Tag: Vastu

  • ಚುನಾವಣೆ ಹೊತ್ತಲ್ಲಿ ವಾಸ್ತು ಮೊರೆ ಹೋದ ದಕ್ಷಿಣ ಕನ್ನಡ ಕಾಂಗ್ರೆಸ್

    ಚುನಾವಣೆ ಹೊತ್ತಲ್ಲಿ ವಾಸ್ತು ಮೊರೆ ಹೋದ ದಕ್ಷಿಣ ಕನ್ನಡ ಕಾಂಗ್ರೆಸ್

    ಮಂಗಳೂರು: ಕರಾವಳಿಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಕಸರತ್ತು ನಡೆಸುತ್ತಿರುವ ಕಾಂಗ್ರೆಸ್ (Congress) ಈಗ ವಾಸ್ತು (Vastu) ಮೊರೆ ಹೋಗಿದೆ ಎನ್ನಲಾಗುತ್ತಿದೆ. ದಕ್ಷಿಣ ಕನ್ನಡ (Dakshina Kannada) ಜಿಲ್ಲಾ ಕಚೇರಿ ವಾಸ್ತು ಸರಿಪಡಿಸಲು ಮುಂದಾಗಿದ್ದು, 8 ಮೆಟ್ಟಿಲಿದ್ದ ಕಡೆ 9 ಮೆಟ್ಟಿಲು (Staircase) ಇರುವಂತೆ ಕಾಮಗಾರಿ ನಡೆಸಲಾಗುತ್ತಿದೆ.

    ಜಿಲ್ಲೆಯ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ವಾಸ್ತು ಸರಿಪಡಿಸಲು ಕಚೇರಿಯ ಮುಂಭಾಗದ ಮೆಟ್ಟಿಲಿನ ನವೀಕರಣ ಕಾಮಗಾರಿ ಮಾಡಲಾಗುತ್ತಿದೆ. ವಾಸ್ತು ತಜ್ಞರ ಸಲಹೆಯಂತೆ ಮೆಟ್ಟಿಲು ನವೀಕರಣವಾಗುತ್ತಿದೆ ಎನ್ನಲಾಗುತ್ತಿದೆ. ಈ ಹಿಂದೆ ಪ್ರವೇಶ ದ್ವಾರದಲ್ಲಿ 8 ಮೆಟ್ಟಿಲುಗಳಿದ್ದವು. ಆದರೆ 8 ಮೆಟ್ಟಿಲುಗಳಿರುವುದು ದೋಷ. ವಾಸ್ತು ಪದ್ದತಿ ಪ್ರಕಾರ ಬೆಸ ಸಂಖ್ಯೆಯಲ್ಲಿ ಮೆಟ್ಟಿಲುಗಳಿರಬೇಕು. ಇದಕ್ಕಾಗಿ 9ನೇ ಮೆಟ್ಟಿಲು ಸೇರ್ಪಡೆಗೊಳಿಸಲು ದುರಸ್ತಿ ಕಾರ್ಯ ಮಾಡಲಾಗುತ್ತಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಕರ್ನಾಟಕ, ಮಹಾ ಸಿಎಂ ಜೊತೆ ಶಾ ಚರ್ಚೆ – ಶೀಘ್ರವೇ ತಟಸ್ಥ ಸಮಿತಿ ರಚನೆ

    ಈ ವಾಸ್ತು ವಾದವನ್ನು ಕಾಂಗ್ರೆಸ್ ನಾಯಕರು ನಿರಾಕರಿಸುತ್ತಿದ್ದಾರೆ. ಮೆಟ್ಟಿಲು ಹತ್ತಲು ಸುಲಭವಾಗಲು ಹಾಗೂ ವಾಟರ್ ಟ್ಯಾಂಕ್ ದುರಸ್ಥಿಗಾಗಿ ಈ ನವೀಕರಣ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

    2016ರಲ್ಲಿ ಈ ನೂತನ ಜಿಲ್ಲಾ ಕಾಂಗ್ರೆಸ್ ಕಚೇರಿ ಉದ್ಘಾಟನೆಯಾಗಿತ್ತು. 2019ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋತಿತ್ತು. 8 ಕ್ಷೇತ್ರಗಳ ಪೈಕಿ 7 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲು ಅನುಭವಿಸಿತ್ತು. ಹೀಗಾಗಿ ವಾಸ್ತು ತಜ್ಞರ ಸಲಹೆಯಂತೆ ಮೆಟ್ಟಿಲು ನವೀಕರಣ ಮಾಡಲಾಗುತ್ತಿದೆ ಎಂದು ಭಾರೀ ಚರ್ಚೆಯಾಗುತ್ತಿದೆ. ಇದನ್ನೂ ಓದಿ: ಹೈಕಮಾಂಡ್‌ ಕ್ಲಾಸ್‌ – ಕೊಪ್ಪಳ ಕಾರ್ಯಕ್ರಮಕ್ಕೆ ಬಿಜೆಪಿಯಿಂದ ಬಿಸ್‌ವೈಗೆ ಆಹ್ವಾನ

    Live Tv
    [brid partner=56869869 player=32851 video=960834 autoplay=true]

  • ಕೈ ಕಾಲು ಮುರಿದುಕೊಂಡು ಬಿಗ್ ಬಾಸ್ ಮನೆಯಿಂದ ಆಚೆ ಬರುತ್ತಿದ್ದಾರೆ ಸ್ಪರ್ಧಿಗಳು: ದೊಡ್ಮನೆ ವಾಸ್ತು ಬಗ್ಗೆ ನೆಟ್ಟಿಗರು ಪ್ರಶ್ನೆ

    ಕೈ ಕಾಲು ಮುರಿದುಕೊಂಡು ಬಿಗ್ ಬಾಸ್ ಮನೆಯಿಂದ ಆಚೆ ಬರುತ್ತಿದ್ದಾರೆ ಸ್ಪರ್ಧಿಗಳು: ದೊಡ್ಮನೆ ವಾಸ್ತು ಬಗ್ಗೆ ನೆಟ್ಟಿಗರು ಪ್ರಶ್ನೆ

    ಬಿಗ್ ಬಾಸ್ ಮನೆಯ ವಾಸ್ತು ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿದೆ. ಜನರ ಭವಿಷ್ಯ ಹೇಳುತ್ತಿದ್ದ ಆರ್ಯವರ್ಧನ್ ಗುರೂಜಿಯೇ ಮನೆ ಒಳಗೆ ಇದ್ದರೂ, ಮನೆಯ ವಾಸ್ತು ಯಾಕೋ ಸರಿ ಇಲ್ಲ ಅನಿಸುತ್ತಿದೆ ಎಂದು ಹಲವರು ಕಾಮೆಂಟ್ ಮಾಡಿದ್ದಾರೆ. ಈ ರೀತಿಯ ಕಾಮೆಂಟ್ ಬರುವುದಕ್ಕೆ ಕಾರಣ, ಸ್ಪರ್ಧಿಗಳು ಕೈ ಕಾಲು ಮುರಿದುಕೊಂಡು ಹೊರ ಬರುತ್ತಿದ್ದಾರೆ.

    ಕಳೆದ ವಾರ ಕಾಮಿಡಿ ನಟ ಲೋಕೇಶ್ ಅವರು ಏಟು ಮಾಡಿಕೊಂಡ ಕಾರಣಕ್ಕಾಗಿ ಮನೆಯಿಂದ ಆಚೆ ಬಂದಿದ್ದರು. ಆಟ ಆಡುವ ಸಂದರ್ಭದಲ್ಲಿ ಅವರಿಗೆ ಬಲವಾದ ಏಟಾಗಿತ್ತು. ಹಾಗಾಗಿ ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ಮತ್ತೆ ಅವರು ವಾಪಸ್ಸು ಬಿಗ್ ಬಾಸ್ ಮನೆಗೆ ಹೋಗಿಲ್ಲ. ಆರೋಗ್ಯದ ಬಗ್ಗೆಯೂ ಯಾವುದೇ ಮಾಹಿತಿ ಇಲ್ಲ. ಬಲ್ಲ ಮೂಲಗಳ ಪ್ರಕಾರ ಸದ್ಯ ಅವರು ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:ತನ್ನನ್ನು ತಾನೇ ಮದುವೆಯಾದ ಕಿರುತೆರೆ ನಟಿ ಕಾನಿಷ್ಕಾ ಸೋನಿ

    ಎರಡನೇ ವಾರದಲ್ಲಿ ಮತ್ತೆ ಏಟು ಮಾಡಿಕೊಂಡಿದ್ದಾರೆ ಅರ್ಜುನ್ ರಮೇಶ್. ಈ ಹಿಂದೆ ಲೋಕೇಶ್ ಅವರಿಗೆ ಕಾಲಿಗೆ ಪೆಟ್ಟಾಗಿದ್ದರೆ, ಇವರಿಗೆ ಕೈ ಪೆಟ್ಟಾಗಿದೆ. ಅದೇ ನೋವಿನಲ್ಲೇ ಒಂದು ವಾರಗಳ ಕಾಲ ಬಿಗ್ ಬಾಸ್ ಮನೆಯಲ್ಲೇ ಉಳಿದುಕೊಂಡಿದ್ದ ಅರ್ಜುನ್ ರಮೇಶ್ ಕೈ ನೋವು ವಾಸಿ ಆಗದೇ ಇರುವ ಕಾರಣಕ್ಕಾಗಿ ಈ ವಾರ ಮನೆಯಿಂದ ಆಚೆ ಬಂದಿದ್ದಾರೆ ಎನ್ನಲಾಗುತ್ತಿದೆ. ಮನೆಯಿಂದ ಆಚೆ ಬರುತ್ತಿದ್ದಂತೆಯೇ ಅವರನ್ನು ಆಸ್ಪತ್ರೆಗೆ ಸೇರಿಸಿದ್ದಾರೆ ಎನ್ನುವ ಮಾಹಿತಿಯೂ ಇದೆ.

    ಅಷ್ಟೇ ಅಲ್ಲದೇ ಮನೆಯಲ್ಲಿದ್ದ ಸೋನು ಶ್ರೀನಿವಾಸ್ ಗೌಡ, ಸಾನ್ಯ ಐಯ್ಯರ್ ಕೂಡ ಸಣ್ಣ ಪುಟ್ಟ ಗಾಯಗಳನ್ನು ಮಾಡಿಕೊಂಡು, ಆ ಮನೆಯಲ್ಲಿ ಉಳಿದುಕೊಂಡಿದ್ದಾರೆ. ಈ ಎಲ್ಲ ಕಾರಣಗಳಿಂದಾಗಿ ಬಿಗ್ ಬಾಸ್ ಮನೆಯ ವಾಸ್ತುವನ್ನು ಒಂದು ಸಲ ಚೆಕ್ ಮಾಡಿಸಿ ಎಂದು ನೆಟ್ಟಿಗರು ಕಾಮೆಂಟ್ ಮಾಡುತ್ತಿದ್ದಾರೆ. ಸಾಮಾನ್ಯವಾಗಿ ಎಲಿಮಿನೇಟ್ ಆಗಿ ಮನೆಯಿಂದ ಆಚೆ ಬರುವುದು ವಾಡಿಕೆ. ಆದರೆ, ಈ ಬಾರಿ ವಾರಕ್ಕೊಬ್ಬರು ಏಟು ಮಾಡಿಕೊಂಡು ಮನೆಯಿಂದ ಔಟ್ ಆಗುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಿಧಾನಸೌಧ, ವಿಕಾಸಸೌಧದಲ್ಲಿ ಕೊಠಡಿಗಳೇ ನೆಲಸಮ!

    ವಿಧಾನಸೌಧ, ವಿಕಾಸಸೌಧದಲ್ಲಿ ಕೊಠಡಿಗಳೇ ನೆಲಸಮ!

    – ವಾಸ್ತುಪ್ರಕಾರ ರೂಂಗಳ ಮಾರ್ಪಾಡು

    ಬೆಂಗಳೂರು: ಪ್ರಚಾರ, ಮತಬೇಟೆ ಎಂದು ಇಡೀ ದೇಶದಲ್ಲಿ ಈಗ ಚುನಾವಣಾ ಜಪ ಶುರುವಾಗಿದೆ. ಈ ಮಧ್ಯೆ ರಾಜ್ಯದ ಸಚಿವರು ಮಾತ್ರ ವಿಧಾನಸೌಧ, ವಿಕಾಸಸೌಧದಲ್ಲಿ ಚೆನ್ನಾಗಿರುವ ಕೊಠಡಿಗಳನ್ನು ಕೆಡವಿ ವಾಸ್ತು ಪ್ರಕಾರ ತಮಗೆ ಬೇಕಾದ ಹಾಗೆ ರಿಪೇರಿ ಮಾಡಿಕೊಳ್ಳುತ್ತಿದ್ದಾರೆ.

    ವಿಕಾಸಸೌಧದಲ್ಲಿ ಆಹಾರ ಹಾಗೂ ನಾಗರಿಕ ಸರಬರಾಜು ಸಚಿವ ಜಮೀರ್ ಅಹ್ಮದ್ ಆಪ್ತ ಕಾರ್ಯದರ್ಶಿಯ ಕೊಠಡಿಯಲ್ಲಿ ಹೊಸ ರೂಂಗಳ ಸೇರ್ಪಡೆಯ ಕೆಲಸ ಭರದಿಂದ ನಡೆಯುತ್ತಿದೆ. ಅಷ್ಟೇ ಅಲ್ಲದೆ ಪ್ರಭಾವಿ ಸಚಿವರೊಬ್ಬರು ಬೇರೆ ಕೊಠಡಿಯನ್ನು ನೀಡಲಾಗಿದ್ದರೂ ರೂಂ ನಂಬರ್ 338ಕ್ಕೆ ಬೇಡಿಕೆ ಇಟ್ಟು ಆ ರೂಂನ್ನು ವಾಸ್ತುಪ್ರಕಾರ ರಿಪೇರಿ ಮಾಡಿಸಿಕೊಳ್ಳುತ್ತಿದ್ದಾರೆ.

    ವಿಧಾನಸೌಧ ಹಾಗೂ ವಿಕಾಸಸೌಧದ ಕೊಠಡಿಗಳನ್ನು ಯೋಜನಾಬದ್ಧವಾಗಿ ನಿರ್ಮಿಸಲಾಗಿದೆ. ಹೀಗಿದ್ದರೂ ಜನ ಪ್ರತಿನಿಧಿಗಳು ತಮಗೆ ಬೇಕಾದ ರೀತಿ ರೂಂಗಳನ್ನು ಮಾರ್ಪಾಡು ಮಾಡಿಕೊಳ್ಳುತ್ತಿದ್ದಾರೆ. ಯಾರದ್ದೊ ದುಡ್ಡು ಯಲ್ಲಮ್ಮನ ಜಾತ್ರೆ ಎನ್ನುವಂತೆ ವರ್ತಿಸುತ್ತಿದ್ದಾರೆ. ಮೊನ್ನೆ ಮೊನ್ನೆ ನವೀಕರಿಸಿರುವ ಕೊಠಡಿಗಳನ್ನು ಮತ್ತೆ ನೆಲಸಮ ಮಾಡಿ ಹೊಸದಾಗಿ ನಿರ್ಮಾಣ ಮಾಡುತ್ತಿದ್ದಾರೆ. ತೆರಿಗೆ ರೂಪದಲ್ಲಿ ನಾವು ಕಟ್ಟಿದ ಹಣವನ್ನು ಜನಪ್ರತಿನಿಧಿಗಳು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಸ್ಥಳೀಯರೊಬ್ಬರು ಆರೋಪಿಸಿದ್ದಾರೆ.

    ಒಟ್ಟಿನಲ್ಲಿ ನೀತಿ ಸಹಿತೆ ಜಾರಿಯಾಗಿದ್ದರಿಂದ ವಿಧಾನಸೌಧ ಹಾಗೂ ವಿಕಾಸಸೌಧಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿಲ್ಲ. ಇತ್ತ ಸಚಿವರು, ಕೆಲ ಜನ ಪ್ರತಿನಿಧಿಗಳು ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ. ಹೀಗಾಗಿ ಜಮೀರ್ ಅಹ್ಮದ್ ಅವರ ಕಾರ್ಯದರ್ಶಿ ಹಾಗೂ ಪ್ರಭಾವಿ ಸಚಿವರೊಬ್ಬರ ಕೊಠಡಿಯ ಮಾರ್ಪಾಟು ಭರದಿಂದ ಸಾಗಿದೆ. ಜನಪ್ರತಿನಿಧಿಗಳ ಈ ವರ್ತನೆಗೆ ಜನ ಕಿಡಿಕಾರುತ್ತಿದ್ದಾರೆ.

  • ಕಾಫಿ ನಾಡು ಪೊಲೀಸರಿಗೆ ವಾಸ್ತು ಭಯ- ಠಾಣೆಯಲ್ಲೇ ಗಣೇಶನ ಗುಡಿ ನಿರ್ಮಾಣ

    ಕಾಫಿ ನಾಡು ಪೊಲೀಸರಿಗೆ ವಾಸ್ತು ಭಯ- ಠಾಣೆಯಲ್ಲೇ ಗಣೇಶನ ಗುಡಿ ನಿರ್ಮಾಣ

    ಚಿಕ್ಕಮಗಳೂರು: ಎಲ್ಲರೂ ಪೊಲೀಸರಿಗೆ ಭಯ ಪಟ್ರೆ ಕಾಫಿನಾಡಿನ ಆರಕ್ಷಕರು ವಾಸ್ತುವಿಗೆ ಹೆದರಿ ಠಾಣೆಯಲ್ಲೇ ಗಣಪತಿ ದೇವಾಲಯ ನಿರ್ಮಿಸಿದ್ದಾರೆ.

    ಸ್ವಾಸ್ಥ್ಯ ಸಮಾಜದ ನಿರ್ಮಾಣಕ್ಕೆ ಶ್ರಮಿಸುವ ಕಾಫಿನಾಡಿನ ಆರಕ್ಷಕರಿಗೆ ವಾಸ್ತು ದೋಷದಿಂದ ರಕ್ಷಣೆ ಬೇಕಾಗಿದ್ದು, ಠಾಣೆಯ ಆವರಣದಲ್ಲೇ ಗಣೇಶನ ದೇಗುಲ ಕಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣೆಯನ್ನ ವಾಸ್ತು ಪ್ರಕಾರ ಕಟ್ಟಿಲ್ಲವೆಂದು ಪೊಲೀಸರು ಠಾಣೆಯ ಎಡಭಾಗದಲ್ಲಿ ವಿಘ್ನ ನಿವಾರಕನ ಗುಡಿ ನಿರ್ಮಿಸಿದ್ದಾರೆ. ಈಗಾಗಲೇ ಗಣಪತಿ ದೇವಾಲಯ ಉದ್ಘಾಟನೆಗೆ ಸಿದ್ಧಗೊಂಡಿದ್ದು ಮಂಗಳವಾರ ಲೋಕಾರ್ಪಣೆಗೊಂಡಿದೆ.

    ದೇವಾಸ್ಥಾನದ ಉದ್ಘಾಟನೆಗೆ ಪೊಲೀಸ್ ಠಾಣೆ ನವವಧುವಿನಂತೆ ಸಿಂಗಾರಗೊಂಡಿತ್ತು. ಪೊಲೀಸರು ದೇವಾಲಯದ ಆರಂಭದ ಕಾರ್ಯಕ್ರಮ ಕುರಿತು ಕರಪತ್ರಗಳನ್ನ ಮಾಡಿಸಿಯೂ ಹಂಚಿ ಸಾರ್ವಜನಿಕರನ್ನು ಆಹ್ವಾನಿಸಿದ್ದರು. ಸರ್ಕಾರಿ ಕಚೇರಿಗಳನ್ನು ವಾಸ್ತು ನೋಡಿಯೇ ಕಟ್ಟಬೇಕಾ? ಇದೊಂದು ಮೂಢನಂಬಿಕೆ ಎಂಬಿತ್ಯಾದಿ ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ. ಪೊಲೀಸರ ಈ ಕೆಲಸ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಸಚಿವ ರೇವಣ್ಣ ದಾರಿಯಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್

    ಸಚಿವ ರೇವಣ್ಣ ದಾರಿಯಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್

    ಬೆಳಗಾವಿ: ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ದಾರಿಯಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೋಗುತ್ತಿದ್ದಾರೆ. ನಾನು ವಾಸ್ತು ಹಾಗೂ ಭವಿಷ್ಯವನ್ನು ನಂಬುತ್ತೇನೆ ಎಂದು ಹೇಳಿದ್ದಾರೆ.

    ನಾನೂ ಕೂಡಾ ವಾಸ್ತು ಫಾಲೋ ಮಾಡುತ್ತೀನಿ. ಯಾವುದೇ ಕ್ಷೇತ್ರಕ್ಕೆ ಭೇಟಿ ನೀಡುವಾಗ ಸ್ವಲ್ಪ ಸಮಯ ನೋಡುತ್ತೇನೆ. ದಿನಾಲು ರಾಶಿ ಭವಿಷ್ಯ ನೋಡುತ್ತೇನೆ. ರಾಶಿ ಭವಿಷ್ಯದ ಮೇಲೆ ಅಪಾರ ನಂಬಿಕೆ ಹೊಂದಿದ್ದೇನೆ. ಉಡುಗೆ ತೊಡುಗೆಯಲ್ಲಿ ನಾನು ವಾಸ್ತು ನೋಡುತ್ತೀನಿ. ಯಾವ ದಿನ ಯಾವ ಬಣ್ಣದ ಬಟ್ಟೆ ಧರಿಸಬೇಕು ಅಂತ ನೋಡುತ್ತೀನಿ. ಮನೆಯಲ್ಲಿ ಹಿರಿಯರಿಂದ ದೇವರ ಭಕ್ತಿ, ವಾಸ್ತು, ಸಂಪ್ರದಾಯದ ಚಾಲ್ತಿಯಲ್ಲಿದೆ. ಹೀಗಾಗಿ ನಾನೂ ಕೂಡಾ ವಾಸ್ತು ಫಾಲೋ ಮಾಡುವದರ ಜೊತೆಗೆ ರಾಹುಕಾಲ ನಂಬುತ್ತೇನೆ ಎಂದರು.

    ವಾಸ್ತು ಫಾಲೋ ಮಾಡುವುದ್ದಕ್ಕೆ ಸಚಿವ ರೇವಣ್ಣ ಅವರು ನಿಮಗೆ ಪ್ರೇರೆಣೆ ನಾ? ಎಂದು ಪ್ರಶ್ನಿಸಿದ್ದಕ್ಕೆ, ನಗುತ್ತ ನನಗೆ ರೇವಣ್ಣ ಅವರು ಪ್ರೇರಣೆ ಅಲ್ಲ. ನನಗೆ ನನ್ನ ತಂದೆ- ತಾಯಿ ಪ್ರೇರಣೆ ಎಂದು ತಿಳಿಸಿದರು.

    ಸಚಿವ ಸಂಪುಟ ವಿಸ್ತರಣೆಯಲ್ಲಿ ಲಿಂಗಾಯತರಿಗೆ ಅನ್ಯಾಯವಾಗಿಲ್ಲ. ಅಂಜಲಿ ನಿಂಬಾಳ್ಕರ್ ಅವರಿಗೆ ಸಂಸದೀಯ ಸ್ಥಾನ ನೀಡಿದ್ದಕ್ಕೆ ಸಂತೋಷವಿದೆ. ಬೆಳಗಾವಿಗೆ ಎರಡು ಸಂಸದೀಯ ಸ್ಥಾನ ಮತ್ತು ಒಂದು ಮಂತ್ರಿ ಸ್ಥಾನ ನೀಡಿದ್ದಾರೆ. ನಾನು ಎಲ್ಲೂ ಕೂಡ ಮಂತ್ರಿ ಪದವಿ ಬೇಕು ಅಂತ ಹೇಳಿಲ್ಲ. ಹೈಕಮಾಂಡ್ ಹೇಗೆ ಹೇಳುತ್ತೆ ಅದೇ ರೀತಿ ನಡೆದುಕೊಳ್ಳುತ್ತೇನೆ. ಅದರ ಚೌಕಟ್ಟಿನಲ್ಲಿ ನಾನಿದ್ದೀನಿ. ಅವರು ಏನು ಹೇಳುತ್ತಾರೋ ಅದು ನನಗೆ ಪ್ರಸಾದ. ನಾನು ನನ್ನ ಪಕ್ಷದ ಸಿಪಾಯಿಯಾಗಿ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ವಾಸ್ತು ಪ್ರಕಾರ ಮೀಟಿಂಗ್ ಹಾಲ್ ಟೇಬಲ್ ದಿಕ್ಕು ಬದಲಾಯಿಸಲು ರೇವಣ್ಣ ಸೂಚನೆ

    ವಾಸ್ತು ಪ್ರಕಾರ ಮೀಟಿಂಗ್ ಹಾಲ್ ಟೇಬಲ್ ದಿಕ್ಕು ಬದಲಾಯಿಸಲು ರೇವಣ್ಣ ಸೂಚನೆ

    ಹುಬ್ಬಳ್ಳಿ: ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಅವರು ಪ್ರವಾಸಿ ಮಂದಿರ ಉದ್ಘಾಟನೆಗೆ ಹೋಗಿ ವಾಸ್ತು ಪ್ರಕಾರ ಮೀಟಿಂಗ್ ಹಾಲ್ ಟೇಬಲ್‍ನ ದಿಕ್ಕನ್ನೇ ಬದಲಾಯಿಸಿದ್ದಾರೆ.

    ಹುಬ್ಬಳ್ಳಿಯಲ್ಲಿ ಪ್ರವಾಸಿ ಮಂದಿರ ಉದ್ಘಾಟನೆಗಾಗಿ ಸಚಿವ ರೇವಣ್ಣ ಅವರು ಆಗಮಿಸಿದ್ದರು. ಈ ವೇಳೆ ಮೀಟಿಂಗ್ ಹಾಲ್ ನ ಟೇಬಲ್ ನ ದಿಕ್ಕು ಬದಲಿಸುವಂತೆ ಲೋಕೋಪಯೋಗಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ರೇವಣ್ಣ ಬೆಳಿಗ್ಗೆ ಐಬಿ ಉದ್ಘಾಟನೆ ಮಾಡಿ ಅಧಿಕಾರಿಗಳ ಜೊತೆ ಮೀಟಿಂಗ್ ಮಾಡಿದ್ದರು. ಅಲ್ಲಿ ವಾಸ್ತು ಸರಿ ಬಾರದ ಕಾರಣ ಮೀಟಿಂಗ್ ಹಾಲಿನ ಟೇಬಲ್ ಗಳನ್ನು ಪಶ್ಚಿಮ ದಿಕ್ಕಿಗೆ ಮುಖ ಮಾಡಿ ಹಾಕಲು ಸೂಚಿಸಿದ್ದಾರೆ. ಹೀಗಾಗಿ ಸಚಿವ ರೇವಣ್ಣ ಅವರ ಸೂಚನೆ ಹಿನ್ನಲೆಯಲ್ಲಿ ಸಿಬ್ಬಂದಿ ಮತ್ತೆ ಕೆಲಸ ಶುರು ಮಾಡಿದ್ದಾರೆ. ಮೀಟಿಂಗ್ ಹಾಲಿನಲ್ಲಿ ಹಾಕಲಾಗಿದ್ದ ಉದ್ದ ಟೇಬಲ್ ಗಳನ್ನು ಈಗ ಬದಲಿಸುವ ಕಾರ್ಯ ನಡೆಯುತ್ತಿದೆ.

    ಕೆಲ ದಿನಗಳ ಹಿಂದೆ ಕರ್ನಾಟಕ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ(ಕೆಶಿಪ್) ವತಿಯಿಂದ ರಸ್ತೆ ಸುರಕ್ಷತಾ ಅಭಿಯಾನದಲ್ಲಿ ಭಾಗವಹಿಸಲು ರೇವಣ್ಣ ಅವರು ಕಾರ್ಯಕ್ರಮದ ಸ್ಥಳಕ್ಕೆ ಬಂದಿದ್ದರೂ ಕಾರಿನಿಂದ ಇಳಿದಿರಲಿಲ್ಲ. ರಾಹುಕಾಲ ಮುಗಿದ ಬಳಿಕವೇ ರೇವಣ್ಣ ವಾಹನದಿಂದ ಇಳಿದಿದ್ದಾರೆ. ರೇವಣ್ಣ ಅವರು ಕಾರ್ಯಕ್ರಮಕ್ಕೆ 9.40ಕ್ಕೆ ಆಗಮಿಸಿದ್ದರೂ ರಾಹುಕಾಲ ಮುಗಿದ ಬಳಿಕ 9.54ಕ್ಕೆ ಕಾರಿನಿಂದ ಇಳಿದಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕುಮಾರಸ್ವಾಮಿ ದಂಪತಿಯ ಪ್ರದಕ್ಷಿಣೆ ದಿಕ್ಕನ್ನೇ ಬದಲಿಸಿದ ರೇವಣ್ಣ!

    ಕುಮಾರಸ್ವಾಮಿ ದಂಪತಿಯ ಪ್ರದಕ್ಷಿಣೆ ದಿಕ್ಕನ್ನೇ ಬದಲಿಸಿದ ರೇವಣ್ಣ!

    ಹಾಸನ: ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರ ವಾಸ್ತು ನಂಬಿಕೆ ಅತಿಯಾಗಿ ಮುಂದುವರಿದಿದ್ದು, ಇಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ದಂಪತಿಯ ಪ್ರದಕ್ಷಿಣೆ ದಿಕ್ಕನ್ನೇ ಬದಲಿಸಿದ್ದಾರೆ.

    ಜಿಲ್ಲೆಯ ಹೊಳೆನರಸೀಪುರದ ಹರದನಹಳ್ಳಿ ದೇವೇಶ್ವರ ದೇವಾಲಯಕ್ಕೆ ಕುಟುಂಬ ಸಮೇತ ಪೂಜೆ ಸಲ್ಲಿಸಿದರು. ಆದರೆ ಅರ್ಚಕರು ಸಿಎಂ ಕುಮಾರಸ್ವಾಮಿ ದಂಪತಿಗೆ ಹೇಳಿದ್ದ ಪ್ರದಕ್ಷಿಣೆ ದಿಕ್ಕನ್ನು ಸಚಿವ ರೇವಣ್ಣ ವಾಸ್ತು ಪ್ರಕಾರ ದಿಕ್ಕು ಬದಲಾಗಬೇಕು ಎಂದು ಹೇಳಿದ್ದರು. ಬಳಿಕ ರೇವಣ್ಣ ಹೇಳಿದಂತೆಯೇ ಕುಮಾರಸ್ವಾಮಿ ದಂಪತಿ ಪ್ರದಕ್ಷಿಣೆ ಹಾಕಿದ್ದಾರೆ. ಅಷ್ಟೇ ಅಲ್ಲದೆ ಪೂಜೆ ಹೇಗೆ ಮಾಡಬೇಕು ಅಂತಾ ಅರ್ಚಕರಿಗೂ ಪೂಜೆ ಪಾಠ ಮಾಡಿದ್ದಾರೆ.

    ಈ ಮಧ್ಯೆ, ಹಾಸನ ಲೋಕಸಭೆ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧೆ ಮಾಡಬೇಕೋ, ಬೇಡವೋ ಎನ್ನುವುದನ್ನು ಚರ್ಚೆ ಮಾಡುತ್ತೇವೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು. ಇತ್ತ ಕುಮಾರಸ್ವಾಮಿಯವರು ಅಗತ್ಯಬಿದ್ದರೆ ಪ್ರಜ್ವಲ್ ಸ್ಪರ್ಧೆ ಮಾಡುತ್ತಾರೆ ಎಂದು ತಿಳಿಸಿದ್ದಾರೆ.

    https://youtu.be/tsooli2UbGo

    ಈ ಹಿಂದೆಯೂ ಹಾಸನದ ಜಿಲ್ಲಾಸ್ಪತ್ರೆ ಸಮೀಪದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯರ ಹಾಸ್ಟೆಲ್ ಕಟ್ಟಡ ಶಂಕು ಸ್ಥಾಪನೆಗೆ ಸಚಿವ ರೇವಣ್ಣ ಆಗಮಿಸಿದ್ದರು. ಈ ವೇಳೆ ಪ್ರಾರಂಭವಾಗಿದ್ದ ಪೂಜೆ ತಡೆದು, ದಿಕ್ಕು ಬದಲಿಸುವಂತೆ ಅರ್ಚಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದರು. ವಾಸ್ತು ಪ್ರಕಾರ ನೀವು ಪೂಜೆ ಮಾಡುತ್ತಿಲ್ಲ ಎಂದು, ತಾವೇ ಮುಂದೆ ನಿಂತು ಪೂಜೆ ಮಾಡಿಸಲು ಮುಂದಾದ ಸಚಿವರು, “ರೀ ನೀರು ಮೊದಲು ಹಾಕಿ, ನೀವು ನಮ್ಮ ತಲೆ ಬಿಸಿ ಮಾಡಬೇಡಿ” ಎಂದು ಅರ್ಚಕ ರವಿ ಅವರ ವಿರುದ್ಧ ರೇಗಾಡಿದ್ದರು.

  • ರೇವಣ್ಣ ಮನೆ ನವೀಕರಣಕ್ಕೆ ದುಂದುವೆಚ್ಚ ಮಾಡ್ತಿಲ್ಲ: ಸಿಎಂ ಎಚ್‍ಡಿಕೆ

    ರೇವಣ್ಣ ಮನೆ ನವೀಕರಣಕ್ಕೆ ದುಂದುವೆಚ್ಚ ಮಾಡ್ತಿಲ್ಲ: ಸಿಎಂ ಎಚ್‍ಡಿಕೆ

    ಬೆಂಗಳೂರು: ಲೋಕೋಪಯೋಗಿ ಸಚಿವ ಎಚ್‍ಡಿ ರೇವಣ್ಣ ಮನೆ ನವೀಕರಣಕ್ಕೆ ದುಂದು ವೆಚ್ಚ ಮಾಡಲಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಸ್ಪಷ್ಟನೆ ಕೊಟ್ಟಿದ್ದಾರೆ.

    ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ ಅವರು, ಮನಸ್ಸಿಗೆ ಬಂದಂತೆ ನವೀಕರಣ ಮಾಡಲು ಅನುಮತಿ ನೀಡಬಾರದು ಎಂದು ಈಗಾಗಲೇ ನಾನು ಆರ್ಥಿಕ ಇಲಾಖೆಗೆ ಸೂಚಿಸಿದ್ದೇನೆ. ರೇವಣ್ಣ ಮನೆ ನವೀಕರಣಕ್ಕೆ ಕೋಟ್ಯಾಂತರ ರೂಪಾಯಿ ಖರ್ಚು ಆಗುತ್ತಿಲ್ಲ ಎಂದು ಅವರು ತಿಳಿಸಿದರು.

    ಕುಮಾರಕೃಪಾದಲ್ಲಿ ಕಳೆದ ಡಿಸೆಂಬರ್ ನಲ್ಲೆ ಕಾಮಗಾರಿ ಪ್ರಾರಂಭವಾಗಿದ್ದು ನಮ್ಮ ಸರ್ಕಾರ ಯಾವುದೇ ಆದೇಶ ನೀಡಿಲ್ಲ. ಹಿಂದಿನ ಸರ್ಕಾರದ ಅವಧಿಯಲ್ಲೇ ಮಳೆ ನೀರು ಕಾಲುವೆಗೆ ಹೋಗುವಂತೆ ಪೈಪ್ ಲೈನ್ ಅಳವಡಿಕೆಗೆ ಅನುಮತಿ ನೀಡಲಾಗಿತ್ತು. ಕೋಟ್ಯಂತರ ರೂ ಖರ್ಚು ಮಾಡಲಾಗುತ್ತಿದೆ ಎಂದು ನಿಮಗೆ ಯಾರೋ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಮಾಧ್ಯಮಗಳಿಗೆ ಕುಮಾರಸ್ವಾಮಿ ತಿಳಿಸಿದರು.

    ಆರೋಪ ಏನು?
    ಸಚಿವರ ರೇವಣ್ಣ ಅವರಿಗೆ ಶಿವಾನಂದ ಸರ್ಕಲ್ ಬಳಿ ಇರುವ ಕುಮಾರಕೃಪಾ ನಂಬರ್ 1 ನಿವಾಸ ಸಿಕ್ಕಿದೆ. ಸದ್ಯ ಆಷಾಢ ಮಾಸ ಇರೋದರಿಂದ ಸರ್ಕಾರಿ ಬಂಗಲೆಗೆ ಸಚಿವರು ಪ್ರವೇಶ ಮಾಡಿಲ್ಲ. ಆದರೆ ಪ್ರವೇಶಕ್ಕೂ ಮುನ್ನವೇ ವಾಸ್ತು ಪ್ರಕಾರ ಕಟ್ಟಡದ ನವೀಕರಣ ನಡೆಯುತ್ತಿದೆ ಎನ್ನುವ ಆರೋಪ ಕೇಳಿಬಂದಿತ್ತು. ಈ ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ಹೆಚ್.ಸಿ.ಮಹಾದೇವಪ್ಪ ತಮ್ಮ ಪ್ರವೇಶದ ವೇಳೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕಟ್ಟಡದ ನವೀಕರಣಗೊಳಿಸಿದ್ದರು. ಈಗ ಮತ್ತೆ ಅದೇ ಕಟ್ಟಡದ ನವೀಕರಣ ನಡೆಯುತ್ತಿದೆ.

    ಮಳೆಯಾದರೆ ಕುಮಾರ ಕೃಪಾ ಮುಂದೆ ಮಳೆನೀರು ನಿಂತುಕೊಳ್ಳುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಮನೆಯ ಮುಂದಿನ ನೀರನ್ನು ರಸ್ತೆಗೆ ತಿರುಗಿಸಿದ್ದಾರೆ. ಇದರಿಂದ ಸಹಜವಾಗಿ ವಾಹನಗಳ ಸಂಚಾರಕ್ಕೆ ತೊಂದರೆ ಆಗಲಿದೆ ಎಂದು ಸಾರ್ವಜನಿಕರು ದೂರಿದ್ದರು.

  • ಮೈತ್ರಿ ಸರ್ಕಾರದ ಸೂಪರ್ ಸಿಎಂ ಎಚ್.ಡಿ.ರೇವಣ್ಣ ಎಡವಟ್ಟು- ಹೀಗೆ ಮಾಡ್ಬಹುದಾ ಸಚಿವರೇ?

    ಮೈತ್ರಿ ಸರ್ಕಾರದ ಸೂಪರ್ ಸಿಎಂ ಎಚ್.ಡಿ.ರೇವಣ್ಣ ಎಡವಟ್ಟು- ಹೀಗೆ ಮಾಡ್ಬಹುದಾ ಸಚಿವರೇ?

    ಬೆಂಗಳೂರು: ಮೈತ್ರಿ ಸರ್ಕಾರದಲ್ಲಿಯೇ ಸೂಪರ್ ಸಿಎಂ ಅಂತಾನೆ ಕರೆಸಿಕೊಳ್ಳುವ ಎಚ್.ಡಿ.ರೇವಣ್ಣ ಎಡವಟ್ಟು ಮಾಡಿಕೊಂಡಿದ್ದಾರೆ. ಸರ್ಕಾರ ರಚನೆಯ ಬಳಿಕ ಎಲ್ಲ ಸಚಿವರಿಗೂ ಸರ್ಕಾರಿ ಬಂಗಲೆಯನ್ನು ನೀಡಲಾಗಿದೆ. ಆದ್ರೆ ಎಚ್.ಡಿ.ರೇವಣ್ಣ ತಮ್ಮ ಕಟ್ಟಡದ ಕೊಳಚೆ ನೀರನ್ನು ರಸ್ತೆಗೆ ತಿರುಗಿಸುವ ಕೆಲಸ ಮಾಡಿದ್ದಾರೆ.

    ಸದ್ಯ ಆಷಾಢ ಮಾಸ ಇರೋದರಿಂದ ಸರ್ಕಾರಿ ಬಂಗಲೆಗೆ ಸಚಿವರು ಪ್ರವೇಶ ಮಾಡಿಲ್ಲ. ಆಷಾಢ ಕಳೆದ ಮೇಲೆ ಶಿವಾನಂದ ಸರ್ಕಲ್ ಬಳಿ ಇರುವ ಕುಮಾರಕೃಪಾ ನಂಬರ್ 1 ನಿವಾಸಕ್ಕೆ ಎಚ್.ಡಿ.ರೇವಣ್ಣ ಪ್ರವೇಶ ಮಾಡಲಿದ್ದಾರೆ. ಆದರೆ ಪ್ರವೇಶಕ್ಕೂ ಮುನ್ನವೇ ವಾಸ್ತು ಪ್ರಕಾರ ಕಟ್ಟಡದ ನವೀಕರಣ ನಡೆಯುತ್ತಿದೆ. ಈ ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ಹೆಚ್.ಸಿ.ಮಹಾದೇವಪ್ಪ ತಮ್ಮ ಪ್ರವೇಶದ ವೇಳೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕಟ್ಟಡದ ನವೀಕರಣಗೊಳಿಸಿದ್ದರು. ಈಗ ಮತ್ತೆ ಅದೇ ಕಟ್ಟಡದ ನವೀಕರಣ ನಡೆಯುತ್ತಿದೆ.

    ಮಳೆಯಾದರೆ ಕುಮಾರ ಕೃಪಾ ಮುಂದೆ ಮಳೆನೀರು ನಿಂತುಕೊಳ್ಳುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಮನೆಯ ಮುಂದಿನ ನೀರನ್ನು ರಸ್ತೆಗೆ ತಿರುಗಿಸಿದ್ದಾರೆ. ಮಳೆಯ ನೀರು ಮತ್ತು ಕಟ್ಟಡದ ಕೊಳಚೆ ನೇರವಾಗಿ ರಸ್ತೆಯ ಮೇಲೆ ಹರಿಯುವ ಸಾಧ್ಯತೆಗಳಿವೆ. ಇದರಿಂದ ಸಹಜವಾಗಿ ವಾಹನಗಳ ಸಂಚಾರಕ್ಕೆ ತೊಂದರೆ ಆಗಲಿದೆ.

    ಅತಿ ಹೆಚ್ಚಾಗಿ ಜೋತಿಷ್ಯ ನಂಬುವ ಸಚಿವರು ಸಾರ್ವಜನಿಕರ ಹಣದಲ್ಲಿ ಸರ್ಕಾರದ ಕಟ್ಟಡವನ್ನು ತಮಗೆ ಅನುಕೂಲವಾಗುವಂತೆ ಮಾಡಿಕೊಳ್ಳುತ್ತಿರೋದು ಇದೀಗ ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿದೆ. ಕೊಳಚೆ ನೀರನ್ನು ರಸ್ತೆಗೆ ಹರಿಸುವ ಮೂಲಕ ಕೇವಲ ತಮ್ಮ ಸುರಕ್ಷತೆ ನೋಡಿಕೊಂಡು ಸಾರ್ವಜನಿಕರಿಗೆ ತೊಂದರೆ ಮಾಡಿದಂತಾಗುತ್ತದೆ. ಸಚಿವರೇ ನೀವು ಹೇಗೆ ಮಾಡಬಹುದಾ ಎಂಬ ಪ್ರಶ್ನೆಯೊಂದು ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿದೆ.

  • ವಾಸ್ತು ಪ್ರಕಾರ ಶಿರಾಡಿ ಘಾಟ್ ಉದ್ಘಾಟಿಸಿದ ಸಚಿವ ಹೆಚ್.ಡಿ.ರೇವಣ್ಣ

    ವಾಸ್ತು ಪ್ರಕಾರ ಶಿರಾಡಿ ಘಾಟ್ ಉದ್ಘಾಟಿಸಿದ ಸಚಿವ ಹೆಚ್.ಡಿ.ರೇವಣ್ಣ

    ಹಾಸನ: ಸಚಿವ ಹೆಚ್.ಡಿ.ರೇವಣ್ಣ ಇಂದು ವಾಸ್ತು ಪ್ರಕಾರವೇ ಶಿರಾಡಿ ಘಾಟ್ ಉದ್ಘಾಟಿಸಿದ್ದಾರೆ.

    ಅಧಿಕಾರಿಗಳು ಶಿರಾಡಿ ಘಾಟ್ ಉದ್ಘಾಟನೆಯನ್ನು ಪಶ್ಚಿಮಾಭಿಮುಖವಾಗಿ ಸಿದ್ಧಪಡಿಸಿದ್ದರು. ಸ್ಥಳಕ್ಕಾಗಮಿಸಿದ ಸಚಿವರು ಶುಭಕಾರ್ಯಗಳನ್ನು ಪೂರ್ವಾಭಿಮುಖವಾಗಿ ಮಾಡಬೇಕು ಎಂದು ಟೇಪ್ ಕೆಳಗೆ ನುಸುಳಿ ಎಲ್ಲರಿಗೂ ಪೂರ್ವಾಭಿಮುಖವಾಗಿ ನಿಲ್ಲುವಂತೆ ಸೂಚಿಸಿದರು.

    ಸಚಿವರು ದಿಕ್ಕು ಬದಲಿಸಿದ್ದರಿಂದ ಸ್ಥಳದಲ್ಲಿ ನೂಕು ನುಗ್ಗಲು ಉಂಟಾಯಿತು. ದಿಕ್ಕು ಬದಲಿಸಿ ಪೂರ್ವಾಭಿಮುಖವಾಗಿ ನಿಂತ ಸಚಿವರು ಟೇಪ್ ಕತ್ತರಿಸಿ ಶಿರಾಡಿ ಘಾಟ್ ಸಂಚಾರವನ್ನು ಮುಕ್ತಗೊಳಿಸಿದರು. ತಡೆಗೋಡೆ, ಸೂಚನಾ ಫಲಕ, ಸಣ್ಣ-ಪುಟ್ಟ ಕಾಮಗಾರಿಗಳು ಪ್ರಗತಿ ಬಾಕಿ ಹಿನ್ನೆಲೆಯಲ್ಲಿ ಕೇವಲ ಲಘು ವಾಹನಗಳಿಗೆ ಮಾತ್ರ ಸಂಚಾರ ಮುಕ್ತಗೊಳಿಸಲಾಗಿದೆ.

    ಅತ್ಯಾಧುನಿಕ ತಂತ್ರಜ್ಞಾನ ಬಳಸಿ ನಿರ್ಮಾಣ ಮಾಡಿರುವ ಒಟ್ಟು 26 ಕಿ.ಮೀ ಉದ್ದದ ಶಿರಾಡಿಘಾಟ್ ಕಾಂಕ್ರೀಟ್ ರಸ್ತೆ ಸುಮಾರು 30 ವರ್ಷ ಬಾಳಿಕೆ ಬರಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಜನವರಿ 20 ರಿಂದ ಆರಂಭವಾಗಿದ್ದ 74 ಕೋಟಿ ರೂ. ವೆಚ್ಚ, 12.38 ಕಿಮೀ ಉದ್ದದ ಕಾಂಕ್ರೀಟ್ ರಸ್ತೆ ಕಾಮಗಾರಿ ಮುಗಿದಿದ್ದು ಇಂದು ಸಂಚಾರ ಮುಕ್ತವಾಗಿದೆ.