Tag: varuna

  • ಒಂದು ಕೊಡ್ರಯ್ಯ ಅಂದ್ರೆ 2 ಕೊಟ್ಟವ್ರೆ; ಚಾಮರಾಜನಗರ ವೋಲ್ಟೇಜ್ ಆದ್ರೆ, ವರುಣಾ ಹೈವೋಲ್ಟೇಜ್: ಸೋಮಣ್ಣ

    ಒಂದು ಕೊಡ್ರಯ್ಯ ಅಂದ್ರೆ 2 ಕೊಟ್ಟವ್ರೆ; ಚಾಮರಾಜನಗರ ವೋಲ್ಟೇಜ್ ಆದ್ರೆ, ವರುಣಾ ಹೈವೋಲ್ಟೇಜ್: ಸೋಮಣ್ಣ

    ಚಾಮರಾಜನಗರ: ಒಂದು ಕೊಡ್ರಯ್ಯ ಅಂದ್ರೆ ಎರಡು ಕೊಟ್ಟವ್ರೆ, ಚಾಮರಾಜನಗರ (Chamarajanagar) ವೋಲ್ಟೇಜ್ ಆದ್ರೆ, ವರುಣಾ (Varuna) ಹೈ ವೋಲ್ಟೇಜ್ ಎಂದು ಸಚಿವ ವಿ.ಸೋಮಣ್ಣ (V Somanna) ಎರಡು ಕಡೆ ಸ್ಪರ್ಧಿಸಿರುವ ಬಗ್ಗೆ ಮಾರ್ಮಿಕವಾಗಿ ನುಡಿದರು.

    ಚಾಮರಾಜನಗರ ತಾಲೂಕು ಕೊತ್ತಲವಾಡಿಯಲ್ಲಿ ರೋಡ್ ಶೋ (Road Show) ವೇಳೆ ಮಾತನಾಡಿದ ಅವರು, ಎರಡು ಕಡೆ ಓಡಾಡುವುದು ಸುಲಭದ ಕೆಲಸ ಅಲ್ಲ, ವರುಣಾ ಹೈವೋಲ್ಟೇಜ್ ಅಂತ ಅವ್ರು ಹೇಳ್ತಿದ್ರು, ಆದ್ರೆ ಎಂಟೇ ದಿನಕ್ಕೆ ಹೈಯು ಇಲ್ಲ ಪೈಯು ಇಲ್ಲ ಆಗಿದೆ. ಇನ್ನೊಂದು ಮೂರು, ನಾಲ್ಕು ದಿನ ಹೋದ್ರೆ ಎಲ್ಲಾ ವೋಲ್ಟೇಜ್ ಹೋಗಿ ಅವರು ಏನಾಗುತ್ತಾರೆ ಅಂತ ನೀವೇ ನೋಡಿ ಎಂದು ವ್ಯಂಗ್ಯವಾಡಿದರು.

    ಗೋವಿಂದರಾಜನಗರ ತಬ್ಬಲಿ ಆಗಿದೆ, ನೂರಾರು ಜನ ಕಾರ್ಯಕರ್ತರು ಇಲ್ಲಿ ಬಂದು ಓಡಾಡುತ್ತಿದ್ದಾರೆ. ವರುಣಾದಲ್ಲಿ ಸಾವಿರಾರು ಜನರು ಬಂದು ಕೆಲಸ ಮಾಡುತ್ತಿದ್ದಾರೆ ಎಂದ ಅವರು, ಸಿದ್ದರಾಮಯ್ಯ ಅವರು ನಾನು ನಾಮಪತ್ರ ಹಾಕಿದ್ರೆ ಮತ್ತೆ ವೋಟ್ ಹಾಕುವುದಕ್ಕೆ ಮಾತ್ರ ಬರುತ್ತೇನೆ ಎಂದು ಹೇಳಿದ್ದರು. ಆದರೆ ಅವರು ಸೋಮವಾರದಿಂದ ವರುಣಾದಲ್ಲೇ ಇರುತ್ತಾರಂತೆ. ಮುಂದಿನ ಸೋಮವಾರದಿಂದ ವರುಣಾದಲ್ಲೇರುತ್ತೇನೆ, ನನ್ನ ಕೈಲಿ ಆಗುವುದಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಟೀಕಿಸಿದರು.

    ಸಿದ್ದರಾಮಯ್ಯ (Siddaramaiah) ಅವರ ಕುಟುಂಬ ಯಾವತ್ತೂ ರೋಡ್‌ಗೆ ಹೋಗಿ ಒಂದು ವೋಟ್ ಕೇಳಿರಲಿಲ್ಲ. ಈಗ ಎಲ್ಲಾ ಕಡೆ ಕೇಳ್ತಿದ್ದಾರೆ. ಎಲ್ಲಾ ಹೈ ವೋಲ್ಟೇಜ್ ಪ್ರಭಾವ ಎಂದ ಅವರು, ವರುಣಾದಲ್ಲಿ ಒಂದು ದಿನ ಅಲ್ಲ, ದಿನವೂ ನಮ್ಮ ಪ್ರಚಾರಕ್ಕೆ ಅಡ್ಡಿಪಡಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರು ಹತಾಶರಾಗಿದ್ದಾರೆ. ಈ ರಾಜ್ಯದ ಮಾಜಿ ಸಿಎಂಗೆ ಮುಜುಗರವಾಗಬಾರದೆಂದು ಸಹಿಸಿಕೊಂಡಿದ್ದೇನೆ. ಅರ್ಥ ಮಾಡಿಕೊಂಡಿಲ್ಲ ಅಂದ್ರೆ ಹೇಗೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಹೂವಿನಲ್ಲಿ ಕಲ್ಲು ಬಂದಿಲ್ಲ, ಯಾರೋ ದುಷ್ಕರ್ಮಿಗಳು ಎಸೆದಿದ್ದಾರೆ : ಪರಮೇಶ್ವರ್

    ಪ್ರತಾಪ್ ಸಿಂಹರಿಂದಲೇ ಗಲಾಟೆಯಾಗ್ತಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ಉತ್ತರಿಸಿದ ಅವರು, ಪ್ರತಾಪ್ ಸಿಂಹ ಜವಾಬ್ದಾರಿಯುತ ಲೋಕಸಭಾ ಸದಸ್ಯ. ಆತ ನನಗೆ ಸಹೋದರ ಸಮಾನ, ಪಕ್ಷದ ಭವಿಷ್ಯದ ನಾಯಕ, ವಾಸ್ತವಾಂಶ ಇರೋದನ್ನು ಮಾತಾಡ್ತಾರೆ ಎಂದರು. ಇದನ್ನೂ ಓದಿ: ಮೋದಿ ರೋಡ್ ಶೋ- ಮದುಮಗ ಆಯ್ತು, ಈಗ ಮದುವೆಗೆ ಹೋಗಲು ಕಷ್ಟಪಟ್ಟ ವಧು

  • ರಣಾಂಗಣವಾದ ವರುಣಾ ಕಣ; ಸಿದ್ದರಾಮಯ್ಯನಹುಂಡಿಯಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ

    ರಣಾಂಗಣವಾದ ವರುಣಾ ಕಣ; ಸಿದ್ದರಾಮಯ್ಯನಹುಂಡಿಯಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ

    – ಓರ್ವ ಆಸ್ಪತ್ರೆಗೆ ದಾಖಲು

    ಮೈಸೂರು: ಕರ್ನಾಟಕ ವಿಧಾನಸಭಾ ಚುನಾವಣೆ (Karnataka Election 2023) ಹೊತ್ತಿನಲ್ಲಿ ವರುಣಾ (Varuna) ಕ್ಷೇತ್ರ ಪ್ರಬಲ ನಾಯಕರ ಪೈಪೋಟಿಯಿಂದ ಒಂದಲ್ಲ ಒಂದು ವಿಚಾರವಾಗಿ ಸುದ್ದಿಯಲ್ಲಿದೆ. ಸಿದ್ದರಾಮಯ್ಯನಹುಂಡಿಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರ ನಡುವೆ ಮಾರಾಮಾರಿ ನಡೆದಿದೆ.

    ಘಟನೆಗೆ ಕಾರಣ ತಿಳಿದುಬಂದಿಲ್ಲ. ಗಲಾಟೆ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತ ನಾಗೇಶ್ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜೆಎಸ್ಎಸ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ. ಗಲಾಟೆಯಲ್ಲಿ ನಾಗೇಶ್‌ ಭುಜ ಮತ್ತು ಕಾಲುಗಳಿಗೆ ಗಾಯವಾಗಿತ್ತು. ಸದ್ಯ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಇದನ್ನೂ ಓದಿ: ಮೀನು ಮುಟ್ಟಿದ್ದೇನೆ ದೇಗುಲದ ಒಳಗೆ ಬರಬಹುದೇ?: ಹೊಸ್ತಿಲ ಹೊರಗೆ ನಿಂತು ರಾಹುಲ್ ಪ್ರಶ್ನೆ

    ಪಕ್ಷದ ಅಭ್ಯರ್ಥಿ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ವರುಣಾ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರಿಗೆ ತಿಳಿಸಲಾಗಿದೆ. ಗಾಯಾಳು ನೋಡಲು ಜೆಎಸ್‌ಎಸ್‌ ಆಸ್ಪತ್ರೆಗೆ ಸೋಮಣ್ಣ ಆಗಮಿಸಲಿದ್ದಾರೆ ಎನ್ನಲಾಗಿದೆ.

    ಸದ್ಯ ಸಿದ್ದರಾಮಯ್ಯನಹುಂಡಿಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಘಟನೆ ಸಂಬಂಧ ಮೂವರ ವಿರುದ್ಧ ಹಲ್ಲೆ ಆರೋಪ ಮಾಡಲಾಗಿದೆ. ಎನ್‌ಸಿಆರ್ ಮಾಡಿ ಪೊಲೀಸರು ಆರೋಪಿಗಳನ್ನು ಬಿಟ್ಟು ಕಳುಹಿಸಿದ್ದಾರೆ. ಇದನ್ನೂ ಓದಿ: ಏ.30ಕ್ಕೆ ಚನ್ನಪಟ್ಟಣಕ್ಕೆ ಮೋದಿ – ದಶಪಥ ಹೆದ್ದಾರಿ ಮಾರ್ಗ ಬದಲಾವಣೆ

  • ಸೋಮಣ್ಣ ಪ್ರಚಾರದ ವೇಳೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಲ್ಲು ತೂರಾಟ – ಓರ್ವನಿಗೆ ಗಾಯ

    ಸೋಮಣ್ಣ ಪ್ರಚಾರದ ವೇಳೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಲ್ಲು ತೂರಾಟ – ಓರ್ವನಿಗೆ ಗಾಯ

    ಮೈಸೂರು: ಸಿದ್ದರಾಮನಹುಂಡಿಯಲ್ಲಿ ಸೋಮಣ್ಣ ಪ್ರಚಾರದ ನಡೆಸುತ್ತಿದ್ದ ಸಂದರ್ಭದಲ್ಲಿ ಬಿಜೆಪಿ (BJP) ಪ್ರಚಾರ ರಥದ ಮೇಲೆ ಕಾಂಗ್ರೆಸ್ (Congress) ಕಾರ್ಯಕರ್ತರಿಂದ ಕಲ್ಲು ತೂರಾಟ ನಡೆಸಿರುವ ಆರೋಪ ಕೇಳಿ ಬಂದಿದೆ.

    ಸಿದ್ದರಾಮಯ್ಯ (Siddaramaiah) ಅವರ ಅಣ್ಣನ ಮನೆ ಮುಂದೆ ಪ್ರಚಾರ ಮಾಡುವಾಗ ಈ ಘಟನೆ ನಡೆದಿದೆ. ಘಟನೆ ವೇಳೆ ಬಿಜೆಪಿ ಕಾರ್ಯಕರ್ತ ನಾಗೇಶ್ ಮೇಲೆ ಹಲ್ಲೆ ನಡೆದಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾನೆ.

    ಘಟನೆಯೇನು?: ಪ್ರಚಾರಕ್ಕಾಗಿ ಬಿಜೆಪಿ ನಾಯಕರು ಸಿದ್ದರಾಮಯ್ಯನಹುಂಡಿಗೆ ಎಂಟ್ರಿ ಆಗುತ್ತಿದ್ದಂತೆ ಸ್ಥಳೀಯರಿಂದ ಕಿರಿಕ್ ನಡೆದಿರುವ ಆರೋಪ ಕೇಳಿ ಬಂದಿದೆ. ಗ್ರಾಮಕ್ಕೆ ಬಿಜೆಪಿ ನಾಯಕರು ಎಂಟ್ರಿ ಆಗುತ್ತಿದ್ದ ಕಾರುಗಳನ್ನು ತಡೆದು ಗಲಾಟೆ ನಡೆಸಿದ್ದಾರೆ. ಈ ವೇಳೆ ಕಾರಿನಿಂದ ಇಳಿದು ಯುವಕ ನಾಗೇಶ್ ಪ್ರಶ್ನೆ ಮಾಡಿದ್ದಾನೆ. ನಾಗೇಶ್ ಪ್ರಶ್ನೆ ಮಾಡುತ್ತಿದ್ದಂತೆ 30ಕ್ಕೂ ಹೆಚ್ಚು ಜನರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಪ್ರವೀಣ್‌ ನೆಟ್ಟಾರು ಕನಸು ನನಸು – ನೂತನ ಮನೆಯ ಗೃಹ ಪ್ರವೇಶ, ಸ್ಮಾರಕ ಲೋಕಾರ್ಪಣೆ

    ಪ್ರಚಾರ ರಥದಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ (V Somanna), ಸಂಸದ ಪ್ರತಾಪ್ ಸಿಂಹ (Pratap Simha) ಇದ್ದರು. ಸ್ವಲ್ಪದರ  ಅಂತದರಲ್ಲೇ ಅಭ್ಯರ್ಥಿ ವಿ. ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಘಟನೆಯಿಂದ ಪಾರಾಗಿದ್ದಾರೆ. ಘಟನೆ ಕುರಿತು ವರುಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಯಾವ್ಯಾವ ಮತಗಟ್ಟೆಗಳನ್ನು ಸೂಕ್ಷ್ಮ, ಅತಿಸೂಕ್ಷ್ಮ ಘೋಷಿಸಬೇಕು – ಮಾಹಿತಿ ಕೋರಿ ಏಜೆಂಟ್‌ಗಳಿಗೆ ಕರಂದ್ಲಾಜೆ ಪತ್ರ

  • ವರುಣಾ ಕ್ಷೇತ್ರದಲ್ಲಿ 100 ಪರ್ಸೆಂಟ್ ಗೆಲ್ಲುವ ವಿಶ್ವಾಸವಿದೆ: ಸೋಮಣ್ಣ

    ವರುಣಾ ಕ್ಷೇತ್ರದಲ್ಲಿ 100 ಪರ್ಸೆಂಟ್ ಗೆಲ್ಲುವ ವಿಶ್ವಾಸವಿದೆ: ಸೋಮಣ್ಣ

    ಮೈಸೂರು: ವರುಣಾ (Varuna) ಕ್ಷೇತ್ರದಲ್ಲಿ ನನಗೆ 100 ಪಟ್ಟು ಗೆಲ್ಲುವ ವಿಶ್ವಾಸ ಹೆಚ್ಚಾಗಿದೆ. ಜನರ ಪ್ರೀತಿ, ವಿಶ್ವಾಸ, ಮಮಕಾರ ನನ್ನ ಮೇಲಿದೆ. ಚಾಮುಂಡೇಶ್ವರಿಯ ಆಶೀರ್ವಾದ ಹಾಗೂ ಮಹದೇಶ್ವರರ ಸಂದೇಶವಿದೆ ಎಂದು ವರುಣಾ ಕ್ಷೇತ್ರದ ಬಿಜೆಪಿ (BJP) ಅಭ್ಯರ್ಥಿ ವಿ.ಸೋಮಣ್ಣ (V.Somanna) ಹೇಳಿದ್ದಾರೆ.

    ಸೋಮಣ್ಣ ಹೊರಗಿನವರು ಎಂಬ ಸಿದ್ದರಾಮಯ್ಯ (Siddaramaiah) ಹೇಳಿಕೆ ವಿಚಾರವಾಗಿ ಮೈಸೂರಿನಲ್ಲಿ (Mysuru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ಈ ಬಾರಿ ಆಶೀರ್ವಾದ ಮಾಡುವ ನಂಬಿಕೆ ಜಾಸ್ತಿಯಿದೆ. ಯಾರು ಹೊರಗಿನವರು, ಒಳಗಿನವರು ಎನ್ನುವುದಕ್ಕಿಂತ ಹೆಚ್ಚಾಗಿ ನಮ್ಮ ಕಾಲದಲ್ಲಿ ಏನು ಮಾಡಿದ್ದಾರೆ ಎಂಬುದು ಮುಖ್ಯವಾಗುತ್ತದೆ. ಸಿದ್ದರಾಮಯ್ಯ ಕೊಪ್ಪಳ (Koppal) ಹಾಗೂ ಬಾದಾಮಿಯಲ್ಲಿ (Badami) ಸ್ಪರ್ಧೆ ಮಾಡಲಿಲ್ವಾ? ಇದರ ಬಗ್ಗೆ ಅವರು ಮಾತನಾಡುವುದಿಲ್ಲ. ಸಿದ್ದರಾಮಯ್ಯ ವಾಸ್ತವಾಂಶ ಮಾತನಾಡಿದರೆ ಒಳ್ಳೆಯದು ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಜೆಡಿಎಸ್ ಭದ್ರಕೋಟೆಯಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ – ಯಾರ ಕೈ ಸೇರುತ್ತೆ ‘ಗುಬ್ಬಿ’ 

    ಲಿಂಗಾಯತ ಸಿಎಂಗಳು ಭ್ರಷ್ಟ ಸಿಎಂಗಳು ಎಂಬ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಲಿಂಗಾಯತ ಸಿಎಂ ವಿಚಾರ ನಾನು ಚರ್ಚೆ ಮಾಡಲ್ಲ. ಅದರ ಬಗ್ಗೆ ಪಕ್ಷದ ವರಿಷ್ಠರು ಮಾತನಾಡುತ್ತಾರೆ. ಒಂದು ಧರ್ಮವನ್ನು ಮತ್ತೊಂದು ಧರ್ಮಕ್ಕೆ ಹೋಲಿಕೆ ಮಾಡುವುದು ನಮ್ಮ ಕರ್ತವ್ಯ ಅಲ್ಲ. ರಾಜಕಾರಣಿಗಳು ತಮ್ಮ ಇತಿಮಿತಿಯಲ್ಲಿ ಮಾತನಾಡಬೇಕು. ನಿಜಲಿಂಗಪ್ಪನವರು, ವೀರೇಂದ್ರ ಪಾಟೀಲ್, ಜೆ.ಎಚ್.ಪಟೇಲ್, ಎಸ್.ಆರ್ ಬೊಮ್ಮಾಯಿ, ಯಡಿಯೂರಪ್ಪನವರು ತಮ್ಮದೇ ಆದ ಕೊಡುಗೆಯನ್ನು ಕೊಟ್ಟಿದ್ದಾರೆ ಎಂದು ದೇಶಕ್ಕೆ ಗೊತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ನಾಗಪುರದಿಂದ ಯಾರೇ ಬಂದರೂ ಚುನಾವಣೆ ಮಾಡಲು ಆಗಲ್ಲ: ಬಿಜೆಪಿ ನಾಯಕರಿಗೆ ಶೆಟ್ಟರ್ ತಿರುಗೇಟು 

    ಒಂದು ಬಾರಿ ಭಾವುಕರಾಗಿ ಮಾತನಾಡಿ ಎರಡೇ ನಿಮಿಷಕ್ಕೆ ಉಲ್ಟಾ ಹೊಡೆಯುವ ವ್ಯವಸ್ಥೆಯನ್ನು ನಾನು ನೋಡಿದ್ದೇನೆ. ಅದರ ಬಗ್ಗೆ ಹೆಚ್ಚು ಚರ್ಚೆ ಮಾಡಲ್ಲ. ಇದನ್ನು ಸಿದ್ದರಾಮಯ್ಯ ಮನವರಿಕೆ ಮಾಡಿಕೊಂಡು ರಾಜ್ಯದ ಎಲ್ಲಾ ವರ್ಗದ ಜನರ ಜೊತೆ ಒಡನಾಟ ಇಟ್ಟುಕೊಂಡು ಕೆಲಸ ಮಾಡಬೇಕಿದೆ. ಜಾತಿ ನಿಮಿತ್ತ ಮಾತ್ರ ಇದನ್ನು ವೈಭವೀಕರಿಸಬಾರದು ಎಂದು ತಿಳಿಸಿದರು. ಇದನ್ನೂ ಓದಿ: ಯುವಕನಿಗೆ ಕಪಾಳ ಮೋಕ್ಷ ಮಾಡಿದ ಎಂ.ಬಿ.ಪಾಟೀಲ್‌ 

    ಎಲ್ಲಾ ವರ್ಗದ ಜನರು ಸೋಮಣ್ಣನಂತಹ ಕೆಲಸಗಾರರು ಬೇಕು ಎಂದು ಕೇಳುತ್ತಿದ್ದಾರೆ. ಮತದಾರರು ಹತ್ತಾರು ಭಾರಿ ಯೋಚನೆ ಮಾಡಿ ನಿರ್ಧಾರ ಮಾಡುತ್ತಾರೆ. ವಸತಿ ಸಚಿವರಾಗಿ ಸೋಮಣ್ಣ ಏನು ಕೆಲಸ ಮಾಡಿದ್ದಾರೆ ಎಂಬುದು ಸಿದ್ದರಾಮಯ್ಯಗೆ ಗೊತ್ತಿದೆ. ನನ್ನ ಬಗ್ಗೆ ಸಿದ್ದರಾಮಯ್ಯನವರೇ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಬೆಂಗ್ಳೂರಿನಲ್ಲಿ ಸಿದ್ದರಾಮಯ್ಯ 8 ಸಾವಿರ ಕೋಟಿ ರೂ. ಅಕ್ರಮ ಮಾಡಿದ್ದಾರೆ: ಬೊಮ್ಮಾಯಿ ಆರೋಪ

  • ಸಿದ್ದರಾಮಯ್ಯಗಿಂತ ಪತ್ನಿಯೇ ಹೆಚ್ಚು ಶ್ರೀಮಂತೆ – ಆಸ್ತಿ ಎಷ್ಟಿದೆ ಗೊತ್ತಾ?

    ಸಿದ್ದರಾಮಯ್ಯಗಿಂತ ಪತ್ನಿಯೇ ಹೆಚ್ಚು ಶ್ರೀಮಂತೆ – ಆಸ್ತಿ ಎಷ್ಟಿದೆ ಗೊತ್ತಾ?

    ಮೈಸೂರು: ವರುಣಾ (Varuna) ಕ್ಷೇತ್ರದ ಕಾಂಗ್ರೆಸ್ (Congress) ಅಭ್ಯರ್ಥಿ ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ಅವರಿಗಿಂತ ಅವರ ಪತ್ನಿ ಪಾರ್ವತಿ ಅವರೇ ಹೆಚ್ಚು ಶ್ರೀಮಂತೆಯಾಗಿದ್ದಾರೆ. ಸಿದ್ದರಾಮಯ್ಯ ಅವರ ಬಳಿ 19 ಕೋಟಿ ರೂ. ಆಸ್ತಿ ಇದ್ದರೆ, ಅವರ ಪತ್ನಿ 32.12 ಕೋಟಿ ರೂ. ಒಡತಿಯಾಗಿದ್ದಾರೆ.

    ಸಿದ್ದರಾಮಯ್ಯ ಅವರು 9,58 ಕೋಟಿ ಚರಾಸ್ತಿ, 9.43 ಕೋಟಿ ಸ್ಥಿರಾಸ್ತಿ ಹೊಂದಿದ್ದಾರೆ. ಅವರ ಪತ್ನಿ 11.26 ಕೋಟಿ ರೂ. ಚರಾಸ್ತಿ, 19.56 ಕೋಟಿ ರೂ. ಸ್ಥಿರಾಸ್ತಿ ಹೊಂದಿದ್ದು, 1.29 ಕೋಟಿ ರೂ. ಪಿತ್ರಾರ್ಜಿತವಾಗಿ ಬಂದಿದೆ. 16.24 ಕೋಟಿ ರೂ. ಸಾಲ ಇದೆ. ಇದನ್ನೂ ಓದಿ: ಕಾಂಗ್ರೆಸ್ 5ನೇ ಪಟ್ಟಿ ರಿಲೀಸ್ – ಸಿಎಂ ಕ್ಷೇತ್ರದಲ್ಲಿ ʻಕೈʼ ಅಭ್ಯರ್ಥಿ ಚೇಂಜ್‌

    ಸಿದ್ದರಾಮಯ್ಯ ಅವರು ಕೂಡ 6.84 ಕೋಟಿ ರೂ. ಸಾಲ ಇರುವುದಾಗಿ ಘೋಷಿಸಿಕೊಂಡಿದ್ದಾರೆ. ಸಿದ್ದರಾಮಯ್ಯ ಅವರು 2018ರ ಚುನಾವಣೆ ಕಾಲಕ್ಕೆ 18.55 ಕೋಟಿ ರೂ. ಆಸ್ತಿ ಇದೆ ಎಂದು ಘೋಷಿಸಿಕೊಂಡಿದ್ದರು.

    ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದಿಂದಿ ಅಭ್ಯರ್ಥಿಯಾಗಿ ಸಿದ್ದರಾಮಯ್ಯ ಬುಧವಾರ ನಾಮಪತ್ರ ಸಲ್ಲಿಸಿದರು. ಬೃಹತ್‌ ರ‍್ಯಾಲಿಯಲ್ಲಿ ತೆರಳಿ ಉಮೇದುವಾರಿಕೆ ಸಲ್ಲಿಸಿದರು. ಈ ವೇಳೆ ಸಾವಿರಾರು ಸಂಖ್ಯೆಯಲ್ಲಿ ಜನ ನೆರೆದಿದ್ದರು. ಮಾಜಿ ಸಚಿವ ಹೆಚ್‌.ಸಿ.ಮಹದೇವಪ್ಪ ಸೇರಿದಂತೆ ಕಾಂಗ್ರೆಸ್‌ನ ಅನೇಕ ಮುಖಂಡರು ಸಿದ್ದುಗೆ ಸಾಥ್‌ ನೀಡಿದರು. ಇದನ್ನೂ ಓದಿ: ಕಾಂಗ್ರೆಸ್ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ – ನಟಿ ರಮ್ಯಾ, ಶೆಟ್ಟರ್‌, ಸಾಧು ಕೋಕಿಲಗೆ ಸ್ಥಾನ

  • ಪ್ರಚಾರಕ್ಕೆ ತೆರಳಿದ್ದ ಸೋಮಣ್ಣ, ಪ್ರತಾಪ್ ಸಿಂಹಗೆ ಗ್ರಾಮಸ್ಥರಿಂದ ಫುಲ್ ಕ್ಲಾಸ್

    ಪ್ರಚಾರಕ್ಕೆ ತೆರಳಿದ್ದ ಸೋಮಣ್ಣ, ಪ್ರತಾಪ್ ಸಿಂಹಗೆ ಗ್ರಾಮಸ್ಥರಿಂದ ಫುಲ್ ಕ್ಲಾಸ್

    ಮೈಸೂರು: ವರುಣಾ (Varuna) ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ (V Somanna) ಸಂಸದ ಪ್ರತಾಪ್ ಸಿಂಹ (Pratap Simha) ಅವರೊಂದಿಗೆ ಚುನಾವಣಾ ಪ್ರಚಾರಕ್ಕೆ ತೆರಳಿದ್ದ ವೇಳೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿರುವ ಪ್ರಸಂಗ ನಡೆದಿದೆ.

    ವರುಣಾದ ಲಲಿತಾದ್ರಿಪುರದಲ್ಲಿ ಸೋಮಣ್ಣ ಹಾಗೂ ಪ್ರತಾಪ್ ಸಿಂಹ ಪ್ರಚಾರಕ್ಕೆ ತೆರಳಿದ್ದ ವೇಳೆ ಗ್ರಾಮಸ್ಥರು ತಾವು ಯಾವ ಅಭಿವೃದ್ಧಿ ಮಾಡಿದ್ದೀರಿ? ಎಂದು ಪ್ರಶ್ನಿಸಿದ್ದಾರೆ. ಗ್ರಾಮಸ್ಥರ ಪ್ರಶ್ನೆಗೆ ಉತ್ತರಿಸಲಾಗದೆ ಸೋಮಣ್ಣ ಹಾಗೂ ಪ್ರತಾಪ್ ಸಿಂಹ ತಬ್ಬಿಬ್ಬಾಗಿದ್ದಾರೆ.

    ಸೋಮಣ್ಣ ಮೈಸೂರು (Mysuru) ಜಿಲ್ಲಾ ಉಸ್ತುವಾರಿಯಾಗಿದ್ರಿ. ಆವಾಗ ತಾವು ಏನು ಕೊಡುಗೆ ಕೊಟ್ರಿ? ಈಗ ಮತ ಕೇಳೋಕೆ ಬಂದಿದ್ದೀರಾ? ಎಂದು ಸೋಮಣ್ಣಗೆ ಗ್ರಾಮಸ್ಥರು ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಗ್ರಾಮಸ್ಥರು ತರಾಟೆಗೆ ತೆಗೆದುಕೊಳ್ಳುತ್ತಿದ್ದ ವೇಳೆ ವೀಡಿಯೋ ಮಾಡುತ್ತಿದ್ದ ವ್ಯಕ್ತಿಯ ಕೈಯಿಂದ ನಾಯಕರು ಮೊಬೈಲ್ ಅನ್ನು ಕಿತ್ತುಕೊಳ್ಳಲು ಪ್ರಯತ್ನಿಸಿದ್ದಾರೆ. ಇದನ್ನೂ ಓದಿ: ಸೋಮಣ್ಣನನ್ನು ಬಲವಂತವಾಗಿ ವರುಣಾದಲ್ಲಿ ನಿಲ್ಲಿಸಿದ್ದಾರೆ: ಸಿದ್ದರಾಮಯ್ಯ

    ವಿ ಸೋಮಣ್ಣ ಅವರು ವರುಣಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ಕಣಕ್ಕಿಳಿದಿದ್ದಾರೆ. ಸೋಮಣ್ಣ ಪ್ರಚಾರಕ್ಕೆ ತೆರಳಿದ್ದ ವೇಳೆ ಮತದಾರರು ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಸಿದ್ದು ಕುಟುಂಬದ ಮೂರನೇ ತಲೆಮಾರು ರಾಜಕೀಯ ಫೀಲ್ಡ್‌ಗೆ ಎಂಟ್ರಿ

  • ಸೋಮಣ್ಣನನ್ನು ಬಲವಂತವಾಗಿ ವರುಣಾದಲ್ಲಿ ನಿಲ್ಲಿಸಿದ್ದಾರೆ: ಸಿದ್ದರಾಮಯ್ಯ

    ಸೋಮಣ್ಣನನ್ನು ಬಲವಂತವಾಗಿ ವರುಣಾದಲ್ಲಿ ನಿಲ್ಲಿಸಿದ್ದಾರೆ: ಸಿದ್ದರಾಮಯ್ಯ

    ಮೈಸೂರು: ನನ್ನ ಬಗ್ಗೆ ವರುಣಾ (Varuna) ಜನರಿಗೆ ಅಪಾರವಾದ ಪ್ರೀತಿಯಿದೆ. ನನ್ನ ಮತ್ತು ವರುಣಾ ಸಂಬಂಧವನ್ನು ಕಿತ್ತುಹಾಕಲು ಯಾರಿಂದಲೂ ಸಾಧ್ಯವಿಲ್ಲ. ಯಾರೇ ಬರಲಿ, ಯಾರೇ ಅಭ್ಯರ್ಥಿಗಳನ್ನು ಬದಲಾಯಿಸಲಿ ಏನೇ ಆದರೂ ನನ್ನ ಗೆಲುವು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

    ಮೈಸೂರಿನಲ್ಲಿ (Mysuru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿಯಾದ ಸೋಮಣ್ಣನಿಗೂ (V.Somanna) ವರುಣಾ ಕ್ಷೇತ್ರಕ್ಕೂ ಸಂಬಂಧವಿಲ್ಲ. ಬಿಜೆಪಿಯವರು ಅವರನ್ನು ಬಲವಂತವಾಗಿ ಈ ಕ್ಷೇತ್ರದಲ್ಲಿ ನಿಲ್ಲಿಸಿದ್ದಾರೆ. ಅವನು ನಮ್ಮ ಜಿಲ್ಲೆಯವನೂ ಅಲ್ಲ. ಅವನು ರಾಮನಗರ (Ramanagara) ಜಿಲ್ಲೆಯವನಾಗಿದ್ದು, ಬೆಂಗಳೂರಿನಲ್ಲಿ (Bengaluru) ರಾಜಕಾರಣ ಮಾಡಿದ್ದಾನೆ. ವರುಣಾ ಕ್ಷೇತ್ರಕ್ಕೆ ಒಬ್ಬ ದುಡ್ಡಿರುವ ಅಭ್ಯರ್ಥಿಯನ್ನು ನಿಲ್ಲಿಸಬೇಕು ಎನ್ನುವ ಸಲುವಾಗಿ ಸೋಮಣ್ಣನನ್ನು ಇಲ್ಲಿ ನಿಲ್ಲಿಸಿದ್ದಾರೆ ಎಂದು ಟೀಕೆ ಮಾಡಿದರು. ಇದನ್ನೂ ಓದಿ: ಅಮವಾಸ್ಯೆ ದಿನದಂದು ಸತೀಶ್‌ ಜಾರಕಿಹೊಳಿ‌ ನಾಮಪತ್ರ ಸಲ್ಲಿಕೆ 

    ವರುಣಾವನ್ನು ತಾಲೂಕು ಕೇಂದ್ರವನ್ನಾಗಿ ಮಾಡುತ್ತೇವೆ ಎಂಬ ಸಿಎಂ ಭರವಸೆಯ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ 4 ವರ್ಷಗಳ ಆಡಳಿತದಲ್ಲಿ ಯಾಕೆ ಮಾಡಲಿಲ್ಲ? ವರುಣಾ ತಾಲೂಕು ಕೇಂದ್ರ ಎಂಬುದು ಗೊತ್ತಾಗಲಿಲ್ಲ ಎಂದರೆ ಅವರು ರಾಜೀನಾಮೆ ನೀಡಲಿ. ರಾಜ್ಯ ಗೊತ್ತಿಲ್ಲ ಎಂದಮೇಲೆ ಮುಖ್ಯಮಂತ್ರಿ ಯಾಕಾಗಿದ್ದಾರೆ? ಮೊದಲು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಲಿ. ಈಗ ಚುನಾವಣೆ ಬಂದಮೇಲೆ ಗೊತ್ತಾಗಿದೆ ಎಂದರೆ ಅದು ಎಂತಹಾ ಮರೆವಿರಬಹುದು ಎಂದು ಲೇವಡಿ ಮಾಡಿದರು. ಇದನ್ನೂ ಓದಿ: ಕಾಂಗ್ರೆಸ್‌ಗೆ ಬಿಗ್‌ ಶಾಕ್‌ – ವಿನಯ್‌ ಕುಲಕರ್ಣಿ ಧಾರವಾಡ ಪ್ರವೇಶಿಸುವಂತಿಲ್ಲ 

    ಬಿಜೆಪಿ (BJP) ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ಕ್ಯಾಬಿನೆಟ್‌ನಲ್ಲಿಯೇ ವರುಣಾ ಕ್ಷೇತ್ರವನ್ನು ತಾಲೂಕನ್ನಾಗಿ ಮಾಡುತ್ತೇವೆ ಎಂಬ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನೂರಕ್ಕೆ ಇನ್ನೂರು ಪರ್ಸೆಂಟ್ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ. ಅವರಿಗೆ ಕೇವಲ 60 ಸೀಟ್ ಒಳಗಡೆ ಅಷ್ಟೇ ಬರುವುದು. ಈ ನಾಲ್ಕು ವರ್ಷದಲ್ಲಿ ಮೈಸೂರಿಗೆ ಹಾಗೂ ವರುಣಾ ಕೇತ್ರಕ್ಕೆ ಏನು ಮಾಡಿದ್ದಾರೆ ಇವರು? ಇದೇ ಸೋಮಣ್ಣ ಉಸ್ತುವಾರಿ ಸಚಿವನಾಗಿದ್ದಾಗ ವರುಣಾ ಕೇತ್ರದ ಜನರಿಗೆ ಒಂದು ಮನೆ ಕೊಟ್ಟಿದ್ದಾನಾ? ಸೂರಿಲ್ಲದವರಿಗೆ ಸೂರು ನೀಡಿದ್ದಾನಾ? ಮನೆ ಕೇಳಲು ಹೋದವರಿಗೆ ಕಪಾಳಕ್ಕೆ ಹೊಡೆದಿದ್ದಾರೆ ಎಂದು ಜನಗಳೇ ಹೇಳುತ್ತಿದ್ದಾರೆ. ಈಗ ಚುನಾವಣೆ ಸಮಯದಲ್ಲಿ ಬಂದು ಅದು ಮಾಡುತ್ತೇವೆ ಇದು ಮಾಡುತ್ತೇವೆ ಎಂದರೆ ಇಲ್ಲಿಯವರೆಗೆ ಅಭಿವೃದ್ಧಿ ಕೆಲಸ ಮಾಡಿದವರು ಯಾರು ಎಂದು ಪ್ರಶ್ನೆಗಳ ಸುರಿಮಳೆಗೈದರು. ಇದನ್ನೂ ಓದಿ: ಅಣ್ಣಾಮಲೈ ವಿರುದ್ಧವೂ ಕಿಡಿಕಾರಿದ ಜಗದೀಶ್ ಶೆಟ್ಟರ್ 

    ಬೊಮ್ಮಾಯಿ (Basavaraj Bommai) ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ನಂಬರ್ ಒನ್ ಸುಳ್ಳುಗಾರ. ರಾಮದಾಸ್ ಅವರಿಗೆ ಟಿಕೆಟ್ ಕೊಡಲಿಲ್ಲ. ಜಗದೀಶ್ ಶೆಟ್ಟರ್ (Jagadish Shettar) ಅವರಿಗೂ ಟಿಕೆಟ್ ದಕ್ಕಲಿಲ್ಲ. ಈಶ್ವರಪ್ಪನವರಿಗೆ ಸರಿಯಾದ ಪಾಠ ಕಲಿಸಿದ್ದಾರೆ. ಅವರಿಗೆ ಬಾಯಿ ಸರಿ ಇರಲಿಲ್ಲ. ಲಕ್ಷ್ಮಣ ಸವದಿ (Laxman Savadi) ಕೂಡಾ ಹಿರಿಯ ನಾಯಕರು. ಅವರಿಗೂ ಯಾಕೆ ಟಿಕೆಟ್ ತಪ್ಪಿಸಿದರು? ಬಿಜೆಪಿ ಈಗ ಬಿಎಲ್ ಸಂತೋಷ್ (B.L.Santhosh) ಎಂಬ ವ್ಯಕ್ತಿಯ ಕಪಿಮುಷ್ಠಿಯಲ್ಲಿದೆ. ಬಿಜೆಪಿಯ ಈ ಎಲ್ಲಾ ಬೆಳವಣಿಗೆಗಳಿಗೆ ಸಂತೋಷ್ ಕಾರಣ. ಸೋಮಣ್ಣನವರನ್ನು ಹರಕೆ ಕುರಿ ಮಾಡಲು ಇಲ್ಲಿ ನಿಲ್ಲಿಸಿದ್ದಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ‘ಟಿಕೆಟ್ ಕೈತಪ್ಪಲು ಸಂತೋಷ್ ಕಾರಣ’ – ಶೆಟ್ಟರ್ ಆರೋಪಕ್ಕೆ ನಾವ್ ತಲೆಕೆಡಿಸಿಕೊಳ್ಳಲ್ಲ: ಬೊಮ್ಮಾಯಿ 

    ನಮ್ಮ ಪಕ್ಷಕ್ಕೆ ನಮ್ಮ ಸಿದ್ಧಾಂತವನ್ನು ಒಪ್ಪಿಕೊಂಡು ಯಾರೇ ಬಂದರು ಕೂಡಾ ಸೇರಿಸಿಕೊಳ್ಳುತ್ತೇವೆ. ಇವತ್ತು ನಮ್ಮ ಕಾರ್ಯಕರ್ತರನ್ನು ಭೇಟಿ ಮಾಡಿ ನಾಳೆ ನಾಮಪತ್ರವನ್ನು (Nomination Papers) ಸಲ್ಲಿಸುತ್ತೇನೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಶೆಟ್ಟರ್ ನಮ್ಮ ಸಿದ್ಧಾಂತ ಒಪ್ಪಿಕೊಳ್ಳುತ್ತಾರೆ: ಪರಮೇಶ್ವರ್

  • ಸಿದ್ದುಗೆ ಕೋಲಾರ ಟಿಕೆಟ್‌ ಮಿಸ್‌ – ವರುಣಾ ಒಂದೇ ಫಿಕ್ಸ್‌

    ಸಿದ್ದುಗೆ ಕೋಲಾರ ಟಿಕೆಟ್‌ ಮಿಸ್‌ – ವರುಣಾ ಒಂದೇ ಫಿಕ್ಸ್‌

    ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ (Karnataka Election 2023) ಕಾಂಗ್ರೆಸ್‌ (Congress) ಅಭ್ಯರ್ಥಿಗಳನ್ನು ಕಣಕ್ಕಿಳಿಸುವ 3ನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಸಿದ್ದರಾಮಯ್ಯಗೆ (Siddaramaiah) ಕೋಲಾರ (Kolara) ಟಿಕೆಟ್‌ ಕೈತಪ್ಪಿದೆ. ವರುಣಾ (Varuna) ಜೊತೆಗೆ ಕೋಲಾರದಿಂದಲೂ ಸ್ಪರ್ಧಾಕಾಂಕ್ಷಿಯಾಗಿದ್ದ ಸಿದ್ದು ಆಸೆಗೆ ಹೈಕಮಾಂಡ್‌ ತಣ್ಣೀರೆರಚಿದೆ.

    ಕೋಲಾರದಲ್ಲಿ ಸಿದ್ದರಾಮಯ್ಯ ಬದಲಿಗೆ ಕೊತ್ತೂರ್‌ ಜಿ. ಮಂಜುನಾಥ್‌ ಅವರಿಗೆ ಟಿಕೆಟ್‌ ನೀಡಲಾಗಿದೆ. ವರುಣಾದಿಂದಲೇ ಸ್ಪರ್ಧಿಸಿ ಎಂದು ಹೈಕಮಾಂಡ್‌ ಸ್ಪಷ್ಟ ಸಂದೇಶ ಕೊಟ್ಟಿದೆ. ಇದನ್ನೂ ಓದಿ: ಕಾಂಗ್ರೆಸ್‌ 3ನೇ ಪಟ್ಟಿ ರಿಲೀಸ್‌ – ಸಿದ್ದರಾಮಯ್ಯ ಕೋಲಾರದಿಂದ ಔಟ್‌, ಉಮಾಶ್ರೀಗೂ ಕೊಕ್‌

    ಸಿದ್ದರಾಮಯ್ಯ ವರುಣಾ ಹಾಗೂ ಕೋಲಾರದಿಂದ ಸ್ಪರ್ಧಿಸುವ ಆಕಾಂಕ್ಷೆ ವ್ಯಕ್ತಪಡಿಸಿದ್ದರು. ಕೋಲಾರದಲ್ಲಿ ಸಮಾವೇಶ ಕೂಡ ನಡೆಸಿ ಶಕ್ತಿ ಪ್ರದರ್ಶಿಸಿದ್ದರು. ಕೋಲಾರದಿಂದ ಸ್ಪರ್ಧಿಸಲು ಸಿದ್ಧರಿದ್ದರೂ ಹೈಕಮಾಂಡ್‌ ನಾಯಕರು ಮಾತ್ರ ರೆಡ್‌ ಸಿಗ್ನಲ್‌ ತೋರಿಸಿದ್ದರು. ನೀವು ವರುಣಾದಿಂದಲೇ ಸ್ಪರ್ಧಿಸಿ ಎಂದು ಸೂಚನೆ ಕೊಟ್ಟಿದ್ದರು.

    ಎರಡೂ ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೆ ಬ್ಯಾಲೆನ್ಸ್‌ ಮಾಡಲು ತುಂಬಾ ಕಷ್ಟ ಆಗುತ್ತದೆ. ವರುಣಾವನ್ನು ಮಾತ್ರ ಕೇಂದ್ರೀಕರಿಸಿದರೆ ಗೆಲುವು ಸುಲಭವಾಗಬಹುದು ಎಂದು ಹೈಕಮಾಂಡ್‌ ಸಲಹೆ ಕೊಟ್ಟಿತ್ತು. ಇದನ್ನೂ ಓದಿ: ವರುಣಾದಲ್ಲಿ ಅಪ್ಪ-ಮಗನ ದರ್ಬಾರ್‌ಗೆ ಅಂತ್ಯ ಕಾಲ ಬಂದಿದೆ: ಪ್ರತಾಪ್ ಸಿಂಹ

  • ಮುಂದಿನ ಮುಖ್ಯಮಂತ್ರಿ ಸೋಮಣ್ಣ – ಘೋಷಣೆ ಕೂಗಿದ ಅಭಿಮಾನಿಗಳು

    ಮುಂದಿನ ಮುಖ್ಯಮಂತ್ರಿ ಸೋಮಣ್ಣ – ಘೋಷಣೆ ಕೂಗಿದ ಅಭಿಮಾನಿಗಳು

    – ನಿನ್ನ ನಂಬಿ ಬಂದಿದ್ದೇನೆ.. ದಯಮಾಡಿ ಕೈಬಿಡಬೇಡ: ಕಾಪುಗೆ ಸೋಮಣ್ಣ ಮನವಿ

    ಮೈಸೂರು: ವರುಣಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ಸ್ಪರ್ಧೆಗೆ ಸಜ್ಜಾಗಿರುವ ವಿ.ಸೋಮಣ್ಣ (Somanna) ಅಭಿಮಾನಿಗಳು ಅದ್ಧೂರಿ ಸ್ವಾಗತ ಕೋರಿದ್ದಾರೆ. “ಮುಂದಿನ ಮುಖ್ಯಮಂತ್ರಿ ಸೋಮಣ್ಣ” ಎಂದು ಅಭಿಮಾನಿಗಳು ಘೋಷಣೆ ಕೂಗಿದ್ದಾರೆ.

    ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸಿ ಗೆಲುವು ಸಾಧಿಸಿ ಬರುವಂತೆ ಬಿಜೆಪಿ ಹೈಕಮಾಂಡ್‌ ಸೂಚಿಸಿದ ಬೆನ್ನಲ್ಲೇ ಸಚಿವ ವಿ.ಸೋಮಣ್ಣ ಅವರು ಕ್ಷೇತ್ರದಲ್ಲಿ ಪ್ರಚಾರಕ್ಕೆ ಮುಂದಾಗಿದ್ದಾರೆ. ಪ್ರಚಾರಕ್ಕೂ ಮುನ್ನ ಬಿ.ಎಸ್.ಯಡಿಯೂರಪ್ಪ (Yediyurappa) ಆಪ್ತ ಕಾಪು ಸಿದ್ದಲಿಂಗಸ್ವಾಮಿ (Kapu Siddalingaswamy) ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ಈ ವೇಳೆ “ಮುಂದಿನ ಮುಖ್ಯಮಂತ್ರಿ ಸೋಮಣ್ಣ” ಎಂದು ಅಭಿಮಾನಿಗಳು ಘೋಷಣೆ ಕೂಗಿದರು. ಇದನ್ನೂ ಓದಿ: ಎಂಪಿ ಕುಮಾರಸ್ವಾಮಿ ಶಾಸಕ ಸ್ಥಾನಕ್ಕೆ ರಾಜೀನಾಮೆ

    ಕಾಪು ಮನೆಗೆ ಭೇಟಿ ನೀಡಿ ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. “ನಿನ್ನ ನಂಬಿದ್ದೇನೆ, ದಯಮಾಡಿ ಕೈಬಿಡಬೇಡ” ಎಂದು ಕಾಪು ಸಿದ್ದಲಿಂಗಸ್ವಾಮಿಗೆ ಕೈ ಮುಗಿದು ಸೋಮಣ್ಣ ಮನವಿ ಮಾಡಿದರು. ಸೋಮಣ್ಣ ಅವರಿಗೆ ಒಳೇಟಿನ ಭಯ ಕಾಡುತ್ತಿದೆ ಎನ್ನಲಾಗುತ್ತಿದೆ.

    ಕಾಪು ಸಿದ್ಧಲಿಂಗಸ್ವಾಮಿ ಯಡಿಯೂರಪ್ಪರ ಆಪ್ತ. ವರುಣಾ ಕ್ಷೇತ್ರಕ್ಕೆ ಕಾಪು ಸಿದ್ಧಲಿಂಗಸ್ವಾಮಿ ಕೂಡ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಸಿದ್ದರಾಮಯ್ಯ ಅವರನ್ನು ಕಟ್ಟಿಹಾಕಲು ವರುಣಾ ಕ್ಷೇತ್ರದಲ್ಲಿ ಸೋಮಣ್ಣ ಅವರಿಗೆ ಟಿಕೆಟ್‌ ಕೊಡಲಾಗಿದೆ. ಇದನ್ನೂ ಓದಿ: ಸಮಾಜದ ಮುಖಂಡರ ಕಡೆಗಣನೆ – ರಾಷ್ಟ್ರೀಯ ಪಕ್ಷಗಳ ವಿರುದ್ಧ ಭೋವಿ ಶ್ರೀ ಕಿಡಿ

  • ವರುಣಾ, ಚಾಮರಾಜನಗರ ಎರಡೂ ಕ್ಷೇತ್ರದಲ್ಲಿ ಗೆಲ್ಲುತ್ತೇವೆ: ಪುಟ್ಟರಂಗಶೆಟ್ಟಿ

    ವರುಣಾ, ಚಾಮರಾಜನಗರ ಎರಡೂ ಕ್ಷೇತ್ರದಲ್ಲಿ ಗೆಲ್ಲುತ್ತೇವೆ: ಪುಟ್ಟರಂಗಶೆಟ್ಟಿ

    ಚಾಮರಾಜನಗರ: ವರುಣಾ (Varuna) ಹಾಗೂ ಚಾಮರಾಜನಗರ (Chamarajanagar) ಎರಡೂ ಕಡೆ ನಾವೇ ಗೆಲ್ಲುತ್ತೇವೆ. ಅವರು ಏನೇ ತಂತ್ರಗಾರಿಕೆ ಮಾಡಿದರೂ ನಾವು ತಕ್ಕ ಉತ್ತರ ಕೊಡುತ್ತೇವೆ ಎಂದು ಚಾಮರಾಜನಗರ ಕಾಂಗ್ರೆಸ್ (Congress) ಅಭ್ಯರ್ಥಿ, ಶಾಸಕ ಪುಟ್ಟರಂಗಶೆಟ್ಟಿ (C.Puttarangashetty) ಹೇಳಿದ್ದಾರೆ.

    ನಾಮಪತ್ರ ಸಲ್ಲಿಕೆಗೂ ಮುನ್ನವೇ ಪುಟ್ಟರಂಗಶೆಟ್ಟಿ ಬಿರುಸಿನ ಪ್ರಚಾರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಅಲ್ಲದೇ ಸೋಮಣ್ಣನವರಿಗೆ (V.Somanna) ಬಿಜೆಪಿ (BJP) ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಕ್ಷೇತ್ರದಲ್ಲಿ ಪುಲ್ ಆ್ಯಕ್ಟಿವ್ ಆಗಿದ್ದಾರೆ. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮದು ಅಭಿವೃದ್ಧಿ, ಸೋಮಣ್ಣನವರದ್ದು ಬರೀ ಮಾತು. ಅವರು ಸುಳ್ಳು ಹೇಳಿಕೊಂಡು ರಾಜಕಾರಣ (Politics) ಮಾಡುತ್ತಾರೆ. ಸೋಮಣ್ಣ ಯಾವ ಅಭಿವೃದ್ಧಿ ಕೆಲಸ ಮಾಡಿದ್ದಾರೆ? ಯಾವ ಮುಖ ಇಟ್ಟುಕೊಂಡು ವೋಟ್ ಕೇಳುತ್ತಾರೆ? ಎಂದು ಟೀಕಿಸಿದರು. ಇದನ್ನೂ ಓದಿ: ಬೆಳಗಾವಿಯಲ್ಲಿ ಮತ್ತೊಂದು ಬಿಜೆಪಿ ವಿಕೆಟ್ ಪತನ 

    ಚಾಮರಾಜನಗರ ಜಿಲ್ಲೆಯಲ್ಲಿ ಅತಿವೃಷ್ಟಿಯಾಯಿತು. ಉಸ್ತುವಾರಿ ಸಚಿವರಾಗಿ ಎಷ್ಟು ಅನುದಾನ ತಂದಿದ್ದಾರೆ ಎಂದು ಸೋಮಣ್ಣ ಹೇಳಲಿ ಎಂದು ಸವಾಲು ಹಾಕಿದರು. ಅಷ್ಟೇ ಅಲ್ಲದೇ ನಾಲ್ಕನೇ ಬಾರಿಯೂ ನಾನೇ ಆಯ್ಕೆಯಾಗುತ್ತೇನೆ. ಸರ್ಕಾರವೂ ನಮ್ಮದೇ ಬರುತ್ತದೆ. ಅದರಲ್ಲಿ ಎರಡನೇ ಮಾತಿಲ್ಲ ಎಂದು ಹೇಳಿದರು. ಇದನ್ನೂ ಓದಿ: ಡಿಕೆಶಿ ಆಥಿತ್ಯ ಸ್ವೀಕರಿಸ್ತೀವಿ, ಮಿಲ್ಟ್ರಿ ಹೋಟೆಲ್ ಊಟಾನೂ ಮಾಡ್ತೀವಿ – ಅಶ್ವಥ್‌ ನಾರಾಯಣ್‌