Tag: Varur

  • ಹುಬ್ಬಳ್ಳಿ | ಭೀಕರ ರಸ್ತೆ ಅಪಘಾತ – ಮೂವರು ಮಹಿಳೆಯರು ಸ್ಥಳದಲ್ಲೇ ಸಾವು

    ಹುಬ್ಬಳ್ಳಿ | ಭೀಕರ ರಸ್ತೆ ಅಪಘಾತ – ಮೂವರು ಮಹಿಳೆಯರು ಸ್ಥಳದಲ್ಲೇ ಸಾವು

    ಹುಬ್ಬಳ್ಳಿ: ಕಾರೊಂದು ರಸ್ತೆ ಬದಿಯ ಡಿವೈಡರ್‌ಗೆ ಡಿಕ್ಕಿ ಹೊಡೆತದ ಪರಿಣಾಮ ಕಾರಿನಲ್ಲಿದ್ದ ಮೂವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯ(Hubballi) ನೂಲ್ವಿ ಕ್ರಾಸ್‌ನಲ್ಲಿ ನಡೆದಿದೆ.

    ವರೂರು(Varur) ಗ್ರಾಮದಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಕ್ವಿಡ್ ಕಾರು ವೇಗವಾಗಿ ಬಂದು ರಸ್ತೆ ಬದಿಯ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಇದನ್ನೂ ಓದಿ: ಖಾಲಿ ಸೈಟಿನಲ್ಲಿ ಕಸ ಬೀಳುತ್ತೋ ಇಲ್ವೋ, ಬಿಬಿಎಂಪಿ ಸೆಸ್ ಮಾತ್ರ ಬೀಳುತ್ತೆ: ಆರ್. ಅಶೋಕ್

    ಮೃತರು ಹುಬ್ಬಳ್ಳಿಯ ಲಿಂಗರಾಜ ನಗರದ ನಿವಾಸಿಗಳು ಎಂಬ ಮಾಹಿತಿ ದೊರೆತಿದ್ದು, ಗಾಯಳುಗಳನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಬ್ಯಾಕ್‌ ಟು ಬ್ಯಾಕ್‌ ಹಿಟ್‌ ಸಿನಿಮಾ ಕೊಟ್ಟಿದ್ದ ರಶ್ಮಿಕಾಗೆ ಶುರುವಾಯ್ತಾ ಬ್ಯಾಡ್ ಟೈಮ್?

  • ನ್ಯೂಕ್ಲಿಯರ್ ಶಕ್ತಿಗಿಂತ ಆಧ್ಯಾತ್ಮಿಕ ಶಕ್ತಿ ದೊಡ್ಡದು- ಉಪರಾಷ್ಟ್ರಪತಿ ಜಗದೀಪ್ ಧನಕರ್

    ನ್ಯೂಕ್ಲಿಯರ್ ಶಕ್ತಿಗಿಂತ ಆಧ್ಯಾತ್ಮಿಕ ಶಕ್ತಿ ದೊಡ್ಡದು- ಉಪರಾಷ್ಟ್ರಪತಿ ಜಗದೀಪ್ ಧನಕರ್

    ಹುಬ್ಬಳ್ಳಿ: ನ್ಯೂಕ್ಲಿಯರ್ ಶಕ್ತಿಗಿಂತ ಆಧ್ಯಾತ್ಮಿಕ ಶಕ್ತಿ ದೊಡ್ಡದು ಎಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ (Jagdeep Dhankhar) ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಇದನ್ನೂ ಓದಿ: 500 ರೂ.ಗೆ ಗ್ಯಾಸ್ ಸಿಲಿಂಡರ್, 300 ಯೂನಿಟ್ ವಿದ್ಯುತ್ ಉಚಿತ – ದೆಹಲಿ ಚುನಾವಣೆಗೆ `ಕೈ’ ಗ್ಯಾರಂಟಿ

    ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಮಾತನಾಡಿದ ಅವರು, ಜೈನ ಧರ್ಮ ಮೂರು ವಿಚಾರಗಳನ್ನು ಪ್ರತಿಬಿಂಬಿಸುತ್ತದೆ. ನಂಬಿಕೆ, ಜ್ಞಾನ, ಅಧ್ಯಾತ್ಮದ ಪ್ರತಿರೂಪವೇ ಜೈನ ಧರ್ಮ. ಸುಮೇರು ಪರ್ವತ ಧಾರ್ಮಿಕತೆಯ ಮೇರು ಪರ್ವತ. ಸದ್ಯ ವಿಶ್ವ ಶಾಂತಿಯ ಅಗತ್ಯವಿದೆ. ಮಾನವೀಯ ಜೈನ ಧರ್ಮ ತತ್ವಗಳನ್ನು ಅಳವಡಿಕೊಳ್ಳಬೇಕು. ಮಠ-ಮಂದಿರ ಕೇವಲ ಧಾರ್ಮಿಕ ಕೇಂದ್ರಗಳಲ್ಲ. ಮಠ-ಮಂದಿರಗಳು ಸಾಮಾಜಿಕ ಬದಲಾವಣೆಗೂ ಕಾರಣವಾದ ಕೇಂದ್ರಗಳು. ಸಂಘರ್ಷಗಳ ಕಾರಣದಿಂದ ಜಾಗತಿಕ ಬಿಕ್ಕಟ್ಟುಗಳು ಹೆಚ್ಚಿವೆ. ಮಾತುಕತೆಗೆ ಮಾನ್ಯತೆ ಸಿಗುತ್ತಿಲ್ಲ. ಮಾತಿಗೆ ಬೆಲೆ ಕೊಡುವ ಕೆಲಸ ಆಗಬೇಕಿದೆ. ಶಾಂತಿ ಮಂತ್ರ ಜಪಿಸಬೇಕಿದೆ. ಭಾರತ ಜಾಗತಿಕ ಮಟ್ಟದಲ್ಲಿ ಸವಾಲುಗಳನ್ನು ಎದುರಿಸುತ್ತಿದೆ ಎಂದರು.

    ನಿಜವಾದ ವಿಕಾಸವಾದಲ್ಲಿ ಭಾರತ ವಿಶ್ವಗುರು ಆಗುತ್ತದೆ. ನಮ್ಮ ಸಿರಿವಂತ ಸಂಸ್ಕೃತಿ ಹಲವಾರು ಸಂಕಷ್ಟಗಳನ್ನು ಎದುರಿಸುತ್ತಿದೆ. ನಮ್ಮ ಸಂಸ್ಕೃತಿ ಉಳಿಸಿಕೊಳ್ಳೋದು ನಮ್ಮೆಲ್ಲರ ಕರ್ತವ್ಯ. ಮಾನವೀಯ ಮೌಲ್ಯಗಳು ಶಾಂತಿಗೆ ನಾಂದಿಹಾಡುತ್ತದೆ. ನಮ್ಮ ನಾಗರಿಕತೆಗೆ 5 ಸಾವಿರ ವರ್ಷಗಳ ಇತಿಹಾಸವಿದೆ. ಅತ್ಯುನ್ನತ ಆಧ್ಯಾತ್ಮಿಕ ಇತಿಹಾಸವಿದೆ. ಭಾರತದ ಸಂಪ್ರದಾಯದ ಉಳಿವಿನ ಅಗತ್ಯವಿದೆ. ಗುಣಧರನಂದಿ ಮಾರ್ಗದರ್ಶನದಲ್ಲಿ ವರೂರು ಕ್ಷೇತ್ರ ಬೆಳೆದಿದೆ. ಸಮಾನತೆ, ಸಹಬಾಳ್ವೆಗೆ ಇಂತಹ ಕ್ಷೇತ್ರಗಳು ವೇದಿಕೆಗಳಾಗಿವೆ. ಈ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿರೋದಕ್ಕೆ ಖುಷಿಯಾಗ್ತಿದೆ ಎಂದು ತಿಳಿಸಿದರು.ಇದನ್ನೂ ಓದಿ: ಯಕ್ಷಗಾನದ ಟೆಂಟ್‌ಗೆ ನುಗ್ಗಿದ ಪೊಲೀಸರು – ಈಗ ಕಾಂಗ್ರೆಸ್ Vs ಬಿಜೆಪಿ ಜಟಾಪಟಿ