Tag: Vasundhara Raje

  • ಮೂರು ರಾಜ್ಯಗಳ ಮುಖ್ಯಮಂತ್ರಿ ಆಯ್ಕೆಗೆ ವೀಕ್ಷಕರ ನೇಮಿಸಿದ ಹೈಕಮಾಂಡ್

    ಮೂರು ರಾಜ್ಯಗಳ ಮುಖ್ಯಮಂತ್ರಿ ಆಯ್ಕೆಗೆ ವೀಕ್ಷಕರ ನೇಮಿಸಿದ ಹೈಕಮಾಂಡ್

    ನವದೆಹಲಿ: ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಘಡದಲ್ಲಿ ಭರ್ಜರಿ ಬಹುಮತ ಪಡೆದು ಅಧಿಕಾರದ ಗದ್ದುಗೆ ಏರಿರುವ ಬಿಜೆಪಿಗೆ ಮುಖ್ಯಮಂತ್ರಿ ಆಯ್ಕೆ Chief Minister Selection) ಕಗ್ಗಂಟಾಗಿ ಪರಿಣಮಿಸಿದೆ. ಡಿಸೆಂಬರ್‌ 3 ರಂದೇ ಫಲಿತಾಂಶ ಬಂದರೂ ಈವರೆಗೂ ಮುಖ್ಯಮಂತ್ರಿ ಆಯ್ಕೆಯಾಗಿಲ್ಲ. ಸಿಎಂ ಆಯ್ಕೆಗೆ ಶಾಸಕರ ಅಭಿಪ್ರಾಯ ಸಂಗ್ರಹಿಸಲು ಬಿಜೆಪಿ ಹೈಕಮಾಂಡ್ (BJP High Command) ಈಗ ವೀಕ್ಷಕರನ್ನು ನೇಮಿಸಿದೆ.

    ರಾಜಸ್ಥಾನದಲ್ಲಿ ಮುಖ್ಯಮಂತ್ರಿ ಆಯ್ಕೆ ಸಂಬಂಧ ಕೇಂದ್ರ ಸಚಿವ ರಾಜನಾಥ್ ಸಿಂಗ್ ನೇತೃತ್ವದಲ್ಲಿ ವೀಕ್ಷಕರ ಸಮಿತಿ ರಚಿಸಲಾಗಿದೆ. ಸಮಿತಿಯಲ್ಲಿ ರಾಜ್ಯಸಭೆ ಸಂಸದ ಸರೋಜಾ ಪಾಂಡೆ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ನಿಯೋಜನೆಯಾಗಿದ್ದಾರೆ. ಮಧ್ಯಪ್ರದೇಶಕ್ಕೆ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ನೇತೃತ್ವದಲ್ಲಿ ವೀಕ್ಷಕರ ಸಮಿತಿ ರಚಿಸಿದ್ದು ಓಬಿಸಿ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಡಾ.ಕೆ ಲಕ್ಷ್ಮಣ್, ರಾಷ್ಟ್ರೀಯ ಕಾರ್ಯದರ್ಶಿ ಆಶಾ ಲಾಕ್ರಾರನ್ನು ನಿಯೋಜಿಸಿದೆ. ಇದನ್ನೂ ಓದಿ: ಸರ್ಕಾರದಲ್ಲಿ ಪೇ-ಸಿಎಂ, ಪೇ-ಡಿಸಿಎಂ ಹೆಸ್ರಲ್ಲಿ ಕಮಿಷನ್‌ ಹಗರಣ – ಸದನದಲ್ಲಿ ಯತ್ನಾಳ್‌ ಬಾಂಬ್‌

    ಛತ್ತೀಸ್‌ಘಢಕ್ಕೆ ಮುಖ್ಯಮಂತ್ರಿ ಆಯ್ಕೆಗೆ ಕೇಂದ್ರ ಸಚಿವ ಅರ್ಜುನ್ ಮುಂಡಾ ನೇತೃತ್ವದಲ್ಲಿ ವೀಕ್ಷಕರ ನಿಯೋಜನೆ ಮಾಡಿದ್ದು ಸಮಿತಿಯಲ್ಲಿ ಕೇಂದ್ರ ಸಚಿವ ಸರ್ಬನಾಂದ ಸೋನೋವಾಲ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದುಷ್ಯಂತ್ ಕುಮಾರ್ ಗೌತಮ್ ನಿಯೋಜನೆ ಮಾಡಿದೆ. ವೀಕ್ಷಕರು ರಾಜ್ಯಗಳಿಗೆ ಭೇಟಿ ಮಾಡಿ ಶಾಸಕರ ಅಭಿಪ್ರಾಯ ಸಂಗ್ರಹಿಸಿಲಿದ್ದು ಶಾಸಕರ ಅಭಿಪ್ರಾಯದ ಮೇಲೆ ಹೈಕಮಾಂಡ್ ಸಿಎಂ ಆಯ್ಕೆ ಮಾಡಲಿದೆ.

    ಈ‌ ನಡುವೆ ಮುಖ್ಯಮಂತ್ರಿ ರೇಸ್‌ನಲ್ಲಿ ನಾಯಕರು ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿ ಲಾಭಿ ಆರಂಭಿಸಿದ್ದಾರೆ. ಬಿಜೆಪಿ ರಾಷ್ಟೀಯ ಅಧ್ಯಕ್ಷ ಜೆ.ಪಿ ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ರಾಜಸ್ಥಾನ ಮಾಜಿ ಸಿಎಂ ವಸುಂಧರಾ ರಾಜೇ ಭೇಟಿ ಮಾತುಕತೆ ನಡೆಸಿದ್ದಾರೆ. ಇತ್ತ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಯೋಗಿ ಬಾಲಕನಾಥ್ ಭೇಟಿ ಚರ್ಚಿಸಿದ್ದಾರೆ. ಇದನ್ನೂ ಓದಿ: ಕಾರು-ಬಸ್‌ ನಡುವೆ ಮುಖಾಮುಖಿ ಡಿಕ್ಕಿ – ಶಿರಸಿಯಲ್ಲಿ ಭೀಕರ ಅಪಘಾತಕ್ಕೆ ಐವರು ಬಲಿ

  • ಕನಿಕಾ ಪಾರ್ಟಿಯಲ್ಲಿ ವಸುಂಧರಾ, ದುಶ್ಯಂತ್ ಭಾಗಿ – ಸಂಸತ್ ಕಲಾಪಕ್ಕೂ ಹಾಜರ್

    ಕನಿಕಾ ಪಾರ್ಟಿಯಲ್ಲಿ ವಸುಂಧರಾ, ದುಶ್ಯಂತ್ ಭಾಗಿ – ಸಂಸತ್ ಕಲಾಪಕ್ಕೂ ಹಾಜರ್

    – ಕನಿಕಾ ಕಪೂರ್‌ಗೆ ಕೊರೊನಾ ಸೋಂಕು
    – ಸಂಸತ್ತಿನಲ್ಲಿ ಹಲವು ಸದಸ್ಯರನ್ನು ಸಂಪರ್ಕಿಸಿದ್ದ ದುಶ್ಯಂತ್

    ನವದೆಹಲಿ: ಬಾಲಿವುಡ್ ಗಾಯಕಿ ಕನಿಕಾ ಕಪೂರ್‍ಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ವಸುಂಧರಾ ರಾಜೇ ಮತ್ತು ಪುತ್ರ ಸಂಸದ ದುಶ್ಯಂತ್ ಸಿಂಗ್ ಈಗ ಜನಸಂಪರ್ಕದಿಂದ ಪ್ರತ್ಯೇಕಗೊಂಡಿದ್ದಾರೆ.

    41 ವರ್ಷದ ಕನಿಕಾ ಕಪೂರ್ ಮಾರ್ಚ್ 9 ರಂದು ಲಂಡನ್‍ನಿಂದ ಮುಂಬೈಗೆ ಆಗಮಿಸಿದ್ದರು. ಬಳಿಕ ಲಕ್ನೋದಲ್ಲಿ ಆಯೋಜನೆಗೊಂಡಿದ್ದ ಪಾರ್ಟಿಯಲ್ಲಿ ಭಾಗವಹಿಸಿದ್ದರು. ಈ ಪಾರ್ಟಿಯಲ್ಲಿ 200ಕ್ಕೂ ಹೆಚ್ಚು ಗಣ್ಯರು ಭಾಗವಹಿಸಿದ್ದರು. ಈ ಪಾರ್ಟಿಯಲ್ಲಿ ವಸುಂಧರ ರಾಜೇ ಮತ್ತು ಅವರ ಪುತ್ರ ದುಶ್ಯಂತ್ ಮತ್ತು ಅವನ ಮಾವ ಭಾಗಿಯಾಗಿದ್ದರು. ಈ ಪಾರ್ಟಿಯಲ್ಲಿ ಭಾಗಿಯಾದ ಬಳಿಕ ದುಶ್ಯಂತ್ ಸಿಂಗ್ ಸಂಸತ್ ಕಲಾಪಕ್ಕೆ ಹಾಜರಾಗಿದ್ದು ಹಲವು ಸದಸ್ಯರು ಇವರ ಸಂಪರ್ಕಕ್ಕೆ ಬಂದಿದ್ದಾರೆ.

    ಈ ವಿಚಾರವಾಗಿ ಟ್ವೀಟ್ ಮಾಡಿರುವ ವಸುಂಧರಾ ರಾಜೇ ಅವರು, ಲಖನೌದಲ್ಲಿ ಒಂದು ಡಿನ್ನರ್ ಪಾರ್ಟಿಗೆ ನಾನು ನನ್ನ ಮಗ ದುಶ್ಯಂತ್ ಮತ್ತು ಅವನ ಮಾವ ರಾತ್ರಿ ಹೋಗಿದ್ದೆವು. ದುರದೃಷ್ಟವಶಾತ್ ಇಂದು ಕೊರೊನಾ ಇರುವುದು ದೃಢಪಟ್ಟಿರುವ ಗಾಯಕಿ ಕನಿಕಾ ಸಹ ಅಲ್ಲಿಗೆ ಅತಿಥಿಯಾಗಿ ಬಂದಿದ್ದರು. ವಿಷಯ ತಿಳಿದ ಕೂಡಲೇ ಮುನ್ನೆಚ್ಚರಿಕೆ ಕ್ರಮವಾಗಿ ನಾನು ಮತ್ತು ನನ್ನ ಮಗ ಸ್ವತಃ ಪ್ರತ್ಯೇಕವಾಗಿ ವಾಸಿಸಲು ಆರಂಭಿಸಿದ್ದೇವೆ ಎಂದು ತಿಳಿಸಿದ್ದಾರೆ.

    ಅಂದು ಕನಿಕಾ ಕಪೂರ್ ಅತಿಥಿಯಾಗಿದ್ದ ಕಾರ್ಯಕ್ರಮಕ್ಕೆ ಲಕ್ನೋದ ಪ್ರಮುಖ ವ್ಯಕ್ತಿಗಳು, ಸಚಿವರು ಹಾಗೂ ಅಧಿಕಾರಿಗಳು ಬಂದಿದ್ದರು. ಮೂಲಗಳ ಪ್ರಕಾರ ಸುಮಾರು 200 ಜನರು ಕಾರ್ಯಕ್ರಮದಲ್ಲಿ ಸೇರಿದ್ದರು. ಮಾರ್ಚ್ 9ರಂದು ಕನಿಕಾ ಲಂಡನ್‍ನಿಂದ ಮುಂಬೈಗೆ ಬಂದಿದ್ದರು. ಇದಾದ ಎರಡು ದಿನಗಳ ನಂತರ ಲಕ್ನೋಗೆ ತೆರಳಿದ್ದರು. ಲಕ್ನೋದಲ್ಲಿ ಮಾರ್ಚ್ 15ರಂದು ನಡೆದಿದ್ದ ಕಾರ್ಯಕ್ರಮದಲ್ಲಿ ವಸುಂಧರಾ ರಾಜೇ, ದುಶ್ಯಂತ್ ಸಿಂಗ್ ಸೇರಿದಂತೆ ಹಲವರು ಗಣ್ಯರು ಭಾಗವಹಿಸಿದ್ದ ಕಾರ್ಯಕ್ರಮದಲ್ಲಿ ಸೇರಿಕೊಂಡಿದ್ದರು.

    ಈ ಕಾರ್ಯಕ್ರಮದಲ್ಲಿ ಭಾಗಿಯಾದ ನಂತರ ದುಶ್ಯಂತ್ ಸಿಂಗ್ ಉತ್ತರ ಪ್ರದೇಶ ಮತ್ತು ರಾಜಸ್ತಾನದ ಸಂಸದರ ನಿಯೋಗದ ಅಂಗವಾಗಿ ಬುಧವಾರ ರಾಷ್ಟ್ರಪತಿಯನ್ನು ಭೇಟಿಯಾಗಿದ್ದರು. ಶುಕ್ರವಾರ ಅವರನ್ನು ಭೇಟಿಯಾದ ಮಾಜಿ ಕೇಂದ್ರ ಸಚಿವ ಅನುಪ್ರಿಯಾ ಪಟೇಲ್, ಕಾಂಗ್ರೆಸ್ಸಿನ ಜಿತಿನ್ ಪ್ರಸಾದ್ ಮತ್ತು ದೀಪಿಂದರ್ ಹೂಡಾ ಅವರು ಅವರ ಮನೆಯಲ್ಲೇ ಐಸೋಲೇಟೆಡ್ ಆಗಿದ್ದಾರೆ.

    ಲಕ್ನೋ ಕಾರ್ಯಕ್ರಮ ಮುಗಿದ ನಂತರ ದುಶ್ಯಂತ್ ಸಿಂಗ್ ಅವರು ಸಂಸತ್ತಿಗೆ ಹೋಗಿದ್ದರು. ಈ ವಿಚಾರವಾಗಿ ಮಾತನಾಡಿರುವ ತೃಣಮೂಲ ಕಾಂಗ್ರೆಸ್ ಮುಖಂಡ ಡೆರಿಕ್ ಓಬ್ರೀನ್, ಸ್ವತಃ ಪ್ರತ್ಯೇಕವಾಗಿ ಎಚ್ಚರಿಕೆಯ ನಡೆ ಅನುಸರಿಸುವಂತೆ ಪ್ರಧಾನಿ ಮೋದಿ ಹೇಳುತ್ತಾರೆ. ಆದರೆ ದೇಶದಲ್ಲಿ ಸಂಸತ್ತು ಕಾರ್ಯನಿರ್ವಹಿಸುತ್ತಿದೆ. ಸಂಸತ್ ಅಧಿವೇಶನವನ್ನು ಮುಂದೂಡಬೇಕು. ನಾನು ಒಂದು ದಿನ ದುಶ್ಯಂತ್ ಪಕ್ಕದಲ್ಲಿ ಎರಡೂವರೆ ಗಂಟೆ ಕುಳಿತಿದ್ದೆ. ಹಾಗಾಗಿ ನಾನು ಮನೆಯಲ್ಲಿ ಪ್ರತ್ಯೇಕವಾಗಿ ಇದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

    ಲಕ್ನೋದಲ್ಲಿ ಕಾರ್ಯಕ್ರಮ ಮುಗಿದ ನಂತರ ದುಶ್ಯಂತ್ ಸಿಂಗ್ ಗುರುವಾರ ಸಂಸತ್ತಿನ ಸೆಂಟ್ರಲ್ ಹಾಲ್‍ನಲ್ಲಿ ನಿಶಿಕಾಂತ್ ಮತ್ತು ಮನೋಜ್ ತಿವಾರಿ ಅವರೊಂದಿಗೆ ಕುಳಿತಿದ್ದರು. ಅವರು ಅಂದು ಯಾರನ್ನೆಲ್ಲ ಸಂಪರ್ಕಿಸಿದ್ದಾರೆ ಎನ್ನುವ ಮಾಹಿತಿಯನ್ನು ಕಲೆ ಹಾಕುವ ಕಾರ್ಯ ಪ್ರಗತಿಯಲ್ಲಿದೆ. ಜೊತೆಗೆ ಕನಿಕಾ ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ಇದ್ದ ಎಲ್ಲರೂ ಸ್ವಯಂ ಪ್ರೇರಿತವಾಗಿ ಪ್ರತ್ಯೇಕವಾಗಿ ವಾಸಿಸುವಂತೆ ಉತ್ತರ ಪ್ರದೇಶ ಆರೋಗ್ಯ ಇಲಾಖೆ ಸೂಚಿಸಿದೆ. ಸೋಂಕಿನ ಲಕ್ಷಣಗಳು ಕಂಡು ಬಂದರೆ ವರದಿ ಮಾಡುವಂತೆ ತಿಳಿಸಿದೆ.

    https://www.instagram.com/p/B98tXqnFqE2/

    ನಾನು ಲಂಡನ್‍ನಿಂದ ಬಂದಾಗ 10 ದಿನಗಳ ಹಿಂದೆ ವಿಮಾನ ನಿಲ್ದಾಣದಲ್ಲಿ ನನ್ನನ್ನು ಸ್ಕ್ಯಾನಿಂಗ್‍ಗೆ ಒಳಪಡಿಸಲಾಗಿತ್ತು. ಆದರೆ ಅಲ್ಲಿ ಯಾವುದೇ ರೋಗದ ಗುಣ ಕಂಡು ಬಂದಿರಲಿಲ್ಲ. ಆದರೆ ನಾನು ಮನೆಗೆ ಬಂದ ನಂತರದಲ್ಲಿ ನಾಲ್ಕು ದಿನಗಳ ಹಿಂದೆಯಷ್ಟೇ ಜ್ವರ, ನೆಗಡಿಯ ಲಕ್ಷಣಗಳು ಕಾಣಿಸಿಕೊಂಡಿತು. ತಕ್ಷಣ ನಾನು ವೈದ್ಯರ ಬಳಿ ಬಂದು ಟೆಸ್ಟ್ ಮಾಡಿಸಿದಾಗ ಕೊರೊನಾ ಪಾಸಿಟಿವ್ ಬಂದಿದೆ. ನಿಮಗೂ ಜ್ವರ, ನೆಗಡಿ, ಕೆಮ್ಮಿನ ಲಕ್ಷಣ ಕಾಣಿಸಿಕೊಂಡರೆ, ಪ್ರತ್ಯೇಕವಾಗಿ ಉಳಿದು ಕೂಡಲೇ ಪರೀಕ್ಷೆಗೆ ಒಳಗಾಗಿ ಎಂದು ಕನಿಕಾ ಕಪೂರ್ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಬರೆದುಕೊಂಡಿದ್ದಾರೆ.

  • ಭಾರತ ಬಂದ್ ಕರೆಗೆ ಮೊದಲ ಜಯ-ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಕಡಿತಗೊಳಿಸಿದ ರಾಜಸ್ಥಾನ

    ಭಾರತ ಬಂದ್ ಕರೆಗೆ ಮೊದಲ ಜಯ-ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಕಡಿತಗೊಳಿಸಿದ ರಾಜಸ್ಥಾನ

    -ಕರ್ನಾಟಕದಲ್ಲಿಯೂ ಪೆಟ್ರೋಲ್, ಡೀಸೆಲ್ ದರ ಕಡಿಮೆ ಆಗುತ್ತಾ..?

    ಜೈಪುರ: ಇಂದು ಕಾಂಗ್ರೆಸ್ ದೇಶವ್ಯಾಪಿ ಭಾರತ್ ಬಂದ್ ಗೆ ಕರೆ ನೀಡಿದೆ. ಈ ನಡುವೆ ಭಾನುವಾರ ರಾಜಸ್ಥಾನದ ಸಿಎಂ ವಸುಂಧರಾ ರಾಜೇ ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಕಡಿತಗೊಳಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

    ಭಾನುವಾರ ಹುನುಮಘಢ ಜಿಲ್ಲೆಯಲ್ಲಿ ನಡೆದ `ರಾಜಸ್ಥಾನ ಗೌರವ ಯಾತ್ರೆ’ಯಲ್ಲಿ ಸಿಎಂ ವಸುಂಧರಾ ರಾಜೆ ಭಾಗಿಯಾಗಿದ್ದರು. ಸಮಾವೇಶದಲ್ಲಿ ಮಾತನಾಡುತ್ತಾ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಮೇಲಿನ ಶೇ.4 ರಷ್ಟು ವ್ಯಾಟ್ ಕಡಿತಗೊಳಿಸಲಾಗುತ್ತಿದೆ. ರಾಜಸ್ಥಾನದಲ್ಲಿ ಶೇ.30 ರಷ್ಟಿದ್ದ ವ್ಯಾಟ್ ಶೇ.26ಕ್ಕೆ ಬರಲಿದೆ. ಇತ್ತ ಡೀಸೆಲ್ ಶೇ.22ರಿಂದ ಶೇ.18ಕ್ಕೆ ಬದಲಾಗಲಿದೆ ಎಂದು ತಿಳಿಸಿದರು.

    ವ್ಯಾಟ್ ಇಳಿಕೆಯಿಂದಾಗಿ ಪೆಟ್ರೋಲ್ ಮತ್ತು ಡಿಸೇಲ್ ಒಂದು ಲೀಟರ್ ಮೇಲೆ 2.5ರೂ ಕಡಿಮೆ ಆಗಲಿದೆ. ಶೇ.4 ರಷ್ಟು ವ್ಯಾಟ್ ಕಡಿತಗೊಳಿಸುವುದರಿಂದ ಸಾರ್ವಜನಿಕರ ಮೇಲಿನ ಆರ್ಥಿಕ ಹೊರೆ ಕಡಿಮೆ ಆಗಲಿದೆ. ವ್ಯಾಟ್ ಕಡಿತದಿಂದಾಗಿ ಸರ್ಕಾರಕ್ಕೆ 2000 ಕೋಟಿ ರೂ. ಆರ್ಥಿಕ ಹೊರೆ ಆಗಲಿದೆ. ರಾಜ್ಯ, ರೈತರು, ಮಹಿಳೆಯರು ಸೇರಿದಂತೆ ಎಲ್ಲರ ಹಿತದೃಷ್ಟಿಯಿಂದ ಈ ನಿರ್ಧಾರ ಅನಿವಾರ್ಯ ಎಂದು ಸಿಎಂ ತಿಳಿಸಿದ್ದಾರೆ.

    ಈ ವರ್ಷದ ಅಂತ್ಯದಲ್ಲಿ ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಬಿಜೆಪಿಯಿಂದ ವಸುಂಧರಾ ರಾಜೆ, ಕಾಂಗ್ರೆಸ್ ನಿಂದ ಅಶೋಕ್ ಗೆಹ್ಲೋಟ್, ಸಚಿನ್ ಪೈಲಟ್ ರೇಸ್‍ನಲ್ಲಿದ್ದಾರೆ.

    ದಿನದಿಂದ ದಿನಕ್ಕೆ ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಆಡಳಿತ ವೈಖರಿ ಖಂಡಿಸಿ ಕಾಂಗ್ರೆಸ್ ಭಾರತ್ ಬಂದ್ ಗೆ ಕರೆ ನೀಡಿದೆ. ಪೆಟ್ರೋಲ್ ಹಾಗೂ ಡೀಸೆಲ್ ಮೇಲೆ ಸರ್ಕಾರ ವಿಧಿಸಿರೋ ಸೆಸ್ ಸ್ವಲ್ಪಮಟ್ಟಿಗೆ ಇಳಿಕೆ ಮಾಡಿದ್ರೆ ರಾಜ್ಯದ ಜನತೆಗೆ ಹೊರೆ ತಗ್ಗಬಹುದು. ರಾಜ್ಯದಲ್ಲಿ ತೈಲ ಉತ್ಪನ್ನಗಳ ಮೇಲೆ ಎಷ್ಟು ತೆರಿಗೆ ವಿಧಿಸಲಾಗುತ್ತಿದೆ ಎಂಬ ಮಾಹಿತಿ ಈ ಕೆಳಗಿನಂತಿದೆ.

    ಕರ್ನಾಟಕದಲ್ಲಿ ಹೇಗಿದೆ ಪೆಟ್ರೋಲ್ ತೆರಿಗೆ..?
    * ಮೂಲದರ- 58.55 ರೂ. (ಲೀ.ಗೆ) (ಕೇಂದ್ರ ತೆರಿಗೆ, ಸಾರಿಗೆ ವೆಚ್ಚ ಸೇರಿ)
    * ಕರ್ನಾಟಕದಲ್ಲಿ ತೆರಿಗೆ- 22.21 ರೂ (ಲೀ.ಗೆ)
    * ಶೇ.32ರಷ್ಟು ಸೆಸ್ ಅಂದರೆ 18.74 ರೂಪಾಯಿ ಆಗುತ್ತೆ
    * ಎಲ್‍ಎಫ್‍ಆರ್ – 47 ಪೈಸೆ (ಲೈಸನ್ಸ್ ಫೀ ರಿಕವರಿ – ಬಂಕ್ ನಿರ್ವಹಣೆ, ಸ್ಟೋರೇಜ್‍ಗೆ ವಿಧಿಸೋ ಮೊತ್ತ)
    * ಡೀಲರ್‍ಗಳಿಗೆ ಕಮಿಷನ್- 3.00 ರೂ.
    * ತೆರಿಗೆ ನಂತರ- 80.76 ರೂ.

    ಕರ್ನಾಟಕದಲ್ಲಿ ಹೇಗಿದೆ ಡೀಸೆಲ್ ತೆರಿಗೆ..?
    * ಮೂಲದರ – 57.59 ರೂ. (ಲೀ.ಗೆ) (ಕೇಂದ್ರ ತೆರಿಗೆ, ಸಾರಿಗೆ ವೆಚ್ಚ ಸೇರಿ)
    * ಕರ್ನಾಟಕದಲ್ಲಿ ತೆರಿಗೆ- 14.39 ರೂ. (ಲೀ.ಗೆ)
    * ಶೇ.21ರಷ್ಟು ಸೆಸ್ ಅಂದರೆ 12 ರೂಪಾಯಿ ಆಗುತ್ತೆ
    * ಎಲ್‍ಎಫ್‍ಆರ್ – 37 ಪೈಸೆ (ಲೈಸನ್ಸ್ ಫೀ ರಿಕವರಿ – ಬಂಕ್ ನಿರ್ವಹಣೆ, ಸ್ಟೋರೇಜ್‍ಗೆ ವಿಧಿಸೋ ಮೊತ್ತ)
    * ಡೀಲರ್‍ಗಳಿಗೆ ಕಮಿಷನ್- 2.00 ರೂ (ಲೀ.ಗೆ)
    * ತೆರಿಗೆ ನಂತರ- 71.98 ರೂ. (ಲೀ.ಗೆ)

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕೊಲ್ಲೂರು ಮೂಕಾಂಬಿಕೆಯ ಕ್ಷೇತ್ರಕ್ಕೆ ರಾಜಸ್ಥಾನ ಸಿಎಂ ವಸುಂಧರಾ ರಾಜೆ ಭೇಟಿ- ಮೂರೂವೆರೆ ಗಂಟೆ ಭಕ್ತರಿಗಿಲ್ಲ ಪ್ರವೇಶ

    ಕೊಲ್ಲೂರು ಮೂಕಾಂಬಿಕೆಯ ಕ್ಷೇತ್ರಕ್ಕೆ ರಾಜಸ್ಥಾನ ಸಿಎಂ ವಸುಂಧರಾ ರಾಜೆ ಭೇಟಿ- ಮೂರೂವೆರೆ ಗಂಟೆ ಭಕ್ತರಿಗಿಲ್ಲ ಪ್ರವೇಶ

    ಉಡುಪಿ: ಕೊಲ್ಲೂರು ಮೂಕಾಂಬಿಕೆಯ ಕ್ಷೇತ್ರಕ್ಕೆ ಇಂದು ಬೆಳಗ್ಗೆ ಭೇಟಿಕೊಡುವ ಆಲೋಚನೆ ನಿಮ್ಮದಾಗಿದ್ದರೆ ಪ್ಲ್ಯಾನ್ ನಲ್ಲಿ ಸ್ವಲ್ಪ ಬದಲಾವಣೆ ಮಾಡಿಕೊಳ್ಳೋದು ಒಳ್ಳೆಯದು. ಯಾಕಂದ್ರೆ ಕೊಲ್ಲೂರಿಗೆ ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಬರುತ್ತಿದ್ದಾರೆ. ರಾಜಸ್ಥಾನ ಸಿಎಂ ಆಗಮನ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಮೂರೂವರೆ ಗಂಟೆ ದೇವಸ್ಥಾನ ಪ್ರವೇಶ ನಿರ್ಬಂಧಿಸಲಾಗಿದೆ.

    ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ಭಕ್ತರಿಗೆ ದೇವಸ್ಥಾನದ ಪ್ರವೇಶ ನಿರ್ಬಂಧಿಸಿದೆ. ಕುಂದಾಪುರದ ಕೊಲ್ಲೂರು ಮೂಕಾಂಬಿಕ ದೇವಸ್ಥಾನಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ರಾಜಸ್ಥಾನ ಸಿಎಂ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಬಳಿಕ ಅರೆ ಶೀರೂರಿಗೆ ಹೆಲಿಕಾಪ್ಟರ್ ಮೂಲಕ ಆಗಮಿಸ್ತಾರೆ. ಅಲ್ಲಿಂದ ರಸ್ತೆ ಮೂಲಕ ದೇವಸ್ಥಾನಕ್ಕೆ ತೆರಳಲಿದ್ದಾರೆ. ನಂತ್ರ ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಲಿರುವ ವಸುಂಧರಾ ರಾಜೆ, ದೇವಿಗೆ ವಿಶೇಷ ಸೇವೆ, ಹೋಮ ಮಾಡಿಸಲಿದ್ದಾರೆ ಎನ್ನಲಾಗಿದೆ.

    ರಾಜಸ್ಥಾನ ಸಿಎಂ ಭೇಟಿಯ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ಸಾರ್ವಜನಿಕರಿಗೆ ದೇವಸ್ಥಾನದ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಪೊಲೀಸರು ಮತ್ತು ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.