Tag: Vava Suresh

  • ಕಾಳಿಂಗ ಸರ್ಪಗೆ ಕಿಸ್ ಕೊಟ್ಟ ಭೂಪ – ವ್ಯಕ್ತಿ ಧೈರ್ಯಕ್ಕೆ ಶಹಬ್ಬಾಸ್‌ ಅಂದ ನೆಟ್ಟಿಗರು

    ಕಾಳಿಂಗ ಸರ್ಪಗೆ ಕಿಸ್ ಕೊಟ್ಟ ಭೂಪ – ವ್ಯಕ್ತಿ ಧೈರ್ಯಕ್ಕೆ ಶಹಬ್ಬಾಸ್‌ ಅಂದ ನೆಟ್ಟಿಗರು

    ಹಾವನ್ನು ಪ್ರೀತಿಸುವವರು ಮತ್ತು ಅವುಗಳನ್ನು ಸಾಕುವವರು ಕೆಲವರು ಮಾತ್ರ, ಉಳಿದಂತೆ ಎಲ್ಲರೂ ಭಯಭೀತರಾಗುತ್ತಾರೆ. ಎಷ್ಟೋ ಮಂದಿಗೆ ಹಾವನ್ನು ಟಿವಿ ಅಥವಾ ವೀಡಿಯೋಗಳಲ್ಲಿ ನೋಡುವುದಕ್ಕೆ ಭಯಪಡುತ್ತಾರೆ. ಒಂದು ಬಾರಿ ಹಾವು ಕಚ್ಚಿದರೆ ಮನುಷ್ಯ ಬದುಕುಳಿಯುವುದೇ ಕಷ್ಟ. ಆದರೆ ಇಲ್ಲೊಬ್ಬ ವ್ಯಕ್ತಿ ಕಾಳಿಂಗ ಸರ್ಪ ಹಣೆಗೆ ಚುಂಬಿಸಿರುವ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

     

    View this post on Instagram

     

    A post shared by Saurabh Jadhav Jadhav (@10_viper_21)

    ಈ ವೀಡಿಯೋವನ್ನು ಸೌರಭ್ ಜಾಧವ್ ಎಂಬವರು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದು, ಭಾರತೀಯ ವನ್ಯಜೀವಿ ಸಂರಕ್ಷಣಾವಾದಿ ಮತ್ತು ಉರಗ ತಜ್ಞ ವಾವಾ ಸುರೇಶ್ (Vava Suresh) ಕಾಳಿಂಗ ಸರ್ಪ (Cobra) ಹತ್ತಿರ ಹೋಗುತ್ತಾರೆ. ನಂತರ ಹಾವು ಗಾಬರಿಯಾಗದಂತೆ ನಿಧಾನವಾಗಿ ಅದರ ಹಣೆಗೆ ಚುಂಬಿಸುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ಇದನ್ನೂ ಓದಿ: ಮನೆಬಿಟ್ಟು ಬಂದಿದ್ದ ಯುವತಿಗೆ ಆಶ್ರಯ ನೀಡೋದಾಗಿ ಕರೆದೊಯ್ದು ಅತ್ಯಾಚಾರ!

    ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುವ ಈ ವೀಡಿಯೋವನ್ನು ಇಲ್ಲಿಯವರೆಗೂ ಸುಮಾರು 16 ಸಾವಿರ ಮಂದಿ ವೀಕ್ಷಿಸಿದ್ದು, ವಾವಾ ಸುರೇಶ್ ಧೈರ್ಯಕ್ಕೆ ನೆಟ್ಟಿಗರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಜೊತೆಗೆ ಕಾಮೆಂಟ್‍ಗಳ ಸುರಿಮಳೆಯೇ ಹರಿದುಬರುತ್ತಿದೆ. ಇದನ್ನೂ ಓದಿ: ಉಕ್ರೇನ್ ಬಿಟ್ಟು ಬನ್ನಿ – ಭಾರತೀಯರಿಗೆ 5 ಬಾರ್ಡರ್ ಕ್ರಾಸಿಂಗ್ ಗುರುತಿಸಿದ ರಾಯಭಾರ ಕಚೇರಿ

    Live Tv
    [brid partner=56869869 player=32851 video=960834 autoplay=true]

  • ಉರಗ ತಜ್ಞ ವಾವಾ ಸುರೇಶ್‍ಗೆ ಕಚ್ಚಿದ ನಾಗರಹಾವು – ಸ್ಥಿತಿ ಗಂಭೀರ

    ಉರಗ ತಜ್ಞ ವಾವಾ ಸುರೇಶ್‍ಗೆ ಕಚ್ಚಿದ ನಾಗರಹಾವು – ಸ್ಥಿತಿ ಗಂಭೀರ

    ತಿರುವನಂತಪುರಂ: ಕೇರಳದ ಹೆಸರಾಂತ ಉರಗ ತಜ್ಞ ವಾವಾ ಸುರೇಶ್ ಅವರಿಗೆ ಕೊಟ್ಟಾಯಂನಲ್ಲಿ ನಾಗರ ಹಾವು ಕಚ್ಚಿದ್ದು, ಇದೀಗ ತೀವ್ರವಾಗಿ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

    ಮೊದಲಿಗೆ ಸುರೇಶ್ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಅವರನ್ನು ವೆಂಟಿಲೇಟರ್‍ನಲ್ಲಿ ಇರಿಸಿ, ಆಂಟಿ ವೆನಮ್ ನೀಡಲಾಯಿತು. ಬಳಿಕ ವಿಶೇಷ ಚಿಕಿತ್ಸೆಗಾಗಿ ಕೊಟ್ಟಾಯಂನ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಿ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದ್ದು, ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.

    ಕೊಟ್ಟಾಯಂ ಬಳಿಯ ಕುರಿಚಿ ಗ್ರಾಮ ಪಂಚಾಯತ್‍ನ ನಿವಾಸಿಗಳು ದನದ ಕೊಟ್ಟಿಗೆಯ ಬಳಿ ಹಾಕಿದ್ದ ಕಲ್ಲಿನ ರಾಶಿಗಳ ನಡುವೆ ನಾಗರಹಾವನ್ನು ಕಂಡು ನಂತರ ಹಾವು ಹಿಡಿಯಲು ಸುರೇಶ್ ಅವರನ್ನು ಮನೆಗೆ ಕರೆದಿದ್ದಾರೆ. ಈ ವೇಳೆ ಸುರೇಶ್ ಹಾವು ಹಿಡಿಯಲು ನೋಡುವುದಕ್ಕೆ ಹಲವಾರು ಮಂದಿ ಸ್ಥಳಕ್ಕೆ ಆಗಮಿಸಿದ್ದರು. ಆದರೆ ವಿಷಕಾರಿ ಸರೀಸೃಪ ಒಂದು ಕೈಯಲ್ಲಿ ಬಾಲ ಹಿಡಿದುಕೊಂಡು ಗೋಣಿ ಚೀಲಕ್ಕೆ ಹಾಕಲು ಪ್ರಯತ್ನಿಸುತ್ತಿದ್ದ ವೇಳೆ ಸುರೇಶ್ ಅವರ ಬಲ ತೊಡೆಯ ಮೇಲೆ ಕಚ್ಚಿದೆ. ಇದನ್ನೂ ಓದಿ: Budget: 2022-23ರ ಹೊತ್ತಿಗೆ 5G ಮೊಬೈಲ್‌ ಸೇವೆ

    ತನಗೆ ಹಾವು ಕಚ್ಚಿ ತಪ್ಪಿಸಿಕೊಳ್ಳುತ್ತಿದ್ದರೂ, ನಾಗರ ಹಾವನ್ನು ಹಿಡಿದು ಸುರೇಶ್ ಅವರು ಪ್ಯಾಕ್ ಮಾಡಿದ್ದಾರೆ. ನಂತರ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಇದೀಗ ಸುರೇಶ್ ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಎಲ್ಲೆಡೆ ಪ್ರಾರ್ಥಿಸಲಾಗುತ್ತಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸುರೇಶ್ ಶೀಘ್ರ ಗುಣಮುಖರಾಗಲಿ ಎಂದು ನೆಟ್ಟಿಗರು ಹಾರೈಸುತ್ತಿದ್ದಾರೆ.

    ಸುರೇಶ್ ಅವರು ಎರಡು ದಶಕಗಳ ಕಾಲದ ವೃತ್ತಿಜೀವನದಲ್ಲಿ 50,000ಕ್ಕೂ ಹೆಚ್ಚು ಹಾವುಗಳನ್ನು ಹಿಡಿದಿದ್ದಾರೆ. ಇದರಲ್ಲಿ 200ಕ್ಕೂ ಹೆಚ್ಚು ಕಿಂಗ್ ಕೋಬ್ರಾಗಳನ್ನು ಹಿಡಿದಿದ್ದಾರೆ. ಅವರು ಸುಮಾರು 300 ಹಾವುಗಳ ಕಡಿತಕ್ಕೆ ಒಳಗಾಗಿದ್ದಾರೆ. ಇದನ್ನೂ ಓದಿ: Union Budget: ದುಡಿಯುವ ವರ್ಗದ ನಿರೀಕ್ಷೆಯನ್ನು ಕೇಂದ್ರ ಸರ್ಕಾರ ಹುಸಿ ಮಾಡಿದೆ: ರಣದೀಪ್ ಸುರ್ಜೇವಾಲಾ ವ್ಯಂಗ್ಯ