿ ಆಗಿದೆ. ಸಂವಿಧಾನವು ಎಲ್ಲರಿಗೂ ಸಮಾನ ಆರ್ಥಿಕ ಅವಕಾಶಗಳನ್ನು ಪಡೆಯಬೇಕೆಂದು ಹೇಳುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಶ್ರಮಿಸಿದಾಗ ಇದು ಸಾಧ್ಯವಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಮಳೆಯಬ್ಬರಕ್ಕೆ ಮಾವು ಸೇರಿದಂತೆ ವಿವಿಧ ಬೆಳೆಗಳು ನಾಶ

    ಇದೇ ವೇಳೆ ಕೇಂದ್ರದ ವಿರುದ್ಧ ತೆಗೆದುಕೊಂಡ ಅವರು, 2 ಕೋಟಿ ಜನರಿಗೆ ಉದ್ಯೋಗಗಳನ್ನು ನೀಡಿಲ್ಲ. ಜೊತೆಗೆ ಯಾರೊಬ್ಬರ ಬ್ಯಾಂಕ್ ಖಾತೆಗೆ ಹಣ ಬಂದಿಲ್ಲ. ರೈತರ ಆದಾಯವೂ ದ್ವಿಗುಣಗೊಂಡಿಲ್ಲ ಆಕ್ರೋಶ ವ್ಯಕ್ತಪಡಿಸಿದರು.

    ರಾಜಕೀಯವು ದೇಶವನ್ನು ಕಟ್ಟುವ ಸಾಧನವಾಗಿದೆ. ನಮ್ಮ ದೇಶದ ನಿಜವಾದ ಹೋರಾಟವೆಂದರೆ ನಿರುದ್ಯೋಗ ಮತ್ತು ಭ್ರಷ್ಟಾಚಾರದ ವಿರುದ್ಧವಾಗಿದೆ. ಇದರಿಂದಾಗಿ ರಾಜಕೀಯ ಪಕ್ಷಗಳು ಮತ್ತು ನಾಯಕರು ತಮ್ಮ ಪೈಪೋಟಿಯನ್ನು ಬಿಟ್ಟು ದೇಶದ ಭವಿಷ್ಯದ ಬಗ್ಗೆ ಯೋಚಿಸಬೇಕು ಎಂಸು ಸಲಹೆ ನೀಡಿದರು. ಇದನ್ನೂ ಓದಿ: ಹುಬ್ಬಳ್ಳಿ ಗಲಾಟೆ ಹಿಂದೆ ಯಾರೇ ಇರಲಿ, ಎತ್ತಾಕೊಂಡು ಒಳಗೆ ಹಾಕಿ: ಪ್ರಹ್ಲಾದ್ ಜೋಶಿ

  • ಜನಪರ ಸರ್ಕಾರ ಬೇಕು, ಬಂಡವಾಳಶಾಹಿ ಪ್ರೋತ್ಸಾಹಕರಲ್ಲ: ತಮ್ಮದೇ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ಕಿಡಿ

    ಜನಪರ ಸರ್ಕಾರ ಬೇಕು, ಬಂಡವಾಳಶಾಹಿ ಪ್ರೋತ್ಸಾಹಕರಲ್ಲ: ತಮ್ಮದೇ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ಕಿಡಿ

    ಲಕ್ನೋ: ರೈಲ್ವೆ ಮತ್ತು ಬ್ಯಾಂಕ್‌ಗಳ ಖಾಸಗೀಕರಣ ವಿಚಾರವಾಗಿ ತಮ್ಮ ಪಕ್ಷದ ಕೇಂದ್ರ ಸರ್ಕಾರದ ಬಿಜೆಪಿ ಸಂಸದ ವರುಣ್‌ ಗಾಂಧಿ ಹರಿಹಾಯ್ದಿದ್ದಾರೆ.

    ತಾನು ಪ್ರತಿನಿಧಿಸುವ ಪಕ್ಷದ ವಿರುದ್ಧವೇ ಟ್ವೀಟ್‌ ಮಾಡಿ ವರುಣ್‌ ಗಾಂಧಿ ಚಾಟಿ ಬೀಸಿದ್ದಾರೆ. ಬ್ಯಾಂಕ್‌ ಮತ್ತು ರೈಲ್ವೆ ಖಾಸಗೀಕರಣದಿಂದ ಅಪಾರ ಪ್ರಮಾಣದಲ್ಲಿ ಉದ್ಯೋಗ ನಷ್ಟವಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಉಗ್ರರ ಪತ್ತೆಗೆ ಗಾಜಿಯಾಬಾದ್ ಕವಿಯನ್ನು ನೇಮಿಸಿಕೊಳ್ಳಿ: ಕೇಜ್ರಿವಾಲ್ ವ್ಯಂಗ್ಯ

    ಬ್ಯಾಂಕ್‌, ರೈಲ್ವೆ ಖಾಸಗೀಕರಣವಾದರೆ ಸುಮಾರು 5 ಲಕ್ಷ ಮಂದಿ ಉದ್ಯೋಗ ಕಳೆದುಕೊಳ್ಳಲಿದ್ದಾರೆ. ಇದರಿಂದ ಲಕ್ಷಾಂತರ ಕುಟುಂಬಗಳ ಬದುಕು ಬೀದಿ ಪಾಲಾಗಲಿದೆ. ಯಾವುದೇ ಸರ್ಕಾರ ಜನರ ಕಲ್ಯಾಣಕ್ಕಾಗಿ ಸೇವೆ ಸಲ್ಲಿಸಬೇಕೇ ಹೊರತು ಬಂಡವಾಳಶಾಹಿಗಳನ್ನು ಬೆಳೆಸುವುದಲ್ಲ ಎಂದು ಟ್ವೀಟ್‌ ಮಾಡಿ ಕೇಂದ್ರ ಬಿಜೆಪಿ ಸರ್ಕಾರದ ನಡೆಯನ್ನು ಖಂಡಿಸಿದ್ದಾರೆ.

    ಕಳೆದ ವಾರವೂ ಸರ್ಕಾರದ ವಿರುದ್ಧ ವರುಣ್‌ ಗಾಂಧಿ ಟ್ವೀಟ್‌ ಮಾಡಿದ್ದರು. ದೇಶದಲ್ಲಿ ಬೃಹತ್‌ ಪ್ರಮಾಣದಲ್ಲಿ ಹಣಕಾಸು ವಂಚನೆ ಆಗುತ್ತಿದೆ. ವಿಜಯ್‌ ಮಲ್ಯ- 9,000 ಕೋಟಿ, ನೀರವ್‌ ಮೋದಿ- 14,000 ಕೋಟಿ, ರಿಶಿ ಅಗರ್ವಾಲ್‌-23,000 ಕೋಟಿ ರೂ. ವಂಚಿಸಿ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಆದರೆ ದೇಶದಲ್ಲಿ ಸಾಲದ ಹೊರೆಯಿಂದಾಗಿ ದಿನಕ್ಕೆ 14 ಮಂದಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಭ್ರಷ್ಟ ವ್ಯವಸ್ಥೆ ಕೊನೆಗಾಣಿಸಲು ಸರ್ಕಾರ ಬಲಿಷ್ಠವಾಗಬೇಕು ಎಂದು ಆಶಯ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಐದು ರಾಜ್ಯಗಳಲ್ಲಿ ಬಿಜೆಪಿಗೆ ಬಹುಮತ ಸಿಗುವುದಿಲ್ಲ: ಪೃಥ್ವಿರಾಜ್ ಚವಾಣ್

    2020ರಲ್ಲಿ ರೈಲ್ವೆಗೆ ಖಾಸಗೀ ಪಾಲುದಾರರನ್ನು ಆಹ್ವಾನಿಸಿದ ಕೇಂದ್ರ ಸರ್ಕಾರದ ನಡೆಯ ವಿರುದ್ಧ ರಾಹುಲ್‌ ಗಾಂಧಿ ಸೇರಿದಂತೆ ವಿಪಕ್ಷಗಳ ಅನೇಕ ನಾಯಕರು ಪ್ರತಿರೋಧ ವ್ಯಕ್ತಪಡಿಸಿದ್ದರು. 10 ಲಕ್ಷಕ್ಕೂ ಹೆಚ್ಚು ಮಂದಿಗೆ ಉದ್ಯೋಗ ನೀಡಿರುವ ಭಾರತೀಯ ರೈಲ್ವೆ ವಲಯ ವಿಶ್ವದಲ್ಲೇ ಹೆಸರಾಗಿದೆ.

    ವಿಪಕ್ಷಗಳ ಟೀಕೆಯನ್ನು ಕೇಂದ್ರ ಸಚಿವ ಪೀಯುಷ್‌ ಗೋಯಲ್‌ ತಳ್ಳಿಹಾಕಿದ್ದರು. ರೈಲ್ವೆ ಖಾಸಗೀಕರಣ ಮಾಡಲ್ಲ ಎಂದು ಸ್ಪಷ್ಟಪಡಿಸಿದ್ದರು.

  • ನಿರುದ್ಯೋಗ ಸಮಸ್ಯೆ ವಿಕೋಪಕ್ಕೆ ಹೋಗುತ್ತಿದೆ: ವರುಣ್ ಗಾಂಧಿ

    ನಿರುದ್ಯೋಗ ಸಮಸ್ಯೆ ವಿಕೋಪಕ್ಕೆ ಹೋಗುತ್ತಿದೆ: ವರುಣ್ ಗಾಂಧಿ

    ನವದೆಹಲಿ: ಅವರದ್ದೇ ಪಕ್ಷದ ವಿರುದ್ಧ ಕೆಲವು ವಿಚಾರಗಳಿಗೆ ವಿರೋಧ ವ್ಯಕ್ತಪಡಿಸುವ ಬಿಜೆಪಿ ಸಂಸದ ವರುಣ್ ಗಾಂಧಿ ಅವರು ನಿರುದ್ಯೋಗ ಸಮಸ್ಯೆಯ ಕುರಿತಾಗಿ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆಯನ್ನು ಕೊಟ್ಟಿದ್ದಾರೆ.

    ಇಂದು ದೇಶದಲ್ಲಿ ನಿರುದ್ಯೋಗವು ದೊಡ್ಡ ಸಮಸ್ಯೆಯಾಗಿ ಹೊರಹೊಮ್ಮುತ್ತಿದೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದೆ. ಇದರಿಂದ ದೂರ ಸರಿಯುವುದು ಎಂದರೆ ಹತ್ತಿಯಿಂದ ಬೆಂಕಿಯನ್ನು ಮುಚ್ಚಲು ಪ್ರಯತ್ನಿಸಿದಂತೆ ಎಂದು ಬಿಜೆಪಿ ಸರ್ಕಾರವನ್ನು ಎಚ್ಚರಿಸಿ ಟ್ವೀಟ್ ಮಾಡಿ ಖಾಸಗಿ ಸುದ್ದಿ ವಾಹಿನಿಯ ವೀಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಶೀಘ್ರವೇ 50 ದೇಶಗಳಲ್ಲಿ ಲಭ್ಯವಾಗಲಿದೆ ಡಿಸ್ನಿ ಪ್ಲಸ್

    ವರುಣ್ ಹಂಚಿಕೊಂಡಿರುವ ವೀಡಿಯೋದಲ್ಲಿ, ಯುವಕನೊಬ್ಬ ನಿರುದ್ಯೋಗದ ಬಗ್ಗೆ ಮಾತನಾಡಿದ್ದಾನೆ. ರೈಲ್ವೆ ನೇಮಕಾತಿ ವಿರುದ್ಧದ ಪ್ರತಿಭಟನೆಯನ್ನು ಸರ್ಕಾರ ನಿರ್ವಹಿಸಿದ ರೀತಿಗೆ ಆಕ್ರೋಶ ವ್ಯಕ್ತಪಡಿಸಿದ್ದಾನೆ. ನಿರುದ್ಯೋಗದ ಸಮಸ್ಯೆಯನ್ನು ಪರಿಹರಿಸದಿದ್ದರೆ ಅಧಿಕಾರದಲ್ಲಿ ಇರುವವರನ್ನು ಬದಲಾಯಿಸಬೇಕಾಗುತ್ತದೆ ಎಂದೂ ಯುವಕ ಎಚ್ಚರಿಕೆ ನೀಡಿದ್ದಾನೆ. ಇದನ್ನೂ ಓದಿ: ಹಾರವನ್ನು ಕುತ್ತಿಗೆಗೆ ಎಸೆದ ವರ- ಮದುವೆ ಕ್ಯಾನ್ಸಲ್‌ ಮಾಡಿದ ವಧು

    ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳು, ಕೃಷಿ ಕಾಯ್ದೆ ಮತ್ತು ಇತರ ವಿಚಾರಗಳ ಕುರಿತು ವರಣ್ ಗಾಂಧಿ ಟೀಕಾ ಪ್ರಹಾರ ನಡೆಸುತ್ತಲೇ ಇದ್ದಾರೆ. ರೈಲ್ವೆ ನೇಮಕಾತಿ ಪ್ರಕ್ರಿಯೆ ವಿರುದ್ಧ ಉತ್ತರ ಪ್ರದೇಶ ಮತ್ತು ಬಿಹಾರದ ಯುವಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ವರಣ್ ಗಾಂಧಿ ಅವರ ನಿರುದ್ಯೋಗದ ಕುರಿತ ಟ್ವೀಟ್ ಮಹತ್ವ ಪಡೆದುಕೊಂಡಿದೆ.

  • ನನಗೆ ಕೊರೊನಾ ಪಾಸಿಟಿವ್‌,  ಸೋಂಕಿನ ಲಕ್ಷಣಗಳು ತುಸು ಗಂಭೀರ ಸ್ವರೂಪದಲ್ಲಿವೆ: ವರುಣ್ ಗಾಂಧಿ

    ನನಗೆ ಕೊರೊನಾ ಪಾಸಿಟಿವ್‌, ಸೋಂಕಿನ ಲಕ್ಷಣಗಳು ತುಸು ಗಂಭೀರ ಸ್ವರೂಪದಲ್ಲಿವೆ: ವರುಣ್ ಗಾಂಧಿ

    ಲಕ್ನೋ: ಬಿಜೆಪಿ ಸಂಸದ ವರುಣ್ ಗಾಂಧಿ ಕೋವಿಡ್ 19 ಸೋಂಕಿಗೆ ಒಳಗಾಗಿದ್ದಾರೆ. ಅಷ್ಟೇ ಅಲ್ಲ, ಸೋಂಕು  ಗಂಭೀರ ಸ್ವರೂಪ ಕಾಣಿಸಿಕೊಂಡಿದೆ ಎಂದು  ಅವರೆ ಟ್ವೀಟ್ ಮಾಡಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ: ನನ್ನ ಕ್ಷೇತ್ರವಾದ ಪಿಲಿಭಿತ್‍ನಲ್ಲಿ ಮೂರು ದಿನಗಳ ಕಾಲ ಇದ್ದು, ಚುನಾವಣಾ ಕಾರ್ಯ ನಡೆಸಿದೆ. ಇದೀಗ ನನಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಲಕ್ಷಣಗಳು ತುಸು ಗಂಭೀರಸ್ವರೂಪದಲ್ಲಿಯೇ ಇವೆ. ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು, ಸಕ್ರಿಯವಾಗಿ ಪಾಲ್ಗೊಳ್ಳುವ ರಾಜಕೀಯ ನಾಯಕರ ಆರೋಗ್ಯ ಸುರಕ್ಷತೆಗಾಗಿ ಕೂಡ ಕೆಲವು ಕ್ರಮಗಳನ್ನು ಚುನಾವಣಾ ಆಯೋಗ ಘೋಷಿಸಬೇಕು ಎಂದು ವರುಣ್ ಗಾಂಧಿ ಒತ್ತಾಯಿಸಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ರೈತ ಗೀತೆ ಮೂಲಕ ಮೇಕೆದಾಟು ಪಾದಯಾತ್ರೆಗೆ ಕಾಂಗ್ರೆಸ್‌ ಚಾಲನೆ

    ದೇಶದ 5 ರಾಜ್ಯಗಳಾದ ಗೋವಾ, ಉತ್ತರಪ್ರದೇಶ, ಉತ್ತರಾಖಂಡ್, ಮಣಿಪುರ, ಪಂಜಾಬ್‍ಗಳಲ್ಲಿ ಮುಂದಿನ ತಿಂಗಳಿಂದ ವಿಧಾನಸಭೆ ಚುನಾವಣೆ ನಡೆಯಲಿದೆ. ಫೆ.10ರಿಂದ ವಿವಿಧ ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮಾರ್ಚ್ 10ರಂದು ಫಲಿತಾಂಶ ಹೊರಬೀಳಲಿದೆ. ಈ ಸಂಬಂಧ ನಿನ್ನೆ ಸುದ್ದಿಗೋಷ್ಠಿ ನಡೆಸಿದರುವ ಚುನಾವಣಾ ಆಯೋಗದ ಮುಖ್ಯ ಆಯುಕ್ತರು, ಹಲವು ನಿಯಮಗಳನ್ನು ಘೋಷಿಸಿದ್ದಾರೆ.

  • ಹಗಲಿನಲ್ಲಿ ಚುನಾವಣಾ ರ‍್ಯಾಲಿ, ರಾತ್ರಿ ಕರ್ಫ್ಯೂ: ವರುಣ್ ಗಾಂಧಿ ವ್ಯಂಗ್ಯ

    ಹಗಲಿನಲ್ಲಿ ಚುನಾವಣಾ ರ‍್ಯಾಲಿ, ರಾತ್ರಿ ಕರ್ಫ್ಯೂ: ವರುಣ್ ಗಾಂಧಿ ವ್ಯಂಗ್ಯ

    ನವದೆಹಲಿ: ದೇಶದಲ್ಲಿ ಓಮಿಕ್ರಾನ್ ಭೀತಿಯ ಹಿನ್ನೆಲೆಯಲ್ಲಿ ನೈಟ್ ಕರ್ಫ್ಯೂ ಘೋಷಿಸಿ, ಹಗಲು ವೇಳೆಯಲ್ಲಿ ಚುನಾವಣಾ ಜಾಥಾ ನಡೆಸುವ ತಮ್ಮದೇ ಪಕ್ಷದ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ವರುಣ್‌ಗಾಂಧಿ ವ್ಯಂಗ್ಯವಾಡಿದ್ದಾರೆ.

    ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಉತ್ತರ ಪ್ರದೇಶದಲ್ಲಿರುವ ಸೀಮಿತ ವೈದ್ಯಕೀಯ ಸೌಲಭ್ಯಗಳನ್ನು ಗಮನಿಸಿ, ಈ ಸಮಯದಲ್ಲಿ ಓಮಿಕ್ರಾನ್ ಸ್ಫೋಟ ತಡೆಯಬೇಕೆ? ಅಥವಾ ನಮ್ಮ ಚುನಾವಣಾ ಶಕ್ತಿಯನ್ನು ತೋರಿಸಬೇಕೆ? ಎಂಬುದನ್ನು ಜನರೇ ನಿರ್ಧರಿಸಬೇಕು ಎಂದಿದ್ದಾರೆ. ಬಿಜೆಪಿ, ಕಾಂಗ್ರೆಸ್, ಸಮಾಜವಾದಿ ಪಕ್ಷಗಳು ತಮ್ಮ ಸಾಮರ್ಥ್ಯವನ್ನು ತೋರಿಸಲು ಬೃಹತ್ ರ‍್ಯಾಲಿ ಆಯೋಜಿಸುತ್ತಿರುವುದು ಕಳವಳಕ್ಕೆ ಕಾರಣವಾಗಿದೆ ಎಂದು ಹೇಳಿದ್ದಾರೆ.

    ಕೊರೊನಾ ಹೆಚ್ಚಳವಾಗುತ್ತಿದ್ದರೂ ಚುನಾವಣೆ ನಡೆಯುವ ಯಾವ ರಾಜ್ಯಗಳು ಮುನ್ನೆಚ್ಚರಿಕೆಯನ್ನು ತೆಗೆದುಕೊಂಡಿಲ್ಲ. ಯಾವುದೇ ಸಾರ್ವಜನಿಕ ರ‍್ಯಾಲಿಗಳಿಗೆ ನಿರ್ಬಂಧವನ್ನು ಹೇರಿಲ್ಲ. ಆದರೆ ನೈಟ್ ಕರ್ಫ್ಯೂವನ್ನು ಜಾರಿ ತಂದಿರುವುದು ಸಮಂಜಸವಾದ ನಿರ್ಧರವೇ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ರನ್ನು ಪ್ರಶ್ನಿಸಿದ್ದಾರೆ.

    ರಾತ್ರಿ ಕರ್ಫ್ಯೂ ಮಾಡಿ ಹಗಲಿನಲ್ಲಿ ಲಕ್ಷಾಂತರ ಜನರನ್ನು ಜಾಥಾಕ್ಕೆ ಕರೆಯುವುದು ಸಾಮಾನ್ಯರ ಗ್ರಹಿಕೆಗೂ ಮೀರಿದೆ ಎಂದು ವರುಣ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಉತ್ತರ ಪ್ರದೇಶದ ಸ್ಥಿತಿಯನ್ನು ನೋಡಿದರೇ ಅಲ್ಲಿಯ ಸರ್ಕಾರಕ್ಕೆ ಓಮಿಕ್ರಾನ್ ತಡೆಯುವುದಕ್ಕಿಂತ ಚುನಾವಣಾ ಬಲವನ್ನು ತೋರಿಸುವುದೇ ಅವರ ಪ್ರಮುಖ ಆದ್ಯತೆಯಾಗಿದೆ ಎಂದು ನಾವು ತಿಳಿಯಬೇಕು ಎಂದು ಹರಿಹಾಯ್ದಿದ್ದಾರೆ.  ಇದನ್ನೂ ಓದಿ: ಓಮಿಕ್ರಾನ್ ಭೀತಿ – ಡಿ.30ರಿಂದ ಕೇರಳದಲ್ಲಿ ನೈಟ್ ಕರ್ಫ್ಯೂ

    ಜನ ಸಂಚಾರವೂ ರಾತ್ರಿ ಸಮಯಕ್ಕಿಂತ ಹಗಲಿನಲ್ಲಿ ಹೆಚ್ಚಿರುತ್ತದೆ. ಇದರಿಂದ ಕೊರೊನಾ ಹೆಚ್ಚಳವಾಗುತ್ತದೆ. ಅದರಿಂದಾಗಿ ಹಗಲಿನಲ್ಲಿ ಹೆಚ್ಚು ನಿರ್ಬಂಧಗಳನ್ನು ಹಾಕಬೇಕು. ಕೊರೊನಾ ತಡೆಗೆ ಜನರನ್ನು ಮನೆಯಲ್ಲಿರುವಂತೆ ಪ್ರೇರೆಪಿಸಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ವೈದ್ಯ ಆತ್ಮಹತ್ಯೆ

    ವರುಣ್ ಗಾಂಧಿ ಅವರು ತಮ್ಮದೇ ಪಕ್ಷದ ವಿರುದ್ಧ ಕಿಡಿಕಾರುತ್ತಿರುವುದು ಇದೇ ಮೊದಲೇನಲ್ಲ. ಹಿಂದೆ ಅನೇಕ ಬಾರಿ ಈ ರೀತಿಯ ಹೇಳಿಕೆಗಳನ್ನು ನೀಡಿದ್ದರು. ಇತ್ತೀಚೆಗಷ್ಟೇ ಬಿಜೆಪಿ ಸಂಸದ ವರುಣ್ ಗಾಂಧಿ ಅವರು, ರೈತ ಆಂದೋಲನದ ಸಂದರ್ಭದಲ್ಲಿ ಹುತಾತ್ಮರಾದ ಪ್ರತಿಭಟನಾಕಾರರಿಗೆ ಪರಿಹಾರ ನೀಡುವಂತೆ ಪ್ರಧಾನಿಗೆ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಸ್ಥಳೀಯಾಡಳಿತಗಳ ಚುನಾವಣೆ ಯಶಸ್ವಿ – ಡಿ.30ಕ್ಕೆ ಫಲಿತಾಂಶ

  • ಕನಿಷ್ಠ ಬೆಂಬಲ ಬೆಲೆ ಹೆಚ್ಚಳದ ಬಗ್ಗೆ ಮಾತನಾಡಲು ನನ್ನಷ್ಟು ಧೈರ್ಯ ಯಾರಿಗೂ ಇಲ್ಲ: ವರುಣ್ ಗಾಂಧಿ

    ಕನಿಷ್ಠ ಬೆಂಬಲ ಬೆಲೆ ಹೆಚ್ಚಳದ ಬಗ್ಗೆ ಮಾತನಾಡಲು ನನ್ನಷ್ಟು ಧೈರ್ಯ ಯಾರಿಗೂ ಇಲ್ಲ: ವರುಣ್ ಗಾಂಧಿ

    ನವದೆಹಲಿ: ಬಿಜೆಪಿ ಸಂಸದ ವರುಣ್ ಗಾಂಧಿ ಮತ್ತೆ ತಮ್ಮದೇ ಸರ್ಕಾರದ ಸಹೋದ್ಯೋಗಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕನಿಷ್ಠ ಬೆಂಬಲ ಬೆಲೆ ಹೆಚ್ಚಳದ ಬಗ್ಗೆ ಮಾತನಾಡಲು ನನ್ನಷ್ಟು ಧೈರ್ಯ ಯಾರಿಗೂ ಇಲ್ಲ ಎಂದು ಹೇಳಿದ್ದಾರೆ.

    ಬರೇಲಿ ವಿಧಾನಸಭಾ ಕ್ಷೇತ್ರದಲ್ಲಿ ಎರಡು ದಿನಗಳ ಪ್ರವಾಸದ ವೇಳೆ ಸ್ಥಳೀಯ ಹಳ್ಳಿಗಳ ಜನರೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಮಾತನಾಡಿ, (MSP-Minimum Support Price) ಕಬ್ಬಿಗೆ ಬೆಂಬಲ ಬೆಲೆ ಏರಿಕೆ ಮಾಡುವ ಬಗ್ಗೆ ಮಾತನಾಡಲು ನನ್ನನ್ನು ಹೊರತುಪಡಿಸಿ ಇನ್ಯಾರಿಗೂ ಧೈರ್ಯವೇ ಇಲ್ಲ. ನಾವು ಆ ಬಗ್ಗೆ ಮಾತನಾಡಿದರೆ ಮುಂದೆ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಇದ್ದರೆ ಎಂಬ ಭಯ ಅವರನ್ನು ಕಾಡುತ್ತಿದೆ ಎಂದು ತಮ್ಮದೇ ಪಕ್ಷದವರ ವಿರುದ್ಧವಾಗಿ ವಾಗ್ದಾಳಿ ಮಾಡಿದ್ದಾರೆ. ಇದನ್ನೂ ಓದಿ: ಟೋಲ್ ಆದಾಯ ಮುಂದಿನ 3 ವರ್ಷಗಳಲ್ಲಿ 1.40 ಲಕ್ಷ ಕೋಟಿ ರೂ.ಗೆ ಏರಿಕೆ

    ಜನರ ಧ್ವನಿಯನ್ನು ನಾವು ಜನಪ್ರತಿನಿಧಿಗಳು ಎತ್ತದೆ ಇದ್ದರೆ, ಮತ್ತೇ ಯಾರು ಅವರಿಗೆ ಸಹಾಯ ಮಾಡುತ್ತಾರೆ? ನನಗೆ ಮುಂದಿನ ಚುನಾವಣೆಯಲ್ಲಿ ಪಕ್ಷದಿಂದ ಟಿಕೆಟ್ ಸಿಗದೆ ಇದ್ದರೂ ನನಗೇನೂ ವ್ಯತ್ಯಾಸವಾಗುವುದಿಲ್ಲ. ನನ್ನ ತಾಯಿ ಸ್ವತಂತ್ರವಾಗಿ ಸ್ಪರ್ಧಿಸಿ ಚುನಾವಣೆ ಗೆದ್ದವರು. ನನಗೂ ಕೂಡ ಯಾವುದೇ ಭಯವಿಲ್ಲ. ಸರ್ಕಾರಗಳು ಬರುತ್ತವೆ, ಹೋಗುತ್ತವೆ. ನಾನು ಸತ್ಯವನ್ನು ಮಾತ್ರ ಹೇಳಲು ಇಷ್ಟಪಡುತ್ತೇನೆ ಎಂದು ತಮ್ಮ ಪಕ್ಷದ ವಿರುದ್ಧವಾಗಿಯೇ ಕಿಡಿಕಾರಿದ್ದಾರೆ. ಇದನ್ನೂ ಓದಿ: LPG ಗ್ಯಾಸ್, ಟಾಯ್ಲೆಟ್‌ ಕಟ್ಟೋದು ಮಹಿಳಾ ಸಬಲೀಕರಣ ಅಲ್ಲ: ಪ್ರಿಯಾಂಕಾ ಗಾಂಧಿ

  • ಸರ್ಕಾರಿ ಇಲಾಖೆಯಲ್ಲಿ ಖಾಲಿ ಹುದ್ದೆಗಳಿದ್ರೆ ಅರ್ಹ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಿ: ವರುಣ್ ಗಾಂಧಿ

    ಸರ್ಕಾರಿ ಇಲಾಖೆಯಲ್ಲಿ ಖಾಲಿ ಹುದ್ದೆಗಳಿದ್ರೆ ಅರ್ಹ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಿ: ವರುಣ್ ಗಾಂಧಿ

    ಲಕ್ನೋ: ಸರ್ಕಾರಿ ಇಲಾಖೆಯಲ್ಲಿ ಖಾಲಿ ಹುದ್ದೆಗಳಿದ್ದರೆ ಅರ್ಹ ಅಭ್ಯರ್ಥಿಗಳನ್ನು ನೇಮಿಸಿಕೊಂಡು ನಿರೋದ್ಯೋಗಿಗಳ ಕಷ್ಟಗಳಿಗೆ ಸ್ಪಂದಿಸಿ ಎಂದು ಉತ್ತರ ಪ್ರದೇಶದ ಸರ್ಕಾರಕ್ಕೆ ಸಂಸದ ವರುಣ್ ಗಾಂಧಿ ಮನವಿ ಮಾಡಿಕೊಂಡಿದ್ದಾರೆ.

    ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಮೆರವಣಿಗೆಯಲ್ಲಿ ಬಿಜೆಪಿಯ ಈ ನಿಲುವಿಗೆ ವಿರೋಧವನ್ನು ವ್ಯಕ್ತಪಡಿಸುತ್ತಿರುವ ಪ್ರತಿಭಟನಾಕರರ ವೀಡಿಯೋವನ್ನು ಬಿಜೆಪಿ ಸಂಸದರು ಹಂಚಿಕೊಂಡಿದ್ದಾರೆ. ಈ ವೀಡಿಯೋದಲ್ಲಿ ಪ್ರತಿಭಟನಾಕಾರರ ವಿರುದ್ಧ ಪೊಲೀಸರು ಲಾಠಿ ಚಾರ್ಜ್ ನಡೆಸುತ್ತಿದ್ದಾರೆ. ಪ್ರತಿಭಟನಾಕಾರರೆಲ್ಲರೂ ಭಾರತೀಯರು. ಆದರೆ ಅವರ ಕುಂದು ಕೊರತೆಗಳನ್ನು ಕೇಳಲು ಯಾರೂ ಸಿದ್ಧರಿಲ್ಲ. ನಿಮ್ಮ ಮಕ್ಕಳು ಪ್ರತಿಭಟನೆಯಲ್ಲಿ ಭಾಗಿಯಾಗುತ್ತಿದ್ದರೇ ಹೀಗೆ ವರ್ತಿಸಲು ಸಾಧ್ಯವಾಗುತ್ತಿತ್ತಾ ಎಂದು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

    ರಾಜ್ಯದಲ್ಲಿ 2019ರಲ್ಲಿ ನಡೆದ 69,000 ಸಹಾಯಕ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ ಪ್ರತಿಭಟನಾಕಾರರು ನಿರಂತರ ಆಂದೋಲನವನ್ನು ನಡೆಸುತ್ತಿದ್ದಾರೆ. ಅವರು ಮಧ್ಯ ಲಕ್ನೋದ ಛೇದಕದಿಂದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿವಾಸದ ಕಡೆಗೆ ಮೆರವಣಿಗೆ ನಡೆಸಲು ಪ್ರಯತ್ನಿಸುತ್ತಿದ್ದಾಗ ಪೊಲೀಸರು ಲಾಠಿಚಾರ್ಜ್ ನಡೆಸಿದರು. ಪೊಲೀಸರ ಕ್ರಮಕ್ಕೆ ವಿರೋಧ ಪಕ್ಷಗಳಾದ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್‌ ನಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಅಖಿಲೇಶ್ ಯಾದವ್ ನೇತೃತ್ವದ ಪಕ್ಷವು ಲಾಠಿಚಾರ್ಜ್ ಅನ್ನು ಖಂಡಿಸಿದೆ. ಹಾಗೂ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಟ್ವೀಟ್ ಮಾಡಿ ಬಿಜೆಪಿ ಮತ ಕೇಳಿದಾಗ ಜನರು ಇದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು ಮನವಿ ಮಾಡಿದರು. ಇದನ್ನೂ ಓದಿ: ಅಪ್ಪುಗೆ ವಿಶೇಷವಾಗಿ ಗೌರವ ಸಲ್ಲಿಸಿದ ಕ್ರಿಕೆಟಿಗ ಡೇವಿಡ್ ವಾರ್ನರ್

    ವರುಣ್ ಗಾಂಧಿ ಅವರ ಈ ಟ್ವೀಟ್‌ನಿಂದ ಪಕ್ಷದ ನೀತಿ ನಿಯಮಗಳನ್ನು ಅನುಸರಿಸುತ್ತಿಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಕಳೆದ ತಿಂಗಳಷ್ಟೇ ವಿವಾದಾತ್ಮಕ ಮೂರು ಕೃಷಿ ಕಾಯ್ದೆಯನ್ನು ರದ್ದುಗೊಳಿಸಿದ ಹಿನ್ನೆಲೆಯಲ್ಲಿ ಪ್ರಧಾನಿ ಅವರಿಗೆ ಪತ್ರವನ್ನು ಬರೆದಿದ್ದರು. ಇದರಲ್ಲಿ ರೈತರ ವಿವಿಧ ಬೇಡಿಕೆಯನ್ನು ಈಡೇರಿಸುವುದರ ಜೊತೆಗೆ ಪ್ರತಿಭಟನೆಯಲ್ಲಿ ಸಾವನ್ನಪ್ಪಿದ ರೈತರಿಗೆ ಪರಿಹಾರ ಒದಗಿಸಿ ರೈತರ ವಿರುದ್ಧ ದಾಖಲಾಗಿರುವ ದೂರುಗಳನ್ನು ಹಿಂಪಡೆಯಬೇಕು ಎಂದಿದ್ದರು. ಅಷ್ಟೇ ಅಲ್ಲದೇ ಲಕ್ಕಿಂಪುರ ಖೇರಿ ಘಟನೆಯಲ್ಲಿ ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಪುತ್ರ ಚಲಾಯಿಸುತ್ತಿದ್ದ ವಾಹನದಿಂದ ಪ್ರತಿಭಟನಾ ನಿರತ ರೈತರ ಮೇಲೆ ಕಾರು ಹಾರಿಹಾಯ್ದಿದ್ದರು. ಇದು ಪ್ರಜಾಪ್ರಭುತ್ವಕ್ಕೆ ಕಳಂಕವಾಗಿದೆ. ಸಚಿವ ಅಜಯ್ ಕುಮಾರ್ ಮಿಶ್ರಾ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದರು. ಇದನ್ನೂ ಓದಿ: ಸರ್ಕಾರಿ ಉದ್ಯೋಗ ಇಲ್ಲದೆ ಯುವಕರಲ್ಲಿ ಹತಾಶೆ: ವರುಣ್ ಗಾಂಧಿ

     

  • ಸರ್ಕಾರಿ ಉದ್ಯೋಗ ಇಲ್ಲದೆ ಯುವಕರಲ್ಲಿ ಹತಾಶೆ: ವರುಣ್ ಗಾಂಧಿ

    ಸರ್ಕಾರಿ ಉದ್ಯೋಗ ಇಲ್ಲದೆ ಯುವಕರಲ್ಲಿ ಹತಾಶೆ: ವರುಣ್ ಗಾಂಧಿ

    ನವದೆಹಲಿ: ಸರ್ಕಾರಿ ಉದ್ಯೋಗ ಇಲ್ಲದೆ ಯುವಕರಲ್ಲಿ ಹತಾಶೆಯ ಉಂಟಾಗಿದೆ ಎಂದು ಬಿಜೆಪಿ ಸಂಸದ ವರುಣ್ ಗಾಂಧಿ ಟ್ವೀಟ್ ಮಾಡಿ ಸರ್ಕಾರದ ವಿರುದ್ಧ ಆಕ್ರೋಶವ್ಯಕ್ತಪಡಿಸಿದ್ದಾರೆ.

    ಉದ್ಯೋಗವಕಾಶಗಳ ಕೊರತೆ ಕುರಿತು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮೀಣ ಭಾಗದ ಯುವಕರು ಇಂದಿಗಳು ಸರ್ಕಾರ ಉದ್ಯೋಗವನ್ನೇ ನೆಚ್ಚಿಕೊಂಡಿದ್ದಾರೆ. ಆದರೆ ಸರ್ಕಾರ ಮೊದಲಿಗಿಂತಲೂ ಕಡಿಮೆ ನೇಮಕಾತಿ ಮಾಡಿಕೊಳ್ಳುತ್ತಿದೆ ಎಂದು ಎಂದು ಹೇಳಿದ್ದಾರೆ. ಇದನ್ನೂ ಓದಿ:  ರೈತ ಹೋರಾಟಕ್ಕೆ ಬಿಜೆಪಿ ಸಂಸದ ಬೆಂಬಲ – ಮೋದಿಗೆ ಸೆಡ್ಡು ಹೊಡೆದ ವರುಣ್ ಗಾಂಧಿ

    ಟ್ವೀಟ್‍ನಲ್ಲಿ ಏನಿದೆ?: ಮೊದಲೇ ಸರ್ಕಾರಿ ಉದ್ಯೋಗಗಳ ಅಭಾವವಿದೆ. ಅದರಲ್ಲೂ ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಪ್ರಶ್ನೆಪತ್ರಿಕೆ ಲೀಕ್ ಆಗುವ ಘಟನೆಗಳ ಹಿನ್ನೆಲೆ ಪದೇ ಪದೇ ಪರೀಕ್ಷೆಗಳನ್ನು ಮಂದೂಡಲಾಗುತ್ತದೆ. 1.25 ಕೋಟಿ ಯುವಕರು ರೈಲ್ವೆ ಇಲಾಖೆ ನಡೆಸಿದ ಗ್ರುಪ್-ಡಿ ಪರೀಕ್ಷೆ ಫಲಿತಾಂಶಗಳಿಗಾಗಿ 2 ವರ್ಷಗಳಿಂದ ಕಾಯುತ್ತಿದ್ದಾರೆ. ಇನ್ನೆಷ್ಟು ದಿನ ಯುವಕರು ಹೀಗೆ ತಾಳ್ಮೆ ಹೊಂದಿರಬೇಕು? ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಪಾಕ್ ಪ್ರಧಾನಿ ಇಮ್ರಾನ್ ಖಾನ್ ನನ್ನ ದೊಡ್ಡಣ್ಣ – ಮತ್ತೆ ವಿವಾದ ಸೃಷ್ಟಿಸಿದ ನವಜೋತ್ ಸಿಂಗ್

    ಕೆಲವು ದಿನಗಳ ಹಿಂದೆ ರೈತ ಹೋರಾಟಕ್ಕೆ ಬಿಜೆಪಿ ಸಂಸದ ವರುಣ್ ಗಾಂಧಿ ಬೆಂಬಲ ಘೋಷಿಸಿ ಪ್ರಧಾನಿ ನರೇಂದ್ರ ಮೋದಿಗೆ ಸೆಡ್ಡು ಹೊಡೆದಿದ್ದರು. ಹೋರಾಟದಲ್ಲಿ ಹುತಾತ್ಮರಾದ ರೈತ ಕುಟುಂಬಗಳಿಗೆ ತಲಾ 1 ಕೋಟಿ ಪರಿಹಾರ ನೀಡಿ, ಸಾಂತ್ವನ ಹೇಳಬೇಕು ಎಂದು ಆಗ್ರಹಿಸಿ ವರುಣ್ ಗಾಂಧಿ, ಮೋದಿಗೆ ಪತ್ರ ಬರೆದಿದ್ದರು.