Tag: Vasishtha simha

  • ಪ್ರೇಮಿಗಳ ದಿನದಂದು ‘ಪ್ರೇಮಪತ್ರದ ಆಫೀಸು’ ತೆರೆದ ಸಿಂಹಪ್ರಿಯಾ

    ಪ್ರೇಮಿಗಳ ದಿನದಂದು ‘ಪ್ರೇಮಪತ್ರದ ಆಫೀಸು’ ತೆರೆದ ಸಿಂಹಪ್ರಿಯಾ

    ನ್ನಡದ ಹೆಸರಾಂತ ನಟ ವಸಿಷ್ಠ ಸಿಂಹ (Vasishtha Simha) ಮತ್ತು ನಟಿ ಹರಿಪ್ರಿಯಾ (Haripriya) ಈ ಬಾರಿಯ ಪ್ರೇಮಿಗಳ ಹಬ್ಬವನ್ನು (Valentine’s Day) ಆಚರಿಸಲು ಬೆಂಗಳೂರು ತೊರೆದಿದ್ದಾರೆ. ಪ್ರಕೃತಿಯ ಮಡಿಲಿಲ್ಲದ್ದುಕೊಂಡು ಅಪರೂಪದ ಕೆಲಸಕ್ಕೆ ಸಾಕ್ಷಿಯಾಗಿದ್ದಾರೆ. ಸ್ವತಃ ಸಾಹಿತ್ಯ ಪ್ರೇಮಿಯೂ ಆಗಿರುವ ವಸಿಷ್ಠ ಪ್ರೇಮಿಗಳ ದಿನದಂದು ಖ್ಯಾತ ಲೇಖಕ ಶಿವಕುಮಾರ ಮಾವಲಿ (Shivakumar Mavali) ಬರೆದ ‘ಪ್ರೇಮಪತ್ರದ ಆಫೀಸು ಮತ್ತು ಅವಳು’ ಪುಸ್ತಕವನ್ನು (Book) ಪತ್ನಿ ಹರಿಪ್ರಿಯಾ ಜೊತೆಯಾಗಿ ಬಿಡುಗಡೆ ಮಾಡಿದ್ದಾರೆ.

    ವರ್ಷಗಳ ಕಾಲ ಪ್ರೇಮಿಗಳಾಗಿದ್ದು ಇತ್ತೀಚಿಗಷ್ಟೆ ದಂಪತಿಗಳಾಗಿರುವ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ವ್ಯಾಂಲಂಟೈನ್ ಡೇ ಅನ್ನು ಈ ಬಾರಿ ವಿಶೇಷವಾಗಿ ಮತ್ತು ಅರ್ಥಪೂರ್ಣವಾಗಿ ಸೆಲಬ್ರೇಟ್ ಮಾಡಿಕೊಂಡಿದ್ದೇವೆ ಎಂದಿದ್ದಾರೆ. ಪ್ರೇಮಿಗಳ ದಿನಾಚರಣೆಯಂದು ಒಂದು ಪ್ರೇಮಕತೆಗಳ ಪುಸ್ತಕವನ್ನು ಲೋಕಾರ್ಪಣೆ ಮಾಡುವುದರ ಮೂಲಕ ತಮ್ಮ ಪ್ರೇಮದ ದಿನಗಳನ್ನೂ ಅವರು ಮೆಲುಕು ಹಾಕಿದ್ದಾರೆ.

    ಮಾವಲಿ ಪಬ್ಲಿಕೇಶನ್ ನ ಮೊದಲ ಪುಸ್ತಕ ಇದಾಗಿದ್ದು, ‘ಪ್ರೇಮಪತ್ರದ ಆಫೀಸು ಮತ್ತು ಅವಳು’ ಎಂಬ ವಿಶಿಷ್ಟ ಶೀರ್ಷಿಕೆಯನ್ನು ಹೊಂದಿದೆ. ಅಲ್ಲದೇ, ಇದೊಂದು ಕಥಾ ಸಂಕಲನವಾಗಿದೆ. ಪುಸ್ತಕ ಬಿಡುಗಡೆ ಸಂದರ್ಭದಲ್ಲಿ ಲೇಖಕ ಶಿವಕುಮಾರ ಮಾವಲಿ , ಪ್ರಕಾಶಕಿ ಪ್ರೇಮ ಶಿವಕುಮಾರ ಜೊತೆಗೂಡಿ ಇಬ್ಬರೂ ಪ್ರೇಮ ಪುಸ್ತಕವೊಂದನ್ನು ಬಿಡುಗಡೆ ಮಾಡುವ ಮೂಲಕ ತಮ್ಮ ವ್ಯಾಂಲಂಟೈನ್ ದಿನಗಳ ನೆನಪು ಮಾಡಿಕೊಂಡಿದ್ದಾರೆ. ಪ್ರೇಮಪತ್ರದ ಆಫೀಸು ಎಂಬ ಶೀರ್ಷಿಕೆಯೇ ಆಸಕ್ತಿ ಹುಟ್ಟಿಸುವಂತಿದೆ, ನಾವೂ ಪ್ರೇಮಪತ್ರಗಳನ್ನ ಬರೆದುಕೊಳ್ತಿದ್ವಿ ಎಂದು ನೆನಪು ಮಾಡಿಕೊಂಡು, ಪುಸ್ತಕದಲ್ಲಿದ್ದ ಎರಡು ಪತ್ರಗಳ ಸಾಲುಗಳನ್ನು ಪರಸ್ಪರರು ಪತ್ರದ ರೀತಿಯಲ್ಲಿ ಓದಿಕೊಂಡರು.

    ಹರಿಪ್ರಿಯ, ”ಸಾವಿರ ಜನರ ಮಧ್ಯೆ ಇದ್ದರೂ ನಾನು ಏಕಾಂಗಿಯೇ, ನಿನ್ನ ನೆನಪಿನ ಭಾವವಿರದಿದ್ದರೆ” ಎಂದು ಹೇಳಿದರೆ, ವಸಿಷ್ಠ ಸಿಂಹ , ” ತನಗಾಗಿ ಏನನ್ನೂ ಮಾಡಿಕೊಳ್ಳದ ನೀರಿನಂತೆ ನಾನು ನಿನ್ನನ್ನು ಪ್ರೀತಿಸುತ್ತೇನೆ ” ಎಂದು ಹರಿಪ್ರಿಯಾರ ಮುಖದಲ್ಲಿ ನಗು ಮೂಡಿಸಿದರು. ಮಾವಲಿ ಪಬ್ಲಿಕೇಶನ್ ಇಂದ ಪ್ರಕಟವಾಗುತ್ತಿರುವ ಈ ಕಥಾ ಸಂಕಲನವನ್ನು ಹೆಚ್ಚು ಜನ ಓದಲಿ ಮತ್ತು ಇಂಥ ಅನೇಕ ಪುಸ್ತಕಗಳು ಅವರಿಂದ ಮೂಡಿ ಬರಲಿ ಎಂದು ಆಶಿಸಿದರು.

    ‘ಇಷ್ಟು ವರ್ಷಗಳಿಗಿಂತ ಈ ಬಾರಿ ನಮ್ಮ ವ್ಯಾಲಂಟೈನ್ ಡೇ ವಿಶೇಷವಾಗಿ ಆಯಿತು, ಪ್ರೇಮಪುಸ್ತಕವೊಂದು ನಮ್ಮಿಂದ ಬಿಡುಗಡೆ ಆಗುವಂತಾಯಿತು’ ಎಂದು ಹರಿಪ್ರಿಯ ಹೇಳಿದರು. ಇದನ್ನೂ ಓದಿ: ಬೆಡ್‌ರೂಮ್‌ನಿಂದಲೇ ವ್ಯಾಲೆಂಟೈನ್ ಸೀಕ್ರೆಟ್ ರಿವೀಲ್ ಮಾಡಿದ ರಶ್ಮಿಕಾ ಮಂದಣ್ಣ

    ‘ದೇವರು ಅರೆಸ್ಟ್ ಆದ’ ಮತ್ತು ‘ಟೈಪಿಸ್ಟ್ ತಿರಸ್ಕರಿಸಿದ ಕತೆ’ ಎಂಬ ಕತಾ ಸಂಕಲನಗಳ ಮೂಲಕ ಹೊಸ ರೀತಿಯ ಕತೆಗಳನ್ನು ಪರಿಚಯಿಸಿದ ಶಿವಕುಮಾರ ಮಾವಲಿಯವರ ‘ಸುಪಾರಿ ಕೊಲೆ’ ನಾಟಕ ಒಂದು ಪತ್ತೇದಾರಿ ಮಾದರಿಯ ನಾಟಕವಾಗಿದ್ದರೆ, ಇತ್ತೀಚಿಗೆ ಪ್ರದರ್ಶನಗೊಂಡ ಅವರ ‘ಒಂದು ಕಾನೂನಾತ್ಮಕ ಕೊಲೆ’ ನಾಟಕವು, ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ಸ್ಥಿತಿಗತಿಗಳನ್ನು ಬಳಸಿಕೊಂಡು ಸಶಕ್ತವಾಗಿ ರಾಜಕೀಯ ವಿಡಂಬನೆ ಮಾಡುವ ನಾಟಕವಾಗಿದೆ. ಹಾಗೆಯೇ ರಾಜೀವ್ ಗಾಂಧಿ ಹತ್ಯೆಯ ಸಮಯದಲ್ಲಿ ಬೆಂಗಳೂರಿನ ವ್ಯಕ್ತಿಯೊಬ್ಬರ ಬದುಕಲ್ಲಿ ನಡದ ಘಟನೆಯಾಧಾರಿತ ಕಾದಂಬರಿ ‘LTTE Murthy Calling’ ಇತ್ತೀಚಿಗಷ್ಟೆ ತಮಿಳಿಗೆ ಅನುವಾದಗೊಂಡಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಿಂಹಪ್ರಿಯಾ ಮದುವೆಗೆ ‘ಯದಾ ಯದಾ ಹಿ’ ಮೋಷನ್ ಪೋಸ್ಟರ್ ಗಿಫ್ಟ್

    ಸಿಂಹಪ್ರಿಯಾ ಮದುವೆಗೆ ‘ಯದಾ ಯದಾ ಹಿ’ ಮೋಷನ್ ಪೋಸ್ಟರ್ ಗಿಫ್ಟ್

    ಸಿಷ್ಠ ಸಿಂಹ (Vasishtha Simha), ಹರಿಪ್ರಿಯ (Haripriya) ಹಾಗೂ ದಿಗಂತ್ ಮಂಚಾಲೆ (Digant) ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿರುವ,  ಮರ್ಡರ್ ಮಿಸ್ಟ್ರಿ ಸುತ್ತ ನಡೆಯೋ  ಕಥಾಹಂದರ ಒಳಗೊಂಡ   ‘ಯದಾ ಯದಾ ಹಿ’ ಚಿತ್ರವು ಸದ್ಯದಲ್ಲೇ ಬಿಡುಗಡೆಗೆ ಸಿದ್ದವಾಗಿದೆ. ಜ.೨೬ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟ ವಸಿಷ್ಠ, ಹರಿಪ್ರಿಯ  ಜೋಡಿಗೆ ಮದುವೆ (Marriage) ಗಿಫ್ಟ್ ಆಗಿ ಈ  ಚಿತ್ರದ ವಿಶೇಷ ಮೋಷನ್ (Motion Poster) ಪೋಸ್ಟರ್ ನ್ನು ಚಿತ್ರತಂಡ ಬಿಡುಗಡೆ ಮಾಡಿದೆ.

    ತೆಲುಗಿನ ಎವುರು ಚಿತ್ರದ ರೀಮೇಕ್ ಇದಾಗಿದ್ದು, ತೆಲುಗಿನಲ್ಲಿ ೨ ಚಿತ್ರ ನಿರ್ದೇಶಿಸಿರುವ ಅಶೋಕ್‌ ತೇಜ  ಈ ಸಿನಿಮಾ  ಮೂಲಕ ನಿರ್ದೇಶಕರಾಗಿ ಕನ್ನಡಕ್ಕೆ ಆಗಮಿಸುತ್ತಿದ್ದಾರೆ. ಹರಿಪ್ರಿಯಾ, ದಿಗಂತ್ ಹಾಗೂ ವಸಿಷ್ಠಸಿಂಹ ಮೂರು ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರದಲ್ಲಿ ಒಂದು ಮರ್ಡರ್ ಮಿಸ್ಟರಿ ಸುತ್ತ ನಡೆಯುವ ತನಿಖೆಯನ್ನು ರೋಚಕವಾಗಿ ಹೇಳಲಾಗಿದೆ. ತೆಲುಗಿನಲ್ಲಿ ನಟಿ ರೆಜಿನಾ ನಿರ್ವಹಿಸಿದ್ದ  ಪಾತ್ರವನ್ನು ಹರಿಪ್ರಿಯಾ ಹಾಗೂ ಅದ್ವಿಶೇಷ್ ಪಾತ್ರವನ್ನು ದಿಗಂತ್ ಮಾಡಿದ್ದಾರೆ. ಈ ಚಿತ್ರಕ್ಕೆ ರೈಸ್ ಅಂಡ್ ಡಾಲ್ಸ್ ಕ್ರಿಯೇಶನ್ಸ್ ಮೂಲಕ ಹೈದ್ರಾಬಾದ್‌ನ ರಾಜೇಶ್ ಅಗರವಾಲ್  ಬಂಡವಾಳ ಹೂಡಿದ್ದಾರೆ. ಇದನ್ನೂ ಓದಿ: ವಸಿಷ್ಠ ಸಿಂಹ- ಹರಿಪ್ರಿಯಾ ಮದುವೆಗೆ ಸಾಕ್ಷಿಯಾದ ಸೆಲೆಬ್ರಿಟಿಗಳು

    ಇಂಗ್ಲೀಷ್ ಭಾಷೆಯಲ್ಲಿ ದಿ ಇನ್ವಿಸಿಬಲ್ ಗೆಸ್ಟ್ ಹೆಸರಿನಲ್ಲಿ  ತಯಾರಾಗಿದ್ದ ಈ ಚಿತ್ರ ಹಿಂದಿ  ಭಾಷೆಯಲ್ಲೂ ನಿರ್ಮಾಣವಾಗಿತ್ತು, ಕೊಲೆಗಾರನನ್ನು ಪತ್ತೆ ಹಚ್ಚುವುದೇ ಚಿತ್ರದ ಕುತೂಹಲಕರ ಜರ್ನಿ ಆಗಿದೆ.   ಚರಣ್‌ ಪಕಡ ಅವರ  ಸಂಗೀತ ನಿರ್ದೇಶನ,  ಯೋಗಿ ಅವರ ಕ್ಯಾಮೆರಾವರ್ಕ್, ಶ್ರೀಕಾಂತ್ ಅವರ ಸಂಕಲನ ಈ ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಾಳೆ ಮೈಸೂರಿನಲ್ಲಿ ನಟಿ ಹರಿಪ್ರಿಯಾ- ನಟ ವಸಿಷ್ಠ ಸಿಂಹ ಮದುವೆ

    ನಾಳೆ ಮೈಸೂರಿನಲ್ಲಿ ನಟಿ ಹರಿಪ್ರಿಯಾ- ನಟ ವಸಿಷ್ಠ ಸಿಂಹ ಮದುವೆ

    ನ್ನಡ ಸಿನಿಮಾ ರಂಗದ ಹೆಸರಾಂತ ನಟಿ ಹರಿಪ್ರಿಯಾ (Haripriya) ಮತ್ತು ನಟ ವಸಿಷ್ಠ ಸಿಂಹ (Vasishtha Simha) ಮದುವೆ (marriage) ನಾಳೆ (ಜನವರಿ 26) ಮೈಸೂರಿನ (Mysore) ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ನಡೆಯಲಿದೆ. ಮದುವೆಗಾಗಿ ಈಗಾಗಲೇ ಸಿದ್ಧತೆ ನಡೆದಿದ್ದು, ಎರಡೂ ಕುಟುಂಬದ ಸದಸ್ಯರು ಈಗಾಗಲೇ ಆಶ್ರಮದಲ್ಲಿ ಬೀಡುಬಿಟ್ಟಿದ್ದಾರೆ. ನಾಳೆ ನಡೆಯಲಿರುವ ಮದುವೆ ಮುಹೂರ್ತದಲ್ಲಿ ಡಾಲಿ ಧನಂಜಯ್, ಪ್ರಮೋದ್ ಶೆಟ್ಟಿ, ರಿಷಬ್ ಶೆಟ್ಟಿ, ಸತೀಶ್ ನೀನಾಸಂ ಸೇರಿದಂತೆ ಅನೇಕ ಕಲಾವಿದರು ಭಾಗಿಯಾಗಲಿದ್ದಾರೆ.

    ಸಾಂಪ್ರದಾಯಿಕವಾಗಿ ಈ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದು, ತಮ್ಮ ನೆಚ್ಚಿನ ಆಶ್ರಮದಲ್ಲೇ ಮದುವೆಯಾಗಬೇಕು ಎನ್ನುವುದು ಅವರ ಕನಸಾಗಿತ್ತು. ಅಲ್ಲದೇ, ವಸಿಷ್ಠ ಮೂಲತಃ ಮೈಸೂರಿನವರೇ ಆಗಿರುವುದರಿಂದ ಸಚ್ಚಿದಾನಂದ ಆಶ್ರಮವನ್ನು ಆಯ್ಕೆ ಮಾಡಿಕೊಂಡಿದೆ ಜೋಡಿ. ನಾಳೆ ಬೆಳಗ್ಗೆ ಅದ್ಧೂರಿಯಾಗಿಯೇ ಈ ಜೋಡಿ ಹೊಸ ಜೀವನಕ್ಕೆ ಕಾಲಿಡಲಿದೆ. ಇದನ್ನೂ ಓದಿ: ಕೊಡವ ಶೈಲಿಯಲ್ಲಿ ಮಿಂಚಿದ ನಟಿ ಶುಭ್ರ ಅಯ್ಯಪ್ಪ- ವಿಶಾಲ್ ಜೋಡಿ

    ಕುಟುಂಬಸ್ಥರು ಮತ್ತು ಕೆಲವೇ ಆಪ್ತರಿಗೆ ನಾಳೆ ಆಹ್ವಾನ ನೀಡಿದ್ದು, ಜನವರಿ 28ರಂದು ಬೆಂಗಳೂರಿನಲ್ಲಿ ಆರತಕ್ಷತೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇಂದು ಉದ್ಯಮದ ಬಹುತೇಕ ಗಣ್ಯರಿಗೆ ಆಹ್ವಾನ ಹೋಗಿದೆ. ಅಲ್ಲದೇ, ತಮಿಳು ಮತ್ತು ತೆಲುಗು ಚಿತ್ರರಂಗದಿಂದಲೂ ಕೆಲ ಕಲಾವಿದರು ಮತ್ತು ತಂತ್ರಜ್ಞರು ಆಗಮಿಸಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮದುವೆಗೂ ಮುನ್ನ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ವಸಿಷ್ಠ ಸಿಂಹ

    ಮದುವೆಗೂ ಮುನ್ನ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ವಸಿಷ್ಠ ಸಿಂಹ

    ರು ದಿನಗಳು ಕಳೆದರೆ ನಟ ವಸಿಷ್ಠ ಸಿಂಹ (Vasishtha Simha) ಮತ್ತು ನಟಿ ಹರಿಪ್ರಿಯಾ (Haripriya) ಹೊಸ ಜೀವನಕ್ಕೆ ಕಾಲಿಡುತ್ತಿದ್ದಾರೆ. ನೆಚ್ಚಿನ ನಟ, ನಟಿಯ ಮದುವೆಯಲ್ಲಿ ಭಾಗಿಯಾಗಲು ಇಬ್ಬರ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಅದಕ್ಕೂ ಮುನ್ನ ಅಭಿಮಾನಿಗಳಿಗೆ ವಸಿಷ್ಠ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಇದೇ ಮೊದಲ ಬಾರಿಗೆ ಅವರು ಕಾಲಿವುಡ್ ಪ್ರವೇಶ ಮಾಡುತ್ತಿದ್ದಾರೆ. ಈ ಮೂಲಕ ಮೂರು ಭಾಷೆಗಳಲ್ಲಿ ನಟಿಸಿದ ಕಲಾವಿದ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗುತ್ತಿದ್ದಾರೆ.

    ತಮಿಳಿನ ಖ್ಯಾತ ನಟ  ಪ್ರಭುದೇವ (Prabhudev) ನಟನೆಯ 60ನೇ ಸಿನಿಮಾದಲ್ಲಿ ವಸಿಷ್ಠ ಪ್ರಮುಖ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳಲಿದ್ದು, ಈ ಸಿನಿಮಾ ಮೂಲಕ ತಮಿಳು ಚಿತ್ರೋದ್ಯಮಕ್ಕೆ ಅವರು ಅಧಿಕೃತವಾಗಿ ಕಾಲಿಡುತ್ತಿದ್ದಾರೆ. ಕನ್ನಡದ ಮತ್ತೋರ್ವ ಕಲಾವಿದ ಕಾಲಿವುಡ್ ಪ್ರವೇಶಿಸಿದಂತಾಗಿದೆ. ಈ ಸಿನಿಮಾ ‘ವೂಲ್ಫ್’ ಎಂದು ಹೆಸರಿಡಲಾಗಿದ್ದು, ಟೈಟಲ್ ಕೂಡ ನಿನ್ನೆಯಷ್ಟೇ ರಿವಿಲ್ ಆಗಿದೆ. ಇದನ್ನೂ ಓದಿ: ದುಬೈಗೆ ಹಾರಿದ ರಿಷಬ್ ಶೆಟ್ಟಿ ಫ್ಯಾಮಿಲಿ: ಶೆಟ್ರ ಅಡ್ವೆಂಚರ್ ಹೇಗಿದೆ ಗೊತ್ತಾ?

    ಇದೊಂದು ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಸಿನಿಮಾವಾಗಿದ್ದು, ವಿನೂ ವೆಂಕಟೇಶ್ ಈ ಚಿತ್ರದ ನಿರ್ದೇಶಕರು. ವಿನೂ ಈ ಹಿಂದೆ ಲಕ್ಷ್ಮೀ ರೈ ನಟನೆಯ ಸಿಂಡರೆಲ್ಲಾ ಸಿನಿಮಾವನ್ನು ನಿರ್ದೇಶನ ಮಾಡಿದ್ದರು. ಇದು ಅವರ ಚೊಚ್ಚಲ ಸಿನಿಮಾ ಕೂಡ ಆಗಿತ್ತು. ಮತ್ತೊಂದು ಅಚ್ಚರಿ ಸಂಗತಿ ಎಂದರೆ, ವೂಲ್ಫ್ ಸಿನಿಮಾ ಕನ್ನಡವೂ ಸೇರಿದಂತೆ ಐದು ಭಾಷೆಗಳಲ್ಲಿ ನಿರ್ಮಾಣವಾಗಿದೆ.

    ಈಗಾಗಲೇ ಸಿನಿಮಾದ ಬಹುತೇಕ ಚಿತ್ರೀಕರಣ ಕೂಡ ಮುಗಿದಿದ್ದು, ಬೆಂಗಳೂರು, ಅಂಡಮಾನ್ ಮತ್ತು ನಿಕೋಬಾರ್ ಸೇರಿದಂತೆ ಹಲವಾರು ಕಡೆ ಚಿತ್ರೀಕರಣ ಮಾಡಲಾಗಿದೆ. ಅಂದುಕೊಂಡಂತೆ ಆಗಿದ್ದರೆ ಮಾರ್ಚ್ ವೇಳೆಯಲ್ಲಿ ಈ ಸಿನಿಮಾ ರಿಲೀಸ್ ಆಗಲಿದೆ. ಲಕ್ಷ್ಮೀ ರೈ, ಅಂಜು ಕುರಿಯನ್ ಸೇರಿದಂತೆ ಹೆಸರಾಂತ ತಾರಾಬಳಗವೇ ಸಿನಿಮಾದಲ್ಲಿ ಇದೆ. ಇದೇ ಮೊದಲ ಬಾರಿಗೆ ಪ್ರಭುದೇವ್ ಜೊತೆ ವಸಿಷ್ಠ ಸಿಂಹ ತೆರೆ ಹಂಚಿಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಗೆಳೆಯ ವಸಿಷ್ಠ ಸಿಂಹಗೆ ವಿಭಿನ್ನವಾಗಿ ವಿಶ್ ಮಾಡಿದ ಡಾಲಿ ಧನಂಜಯ್

    ಗೆಳೆಯ ವಸಿಷ್ಠ ಸಿಂಹಗೆ ವಿಭಿನ್ನವಾಗಿ ವಿಶ್ ಮಾಡಿದ ಡಾಲಿ ಧನಂಜಯ್

    ಮ್ಮ ಕುಚಿಕು ಗೆಳೆಯ ವಸಿಷ್ಠ ಸಿಂಹ ಮದುವೆಗೆ ವಿಶೇಷ ರೀತಿಯಲ್ಲಿ ವಿಶ್ ಮಾಡಿದ್ದಾರೆ ಡಾಲಿ ಧನಂಜಯ್. ಮದುವೆ ಆಮಂತ್ರಣ ಕೊಡುವುದಕ್ಕಾಗಿ ತಮ್ಮ ಮನೆಗೆ ಬಂದ ವಸಿಷ್ಠ ಮತ್ತು ಹರಿಪ್ರಿಯಾಗೆ ಪ್ರೀತಿಯಿಂದಲೇ ಸ್ವಾಗತಿಸಿ , ‘ಒಬ್ಬನೆ ಬರ್ತಿದ್ದ, ಇವತ್ತು ಇಬ್ಬರು ಬಂದಿದ್ರು ಮದುವೆಗೆ ಕರಿಯೋದಕ್ಕೆ. ಮುದ್ದಾದ ಜೋಡಿ. ಇಬ್ಬರೂ ಸದಾ ಖುಷಿಯಿಂದ ಇರಲಿ’ ಎಂದು ಹಾರೈಸಿದ್ದಾರೆ.

    ಡಾಲಿ ಮತ್ತು ವಸಿಷ್ಠ ಸಿಂಹ ಸದಾ ಅಂಟಿಕೊಂಡೇ ಇರುತ್ತಿದ್ದವರು. ಸಿನಿಮಾದಾಚೆಯೂ ಒಳ್ಳೆಯ ಬಾಂಧವ್ಯ ಹೊಂದಿದ್ದರು. ಆದರೂ, ವಸಿಷ್ಠ ಮದುವೆ ಆಗುವ ವಿಚಾರ ಡಾಲಿಗೆ ಗೊತ್ತಿರಲಿಲ್ಲ. ಹರಿಪ್ರಿಯಾ ಜೊತೆ ಗೆಳೆಯ ನಿಶ್ಚಿತಾರ್ಥ ಮಾಡಿಕೊಳ್ಳುತ್ತಿದ್ದಾನೆ ಎನ್ನುವ ಸಣ್ಣ ಸುಳಿವೂ ಸಿಕ್ಕಿರಲಿಲ್ಲ. ಆ ರೀತಿಯಲ್ಲಿ ಸಿಂಹ ಗುಟ್ಟನ್ನು ಕಾಪಾಡಿಕೊಂಡು ಬಂದಿದ್ದರು. ಹರಿಪ್ರಿಯಾ ಜೊತೆ ಗೆಳೆಯನಂತೆ ಇದ್ದಾನೆ ಎನ್ನುವುದು ಗೊತ್ತಿತ್ತು. ಆದರೆ, ಇಬ್ಬರೂ ಮದುವೆ ಆಗುತ್ತಾರೆ ಎಂದು ಗೊತ್ತಿರಲಿಲ್ಲ ಎಂದೂ ನುಡಿದಿದ್ದರು.

    ನಿನ್ನೆಯಷ್ಟೇ ವಸಿಷ್ಠ ಸಿಂಹ ತಮ್ಮ ಲವ್ ಕಹಾನಿಯನ್ನು ಮಾಧ್ಯಮಗಳ ಮುಂದೆ ಬಿಚ್ಚಿಟ್ಟಿದ್ದಾರೆ. ಹರಿಪ್ರಿಯಾ ಅವರು ಪರಿಚಯ ಆದ ದಿನದಿಂದ ಎಂಗೇಜ್ ಮೆಂಟ್ ವರೆಗಿನ ವಿಷಯವನ್ನು ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಗೆಳೆಯ ಡಾಲಿಗೂ ಒಂದು ಕಿವಿಮಾತು ಹೇಳಿದ್ದು, ಆದಷ್ಟು ಬೇಗ ನೀನು ಮದುವೆ ಆಗುವ ಎಂದು ಸಲಹೆಯನ್ನು ನೀಡಿದ್ದಾರೆ. ಹೊಸ ಜೀವನಕ್ಕೆ ನೀನೂ ಕಾಲಿಟ್ಟು, ಖುಷಿಯಿಂದ ಇರು ಎಂದು ಹಾರೈಸಿದ್ದಾರೆ.

    ಅಂದಹಾಗೆ ಈ ಜೋಡಿ ಮೈಸೂರಿನ ಆಶ್ರಮವೊಂದರಲ್ಲಿ ಜನವರಿ 26 ರಂದು ಈ ಜೋಡಿ ಹೊಸ ಜೀವನಕ್ಕೆ ಕಾಲಿಡುತ್ತಿದ್ದು, ಜನವರಿ 28 ರಂದು ಬೆಂಗಳೂರಿನಲ್ಲಿ ಆರತಕ್ಷತೆ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದಾರೆ. ಮದುವೆಗೆ ಆಪ್ತರು ಮತ್ತು ಕುಟುಂಬದವರು ಮಾತ್ರ ಭಾಗಿ ಆಗುತ್ತಿದ್ದು, ಆರತಕ್ಷತೆ ಸಿನಿಮಾ ರಂಗದ ಕಲಾವಿದರು, ತಂತ್ರಜ್ಞರು ಮತ್ತು ನಿರ್ದೇಶಕರು ಹಾಗೂ ಗಣ್ಯರಿಗೆ ಆಹ್ವಾನ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹನಿಮೂನ್‌ಗೆ ಎಲ್ಲಿಗೆ ಹೋಗ್ತೀವಿ ಅಂತ ಹೇಳ್ಬೇಕಾ?

    ಹನಿಮೂನ್‌ಗೆ ಎಲ್ಲಿಗೆ ಹೋಗ್ತೀವಿ ಅಂತ ಹೇಳ್ಬೇಕಾ?

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹರಿಪ್ರಿಯಾನ ಮೊದಲು ನೋಡಿದಾಗ ನಾನು ಸ್ಕೂಲ್‌ ಹುಡುಗ..!

    ಹರಿಪ್ರಿಯಾನ ಮೊದಲು ನೋಡಿದಾಗ ನಾನು ಸ್ಕೂಲ್‌ ಹುಡುಗ..!

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನಾಯಿ ಮರಿ ಕೊಟ್ಟು ಪಟಾಯಿಸಿಕೊಂಡೆ

    ನಾಯಿ ಮರಿ ಕೊಟ್ಟು ಪಟಾಯಿಸಿಕೊಂಡೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜನವರಿ 26ಕ್ಕೆ ವಸಿಷ್ಠ ಸಿಂಹ-ಹರಿಪ್ರಿಯಾ ಮದುವೆ

    ಜನವರಿ 26ಕ್ಕೆ ವಸಿಷ್ಠ ಸಿಂಹ-ಹರಿಪ್ರಿಯಾ ಮದುವೆ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಸಿಂಹಪ್ರಿಯ ಮ್ಯಾರೇಜ್: ಜನವರಿ 26ಕ್ಕೆ ಮದುವೆ, 28ಕ್ಕೆ ಆರತಕ್ಷತೆ

    ಸಿಂಹಪ್ರಿಯ ಮ್ಯಾರೇಜ್: ಜನವರಿ 26ಕ್ಕೆ ಮದುವೆ, 28ಕ್ಕೆ ಆರತಕ್ಷತೆ

    ಸ್ಯಾಂಡಲ್ ವುಡ್ ಜನಪ್ರಿಯ ನಟ ವಸಿಷ್ಠ ಸಿಂಹ (Vasishtha Simha) ಹಾಗೂ ಜನಪ್ರಿಯ ನಟಿ ಹರಿಪ್ರಿಯಾ (Haripriya) ಸದ್ದಿಲ್ಲದೇ ಎಂಗೇಜ್ ಆಗಿ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದ್ದರು. ನಂತರ ಮಾಧ್ಯಮಗಳ ಜೊತೆ ಮಾತನಾಡಿ, ತಮ್ಮ ಮೊದಲ ಭೇಟಿ, ಗೆಳೆತನ, ಪ್ರೇಮ ಹೀಗೆ ಅನೇಕ ವಿಷಯಗಳನ್ನು ಮಾತನಾಡಿದ್ದರು. ಇದೀಗ ಕುಟುಂಬದ ನಿಶ್ಚಿಯದಂತೆ ಮೈಸೂರಿನಲ್ಲಿ ಸರಳವಾಗಿ ಮದುವೆ (Marriage) ಆಗುತ್ತಿದ್ದಾರೆ.

    ಮೈಸೂರಿನ ಆಶ್ರಮವೊಂದರಲ್ಲಿ ಜನವರಿ 26 ರಂದು ಈ ಜೋಡಿ ಹೊಸ ಜೀವನಕ್ಕೆ ಕಾಲಿಡುತ್ತಿದ್ದು, ಜನವರಿ 28 ರಂದು ಬೆಂಗಳೂರಿನಲ್ಲಿ ಆರತಕ್ಷತೆ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದಾರೆ. ಮದುವೆಗೆ ಆಪ್ತರು ಮತ್ತು ಕುಟುಂಬದವರು ಮಾತ್ರ ಭಾಗಿ ಆಗುತ್ತಿದ್ದು, ಆರತಕ್ಷತೆ ಸಿನಿಮಾ ರಂಗದ ಕಲಾವಿದರು, ತಂತ್ರಜ್ಞರು ಮತ್ತು ನಿರ್ದೇಶಕರು ಹಾಗೂ ಗಣ್ಯರಿಗೆ ಆಹ್ವಾನ ನೀಡಿದ್ದಾರೆ. ಇದನ್ನೂ ಓದಿ:ಅಬ್ಬಬ್ಬಾ ಎನಿಸುವಷ್ಟಿದೆ ಸಮಂತಾ ಧರಿಸಿದ್ದ ಈ ಸೀರೆಯ ಬೆಲೆ?

    ಹರಿಪ್ರಿಯಾಗೆ ಮೂಗು ಚುಚ್ಚಿಸುವುದರಿಂದ ಹಿಡಿದು, ವಿದೇಶದಲ್ಲಿ ಶಾಪಿಂಗ್ ಮಾಡುವತನಕ ಒಟ್ಟಿಗೆ ಈ ಜೋಡಿ ಓಡಾಡಿದೆ. ಒಟ್ಟಿಗೆ ಸಿನಿಮಾ ಮಾಡಿದೆ. ಆದರೆ, ಇಬ್ಬರೂ ಪ್ರೀತಿಸುತ್ತಿರುವ ವಿಚಾರವನ್ನೂ ಅವರು ಯಾವತ್ತೂ ಹೇಳಿಕೊಂಡಿಲ್ಲ ಮತ್ತು ಅನುಮಾನ ಪಡುವಂತೆ ನಡೆದುಕೊಂಡಿಲ್ಲ. ಸಡನ್ನಾಗಿ ಅವರು ಎಂಗೇಜ್ ಮೆಂಟ್ ಫೋಟೋ ಆಚೆ ಬರುತ್ತಿದ್ದಂತೆಯೇ ಎಲ್ಲರಿಗೂ ಅಚ್ಚರಿ ಕಾದಿತ್ತು. ಸಿಂಹ ಅವರ ಕುಚಿಕು ಗೆಳೆಯ ಡಾಲಿ ಧನಂಜಯ್ ಕೂಡ ಅಚ್ಚರಿ ವ್ಯಕ್ತ ಪಡಿಸಿದ್ದರು.

    ಹರಿಪ್ರಿಯಾ ನಾಯಕಿಯಾಗಿ ಒಂದು ದಶಕದಿಂದ ಸಿನಿಮಾ ರಂಗದಲ್ಲಿ ಇದ್ದಾರೆ. ಕನ್ನಡವೂ ಸೇರಿದಂತೆ ತಮಿಳು ಮತ್ತು ತೆಲುಗಿನಲ್ಲಿ ಅವರು ನಾಯಕಿಯಾಗಿ ಪಾತ್ರ ಮಾಡಿದ್ದಾರೆ. ವಸಿಷ್ಠ ಸಿಂಹ ರಂಗಭೂಮಿಯಿಂದ ಬಂದವರು. ಖಳನಟನಾಗಿ ಸಿನಿಮಾ ರಂಗದಲ್ಲಿ ಗುರುತಿಸಿಕೊಂಡು, ಇದೀಗ ನಾಯಕರಾಗಿ ಸಾಕಷ್ಟು ಸಿನಿಮಾಗಳನ್ನು ಮಾಡುತ್ತಿದ್ದಾರೆ. ತಮಿಳು ಹಾಗೂ ತೆಲುಗಿನಲ್ಲೂ ಇವರು ನಟಿಸಿದ್ದಾರೆ. ಈ ಸೆಲೆಬ್ರಿಟಿ ಜೋಡಿ ಇದೀಗ ಒಂದಾಗಿ ಹೊಸ ಜೀವನಕ್ಕೆ ಕಾಲಿಡುತ್ತಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k